Tag: ನಿರ್ದೇಶಕರು

  • ಜಯದೇವ ಹೃದ್ರೋಗ ಆಸ್ಪತ್ರೆಗೆ ಸಂದರ್ಶನದ ಮೂಲಕ ನಿರ್ದೇಶಕರ ಆಯ್ಕೆ

    ಜಯದೇವ ಹೃದ್ರೋಗ ಆಸ್ಪತ್ರೆಗೆ ಸಂದರ್ಶನದ ಮೂಲಕ ನಿರ್ದೇಶಕರ ಆಯ್ಕೆ

    ಬೆಂಗಳೂರು: ಜಯದೇವ ಹೃದ್ರೋಗ ಆಸ್ಪತ್ರೆಗೆ (Jayadeva Hospital) ನಿರ್ದೇಶಕರ (Director) ಆಯ್ಕೆ ಸಂಬಂಧ 20 ವರ್ಷಗಳ ಬಳಿಕ ವೈದ್ಯರ ಸಂದರ್ಶನ ನಡೆಯಿತು. 11 ವೈದ್ಯರನ್ನ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದ ಸಮಿತಿ ಸಂದರ್ಶನ ನಡೆಸಿತು.

    ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಂದರ್ಶನ ನಡೆಯಿತು. 11 ಜನ ವೈದ್ಯರ ಪೈಕಿ 10 ಜನ ವೈದ್ಯರು sಸಂದರ್ಶನದಲ್ಲಿ ಭಾಗಿಯಾಗಿದ್ದರು. ಅಂತಿಮವಾಗಿ ಸಿಎಂ ನೇತೃತ್ವದ ಸಮಿತಿ ನಿರ್ದೇಶಕರ ಆಯ್ಕೆ ಮಾಡಿದೆ. ನಿರ್ದೇಶಕರ ನೇಮಕ ಸಂಬಂಧ ಕೋರ್ಟ್ನಲ್ಲಿ ಕೇಸ್ ಇರುವುದರಿಂದ ಆಯ್ಕೆಯನ್ನ ಸರ್ಕಾರ ಘೋಷಣೆ ಮಾಡಿಲ್ಲ. ಇದನ್ನೂ ಓದಿ: ಮಾಂಸಾಹಾರ ಸೇವಿಸದೇ ಸಿದ್ದರಾಮಯ್ಯ ಧರ್ಮಸ್ಥಳಕ್ಕೆ ಹೋಗಲಿ: ‘ಕೈ’ ಯಾತ್ರೆಗೆ ಯತ್ನಾಳ್ ಲೇವಡಿ

    ಸೆಪ್ಟೆಂಬರ್ 10ಕ್ಕೆ ಮುಚ್ಚಿದ ಲಕೋಟೆಯಲ್ಲಿ ಸರ್ಕಾರ ಕೋರ್ಟ್‌ಗೆ ವರದಿ ಸಲ್ಲಿಕೆ ಮಾಡಲಿದೆ. ಹೈಕೋರ್ಟ್ ಸೂಚನೆ ಮೇರೆಗೆ ಸರ್ಕಾರ ನಿರ್ದೇಶಕರ ಆಯ್ಕೆ ಘೋಷಣೆ ಮಾಡಲಿದೆ. ಮೈಸೂರು ಜಯದೇವದ ಡಾ.ದಿನೇಶ್.ಬಿ ಆಯ್ಕೆ ಬಹುತೇಕ ಅಂತಿಮ ಎನ್ನಲಾಗುತ್ತಿದೆ. ಇದನ್ನೂ ಓದಿ: Tumakuru | ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ ಕೆಎನ್ ರಾಜಣ್ಣ ಅವಿರೋಧ ಆಯ್ಕೆ

  • ಚಲನಚಿತ್ರ ಮಂಡಳಿಗೆ ಅಮಾವಾಸ್ಯೆ ಕತ್ತಲು ಆವರಿಸಿದೆ : ರಾಜೇಂದ್ರ ಸಿಂಗ್ ಬಾಬು

    ಚಲನಚಿತ್ರ ಮಂಡಳಿಗೆ ಅಮಾವಾಸ್ಯೆ ಕತ್ತಲು ಆವರಿಸಿದೆ : ರಾಜೇಂದ್ರ ಸಿಂಗ್ ಬಾಬು

    ಬೆಂಗಳೂರು: ನಮ್ಮ ಚಲನಚಿತ್ರ ಮಂಡಳಿಗೆ ಅಮಾವಾಸ್ಯೆ  ಕತ್ತಲು ಹಿಡಿದಿದೆ. ಅದು ಬಿಟ್ಟು ಹೋಗೋದಿಲ್ಲ ಅನಿಸುತ್ತದೆ ಎಂದು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಹೇಳಿಕೆ ನೀಡಿದ್ದಾರೆ.

    ಕರ್ನಾಟಕ ವಾಣಿಜ್ಯ ಚಲನಚಿತ್ರ ಮಂಡಳಿ ನಡೆ ವಿಚಾರವಾಗಿ ಇಂದು ಸ್ಯಾಂಡಲ್‍ವುಡ್‍ನ ಕೆಲವು ನಿರ್ಮಾಪಕರು ಮತ್ತು ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿದರು. ರಾಜೇಂದ್ರಸಿಂಗ್ ಬಾಬು ಮಾತನಾಡಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಚುನಾವಣೆಗೆ ತಡೆಯೊಡ್ಡಿ ಸಹಕಾರ ಸಂಘಗಳ ಉಪನಿಬಂಧನಾ ಅಧಿಕಾರಿ ಮಧ್ಯಂತರ ಆದೇಶ ಹೊರಡಿಸಿದೆ. ಆದರೂ ವಾಣಿಜ್ಯ ಮಂಡಳಿ ಇಲ್ಲಿಯವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹಾಗಾಗಿ ಸಮಾನ ಮನಸ್ಕರೆಲ್ಲ ಸೇರಿ ಈ ಬಗ್ಗೆ ಹೋರಾಟ ಮಾಡಲು ನಿರ್ಧಸಿದ್ದೇವೆ ಎಂದು ತಿಳಿಸಿದರು.

    ನಮ್ಮ ಚಲನಚಿತ್ರ ಮಂಡಳಿಗೆ ಅಮಾವಾಸ್ಯೆ ಕತ್ತಲು ಹಿಡಿದಿದೆ. ಅದು ಬಿಟ್ಟು ಹೋಗುವುದಿಲ್ಲ ಎನಿಸುತ್ತದೆ. ಚೇಂಬರ್‍ನಿಂದಾಗಿ ನಾವೇ ಧ್ವನಿ ಇಲ್ಲದೇ ಇರುವ ಹಾಗೇ ಆಗಿದ್ದೇವೆ. ಅಲ್ಲದೆ ರಿಜಿಸ್ಟ್ರಾರ್ ಆಫ್ ಸೊಸೈಟಿಯಿಂದ  ಫಿಲಂ ಚೇಂಬರ್ ಗೆ ಒಂದು ಪತ್ರ ಬಂದಿದೆ. ಅದರಲ್ಲಿ ಸಾಕಷ್ಟು ಆರೋಪಗಳಿವೆ ಎಂದು ಹೇಳಿದರು.

    ಚೇಂಬರ್ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದು ತಿಳಿಯುತ್ತಿಲ್ಲ. ಕೃಷ್ಣೇ ಗೌಡ ಮತ್ತು ಜೆಡಿ ಎಂಬುವವರು 20 ಅಂಶಗಳಲ್ಲಿ ಅಕ್ರಮ ನಡೆದಿದೆ ಎಂಬುವುದರ ಬಗ್ಗೆ ದೂರು ನೀಡಿದ್ದಾರೆ. ಹಾಗಾಗಿ ಈ ಬಾರಿಯ ಚುನಾವಣೆಯನ್ನು ತಡೆಹಿಡಿಯಲಾಗಿದೆ. ಈಗಾಗಲೇ ರಿಜಿಸ್ಟ್ರಾರ್‌ನ್ನ ಮಂಡಳಿಗೆ ನೇಮಕ ಮಾಡಲಾಗಿದೆ. ಆದರೆ ಮಂಡಳಿಯಿಂದ ರಾಜಕೀಯವಾಗಿ ಒತ್ತಡ ತಂದು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಇಲ್ಲಿ ಸತ್ಯ ಹೊರ ಬರಬೇಕು ಎಂಬ ಉದ್ದೇಶದಿಂದ ನಾವು  ರಿಜಿಸ್ಟ್ರಾರ್‌ಗೆ ಮನವಿ ಮಾಡುತ್ತಿದ್ದೇವೆ. ರಿಜಿಸ್ಟ್ರಾರ್ ಆಫೀಸಿಗೆ ಈ ಮನವಿ ನೀಡಿ ಅದು ಸಿಎಂ ಬಳಿಗೆ ತಲುಪಿಸುತ್ತೇವೆ. ಇಲ್ಲಿ ಯಾರು ತಪ್ಪು ಮಾಡಿದ್ದಾರೆ, ಸತ್ಯ ಯಾವುದು ಎನ್ನುವುದು ಎಲ್ಲರಿಗೂ ಗೊತ್ತಾಗಬೇಕು ಎಂದರು.

    ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮಾತನಾಡಿ, ಕೋವಿಡ್ ಸಂಕಷ್ಟ ಸಾಕು ಎನ್ನುತ್ತೀರುವಾಗಲೇ ಈ ಮರಿ ಕೋವಿಡ್ ಗಳನ್ನು ನೋಡಿ ಗಾಬರಿಯಾಗಿದೆ. ಚುನಾವಣಾ ಪ್ರಕ್ರಿಯೆ ನಡೆಯುವವರೆಗೂ ಯಾವುದು ಸರಿಯಾಗುವುದಿಲ್ಲ. ಅಲ್ಲಿ ಒಂದು ಗುಂಪು ಸೇರಿಕೊಂಡಿದೆ. ಅವರು ಬೈಲಾ ತಿದ್ದುಪಡಿ ಮಾಡುತ್ತಾರೆ, ಅದರಿಂದ ಅವರಿಗೆ ಬೇಕಾದ ರೀತಿಯಲ್ಲಿ ತಿದ್ದುಪಡಿ ಮಾಡಿಕೊಳ್ಳುತ್ತಾರೆ. ನಾವು ನಮ್ಮ ಪಾಡಿಗೆ ಶೂಟಿಂಗ್ ಮಾಡುವುದರಲ್ಲಿ ನಿರತರಾಗಿರುತ್ತೇವೆ. ಆದರೆ ಇಲ್ಲಿ ನಡೆಯುವುದನ್ನು ಕೇಳುವವರು ಇಲ್ಲ ಎಂದು ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಶೈಲೇಂದ್ರ ಬಾಬು, ಸುರೇಶ್, ಮುರಳಿ, ಮದನ್ ಪಟೇಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

  • ಸರ್ಕಾರದಲ್ಲೇ ಕೆಲಸ ಮಾಡ್ತಿರೋ ನಿರ್ದೇಶಕರ ಮಗನನ್ನ ಯಾಕೆ ಕರೆಸಿಲ್ಲ: ಇಂದ್ರಜಿತ್ ಪ್ರಶ್ನೆ

    ಸರ್ಕಾರದಲ್ಲೇ ಕೆಲಸ ಮಾಡ್ತಿರೋ ನಿರ್ದೇಶಕರ ಮಗನನ್ನ ಯಾಕೆ ಕರೆಸಿಲ್ಲ: ಇಂದ್ರಜಿತ್ ಪ್ರಶ್ನೆ

    – ಪ್ರಭಾವಿ ರಾಜಕಾರಣಿಯ ಕೈವಾಡ ದೊಡ್ಡದಾಗಿದೆ
    – ಸಿಸಿಬಿ ತನಿಖೆ ಅಷ್ಟು ಖುಷಿ ಕೊಟ್ಟಿಲ್ಲ

    ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ನಟಿಯರಷ್ಟೇ ಅಲ್ಲ ನಟರು, ರಾಜಕಾರಣಿಗಳ ಮಕ್ಕಳು, ಹಿರಿಯ ನಿರ್ದೇಶಕರ ಮಕ್ಕಳಿದ್ದಾರೆ. ಸರ್ಕಾರದಲ್ಲೇ ಕೆಲಸ ಮಾಡುತ್ತಿರುವ ಹಿರಿಯ ನಿರ್ದೇಶಕರ ಮಗನನ್ನ ಯಾಕೆ ಇನ್ನೂ ಕರೆಸಿಲ್ಲ? ಬೇರೇ ಇಲ್ಲದೆ ಇರುವವರನ್ನು ಕರೆದುಕೊಂಡು ಬಂದು ಸುಮ್ಮನೆ ವಿಚಾರಣೆ ಮಾಡುತ್ತಿದ್ದಾರೆ. ಹೀಗಾಗಿ ಇದು ಯಾವುದೇ ರಾಜಕೀಯ ಪ್ರಭಾವ ಇಲ್ಲದೆ ನಡೆಸುತ್ತಿರುವ ವಿಚಾರಣೆ ಎಂದು ನಮಗೆ ಅನ್ನಿಸುತ್ತಿಲ್ಲ ಎಂದು ನಟ, ನಿರ್ದೇಶಕ ಇಂದ್ರಜಿತ್ ಹೇಳಿದ್ದಾರೆ. ಇದನ್ನೂ ಓದಿ:  ಡ್ರಗ್ಸ್ ದಂಧೆಯಲ್ಲಿ ರಾಗಿಣಿ ಆ್ಯಕ್ಟಿವ್ ಮೆಂಬರ್ – ಸೆ.24ರವರೆಗೂ ರಾಗಿಣಿ, ಸಂಜನಾಗೆ ಜೈಲು ಫಿಕ್ಸ್

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂದ್ರಜಿತ್, ನನಗೆ ಗೊತ್ತಿರುವ ವಿಚಾರವನ್ನು ಸಿಸಿಬಿ ಮುಂದೆ ಹೇಳಿದ್ದೇನೆ. ಈ ಮೂಲಕ ಇಡೀ ಕರ್ನಾಟಕಕ್ಕೆ, ವಿದ್ಯಾರ್ಥಿಗಳಿಗೆ, ಯುವಕರಿಗೆ ಡ್ರಗ್ಸ್ ಸೇವನೆ ಮಾಡುವುದು ತಪ್ಪು ಎಂಬ ಸಂದೇಶ ಹೋಗಿದೆ. ಆದರೆ ನಾನು ಸಿಸಿಬಿಗೆ ಮಾಹಿತಿ ಕೊಟ್ಟ ನಂತರ ಆದ ಬೆಳವಣಿಗೆ ಅಷ್ಟು ಖುಷಿ, ಸಂತೋಷ ಕೊಟ್ಟಿಲ್ಲ. ಏನು ಆಗಬೇಕಿತ್ತೋ ಅದು ಇನ್ನೂ ಹೆಚ್ಚಾಗಿ ಆಗಬೇಕಿತ್ತು. ನಮ್ಮ ಪೊಲೀಸರು ಕೆಲಸ ಮಾಡುತ್ತಿದ್ದರೂ ಎಲ್ಲೋ ಒಂದುಕಡೆ ಕೈ ಕಟ್ಟಿ ಹಾಕಿರುವಾಗಿದೆ ಎಂದು ಅಭಿಪ್ರಾಯಪಟ್ಟರು.

    ಡ್ರಗ್ಸ್ ಮಾಫಿಯಾದಲ್ಲಿ ನಟಿಯಷ್ಟೇ ಅಲ್ಲ ನಟರು, ರಾಜಕಾರಣಿಗಳ ಮಕ್ಕಳು, ಹಿರಿಯ ನಿರ್ದೇಶಕರ ಮಕ್ಕಳಿದ್ದಾರೆ. ಈವೆಂಟ್ ಮ್ಯಾನೇಜರ್‌ಗಳು, ಹಲವಾರು ರಾಜಕಾರಣಿಗಳು ಇದ್ದಾರೆ. ಆದರೆ ಇಲ್ಲಿ ಇಬ್ಬರೂ ನಟಿಯನ್ನು ಮಾತ್ರ ಅರೆಸ್ಟ್ ಮಾಡಿ, ಇಲ್ಲಿ ಎಲ್ಲೂ ಬೇರೇ ಇಲ್ಲದೆ ಇರುವವರನ್ನು ಕರೆದುಕೊಂಡು ಬಂದು ನಾಮಕಾವಸ್ಥೆಗೆ ಮಾಡಿದಂತೆ ಇದೆ. ಯಾವುದೇ ರಾಜಕೀಯ ವ್ಯಕ್ತಿಗಳ ಒತ್ತಡವಿಲ್ಲದೆ, ಯಾರ‍್ಯಾರು ದೊಡ್ಡ ವ್ಯಕ್ತಿಗಳಿದ್ದಾರೆ, ನಟರ ಮಕ್ಕಳು, ರಾಜಕಾರಣಿಗಳ ಮಕ್ಕಳು, ಹಿರಿಯ ನಿರ್ದೇಶಕರ ಮಕ್ಕಳನ್ನು ಕರೆಸಿ ಕೂಲಂಕುಶವಾಗಿ ವಿಚಾರಣೆ ಮಾಡಬೇಕು. ಆಗ ನಿಮ್ಮ ಬಗ್ಗೆ ನಮಗೆ ಗೌರವ ಹೆಚ್ಚಾಗುತ್ತದೆ. ಆಗ ಇಡೀ ಕರ್ನಾಟಕಕ್ಕೆ ಒಂದು ಸಂದೇಶ ಕೊಟ್ಟದಂತಾಗುತ್ತದೆ ಎಂದು ಸಿಸಿಬಿ ತನಿಖೆ ಬಗ್ಗೆ ಮಾತನಾಡಿದರು.

    ಸರ್ಕಾರದಲ್ಲೇ ಕೆಲಸ ಮಾಡುತ್ತಿರುವ ಹಿರಿಯ ನಿರ್ದೇಶಕರ ಮಗನನ್ನ ಯಾಕೆ ಇನ್ನೂ ಕರೆಸಿಲ್ಲ? ಎಂದು ಪ್ರಶ್ನೆ ಮಾಡಿದರು. ಇಲ್ಲಿ ಬೇರೇ ಇಲ್ಲದೆ ಇರುವವರನ್ನು ಕರೆದುಕೊಂಡು ಬಂದು ಸುಮ್ಮನೆ ವಿಚಾರಣೆ ಮಾಡುತ್ತಿದ್ದಾರೆ. ಹೀಗಾಗಿ ಇದು ಯಾವುದೇ ರಾಜಕೀಯ ಪ್ರಭಾವ ಇಲ್ಲದೆ ನಡೆಸುತ್ತಿರುವ ವಿಚಾರಣೆ ಎಂದು ನಮಗೆ ಅನ್ನಿಸುತ್ತಿಲ್ಲ. ಇದು ಯಾವುದೇ ಲವ್ ಜಿಹಾದ್ ಅಲ್ಲ. ಡ್ರಗ್ ವಿಚಾರವನ್ನ ಡೈವರ್ಟ್ ಮಾಡಲು ಹೋಗಬೇಡಿ. ಒಬ್ಬ ನಟಿಗೆ ಲವ್ ಜಿಹಾದ್ ಮಾಡಲಿಕೆ ಸಾಧ್ಯವೇ ಎಂದು ಪ್ರಶ್ನಿಸಿದರು.

    ಒಬ್ಬ ನಟಿ ಒಂದು ಬಾರಿ ಹಂದಿ, ನಾಯಿ ಅಂತ ಹೇಳಿರುವುದು. ಆದರೆ ಅದನ್ನು ಹೇಳಿಸಿಕೊಂಡಿರುವುದು ಹತ್ತತ್ತು ಸಾರಿ ಹೇಳುವ ಮೂಲಕ ಹಾಸ್ಯಾಸ್ಪದ ಮಾಡುತ್ತಿದ್ದಾರೆ ಎಂದು ಪ್ರಶಾಂತ್ ಸಂಬರಗಿಗೆ ಇಂದ್ರಜಿತ್ ಟಾಂಗ್ ನೀಡಿದರು. ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಯ ಕೈವಾಡ ದೊಡ್ಡದಾಗಿದೆ. ಕರ್ನಾಟಕದಲ್ಲಿ ಸರಿಯಿಲ್ಲ ಅನ್ನಿಸುತ್ತದೆ. ಬಿಜೆಪಿ ಸರ್ಕಾರ ಇದೆ. ಆದರೆ ಕೇಂದ್ರ ಸರ್ಕಾರಕ್ಕೆ ಸರಿಯಾದ ವಿಷಯ ರವಾನೆ ಆಗುತ್ತಿರಲಿಲ್ಲ ಎಂದರು.

    ಆದಿತ್ಯ ಆಳ್ವಾನ ಇನ್ನೂ ಬಂದಿಸಿಲ್ಲ. ಎ1 ಆರೋಪಿಯನ್ನ ಬಂಧಿಸಿಲ್ಲ. 12 ದಿನಗಳ ಬಳಿಕ ಒಂದಿಬ್ಬರನ್ನ ಬಂಧಿಸಿದ್ದಾರೆ. ಆದರೆ ನಟರ ಮಕ್ಕಳು, ರಾಜಕಾರಣಿ ಮಕ್ಕಳನ್ನ ಇನ್ನೂ ಯಾಕೆ ವಿಚಾರಣೆಗೆ ಕರೆಸಿಲ್ಲ. ಸುಶಾಂತ್ ಕೇಸ್ ಕೂಡ ಸೂಸೈಡ್ ಅಂತ ಹೇಳಿದರು. ಆದರೆ ಸಿಸಿಬಿಗೆ ಕೇಸ್ ಒಪ್ಪಿಸಲಾಗಿದೆ. ಇಲ್ಲೂ ಪ್ರಭಾವಿ ನಾಯಕರು ಫೋನ್ ಮಾಡಿ ಬಿಟ್ಟು ಬಿಡಿ ಅಂತಿದ್ದಾರೆ. ಇಂದು ವಿರೋಧ ಪಕ್ಷ ಕೇಳಬೇಕಾದ ಪ್ರಶ್ನೆಯನ್ನು ಮಾಧ್ಯಮ ಕೇಳುತ್ತಿದೆ. ಪ್ರಭಾವಿ ನಾಯಕರು ಫೋನ್ ಮಾಡಿ ಬಿಟ್ಟು ಬಿಡಿ ಅಂತಿದ್ದಾರೆ ಎಂದು ಇಂದ್ರಜಿತ್ ಹೇಳಿದರು.

    ಡ್ರಗ್ ಮಾಫಿಯಾ ಸಣ್ಣ ವಿಷಯ ಅಲ್ಲ. ರಾಜಕಾರಣಿ ಪುತ್ರ ಎಂದು ಆಳ್ವಾನನ್ನು ಅರೆಸ್ಟ್ ಮಾಡಿಲ್ಲ. ಸರ್ಕಾರದಲ್ಲಿ ಕೆಲಸ ಮಾಡುತ್ತಿರುವ ನಿರ್ದೇಶಕನ ಪುತ್ರ ಇದ್ದಾನೆ. ಅವನು ಪೆಡ್ಲರ್, ಅವನನ್ನ ಯಾಕೆ ಕರೆದು ವಿಚಾರಣೆ ಮಾಡುತ್ತಿಲ್ಲ. ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ತ್ಯಾಪೆ ಕೆಲಸ ಮಾಡಬೇಡಿ. ವಿಚಾರಣೆಯನ್ನ ಕೇವಲ ನೆಪವಾಗಿ ಮಾಡಬೇಡಿ. ರಾಜಕೀಯ ಪಕ್ಷದ ಮಕ್ಕಳನ್ನ ಕರೆಸಬೇಕು. ಹಳೆಯ ಡ್ರಗ್ ಪ್ರಕರಣಗಳನ್ನ ಕೆದಕಿದರೆ ಇನ್ನೂ ಸಾಕಷ್ಟು ಪ್ರಕರಣ ಬಯಲಿಗೆ ಬರುತ್ತೆ. ಆದರೆ ಈಗ ಪ್ರಕರಣದ ತನಿಖೆ ಬೇರೆ ಸ್ವರೂಪವನ್ನು ಪಡೆದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಯಾರಿಗೆ ರಾಜಕೀಯ ಪ್ರಭಾವ ಇಲ್ಲ ಅಂತವರನ್ನ ಕರೆದು ವಿಚಾರಣೆ ಮಾಡುತ್ತಿದ್ದಾರೆ. ಯಾರು ಸರ್ಕಾರದಿಂದ ಈ ಪ್ರಕರಣ ಮುಚ್ಚು ಹಾಕಲು ಒತ್ತಡ ಹಾಕ್ತಿರೋರು? ಆ ವಿಚಾರ ಯಾರು ಮಾತನಾಡುತ್ತಿಲ್ಲ. ಅವರಿಗೂ ಡ್ರಗ್ ಮಾಫಿಯಾಗೂ ಏನ್ ಕನೆಕ್ಷನ್ ಇದೆ? ಅನ್ನೋದರ ಬಗ್ಗೆ ತನಿಖೆ ಆಗಬೇಕು. ಡ್ರಗ್ ಮಾಫಿಯಾ ಚಿಕ್ಕ ವಿಷಯ ಅಲ್ಲ. ಚಿಕ್ಕ ಮಕ್ಕಳಿಗೆ ಚಾಕ್ಲೇಟ್ ರೀತಿ ಸಿಗುತ್ತಿದೆ. ತನಿಖೆ ಸರಿಯಾಗಿ ಆದರೆ ಪೆಟ್ಟಿಗೆಯಲ್ಲಿರುವ ಶವಗಳು ಆಚೆ ಬರುತ್ತದೆ ಎಂದು ಇಂದ್ರಜಿತ್ ಹೇಳಿದರು.

  • ಬ್ಯಾನ್ ಟಿಕ್‍ಟಾಕ್ ಅಭಿಯಾನಕ್ಕೆ ನಿಂತ ಚಂದನವನದ ಸ್ಟಾರ್ ನಿರ್ದೇಶಕರು

    ಬ್ಯಾನ್ ಟಿಕ್‍ಟಾಕ್ ಅಭಿಯಾನಕ್ಕೆ ನಿಂತ ಚಂದನವನದ ಸ್ಟಾರ್ ನಿರ್ದೇಶಕರು

    ಬೆಂಗಳೂರು: ಇತ್ತೀಚೆಗೆ ಸಖತ್ ಸದ್ದು ಮಾಡುತ್ತಿರುವ ಟಿಕ್‍ಟಾಕ್ ಆ್ಯಪ್ ಅನ್ನು ಇಂಡಿಯಾದಲ್ಲಿ ಬ್ಯಾನ್ ಮಾಡುವಂತೆ ಟ್ವಿಟ್ಟರ್‍ನಲ್ಲಿ ಅಭಿಯಾನವನ್ನು ಆರಂಭಿಸಿದ್ದಾರೆ.

    ನಮ್ಮ ಯುವ ಪೀಳಿಗೆ ಇತ್ತೀಚೆಗೆ ಜಾಸ್ತಿ ಬಳಕೆ ಮಾಡುತ್ತಿರುವ ಸಾಮಾಜಿಕ ಜಾಲತಾಣದಲ್ಲಿ ಟಿಕ್‍ಟಾಕ್ ಕೂಡ ಒಂದು. ಇದು ಯಾವ ಮಟ್ಟಕ್ಕೆ ಪ್ರಚಲಿತದಲ್ಲಿ ಇದೆ ಎಂದರೆ ಇಲ್ಲಿ ವಿಡಿಯೋವನ್ನು ಮಾಡಲು ಹೋಗಿ ಜನರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. ಈಗ ಈ ಆ್ಯಪ್ ಅನ್ನು ಬ್ಯಾನ್ ಮಾಡುವಂತೆ ಕೆಲವರು ಒತ್ತಾಯ ಮಾಡುತ್ತಿದ್ದಾರೆ. ಇದರಿಂದ ಮೊದಲಿಗೆ 4.6ರ ರೇಟಿಂಗ್‍ನಲ್ಲಿ ಇದ್ದ ಟಿಕ್‍ಟಾಕ್ ಆ್ಯಪ್ ಈಗ 1.3ಕ್ಕೆ ಇಳಿದಿದೆ.

    ಟಿಕಾಟಾಕ್ ಚೀನಾದ ಆ್ಯಪ್ ಆಗಿದ್ದು, ಸ್ವದೇಶಿ ವಸ್ತುಗಳನ್ನು ಬಳಸಿ ಹಾಗೂ ಚೀನಾದ ವಸ್ತುಗಳನ್ನು ತಿರಸ್ಕರಿಸಬೇಕು ಎಂಬ ನಿಟ್ಟಿನಲ್ಲಿ ಕೆಲವರು ಟಿಕ್‍ಟಾಕ್ ಅನ್ನು ವಿರೋಧ ಮಾಡುತ್ತಿದ್ದರೆ, ಇನ್ನೂ ಕೆಲವರು ಇದರಲ್ಲಿ ವಿಡಿಯೋ ಮಾಡಿ ಜನಪ್ರಿಯತೆ ಪಡೆಯುವ ಗೀಳಿಗೆ ಬಿದ್ದ ಯುವಕ-ಯುವತಿಯರು ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ ಎಂದು ವಾದಿಸುತ್ತಿದ್ದಾರೆ. ಈ ಎಲ್ಲ ಕಾರಣದಿಂದ ಟಿಕ್‍ಟಾಕ್ ಬ್ಯಾನ್ ಆಗಬೇಕು ಎಂದು ಅಭಿಯಾನವನ್ನು ಆರಂಭಿಸಿದ್ದಾರೆ.

    ಟಿಕ್‍ಟಾಕ್ ಆ್ಯಪ್ ನಲ್ಲಿ ಕೆಲ ಸೆಲೆಬ್ರಿಟಿಗಳು ವಿಡಿಯೋ ಮಾಡುತ್ತಿದ್ದರೆ, ಈ ಕಡೆ ಕೆಲ ಸೆಲೆಬ್ರಿಟಿಗಳು ಅದನ್ನು ಬ್ಯಾನ್ ಮಾಡುವಂತೆ ಟ್ವೀಟ್ ಮಾಡುತ್ತಿದ್ದಾರೆ. ಈಗ ಸ್ಯಾಂಡಲ್‍ವುಡ್‍ನ ಸ್ಟಾರ್ ನಿರ್ದೇಶಕರಾದ ಸಂತೋಷ್ ಅನಂದ್‍ರಾಮ್, ಪವನ್ ಒಡೆಯರ್ ಮತ್ತು ಎಪಿ ಅರ್ಜೂನ್ ಟಿಕ್‍ಟಾಕ್ ಅನ್ನು ಬ್ಯಾನ್ ಮಾಡಿ ಎಂದು ಬರೆದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಕೆಲ ಬಾಲಿವುಡ್ ನಟರು ಕೂಡ ಕೈಜೋಡಿಸಿದ್ದು, ಟಿಕ್‍ಟಾಕ್ ಬ್ಯಾನ್ ಮಾಡುವಂತೆ ಒತ್ತಾಯ ಮಾಡುತ್ತಿದ್ದಾರೆ.

    ಯುವ ಜನತೆಯನ್ನು ಟಿಕ್‍ಟಾಕ್ ತಪ್ಪು ದಾರಿಗೆ ಎಳೆಯುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅಭಿಪ್ರಾಯಪಟ್ಟಿದ್ದು, ಟಿಕ್‍ಟಾಕ್ ಅನ್ನು ಸಂಪೂರ್ಣವಾಗಿ ನಿಷೇಧ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆದಿದ್ದರು. ಮನರಂಜನೆಗಾಗಿ ಆರಂಭವಾದ ಟಿಕ್‍ಟಾಕ್ ಇಂದು ಹಿಂಸೆಯನ್ನು ಪ್ರೇರೇಪಿಸುತ್ತಿದೆ. ಮಹಿಳೆಯ ಮೇಲಿನ ಅತ್ಯಾಚಾರ, ಆ್ಯಸಿಡ್ ದಾಳಿಗೆ ಪ್ರೇರಣೆ ನೀಡುವ ವಿಡಿಯೋಗಳು ಟಿಕ್‍ಟಾಕ್‍ನಲ್ಲಿ ಹೆಚ್ಚಾಗುತ್ತಿದೆ ಎಂದು ಬಿಜೆಪಿ ನಾಯಕ ತಾಜೀಂದರ್ ಸಿಂಗ್ ಮಾಡಿರುವ ಟ್ವೀಟ್‍ಗೆ ರೇಖಾ ಶರ್ಮಾ ಪ್ರತಿಕ್ರಿಯೆ ನೀಡಿದ್ದರು.

    ಆ್ಯಸಿಡ್ ದಾಳಿಗೆ ಪ್ರೇರಣೆ ನೀಡುವ ರೀತಿ ಟಿಕ್‍ಟಾಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ. ಇತ್ತೀಚೆಗೆ ಟಿಕ್‍ಟಾಕ್‍ನಲ್ಲಿ 1.34 ಕೋಟಿ ಹಿಂಬಾಲಕರನ್ನು ಹೊಂದಿದ್ದ ಫೈಜಲ್ ಸಿದ್ದಿಕಿ ಇಂತಹ ವಿಡಿಯೋ ಮಾಡಿದ್ದ. ಇಂತಹ ವಿಡಿಯೋಗಳು ಸಮಾಜದ ಮೇಲೆ ಋಣಾತ್ಮಕ ಪರಿಣಾಮಗಳನ್ನು ಬೀರುತ್ತವೆ. ವಿಡಿಯೋ ಮಾಡಿ ಹರಿಬಿಟ್ಟ ವ್ಯಕ್ತಿಯ ವಿರುದ್ಧ ಕ್ರಮಕೈಗೊಳ್ಳಲು ಮಹಾರಾಷ್ಟ್ರ ಡಿಜಿಪಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ರೇಖಾ ಶರ್ಮಾ ಮಾಹಿತಿ ನೀಡಿದ್ದರು.

    ಹಿಂಸೆಗೆ ಪ್ರಚೋದಿಸುವ ವಿಡಿಯೋಗಳನ್ನು ಕೂಡಲೇ ಆ್ಯಪ್‍ನಿಂದ ತೆಗೆದು ಹಾಕುವಂತೆ ಆಗ್ರಹಿಸಿರುವ ಅವರು, ಇಂತಹ ಆಕ್ಷೇಪರ್ಹ ವಿಡಿಯೋಗಳು ಮಾತ್ರವಲ್ಲದೇ ಮಾತ್ರವಲ್ಲದೇ ಟಿಕ್‍ಟಾಕ್ ಯುವ ಜನತೆಯನ್ನು ಅನುತ್ಪಾದಕ ಜೀವನ ಹಾಗೂ ಕೆಲ ಹಿಂಬಾಲಕರನ್ನು ಪಡೆಯವತ್ತ ತಳ್ಳುತ್ತಿದೆ. ಅನುಯಾಯಿಗಳು ಸಿಕ್ಕದಿದ್ದಾಗ ಕೆಲವರು ಸಾವಿಗೂ ಶರಣಾಗುತ್ತಿದ್ದಾರೆ ಎಂದು ರೇಖಾ ಶರ್ಮಾ ಕಳವಳ ವ್ಯಕ್ತಪಡಿಸಿದ್ದರು.

  • ನಿರ್ದೇಶಕರು ನನ್ನನ್ನು ರೂಮಿಗೆ ಕರೆದು ಬಾಗಿಲು ಹಾಕ್ತಿದ್ರು: ರಾಖಿ ಸಾವಂತ್

    ನಿರ್ದೇಶಕರು ನನ್ನನ್ನು ರೂಮಿಗೆ ಕರೆದು ಬಾಗಿಲು ಹಾಕ್ತಿದ್ರು: ರಾಖಿ ಸಾವಂತ್

    ಮುಂಬೈ: ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ಇತ್ತೀಚೆಗೆ ತನ್ನ 41ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾಳೆ. ಈ ವೇಳೆ ಆಕೆ ತನಗಾದ ಕಾಸ್ಟಿಂಗ್ ಕೌಚ್ ಅನುಭವನ್ನು ಹಂಚಿಕೊಂಡಿದ್ದಾಳೆ.

    ರಾಖಿ ವೆಬ್‍ಸೈಟ್‍ಗೆ ಸಂದರ್ಶನ ನೀಡಿದ್ದು, ಈ ವೇಳೆ ಆಕೆ, ಚಿತ್ರದ ನಿರ್ದೇಶಕರು, ನಿರ್ಮಾಪಕರು ಕೆಟ್ಟ ಉದ್ದೇಶದಿಂದ ನನಗೆ ಕರೆ ಮಾಡುತ್ತಿದ್ದರು. ನಾನು ಇಲ್ಲಿಗೆ ಬಂದ ನಂತರ ಎಲ್ಲವನ್ನು ಸಹಿಸಿಕೊಳ್ಳುತ್ತಿದೆ. ಮೊದಲು ನನ್ನ ಹೆಸರು ನೀರೂ ಭೇದಾ ಆಗಿತ್ತು. ನಾನು ಆಡಿಶನ್‍ಗೆ ಹೋಗುವಾಗ ನಿರ್ದೇಶಕರು ಹಾಗೂ ನಿರ್ಮಾಪಕರು ನನಗೆ ಟ್ಯಾಲೆಂಟ್ ತೋರಿಸಿ ಎಂದು ಹೇಳುತ್ತಿದ್ದರು. ಆಗ ನನಗೆ ಅವರು ಯಾವ ಟ್ಯಾಲೆಂಟ್ ಬಗ್ಗೆ ಮಾತನಾಡುತ್ತಿದ್ದಾರೆ ಎಂಬುದು ತಿಳಿದಿರಲಿಲ್ಲ ಎಂದು ಹೇಳಿದ್ದಾಳೆ.

    ಆಡಿಶನ್‍ಗೆ ನಾನು ನನ್ನ ಫೋಟೋ ತೆಗೆದುಕೊಂಡು ಹೋಗುತ್ತಿದೆ. ಆಗ ಅವರು ನನಗೆ ರೂಮಿನೊಳಗೆ ಕರೆದು ಬಾಗಿಲು ಮುಚ್ಚುತ್ತಿದ್ದರು. ನಾನು ಕಷ್ಟಪಟ್ಟು ಅಲ್ಲಿಂದ ಹೊರಗೆ ಬರುತ್ತಿದೆ. ನಾನು ತುಂಬಾ ಬಡತನವನ್ನು ಅನುಭವಿಸಿದ್ದೇನೆ. ನನ್ನ ತಾಯಿ ಆಸ್ಪತ್ರೆಯಲ್ಲಿ ಕಸ ಎತ್ತುವ ಕೆಲಸ ಮಾಡುತ್ತಿದ್ದರು. ಆಗ ನಮ್ಮ ಬಳಿ ಊಟ ಮಾಡಲು ಹಣ ಸಹ ಇರುತ್ತಿರಲಿಲ್ಲ. ನಾನು ಹಾಗೂ ನನ್ನ ತಾಯಿ ಉಳಿದ ಊಟವನ್ನು ಮಾಡುತ್ತಿದ್ದೇವು ಎಂದು ರಾಖಿ ತನ್ನ ಹಳೆಯ ದಿನಗಳನ್ನು ನೆನಪಿಸಿಕೊಂಡಳು.

    ಜುಲೈ 28ರಂದು ರಾಖಿ ಮುಂಬೈನ ಜೆ.ಡಬ್ಲೂ ಮ್ಯಾರಿಯಟ್ ಹೋಟೆಲ್‍ನಲ್ಲಿ ಗೌಪ್ಯವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಳು. ರಾಖಿ ಇನ್‍ಸ್ಟಾಗ್ರಾಂನಲ್ಲಿ ಸಕ್ರಿಯಳಾಗಿದ್ದು, ಯಾವಾಗಲೂ ತನ್ನ ಪತಿ ರಿತೇಶ್ ಬಗ್ಗೆ ಮಾತನಾಡುತ್ತಿರುತ್ತಾಳೆ. ಆದರೆ ಈವರೆಗೂ ರಾಖಿ ತನ್ನ ಪತಿಯ ಫೋಟೋವನ್ನು ರಿವೀಲ್ ಮಾಡಿಲ್ಲ.

  • ನನ್ನ ಯಾರೂ ಕಿಡ್ನಾಪ್ ಮಾಡಿಲ್ಲ- ವಿಜಯಪುರ ಕೆಎಂಎಫ್ ನಿರ್ದೇಶಕ ಸ್ಪಷ್ಟನೆ

    ನನ್ನ ಯಾರೂ ಕಿಡ್ನಾಪ್ ಮಾಡಿಲ್ಲ- ವಿಜಯಪುರ ಕೆಎಂಎಫ್ ನಿರ್ದೇಶಕ ಸ್ಪಷ್ಟನೆ

    ವಿಜಯಪುರ: ಕೆಎಂಎಫ್ ಗಾದಿಗಾಗಿ ನಾಲ್ವರು ಕಾಂಗ್ರೆಸ್ ನಿರ್ದೇಶಕರ ಹೈಜಾಕ್ ಆರೋಪಕ್ಕೆ ಸಂಬಂಧಿಸಿದಂತೆ ನನ್ನನ್ನು ಯಾರೂ ಕಿಡ್ನಾಪ್ ಮಾಡಿಲ್ಲ ಎಂದು ವಿಜಯಪುರ ಕೆಎಂಎಫ್ ನಿರ್ದೇಶಕ ಶ್ರೀಶೈಲ್ ಪಾಟೀಲ್ ಸ್ಪಷ್ಟನೆ ನಿಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾನು ನನ್ನ ವೈಯಕ್ತಿಕ ಕೆಲಸಗಳಿಗಾಗಿ ಓಡಾಡುತ್ತಿದ್ದೇನೆ. ನನ್ನ ಪತ್ನಿಯ ತವರು ಮನೆ ಕಲಬುರಗಿಯಲ್ಲಿದೆ. ಹೀಗಾಗಿ ನಾನು ಇಲ್ಲಿದ್ದೇನೆ ಎಂದು ಹೇಳುವ ಮೂಲಕ ಆರೋಪಕ್ಕೆ ತೆರೆ ಎಳೆದಿದ್ದಾರೆ.

    ಏನಿದು ಪ್ರಕರಣ?
    ಮೈತ್ರಿ ಧರ್ಮದ ಪ್ರಕಾರ ಕೆಎಂಎಫ್ ಅಧ್ಯಕ್ಷ ಸ್ಥಾನವನ್ನ ಕಾಂಗ್ರೆಸ್‍ಗೆ ಬಿಟ್ಟು ಕೋಡೋದಾಗಿ ಭರವಸೆ ನೀಡಿದ್ದ ಜೆಡಿಎಸ್ ನಾಯಕರು ಇದೀಗ ಸರ್ಕಾರ ಬಿಳುತ್ತಿದ್ದಂತೆಯೇ ಉಲ್ಟಾ ಹೊಡೆದಿದ್ದಾರೆ. ಮಾಜಿ ಸಚಿವ ರೇವಣ್ಣ, ಮಂತ್ರಿಗಿರಿ ಹೋಯ್ತು, ಹೀಗಾಗಿ ಕೆಎಂಎಫ್ ಅಧ್ಯಕ್ಷ ಗಾದಿಯಾದ್ರೂ ಇರಲಿ ಎಂದು ಹಠಕ್ಕೆ ಬಿದಿದ್ದಾರೆ. ಹೀಗಾಗಿ ಕೆಎಂಎಫ್‍ನ ನಾಲ್ವರು ಕಾಂಗ್ರೆಸ್ ನಿರ್ದೇಶಕರನ್ನು ಹೈಜಾಕ್ ಮಾಡಿ ಹೈದಾರಾಬಾದ್‍ಗೆ ಶಿಫ್ಟ್ ಮಾಡಿದ್ದಾರೆಂದು ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ಆರೋಪಿಸಿದ್ದರು.

    ಮಂಗಳೂರು ವಿಭಾಗದ ದಿವಾಕರ್ ಶೆಟ್ಟಿ, ಧಾರವಾಡದ ಹನುಮಂತ ಗೌಡ, ಹಿರೇಗೌಡ, ವಿಜಯಪುರ ಶ್ರೀಶೈಲಗೌಡ ಪಾಟೀಲ್, ಶಿವಮೊಗ್ಗದ ವೀರಭದ್ರ ಬಾಬುರನ್ನು ಹೈಜಾಕ್ ಮಾಡಿದ್ದಾರೆ. ಈ ವಿಚಾರ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೂ ಗುರಿಯಾಗಿದ್ದು, ಸಿದ್ದರಾಮಯ್ಯ ಎಂಟ್ರಿಯಾಗುವ ಸಾಧ್ಯತೆ ಇದೆ. ಕೆಎಂಎಫ್‍ನಲ್ಲಿ ಒಟ್ಟು 12 ಜನ ನಿರ್ದೇಶಕರಿದ್ದಾರೆ. ಅದರಲ್ಲಿ 3 ಜೆಡಿಎಸ್ ಮತ್ತು 9 ಕಾಂಗ್ರೆಸ್ ನಿರ್ದೇಶಕರು. ಹಾಗೆಯೇ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ಅಮರನಾಥ ಜಾರಕಿಹೊಳಿ ಕೂಡ ಓರ್ವ ನಿರ್ದೇಶಕರಾಗಿದ್ದಾರೆ. ಇದೀಗ ಕಾಂಗ್ರೆಸ್‍ನ 4 ನಿರ್ದೇಶಕರನ್ನು ರೇವಣ್ಣ ತನ್ನೆಡೆಗೆ ಎಳೆದುಕೊಂಡಿದ್ದಾರೆ ಎಂದು ಹೇಳಲಾಗಿತ್ತು.

  • ‘ರಾಬರ್ಟ್’ ಸಿನಿಮಾ ಸೆಟ್‍ನಲ್ಲಿ ಷರತ್ತುಗಳು ಅನ್ವಯ!

    ‘ರಾಬರ್ಟ್’ ಸಿನಿಮಾ ಸೆಟ್‍ನಲ್ಲಿ ಷರತ್ತುಗಳು ಅನ್ವಯ!

    ಬೆಂಗಳೂರು: ನಟ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾದ ಸ್ಕ್ರಿಪ್ಟ್ ಪೂಜೆ ನೆರವೇರಿದೆ. ಈ ಸಿನಿಮಾವನ್ನು ‘ಚೌಕ’ ಸಿನಿಮಾ ಖ್ಯಾತಿಯ ತರುಣ್ ಸುಧೀರ್ ನಿರ್ದೇಶನ ಮಾಡುತ್ತಿದ್ದು, ಶೂಟಿಂಗ್ ಸೆಟ್ ನಲ್ಲಿ ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ.

    ಸಿನಿಮಾ ಸೆಟ್‍ನಲ್ಲಿ ಮೊಬೈಲ್ ಬಳಸಬಾರದು ಎಂಬ ಷರತ್ತು ಹಾಕಿದ್ದಾರೆ. ಚಿತ್ರೀಕರಣದಿಂದ ಸುಮಾರು 50 ಮೀಟರ್ ನಷ್ಟು ದೂರದವರೆಗೂ ಮೊಬೈಲ್ ಬಳಸಬಾರದು. ಈ ನಿಯಮವು ಕಲಾವಿದರು ಮತ್ತು ತಂತ್ರಜ್ಞರಿಗೆ ಇಬ್ಬರಿಗೂ ಅನ್ವಯಿಸುತ್ತದೆ ಎಂದು ನಿರ್ದೇಶಕರು ಕಟ್ಟುನಿಟ್ಟಿನ ಆದೇಶವನ್ನು ಜಾರಿ ಮಾಡಿದ್ದಾರೆ.

    ಸೆಟ್‍ನಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಿದರೆ ಕಲಾವಿದರು, ತಂತ್ರಜ್ಞರು ಎಲ್ಲರು ಸಿನಿಮಾ ಕಡೆ ಗಮನಹರಿಸುತ್ತಾರೆ. ಜೊತೆ ಚೆನ್ನಾಗಿ ಕೆಲಸ ಮಾಡುತ್ತಾರೆ ಎಂದು ನಿರ್ದೇಶಕರ ಆಶಯವಾಗಿದೆ. ಇನ್ನೊಂದು ಅನಗತ್ಯ ಫೋಟೋಗಳು ಅಥವಾ ವಿಡಿಯೋಗಳನ್ನು ಸೆರೆಹಿಡಿಯಬಾರದು. ಜೊತೆಗೆ ಅದನ್ನು ಪಬ್ಲಿಕ್ ಮಾಡಬಾರದು. ಈ ಮೂಲಕ ನಮ್ಮ ಶೂಟಿಂಗ್ ಸೆಟ್ ಅನ್ನು ವೃತ್ತಿಪರವಾದ ಸೆಟ್ ಆಗಿ ಮಾಡುವ ಉದ್ದೇಶದಿಂದ ಈ ಷರತ್ತು ವಿಧಿಸಲಾಗಿದೆ ಎಂದು ಹೇಳಿದ್ದಾರೆ.

    ಶೂಟಿಂಗ್ ಸೆಟ್‍ಗೆ ಅಭಿಮಾನಿಗಳು ಬರಬಹುದು. ತಮ್ಮ ನೆಚ್ಚಿನ ನಟನನ್ನು ಭೇಟಿಯಾಗಬಹುದು ಮತ್ತು ಚಿತ್ರೀಕರಣವನ್ನು ವೀಕ್ಷಿಸಬಹುದು. ಆದರೆ ಯಾವುದೇ ರೀತಿಯ ಫೋಟೋಗಳನ್ನು ತೆಗೆಯಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಸುಧೀರ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

    ತಯಾರಕರು ಈ ನಿಯಯದ ಒಪ್ಪಂದಕ್ಕೆ ತಂತ್ರಜ್ಞರೊಂದಿಗೆ ಸಹಿ ಮಾಡಿಸಿಕೊಂಡಿದ್ದಾರೆ. ಜೊತೆಗೆ ಚಿತ್ರೀಕರಣದ ಸಮಯದಲ್ಲಿ ಯಾವುದೇ ರೀತಿಯ ವಿಷಯವನ್ನು ಲೀಕ್ ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

  • ಸಿಬಿಐ ನಿರ್ದೇಶಕರಾಗಿ ರಿಷಿ ಕುಮಾರ್ ಶುಕ್ಲಾ ನೇಮಕ

    ಸಿಬಿಐ ನಿರ್ದೇಶಕರಾಗಿ ರಿಷಿ ಕುಮಾರ್ ಶುಕ್ಲಾ ನೇಮಕ

    ನವದೆಹಲಿ: ಕೊನೆಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಆಯ್ಕೆ ಸಮಿತಿ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡಿದೆ.

    ಮಧ್ಯಪ್ರದೇಶದ ಪೊಲೀಸ್ ಮಹಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ರಿಷಿ ಕುಮಾರ್ ಶುಕ್ಲಾ ಅವರನ್ನು ಸಿಬಿಐ ಡೈರೆಕ್ಟರ್ ಆಗಿ ನೇಮಕ ಮಾಡಲಾಗಿದೆ.

    ರಿಷಿ ಕುಮಾರ್ ಶುಕ್ಲಾ ಅವರು 1983ನೇ ಬ್ಯಾಚ್‍ನ ಅಧಿಕಾರಿ. ಅಲೋಕ್ ವರ್ಮಾ ಅವರಿಂದ ಖಾಲಿಯಾಗಿದ್ದ ಸಿಬಿಐ ನಿರ್ದೇಶಕ ಸ್ಥಾನಕ್ಕೆ ಶುಕ್ಲಾ ಅವರು ನೇಮಕವಾಗಿದ್ದಾರೆ. ಪ್ರಸ್ತುತ ಮಧ್ಯ ಪ್ರದೇಶದ ಪೊಲೀಸ್ ವಸತಿ ನಿಗಮದ ಮುಖ್ಯಸ್ಥರಾಗಿದ್ದಾರೆ. ಇದನ್ನು ಓದಿ : ಸಿಬಿಐ ಅಧಿಕಾರಿಗಳಿಗೆ ಕಡ್ಡಾಯ ರಜೆ: ಕಿತ್ತಾಟ ಆರಂಭವಾಗಿದ್ದು ಹೇಗೆ? ಇಬ್ಬರ ಮೇಲಿರುವ ಆರೋಪ ಏನು?

    ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಆಯ್ಕೆ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಇದ್ದರು. ಈ ಸಮೀತಿಯು 70 ಕ್ಕೂ ಅಧಿಕ ಸ್ಪರ್ಧಿಗಳ ಪೈಕಿ ಶುಕ್ಲಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದೆ. ಈ ಮೂಲಕ ಶುಕ್ಲಾ ಅವರು 2 ವರ್ಷಗಳ ಅವಧಿಗೆ ಸಿಬಿಐನ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv