Tag: ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ

  • ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆಯಲ್ಲೂ ಕಮಿಷನ್ ದಂಧೆ

    ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆಯಲ್ಲೂ ಕಮಿಷನ್ ದಂಧೆ

    ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆಯಲ್ಲೂ ಕಮಿಷನ್ ದಂಧೆಯ ಆರೋಪ ಕೇಳಿ ಬಂದಿದೆ. 40% ಮೀರಿ ದಂಧೆ ನಡೆಯುತ್ತಿದೆ ಎಂದು ಕೆ. ಎಸ್ ಆ್ಯಂಡ್ ಡಿಎಲ್ ಎಂಪ್ಲಾಯಿಸ್ ಯೂನಿಯನ್ ಗಂಭೀರ ಆರೋಪ ಮಾಡಿದೆ.

    ಶ್ರೀಗಂಧ ಎಣ್ಣೆ ಖರೀದಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ನಿರ್ಮಾಣದಲ್ಲಿ ಗೋಲ್ ಮಾಲ್ ನಡೆದಿದ್ದು, ಬ್ಲಾಕ್ ಲಿಸ್ಟ್ ನಲ್ಲಿರುವ ಕಂಪನಿಗಳ ಜೊತೆ ಕೋಟಿ ಕೋಟಿ ವ್ಯವಹಾರ ಆಗಿದೆ. ಕೋಟಿಗಟ್ಟಲೇ ಅಕ್ರಮ, ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಕೆ. ಎಸ್ ಆ್ಯಂಡ್ ಡಿಎಲ್ ಎಂಪ್ಲಾಯಿಸ್ ಯೂನಿಯನ್ ದಾಖಲೆ ಬಿಡುಗಡೆ ಮಾಡಿದೆ.

    ಈ ಭ್ರಷ್ಟಾಚಾರಕ್ಕೆಲ್ಲ ಕೆ.ಎಸ್ ಆ್ಯಂಡ್ ಡಿಎಲ್ ಎಂಡಿ ಮಹೇಶ್ ಶಿರೂರ ಕಾರಣ. ಕಳೆದ ಎರಡು ವರ್ಷಗಳಿಂದ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ಶ್ರೀಗಂಧ ಎಣ್ಣೆ ಮಾರಾಟ ಮಾಡಿದ್ದಾರೆ. ಬ್ಲಾಕ್ ಲಿಸ್ಟ್‍ನಲ್ಲಿರುವ ಕಂಪನಿಗಳ ಜೊತೆಗೂ ಶಿರೂರ ವ್ಯವಹಾರ ಮಾಡಿದ್ದಾರೆಂದು ಆರೋಪಿಸಿದ್ದಾರೆ.

    ಪ್ರತಿಮೆ ನಿರ್ಮಾಣದಲ್ಲೂ ಶೇ.40 ಕ್ಕಿಂತ ಹೆಚ್ಚು ಕಮಿಷನ್ ಪಡೆಯುತ್ತಿದ್ದಾರೆ. 1 ಕೆಜಿ ಶ್ರೀಗಂಧಕ್ಕೆ 1 ಲಕ್ಷ ಹಣ ಹೆಚ್ಚುವರಿ ಕೊಟ್ಟು 2 ಸಾವಿರ ಕೆಜಿ ಶ್ರೀಗಂಧ ಎಣ್ಣೆ ಖರೀದಿ ಮಾಡಲಾಗುತ್ತಿದೆ. ಕಾರ್ಖಾನೆಯಲ್ಲಿ ನಡೆದ ಬೃಹತ್ ಹಗರಣವನ್ನು ಎಸಿಬಿಗೆ ವಹಿಸುವಂತೆ ಯೂನಿಯನ್ ಆಗ್ರಹಿಸಿದೆ.

    ಯಾವೇಲ್ಲಾ ಹಗರಣಗಳು ನಡೆದಿದೆ?
    * ಕೆಎಸ್ ಮತ್ತು ಡಿಎಲ್ ಶ್ರೀಗಂಧ ಎಣ್ಣೆಯನ್ನು ಆಸ್ಟ್ರೇಲಿಯಾದಿಂದ ಮಧ್ಯಮ ವ್ಯಕ್ತಿಗಳಿಂದ ಖರೀದಿಸಲಾಗುತ್ತಿದೆ.
    * ಆಸ್ಟ್ರೇಲಿಯಾದಿಂದ ಪ್ರತಿ ಕೆಜಿಗೆ 2 ಲಕ್ಷ 49 ಸಾವಿರ 899 ರೂ. ಗಳಿಗೆ ಅದಿತಿ ಇಂಟರ್ ನ್ಯಾಷನಲ್, ಮುಂಬೈ ಹಾಗೂ ಕರ್ನಾಟಕ, ಬೆಂಗಳೂರಿನ ಆರೋಮಾ ಖರೀದಿಗೆ 100% ಕಮಿಷನ್ ನಡೆದಿದೆ.
    * ಶಿರೂರ ಅಧಿಕಾರಕ್ಕೆ ಬಂದ ಬಳಿಕ, ಇವರೆಗೆ 2 ಸಾವಿರ ಕೆಜಿ ಶ್ರೀಗಂಧ ಎಣ್ಣೆ ಖರೀದಿಯಾಗಿದೆ.
    * ಕೃಷ್ಣರಾಜೇಂದ್ರ ಒಡೆಯರ್‍ರ ಪ್ರತಿಮೆಯನ್ನ 12 ಲಕ್ಷ ಹಣದಲ್ಲಿ ನಿರ್ಮಾಣಕ್ಕೆ ಅಸ್ತು. ಆದರೆ 13 ಲಕ್ಷ ಕಿಕ್ ಬ್ಯಾಕ್ ಪಡೆಯಲಾಗಿದೆ.
    * ಕೆಎಸ್ ಮತ್ತು ಡಿಎಲ್‍ನಿಂದ ಪ್ರತಿಮೆ ನಿರ್ಮಾಣ ಮಾಡಲು ಟೆಂಡರ್ ಒಪ್ಪಿಕೊಂಡಿತ್ತು.
    * ಬ್ಲಾಕ್ ಲಿಸ್ಟ್‍ನಲ್ಲಿರುವ ಬೆಂಗಳೂರಿನ ಆರೋಮಾ, ಕರ್ನಾಟಕ ಕೆಮಿಕಲ್ ಇಂಡಸ್ಟ್ರಿ ಕಂಪನಿಯಿಂದಲೇ ಶ್ರೀಗಂಧದ ಎಣ್ಣೆಯನ್ನು ಅಕ್ರಮವಾಗಿ ಕಮಿಷನ್ ಮೂಲಕ ಖರೀದಿ ಮಾಡಲಾಗಿದೆ.
    * ಕಾರ್ಖಾನೆಗೆ ಬೇಕಿರುವ ನ್ಯೂಡಲ್ಸ್, ಶ್ರೀಗಂಧ ಎಣ್ಣೆಯಲ್ಲಿ 250 ಕೋಟಿ ಅವ್ಯವಹಾರವಾಗಿದೆ.
    * ಅನಿವಾರ್ಯ ಇಲ್ಲದಿದ್ದರೂ ಹೊರ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕ.

    ಬೆಂಗಳೂರು, 

  • ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯಲ್ಲಿ ಬಿರುಕು – ತಜ್ಞರ ಪರಿಶೀಲನೆ

    ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯಲ್ಲಿ ಬಿರುಕು – ತಜ್ಞರ ಪರಿಶೀಲನೆ

    ಮೈಸೂರು: ನಗರದ ಕೆ.ಆರ್ ವೃತ್ತದಲ್ಲಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ ಪ್ರತಿಮೆ ಸ್ಥಳಕ್ಕೆ ಇತಿಹಾಸ ತಜ್ಞ ಡಾ. ರಂಗರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಕಲ್ಲಿನಲ್ಲಿರುವ ದೋಷದಿಂದ ಸಣ್ಣ ಪ್ರಮಾಣದ ಬಿರುಕು ಪ್ರತಿಮೆಯಲ್ಲಿ ಕಂಡಿದೆ. ನಗರ ಪ್ರಮುಖ ವೃತ್ತ ಇದಾಗಿರೋದ್ರಿಂದ ಇಲ್ಲಿ ವಾಹನ ದಟ್ಟಣೆ ಹೆಚ್ಚು. ಇದರಿಂದಾಗಿ ಕಾರ್ಬನ್ ಡೈಆಕ್ಸೈಡ್, ಮಾನಾಕ್ಸೈಡ್ ಇದೇಲ್ಲಾ ಸೇರಿ ಶಿಲ್ಪ ಹಾಳಾಗ್ತಿದೆ ಎಂದು ಪುರಾತತ್ವ ತಜ್ಞ ಪ್ರೋ. ರಂಗರಾಜು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯಲ್ಲಿ ಬಿರುಕು – ಪಾಲಿಕೆ, ಜಿಲ್ಲಾಡಳಿತ ಮೇಲೆ ನಿರ್ಲಕ್ಷ್ಯದ ಆರೋಪ

    ಪ್ರತಿಮೆಯಲ್ಲಿ ಕತ್ತಿನ ಭಾಗಕ್ಕೆ ಬಳಸಿರುವ ಶಿಲೆ ಉತ್ತಮ ಗುಣಮಟ್ಟದ್ದಲ್ಲ. ಹೀಗಾಗಿ ಪದೇ ಪದೇ ಅದು ಹಾಳಾಗುತ್ತಿದೆ. ಸದ್ಯ ಪ್ರತಿಮೆಗೆ ಸಣ್ಣ ಪ್ರಮಾಣದ ಬಿರುಕು ಇರುವುದರಿಂದ ಹೆಚ್ಚಿನ ಆತಂಕ ಇಲ್ಲ ಎಂದರು. ಬೇಸಿಗೆಯಲ್ಲಿ ಇದರ ಬಗ್ಗೆ ಹೆಚ್ಚು ಆತಂಕ ಇಲ್ಲ ಆದರೆ ಮಳೆಗಾಲಕ್ಕೆ ಹೆಚ್ಚು ತೊಂದರೆ ಆಗುತ್ತೆ. ಹೀಗಾಗಿ ಮಳೆಗಾಲದ ಹೊತ್ತಿಗೆ ಪ್ರತಿಮೆ ಸಂರಕ್ಷಣೆ ಮಾಡಿದರೆ ಒಳಿತು ಎಂದು ಪುರಾತತ್ವ ತಜ್ಞರು ಹೇಳಿದರು. ಇದನ್ನೂ ಓದಿ: ಚಾಮುಂಡಿ ಬೆಟ್ಟದ ನಂದಿ ವಿಗ್ರಹದಲ್ಲಿ ಬಿರುಕು!

    ಈ ಹಿಂದೆ ಪ್ರತಿಮೆ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದರು. ಈ ಪ್ರತಿಮೆಯನ್ನು ಅಮೃತ ಶಿಲೆಯಲ್ಲಿ ನಿರ್ಮಿಸಲಾಗಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ನೆನಪಿನಾರ್ಥವಾಗಿ ಸರ್ ಎಂ. ವಿಶ್ವೇಶ್ವರಯ್ಯನವರು ಉದ್ಘಾಟಿಸಿದ್ದರು. ಆದರೆ ಈಗ ಪ್ರತಿಮೆಯ ಮುಖ ಹಾಗೂ ಕುತ್ತಿಗೆ ಭಾಗದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಈ ಬಗ್ಗೆ ಪಾಲಿಕೆ ಹಾಗೂ ಜಿಲ್ಲಾಡಳಿತ ನಿರ್ಲಕ್ಷ್ಯವಹಿಸಿವೆ. ಪ್ರತಿಮೆ ಸರಿಪಡಿಸುವಂತೆ ಅಧಿಕಾರಿಗಳ ಬಳಿ ಮನವಿ ಮಾಡಿದರೂ ಪ್ರಯೋಜನ ಆಗಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದರು.

  • ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯಲ್ಲಿ ಬಿರುಕು – ಪಾಲಿಕೆ, ಜಿಲ್ಲಾಡಳಿತ ಮೇಲೆ ನಿರ್ಲಕ್ಷ್ಯದ ಆರೋಪ

    ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯಲ್ಲಿ ಬಿರುಕು – ಪಾಲಿಕೆ, ಜಿಲ್ಲಾಡಳಿತ ಮೇಲೆ ನಿರ್ಲಕ್ಷ್ಯದ ಆರೋಪ

    ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಇರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಬಗ್ಗೆ ಮೈಸೂರು ಪಾಲಿಕೆ ಹಾಗೂ ಜಿಲ್ಲಾಡಳಿತಕ್ಕೆ ಸಾಕಷ್ಟು ದೂರು ನೀಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

    ನಗರದ ಹೃದಯ ಭಾಗವಾದ ಕೆ.ಆರ್ ವೃತ್ತದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಇದೆ. ಅಮೃತ ಶಿಲೆಯಲ್ಲಿ ನಿರ್ಮಾಣವಾಗಿರುವ ಈ ಪ್ರತಿಮೆಯನ್ನು ನಾಲ್ವಡಿ ಕೃಷ್ಣರಾಜ ಒಡೆಯರ್ ನೆನಪಿನಾರ್ಥವಾಗಿ ಸರ್ ಎಂ. ವಿಶ್ವೇಶ್ವರಯ್ಯನವರು ಉದ್ಘಾಟಿಸಿದ್ದರು.

    ಆದರೆ ಈಗ ಪ್ರತಿಮೆಯ ಮುಖ ಹಾಗೂ ಕುತ್ತಿಗೆ ಭಾಗದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಈ ಬಗ್ಗೆ ಪಾಲಿಕೆ ಹಾಗೂ ಜಿಲ್ಲಾಡಳಿತ ನಿರ್ಲಕ್ಷ್ಯವಹಿಸಿವೆ. ಪ್ರತಿಮೆ ಸರಿಪಡಿಸುವಂತೆ ಅಧಿಕಾರಿಗಳ ಬಳಿ ಮನವಿ ಮಾಡಿದರೂ ಪ್ರಯೋಜನ ಆಗಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇತ್ತ ಚಾಮುಂಡಿ ಬೆಟ್ಟದಲ್ಲಿನ ನಂದಿ ವಿಗ್ರಹದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಕೆಲವರು ಆತಂಕ ಮತ್ತು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪುರಾತತ್ವ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ನಂದಿ ವಿಗ್ರಹ ಪರಿಶೀಲನೆ ನಡೆಸಿದೆ.

    ಸುಮಾರು 400 ವರ್ಷಗಳ ಹಳೆಯದಾದ ನಂದಿ ವಿಗ್ರಹ ಇದ್ದಾಗಿದ್ದು, 1659-73ರಲ್ಲಿ ನಿರ್ಮಾಣಗೊಂಡಿದೆ ಎನ್ನುವ ಉಲ್ಲೇಖವಿದೆ. ಚಾಮುಂಡಿಬೆಟ್ಟದ ಪ್ರಮುಖ ಕೇಂದ್ರ ಬಿಂದು. ನಂದಿ ವಿಗ್ರಹದ ಕಾಲು, ಕುತ್ತಿಗೆ ಹಾಗೂ ಮುಖದ ಕೆಲವೆಡೆ ಬಿರುಕು ಕಾಣಿಸಿಕೊಂಡಿದೆ ಎಂದು ಭಕ್ತರು ಜಿಲ್ಲಾಡಳಿತಕ್ಕೆ ತಿಳಿಸಿದ್ದರು.

    ಕಪ್ಪಾಗಿದ್ದ ನಂದಿ ವಿಗ್ರಹವನ್ನ ಪಾಲಿಶ್ ಮಾಡಿ ಹೊಸ ರೂಪ ಕೊಡಲಾಗಿತ್ತು. ಆ ಸಂದರ್ಭದಲ್ಲಿ ಬಿರುಕು ಕಾಣಿಸಿಕೊಂಡಿದ್ದು ಪತ್ತೆಯಾಗಿತ್ತು. ಹೀಗಾಗಿ ಜಿಲ್ಲಾಡಳಿತ ಪಾರಂಪರಿಕ ತಜ್ಞರ ಸಮಿತಿಯೊಂದನ್ನ ರಚಿಸಿ ವಿಗ್ರಹ ಪರಿಶೀಲನೆಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಶಿಲ್ಪಿ ತಂಡ ವಿಗ್ರಹ ಪರಿಶೀಲನೆ ನಡೆಸಿದೆ.

    ಕೆಲವು ಕಡೆ ಬಿರುಕಿನ ರೀತಿ ಮೇಲ್ನೋಟಕ್ಕೆ ಕಾಣುತ್ತಿರೋದು ಬಿರುಕಲ್ಲ ಅದು ಕಲ್ಲಿನ ನೈಜತೆ ಎಂದು ಸಮಿತಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಂಪೂರ್ಣವಾಗಿ ಪರಿಶೀಲನೆ ನಡೆಸಿ ಸಮಿತಿಯು ವರದಿ ನೀಡಲಿದ್ದು, ವರದಿಯಲ್ಲಿ ಬಿರುಕು ಬಿಟ್ಟಿದೆ ಎಂದು ತಜ್ಞರು ಸ್ಪಷ್ಟಪಡಿಸಿದರೆ ನಂದಿ ವಿಗ್ರಹದ ಬಿರುಕು ಮುಚ್ಚಲು ಕೂಡ ಜಿಲ್ಲಾಡಳಿತ ಮುಂದಾಗಲಿದೆ.