Tag: ನಾ ನಾಯಕಿ

  • 2 ಸಾವಿರ ರೂ. ಕೊಟ್ಟೇ `ನಾ ನಾಯಕಿ’ ಸಮಾವೇಶಕ್ಕೆ ಮಹಿಳೆಯರನ್ನ ಕರೆತರಲಾಗಿದೆ – ಟ್ವೀಟ್‌ನಲ್ಲಿ ಕಾಲೆಳೆದ BJP

    2 ಸಾವಿರ ರೂ. ಕೊಟ್ಟೇ `ನಾ ನಾಯಕಿ’ ಸಮಾವೇಶಕ್ಕೆ ಮಹಿಳೆಯರನ್ನ ಕರೆತರಲಾಗಿದೆ – ಟ್ವೀಟ್‌ನಲ್ಲಿ ಕಾಲೆಳೆದ BJP

    ಬೆಂಗಳೂರು: ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ `ನಾ ನಾಯಕಿ’ (Na Nayaki) ಕಾರ್ಯಕ್ರಮಕ್ಕೆ 2 ಸಾವಿರ ರೂ. ಕೊಟ್ಟೇ ಮಹಿಳೆಯರನ್ನು ಕರೆತರಲಾಗಿದೆ ಎಂದು ಬಿಜೆಪಿ (BJP) ಆರೋಪಿಸಿದೆ.

    ಕಾಂಗ್ರೆಸ್ (Congress) ವಿರುದ್ಧ ಟ್ವೀಟ್‌ನಲ್ಲಿ ಕಾಲೆಳೆದಿರುವ ಬಿಜೆಪಿ, `ಅಲ್ಲೇ ಡ್ರಾ ಅಲ್ಲೇ ಬಹುಮಾನ ಅಂದ್ರೆ ಇದೇನಾ? `ನಾಯಕಿ’ ಕಾರ್ಯಕ್ರಮಕ್ಕೂ 2,000 ರೂ. ಕೊಟ್ಟೇ ಕರೆತರಲಾಗಿತ್ತು. ಶ್ರೀಮತಿ ಪ್ರಿಯಾಂಕಾ ಗಾಂಧಿ (Priyanka Gandhi) ನೇತೃತ್ವದ ಸಮಾವೇಶದಲ್ಲಿ ಹರಿದ ಕಾಂಚಾಣವೇ ಬಹುಶಃ ಕಾಂಗ್ರೆಸ್ಸಿಗರ `ಗೃಹಲಕ್ಷ್ಮಿ’ ಯೋಜನೆ ಇರಬೇಕು ಎಂದು ವ್ಯಂಗ್ಯವಾಡಿದೆ. ಇದನ್ನೂ ಓದಿ: ಇಂಗ್ಲಿಷ್‌ ಪದವೀಧರೆ ಈಗ ಚಾಯ್‌ವಾಲಿ – ಯುವತಿ ಭವಿಷ್ಯದ ಕನಸಿಗೆ ಜನರ ಮೆಚ್ಚುಗೆ

    ಸೋಮವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಮಹಿಳಾ ಕಾಂಗ್ರೆಸ್‌ನ `ನಾ ನಾಯಕಿ’ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ರಾಜ್ಯ ಕಾಂಗ್ರೆಸ್‌ನ ಮಹಿಳಾ ಪ್ರಣಾಳಿಕೆಯ ಕೆಲವು ಪ್ರಮುಖ ವಿಚಾರಗಳನ್ನು ಘೋಷಣೆ ಮಾಡಿದರು. ಇದೇ ವೇಳೆ `ಗೃಹಲಕ್ಷ್ಮಿ’ ಬಾಂಡ್ ಅನ್ನೂ ಪ್ರದರ್ಶಿಸಿದರು. ಇದಕ್ಕೆ ಸರಣಿ ಟ್ವೀಟ್‌ಗಳ ಮೂಲಕ ಬಿಜೆಪಿ ತಿರುಗೇಟು ನೀಡಿತ್ತು. ಇದನ್ನೂ ಓದಿ: ಭಾರತದೊಂದಿಗೆ 3 ಯುದ್ಧಗಳನ್ನು ಮಾಡಿದ ನಂತರ ಪಾಕಿಸ್ತಾನ ಪಾಠ ಕಲಿತಿದೆ – ಶೆಹಬಾಜ್ ಷರೀಫ್

    ನಂತರ `ಕಾಂಗ್ರೆಸ್ ಆಡಳಿತ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ದೌರ್ಜನ್ಯಗಳನ್ನೇ ಪ್ರಶ್ನಿಸದ ಪ್ರಿಯಾಂಕಾ ಗಾಂಧಿ ಅವರು ಈಗ `ಗೃಹಲಕ್ಷ್ಮಿ’ ಯೋಜನೆ ಜಾರಿಗೊಳಿಸುವ ಭರವಸೆ ನೀಡಿರೋದು `ಕಾಂಗ್ರೆಸ್ ಗ್ಯಾರಂಟಿ ಸುಳ್ಳಿನ ಸರಣಿ’ಯ ಮುಂದುವರಿದ ಭಾಗ.

    ಛತ್ತೀಸ್‌ಘಡದಲ್ಲಿ ನಿರುದ್ಯೋಗಿ ಯುವತಿಯರಿಗೆ 2,500 ರೂ. ಮಾಸಿಕ ಭತ್ಯೆ ಕೊಡ್ತಿಲ್ಲ, ವಿಧವೆಯರಿಗೆ ಮಾಸಿಕ 1,000 ರೂ. ಪೆನ್ಷನ್ ಕೊಡ್ತಿಲ್ಲ, ಹಿಮಾಚಲ ಪ್ರದೇಶದಲ್ಲಿ 18-60 ವರ್ಷದ ಮಹಿಳೆಯರಿಗೆ 1,500ರೂ. ನೆರವು – ಸಿಕ್ತಿಲ್ಲ. ರಾಜಸ್ಥಾನದಲ್ಲಿ ನಿರುದ್ಯೋಗಿ ಯುವತಿಯರಿಗೆ 3,500 ರೂ. ಮಾಸಿಕ ನಿರುದ್ಯೋಗ ಭತ್ಯೆ, ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಏಕೆ ಕೊಟ್ಟಿಲ್ಲ ಎಂದು ಪ್ರಶ್ನಿಸಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಜಸ್ಥಾನದಲ್ಲಿ ನಿರುದ್ಯೋಗಿ ಯುವತಿಯರಿಗೆ 2,500 ರೂ. ಇನ್ನೂ ನೀಡಿಲ್ಲ ಯಾಕೆ – ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ

    ರಾಜಸ್ಥಾನದಲ್ಲಿ ನಿರುದ್ಯೋಗಿ ಯುವತಿಯರಿಗೆ 2,500 ರೂ. ಇನ್ನೂ ನೀಡಿಲ್ಲ ಯಾಕೆ – ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ

    ಬೆಂಗಳೂರು: ಕಾಂಗ್ರೆಸ್ (Congress) ಆಡಳಿತ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ದೌರ್ಜನ್ಯಗಳನ್ನೇ ಪ್ರಶ್ನಿಸದ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಈಗ `ಗೃಹಲಕ್ಷ್ಮೀ’ ಯೋಜನೆ ಜಾರಿಗೊಳಿಸುವ ಭರವಸೆ ನೀಡಿರೋದು `ಕಾಂಗ್ರೆಸ್ ಗ್ಯಾರಂಟಿ ಸುಳ್ಳಿನ ಸರಣಿ’ಯ ಮುಂದುವರಿದ ಭಾಗ ಎಂದು ಬಿಜೆಪಿ (BJP) ತಿರುಗೇಟು ನೀಡಿದೆ.

    ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ಕಾಂಗ್ರೆಸ್‌ನ ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಾಜ್ಯ ಕಾಂಗ್ರೆಸ್‌ನ ಮಹಿಳಾ ಪ್ರಣಾಳಿಕೆಯ ಕೆಲವು ಪ್ರಮುಖ ವಿಚಾರಗಳನ್ನು ಘೋಷಣೆ ಮಾಡಿದರು. ಇದೇ ವೇಳೆ? ಗೃಹ ಲಕ್ಷ್ಮಿ’ ಬಾಂಡ್ ಅನ್ನು ಪ್ರಿಯಾಂಕಾ ಗಾಂಧಿ ಪ್ರದರ್ಶಿಸಿದರು. ಇದಕ್ಕೆ ಸರಣಿ ಟ್ವೀಟ್‌ಗಳ ಮೂಲಕ ಬಿಜೆಪಿ ತಿರುಗೇಟು ನೀಡಿದೆ. ಇದನ್ನೂ ಓದಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ, ಮಹಿಳೆಗೆ ಪ್ರತಿ ತಿಂಗಳು 2,000 ರೂ.: ಪ್ರಿಯಾಂಕಾ ಗಾಂಧಿ

    ಟ್ವೀಟ್‌ನಲ್ಲಿ ಏನಿದೆ?
    ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಸಬಲಿಕರಣ ಬಿಡಿ, ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯಗಳನ್ನೇ ಎಂದೂ ಪ್ರಶ್ನಿಸದ ಪ್ರಿಯಾಂಕಾ ಗಾಂಧಿ ಇದೀಗ ಗೃಹಲಕ್ಷ್ಮಿ ಎಂಬ ಯೋಜನೆ ಜಾರಿಗೊಳಿಸುತ್ತೇವೆ ಎಂದಿರುವುದು ಕಾಂಗ್ರೆಸ್’ನ ಗ್ಯಾರಂಟಿ ಸುಳ್ಳಿನ ಸರಣಿಯ ಮುಂದುವರಿದ ಭಾಗ. ಈ ಡೋಂಗಿತನದ ಅರಿವು ರಾಜ್ಯದ ಜನರಿಗಿದೆ.

    ಛತ್ತೀಸ್ಗಡದಲ್ಲಿ ನಿರುದ್ಯೋಗಿ ಯುವತಿಯರಿಗೆ 2,500 ರೂ. ಮಾಸಿಕ ಭತ್ಯೆ ಕೊಡ್ತಿಲ್ಲ, ವಿಧವೆಯರಿಗೆ ಮಾಸಿಕ 1,000 ರೂ. ಪೆನ್ಷನ್ ಕೊಡ್ತಿಲ್ಲ, ಹಿಮಾಚಲ ಪ್ರದೇಶದಲ್ಲಿ 18-60 ವರ್ಷದ ಮಹಿಳೆಯರಿಗೆ 1,500ರೂ. ನೆರವು – ಸಿಕ್ತಿಲ್ಲ. ರಾಜಸ್ಥಾನದಲ್ಲಿ ನಿರುದ್ಯೋಗಿ ಯುವತಿಯರಿಗೆ 3,500 ರೂ. ಮಾಸಿಕ ನಿರುದ್ಯೋಗ ಭತ್ಯೆ, ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಯಾವುದೂ ಇಲ್ಲ. ಇದನ್ನೂ ಓದಿ: ಚುನಾವಣೆ ಬಂದ್ಮೇಲೆ ಬಿಜೆಪಿಯವರು ಮಸೀದಿ, ಮಂದಿರ, ಪಾಕಿಸ್ತಾನ ಅಷ್ಟೇ ತೋರಿಸೋದು: ಸತೀಶ್ ಜಾರಕಿಹೊಳಿ

    ಅಳಿವು ಉಳಿವಿನ ಕೊನೆಯ ಹಂತಕ್ಕೆ ತಲುಪಿದಾಗ ಸುಳ್ಳು ಹೇಳುವುದು ಮತ್ತು ಹುಸಿ ಭರವಸೆ ನೀಡುವುದು ಸಹಜವಾಗಿ ಮೈಗೂಡುತ್ತದಂತೆ. ಕರ್ನಾಟಕ ಕಾಂಗ್ರೆಸ್ ಪರಿಸ್ಥಿತಿ ಹಾಗೆಯೇ ಆಗಿದೆ. ಚುನಾವಣೆಗೂ ಮುನ್ನ ಯೋಜನೆಗಳ ಸಾಧ್ಯಾಸಾಧ್ಯತೆ ಅರಿಯದೆ ಪ್ರಚಾರಕ್ಕಾಗಿ ಘೋಷಿಸುವುದು ಈಗ ಕಾಂಗ್ರೆಸ್‌ಗೆ ಅಭ್ಯಾಸವಾಗಿಬಿಟ್ಟಿದೆ.

    ಅಭ್ಯಾಸ ಬಲದಲ್ಲಿ ಮುಂದುವರಿದಿರುವ ರಾಷ್ಟ್ರೀಯ ಕಾಂಗ್ರೆಸ್ ಕರ್ನಾಟಕದಲ್ಲೂ ಅದನ್ನೇ ಮಾಡುತ್ತಿದೆ. ಪ್ರಚಾರಕ್ಕೆ ಬೇಕಾಗಿ ಗೃಹಲಕ್ಷ್ಮಿ ಎಂಬ ಪರಿಕಲ್ಪನೆಯನ್ನು ಪ್ರಿಯಾಂಕಾ ಗಾಂಧಿ ಹರಿಬಿಟ್ಟಿದ್ದಾರೆ. ಉದ್ಯೋಗ ಸೃಷ್ಟಿಯ ಕಡೆಗೆ ರಾಜ್ಯ ದಾಪುಗಾಲಿಡುತ್ತಿರುವಾಗ ಕರ್ನಾಟಕ ಕಾಂಗ್ರೆಸ್ ನಿರುದ್ಯೋಗ ಬಯಸುತ್ತಿದೆ.

    ಈ ಮೊದಲು ಕಾಲೇಜು ವಿದ್ಯಾರ್ಥಿಗಳನ್ನು ನೀವು ವಂಚಿಸಿದ್ದೀರಿ. ವಿದ್ಯಾರ್ಥಿಗಳಿಗೆ ಕಾಲೇಜಿಗೆ ಹೋಗಲು ಅನುಕೂಲವಾಗಲು ಬಡ್ಡಿ ರಹಿತ ಸಾಲ ನೀಡುತ್ತೇವೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಮಧ್ಯಪ್ರದೇಶದಲ್ಲಿ ಹೇಳಿತ್ತು. ಚುನಾವಣೆ ಕಳೆದ ಮೇಲೆ ಅದರ ಬಗ್ಗೆ ತುಟಿಪಿಟಿಕ್ ಎನ್ನಲಿಲ್ಲ. ಮಹಿಳೆಯರಿಗೆ ನೀಡಿದ ಸ್ಮಾರ್ಟ್ ಫೋನ್ ಭರವಸೆಯೂ ಹಾಗೆಯೇ.

    ನಿರುದ್ಯೋಗಿ ಯುವಕ – ಯುವತಿಯರಿಗೆ 2,500 ರೂ. ಮಾಸಾಶನ ಕೊಡುತ್ತೇವೆ ಎಂದು ಛತ್ತೀಸ್‌ಘಡದಲ್ಲಿಯೂ ಇದೇ ಕಾಂಗ್ರೆಸ್ ಪಕ್ಷ ಹೇಳಿತ್ತು. ಆದರೆ ಚುನಾವಣೆ ಮುಗಿದ ಮೇಲೆ ಕಾಂಗ್ರೆಸ್ಸಿಗರಿಗೆ ಅದರ ನೆನಪೇ ಇರಲಿಲ್ಲ. ವಿಧವೆಯರಿಗೆ ತಿಂಗಳಿಗೆ 1,000 ಮಾಸಿಕ ಪಿಂಚಣಿ ಕತೆಯೂ ಅಷ್ಟೇ, ಚುನಾವಣಾ ಘೋಷಣೆಗೆ ಮಾತ್ರ ಸೀಮಿತ.

    ಕರ್ನಾಟಕ ಕಾಂಗ್ರೆಸ್ ರಾಜ್ಯದಲ್ಲಿ ಇನ್ನಷ್ಟು ಯೋಜನೆ ಘೋಷಿಸಲಿ. ಪ್ರತಿಯೊಂದು ಯೋಜನೆಯೂ ಆ ಪಕ್ಷ ಅಸ್ತಿತ್ವಕ್ಕೆ ನಡೆಸುತ್ತಿರುವ ಹೆಣಗಾಟವನ್ನು ಜಗಜ್ಜಾಹೀರು ಮಾಡುತ್ತದೆ. ಜತೆಗೆ ಪ್ರಿಯಾಂಕಾ ಅವರಿಗೆ ಈ ಕ್ಷಣಕ್ಕೆ ಹೇಳಿದ್ದು ಮರುಕ್ಷಣಕ್ಕೆ ನೆನಪಿರುವುದಿಲ್ಲ ಎಂಬುದು ಕರ್ನಾಟಕದ ಜನತೆಗೆ ಗೊತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಈ ಚುನಾವಣೆಯಲ್ಲಿ ಮಹಿಳೆಯರಿಗೇ ಹೆಚ್ಚು ಟಿಕೆಟ್ ಕೊಡ್ಬೇಕು – ಕಾಂಗ್ರೆಸ್ ಹೈಕಮಾಂಡ್‌ಗೆ ಉಮಾಶ್ರೀ ಮನವಿ

    ಈ ಚುನಾವಣೆಯಲ್ಲಿ ಮಹಿಳೆಯರಿಗೇ ಹೆಚ್ಚು ಟಿಕೆಟ್ ಕೊಡ್ಬೇಕು – ಕಾಂಗ್ರೆಸ್ ಹೈಕಮಾಂಡ್‌ಗೆ ಉಮಾಶ್ರೀ ಮನವಿ

    ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಅತಿಹೆಚ್ಚು ಮಹಿಳೆಯರಿಗೆ ಅವಕಾಶ ಕೊಡಬೇಕು ಎಂದು ಮಾಜಿ ಸಚಿವೆ ಉಮಾಶ್ರೀ (Umashree) ಅವರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಅವರಲ್ಲಿ ಮನವಿ ಮಾಡಿದ್ದಾರೆ.

    ಕಾಂಗ್ರೆಸ್ ಮಹಿಳಾ ಘಟಕದಿಂದ (Karnataka Pradesh Mahila Congress) ಕೆಪಿಸಿಸಿ (KPCC) ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ `ನಾ ನಾಯಕಿ’ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರನ್‌ವೇ ಸಿದ್ದವಾಗಿದೆ, ಕೌಶಲ್ಯಗಳನ್ನು ಕಲಿತು ಟೇಕಾಫ್‌ ಆಗಿ – ಯುವ ಜನತೆಗೆ ಮೋದಿ ಕರೆ

    ಬೆಂಗಳೂರು ಅರಮನೆ ಮೈದಾನದಲ್ಲಿ (Bengaluru Palace Ground) ಜನವರಿ 16ರಂದು `ನಾ ನಾಯಕಿ’ ಸಮಾವೇಶ ನಡೆಯಲಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ದಾರೆ. ಅಲ್ಲದೇ ಕಾಂಗ್ರೆಸ್‌ನ ಮಾಜಿ ಮಹಿಳಾ ಶಾಸಕರು, ಹಾಲಿ ನಾಯಕಿರೂ ಸೇರಿದಂತೆ ಎಲ್ಲರೂ ಬರಲಿದ್ದಾರೆ. ಇದೇ ವೇಳೆ ಮಹಿಳಾ ಘಟಕದ ಹಲವು ಬೇಡಿಕೆಗಳನ್ನ ಮುಂದಿಡಲಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಡಾಲಿಗೂ ಬೇಗ ಮದುವೆ ಆಗೋಕೆ ಹೇಳಿದ್ದೇನೆ: ವಸಿಷ್ಠ ಸಿಂಹ

    ಈ ಬಾರಿ ವಿಧಾನಸಭೆ ಚುನಾವಣೆಗೆ 109 ಮಹಿಳೆಯರು ಟಿಕೆಟ್ ಆಕಾಂಕ್ಷಿಗಳಾಗಿ ಅರ್ಜಿ ಹಾಕಿದ್ದಾರೆ. ಈ ಬಾರಿ ಕಾಂಗ್ರೆಸ್ ನಿಂದ ಹೆಚ್ಚು ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡಬೇಕು. ಈ ಬಗ್ಗೆ `ನಾ ನಾಯಕಿ’ ಪ್ರಿಯಾಂಕಾ ಗಾಂಧಿ ಅವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.

    ಕಾಂಗ್ರೆಸ್ ಮಹಿಳಾ ಘಟಕದ (Karnataka Pradesh Mahila Congress) ಅಧ್ಯಕ್ಷೆ ಪುಷ್ಪಾ ಅಮರನಾಥ್ (Pushpa Amarnath) ಮಾತನಾಡಿ, ಮಹಿಳೆಯರಿಗಾಗಿ ವಿಶೇಷ ಹಾಗೂ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು. ಈಗಾಗಲೇ ಈ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಲ್ಲಾಜಮ್ಮ ಸೇರಿದಂತೆ ಇತರ ಮಹಿಳಾ ನಾಯಕಿಯರು ಹಾಜರಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k