Tag: ನಿತ್ಯಾನಂದ ರಾಯ್

  • ಭಾರತ ತೊರೆಯುವಂತೆ 81 ಚೀನಾ ಪ್ರಜೆಗಳಿಗೆ ನೋಟಿಸ್‌: ಕೇಂದ್ರ ಸಚಿವ ನಿತ್ಯಾನಂದ ರಾಯ್‌

    ಭಾರತ ತೊರೆಯುವಂತೆ 81 ಚೀನಾ ಪ್ರಜೆಗಳಿಗೆ ನೋಟಿಸ್‌: ಕೇಂದ್ರ ಸಚಿವ ನಿತ್ಯಾನಂದ ರಾಯ್‌

    ನವದೆಹಲಿ: ಭಾರತ ತೊರೆಯುವಂತೆ 81 ಚೀನಾ ಪ್ರಜೆಗಳಿಗೆ ನೋಟಿಸ್‌ ನೀಡಲಾಗಿದೆ ಎಂದು ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ನಿತ್ಯಾನಂದ ರಾಯ್‌ ತಿಳಿಸಿದ್ದಾರೆ.

    ಲೋಕಸಭೆಯಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಸಚಿವ ರಾಯ್‌ ಈ ಬಗ್ಗೆ ವಿವರಿಸಿದ್ದಾರೆ. ಇದನ್ನೂ ಓದಿ: ಹಿಜಬ್ ನಿಷೇಧದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ವಿಳಂಬ: ಸಿಜೆಐ

    2019ರಿಂದ 2021ರ ಅವಧಿಯಲ್ಲಿ 81 ಚೀನಾ ಪ್ರಜೆಗಳಿಗೆ ಭಾರತ ಬಿಟ್ಟು ಹೊರಡುವಂತೆ ನೋಟಿಸ್‌ ನೀಡಲಾಗಿದೆ. ವೀಸಾ ಷರತ್ತುಗಳನ್ನು ಉಲ್ಲಂಘಿಸಿದ ಮತ್ತು ಇತರ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿದ್ದ ಆರೋಪವಿರುವ 726 ಇತರರನ್ನು ಪ್ರತಿಕೂಲ ಪಟ್ಟಿಯಲ್ಲಿ ಇರಿಸಲಾಗಿದೆ ಎಂದು ರಾಯ್‌ ಮಾಹಿತಿ ನೀಡಿದ್ದಾರೆ.

    117 ಜನರನ್ನು ಗಡೀಪಾರು ಮಾಡಲಾಗಿದೆ ಎಂದು ನಿತ್ಯಾನಂದ ರಾಯ್‌ ಹೇಳಿದ್ದಾರೆ. ಇದನ್ನೂ ಓದಿ: ಇಂದು ಮಾಲ್ಡೀವ್ಸ್ ಅಧ್ಯಕ್ಷರನ್ನು ಭೇಟಿಯಾಗಲಿರುವ ಮೋದಿ

    ಸಂಸತ್ತಿನ ಉಭಯ ಸದನಗಳಲ್ಲಿ ಮುಂಗಾರು ಅಧಿವೇಶನವನ್ನು ಪ್ರತಿಪಕ್ಷಗಳು ನಿರಂತರವಾಗಿ ಅಡ್ಡಿಪಡಿಸುತ್ತಿವೆ. ಇದರಿಂದಾಗಿ ಪಟ್ಟಿ ಮಾಡಲಾದ ವಿಷಯಗಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ.

    Live Tv
    [brid partner=56869869 player=32851 video=960834 autoplay=true]

  • ರಿಲಯನ್ಸ್‌, ಪತಂಜಲಿ, ಟಾಟಾ, ಇನ್ಫೋಸಿಸ್‌ ಸೇರಿ 11 ಖಾಸಗಿ ಸಂಸ್ಥೆಗಳಿಗೆ ಸಿಐಎಸ್‌ಎಫ್‌ ಭದ್ರತೆ

    ರಿಲಯನ್ಸ್‌, ಪತಂಜಲಿ, ಟಾಟಾ, ಇನ್ಫೋಸಿಸ್‌ ಸೇರಿ 11 ಖಾಸಗಿ ಸಂಸ್ಥೆಗಳಿಗೆ ಸಿಐಎಸ್‌ಎಫ್‌ ಭದ್ರತೆ

    ನವದೆಹಲಿ: ರಿಲಯನ್ಸ್‌ ಇಂಡಸ್ಟ್ರೀಸ್‌, ಟಾಟಾ ಸ್ಟೀಲ್‌, ಇನ್ಫೋಸಿಸ್‌, ಪತಂಜಲಿ ಸೇರಿದಂತೆ 11 ಖಾಸಗಿ ಸಂಸ್ಥೆಗಳು ಹಾಗೂ 64 ವಿಮಾನ ನಿಲ್ದಾಣಗಳಿಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯು (ಸಿಐಎಸ್‌ಎಫ್‌) ರಕ್ಷಣೆ ಒದಗಿಸುತ್ತಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್‌ ತಿಳಿಸಿದ್ದಾರೆ.

    ಬೆದರಿಕೆ ಕಾರಣ ಹಾಗೂ ನಿರ್ವಹಣೆಯ ಬದ್ಧತೆ ದೃಷ್ಟಿಯಿಂದ ಸಿಐಎಸ್‌ಎಫ್‌ ನಿಯೋಜಿಸಲಾಗುವುದು. ಪ್ರಸ್ತುತ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ವಲಯಕ್ಕೆ ಸಿಐಎಸ್‌ಎಫ್‌ ನಿಯೋಜಿಸಲಾಗಿದೆ ಎಂದು ರಾಜ್ಯಸಭೆಯಲ್ಲಿ ಕೇಳಿಬಂದ ಪ್ರಶ್ನೆಯೊಂದಕ್ಕೆ ರಾಯ್‌ ಉತ್ತರಿಸಿದ್ದಾರೆ. ಇದನ್ನೂ ಓದಿ: ಕೋವಿಡ್‌ ಲಸಿಕೆ ಪಡೆದ ಪ್ರಮಾಣ ಪತ್ರ ಇಲ್ಲದಿದ್ರೆ ನೌಕರರಿಗೆ ಸಂಬಳ ನೀಡಲ್ಲ – ಪಂಜಾಬ್‌ ಸರ್ಕಾರ

    ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಇಂಡಸ್ಟ್ರೀಸ್‌, ಬೆಂಗಳೂರು, ಮೈಸೂರು ಮತ್ತು ಪುಣೆಯಲ್ಲಿರುವ ಇನ್ಫೋಸಿಸ್‌ ಸಂಸ್ಥೆ, ಹರಿದ್ವಾರದ ಪತಂಜಲಿ ಆಹಾರ ಮತ್ತು ಗಿಡಮೂಲಿಕೆ ಉದ್ಯಾನ, ಮುಂಬೈನ ರಿಲಯನ್ಸ್‌ ಕೋ ಆಪರೇಟಿವ್‌ ಪಾರ್ಕ್‌ ಕ್ಯಾಂಪಸ್‌, ಜಾಮ್‌ನಗರದ ನಾಯರ್‌ ಎನರ್ಜಿ ಲಿಮಿಟೆಡ್‌, ಹೈದರಾಬಾದ್‌ ಭಾರತ್‌ ಬಯೋಟೆಕ್‌ ಅಂತಾರಾಷ್ಟ್ರೀಯ ಲಿಮಿಟೆಡ್‌, ಹೋಟೆಲ್‌ ಟರ್ಮಿನಲ್‌ 1ಸಿಗೆ ಸಿಐಎಸ್‌ಎಫ್‌ ಭದ್ರತೆ ಒದಗಿಸಲಾಗಿದೆ.

    ಸಿಐಎಸ್‌ಎಫ್‌ ಕಾಯಿದೆ-1968ರ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿ ಉದ್ಯಮ, ಖಾಸಗಿ ಕೈಗಾರಿಕಾ ಉದ್ಯಮ, ನಿಯಂತ್ರಿತ ಕೈಗಾರಿಕಾ ಉದ್ಯಮಗಳ ರಕ್ಷಣೆ ಮತ್ತು ಭದ್ರತೆಗಾಗಿ ಸ್ಥಾಪಿಸಲಾಗಿದೆ ಎಂದು ರಾಯ್‌ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಳಯ್ ಕ್ಷಿಪಣಿಯ ಯಶಸ್ವಿ ಪರೀಕ್ಷೆ – ದೇಶದ ರಕ್ಷಣಾ ಕ್ಷೇತ್ರಕ್ಕೆ ಆನೆ ಬಲ

  • ಪ್ರಧಾನಿ ಮೋದಿ ವಿರುದ್ಧ ಎತ್ತುವ ಕೈಗಳನ್ನು ಕತ್ತರಿಸ್ತೀವಿ: ಬಿಜೆಪಿ ಸಂಸದ

    ಪ್ರಧಾನಿ ಮೋದಿ ವಿರುದ್ಧ ಎತ್ತುವ ಕೈಗಳನ್ನು ಕತ್ತರಿಸ್ತೀವಿ: ಬಿಜೆಪಿ ಸಂಸದ

    ಪಾಟ್ನಾ: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ತೋರಿಸುವ ಬೆರಳುಗಳನ್ನು ಮುರಿಯಲಾಗುವುದು. ಅವಶ್ಯಕತೆ ಬಿದ್ದರೆ ಅಂತಹವರ ಕೈ ಯನ್ನು ಕತ್ತರಿಸಲಾಗುವುದು ಎಂದು ಬಿಹಾರ ರಾಜ್ಯದ ಉಜಿಯಾಪುರ ಕ್ಷೇತ್ರದ ಸಂಸದ ನಿತ್ಯಾನಂದ ರಾಯ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

    ಸೋಮವಾರ ಓಬಿಸಿ ಸಮುದಾಯದ ಸಭೆಯಲ್ಲಿ ಭಾಗಿಯಾಗಿದ್ದ ಸಂಸದರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೋದಿ ಅವರ ಹಳೆಯ ದಿನಗಳನ್ನು ನೆನಪು ಮಾಡಿಕೊಳ್ಳುತ್ತಾ, ಮೋದಿಜಿ ತಾಯಿ ಮಗನಿಗೆ ಊಟ ಮಾಡಿಸಿಕೊಳ್ಳಲು ಕೂರುತ್ತಿದ್ದರು. ಆದರೆ ಇಂದು ಆ ತಟ್ಟೆಯ ಮುಂದೆ ಮಗನಿಲ್ಲ. ಇಂತಹ ಕಠಿಣ ಪರಿಸ್ಥಿತಿಯಲ್ಲ, ಒಬ್ಬ ಸಾಮಾನ್ಯ ಬಡ ವ್ಯಕ್ತಿ ಇಂದು ದೇಶದ ಪ್ರಧಾನಿಯಾಗಿದ್ದಾರೆ. ಅಂತಹ ಶ್ರೇಷ್ಟ ವ್ಯಕ್ತಿಯನ್ನು ನಾವೆಲ್ಲರೂ ಗೌರವಿಸಬೇಕು ಎಂದು ರಾಯ್ ತಿಳಿಸಿದ್ದಾರೆ.

    ಮೋದಿ ಅವರಿಗೆ ತೋರಿಸುವ ಪ್ರತಿಯೊಂದು ಬೆರಳನ್ನು ಮುರಿಯಲಾಗುವುದು ಮತ್ತು ಪ್ರಧಾನಿ ವಿರುದ್ಧ ಎತ್ತುವ ಕೈಗಳನ್ನು ಊನಗೊಳಿಸಲಾಗುವುದು. ಒಂದು ವೇಳೆ ಅವಶ್ಯಕತೆ ಬಿದ್ದಲ್ಲಿ ಅಂತಹ ಕೈಗಳನ್ನು ಕತ್ತರಿಸಿ ಹಾಕಲಾಗುವುದು ಅಂತಾ ಅಂದ್ರು. ಈ ವೇಳೆ ಸಭೆಯಲ್ಲಿ ಬಿಜೆಪಿ ನಾಯಕ ಸುಶೀಲ್ ಮೋದಿ ಸಹ ಉಪಸ್ಥಿತರಿದ್ದರು.

    ವಿವಾದವಾಗುತ್ತಿದ್ದಂತೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ನಿತ್ಯಾನಂದ ರಾಯ್, ನಾನು ದೇಶದ ಪ್ರಧಾನಿ ಮೋದಿ, ದೇಶದ ಗೌರವ ಮತ್ತು ಸುರಕ್ಷತೆಯ ವಿರುದ್ಧ ಧ್ವನಿ ಎತ್ತುವವರಿಗೆ ರೂಪಕವಾಗಿ ಹೇಳಲು ಕಠೋರ ಹೇಳಿಕೆಯನ್ನು ನೀಡಿದ್ದೇವೆ ಹೊರತು ಯಾವುದೇ ಪಕ್ಷ ಮತ್ತು ವ್ಯಕ್ತಿಯ ಬಗ್ಗೆ ನನ್ನ ಭಾಷಣದಲ್ಲಿ ಹೇಳಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

    2016ರಲ್ಲಿ ನಿತ್ಯಾನಂದರನ್ನು ಬಿಹಾರನ ಬಿಜೆಪಿ ರಾಜ್ಯಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. 2016ರಲ್ಲಿ ಮೊದಲ ಬಾರಿಗೆ ಹಾಜಿಪುರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಗೊಂಡಿದ್ದರು. ನಂತರ ಲೋಕಸಭೆ ಚುನಾವಣೆಯಲ್ಲಿ ಉಜಿಯಾಪುರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿತ್ತು.