Tag: ನಿನಾಸಂ ಸತೀಶ್

  • ನಟ ನಿನಾಸಂ ಸತೀಶ್‍ಗೆ ಮಾತೃ ವಿಯೋಗ

    ನಟ ನಿನಾಸಂ ಸತೀಶ್‍ಗೆ ಮಾತೃ ವಿಯೋಗ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ನಿನಾಸಂ ಸತೀಶ್ ಅವರ ತಾಯಿ ಚಿಕ್ಕತಾಯಮ್ಮ ತಮ್ಮ ಆರ್.ಆರ್ ನಗರದಲ್ಲಿರುವ ನಿವಾಸದಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ. ಇದನ್ನೂ ಓದಿ: ನನ್ನ ಮಗಳ ಸಾವಿಗೆ ತೆಲುಗು ನಟ ಕಾರಣ- ಸೌಜನ್ಯ ತಂದೆ ದೂರು

    ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಚಿಕ್ಕತಾಯಮ್ಮ ಅವರಿಗೆ 80 ವರ್ಷ ವಯಸ್ಸಾಗಿತ್ತು. ಪುತ್ರ ಸತೀಶ್ ಅವರು ಚಿತ್ರರಂಗದಲ್ಲಿ ತಮ್ಮ ವಿಶೇಷ ಪ್ರತಿಭೆಯಿಂದ ಎತ್ತರಕ್ಕೆ ಬೆಳೆಯಲು ಅವರು ಸಹಕಾರಿಯಾಗಿದ್ದರು. ಇದನ್ನೂ ಓದಿ: ಕಿರುತೆರೆ ನಟಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಓರ್ವ ನಟ, ಸವಿ ಪಿಎ ವಿರುದ್ಧ ತಂದೆ ದೂರು

    ಸತೀಶ್ ಅವರು ಮೂರು ವರ್ಷದ ಮಗುವಿದ್ದಾಗ ಅವರ ತಂದೆ ತೀರಿಕೊಂಡಿದ್ದರು. ಬಳಿಕ ಸತೀಶ್ ಸಹಿತ 8 ಜನ ಮಕ್ಕಳನ್ನು ಚಿಕ್ಕತಾಯಮ್ಮ ಬಡತನದಲ್ಲಿಯೂ ಮಕ್ಕಳನ್ನು ಚೆನ್ನಾಗಿ ಬೆಳೆಸಿದ್ದರು. ಅವರು ಇಂದು ಇಹಲೋಕ ತ್ಯಜಿಸಿದ್ದು, ಮದ್ದೂರಿನ ಯಲದಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ- ಮಗಳ ಸಾವಿನ ಬಗ್ಗೆ ಅನುಮಾನ ಇದೆ ಎಂದ ತಂದೆ

  • ಸಂಚಾರಿ ವಿಜಯ್ ಔಟ್ ಆಫ್ ಡೇಂಜರ್: ನೀನಾಸಂ ಸತೀಶ್

    ಸಂಚಾರಿ ವಿಜಯ್ ಔಟ್ ಆಫ್ ಡೇಂಜರ್: ನೀನಾಸಂ ಸತೀಶ್

    – ಇನ್ನೂ ಪ್ರಜ್ಞೆ ಬಂದಿಲ್ಲ, 24 ಗಂಟೆ ಅಬ್ಸರ್ವೇಶನ್‍ನಲ್ಲಿಟ್ಟಿದ್ದಾರೆ
    – ಕಳೆದ ಹಲವು ದಿನಗಳಿಂದ ಫುಡ್ ಕಿಟ್ ಹಂಚುತ್ತಿದ್ದರು

    ಬೆಂಗಳೂರು: ನಟ ಸಂಚಾರಿ ವಿಜಯ್ ಅವರನ್ನು 24 ಗಂಟೆಗಳ ಕಾಲ ಅಬ್ಸರ್ವೇಶನ್‍ನಲ್ಲಿಟ್ಟಿದ್ದಾರೆ, ಇನ್ನೂ ಪ್ರಜ್ಞೆ ಬಂದಿಲ್ಲ. ಆದರೆ ಔಟ್ ಆಫ್ ಡೇಂಜರ್ ಎಂದು ವೈದ್ಯರು ಹೇಳಿರುವುದಾಗಿ ನಟ ನೀನಾಸಂ ಸತೀಶ್ ಮಾಹಿತಿ ನೀಡಿದರು.

    ಆಸ್ಪತ್ರೆಗೆ ಭೇಟಿ ನೀಡಿ ಸಂಚಾರಿ ವಿಜಯ್ ಅವರನ್ನು ನೊಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಂಚಾರಿ ವಿಜಯ್ ಅವರ ಪಲ್ಸ್ ರೇಟ್, ಬಿಪಿ ಎಲ್ಲ ನಾರ್ಮಲ್ ಇದೆ. ಆಪರೇಷನ್ ಮಾಡುವಾಗ ಅರವಳಿಕೆ ನೀಡಿರುವುದರಿಂದ ಪ್ರಜ್ಞೆ ಇನ್ನೂ ಬಂದಿಲ್ಲ. ವೈದ್ಯರು 24 ಗಂಟೆಗಳ ಕಾಲ ಅಬ್ಸರ್ವೇಶನ್‍ನಲ್ಲಿ ಇಟ್ಟಿದ್ದಾರೆ. ಆದರೆ ಪ್ರಜ್ಞೆ ಬರುತ್ತದೆ, ಔಟ್ ಆಫ್ ಡೇಂಜರ್ ಎಂದು ವೈದ್ಯರು ಹೇಳಿದ್ದಾರೆ.

    ಸ್ವತಃ ನಾನೇ ಐಸಿಯು ಒಳಗಡೆ ಹೋಗಿದ್ದೆ, ಪಲ್ಸ್ ರೇಟ್, ಬಿಪಿ ನಾರ್ಮಲ್, ಜೀವಕ್ಕೆ ತೊಂದರೆ ಇಲ್ಲ. ಆದರೆ ಕೆಲವು ಕಡೆ ಜೀವಕ್ಕೆ ಅಪಾಯ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಆ ರೀತಿ ಇಲ್ಲ, ನಾನು ಮನ್ಸೂರೆ ಒಟ್ಟಿಗೆ ಹೋಗಿ ನೋಡಿ ಬಂದೆವು, ಆರಾಮಾಗಿದ್ದಾರೆ. ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಬೇಕಷ್ಟೆ. ಅವರ ಜೊತೆಗಿದ್ದ ನವೀನ್ ಅವರಿಗೂ ಏನೂ ತೊಂದರೆ ಇಲ್ಲ ಅರಾಮಾಗಿದ್ದಾರೆ. ನಾನು ಹಾಗೂ ಮನ್ಸೂರೆ ಒಟ್ಟಿಗೆ ವೈದ್ಯರ ಬಳಿ ಮಾತನಾಡಿದ್ದೇವೆ, ಮಾಹಿತಿ ಪಡೆದಿದ್ದೇವೆ. ಆಪರೇಷನ್ ಆಗಿದೆ, ಔಟ್ ಆಫ್ ಡೇಂಜರ್ ಎಂದು ಹೇಳಿದ್ದಾರೆ. 48 ಗಂಟೆಗಳಲ್ಲಿ ಸಂಚಾರಿ ವಿಜಯ್ ಮಾತನಾಡುತ್ತಾರೆ ಎಂಬ ಭರವಸೆಯನ್ನು ವೈದ್ಯರು ನೀಡಿದ್ದಾರೆ. ಇದನ್ನೂ ಓದಿ: ತಲೆಭಾಗಕ್ಕೆ ಬಲವಾದ ಪೆಟ್ಟು – ಸಂಚಾರಿ ವಿಜಯ್ ಬೈಕ್ ಅಪಘಾತವಾಗಿದ್ದೇಗೆ?

    ತುಂಬಾ ಒಳ್ಳೆಯ ಸ್ನೇಹಿತ, ಒಂದು ವಾರದಿಂದ ನನ್ನ ಜೊತೆಗೇ ಇದ್ದರು, ನಿನ್ನೆ ಮಾತ್ರ ನನ್ನ ಜೊತೆಗಿರಲಿಲ್ಲ. ನಾನು, ಅವರು ಹಾಗೂ ನಮ್ಮ ತಂಡದವರು ಸೇರಿಕೊಂಡು ಫುಡ್ ಕಿಟ್ ಹಂಚುತ್ತಿದ್ದೆವು. ಅವರೂ ಸಹ ಕಳೆದ ಎರಡು ತಿಂಗಳಿಂದ ಅವರ ‘ಉಸಿರು’ ತಂಡದಿಂದ ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದರು. ಲಾಕ್‍ಡೌನ್ ವೇಳೆ ಸಹಾಯ ಮಾಡುತ್ತಿದ್ದರು, ಫುಡ್ ಕಿಟ್ ಹಂಚುತ್ತಿದ್ದರು. ಲಾಕ್‍ಡೌನ್ ಆದಾಗಿನಿಂದ ದಿನದ 24 ಗಂಟೆ ಸಹಾಯ ಮಾಡುವ ಕೆಲಸ ಮಾಡುತ್ತಿದ್ದರು. ಎಷ್ಟು ಜನಕ್ಕೆ ಸಹಾಯ ಮಾಡಿದ್ದಾರೆ ಲೆಕ್ಕವೇ ಇಲ್ಲ, ಅಷ್ಟು ಜನರಿಗೆ ಸಹಾಯ ಮಾಡಿದ್ದಾರೆ. ಬಳಿಕ ನಮ್ಮ ಜೊತೆಗೂ ಕೈ ಜೋಡಿಸಿದ ಎಂದು ವಿವರಿಸಿದರು.

    ಬಲಗಡೆ ತೊಡೆಗೆ ಏಟು ಬಿದ್ದಿದ್ದು, ಆಪರೇಷನ್ ಮಾಡಿದ್ದಾರೆ. ಅದರದ್ದೇನು ಸಮಸ್ಯೆ ಇಲ್ಲ, ಜೀವ ಭಯವಿಲ್ಲ, ಬೇಗ ಗುಣಮುಖರಾಗುತ್ತಾರೆ. ಆದರೆ ಅಪಘಾತ ಬಳಿಕ ಕೈ, ಕಾಲು ಮುರಿದಾಗ ಯಾವ ರೀತಿ ಸಮಸ್ಯೆ ಆಗುತ್ತದೋ ಅದು ಇದ್ದೇ ಇರುತ್ತೆ. ಒಳ್ಳೆಯ ವ್ಯಕ್ತಿ, ಅವರಿಗೆ ಕೆಟ್ಟದ್ದಾಗಲ್ಲ, ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ಒಳ್ಳೆಯ ಸಿನಿಮಾ ಮಾಡಿದ್ದಾರೆ. ಸಮಾಜದ ಜೊತೆ ಯಾವಾಗಲೂ ಸ್ಪಂದಿಸಿದ್ದಾನೆ, ಹೀಗಾಗಿ ಏನೂ ಆಗುವುದಿಲ್ಲ ಎಂದು ಭರವಸೆ ವ್ಯಕ್ತಪಡಿಸಿದರು.

  • ಮಾರುವೇಷದಲ್ಲಿ ದಸರಾ ವೀಕ್ಷಿಸಿದ ಸ್ಯಾಂಡಲ್‍ವುಡ್ ಖ್ಯಾತ ನಟ

    ಮಾರುವೇಷದಲ್ಲಿ ದಸರಾ ವೀಕ್ಷಿಸಿದ ಸ್ಯಾಂಡಲ್‍ವುಡ್ ಖ್ಯಾತ ನಟ

    ಮೈಸೂರು: ಸ್ಟಾರ್ ನಟ ಎಂದರೆ ಸಾಮಾನ್ಯ ದಿನಗಳಲ್ಲೇ ಜನ ಮುಗಿ ಬೀಳುತ್ತಾರೆ. ಇನ್ನೂ ದಸರಾ ಸಂದರ್ಭದಲ್ಲಿ ಕೇಳ್ತೀರಾ ಇರುವೆ ತರ ಮುತ್ತಿಕೊಳ್ಳುತ್ತಾರೆ. ಇದರಿಂದಾಗಿಯೇ ಹಲವು ನಟ, ನಟಿಯರು ಮಾರುವೇಷದಲ್ಲಿ ಸುತ್ತಾಡುತ್ತಾರೆ. ಅದೇ ರೀತಿ ದಸರಾ ನೋಡಲು ನಟ ನೀನಾಸಂ ಸತೀಶ್ ಮಾರುವೇಷದಲ್ಲಿ ಮೈಸೂರು ಸುತ್ತಿದ್ದಾರೆ.

    ಹೌದು ಮೈಸೂರು ದಸರಾ ನೋಡುವ ಆಸೆ ಯಾರಿಗಿರಲ್ಲ ಹೇಳಿ, ಅದರೆ ಜನಪ್ರಿಯ ನಟರು ಜನಸಾಮಾನ್ಯರಂತೆ ಜಾಲಿಯಾಗಿ ನಿಂತು ದಸರಾ ವೀಕ್ಷಿಸಲು ಸಾಧ್ಯವಿಲ್ಲ. ಹೀಗೆ ಮಾಡಿದರೆ ಅಭಿಮಾನಿಗಳು ಅವರನ್ನು ನೋಡಲು ಮುಗಿ ಬೀಳುತ್ತಾರೆ. ಇದಕ್ಕಾಗಿ ನಟ ನಿನಾಸಂ ಸತೀಶ್ ಭರ್ಜರಿ ಪ್ಲಾನ್ ಮಾಡಿ ಫುಲ್ ಪ್ಯಾಕಪ್ ಆಗಿ ದಸರಾ ವೀಕ್ಷಿಸಿದ್ದಾರೆ. ಅಲ್ಲದೆ ತಮ್ಮ ಸ್ನೇಹಿತರೊಂದಿಗೆ ಸಖತ್ ಎಂಜಾಯ್ ಮಾಡಿದ್ದಾರೆ.

    ದಸರಾ ಸಂದರ್ಭದಲ್ಲಿ ತಾವು ಮೈಸೂರಿನಲ್ಲಿ ಕಳೆದ ದಿನಗಳ ಕುರಿತು ನಿನಾಸಂ ಸತೀಶ್ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಪೆಟ್ರೊಮ್ಯಾಕ್ಸ್ ಸಿನಿಮಾದ ಶೂಟಿಂಗ್‍ಗಾಗಿ ನಿನಾಸಂ ಸತೀಶ್ ಮೈಸೂರಿನಲ್ಲಿಯೇ ಬೀಡು ಬಿಟ್ಟಿದ್ದು, ಇದೇ ವೇಳೆ ದಸರಾ ಸಹ ಆಗಮಿಸಿದೆ. ಹೀಗಾಗಿ ದಸರಾ ಸಮಯವನ್ನೂ ಎಂಜಾಯ್ ಮಾಡುತ್ತಿದ್ದಾರೆ. ಹಗಲೆಲ್ಲ ಸಿನಿಮಾ ಶೂಟಿಂಗ್ ನಡೆಸಿದರೆ, ರಾತ್ರಿ ವೇಳೆ ತಮ್ಮ ಸ್ನೇಹಿತರೊಂದಿಗೆ ದಸರಾ ವೀಕ್ಷಿಸಿದ್ದಾರೆ. ಅರಮನೆ ಸೇರಿದಂತೆ ಮೈಸೂರಿನ ವಿವಿಧ ಪ್ರಸಿದ್ಧ ಸ್ಥಳಗಳಿಗೆ ಭೇಟಿ ನೀಡಿ, ಆನಂದಿಸಿದ್ದಾರೆ.

    ಈ ಕುರಿತು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಅವರು, ಮೊದಲು ವಿಡಿಯೋ ಪೋಸ್ಟ್ ಮಾಡಿ, ವಿಜಯದಶಮಿಯ ಶುಭಾಶಯಗಳು ಎಂದು ಬರೆದು ಮೈಸೂರಿನ ಲೈಟಿಂಗ್ ಸೊಬಗನ್ನು ತೋರಿಸಿದ್ದಾರೆ. ಅಲ್ಲದೆ ಸ್ನೇಹಿತರೊಂದಿಗೆ ನಡೆದು ಬಹುತೇಕ ಪ್ರಸಿದ್ಧ ಸ್ಥಳಗಳಿಗೆ ಭೇಟಿ ನೀಡಿರುವುದನ್ನು ಸೆರೆ ಹಿಡಿದಿದ್ದಾರೆ. ಇಷ್ಟೆಲ್ಲ ಸುತ್ತಾಡಿದರೂ ಯಾರಿಗೂ ಸುಳಿವು ಸಿಕ್ಕಿಲ್ಲ. ಅಲ್ಲದೆ ಅವರ ಅಭಿಮಾನಿಗಳು ಕಮೆಂಟ್ ಮಾಡಿ ಆಶ್ಚರ್ಯ ವ್ಯಕ್ತಪಡಿಸಿದ್ದು, ನಮ್ಮ ಮೈಸೂರಿಗೆ ಬಂದಿದ್ದಿರಾ? ಗೊತ್ತೇ ಆಗಿಲ್ಲ ಎಂದು ಕಮೆಂಟ್ ಮಾಡಿದ್ದಾರೆ.

     

    View this post on Instagram

     

    #mysurudasara2020

    A post shared by My Name Is S…. (@sathish_ninasam_official) on

    ಮತ್ತೊಂದು ಪೋಸ್ಟ್ ನಲ್ಲಿ ಮೈಸೂರಿನ ಪ್ರಸಿದ್ಧ ಜಯಚಾಮರಾಜೇಂದ್ರ ವೃತ್ತದ ಬಳಿ ನಿಂತಿರುವ ಫೋಟೋ ಹಾಕಿ ಸಾಲುಗಳನ್ನು ಬರೆದಿರುವ ಅವರು, ಇಂದು ನನ್ನ ವೃತ್ತಿ ಜೀವನದಲ್ಲಿ ಮರೆಯಲಾಗದ ದಿನ. ನನ್ನ ಮೂರು ಚಿತ್ರಗಳ ಚಿತ್ರೀಕರಣ ಒಂದೇ ದಿನದಲ್ಲಿ ನಡೆಯುತ್ತಿದೆ. ‘ಮ್ಯಾಟ್ನಿ’ ಮತ್ತು ‘ದಸರಾ’ ನಾನಿಲ್ಲದ ದೃಶ್ಯಗಳನ್ನು ಬೆಂಗಳೂರಿನಲ್ಲಿ ಚಿತ್ರೀಕರಿಸುತ್ತಿದ್ದರೆ ಮೈಸೂರಿನಲ್ಲಿ ‘ಪೆಟ್ರೊಮ್ಯಾಕ್ಸ್’ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈ ಸೌಭಾಗ್ಯ ದೊರಕಲು ಇಷ್ಟು ವರ್ಷದ ನಿಮ್ಮ ಪ್ರೀತಿ ಕಾರಣ. ದಸರಾ ಹಬ್ಬದ ಶುಭಾಶಯಗಳು. ಲವ್ ಯೂ ಆಲ್… ಎಂದು ಬರೆದುಕೊಂಡಿದ್ದಾರೆ.

     

    View this post on Instagram

     

    ಇಂದು ನನ್ನ ವೃತ್ತಿ ಜೀವನದಲ್ಲಿ ಮರೆಯಲಾಗದ ದಿನ. ನನ್ನ ಮೂರು ಚಿತ್ರಗಳ, ಚಿತ್ರೀಕರಣ ಒಂದೇ ದಿನದಲ್ಲಿ ನಡೆಯುತ್ತಿದೆ. “ಮ್ಯಾಟ್ನಿ” ಮತ್ತು “ದಸರಾ” ನಾನಿಲ್ಲದ ದೃಶ್ಯಗಳನ್ನು ಬೆಂಗಳೂರಿನಲ್ಲಿ ಚಿತ್ರೀಕರಿಸುತ್ತಿದ್ದರೇ, ಮೈಸೂರಿನಲ್ಲಿ “ಪೆಟ್ರೊಮ್ಯಾಕ್ಸ್” ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈ ಸೌಭಾಗ್ಯ ದೊರಕಲು ಇಷ್ಟು ವರ್ಷದ ನಿಮ್ಮ ಪ್ರೀತಿ ಕಾರಣ. ದಸರಾ ಹಬ್ಬದ ಶುಭಾಶಯಗಳು. ಲವ್ ಯೂ ಆಲ್… #sathishninasam @sharmielamandre #petromax @arvind_sastry

    A post shared by My Name Is S…. (@sathish_ninasam_official) on

    ಸದ್ಯ ನಿನಾಸಂ ಸತೀಶ್ ಕೈಯ್ಯಲ್ಲಿ ಒಟ್ಟು 7 ಸಿನಿಮಾಗಳಿದ್ದು, ಇದರಲ್ಲಿ ಮೂರು ಸಿನಿಮಾಗಳ ಚಿತ್ರೀಕರಣ ಪ್ರಗತಿಯಲ್ಲಿದೆ. ಮ್ಯಾಟ್ನಿ, ದಸರಾ ಹಾಗೂ ಪೆಟ್ರೊಮ್ಯಾಕ್ಸ್ ಚಿತ್ರಗಳಲ್ಲಿ ತೊಡಗಿಕೊಂಡಿದ್ದಾರೆ. ತಮಿಳಿನ ಪಗೈವನುಕು ಅರುಳ್ವೈ ಸೇರಿ ಕನ್ನಡದ ಮೈ ನೇಮ್ ಇಸ್ ಸಿದ್ದೇಗೌಡ, ಪರಿಮಳ ಲಾಡ್ಜ್ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಮೂಲಕ ಸತೀಶ್ ಸಖತ್ ಬ್ಯುಸಿಯಾಗಿದ್ದಾರೆ.

  • ಬ್ರಹ್ಮಚಾರಿ ಬಳಿಕ ಮತ್ತೆ ಒಂದಾಗುತ್ತಿದೆ ಅದಿತಿ-ಸತೀಶ್ ಜೋಡಿ

    ಬ್ರಹ್ಮಚಾರಿ ಬಳಿಕ ಮತ್ತೆ ಒಂದಾಗುತ್ತಿದೆ ಅದಿತಿ-ಸತೀಶ್ ಜೋಡಿ

    ಬೆಂಗಳೂರು: ಸಖತ್ ಸದ್ದು ಮಾಡಿದ್ದ ಬ್ರಹ್ಮಚಾರಿ ಸಿನಿಮಾ ಮೂಲಕ ಮೋಡಿ ಮಾಡಿದ್ದ ನಿನಾಸಂ ಸತೀಶ್ ಹಾಗೂ ಅದಿತಿ ಪ್ರಭುದೇವಾ ಜೋಡಿ ಇದೀಗ ಮತ್ತೊಮ್ಮೆ ಬೆಳ್ಳಿ ಪರದೆ ಮೇಲೆ ಮೋಡಿ ಮಾಡಲು ಮುಂದಾಗಿದೆ.

    ತಮ್ಮ ವಿಭಿನ್ನ ಸಿನಿಮಾಗಳ ಮೂಲಕವೇ ಗುರುತಿಸಿಕೊಂಡಿರುವ ನಿನಾಸಂ ಸತೀಶ್ ಕ್ವಾಟ್ಲೆ ಸತೀಶಾ, ಲವ್ ಇನ್ ಮಂಡ್ಯ, ಅಯೋಗ್ಯ ಸೇರಿದಂತೆ ಹತ್ತು ಹಲವು ವಿಭಿನ್ನ ಸಿನಿಮಾಗಳ ಮೂಲಕ ಪರಿಚಿತರಾಗಿದ್ದಾರೆ. ಅಲ್ಲದೆ ಗೋದ್ರಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ಇದೀಗ ಬ್ಯುಸಿಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೊಮ್ಮೆ ಅದಿತಿ ಪ್ರಭುದೇವಾ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಬ್ರಹ್ಮಚಾರಿ ಸಿನಿಮಾ ಮೂಲಕ ಪಡ್ಡೆ ಹುಡುಗರ ಮನಸ್ಸು ಕದ್ದಿದ್ದ ಜೋಡಿ ಈ ಹೊಸ ಸಿನಿಮಾದಲ್ಲಿ ಯಾವ ರೀತಿ ಮೋಡಿ ಮಾಡಲಿದೆ ನೋಡಬೇಕಿದೆ.

    ಅಂದಾಗೆ ಹೊಸ ಸಿನಿಮಾಗೆ ‘ಪೆಟ್ರೋಮ್ಯಾಕ್ಸ್’ ಎಂದು ಹೆಸರಿಡಲಾಗಿದ್ದು, ವಿಜಯ ಪ್ರಸಾದ್ ಅವರು ನಿರ್ದೇಶಿಸುತ್ತಿದ್ದಾರೆ. ಅಕ್ಟೋಬರ್ ಎರಡನೇ ವಾರದಿಂದ ಶೂಟಿಂಗ್ ಆರಂಭವಾಗಲಿದೆ ಎಂದು ಹೇಳಲಾಗಿದೆ. ಮೈಸೂರಿನಲ್ಲಿ ಚಿತ್ರೀಕರಣ ನಡೆಸಲು ಸಿದ್ಧತೆ ನಡೆಸಲಾಗಿದೆ.

    ಈ ಕುರಿತು ಮಾಹಿತಿ ನೀಡಿರುವ ನಿರ್ದೇಶಕ ವಿಜಯ ಪ್ರಸಾದ್, ಈ ಸಿನಿಮಾವನ್ನು 2013ರಲ್ಲೇ ಆರಂಭಿಸಲು ಚಿಂತಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಇದೀಗ ನಿನಾಸಂ ಸತೀಶ್ ಹಲವು ವರ್ಷಗಳಿಂದ ವಿಭಿನ್ನ ಚಿತ್ರಗಳಲ್ಲಿ ನಟಿಸುವ ಮೂಲಕ ಬೆಳೆದು ನಿಂತಿದ್ದು, ಅವರಿಗೆ ತಕ್ಕಂತೆ ಸಿನಿಮಾ ಕಥೆಯನ್ನು ಮಾರ್ಪಾಡು ಮಾಡಲಾಗಿದೆ. ಚಿತ್ರದ ಟೈಟಲ್ ಹೊರತುಪಡಿಸಿ ಮೂಲ ಕಥೆಯಲ್ಲಿ ಉಳಿದೆಲ್ಲವನ್ನೂ ಬದಲಾಯಿಸಲಾಗಿದೆ. ಸತೀಶ್‍ಗೆ ಜೋಡಿಯಾಗಿ ಅದಿತಿ ಪ್ರಭುದೇವಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ನಾಲ್ವರು ಅನಾಥರ ಸುತ್ತ ಕಥೆ ಸುತ್ತುತ್ತದೆ. ಇದನ್ನು ಸತೀಶ್, ಅರುಣ್, ನಾಗಭೂಷಣ್ ಹಾಗೂ ಹೇಮಾ ದತ್ ಬರೆದಿದ್ದಾರೆ. ಪೆಟ್ರೋಮ್ಯಾಕ್ಸ್ ಬೆಳಕನ್ನು ಸೂಚಿಸುತ್ತದೆ. ಅದು ಈ ನಾಲ್ವರ ಜೀವನದಲ್ಲಿ ಅವಶ್ಯವಾಗಿದೆ. ಹೀಗಾಗಿ ಈ ಟೈಟಲ್ ಇಡಲಾಗಿದೆ. ನನ್ನ ಹಿಂದಿನ ಸಿನಿಮಾಗಳ ರೀತಿಯಲ್ಲೇ ಈ ಚಿತ್ರದಲ್ಲಿ ಸಹ ಭಾವನೆ, ಮಾನವೀಯ ಮೌಲ್ಯ, ಬುದ್ಧಿ, ಹಾಸ್ಯ ಹಾಗೂ ಸಾಮಾಜಿಕ ಅಂಶಗಳ ಮೇಲೆ ಕೇಂದ್ರಿಕೃತವಾಗಿದೆ ಎಂದು ಸಿನಿಮಾದ ಕಥೆ ಕುರಿತು ವಿವರಿಸಿದ್ದಾರೆ.

    ಸತೀಶ್ ಸಹ ತಮ್ಮ ಹೊಸ ಸಿನಿಮಾ ಕುರಿತು ಮಾಹಿತಿ ಹಂಚಿಕೊಂಡಿದ್ದು, ಟಿವಿ ಸಿರಿಯಲ್‍ಗಳಲ್ಲಿ ವಿಜಯ ಅವರ ಜೊತೆ ಕೆಲಸ ಮಾಡಿದ್ದೇನೆ. ಅವರ ಬರವಣಿಗೆಯ ದೊಡ್ಡ ಫ್ಯಾನ್ ನಾನು. ಹೀಗಾಗಿ ಈ ಪ್ರಾಜೆಕ್ಟ್ ಒಪ್ಪಿಕೊಂಡೆ. ಈ ಸಿನಿಮಾ ಪ್ರೇಕ್ಷಕರನ್ನು ಒಂದು ಫನ್ ಲೋಕಕ್ಕೆ ಕೊಂಡೊಯ್ಯುತ್ತದೆ. ಇದರ ಜೊತೆಗೆ ಪ್ರತಿಯೊಬ್ಬರ ಜೀವನದಲ್ಲಿ ಸಂಬಂಧಗಳು ಹೇಗೆ ಪ್ರಮುಖ ಪಾತ್ರ ವಹಿಸುತ್ತವೆ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

    ಸಿನಿಮಾದಲ್ಲಿ ನಿನಾಸಂ ಸತೀಶ್ ಹಾಗೂ ಅದಿತಿ ಪ್ರಭುದೇವಾ ಅವರ ಕೆಮಿಸ್ಟ್ರಿ ಹೇಗೆ ಮೂಡಿ ಬರಲಿದೆ ಎಂಬುದು ಅಭಿಮಾನಿಗಳ ಕುತೂಹಲವಾಗಿದೆ. ಮತ್ತೊಮ್ಮೆ ಈ ಜೋಡಿ ಪ್ರೇಕ್ಷಕರನ್ನು ಹೇಗೆ ಸೆಳೆಯುತ್ತೆ ಕಾದು ನೋಡಬೇಕಿದೆ.

  • ಚಿರಂಜೀವಿ ಸರ್ಜಾ ಹಾಗೂ ನಾನು ಅಣ್ಣ ತಮ್ಮಿಂದರಂತೆ ಇದ್ವಿ –  ನೀನಾಸಂ ಸತೀಶ್

    ಚಿರಂಜೀವಿ ಸರ್ಜಾ ಹಾಗೂ ನಾನು ಅಣ್ಣ ತಮ್ಮಿಂದರಂತೆ ಇದ್ವಿ – ನೀನಾಸಂ ಸತೀಶ್

    ಬೆಂಗಳೂರು: ಚಿರಂಜೀವಿ ಸರ್ಜಾ ಹಾಗೂ ನಾನು ಅಣ್ಣ ತಮ್ಮಿಂದರಂತೆ ಇದ್ದೆವು. ನಾವು ಊರು, ಮನೆ, ಮಠ ಬಿಟ್ಟು ಬಂದಾಗ ನಮಗೆ ಆಶ್ರಯ ನೀಡಿದ್ದೇ ಸಿನಿಮಾ ಕುಟುಂಬ. ಎಲ್ಲ ಸಿನಿಮಾಗಳಿಗೂ ಒಬ್ಬರಿಗೊಬ್ಬರು ವಿಶ್ ಮಾಡಿಕೊಳ್ಳುತ್ತಿದ್ದೆವು ಎಂದು ನಟ ನೀನಾಸಂ ಸತೀಶ್ ತಮ್ಮ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

    https://www.youtube.com/watch?v=CBAYIvDRUk8

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸಿನಿಮಾ ರಂಗದಲ್ಲಿ ಅಣ್ಣ ತಮ್ಮಂದಿರಂತೆ ಇದ್ದೆವು. ಕೂತು ಹರಟೆ ಹೊಡೆಯುತ್ತಿದ್ದೆವು. ನಾವು ಊರು ಬಿಟ್ಟು ಬಂದಾಗ ನಮಗೆ ಆಶ್ರಯ ನೀಡಿ ಜೀವನ ರೂಪಿಸಿಕೊಳ್ಳಲು ಸಹಾಯ ಮಾಡಿದವರು. ನಂತರ ನಮ್ಮ ಕುಟುಂಬ ಎನ್ನುವಂತೆ ಸಂಬಂಧ ಹೊಂದಿದ್ದೆವು. ಇಷ್ಟು ಸಣ್ಣ ವಯಸ್ಸಿನಲ್ಲಿ ಹೀಗಾಗಿದ್ದು ತುಂಬಾ ಆಘಾತವನ್ನುಂಟು ಮಾಡಿದೆ ಎಂದು ತಿಳಿಸಿದ್ದಾರೆ.

    ಚಿರಂಜೀವಿ ಅವರಿಗೆ ಸಿನಿಮಾದಲ್ಲಿ ಸಾಧನೆ ಮಾಡಬೇಕೆಂಬ ಕನಸಿತ್ತು. ಈ ಕುರಿತು ನಾನೂ ಸೇರಿದಂತೆ ಸಮಾನ ವಯಸ್ಕರು ಸೇರಿ ಚರ್ಚೆ ನಡೆಸುತ್ತಿದ್ದೆವು. ಅಲ್ಲದೆ ಚೈತನ್ಯ ನಾನು, ಧೃವ, ಯೋಗಿ ಸೇರಿ ಸಿನಿಮಾ ಮಾಡಲು ಚರ್ಚೆ ನಡೆಸಿದ್ದೆವು. ಇತ್ತೀಚೆಗೆ ರಾತ್ರಿಯಿಂದ ಬೆಳಗ್ಗೆ 5 ಗಂಟೆ ವರೆಗೂ ಚರ್ಚೆ ಮಾಡಿದ್ದೆವು. ಹೀಗೆ ಬಹುತೇಕ ಸಂದರ್ಭಗಳಲ್ಲಿ ಭೇಟಿಯಾಗುತ್ತಿದ್ದೆವು. ಹರಟೆ ಹೊಡೆಯುತ್ತಿದ್ದೆವು ಎಂದು ನೆನೆದಿದ್ದಾರೆ.

    ಪ್ರತಿ ಸಿನಿಮಾ ಬಂದಾಗ ಅವನಿಗೆ ನಾನು ಶುಭಾಶಯ ತಿಳಿಸುತ್ತಿದ್ದೆ, ನನ್ನ ಸಿನಿಮಾ ಬಂದಾಗ ಅವನು ಶುಭಾಶಯ ತಿಳಿಸುತ್ತಿದ್ದ. ಹೀಗೆ ಅಣ್ಣ ತಮ್ಮಂದಿರಂತೆ ಇದ್ದೆವು, ಈಗ ಈ ಸುದ್ದಿ ಕೇಳಿ ಹೊಟ್ಟೆ ಉರಿಯುತ್ತಿದೆ ಎಂದು ನಿನಾಸಂ ಸತೀಶ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

  • ಗಣಿನಾಡಿನ ಚಿತ್ರಮಂದಿರದಲ್ಲಿ `ಅಯೋಗ್ಯ’ ಚಿತ್ರ ವೀಕ್ಷಿಸಿದ ನಿನಾಸಂ ಸತೀಶ್

    ಗಣಿನಾಡಿನ ಚಿತ್ರಮಂದಿರದಲ್ಲಿ `ಅಯೋಗ್ಯ’ ಚಿತ್ರ ವೀಕ್ಷಿಸಿದ ನಿನಾಸಂ ಸತೀಶ್

    ಬಳ್ಳಾರಿ: ಗಣಿನಾಡು ಬಳ್ಳಾರಿಗೆ ಅಯೋಗ್ಯ ಚಿತ್ರತಂಡ ಭೇಟಿ ನೀಡಿದ್ದು, ಅಲ್ಲಿನ ಉಮಾ ಚಿತ್ರಮಂದಿರದಲ್ಲಿ ಸಿನಿಮಾವನ್ನು ವೀಕ್ಷಣೆ ಮಾಡಿದೆ.

    ಅಯೋಗ್ಯ ಚಿತ್ರ ವೀಕ್ಷಣೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ನಿನಾಸಂ ಸತೀಶ್ ಅವರು, ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲಾ ಕಡೆಯಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಈ ಗೆಲವು ನನ್ನ ಗೆಲುವಲ್ಲ, ಅಭಿಮಾನಿಗಳ ಗೆಲುವಾಗಿದೆ. ಈ ಭಾಗದಲ್ಲಿ ಕನ್ನಡ ಸಿನಿಮಾಗಳಿಗೆ ಅತಿ ಹೆಚ್ಚು ಪ್ರೋತ್ಸಾಹ ದೊರಕುತ್ತಿದೆ. ಅದು ನನ್ನ ಸಿನಿಮಾವನ್ನು ಇಷ್ಟು ಬೆಂಬಲಿಸಿರುವುದು ನನ್ನ ಹಾಗೂ ನಮ್ಮ ಚಿತ್ರತಂಡದ ಪುಣ್ಯ ಎಂದು ಹೇಳಬಹುದು ಎಂದು ಹೇಳಿದ್ದಾರೆ.

    ನಾವು ಪ್ರಮುಖವಾಗಿ ಬಯಲು ಮುಕ್ತ ಶೌಚಾಲಯದ ದೃಷ್ಠಿಕೋನದಯಡಿಯಲ್ಲಿ ಚಿತ್ರೀಕರಣ ಮಾಡಿದ್ದೇವೆ. ಉತ್ತರ ಕರ್ನಾಟಕ ಭಾಗದಲ್ಲಿ ಬಯಲು ಶೌಚಾಲಯ ಇನ್ನೂ ಸಹ ಇದೆ. ಬಯಲು ಶೌಚಾಲಯಕ್ಕೆ ಹೋದಾಗ ಹಾವು ಕಚ್ಚಿ ಸತ್ತವರ ಸಂಖ್ಯೆ ಹೆಚ್ಚಾಗಿದೆ. ಅಲ್ಲದೇ ರೇಪ್ ಅಟೆಮ್ಟ್ ಕೂಡ ಹೆಚ್ಚು ನಡೆಯುತ್ತಿವೆ. ಈ ಎಲ್ಲಾ ಅವಾಂತರಗಳಿಂದ ತಪ್ಪಿಸುವ ಉದ್ದೇಶವೇ ನಮ್ಮ ಚಿತ್ರದ ಮೂಲ ಮಂತ್ರವಾಗಿದೆ. ಬಳ್ಳಾರಿ ಜನರಿಗೂ ನಮಗೂ ಅವಿನಾಭಾವ ಸಂಬಂಧವಿದೆ. ಮತ್ತೆ ನಾನು ಬಳ್ಳಾರಿಗೆ ಬರುವೆ ಎಂದು ಹೇಳಿದ್ದಾರೆ.

    ಈ ವೇಳೆ ಅಭಿಮಾನಿಗಳು ನಿನಾಸಂ ಸತೀಶ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿದ್ದರು. ಈ ಚಿತ್ರದಲ್ಲಿ ನಿನಾಸಂ ಸತೀಶ್ ಅವರಿಗೆ ನಟಿ ರಚಿತಾ ರಾಮ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಯೋಗರಾಜ್ ಭಟ್ ಶಿಷ್ಯ ಮಹೇಶ್ ನಿರ್ದೇಶನದ ಮೊದಲ ಸಿನಿಮಾ ಇದಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv