Tag: ನಿರಂಜನ ಹಿರೇಮಠ

  • ನೇಹಾ ಹಿರೇಮಠ ತಂದೆಯ ಬಳಿ ಕ್ಷಮೆಯಾಚಿಸಿದ ಸಿಎಂ!

    ನೇಹಾ ಹಿರೇಮಠ ತಂದೆಯ ಬಳಿ ಕ್ಷಮೆಯಾಚಿಸಿದ ಸಿಎಂ!

    ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನೇಹಾ ತಂದೆ‌ ನಿರಂಜನ ಜೊತೆಗೆ ಇಂದು ಮಾತನಾಡಿರುವ ಸಿಎಂ ಸಿದ್ದರಾಮಯ್ಯ Very Sorry ಎಂದು ಹೇಳಿದ್ದಾರೆ.

    ಕಾನೂನು ಸಚಿವ ಎಚ್.ಕೆ ಪಾಟೀಲ್ ನೇಹಾ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಫೋನ್‌ ನಲ್ಲಿ ನಿರಂಜನ್ ಜೊತೆ ಮಾತಾಡಿದ ಸಿಎಂ ಸಿದ್ದರಾಮಯ್ಯ (Siddaramaiah) ನಾವು ನಿಮ್ಮ ಜೊತೆ ಇದ್ದೇವೆ ಅಂತ ಭರವಸೆ ನೀಡಿದರು.

    ನನ್ನ ಕುಟುಂಬ ಹಾಗೂ ಎಲ್ಲಾ ಮಠಾಧೀಶರುಗಳ ಪರವಾಗಿ ನಾನು ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ. ನೀವು ಕೈಗೊಂಡ ನಿರ್ಧಾರಕ್ಕೆ ಕಾನೂ ಸಚಿವರು, ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ಈ ಪ್ರಕರಣದಲ್ಲಿ ತನಿಖೆಗೆ ಸಹಕರಿಸುತ್ತಿರುವ ಎಲ್ಲರಿಗೂ ಧನ್ಯವಾದಗಳು. ಪ್ರಕಣದ ಸಂಪೂರ್ಣ ತನಿಖೆ ಮಾಡಿ ನಮಗೆ ಬೇಗನೆ ನ್ಯಾಯ ಕೊಡಿಸಿ ಎಂದು ಇದೇ ವೇಳೆ ನಿರಂಜನ್‌ ಅವರು ಸಿಎಂ ಅವರನ್ನು ಕೇಳಿಕೊಂಡರು. ಈ ವೇಳೆ ಸಿಎಂ, ಆದಷ್ಟು ಬೇಗನೇ ನಿಮಗೆ ನ್ಯಾಯ ಕೊಡ್ತೀನಿ ಎಂದು ಹೇಳಿದರು. ಇದನ್ನೂ ಓದಿ: ನಿರಂಜನ್ ಹಿರೇಮಠ್‌ಗೆ ಧೈರ್ಯದಿಂದ ಇರುವಂತೆ ಸಿಎಂ ಹೇಳಿದ್ದಾರೆ: ಹೆಚ್‌.ಕೆ ಪಾಟೀಲ್‌

    ಬಳಿಕ ಈ ಬಗ್ಗೆ ಮಾಧ್ಯಮಗಳಿಗೆ ಮಾತನಾಡಿದ ಸಚಿವ ಎಚ್ ಕೆ ಪಾಟೀಲ್ ನೇಹಾ ಹಿರೇಮಠ ಪ್ರಕರಣ ನ್ಯಾಯದಾನ ವಿಳಂಬ ಆಗಬಾರದೆಂದು ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನ ಮಾಡಲಾಗಿದೆ.ಇವತ್ತು ಉಚ್ಛ ನ್ಯಾಯಾಲಕ್ಕೆ ವಿಶೇಷ ನ್ಯಾಯಾಲಯ ಸ್ಥಾಪನೆ ಪತ್ರ ತಲುಪುತ್ತೆ ತಪ್ಪಿಗಸ್ತರಿಗೆ ಸೂಕ್ತ ಶಿಕ್ಷೆ ಆಗಬೇಕಿದೆ. ಬರ್ಬರ ಹತ್ಯೆ ಮತ್ತು ಸಮಾಜದ ಮುಖಂಡರ ಭೇಟಿ ವೇಳೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಆಗ್ರಹ ವ್ಯಕ್ತವಾಗಿತ್ತು.ಹೀಗಾಗಿ ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನಿಸಿದ್ದೇವೆ ಎಂದರು.

  • ಪ್ರಕರಣ ದಿಕ್ಕು ತಪ್ಪಿಸುತ್ತಿದ್ದಾರೆ, ಸಿಎಂಗೆ ಪತ್ರ ಬರೆದು ನಾವೂ ಆತ್ಮಹತ್ಯೆ ಮಾಡಿಕೊಳ್ತೇವೆ: ನೇಹಾ ತಂದೆ ಭಾವುಕ

    ಪ್ರಕರಣ ದಿಕ್ಕು ತಪ್ಪಿಸುತ್ತಿದ್ದಾರೆ, ಸಿಎಂಗೆ ಪತ್ರ ಬರೆದು ನಾವೂ ಆತ್ಮಹತ್ಯೆ ಮಾಡಿಕೊಳ್ತೇವೆ: ನೇಹಾ ತಂದೆ ಭಾವುಕ

    – ನಿಮ್ಮ ಮಗನನ್ನ ನೀವೇ ಕೊಲ್ಲಿ, ಅದೇ ನಿಜವಾದ ಕ್ಷಮೆ ಎಂದ ನಿರಂಜನ್‌

    ಹುಬ್ಬಳ್ಳಿ: ನನ್ನ ಮಗಳ ಹತ್ಯೆ ಪ್ರಕರಣವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಪೊಲೀಸ್‌ ಆಯುಕ್ತರು ಗೃಹ ಸಚಿವರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಹೀಗೆ ಆದ್ರೆ, ನಾವೂ ಸಹ ಸಿಎಂಗೆ (Chief Minister) ಪತ್ರ ಬರೆದು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಮೃತ ನೇಹಾಳ ತಂದೆ ನಿರಂಜನ್‌ ಹಿರೇಮಠ (Niranjan Hiremath) ಅವರು ಅಳಲು ತೋಡಿಕೊಂಡಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ನೇಹಾ ತಂದೆ, ನಮ್ಮದು ಕ್ರಿಮಿನಲ್‌ ಹಿನ್ನೆಲೆಯುಳ್ಳ ಕುಟುಂಬ ಅಲ್ಲ. ಐದು ಮಂದಿ ಸೇರಿ ನನ್ನ ಮಗಳ ಹತ್ಯೆ ಮಾಡಿದ್ದಾರೆ. ಉಳಿದ ಫಯಾಜ್‌ನನ್ನ (Fayaz) ಮುಂದಕ್ಕೆ ಬಿಟ್ಟು ಕೊಲೆ ಮಾಡಿಸಿದ್ದಾರೆ. ಆ ಸಂದರ್ಭದಲ್ಲಿ ಉಳಿದ ನಾಲ್ಕೂ ಜನರು ಅಲ್ಲೇ ಇದ್ದರು. ಆದ್ರೆ 100ಕ್ಕೆ ನೂರು ಪೊಲೀಸ್ ಆಯುಕ್ತರು (Hubli Police Commissioner) ಗೃಹ ಸಚಿವರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಆಡಳಿತ ಪಕ್ಷದ ಕೆಲ ಸ್ಥಳೀಯ ಜನಪ್ರತಿನಿಧಿಗಳೂ ತಪ್ಪು ಮಾಹಿತಿ ನೀಡಿದ್ದಾರೆ. ಗೃಹಸಚಿವರನ್ನ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಈ ಬೆಳೆವಣಿಗೆ ನೋಡಿದರೆ ಪ್ರಕರಣ ದಾರಿ ತಪ್ಪುವ ಹಾಗೆ ಕಾಣುತ್ತಿದೆ. ಸಿ.ಎಂ ಅವರಿಗೆ ಪತ್ರ ಬರೆದು ನಾವೂ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಭಾವುಕರಾಗಿದ್ದಾರೆ.

    ಈ ಪ್ರಕರಣದ ಹಿಂದೆ ಕಾಣದ ಕೈ ಕೆಲಸ ಮಾಡುತ್ತಿದೆ. ಕಾಂಗ್ರೆಸ್‌ ಪಕ್ಷದ ನಾಯಕರು ನನ್ನ ಬೆನ್ನಿಗೆ ನಿಂತು ಧೈರ್ಯ ಹೇಳಬೇಕು ಎಂದು ಪ್ರಕರಣ ಸತ್ಯಾಸತ್ಯತೆ ಹೊರತೆಗೆಯಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮದುವೆಗೆ ಒಪ್ಪದಿದ್ದಕ್ಕೆ ಹತಾಶೆಯಿಂದ ಕೊಂದಿದ್ದಾನೆ; ನೇಹಾ ತಂದೆ ಹೇಳಿದ್ದೇನು? – ಎಫ್‌ಐಆರ್‌ನಲ್ಲಿ ಏನಿದೆ?

    ಪರಮೇಶ್ವರ್‌ ವಿರುದ್ಧ ಬೇಸರ:
    ಗೃಹ ಸಚಿವ ಪರಮೇಶ್ವರ್ (G Parameshwara) ಅವರು ವಿಷಾದ ವ್ಯಕ್ತಪಡಿಸಿದ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ನಿರಂಜನ ಅವರು, ಗೃಹ ಸಚಿವರು ವಿಷಾದ ವ್ಯಕ್ತಪಡಿಸಿದ್ದು ಇರಲಿ, ಆದ್ರೆ ಅವರು ನಮ್ಮ ಮನೆಗೆ ಬಂದು ಮಾತನಾಡಬೇಕಿತ್ತಲ್ಲ. ಆ ರೀತಿಯ ಬೆಳವಣಿಗೆ ಆಗಿಲ್ಲ. ಈಗ ನಾನು ಮಾತನಾಡಿದ್ದೇನೆ ಎಂದು ಸೃಷ್ಟಿ ಮಾಡಿ ಹೇಳುತ್ತಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ.

    ಇದೇ ವೇಳೆ ಮಗನಿಗೆ ಶಿಕ್ಷೆ ಆಗಬೇಕೆಂಬ ಹಂತಕ ಫಯಾಜ್ ತಾಯಿ ಹೇಳಿಕೆಗೆ ಪ್ರತಿಕ್ರಿಯಿಸಿ, ಮಗಳನ್ನು ಕಳೆದುಕೊಂಡಿದ್ದೇನೆ. ಆ ಕುಟುಂಬ ಕ್ಷಮೆ ಕೇಳಿದರೆ ಸಾಲದು. ನಿಮ್ಮ ಮಗ ಇಷ್ಟು ವಿಕೃತ ಮನೋಭಾವ ಇರೋದರ ಮಾಹಿತಿ ನೀಡಬೇಕಿತ್ತು. ಮೊದಲ ಹೇಳಿದ್ದರೇ ಈ ದುರಂತ ಆಗುತ್ತಿಲ್ಲ. ನಮ್ಮ ಮಗಳನ್ನ ಉಳಿಸಿಕೊಳ್ಳುತ್ತಿದ್ದೆವು. ಅವರ ದಾರಿತಪ್ಪಿದ್ದಾನೆ ಅಂದಾಗ ಮಾಹಿತಿ ನೀಡಬೇಕಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಂಥ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ: ನೇಹಾ ಕೊಲೆ ಬಗ್ಗೆ ನಟಿ ರಚಿತಾ ರಾಮ್‌ ಪ್ರತಿಕ್ರಿಯೆ

    ನಿಮ್ಮ ಮಗನನ್ನು ನೀವೇ ಕೊಲ್ಲಿ:
    ಈ ಹಿಂದೆಯೇ ಫಜಾಜ್ ತನ್ನ ತಂದೆಯನ್ನ ಕೊಲ್ಲಲು ಹೋಗಿದ್ದ ಅಂತಾ ಕೇಳಿದ್ದೇನೆ. ಅವರು ಮೊದಲೇ ಪೊಲೀಸರಿಗೆ ಮಾಹಿತಿ ನೀಡಿದ್ದರೆ, ಈವತ್ತು ನನ್ನ ಮಗಳು ಉಳಿಯುತ್ತಿದ್ದಳು. ಈಗ ನಿಮ್ಮ ಮಗನಿಗೆ ನೀವೇ ಜಾಮೀನುಕೊಟ್ಟು ಹೊರಗೆ ಕರೆದುಕೊಂಡು ಬನ್ನಿ. ನನ್ನ ಮಗಳಿಗೆ ಮಾಡಿದಂತೆನೀವು ಮಾಡಿ, ಅದೇ ನಿಜವಾದ ಕ್ಷಮೆ ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: ನನ್ನ ಮಗ ತಪ್ಪು ಮಾಡಿದ್ದಾನೆ.. ಅವನಿಗೆ ಶಿಕ್ಷೆ ಆಗಲೇಬೇಕು: ಕೊಲೆಗಾರ ಫಯಾಜ್‌ ತಾಯಿ ಕಣ್ಣೀರು