Tag: ನಾಸಾ

  • ನಭಕ್ಕೆ ಚಿಮ್ಮಿದ ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ – ಬ್ರಹ್ಮಾಂಡ ರಹಸ್ಯವನ್ನು ಅರಿಯುವ ಕಾಲ ಸನಿಹ

    ನಭಕ್ಕೆ ಚಿಮ್ಮಿದ ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ – ಬ್ರಹ್ಮಾಂಡ ರಹಸ್ಯವನ್ನು ಅರಿಯುವ ಕಾಲ ಸನಿಹ

    ಫ್ರೆಂಚ್ ಗಯಾನ: ಖಗೋಳ ಲೋಕದಲ್ಲಿ ಇವತ್ತಿಂದ ಹೊಸ ಅಧ್ಯಾಯ ಶುರುವಾಗಿದೆ. ಬ್ರಹ್ಮಾಂಡದ ರಹಸ್ಯವನ್ನು ಅರಿಯುವ ಟೈಮ್ ಮಷಿನ್, ವಿಶ್ವಕನ್ನಡಿ ಎಂದೇ ಹೇಳಲಾಗುತ್ತಿರುವ ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ಹೊತ್ತ ಏರಿಯನ್-5 ರಾಕೆಟ್ ಅಮೆರಿಕಾದ ಫ್ರೆಂಚ್ ಗಯಾನದಿಂದ ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ.

    ಭಾರತೀಯ ಕಾಲಮಾನ ಸಂಜೆ 5:30ಕ್ಕೆ ಸರಿಯಾಗಿ ಏರಿಯಾನ್ ರಾಕೆಟ್ ಉಡಾವಣೆಗೊಂಡಿದೆ. ನಾಸಾ, ಯುರೋಪ್, ಕೆನಡಾ ಬಾಹ್ಯಾಕಾಶ ಸಂಸ್ಥೆಗಳು ಆರಂಭಿಕ ಖುಷಿಯಲ್ಲಿ ತೇಲಾಡಿದ್ದು, ಈ ಮಹಾ ಪಯಣ ಸರಿಸುಮಾರು ಒಂದು ತಿಂಗಳು ಸಾಗಲಿದ್ದು, ಭೂಮಿಯಿಂದ 15 ಲಕ್ಷ ಕಿಲೋಮೀಟರ್ ದೂರದಲ್ಲಿ ಜೇಮ್ಸ್ ಟೆಲಿಸ್ಕೋಪ್‍ನ್ನು ಫಿಕ್ಸ್ ಮಾಡಲಾಗುತ್ತದೆ. ಅಲ್ಲಿಂದಲೇ ಟೈಮ್ ಮಷಿನ್ ಮಾದರಿಯಲ್ಲಿ ಸಾವಿರಾರು ವರ್ಷಗಳ ಹಿಂದಕ್ಕೆ, ಮುಂದಕ್ಕೆ ಹೋಗಿ ಸೃಷ್ಟಿ ರಹಸ್ಯವನ್ನು ಅರಿಯುವ ಕೆಲಸವನ್ನು ಜೇಮ್ಸ್ ಸ್ಪೇಸ್ ಟೆಲಿಸ್ಕೋಪ್ ಮಾಡಲಿದೆ. ಇದನ್ನೂ ಓದಿ: ಬ್ರಹ್ಮಾಂಡದ ಸೃಷ್ಟಿ ರಹಸ್ಯ ಅರಿಯಲು ಟೈಮ್ ಮಷಿನ್ – ಜೇಮ್ಸ್‌ ವೆಬ್‌ ಸ್ಪೇಸ್‌ ಟೆಲಿಸ್ಕೋಪ್‌ ವಿಶೇಷತೆ ಏನು?

    ಜೇಮ್ಸ್ ಸ್ಪೇಸ್ ಟೆಲಿಸ್ಕೋಪ್ ಉಡಾವಣೆ ಆದ ನಂತರ ನಿಗದಿತ ಸ್ಥಳ ಸೇರಲು ಒಂದು ತಿಂಗಳು ಹಿಡಿಯುತ್ತದೆ. ಇದನ್ನು ಭೂಮಿಯಿಂದ 15 ಲಕ್ಷ ಕಿಲೋಮೀಟರ್ ದೂರದಲ್ಲಿರುವ ಲಾಗಾಂಗ್ರೆ ಪಾಯಿಂಟ್ ಎಲ್2 ಬಳಿ ಸ್ಥಿರ ಮಾಡಲಾಗುತ್ತದೆ. ಇಲ್ಲಿಂದ ವಿಶ್ವವನ್ನು ತುಂಬಾ ಸ್ಪಷ್ಟವಾಗಿ ಗಮನಿಸಲು ಅವಕಾಶ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ಮಿಗ್-21 ವಿಮಾನ ಪತನ – ಪೈಲಟ್‍ ಹುತಾತ್ಮ

    ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ಮೂಲಕ ಮುಂದಿನ ನಾಲ್ಕು ಶತಮಾನಗಳಲ್ಲಿ ಏನೆಲ್ಲಾ ನಡೆಯುತ್ತದೆ ಎಂಬುದನ್ನು ಕೇವಲ 10 ವರ್ಷಗಳಲ್ಲಿ ತಿಳಿದುಕೊಳ್ಳಬಹುದಾಗಿದೆ. ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್‍ನ್ನು ಅಮೆರಿಕದ ನಾಸಾ, ಯುರೋಪ್, ಕೆನಡಾ ಬಾಹ್ಯಾಕಾಶ ಸಂಸ್ಥೆಗಳು ಜಂಟಿಯಾಗಿ ರೂಪಿಸಿದ್ದು, ಇದು ಹಬಲ್ ಟೆಲಿಸ್ಕೋಪ್‍ಗಿಂತಲೂ ಶಕ್ತಿಶಾಲಿಯಾಗಿದೆ. ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್‍ಗೆ ಇನ್‍ಫ್ರಾರೆಡ್ ವಿಷನ್ ಮೂಲಕ 1,350 ವರ್ಷಗಳ ಹಿಂದಕ್ಕೆ ಹೋಗಿ ಅಲ್ಲೇನು ನಡೆದಿದೆ ಎಂಬುದನ್ನು ತಿಳಿಸುವ ಅದ್ಭುತ ಸಾಮರ್ಥ್ಯ ಇರುವುದು ವಿಶೇಷ.

    ವಿಶ್ವಸೃಷ್ಟಿಯ ಆರಂಭಿಕ ದಿನಗಳಲ್ಲಿ ನಕ್ಷತ್ರಗಳು, ನಕ್ಷತ್ರ ಮಂಡಲಗಳ ಹುಟ್ಟು. ಅವುಗಳ ಅಂತ್ಯ ಹೇಗೆ ಆಯಿತು ಎಂಬುದನ್ನು ತಿಳಿದುಕೊಳ್ಳಲು ಇದು ಸಹಾಯಕವಾಗಲಿದೆ. ಇದನ್ನು ಕೆಲವರು ನೆಕ್ಸ್ಟ್ ಜನೆರೇಷನ್ ಸ್ಪೇಸ್ ಟೆಲಿಸ್ಕೋಪ್ ಎಂದು ಕರೆಯುತ್ತಾರೆ. 2007ರಲ್ಲೇ ಇದನ್ನು ಪ್ರಯೋಗಿಸಲು ಸಿದ್ಧತೆ ನಡೆದಿತ್ತು. ಆದ್ರೆ ಇದು ಸಾಧ್ಯನಾ ಎಂದು ತುಂಬಾ ಮಂದಿ ಅನುಮಾನಿಸಿದ್ದರು. ಈಗ 75 ಸಾವಿರ ಕೋಟಿ(10 ಶತಕೋಟಿ ಡಾಲರ್) ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಇದನ್ನೂ ಓದಿ: ಪ್ರಳಯ್ ಕ್ಷಿಪಣಿಯ ಯಶಸ್ವಿ ಪರೀಕ್ಷೆ – ದೇಶದ ರಕ್ಷಣಾ ಕ್ಷೇತ್ರಕ್ಕೆ ಆನೆ ಬಲ

    ವಿಶೇಷತೆ ಏನು?
    ಹಬಲ್ ಟೆಲಿಸ್ಕೋಪ್‍ಗಿಂತ ಜೇಮ್ಸ್ ಟೆಲಿಸ್ಕೋಪ್ ವಿಸ್ತೀರ್ಣದಲ್ಲಿ ಎರಡೂವರೆ ಪಟ್ಟು ದೊಡ್ಡದು. ಕಾಂತಿಯನ್ನು ಗ್ರಹಿಸಲು ಅಳವಡಿಸಲಾದ ಪ್ರಧಾನ ಕನ್ನಡಿಯ ಅಗಲ 6.5 ಮೀಟರ್ ಇದೆ. ಈ ಪ್ರಧಾನ ಕನ್ನಡಿಯನ್ನು 18 ಷಟ್‍ಭುಜಾಕೃತಿಗಳಾಗಿ ವಿಂಗಡಿಸಿ ನಿರ್ಮಿಸಲಾಗಿದೆ.

    ಉಡಾವಣೆ ವೇಳೆ ಈ ಕನ್ನಡಿ ಮಡಚಿಟ್ಟ ಸ್ಥಿತಿಯಲ್ಲಿ ಇರುತ್ತದೆ. ಗಮ್ಯ ಸೇರಿದ ನಂತರ ತೆರೆದುಕೊಳ್ಳಲಿದೆ. ಸೂರ್ಯನ ಕಡೆ ಇರುವ ಟೆಲಿಸ್ಕೋಪ್ ಭಾಗ 22 ಮೀಟರ್ ಉದ್ದವಿದ್ದು ಇದು 85 ಡಿಗ್ರಿವರೆಗೂ ಬಿಸಿಯೇರಬಹುದು. ಟೆಲಿಸ್ಕೋಪ್‍ಗೆ ಆಗುವ ಸಂಭಾವ್ಯ ಹಾನಿ ತಡೆಯಲು ಏಳು ಸುತ್ತಿನ ರಕ್ಷಣಾ ಕವಚ ನಿರ್ಮಾಣ ಮಾಡಲಾಗಿದೆ.

    ಸೂರ್ಯನಿಗೆ ವಿರುದ್ಧವಿರುವ ಭಾಗ -233 ಡಿಗ್ರಿ ಸೆಂಟಿಗ್ರೇಡ್ ಇದ್ದು ಅತೀಶೀತಲವಾಗಿರುತ್ತದೆ. 40 ಕಿಲೋಮೀಟರ್ ದೂರದಲ್ಲಿರುವ ಒಂದು ನಾಣ್ಯವನ್ನು ಸ್ಪಷ್ಟವಾಗಿ ತೋರಿಸುವ ಸಾಮರ್ಥ್ಯ ಈ ಉಪಗ್ರಹಕ್ಕಿದೆ.

  • ಬ್ರಹ್ಮಾಂಡದ ಸೃಷ್ಟಿ ರಹಸ್ಯ ಅರಿಯಲು ಟೈಮ್ ಮಷಿನ್ – ಜೇಮ್ಸ್‌ ವೆಬ್‌ ಸ್ಪೇಸ್‌ ಟೆಲಿಸ್ಕೋಪ್‌ ವಿಶೇಷತೆ ಏನು?

    ಬ್ರಹ್ಮಾಂಡದ ಸೃಷ್ಟಿ ರಹಸ್ಯ ಅರಿಯಲು ಟೈಮ್ ಮಷಿನ್ – ಜೇಮ್ಸ್‌ ವೆಬ್‌ ಸ್ಪೇಸ್‌ ಟೆಲಿಸ್ಕೋಪ್‌ ವಿಶೇಷತೆ ಏನು?

    ಫ್ರೆಂಚ್‌ ಗಯಾನ: ಖಗೋಳ ಲೋಕದಲ್ಲಿ ಮಹಾನ್ ಕ್ರಾಂತಿಯೇ ನಡೆಯುತ್ತಿದೆ. ಅಸಾಧ್ಯ ಎಂದು ಭಾವಿಸಿದ್ದನ್ನು ಸಾಧ್ಯ ಮಾಡಲು ವಿಜ್ಞಾನಿಗಳು ಮುಂದಾಗಿದ್ದಾರೆ. ಕಳೆದ ಮೂರು ದಶಕಗಳಿಂದ ನಡೆಯುತ್ತಿದ್ದ ಪ್ರಯತ್ನ ಶೀಘ್ರವೇ ಸಾಕಾರಗೊಳ್ಳಲಿದೆ.

    ಹೌದು. ಬ್ರಹ್ಮಾಂಡ ಸೃಷ್ಟಿಯ ರಹಸ್ಯವನ್ನು ಬೇಧಿಸಲು ಟೈಮ್ ಮಷಿನ್ ಮಾದರಿಯ ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್ ಉಡಾವಣೆಗೆ ಫ್ರೆಂಚ್ ಗಯಾನದಲ್ಲಿ ಕೌಂಟ್‍ಡೌನ್ ಶುರುವಾಗಿದೆ. ಇದು ಯಶಸ್ವಿಯಾದಲ್ಲಿ ಮುಂದಿನ ನಾಲ್ಕು ಶತಮಾನಗಳಲ್ಲಿ ಏನೆಲ್ಲಾ ನಡೆಯುತ್ತದೆ ಎಂಬುದನ್ನು ಕೇವಲ 10 ವರ್ಷಗಳಲ್ಲಿ ತಿಳಿದುಕೊಳ್ಳಬಹುದಾಗಿದೆ.

    ಅಮೆರಿಕದ ನಾಸಾ, ಯುರೋಪ್, ಕೆನಡಾ ಬಾಹ್ಯಾಕಾಶ ಸಂಸ್ಥೆಗಳು ಜಂಟಿಯಾಗಿ ರೂಪಿಸಿದ್ದು, ಇದು ಹಬಲ್ ಟೆಲಿಸ್ಕೋಪ್‍ಗಿಂತಲೂ ಶಕ್ತಿಶಾಲಿಯಾಗಿದೆ. ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್‍ಗೆ ಇನ್‍ಫ್ರಾರೆಡ್ ವಿಷನ್ ಮೂಲಕ 1350 ವರ್ಷಗಳ ಹಿಂದಕ್ಕೆ ಹೋಗಿ ಅಲ್ಲೇನು ನಡೆದಿದೆ ಎಂಬುದನ್ನು ತಿಳಿಸುವ ಅದ್ಭುತ ಸಾಮರ್ಥ್ಯ ಇರುವುದು ವಿಶೇಷ.

    ವಿಶ್ವಸೃಷ್ಟಿಯ ಆರಂಭಿಕ ದಿನಗಳಲ್ಲಿ ನಕ್ಷತ್ರಗಳು, ನಕ್ಷತ್ರ ಮಂಡಲಗಳ ಹುಟ್ಟು. ಅವುಗಳ ಅಂತ್ಯ ಹೇಗೆ ಆಯಿತು ಎಂಬುದನ್ನು ತಿಳಿದುಕೊಳ್ಳಲು ಇದು ಸಹಾಯಕವಾಗಲಿದೆ. ಇದನ್ನು ಕೆಲವರು ನೆಕ್ಸ್ಟ್ ಜನೆರೇಷನ್ ಸ್ಪೇಸ್ ಟೆಲಿಸ್ಕೋಪ್ ಎಂದು ಕರೆಯುತ್ತಾರೆ. 2007ರಲ್ಲೇ ಇದನ್ನು ಪ್ರಯೋಗಿಸಲು ಸಿದ್ಧತೆ ನಡೆದಿತ್ತು. ಆದ್ರೆ ಇದು ಸಾಧ್ಯನಾ ಎಂದು ತುಂಬಾ ಮಂದಿ ಅನುಮಾನಿಸಿದ್ದರು. ಇದರ ನಿರ್ಮಾಣಕ್ಕೆ ಆರಂಭದಲ್ಲಿ 50 ಕೋಟಿ ಡಾಲರ್ ಆಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಈಗ 75 ಸಾವಿರ ಕೋಟಿ(10 ಶತಕೋಟಿ ಡಾಲರ್) ವೆಚ್ಚದಲ್ಲಿ ನಿರ್ಮಾಣವಾಗಿದೆ. ಇದನ್ನೂ ಓದಿ: ಪ್ರಳಯ್ ಕ್ಷಿಪಣಿಯ ಯಶಸ್ವಿ ಪರೀಕ್ಷೆ – ದೇಶದ ರಕ್ಷಣಾ ಕ್ಷೇತ್ರಕ್ಕೆ ಆನೆ ಬಲ

    ಉಡಾವಣೆ ಆದ ನಂತರ ನಿಗದಿತ ಸ್ಥಳ ಸೇರಲು ಒಂದು ತಿಂಗಳು ಹಿಡಿಯುತ್ತದೆ. ಇದನ್ನು ಭೂಮಿಯಿಂದ 15 ಲಕ್ಷ ಕಿಲೋಮೀಟರ್ ದೂರದಲ್ಲಿರುವ ಲಾಗಾಂಗ್ರೆ ಪಾಯಿಂಟ್ ಎಲ್2 ಬಳಿ ಸ್ಥಿರ ಮಾಡಲಾಗುತ್ತದೆ. ಇಲ್ಲಿಂದ ವಿಶ್ವವನ್ನು ತುಂಬಾ ಸ್ಪಷ್ಟವಾಗಿ ಗಮನಿಸಲು ಅವಕಾಶ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ.

    ಏರಿಯಾನ್ ರಾಕೆಟ್‌ ಮೂಲಕ ಶನಿವಾರ ಟೆಲಿಸ್ಕೋಪ್‌ ಉಡಾವಣೆ ನಡೆಯಬೇಕಿತ್ತು. ಆದರೆ ಈಗ ಬಂದಿರುವ ಮಾಹಿತಿ ಪ್ರಕಾರ ಭಾರೀ ಗಾಳಿಯ ಕಾರಣ ಈ ಟೆಲಿಸ್ಕೋಪ್ ಉಡಾವಣೆಯನ್ನು ಬುಧವಾರಕ್ಕೆ ಮುಂದೂಡಲಾಗಿದೆ. ಇದನ್ನೂ ಓದಿ: ರಷ್ಯಾದ ಮಹಿಳಾ ಗಗನಯಾತ್ರಿ ಸ್ಪೇಸ್ ಎಕ್ಸ್ ಮೂಲಕ ಬಾಹ್ಯಾಕಾಶಕ್ಕೆ

    ವಿಶೇಷತೆ ಏನು?
    ಹಬಲ್ ಟೆಲಿಸ್ಕೋಪ್‍ಗಿಂತ ಜೇಮ್ಸ್‌ ಟೆಲಿಸ್ಕೋಪ್‌ ವಿಸ್ತೀರ್ಣದಲ್ಲಿ ಎರಡೂವರೆ ಪಟ್ಟು ದೊಡ್ಡದು. ಕಾಂತಿಯನ್ನು ಗ್ರಹಿಸಲು ಅಳವಡಿಸಲಾದ ಪ್ರಧಾನ ಕನ್ನಡಿಯ ಅಗಲ 6.5 ಮೀಟರ್ ಇದೆ. ಈ ಪ್ರಧಾನ ಕನ್ನಡಿಯನ್ನು 18 ಷಟ್‍ಭುಜಾಕೃತಿಗಳಾಗಿ ವಿಂಗಡಿಸಿ ನಿರ್ಮಿಸಲಾಗಿದೆ.

    ಉಡಾವಣೆ ವೇಳೆ ಈ ಕನ್ನಡಿ ಮಡಚಿಟ್ಟ ಸ್ಥಿತಿಯಲ್ಲಿ ಇರುತ್ತದೆ. ಗಮ್ಯ ಸೇರಿದ ನಂತರ ತೆರೆದುಕೊಳ್ಳಲಿದೆ. ಸೂರ್ಯನ ಕಡೆ ಇರುವ ಟೆಲಿಸ್ಕೋಪ್ ಭಾಗ 22 ಮೀಟರ್ ಉದ್ದವಿದ್ದು ಇದು 85 ಡಿಗ್ರಿವರೆಗೂ ಬಿಸಿಯೇರಬಹುದು. ಟೆಲಿಸ್ಕೋಪ್‍ಗೆ ಆಗುವ ಸಂಭಾವ್ಯ ಹಾನಿ ತಡೆಯಲು ಏಳು ಸುತ್ತಿನ ರಕ್ಷಣಾ ಕವಚ ನಿರ್ಮಾಣ ಮಾಡಲಾಗಿದೆ.

    ಸೂರ್ಯನಿಗೆ ವಿರುದ್ಧವಿರುವ ಭಾಗ -233 ಡಿಗ್ರಿ ಸೆಂಟಿಗ್ರೇಡ್ ಇದ್ದು ಅತೀಶೀತಲವಾಗಿರುತ್ತದೆ. 40 ಕಿಲೋಮೀಟರ್ ದೂರದಲ್ಲಿರುವ ಒಂದು ನಾಣ್ಯವನ್ನು ಸ್ಪಷ್ಟವಾಗಿ ತೋರಿಸುವ ಸಾಮರ್ಥ್ಯ ಈ ಉಪಗ್ರಹಕ್ಕಿದೆ.

  • ರಷ್ಯಾದ ಮಹಿಳಾ ಗಗನಯಾತ್ರಿ ಸ್ಪೇಸ್ ಎಕ್ಸ್ ಮೂಲಕ ಬಾಹ್ಯಾಕಾಶಕ್ಕೆ

    ವಾಷಿಂಗ್ಟನ್: ಅಮೇರಿಕಾ ಹಾಗೂ ರಷ್ಯಾದ ಒಳ ಜಗಳ ನಿನ್ನೆ ಮೊನ್ನೆಯದಲ್ಲ. ಇತಿಹಾಸದ ಪುಟದಲ್ಲೂ ಬಲಿಷ್ಟ ರಾಷ್ಟ್ರಗಳ ಶೀತಲ ಸಮರದಬಗ್ಗೆ ಕೇಳುತ್ತಲೇ ಬಂದಿದ್ದೇವೆ. ಇದೀಗ ಅಮೇರಿಕಾದ ಸ್ಪೇಸ್ ಎಕ್ಸ್ ಕಂಪನಿ ರಷ್ಯಾದ ಮಹಿಳಾ ಗಗನಯಾತ್ರಿಯನ್ನು ಬಾಹ್ಯಾಕಾಶಕ್ಕೆ ಕಳಿಸುವ ಯೋಜನೆ ಮಾಡಿ ಆಶ್ಚರ್ಯ ಮೂಡಿಸಿದೆ

    ನಾಸಾ ಹಾಗೂ ರಷ್ಯಾದ ಸ್ಪೇಸ್ ಏಜೆನ್ಸಿ 2022ರ ಕ್ರ್ಯೂ ಡ್ರ್ಯಾಗನ್ ಒಪ್ಪಂದವನ್ನು ಮಾಡಿಕೊಂಡಿದ್ದು, ಇದರಲ್ಲಿ ಗಗನಯಾತ್ರಿಯನ್ನು ಉಡಾಯಿಸುವ ಯೋಜನೆ ನಡೆದಿದೆ. ಒಪ್ಪಂದದ ಪ್ರಕಾರ ಬಾಹ್ಯಾಕಾಶ ನೌಕೆಯಲ್ಲಿ ರಷ್ಯಾದ ಮೊದಲ ಮಹಿಳಾ ಗಗನಯಾತ್ರಿ ಅನ್ನಾ ಕಿಕಿನಾ ಪ್ರಯಾಣಿಸಲಿದ್ದಾರೆ.

    2022ರಲ್ಲಿ ಸ್ಪೇಸ್ ಎಕ್ಸ್ ಕ್ರ್ಯೂ-5 ಮಿಷನ್‌ನಲ್ಲಿ ಗಗನಯಾತ್ರಿಯನ್ನು ಉಡಾವಣೆ ಮಾಡುವ ವಿಷಯವನ್ನು ಸ್ಪೇಸ್ ಸ್ಟೇಶನ್ ಪ್ರೋಗ್ರಾಮ್ ಮ್ಯಾನೇಜರ್ ಜೋಯಲ್ ಮೊಂಟಲ್ಬಾನೋ ತಿಳಿಸಿದರು. 2025ರ ಹೊತ್ತಿಗೆ ಬಾಹ್ಯಾಕಾಶ ನಿರ್ವಹಣೆಯಲ್ಲಿ ರಷ್ಯಾ ಹಾಗೂ ಅಮೆರಿಕ ಜಂಟಿಯಾಗಿ ಕಾರ್ಯ ನಿರ್ವಹಿಸುವುದರ ಬಗ್ಗೆ ಸುಳಿವನ್ನೂ ನೀಡಿದ್ದಾರೆ. ಇದನ್ನೂ ಓದಿ: ಆಕಾಶದಲ್ಲಿ ಅಚ್ಚರಿ – ಏನಿದು ಸ್ಟಾರ್‌ಲಿಂಕ್‌ ಉಪಗ್ರಹಗಳು? ದರ ಎಷ್ಟು? ನೆಟ್‌ ಹೇಗೆ ಸಿಗುತ್ತೆ?

    ವಾಷಿಂಗ್ಟನ್ ಹಾಗೂ ಮಾಸ್ಕೋ ನಡುವಿನ ಒತ್ತಡದ ಸಂಬಂಧ ಬಾಹ್ಯಾಕಾಶಕ್ಕೆ ವಿಸ್ತರಿಸಿದ್ದರೂ, ನಾಸಾ ಮುಖ್ಯಸ್ಥ ಬಿಲ್ ನೆಲ್ಸನ್ ಮಾಸ್ಕೋಗೆ ಭೇಟಿ ನೀಡಿದಾಗ 2022ರ ಕ್ರ್ಯೂ ಡ್ರ್ಯಾಗನ್ ಒಪ್ಪಂದದ ಬಗ್ಗೆ ಯೋಜನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

    ರಷ್ಯಾದ ಬಾಹ್ಯಾಕಾಶ ಸಂಸ್ಥೆ ರೋಸ್ಕೋಸ್ಮಾಸ್‌ನಲ್ಲಿರುವ ಏಕೈಕ ಮಹಿಳಾ ಗಗನಯಾತ್ರಿ ಅನ್ನಾ ಕಿಕಿನಾ ಅವರನ್ನು ಈ ಯೋಜನೆಗೆ ಆಯ್ಕೆ ಮಾಡಿದೆ. ಅವರು ಈಗಾಗಲೇ ಈ ಯೋಜನೆಗಾಗಿ ಸ್ಪೇಸ್ ಎಕ್ಸ್‌ನಲ್ಲಿ ತರಬೇತಿಯನ್ನು ಪ್ರಾರಂಭಿಸಿದ್ದಾರೆ. ಹಾಗೂ ಕ್ರ್ಯೂ-5 ಮಿಷನ್‌ನಲ್ಲಿ ಗಗನಯಾತ್ರಿಗಳಾದ ನಿಕೋಲ್ ನಮ್ ಹಾಗೂ ಜೋಶ್ ಕಸಾಡಾ ಅವರೊಂದಿಗೆ ಬಾಹ್ಯಾಕಾಶ ಪ್ರಯಾಣ ಬೆಳೆಸಲಿದ್ದಾರೆ ಎಂಬುದು ತಿಳಿದು ಬಂದಿದೆ. ಇದನ್ನೂ ಓದಿ: 12 ದಿನಗಳ ಬಾಹ್ಯಾಕಾಶ ಪ್ರಯಾಣದಿಂದ ಮರಳಿದ ಜಪಾನ್ ವ್ಯಕ್ತಿ!

    ದಶಕಗಳ ಹಿಂದೆ ಅಮೆರಿಕ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ರಷ್ಯಾವನ್ನು ಅವಲಂಬಿಸಿತ್ತು. ಇತ್ತೀಚೆಗೆ ಅಮೇರಿಕಾ ಸ್ಪೇಸ್ ಎಕ್ಸ್ ಕಂಪನಿಯ ಮೂಲಕ ಗಗನಯಾನಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುತ್ತಿದೆ.

  • ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ಭಾರತೀಯ ಆಹಾರವನ್ನು ಇಷ್ಟಪಡುತ್ತಾರೆ: ಅನಿಲ್ ಮೆನನ್

    ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ಭಾರತೀಯ ಆಹಾರವನ್ನು ಇಷ್ಟಪಡುತ್ತಾರೆ: ಅನಿಲ್ ಮೆನನ್

    ವಾಷಿಂಗ್ಟನ್: ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ಭಾರತೀಯ ಆಹಾರವನ್ನು ಇಷ್ಟಪಡುತ್ತಾರೆ ಎಂದು ಭಾರತೀಯ ಮೂಲದ ನಾಸಾ ಗಗನಯಾತ್ರಿ ಡಾ.ಅನಿಲ್ ಮೆನನ್ ಸಂದರ್ಶನ ಹೇಳಿದ್ದಾರೆ.

    ಶೀಘ್ರದಲ್ಲೇ ಚಂದ್ರನತ್ತ ಹಾರುವ ಹತ್ತು ಗಗನಯಾತ್ರಿಗಳಲ್ಲಿ ಭಾರತೀಯ ಮೂಲದ ಡಾ.ಅನಿಲ್ ಮೆನನ್ ಸಹ ಒಬ್ಬರು. ಈ ವೇಳೆ ಮೆನನ್ ಅವರು ವಿಶೇಷ ಸಂದರ್ಶನ ಒಂದರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿದ್ದಾಗ, ಆಹಾರವು ವಿಭಿನ್ನ ರುಚಿಯನ್ನು ಹೊಂದಿರುತ್ತದೆ. ಅಲ್ಲಿ ದ್ರವ ರೂಪದ ಎಲ್ಲ ವಸ್ತುಗಳು ತೇಲುತ್ತಿರುತ್ತೆ. ಮೂಗು ಉಸಿರುಕಟ್ಟಿಕೊಂಡಿರುತ್ತೆ. ಅದಕ್ಕೆ ಗಗನಯಾತ್ರಿಗಳಿಗೆ ಭಾರತೀಯ ಆಹಾರ ಎಂದರೆ ಇಷ್ಟ. ಏಕೆಂದರೆ ಭಾರತೀಯ ಆಹಾರಗಳು ಮಸಾಲೆಯುಕ್ತವಾಗಿರುತ್ತೆ. ಅದನ್ನು ತಿನ್ನಲು ಎಲ್ಲ ಗಗನಯಾತ್ರಿಗಳು ಇಷ್ಟ ಪಡುತ್ತಾರೆ. ಈ ಕುರಿತು ಸ್ವತಃ ಗಗನಯಾತ್ರಿಗಳೇ ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ:  ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ – ಮೋದಿ ಟ್ವಿಟ್ಟರ್‌ ಖಾತೆ ಹ್ಯಾಕ್‌

    ನಾನು ನನ್ನ ಹೃದಯದಲ್ಲಿ ಕೇರಳಗೆ ವಿಶೇಷ ಸ್ಥಾನವನ್ನು ಕೊಟ್ಟಿದ್ದೇನೆ. ಅಲ್ಲಿಗೆ ಹೋದರೆ ನನಗೆ ನೆಮ್ಮದಿ ಇರುತ್ತೆ. ಒಂದು ರೀತಿಯ ಸುರಕ್ಷತೆಯ ಭಾವ ಇರುತ್ತೆ. ಅಲ್ಲಿನ ಜನರು ನನ್ನನ್ನು ವಿಶೇಷವಾಗಿ ಸ್ವಾಗತಿಸುತ್ತಾರೆ. ನಾನು ಭಾರತದಲ್ಲಿ ಇದ್ದ ಕಾರಣ ಇಲ್ಲಿ ಹೊಂದಿಕೊಳ್ಳಲು ನನಗೆ ಸಹಾಯವಾಯಿತು. ಏಕೆಂದರೆ ಭವಿಷ್ಯದಲ್ಲಿ ನಾನು ಗಗನಯಾತ್ರಿಯಾಗಿ ಅರ್ಜಿ ಸಲ್ಲಿಸಬೇಕಾದ ಭಾರತೀಯ ಕೌಶಲ್ಯಗಳು ಬೇಕಾಗುತ್ತವೆ ಎಂದು ನೆನೆಪಿಸಿಕೊಂಡರು.

    ಕೇರಳ ಮೆನನ್ ಅವರ ತಂದೆಯ ಊರಾಗಿದ್ದು, ಮೆನನ್ ತಮ್ಮ ಪತ್ನಿಯನ್ನು ಸಹ ಕರೆದುಕೊಂಡು ಹೋಗಿ ಈ ಜಾಗಗಳನ್ನು ತೋರಿಸಿದ್ದರು. ಮೆನನ್ ಮಿನ್ನೇಸೋಟದ ಮಿನ್ನಿಯಾಪೋಲಿಸ್‍ನಲ್ಲಿ ಹುಟ್ಟಿ ಬೆಳೆದಿದ್ದು, ಪೋಲಿಯೊ ಲಸಿಕೆಯನ್ನು ಅಧ್ಯಯನ ಮಾಡಲು ಮತ್ತು ಬೆಂಬಲಿಸಲು ಅವರು ರೋಟರಿ ರಾಯಭಾರಿ ವಿದ್ವಾಂಸರಾಗಿ ಭಾರತದಲ್ಲಿ ಒಂದು ವರ್ಷ ಸೇವೆಯನ್ನು ಸಲ್ಲಿಸಿದ್ದರು. ಇದನ್ನೂ ಓದಿ: ನಾವು ಮಠಕ್ಕೆ ಬಂದು ಮೊಟ್ಟೆ ತಿಂತೀವಿ: ಮಠಾಧೀಶರಿಗೆ ವಿದ್ಯಾರ್ಥಿನಿ ಸವಾಲು

    ಮೆನನ್ ಅವರು 2014 ರಲ್ಲಿ ನಾಸಾ ಫ್ಲೈಟ್ ಸರ್ಜನ್ ಆಗಿ ವೃತ್ತಿಜೀವನವನ್ನು ಆರಂಭಿಸಿದ್ದು, ಸೂಯೆಜ್ 43 ಮತ್ತು ಸೂಯೆಜ್ 52 ಗೆ ಪ್ರಧಾನ ಸಿಬ್ಬಂದಿ ಶಸ್ತ್ರಚಿಕಿತ್ಸಕ ಮತ್ತು ಸೂಯೆಜ್ 52ಗೆ ಉಪ ಸಿಬ್ಬಂದಿ ಶಸ್ತ್ರಚಿಕಿತ್ಸಕರಾಗಿ ಸೇವೆ ಸಲ್ಲಿಸಿದ್ದರು. ನಂತರ ನಾಸಾದಲ್ಲಿ ಗಗನಯಾತ್ರಿ ಅಭ್ಯರ್ಥಿಯಾಗಿ ಎರಡು ವರ್ಷಗಳ ಆರಂಭಿಕ ಗಗನಯಾತ್ರಿ ತರಬೇತಿಯನ್ನು ಪೂರ್ಣಗೊಳಿಸಿದ್ದು, ಜನವರಿ 2022ರಂದು ಕರ್ತವ್ಯಕ್ಕೆ ರಿಪೋಟ್ ಮಾಡಿಕೊಳ್ಳುತ್ತಿದ್ದಾರೆ.

  • ನಾಸಾದ ಪ್ರಶಸ್ತಿಗೆ ಸಿದ್ದಾಪುರದ ವಿದ್ಯಾರ್ಥಿ ದಿನೇಶ್ ವಸಂತ ಹೆಗಡೆ ಆಯ್ಕೆ

    ನಾಸಾದ ಪ್ರಶಸ್ತಿಗೆ ಸಿದ್ದಾಪುರದ ವಿದ್ಯಾರ್ಥಿ ದಿನೇಶ್ ವಸಂತ ಹೆಗಡೆ ಆಯ್ಕೆ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಸಶಿಗುಳಿ ಗ್ರಾಮದ ದಿನೇಶ್ ವಸಂತ ಹೆಗಡೆ, ನಾಸಾದ ಭೂಮಿ, ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಅನುದಾನದಲ್ಲಿ ಫ್ಯೂಚರ್ ಇನ್ವೆಸ್ಟಿಗೇಟರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

    ದಿನೇಶ್ ವಸಂತ ಹೆಗಡೆಯವರು ಅಮೆರಿಕದ ಹಂಟ್ಸ್‍ವಿಲ್‍ನಲ್ಲಿರುವ ಅಲಬಾಮಾ ವಿಶ್ವವಿದ್ಯಾಲಯದಲ್ಲಿ ಎರಡನೇ ವರ್ಷದ ಡಾಕ್ಟರೇಟ್ ಅಧ್ಯಯನ ಮಾಡುತ್ತಿದ್ದಾರೆ. ಅವರೊಂದಿಗೆ ಕ್ಯಾಥರೀನ್ ಡೇವಿಡ್ಸನ್ ಎಂಬವರೂ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇಬ್ಬರೂ ಭಾರತೀಯ ರೂಪಾಯಿಯಂತೆ ತಲಾ 1 ಕೋಟಿ 42 ಸಾವಿರ ವಿದ್ಯಾರ್ಥಿವೇತನ ಪಡೆಯಲಿದ್ದಾರೆ.

    ಪ್ರಸ್ತುತ ದಿನೇಶ್ ಅವರು `ಯು.ಎ.ಎಚ್ ಸೆಂಟರ್ ಫಾರ್ ಸ್ಪೇಸ್ ಪ್ಲಾಸ್ಮಾ ಮತ್ತು ಏರೋನಾಮಿಕ್ ರಿಸರ್ಚ್’ನ ಬಾಹ್ಯಾಕಾಶ ವಿಜ್ಞಾನ ವಿಭಾಗದಲ್ಲಿ ಪದವಿ ಸಂಶೋಧನಾ ಸಹಾಯಕರಾಗಿಯೂ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಬಾಹ್ಯಾಕಾಶ ಹವಾಮಾನದ ಕುರಿತು ಸಂಶೋಧನೆ ಮುಂದುವರಿಸಲು ಈ ಅನುದಾನ ನೀಡಲಾಗಿದೆ. ಬಾಹ್ಯಾಕಾಶ ಹವಾಮಾನದ ಅನಿಶ್ಚಿತತೆಗಳ ಪರಿಮಾಣಾತ್ಮಕ ಅಧ್ಯಯನ ಎಂಬುದು ಅವರ ಸಂಶೋಧನೆಯ ವಿಷಯವಾಗಿದ್ದು ಅವರಿಗೆ ಬಾಹ್ಯಾಕಾಶ ಹವಾಮಾನ ವಿಜ್ಞಾನಿ ಮತ್ತು ಬಾಹ್ಯಾಕಾಶ ವಿಜ್ಞಾನದ ವಿಶೇಷ ಪ್ರಾಧ್ಯಾಪಕ ಡಾ.ನಿಕೊಲಾಯ್ ಪೊಗೊರೆಲೋವ್ ಮಾರ್ಗದರ್ಶಕರಾಗಿದ್ದಾರೆ.

    ಸಿದ್ದಾಪುರ ತಾಲೂಕಿನ ವಾಜಗದ್ದೆ ಸರ್ಕಾರಿ ಶಾಲೆ ಹಾಗೂ ಹಾರ್ಸಿಕಟ್ಟಾದ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದಿದ್ದರು. ಮೈಸೂರಿನ ಯುವರಾಜ ಕಾಲೇಜಿನಲ್ಲಿ ಬಿ.ಎಸ್‍ಸಿ, ಮೈಸೂರು ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರದಲ್ಲಿ ಎಂ.ಎಸ್‍ಸಿ ಪದವಿ ಪಡೆದಿದ್ದಾರೆ. ಇದನ್ನೂ ಓದಿ: ಮೆಸ್ಸಿ ಬಳಸಿದ್ದ ಒಂದು ಟಿಶ್ಯೂ ಪೇಪರ್ ಬೆಲೆ ಎಷ್ಟು ಕೋಟಿ ಗೊತ್ತಾ?

  • ಪರ್ಸೀವರೆನ್ಸ್ ರೋವರ್ ಲ್ಯಾಂಡಿಂಗ್ ಮುನ್ನಡೆಸಿದ ಕನ್ನಡತಿ – ಸ್ವಾತಿ ಹಣೆಯಲ್ಲಿದ್ದ ಬಿಂದಿಗೆ ನೆಟ್ಟಿಗರು ಫಿದಾ

    ಪರ್ಸೀವರೆನ್ಸ್ ರೋವರ್ ಲ್ಯಾಂಡಿಂಗ್ ಮುನ್ನಡೆಸಿದ ಕನ್ನಡತಿ – ಸ್ವಾತಿ ಹಣೆಯಲ್ಲಿದ್ದ ಬಿಂದಿಗೆ ನೆಟ್ಟಿಗರು ಫಿದಾ

    ವಾಷಿಂಗ್ಟನ್: ನಾಸಾದ ಪರ್ಸೀವರೆನ್ಸ್ ರೋವರ್ ಲ್ಯಾಂಡಿಂಗ್ ಮುನ್ನಡೆಸಿದ ಮಹಿಳೆ ಭಾರತೀಯ ಮೂಲದವರಾಗಿದ್ದಾರೆ. ಇದೀಗ ಇವರು ಹಣೆಗೆ ಬಿಂದಿ ಇಟ್ಟಿರುವ ದೇಸಿ ಲುಕ್‍ಗೆ ನೆಟ್ಟಿಗರು ಫಿದಾ ಆಗಿದ್ದಾರೆ.

    ಕಂಟ್ರೋಲ್ ರೂಂನಲ್ಲಿ ಮಾರ್ಗದರ್ಶನ ನೀಡುತ್ತಿದ್ದ ಸ್ವಾತಿ ಕಪ್ಪು ಬಣ್ಣದ ಬಿಂದಿ ಧರಿಸಿದ್ದರು. ಇದು ಅನೇಕ ಭಾರತೀಯರ ಖುಷಿಗೆ ಕಾರಣವಾಗಿದೆ. ಅಮೆರಿಕದಲ್ಲೇ ಇರಲಿ, ಎಷ್ಟೇ ದೊಡ್ಡ ವಿಜ್ಞಾನಿಯೇ ಆಗಿರಲಿ ಸ್ವಾತಿ ತಾನು ಭಾರತಿಯೇ, ಭಾರತದ ಸಂಸ್ಕøತಿ ಹೊಂದಿದವಳು ಎನ್ನುವುದನ್ನ ತೋರಿಸಿಕೊಟ್ಟಿದ್ದಾರೆ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಗಣ್ಯರು ಕೂಡ ಮುಖದ ಮೇಲಿನ ತೇಜಸ್ಸಿನ ಬಿಂದಿಗೆ ಶಹಬ್ಬಾಸ್ ಎಂದಿದ್ದಾರೆ. ನಾಸಾ ಶೇರ್ ಮಾಡಿಕೊಂಡಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ನಾಸಾ ಕಳುಹಿಸಿದ ಪರ್ಸೀವರೆನ್ಸ್ ರೋವರ್ ಯಶಸ್ವಿಯಾಗಿ ಮಂಗಳನ ಅಂಗಳದಲ್ಲಿ ಇಳಿದಿದೆ. ಈ ರೋವರ್ ಮಂಗಳ ಗ್ರಹದಲ್ಲಿ ಜೀವಿಗಳು ವಾಸಿಸುತ್ತಿದ್ದವಾ ಎಂಬ ಮಾಹಿತಿಯನ್ನು ಸಂಗ್ರಹಿಸಿ ಭೂಮಿಗೆ ಕಳುಹಿಸಲಿದೆ. ಈ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸಿದ ಸ್ವಾತಿ ಮೋಹನ್ ಬೆಂಗಳೂರು ಮೂಲದವರಾಗಿದ್ದಾರೆ. ಡಾ. ಸ್ವಾತಿ ಮೋಹನ್ ಅಮೆರಿಕಾದಲ್ಲಿ ವಾಸವಾಗಿದ್ದಾರೆ. ನಾಸಾದಲ್ಲಿ ‘ಜಿಎನ್ ಅಂಡ್ ಸಿ’ ಎಂಬ ವೈಜ್ಞಾನಿಕ ತಂಡದ ಮುಖ್ಯಸ್ಥೆಯಾಗಿದ್ದಾರೆ. ಪರ್ಸೀವರೆನ್ಸ್ ರೋವರನ್ನು ಮಂಗಳ ಗ್ರಹದ ಮೇಲೆ ಇಳಿಸುವ ಜವಾಬ್ದಾರಿ ಸಂಪೂರ್ಣವಾಗಿ ಇವರ ತಂಡದ್ದಾಗಿತ್ತು.

    ಯಶಸ್ವಿಯಾಗಿ ನಿಭಾಯಿಸಿದ ಸ್ವಾತಿ ಅವರ ಬಗ್ಗೆ ಅಮೆರಿಕ, ಭಾರತದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ರೋವರ್ ಯಶಸ್ಸಿನಿಂದ ಫುಲ್ ಖುಷ್ ಆಗಿರುವ ನಾಸಾ, ಕಂಟ್ರೋಲ್ ರೂಂನಲ್ಲಿದ್ದ ಸಿಬ್ಬಂದಿ ಪ್ರತಿಕ್ರಿಯೆಯ ವೀಡಿಯೋ ಹಾಗೂ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಆದರೆ ಇವುಗಳಲ್ಲಿ ಸ್ವಾತಿ ಮೋಹನ್ ಹಣೆ ಮೇಲೆ ಇಟ್ಟಿದ್ದ ಬಿಂದಿ ಹೈಲೈಟ್ ಆಗಿದೆ.

  • ಬಾಹ್ಯಾಕಾಶದಲ್ಲಿ ಮೂಲಂಗಿ ಬೆಳೆದ ನಾಸಾ

    ಬಾಹ್ಯಾಕಾಶದಲ್ಲಿ ಮೂಲಂಗಿ ಬೆಳೆದ ನಾಸಾ

    ವಾಷಿಂಗ್ಟನ್: ಬಾಹ್ಯಾಕಾಶದಲ್ಲಿ ಅತೀ ಕಡಿಮೆ ಗುರುತ್ವಾಕಷಣೆ ಅಡಿಯಲ್ಲಿ ನಾಸಾ ಮೂಲಂಗಿಯನ್ನು ಬೆಳೆದಿದೆ.

    ನಾಸಾದ ವಿಜ್ಞಾನಿಗಳು ಮೈಕ್ರೋಗ್ರಾವಿಟಿಯಡಿ ತರಕಾರಿಯನ್ನು ಬೆಳೆಯುವ ಪ್ರಯತ್ನಕ್ಕೆ ಮುಂದಾಗಿ ಯಶಸ್ವಿಯಾಗಿದ್ದಾರೆ. ಕಡಿಮೆ ಗುರುತ್ವಾಕರ್ಷಣೆಯ ವಾತಾವರಣದಲ್ಲಿ ನಾಸಾ ಮೂಲಂಗಿಯನ್ನು ಬೆಳೆದಿದೆ.

    ಚಂದ್ರ ಹಾಗೂ ಮಂಗಳನ ಅಂಗಳಕ್ಕೆ ಗಗನಯಾತ್ರಿಗಳನ್ನು ಕಳುಹಿಸಲು ಸಿದ್ಧತೆ ನಡೆಸುತ್ತಿರುವ ನಾಸಾ ಈಗ ಕೆಲವು ಪ್ರಯೋಗಗಳನ್ನು ಮಾಡುತ್ತಿದೆ.

    ಭೂಮಿಯಿಂದ ಲಕ್ಷಾಂತರ ಮೈಲಿ ದೂರ ಅನ್ಯಗ್ರಹಗಳಿಗೆ ಹೊಗುವ ಗಗನಯಾನಿಗಳಿಗೆ ನಿಯಮಿತವಾಗಿ ತಾಜಾ ಆಹಾರ ಮೂಲ ಬೇಕಾಗಬಹುದು ಎಂಬ ಉದ್ದೇಶದಿಂದ ಈ ಪ್ರಯೋಗವನ್ನು ಮಾಡಿದೆ.


    ಮೂಲಂಗಿ ಬೆಳದಿದ್ದು ಹೇಗೆ:
    ಗುರುತ್ವಾಕರ್ಷಣೆ ಕಡಿಮೆ ಇರುವ ಹಿನ್ನೆಲೆ ಆ ಸ್ಥಳದಲ್ಲಿ ಗಿಡದ ಬುಡಗಳು ಮಣ್ಣನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ಹೀಗಾಗಿ ದಿಂಬುಗಳಲ್ಲಿ ಬೀಜಗಳನ್ನು ಹಾಕಿ ಬೆಳೆಯಲಾಗಿದೆ. ಗಿಡದ ಬುಡಕ್ಕೆ ನೀರು ಹಾಗೂ ಗೊಬ್ಬರ ಪೂರೈಕೆ ಮಾಡಲು ದಿಂಬನ್ನು ಬಳಸಲಾಗಿದೆ.

    ಮೂಲಂಗಿಯೇ ಯಾಕೆ?
    ಮೂಲಂಗಿ ಅತೀ ಕಡಿಮೆ ಅವಧಿಯಲ್ಲಿ ಫಲ ಕೊಡುತ್ತದೆ. ಅಲ್ಲದೆ ಬಾಹ್ಯಾಕಾಶದಲ್ಲಿ ಅಧ್ಯಯನ ಮಾಡುವ ಸಸ್ಯ ಥಳಿಗೆ ಮೂಲಂಗಿ ಹೋಲುತ್ತದೆ. ಹೆಚ್ಚು ಪೌಷ್ಟಿಕಾಂಶವನ್ನು ಹೊಂದಿದೆ. ಹೀಗಾಗಿ ಮೂಲಂಗಿ ಬೆಳೆ ಆಯ್ಕೆ ಮಾಡಿಕೊಳ್ಳಲಾಗಿದೆ. ಜೊತೆಗೆ ಮೂಲಂಗಿ ಹಸಿಯಾಗಿ ತಿನ್ನಲು ಯೋಗ್ಯವಾಗಿದೆ.

    ಬಾಹ್ಯಾಕಾಶದಲ್ಲಿ ಬೆಳೆದಿರುವ ಕಡುಗೆಂಪು ಬಣ್ಣದ ಮೂಲಂಗಿ ಕಟಾವಿಗೆ ಸಿದ್ಧವಾಗಿದೆ. ಇದರ ಸ್ಯಾಂಪಲ್‍ಗಳನ್ನು ಅಧ್ಯಯನಕ್ಕಾಗಿ ಭೂಮಿಗೆ ಕಳಿಸಲಾಗುತ್ತದೆ ಎಂದು ತಿಳಿದು ಬಂದಿದೆ.

  • ಬಾಹ್ಯಾಕಾಶ ಪ್ರವಾಸೋದ್ಯಮಕ್ಕೆ ಮುನ್ನುಡಿ- ನಾಸಾ, ಸ್ಪೇಸ್ ಎಕ್ಸ್ ರಾಕೆಟ್ ಉಡಾವಣೆ ಯಶಸ್ವಿ

    ಬಾಹ್ಯಾಕಾಶ ಪ್ರವಾಸೋದ್ಯಮಕ್ಕೆ ಮುನ್ನುಡಿ- ನಾಸಾ, ಸ್ಪೇಸ್ ಎಕ್ಸ್ ರಾಕೆಟ್ ಉಡಾವಣೆ ಯಶಸ್ವಿ

    ವಾಷಿಂಗ್ಟನ್: ಅಮೆರಿಕದ ಬಾಹ್ಯಾಕಾಶ ಸಂಸ್ಥೆ (ನಾಸಾ) ಮೊದಲ ಬಾರಿಗೆ ಖಾಸಗಿ ಕಂಪನಿ ಸ್ಪೇಸ್ ಎಕ್ಸ್ ಅಭಿವೃದ್ಧಿ ಪಡಿಸಿದ ರಾಕೆಟ್ ಮೂಲಕ ನಾಲ್ವರು ಗಗನಯಾತ್ರಿಗಳನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ(ಐಎಸ್ಎಸ್)ಕ್ಕೆ ಯಶಸ್ವಿಯಾಗಿ ಕಳುಹಿಸಿ ಮೈಲಿಗಲ್ಲು ಸೃಷ್ಟಿಸಿದೆ.

    ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಭಾನುವಾರ ಫಾಲ್ಕನ್ 9 ರಾಕೆಟ್ ಉಡಾವಣೆ ಮಾಡುವ ಮೂಲಕ ನಾಸಾ ಈ ಸಾಧನೆ ಮಾಡಿದೆ.

    ಇಲ್ಲಿಯವರೆಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ದೇಶಗಳು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಅಭಿವೃದ್ಧಿ ಪಡಿಸಿದ ರಾಕೆಟ್ ಮೂಲಕ ಕಳುಹಿಸಿ ಕೊಡುತ್ತಿದ್ದವು. ಆದರೆ ಈಗ ಖಾಸಗಿ ಕಂಪನಿ ಮೂಲಕ ಅಮೆರಿಕ ಈ ಯೋಜನೆಗೆ ಕೈ ಹಾಕಿದ್ದು ಐಎಸ್ಎಸ್ ಸೇರುವ ಪ್ರಯತ್ನ ಯಶಸ್ವಿಯಾಗಿದೆ.ಖಾಸಗಿ ಒಡೆತನದ ರಾಕೆಟ್ ನಲ್ಲಿ ಸಿಬ್ಬಂದಿಯನ್ನು ಕಳುಹಿಸುವ ನಾಸಾದ ಮೊದಲ ಪೂರ್ಣ ಪ್ರಮಾಣದ ಯೋಜನೆ ಇದಾಗಿದೆ.

    ಅಮೆರಿಕ ವಾಯುಪಡೆಯ ಕರ್ನಲ್ ಮೈಲ್ ಹಾಪ್‌ಕಿನ್, ಭೌತವಿಜ್ಞಾನಿ ಶಾನನ್ ವಾಕರ್, ಜಪಾನಿನ ಗಗನಯಾತ್ರಿ ಸೂಚಿ ನೊಗುಚಿ ಮತ್ತು ನೌಕಾಪಡೆಯ ಕಮಾಂಡರ್ ಮತ್ತು ರೂಕಿ ಗಗನಯಾತ್ರಿ ವಿಕ್ಟರ್ ಗ್ಲೋವರ್ ಆರು ತಿಂಗಳ ಕಾಲ ಅಲ್ಲೇ ಇದ್ದು ಸಂಶೋಧನೆ ನಡೆಸಲಿದ್ದಾರೆ‌.

    ಅಮೆರಿಕದ ನೂತನ ಚುನಾಯಿತ ಅಧ್ಯಕ್ಷ ಜೋ ಬೈಡನ್ ನಾಸಾದ ಯಶಸ್ವಿ ಉಡಾವಣೆಗೆ ಅಭಿನಂದನೆ ಸಲ್ಲಿಸಿದ್ದಾರೆ.

    ಎಲೆಕ್ಟ್ರಿಕ್ ವಾಹನ ಕಂಪನಿ ಟೆಸ್ಲಾ ಸಂಸ್ಥಾಪಕ ಇಲಾನ್ ಮಾಸ್ಕ್ 18 ವರ್ಷದ ಹಿಂದೆ ಸ್ಪೇಸ್ ಎಕ್ಸ್ ಕಂಪನಿಯನ್ನು ಸ್ಥಾಪಿಸಿದ್ದರು.‌ ಸ್ಪೇಸ್ ಎಕ್ಸ್ ಮೇ ತಿಂಗಳಿನಲ್ಲಿ ಯಶಸ್ವಿಯಾಗಿ ಬಾಹ್ಯಾಕಾಶ ಕೇಂದ್ರಕ್ಕೆ ಇಬ್ಬರು ಗಗನಯಾತ್ರಿಗಳನ್ನು ಕಳುಹಿಸಿ ಯಶಸ್ವಿಯಾಗಿತ್ತು. ಅಷ್ಟೇ ಅಲ್ಲದೇ ಇಬ್ಬರು ಮೂರು ತಿಂಗಳ ಹಿಂದೆ ಯಶಸ್ವಿಯಾಗಿ ಭೂಮಿಯಲ್ಲಿ ಲ್ಯಾಂಡ್ ಆಗಿದ್ದರು. ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ನಾಸಾ ಈಗ ಪೂರ್ಣ ಪ್ರಮಾಣದಲ್ಲಿ ಮೊದಲ ಬಾರಿಗೆ ಖಾಸಗಿ ರಾಕೆಟ್ ಮೂಲಕ ಬಾಹ್ಯಾಕಾಶ ಕೇಂದ್ರಕ್ಕೆ ಗಗನಯಾನಿಗಳನ್ನು ಕಳುಹಿಸಿಕೊಟ್ಟಿದೆ.

    2011ರಲ್ಲಿ ನಾಸಾ ಅಭಿವೃದ್ಧಿ ಪಡಿಸಿದ ಬಾಹ್ಯಾಕಾಶ ನೌಕೆ ನಿವೃತ್ತಿಯಾಗಿತ್ತು. ಇದಾದ ಬಳಿಕ ನಾಸಾ ಸ್ಪೇಸ್ ಎಕ್ಸ್ ಮತ್ತು ವಿಮಾನ ತಯಾರಿಕಾ ಸಂಸ್ಥೆ ಬೋಯಿಂಗ್ ಕಂಪನಿಗೆ ಭೂಮಿ‌ ಮತ್ತು ಬಾಹ್ಯಾಕಾಶ ಕೇಂದ್ರಕ್ಕೆ ಸಂಪರ್ಕ ಕಲ್ಪಿಸಲು ರಾಕೆಟ್, ನೌಕೆ ಅಭಿವೃದ್ಧಿ ಪಡಿಸುವಂತೆ 7 ಶತಕೋಟಿ ಡಾಲರ್ ಗುತ್ತಿಗೆ ನೀಡಿತ್ತು.

    ಬಾಹಾಕ್ಯಾಶ ಕ್ಷೇತ್ರದಲ್ಲಿ ಖಾಸಗಿ ಕಂಪನಿಗಳ ಸಂಶೋಧನೆ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸಲು ಅಮೆರಿಕ ಸರ್ಕಾರದ ನಾಸಾಗೆ ಸಹಕಾರ ನೀಡುತ್ತದೆ.

  • ಚೀನಾದಲ್ಲಿ ವಾಯುಮಾಲಿನ್ಯ ಪ್ರಮಾಣ ಭಾರೀ ಇಳಿಕೆ -2019 ರಲ್ಲಿ ಎಷ್ಟಿತ್ತು? ಈಗ ಎಷ್ಟಿದೆ?

    ಚೀನಾದಲ್ಲಿ ವಾಯುಮಾಲಿನ್ಯ ಪ್ರಮಾಣ ಭಾರೀ ಇಳಿಕೆ -2019 ರಲ್ಲಿ ಎಷ್ಟಿತ್ತು? ಈಗ ಎಷ್ಟಿದೆ?

    ವಾಷಿಂಗ್ಟನ್: ಕೊರೊನಾ ವೈರಸ್ ನಿಂದ ತತ್ತರಿಸಿದ ಹೋಗಿರುವ ಚೀನಾದಲ್ಲಿ ಈಗ ವಾಯುಮಾಲಿನ್ಯ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ.

    ವೈರಸ್ ಭೀತಿಯಿಂದ ಚೀನಾದಲ್ಲಿ ಹಲವು ನಗರಗಳನ್ನು ಬಂದ್ ಮಾಡಲಾಗಿದೆ. ಇದರ ಜೊತೆ ಕಾರ್ಖಾನೆಗಳನ್ನು ಸಹ ಬಂದ್ ಮಾಡಲಾಗಿದ್ದು ಜನರ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ಎಲ್ಲದರ ಪರಿಣಾಮ ವಾಯುಮಾಲಿನ್ಯ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ಅಮೆರಿಕದ ನಾಸಾ ತಿಳಿಸಿದೆ.

    ಈ ಸಂಬಂಧ ಕೊರೊನಾ ವೈರಸ್ ಹರಡಿದ ಕೇಂದ್ರ ಸ್ಥಾನವಾದ ವುಹಾನ್ ಪ್ರದೇಶದ ಉಪಗ್ರಹದ ಚಿತ್ರಗಳನ್ನು ನಾಸಾ ಬಿಡುಗಡೆ ಮಾಡಿದೆ. ಈ ಚಿತ್ರದಲ್ಲಿ 2019 ಮತ್ತು 2020ರ ಜ.1 ರಿಂದ 20, ಜ.28 ರಿಂದ ಫೆ.9, ಫೆ.10 ರಿಂದ 25ರವರೆಗಿನ ಚಿತ್ರಗಳನ್ನು ಹೋಲಿಕೆ ಬಿಡುಗಡೆ ಮಾಡಿ ಮಾಲಿನ್ಯ ಎಷ್ಟು ಕಡಿಮೆಯಾಗಿದೆ ಎನ್ನುವುದನ್ನು ತಿಳಿಸಿದೆ. ಇದನ್ನೂ ಓದಿ: 10 ದಿನದಲ್ಲಿ 1 ಸಾವಿರ ಬೆಡ್ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಗೊಂಡಿದ್ದು ಹೇಗೆ? ಚೀನಾದ ಜೈವಿಕ ಅಸ್ತ್ರ ಕೊರೊನಾ?

    ವಾಹನಗಳ ಬಳಕೆ ಮತ್ತು ಸಾರಿಗೆ ಸಂಪರ್ಕ ನಿರ್ಬಂಧ, ಕೈಗಾರಿಕೆಗಳನ್ನು ಸ್ಥಗಿತಗೊಳಿಸಿದ್ದರಿಂದ ಮಾಲಿನ್ಯ ಗಣನೀಯವಾಗಿ ಇಳಿಕೆಯಾಗಿದೆ. ಒಂದು ಪ್ರದೇಶದಲ್ಲಿ ಮಾಲಿನ್ಯದ ಪ್ರಮಾಣ ಇಷ್ಟೊಂದು ಪ್ರಮಾಣದಲ್ಲಿ ದಿಢೀರ್ ಇಳಿಕೆಯಾಗಿರುವುದನ್ನು ನಾನು ಇದೇ ಮೊದಲ ಬಾರಿಗೆ ನೋಡುತ್ತಿದ್ದೇನೆ ಎಂದು ನಾಸಾದ ವಾಯು ಗುಣಮಟ್ಟದ ಬಗ್ಗೆ ಅಧ್ಯಯನ ನಡೆಸುವ ವಿಜ್ಞಾನಿ ಫೆಲೂಯ್ ತಿಳಿಸಿದ್ದಾರೆ.

    2008ರ ಆರ್ಥಿಕ ಹಿಂಜರಿಕೆ ಉಂಟಾದಾಗ ನೈಟ್ರೋಜನ್ ಆಕ್ಸೈಡ್ ಪ್ರಮಾಣ ಕಡಿಮೆ ಆಗಿತ್ತು. ಆದರೆ ಇಷ್ಟೊಂದು ಪ್ರಮಾಣದಲ್ಲಿ ಕಡಿಮೆ ಆಗಿರಲಿಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

    ಸದ್ಯ ಈಗ ಚೀನಾದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ವಿಶ್ವದ ಹಲವೆಡೆ ವ್ಯಾಪಕವಾಗಿ ಕೊರೊನಾ ವೈರಸ್ ಪ್ರಸಾರವಾಗುತ್ತಿದೆ.

  • ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ 19ರ ಯುವಕ

    ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ 19ರ ಯುವಕ

    – ಟ್ರಂಪ್ ಆಹ್ವಾನಿಸಿದರೂ ಅಮೆರಿಕಕ್ಕೆ ತೆರಳಲಿಲ್ಲ
    – ಭಾರತದಲ್ಲೇ ರಿಸರ್ಚ್ ಮಾಡ್ತೇನೆ ಎಂದ ಗೋಪಾಲ್

    ಪಾಟ್ನಾ: ಬಿಹಾರದ ಬಾಗಲ್‍ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ.

    19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ. ಸದ್ಯ ಗೋಪಾಲ್ ಈ ಡೆಹ್ರಾಡೂನ್ ಸರ್ಕಾರಿ ಗ್ರಾಫಿಕ್ ಏರಾ ಇನ್‍ಸ್ಟಿಟ್ಯೂಟ್‍ನ ಲ್ಯಾಬ್‍ನಲ್ಲಿ ಟೆಸ್ಟಿಂಗ್ ಮಾಡುತ್ತಿದ್ದಾರೆ. ಅಲ್ಲದೆ ಜಾರ್ಖಂಡ್‍ನಲ್ಲಿ ಲ್ಯಾಬ್ ತೆರೆದು ಅಲ್ಲಿ ರಿಸರ್ಚ್ ಮಾಡಲಿದ್ದಾರೆ.

    ಗೋಪಾಲ್ ತುಳಸಿಪುರದ ಮಾಡೆಲ್ ಹೈಸ್ಕೂಲ್‍ನಲ್ಲಿ 12ನೇ ತರಗತಿವರೆಗೂ ವಿದ್ಯಾಭ್ಯಾಸ ಮಾಡಿದ್ದಾರೆ. 2013-14ರಲ್ಲಿ ಬಯೋಸೆಲ್ ಆವಿಷ್ಕಾರಕ್ಕಾಗಿ ಗೋಪಾಲ್ ಅವರು ಇನ್‍ಸ್ಪೈಯರ್ಡ್ ಅವಾರ್ಡ್ ಕೂಡ ಪಡೆದಿದ್ದಾರೆ. ಪ್ರಶಸ್ತಿ ಪಡೆಯುವಾಗ ಅವರು ಹತ್ತನೇ ತರಗತಿಯಲ್ಲಿ ಓದುತ್ತಿದ್ದರು. 2008ರಲ್ಲಿ ಗೋಪಾಲ್ ಅವರ ಗ್ರಾಮದಲ್ಲಿ ಪ್ರವಾಹ ಬಂದಿದ್ದು, ಈ ವೇಳೆ ಸಾಕಷ್ಟು ಹಾನಿಯಾಗಿತ್ತು.

    ಪ್ರವಾಹ ಬಂದ ಸಂದರ್ಭದಲ್ಲಿ ಗೋಪಾಲ್ ಅವರ ತಂದೆ ಪ್ರೇಮ್‍ರಂಜನ್ ಕುಮಾರ್ ಅವರು ತಮ್ಮ ಮಗನಿಗೆ 10ನೇ ತರಗತಿ ನಂತರ ಮುಂದೆ ಓದಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಆದರೆ ಗೋಪಾಲ್ ತಮ್ಮ ಛಲವನ್ನು ಬಿಟ್ಟು ಕೊಡಲಿಲ್ಲ. ಸ್ಕಾಲರ್‍ಶಿಪ್ ಪಡೆಯಲು ಏನಾದರೂ ಮಾಡಬೇಕು ಎಂದು ಗೋಪಾಲ್ ಯೋಚಿಸುತ್ತಿದ್ದರು.

    2017, ಅಗಸ್ಟ್ 31ರಂದು ಗೋಪಾಲ್ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದರು. ಆಗ ಮೋದಿ ಅವರು ಗೋಪಾಲ್‍ರನ್ನು ಅಹಮದಾಬಾದ್‍ನ ಎನ್‍ಐಎಫ್‍ಗೆ ಕಳುಹಿಸಿಕೊಟ್ಟರು. ಈ ವೇಳೆ ಗೋಪಾಲ್ 6 ಆವಿಷ್ಕಾರವನ್ನು ಮಾಡಿದ್ದರು. ಈಗ ಗೋಪಾಲ್ ಅವರ ಹೆಸರು ವಿಶ್ವದ 30 ಸ್ಟಾರ್ಟಪ್ ವಿಜ್ಞಾನಿಗಳ ಪಟ್ಟಿಯಲ್ಲಿದೆ. ಏಪ್ರಿಲ್‍ನಲ್ಲಿ ಅಬುಧಾಬಿಯಲ್ಲಿ ನಡೆಯುವ ವಿಶ್ವದ ಅತಿ ದೊಡ್ಡ ಸೈನ್ಸ್ ಫೇರ್ ನಡೆಯಲಿದೆ. ಇದರಲ್ಲಿ 6 ಸಾವಿರ ವಿಜ್ಞಾನಿಗಳು ಭಾಗವಹಿಸುತ್ತಿದ್ದು, ಗೋಪಾಲ್ ಚೀಫ್ ಸ್ಪೀಕರ್ ಆಗಿ ಭಾಗವಹಿಸಲಿದ್ದಾರೆ.