Tag: ನಿದೇಶಕ

  • ಮಹಿಳೆಯರು ತಮ್ಮ ಜೊತೆ ಕಾಂಡೋಮ್ ಇಟ್ಟುಕೊಂಡು ಅತ್ಯಾಚಾರಿಗಳಿಗೆ ಸಹಕರಿಸಬೇಕು: ನಿರ್ದೇಶಕ

    ಮಹಿಳೆಯರು ತಮ್ಮ ಜೊತೆ ಕಾಂಡೋಮ್ ಇಟ್ಟುಕೊಂಡು ಅತ್ಯಾಚಾರಿಗಳಿಗೆ ಸಹಕರಿಸಬೇಕು: ನಿರ್ದೇಶಕ

    ಹೈದರಾಬಾದ್: ಮಹಿಳೆಯರು ತಮ್ಮ ಜೊತೆ ಕಾಂಡೋಮ್ ಇಟ್ಟುಕೊಂಡು ಅತ್ಯಾಚಾರಿಗಳಿಗೆ ಸಹಕರಿಸಬೇಕು ಎಂದು ನಿರ್ದೇಶಕನೊಬ್ಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾನೆ.

    ನಿರ್ದೇಶಕ ಡೇನಿಯಲ್ ಶ್ರವಣ್ ತನ್ನ ಫೇಸ್‍ಬುಕ್‍ನಲ್ಲಿ ರೀತಿಯ ಪೋಸ್ಟ್ ಹಾಕಿಕೊಂಡಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಹೈದರಾಬಾದ್‍ನಲ್ಲಿ ನಡೆದ ಪಶುವೈದ್ಯೆಯ ಹತ್ಯೆಗೆ ಸಂಬಂಧಿಸಿದಂತೆ ಡೇನಿಯಲ್ ತನ್ನ ಫೇಸ್‍ಬುಕ್‍ನಲ್ಲಿ ಈ ರೀತಿಯ ಪೋಸ್ಟ್ ಹಾಕಿಕೊಂಡಿದ್ದಾನೆ. ಬಳಿಕ ಈ ಪೋಸ್ಟ್ ತನ್ನ ಚಿತ್ರದ ವಿಲನ್ ಡೈಲಾಗ್ ಎಂದು ಡಿಲೀಟ್ ಮಾಡಿದ್ದಾನೆ.

    ಪೋಸ್ಟ್ ನಲ್ಲಿ ಏನಿತ್ತು?
    ಮಹಿಳೆಯರು ತಮ್ಮ ಜೊತೆ ಕಾಂಡೋಮ್ ಇಟ್ಟುಕೊಂಡು ಅತ್ಯಾಚಾರಿಗಳಿಗೆ ಸಹಕರಿಸಬೇಕು. ಅತ್ಯಾಚಾರಕ್ಕೆ ಒಳಗಾದವರ ಹತ್ಯೆಯನ್ನು ನಿಯಂತ್ರಿಸುವ ಏಕೈಕ ದಾರಿ ಏನೆಂದರೆ ‘ಹಿಂಸಾಚಾರವಿಲ್ಲದೆ ಅತ್ಯಾಚಾರಗಳನ್ನು’ ಕಾನೂನುಬದ್ಧಗೊಳಿಸುವುದು. 18 ವರ್ಷ ಮೇಲ್ಪಟ್ಟ ಯುವತಿಯರಿಗೆ ಅತ್ಯಾಚಾರದ ಬಗ್ಗೆ ಶಿಕ್ಷಣ ನೀಡಬೇಕು. ಹೀಗೆ ಮಾಡಿದರೆ ಮಾತ್ರ ಈ ರೀತಿ  ಪ್ರಕರಣಗಳು ನಡೆಯುವುದಿಲ್ಲ. ಭಾರತದ ಮಹಿಳೆಯರಿಗೆ ಸೆಕ್ಸ್ ಎಜುಕೇಶನ್ ಬಗ್ಗೆ ತಿಳಿದಿರಬೇಕು ಎಂದು ಬರೆದುಕೊಂಡಿದ್ದನು.

    ಪುರುಷರ ಬಯಕೆ ಈಡೇರಿದರೆ ಅವರು ಮಹಿಳೆಯರನ್ನು ಕೊಲೆ ಮಾಡುವುದಿಲ್ಲ. ಅತ್ಯಾಚಾರ ನಂತರ ಕೊಲೆ ಮಾಡುವುದನ್ನು ತಡೆಯಲು ಸರ್ಕಾರ ಈ ರೀತಿಯಂತಹ ಯೋಜನೆಗಳನ್ನು ಜಾರಿಗೆ ತರಬೇಕು. ಸಮಾಜ, ಸರ್ಕಾರ ಹಾಗೂ ಮಹಿಳಾ ಸಂಘಟನೆ ನಿರ್ಭಯಾ ಕಾಯ್ದೆ, ಪೆಪ್ಪರ್ ಸ್ಪ್ರೇಯಿಂದ ಅತ್ಯಾಚಾರಿಗಳನ್ನು ಹೆದರಿಸುತ್ತಿದೆ. ಅತ್ಯಾಚಾರಿಗಳು ತಮ್ಮ ಲೈಂಗಿಕ ಆಸೆಯನ್ನು ಈಡೇರಿಸಿಕೊಳ್ಳುವುದಕ್ಕೆ ಯಾವುದೇ ಮಾರ್ಗ ಕೊಂಡುಕೊಳ್ಳುತ್ತಿಲ್ಲ. ಹಾಗಾಗಿ ಅವರಿಗೆ ಕೊಲೆ ಮಾಡುವ ಯೋಚನೆ ಬರುತ್ತಿದೆ. ಮಹಿಳೆಯರು ಪುರುಷರ ಜೊತೆಗೆ ದೈಹಿಕ ಸಂಬಂಧ ಬೆಳೆಸುವುದು ಒಳ್ಳೆಯದು ಎಂದು ಬರೆದು ಡೇನಿಯಲ್ ಶ್ರವಣ್ ಪೋಸ್ಟ್ ಹಾಕಿದ್ದನು.

    ನಿರ್ದೇಶಕ ಡೇನಿಯಲ್ ಪೋಸ್ಟ್ ಗೆ ಹಿನ್ನೆಲೆ ಗಾಯಕಿ ಚಿನ್ಮಯಿ ಶ್ರೀಪಾದ ಹಾಗೂ ಬಾಲಿವುಡ್ ನಟಿ ಕುಬ್ರಾ ಸೇಠ್ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

  • ಸ್ಯಾಂಡಲ್‍ವುಡ್ ನಿರ್ದೇಶಕನಿಂದ ಹಿರಿಯ ನಟಿಗೆ ದೋಖಾ!

    ಸ್ಯಾಂಡಲ್‍ವುಡ್ ನಿರ್ದೇಶಕನಿಂದ ಹಿರಿಯ ನಟಿಗೆ ದೋಖಾ!

    ಬೆಂಗಳೂರು: ಕಿರುತೆರೆಯ ಹಿರಿಯ ನಟಿ ಮಂಜುಳಮ್ಮ ಅವರಿಗೆ ನಿರ್ದೇಶಕ ನವೀನ್ ರೈ ಲಕ್ಷಾಂತರ ರೂಪಾಯಿ ಮೋಸ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

    ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ಅವಕಾಶಗಳನ್ನು ಕೊಡಿಸುವದಾಗಿ ಹೇಳಿ ನವೀನ್ ರೈ ಲಕ್ಷಾಂತರ ರೂಪಾಯಿಯನ್ನ ಪಡೆದುಕೊಂಡಿದ್ದರು. ಆದರೆ ನವೀನ್ ರೈ ಯಾವುದೇ ಸಿನಿಮಾ ಮತ್ತು ಧಾರವಾಹಿಗಳಲ್ಲಿ ಅವಕಾಶಗಳನ್ನ ಕೊಡಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಂಜುಳಮ್ಮ ತಾವು ನೀಡಿದ ಹಣ ಹಿಂದಿರುಗಿಸುವಂತೆ ಕೇಳಿದ್ದಾರೆ. ಹಣ ಕೇಳಿದ್ದಕ್ಕೆ ಕೆಲ ಹುಡುಗರನ್ನು ಕಳುಹಿಸಿ ನನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಮಂಜುಳಮ್ಮ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಕಲ್ಲಿನ ವೀಣೆ ಧಾರಾವಾಹಿ ಶೂಟಿಂಗ್ ವೇಳೆ ಮಂಜುಳಮ್ಮ ಅವರಿಗೆ ನವೀನ್ ರೈ ಪರಿಚಯ ಮಾಡಿಕೊಂಡಿದ್ದನು. ಚಂದನವನದಲ್ಲಿ ತನಗೆ ಎಲ್ಲರೂ ಪರಿಚಯ ಸ್ಟಾರ್ ನಟರ ಸಿನಿಮಾದಲ್ಲಿ ಪೋಷಕ ಪಾತ್ರಗಳನ್ನು ಕೊಡಿಸುತ್ತೇನೆ ಎಂದು ನಂಬಿಸಿ ಒಡವೆ ಹಾಗು 15 ಲಕ್ಷ ರೂ. ಹಣ ಪಡೆದುಕೊಂಡಿದ್ದಾನೆ ಎಂದು ಮಂಜುಳಮ್ಮ ಆರೋಪಿಸುತ್ತಿದ್ದಾರೆ.