Tag: ನಿರ್ದೇಶಕ ಎಸ್ ನಾರಾಯಣ್

  • ಮಾಜಿ ಸಿಎಂ ಕುಮಾರಸ್ವಾಮಿ ಆಪ್ತ, ನಿರ್ದೇಶಕ ಎಸ್.ನಾರಾಯಣ್ ಕಾಂಗ್ರೆಸ್ ತೆಕ್ಕೆಗೆ

    ಮಾಜಿ ಸಿಎಂ ಕುಮಾರಸ್ವಾಮಿ ಆಪ್ತ, ನಿರ್ದೇಶಕ ಎಸ್.ನಾರಾಯಣ್ ಕಾಂಗ್ರೆಸ್ ತೆಕ್ಕೆಗೆ

    ನ್ನಡದ ಹಿರಿಯ ನಿರ್ದೇಶಕ ಎಸ್.ನಾರಾಯಣ್ ಕಾಂಗ್ರೆಸ್ ಗೆ ಸೇರ್ಪಡೆ ಆಗುತ್ತಾರೆ ಎನ್ನುವ ವದಂತಿ ಇತ್ತು. ಈಗದು ನಿಜವಾಗಿದೆ. ಇಂದು ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಅಧಿಕೃತವಾಗಿ ಎಸ್. ನಾರಾಯಣ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಈ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆಪ್ತರಾಗಿದ್ದ ನಾರಾಯಣ್, ಜೆಡಿಎಸ್ ಪಕ್ಷ ಸೇರಲು ಒಲವಿಲ್ಲ ಎನ್ನುವುದನ್ನು ಖಚಿತ ಪಡಿಸಿದ್ದಾರೆ. ಇದನ್ನೂ ಓದಿ : ಅಬ್ಬಬ್ಬಾ..! 60 ಕೋಟಿ ಬಾಚಿದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ : ಬಾಕ್ಸ್ ಆಫೀಸ್ ಚಿಂದಿ ಚಿತ್ರಾನ್ನ

    ಚಂದ್ರ ಚಕೋರಿ ಸೇರಿದಂತೆ ಎಚ್.ಡಿ.ಕುಮಾರಸ್ವಾಮಿ ಅವರ ಬ್ಯಾನರ್ ನಿಂದ ಮೂಡಿ ಬಂದ ಹಲವು ಚಿತ್ರಗಳಿಗೆ ಎಸ್. ನಾರಾಯಣ್ ನಿರ್ದೇಶಕರು. ಅಲ್ಲದೇ, ಕುಮಾರಸ್ವಾಮಿ ಅವರ ಚೆನ್ನಾಂಬಿಕೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಿರುವ ಬಹುತೇಕ ಚಿತ್ರಗಳಿಗೆ ಇವರು ಸಲಹೆ ಸಹಕಾರ ನೀಡಿದ್ದಾರೆ. ಹಾಗಾಗಿ ಎಸ್.ನಾರಾಯಣ್ ಮತ್ತು ಕುಮಾರಸ್ವಾಮಿ ಅವರ ಸ್ನೇಹ ಗಟ್ಟಿಯಾಗಿತ್ತು. ರಾಜಕೀಯ ವಿಷಯದಲ್ಲಿ ಅದು ಭಿನ್ನ ದಾರಿ ತೋರಿದೆ. ಇದನ್ನೂ ಓದಿ : ಶಿವರಾಜ್ ಕುಮಾರ್ ಎದುರು ಅಖಾಡಕ್ಕೆ ಇಳಿದ ಡಾಲಿ ಧನಂಜಯ್

    ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ಎಸ್ ನಾರಾಯಣ್, “ಕಳೆದ ಮೂರು ದಶಕಗಳಿಂದ ಸಿನಿಮಾ ಕ್ಷೇತ್ರದಲ್ಲಿ ಕೆಲಸ‌ ಮಾಡಿದ್ದೇನೆ. ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಸೇರಿದಂತೆ ದೊಡ್ಡ ಸ್ಟಾರ್ ಗಳ ಜೊತೆ ಕೆಲಸ ಮಾಡಿರುವೆ. ಸಿನಿಮಾ ರಂಗ ನನಗೆ ಎಲ್ಲವನ್ನೂ ಕೊಟ್ಟಿದೆ. ನನಗೆ ಬಹಳಷ್ಟು ಮಂದಿ ರಾಜಕೀಯ ಯಾಕೆ ಅಂತ ಪ್ರಶ್ನೆ ಮಾಡಿದರು‌. ಆ ಪ್ರಶ್ನೆ ಹಾಗೆಯೆ ಇರಲಿ‌ ಮುಂದೆ ಉತ್ತರ ಸಿಗುತ್ತದೆ. ನಾನು ಆಯ್ಕೆ‌ಮಾಡಿಕೊಂಡಿದ್ದು ಕಾಂಗ್ರೆಸ್ ಪಕ್ಷವನ್ನ. ದೇಶಕ್ಕಾಗಿ ಕಾಂಗ್ರೆಸ್ ತ್ಯಾಗ ಬಲಿದಾನ ಎಲ್ಲವೂ ಕೊಟ್ಟಿದೆ. ಬಡವನಿಗೆ, ದಲಿತನಿಗೆ, ಹಿಂದುಳಿದವರ ಧ್ವನಿ ಈ ಕಾಂಗ್ರೆಸ್  ಜಾತ್ಯಾತೀತ ಸಿದ್ದಾಂತಗಳು ಇಷ್ಟ ಆಯ್ತು ಹಾಗಾಗಿ ನಾನು ಕಾಂಗ್ರೆಸ್ ಸೇರಿದೆ. ನಮ್ಮಲ್ಲರ ಗುರಿ 2023 ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಪಕ್ಷಕ್ಕಾಗಿ ದುಡಿಯುತ್ತೇನೆ, ಕೊಟ್ಟ ಮಾತಿನಂತೆ ಕೆಲಸ ಮಾಡುತ್ತೇನೆ” ಎಂದಿದ್ದಾರೆ. ಇದನ್ನೂ ಓದಿ : ಅಂದು ಸುದೀಪ್ ಪುಸ್ತಕ ಬಿಡುಗಡೆ ಮಾಡಿದ್ದ ಪುನೀತ್, ಇಂದು ಪುನೀತ್ ಪುಸ್ತಕ ಬಿಡುಗಡೆ ಮಾಡಿದ ಸುದೀಪ್

    ಕ್ವೀನ್ಸ್  ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಯ ಇಬ್ಬರು ಆಪ್ತರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ  ಚಲನಚಿತ್ರ ನಿರ್ದೇಶಕ, ನಿರ್ಮಾಪಕ, ನಟ ಎಸ್. ನಾರಾಯಣ್  ಹಾಗೂ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ತಿಮ್ಮಯ್ಯ ಪುರ್ಲೆ ಕಾಂಗ್ರೆಸ್ ಸೇರ್ಪಡೆ ಆಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

  • ನಿರ್ದೇಶಕ ಎಸ್ ನಾರಾಯಣ್‍ಗೆ 43 ಲಕ್ಷ ರೂ. ದೋಖಾ

    ನಿರ್ದೇಶಕ ಎಸ್ ನಾರಾಯಣ್‍ಗೆ 43 ಲಕ್ಷ ರೂ. ದೋಖಾ

    ಬೆಂಗಳೂರು: ಸ್ಯಾಂಡಲ್‍ವುಡ್ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ಅವರಿಗೆ ಸಾಲ ಕೊಡಿಸುವುದಾಗಿ ನಂಬಿಸಿ 43 ಲಕ್ಷ ರೂ. ಗಳನ್ನು ವಂಚನೆ ಮಾಡಲಾಗಿದೆ.

    ಸಿನಿಮಾ ಒಂದರ ಕುರಿತು ಬ್ಯಾಂಕ್‍ನಲ್ಲಿ ಸಾಲ ಪಡೆಯಲು ತೆರಳಿದ್ದ ವೇಳೆ ಪರಿಚಯವಾಗಿದ್ದ ವ್ಯಕ್ತಿಗಳು ಕಡಿಮೆ ಬಡ್ಡಿಗೆ ಸಾಲ ಕೊಡಿಸುವುದಾಗಿ ಹೇಳಿ ಎಸ್ ನಾರಾಯಣ್ ಅವರಿಗೆ 43 ಲಕ್ಷ ರೂ. ಪಡೆದು ವಂಚನೆ ಮಾಡಿದ್ದಾರೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ನಾರಾಯಣ್ ಅವರು ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್, ವಿಜಯಕುಮಾರ್ ಮತ್ತು ಸಾಮೀಜಿ ಸಂತಾನ ಕೃಷ್ಣ ಎಂಬವರನ್ನು ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ಸಿನಿಮಾಗಾಗಿ ಸುಮಾರು 50 ಕೋಟಿ ರೂ. ಸಾಲ ಪಡೆಯಲು ನಿರ್ಧರಿಸಿದ್ದ ನಿರ್ದೇಶಕರು ಬ್ಯಾಂಕ್ ಗಳಲ್ಲಿ ಈ ಕುರಿತು ವಿಚಾರಣೆ ನಡೆಸಿದ್ದರು. ಈ ವೇಳೆ ತಮಿಳುನಾಡಿನ ಮಂದಾರ ಮೂರ್ತಿ ಎಂಬಾತನ ಪರಿಚಯವಾಗಿದ್ದು, ಕಡಿಮೆ ಬಡ್ಡಿಗೆ ಸುಮಾರು 70 ಲಕ್ಷ ರೂ. ಸಾಲ ಕೊಡಿಸುವ ಆಶ್ವಾಸನೆ ನೀಡಿದ್ದಾನೆ. ಈ ವೇಳೆ ಕಡಿಮೆ ಬಡ್ಡಿ ದರದ ಆಸೆಗೆ ಬಿದ್ದ ಎಸ್ ನಾರಾಯಣ್ ಅವರು ಆರೋಪಿಯ ಮಾತು ನಂಬಿದ್ದಾರೆ. ಬಳಿಕ ಸಾಲ ಪಡೆಯಲು ಪ್ರೊಸೆಸಿಂಗ್ ಶುಲ್ಕವಾಗಿ ಆರೋಪಿ ಮಂದಾರ ಮೂರ್ತಿ 43 ಲಕ್ಷ ರೂ. ಹಣ ಪಡೆದಿದ್ದಾನೆ.

    ಮೊದಲು ಆರೋಪಿ ಮಾತು ನಂಬಿದ್ದ ಎಸ್ ನಾರಾಯಣ್ ಅವರು, ತಮಿಳುನಾಡಿನ ಕೊಯಮುತ್ತೂರು ವೀರಭದ್ರ ಸ್ವಾಮಿ ಮಠದಲ್ಲಿ ಮಾತುಕತೆ ನಡೆಸಿದ್ದರು. ಈ ವೇಳೆ ಮಠದ ಸ್ವಾಮೀಜಿ ಸಂತಾನ ಕೃಷ್ಣ ಎಂಬವರು 43 ಲಕ್ಷ ರೂ. ನೀಡಿದರೆ 70 ಕೋಟಿ ರೂ. ಸಾಲ ನೀಡುವುದಾಗಿ ಹೇಳಿದ್ದರು. ಈ ವೇಳೆ ಎಸ್ ನಾರಾಯಣ್ 43 ಲಕ್ಷ ರೂ. ಹಣ ನೀಡಿ 70 ಕೋಟಿ ರೂ. ಸಾಲಕ್ಕಾಗಿ ಆಸ್ತಿ ಪತ್ರ ಅಡಮಾನ ಇಡಲು ಮುಂದಾಗಿದ್ದರು.

    ಅಂದಹಾಗೇ ಎಸ್ ನಾರಾಯಣ್ ಅವರಿಗೆ ವಂಚನೆ ಮಾಡಿರುವ ಮಂದಾರ ಮೂರ್ತಿ ತಮಿಳುನಾಡಿನ ಪ್ರಖ್ಯಾತ ಜನಾಂಗ ಒಂದರ ನಾಯಕರಾಗಿದ್ದು, ತಮಿಳುನಾಡಿನ ಕೊಯಮುತ್ತೂರು ವೀರಭದ್ರ ಸ್ವಾಮಿ ಮಠದ ಸ್ವಾಮೀಜಿ ಸಂತಾನ ಕೃಷ್ಣ ಜೊತೆ ಸೇರಿಕೊಂಡು ವಂಚನೆ ಮಾಡಿದ್ದಾರೆ. ಮುಂಗಡವಾಗಿ 40 ಲಕ್ಷ ರೂ. ಪಡೆದ ಆರೋಪಿಗಳು ಸಾಲ ನೀಡದೇ ಮುಂಗಡ ಹಣವನ್ನೂ ನೀಡದೇ ಸತಾಯಿಸಿದ್ದಾರೆ. ಬಳಿಕ ಆರೋಪಿಗಳ ವಂಚನೆ ಜಾಲ ತಿಳಿದ ಎಸ್ ನಾರಾಯಣ್ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ಪ್ರಕರಣದ ಕುರಿತು ಇಂದು ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಆಗಮಿಸಿದ್ದ ನಿರ್ದೇಶಕ ಎಸ್ ನಾರಾಯಣ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಕೆಲವೊಂದು ಸಿನಿಮಾ ಪ್ರಾಜೆಕ್ಟ್‍ಗಾಗಿ 50 ಕೋಟಿ ರೂ. ಸಾಲ ಪಡೆಯಲು ಯತ್ನಿಸಿದ್ದೆ. 2016 ರಲ್ಲಿ ಸಾಲಕ್ಕಾಗಿ ತೆರಳಿದ್ದ ವೇಳೆ ಆರೋಪಿ ಪರಿಚಯವಾಗಿತ್ತು. ಪರಿಚಯದ ಬಳಿಕ ತಮಿಳುನಾಡಿಗೆ ಕರೆದುಕೊಂಡು ಹೋಗಿ ಮಂದಾರ ಮೂರ್ತಿ ಎಂಬಾತನನ್ನು ಪರಿಚಯಿಸಿದ್ದರು. ಈ ವೇಳೆ ಬೇರೆಡೆ ಸಾಲ ಕೊಡಿಸುವುದಾಗಿ ನಂಬಿಸಿದ್ದ ಆರೋಪಿ ಮುಂಗಡ ಹಣ 43 ಲಕ್ಷ ರೂ. ಪಡೆದಿದ್ದ. ಅಲ್ಲದೇ ಸಾಲ ನೀಡುವ ನೆಪದಲ್ಲಿ 50 ಕೋಟಿ ರೂ. ಮೌಲ್ಯದ ಡಿಡಿ ಯನ್ನು ನನ್ನ ಹೆಸರಿಗೆ ನೀಡಿದ್ದ. ಆದರೆ ದಿನ ಕಳೆದ ನಂತರ ಬ್ಯಾಂಕ್ ನಲ್ಲಿ ಹಣ ಸಿಗಲಿಲ್ಲ. ಈ ವೇಳೆ ಆರೋಪಿಗಳು ನೀಡಿದ್ದ ಡಿಡಿ ನಕಲಿ ಎಂದು ತಿಳಿಯಿತು. ಬಳಿಕ ಅವರನ್ನು ಸಂಪರ್ಕಿಸುವ ಪ್ರಯತ್ನ ಮಾಡಲಾಯಿತು. ಆದರೆ ಆರೋಪಿಗಳು ಸಂಪರ್ಕಕ್ಕೆ ಸಿಗಲಿಲ್ಲ. ಇದರಿಂದ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಗಿ ಮಾಹಿತಿ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv