Tag: ನಿಫಾ ವೈರಸ್

  • ಕೋಝಿಕ್ಕೋಡ್‌ನಲ್ಲಿ ಮೃತಪಟ್ಟ ವ್ಯಕ್ತಿಗೆ ನಿಫಾ ವೈರಸ್‌  ದೃಢ

    ಕೋಝಿಕ್ಕೋಡ್‌ನಲ್ಲಿ ಮೃತಪಟ್ಟ ವ್ಯಕ್ತಿಗೆ ನಿಫಾ ವೈರಸ್‌ ದೃಢ

    ತಿರುವನಂತಪುರಂ:  ಕೋಝಿಕ್ಕೋಡ್‌ನಲ್ಲಿ (Kozhikode) ಮೃತಪಟ್ಟ ಇಬ್ಬರಲ್ಲಿ ಓರ್ವ ವ್ಯಕ್ತಿಗೆ ನಿಫಾ ವೈರಸ್‌ (Nipah Virus) ತಗುಲಿರುವುದು ದೃಢಪಟ್ಟಿದೆ.

    ಈ ಸಂಬಂಧ ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ನಿಫಾ ಸೋಂಕಿನಿಂದಲೇ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

    ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ವ್ಯಕ್ತಿ ಸೋಮವಾರ ಸಾವನ್ನಪ್ಪಿದ್ದರು. ನಿಫಾ ವೈರಸ್‌ ಸೋಂಕು ತಗುಲಿರುವ ಶಂಕೆಯ ಹಿನ್ನೆಲೆಯಲ್ಲಿ ಮೃತನ ಸ್ಯಾಂಪಲ್‌ ಅನ್ನು ಟೆಸ್ಟ್‌ಗೆ ಪುಣೆಗೆ ಕಳುಹಿಸಲಾಗಿತ್ತು. ಸದ್ಯ ಅದರ ರಿಪೋರ್ಟ್‌ ಬಂದಿದ್ದು, ನಿಫಾ ವೈರಸ್‌ನಿಂದಲೇ ಮೃತಪಟ್ಟಿರುವುದು ಬಯಲಾಗಿದೆ. ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯ ಸ್ಯಾಂಪಲ್ ಫಲಿತಾಂಶ ಬಂದ ತಕ್ಷಣ ದೆಹಲಿಯಿಂದ ಉನ್ನತ ಅಧಿಕಾರಿಗಳ ಕೇಂದ್ರ ತಂಡ ಕೋಯಿಕ್ಕೋಡ್‌ಗೆ ಆಗಮಿಸಲಿದೆ.

    ಇಬ್ಬರ ಸಾವು: ಕೋಝಿಕ್ಕೋಡ್‌ನಲ್ಲಿ ಇಬ್ಬರು ಮೃತಪಟ್ಟಿದ್ದು, ಇಬ್ಬರಿಗೂ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿತ್ತು. ಮೃತಪಟ್ಟವರಲ್ಲಿ ಒಬ್ಬರ ಕುಟುಂಬದ ನಾಲ್ವರಿಗೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ 9 ವರ್ಷದ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. 10 ತಿಂಗಳ ಮಗುವಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೆ 75 ಜನರ ಸಂಪರ್ಕ ಪಟ್ಟಿ ಸಿದ್ಧಪಡಿಸಲಾಗಿದೆ.

    ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಕ್ವಾರಂಟೈನ್‌ಗೆ ಸಿದ್ಧತೆಗಳನ್ನು ನಡೆಸಿದ್ದು, ಕೋಝಿಕ್ಕೋಡ್ ಜಿಲ್ಲೆಯ ಆಸ್ಪತ್ರೆಗಳಲ್ಲಿ ಮಾಸ್ಕ್, ಪಿಪಿಇ ಬಳಸಲು ಆರೋಗ್ಯ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಅನಿವಾರ್ಯತೆ ಇದ್ದರೆ ಮಾತ್ರ ಆಸ್ಪತ್ರೆಗೆ ಬನ್ನಿ. ಅನಗತ್ಯವಾಗಿ ಆಸ್ಪತ್ರೆಗೆ ಭೇಟಿ ನೀಡುವುದು ಬೇಡ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮನವಿ ಮಾಡಿದ್ದಾರೆ.

    ನಿಫಾ ವೈರಸ್ ಎಂದರೇನು?: 1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಫಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಫಾ ವೈರಸ್ ಎಂದು ಕರೆಯುತ್ತಾರೆ. ನಿಫಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಹೀಗಾಗಿ ನಿಫಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ. ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ.

    ವೈರಸ್ ಹೇಗೆ ಹರಡುತ್ತದೆ?: ಸೋಂಕಿರುವ ಬಾವಲಿ ಕಚ್ಚಿದ ಹಣ್ಣನ್ನು ತಿನ್ನವುದರಿಂದ ವೈರಸ್‌ ಹರಡುವ ಸಾಧ್ಯತೆಗಳಿವೆ. ಅಲ್ಲದೆ ಇದೊಂದು ಸಾಂಕ್ರಾಮಿಕ ಕಾಯಿಲೆಯಾದ್ರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಹೀಗಾಗಿ ಬಾವಲಿಗಳು ಕಚ್ಚಿದ ಸಾಧ್ಯತೆಯಿರುವ ಹಣ್ಣುಗಳನ್ನು ತಿನ್ನಲೇಬೇಡಿ.

    ನಿಫಾ ವೈರಸ್ ಲಕ್ಷಣಗಳೇನು?
    * ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ
    * ಕೆಲವರಲ್ಲಿ ಅಪಸ್ಮಾರದ ಲಕ್ಷಣಗಳು ಕಾಣಿಸುತ್ತವೆ
    * ಈ ಲಕ್ಷಣಗಳು ಸಾಮಾನ್ಯವಾಗಿ 10ರಿಂದ 12 ದಿನ ಕಾಣಿಸುತ್ತದೆ
    * ಬಳಿಕ ಪ್ರಜ್ಞಾಹೀನರಾಗುತ್ತಾರೆ
    * ನಂತರ ಈ ಜ್ವರ ತೀವ್ರವಾಗಿ ಮೆದುಳಿಗೆ ವ್ಯಾಪಿಸುತ್ತದೆ
    * ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎರಡು ತಿಂಗಳು ಕೇರಳದಿಂದ ದಕ್ಷಿಣ ಕನ್ನಡ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ

    ಎರಡು ತಿಂಗಳು ಕೇರಳದಿಂದ ದಕ್ಷಿಣ ಕನ್ನಡ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ

    ಮಂಗಳೂರು: ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕೊರೊನಾ ಹಾಗೂ ನಿಫಾ ಆತಂಕ ಎದುರಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಎರಡು ತಿಂಗಳುಗಳ ಕಾಲ ಕೇರಳದಿಂದ ಜಿಲ್ಲೆಗೆ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ತುರ್ತು ಕಾರಣವಿಲ್ಲದೆ ಯಾರೂ ಅನಗತ್ಯ ಪ್ರಯಾಣಿಸಬೇಡಿ ಎಂದು ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ.

    ಕೇರಳದಲ್ಲಿ ಕೋವಿಡ್ ಕೇಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಸದ್ಯ ಕೋವಿಡ್ ನಿಯಂತ್ರಣಕ್ಕೆ ಬರುವ ಲಕ್ಷಣ ಕಾಣುತ್ತಿಲ್ಲ. ಇದರ ಜೊತೆಗೆ ನಿಫಾ ವೈರಸ್ ಸಹ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಇದೆಲ್ಲದರ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೊರೊನಾ ಪಾಸಿಟಿವ್ ಪ್ರಕರಣ ದಿನಿನಿತ್ಯ 200 ಮೇಲೆ ಬರ್ತಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಕೇರಳದಿಂದ ದ.ಕ ಜಿಲ್ಲೆಗೆ ಬರುವವರು ಹಾಗೂ ಅಲ್ಲಿಗೆ ತೆರಳುವವರಿಗೆ ನಿರ್ಬಂಧ ವಿಧಿಸಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಸೂಚನೆಗಳನ್ನು ನೀಡಿದ್ದು, ಕೇರಳದಿಂದ ಬರುವ ಪ್ಯಾರಾ ಮೆಡಿಕಲ್, ನರ್ಸಿಂಗ್ ಸೇರಿದಂತೆ ವಿದ್ಯಾರ್ಥಿಗಳು ಸಹ ಅಕ್ಟೋಬರ್ ಅಂತ್ಯವರೆಗೆ ಮಂಗಳೂರಿಗೆ ಬರಬೇಡಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾರವಾರ ಕಡಲತೀರದಲ್ಲಿ ಅಪರೂಪದ ಗ್ರೀನ್ ಸೀ ಆಮೆ ಕಳೇಬರ ಪತ್ತೆ

    ಕೇರಳದಲ್ಲಿದ್ದವರಿಗೆ ಈ ಬಗ್ಗೆ ಆಯಾ ಶಿಕ್ಷಣ ಸಂಸ್ಥೆ ಸೂಚನೆ ನೀಡುವಂತೆ ಹೇಳಲಾಗಿದೆ. ಇದರ ಜೊತೆಗೆ ಕೇರಳಕ್ಕೆ ತೆರಳುವ ಉದ್ದೇಶ ಇದ್ದವರು ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡುವಂತೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಕಾರ್ಯಾಚರಣೆ ಮಾಡುತ್ತಿರುವ ಆಸ್ಪತ್ರೆ, ನರ್ಸಿಂಗ್ ಹೋಮ್, ಕಚೇರಿ, ಹೊಟೇಲ್, ಕೈಗಾರಿಕೆಗಳಲ್ಲಿರುವ ಕೇರಳ ಮೂಲದ ಸಿಬ್ಬಂದಿ ಸಹ ಕೇರಳದಿಂದ ಬಂದು ಹೋಗುವುದನ್ನು ಕಡಿಮೆಗೊಳಿಸಿ ಎಂದು ಹೇಳಲಾಗಿದೆ. ಉದ್ಯೋಗದಾತರು ಕೇರಳ ಮೂಲದ ಸಿಬ್ಬಂದಿಯನ್ನು ಪ್ರವೇಶ ಮಾಡದಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ತುರ್ತು ಕಾರಣವಿಲ್ಲದೇ ಪ್ರಯಾಣಿಸಬೇಡಿ ಎಂದು ಜಿಲ್ಲಾಡಳಿತ ಸೂಚಿಸಿದೆ. ಇದನ್ನೂ ಓದಿ: ಇಂದು 1074 ಪಾಸಿಟಿವ್, 4 ಸಾವು – ಪಾಸಿಟಿವಿಟಿ ರೇಟ್ 0.63%ಕ್ಕೆ ಇಳಿಕೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಾಕಷ್ಟು ಕ್ರಮ ಕೈಗೊಂಡರೂ ಕೇಸ್ 100ಕ್ಕಿಂತ ಕೆಳಗೆ ಬರುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ ಜಿಲ್ಲಾಡಳಿತ ನೀಡಿರುವ ಈ ಸೂಚನೆ ಎಷ್ಟು ಪರಿಣಾಮಕಾರಿಯಾಗುತ್ತೆ ಎಂಬುದನ್ನು ಕಾದು ನೋಡಬೇಕಿದೆ.

  • ಒಟ್ಟಾಗಿ ಹೋಗೋಣವೆಂದು ಹೆಚ್‍ಡಿಕೆಗೆ ಹೇಳಿದ್ದೇನೆ: ಮೈತ್ರಿ ಬಗ್ಗೆ ಸಿಎಂ ಸ್ಪಷ್ಟನೆ

    ಒಟ್ಟಾಗಿ ಹೋಗೋಣವೆಂದು ಹೆಚ್‍ಡಿಕೆಗೆ ಹೇಳಿದ್ದೇನೆ: ಮೈತ್ರಿ ಬಗ್ಗೆ ಸಿಎಂ ಸ್ಪಷ್ಟನೆ

    – ದೆಹಲಿಯಲ್ಲಿ ನಾಯಕರ ಭೇಟಿಯಾಗ್ತೇನೆ
    – ನಿಫಾ ವೈರಸ್ ಬಗ್ಗೆ ರಾಜ್ಯದಲ್ಲೂ ಬಿಗಿ ಕ್ರಮ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಜೊತೆ ನಿನ್ನೆ ವಿವರವಾಗಿ ಚರ್ಚೆ ಮಾಡಿಲ್ಲ. ಆದರೆ ಒಟ್ಟಾಗಿ ಹೋಗೋಣವೆಂದು ಹೇಳಿರುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಲಬುರಗಿ ಪಾಲಿಕೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಸ್ಥಳೀಯ ಮುಖಂಡರ ಜೊತೆ ಚರ್ಚೆ ಮಾಡಿ ಹೇಳ್ತೀನಿ ಅಂತ ಹೆಚ್‍ಡಿಕೆ ಹೇಳಿದ್ದಾರೆ. ಪಾಲಿಕೆಯಲ್ಲಿ ಒಂದಾಗಿ ಕೆಲಸ ಮಾಡಲು ಅವರು ಒಲವು ತೋರಿಸಿದ್ದಾರೆ. ಬಹುತೇಕ ಬಿಜೆಪಿ-ಜೆಡಿಎಸ್ ಕಲಬುರಗಿ ಪಾಲಿಕೆಯಲ್ಲಿ ಸೇರಿ ಮೆಜಾರಿಟಿ ಮಾಡ್ತೇವೆ ಎಂದು ಹೇಳುವ ಮೂಲಕ ಮೈತ್ರಿ ಖಚಿತ ಎಂದು ಸ್ಪಷ್ಟವಾಗಿ ಹೇಳಿದರು.

    ಇದೇ ವೇಳೆ ದೆಹಲಿಗೆ ತೆರಳುವ ಬಗ್ಗೆ ಪ್ರತಿಕ್ರಿಯಿಸಿ, ಇಂದು ನಾನು ದೆಹಲಿಗೆ ಹೋಗ್ತಿದ್ದೀನಿ. ಅಲ್ಲಿ ನಾಲ್ಕಾರು ಜನ ಕೇಂದ್ರ ಸಚಿವರ ಭೇಟಿ ಮಾಡುತ್ತೇನೆ. ಗಡ್ಕರಿ ಭೇಟಿ, ಹಣಕಾಸು ಸಚಿವರ ಭೇಟಿ ಮಾಡಿ ಮಾತುಕತೆ ನಡೆಸುವುದಾಗಿ ತಿಳಿಸಿದರು. ಇತ್ತ ಸಿಎಂ ದೆಹಲಿಗೆ ತೆರಳುವ ಹಿನ್ನೆಲೆಯಲ್ಲಿ ಆರ್ ಟಿ ನಗರ ನಿವಾಸದಲ್ಲಿ ಸಚಿವಾಕಾಂಕ್ಷಿ ಶಾಸಕ ಎಂಪಿ ಕುಮಾರಸ್ವಾಮಿ, ಕುಡಚಿ ಶಾಸಕ ರಾಜೀವ್, ಶಿವರಾಜ್ ಪಾಟೀಲ್ ಸಿಎಂ ಅವರನ್ನು ಭೇಟಿ ಮಾಡಿದರು. ಇದನ್ನೂ ಓದಿ: ಕೊರೊನಾ ಬೆನ್ನಲ್ಲೇ 11 ಮಂದಿಯಲ್ಲಿ ನಿಫಾ ರೋಗ ಲಕ್ಷಣ- 3 ಜಿಲ್ಲೆಗಳಲ್ಲಿ ಹೈ ಅಲರ್ಟ್

    ಕೇರಳದಲ್ಲಿ ನಿಫಾ ವೈರಸ್ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ನಾವು ಕೇರಳ ಗಡಿ ಸೀಲ್ ಮಾಡಿದಾಗ ಲಸಿಕೆ, ಟೆಸ್ಟಿಂಗ್ ಗೆ ಕ್ರಮ ಕೈಗೊಂಡಿದ್ದೆವು. ಈಗ ಇನ್ನಷ್ಟು ಬಿಗಿ ಕ್ರಮ ಕೈಗೊಳ್ತೇವೆ. ನಿಫಾ ವೈರಸ್ ಬಗ್ಗೆ ತಜ್ಞರಿಂದ ಸಂಪೂರ್ಣ ಮಾಹಿತಿಯನ್ನು ಕೇಳಿದ್ದೇನೆ. ನಿಫಾ ವೈರಸ್ ಹೇಗೆ ಹಬ್ಬುತ್ತೆ, ಏನೆಲ್ಲ ಮುಂಜಾಗ್ರತೆ ಕ್ರಮ ತಗೋಬೇಕು ಅಂತ ಸಲಹೆ ಕೇಳಿದ್ದೇನೆ. ನಿಫಾ ವೈರಸ್ ಬಗ್ಗೆ ನಿಗಾ ವಹಿಸಿದ್ದೇವೆ. ವೈರಸ್ ತಡೆಗೆ ಇನ್ನಷ್ಟು ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಇದನ್ನೂ ಓದಿ: ‘ಬಾವಲಿ ಜ್ವರ’ – ರೋಗ ಲಕ್ಷಣ ಏನು, ತಡೆಗಟ್ಟೋದು ಹೇಗೆ?

    ನಗರದಲ್ಲಿ ರಸ್ತೆ ಗುಂಡಿಗೆ ವಿಕಲಚೇತನ ಬಲಿ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿ, ರಸ್ತೆ ಗುಂಡಿಗಳನ್ನು ಮುಚ್ಚುವ ಬಗ್ಗೆ ಮೊನ್ನೆ ಸಭೆಯಲ್ಲಿ ಸೂಚಿಸಲಾಗಿದೆ. ಸದ್ಯ ಮಳೆ ಇದೆ, ಮಳೆ ಕಮ್ಮಿಯಾದ ಮೇಲೆ ರಸ್ತೆ ಗುಂಡಿ ಮುಚ್ಚುವ ಕೆಲಸ ವಾರ್ ಫೂಟ್ ನಲ್ಲಿ ಮಾಡ್ತೇವೆ ಎಂದು ಹೇಳಿದರು.

  • ಕೋವಿಡ್‌ಗೂ ಮೊದಲು ಬಂದಿದ್ದ ನಿಫಾ ವೈರಸ್‌ಗೆ ಕೇರಳದಲ್ಲಿ 12ರ ಬಾಲಕ ಬಲಿ

    ಕೋವಿಡ್‌ಗೂ ಮೊದಲು ಬಂದಿದ್ದ ನಿಫಾ ವೈರಸ್‌ಗೆ ಕೇರಳದಲ್ಲಿ 12ರ ಬಾಲಕ ಬಲಿ

    ತಿರುವನಂತಪುರ: ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಆಸ್ಪತ್ರೆಗೆ ದಾಖಲಾಗಿದ್ದ 12 ವರ್ಷದ ಬಾಲಕ ಭಾನುವಾರ ಬೆಳಗ್ಗೆ ನಿಫಾ ವೈರಸ್‍ನಿಂದಾಗಿ ಸಾವನ್ನಪ್ಪಿದ್ದಾನೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.

    ಪುಣೆಯ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಲಾಗಿದ್ದ ಕೆಲವು ಮಾದರಿಗಳಿಂದ ಬಾಲಕನಿಗೆ ನಿಫಾ ವೈರಸ್ ಇರುವುದು ದೃಢಪಟ್ಟಿದೆ. ಶನಿವಾರ ರಾತ್ರಿ ಬಾಲಕನ ಸ್ಥಿತಿ ಗಂಭೀರವಾಗಿದ್ದು, ದುರದೃಷ್ಟವಶತ್ ಬಾಲಕ ಇಂದು ಮುಂಜಾನೆ 5 ಗಂಟೆಗೆ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ನಿಫಾ ವೈರಸ್

    Veena George

    ಇದೀಗ ಬಾಲಕನ ಜೊತೆ ಸಂಪರ್ಕ ಹೊಂದಿದ್ದವರನ್ನು ಪತ್ತೆ ಹಚ್ಚಲು ಸರ್ಕಾರ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಬಾಲಕನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರ ಕ್ವಾರಂಟೈನ್‍ಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೇ ಕೋಜಿಕೋಡ್ ಆಸ್ಪತ್ರೆಯಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆಯಾದ ಬಳಿಕ ಕೇಂದ್ರ ಸರ್ಕಾರ ತಾಂತ್ರಿಕ ಬೆಂಬಲ ನೀಡಲು ರಾಷ್ಟ್ರೀಯ ರೋಗ ನಿಯಂತ್ರಣ ತಂಡವನ್ನು ಕೇರಳಕ್ಕೆ ಕಳುಹಿಸಿಕೊಟ್ಟಿದೆ ಎಂದಿದ್ದಾರೆ. ಇದನ್ನೂ ಓದಿ:  ಕೇರಳ ನರ್ಸ್ ಲಿನಿಗೆ ಫ್ಲೋರೆನ್ಸ್ ನೈಟಿಂಗೇಲ್ ಪ್ರಶಸ್ತಿ

  • ಬಾವಲಿಗಳಲ್ಲೂ ಕೊರೊನಾ ವೈರಸ್- ಐಸಿಎಂಆರ್ ಸಂಶೋಧನೆಯಲ್ಲಿ ಬಹಿರಂಗ

    ಬಾವಲಿಗಳಲ್ಲೂ ಕೊರೊನಾ ವೈರಸ್- ಐಸಿಎಂಆರ್ ಸಂಶೋಧನೆಯಲ್ಲಿ ಬಹಿರಂಗ

    ಬೆಂಗಳೂರು: ನಿಫಾದಿಂದ ಕಂಗೆಡಿಸಿದ್ದ ಬಾವಲಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ವಿಚಾರ ಕರ್ನಾಟಕವನ್ನೂ ಆತಂಕಕ್ಕೀಡು ಮಾಡಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್ ವಾಕರ್ಸ್ ಗೂ ಈಗ ಬಾವಲಿಯ ಭಯ ಕಾಡುತ್ತಿದ್ದು ಲಾಕ್‍ಡೌನ್ ನಂತ್ರ ವಾಕ್ ಮಾಡೋದಾ ಬೇಡ್ವಾ ಅನ್ನೋ ಚಿಂತೆಯಲ್ಲಿದ್ದಾರೆ.

    ಮಹಾಮಾರಿ ಕೊರೊನಾ ವೈರಸ್ ಇಡೀ ಜಗತ್ತಿನ ಜನರ ನಿದ್ದೆಗೆಡಿಸಿದೆ. ಕೊರೊನಾ ವೈರಸ್ ಹೊಡೆತಕ್ಕೆ ಸಿಲುಕಿ ರಾಜ್ಯ, ರಾಷ್ಟ್ರಗಳು ನಲುಗಿ ಹೋಗಿದೆ. ಇಂತಹ ಹೊತ್ತಲ್ಲೇ ಬಾವಲಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿರೋದು ಮತ್ತಷ್ಟು ಭೀತಿ ಸೃಷ್ಟಿಸಿದೆ. ಕರ್ನಾಟಕವೂ ಸೇರಿ 9 ರಾಜ್ಯಗಳ ಬಾವಲಿಗಳನ್ನ ಐಸಿಎಂಆರ್ ಸಂಶೊಧನೆಗೊಳಪಡಿಸಿತ್ತು. ಈ ವೇಳೆ ಬಂದಿರುವ ವರದಿ ನೋಡಿ ರಾಜ್ಯದಲ್ಲೂ ಭೀತಿ ಸೃಷ್ಟಿಯಾಗಿದೆ. ಕೊರೊನಾ ಸೋಂಕು ಬಾವಲಿಗಳಲ್ಲಿ ಕಂಡು ಬಂದಿರುವ ಸಂಶೋಧಕರ ಮಾಹಿತಿಯನ್ನು ಐಸಿಎಂಆರ್ ಜನರಲ್ ಆಫ್ ಮೆಡಿಕಲ್ ರಿಸರ್ಚ್ ನ ಮೊದಲ ಅಧ್ಯಾಯದಲ್ಲಿ ಪ್ರಕಟಿಸಿದೆ. ಕೊರೊನಾ ಸಂಬಂಧ ನಡೆದಿರುವ ಸಂಶೋಧನೆ ಮತ್ತು ಪರೀಕ್ಷಾ ಹಂತಗಳನ್ನು ಇಲ್ಲಿ ವಿವರಿಸಲಾಗಿದೆ. ಕೊರೊನಾ ಸೋಂಕು ಬಾವಲಿಯಲ್ಲಿ ಕಂಡು ಬಂದಿದೆ ಎನ್ನುವುದರ ಬಗ್ಗೆ ಇಲ್ಲಿ ಉಲ್ಲೇಖಿಸಿಲಾಗಿದೆ.

    ಈ ವರದಿ ಕಬ್ಬನ್ ಪಾರ್ಕಿನಲ್ಲಿ ವಾಕ್ ಮಾಡುತ್ತಿದ್ದ ಜನರ ನಿದ್ದೆಗೆಡಿಸಿದೆ. ಲಾಕ್‍ಡೌನ್ ನಂತ್ರ ಹೇಗೆ ಅಲ್ಲಿ ವಾಕ್ ಮಾಡೋದು ಅನ್ನೋ ಭಯ ಕಾಡುತ್ತಿದೆ. ಕಬ್ಬನ್ ಪಾರ್ಕಿನಲ್ಲಿ ಹೇರಳವಾಗಿ ಬಾವಲಿಗಳು ಇದ್ದು ಇದರಿಂದ ಕೊರೊನಾ ವೈರಸ್ ಸೋಂಕು ತಗುಲಿದ್ರೆ ಹೇಗೆ ಅನ್ನೋ ಚಿಂತೆ ಕಾಡಿದೆ. ಅದಕ್ಕಾಗಿ ಬಾವಲಿಗಳಿಂದ ಸೋಂಕು ಹರಡದಂತೆ ಇಡೀ ಕಬ್ಬನ್ ಪಾರ್ಕಿಗೆ ಔಷಧಿ ಸಿಂಪಡಿಸಿ ಎಂದು ಸರ್ಕಾರಕ್ಕೆ ಮನವಿ ಪತ್ರ ನೀಡಲು ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್‍ನ ಸದಸ್ಯರು ನಿರ್ಧರಿಸಿದ್ದಾರೆ.

    ನಿಫಾ ವೈರಸ್ ಮಾದರಿಯಲ್ಲೇ ಪ್ರಾಣಿಗಳಿಂದ ಮನುಷ್ಯನಿಗೆ ಕೊರೊನಾ ಸೋಂಕು ಬರಬಹುದು ಎಂಬ ಆತಂಕ ಶುರುವಾಗಿದೆ. ಈಗೇನಾದ್ರೂ ಬಾವಲಿಗಳಿಂದ ಕೊರೊನಾ ಮನುಷ್ಯನಿಗೆ ಹರಡಲು ಆರಂಭವಾದ್ರೆ ಅದರ ಪ್ರಭಾವ, ತೀವ್ರತೆ ಹೆಚ್ಚಾಗಲಿದೆ. ಹೀಗಾಗಿ ಸರ್ಕಾರ ಈ ನಿಟ್ಟಿನಲ್ಲಿ ಮುಂಜಾಗ್ರತೆಯ ಕ್ರಮ ಕೈಗೊಳ್ಳಬೇಕಿದೆ.

  • ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ನಿಫಾ ವೈರಸ್

    ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ನಿಫಾ ವೈರಸ್

    ತಿರುವನಂತಪುರಂ: ಮಲೇಷ್ಯಾ, ಸಿಂಗಾಪುರಗಳಲ್ಲಿ ಆತಂಕ ಮೂಡಿಸಿದ್ದ ನಿಫಾ ವೈರಸ್ ಈಗ ನಮ್ಮ ನೆರೆಯ ರಾಜ್ಯ ಕೇರಳದಲ್ಲಿ ಭೀತಿ ಹುಟ್ಟಿಸಿದೆ.

    ಎರ್ನಾಕುಲಂನ 23 ವರ್ಷದ ಯುವಕನ ರಕ್ತದಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 10 ದಿನದಿಂದ ಜ್ವರದಿಂದ ಬಳಲುತ್ತಿದ್ದ ಯುವಕನ್ನು ಮೇ 30ರಂದು ಎರ್ನಾಕುಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪುಣೆಯ ರಾಷ್ಟ್ರೀಯ ವೈರಾಣು ಪ್ರಯೋಗಾಲಯದಿಂದ ಯುವಕನ ರಕ್ತದ ಮಾದರಿಯ ಅಂತಿಮ ವರದಿ ಲಭ್ಯವಾಗಿದ್ದು, ನಿಫಾ ಸೋಂಕು ತಗುಲಿರುವುದನ್ನು ಖಚಿತಪಡಿಸಿದೆ. ಮೂಲಗಳ ಪ್ರಕಾರ 86 ಮಂದಿಯ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ನಾನು ಸಾಯ್ತೀನಿ, ಮಕ್ಕಳನ್ನು ಚೆನ್ನಾಗಿ ನೋಡ್ಕೊಳ್ಳಿ- ಪತಿಗೆ ನಿಫಾ ವೈರಸ್‍ಗೆ ಬಲಿಯಾದ ಕೇರಳ ನರ್ಸ್ ಪತ್ರ

    ಬಾವಲಿಗಳಿಂದ ಈ ಸೋಂಕು ಹರಡುತ್ತಿದ್ದು, ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ನಿಫಾ ವೈರಾಣು, ತೀವ್ರ ಉಸಿರಾಟ ತೊಂದರೆ ಸೇರಿದಂತೆ ಮೆದುಳಿನ ಉರಿಯೂತದಂಥ ಗಂಭೀರ ಸಮಸ್ಯೆಗಳನ್ನು ಉಂಟುಮಾಡುತ್ತದೆ.

    ನಿಫಾ ಸೋಂಕು ತಡೆಯಲು ಕೇರಳ ರಾಜ್ಯಕ್ಕೆ ಬೇಕಾಗುವ ಎಲ್ಲ ರೀತಿಯ ನೆರವನ್ನು ಕೇಂದ್ರ ಸರ್ಕಾರ ಒದಗಿಸಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.

    ಕೇರಳದಲ್ಲಿ ಕಳೆದ ವರ್ಷವೂ ನಿಫಾ ವೈರಸ್ ಕಾಣಿಸಿಕೊಂಡಿತ್ತು. ಕೋಜಿಕ್ಕೋಡ್ ಹಾಗೂ ಮಲಪ್ಪುರಂ ಜಿಲ್ಲೆಯಲ್ಲಿ ಒಟ್ಟು 17 ಜನರು ಜೊತೆ ಚಿಕಿತ್ಸೆ ನೀಡಿದ್ದ ನರ್ಸ್ ಪ್ರಾಣ ಕಳೆದುಕೊಂಡಿದ್ದಳು.

    ನಿಫಾ ವೈರಸ್ ಎಂದರೇನು?
    1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಫಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಫಾ ವೈರಸ್ ಎಂದು ಕರೆಯುತ್ತಾರೆ. ನಿಫಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಹೀಗಾಗಿ ನಿಫಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ. ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ.

  • ಅನಾರೋಗ್ಯದಿಂದ ಚಿಕ್ಕೋಡಿಯ ಯೋಧ ನಿಧನ-ನಾಳೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

    ಅನಾರೋಗ್ಯದಿಂದ ಚಿಕ್ಕೋಡಿಯ ಯೋಧ ನಿಧನ-ನಾಳೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

    ಚಿಕ್ಕೋಡಿ: ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೇ ಹುಕ್ಕೇರಿ ತಾಲೂಕಿನ ಶಿರಢಾಣ ಗ್ರಾಮದ ಯೋಧರೊಬ್ಬರು ಅಸ್ಸಾಂನಲ್ಲಿ ಮೃತಪಟ್ಟಿದ್ದಾರೆ.

    ಸುನೀಲ್ ಕುಮಾರ್ ಶೆಟ್ಟಿಮನಿ (34) ಮೃತಪಟ್ಟ ಯೋಧ. ಅಸ್ಸಾಂನಲ್ಲಿ ಬಾರ್ಡರ್ ರೋಡ್ ಟಾಸ್ಕ್ ಫೋರ್ಸ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಸುನೀಲ್ ಕುಮಾರ್ ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಯೋಧ ಸಾವನ್ನಪ್ಪಿದ್ದಾರೆ.

    ಕಳೆದ 15 ವರ್ಷದಿಂದ ಬಾರ್ಡರ್ ರೋಡ್ ಟಾಸ್ಕ್ ಫೋರ್ಸ್ ನಲ್ಲಿ ಯೋಧ ಸುನೀಲ್ ಕುಮಾರ್ ಸೇವೆ ಸಲ್ಲಿಸುತ್ತಿದ್ದರು. ಅರುಣಾಚಲ ಪ್ರದೇಶದಿಂದ ಸ್ವ ಗ್ರಾಮಕ್ಕೆ ಯೋಧನ ಪಾರ್ಥಿವ ಶರೀರ ತರಲಾಗುತ್ತಿದ್ದು, ಮಂಗಳವಾರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಗಳಿವೆ.