ರಾಯಚೂರು: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ನೂತನ ವಿಧಾನಪರಿಷತ್ ಸದಸ್ಯ ವಸಂತ್ ಕುಮಾರ್ (Vasanath Kumar) ಭರ್ಜರಿ ನಿದ್ದೆ ಮಾಡಿ ಸುದ್ದಿಯಾಗಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ನಡೆಯುತ್ತಿದ್ದ ಅಧಿಕಾರಿಗಳ ಸಭೆಯಲ್ಲಿ ಮುಂದಿನ ಸಾಲಿನಲ್ಲೇ ಕುಳಿತಿದ್ದ ನೂತನ ಕಾಂಗ್ರೆಸ್ ಪರಿಷತ್ ಸದಸ್ಯ (Congress MLC) ಎ.ವಸಂತ ಕುಮಾರ್ ಕೆಲಕಾಲ ನಿದ್ದೆಗೆ ಜಾರಿದ್ದರು. ಇದನ್ನೂ ಓದಿ: ದರ್ಶನ್ ಕೊಲೆ ಮಾಡೋ ವ್ಯಕ್ತಿ ಅಲ್ಲ : ಮದ್ದೂರು ಎಂಎಲ್ಎ ಉದಯ್ ಗೌಡ ಸರ್ಟಿಫಿಕೇಟ್
– 1 ಮಾತ್ರೆ ನುಂಗಿದರೆ 40 ತಾಸು ನಿದ್ರೆ ಬರಲ್ಲ
– ಮಾತ್ರೆಯಿಂದ ಗಂಭೀರ ಆರೋಗ್ಯ ಸಮಸ್ಯೆ
ಲಕ್ನೋ: ಇನ್ನೇನು ಕೆಲವೇ ದಿನಗಳಲ್ಲಿ 10ನೇ ತರಗತಿ ಪರೀಕ್ಷೆ (SSLC Exam) ನಡೆಯುತ್ತದೆ. ಈ ಸಮಯದಲ್ಲಿ ನಿದ್ದೆ ಬರಬಾರದೆಂದು ಶಾಲಾ ಮಕ್ಕಳು ಭಯೋತ್ಪಾದಕರು ತೆಗೆದುಕೊಳ್ಳುವಂತಹ ಮಾತ್ರೆಗಳನ್ನು ಸೇವಿಸುತ್ತಿರುವ ಆಘಾತಕಾರಿ ವಿಚಾರವೊಂದು ಬಯಲಾಗಿದೆ.
ಈ ಸಂಬಂಧ ವೈದ್ಯ ಲೋಕ ಕೂಡ ಆತಂಕ ವ್ಯಕ್ತಪಡಿಸಿದ್ದು, ಇಂತಹ ಮಾತ್ರೆಗಳನ್ನು (Tablets) ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿದೆ.
ಬೆಳಕಿಗೆ ಬಂದಿದ್ದು ಹೇಗೆ?: ಉತ್ತರ ಪ್ರದೇಶದ ಪ್ರಜಕ್ತಾ ಸ್ವರೂಪ್ ಎಂಬ ವಿದ್ಯಾರ್ಥಿನಿ 10ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಹೀಗಾಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಈಕೆ ಏಕಾಏಕಿ ಕುಸಿದುಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಈ ವೇಳೆ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಇತ್ತ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾದ ಬಳಿಕ ಪೋಷಕರು ಆಕೆ ಓದುತ್ತಿದ್ದ ಕೋಣೆಯನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಲ್ಲಿ ಮಾತ್ರೆಗಳು ತುಂಬಿದ ಬಾಟ್ಲಿಯೊಂದು ಪತ್ತೆಯಾಗಿದೆ. ಇದರಿಂದ ಆತಂಕಗೊಂಡ ಪೋಷಕರು ಮಾತ್ರೆಗಳನ್ನು ವೈದ್ಯರ ಬಳಿ ತೋರಿಸಿದ್ದಾರೆ. ಆಗ ವೈದ್ಯರು, ಇದು ನಿದ್ದೆಯಿಂದ ತಪ್ಪಿಸಿಕೊಳ್ಳಲು ಬಳಸುವ ಮಾತ್ರೆ ಎಂದು ತಿಳಿಸಿದ್ದಾರೆ.
ಈ ಕುರಿತು ಪೋಷಕರು ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ಆಕೆಯೂ ಒಪ್ಪಿಕೊಂಡಿದ್ದಾಳೆ. ಪರೀಕ್ಷೆಯ ಸಮಯದಲ್ಲಿ ರಾತ್ರಿಯಿಡೀ ಎಚ್ಚರದಿಂದ ಇರಲು ಈ ಮಾತ್ರೆ ಸೇವಿಸುತ್ತಿದ್ದೆ ಎಂದಿದ್ದಾಳೆ. ಇದು ವೈದ್ಯರು ಹಾಗೂ ಪೋಷಕರನ್ನು ದಿಗ್ಭ್ರಮೆಗೊಳಿಸಿದೆ.
ಏನಿದು ಮಾತ್ರೆ?: ಒಂದು ಮಾತ್ರೆ ಸೇವಿಸಿದರೆ ಸುಮಾರು 40 ಗಂಟೆಗಳ ಕಾಲ ಎಚ್ಚರದಿಂದ ಇರುವಂತೆ ಮಾಡುತ್ತದೆ. ಸಾಮಾನ್ಯವಾಗಿ ಈ ಮಾತ್ರೆಗಳನ್ನು ಉಗ್ರರು ತೆಗೆದುಕೊಳ್ಳುತ್ತಾರೆ. ಭಯೋತ್ಪಾದಕ ದಾಳಿ ವೇಳೆ ನಿದ್ರೆ ತಪ್ಪಿಸಲು ಉಗ್ರರು ಇಂತಹ ಮಾತ್ರೆಗಳನ್ನು ನುಂಗಿ ಕಾರ್ಯಾಚರಣೆ ಮಾಡುತ್ತಾರೆ. ಇದು ಮಾರುಕಟ್ಟೆಗಳಲ್ಲಿ ಸಿಗಲ್ಲ. ಆದರೆ ಕಳ್ಳ ಮಾರ್ಗದಲ್ಲಿ ಬೇರೆ ಬೇರೆ ಮಾತ್ರೆಗಳ ಹೆಸರಿನಲ್ಲಿ ಭಾರತಕ್ಕೆ ಸಾಗಿಸಲಾಗುತ್ತದೆ.
ಇದೀಗ ಈ ಮಾತ್ರೆಗಳನ್ನು ವಿದ್ಯಾರ್ಥಿಗಳು ಸೇವಿಸುತ್ತಿರುವುದು ಆತಂಕಕಾರಿಯಾಗಿದೆ. ಪರೀಕ್ಷೆಗಳ ಸಮಯಗಳಲ್ಲಿ ಇಂತಹ ಮಾತ್ರೆಗೆ ಬೇಡಿಕೆ ಕೂಡ ಹೆಚ್ಚಾಗುತ್ತದೆ ಎಂದು ಔಷಧ ವ್ಯಾಪಾರಿಗಳು ಹೇಳುತ್ತಾರೆ. ಒಟ್ಟಿನಲ್ಲಿ ಪರೀಕ್ಷೆ ಹತ್ತಿರ ಬರುತ್ತಿದ್ದಂತೆಯೇ ಪೋಷಕರು ಕೂಡ ತಮ್ಮ ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ.
ಚೆನ್ನೈ: ಚಾಲಕನೊಬ್ಬ ನಿದ್ದೆ ಮಂಪರಿನಲ್ಲಿ ಟೀ ಅಂಗಡಿಯೊಳಗೆ ಟ್ರಕ್ ನುಗ್ಗಿಸಿದ ಪರಿಣಾಮ ಐವರು ದಾರುಣವಾಗಿ ಮೃತಪಟ್ಟ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯಲ್ಲಿ ನಡೆದಿದೆ.
ಇಂದು ಮುಂಜಾನೆ ನಡೆದ ಅವಘಡದಲ್ಲಿ 19 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಿಮೆಂಟ್ ತುಂಬಿದ ಟ್ರಕ್ ಅರಿಯಲೂರಿನಿಂದ ಶಿವಗಂಗೈಗೆ ತೆರಳುತ್ತಿತ್ತು. ಹೀಗೆ ಹೋಗುತ್ತಿದ್ದ ಸಂದರ್ಭದಲಿ ಚಾಲಕನಿಗೆ ನಿದ್ದೆ ಬಂದಿದ್ದು, ಪರಿಣಾಮ ಟ್ರಕ್ ಚಾಲಕನಿಂದ ನಿಯಂತ್ರಣ ಕಳೆದುಕೊಂಡು ಕೆಲವು ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಟೀ ಅಂಗಡಿಗೆ ನುಗ್ಗಿದೆ.
ಇತ್ತ ಟೀ ಅಂಗಡಿಯಲ್ಲಿ ಶಬರಿಮಲೆ ಯಾತ್ರಾರ್ಥಿಗಳು ಟೀ ಕುಡಿಯುತ್ತಿದ್ದರು. ಈ ವೇಳೆ ಟ್ರಕ್ ಏಕಾಏಕಿ ನುಗ್ಗಿದೆ. ಅಪಘಾತದಿಂದ ಟೀ ಅಂಗಡಿ ಬಳಿ ನಿಲ್ಲಿಸಿದ್ದ ಕಾರು ಹಾಗೂ ಇತರೆ ದ್ವಿಚಕ್ರ ವಾಹನಗಳಿಗೂ ಹಾನಿಯಾಗಿದೆ. ಇದನ್ನೂ ಓದಿ: ಅಪಾರ್ಟ್ಮೆಂಟ್ನ 33ನೇ ಫ್ಲೋರ್ನಿಂದ ಬಿದ್ದು ಟೆಕ್ಕಿ ದುರ್ಮರಣ
#WATCH | Pudukkottai, Tamil Nadu: Five people including a woman died and 19 were injured in a road accident near Pudukkottai district earlier today. A truck lost control and rammed inside a tea shop on the Trichy – Rameswaram Highway. The injured people were taken to Pudukkottai… pic.twitter.com/9D0RyuQDpN
ಪ್ರಾಥಮಿಕ ತನಿಖೆಯ ಪ್ರಕಾರ, ಸಿಮೆಂಟ್ ಟ್ರಕ್ ಚಾಲನೆ ಮಾಡುವಾಗ ನಿದ್ರಿಸಿದ ಕಾರಣ ಚಾಲಕ ತನ್ನ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಸದ್ಯ ಘಟನೆ ಸಂಬಂಧ ತನಿಖೆ ಮುಂದುವರಿದಿದೆ.
ಘಟನೆ ನಡೆದ ಸಂದರ್ಭದಲ್ಲಿ ಜೆಫಿನ್ ಹಾಗೂ ಆತನ ತಾಯಿ ಇಬ್ಬರೇ ಮನೆಯೊಳಗಡೆ ಇದ್ದರು. ಜೆಫಿನ್ ತಂದೆ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಕೆಲಸವೊಂದರ ನಿಮಿತ್ತ ಅವರು ಹೊರಗಡೆ ಹೋಗಿದ್ದರು ಎಂಬುದಾಗಿ ವರದಿಯಾಗಿದೆ.
ದಕ್ಷಿಣ ಮುಂಬೈನ ಕುಂಬಾರವಾಡ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೃತನನ್ನು ಸಂದೀಪ್ ಸೋನಾವಾನೆ ಎಂದು ಗುರುತಿಸಲಾಗಿದ್ದು, ಗಣೇಶ್ ಶಿವಂಕರ್ ಬಂಧಿತ ಆರೋಪಿ ಆಗಿದ್ದಾನೆ. ಗಣೇಶ್ ಶಿವಂಕರ್ ಮದ್ಯದ ಅಮಲಿನಲ್ಲಿದ್ದ. ಈ ವೇಳೆ ಸಂದೀಪ್ ಜೊತೆ ಗಣೇಶ್ ಜಗಳ ಮಾಡಿಕೊಂಡಿದ್ದ.
ಅದಾದ ಬಳಿಕ ಗಣೇಶ್ ಶಿವಂಕರ್ ಸ್ನೇಹಿತ ಮಲಗಿದ್ದಾಗ ಆತನ ಮೇಲೆ ಸೇಡು ತೀರಿಸಬೇಕು ಎಂದು ಯೋಜನೆ ರೂಪಿಸಿದ್ದ. ತನ್ನ ಯೋಜನೆಯಂತೆ ಭಾರವಾದ ಗ್ರಾನೈಟ್ ಅನ್ನು ಸಂದೀಪ್ ತಲೆಯ ಮೇಲೆ ಹಾಕಿದ್ದಾನೆ. ಅದಾದ ಬಳಿಕ ಅಲ್ಲಿದ್ದ ಸ್ಥಳೀಯರು ಸಂದೀಪ್ನನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ವೇಳೆ, ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ:ನಿರ್ಮಲಾ ಸೀತಾರಾಮನ್ರಿಂದ 5ನೇ ಬಾರಿಯ ಬಜೆಟ್ – ಭಾರೀ ನಿರೀಕ್ಷೆಯಲ್ಲಿ ನಾಗರಿಕರು
ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಗಣೇಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಗೆಳೆಯರು ಗಾಡಿ ಎಳೆಯುವ ಕೆಲಸ ಮಾಡುತ್ತಿದ್ದರು ಎನ್ನುವುದು ಪೊಲೀಸ್ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಇದನ್ನೂ ಓದಿ:ನಾಗರಹಾವು ಹಿಡಿದು ಜೆಡಿಎಸ್ ಅಭ್ಯರ್ಥಿ ಗೆಲುವಿನ ಬಗ್ಗೆ ಭವಿಷ್ಯ ನುಡಿದ ವ್ಯಕ್ತಿ
Live Tv
[brid partner=56869869 player=32851 video=960834 autoplay=true]
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಫನ್ನಿ ವೀಡಿಯೋಗಳನ್ನು ನೋಡುತ್ತಿರುತ್ತೇವೆ. ಸೋಶಿಯಲ್ ಮೀಡಿಯಾ (Social Media) ಬಳಕೆದಾರರು ಕೂಡ ಇಂತಹ ವೀಡಿಯೋಗಳನ್ನು ಹೆಚ್ಚು ಇಷ್ಟಪಡುತ್ತಾರೆ. ಬಸ್, ಮೆಟ್ರೋ (Metro) ಗಳಲ್ಲಿ ಸಾಕಷ್ಟು ಫನ್ನಿ ಘಟನೆಗಳು ನಡೆಯುತ್ತವೆ. ಅಂಥದ್ದೇ ಒಂದು ಘಟನೆ ನಡೆದಿರುವುದು ವೀಡಿಯೋ ಸಮೇತ ವೈರಲ್ ಆಗುತ್ತಿದೆ.
ವೀಡಿಯೋದಲ್ಲೇನಿದೆ..?: ಮೆಟ್ರೋ (Metro) ದಲ್ಲಿನ ಎಲ್ಲಾ ಸೀಟುಗಳು ಭರ್ತಿಯಾಗಿವೆ. ಅದರಂತೆ ಬಾಗಿಲಿನ ಪಕ್ಕದ ಸೀಟಿನ ತುದಿಯಲ್ಲಿ ಯುವತಿಯೊಬ್ಬಳು ಕುಳಿತಿದ್ದಾಳೆ. ಆಕೆಯ ಪಕ್ಕದಲ್ಲಿಯೇ ನೀಲಿ ಟೀ ಶರ್ಟ್ ತೊಟ್ಟ ಯುವಕನೊಬ್ಬ ಪಕ್ಕದಲ್ಲಿ ಕುಳಿತಿದ್ದಾನೆ. ಅವನು ಕುಳಿತಲ್ಲೇ ಮಲಗಿದ್ದಾನೆ. ಗಾಢ ನಿದ್ದೆಯಲ್ಲಿದ್ದ ಯುವಕ ನಿಧಾನವಾಗಿ ಸೀಟಿನಿಂದ ಮುಂದಕ್ಕೆ ವಾಲಲು ಪ್ರಾರಂಭಿಸುತ್ತಾನೆ.
ಯುವಕ ಇನ್ನೇನು ಕೆಳಗೆ ಬೀಳುತ್ತಾನೆ ಎಂಬುದನ್ನು ಗಮನಿಸಿದ ಯುವತಿ, ಆತನ ಟೀ ಶರ್ಟ್ ಎಳೆದಿದ್ದಾಳೆ. ಈ ಮೂಲಕ ಯುವಕ ಕೆಳಗೆ ಬೀಳುವುದನ್ನು ತಡೆದಿದ್ದಾಳೆ. ಈ ವೀಡಿಯೋ ವೈರಲ್ ಆಗಿದ್ದು, ಅಪರಿಚಿತ ಯುವಕನಿಗೆ ಯುವತಿ ಸಹಾಯ ಮಾಡುವುದನ್ನು ನೋಡಿ ಎಲ್ಲರೂ ಆಕೆಯನ್ನು ಶ್ಲಾಘಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಹಬ್ಬ (Festive) ಹರಿದಿನ ಬಂತಂದ್ರೆ ರುಚಿಕರವಾದ ಹಾಗೂ ಸ್ವಾದಿಷ್ಟವಾದ ತಿಂಡಿ ತಿನಿಸುಗಳು ಹೆಚ್ಚಿರುತ್ತೆ. ಅದರಲ್ಲೂ ಬೆಳಕಿನ ಹಬ್ಬ ದೀಪಾವಳಿಯಲ್ಲಂತೂ (Diwali) ಇನ್ನೂ ಅದ್ಧೂರಿತನವಿರುತ್ತೆ. ದೀಪ ಬೆಳಗಿಸುವ ಜೊತೆಗೆ ಸ್ವಾದಿಷ್ಟ ತಿನಿಸುಗಳು ಹೆಚ್ಚಿರುತ್ತೆ. ರಜಾ ಮಜಾವನ್ನು ಸವಿಯುತ್ತಾ ಯಾವುದೇ ಚಿಂತೆಯಿಲ್ಲದೇ ರುಚಿಕರ ಆಹಾರವನ್ನು ಅಥವಾ ಕರಿದ ತಿನಿಸುಗಳನ್ನು ಹೆಚ್ಚಾಗಿ ತಿನ್ನುವುದು ಜೊತೆಗೆ ಕೆಲವು ದಿನಚರಿಯಲ್ಲಾದ ಬದಲಾವಣೆಯಿಂದಾಗಿ ನಮ್ಮ ಆರೋಗ್ಯ (Health) ಹದಗೆಡುವ ಸಾಧ್ಯತೆಯಿರುತ್ತೆ. ಈ ರೀತಿ ಆಗದಿರಲು ಕೆಲವು ಮುನ್ನೆಚ್ಚರಿಕೆಯನ್ನು ಅನುಸರಿಸಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿ.
ನಿದ್ರೆ ಸರಿಯಾಗಿ ಮಾಡಿ: ಆಹಾರ, ವ್ಯಾಯಾಮ, ನಿದ್ರೆ ಮನುಷ್ಯನ ಆಧಾರ ಸ್ತಂಭ ಎಂದರೆ ತಪ್ಪಾಗದು. ಆರೋಗ್ಯಸ್ಥ ಮನುಷ್ಯನಿಗೆ ನಿದ್ರೆ ಹಾಗೂ ಆಹಾರ ಸರಿಯಾದರೆ ಮಾತ್ರ ದಿನವನ್ನು ಫ್ರೆಶ್ ಆಗಿ ಕಳೆಯಬಹುದು. ಹೀಗಾಗಿ ದಿನಕ್ಕೆ 7-8 ತಾಸು ಸರಿಯಾಗಿ ನಿದ್ದೆ ಮಾಡಿ.
ಸಮಯಕ್ಕೆ ಸರಿಯಾಗಿ ತಿನ್ನಿ: ಹಬ್ಬ ಹರಿದಿನವೊಂದೇ ಅಲ್ಲದೇ ಪ್ರತಿನಿತ್ಯ ನಿಮ್ಮ ಆರೋಗ್ಯವನ್ನು ಸರಿಯಾಗಿ ಇಟ್ಟುಕೊಳ್ಳಲು ಸಮಯಕ್ಕೆ ಸರಿಯಾಗಿ ತಿನ್ನಿರಿ. ದಿನಕ್ಕೆ 2 ಅಥವಾ ಮೂರು ಬಾರಿ ಆಹಾರವನ್ನು ಸೇವಿಸುವುದು ಅತ್ಯವಶ್ಯವಾಗಿರುತ್ತದೆ. ಒಂದು ವೇಳೆ ನಿಮಗೆ ಹಸಿವಾಗಿಲ್ಲವೆಂದರೂ, ಹಣ್ಣು/ ತರಕಾರಿ ರಸವನ್ನು ಸೇವಿಸಿ. ಇದರಿಂದಾಗಿ ನಿಮ್ಮ ಚಯಪಚಯವು ಸರಿಯಾಗಿ ಕಾರ್ಯ ನಿರ್ವಹಿಸುತ್ತದೆ. ಇದನ್ನೂ ಓದಿ: ಎಕ್ಕದ ಗಿಡದಿಂದ ಆರೋಗ್ಯಕ್ಕೆ ಸಿಗುತ್ತೆ ಹಲವಾರು ಪ್ರಯೋಜನ
ಊಟಗಳ ನಡುವೆ 4-6 ಗಂಟೆಗಳ ಅಂತರವಿರಲಿ: ಬೆಳಗ್ಗೆ ಅಥವಾ ಮಧ್ಯಾಹ್ನ ಊಟ ಮಾಡಿದ ನಂತರ ಮಧ್ಯಾಹ್ನ ಅಥವಾ ರಾತ್ರಿಯ ಊಟ ಮಾಡಲು 4-5 ಗಂಟೆಗಳ ಅಂತರವನ್ನು ನೀಡುವುದು ಅತ್ಯವಶ್ಯವಾಗಿರುತ್ತದೆ. ಇದರಿಂದಾಗಿ ಜೀರ್ಣಕ್ರಿಯೆಗೆ ಸಹಾಯವಾಗುತ್ತದೆ. ಜೊತೆಗೆ ಆರೋಗ್ಯ ಹದಗೆಟ್ಟುವುದನ್ನು ಕಡಿಮೆ ಮಾಡುತ್ತದೆ.
ಮಸಾಲೆ ಪದಾರ್ಥದಲ್ಲಿ ತಾಜಾ ಇರುವುದನ್ನು ಬಳಸಿ: ಅಡುಗೆಯನ್ನು ಮಾಡುವಾಗ ಸಾವಯವ ಅಥವಾ ತಾಜಾ ಅರಿಶಿನ ಪುಡಿ ಕಾಳು ಮೆಣಸು ಬಳಸಿ. ಅಷ್ಟೇ ಅಲ್ಲದೇ ಅಕ್ಕಿ ಗಂಜಿಯನ್ನು ಸೇವಿಸುವುದರಿಂದ ಹೊಟ್ಟೆ ಹೆಚ್ಚು ಭಾರವೆನಿಸುವುದಿಲ್ಲ. ಇದನ್ನೂ ಓದಿ: ಗೋಡಂಬಿ ತಿನ್ನಲು ಎಷ್ಟು ರುಚಿಕರವೋ ಅಷ್ಟೇ ಆರೋಗ್ಯಕ್ಕೂ ಒಳ್ಳೆಯದು
ಕುದಿಸಿ ಆರಿದ 1 ಗ್ಲಾಸ್ ನೀರಿಗೆ ನಿಂಬೆ ರಸ ಬೆರೆಸಿ ಕುಡಿಯಿರಿ: ಹಬ್ಬದಲ್ಲಿ ಸಿಹಿ ತಿನಿಸು, ಖರೀದ ಆಹಾರವನ್ನು ತಿನ್ನುವುದು ಸಾಮಾನ್ಯ. ಊಟದಲ್ಲೂ ವಿವಿಧ ಬಗೆಯ ತಿಂಡಿಗಳು ಇರುತ್ತವೆ. ಇದೆಲ್ಲಾ ತಿಂದಾಗ ನಮಗೆ ಹೊಟ್ಟೆ ಭಾರವೆನಿಸುವುದು ಸಹಜ. ಅಂತಹ ಸಂದರ್ಭದಲ್ಲಿ ಸ್ವಲ್ಪ ಬಿಸಿ ಇರುವ ನೀರಿಗೆ ನಿಂಬೆ ರಸವನ್ನು ಹಾಕಿ ಕುಡಿಯುವುದರಿಂದ ಜೀರ್ಣ ಶಕ್ತಿ ಹೆಚ್ಚಳವಾಗುತ್ತದೆ.
Live Tv
[brid partner=56869869 player=32851 video=960834 autoplay=true]
ಮನುಷ್ಯನಿಗೆ ನಿದ್ರೆ ಬಹುಮುಖ್ಯವಾಗಿದ್ದು, ಪ್ರತಿನಿತ್ಯ 7 ರಿಂದ 9 ತಾಸು ಉತ್ತಮ ನಿದ್ದೆ ಬೇಕಾಗುತ್ತದೆ. ನಿದ್ರೆ ಸರಿಯಾಗಿ ಆದರೆ ಮಾತ್ರ ಕೆಲಸವನ್ನು ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಜೊತಗೆ ನಮ್ಮ ಭಾವನೆಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ಮಾನಸಿಕವಾಗಿ ದಣಿಯುತ್ತೀರಿ ಜೊತೆಗೆ ಮುಂಗೋಪ, ಇಡೀ ದಿನ ಕಿರಿಕಿರಿಯಂತಹ ಸಮಸ್ಯೆಗಳು ಎದುರಾಗುತ್ತದೆ. ಜೊತೆಗೆ ಆಲಸ್ಯರಾಗುತ್ತೀರಿ. ಇದು ಮಾನಸಿಕ ತೊಂದರೆಯಾಗಿದ್ದರೆ, ದೈಹಿಕವಾಗಿ ಅನೇಕ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತೀರಿ.
ಕೇಂದ್ರ ನರಮಂಡಲದ ಮೇಲೆ ಪರಿಣಾಮ: ಕೇಂದ್ರ ನರಮಂಡಲವು ದೇಹದ ಪ್ರಾಥಮಿಕ ಮಾಹಿತಿಯ ಹೆದ್ದಾರಿಯಾಗಿದೆ. ಇದು ಸರಿಯಾಗಿ ಕೆಲಸ ಮಾಡಲು ನಿದ್ದೆ ಅವಶ್ಯವಿರುತ್ತದೆ. ಆದರೆ ತೀವ್ರವಾದ ನಿದ್ರಾಹೀನತೆಯಿಂದಾಗಿ ನರಮಂಡಲದಲ್ಲಿ ಪ್ರಮುಖ ತೊಂದರೆ ಆಗುತ್ತದೆ. ಇದನ್ನೂ ಓದಿ: ಬೇಸಿಗೆಯಲ್ಲಿ ನಿಮ್ಮ ತ್ವಚೆಯ ರಕ್ಷಣೆಗೆ ಇಲ್ಲಿದೆ ಸರಳ ಉಪಾಯ
ರೋಗ ನಿರೋಧಕ ಶಕ್ತಿ ಕಡಿಮೆ: ನಿದ್ರಾಹೀನತೆಯಿಂದ ನಿಮ್ಮ ದೇಹವು ರೋಗ ನಿರೋಧಕಶಕ್ತಿಯನ್ನು ಬಲಪಡಿಸುವುದನ್ನು ನಿಲ್ಲಿಸುತ್ತದೆ. ನೀವು ಪ್ರತಿನಿತ್ಯ ಸಾಕಷ್ಟು ನಿದ್ದೆಯನ್ನು ಪಡೆಯದಿದ್ದರೆ, ನಿಮ್ಮ ದೇಹವು ಸೋಂಕು ಹಾಗೂ ಬ್ಯಾಕ್ಟಿರಿಯಾ ವಿರುದ್ಧ ಹೋರಾಡಲು ಸಾಧ್ಯವಾಗುವುದಿಲ್ಲ. ಜೊತೆಗೆ ರೋಗದಿಂದ ಚೇತರಿಸಿಕೊಳ್ಳಲು ಅಧಿಕ ಸಮಯ ಬೇಕಾಗುತ್ತದೆ. ಇಷ್ಟೇ ಅಲ್ಲದೇ ದೀರ್ಘಾವಧಿ ನಿದ್ರಾಹೀನತೆಯಿಂದಾಗಿ ಮಧುಮೇಹ ಹಾಗೂ ಹೃದ್ರೋಗದಂತಹ ಕಾಯಿಲೆಗಳು ಬರುವ ಸಂಭವವಿರುತ್ತದೆ. ಇದನ್ನೂ ಓದಿ: ಡಾರ್ಕ್ ಸರ್ಕಲ್ಗೆ ಇಲ್ಲಿದೆ ಪರಿಹಾರ
ಜಿರ್ಣಾಂಗ ವ್ಯವಸ್ಥೆ: ನಿದ್ದೆ ಕಡಿಮೆ ಮಾಡುವುದರಿಂದ ಕೆಲವೊಮ್ಮೆ ನೀವು ವ್ಯಾಯಾಮ ಮಾಡುವಾಗ ಆಯಾಸವಾಗುತ್ತದೆ. ಇದರಿಂದಾಗಿ ತೂಕವು ಹೆಚ್ಚಾಗುತ್ತದೆ ಜೊತೆಗೆ ಜಿರ್ಣಾಂಗ ವ್ಯವಸ್ಥೆಯ ಮೇಲೂ ಪರಿಣಾಮ ಬೀಳುತ್ತದೆ. ಇದನ್ನೂ ಓದಿ: ಹೊಟ್ಟೆ ಸಮಸ್ಯೆ ನಿವಾರಣೆಗೆ ಇಲ್ಲಿದೆ ಮನೆಮದ್ದು
ಹೃದ್ರೋಗ ಕಾಯಿಲೆ: ಸಾಕಷ್ಟು ನಿದ್ದೆ ಮಾಡದಿದ್ದರೆ ಜನರು ಹೃದಯ ರಕ್ತನಾಳದ ಕಾಯಿಲೆಗೆ ಒಳಗಾಗುವ ಸಾಧ್ಯತೆ ಹೆಚ್ಚಿರುತ್ತದೆ. ಒಂದು ಅಧ್ಯಯನದ ಪ್ರಕಾರ ನಿದ್ರಾಹೀನತೆಯಿಂದಾಗಿ ಹೃದಯಾಘಾತ ಮತ್ತು ಸ್ಟ್ರೋಕ್ನಂತಹ ಕಾಯಿಲೆಗಳು ಎದುರಾಗುವ ಸಂಭವವಿರುತ್ತದೆ. ಇದನ್ನೂ ಓದಿ:ದೇಹದ ತೂಕ ಮುಜುಗರ ಉಂಟುಮಾಡುತ್ತಿದೆಯಾ? ರಾಮಬಾಣದಂತಿವೆ ಈ ಮನೆಮದ್ದುಗಳು
ಮುಂಬೈ: ಬೆಳಗ್ಗಿನವರೆಗೂ ಮದುವೆ ಸಂಪ್ರದಾಯ ನಡೆದಿರುವ ಹಿನ್ನೆಲೆಯಲ್ಲಿ ಮಂಟಪದಲ್ಲೇ ವಧು ನಿದ್ದೆಗೆ ಜಾರಿದ ವೀಡಿಯೋವೊಂದು ವೈರಲ್ ಆಗಿದೆ.
Battered Suitcase ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಧು ನಿದ್ರಿಸುತ್ತಿರುವ ವೀಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಇಲ್ಲಿ ನೋಡಿ ವಧು ನಿದ್ರಿಸುತ್ತಿದ್ದಾಳೆ. ಈಗಾಗಲೇ ಸಮಯ ಬೆಳಗ್ಗೆ 6.30 ಆಗಿದೆ ಆದರೂ ಮದುವೆಯ ಸಂಪ್ರದಾಯ ಇನ್ನು ಮುಗಿದಿಲ್ಲ ಎಂದು ಬರೆದು ಈ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ. ತನ್ನ ಮದುವೆಯ ಮಂಟಪದಲ್ಲೇ ವಧು ನಿದ್ದೆಯಿಂದ ತೂಕಾಡಿಸುತ್ತಿರುವ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವೀಕ್ಷಕರು ತಮಾಷೆಯಾಗಿ ಕಾಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ:ಗೋ ಹತ್ಯೆ ನಿಷೇಧ ಕಾಯ್ದೆ ನಂತ್ರ ಸಾವಿರಾರು ಗೋವುಗಳನ್ನ ರಕ್ಷಣೆ ಮಾಡಲಾಗಿದೆ: ಪ್ರಭು ಚೌವ್ಹಾಣ್
ಈ ವಿಡಿಯೋದಲ್ಲಿ ವಧು ಸುಂದರವಾದ ಕೆಂಪು ಹಾಗೂ ಕೇಸರಿ ಮಿಶ್ರಿತ ಬಣ್ಣದ ಲೆಹೆಂಗಾ ಧರಿಸಿ ಸೋಫಾದಲ್ಲಿ ಕುಳಿತಿದ್ದಾರೆ. ಇವರ ಪಕ್ಕದಲ್ಲೇ ವರನ್ನು ಇದ್ದಾನೆ. ಈ ವೇಳೆ ವಧು ಕುಳಿತಲ್ಲಿಂದಲೇ ಬರುವ ನಿದ್ದೆಯನ್ನು ತಡೆದುಕೊಳ್ಳಲಾಗದೇ ತೂಕಾಡಿಸುತ್ತಿದ್ದಾಳೆ. ನಿದ್ದೆಗೆ ಜಾರಿದ ಈ ವೇಳೆ ಆಕೆಯ ಸ್ನೇಹಿತರು ಈ ದೃಶ್ಯವನ್ನು ಚಿತ್ರೀಕರಿಸಿದ್ದಾರೆ. ಇದೀಗ ಈ ವೀಡಿಯೋ ವೈರಲ್ ಆಗಿದೆ. ಇದನ್ನೂ ಓದಿ:ಒಳಚರಂಡಿಯಲ್ಲಿ ಅನಿಲ ಸ್ಫೋಟ 14 ಮಂದಿ ಸಾವು
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಡ್ರಗ್ ಮಾಫಿಯಾ ಕೇಸಲ್ಲಿ ನಟಿ ರಾಗಿಣಿ ದ್ವಿವೇದಿ ಜೈಲು ಪಾಲಾಗಿದ್ದಾರೆ. ಸಿಸಿಬಿ ಕಸ್ಟಡಿಯ ಅಂತ್ಯವಾದ ಹಿನ್ನೆಲೆಯಲ್ಲಿ ರಾಗಿಣಿಯನ್ನು 1ನೇ ಎಸಿಎಂಎಂ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟಿ ರಾಗಿಣಿ ಮೊದಲ ದಿನ ಸರಿಯಾಗಿ ನಿದ್ದಯಿಲ್ಲದೆ ಕಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಡ್ರಗ್ಸ್ ಕೇಸ್ನಲ್ಲಿ ಕನ್ನಡದ ಮೊದಲ ನಟಿ ಜೈಲಿಗೆ – ಕೋರ್ಟಿನಲ್ಲಿ ಇಂದು ಏನೇನಾಯ್ತು?
ಜೈಲಿನಲ್ಲಿ ರಾತ್ರಿ ಸಿಸಿಬಿಯವರು ಕೊಟ್ಟಿದ್ದ ರಾತ್ರಿ ಊಟ ತಿಂದಿದ್ದಾರೆ. ರೋಟಿ, ದಾಲ್ ತಿಂದು ಜೈಲು ರಾತ್ರಿಯ ವಾಸ್ತವ್ಯಕ್ಕೆ ನಟಿ ಅಣಿಯಾಗಿದ್ದು, ಮೊದಲ ಬಾರಿ ಜೈಲು ಸೇರಿದ ನಟಿಗೆ ತಡ ರಾತ್ರಿವರೆಗೂ ನಿದ್ದೆ ಬಂದಿಲ್ಲವಂತೆ. ಜೈಲಾಧಿಕಾರಿಗಳು ಜಂಖಾನ, ಒಂದು ಬೆಡ್ ಶೀಟ್ ಮತ್ತು ದಿಂಬು ಕೊಟ್ಟಿದ್ದರು. ಕ್ವಾರೆಂಟೈನ್ ವಾರ್ಡಿನಲ್ಲಿ ಫ್ಯಾನ್ ಬಿಟ್ಟರೆ ಬೇರೆ ಯಾವ ಸವಲತ್ತು ಇಲ್ಲ. ಹೀಗಾಗಿ ನೆಲದ ಮೇಲೆ ಜಂಖಾನ ಹಾಸಿಕೊಂಡು ಮಧ್ಯರಾತ್ರಿಯ ನಂತರ ನಟಿ ರಾಗಿಣಿ ನಿದ್ದೆಗೆ ಜಾರಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಜೈಲುಪಾಲಾದ ರಾಗಿಣಿಗೆ ಕಣ್ಣೀರ ವಿದಾಯ ಹೇಳಿದ ಸಂಜನಾ
ತುಂಬಾ ಸಮಯದವರೆಗೂ ಮಹಿಳಾ ವಾರ್ಡಿನ ಕ್ವಾರೆಂಟೈನ್ ರೂಮಿನಲ್ಲಿ ನಟಿ ರಾಗಿಣಿ ಅಳುತ್ತಿದ್ದರು ಎಂದು ತಿಳಿದುಬಂದಿದೆ. ಬಳಿಕ ಜೈಲಿಗೆ ಬರುವ ಮುನ್ನ ತಂದಿದ್ದ ಪುಸ್ತಕವನ್ನು ಓದಿದ್ದಾರೆ. ತಡರಾತ್ರಿಯ ನಂತರ ನಿದ್ದೆ ಮಾಡಿದ್ದಾರೆ. ಮುಂಜಾನೆ ಆಗುತ್ತಿದ್ದಂತೆ ಕನ್ನಡ, ಇಂಗ್ಲೀಷ್ ಪೇಪರ್ ಓದಿದ್ದಾರೆ. ರಾಗಿಣಿ ಸೆಲೆಬ್ರಿಟಿ ಆಗಿರುವುದರಿಂದ ಜೈಲ್ ಕ್ವಾರಂಟೈನ್ನಲ್ಲಿ ಇತರೆ ಆರೋಪಿಗಳು ಅವರನ್ನು ಮಾತನಾಡಿಸಲು ಯತ್ನಿಸಿದ್ದಾರೆ. ಆದರೆ ಜೈಲು ಕ್ವಾರಂಟೈನ್ನಲ್ಲಿ ರಾಗಿಣಿ ಹೆಚ್ಚಾಗಿ ಯಾರನ್ನು ಮಾತನಾಡಿಸಿಲ್ಲ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಡ್ರಗ್ಸ್ ಕೇಸ್ – ರಾಗಿಣಿ 14 ದಿನ ಜೈಲುಪಾಲು
ಕಳೆದ 12 ದಿನಗಳಿಂದ ಸಿಸಿಬಿ ಕಸ್ಟಡಿಯಲ್ಲಿದ್ದ ನಟಿ ರಾಗಿಣಿ ಮುಂದಿನ 14 ದಿನ ಅಂದರೆ ಸೆಪ್ಟೆಂಬರ್ 28ರವರೆಗೆ ಪರಪ್ಪನ ಅಗ್ರಹಾರ ಜೈಲಲ್ಲಿ ಇರಲಿದ್ದಾರೆ. ಸಿಸಿಬಿ ಅಧಿಕಾರಿಗಳು ತಮ್ಮ ಕಸ್ಟಡಿಗೆ ಕೇಳದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ರಾಗಿಣಿಯನ್ನು ಪರಪ್ಪನ ಅಗ್ರಹಾರದಲ್ಲಿರೋ ಸೆಂಟ್ರಲ್ ಜೈಲಿಗೆ ಕಳಿಸಿದ್ದಾರೆ. ಮಡಿವಾಳದ ಎಫ್ಎಸ್ಎಲ್ ಕೇಂದ್ರದಿಂದ ಸೋಮವಾರ ಸಂಜೆ 7 ಗಂಟೆ ಹೊತ್ತಿಗೆ ನಟಿ ರಾಗಿಣಿ ಸೇರಿ ಐವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು.
ಮಡಿವಾಳದ ಎಫ್ಎಸ್ಎಲ್ ಕೇಂದ್ರದಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಗಿಣಿಯನ್ನು 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಎದುರು ಹಾಜರು ಪಡಿಸಲಾಗಿತ್ತು. ಈ ವೇಳೆ ರಾಗಿಣಿ ತಮಗೆ ಆರೋಗ್ಯ ಸಮಸ್ಯೆ ಇದೆ. ಖಾಸಗಿ ಆಸ್ಪತ್ರೆಗೆ ಅವಕಾಶ ಕೊಡಿ ಎಂದಿದ್ದಾರೆ. ಆದರೆ ಜಡ್ಜ್ ಇದಕ್ಕೆ ನಿರಾಕರಿಸಿದ್ದಾರೆ.
ಡ್ರಗ್ಸ್ ಕೇಸಲ್ಲಿ ರಾಗಿಣಿ ಜೊತೆ ಇನ್ನೂ ಐವರು ಕೂಡ ಪರಪ್ಪನ ಅಗ್ರಹಾರ ಸೇರಿದ್ದಾರೆ. ಆರೋಪಿನ ನಂಬರ್ 2 ರಾಗಿಣಿ ಜೊತೆಗೆ, ಆರೋಪಿ 4 ಪ್ರಶಾಂತ್ ರಾಂಕಾ, ಆರೋಪಿ 7 ಇಂಟರ್ ನ್ಯಾಷನಲ್ ಡ್ರಗ್ಸ್ ಸಪ್ಲೈಯರ್ ಲೂಮ್ ಪೆಪ್ಪರ್, ಸಂಜನಾ ಆಪ್ತ ಆರೋಪಿ ನಂಬರ್ 11ರ ರಾಹುಲ್ ಶೆಟ್ಟಿ ಹಾಗೂ ಆರೋಪಿ ನಂಬರ್ 13 ನಿಯಾಜ್ ಅಹ್ಮದ್ ಒಟ್ಟಿಗೆ ಐದು ಜನ ಕಂಬಿ ಎಣಿಸುತ್ತಿದ್ದಾರೆ.