Tag: ನಿಜಾಮುದ್ದೀನ್ ಮರ್ಕಜ್

  • ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡಿದ್ರೆ ಕೊರೊನಾ ಬರಲ್ಲ: ತೀರ್ಥ್ ಸಿಂಗ್ ರಾವತ್

    ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡಿದ್ರೆ ಕೊರೊನಾ ಬರಲ್ಲ: ತೀರ್ಥ್ ಸಿಂಗ್ ರಾವತ್

    – ಕೊರೊನಾ ಮಾರ್ಗಸೂಚಿ ಪಾಲಿಸಿ ಕುಂಭಮೇಳ
    – ಕುಂಭಮೇಳ, ಮರ್ಕಜ್ ನಡುವಿನ ಹೋಲಿಕೆ ತಪ್ಪು

    ಡೆಹ್ರಾಡೂನ್: ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳವನ್ನು, ನಿಜಾಮುದ್ದೀನ್ ಮರ್ಕಜ್‍ನೊಂದಿಗೆ ಹೋಲಿಕೆ ಮಾಡಬೇಡಿ. ಕುಂಭಮೇಳದಲ್ಲಿ ಗಂಗಾಸ್ಥಾನ ಮಾಡಿದರೆ ಕೊರೊನಾ ಬರುವುದಿಲ್ಲ ಎಂದು ಉತ್ತರಾಖಂಡ ಮುಖ್ಯಮಂತ್ರಿ ತೀರ್ಥ್ ಸಿಂಗ್ ರಾವತ್ ಹೇಳಿಕೆ ನೀಡಿದ್ದಾರೆ.

    ಉತ್ತರಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳ ಮತ್ತು ನಿಜಾಮುದ್ದೀನ್ ಮರ್ಕಜ್ ಕುರಿತು ಸ್ಥಳೀಯ ಮಾಧ್ಯಮವೊಂದರ ಪ್ರಶ್ನೆಗೆ ಉತ್ತರಿಸಿದ ತೀರ್ಥ್ ಸಿಂಗ್ ರಾವತ್ ಅವರು, ಕುಂಭಮೇಳ ಮತ್ತು ನಿಜಾಮುದ್ದೀನ್ ಮರ್ಕಜ್ ಎರಡು ಧಾರ್ಮಿಕ ಕಾರ್ಯಕ್ರಮಗಳನ್ನು ಹೋಲಿಕೆ ಮಾಡಬೇಡಿ. ನಿಜಾಮುದ್ದೀನ್ ಮರ್ಕಜ್ ಕಟ್ಟಡದಲ್ಲಿ ನಡೆದರೆ ಕುಂಭಮೇಳ ತೆರೆದ ಜಾಗದಲ್ಲಿ ನಡೆಯುತ್ತದೆ. ಅದಲ್ಲದೆ ನಿಜಾಮುದ್ದೀನ್ ಮರ್ಕಜ್ ಕಾರ್ಯಕ್ರಮಕ್ಕೆ ವಿದೇಶಿಗರು ಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.

    ಕುಂಭಮೇಳದಲ್ಲಿ ಹೊರಗಿನಿಂದ ಯಾರು ಬರುವುದಿಲ್ಲ ಎಲ್ಲರು ನಮ್ಮವರೆ ಆಗಿರುತ್ತಾರೆ. ಆದರೆ ನಿಜಾಮುದ್ದೀನ್ ಮರ್ಕಜ್‍ಗೆ ಬೇರೆ ದೇಶಗಳಿಂದ ಜನ ಬರುತ್ತಾರೆ. ಮರ್ಕಜ್ ನಡೆದಾಗ ಕೊರೊನಾ ಕುರಿತು ಹೆಚ್ಚಿನ ಅರಿವು ಇರಲಿಲ್ಲ ಮತ್ತು ಮಾರ್ಗಸೂಚಿಗಳಿರಲಿಲ್ಲ. ಇದರೊಂದಿಗೆ ಮರ್ಕಜ್‍ಗೆ ಆಗಮಿಸಿದವರು ಯಾರು ಎಷ್ಟು ದಿನ ಉಳಿದುಕೊಳ್ಳಲಿದ್ದಾರೆ ಮತ್ತು ಒಟ್ಟು ಜನಸಂಖ್ಯೆಯ ಸರಿಯಾದ ಯೋಜನೆ ಇರಲಿಲ್ಲ ಎಂದಿದ್ದಾರೆ.

    ಆದರೆ ಪ್ರಸ್ತುತ ಕೊರೊನಾ ಕುರಿತು ಹೆಚ್ಚಿನ ಅರಿವು ಮೂಡಿದ್ದು, ಸರಿಯಾದ ಮಾರ್ಗಸೂಚಿಗಳನ್ನು ತೆಗೆದುಕೊಂಡು ಕುಂಭಮೇಳ ನಡೆಸಲಾಗುತ್ತಿದೆ. ಕುಂಭಮೇಳ 12 ವರ್ಷಗಳಿಗೊಮ್ಮೆ ಬರುತ್ತದೆ. ಹಾಗೆ ಕುಂಭಮೇಳ ಲಕ್ಷಾಂತರ ಜನರ ನಂಬಿಕೆ ಮತ್ತು ಭಾವನೆಗಳೊಂದಿಗೆ ನಂಬಿಕೆ ಹೊಂದಿರುತ್ತದೆ ಎಂದು ಅಭಿಪ್ರಾಯಪಟ್ಟರು.

    ಈಗಾಗಲೇ ಕುಂಭಮೇಳಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಕುಂಭಮೇಳವನ್ನು ಯಶಸ್ವಿಯಾಗಿ ನಡೆಸಲು ಕೋವಿಡ್-19ನ ಸವಾಲು ಮುಂದಿದೆ. ಈ ಕುರಿತು ಹೆಚ್ಚಿನ ಗಮನ ಹರಿಸಿ ಜನರ ಆರೋಗ್ಯ ದೃಷ್ಟಿಯಿಂದ ಸರಿಯಾದ ಮುಂಜಾಗೃತ ಕ್ರಮಗಳನ್ನು ತೆಗೆದುಕೊಂಡು ಕುಂಭಮೇಳ ನಡೆಸುವುದಾಗಿ ತಿಳಿಸಿದ್ದಾರೆ.

  • ದೆಹಲಿಯಲ್ಲಿ ಕೊರೊನಾ ವಿರುದ್ಧ OPERATION SHIELD

    ದೆಹಲಿಯಲ್ಲಿ ಕೊರೊನಾ ವಿರುದ್ಧ OPERATION SHIELD

    -ಕೊರೊನಾಗೆ ಬ್ರೇಕ್ ಹಾಕಲು ಕೇಜ್ರಿ ಸರ್ಕಾರದಿಂದ 6 ಸೂತ್ರ

    ನವದೆಹಲಿ: ಕೊರೊನಾ ರುದ್ರ ಕುಣಿತಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಬೆದರಿ ಹೋಗಿದೆ. ನಿಜಾಮುದ್ದಿನ್ ಮರ್ಕಜ್ ಪ್ರಕರಣ ಬಳಿಕ ನೋಡ ನೋಡುತ್ತಿದ್ದಂತೆ ಅಂಕಿ ಆಕಾಶಕ್ಕೆ ಏರುತ್ತಿದೆ. ಈ ಮಿಂಚಿನ ಓಟಕ್ಕೊಂದು ಬ್ರೇಕ್ ಹಾಕಲು ಮುಂದಾಗಿರುವ ಕೇಜ್ರಿವಾಲ್ ಸರ್ಕಾರ ಆಪರೇಷನ್ ಶೀಲ್ಡ್ ಔಟ್ ಆರಂಭಿಸಿದ್ದು, ಆರು ಸೂತ್ರಗಳನ್ನು ಜಾರಿ ತರಲು ಮುಂದಾಗಿದೆ.

    ಅಲ್ಲೊಂದು, ಇಲ್ಲೊಂದು ಪ್ರಕರಣ ಎಂದುಕೊಂಡು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಿಡಿತದಲ್ಲಿದ್ದ ಕೊರೊನಾ ಸೋಂಕು ನಿಜಾಮುದ್ದೀನ್ ಮರ್ಕಜ್ ಪ್ರಕರಣ ಬಳಿಕ ನೋಡ ನೋಡುತ್ತಿದ್ದಂತೆ ಹೆಚ್ಚಾಗ ತೊಡಗಿದೆ. ಈವರೆಗೂ 720 ಪ್ರಕರಣಗಳು ಪತ್ತೆಯಾಗಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 450ಕ್ಕೂ ಹೆಚ್ಚು ಕೇಸ್‍ಗಳು ಮರ್ಕಜ್ ಮೂಲದ್ದು ಎಂಬುದು ಇಲ್ಲಿ ಗಮನಿಸಬೇಕಾದ ಗಂಭೀರ ಅಂಶ. ಕೊರೋನಾ ಸಾವು ನೋವಿನ ಅಂಕಿ ಅಂಶ ಕೈ ಮೀರಿ ಆಕಾಶದೆತ್ತರಕ್ಕೆ ಬೆಳೆಯುತ್ತಿದ್ದಂತೆ ದೆಹಲಿ ಸರ್ಕಾರ, ರಾಷ್ಟ್ರ ರಾಜಧಾನಿಯಲ್ಲಿ 100 ಪರ್ಸೆಂಟ್ ಸೀಲ್ಡ್ ಮಾದರಿಯನ್ನು ಜಾರಿಗೆ ತಂದಿದೆ.

    ದೆಹಲಿಯಲ್ಲಿ 25 ಪ್ರದೇಶಗಳನ್ನು ಹಾಟ್‍ಸ್ಪಾಟ್ ಗಳನ್ನು ಗುರುತಿಸಿದ್ದು. ಈ ಪ್ರದೇಶದಲ್ಲಿ ಆಪರೇಷನ್ ಶೀಲ್ಡ್ ಘೋಷಣೆ ಮಾಡಿದ್ದಾರೆ. ಕೊರೊನಾ ವಿರುದ್ಧ ಆಪರೇಷನ್ ಶೀಲ್ಡ್ ಘೋಷಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆರು ಸೂತ್ರಗಳನ್ನು ಜಾರಿಗೆ ತರಲು ಸಿದ್ಧವಾಗಿದ್ದಾರೆ.

    1. ಮೊದಲ ಸೂತ್ರದ ಮೂಲಕ ಇಡೀ ಪ್ರದೇಶವನ್ನು ಸೀಲ್ ಮಾಡುವುದು ಮತ್ತು ಸೋಂಕಿತ ಪ್ರದೇಶವನ್ನು ಮ್ಯಾಪಿಂಗ್ ಮಾಡುವುದು.
    2. ಸೀಲ್ ಮಾಡಿರುವ ಪ್ರದೇಶದಲ್ಲಿರುವ ಎಲ್ಲ ಜನರು ಮನೆಯಲ್ಲೇ ಇರುವುದು ಕಡ್ಡಾಯ
    3. ಈ ತಂತ್ರದಲ್ಲಿ ಸೋಂಕಿತ ವ್ಯಕ್ತಿಯ ಮೊದಲ ಮತ್ತು ಎರಡನೇ ಹಂತದ ಸಂಪರ್ಕಗಳನ್ನು ಗುರುತಿಸಿ ಐಸೊಲೇಷನ್ ಮಾಡುವುದು.
    4. ತುರ್ತು ಅಗತ್ಯ ವಸ್ತುಗಳನ್ನು ಸೀಲ್ಡ್ ಪ್ರದೇಶದಲ್ಲಿ ಹೋಂ ಕ್ವಾರಂಟೇನ್‍ನಲ್ಲಿರುವ ಮಂದಿಗೆ ಸರ್ಕಾರದಿಂದಲೇ ಪೂರೈಕೆ.
    5. ಸ್ಥಳೀಯ ಆಡಳಿತದಿಂದ ಇಡೀ ಪ್ರದೇಶ ಮತ್ತು ಪ್ರತಿ ಮನೆಯನ್ನು ಸ್ಯಾಜಿಟೈಜ್ ಮಾಡುವುದು.
    6. ಇನ್ನು ಸೀಲ್ ಆಗಿರುವ ಪ್ರದೇಶದಲ್ಲಿ ಒಬ್ಬೇ ಒಬ್ಬ ವ್ಯಕ್ತಿಯನ್ನು ಬಿಡದೇ ಪ್ರತಿ ಮನೆಗೂ ಹೋಗಿ ಅವರ ಆರೋಗ್ಯ ತಪಾಸಣೆ ನಡೆಸುವುದು. ರೋಗದ ಲಕ್ಷಣಗಳು ಕಂಡು ಬಂದ ವ್ಯಕ್ತಿಯನ್ನು ಐಸೊಲೇಷನ್ ಮಾಡುವುದು.

    ಹೀಗೆ ಸಾಮಾನ್ಯ ಜನರು ಮಾತ್ರವಲ್ಲದೇ ವೈದ್ಯರನ್ನು ಕೂಡ ಕಾಡುತ್ತಿರುವ ಕೊರೊನಾ ವಿರುದ್ಧ ಆಪರೇಷನ್ 100% ಸೀಲ್ ಜಾರಿಗೆ ತಂದಿರುವ ದೆಹಲಿ ಸರ್ಕಾರ ರಣ ಕಹಳೆ ಮೊಳಗಿಸಿದೆ. ಆರು ಸೂತ್ರಗಳ ಮೂಲಕ ಕೊರೊನಾ ಹೆಮ್ಮಾರಿಯನ್ನು ಹಿಮ್ಮೆಟ್ಟಿಸಲು ಸಿದ್ಧವಾಗಿದೆ.

  • ತಬ್ಲೀಘಿ ಕೊರೊನಾ ಎಫೆಕ್ಟ್- ಮುಸ್ಲಿಂ ವ್ಯಕ್ತಿಗಳ ಮೇಲೆ ಹಲ್ಲೆ

    ತಬ್ಲೀಘಿ ಕೊರೊನಾ ಎಫೆಕ್ಟ್- ಮುಸ್ಲಿಂ ವ್ಯಕ್ತಿಗಳ ಮೇಲೆ ಹಲ್ಲೆ

    ಬಾಗಲಕೋಟೆ: ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿಯ ಜಮಾತ್ ನಲ್ಲಿ ಭಾಗಿಯಾದ ತಬ್ಲೀಘಿಗಳಿಂದ ವೇಗವಾಗಿ ಕೊರೊನಾ ಹಬ್ಬುತ್ತಿದೆ. ಈ ಹಿನ್ನೆಲೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ಬಾಗಲಕೋಟೆಯಲ್ಲಿ ಹಲ್ಲೆ ನಡೆಸಲಾಗಿದೆ.

    ಜಿಲ್ಲೆಯ ಮುಧೋಳ ತಾಲೂಕಿನ ಬಿದರಿ ಗ್ರಾಮದಲ್ಲಿ ಘಟನೆ ನಡೆದಿದ್ದು, ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಗ್ರಾಮದ ಮುಸ್ಲಿಂ ವ್ಯಕ್ತಿಗಳನ್ನು ಮಾರ್ಗಮಧ್ಯೆ ನಿಲ್ಲಿಸಿ ಒದ್ದು, ಕೋಲಿನಿಂದ ಹೊಡೆದು ಹಲ್ಲೆ ಮಾಡಲಾಗಿದೆ. ನಿಮ್ಮಿಂದಲೇ ಕೊರೊನಾ ಹಬ್ಬುತ್ತಿದೆ. ನಮ್ಮ ಗ್ರಾಮದ ಕಡೆ ಯಾಕೆ ಬರುತ್ತಿದ್ದೀರಿ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲಾಗಿದೆ.

    ನಿಮ್ಮ ಗ್ರಾಮದ ಕಡೆ ಬರುವುದಿಲ್ಲ ಬಿಟ್ಟು ಬಿಡಿ ಎಂದು ಮುಸ್ಲಿಂ ವ್ಯಕ್ತಿಗಳು ಬೇಡಿಕೊಂಡಿದ್ದಾರೆ. ಗ್ರಾಮದ ಕಡೆ ಎಂದೂ ಕಾಲಿಡಬೇಡಿ ಎಂದು ಎಚ್ಚರಿಕೆ ನೀಡಿ ಗ್ರಾಮಸ್ಥರು ಬಿಟ್ಟು ಕಳುಹಿಸಿದ್ದಾರೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಕಳೆದ 24 ಗಂಟೆಯಲ್ಲಿ 27 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ ನೂರರ ಗಡಿ ದಾಟಿದೆ. ಭಾನುವಾರ ಸುಮಾರು 12 ಜನರನ್ನು ಕೊರೊನಾ ಬಲಿ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಇನ್ನು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4 ಸಾವಿರದ ಗಡಿ ದಾಟಿದೆ.

    ಭಾನುವಾರ ಒಂದೇ ದಿನ ಸುಮಾರು 500ಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದ ನಾಲ್ಕು ದಿನಗಳಿಂದ ಸೋಂಕಿಂತರ ಸಂಖ್ಯೆ ದ್ವಿಗುಣವಾಗಿ ಏರಿಕೆಯಾಗ್ತಿರೋದು ಆತಂಕಕ್ಕೆ ಕಾರಣವಾಗಿದೆ. ಏಪ್ರಿಲ್ 1ರಂದು ದೇಶದಲ್ಲಿ ಅಂದಾಜು 2 ಸಾವಿರ ಸೋಂಕಿತರಿದ್ದರು. ಕೇವಲ ನಾಲ್ಕೈದು ದಿನಗಳಲ್ಲಿ ಈ ಸಂಖ್ಯೆ ಡಬಲ್ ಆಗಿದೆ.

    ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿಯ ಜಮಾತ್ ನಲ್ಲಿ ಭಾಗಿಯಾದ ತಬ್ಲೀಘಿಗಳಿಂದ ವೇಗವಾಗಿ ಕೊರೊನಾ ಹಬ್ಬುತ್ತಿದೆ. ಶೇ.30ರಷ್ಟು ಕೊರೊನಾ ಸೋಂಕಿತ ಪ್ರಕರಣಗಳು ದೆಹಲಿ ಜಮಾತ್ ಲಿಂಕ್ ಹೊಂದಿವೆ. ಇದೇ ರೀತಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾದಲ್ಲಿ ಈ ಮುಂದಿನ ಏಳು ದಿನಗಳಲ್ಲಿ ದ್ವಿಗುಣವಾಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿದೆ.

  • ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಪಾಸಿಟಿವ್- 121ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ

    ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಪಾಸಿಟಿವ್- 121ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ

    ಬೀದರ್: ಜಿಲ್ಲೆಯಲ್ಲಿ ಒಂದೇ ದಿನ 11 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ.

    ಬೀದರ್ ನಿಂದ ಒಟ್ಟು 27 ಜನರು ದೆಹಲಿ ನಿಜಾಮುದ್ದೀನ್ ಮರ್ಕಜ್‍ಗೆ ತೆರಳಿದ್ದರು. 27 ಜನರಲ್ಲಿ 11 ಮಂದಿಗೆ ಕೊರೊನಾ ತಗುಲಿದೆ ಎಂದು ಬೀದರ್ ಜಿಲ್ಲಾಧಿಕಾರಿ ಮಹದೇವ್ ಸ್ಪಷ್ಟಪಡಿಸಿದ್ದಾರೆ.

    ರಾಜ್ಯದ ಬಹುತೇಕ ಜಿಲ್ಲೆಗಳಿಂದ ಮೌಲ್ವಿಗಳು ದೆಹಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸ್ ಆಗಿದ್ದಾರೆ. ಪಬ್ಲಿಕ್ ಟಿವಿಗೆ ಲಭ್ಯವಾದ ಪ್ರಾಥಮಿಕ ಮಾಹಿತಿ ಪ್ರಕಾರ, ರಾಜ್ಯದಿಂದ ದೆಹಲಿಗೆ ಹೋಗಿ ಬಂದವರ ಸಂಖ್ಯೆ 430 ದಾಟುತ್ತದೆ. ದೆಹಲಿಗೆ ಹೋಗಿ ಬಂದವರಿಗೆ ಬಲೆ ಬೀಸಿರುವ ರಾಜ್ಯ ಸರ್ಕಾರ, ಇದುವರೆಗೆ 391 ಮಂದಿಯನ್ನು ಪತ್ತೆ ಹಚ್ಚಿದೆ. ಈ ಪೈಕಿ 200 ಮಂದಿಯನ್ನು ಆಸ್ಪತ್ರೆಗಳಲ್ಲಿ ಇರಿಸಿ ನಿಗಾ ವಹಿಸಲಾಗಿದೆ. ಉಳಿದವರನ್ನು ಹೋಂ ಕ್ವಾರಂಟೇನ್ ಮಾಡಲಾಗಿದೆ. ಉಳಿದವರ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಬುಧವಾರ ತಿಳಿಸಿದ್ದರು.

  • ಮತ್ತಷ್ಟು ಆತಂಕಕ್ಕೆ ಕಾರಣವಾಗ್ತಿದೆ ನಿಜಾಮುದ್ದೀನ್ ಜಮಾತ್ ಪ್ರಕರಣ

    ಮತ್ತಷ್ಟು ಆತಂಕಕ್ಕೆ ಕಾರಣವಾಗ್ತಿದೆ ನಿಜಾಮುದ್ದೀನ್ ಜಮಾತ್ ಪ್ರಕರಣ

    ನವದೆಹಲಿ: ದೆಹಲಿಯ ನಿಜಾಮುದ್ದೀನ್ ತಬ್ಲಘಿ ಜಮಾತ್ ಪ್ರಕರಣ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಜಮಾತ್ ನಲ್ಲಿ ದಕ್ಷಿಣ ಭಾರತದವರೇ ಜನರು ಹೆಚ್ಚು ಎನ್ನುವ ಮಾಹಿತಿ ಲಭ್ಯವಾಗುತ್ತಿದೆ. ಮರ್ಕಜ್‍ನಲ್ಲಿದ್ದ ಜನರನ್ನು ತಪಾಸಣೆ ಒಳಪಡಿಸಿ ಸ್ಥಳಾಂತರ ಮಾಡುವ ಕೆಲಸ ಮಾಡಲಾಗುತ್ತಿದೆ.

    ಕೇಂದ್ರ ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ ಈ ಜಮಾತ್ ನಲ್ಲಿ ಭಾಗಿಯಾಗಿದ್ದ 2,137 ಜನರನ್ನು ಗುರುತಿಸಲಾಗಿದೆ. ಈ ಪೈಕಿ 1,339 ಜನರನ್ನು ಸ್ಕ್ರೀನಿಂಗ್ ಮಾಡಿದ್ದು ದೆಹಲಿಯ ಲೋಕನಾಯಕ್, ಏಮ್ಸ್, ಆರ್ ಜಿಎಸ್‍ಎಸ್, ಜಿಟಿಬಿ ಮತ್ತು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆ ಗೆ ಶಿಫ್ಟ್ ಮಾಡಲಾಗಿದೆ. ಇವರೆಲ್ಲರ ಸ್ಯಾಂಪಲ್ ಗಳನ್ನ ಪಡೆದು ಲ್ಯಾಬ್ ಗಳಿಗೆ ಕಳುಹಿಸಿದ್ದು ವರದಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ.

    ಈ ಜಮಾತ್ ನಲ್ಲಿ ಮಧ್ಯಪ್ರದೇಶದಿಂದ 107, ತೆಲಂಗಾಣದಿಂದ 15 , ಮೇಘಾಲಯದಿಂದ 7, ತಮಿಳುನಾಡಿನಿಂದ 1500 ಜನರು ಭಾಗಿಯಾಗಿದ್ದರು. ಈ ಪೈಕಿ ತಮಿಳುನಾಡಿಗೆ 1,130 ಮಂದಿ ವಾಪಸ್ ಆಗಿದ್ದು, ಐವರಲ್ಲಿ ಸೋಂಕು ಕಾಣಿಸಿಕೊಂಡಿದ್ದು ಸುಮಾರು 50 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಕರ್ನಾಟಕದಿಂದಲೂ ಸುಮಾರು 300 ಮಂದಿ ಇಲ್ಲಿ ಭಾಗಿಯಾಗಿದ್ದರು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದು, ಆರಂಭದಲ್ಲಿ 53 ಜನರು ಎನ್ನಲಾಗಿತ್ತು.

    ಬೀದರ್, ಕಲಬುರಗಿ, ಧಾರವಾಡ, ಬೆಂಗಳೂರು ಸೇರಿ ಹಲವು ನಗರಗಳಿಂದ ಜನರು ಜಮಾತ್ ಗೆ ತೆರಳಿದ್ದರು. ಈಗಾಗಲೇ 13 ಮಂದಿಯನ್ನು ತಪಾಸಣೆಗೆ ಒಳಪಡಿಸಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಎಲ್ಲ ಬೆಳವಣಿಗಳ ನಡುವೆ ನಾವು ಮರ್ಕಜ್‍ನಿಂದ ಸ್ಥಳಾಂತರಕ್ಕೆ ಮೊದಲೇ ಮನವಿ ಮಾಡಿದ್ದೇವೆ. ಆದರೆ ಸರ್ಕಾರ ನಮ್ಮನ್ನು ಸ್ಥಳಾಂತರ ಮಾಡಿರಲಿಲ್ಲ ಎಂದು ಮರ್ಕಜ್ ಆಡಳಿತ ಮಂಡಳಿ ಆರೋಪಿಸಿದೆ. ಇದರ ಬೆನ್ನೆಲ್ಲೇ ಇಡೀ ಪ್ರಕರಣಕ್ಕೆ ಕಾರಣಾರಾದ ನಿಜಾಮುದ್ದೀನ್ ಮಸೀದಿ ಮೌಲ್ವಿ ಮೌಲಾನಾ ಸಾದ್ ವಿರುದ್ಧ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.