Tag: ನಿರಂಜನ್ ಶೆಟ್ಟಿ

  • ನಿರಂಜನ್ ಶೆಟ್ಟಿ ಅಭಿನಯದ ‘31 DAYS’ ಚಿತ್ರದ ಫಸ್ಟ್ ಲುಕ್ ರಿಲೀಸ್

    ನಿರಂಜನ್ ಶೆಟ್ಟಿ ಅಭಿನಯದ ‘31 DAYS’ ಚಿತ್ರದ ಫಸ್ಟ್ ಲುಕ್ ರಿಲೀಸ್

    ಜಾಲಿಡೇಸ್ ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ (Niranjan Shetty)  ನಾಯಕನಾಗಿ ನಟಿಸುತ್ತಿರುವ ‘31 DAYS’ ಚಿತ್ರದ ಫಸ್ಟ್ ಲುಕ್ (First Look) ಇತ್ತೀಚಿಗೆ ಬೆಂಗಳೂರಿನ ಚಿತ್ರಕಲಾ ಪರಿಷತ್ ಆವರಣದಲ್ಲಿ ನಡೆಯುವ ಚಿತ್ರಸಂತೆಯಲ್ಲಿ ಅನಾವರಣವಾಯಿತು. ಚಿತ್ರಕ್ಕೆ ‘ಹೈ ವೋಲ್ಟೇಜ್ ಲವ್ ಸ್ಟೋರಿ’ ಎಂಬ ಅಡಿಬರಹವಿದೆ.

    ಇದೊಂದು ಪ್ರೇಮ ಕಥಾನಕವಾಗಿದ್ದು, ಚಿತ್ರಸಂತೆಗೆ ಆಗಮಿಸಿದ್ದ 46 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿರುವ ದಂಪತಿ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು ವಿಶೇಷ. ಶೀರ್ಷಿಕೆಯನ್ನು ಯುವ ಪ್ರೇಮಿಗಳು ಬಿಡುಗಡೆ ಮಾಡಿದರು. ಅಲ್ಲಿ ನೆರದಿದ್ದ ಸಹಸ್ರಾರು ಕಲಾಸಕ್ತರು ಚಿತ್ರದ ವಿನೂತನ ಫಸ್ಟ್ ಲುಕ್ ಗೆ ಫಿದಾ ಆದರು.

    “ನಾನು ಸಹ ಚಿತ್ರಕಲಾ ಪರಿಷತ್ ನ ವಿದ್ಯಾರ್ಥಿಯಾಗಿದ್ದು, ಚಿತ್ರಸಂತೆಯಲ್ಲಿ ನಮ್ಮ ಚಿತ್ರದ ಫಸ್ಟ್ ಲುಕ್ ಹಾಗೂ ಶೀರ್ಷಿಕೆ ಬಿಡುಗಡೆಯಾಗಿದ್ದು ಖುಷಿಯಾಗಿದೆ ಎನ್ನುತ್ತಾರೆ ನಾಯಕ ನಿರಂಜನ್ ಶೆಟ್ಟಿ. Nstar ಬ್ಯಾನರ್ ನಲ್ಲಿ ನಾಗವೇಣಿ. N. ಶೆಟ್ಟಿ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ರಾಜ ರವಿಕುಮಾರ್ ನಿರ್ದೇಶಿಸುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಹೆಬ್ರಿ, ಆಗುಂಬೆ, ತೀರ್ಥಹಳ್ಳಿ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ.

    ನಿರಂಜನ್ ಶೆಟ್ಟಿ ಅವರು ನಾಯಕನಾಗಿ ಈ ಚಿತ್ರದ ನಾಯಕನಾಗಿ ಅಭಿನಯಿಸುತ್ತಿದ್ದು ಅವರಿಗೆ ನಾಯಕಿಯಾಗಿ ಪ್ರಜ್ವಲಿ ಸುವರ್ಣ ನಟಿಸುತ್ತಿದ್ದಾರೆ.  ಈ ಚಿತ್ರ ಪ್ರಸ್ತುತ ಜನರೇಷನ್ ನಲ್ಲಿ ನಡೆಯುವ ಒಂದು ಸುಂದರ love story ಆಗಿದ್ದು 31 ದಿನಗಳಲ್ಲಿ ನಡೆಯುವ high voltage love story ಇದಾಗಿದೆ. 4 ಹಾಡುಗಳಿರುವ ಈ ಚಿತ್ರಕ್ಕೆ ವಿ. ಮನೋಹರ್ ರವರ ಸಂಗೀತ ನಿರ್ದೇಶನವಿದೆ.  ಇದು ವಿ.ಮನೋಹರ್ ಅವರ ಸಂಗೀತ ನಿರ್ದೇಶನದ 150 ನೇ ಚಿತ್ರವೂ ಹೌದು.   ವಿನುತ್. K  ಛಾಯಾಗ್ರಹಣ, ಧನು ಕುಮಾರ್ ನೃತ್ಯ ನಿರ್ದೇಶನ ಹಾಗೂ ಸನತ್ ರವರ ಸಂಕಲನ ಈ ಚಿತ್ರಕ್ಕಿದೆ.

  • ಸಿಲ್ಕು ಮಿಲ್ಕು ಹಾಡಿಗೆ ಕುಣಿದ ಏಸ್ತಾರ್ ನೆರೋನಾ

    ಸಿಲ್ಕು ಮಿಲ್ಕು ಹಾಡಿಗೆ ಕುಣಿದ ಏಸ್ತಾರ್ ನೆರೋನಾ

    ಹು ನಿರೀಕ್ಷೆಯ ಇನಾಮ್ದಾರ್ ಸಿನಿಮಾ, ಟೀಸರ್  ಮೂಲಕ ರಾಜ್ಯದಾದ್ಯಂತ ಸದ್ದು ಮಾಡಿದ್ದು, ಇದೀಗ ಕೊಪ್ಪದಲ್ಲಿ ತನ್ನ ಮೊದಲ ಹಾಡು ಬಿಡುಗಡೆ ಮಾಡುವ ಮೂಲಕ ಜನರಲ್ಲಿ ಮತ್ತಷ್ಟು ಕುತೂಹಲವನ್ನು ಕೆರಳಿಸಿದೆ. ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ ಸಿನಿಮಾ ಇದಾಗಿದ್ದು, ಕುಂತಿ ಅಮ್ಮ ಪ್ರೊಡಕ್ಷನ್ ಮೂಲಕ ನಿರಂಜನ್ ಶೆಟ್ಟಿ ತಲ್ಲೂರು  ಬಂಡವಾಳ ಹೂಡಿದ್ದಾರೆ.

    ಕೊಪ್ಪದಲ್ಲಿ ಸಿಲ್ಕು ಮಿಲ್ಕು ಹಾಡನ್ನು ಬಿಡುಗಡೆ ಮಾಡುವ ಮೂಲಕ ಕೊಪ್ಪ ಜನತೆಯನ್ನ ಹುಚ್ಚೆಬ್ಬಿಸಿದ ಇನಾಮ್ದಾರ ಚಿತ್ರ ತಂಡ ಮತ್ತಷ್ಟು ಭರವಸೆಯನ್ನು ಮೂಡಿಸುವ ನಿಟ್ಟಿನಲ್ಲಿ ಜನರನ್ನು ಆಕರ್ಷಿಸುತ್ತಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.  ಕಲಾವಿದರ ದಂಡೆ ಇರುವ ಈ ಸಿನಿಮಾ ಎರಡು ಬಣ್ಣಗಳ ನಡುವಿನ ಘರ್ಷಣೆಯ ಸುತ್ತ ಹೆಣೆದಿರುವ ಕಥೆ ಎಂದು ನಿರ್ದೇಶಕರು ಹೇಳುತ್ತಾರೆ. ಕೊಪ್ಪದಲ್ಲಿ ಸಾವಿರಾರು ಜನರ ಮುಂದೆ ಕೊಪ್ಪದ ಮಕ್ಕಳ ಕೈಯಲ್ಲಿ ಸಿಲ್ಕು ಮಿಲ್ಕು ಸಾಂಗ್ ಅನ್ನು ಬಿಡುಗಡೆ ಮಾಡಿರುವ ಚಿತ್ರತಂಡ ಕೊಪ್ಪದ ಜನತೆಯನ್ನು ಸ್ಮರಿಸಿಕೊಂಡಿದ್ದಾರೆ. ಇದನ್ನೂ ಓದಿ: ಮದುವೆ ಫೋಟೋ ಹಂಚಿಕೊಂಡ ಬೆನ್ನಲ್ಲೇ ವೈರಲಾಯ್ತು ಸಿದ್- ಕಿಯಾರಾ ಆಮಂತ್ರಣ ಪತ್ರಿಕೆ

    ಖಡಕ್ ಧ್ವನಿಯಲ್ಲಿ ಪ್ರಮೋದ್ ಶೆಟ್ಟಿಯ ಡೈಲಾಗ್ ಕೇಳಿ ಹುಚ್ಚೆದ್ದು ಕುಣಿದ ಕೊಪ್ಪದ ಜನತೆಗೆ ನಿರ್ದೇಶಕ ಸಂದೇಶ ಶೆಟ್ಟಿ ಪ್ರಮೋದ್ ಶೆಟ್ಟಿ ಅವರಿಗೆ ಸ್ಯಾಂಡಲ್ ವುಡ್  ಘಟೋದ್ಗಜ ಎಂದು ಬಿರುದನ್ನು ನೀಡಿದ್ದಾರೆ, ಇದು ಕೊಪ್ಪದ ಜನತೆಯಲ್ಲಿ ಮತ್ತಿಷ್ಟು ಜೋಶ್ ತಂದು ಕೊಟ್ಟಿದೆ. ಇಡೀ ಸಿನಿಮಾ ಟೆಕ್ನಿಕಲ್ ಆಗಲಿ, ಕಥೆಯಾಗಲಿ ಎಲ್ಲವೂ ಕೂಡ ಅದ್ಭುತವಾಗಿ ಮೂಡಿ ಬಂದಿದೆ ಹಾಗೂ ಒಬ್ಬ ಹೊಸ ನಿರ್ಮಾಪಕ, ನಿರ್ದೇಶಕ ಉಳಿಯಬೇಕಾದರೆ ನಿಮ್ಮ ಸಹಕಾರ ಅಗತ್ಯ ಎಂದು ಪ್ರಮೋದ್ ಶೆಟ್ಟಿ ಹೇಳಿದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ ನಿರಂಜನ್ ಶೆಟ್ಟಿ ಸಿನಿಮಾ ಉತ್ತಮವಾಗಿ ಮೂಡಿ ಬಂದಿದೆ, ಎರಡು ಜನಾಂಗ ಘರ್ಷಣೆಯನ್ನ ತೆರೆ ಮೇಲೆ ತರಲು ನಿರ್ದೇಶಕರು ಹೊಸತನದ ಪ್ರಯತ್ನವನ್ನ ಮಾಡಿದ್ದಾರೆ, ನಿಮಗೆಲ್ಲರಿಗೂ ಈ ಸಿನಿಮಾ ಇಷ್ಟ ಆಗುತ್ತೆ ನಮ್ಮ ತಂಡವನ್ನ ಬೆಂಬಲಿಸಿ, ನೀವು ನಮಗೆ ಶಕ್ತಿಯಾಗಿ ಎಂದು ತಿಳಿಸಿದರು. ಸಂಗೀತ ನಿರ್ದೇಶಕ ರಾಕೇಶ್ ಆಚಾರ್ಯ ಮಾತನಾಡಿ ಇದೊಂದು ಸೂಕ್ಷ್ಮವಾದ ಕಥಾಹಂದರ ಬಲು ಅಚ್ಚುಕಟ್ಟಾಗಿ ಈ ಸಿನಿಮಾವನ್ನ ತೆರೆಯ ಮೇಲೆ ತರಲು ನಿರ್ದೇಶಕರು ಪ್ರಯತ್ನಪಟ್ಟಿದ್ದಾರೆ ಈ ಸಿನಿಮಾದಲ್ಲಿ ನಾನು ಮೂರು ಹಾಡುಗಳನ್ನ ಮಾಡಿದ್ದೇನೆ ನಿಮ್ಮೆಲ್ಲರ ಬೆಂಬಲ ಈ ಸಿನಿಮಾದ ಮೇಲೆ ಇರಲಿ ಎಂದು ಕೇಳಿಕೊಂಡರು.

    ನಾಯಕ ನಟ ರಂಜನ್  ಛತ್ರಪತಿ, ನಟಿ ಚಿರಶ್ರೀ ಅಂಚನ್ ಹಾಗೂ  ಏಸ್ತಾರ್ ನೆರೋನಾ, ರಘು ಪಾಂಡೇಶ್ವರ್, ಕರಣ್ ಕುಂದರ್, ಯಶ್ ಆಚಾರ್ಯ, ಮಹಾಬಲೇಶ್ವರ ಕ್ಯಾದಗಿ, ರಕ್ಷಿತ್ ಶೆಟ್ಟಿ, ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಕೊಪ್ಪದ ವೇದಿಕೆಯಲ್ಲಿ ಸಂತೋಷವನ್ನು ಹಂಚಿಕೊಂಡರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k