Tag: ನಾರಾಯಣಸ್ವಾಮಿ

  • ಸಂಪುಟ ವಿಸ್ತರಣೆ ವೇಳೆ ನನಗೆ ಸಚಿವ ಸ್ಥಾನ ಸಿಗಲಿದೆ: ನಾರಾಯಣಸ್ವಾಮಿ

    ಸಂಪುಟ ವಿಸ್ತರಣೆ ವೇಳೆ ನನಗೆ ಸಚಿವ ಸ್ಥಾನ ಸಿಗಲಿದೆ: ನಾರಾಯಣಸ್ವಾಮಿ

    ಬೆಂಗಳೂರು: ಈ ಬಾರಿ ಸಚಿವ ಸಂಪುಟ ವಿಸ್ತರಣೆ ಆದಾಗ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಬಂಗಾರಪೇಟೆ ಕಾಂಗ್ರೆಸ್ ಶಾಸಕ ನಾರಾಯಣಸ್ವಾಮಿ (Naryanaswamy) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ನವೆಂಬರ್‌ಗೆ ಸಂಪುಟ ವಿಸ್ತರಣೆ ಆಗಬಹುದು. ಬಿಹಾರ ಚುನಾವಣೆ (Bihar Election) ಆದ ಮೇಲೆ ವಿಸ್ತರಣೆ ಆಗಬಹುದು. 2.5 ವರ್ಷ ಆದ ಮೇಲೆ ಮಂತ್ರಿ ಕೊಡ್ತೀವಿ ಅಂತ ಯಾರಿಗೆ ಹೈಕಮಾಂಡ್ ಮಾತು ಕೊಟ್ಟಿದ್ದರೋ ಅವರಿಗೆ ಸಚಿವ ಸ್ಥಾನ ಕೊಡಬೇಕು. ದಲಿತ ಬಲಗೈ ಸಮುದಾಯ ಕರ್ನಾಟಕದಲ್ಲಿ ಜಾಸ್ತಿ ಜನ ಇದ್ದಾರೆ. ಚನ್ನಯ್ಯ ನಂತರ ಕೋಲಾರ ಸೇರಿ ಮೂರು ಜಿಲ್ಲೆಗಳಲ್ಲಿ ಬಲಗೈ ಸಮುದಾಯಕ್ಕೆ ಅನೇಕ ವರ್ಷಗಳಿಂದ ಮಂತ್ರಿ ಸ್ಥಾನ ಕೊಟ್ಟಿಲ್ಲ.ಹೈಕಮಾಂಡ್ ಮೇಲೆ ವಿಶ್ವಾಸ ನನಗೆ ಇದೆ. ಈ ಬಾರಿ ಮಂತ್ರಿ ಸ್ಥಾನ ಸಿಗುವ ವಿಶ್ವಾಸ ಇದೆ ಎಂದರು. ಇದನ್ನೂ ಓದಿ:  ರಾವಲ್ಪಿಂಡಿ ಚಿಕನ್ ಟಿಕ್ಕಾ ಮಸಾಲದಿಂದ ಬಾಲಕೋಟ್ ತಿರಮಿಸು ವರೆಗೆ – ಊಟದ ಮೆನು ಮೂಲಕ ಪಾಕ್‌ಗೆ ಭಾರತೀಯ ವಾಯುಸೇನೆ ವ್ಯಂಗ್ಯ

     

    ನಮ್ಮ ಜಿಲ್ಲೆಯಲ್ಲಿ ನಾನು ಸೀನಿಯರ್. ಹೆಚ್ಚು ಬಾರಿ ಗೆದ್ದಿರುವುದರಿಂದ ಪಕ್ಷ ಈ ಬಾರಿ ನನ್ನನ್ನು ಮಂತ್ರಿ ಮಾಡಬೇಕು ಎಂದು ಮನವಿ ಮಾಡುತ್ತೇನೆ. ರೂಪಕಲಾ ಅವರಿಗೆ ಸಚಿವ ಸ್ಥಾನ ಕೊಡುವುದು ಹೈಕಮಾಂಡ್‌ಗೆ ಬಿಟ್ಟಿದ್ದು. ನಾನು ಹಿರಿಯ ನನಗೆ ಸಚಿವ ಸ್ಥಾನ ಸಿಗೋ ವಿಶ್ವಾಸ ಇದೆ ಎಂದರು.

  • ಪಹಲ್ಗಾಮ್‌ನಲ್ಲಿ ನರಮೇಧ ನಡೆಸಿದ ಉಗ್ರರನ್ನು ಬಗ್ಗು ಬಡಿಯಬೇಕು: ಶಾಸಕ ನಾರಾಯಣಸ್ವಾಮಿ

    ಪಹಲ್ಗಾಮ್‌ನಲ್ಲಿ ನರಮೇಧ ನಡೆಸಿದ ಉಗ್ರರನ್ನು ಬಗ್ಗು ಬಡಿಯಬೇಕು: ಶಾಸಕ ನಾರಾಯಣಸ್ವಾಮಿ

    – ಅಮಿಶ್ ಶಾ ಅವರ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ

    ಕೋಲಾರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯನ್ನು (Pahalgam Terror Attack) ಖಂಡಿಸುತ್ತೇನೆ. ನರಮೇಧ ನಡೆಸಿದ ಇಂತಹ ಉಗ್ರರನ್ನು ಬಗ್ಗು ಬಡಿಯಬೇಕು ಎಂದು ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ (SN Narayanaswamy) ಹೇಳಿದ್ದಾರೆ.

    ಬಂಗಾರಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರಲ್ಲಿ ದೇಶದ ಭದ್ರತಾ ವೈಫಲ್ಯ ಎದ್ದು ಕಾಣುತ್ತಿದೆ, ಬೇಹುಗಾರಿಕೆ ಸಂಪೂರ್ಣ ವಿಫಲವಾಗಿದೆ. ಗೃಹ ಸಚಿವ ಅಮಿಶ್ ಶಾ ಅವರ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ಅವರು ಹಿಂದೂಗಳನ್ನು ಟಾರ್ಗೆಟ್ ಮಾಡಿದ್ದಾರೆ ಅನ್ನೋದು ಇಲ್ಲ. ಇದರಲ್ಲಿ ಧರ್ಮ ಅನ್ನೋದಕ್ಕಿಂತ ಎಲ್ಲರದ್ದು ಜೀವ ಅಲ್ವಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಐಶ್ವರ್ಯ ಗೌಡ ಮನೆ ಮೇಲೆ ಇಡಿ ದಾಳಿ – 2.25 ಕೋಟಿ ನಗದು ಪತ್ತೆ

    ಗೃಹ ಇಲಾಖೆ ವಿಫಲವಾಗಿದೆ. ಹಾಗಾಗಿ ಇಂದಿರಾಗಾಂಧಿ, ನೆಹರು ಕಾಲದಲ್ಲಿ ದೇಶವನ್ನ ರಕ್ಷಣೆ ಮಾಡಿದಂತೆ ಸದ್ಯ ಈಗಲೂ ಕೇಂದ್ರ ಸರ್ಕಾರ ಎಚ್ವೆತ್ತುಕೊಂಡು ಇಂತಹದಕ್ಕೆ ಕಡಿವಾಣ ಹಾಕಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪಾಕಿಸ್ತಾನದ ಲಾಹೋರ್‌ ಏರ್‌ಪೋರ್ಟ್‌ನಲ್ಲಿ ಭಾರೀ ಅಗ್ನಿ ದುರಂತ – ರನ್‌ವೇ ಬಂದ್‌, ವಿಮಾನಗಳ ಹಾರಾಟ ಸ್ಥಗಿತ

  • ಬಿಎಸ್‍ವೈ ಬಗ್ಗೆ ಮಾತನಾಡುತ್ತಿರೋ ಯತ್ನಾಳ್‍ರನ್ನ ಹೈಕಮಾಂಡ್ ಗಮನಿಸ್ತಿದೆ: ನಾರಾಯಣಸ್ವಾಮಿ

    ಬಿಎಸ್‍ವೈ ಬಗ್ಗೆ ಮಾತನಾಡುತ್ತಿರೋ ಯತ್ನಾಳ್‍ರನ್ನ ಹೈಕಮಾಂಡ್ ಗಮನಿಸ್ತಿದೆ: ನಾರಾಯಣಸ್ವಾಮಿ

    ಚಿಕ್ಕೋಡಿ: ಯಡಿಯೂರಪ್ಪ (Yediyurappa) ವಿರುದ್ದ ಬಹಿರಂಗ ಹೇಳಿಕೆ ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ವಿಚಾರದಲ್ಲಿ ನಾನೇನು ಮಾತನಾಡುವುದಿಲ್ಲ, ಎಲ್ಲವನ್ನೂ ಹೈ ಕಮಾಂಡ್ ಗಮನಿಸುತ್ತಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವ ನಾರಾಯಣಸ್ವಾಮಿ (Narayanaswamy) ಶಾಸಕ ಯತ್ನಾಳ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

    ಬೆಳಗಾವಿ (Belgavi) ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಕೇಂದ್ರ ಸರ್ಕಾರದ ವಯೋಶ್ರೀ ಯೋಜನೆಯಡಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ (HighCommand) ಎಲ್ಲವನ್ನೂ ಗಮನಿಸುತ್ತಿದೆ. ಯತ್ನಾಳ್ ಕುರಿತು ನಾನು ಚರ್ಚೆ ಮಾಡಲ್ಲ. ನಮ್ಮ ಹೈಕಮಾಂಡ್ ಎಲ್ಲವನ್ನೂ ನೋಡುತ್ತಿದೆ. ನಮ್ಮ ರಾಜ್ಯದ ಅಧ್ಯಕ್ಷರು ಸಹ ಎಲ್ಲವನ್ನು ನೋಡುತ್ತಿದ್ದಾರೆ. ಕಾರ್ಯಕರ್ತರಿಂದ ನಮಗೆ ನಮ್ಮ ಐಡೆಂಟಿಟಿ ಸಿಕ್ಕಿದೆ. ಎಲ್ಲರನ್ನೂ ಗೌರವಿಸಿ ಮಾನವೀಯ ಮೌಲ್ಯಗಳನ್ನು ಕಲಿಯಬೇಕು ಎಂದು ಯತ್ನಾಳ್ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ರೈಲಿಗಿಟ್ಟಿದ್ದ ಟಿಪ್ಪು ಹೆಸರೇಕೆ ತೆಗೆಯಬೇಕಿತ್ತು, ಬೇರೆ ಟ್ರೈನ್‍ಗೆ ಒಡೆಯರ್ ಹೆಸರಿಡಲಿ: ಹೆಚ್.ಡಿ. ರೇವಣ್ಣ

    ಎಸ್.ಸಿ, ಎಸ್.ಟಿ ಸಮುದಾಯದಕ್ಕೆ ಮೀಸಲಾತಿ ಹೆಚ್ಚಳ ವಿಚಾರವಾಗಿ ಮಾತನಾಡಿದ ಅವರು, ಹಲವು ಸಮುದಾಯಗಳ ಬೇಡಿಕೆಯ ನಡುವೆ ಎಸ್‍ಸಿ, ಎಸ್‍ಟಿ ಮೀಸಲಾತಿ ಹೆಚ್ಚಿಸುವ ನಿರ್ಧಾರದ ಧೈರ್ಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (BasavarajBommai) ಅವರು ತೋರಿದ್ದಾರೆ. ಧೈರ್ಯ ತೋರಿದ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇವೆ. ಈ ಹಿಂದಿನ ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ ಈ ರೀತಿಯ ಎದೆಗಾರಿಕೆ ಇರಲಿಲ್ಲ ಎಂದು ಲೇವಡಿ ಮಾಡಿದ್ದಾರೆ.

    ಕ್ಯಾಬಿನೆಟ್‍ನಲ್ಲಿ ತೀರ್ಮಾನ ಮಾಡಿ ಸದನದಲ್ಲಿ ಮಂಡನೆ ಮಾಡುತ್ತಾರೆ. ಸದನದಲ್ಲಿ ಮಂಡನೆ ಮಾಡಿ ಕಾನೂನು ತೊಡಕುಗಳು ಹಾಗೂ ಸುಪ್ರೀಂ ಕೋರ್ಟ್ (Supreme Court) ತೀರ್ಮಾನದ ಕುರಿತು ಚರ್ಚೆ ಮಾಡಲಿ. ಶೋಷಿತ ವರ್ಗಕ್ಕೆ ಮೀಸಲು ಅವಶ್ಯಕತೆ ಇದೆ ಎನ್ನುವ ಧೈರ್ಯ ತೋರಿದ್ದಾರೆ ಅದಕ್ಕೆ ನಾವು ಮೆಚ್ಚುಗೆ ವ್ಯಕ್ತಪಡಿಸುತ್ತೇವೆ ಎಂದು ಹೇಳಿದ್ದಾರೆ.

    ಸದಾಶಿವ ಆಯೋಗದ ವರದಿ ಜಾರಿ ಮಾಡಲು ಕಾಂಗ್ರೆಸ್ ಸಚಿವ ಆಂಜನೇಯ ಫೈಲ್ ಹಿಡಿದುಕೊಂಡು ಕ್ಯಾಬಿನೆಟ್‍ಗೆ ಹೋದರು ಮಂಡನೆ ಮಾಡಿಲ್ಲ. ಅವರ ವರದಿ ಮಂಡನೆ ಮಾಡುವುದಕ್ಕೂ ಕೊಟ್ಟಿಲ್ಲ ಎಂದು ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಇದನ್ನೂ ಓದಿ: ದೇವಾಲಯಕ್ಕೆ ನುಗ್ಗಿ ಕಾಳಿ ದೇವಿಯ ವಿಗ್ರಹವನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಈ ದೇಶದ ಬಗ್ಗೆ ಚಿಂತನೆ ಮಾಡುವ ಏಕೈಕ ಪಕ್ಷ: ಎ.ನಾರಾಯಣಸ್ವಾಮಿ

    ಬಿಜೆಪಿ ಈ ದೇಶದ ಬಗ್ಗೆ ಚಿಂತನೆ ಮಾಡುವ ಏಕೈಕ ಪಕ್ಷ: ಎ.ನಾರಾಯಣಸ್ವಾಮಿ

    ಆನೇಕಲ್: ಬಿಜೆಪಿ ಈ ದೇಶದ ಬಗ್ಗೆ ಚಿಂತನೆ ಮಾಡುವ ಏಕೈಕ ಪಕ್ಷ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ.

    ಭಾನುವಾರ ಅತ್ತಿಬೆಲೆ ಮಂಡಲದ ವತಿಯಿಂದ ಆಯೋಜಿಸಿದ್ದ ಜನಾಶಿರ್ವಾದ ಯಾತ್ರೆಯ ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಈ ದೇಶದಲ್ಲಿ ಯಾವ ರೀತಿ ಆಡಳಿತ ನಡೆಸಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. 60 ವರ್ಷ ಅವರ ಆಡಳಿತ ವೈಖರಿಯಿಂದಾಗಿ ಹಾಗೂ ಕೊರೊನಾ ಸಂಕಷ್ಟದಿಂದ ಬೆಲೆ ಏರಿಕೆ ಆಗಿದೆ ಹೊರತು ಬಿಜೆಪಿಯಾಗಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಆಗಲಿ ಜನರಿಗೆ ತೊಂದರೆಯಾಗುವ ನಿಟ್ಟಿನಲ್ಲಿ ಎಂದು ಕೂಡ ನಡೆದುಕೊಳ್ಳುವುದಿಲ್ಲ. ಬಿಜೆಪಿ ಈ ದೇಶದ ಬಗ್ಗೆ ಚಿಂತನೆ ಮಾಡುವ ಏಕೈಕ ಪಕ್ಷ ಎಂದರು.

    ಅಧಿಕಾರ ಸಿಕ್ಕಾಗ ನಾವು ಜನಪರ ಯೋಜನೆಗಳನ್ನು ಜಾರಿಗೆ ತರಬೇಕು. ಜನ ನಮಗೆ ಅಧಿಕಾರ ನೀಡುವುದು ಸ್ಥಳೀಯವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಎನ್ನುವ ಕಾರಣಕ್ಕೆ ಆದರೆ ಕೆಲವರು ಅಧಿಕಾರ ಸಿಕ್ಕಾಗ ಅದರ ಅಮಲಿನಲ್ಲಿ ಇರುತ್ತಾರೆ. ಪಕ್ಷ ವಿರೋಧಿ ಚಟುವಟಿಕೆ ಮಾಡುವವರನ್ನು ನಾನು ಎಂದು ಕೂಡ ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ:ಯಾದಗಿರಿಯಲ್ಲಿ ವರುಣಾರ್ಭಟ – ವೀರಾಂಜನೇಯ, ಕಂಗಳೇಶ್ವರ ದೇವಾಲಯ ಜಲಾವೃತ್ತ

    ನನ್ನ ಸೋಲಿಗೆ ಕಾರಣರಾದವರನ್ನು ನಾನು ಕ್ಷಮಿಸುತ್ತೇನೆ!

    ಚುನಾವಣೆ ಸಂದರ್ಭದಲ್ಲಿ ಯಾರು ಬಿಜೆಪಿ ಪಕ್ಷದಲ್ಲೇ ಇದ್ದು, ಬೇರೆ ಪಕ್ಷದವರ ಜೊತೆ ಕೈಜೋಡಿಸಿ ಕೆಲಸ ಮಾಡುತ್ತಾರೋ ಅವರನ್ನು ನಾನು ಎಂದು ಕೂಡ ಸಹಿಸುವುದಿಲ್ಲ. ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣರಾದವರನ್ನು ನಾನು ಕ್ಷಮಿಸುತ್ತೇನೆ. ಆದರೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸೋಲಿಗೆ ಯಾರು ಕೆಲಸ ಮಾಡುತ್ತಾರೆ ಅವರನ್ನು ಯಾರೂ ಕೂಡ ಕ್ಷಮಿಸುವ ಮಾತೇ ಇಲ್ಲ ಎಂದು ಹೇಳುವ ಮೂಲಕ ವೇದಿಕೆಯಲ್ಲಿ ಹಾಜರಿದ್ದ ಕೆಲವು ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಕಿವಿಮಾತು ಹೇಳಿದರು.

    ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಮಾತ್ರ ಭ್ರಷ್ಟಾಚಾರ ಇಲ್ಲದೆ ಆಡಳಿತ ನಡೆಸಲಾಗುತ್ತಿದೆ. ಆದರೆ ಈ ಹಿಂದೆ ದೇಶವನ್ನು ಆಳಿದವರು ಎಷ್ಟು ಲೂಟಿ ಹೊಡೆದಿದ್ದಾರೆ ಎನ್ನುವ ಮಾಹಿತಿ ಜನರಿಗೂ ಕೂಡ ಇದೆ. ಈ ನಿಟ್ಟಿನಲ್ಲಿ ಇದೆಲ್ಲವನ್ನು ಅರಿತು ಸುಭದ್ರ ದೇಶ ಕಟ್ಟಬೇಕಾದರೆ ಬಿಜೆಪಿಯಿಂದ ಮಾತ್ರ ಸಾಧ್ಯ. ಬಿಜೆಪಿಯಿಂದ ಗೆದ್ದು ಬಂದವರು ಪಕ್ಷ ನಿಷ್ಠೆಯಿಂದ ಕೆಲಸ ಮಾಡಬೇಕು. ನಮಗೆ ಅಧಿಕಾರ ನೀಡಿದ ಪಕ್ಷ ತಾಯಿಗೆ ಸಮಾನ. ಈ ನಿಟ್ಟಿನಲ್ಲಿ ನಾವು ತಾಯಿಗೆ ದ್ರೋಹ ಮಾಡದಂತೆ ಕೆಲಸ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ:ಬೆಲೆ ಏರಿಕೆ, ಜನ ಸಾಮಾನ್ಯರ ದುಸ್ಥಿಗೆ ಸರ್ಕಾರ ಹೊಣೆ: ನಾರಾಯಣಸ್ವಾಮಿ

    ಆನೇಕಲ್ ತಾಲೂಕಿಗೆ ಶಿಂಶಾ ನದಿ ನೀರನ್ನು ತರುವ ಬಗ್ಗೆ ನಾನೇ ಹೇಳಿದ್ದೆ. ಇದಕ್ಕೆ ಕೆಲವು ಕಾಂಗ್ರೆಸ್ ಸದಸ್ಯರು ಮಾತನಾಡಿರುವುದು ನನ್ನ ಕಿವಿಗೆ ಬಿದ್ದಿದೆ. ನನ್ನ ಮನದಲ್ಲಿರುವ ಅನಿಸಿಕೆಯನ್ನು ಹೇಳಿಕೊಳ್ಳುವುದು, ಅಂತಹ ಕಾರ್ಯಕ್ರಮಗಳನ್ನು ರೂಪಿಸುವುದು ನನಗೆ ಬಿಟ್ಟ ವಿಚಾರವಾಗಿದೆ. ಇದಕ್ಕೆ ಮೂಗು ತೂರಿಸಲು ಅವರ್ಯಾರು ಎಂದು ಪ್ರಶ್ನಿಸುವ ಮೂಲಕ ಕಾಂಗ್ರೆಸ್ಸಿನ ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಿ.ಕೆ ಸುರೇಶ್ ಅವರಿಗೆ ತಿರುಗೇಟು ನೀಡಿದರು.

    ಬಿಜೆಪಿ ಭದ್ರಕೋಟೆ!

    ಆನೇಕಲ್ ತಾಲೂಕು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಎನ್.ಬಸವರಾಜು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಆನೇಕಲ್ ತಾಲೂಕು ಎಂದಿಗೂ ಕೂಡ ಬಿಜೆಪಿ ಭದ್ರಕೋಟೆ, ತಾಲೂಕಿನಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದವರು ಸಾಕಷ್ಟು ಜನ ಇದ್ದು, ಅವರೆಲ್ಲರನ್ನೂ ಇಂತಹ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬೇಕು. ನಾಲ್ಕು ಬಾರಿ ಆನೇಕಲ್ಲಿನಲ್ಲಿ ಶಾಸಕರಾಗಿ ಸೋತ ಬಳಿಕ ಚಿತ್ರದುರ್ಗ ಲೋಕಸಭಾ ಸಂಸದರಾಗಿ ಕೇಂದ್ರ ಸಚಿವರಾಗಿರುವ ನಾರಾಯಣಸ್ವಾಮಿ ಅವರು ರೂಢಿಸಿಕೊಂಡ ಸರಳತೆ ಪಕ್ಷದ ಸಿದ್ಧಾಂತದಿಂದಾಗಿ ಕೇಂದ್ರದಲ್ಲಿ ಉನ್ನತ ಸ್ಥಾನವನ್ನು ಕಲ್ಪಿಸಿಕೊಂಡಿದ್ದಾರೆ. ಇಂತಹ ಹುದ್ದೆಗಳನ್ನು ಪಡೆಯಲು ಬಿಜೆಪಿ ಪಕ್ಷದಲ್ಲಿ ಇರುವ ಕಾರ್ಯಕರ್ತರು ಹಾಗೂ ಮುಖಂಡರಿಗೆ ಮಾತ್ರ ಸಾಧ್ಯ ಎಂದು ಪ್ರಶಂಸಿದ್ದಾರೆ. ಇದನ್ನೂ ಓದಿ:ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಎಫೆಕ್ಟ್ – ಹೊಸ ಸಂಶೋಧನೆ ವರದಿ ಆತಂಕ

    narendra modi
    narendra Modi

    ಅತ್ತಿಬೆಲೆ ವೃತ್ತದಿಂದ ತೆರೆದ ವಾಹನದಲ್ಲಿ ಸಾವಿರಾರು ಕಾರ್ಯಕರ್ತರು ಹಾಗೂ ಮುಖಂಡರು ಬಿದರಗುಪ್ಪೆಯವರೆಗೆ ಮೆರವಣಿಗೆ ನಡೆಸಿ ನಂತರ ಅತ್ತಿಬೆಲೆಯ ಕಲ್ಯಾಣ ಮಂಟಪವೊಂದರಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ನಾರಾಯಣಸ್ವಾಮಿ ಅವರನ್ನು ಅದ್ದೂರಿಯಾಗಿ ಸನ್ಮಾನಿಸುವ ಮೂಲಕ ಗೌರವ ಸಲ್ಲಿಸಿದರು. ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಸ್ವಸಹಾಯ ಸಂಘ ಸ್ಥಾಪನೆಗಳಿಗೆ ಸಹಕಾರ ನೀಡಿತು: ರಾಮಲಿಂಗಾರೆಡ್ಡಿ

    ಹಿರಿಯ ಬಿಜೆಪಿ ಮುಖಂಡ ಯಂಗಾ ರೆಡ್ಡಿ, ಬಿ.ಜಿ.ಆಂಜಿನಪ್ಪ, ಅತ್ತಿಬೆಲೆ ಬಿಜೆಪಿ ಮಂಡಲ ಅಧ್ಯಕ್ಷ ಎಸ್.ಆರ್.ಟಿ. ಅಶೋಕ್, ಎನ್.ಶಂಕರ್, ಬಿದರಗುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ್, ಅತ್ತಿಬೆಲೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ್ ರೆಡ್ಡಿ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

     

  • ಬೋವಿ ಸ್ವಾಮೀಜಿ, ನಾರಾಯಣಸ್ವಾಮಿ ನಡುವೆ ತಾರಕಕ್ಕೇರಿದ ಒಳಮೀಸಲಾತಿ ಸಮರ

    ಬೋವಿ ಸ್ವಾಮೀಜಿ, ನಾರಾಯಣಸ್ವಾಮಿ ನಡುವೆ ತಾರಕಕ್ಕೇರಿದ ಒಳಮೀಸಲಾತಿ ಸಮರ

    ಚಿತ್ರದುರ್ಗ: ಸಮುದಾಯದ ವಿಚಾರದಲ್ಲಿ ಏಕಪಕ್ಷೀಯ ತೀರ್ಮಾನ ಸರಿಯಲ್ಲವೆಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ವಿರುದ್ಧ ಬೋವಿ ಗುರುಪೀಠದ ಸಿದ್ದರಾಮೇಶ್ವರ ಸ್ವಾಮೀಜಿ ಗುಡುಗಿದ್ದಾರೆ.

    ನೂತನ ಕೇಂದ್ರಸಚಿವರಾದ ಬೆನ್ನಲ್ಲೇ ನಾರಾಯಣಸ್ವಾಮಿ ಅವರಿಗೆ ಸದಾಶಿವ ವರದಿಯ ಒಳಮೀಸಲಾತಿ ವಿಚಾರ ಬಾರಿ ತಲೆನೋವಾಗಿ ಪರಿಣಮಿಸಿದೆ. ಸ್ವಜಾತಿ ಪ್ರೇಮದ ಭರಾಟೆಯಲ್ಲಿ ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಸದಾಶಿವ ವರದಿ ಜಾರಿ ವಿಚಾರವಾಗಿ ಬೋವಿ ಸ್ವಾಮೀಜಿ ಜೊತೆ ಚರ್ಚಸಿರುವುದಾಗಿ ಹೇಳಿಕೆ ನೀಡಿದ್ದ ಸಚಿವರ ವಿರುದ್ಧ ಬೋವಿ ಗುರುಪೀಠದ ಸಿದ್ದರಾಮೇಶ್ವರ ಸ್ವಾಮೀಜಿ ಕಿಡಿ ಕಾರಿದ್ದಾರೆ. ನಾರಾಯಣಸ್ವಾಮಿ ನಮ್ಮೊಂದಿಗೆ ಒಳಮೀಸಲಾತಿ ವಿಚಾರವಾಗಿ ಯಾವುದೇ ಚರ್ಚೆಯನ್ನು ಮಾಡಿಲ್ಲ. ಅನಾವಶ್ಯಕವಾಗಿ ಗೊಂದಲ ಸೃಷ್ಠಿಸಬಾರದು. ಅವರು ನಿನ್ನೆ ನೀಡಿರುವ ಹೇಳಿಕೆಯಲ್ಲಿ ಸ್ಪಷ್ಟನೆ ಇಲ್ಲ. ಅಲ್ಲದೆ ಈಗಾಗಲೇ ಸೋರಿಕೆಯಾಗಿರುವ ವರದಿಯನ್ನು ಸರ್ಕಾರ ಗೌಪ್ಯವಾಗಿಡದೇ 101 ಜಾತಿಗಳ ಕೈಗೆ ಸಾರ್ವಜನಿಕವಾಗಿ ನೀಡಲಿ. ಅದರಲ್ಲಿರುವ ಸತ್ಯಾಂಶವನ್ನು ಬಹಿರಂಗಪಡಿಸಲಿ ಎಂದು ಒತ್ತಾಯಿಸಿದ್ದಾರೆ.

    ಒಳಮೀಸಲಾತಿ ವಿಚಾರದಲ್ಲಿ ಎರಡು ಸಮುದಾಯಗಳ ನಡುವೇ ರಾಜಕೀಯ ಸಮರ ನಡೆಯುವುದು ಬೇಡವೆನ್ನುವ ಉದ್ದೇಶದಿಂದ ಎಲ್ಲರು ಒಟ್ಟಾಗಿ ಚರ್ಚಿಸಿ, ಈ ಗೊಂದಲಕ್ಕೊಂದು ತಾರ್ಕಿಕ ಅಂತ್ಯ ಆಡೋಣವೆಂದು ಮುನಿಯಪ್ಪ, ಗೋವಿಂದ ಕಾರಜೋಳ ಹಾಗೂ ನಾರಾಯಣಸ್ವಾಮಿ ಅವರಿಗೆ ನಾವೇ ಸಲಹೆ ನೀಡಿದ್ದೆವು. ಆದರೆ ನಾರಾಯಣಸ್ವಾಮಿ ಅವರು ಈ ರೀತಿ ನಮ್ಮೊಂದಿಗೆ ಹಾಗೂ ನಮ್ಮ ಸಮುದಾಯದ ಶಾಸಕರೊಂದಿಗೆ ಚರ್ಚಿಸಿದ್ದೇನೆಂದು ಹೇಳಿರುವುದು ಸರಿಯಲ್ಲ. ಆ ಬಗ್ಗೆ ಚರ್ಚಿಸೋಣ ಎಂದು ಹೇಳಿದ್ದರಷ್ಟೇ ಆದರೆ ಯಾವುದೇ ಚರ್ಚೆ ಬೈಠಕ್ ಆಗಿಲ್ಲ. ಹೀಗಾಗಿ ಈ ಬಗ್ಗೆ ಚರ್ಚಿಸಲು ಒಂದೇ ವೇದಿಕೆಗೆ ನಮ್ಮೊಂದಿಗೆ ಸಚಿವರು ಧಾವಿಸಲಿ ಎಂದು ಆಹ್ವಾನಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವ ನಾರಾಯಣಸ್ವಾಮಿ ಕಾರ್ಯಕ್ರಮಲ್ಲಿ ಮೂವರ ಜೇಬಿಗೆ ಕತ್ತರಿ, 20 ಸಾವಿರ ಕಳ್ಳತನ

    ಸಮುದಾಯವನ್ನು ಸ್ವಾಮೀಜಿ ದಿಕ್ಕುತಪ್ಪಿಸಬಾರದು- ನಾರಾಯಣಸ್ವಾಮಿ
    ಶ್ರೀಗಳ ಹೇಳಿಕೆಗೆ ತಿರುಗೇಟು ನೀಡಿರುವ ನಾರಾಯಣಸ್ವಾಮಿ, ಸಮುದಾಯವನ್ನು ಸ್ವಾಮೀಜಿ ದಿಕ್ಕು ತಪ್ಪಿಸಬಾರದು ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ರಾಜಕೀಯಕ್ಕೆ ಬಂದಾಗಿಂದ ನಾನು ತಪ್ಪು ಮಾಡಿಲ್ಲ. ಸದಾಶಿವ ಆಯೋಗದ ವರದಿ ವಿಚಾರದಲ್ಲಿ ಮಿಸ್ ಗೈಡ್ ಸಹ ಮಾಡಿಲ್ಲ. ಸದಾಶಿವ ಆಯೋಗದಲ್ಲಿ ಲಂಬಾಣಿ, ಬೋವಿ ಸಮಾಜಗಳನ್ನು ಕೈಬಿಡಬೇಕು ಎಂಬ ಯಾವುದೇ ಪದವಿಲ್ಲ. ಆದರೂ ಅಲ್ಲಲ್ಲಿ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂಬುದು ನನಗೂ ನಿನ್ನೆ ಅನುಭವವಾಗಿದೆ. ನಾನು ಆ ಸಮಾಜವನ್ನು ವಿರೋಧ ಮಾಡುತ್ತೇನೆ ಎಂದು ಹೇಳುತ್ತಿದ್ದಾರೆ. ನಾನ್ಯಾಕೆ ವಿರೋಧ ಮಾಡಲಿ, ನಾನೇನು ಜಸ್ಟಿಸ್ಸಾ? ನಾನೊಬ್ಬ ಕ್ಯಾಬಿನೆಟ್ ಮಂತ್ರಿಯಾಗಿ ಯಾವುದೇ ವರದಿ ತೆಗೆದುಕೊಳ್ಳುವುದು ನನ್ನ ಜವಾಬ್ದಾರಿಯಾಗಿತ್ತು. ಹೀಗಾಗಿ ಅಂದು ಸಮಾಜ ಕಲ್ಯಾಣ ಮಂತ್ರಿ ಆಗಿದ್ದಾಗ ವರದಿ ಸ್ವೀಕರಿಸಿದ್ದೆನೆ. ನಮ್ಮಲ್ಲಿ ಯಾವುದೇ ಕಾಲಘಟ್ಟದಲ್ಲಿ ಸ್ವತಃ ನಾನೇ ಬೋವಿ ಸಮಾಜ ಹಾಗೂ ಲಂಬಾಣಿ ಶಾಸಕರ ಜೊತೆ ಚರ್ಚಿಸಿದ್ದೇನೆ. ಕಡಿಮೆ ಮಾಡಿಕೊಳ್ಳಲು ನಾವು ಸಿದ್ದರಿದ್ದೇವೆ. ಆದ್ದರಿಂದ ಎಲ್ಲರೂ ಒಂದಾಗೋಣ ಎಂದು ಹೇಳಿದ್ದೇನೆ.

    ಇಡೀ ಸಮಾಜವನ್ನು ಒಟ್ಟಾಗಿ ತೆಗೆದುಕೊಂಡು ಹೋಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಒಳ್ಳೆಯದು ಮಾಡಬೇಕೆಂಬ ಉದ್ದೇಶ ನನ್ನಲ್ಲಿದೆ. ನಾವ್ಯಾಕೆ ಗುಂಪುಗಾರಿಕೆಮಾಡಲಿ, ನಮ್ಮಲ್ಲಿ ಯಾಕೆ ಈ ಮನಸ್ಥಿತಿ ಬರುತ್ತದೆ? ಈ ವಿಚಾರವಾಗಿ ನಾನೇ ನೇರವಾಗಿ ಸ್ವಾಮೀಜಿ ಜೊತೆ ಮಾತನಾಡಿದ್ದೇನೆ, ಸುಮ್ಮನೆ ಯಾಕೆ ಚರ್ಚೆ ಮಾಡುತ್ತೀರಿ ಸ್ವಾಮೀಜಿಗಳ ಮೇಲೆ ನನಗೆ ಗೌರವ ಇದೆ. ಆದರೆ ನಾನು ಶ್ರೀಗಳ ಜೊತೆ ಮಾತನಾಡಿಲ್ಲ ಎಂದರೆ ಏನರ್ಥ? ಈ ಸ್ವಾಮೀಜಿಯವರು ಬೋವಿ ಗುರುಪೀಠದ ಸ್ವಾಮೀಜಿಗಳಾಗಿ ದಿಕ್ಕು ತಪ್ಪಿಸಬಾರದು. ಇದನ್ನೂ ಓದಿ: ಡಬಲ್ ಮರ್ಡರ್‌ಗೆ ಬೆಚ್ಚಿಬಿತ್ತು ಮೆಟ್ರೋ ಸಿಟಿ – ಲಕ್ಷ್ಮಿ ಹಬ್ಬದ ದಿನವೇ ಹೆಣವಾದ್ರು ವೃದ್ಧ ದಂಪತಿ

    ಸದಾಶಿವ ಆಯೋಗದಲ್ಲಿ ಈ ಎರಡು ಸಮಾಜಗಳನ್ನು ಮೀಸಲಾತಿಯಿಂದ ಕೈ ಬಿಡುವ ಚರ್ಚೆಗಳು ಹಿಂದೆಯೇ ನಡೆದಿದ್ದವು. ನಾನು ಅನೇಕ ಸಭೆಗಳಲ್ಲಿ ಹೇಳಿದ್ದೇನೆ. ಈ ಎರಡು ಸಮಾಜಗಳನ್ನು ಆಯೋಗದಿಂದ ತೆಗೆಯುವುದು ಯಾರ ಮನಸ್ಸಿನಲ್ಲಿ ಇಲ್ಲ. ನೀವ್ಯಾಕೆ ಈ ಕುರಿತು ಚರ್ಚೆ ಮಾಡುತ್ತೀರಾ? ಯಾಕೆ ಗೊಂದಲ ಸೃಷ್ಠಿ ಮಾಡುತ್ತೀರ ಎಂದು ಸ್ವಾಮೀಜಿಯನ್ನು ನಾರಾಯಣ ಸ್ವಾಮಿ ಪ್ರಶ್ನಿಸಿದ್ದಾರೆ.

  • ಜನರಿಗಷ್ಟೇ ಕೊರೊನಾ ರೂಲ್ಸ್- ಜನಪ್ರತಿನಿಧಿಗಳು ಡೋಂಟ್‍ಕೇರ್

    ಜನರಿಗಷ್ಟೇ ಕೊರೊನಾ ರೂಲ್ಸ್- ಜನಪ್ರತಿನಿಧಿಗಳು ಡೋಂಟ್‍ಕೇರ್

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅನ್ನೋದು ಕೇವಲ ಜನಸಾಮಾನ್ಯರಿಗೆ ಮಾತ್ರನಾ? ದೊಡ್ಡವರು ಅನ್ನಿಸಿಕೊಂಡಿರುವ ಜನಪ್ರತಿನಿಧಿಗಳಿಗೆ ನಿಯಮ ಅನ್ವಯಿಸಲ್ವಾ? ಹಬ್ಬಗಳಿಗೆ ಮಾತ್ರ ರೂಲ್ಸಾ? ಬಿಜೆಪಿಯ ಜನಾರ್ಶೀವಾದ ಯಾತ್ರೆಗೆ ಇಲ್ವಾ? ಎನ್ನುವ ಚರ್ಚೆ ಸಾರ್ವಜನಿಕ ವಲಯದಲ್ಲಿ ಜೋರಾಗಿದೆ.

    ಹಬ್ಬದ ಸಂದರ್ಭದಲ್ಲಿ ಬಡವರು, ಬದುಕು ಕಟ್ಟಿಕೊಳ್ಳುವವರ ಮಾಸ್ಕ್ ಮೂಗಿಂದ ಸ್ವಲ್ಪ ಜಾರಿದ್ದರೂ ನಿರ್ದಾಕ್ಷಿಣ್ಯವಾಗಿ ದಂಡ ವಿಧಿಸೋ ಸರ್ಕಾರ, ಎಲ್ಲಾ ಗೊತ್ತಿದ್ದೂ ಜನರನ್ನು ಗುಡ್ಡೆ ಹಾಕಿಕೊಂಡು ಬೃಹತ್ ಕಾರ್ಯಕ್ರಮ ನಡೆಸಿ, ಮೆರವಣಿಗೆ ನಡೆಸುವ ರಾಜಕಾರಣಿಗಳಿಗೆ ಮಾತ್ರ ದಂಡ ಹಾಕದೆ ಶ್ರೀರಕ್ಷೆಯಾಗಿ ನಿಂತಿದೆ. ಬೊಮ್ಮಾಯಿ ಸರ್ಕಾರದ ದ್ವಂದ್ವ ನೀತಿಗೆ ಜನಸಾಮಾನ್ಯರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಬೂದಿ ಕೊಟ್ಟ ಬಿಜೆಪಿಗೆ ಜನರ ಆಶೀರ್ವಾದ ಬೇಕಾ..?: ಡಿಕೆಶಿ ವ್ಯಂಗ್ಯ

    ಜನರಿಗಷ್ಟೇ ರೂಲ್ಸಾ..!?
    ಬಿಜೆಪಿ ಜನಾರ್ಶೀವಾದ ಯಾತ್ರೆಯಲ್ಲಿರುವ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ರೂಲ್ಸ್ ಅಂದ್ರೆನೇ ಅಲರ್ಜಿ ಅನ್ನಿಸುತ್ತಿದೆ. ಯಾಕಂದ್ರೆ ನಿನ್ನೆ ಯಾದಗಿರಿಯಲ್ಲಿ ಗುಂಡಿನ ಸ್ವಾಗತ ಸಿಕ್ಕಿತ್ತು. ಬಳಿಕ ನಡೆದ ಬಹುತೇಕ ಕಾರ್ಯಕ್ರಮಗಳಲ್ಲಿ ಜನಜಾತ್ರೆ ಇತ್ತು. ನೈಟ್‍ಕರ್ಫ್ಯೂಗೂ ಡೋಂಟ್ ಕೇರ್ ಅಂದಿದ್ದು, ರಾತ್ರಿ 11.30ರವರೆಗೂ ಯಾತ್ರೆ ನಡೆಸಿದ್ದಾರೆ. ಆದರೆ ಪೊಲೀಸರು ಕಣ್ಮುಚ್ಚಿಕೊಂಡಿದ್ದರು. ಇವತ್ತು ಕೂಡ ಬಳ್ಳಾರಿ, ಕೊಪ್ಪಳದಲ್ಲಿ ಜನಾಶೀರ್ವಾದ ಯಾತ್ರೆ ವೇಳೆ ರೂಲ್ಸ್ ಬ್ರೇಕ್ ಆಗಿತ್ತು. ಎಲ್ಲೂ ನಿಯಮಗಳು ಪಾಲನೆ ಆಗಲಿಲ್ಲ.

    ರಾಯಚೂರಲ್ಲೂ ನಿನ್ನೆ ಭಗವಂತ ಖೂಬಾ ಜನಾಶೀರ್ವಾದ ಕಾರ್ಯಕ್ರಮದಲ್ಲಿ ನೈಟ್ ಕರ್ಫ್ಯೂ ಉಲ್ಲಂಘನೆ ಆಗಿತ್ತು. ರಾತ್ರಿ 11 ಗಂಟೆವರೆಗೆ ಬಿಜೆಪಿ ಕಾರ್ಯಕರ್ತರ ಸಭೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು, ಆಯೋಜಕರ ಮೇಲೆ ಕೇಸ್ ದಾಖಲಿಸುವ ಬದಲಿಗೆ ವೀರಶೈವ ಕಲ್ಯಾಣ ಮಂಟಪದ ಮಾಲೀಕರ ಮೇಲೆ ಮಾತ್ರ ದೂರು ದಾಖಲಿಸಿದ್ದಾರೆ. ಇನ್ನೊಂದೆಡೆ ಕಲಬರುಗಿಯಲ್ಲಿ ಬ್ರಹ್ಮಪುರದ ಪೊಲೀಸರು ಸಚಿವರನ್ನು ಬಿಟ್ಟು ಉಳಿದವರ ಮೇಲೆ ಕೇಸ್ ಹಾಕಿದ್ದಾರೆ. ಇದನ್ನೂ ಓದಿ: ವಿಮಾನದಿಂದ ಬಿದ್ದವರ ಗುರುತು ಪತ್ತೆ- ಮೂವರಲ್ಲಿ ಒಬ್ಬ ಯುವ ಫುಟ್‍ಬಾಲ್ ಆಟಗಾರ

    ನಾರಾಯಣಸ್ವಾಮಿ ರೂಲ್ಸ್ ಬ್ರೇಕ್
    ಕೇಂದ್ರ ಸಚಿವ ನಾರಾಯಣಸ್ವಾಮಿ ಅವರು ಕೂಡ ರಾಜ್ಯಕ್ಕೆ ಬಂದಾಗಿನಿಂದಲೂ ರೂಲ್ಸ್ ಫಾಲೋ ಮಾಡುತ್ತಿಲ್ಲ. ಬೆಂಗಳೂರಿನ ಏರ್‍ಪೋರ್ಟ್, ನಿನ್ನೆ ಚಿತ್ರದುರ್ಗ, ದಾವಣಗೆರೆಯಲ್ಲಿ ತಾವು ಎಲ್ಲೆಲ್ಲಿಗೆ ಹೋಗಿದ್ದರೋ ಅಲ್ಲೆಲ್ಲಾ ನಿಯಮಗಳ ಉಲ್ಲಂಘನೆ ಆಗಿದೆ. ಆದರೆ ಸರ್ಕಾರ, ಪೊಲೀಸ್ ಇಲಾಖೆ ಮಾತ್ರ ಕಂಡೂ ಕಾಣದಂತೆ ಕೂತಿದೆ.

    ಶೋಭಾ ಕರಂದ್ಲಾಜೆ ರೂಲ್ಸ್ ಬ್ರೇಕ್
    ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೂಡ ಹೋದ ಕಡೆಯಲೆಲ್ಲಾ ರೂಲ್ಸ್ ಬ್ರೇಕ್ ಮಾಡಿದ್ದಾರೆ. ಮಂಡ್ಯ, ಚಿಕ್ಕಮಗಳೂರು, ಉಡುಪಿ ಸೇರಿ, ಶೋಭಾ ಕರಂದ್ಲಾಜೆ ಕಾಲಿಟ್ಟ ಕಡೆಯಲೆಲ್ಲಾ ನಿಯಮ ಪಾಲನೆ ಆಗಿಲ್ಲ. ಇಷ್ಟಾದರೂ ಜನಪ್ರತಿನಿಧಿಗಳಿಗೆ ದಂಡ ವಿಧಿಸೋ ಕೆಲಸವನ್ನು ಯಾರೂ ಮಾಡಿಲ್ಲ. ಈ ನಡೆಯ ವಿರುದ್ಧ ಸಾರ್ವಜನಿಕರು ಕಿಡಿಕಾರಿದ್ದಾರೆ. ಇದನ್ನೂ ಓದಿ: ವೆಹಿಕಲ್ ಟೋಯಿಂಗ್ ಹುಡುಗರನ್ನು ಅಟ್ಟಾಡಿಸಿ ಹೊಡೆದ ಸಾರ್ವಜನಿಕರು

  • ರಾಜ್ಯದ ನಾಲ್ವರಿಗೆ ಮಂತ್ರಿಗಿರಿ – ಆಯ್ಕೆಗೆ ಮಾನದಂಡ ಏನು?

    ರಾಜ್ಯದ ನಾಲ್ವರಿಗೆ ಮಂತ್ರಿಗಿರಿ – ಆಯ್ಕೆಗೆ ಮಾನದಂಡ ಏನು?

    ನವದೆಹಲಿ: ಮೋದಿ ಸಂಪುಟಕ್ಕೆ ಭರ್ಜರಿ ಸರ್ಜರಿಯಾಗಿದೆ. ಇಂದು 36 ಮಂದಿ ಕೇಂದ್ರ ಸಚಿವ ಸಂಪುಟ ಸೇರಿದ್ದಾರೆ. ಈ ಪೈಕಿ ಕರ್ನಾಟಕಕ್ಕೆ ಬಂಪರ್ ಪಾಲೇ ಸಿಕ್ಕಿದೆ. ರಾಜ್ಯ ನಾಲ್ವರು ಸಂಸದರಿಗೆ ಮಂತ್ರಿ ಸ್ಥಾನ ಸಿಕ್ಕಿದೆ.

    ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ, ಬೀದರ್ ಸಂಸದ ಭಗವಂತ ಖೂಬಾ, ಚಿತ್ರದುರ್ಗ ಸಂಸದ ನಾರಾಯಣಸ್ವಾಮಿ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರತಿಜ್ಞಾವಿಧಿ ವಿಧಿ ಬೋಧಿಸಿದರು.  ಇದನ್ನೂ ಓದಿ: ಮೋದಿ ಕ್ಯಾಬಿನೆಟ್‍ನಿಂದ ರವಿಶಂಕರ್ ಪ್ರಸಾದ್, ಜಾವಡೇಕರ್ ಔಟ್

    ಈ ನಾಲ್ವರೊಂದಿಗೆ ಕೇಂದ್ರ ಸಂಪುಟದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಚಿವರ ಸಂಖ್ಯೆ ಆರಕ್ಕೇರಿದೆ. ಈಗಾಗಲೇ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾಗಿ ಪ್ರಹ್ಲಾದ್ ಜೋಷಿ, ಕರ್ನಾಟದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೋದಿ ಸಂಪುಟದ ಆಯಾಕಟ್ಟಿನ ಜಾಗಗಳಲ್ಲಿ ಇದ್ದಾರೆ.

    ಶೋಭಾ ಕರಂದ್ಲಾಜೆ ಸಚಿವೆ ಆಗುವ ಮೂಲಕ ಸರೋಜಿನಿ ಮಹಿಷಿ, ಬಸವರಾಜೇಶ್ಚರಿ, ರತ್ನಮಾಲಾ ಸವಣೂರು, ಡಿಕೆ ತಾರಾದೇವಿ, ಮಾರ್ಗರೇಟ್ ಆಳ್ವಾ ಬಳಿಕ ಸಂಪುಟ ಸೇರಿದ ರಾಜ್ಯದ ಆರನೇ ಮಹಿಳೆ ಎಂಬ ಗರಿಮೆಗೆ ಪಾತ್ರರಾಗಿದ್ದಾರೆ. ನಿರೀಕ್ಷೆಯಂತೆ ಮೋದಿ ಸಂಪುಟದಿಂದ ಡಿವಿ ಸದಾನಂದಗೌಡರಿಗೆ ಕೊಕ್ ನೀಡಲಾಗಿದೆ.

    ಶೋಭಾ ಕರಂದ್ಲಾಜೆ:
    2014, 2019ರಲ್ಲಿ ಸತತ ಎರಡು ಬಾರಿ ಚಿಕ್ಕಮಗಳೂರು-ಉಡುಪಿ ಕ್ಷೇತ್ರದಿಂದ ಆಯ್ಕೆ ಆಗಿದ್ದಾರೆ. ಕರಾವಳಿ, ಒಕ್ಕಲಿಗ ಕೋಟಾ, ಡಿವಿಎಸ್ ಸ್ಥಾನಕ್ಕೆ ಭರ್ತಿ ಮಾಡಲಾಗಿದೆ. ರಾಜ್ಯ ಸರ್ಕಾರದಲ್ಲಿ ಸಚಿವೆಯಾಗಿ ಮಾಡಿದ್ದ ಕೆಲಸ, ಅನುಭವವನ್ನು ಪರಿಗಣಿಸಲಾಗಿದೆ. ಆರ್‍ಎಸ್‍ಎಸ್, ಹೈಕಮಾಂಡ್ ಸೂಚನೆ ಮೇರೆಗೆ ರಾಜ್ಯ ಸರ್ಕಾರದಿಂದ ಇವರು ಅಂತರವನ್ನು ಕಾಯ್ದುಕೊಂಡಿದ್ದರು.

    ಭಗವಂತ ಖೂಬಾ:
    ಬೀದರ್ ಸಂಸದಾಗಿರುವ ಇವರನ್ನು ಕಲ್ಯಾಣ ಕರ್ನಾಟಕ, ಲಿಂಗಾಯತ ಕೋಟಾ, ಸುರೇಶ್ ಅಂಗಡಿ ಸ್ಥಾನಕ್ಕೆ ಭರ್ತಿ ಮಾಡಲಾಗಿದೆ.ಆರ್‌ಎಸ್‌ಎಸ್‌ ಹಿನ್ನೆಲೆ, ಪಕ್ಷ ನಿಷ್ಠ ಅಲ್ಲದೇ ಎಂಜಿನಿಯರ್ ಪದವಿಯನ್ನು ಓದಿದ್ದಾರೆ. ಹೈಕಮಾಂಡ್ ಮಟ್ಟದ ನಾಯಕರ ಆಪ್ತ ವಲಯಕ್ಕೆ ಖುಬಾ ಸೇರಿದ್ದಾರೆ.

    ನಾರಾಯಣಸ್ವಾಮಿ:
    ಚಿತ್ರದುರ್ಗ ಸಂಸದರಾಗಿರುವ ಇವರು ದಲಿತ ಎಡಗೈ ಕೋಟಾವನ್ನು ಪ್ರತಿನಿಧಿಸುತ್ತಿದ್ದಾರೆ. ಯುವ ಮುಖ ಅಲ್ಲದೇ ಮೊದಲ ಬಾರಿ ಸಂಸದರಾಗಿ ಆಯ್ಕೆ ಆಗಿದ್ದಾರೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ಜೊತೆ ಗುರುತಿಸಿಕೊಂಡಿದ್ದಾರೆ.

    ರಾಜೀವ್ ಚಂದ್ರಶೇಖರ್:
    3ನೇ ಬಾರಿ ರಾಜ್ಯಸಭಾ ಸದಸ್ಯರಾಗಿರುವ ಇವರಿಗೆ ಇದೇ ಮೊದಲ ಬಾರಿಗೆ ಮಂತ್ರಿ ಸ್ಥಾನ ನೀಡಲಾಗಿದೆ. ಮೂಲ ಕೇರಳವಾಗಿದ್ದರೂ ಕರ್ನಾಟಕದ ರಾಜ್ಯಸಭಾ ಕೋಟಾದಿಂದ ಆಯ್ಕೆ ಮಾಡಲಾಗಿದೆ. ಹಲವು ಸಂಸದೀಯ ಸಮಿತಿಗಳಲ್ಲಿ ಚುರುಕಾಗಿ ಕೆಲಸ ಮಾಡಿದ ಅನುಭವ ಇವರಿಗಿದೆ.

  • ಕೇಂದ್ರ ಸಂಪುಟ ಸೇರಿದ ಸಂಸದರಾದ ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ

    ಕೇಂದ್ರ ಸಂಪುಟ ಸೇರಿದ ಸಂಸದರಾದ ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ

    ನವದೆಹಲಿ: ಪ್ರಧಾನಿ ಮೋದಿ ಅವರ ಸಂಪುಟ ಪುನಾರಚನೆ ಇವತ್ತು ನಡೆಯಲಿದ್ದು, ಕರ್ನಾಟಕದ ಸಂಸದರಾದ ನಾರಾಯಣಸ್ವಾಮಿ ಮತ್ತು ಶೋಭಾ ಕರಂದ್ಲಾಜೆ ಅದೃಷ್ಟ ಒಲಿದು ಬಂದಿದೆ ಎಂದು ತಿಳಿದು ಬಂದಿದೆ. ಸಂಜೆ 6 ಗಂಟೆಗೆ ನೂತನ ಕೇಂದ್ರ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

    ಸದ್ಯ ಕೇಂದ್ರ ಸಂಪುಟದಲ್ಲಿರುವ ಡಿ.ವಿ.ಸದಾನಂದ ಗೌಡರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶೋಭಾ ಕರಂದ್ಲಾಜೆ ಕೇಂದ್ರ ಸಂಪುಟ ಸೇರ್ಪಡೆಯಾದ್ರೆ ರಾಜ್ಯದ ಆರನೇ ಸಂಸದೆಯಾಗಲಿದ್ದಾರೆ. ಈ ಹಿಂದೆ ಸರೋಜಿನಿ ಮಹಿಷಿ, ಬಳ್ಳಾರಿ ಸಂಸದೆಯಾಗಿದ್ದ ಬಸವರಾಜೇಶ್ಚರಿ, ಚಿಕ್ಕಮಗಳೂರು ಸಂಸದೆಯಾಗಿದ್ದ ಡಿ.ಕೆ.ತಾರದೇವಿ, ಕೆನರಾ ಸಂಸದೆಯಾಗಿದ್ದ ಮಾರ್ಗರೇಟ್ ಅಳ್ವಾ ಕೇಂದ್ರ ಸಚಿವರಾಗಿದ್ದರು. ಈಗ ಮತ್ತೆ ಉಡುಪಿ-ಚಿಕ್ಕಮಗಳೂರಿಗೆ ಅದೃಷ್ಟ ಒಲಿದು ಬಂದಿದೆ.

    ಸಂಸದ ನಾರಾಯಣಸ್ವಾಮಿಗೆ ಏಕೆ ಸ್ಥಾನ?
    ಎಸ್‍ಸಿ ಎಡಗೈ ಸಮುದಾಯದ ಕೋಟಾ ಇತ್ತು. ಮೊದಲ ಅವಧಿಯಲ್ಲಿ ಮೋದಿ ಸಂಪುಟದಲ್ಲಿ ವಿಜಯಪುರದ ಸಂಸದ ರಮೇಶ್ ಜಿಗಜಿಣಗಿ ಸ್ಥಾನ ಕೊಡಲಾಗಿತ್ತು. ಆದರೆ ಎರಡನೇ ಅವಧಿಯಲ್ಲಿ ಸ್ಥಾನವನ್ನ ಕೊಟ್ಟಿರಲಿಲ್ಲ. ಹಾಗಾಗಿ ಆ ಕೋಟಾದಲ್ಲಿ ಚಿತ್ರದುರ್ಗ ಸಂಸದರಾದ ನಾರಾಯಣಸ್ವಾಮಿ ಅವರಿಗೆ ಸ್ಥಾನ ನೀಡಲಾಗಿದೆ. ಇನ್ನೂ ನಾರಾಯಣಸ್ವಾಮಿ ಅವರು ಬಿ.ಎಲ್.ಸಂತೋಷ್ ಗುಂಪಿನಲ್ಲಿ ಗುರುತಿಸಿಕೊಂಡಿದ್ದರು.

    ಶೋಭಾ ಕರಂದ್ಲಾಜೆಗೆ ಏಕೆ ಸ್ಥಾನ?
    ಜಾತಿ ಸಮೀಕರಣದಲ್ಲಿ ಶೋಭಾ ಕರಂದ್ಲಾಜೆಗೆ ಅವರಿಗೆ ಅದೃಷ್ಟ ಒಲಿದಿದೆ. ಡಿ.ವಿ.ಸದನಾಂದಗೌಡರ ಸ್ಥಾನಕ್ಕೆ ಎರಡು ರೀತಿಯಲ್ಲಿ ಸಮೀಕರಣ ರಚನೆ ಮಾಡಲಾಗಿತ್ತು. ಒಂದು ಜಾತಿ ಇನ್ನೊಂದು ಕರಾವಳಿ ಭಾಗದ ಸಮೀಕರಣದಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ಸ್ಥಾನ ಸಿಕ್ಕಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ದೂರ ಇರುವಂತೆ ಹೈಕಮಾಂಡ್, ಆರ್‍ಎಸ್‍ಎಸ್ ಸೂಚನೆ ನೀಡಿತ್ತು ಎನ್ನಲಾಗಿದೆ. ಇಬ್ಬರ ಆಜ್ಞೆಯನ್ನು ಶೋಭಾ ಕರಂದ್ಲಾಜೆ ಚಾಚೂತಪ್ಪದೇ ಪಾಲಿಸಿದ್ದಾರೆ.

    ಕಳೆದ ಎರಡು ವರ್ಷಗಳಿಂದ ಶೋಭಾ ಕರಂದ್ಲಾಜೆ ಅವರು ವ್ಯಕ್ತಿ ನಿಷ್ಠೆಯಿಂದ ಅಂತರ ಕಾಯ್ದುಕೊಂಡಿದ್ದರು. ಪಕ್ಷ, ಸಂಘ ನಿಷ್ಠರಾಗಿ ಉಳಿದು ರಾಜ್ಯ ರಾಜಕಾರಣದಿಂದ ದೂರವಿದ್ದ ಲಾಭವೇ ಕೇಂದ್ರ ಸಂಪುಟದಲ್ಲಿ ಸ್ಥಾನ ಎನ್ನಲಾಗುತ್ತಿದೆ.

  • ದೀಪವೊಂದು ಮರೆಯಾಗಿದೆ: ಸಿದ್ದಲಿಂಗಯ್ಯನವರ ನಿಧನಕ್ಕೆ ಸಿ.ಟಿ.ರವಿ ಸಂತಾಪ

    ದೀಪವೊಂದು ಮರೆಯಾಗಿದೆ: ಸಿದ್ದಲಿಂಗಯ್ಯನವರ ನಿಧನಕ್ಕೆ ಸಿ.ಟಿ.ರವಿ ಸಂತಾಪ

    ಬೆಂಗಳೂರು: ದೀಪವೊಂದು ಮರೆಯಾಗಿದೆ. ಬದುಕಿನ ಅಸ್ಮಿತೆಗಳನ್ನು, ಬದುಕಿನ ಕಥನಗಳನ್ನು ಅಕ್ಷರ ರೂಪದಲ್ಲಿ ಕಟ್ಟಿದವರು ದಲಿತ ಕವಿ ಶ್ರೀ ಸಿದ್ದಲಿಂಗಯ್ಯನವರು. ಸಾಹಿತ್ಯ ಲೋಕದಲ್ಲಿ ತಮ್ಮ ವರ್ಗದ ಅಸ್ಮಿತೆಗೆ ಧ್ವನಿಯಾಗಿ ‘ದಲಿತ ಕವಿ’ಎಂದೇ ಪ್ರಸಿದ್ಧರಾದ ನಾಡೋಜ ಸಿದ್ಧಲಿಂಗಯ್ಯನವರ ಅಗಲುವಿಕೆಗೆ ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿಯವರು ಸಂತಾಪ ಸೂಚಿಸಿದ್ದಾರೆ.

    ಇವರ ಒಳ ಧ್ವನಿಯ ಆಕ್ರೋಶದಿಂದ ಹುಟ್ಟಿದ ಹಾಡುಗಳು ಆರಂಭದ ದಿನಗಳಲ್ಲಿ ಚಳುವಳಿಗೆ ಬಲ ತುಂಬಿದವು ನಂತರದ ದಿನಗಳಲ್ಲಿ ರಾಷ್ಟ್ರೀಯತೆಯ ಕಾರಣಕ್ಕಾಗಿ ಮಧ್ಯಮ ಮಾರ್ಗವನ್ನು ಕಂಡುಕೊಂಡ ಶ್ರೀಯುತರು ಕನ್ನಡ ಸಾಹಿತ್ಯ ರಂಗದ ಒಬ್ಬ ಅಪ್ರತಿಮ ಸಾಧಕರು. ಶ್ರೀಯುತರ ಸಾಹಿತ್ಯದ ಕೃಷಿಗೆ ಕನ್ನಡದ ಶ್ರೇಷ್ಠ ಪ್ರಶಸ್ತಿ ಪಂಪ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ಡಾ. ಅಂಬೇಡ್ಕರ್ ಪ್ರಶಸ್ತಿ, ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ, ಬಾಬು ಜಗಜೀವನ ರಾಮ್ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಇವರಿಗೆ ಸಂದಿದ್ದವು. ಇದನ್ನೂ ಓದಿ: ‘ಊರುಕೇರಿ’ ತೊರೆದು ಹೋದ ಸಿದ್ದಲಿಂಗಯ್ಯ

    ಹೊಲೆ ಮಾದಿಗರ ಹಾಡು, ಮೆರವಣಿಗೆ, ಸಾವಿರಾರು ನದಿಗಳು, ಕಪ್ಪು ಕಾಡಿನ ಹಾಡು ಮೊದಲಾದ ಕೃತಿಗಳನ್ನು ರಚಿಸಿದ ಶ್ರೀಯುತರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆ ಅಪಾರ. ಎರಡು ಬಾರಿ ರಾಜ್ಯ ವಿಧಾನ ಪರಿಷತ್ತಿನ ಸದಸ್ಯರಾಗಿದ್ದ ಶ್ರೀಯುತರು 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಕವಿ ಸಿದ್ಧಲಿಂಗಯ್ಯನವರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಅತ್ತಂತ ಸಮರ್ಪಕವಾಗಿ ಕೆಲಸ ನಿರ್ವಹಿಸಿದ್ದರು.

    ನನ್ನಂತಹ ಸಾವಿರ ಸಾವಿರ ಓದುಗರ ಪಾಲಿಗೆ ಶ್ರೀಯುತರ ಅಗಲಿಕೆ ಅತಿದೊಡ್ಡ ನಷ್ಟ. ಇಹಕಾಯವನ್ನು ತೊರೆದಿದ್ದರೂ ಅವರ ಬರವಣಿಗೆಗಳ ಮೂಲಕ ನಮ್ಮ ನಡುವೆ ಸದಾ ನೆಲೆಸಿರುತ್ತಾರೆ. ಅವರ ಅಗಲುವಿಕೆಯ ದುಃಖ ಭರಿಸುವ ಶಕ್ತಿ ಅವರ ಕುಟುಂಬಕ್ಕೆ, ಅವರ ಅಭಿಮಾನಿ ವರ್ಗಕ್ಕೆ ಹಾಗೂ ಓದುಗ ಬಳಗಕ್ಕೆ ಶ್ರೀ ಗುರು ದತ್ತಾತ್ರೇಯರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

    ನಾರಾಯಣಸ್ವಾಮಿ ಸಂತಾಪ:
    ಕನ್ನಡದ ಕವಿ ಡಾ ಸಿದ್ಧಲಿಂಗಯ್ಯ ನವರು ಇಹಲೋಕ ತ್ಯಜಿಸಿದ್ದಾರೆ. ದಲಿತ ಸಮುದಾಯದ ಉನ್ನತಿ ಮತ್ತು ಪ್ರಗತಿಗಾಗಿ ಶ್ರಮಿಸಿದ ಸಿದ್ದಲಿಂಗಯ್ಯ ನವರಿಗೆ ಭಾವಪೂರ್ಣ ಶ್ರದ್ಧಾಂಜಲಿ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಅಂತಾ ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಸಂತಾಪ ಸೂಚಿಸಿದ್ದಾರೆ.

    ಮುಖ್ಯಮಂತ್ರಿ ಮಾನ್ಯ ಯಡಿಯೂರಪ್ಪನವರಲ್ಲಿ ಮನವಿ ಮಾಡುತ್ತೇನೆ. ಸಿದ್ಧಲಿಂಗಯ್ಯನವರು ರಾಜ್ಯದಲ್ಲಿ ಹೆಸರಾಂತ ಕವಿಗಳು ಮಾತ್ರವಲ್ಲ ಅವರು ಪ್ರೊಫೆಸರ್ ಆಗಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಹಾಗೂ ಎರಡು ಅವಧಿಗೆ ಕರ್ನಾಟಕ ವಿಧಾನಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿ ರಾಜ್ಯದಲ್ಲಿ ಜನಾನುರಾಗಿ ಆಗಿದ್ದಾರೆ. ಆದ್ದರಿಂದ ಅವರ ಸಹಸ್ರಾರು ಸಂಖ್ಯೆಯ ಶಿಷ್ಯವೃಂದ ಹಾಗೂ ಅವರ ಅನುಯಾಯಿಗಳು ಸಿದ್ಧಲಿಂಗಯ್ಯನವರನ ಅಂತ್ಯಕ್ರಿಯೆ ನಡೆಸಲು ಬೆಂಗಳೂರು ವಿಶ್ವವಿದ್ಯಾಲಯದ ಕಲಾಗ್ರಾಮದಲ್ಲಿ ಪ್ರೊಫೆಸರ್ ಜಿ.ಎಸ್ ಶಿವರುದ್ರಪ್ಪ ಮತ್ತು ಪ್ರೊಫೆಸರ್ ಯು.ಆರ್ ಅನಂತಮೂರ್ತಿರವರ ಸ್ಮಾರಕಗಳ ಸ್ಥಳದಲ್ಲಿ ಅಂತ್ಯಕ್ರಿಯೆಗೆ ಸ್ಥಳಾವಕಾಶ ಕೋರುತ್ತಿದ್ದಾರೆ. ದಯಮಾಡಿ ದಲಿತ ಸಮುದಾಯಗಳ ಈ ಮನವಿಗೆ ಸ್ಪಂದಿಸಿ ಅವಕಾಶ ಕಲ್ಪಿಸಿಕೊಡಲು ಮನವಿ ಮಾಡುತ್ತೇನೆ ಅಂತಾ ಛಲವಾದಿ ನಾರಾಯಣಸ್ವಾಮಿ ಮನವಿ ಮಾಡಿದ್ದಾರೆ. ಇದನ್ನೂ ಓದಿ:ದಲಿತ ಕವಿ ಸಿದ್ದಲಿಂಗಯ್ಯ ನಿಧನ – ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ

  • ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ: ನಾರಾಯಣಸ್ವಾಮಿ

    ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ: ನಾರಾಯಣಸ್ವಾಮಿ

    ಕೋಲಾರ: ಮುಂದಿನ ವಿದಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ವರ್ಧಿಸುತ್ತಾರೆ ಎಂದು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರದ ಹಿತದೃಷ್ಟಿಯಿಂದ ಅವರನ್ನು ಸ್ಪರ್ಧಿಸುವಂತೆ ಒತ್ತಾಯ ಮಾಡಿದ್ದೇವೆ, ಕೋಲಾರ ಜಿಲ್ಲೆಗೆ ಕೆ.ಸಿ.ವ್ಯಾಲಿ ನೀರಾವರಿ ಯೋಜನೆ ಕೊಟ್ಟವರು ಸಿದ್ದರಾಮಯ್ಯ. ಹೀಗಾಗಿ ಅವರನ್ನು ಕೋಲಾರಕ್ಕೆ ಬರುವಂತೆ ಒತ್ತಾಯ ಮಾಡಿದ್ದೇವೆ. ಕೋಲಾರ ಜಿಲ್ಲೆಗೆ ಸಿದ್ದರಾಮಯ್ಯ ಬರುವುದರಿಂದ ಪಕ್ಷದ ಸಂಘಟನೆ ಆಗಲಿದ್ದು, ನಾನು ಸೇರಿದಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಎಂಎಲ್‍ಸಿ ನಜೀರ್ ಅಹ್ಮದ್, ಮಾಲೂರು ಶಾಸಕ ನಂಜೇಗೌಡ ಎಲ್ಲರೂ ಒತ್ತಾಯ ಮಾಡಿದ್ದೇವೆ ಎಂದರು.

    ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಬಳಿ ಆತ್ಮೀಯವಾಗಿರುವುದರಿಂದ ನನಗೆ ಇರುವ ಮಾಹಿತಿ ಪ್ರಕಾರ ಮುಂದಿನ ವಿಧಾನಸಭಾ ಚುನಾವಣೆಗೆ ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿದ್ದಾರೆ. ಕೆ.ಎಚ್.ಮುನಿಯಪ್ಪ, ಎಂಎಲ್‍ಸಿ ಗೋವಿಂದರಾಜು ಅವರನ್ನು ಕೋಲಾರಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿರುವ ಬಗ್ಗೆ ಕೇಳಿದಾಗ ಇದರಲ್ಲಿ ಯಾವುದೇ ಹುರುಳಿಲ್ಲ, ಸದ್ಯದಲ್ಲೇ ಸಿದ್ದರಾಮಯ್ಯ ಕೋಲಾರಕ್ಕೆ ಬರುವ ಸುದ್ದಿ ಹೊರ ಬೀಳಲಿದೆ ಎಂದರು.