Tag: ನಿರ್ಭಯಾ

  • ನಿರ್ಭಯಾ ನೆನಪಿಸಿದ ಇನ್ನೊಂದು ಆಘಾತಕಾರಿ ರೇಪ್ ಕೇಸ್ – ಖಾಸಗಿ ಭಾಗಕ್ಕೆ ರಾಡ್ ತುರುಕಿ ಗ್ಯಾಂಗ್‌ರೇಪ್

    ನವದೆಹಲಿ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ (Nirbhaya) ಕೇಸ್‌ನಂತಹ ಇನ್ನೊಂದು ಆಘಾತಕಾರಿ ಅತ್ಯಾಚಾರ ಪ್ರಕರಣ (Rape Case) ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್‌ನಲ್ಲಿ (Ghaziabad) ನಡೆದಿದೆ. ಘಟನೆಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೇ ಕ್ರೂರವಾಗಿ ಚಿತ್ರಹಿಂಸೆ ನೀಡಲಾಗಿರುವುದು ತಿಳಿದುಬಂದಿದೆ.

    ವರದಿಗಳ ಪ್ರಕಾರ, ಗಾಜಿಯಾಬಾದ್‌ನ ಪುರುಷರ ಗುಂಪೊಂದು ದೆಹಲಿ ಮೂಲದ 38 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆಸಿದ್ದಾರೆ. ಮಹಿಳೆ ಮೇಲೆ ಅಮಾನುಷವಾಗಿ ಹಲ್ಲೆಯನ್ನೂ ನಡೆಸಿ, ಬಳಿಕ ಆರೋಪಿಗಳು ಮಹಿಳೆಯನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿದ್ದಾರೆ.

    ಮಂಗಳವಾರ ಮುಂಜಾನೆ 3:30 ರ ವೇಳೆಗೆ ನಂದಗ್ರಾಮ್ ಪೊಲೀಸ್ ಠಾಣೆ ಬಳಿಯ ಆಶ್ರಮದ ರಸ್ತೆ ಬಳಿ ಸಂತ್ರಸ್ತ ಮಹಿಳೆ ಪತ್ತೆಯಾಗಿದ್ದಾರೆ. ಮಹಿಳೆ ನೆಲೆದ ಮೇಲೆ ಬಿದ್ದಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ, ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

    ಬಳಿಕ ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿಗಳು ಹಾಗೂ ಸಂತ್ರಸ್ತ ಮಹಿಳೆ ನಡುವೆ ಕುಟುಂಬ ಆಸ್ತಿ ವಿಚಾರಕ್ಕೆ ವಿವಾದ ನಡೆದಿದೆ. ಬಳಿಕ ಮಹಿಳೆಯನ್ನು ಅಪಹರಿಸಿ, 2 ದಿನಗಳ ಕಾಲ ಸೆರೆಯಲ್ಲಿಟ್ಟು ಅಮಾನುಷವಾಗಿ ಚಿತ್ರಹಿಂಸೆ ನೀಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮಹಿಳೆಯ ಬೆತ್ತಲೆ ದೇಹ ಸೂಟ್‍ಕೇಸ್‍ನಲ್ಲಿ ಪತ್ತೆ – ರೇಪ್ ಶಂಕೆ

    ಘಟನೆಯ ಬಗ್ಗೆ ದೆಹಲಿ ಮಹಿಳಾ ಆಯೋಗ (DCW) ಹೇಳಿಕೆ ನೀಡಿ, ಮಹಿಳೆಯನ್ನು ನಾಲ್ವರು ಪುರುಷರು ಸ್ಕಾರ್ಪಿಯೋದಲ್ಲಿ ಅಪಹರಿಸಿದ್ದು, 2 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಬಳಿಕ ಆಕೆಯನ್ನು ಗೋಣಿಚೀಲದಲ್ಲಿ ಹಾಕಿ, ರಸ್ತೆ ಬದಿ ಎಸೆದು ಹೋಗಿದ್ದಾರೆ. ಮಹಿಳೆ ಪತ್ತೆಯಾದಾಗ ಆಕೆ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಆಕೆಯ ಖಾಸಗಿ ಭಾಗದಲ್ಲಿ ಕಬ್ಬಿಣದ ರಾಡ್ (Iron Rod) ಕೂಡಾ ಪತ್ತೆಯಾಗಿತ್ತು. ಆಕೆಯ ಸ್ಥಿತಿ ಇದೀಗ ಗಂಭೀರವಾಗಿದ್ದು, ದೆಹಲಿಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಚಿಕನ್ ಬಿರಿಯಾನಿ ಕೊಡಲಿಲ್ಲವೆಂದು ರೆಸ್ಟೋರೆಂಟ್‌ಗೆ ಬೆಂಕಿ ಹಚ್ಚಿದ ಭೂಪ

    ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಲಿವಾಲ್, ಈ ಘಟನೆ ಅತ್ಯಂತ ಭೀಕರ ಹಾಗೂ ಆತಂಕಕಾರಿಯಾಗಿದೆ. ಈ ಘಟನೆ ನಿರ್ಭಯಾ ಪ್ರಕರಣವನ್ನು ನೆನಪಿಸುತ್ತದೆ. ಎಲ್ಲಾ ಆರೋಪಿಗಳನ್ನೂ ಈ ಕೂಡಲೆ ಬಂಧಿಸಬೇಕು ಹಾಗೂ ಕಠಿಣ ಕ್ರಮವನ್ನು ಕೈಗೊಳ್ಳಬೇಕು. ಮಹಿಳೆಯರು ಹಾಗೂ ಮಕ್ಕಳು ಇನ್ನೂ ಎಷ್ಟು ಇಂತಹ ಕ್ರೌರ್ಯಕ್ಕೆ ಒಳಗಾಗಲಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾನು ವಿಫಲಳಾಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ಅರ್ಹರಲ್ಲ: ನಿರ್ಭಯಾ ತಾಯಿ

    ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ಅರ್ಹರಲ್ಲ: ನಿರ್ಭಯಾ ತಾಯಿ

    ನವದೆಹಲಿ: ಮಮತಾ ಬ್ಯಾನರ್ಜಿ ಅವರು ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಬಗ್ಗೆ ಈ ರೀತಿ ಕಾಮೆಂಟ್ ಮಾಡುತ್ತಿದ್ದರೇ ಅವರು ಸಿಎಂ ಸ್ಥಾನಕ್ಕೆ ಅರ್ಹರಲ್ಲ ಎಂದು ನಿರ್ಭಯಾ (2012ರ ದೆಹಲಿ ಅತ್ಯಾಚಾರ ಸಂತ್ರಸ್ತೆ) ತಾಯಿ ಆಶಾ ದೇವಿ ಕಿಡಿಕಾರಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ ಅವರು ಒಂದು ಮಹಿಳೆಯಾಗಿ ಈ ರೀತಿ ಹೇಳಿಕೆ ನೀಡಿರುವುದು ಅವರ ಹುದ್ದೆಗೆ ಸರಿ ಹೊಂದುವುದಿಲ್ಲ ಎಂದು ಹೇಳಿದರು.

    STOP RAPE

    ಸೋಮವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಾಡಿಯಾ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೊಳಗಾದ ವರದಿಗಳ ಬಗ್ಗೆ ಇದು ಅತ್ಯಾಚಾರವೋ? ಅಥವಾ ಅವಳು ಗರ್ಭಿಣಿಯಾಗಿದ್ದಾಳೋ? ಎಂದು ಟೀಕಿಸಿದ್ದರು. ಇದನ್ನೂ ಓದಿ: SSLC ಪರೀಕ್ಷೆಯಲ್ಲಿ ಹೆಚ್ಚಿಗೆ ಅಂಕ ಬರುವಂತೆ ಮಾಡುತ್ತೇನೆಂದು ವಿದ್ಯಾರ್ಥಿನಿ ಕೆನ್ನೆಗೆ ಮುತ್ತು ಕೊಟ್ಟ ಶಿಕ್ಷಕ

    ಅತ್ಯಾಚಾರದಿಂದ ಅಪ್ರಾಪ್ತ ಬಾಲಕಿ ಸಾವನ್ನಪ್ಪಿದ್ದಾರೆ ಎಂದು ಬಿಜೆಪಿಯವರು ತೋರಿಸುತ್ತಿರುವ ಈ ಕಥೆಯನ್ನು ನೀವು ಅತ್ಯಾಚಾರ ಎಂದು ಕರೆಯುತ್ತೀರಾ? ಅವಳು ಗರ್ಭಿಣಿಯಾಗಿದ್ದಳೋ ಅಥವಾ ಪ್ರೇಮ ಸಂಬಂಧ ಹೊಂದಿದ್ದಾಳೋ? ಅವರು ವಿಚಾರಿಸಿದ್ದಾರೆಯೇ? ಈ ಕುರಿತು ನಾನು ಸ್ವತಃ ಪೊಲೀಸರನ್ನು ಕೇಳಿದೆ. ಅವರು ಈಗಾಗಲೇ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆ ಬಾಲಕಿಗೆ ಹುಡುಗನ ಜೊತೆ ಅನೈತಿಕ ಸಂಬಂಧ ಇದೆ ಅಂತಾನೂ ತಿಳಿಸಿದ್ದಾರೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಐತಿಹಾಸಿಕ ಮ್ಯೂಸಿಯಂಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

  • “ನಾಲ್ವರಲ್ಲಿ ಕೊನೆಯಾಸೆ ಹೇಳಿದ್ದು ವಿನಯ್ ಮಾತ್ರ”

    “ನಾಲ್ವರಲ್ಲಿ ಕೊನೆಯಾಸೆ ಹೇಳಿದ್ದು ವಿನಯ್ ಮಾತ್ರ”

    -ನಾಲ್ವರಿಗೆ ಕೊನೆ ಕ್ಷಣದವರೆಗೂ ಬದುಕುವ ನಂಬಿಕೆಯಿತ್ತು
    -ಪ್ರತಿಯೊಬ್ಬರ ಖಾತೆಯಲ್ಲಿ 8ರಿಂದ 10 ಸಾವಿರ

    ನವದೆಹಲಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಪ್ರಕರಣ ನಿನ್ನೆ ಅಂತ್ಯಕಂಡಿದೆ. ನಿರ್ಭಯಾ ಪ್ರಕರಣದ ನಾಲ್ವರನ್ನು ಏಕಕಾಲದಲ್ಲಿ ಗಲ್ಲಿಗೆ ಹಾಕುವ ಮೂಲಕ ನ್ಯಾಯವನ್ನು ಎತ್ತಿ ಹಿಡಿದಿತ್ತು. ನಾಲ್ವರಲ್ಲಿ ವಿನಯ್ ಮಾತ್ರ ತನ್ನ ಕೊನೆಯಾಸೆಯನ್ನು ಅಧಿಕಾರಿಗಳ ಮುಂದೆ ಹೇಳಿಕೊಂಡಿದ್ದನು ಎಂದು ವರದಿಯಾಗಿದೆ.

    ಗಲ್ಲು ಶಿಕ್ಷೆ ನಿಗದಿಯಂತೆ ಜೈಲಿನ ನಿಯಮದಂತೆ ದೋಷಿಗಳಿಗೆ ಕೊನೆಯಾಸೆಯನ್ನು ಕೇಳಲಾಗಿತ್ತು. ಅಕ್ಷಯ್, ಮುಖೇಶ್ ಮತ್ತು ಪವನ್ ಈ ಬಗ್ಗೆ ಏನನ್ನು ಹೇಳಿರಲಿಲ್ಲ. ಆದ್ರೆ ಅಕ್ಷಯ್, ಒಂದು ವೇಳೆ ನನಗೆ ಇವತ್ತು ನೇಣು ಹಾಕಿದರೆ ನಾನು ಬಿಡಿಸಿದ ಪೇಟಿಂಗ್ ಗಳಲ್ಲಿ ಒಂದನ್ನು ಜೈಲಿನ ಸೂಪರಿಟೆಂಡೆಂಟ್ ಅವರಿಗೆ ನೀಡಬೇಕು. ಉಳಿದ ಎಲ್ಲ ಪೇಟಿಂಗ್ ಮತ್ತು ವಸ್ತುಗಳನ್ನು ತಾಯಿಗೆ ನೀಡಬೇಕು ಎಂದು ಹೇಳಿದ್ದನು.

    ವಿನಯ್ ಸೇರಿದಂತೆ ನಾಲ್ವರಿಗೂ ಕೊನೆ ಕ್ಷಣದವರೆಗೂ ತಮ್ಮನ್ನು ಗಲ್ಲಿಗೆ ಹಾಕಲ್ಲ ಎಂಬ ನಿರೀಕ್ಷೆಯಲ್ಲಿದ್ದರು. ಗಲ್ಲು ಶಿಕ್ಷೆಗೆ ತಡೆ ಸಿಗಬಹುದು ಎಂಬ ನಂಬಿಕೆಯಲ್ಲಿದ್ದರು. ಹಾಗಾಗಿ ಅಕ್ಷಯ್, ಮುಖೇಶ್ ಮತ್ತು ಪವನ್ ತಮ್ಮ ಕೊನೆಯಾಸೆಯನ್ನು ಅಧಿಕಾರಿಗಳ ಮುಂದೆ ಹೇಳಿಕೊಂಡಿರಲಿಲ್ಲ. ಶುಕ್ರವಾರ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನಿಮ್ಮ ಅರ್ಜಿಯನ್ನು ವಜಾಗೊಳಿಸಿದೆ ಎಂದಾಗ ನಾಲ್ವರು ಶಾಕ್ ಆಗಿದ್ದರು.

    ಒಂದು ಕಾಲು ಗಂಟೆಯಲ್ಲಿಯೇ ನಾಲ್ವರು ಸಾವನ್ನಪ್ಪುತ್ತಾರೆ ಎಂದು ಇವರ ಮುಖಗಳನ್ನ ನೋಡಿದರೆ ಹೇಳಲು ಸಾಧ್ಯವಾಗುತ್ತಿರಲಿಲ್ಲ. ಗಲ್ಲು ಹಾಕುವ ಪ್ರಕ್ರಿಯೆಗಳು ನಡೆಯುತ್ತಿದ್ದರೂ ನಾಲ್ವರು ಇದೊಂದು ಪ್ರಯೋಗ ಎಂದು ಮಾತ್ರ ಅಂತ ತಿಳಿದಿದ್ದರು.

    ಸಹ ಕೈದಿಗಳಿಂದ ಆಕ್ರೋಶ: ನಾಲ್ವರನ್ನು ಗಲ್ಲಿಗೇರಿಸೋದು ಖಚಿತವಾಗುತ್ತಿದ್ದಂತೆ ಜೈಲಿನ ಇತರೆ ಕೈದಿಗಳು ಆಕ್ರೋಶ ಹೊರಹಾಕಿದ್ದರು ಎಂದು ಮಾಧ್ಯಮವೊಂದು ವರದಿ ಮಾಡಿದೆ. ಹೀಗಾಗಿ ಗಲ್ಲು ಪ್ರಕ್ರಿಯೆ ಮತ್ತು ಶವಗಳು ಜೈಲಿನಿಂದ ಹೊರಗೆ ಹೋಗುವರೆಗೂ ಇತರೆ ಕೈದಿಗಳನ್ನು ಸೆಲ್ ನಲ್ಲಿಯೇ ಇರಿಸಲಾಗಿತ್ತು. ಶಿಕ್ಷೆಗೆ ಗುರಿಯಾದ ನಾಲ್ವರ ಸೆಲ್ ನಲ್ಲಿ ಕೆಲ ವಸ್ತು ಮತ್ತು ಪತ್ರಗಳು ಲಭ್ಯವಾಗಿವೆ. ಇವೆಲ್ಲವನ್ನ ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗುವುದು. ನಾಲ್ವರಲ್ಲಿ ಇಬ್ಬರು ಕೆಲವು ಪತ್ರಗಳ ಬರೆದಿದ್ದಾರೆ ಎಂದು ಪ್ರಕಟವಾಗಿದೆ.

    ಪ್ರತಿಯೊಬ್ಬರ ಖಾತೆಯಲ್ಲಿ 8 ರಿಂದ 10 ಸಾವಿರ: ನಾಲ್ವರು ದೋಷಿಗಳ ಖಾತೆಯಲ್ಲಿ 8 ರಿಂದ 10 ಸಾವಿರ ರೂ. ಹಣವಿದೆ. ದೋಷಿಗಳು ತಮ್ಮ ಕೊನೆಯಾಸೆಯಲ್ಲಿಯೂ ಯಾರಿಗೆ ಹಣ ನೀಡುವುದರ ಬಗ್ಗೆ ಹೇಳಿರಲಿಲ್ಲ. ಈಗ ಹಣವನ್ನು ಅವರ ಕುಟುಂಬಗಳಿಗೆ ನೀಡಲಾಗುತ್ತದೆ. ಕುಟುಂಬಸ್ಥರ ಭೇಟಿಯಾಗ್ತೀರಿ ಅಂತ ಕೇಳಿದಾಗ ನಾಲ್ವರು ಯಾವುದೇ ಉತ್ತರ ನೀಡಿರಲಿಲ್ಲ. ಓರ್ವ ಮಾತ್ರ ತನ್ನ ಸ್ನೇಹಿತನನ್ನು ಭೇಟಿಯಾಗುವ ಇಚ್ಛೆ ವ್ಯಕ್ತಪಡಿಸಿದ್ದನು. ಕುಟುಂಬಸ್ಥರಿಗೆ ಮಾತ್ರ ಭೇಟಿಯ ಅವಕಾಶ ಕಲ್ಪಿಸಿದ್ದರಿಂದ ಆತನ ಇಚ್ಛೆ ಪೂರ್ಣ ಮಾಡಲು ಸಾಧ್ಯವಾಗಿಲ್ಲ. ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ನಾಲ್ವರ ಮೃತದೇಹಗಳನ್ನು ಅವರ ಕುಟುಂಬ ವರ್ಗಕ್ಕೆ ಹಸ್ತಾಂತರಿಸಲಾಗಿದೆ.

  • ಅತ್ಯಾಚಾರದಂತಹ ಅಪರಾಧ ತಡೆಯಲು ಯೋಗ, ನೈತಿಕ ಶಿಕ್ಷಣ ಪಠ್ಯದ ಭಾಗವಾಗಬೇಕು: ಬಾಬಾ ರಾಮ್‍ದೇವ್

    ಅತ್ಯಾಚಾರದಂತಹ ಅಪರಾಧ ತಡೆಯಲು ಯೋಗ, ನೈತಿಕ ಶಿಕ್ಷಣ ಪಠ್ಯದ ಭಾಗವಾಗಬೇಕು: ಬಾಬಾ ರಾಮ್‍ದೇವ್

    – ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು
    – ಪೋಷಕರು ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು

    ನವದೆಹಲಿ: ಮಹಿಳೆಯರ ಮೇಲಿನ ಹಲ್ಲೆ ಹಾಗೂ ಅತ್ಯಾಚಾರದಂತಹ ಭೀಕರ ಅಪರಾಧಗಳನ್ನು ತಡೆಯಲು ಸರ್ಕಾರ ಯೋಗ ಮತ್ತು ನೈತಿಕ ಶಿಕ್ಷಣವನ್ನು ಪಠ್ಯಕ್ರಮದಲ್ಲಿ ಸೇರಿಸಬೇಕು ಎಂದು ಯೋಗ ಗುರು ಬಾಬಾ ರಾಮ್‍ದೇವ್ ಅಭಿಪ್ರಾಯಪಟ್ಟಿದ್ದಾರೆ.

    ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕುರಿತು ಪ್ರತಿಕ್ರಿಯಿಸಿದ ಅವರು, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಅತ್ಯಾಚಾರದಂತಹ ಅಪರಾಧಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಇದನ್ನು ತಡೆಯಬೇಕಾದಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಯೋಗ ಮತ್ತು ನೈತಿಕ ಶಿಕ್ಷಣವನ್ನು ಪಠ್ಯದ ಭಾಗವಾಗಿಸಬೇಕು. ಪೋಷಕರು ಸಹ ತಮ್ಮ ಮಕ್ಕಳಲ್ಲಿ ಈ ಕುರಿತು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದ್ದಾರೆ.

    ನರಭಕ್ಷಕರಿಗೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ನ್ಯಾಯಾಂಗವು ಇತಿಹಾಸ ನಿರ್ಮಿಸಿದೆ. ಇಂತಹ ಕೃತ್ಯ ಎಸಗಿದವರಿಗೆ ಯಾವ ರೀತಿಯ ಶಿಕ್ಷೆಯಾಗುತ್ತದೆ ಎಂಬುದನ್ನು ತೋರಿಸಿದೆ. ಅಲ್ಲದೆ ಮುಂದೆ ಯಾರಾದರೂ ಇಂತಹ ಘೋರ ಅಪರಾಧಗಳನ್ನು ಮಾಡುವವರಿಗೆ ಭಯ ಹುಟ್ಟಿಸುವಂತೆ ಮಾಡಿದೆ. ಈ ಪ್ರಕರಣವು ವಿಶ್ವ ಮಟ್ಟದಲ್ಲಿ ನಮ್ಮ ದೇಶದ ಚಿತ್ರಣವನ್ನು ಬಿಂಬಿಸಿದೆ ಎಂದು ಬಾಬಾ ರಾಮ್‍ದೇವ್ ಅಭಿಪ್ರಾಯಪಟ್ಟಿದ್ದಾರೆ.

    2012ರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇಂದು ನ್ಯಾಯ ದೊರಕಿದೆ. ನಿರ್ಭಯಾ ಪ್ರಕರಣದ ದೋಷಿಗಳಿಗೆ ಇಂದು ಬೆಳಗ್ಗೆ 5.30ಕ್ಕೆ ಗಲ್ಲು ಶಿಕ್ಷೆ ಜಾರಿಯಾಗಿದೆ.

    ಇಂದು ಬೆಳಗಿನ ಜಾವ ಮೂರು ಗಂಟೆವರೆಗೂ ದೋಷಿಗಳು ಡೆತ್ ವಾರೆಂಟ್ ಮುಂದೂಡಲು ಪ್ರಯತ್ನಿಸಿದ್ದರು. ಪಟಿಯಾಲಾ ಹೌಸ್ ಕೋರ್ಟ್ ನೀಡಿರುವ ಡೆತ್ ವಾರೆಂಟ್ ಗೆ ತಡೆ ನೀಡುವಂತೆ ಗುರುವಾರ ರಾತ್ರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ನಲ್ಲಿ ಅರ್ಜಿ ವಜಾಗೊಳ್ಳುತ್ತಿದ್ದಂತೆ ಮಧ್ಯರಾತ್ರಿ ಸುಪ್ರೀಂಕೋರ್ಟಿಗೆ ಹೋಗಿ ತುರ್ತು ಅರ್ಜಿ ವಿಚಾರಣೆ ನಡೆಸಬೇಕೆಂದು ದೋಷಿಗಳು ಮನವಿ ಮಾಡಿಕೊಂಡಿದ್ದರು.

    ಮಧ್ಯರಾತ್ರಿ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಾದ-ಪ್ರತಿವಾದವನ್ನು ಆಲಿಸಿತು. ತದನಂತರ ಅರ್ಜಿಯನ್ನು ವಜಾಗೊಳಿಸಿತು. ಇತ್ತ ಅರ್ಜಿ ವಜಾಗೊಳ್ಳುತ್ತಿದ್ದಂತೆ ತಿಹಾರ್ ಜೈಲಿನ ಮುಂದೆ ಜನ ಸೇರಲು ಆರಂಭಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ತಿಹಾರ ಜೈಲಿನ ಆವರಣದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು.

  • ನನ್ನ ಮಗನನ್ನು ಜೈಲಿನಲ್ಲಿಯೇ ಸುರಕ್ಷಿತವಾಗಿ ನೋಡಿಕೊಳ್ಳಿ: ವೈರಲ್ ಆಯ್ತು ಅಪರಾಧಿ ತಾಯಿಯ ವಿಡಿಯೋ

    ನನ್ನ ಮಗನನ್ನು ಜೈಲಿನಲ್ಲಿಯೇ ಸುರಕ್ಷಿತವಾಗಿ ನೋಡಿಕೊಳ್ಳಿ: ವೈರಲ್ ಆಯ್ತು ಅಪರಾಧಿ ತಾಯಿಯ ವಿಡಿಯೋ

    – ನನ್ನ ಮಗ ಅಪ್ಪನ ಜೊತೆ ಇರಬೇಕೆಂದು ಅಳುತ್ತಾನೆ ಎಂದ ಪತ್ನಿ
    – ನನ್ನ ತಾಳಿ ಕಿತ್ತುಕೊಂಡು ಅನ್ಯಾಯ ಮಾಡುತ್ತಿದ್ದೀರಾ?

    ನವದೆಹಲಿ: ನಿರ್ಭಯಾ ಹಂತಕರನ್ನು ಇಂದು ಬೆಳಗ್ಗೆ 5.30ಕ್ಕೆ ಗಲ್ಲಿಗೇರಿಸಲಾಯಿತು. ಈ ಸುದ್ದಿ ಕೇಳಿ ದೇಶ್ಯಾದ್ಯಂತ ಜನರು ಸಂಭ್ರಮಿಸುತ್ತಿದ್ದಾರೆ. ಇದರ ನಡುವೆ ಅಪರಾಧಿ ಅಕ್ಷಯ್ ಠಾಕೂರ್ ತಾಯಿ ಹಾಗೂ ಪತ್ನಿ ಮಾತನಾಡಿದ ವಿಡಿಯೋವೊಂದು ವೈರಲ್ ಆಗುತ್ತಿದೆ.

    ವಿಡಿಯೋದಲ್ಲಿ, ದಯವಿಟ್ಟು ನನ್ನ ಮಗನನ್ನು ಗಲ್ಲಿಗೇರಿಸಬೇಡಿ. ಅವನು ಕೋರ್ಟ್ ಹಾಗೂ ಪೊಲೀಸ್ ಠಾಣೆಯಲ್ಲಿ ಈಗ ಹೇಗಿದ್ದಾನೋ ಹಾಗೆ ಇರಲಿ. ಅವನು ಜೈಲಿನಲ್ಲಿಯೇ ಕ್ಷೇಮವಾಗಿರಲಿ. ನಾಲ್ವರು ಅಪರಾಧಿಗಳ ಕುಟುಂಬವನ್ನು ಗಲ್ಲಿಗೇರಿಸಿ ಎಂದು ನಾನು ಸರ್ಕಾರ ಬಳಿ ಕೇಳಿಕೊಳ್ಳುತ್ತೇನೆ. ನಮ್ಮನ್ನು ಯಾಕೆ ಇನ್ನೂ ಜೀವಂತವಾಗಿ ಇಟ್ಟಿದ್ದೀರಾ? ಈಗ ನಾವು ಬದುಕಿ ಏನು ಮಾಡಬೇಕಿದೆ. ಅಕ್ಷಯ್ ನ ನೋಡಿದರೆ ನಾವೇಕೆ ಇನ್ನೂ ಬದುಕಿದ್ದೇವೆ ಎಂದು ಎನಿಸುತ್ತೆ ಎಂದು ಅಕ್ಷಯ್ ತಾಯಿ ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಕೊಟ್ಟ ಮಾತು ಉಳಿಸಿಕೊಂಡ ಜಗ್ಗೇಶ್- ನಿರ್ಭಯಾ ಹಂತಕರ ಹ್ಯಾಂಗ್‍ಮ್ಯಾನ್‍ಗೆ 1 ಲಕ್ಷ ರೂ.

    ನಾವು ಬಡವರು ಎಂದು ಸರ್ಕಾರ ನಮಗೆ ಕಿರುಕುಳ ನೀಡುತ್ತಿದೆ. ಅಕ್ಷಯ್‍ಗೆ ಪತ್ನಿ-ಮಗ, ವಯಸ್ಸಾದ ತಂದೆ-ತಾಯಿ ಇದ್ದಾರೆ. ಅಕ್ಷಯ್‍ಗೆ ಗಲ್ಲು ಹಾಕಿದರೆ ಅವರ ಕುಟುಂಬಸ್ಥರು ಎಲ್ಲಿಗೆ ಹೋಗಬೇಕು ಎಂಬುದು ಸರ್ಕಾರಕ್ಕೆ ಗೊತ್ತಿಲ್ಲ. ಬಡತನ ಬಿಟ್ಟರೆ ನಮಗೆ ಇನ್ನೇನು ಇಲ್ಲ. ಸರ್ಕಾರ ಬಡವರಿಗೆ ಸಹಾಯ ಮಾಡುವುದರ ಬದಲು ನನ್ನ ಮಗನಿಗೆ ಗಲ್ಲು ಹಾಕುತ್ತಿದ್ದಾರೆ. ಗಲ್ಲಿಗೇರಿಸುವಿಕೆಯ ವಿರುದ್ಧ ಯಾರೂ ಏನನ್ನೂ ಕೇಳಲು ಬಯಸುವುದಿಲ್ಲ. ಬದಲಿಗೆ ಅವರು ಅವನನ್ನು ಶಿಕ್ಷಿಸಬಹುದು ಎಂದರು. ಇದನ್ನೂ ಓದಿ: ಗಲ್ಲು ವಿಧಿಸುವ ಪ್ರಕ್ರಿಯೆ ಹೇಗಿತ್ತು? ಗಲ್ಲು ಶಿಕ್ಷೆಗೆ ಒಳಗಾದವರ್ಯಾರು?

    ನನ್ನ ಮಗ ಜೈಲಿನಲ್ಲಿದ್ದರೆ, ನನಗೆ ಸಮಾಧಾನ ಆಗುತ್ತಿತ್ತು. ಅಲ್ಲದೆ ನನ್ನ ಸೊಸೆ ಕೂಡ ವಿಧವೆ ಆಗುತ್ತಿರಲಿಲ್ಲ. ದಯವಿಟ್ಟು ನನ್ನ ಮಗನಿಗೆ ಗಲ್ಲಿಗೆ ಹಾಕಬೇಡಿ ಎಂದು ನಾನು ಮನವಿ ಮಾಡಿಕೊಳ್ಳುತ್ತೇನೆ. ನನ್ನ ಮಗ ಪೊಲೀಸ್ ಠಾಣೆಯಲ್ಲಿ ಹಾಗೂ ಕೋರ್ಟಿನಲ್ಲಿ ಹೇಗೆ ಇದ್ದಾನೋ ಹಾಗೇ ಇರಲಿ. ದಯವಿಟ್ಟು ಆತನನ್ನು ಜೈಲಿನಲ್ಲಿಯೇ ಸುರಕ್ಷಿತವಾಗಿ ನೋಡಿಕೊಳ್ಳಿ. ನನ್ನ ಮಗ ಜೈಲಿನಲ್ಲಿಯೇ ಇರುವಂತೆ ಮಾಡಿ. ಆಗ ನನಗೆ ಬದುಕಲು ಸಾಧ್ಯವಾಗುತ್ತದೆ. ಇಲ್ಲವೆಂದರೆ ಈ ಪ್ರಪಂಚದಲ್ಲಿ ಬದುಕಿ ನಾವೇನು ಮಾಡಬೇಕಿದೆ? ನಾನು ಸರ್ಕಾರದ ಬಳಿ ನನ್ನ ಮಗನನ್ನು ಕೇಳುತ್ತೇನೆ. ನನ್ನ ಮಗ ಸರಿ ಹೋಗುತ್ತಾನೆ ಎಂದು ತಿಳಿಸಿದ್ದರು. ಇದನ್ನೂ ಓದಿ: ನಿರ್ಭಯಾ ಪ್ರಕರಣ- 2012ರಿಂದ 2020ರವರೆಗೆ ಏನೇನಾಯ್ತು?

     

    ಇದೇ ವೇಳೆ ಅಕ್ಷಯ್ ಪತ್ನಿ ಮಾತನಾಡಿ, ನನ್ನ ಮಗ ಬೇರೆ ಮಕ್ಕಳು ತನ್ನ ತಂದೆ ಜೊತೆ ಇರುವುದನ್ನು ನೋಡಿ ತುಂಬಾ ಅಳುತ್ತಾನೆ. ನಾನು ನನ್ನ ತಂದೆ ಜೊತೆ ಹೀಗೆ ಇರಬೇಕು ಎಂದು ಹೇಳುತ್ತಾನೆ. ಆದರೆ ಹಣದ ಸಮಸ್ಯೆಯಿದ್ದ ಕಾರಣ ನನಗೆ ನನ್ನ ಪತಿಯನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಬಳಿಕ ಸಾಲ ಮಾಡಿ ನನ್ನ ಮಗನಿಗೆ ಜೈಲಿಗೆ ಕರೆದುಕೊಂಡು ಹೋಗಿ ಇವರೇ ನಿಮ್ಮ ತಂದೆ ಎಂದು ಹೇಳಿದೆ. ನನ್ನ ಮಗ ತನ್ನ ತಂದೆಯನ್ನು ನೋಡಿ ತುಂಬಾ ಖುಷಿಪಟ್ಟನು. ಬಳಿಕ ನಾವು ಅಲ್ಲಿಂದ ಹೊರಡಬೇಕಾದರೆ ತುಂಬಾ ಹೊತ್ತು ಅಳುತ್ತಿದ್ದನು. ಅಪ್ಪ ಕೂಡ ನಮ್ಮ ಜೊತೆ ಇದ್ದಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು ಅಲ್ವಾ ಅಮ್ಮ ಎಂದು ಹೇಳುತ್ತಾ ನನ್ನ ಮಗ ಅಳುತ್ತಿದ್ದನು ಎಂದರು.

    ಅಲ್ಲದೆ ನಾನು ಕೂಡ ನ್ಯಾಯ ಕೇಳುತ್ತಿದ್ದೇನೆ. ನನ್ನ ತಾಳಿಯನ್ನು ಕಿತ್ತುಕೊಳ್ಳುವ ಮೂಲಕ ನನಗೆ ಅನ್ಯಾಯ ಮಾಡಲಾಗುತ್ತಿದೆ. ನನಗೆ ಮುತ್ತೈದೆ ಆಗಿರಬೇಕು ಎಂಬ ಆಸೆ ಇದೆ. ನಾನು ಕೂಡ ಈ ದೇಶದ ಮಹಿಳೆ. ನನಗೆ ಮಾತ್ರ ಅನ್ಯಾಯ ಮಾಡುತ್ತಿದ್ದಾರೆ. ನನಗೆ ನ್ಯಾಯ ಬೇಕಿದೆ ಎಂದು ತಿಳಿಸಿದ್ದರು.

  • ಕೊಟ್ಟ ಮಾತು ಉಳಿಸಿಕೊಂಡ ಜಗ್ಗೇಶ್- ನಿರ್ಭಯಾ ಹಂತಕರ ಹ್ಯಾಂಗ್‍ಮ್ಯಾನ್‍ಗೆ 1 ಲಕ್ಷ ರೂ.

    ಕೊಟ್ಟ ಮಾತು ಉಳಿಸಿಕೊಂಡ ಜಗ್ಗೇಶ್- ನಿರ್ಭಯಾ ಹಂತಕರ ಹ್ಯಾಂಗ್‍ಮ್ಯಾನ್‍ಗೆ 1 ಲಕ್ಷ ರೂ.

    ಬೆಂಗಳೂರು: ನವರಸನಾಯಕ ಜಗ್ಗೇಶ್ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಿದ ಹ್ಯಾಂಗ್ ಮ್ಯಾನ್ ಪವನ್ ಜಲ್ಲಾದ್‍ಗೆ ಒಂದು ಲಕ್ಷ ರೂ. ನೀಡಿದ್ದಾರೆ.

    ಇಂದು ಸೂರ್ಯೋದಯಕ್ಕೂ ಮೊದಲೇ ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಲಾಯಿತು. ಅಪರಾಧಿಗಳನ್ನು ಗಲ್ಲಿಗೇರಿಸಿದ ಬಳಿಕ ಜಗ್ಗೇಶ್ ತಮ್ಮ ಟ್ವಿಟ್ಟರಿನಲ್ಲಿ, ಕೊಟ್ಟ ಮಾತಿನಂತೆ 1 ಲಕ್ಷ ರೂ. ನಿರ್ಭಯಾ ಹಂತಕರ ಹ್ಯಾಂಗ್‍ಮ್ಯಾನ್‍ಗೆ ನನ್ನ ದೇಣಿಗೆ. ದೇವನೊಬ್ಬನಿರುವ ಅವ ಎಲ್ಲ ನೋಡುತಿರುವ. ಸತ್ಯದ ಹಾದಿಯಲ್ಲಿ ನಡೆದವಗೆ ಭಯವಿಲ್ಲ. ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪೊಲ್ಲಾ. ಈ ದಿನಕ್ಕೆ ಹಲ್ಲುಕಚ್ಚಿ ಎಂದು ಅಂತ್ಯ ದುಷ್ಟ ಕ್ರಿಮಿಗಳಿಗೆ ಎಂದು ಕಾಯುತ್ತಿದ್ದೆ. ಸುದ್ದಿ ಕೇಳಲು ನಿದ್ರೆಮಾಡದೆ ಕಾದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ನಿರ್ಭಯಾ ಅತ್ಯಾಚಾರಿಗಳನ್ನು ಹ್ಯಾಂಗ್ ಮಾಡೋನಿಗೆ ಜಗ್ಗೇಶ್ ಉಡುಗೊರೆ

    ಈ ಹಿಂದೆ ಹ್ಯಾಂಗ್‍ಮ್ಯಾನ್ ಪವನ್ ಅವರು ನಿರ್ಭಯಾ ಅತ್ಯಾಚಾರಿಗಳನ್ನು ಗಲ್ಲಿಗೇರಿಸಿದರೆ ಅದರಿಂದ ಬರುವ ದುಡ್ಡಿನಲ್ಲಿ ನನ್ನ ಮಗಳ ಮದುವೆ ಮಾಡುತ್ತೇನೆ. ಸರ್ಕಾರ ನಂಗೆ ಒಂದು ಲಕ್ಷ ನೀಡುತ್ತದೆ. ನಾನು ಬಡತನದಿಂದ ಕುಸಿದು ಹೋಗಿದ್ದೆ. ಈಗ ಈ ಕರ್ತವ್ಯ ನಿರ್ವಹಿಸಲು ಹೇಳಿದ್ದಾರೆ. ಹೀಗಾದರೆ ನನಗೆ ಒಂದು ಲಕ್ಷ ದುಡ್ಡು ಬರುತ್ತದೆ. ಮಗಳ ಮದುವೆ ಮಾಡುತ್ತೇನೆ. ಗಲ್ಲಿಗೇರಿಸಲು ನಾನು ಸಿದ್ಧವಾಗಿದ್ದೇನೆ. ಇದು ನನ್ನ ಮಗಳ ಮದುವೆಗೆ ಹಣ ಹೊಂದಿಸುವುದಕ್ಕಾಗಿ ದೇವರೇ ಕೊಟ್ಟ ಅವಕಾಶ ಎಂದು ಭಾವುಕರಾಗಿ ಮಾಧ್ಯಮಕ್ಕೆ ಹೇಳಿಕೆ ಕೊಟ್ಟಿದ್ದರು. ಇದನ್ನೂ ಓದಿ: ಗಲ್ಲು ವಿಧಿಸುವ ಪ್ರಕ್ರಿಯೆ ಹೇಗಿತ್ತು? ಗಲ್ಲು ಶಿಕ್ಷೆಗೆ ಒಳಗಾದವರ್ಯಾರು?

    ಪವನ್ ಅವರ ಮಾತು ಕೇಳಿ ಜಗ್ಗೇಶ್ ತಮ್ಮ ಟ್ವಿಟ್ಟರಿನಲ್ಲಿ, ರಾಕ್ಷಸ ಸಂಹಾರ ಮಾಡುವ ಈ ಕಾರ್ಯವನ್ನು ನೀವು ಮಾಡಿದರೆ ಒಂದು ಲಕ್ಷ ರೂ. ನಿಮಗೆ ನೀಡುತ್ತೇನೆ. ಮಗಳ ಮದುವೆ ಮಾಡುವೆ ಎನ್ನುವ ನಿಮ್ಮ ಮಾತು ನನ್ನನ್ನು ಭಾವುಕನಾಗಿಸಿದೆ. ಇಂದೇ ನಾನು ದುಡಿದ ಹಣದಲ್ಲಿ ನಿಮಗೆ ದುಡ್ಡು ಎತ್ತಿಡುವೆ ಎಂದು ಟ್ವೀಟ್ ಮಾಡಿದ್ದರು. ಕೊಟ್ಟ ಮಾತಿನಂತೆಯೇ ಜಗ್ಗೇಶ್ ಇಂದು ಹ್ಯಾಂಗ್‍ಮ್ಯಾನ್ ಪವನ್ ಅವರಿಗೆ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಇದನ್ನೂ ಓದಿ: ನ್ಯಾಯ ಸಿಕ್ಕಿದೆ ಎಂದು ನಾವು ಸುಮ್ಮನೆ ಮನೆಯಲ್ಲಿ ಕೂರುವುದಿಲ್ಲ: ನಿರ್ಭಯಾ ತಂದೆ

  • ನ್ಯಾಯ ಸಿಕ್ಕಿದೆ ಎಂದು ನಾವು ಸುಮ್ಮನೆ ಮನೆಯಲ್ಲಿ ಕೂರುವುದಿಲ್ಲ: ನಿರ್ಭಯಾ ತಂದೆ

    ನ್ಯಾಯ ಸಿಕ್ಕಿದೆ ಎಂದು ನಾವು ಸುಮ್ಮನೆ ಮನೆಯಲ್ಲಿ ಕೂರುವುದಿಲ್ಲ: ನಿರ್ಭಯಾ ತಂದೆ

    ನವದೆಹಲಿ: ಹಂತಕರನ್ನು ಗಲ್ಲಿಗೇರಿಸಿದ ಬಳಿಕ ನಿರ್ಭಯಾ ತಂದೆ ಬದ್ರಿನಾಥ್ ಸಿಂಗ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಅವರು ಈಗ ನಮಗೆ ನ್ಯಾಯ ಸಿಕ್ಕಿದೆ ಎಂದು ನಾವು ಸುಮ್ಮನೆ ಮನೆಯಲ್ಲಿ ಕೂರುವುದಿಲ್ಲ ಎಂದು ತಿಳಿಸಿದರು.

    ಮಾಧ್ಯಮಗಳ ಜೊತೆ ಮಾತನಾಡಿದ ನಿರ್ಭಯಾ ತಂದೆ ಬದ್ರಿನಾಥ್ ಸಿಂಗ್, ಅಪರಾಧಿಗಳು ಕೊನೆಯವರೆಗೆ ಹೋರಾಟ ಮಾಡಿದ್ದಾರೆ. ಆದರೆ ನಮ್ಮ ವಕೀಲರು ಕೂಡ ಪ್ರತಿ ಕ್ಷಣ, ಪ್ರತಿ ನಿಮಿಷ ಹೋರಾಡಿದ್ದಾರೆ. ನಾವು ಇದ್ದ ಕಡೆ ಅವರು ಇರುತ್ತಿದ್ದರು. ಆದರೆ ಕೊನೆಯದಾಗಿ ನಮಗೆ ಜಯವಾಯಿತು. ಏಕೆಂದರೆ ನಾವು ಸತ್ಯದ ಕಡೆ ಇದ್ದವು ಎಂದು ಪ್ರತಿಕ್ರಿಯಿಸಿದರು.

    ಈ ಘಟನೆ ನಡೆದ ನಂತರ ಎಲ್ಲರು ಕಾನೂನು ಸುವ್ಯವಸ್ಥೆ ಬದಲಾಗುತ್ತೆ ಎಂದುಕೊಂಡಿದ್ದಾರೆ. ಕಾನೂನು ಸುವ್ಯವಸ್ಥೆ ಬದಲಾಗುತ್ತೆ. ಈಗ ನಮಗೆ ನ್ಯಾಯ ಸಿಕ್ಕಿದೆ ಎಂದು ನಾವು ಸುಮ್ಮನೆ ಮನೆಯಲ್ಲಿ ಕೂರುವುದಿಲ್ಲ. 10 ದಿನದೊಳಗೆ ನಾವು ನಮ್ಮ ವಕೀಲರನ್ನು ಭೇಟಿ ಮಾಡಿ, ನಮ್ಮ ಒಳ್ಳೆಯದನ್ನು ಬಯಸುವವರು, ಒಳ್ಳೆಯ ಜನರನ್ನು ಎಲ್ಲರನ್ನೂ ಒಟ್ಟಿಗೆ ಸೇರಿಸುತ್ತೇವೆ. ಈ ವೇಳೆ ಏಳು ವರ್ಷದಲ್ಲಿ ನಮ್ಮ ಕಾನೂನು ಹೋರಾಟದಲ್ಲಿ ಯಾವುದು ಸರಿಯಿರಲಿಲ್ಲ ಎಂಬುದನ್ನು ಲಿಸ್ಟ್ ಮಾಡಿ ಮಾಧ್ಯಮಕ್ಕೆ ತಿಳಿಸುತ್ತೇವೆ. ಬಳಿಕ ಸರ್ಕಾರದ ಬಳಿ ಹೋಗಿ ಇದನ್ನು ಬದಲಾಯಿಸಿ ಎಂದು ಹೇಳುತ್ತೇವೆ. ಇದಕ್ಕೆ ಯಾವುದೇ ಮಂತ್ರಿಯನ್ನಾದರೂ ಭೇಟಿ ಆಗಬೇಕು ಎಂದರೆ ನಾವು ಭೇಟಿ ಆಗುತ್ತೇವೆ. ಇದನ್ನು ಬದಲಿಸಿ ಎಂದು ಹೇಳುತ್ತೇವೆ. ಆಗ ದೇಶದ ಮಹಿಳೆಯರಿಗೆ ಸುರಕ್ಷೆ ಸಿಗುತ್ತದೆ ಎಂದರು.

    ದೇಶದಲ್ಲಿ ಅತ್ಯಾಚಾರಿಗಳು ಇಂದಿನ ಘಟನೆಯಿಂದ 10 ದಿನ ಸರಿಯಾಗಿ ಊಟ ಮಾಡುವುದಿಲ್ಲ, ಸರಿಯಾಗಿ ನಿದ್ದೆ ಮಾಡುವುದಿಲ್ಲ. ತಪ್ಪು ಯಾವಾಗಲೂ ತಪ್ಪಾಗಿರುತ್ತೆ. ಅಪರಾಧಿಗಳನ್ನು ಗಲ್ಲಿಗೇರಿಸಿದನ್ನು ನೋಡಿ ಅತ್ಯಾಚಾರಿಗಳಿಗೆ ಈಗ ಭಯ ಶುರುವಾಗಿರುತ್ತೆ. ಇದು ಅತ್ಯಾಚಾರಿಗಳಿಗೆ ಎಚ್ಚರಿಕೆ ಗಂಟೆ ಎಂದು ತಿಳಿಸಿದರು. ನಾವು ಇಲ್ಲಿ ಎಚ್ಚರವಾಗಿದ್ದೇವೆ. ಆದರೆ ನಾವು ಸುಪ್ರೀಂ ಕೋರ್ಟ್‍ನಿಂದ ಹೊರ ಬರುತ್ತಿದ್ದಂತೆ ದೇಶದ ಹಲವು ಭಾಗಗಳಲ್ಲಿ ಹೋಳಿ ಆಚರಿಸುತ್ತಿದ್ದಾರೆ ಎಂಬುದು ತಿಳಿಯಿತು. ಅಪರಾಧಿಗಳನ್ನು ಗಲ್ಲಿಗೇರಿಸಿದ್ದಕ್ಕೆ ಇಡೀ ದೇಶ ಖುಷಿಯಿಂದ ಸಂಭ್ರಮಿಸುತ್ತಿದೆ ಎಂದು ತಿಳಿಸಿದರು.

  • ಗಲ್ಲು ವಿಧಿಸುವ ಪ್ರಕ್ರಿಯೆ ಹೇಗಿತ್ತು? ಗಲ್ಲು ಶಿಕ್ಷೆಗೆ ಒಳಗಾದವರ್ಯಾರು?

    ಗಲ್ಲು ವಿಧಿಸುವ ಪ್ರಕ್ರಿಯೆ ಹೇಗಿತ್ತು? ಗಲ್ಲು ಶಿಕ್ಷೆಗೆ ಒಳಗಾದವರ್ಯಾರು?

    ನವದೆಹಲಿ: ನಿರ್ಭಯಾ ಹಂತಕರನ್ನು ಗಲ್ಲಿಗೇರಿಸುವ ಮೂಲಕ ಕೋಟ್ಯಂತರ ಜನರ ಅಭಿಲಾಶೆ ನೆರವೇರಿದೆ. ಸೂರ್ಯ ಹುಟ್ಟೋ ಮೊದಲೇ ಕೀಚಕರ ವಧೆಯಾಗಿದೆ. 7 ವರ್ಷಗಳ ಬಳಿಕ ನಿರ್ಭಯಾ ಹಂತಕರಿಗೆ ನೇಣು ಕುಣಿಕೆ ಬಿದ್ದಿದೆ. ಒಟ್ಟೊಟ್ಟಿಗೆ ಮಾಡಿದ ಪಾಪಕ್ಕೆ ನಾಲ್ವರು ಒಟ್ಟಿಗೆ ಶಿಕ್ಷೆ ಅನುಭವಿಸಿದ್ದಾರೆ.

    ಮೊದಲೇ ನಿಗದಿ ಆಗಿದ್ದಂತೆ ಮುಂಜಾನೆ 5.30ಕ್ಕೆ ಸರಿಯಾಗಿ ತಿಹಾರ್ ಜೈಲಿನಲ್ಲಿ ಪಾತಕಿಗಳಾದ ಪವನ್ ಗುಪ್ತಾ, ವಿನಯ್ ಶರ್ಮಾ, ಮುಖೇಶ್ ಸಿಂಗ್ ಹಾಗೂ ಅಕ್ಷಯ್ ಸಿಂಗ್‍ರನ್ನ ವದಾ ಸ್ಥಳಕ್ಕೆ ಕರೆತಂದು ಮುಖಕ್ಕೆ ಕಪ್ಪು ಬಟ್ಟೆ ಹಾಕಿ, ನೇಣುಗಂಬಕ್ಕೆ ಏರಿಸಲಾಯಿತು. ಕುರ್ತಾ-ಪೈಜಾಮ ಧಾರಿಯಾಗಿದ್ದ ಕೀಚಕರ ವಧೆಯಾಯ್ತು. ಬೆಳಗ್ಗೆ 6.00 ಗಂಟೆ ಸುಮಾರಿಗೆ ಪಾಪಿಗಳು ಸತ್ತಿರುವುದನ್ನು ಜೈಲಾಧಿಕಾರಿಗಳು ದೃಢಪಡಿಸಿದರು.

    ಸದ್ಯ ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಸಂಬಂಧಿಕರಿಗೆ ಮೃತದೇಹ ನೀಡುವುದು ಅನುಮಾನವಾಗಿದೆ. ಕಾನೂನು ಸುವ್ಯವಸ್ಥೆಯ ಸಲುವಾಗಿ ಸಾಮೂಹಿಕ ಅಂತ್ಯಕ್ರಿಯೆ ನಡೆಸುವ ಸಾಧ್ಯತೆಗಳಿವೆ.

    ಗಲ್ಲು ಶಿಕ್ಷೆಗೆ ಒಳಗಾದವರ್ಯಾರು?
    22 ವರ್ಷದ ಪವನ್ ಗುಪ್ತಾ ಬಸ್ ಕ್ಲೀನರ್ ಆಗಿದ್ದು, ಅರ್ಧಕ್ಕೆ ಶಾಲೆಯಿಂದ ಡ್ರಾಪ್‍ಔಟ್ ಆಗಿದ್ದನು. ಹಣ್ಣಿನ ವ್ಯಾಪಾರಿ ಹಾಗೂ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು. ಬಿಕಾಂ ಪದವಿದರನಾದ ವಿನಯ್ ಶರ್ಮಾ(23) ಜಿಮ್ ಇನ್‍ಸ್ಟ್ರಕ್ಟರ್ ಆಗಿದ್ದನು. ಅಲ್ಲದೆ ಐಎಎಫ್ ಕ್ಲರ್ಕ್ ಪರೀಕ್ಷೆಗೆ ಕೋರ್ಟ್ ಅನುಮತಿ ಕೋರಿದ್ದನು. ಇನ್ನು ಮುಖೇಶ್ ಸಿಂಗ್(29) ನಿರುದ್ಯೋಗಿ ಆಗಿದ್ದು, ಆತನ ಸಹೋದರ ರಾಮ್‍ಸಿಂಗ್ ಬಸ್ ಚಾಲಕನಾಗಿದ್ದನು. ಆತ ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದನು. ವಿವಾಹಿತನಾಗಿರುವ ಅಕ್ಷಯ್ ಸಿಂಗ್(31) ಬಸ್ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದನು.

    ಗಲ್ಲು ವಿಧಿಸುವ ದಿನ ಪ್ರಕ್ರಿಯೆ ಹೇಗಿರುತ್ತೆ?
    1. ಮರಣದಂಡನೆ ವಿಧಿಸುವ ದಿನ ಜೈಲು ಎಸ್‍ಪಿ, ಡಿಎಸ್‍ಪಿ ಕೈದಿ ಇರುವ ಸೆಲ್‍ಗೆ ಹೋಗಿ ಈತನೇ ಮರಣದಂಡನೆಗೆ ಗುರಿಯಾಗಿರುವ ಕೈದಿ ಎಂದು ಖಚಿತಪಡಿಸಿಕೊಳ್ಳಬೇಕು.
    2. ಕೈದಿ ಎದುರು ಮರಣದಂಡನೆ ಜಾರಿ ಆದೇಶ ಪ್ರತಿಯನ್ನು ಓದಬೇಕು.
    3. ಇದಾದ ತರುವಾಯ ಕೈದಿಯಿಂದ ದಾಖಲೆಗಳಿಗೆ ಸಹಿ ಪಡೆದುಕೊಳ್ಳಬೇಕು.
    4. ಕೈದಿಯ 2 ಕಾಲುಗಳನ್ನು ಕಬ್ಬಿಣದ ಸಂಕೋಲೆಯಿಂದ ಬಂಧಿಸಿದ್ದಲ್ಲಿ ಅದನ್ನು ತೆಗೆಯಬೇಕು.
    5. ಕೈದಿಯನ್ನು ಗಲ್ಲು ಪೀಠದ ಕಡೆಗೆ ಕರೆದೊಯ್ಯುವ ಹೊಣೆ ಡಿಎಸ್‍ಪಿಯದ್ದು.
    6. ಕೈದಿಗೆ ಜೈಲಿನ ಹೆಡ್ ವಾರ್ಡರ್ ಮತ್ತು ಆರು ಮಂದಿ ವಾರ್ಡರ್ ಕಾವಲು
    7. ವಾರ್ಡರ್ ಗಳಲ್ಲಿ ಇಬ್ಬರು ಕೈದಿಯ ಹಿಂಭಾಗದಲ್ಲೂ, ಇಬ್ಬರು ಮುಂಭಾಗದಲ್ಲೂ. ಉಳಿದಿಬ್ಬರು ಕೈದಿಯ ಎರಡೂ ಕೈಗಳನ್ನು ಬಿಗಿಯಾಗಿ ಹಿಡಿದುಕೊಂಡು ವಧಾಪೀಠದ ಬಳಿಗೆ ಕರೆದುಕೊಂಡು ಬರುತ್ತಾರೆ.
    8. ಕೈದಿಯನ್ನು ನಿಖರವಾಗಿ ನೇಣಿನ ಕೆಳಗೆ ನಿಲ್ಲಿಸುತ್ತಾರೆ.
    9. ಗಲ್ಲಿಗೂ ಮೊದಲು ಕೊನೆಯದಾಗಿ ಕೈದಿಗೆ ಮರಣದಂಡನೆ ಜಾರಿ ಆದೇಶವನ್ನು ಓದಿ ಹೇಳಲಾಗುತ್ತದೆ.
    10. ನಂತರ ಕೈದಿಯ ಎರಡೂ ಕಾಲುಗಳನ್ನು ಬಿಗಿಯಾಗಿ ಕಟ್ಟಿ ಆತನ ತಲೆಗೆ ಕಪ್ಪು ಬಣ್ಣದ ಬಟ್ಟೆ ಹಾಕಲಾಗುತ್ತದೆ.
    11. ಕೈದಿ ಕುತ್ತಿಗೆಗೆ ನೇಣು ಹಗ್ಗವನ್ನು ಇಳಿಸಲಾಗುತ್ತದೆ
    12. ಈ ನೇಣು ಹಗ್ಗ ಕುತ್ತಿಗೆಯ ಮಧ್ಯ ಭಾಗದ 1.5 ಇಂಚು ಎಡ ಅಥವಾ ಬಲ ಭಾಗಕ್ಕೆ ವಾಲಿರಬೇಕು.
    13. ಈ ಪ್ರಕ್ರಿಯೆ ಮುಗಿದ ಬಳಿಕ ಇಬ್ಬರೂ ವಾರ್ಡರ್ ಗಳು ಕೈದಿಯನ್ನು ವಧಾ ಸ್ಥಳದಲ್ಲಿ ಬಿಟ್ಟು ತೆರಳುತ್ತಾರೆ.
    14. ಎಸ್‍ಪಿ ಸಿಗ್ನಲ್ ಕೊಟ್ಟ ನಂತರ ವಧಾಕಾರ (ಹ್ಯಾಂಗ್ ಮ್ಯಾನ್) ಗಲ್ಲು ಬಿಗಿಗೊಳಿಸುತ್ತಾರೆ.
    15. ಗಲ್ಲು ಶಿಕ್ಷೆ ವಿಧಿಸಿದ 30 ನಿಮಿಷದವರೆಗೂ ದೇಹವನ್ನು ಮೇಲೆತ್ತುವಂತಿಲ್ಲ
    16. ಜೈಲಿನ ವೈದ್ಯಾಧಿಕಾರಿ ಪ್ರಾಣ ಹೋಗಿದೆಯೆಂದು ಧೃಡಪಡಿಸಿದ ನಂತರ ದೇಹ ಮೇಲಕ್ಕೆತ್ತಲಾಗುತ್ತದೆ
    17. ಕೈದಿಯ ಮೃತದೇಹವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ.
    18. ಒಂದು ವೇಳೆ ಕೈದಿಯ ಕುಟುಂಬಸ್ಥರು ಶವವನ್ನು ತೆಗೆದುಕೊಳ್ಳದೇ ಇದ್ದಲ್ಲಿ ಆಗ ಜೈಲಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ.

  • ನಿರ್ಭಯಾ ಬದುಕಿದ್ದರೆ ಹೆಚ್ಚು ಖುಷಿಯಾಗುತ್ತಿತ್ತು: ವಕೀಲೆ ಸೀಮಾ

    ನಿರ್ಭಯಾ ಬದುಕಿದ್ದರೆ ಹೆಚ್ಚು ಖುಷಿಯಾಗುತ್ತಿತ್ತು: ವಕೀಲೆ ಸೀಮಾ

    -ತಡವಾದ್ರೂ ನ್ಯಾಯ ಸಿಕ್ತು

    ನವದೆಹಲಿ: ನಿರ್ಭಯಾಳನ್ನು ಬದುಕಿಸುತ್ತಿದ್ದರೆ ನನಗೆ ತುಂಬಾ ಖುಷಿಯಾಗುತ್ತಿತ್ತು ಎಂದು ನಿರ್ಭಯಾ ತಾಯಿ ಪರ ವಾದ ಮಾಡಿದ್ದ ವಕೀಲೆ ಸೀಮಾ ಕುಶ್‍ವಾಹಾ ಪ್ರತಿಕ್ರಿಯಿಸಿದ್ದಾರೆ.

    ಅಪರಾಧಿಗಳನ್ನು ಗಲ್ಲಿಗೇರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸೀಮಾ, ನಿರ್ಭಯಾಳನ್ನು ಬದುಕಿದ್ದರೆ, ನನಗೆ ಹೆಚ್ಚು ಖುಷಿಯಾಗುತ್ತಿತ್ತು. ಆದರೆ ನಾವು ಆಕೆಯನ್ನು ಬದುಕಿಸಿಕೊಳ್ಳಲು ಆಗಲಿಲ್ಲ. ದೇಶದ ಕಾನೂನು ಸುವ್ಯವಸ್ಥೆ ಇದರಲ್ಲಿ ಫೇಲ್ ಆಗಿದೆ. ದೇಶದ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ. ಆದರೆ ಹಂತಕರನ್ನು ಗಲ್ಲಿಗೇರಿಸುವ ಮೂಲಕ ನಿರ್ಭಯಾಗೆ ನ್ಯಾಯ ಸಿಕ್ಕಿದೆ. ಆ ವಿಷಯದ ಬಗ್ಗೆ ಸಮಾಧಾನ ಇದೆ ಎಂದು ಹೇಳಿದರು.

    ನಾನು ಒಂದು ವಿಷಯ ಹೇಳಲು ಇಷ್ಟಪಡುತ್ತೇನೆ. ಅಪರಾಧಿಗಳು ನಿರ್ಭಯಾ ಮೇಲೆ ಕೇವಲ ಅತ್ಯಾಚಾರ ಮಾಡಿಲ್ಲ, ಹತ್ಯೆ ಮಾಡಿದ್ದಾರೆ. ನಿರ್ಭಯಾಳನ್ನು ಕೊಲೆ ಮಾಡಿ ಆಕೆಯ ದೇಹವನ್ನು ಸಂಪೂರ್ಣವಾಗಿ ನಾಶ ಮಾಡಿದ್ದರು. ಯಾವ ರೀತಿ ನಿರ್ಭಯಾಯನ್ನು ಹತ್ಯೆ ಮಾಡಿದ್ದಾರೋ, ಪ್ರಾಣಿಗಳು ಕೂಡ ಆ ರೀತಿ ಮಾಡಲ್ಲ. ಆದರೆ ಇಂದು ನಾಲ್ವರು ಅಪರಾಧಿಗಳನ್ನು ಗಲ್ಲುಗೇರಿಸಲಾಗಿದೆ ಎಂದು ವಕೀಲೆ ಸೀಮಾ ಕುಶ್‍ವಾಹಾ ತಿಳಿಸಿದರು.

    ನಿರ್ಭಯಾ ವೈದ್ಯಕೀಯ ಶಿಕ್ಷಣ ಮುಗಿಸಿ ಇಂರ್ಟನ್‍ಶಿಪ್ ಮಾಡಲು ಇಲ್ಲಿಗೆ ಬಂದಿದ್ದಳು. ಈ ಘಟನೆ ನಡೆದ ಮರುದಿನ ನಿರ್ಭಯಾ ತನ್ನ ಇಂರ್ಟನ್‍ಶಿಪ್‍ಗೆ ಹೋಗಬೇಕಿತ್ತು. ಅದು ಆಕೆಯ ಕನಸ್ಸಾಗಿತ್ತು. ಆದರೆ ಈ ಘಟನೆ ನಡೆದ ನಂತರ ಆಕೆಯ ಕನಸ್ಸು ನುಚ್ಚು ನುರಾಯಿತು. ಒಂದು ಕ್ಷಣದಲ್ಲಿ ಎಲ್ಲವೂ ಬದಲಾಯಿತು ಎಂದರು. ಅಲ್ಲದೆ ಇಂತಹ ಪ್ರಕರಣದಲ್ಲಿ ಬೇರೆ ಹೆಣ್ಣು ಮಕ್ಕಳಿಗೂ ನ್ಯಾಯ ಸಿಕ್ಕಿಲ್ಲ ಎಂಬುದು ನನಗೆ ಮೊದಲಿನಿಂದಲೂ ಗೊತ್ತಿದೆ. ಇಂತಹ ಹಲವು ಪ್ರಕರಣಗಳು ಬಾಕಿ ಇದೆ ಎಂಬುದು ನನಗೆ ಗೊತ್ತಿದೆ. ನಿರ್ಲಕ್ಷ್ಯದಿಂದ ಈ ಪ್ರಕರಣ ಇಷ್ಟು ವರ್ಷ ನಡೆಯಿತು. ತಡವಾದರೂ ನಿರ್ಭಯಾಗೆ ನ್ಯಾಯ ಸಿಕ್ಕಿದೆ ಎಂದು ತಿಳಿಸಿದರು.

    ದೇಶದಲ್ಲಿ ಹಲವು ಹೆಣ್ಣು ಮಕ್ಕಳ ಜೊತೆ ನಿರ್ಭಯಾದಂತಹ ಪ್ರಕರಣ ನಡೆದಿದೆ. ಅವರು ಕೂಡ ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ಮಾಧ್ಯಮದವರು ಅಂತಹ ಪ್ರಕರಣಗಳನ್ನು ಬೆಳಕಿಗೆ ತಂದು ಅವರಿಗೂ ನ್ಯಾಯ ಕೊಡಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

  • ಹಂತಕರಿಗೆ ಗಲ್ಲು-ದೋಷಿಗಳ ಪರ ವಕೀಲ ಎ.ಪಿ.ಸಿಂಗ್ ಮೊದಲ ಪ್ರತಿಕ್ರಿಯೆ

    ಹಂತಕರಿಗೆ ಗಲ್ಲು-ದೋಷಿಗಳ ಪರ ವಕೀಲ ಎ.ಪಿ.ಸಿಂಗ್ ಮೊದಲ ಪ್ರತಿಕ್ರಿಯೆ

    ನವದೆಹಲಿ: ನಿರ್ಭಯಾ ಹಂತಕರಿಗೆ ಗಲ್ಲು ಶಿಕ್ಷೆ ಆಗಿದೆ. ಮೊದಲ ಬಾರಿಗೆ ಏಕಕಾಲದಲ್ಲಿ ನಾಲ್ವರನ್ನು ಗಲ್ಲು ಶಿಕ್ಷೆಗೆ ಒಳಪಡಿಸಲಾಗಿದೆ. ಸುಪ್ರೀಂಕೋರ್ಟ್ ನಲ್ಲಿ ದೋಷಿಗಳ ಅರ್ಜಿ ವಜಾಗೊಳ್ಳುತ್ತಿದ್ದಂತೆ ಅಪರಾಧಿಗಳ ಪರ ವಾದ ಮಂಡಿಸಿದ್ದ ವಕೀಲ ಎ.ಪಿ.ಸಿಂಗ್ ತಮ್ಮ ಪ್ರತಿಕ್ರಿಯೆಯನ್ನು ನೀಡಿದರು.

    ಸಂವಿಧಾನ ಅನುಗುಣವಾಗಿ ಎಲ್ಲ ಕಾರ್ಯಗಳು ನಡೆಬೇಕಿತ್ತು. ಹಾಗಾಗಿ ರಾತ್ರಿ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಮುಂದೆ ಹೋಗಿ ಜೀವ ಉಳಿಸುವ ಕೆಲಸ ಮಾಡಲಾಯ್ತು. ನ್ಯಾಯಾಲಯದ ಮುಂದೆ ನಾನು ಹೊಸ ವಾದವನ್ನೇ ಮಂಡಿಸಿದ್ದೇನೆ. ದೋಷಿ ಅಕ್ಷಯ್ ಪುತ್ರ ತಂದೆಯನ್ನು ಕಾಣಲು ಬಿಹಾರದಿಂದ ಬಂದಿದ್ದಾನೆ. ತಂದೆಯ ಭೇಟಿಗೆ ಅವಕಾಶ ನೀಡಬೇಕಿತ್ತು. ಮುಖೇಶ್ ಕುಟುಂಬಸ್ಥರು ದೆಹಲಿಯ ನಿವಾಸಿಗಳು. ಆದ್ರೆ ಅಕ್ಷಯ್ ಕುಟುಂಬ ಬಿಹಾರನ ನಕ್ಸಲ್ ಪೀಡಿತ ಪ್ರದೇಶದಲ್ಲಿದೆ. ಎಂಟು ವರ್ಷದ ಮಗನಿಗೆ ತಂದೆಯನ್ನ ನೋಡುವ ಅವಕಾಶ ಸಿಗಲಿಲ್ಲ.

    ಒಂದು ಮಗು ತಂದೆಯನ್ನ ನೋಡಿದ್ರೆ ಏನು ಆಗುತ್ತಿತ್ತು. ಮಗನಿಗೆ ತಂದೆಯ ಭೇಟಿಗೆ ಅವಕಾಶ ನೀಡದಿರೋದು ಇತಿಹಾಸದಲ್ಲಿ ಇರಲಿದೆ. ಇಂದು ಬಾಲ ವಿಕಾಸ ಇಲಾಖೆಗೆ ನಾಚಿಕೆ ಆಗಬೇಕು. ಅಕ್ಷಯ್ ನನ್ನು ನೀವು ಬಲತ್ಕಾರಿ, ಹಂತಕ ಎಂದು ಹೇಳುತ್ತೀರಿ. ಇಲ್ಲಿ ಆತನ ಪುತ್ರನ ತಪ್ಪೇನಿದೆ. ಮುಂದೊಂದು ದಿನ ಅಕ್ಷಯ್ ಪುತ್ರ ದೊಡ್ಡವನಾಗಿ ಸಂವಿಧಾನ ಓದಿದ್ರೆ, ಈ ವ್ಯವಸ್ಥೆ, ಜೈಲು ನಿಯಮ, ಮಾಧ್ಯಮ ತಂದೆಯ ಭೇಟಿಗೆ ಅವಕಾಶ ಕಲ್ಪಿಸಲಿಲ್ಲ ಎಂಬ ಭಾವನೆ ಮೂಡುತ್ತದೆ. ನಿನ್ನೆ ಹೋದರೆ ಕೊರೊನಾ ಎಂದು ಹೇಳಿದರು. ಇಂದು ಕೋರ್ಟ್ ನತ್ತ ತಿರುಗಾಡುವ ಕೆಲಸವೇ ಆಯ್ತು. ಪವನ್ ತಾಯಿ ಅಂಗವಿಕಲೆಯಾಗಿದ್ದು, ಪುತ್ರನ ಭೇಟಿಗಾಗಿ ಕಾಯುತ್ತಿದ್ದಾರೆ. ಒಬ್ಬ ತಾಯಿಯ ನೋವನ್ನು ನೀವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಒಬ್ಬ ತಾಯಿ ಹಿಂದೆ ಎಲ್ಲರೂ ಓಡುತ್ತಿದ್ದಾರೆ. ಹಾಗಾದ್ರೆ ಪವನ್ ತಾಯಿಗೆ ಯಾವುದೇ ಬೆಲೆ ಇಲ್ವಾ? ಎಂಟು ವರ್ಷಗಳಿಂದ ಪ್ರಕರಣದಲ್ಲಿ ಯಾವುದೇ ಪ್ರತ್ಯಕ್ಷದರ್ಶಿಗಳು ಇರಲಿಲ್ಲ ಎಂದು ದೋಷಿ ಪರ ವಕೀಲ ಎ.ಪಿ.ಸಿಂಗ್ ಹೇಳಿದ್ದಾರೆ.