Tag: ನಾರಾಯಣ ರಾಣೆ

  • ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ – ಕೇಂದ್ರ ಸಚಿವ ನಾರಾಯಣ ರಾಣೆ ಅರೆಸ್ಟ್

    ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ – ಕೇಂದ್ರ ಸಚಿವ ನಾರಾಯಣ ರಾಣೆ ಅರೆಸ್ಟ್

    ಮುಂಬೈ: ಕೇಂದ್ರ ಕೈಗಾರಿಕೆ, ಬಂದರು ಖಾತೆಯ ಸಚಿವ ನಾರಾಯಣ ರಾಣೆ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.

    ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ನಾರಾಯಣ ರಾಣೆ ಅವರನ್ನು ರತ್ನಗಿರಿ ಪೊಲೀಸರು  ಮಂಗಳವಾರ ಬಂಧಿಸಿದ್ದಾರೆ.

    ನಾನು ಸಿಎಂ ವಿರುದ್ಧ ಹೇಳಿಕೆ ನೀಡುವ ಮೂಲಕ ಯಾವುದೇ ಅಪರಾಧ ಮಾಡಿಲ್ಲ ಎಂದು ರಾಣೆ ಅವರು ಸಿಎಂ ವಿರುದ್ಧ ನೀಡಿದ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: 6 ಲಕ್ಷ ಕೋಟಿ ಸಂಗ್ರಹ ಗುರಿ – ಖಾಸಗಿಯವರಿಗೆ ಸಿಗಲಿದೆ ರೈಲು, ರಸ್ತೆ, ಗಣಿ 

    ಸೋಮವಾರ ರಾಯಗಡದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನಾರಾಯಣ ರಾಣೆ, ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು ಯಾವ ವರ್ಷ ಎಂಬುದನ್ನು ತಿಳಿಯದ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ಹೇಳಿಕೆ ನೀಡಿದ್ದರು. ಇದನ್ನೂ ಓದಿ:  ತಾಲಿಬಾನಿಗಳ ಮೇಲೆ ಗುಂಡಿನ ಮಳೆ – ನಾರ್ಥರ್ನ್ ಅಲಯನ್ಸ್‌ಗೆ ತಜಕಿಸ್ತಾನ ಬೆಂಬಲ

    https://twitter.com/ANI/status/1430127979997188107

    ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಧ್ವಜಾರೋಹಣ ನಡೆಸಿ ಭಾಷಣ ಮಾಡಿದ್ದರು. ಈ ವೇಳೆ ಭಾರತಕ್ಕೆ ಸ್ವಾತಂತ್ರ್ಯ ಪಡೆದ ವರ್ಷವನ್ನು ಪಕ್ಕದವರಿಂದ ಕೇಳಿ ತಿಳಿದುಕೊಂಡು ಹೇಳಿದ್ದರು. ಈ ವಿಚಾರವನ್ನು ಪ್ರಸ್ತಾಪಿಸಿ ರಾಣೆ ಹೇಳಿಕೆ ನೀಡಿದ್ದರು.

    ಈ ಹೇಳಿಕೆಯ ಬೆನ್ನಲ್ಲೇ ರಾಯಗಢ, ಪುಣೆ, ನಾಸಿಕ್‍ನಲ್ಲಿ ನಾರಾಯಣ ರಾಣೆ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು.

  • ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿದ ಮಹಾರಾಷ್ಟ್ರ ಮಾಜಿ ಸಿಎಂ ನಾರಾಯಣ ರಾಣೆ

    ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿದ ಮಹಾರಾಷ್ಟ್ರ ಮಾಜಿ ಸಿಎಂ ನಾರಾಯಣ ರಾಣೆ

    ಮುಂಬೈ: ರಾಜ್ಯದ ಮಾಜಿ ಸಿಎಂ ನಾರಾಯಣ ರಾಣೆ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಗುಡ್‍ಬೈ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್‍ನೊಂದಿಗೆ ಹೊಂದಿದ ಬಹುಕಾಲದ ಬಾಂಧವ್ಯವನ್ನು ಕೊನೆಗೊಳಿಸಿದ್ದಾರೆ.

    ಪಕ್ಷದಲ್ಲಿ ನನ್ನನ್ನು ಕಡೆಗಣಿಸಲಾಗುತ್ತಿದ್ದು, ಮುಖ್ಯಮಂತ್ರಿ ಸ್ಥಾನವನ್ನು ನೀಡುತ್ತೇವೆ ಎಂದು ಹೈಕಮಾಂಡ್ ಈ ಹಿಂದೆ ಮಾತು ಕೊಟ್ಟಿತ್ತು. ಆದರೆ ಪಕ್ಷ ತನಗೆ ಅನ್ಯಾಯವನ್ನು ಮಾಡುತ್ತಿದ್ದು, ನನ್ನ ಬೆಂಬಲಿಗರಿಗೂ ಸೂಕ್ತ ಸ್ಥಾನಮಾನ ನೀಡುತ್ತಿಲ್ಲ ಅದರಿಂದಲೇ ತಾನು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ರಾಣೆ ತಿಳಿಸಿದ್ದಾರೆ.

    2005ರಲ್ಲಿ ನಾನು ಶಿವಸೇನೆ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ವೇಳೆ ಆರು ತಿಂಗಳಿನಲ್ಲಿ ಸಿಎಂ ಮಾಡುವುದಾಗಿ ಆಶ್ವಾಸನೆಯನ್ನು ನೀಡಿದ್ದರು. ಆದರೆ 12 ವರ್ಷಗಳ ಕಾಲ ಪಕ್ಷಕ್ಕಾಗಿ ಸೇವೆ ಸಲ್ಲಿಸಿದ್ದರೂ, ತನಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡಿಲ್ಲ. ಅದರಿಂದ ಕಾಂಗ್ರೆಸ್ ಪಕ್ಷದಿಂದ ಹೊರ ನಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.

    ನಾರಾಯಣ್ ತಮ್ಮ ನಿರ್ಧಾರದ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ಪಾತ್ರವನ್ನು ಬರೆದಿದ್ದಾರೆ. ಈ ವೇಳೆ ನಾಯಕರಾದ ಅಶೋಕ್ ಚೌಹಾಣ್ ಮತ್ತು ಅಹ್ಮದ್ ಪಾಟೀಲ್ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಪಕ್ಷಕ್ಕೆ ಸೇರ್ಪಡೆಯದಾಗಿನಿಂದ ರಾಜಕೀಯ ಕಾರಣಗಳಿಗಾಗಿ ಹಲವು ಸಂಘರ್ಷಗಳು ನಡೆದಿದೆ ಎಂದು ಹೇಳಿದರು.

    ನಾರಾಯಣ್ ಶುಕ್ರವಾರದಿಂದ ಮಹಾರಾಷ್ಟ್ರ ರಾಜ್ಯ ಪ್ರವಾಸವನ್ನು ಕೈಗೊಳ್ಳಲಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಹಾಗೂ ಅಶೋಕ್ ಚೌಹಾಣ್ ಅವರ ಸ್ವ ಕ್ಷೇತ್ರಗಳಲ್ಲಿಯು ಪ್ರವಾಸವನ್ನು ಕೈಗೊಳ್ಳಲಿದ್ದಾರೆ.

    ಪ್ರಸ್ತುತ ಕಾಂಗ್ರೆಸ್‍ನಿಂದ ಹೊರಬಂದಿರುವ ಅವರು ಬಿಜೆಪಿ ಸೇರಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದೆ. ಕೆಲ ತಿಂಗಳ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮೀತ್ ಶಾರನ್ನು ಭೇಟಿ ಮಾಡಿದ್ದಾರೆ ಎನ್ನುವ ವರದಿಯೂ ಪ್ರಕಟವಾಗಿದೆ. ಇದಕ್ಕೆ ಪೂರಕ ಎಂಬಂತೆ ಗಣೇಶ ಹಬ್ಬದ ವೇಳೆ ಸಿಎಂ ಫಡ್ನಾವಿಸ್ ರಾಣೆ ಅವರ ಮನೆಗೆ ಭೇಟಿ ನೀಡಿದ್ದರು.

    ಮರಾಠಿ ಸಮುದಾಯ ಪ್ರಭಾವಿ ನಾಯಕನಾಗಿರುವ ರಾಣೆಯವರು ಮುಂದಿನ ನಿರ್ಧಾರದ ಬಗ್ಗೆ ಯಾವುದೇ ವಿವರ ನೀಡಿಲ್ಲ. ಆದರೆ ದಸರಾ ಹಬ್ಬದ ವೇಳೆಗೆ ತನ್ನ ತೀರ್ಮಾನವನ್ನು ತಿಳಿಸುವುದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲದೆ ನನ್ನ ಜೊತೆಗೆ ರಾಜ್ಯದ ಹಿರಿಯ ಶಿವಸೇನೆ ಹಾಗೂ ಕಾಂಗ್ರೆಸ್ ನಾಯಕರು ಸೇರಲಿದ್ದಾರೆ ಎಂದು ತಿಳಿಸಿದರು.

    ಶಿವಸೇನೆಯಲ್ಲಿ ಉದ್ಧವ್ ಠಾಕ್ರೆ ಅವರಿಗೆ ಪ್ರಾಮುಖ್ಯತೆ ಜಾಸ್ತಿ ನೀಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ಕಾರಣಕ್ಕೆ ಬಾಳಾ ಠಾಕ್ರೆಯವರು ನಾರಾಯಣ ರಾಣೆ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದರು. ಬಳಿಕ ರಾಣೆ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

    1999ರ ಫೆಬ್ರವರಿ 1 ರಿಂದ, 199ರ ಫೆಬ್ರವರಿ ಅಕ್ಟೋಬರ್ 17ರ ವರೆಗೆ ನಾರಾಯಣ ರಾಣೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.