Tag: ನಿತಿಶ್‌ ಕುಮಾರ್‌

  • ನೇಮಕಾತಿ ಪರೀಕ್ಷೆಗಳ ಏಕರೂಪ ಶುಲ್ಕ; ಪ್ರಾಥಮಿಕ ಹಂತಕ್ಕೆ 100 ರೂ., ಮುಖ್ಯ ಪರೀಕ್ಷೆ ಉಚಿತ

    ನೇಮಕಾತಿ ಪರೀಕ್ಷೆಗಳ ಏಕರೂಪ ಶುಲ್ಕ; ಪ್ರಾಥಮಿಕ ಹಂತಕ್ಕೆ 100 ರೂ., ಮುಖ್ಯ ಪರೀಕ್ಷೆ ಉಚಿತ

    – ಚುನಾವಣೆಗೂ ಮುನ್ನ ಯುವಕರ ಸೆಳೆಯಲು ಮಹತ್ವದ ಘೋಷಣೆ ಮಾಡಿದ ಬಿಹಾರ ಸರ್ಕಾರ

    ಪಾಟ್ನಾ: ಬಿಹಾರ (Bihar) ಸರ್ಕಾರವು ರಾಜ್ಯದ ಎಲ್ಲಾ ನೇಮಕಾತಿ ಪರೀಕ್ಷೆಗಳ ಪ್ರಾಥಮಿಕ ಹಂತಕ್ಕೆ ಏಕರೂಪವಾಗಿ 100 ರೂ. ಶುಲ್ಕವನ್ನು ನಿಗದಿಪಡಿಸುವ ಪ್ರಮುಖ ನಿರ್ಧಾರವನ್ನು ಕೈಗೊಂಡಿದೆ. ಇದರ ಜೊತೆಗೆ, ಮುಖ್ಯ ಪರೀಕ್ಷೆಗೆ ಯಾವುದೇ ಶುಲ್ಕವನ್ನು ವಿಧಿಸದಿರಲು ಕೂಡ ನಿರ್ಧರಿಸಲಾಗಿದೆ.

    ಮುಖ್ಯಮಂತ್ರಿ ನಿತಿಶ್ ಕುಮಾರ್ (Nitish Kumar) ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾಮಾನ್ಯ ಆಡಳಿತ ಇಲಾಖೆ (ಜಿಎಡಿ) ಮುಂದಿಟ್ಟ ಈ ಕ್ರಮಕ್ಕೆ ಅನುಮೋದನೆ ನೀಡಲಾಗಿದೆ. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ಉದ್ಯಮ ಆರಂಭಿಸಲು ಆಸಕ್ತಿ ಇರುವ ಮಹಿಳೆಯರಿಗೆ ಗುಡ್ ನ್ಯೂಸ್!

    ಸರ್ಕಾರದ ಈ ಕ್ರಮವು ಅಭ್ಯರ್ಥಿಗಳಿಗೆ ಆರ್ಥಿಕ ಒತ್ತಡವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಪರೀಕ್ಷೆಗಳಲ್ಲಿ ಭಾಗವಹಿಸಲು ಸುಲಭವಾಗಲಿದೆ. ಪ್ರಾಥಮಿಕ ಪರೀಕ್ಷೆಗೆ 100 ರೂ. ಶುಲ್ಕವು ಎಲ್ಲಾ ವಿಭಾಗಗಳಿಗೆ ಏಕರೂಪವಾಗಿರುತ್ತದೆ. ಆದರೆ, ಮುಖ್ಯ ಪರೀಕ್ಷೆಗೆ ಶುಲ್ಕವಿಲ್ಲದಿರುವುದು ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶವನ್ನು ಒದಗಿಸಲಿದೆ.

    ಬಿಹಾರದ ಯುವಕರಿಗೆ ಸರ್ಕಾರಿ ಉದ್ಯೋಗಗಳನ್ನು ನೀಡುವುದು ತಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ರಾಜ್ಯದ ಯುವಕರಿಗೆ ಅವಕಾಶಗಳನ್ನು ಒದಗಿಸಲು ಮತ್ತು ಅವರ ಭವಿಷ್ಯವನ್ನು ಸುರಕ್ಷಿತಗೊಳಿಸಲು ನಮ್ಮ ಸರ್ಕಾರ ಹಲವಾರು ದೃಢವಾದ ಕ್ರಮಗಳನ್ನು ತೆಗೆದುಕೊಂಡಿದೆ. ಈಗ, ನಾವು ಯುವಕರ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದು ಸಿಎಂ ನಿತೀಶ್ ಕುಮಾರ್ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಝೆಲೆನ್‌ಸ್ಕಿ, EU ನಾಯಕರನ್ನು ಕಚೇರಿಗೆ ಕರೆಸಿ ಪುಟಿನ್‌ಗೆ ಕಾಲ್‌ – ಬ್ರೋಕರ್‌ ಕೆಲ್ಸ ಮಾಡಿ ಯುದ್ಧ ಕೊನೆಯಾಗಲಿದೆ ಎಂದ ಟ್ರಂಪ್‌

  • ಇಂದು ದೆಹಲಿಯಲ್ಲಿ ಎನ್‌ಡಿಎ ಮಹತ್ವದ ಸಭೆ – ಜೂ.9ರಂದು ಮೋದಿ ಪ್ರಮಾಣ ವಚನ ಸ್ವೀಕಾರ?

    ಇಂದು ದೆಹಲಿಯಲ್ಲಿ ಎನ್‌ಡಿಎ ಮಹತ್ವದ ಸಭೆ – ಜೂ.9ರಂದು ಮೋದಿ ಪ್ರಮಾಣ ವಚನ ಸ್ವೀಕಾರ?

    ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶ (Lok Sabha Election Result) ಹೊರಬಿದ್ದ ಬೆನ್ನಲ್ಲೇ ಸರ್ಕಾರ ರಚನೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಆರಂಭಗೊಂಡಿದೆ. ಈ ಹಿನ್ನೆಲೆ ಇಂದು ದೆಹಲಿಯಲ್ಲಿ (New Delhi) ಎನ್‌ಡಿಎ (NDA) ಮೈತ್ರಿಕೂಟದ ಮಹತ್ವದ ಸಭೆ ನಡೆಯಲಿದೆ.

    2024ರ ಲೋಕಸಭಾ ಚುನಾವಣೆಯಲ್ಲಿ ಮತದಾರ ಯಾರೂ ಊಹಿಸದ ತೀರ್ಪು ನೀಡಿದ್ದು, 400 ಪಾರ್ ನಿರೀಕ್ಷೆಯಲ್ಲಿದ್ದ ಎನ್‌ಡಿಎಗೆ ಬಿಗ್ ಶಾಕ್ ಉಂಟಾಗಿದೆ. ಇಂದು ದೆಹಲಿಯಲ್ಲಿ ನಡೆಯಲಿರುವ ಸಭೆಗೆ ಎಲ್ಲಾ ಮೈತ್ರಿ ನಾಯಕರನ್ನು ಆಹ್ವಾನಿಸಲಾಗಿದೆ. ಅಲ್ಲದೇ ಈ ಸಭೆಯಲ್ಲಿ ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಭಾಗಿಯಾಗಲಿದ್ದಾರೆ. ಸಂಜೆ 4 ಗಂಟೆಯ ವೇಳೆಗೆ ಸಭೆ ನಡೆಯಲಿದೆ. ಸಭೆಯಲ್ಲಿ ಸರ್ಕಾರ ರಚನೆ, ಮುಂದಿನ ರಣತಂತ್ರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಇದನ್ನೂ ಓದಿ: ಮೊದಲ ಹಂತದಲ್ಲೇ ಬಿಜೆಪಿಗೆ ಭಾರೀ ಹಿನ್ನಡೆ – ಮಿಡಲ್‌ ಓವರ್‌ನಲ್ಲಿ ಹೆಚ್ಚು ಸ್ಕೋರ್‌ – ಯಾವ ಹಂತದಲ್ಲಿ ಯಾರಿಗೆ ಎಷ್ಟು ಸ್ಥಾನ?

    ಇನ್ನೊಂದೆಡೆ ರಾಷ್ಟ್ರಪತಿ ಭವನದ ಸರ್ಕ್ಯೂಟ್-1ಕ್ಕೆ ಇಂದಿನಿಂದ ಜೂ.9ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿರುವುದಾಗಿ ರಾಷ್ಟ್ರತಿ ಭವನ ತಿಳಿಸಿದೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಸಿದ್ಧತೆಯ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಜೂ.9ರಂದು ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮೂರನೇ ಬಾರಿ ಎನ್‌ಡಿಎಗೆ ಆಶೀರ್ವಾದ ಸಿಕ್ಕಿದೆ: ದೇಶದ ಜನತೆಗೆ ಮೋದಿ ಕೃತಜ್ಞತೆ