Tag: ನಿರಂಜನ್‌ ಹಿರೇಮಠ

  • ನಮ್ಮ ಸರ್ಕಾರದಲ್ಲಿ ನಾನೇ ನ್ಯಾಯಕ್ಕಾಗಿ ಬೇಡುವ ಪರಿಸ್ಥಿತಿ ಬಂದಿದೆ: ನೇಹಾ ಪ್ರಕರಣದಲ್ಲಿ ತಂದೆ ಅಸಮಾಧಾನ

    ನಮ್ಮ ಸರ್ಕಾರದಲ್ಲಿ ನಾನೇ ನ್ಯಾಯಕ್ಕಾಗಿ ಬೇಡುವ ಪರಿಸ್ಥಿತಿ ಬಂದಿದೆ: ನೇಹಾ ಪ್ರಕರಣದಲ್ಲಿ ತಂದೆ ಅಸಮಾಧಾನ

    ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣವನ್ನು ಫಾಸ್ಟ್‌ಟ್ರ್ಯಾಕ್ ಕೋರ್ಟ್‌ಗೆ (Fast Track Court) ಕೊಡುವ ಅವಶ್ಯಕತೆ ಇಲ್ಲ ಎಂಬ ಗೃಹ ಸಚಿವ ಪರಮೇಶ್ವರ್ (G Parameshwar) ಹೇಳಿಕೆಗೆ ನೇಹಾ ಹಿರೇಮಠ (Neha Hiremath) ತಂದೆ, ಕಾಂಗ್ರೆಸ್ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ (Niranjan Hiremath) ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

    ಈ ಬಗ್ಗೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಗೃಹ ಸಚಿವ ಪರಮೇಶ್ವರ್ ಸಿಎಂ ಮಾತಿಗೂ ಬೆಲೆ ನೀಡುತ್ತಿಲ್ಲ. ಅವರದ್ದೇ ಬೇರೆ ಮಾರ್ಗ ಎನ್ನುವಂತೆ ವರ್ತನೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರದಲ್ಲಿ ನಾನೇ ನ್ಯಾಯಕ್ಕಾಗಿ ಬೇಡುವ ಪರಿಸ್ಥಿತಿ ನಿರ್ಮಾಣ ಆಗುತ್ತಿದೆ. ಆರೋಪಿಗೆ ರಕ್ಷಣೆ ನೀಡಲು ಕೆಲವರು ಮುಂದಾಗಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸರ್ಕಾರಿ ಕಾಲೇಜುಗಳಲ್ಲಿ ಓದುವ ಪಿಯುಸಿ ಮಕ್ಕಳಿಗೆ ಉಚಿತ ನೀಟ್ ತರಬೇತಿ: ಮಧು ಬಂಗಾರಪ್ಪ

    ಪ್ರಕರಣದ ಆರಂಭದಿಂದಲೂ ಕೆಲವು ಷಡ್ಯಂತ್ರ ನಡೆಸುತ್ತಿದ್ದು, ಈಗ ಅದನ್ನು ಮುಂದುವರಿಸುತ್ತಿದ್ದಾರೆ. ಇಷ್ಟು ದಿನ ನಮ್ಮ ಸರ್ಕಾರ ಅಂತ ಸುಮ್ಮನಿದ್ದೆ. ಈಗ ಕಾಯುವ ಅವಶ್ಯಕತೆ ಇಲ್ಲ. ಎಲ್ಲವನ್ನೂ ಜನ ಗಮನಿಸುತ್ತಿದ್ದಾರೆ. ನಾನು ಕೂಡ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಕಳಂಕಿತ ಬಿಜೆಪಿಗೆ ಹೋರಾಟ ಮಾಡುವ ನೈತಿಕತೆ ಇಲ್ಲ: ಎಂ‌.ಬಿ.ಪಾಟೀಲ್

  • 120 ದಿನದೊಳಗೆ ನ್ಯಾಯ ಕೊಡಿಸ್ತೀವಿ- ನೇಹಾ ತಂದೆಗೆ ಸಿಎಂ ಭರವಸೆ

    120 ದಿನದೊಳಗೆ ನ್ಯಾಯ ಕೊಡಿಸ್ತೀವಿ- ನೇಹಾ ತಂದೆಗೆ ಸಿಎಂ ಭರವಸೆ

    ಹುಬ್ಬಳ್ಳಿ: ನೇಹಾ ಹಿರೇಮಠ (Neha Hiremath) ಹತ್ಯೆ ಪ್ರಕರಣ ಸಂಬಂಧ 120 ದಿನದೊಳಗೆ ನ್ಯಾಯ ಕೊಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನಿರಂಜನ್‌ ಹಿರೇಮಠಗೆ ಭರವಸೆ ಕೊಟ್ಟಿದ್ದಾರೆ.

    ನೇಹಾ ಕುಟುಂಬವನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ, ನೇಹಾ ಕುಟುಂಬದ ಜೊತೆಗೆ ನಾವಿದ್ದೇವೆ. ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡಲು ಸೂಚಿಸಿದ್ದೇನೆ. ಇದೊಂದು ದುರದೃಷ್ಟ ಘಟನೆಯಾಗಿದ್ದು, ಸಿಐಡಿಗೆ ಕೋಟ್ಟಿದ್ದೇವೆ. ಆರೋಪಿಯನ್ನು ಬಂಧಿಸಿದ್ದೇವೆ ಎಂದರು.

    ಘಟನೆಯನ್ನು ತ್ರೀವಾಗಿ ಖಂಡನೆ ಮಾಡುತ್ತೇನೆ. ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಯಾವುದು ಅತ್ಯಂತ ಕಠಿಣ ಶಿಕ್ಷೆ ಇದೆ ಅದನ್ನು ಕೊಡಿಸುವ ಪ್ರಯತ್ನ ಮಾಡುತ್ತೇವೆ. ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ನಾನು ಸಾಂತ್ವನ ಹೇಳಲು ಬಂದಿದ್ದೇನೆ. ರಾಜಕೀಯ ಮಾತನಾಡಲ್ಲ. ಅವರ ಕುಟುಂಬಕ್ಕೆ ರಕ್ಷಣೆ ನೀಡಲು ಸಿದ್ಧ. ಆರೋಪಿಗೆ ಕುಮ್ಮಕ್ಕು ನೀಡಿರುವ ಆ್ಯಂಗಲ್ ನಲ್ಲಿ ತನಿಖೆ ಮಾಡಲು ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ; ಕುಟುಂಬಸ್ಥರಿಗೆ ಸಾಂತ್ವನ

    ನೇಹಾ ಕುಟುಂಬದವರಿಗೆ ರಕ್ಷಣೆ ಬೇಕಿದ್ದರೆ ಕೊಡುತ್ತೇವೆ. ಸಿಐಡಿ ಅಧಿಕಾರಿಗಳು ತನಿಖೆ ಮಾಡ್ತಾರೆ. ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸುತ್ತಾರೆ. ನಂತರ ಕೋರ್ಟ್ ನಲ್ಲಿ ಟ್ರಯಲ್ ನಡೆಯುತ್ತೆ. ಆದಷ್ಟು ಬೇಗ ನ್ಯಾಯಾಲಯದಲ್ಲಿ ಗರಿಷ್ಠ ಶಿಕ್ಷೆ ಆಗುತ್ತೆ. ಧೈರ್ಯವಾಗಿ ಇರಿ. 120 ದಿನದ ಒಳಗೆ ನ್ಯಾಯ ಕೊಡಿಸೋಣ ಎಂದು ಸಿಎಂ ಅವರು ನಿರಂಜನ್ ಹಿರೇಮಠ್ ಬೆನ್ನು ತಟ್ಟಿದರು.

    ಇದೇ ವೇಳೆ ಸಿಬಿಐ ಕೊಡಬೇಕು ಅನ್ನೋ ಬಿಜೆಪಿ ಬೇಡಿಕೆ ವಿಚಾರದ ಕುರಿತು ಮಾತನಾಡಿ, ಬಿಜೆಪಿ ರಾಜಕೀಯ ಮಾಡ್ತಿದೆ. ಒಂದು ಪ್ರಕಣವನ್ನಾದ್ರೂ ಅವರು ಸಿಬಿಐಗೆ ಕೊಟ್ಟಿದ್ದಾರಾ..?. ನಮ್ಮ ಅವಧಿಯಲ್ಲಿ ಸಾಕಷ್ಟು ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೆವು ಎಂದು ವಾಗ್ದಾಳಿ ನಡೆಸಿದರು.

  • ನಿರಂಜನ್ ಹಿರೇಮಠ್‌ಗೆ ಧೈರ್ಯದಿಂದ ಇರುವಂತೆ ಸಿಎಂ ಹೇಳಿದ್ದಾರೆ: ಹೆಚ್‌.ಕೆ ಪಾಟೀಲ್‌

    ನಿರಂಜನ್ ಹಿರೇಮಠ್‌ಗೆ ಧೈರ್ಯದಿಂದ ಇರುವಂತೆ ಸಿಎಂ ಹೇಳಿದ್ದಾರೆ: ಹೆಚ್‌.ಕೆ ಪಾಟೀಲ್‌

    ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ್‌ (Neha Hiremath) ತಂದೆ ನಿರಂಜನ್ ಹಿರೇಮಠ್‌ಗೆ (Niranjan Hiremath) ಧೈರ್ಯದಿಂದ ಇರುವಂತೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಕಾನೂನು ಸಚಿವ ಎಚ್. ಕೆ. ಪಾಟೀಲ್ (HK Patil) ಹೇಳಿದ್ದಾರೆ.

    ಹುಬ್ಬಳ್ಳಿಲ್ಲಿ ನೇಹಾ ಕುಟುಂಬಸ್ಥರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಿವಾರ್ಯ ಕಾರಣದಿಂದ ಸಿಎಂ ಇಲ್ಲಿಗೆ ಬರಲಾಗಿಲ್ಲ. ಆದರೆ ಇಂದು ನಿರಂಜನ್ ಹಿರೇಮಠ್ ಜೊತೆ ಸಿಎಂ ಮಾತನಾಡಿದ್ದು, ಸಾಂತ್ವನ ಹೇಳಿದ್ದಾರೆ ಎಂದರು.

    ನೇಹಾ ಪ್ರಕರಣ ನ್ಯಾಯದಾನ ವಿಳಂಬ ಆಗಬಾರದೆಂದು ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನ ಮಾಡಲಾಗಿದೆ. ಇವತ್ತು ಉಚ್ಛ ನ್ಯಾಯಾಲಯಕ್ಕೆ ವಿಶೇಷ ನ್ಯಾಯಾಲಯ ಸ್ಥಾಪನೆ ಪತ್ರ ತಲುಪುತ್ತೆ. ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಆಗಬೇಕಿದೆ. ಬಹುಬೇಗ ನೇಹಾಳ ಸಾವಿಗೆ ನ್ಯಾಯ ಸಿಗುತ್ತೆ ಎಂದು ಭರವಸೆ ಕೊಟ್ಟರು. ಇದನ್ನೂ ಓದಿ: ಮದುವೆ ಮಂಟಪಕ್ಕೆ ನುಗ್ಗಿ ವಧುವನ್ನು ಎಳೆದೊಯ್ಯಲು ಯತ್ನಿಸಿದ ಆಕೆಯ ಕುಟುಂಬ!

    ಬರ್ಬರ ಹತ್ಯೆ ಮತ್ತು ಸಮಾಜದ ಮುಖಂಡರ ಭೇಟಿ ವೇಳೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಆಗ್ರಹ ವ್ಯಕ್ತವಾಗಿತ್ತು. ಹೀಗಾಗಿ ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನಿಸಿದ್ದೇವೆ. ನಾವು ಸಾಂತ್ವನ ಹೇಳಲು ಬಂದಿದ್ದೇವೆ. ನಮ್ಮ ಕರ್ತವ್ಯ ನಿಭಾಯಿಸಿ ನಾವು ಅವರ ಮನೆಗೆ ಬಂದಿದ್ದೇವೆ. ವೈಯಕ್ತಿಕ ಘಟನೆ ಎಂಬ ಹೇಳಿಕೆ ಕುರಿತು ಗೃಹ ಸಚಿವ ಮತ್ತು ಸಿಎಂ ತಮ್ಮ ಸಮಾಜಯಿಸಿ ಹೇಳಿದ್ದಾರೆ ಎಂದರು.

  • ಕೈ ಮುಗಿದು ಕೇಳಿಕೊಳ್ತೀನಿ, ಸಿಎಂ ಹೇಳಿಕೆ ನೀಡುವುದನ್ನು ನಿಲ್ಲಿಸಿ: ನೇಹಾ ತಂದೆ ನಿರಂಜನ್‌ ಕಿಡಿ

    ಕೈ ಮುಗಿದು ಕೇಳಿಕೊಳ್ತೀನಿ, ಸಿಎಂ ಹೇಳಿಕೆ ನೀಡುವುದನ್ನು ನಿಲ್ಲಿಸಿ: ನೇಹಾ ತಂದೆ ನಿರಂಜನ್‌ ಕಿಡಿ

    ಹುಬ್ಬಳ್ಳಿ: ನಾನು ಕೈ ಮುಗಿದು ಕೇಳಿಕೊಳ್ತೀನಿ. ಸಿಎಂ ಹಾಗೂ ಗೃಹ ಸಚಿವರು ನನ್ನ ಮಗಳ ಹತ್ಯೆ ಪ್ರಕರಣ ಸಂಬಂಧ ಹೇಳಿಕೆಗಳನ್ನು ಕೊಡುವುದು ನಿಲ್ಲಿಸಿ ಎಂದು ನೇಹಾ ಹಿರೇಮಠ ತಂದೆ ನಿರಂಜನ್‌ (Niranjan Hiremath) ಕೈ ಮುಗಿದು ಕೇಳಿಕೊಂಡಿದ್ದಾರೆ.

    ಈ ಸಂಬಂಧ ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ನನ್ನ ಮಗಳ ಸಾವು ವೈಯಕ್ತಿಕ ಅಲ್ಲ. ಅವರಿಗೆ ಮಾಹಿತಿಯ ಕೊರತೆ ಇದೆ. ಯಾರೋ ಅವರನ್ನು ತುಷ್ಠೀಕರಣ ಮಾಡಿ ಹೇಳುವಂಗೆ ಮಾಡಿದ್ದಾರೆ. ದಯಮಾಡಿ ಅಂತಹ ಹೇಳಿಕೆಗಳನ್ನು ಕೊಡಬೇಡಿ. ಎಲ್ಲವನ್ನೂ ನನ್ನ ವೀರಶೈವ ಹಾಗೂ ಲಿಂಗಾಯತ ಸಮಾಜ ನೋಡುತ್ತಿದೆ. ವೈಯಕ್ತಿಕ ಅಂದ್ರೆ ನಾವೇನು ಯಾರಾದ್ದಾದರು ಜೊತೆ ಸಂಬಂಧ ಬೆಳೆಸಲು ಹೋಗಿದ್ದೇವಾ..?. ಅಥವಾ ವ್ಯಾಪಾರ ಇತ್ತಾ?. ವೈಯಕ್ತಿಕ ಅನ್ನುವುದಾದರೆ ಯಾವುದಾದರೂ ಸಂಬಂಧ ಇರಬೇಕು ಅಲ್ವಾ. ಈ ರೀತಿಯ ಹೇಳಿಕೆಗಳಿಂದ ನನ್ನ ಮಗಳಿಗೆ ನ್ಯಾಯ ಸಿಗಲ್ಲ ಎಂದು ನಿರಂಜನ್‌ ಬೇಸರ ವ್ಯಕ್ತಪಡಿಸಿದರು.

    ಈ ರೀತಿಯ ಹೇಳಿಕೆಗಳನ್ನು ಕೊಡುತ್ತಾ ಮೊದಲೇ ದುಃಖದಲ್ಲಿರುವ ನಮ್ಮನ್ನು ಮತ್ತಷ್ಟು ದುಃಖಕ್ಕೆ ತಳ್ಳುತ್ತಿದ್ದೀರಿ. ರಾಜ್ಯದ ಸಿಎಂ (Siddaramaiah) ಆಗಿರುವ ನೀವು ಇಂತಹ ಹೇಳಿಕೆಗಳನ್ನು ಕೊಡುವುದು ನಿಲ್ಲಿಸಿ. ನೀವು ಕೊಟ್ಟ ಹೇಳಿಕೆಗೆ ಮೊದಲು ಸ್ಪಷ್ಟನೆ ಕೊಡಿ. ನಮ್ಮ ಹಾಗೂ ಅವರ ಮಧ್ಯೆ ಯಾವುದೇ ರೀತಿಯ ಸಂಬಂಧ ಇರಲಿಲ್ಲ. ಅವರು ನಮ್ಮ ಅಕ್ಕಪಕ್ಕದ ಮನೆಯವರಲ್ಲ.. ನಮ್ಮ ಓಣಿಯವರಲ್ಲ ಅಥವಾ ನಮ್ಮ ಕ್ಲಾಸ್‌ಮೇಟ್‌ ಕೂಡ ಅಲ್ಲ. ವೈಯಕ್ತಿಕ ಅಂದಿದ್ರೆ ಆಕೆ ಅವನ ಜೊತೆ ಹೋಗುತ್ತಿದ್ದಳು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಗನನ್ನು ಸೈನಿಕನನ್ನಾಗಿ ಮಾಡಬೇಕೆಂಬ ಕನಸು ಕಂಡಿದ್ದೆ: ಆರೋಪಿ ಫಯಾಜ್‌ ತಂದೆ

    ಎರಡು ವರ್ಷದ ಹಿಂದೆ ಆತ ಕಾಲೇಜು ಬಿಟ್ಟಿದ್ದಾನೆ. ಅವನು ಆಕೆಯ ಮೇಲೆ ಕಣ್ಣಿಟ್ಟು, ಲವ್‌ ಜಿಹಾದ್‌ ಟ್ರೈನಿಂಗ್‌ ತೆಗೆದುಕೊಂಡು ಬಂದು ಆಕೆಯನ್ನು ಟಾರ್ಗೆಟ್‌ ಮಾಡಿದ್ದಾನೆ. ಒಳ್ಳೆಯ ಸಂಸ್ಕೃತಿ ಇರುವ ಹುಡುಗಿಯನ್ನು ಬಲೆಗೆ ಹಾಕಿಕೊಳ್ಳುವ ಪ್ರಯತ್ನ ಮಾಡಿದ್ದಾನೆ. ಆದರೆ ಆಕೆ ನಿರಾಕರಿಸಿದ್ದಕ್ಕೆ ಕೊಲೆ ಮಾಡಿದ್ದಾನೆ ಎಂದರು.

    ನನ್ನ ಮಗಳನ್ನು ಈಗಾಗಲೇ ಬಲಿ ತೆಗೆದುಕೊಂಡಿದ್ದೀರಿ. ನಮ್ಮನ್ನಾದರು ಬದುಕಲು ಬಿಡಿ. ನೀವು ಇದೆ ರೀತಿಯ ಹೇಳಿಕೆ ಕೊಟ್ಟರೆ ನಾನು ಸಮಾಜದಲ್ಲಿ ಹೇಗೆ ಮುಖ ತೋರಸಲಿ. ನಾನು ನನ್ನ ಕುಟುಂಬ‌ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ನಿರಂಜನ್‌ ಎಚ್ಚರಿಕೆ ನೀಡಿದರು.