Tag: ನಾರ್‌ ಗಿಲೋನ್‌

  • ಹಮಾಸ್‌ನ್ನು ಭಾರತದ ಭಯೋತ್ಪಾದಕರ ಪಟ್ಟಿಗೆ ಸೇರಿಸೋ ಕಾಲ ಬಂದಿದೆ: ಇಸ್ರೇಲಿ ರಾಯಭಾರಿ

    ಹಮಾಸ್‌ನ್ನು ಭಾರತದ ಭಯೋತ್ಪಾದಕರ ಪಟ್ಟಿಗೆ ಸೇರಿಸೋ ಕಾಲ ಬಂದಿದೆ: ಇಸ್ರೇಲಿ ರಾಯಭಾರಿ

    ನವದೆಹಲಿ: ಹಮಾಸ್‌ ಅನ್ನು ಭಾರತದ (India) ಭಯೋತ್ಪಾದಕರ ಪಟ್ಟಿಗೆ ಸೇರಿಸುವ ಸಮಯ ಬಂದಿದೆ ಎಂದು ಭಾರತದ ಇಸ್ರೇಲ್‌ ರಾಯಭಾರಿ ನಾರ್‌ ಗಿಲೋನ್‌ (Naor Gilon) ಅಭಿಪ್ರಾಯಪಟ್ಟಿದ್ದಾರೆ.

    ಕೇರಳದಲ್ಲಿ (Kerala) ಫೆಲೆಸ್ತೀನ್ ಪರ ರ‍್ಯಾಲಿಯಲ್ಲಿ ಮಾಜಿ ಹಮಾಸ್ (Hamas) ಮುಖ್ಯಸ್ಥ ಖಲೀದ್ ಮಶಾಲ್ ಭಾಗವಹಿಸಿದ್ದಕ್ಕೆ ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ನಾರ್ ಗಿಲೋನ್ ಆಘಾತ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾತ್ರೋರಾತ್ರಿ ದಾಳಿ ನಡೆಸಿ ಹಮಾಸ್‌ ಕಮಾಂಡರ್‌ ಹತ್ಯೆ; 36 ಮಂದಿ ಬಂಧಿಸಿದ ಇಸ್ರೇಲ್‌ ರಕ್ಷಣಾ ಪಡೆ

    ನಂಬಲಾಗುತ್ತಿಲ್ಲ! ಹಮಾಸ್‌ ಭಯೋತ್ಪಾದಕ ಖಲೀದ್‌ ಮಶಾಲ್‌ ಕತಾರ್‌ನಿಂದ ಕೇರಳದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾನೆ. ಹಿಂದುತ್ವ ಮತ್ತು ವರ್ಣಭೇದ ಪ್ರತಿಪಾದಿಸುವ ಜಿಯೋನಿಜಂ (ಯಹೂದಿಗಳ ರಾಷ್ಟ್ರೀಯವಾದಿ ನೀತಿ) ಅನ್ನು ಬೇರು ಸಮೇತ ಕಿತ್ತೊಗೆಯಿರಿ ಎಂದು ಕರೆ ಕೊಟ್ಟಿದ್ದಾನೆಂದು ಇಸ್ರೇಲಿ ರಾಯಭಾರಿ ಸೋಷಿಯಲ್‌ ಮೀಡಿಯಾ ಖಾತೆ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.

    ಬೀದಿಗಿಳಿಯಿರಿ, ಇಸ್ರೇಲ್‌ ನಡೆಗೆ ಆಕ್ರೋಶ ವ್ಯಕ್ತಪಡಿಸಿ, ಹಮಾಸ್‌ಗೆ ಆರ್ಥಿಕ ಬೆಂಬಲ ನೀಡಿ ಎಂದು ರ‍್ಯಾಲಿಯಲ್ಲಿ ಪಾಲ್ಗೊಂಡಿರುವವರಿಗೆ ಮಶಾಲ್‌ ಕರೆ ನೀಡಿದ್ದಾನೆ. ಹಮಾಸ್‌ ಅನ್ನು ಭಾರತದ ಭಯೋತ್ಪಾದಕರ ಪಟ್ಟಿಗೆ ಸೇರಿಸುವ ಸಮಯ ಬಂದಿದೆ ಎಂದು ಗಿಲೋನ್‌ ಮತ್ತೊಂದು ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ಹಿಜಬ್ ಕಾನೂನು ಉಲ್ಲಂಘನೆ – ಇರಾನ್‌ನಲ್ಲಿ 12 ನಟಿಯರಿಗೆ ನಿಷೇಧ

    ಅಕ್ಟೋಬರ್‌ 7 ರಂದು ಇಸ್ರೇಲ್‌ ಮೇಲೆ ಹಮಾಸ್‌ ಬಂಡುಕೋರರು ದಾಳಿ ನಡೆಸಿದರು. ಪರಿಣಾಮವಾಗಿ ಇಸ್ರೇಲ್‌ ಯುದ್ಧವನ್ನು ಘೋಷಿಸಿತು. ಪ್ಯಾಲಿಸ್ತೀನ್‌ನಲ್ಲಿ ಹಮಾಸ್‌ ಬಂಡುಕೋರರು ಹೆಚ್ಚಾಗಿ ಇದ್ದಾರೆಂದು ಆರೋಪಿಸಿ ಇಸ್ರೇಲ್‌ ಹೆಚ್ಚಿನ ದಾಳಿ ನಡೆಸಿತು. ಪ್ಯಾಲೆಸ್ತೀನ್‌ನಲ್ಲಿ ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಹಮಾಸ್‌ ಬಂಡುಕೋರರು ಅನೇಕ ಇಸ್ರೇಲಿ ಪ್ರಜೆಗಳನ್ನು ಒತ್ತೆಯಾಳಾಗಿರಿಸಿಕೊಂಡಿದೆ. ಪ್ಯಾಲೆಸ್ತೀನ್‌ ಮೇಲಿನ ಇಸ್ರೇಲ್‌ ಯುದ್ಧ ಮುಂದುವರಿದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • `ಕಾಶ್ಮೀರ್ ಫೈಲ್ಸ್’ ಅಶ್ಲೀಲ ಚಿತ್ರ ಎಂದ ನಿರ್ದೇಶಕನ ವಿರುದ್ಧ ಕಿಡಿಕಾರಿದ ಇಸ್ರೇಲ್ ರಾಯಭಾರಿ

    `ಕಾಶ್ಮೀರ್ ಫೈಲ್ಸ್’ ಅಶ್ಲೀಲ ಚಿತ್ರ ಎಂದ ನಿರ್ದೇಶಕನ ವಿರುದ್ಧ ಕಿಡಿಕಾರಿದ ಇಸ್ರೇಲ್ ರಾಯಭಾರಿ

    `ಕಾಶ್ಮೀರ್ ಫೈಲ್ಸ್’ (The Kashmir Files) ತೆರೆಕಂಡ ದಿನದಿಂದಲೂ ಸಖತ್ ಸುದ್ದಿಯಲ್ಲಿದೆ. ಇತ್ತೀಚೆಗಷ್ಟೇ ನಡೆದ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ಕಲಾತ್ಮಕ ಸ್ಪರ್ಧಾ ವಿಭಾಗಕ್ಕೆ ಈ ಸಿನಿಮಾ ಸೂಕ್ತವಲ್ಲ ಎಂದು ಭಾಸವಾಯಿತು ಎಂದು ನದಾವ್‌ ಹೇಳಿಕೆ ನೀಡಿದ್ದರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಇಸ್ರೇಲ್ ರಾಯಭಾರಿ ನಾರ್ ಗಿಲೋನ್ (naor gilon ನದಾವ್ ತರಾಟೆಗೆ ತೆಗೆದುಕೊಂಡಿದ್ದಾರೆ.

    kashmir

    ಗೋವಾದಲ್ಲಿ ನಡೆದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸೋಮವಾರ (ನವೆಂಬರ್ 28) ಅದ್ದೂರಿಯಾಗಿ ನಡೆದಿತ್ತು. ಮುಕ್ತಾಯ ಸಮಾರಂಭದಲ್ಲಿ ತೀರ್ಪುಗಾರರ ಮುಖ್ಯಸ್ಥರಾಗಿದ್ದ ಇಸ್ರೇಲ್‌ನ ಖ್ಯಾತ ನಿರ್ದೇಶಕ ನದಾವ್ ಲಾಪಿಡ್ ದಿ ಕಾಶ್ಮಿರ್ ಫೈಲ್ಸ್ ಸಿನಿಮಾ ವಿರುದ್ಧ ಅಸಮಾಧಾನ ಹೊರಹಾಕಿದರು. `ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿ ತುಂಬಾ ಡಿಸ್ಟರ್ಬ್ ಆಗಿದ್ದೀವಿ. ಇದೊಂದು ಅಶ್ಲೀಲ ಪ್ರಚಾರದ ಸಿನಿಮಾ. ಇಂಥ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಸ್ಪರ್ಧಾ ವಿಭಾಗಕ್ಕೆ ಈ ಸಿನಿಮಾ ಸೂಕ್ತವಲ್ಲ ಎಂದು ಭಾಸವಾಯಿತು ಎಂದು ಹೇಳುವ ಮೂಲಕ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ಬಯೋಪಿಕ್‌ನಲ್ಲಿ ತಮಿಳು ನಟ ವಿಜಯ್ ಸೇತುಪತಿ

    ವಿವಾದದ ಬೆನ್ನಲ್ಲೇ ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ನಾರ್ ಗಿಲೋನ್, ನಿರ್ದೇಶಕ ನದಾವ್ ಅವರನ್ನು ತರಾಟೆ ತೆಗೆದುಕೊಂಡಿದ್ದಾರೆ. ಇಂಥ ಹೇಳಿಕೆಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ್ದಾರೆ.

    ನಾನು ನದಾವ್ ಹೇಳಿಕೆಗಳನ್ನು ಖಂಡಿಸುತ್ತೇನೆ. ಇದರಲ್ಲಿ ಯಾವುದೇ ಸಮರ್ಥನೆ ಇಲ್ಲ. ಇಲ್ಲಿ ಕಾಶ್ಮೀರ ಸಮಸ್ಯೆಯ ಸೂಕ್ಷ್ಮತೆಯನ್ನು ತೋರಿಸುತ್ತದೆ ಎಂದು ಹೇಳಿದರು. ಭಾರತೀಯ ಸಂಸ್ಕೃತಿಯಲ್ಲಿ ಅತಿಥಿಯನ್ನು ದೇವರಂತೆ ಕಾಣುತ್ತಾರೆ. ಜ್ಯೂರಿ ಮುಖ್ಯಸ್ಥರಾಗಿ ಎಂದು ಭಾರತ ನೀಡಿದ ಆಹ್ವಾನ ಮತ್ತು ನಂಬಿಕೆ, ಗೌರವ, ಆತ್ಮೀಯ ಆತಿಥ್ಯವನ್ನು ದುರುಪಯೋಗ ಪಡಿಸಿಕೊಂಡಿದ್ದೀರಿ ಎಂದು ನದಾವ್ ಅವರನ್ನು ತರಾಟೆ ತೆಗೆದುಕೊಂಡರು ಇಸ್ರೇಲ್ ರಾಯಭಾರಿ ನಾರ್ ಗಿಲೋನ್.

    Live Tv
    [brid partner=56869869 player=32851 video=960834 autoplay=true]