Tag: ನಿಯಾಜ್‌ ಖಾನ್‌

  • ದಿ ಕಾಶ್ಮೀರ್ ಫೈಲ್ಸ್ ಲಾಭವನ್ನು ದಾನಮಾಡಿ ಎಂದ ಐಎಎಸ್ ಆಫೀಸರ್: ನಿರ್ದೇಶಕರ ಉತ್ತರವೇನು?

    ದಿ ಕಾಶ್ಮೀರ್ ಫೈಲ್ಸ್ ಲಾಭವನ್ನು ದಾನಮಾಡಿ ಎಂದ ಐಎಎಸ್ ಆಫೀಸರ್: ನಿರ್ದೇಶಕರ ಉತ್ತರವೇನು?

    ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ತಯಾರಾದ ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಗಳಿಗೆ ಇದೀಗ 200 ಕೋಟಿ ದಾಟಿದೆ ಎಂದು ಅಂದಾಜಿಸಲಾಗಿದೆ. ಮೂವತ್ತು ಕೋಟಿ ಅಂದಾಜು ಬಜೆಟ್ ನಲ್ಲಿ ನಿರ್ಮಾಣವಾದ ಈ ಸಿನಿಮಾ ನಿರ್ಮಾಪಕರಿಗೆ ಭಾರೀ ಲಾಭ ತಂದುಕೊಟ್ಟಿದೆ. ಹೀಗಾಗಿ ಸಿನಿಮಾದ ಲಾಭಾಂಶದ ಮೇಲೆ ಎಲ್ಲರ ಕಣ್ಣು ಬಿದ್ದಿದೆ. ಇದನ್ನೂ ಓದಿ : ಬಸವರಾಜ ಬೊಮ್ಮಾಯಿಯನ್ನು ಶಿವರಾಜ್ ಕುಮಾರ್ ಭೇಟಿ ಮಾಡಿದ್ದೇಕೆ?

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾ 200 ಕೋಟಿ ಕ್ಲಬ್ ಗೆ ಸೇರುತ್ತಿದ್ದಂತೆಯೇ ಮಧ್ಯಪ್ರದೇಶದ ಐಎಎಸ್ ಅಧಿಕಾರಿ ನಿಯಾಜಾ ಖಾನ್ ತಮ್ಮ ಟ್ವಿಟರ್ ಖಾತೆಯ ಮೂಲಕ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಪ್ರಶ್ನೆಯೊಂದನ್ನು ಕೇಳಿದ್ದಾರೆ. ಈಗ ಆ ಪ್ರಶ್ನೆ ವೈರಲ್ ಆಗಿದೆ ಮತ್ತು ಅಧಿಕಾರಿಗೆ ಅಲ್ಲಿನ ಸರಕಾರ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ : ಎದೆಹಾಲು ದಾನ ಮಾಡಿ – ಅಭಿಮಾನಿಗಳಿಗೆ ಸಿಂಡ್ರೆಲಾ ಸಂದೇಶ

    ತಮ್ಮ ಟ್ವಿಟರ್ ಖಾತೆಯಲ್ಲಿ ನಿಯಾಜ್ ಖಾನ್, ‘ನಿರ್ದೇಶಕರೆ, ನಿಮ್ಮ ಸಿನಿಮಾ ಯಶಸ್ಸು ಕಂಡಿರುವುದಕ್ಕೆ ಶುಭಾಶಯಗಳು. ಈ ನಿಮ್ಮ ಸಿನಿಮಾದಿಂದ ಬಂದ ಹಣವನ್ನು ಕಾಶ್ಮೀರಿ ಪಂಡಿತರ ಮಕ್ಕಳ ಶಿಕ್ಷಣಕ್ಕೆ ಮತ್ತು ನೆಲೆ ಕಳೆದುಕೊಂಡಿರುವ ಅವರ ಕುಟುಂಬಕ್ಕೆ ಮನೆ ಕಟ್ಟಿಸಿ ಕೊಡುತ್ತೀರಾ. ಹಾಗೆ ಮಾಡಿದರೆ ಅವರ ಕುಟುಂಬಕ್ಕೆ ಒಳ್ಳೆಯದಾಗುತ್ತದೆ?’ ಎಂದು ಕೇಳಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸಿದ ಉಪ್ಪಿ – ಫೋಟೋ ವೈರಲ್

    ಐಎಎಸ್ ಅಧಿಕಾರಿಯ ಈ ಪ್ರಶ್ನೆಗೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಉತ್ತರವನ್ನೂ ಕೊಟ್ಟಿದ್ದಾರೆ. ವಿವೇಕ್ ಕೂಡ ಟ್ವಿಟ್ ಮಾಡಿದ್ದು, ‘ಇದೇ 25ನೇ ತಾರೀಖು ನಾನು ಭೋಪಾಲ್ ಗೆ ಬರುತ್ತಿದ್ದೇನೆ. ತಾವು ಅಂದು ನನಗೆ ಭೇಟಿಗೆ ಅವಕಾಶ ನೀಡಿ. ನಮ್ಮ ನಮ್ಮ ಚಿಂತನೆಗಳನ್ನು ಶೇರ್ ಮಾಡೋಣ ಮತ್ತು ನಿಮ್ಮಿಂದ ನಮಗೂ ಸಹಾಯ ಬೇಕಿದೆ. ತಾವು ಪುಸ್ತಕ ಬರೆಯುತ್ತೀರಿ. ಆ ಹಣದಿಂದ ತಾವು ಎಂದಾದರೂ ಸಮಾಜಮುಖಿ ಕೆಲಸದ ಪ್ರಯತ್ನ ಮಾಡಿದ್ದೀರಾ?’ ಎಂದು ಅವರೂ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ:  ಹುಡುಗಿ ಎಂದು ಅಪ್ಪನ ಜೊತೆಗೆ ಚಾಟ್ ಮಾಡಿ ಸಿಕ್ಕಿಬಿದ್ದ ಖ್ಯಾತ ನಿರ್ಮಾಪಕ!

    ಈ ಇಬ್ಬರ ಪ್ರಶ್ನೋತ್ತರಗಳು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ಸಿನಿಮಾ ಮಾತ್ರ ತನ್ನ ಪಾಡಿಗೆ ತಾನು ಬಾಕ್ಸ್ ಆಫೀಸಿನಲ್ಲಿ ತನ್ನ ಯಶಸ್ಸನ್ನು ಮುಂದುವರೆಸುತ್ತಲೇ ಸಾಗಿದೆ.

  • ಕಾಶ್ಮೀರ್‌ ಫೈಲ್ಸ್‌ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ IAS ಅಧಿಕಾರಿ ನಿಯಾಜ್‌ ಖಾನ್‌ಗೆ ನೋಟಿಸ್‌: MP ಗೃಹ ಸಚಿವ

    ಕಾಶ್ಮೀರ್‌ ಫೈಲ್ಸ್‌ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ IAS ಅಧಿಕಾರಿ ನಿಯಾಜ್‌ ಖಾನ್‌ಗೆ ನೋಟಿಸ್‌: MP ಗೃಹ ಸಚಿವ

    ಭೋಪಾಲ್: ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಐಎಎಸ್‌ ಅಧಿಕಾರಿಗೆ ಮಧ್ಯಪ್ರದೇಶ ಸರ್ಕಾರ ನೋಟಿಸ್‌ ಜಾರಿ ಮಾಡಲಿದೆ ಎಂದು ಗೃಹ ಸಚಿವ ನರೋತ್ತಮ್‌ ಮಿಶ್ರಾ ತಿಳಿಸಿದ್ದಾರೆ.

    ರಾಜ್ಯ ಲೋಕೋಪಯೋಗಿ ಇಲಾಖೆಯಲ್ಲಿ ಉಪ ಕಾರ್ಯದರ್ಶಿಯಾಗಿರುವ ಐಎಎಸ್‌ ಅಧಿಕಾರಿ ನಿಯಾಜ್‌ ಖಾನ್‌ ಅವರು ಈಚೆಗೆ ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾ ಕುರಿತು ಟ್ವೀಟ್‌ ಮಾಡಿದ್ದರು. ದಿ ಕಾಶ್ಮೀರ್‌ ಫೈಲ್ಸ್‌ನಂತೆಯೇ, ದೇಶದ ಅನೇಕ ರಾಜ್ಯಗಳಲ್ಲಿ ಅಪಾರ ಸಂಖ್ಯೆಯಲ್ಲಿ ಮುಸ್ಲಿಮರ ಹತ್ಯೆಯಾಗಿರುವ ಕುರಿತು ಸಿನಿಮಾ ನಿರ್ಮಿಸಬೇಕು. ಮುಸ್ಲಿಂ ಸಮುದಾಯದವರು ಕೀಟಗಳಲ್ಲ. ಅವರು ಸಹ ಈ ದೇಶದ ನಾಗರಿಕರು ಎಂದು ಟ್ವೀಟ್‌ ಮಾಡಿದ್ದರು. ಇದನ್ನೂ ಓದಿ: ಇಡೀ ಥಿಯೇಟರ್ ನಲ್ಲಿ ಒಬ್ಬರೇ ಕೂತು ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ವೀಕ್ಷಿಸಿದ ಡೈಮಂಡ್ ರವಿ

    ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಮಿಶ್ರಾ ಅವರು, ನಾನು ಖಾನ್ ಅವರ ಟ್ವೀಟ್‌ಗಳನ್ನು ನೋಡಿದ್ದೇನೆ. ಇದು ಗಂಭೀರ ವಿಷಯವಾಗಿದೆ. ಅವರು ಸರ್ಕಾರಿ ಅಧಿಕಾರಿಗಳಿಗೆ ನಿಗದಿಪಡಿಸಿದ ಮಿತಿಯನ್ನು ದಾಟಿ ನಿಯಮ ಉಲ್ಲಂಘಿಸುತ್ತಿದ್ದಾರೆ. ರಾಜ್ಯ ಸರ್ಕಾರ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ಅವರ ಉತ್ತರವನ್ನು ಕೇಳಲಿದೆ ಎಂದು ತಿಳಿಸಿದ್ದಾರೆ.

    ಅಧಿಕಾರಿ ಟ್ವೀಟ್‌ನಲ್ಲೇನಿತ್ತು?
    ಕಾಶ್ಮೀರ್ ಫೈಲ್ಸ್ ಬ್ರಾಹ್ಮಣರ ನೋವನ್ನು ತೋರಿಸುತ್ತದೆ. ಕಾಶ್ಮೀರದಲ್ಲಿ ಎಲ್ಲ ಗೌರವಗಳೊಂದಿಗೆ ಸುರಕ್ಷಿತವಾಗಿ ಬದುಕಲು ಅವರಿಗೆ ಅವಕಾಶ ನೀಡಬೇಕು. ಹಲವಾರು ರಾಜ್ಯಗಳಾದ್ಯಂತ ಹೆಚ್ಚಿನ ಸಂಖ್ಯೆಯ ಮುಸ್ಲಿಮರ ಹತ್ಯೆಗಳನ್ನು ತೋರಿಸಲು ನಿರ್ಮಾಪಕರು ಸಿನಿಮಾವೊಂದನ್ನು ಮಾಡಬೇಕು. ಚಿತ್ರವು 150 ಕೋಟಿ ರೂಪಾಯಿಗಳ ಆದಾಯದ ಗಡಿಯನ್ನು ಮುಟ್ಟಿದ್ದಕ್ಕಾಗಿ ಚಿತ್ರದ ನಿರ್ಮಾಪಕರನ್ನು ಅಭಿನಂದಿಸಿದ್ದರು. ಇದನ್ನೂ ಓದಿ : ಗಣೇಶ್ ಮತ್ತು ಪ್ರೀತಂ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ

    ಜನರು ಕಾಶ್ಮೀರಿ ಬ್ರಾಹ್ಮಣರ ಭಾವನೆಗಳಿಗೆ ಹೆಚ್ಚಿನ ಗೌರವವನ್ನು ನೀಡಿರುವುದರಿಂದ ಚಲನಚಿತ್ರ ನಿರ್ಮಾಪಕರು ಎಲ್ಲಾಗಳಿಕೆಯನ್ನು ಬ್ರಾಹ್ಮಣ ಮಕ್ಕಳ ಶಿಕ್ಷಣಕ್ಕೆ ವರ್ಗಾಯಿಸಬೇಕು. ಕಾಶ್ಮೀರದಲ್ಲಿ ಅವರಿಗೆ ಮನೆಗಳನ್ನು ನಿರ್ಮಿಸಬೇಕು ಎಂದು ಟ್ವೀಟ್‌ ಮಾಡಿದ್ದರು.