Tag: ನಿರ್ಭಯಾ ಕೇಸ್

  • ನಾನು ನಿರ್ಭಯಾ ತಾಯಿ ಪಾತ್ರ ಮಾಡ್ತೇನೆ: ಮಾಳವಿಕಾ

    ನಾನು ನಿರ್ಭಯಾ ತಾಯಿ ಪಾತ್ರ ಮಾಡ್ತೇನೆ: ಮಾಳವಿಕಾ

    – ಇಂದಿನ ರಾಷ್ಟ್ರೀಯ ಹೀರೋ ಆಶಾದೇವಿ

    ಬೆಂಗಳೂರು: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಯಾರಾದರೂ ಸಿನಿಮಾ ಮಾಡಿದರೆ ಹೇಳಿ ನಾನು ನಿರ್ಭಯಾ ತಾಯಿ ಪಾತ್ರವನ್ನು ಮಾಡುತ್ತೇನೆ ಎಂದು ಹಿರಿಯ ನಟಿ ಮಾಳವಿಕಾ ಅವಿನಾಶ್ ಹೇಳಿದ್ದಾರೆ.

    ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು. ಇಂದು ನಿರ್ಭಯಾ ದೋಷಿಗಳಿಗೆ ಮರಣದಂಡನೆ ಆಗಿದೆ. ನಿರ್ಭಯಾಳಿಗೆ ಇಂದು ನ್ಯಾಯ ಸಿಕ್ಕಿದೆ. ಇದು ದೇಶದ ಪ್ರತಿಯೊಬ್ಬ ಮಗಳ ಗೆಲವು ಎಂದು ನಿರ್ಭಯಾ ತಾಯಿ ಆಶಾದೇವಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದರು. ಇದೀಗ ನಿರ್ಭಯಾ ತಾಯಿ ಮಾತಿಗೆ ನಟಿ ಮಾಳವಿಕಾ ಅವಿನಾಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಿರ್ಭಯಾ ಪ್ರಕರಣದ ಅಪರಾಧಿಗಳು ಸಿಕ್ಕಿಬಿದ್ದಿದ್ದು ಹೇಗೆ?

    ಮಾಳವಿಕಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ನಿರ್ಭಯಾ ದೋಷಿಗಳ ಗಲ್ಲು ಶಿಕ್ಷೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. “ಯಾರಾದರೂ ಸಿನಿಮಾ ಮಾಡುತ್ತಿದ್ದರೆ ಹೇಳಿ, ನಾನು ನಿರ್ಭಯಾ ತಾಯಿ ಆಶಾದೇವಿ ಪಾತ್ರ ಮಾಡುತ್ತೇನೆ. ಇಂದಿನ ರಾಷ್ಟ್ರೀಯ ಹೀರೋ ಅವರು. ಎಂತಹ ತಾಯಿ” ಎಂದು ಮಾಳವಿಕಾ ನಿರ್ಭಯಾ ತಾಯಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನನ್ನ ಮಗನನ್ನು ಜೈಲಿನಲ್ಲಿಯೇ ಸುರಕ್ಷಿತವಾಗಿ ನೋಡಿಕೊಳ್ಳಿ: ವೈರಲ್ ಆಯ್ತು ಅಪರಾಧಿ ತಾಯಿಯ ವಿಡಿಯೋ 

    ನಿರ್ಭಯಾ ತಾಯಿ ಹೇಳಿದ್ದೇನು?
    ಹಂತಕರಿಗೆ ಗಲ್ಲು ಆಗುತ್ತಿದ್ದಂತೆ ಮಾಧ್ಯಮಗಳ ಜೊತೆ ಮಾತನಾಡಿದ ಆಶಾದೇವಿ, ನಿರ್ಭಯಾಳಿಗೆ ಇಂದು ನ್ಯಾಯ ಸಿಕ್ಕಿದೆ. ಇದು ದೇಶದ ಪ್ರತಿಯೊಬ್ಬ ಮಗಳ ಗೆಲವು. ಸರ್ಕಾರ, ರಾಷ್ಟ್ರಪತಿ ಮತ್ತು ದೇಶದ ಪ್ರತಿಯೊಬ್ಬರಿಗೂ ಧನ್ಯವಾದ ಸಲ್ಲಿಸುತ್ತೇನೆ. ಅಪರಾಧಿಗಳು ಪದೇ ಪದೇ ನ್ಯಾಯಾಲಯದ ಮೊರೆ ಹೋಗಿದ್ದರಿಂದ ಮೂರು ಬಾರಿ ಡೆತ್ ವಾರೆಂಟ್ ಮುಂದೂಡಿಕೆಯಾಗಿತ್ತು. ಹಾಗಾಗಿ ನ್ಯಾಯ ವ್ಯವಸ್ಥೆಯ ಬಗ್ಗೆ ಪ್ರಶ್ನೆ ಎದ್ದಿತ್ತು. ಇಂದು ಏಕಕಾಲದಲ್ಲಿ ನಾಲ್ವರಿಗೂ ಗಲ್ಲಿಗೆ ಹಾಕಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ನಿರ್ಭಯಾ ಪ್ರಕರಣ- 2012ರಿಂದ 2020ರವರೆಗೆ ಏನೇನಾಯ್ತು?

    ನಿರ್ಭಯಾ ತಂದೆ ಹೇಳಿದ್ದೇನು?
    ಮಾಧ್ಯಮಗಳ ಜೊತೆ ಮಾತನಾಡಿದ ನಿರ್ಭಯಾ ತಂದೆ ಬದ್ರಿನಾಥ್ ಸಿಂಗ್, ಅಪರಾಧಿಗಳು ಕೊನೆಯವರೆಗೆ ಹೋರಾಟ ಮಾಡಿದ್ದಾರೆ. ಆದರೆ ನಮ್ಮ ವಕೀಲರು ಕೂಡ ಪ್ರತಿ ಕ್ಷಣ, ಪ್ರತಿ ನಿಮಿಷ ಹೋರಾಡಿದ್ದಾರೆ. ನಾವು ಇದ್ದ ಕಡೆ ಅವರು ಇರುತ್ತಿದ್ದರು. ಆದರೆ ಕೊನೆಯದಾಗಿ ನಮಗೆ ಜಯವಾಯಿತು. ಏಕೆಂದರೆ ನಾವು ಸತ್ಯದ ಕಡೆ ಇದ್ದವು ಎಂದು ಪ್ರತಿಕ್ರಿಯಿಸಿದರು.

    2012ರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇಂದು ನ್ಯಾಯ ದೊರಕಿದೆ. ನಿರ್ಭಯಾ ಪ್ರಕರಣದ ದೋಷಿಗಳಿಗೆ ಇಂದು ಬೆಳಗ್ಗೆ 5.30ಕ್ಕೆ ಗಲ್ಲು ಶಿಕ್ಷೆ ಜಾರಿಯಾಗಿದೆ. ಇಂದು ಬೆಳಗಿನ ಜಾವ ಮೂರು ಗಂಟೆವರೆಗೂ ದೋಷಿಗಳು ಡೆತ್ ವಾರೆಂಟ್ ಮುಂದೂಡಲು ಪ್ರಯತ್ನಿಸಿದ್ದರು. ಪಟಿಯಾಲಾ ಹೌಸ್ ಕೋರ್ಟ್ ನೀಡಿರುವ ಡೆತ್ ವಾರೆಂಟ್‍ಗೆ ತಡೆ ನೀಡುವಂತೆ ಗುರುವಾರ ರಾತ್ರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು.

    ಹೈಕೋರ್ಟಿನಲ್ಲಿ ಅರ್ಜಿ ವಜಾಗೊಳ್ಳುತ್ತಿದ್ದಂತೆ ಮಧ್ಯರಾತ್ರಿ ಸುಪ್ರೀಂಕೋರ್ಟಿಗೆ ಹೋಗಿ ತುರ್ತು ಅರ್ಜಿ ವಿಚಾರಣೆ ನಡೆಸಬೇಕೆಂದು ದೋಷಿಗಳು ಮನವಿ ಮಾಡಿಕೊಂಡಿದ್ದರು. ಮಧ್ಯರಾತ್ರಿ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಾದ-ಪ್ರತಿವಾದವನ್ನು ಆಲಿಸಿತು. ತದನಂತರ ಅರ್ಜಿಯನ್ನು ವಜಾಗೊಳಿಸಿತ್ತು.

  • ನಿರ್ಭಯಾ ಪ್ರಕರಣ- 2012ರಿಂದ 2020ರವರೆಗೆ ಏನೇನಾಯ್ತು?

    ನಿರ್ಭಯಾ ಪ್ರಕರಣ- 2012ರಿಂದ 2020ರವರೆಗೆ ಏನೇನಾಯ್ತು?

    ನವದೆಹಲಿ: 2012ರ ಡಿಸೆಂಬರ್ 16ರಂದು ಸ್ನೇಹಿತನ ಜೊತೆ ಸಿನಿಮಾ ನೋಡಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಬರುವ ವೇಳೆ ಘೋರ ದುರಂತ ನಡೆದಿತ್ತು. ಇಬ್ಬರಿಗೆ ಡ್ರಾಪ್ ನೀಡುವ ನೆಪದಲ್ಲಿ ಕಾಮುಕುರನ್ನ ಬಸ್ ಗೆ ಹತ್ತಿಸಿಕೊಂಡಿದ್ದಾರೆ. ಕೆಲ ಸಮಯದ ಬಳಿಕ ಬಸ್ ನಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಸಂತ್ರಸ್ತೆಯ ಗುಪ್ತಾಂಗಕ್ಕೆ ರಾಡ್‍ನಿಂದ ಚುಚ್ಚಿ ಹಿಂಸೆ ಕೊಟ್ಟಿದ್ದರು. ತೀವ್ರ ಅಸ್ವಸ್ಥಗೊಂಡ ಯುವತಿಯನ್ನು ಬಸ್ ನಿಂದ ತಳ್ಳಿ ಕಾಮುಕರು ಪರಾರಿಯಾಗಿದ್ರು. ಯುವತಿ ಮತ್ತು ಸ್ನೇಹಿತನನ್ನು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

    ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನು ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 13 ದಿನಗಳ ಕಾಲ ಸಾವು-ಬದುಕಿನ ಹೋರಾಟ ನಡೆಸಿದ್ದ ಯುವತಿ, ಚಿಕಿತ್ಸೆ ಫಲಿಸದೇ ಡಿ. 29ರಂದು ಸಾವನ್ನಪ್ಪಿದ್ದರು. ಇದನ್ನೂ ಓದಿ: ನಿರ್ಭಯಾ ಆತ್ಮಕ್ಕೆ ಮುಕ್ತಿ- ಕೊನೆಗೂ ಗಲ್ಲು ಆಯ್ತು ಹಂತಕರಿಗೆ

    ಘಟನೆ ನಡೆದ 72 ಗಂಟೆಯಲ್ಲಿ ಪೊಲೀಸರು ಕಾಮುಕನ್ನು ಬಂಧಿಸಿದ್ದರು. ಡಿಸೆಂಬರ್ 17, 2012ರಂದು 17 ವರ್ಷದ ಓರ್ವ ಅಪ್ರಾಪ್ತ ಸೇರಿ 6 ಆರೋಪಿಗಳ ಗುರುತು ಪತ್ತೆಯಾಗಿತ್ತು. ಡಿಸೆಂಬರ್ 18ರಂದು ಅಪ್ರಾಪ್ತ ಬಾಲಕ ಸೇರಿ ಆರು ಆರೋಪಿಗಳ ಬಂಧನವಾಗಿತ್ತು. ದೆಹಲಿಯಲ್ಲಿ ಬಾಲಾಪರಾದಿ, ಹರಿಯಾಣ, ಬಿಹಾರದಲ್ಲಿ ಇತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಡಿಸೆಂಬರ್ 20 ನಿರ್ಭಯಾ ಸ್ನೇಹಿತ ಮತ್ತು ಡಿಸೆಂಬರ್ 21ರಂದು ಸಂತ್ರಸ್ತೆಯ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲಾಗಿತ್ತು. ಇದನ್ನೂ ಓದಿ: ಹಂತಕರಿಗೆ ಗಲ್ಲು-ದೋಷಿಗಳ ಪರ ವಕೀಲ ಎ.ಪಿ.ಸಿಂಗ್ ಮೊದಲ ಪ್ರತಿಕ್ರಿಯೆ

    ಜನವರಿ 3, 2013ರಂದು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿತ್ತು. ಮಾರ್ಚ್ 11, 2013ರಂದು ಪ್ರಕರಣದಲ್ಲಿ ಅಪರಾಧಿಯಾಗಿದ್ದ ರಾಮ್‍ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದನು. ಆಗಸ್ಟ್ 31, 2013ರಂದು ಬಾಲಾಪರಾಧಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿ ಬಾಲಮಂದಿರಕ್ಕೆ ರವಾನೆ ಮಾಡಲಾಗಿತ್ತು. ಸೆಪ್ಟೆಂಬರ್ 13, 2013ಕ್ಕೆ ಉಳಿದ ನಾಲ್ವರು ಆರೋಪಿಗಳಿಗೆ ಮರಣದಂಡನೆ ವಿಧಿಸಿ ದೆಹಲಿಯ ಸಾಕೇತ್ ನ್ಯಾಯಾಲಯ ಆದೇಶ ನೀಡಿತ್ತು. ಮಾ.15, 2014ರಂದು ಕೆಳ ನ್ಯಾಯಾಲಯದ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿತ್ತು. ಇನ್ನು ಶಿಕ್ಷೆಗೆ ಗುರಿಯಾಗಿದ್ದ ಬಾಲಾಪರಾಧಿ ಡಿ.18, 2015ರಂದು ಬಿಡುಗಡೆ ಹೊಂದಿದ್ದನು. ಇದನ್ನೂ ಓದಿ: ನಿರ್ಭಯಾ ಬದುಕಿದ್ದರೆ ಹೆಚ್ಚು ಖುಷಿಯಾಗುತ್ತಿತ್ತು: ವಕೀಲೆ ಸೀಮಾ

    ಏ.3, 2016 ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ವಿಚಾರಣೆ ಕೈಗೆತ್ತಿಕೊಂಡಿತ್ತು. ಈ ಪೀಠದಲ್ಲಿ ಕರ್ನಾಟಕದ ಇಬ್ಬರು ಜಡ್ಜ್‍ಗಳು (ವಿ.ಗೋಪಾಲ ಗೌಡ ಹಾಗೂ ಕುರಿಯನ್ ಜೋಸೆಫ್) ಇದ್ದರು. ಜುಲೈ 11, 2016ರಲ್ಲಿ ನ್ಯಾಯಾಪೀಠದ ಬದಲಾವಣೆ ಆಯ್ತು. ನ್ಯಾ. ದೀಪಕ್ ಮಿಶ್ರಾ, ಆರ್.ಭಾನುಮತಿ, ಅಶೋಕ್ ಭೂಷಣ್ ಒಳಗೊಂಡ ಹೊಸ ಸಮಿತಿ ನೇಮಕಗೊಂಡಿತು. ಇದನ್ನೂ ಓದಿ: ಗಲ್ಲು ವಿಧಿಸುವ ಪ್ರಕ್ರಿಯೆ ಹೇಗಿತ್ತು? ಗಲ್ಲು ಶಿಕ್ಷೆಗೆ ಒಳಗಾದವರ್ಯಾರು?

    ಸೆಪ್ಟೆಂಬರ್ 2, 2016 ಡಿಫೆನ್ಸ್ ಅಡ್ವೊಕೇಟ್ ಎಂ.ಎಲ್. ಶರ್ಮಾ ಅಹವಾಲು ಸಲ್ಲಿಕೆಯಾಯ್ತು. ಮಾ.6, 2017ಕ್ಕೆ ಆರೋಪಿಗಳಿಂದ ಹೆಚ್ಚುವರಿ ಅಫಡವಿಟ್ ಸಲ್ಲಿಕೆ. ಮಾರ್ಚ್ 27, 2017ಕ್ಕೆ ವಿಚಾರಣೆ ಮುಕ್ತಾಯಗೊಳಿಸಿ ತೀರ್ಪನ್ನು ಕಾಯ್ದಿರಿಸಲಾಯ್ತ. ಮೇ 5, 2017ರಂದ ಸುಪ್ರೀಂ ಅಪರಾಧಿಗಳಿಗೆ ಮರಣ ದಂಡನೆ ಕಾಯಂಗೊಳಿಸಿ ತೀರ್ಪು ನೀಡಿತು. ನವೆಂಬರ್ 13, 2017ಕ್ಕೆ ದೋಷಿಗಳು ಸುಪ್ರೀಂಗೆ ಮರುಪರಿಶೀಲನಾ ಅರ್ಜಿ ಸಲ್ಲಿದರು. ಜುಲೈ 9, 2018ಕ್ಕೆ ಪುನರ್ ಪರಿಶೀಲನಾ ಅರ್ಜಿ ತಿರಸ್ಕೃತಗೊಳಿಸಿ ನ್ಯಾಯಾಲಯ ಗಲ್ಲು ಖಾಯಂಗೊಳಿಸ್ತು. ಡಿಸೆಂಬರ್ 6, 2019 ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕøತಗೊಳಿಸಿ ಕೇಂದ್ರಕ್ಕೆ ಪತ್ರ ಬರೆದಿದ್ದರು. ಇಂದು ನಾಲ್ವರನ್ನು ಏಕಕಾಲದಲ್ಲಿ ಗಲ್ಲಿಗೆ ಏರಿಸಲಾಯ್ತು. ಇದನ್ನೂ ಓದಿ: ನ್ಯಾಯ ಸಿಕ್ಕಿದೆ ಎಂದು ನಾವು ಸುಮ್ಮನೆ ಮನೆಯಲ್ಲಿ ಕೂರುವುದಿಲ್ಲ: ನಿರ್ಭಯಾ ತಂದೆ

  • ಹಂತಕರಿಗೆ ಗಲ್ಲು-ದೋಷಿಗಳ ಪರ ವಕೀಲ ಎ.ಪಿ.ಸಿಂಗ್ ಮೊದಲ ಪ್ರತಿಕ್ರಿಯೆ

    ಹಂತಕರಿಗೆ ಗಲ್ಲು-ದೋಷಿಗಳ ಪರ ವಕೀಲ ಎ.ಪಿ.ಸಿಂಗ್ ಮೊದಲ ಪ್ರತಿಕ್ರಿಯೆ

    ನವದೆಹಲಿ: ನಿರ್ಭಯಾ ಹಂತಕರಿಗೆ ಗಲ್ಲು ಶಿಕ್ಷೆ ಆಗಿದೆ. ಮೊದಲ ಬಾರಿಗೆ ಏಕಕಾಲದಲ್ಲಿ ನಾಲ್ವರನ್ನು ಗಲ್ಲು ಶಿಕ್ಷೆಗೆ ಒಳಪಡಿಸಲಾಗಿದೆ. ಸುಪ್ರೀಂಕೋರ್ಟ್ ನಲ್ಲಿ ದೋಷಿಗಳ ಅರ್ಜಿ ವಜಾಗೊಳ್ಳುತ್ತಿದ್ದಂತೆ ಅಪರಾಧಿಗಳ ಪರ ವಾದ ಮಂಡಿಸಿದ್ದ ವಕೀಲ ಎ.ಪಿ.ಸಿಂಗ್ ತಮ್ಮ ಪ್ರತಿಕ್ರಿಯೆಯನ್ನು ನೀಡಿದರು.

    ಸಂವಿಧಾನ ಅನುಗುಣವಾಗಿ ಎಲ್ಲ ಕಾರ್ಯಗಳು ನಡೆಬೇಕಿತ್ತು. ಹಾಗಾಗಿ ರಾತ್ರಿ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಮುಂದೆ ಹೋಗಿ ಜೀವ ಉಳಿಸುವ ಕೆಲಸ ಮಾಡಲಾಯ್ತು. ನ್ಯಾಯಾಲಯದ ಮುಂದೆ ನಾನು ಹೊಸ ವಾದವನ್ನೇ ಮಂಡಿಸಿದ್ದೇನೆ. ದೋಷಿ ಅಕ್ಷಯ್ ಪುತ್ರ ತಂದೆಯನ್ನು ಕಾಣಲು ಬಿಹಾರದಿಂದ ಬಂದಿದ್ದಾನೆ. ತಂದೆಯ ಭೇಟಿಗೆ ಅವಕಾಶ ನೀಡಬೇಕಿತ್ತು. ಮುಖೇಶ್ ಕುಟುಂಬಸ್ಥರು ದೆಹಲಿಯ ನಿವಾಸಿಗಳು. ಆದ್ರೆ ಅಕ್ಷಯ್ ಕುಟುಂಬ ಬಿಹಾರನ ನಕ್ಸಲ್ ಪೀಡಿತ ಪ್ರದೇಶದಲ್ಲಿದೆ. ಎಂಟು ವರ್ಷದ ಮಗನಿಗೆ ತಂದೆಯನ್ನ ನೋಡುವ ಅವಕಾಶ ಸಿಗಲಿಲ್ಲ.

    ಒಂದು ಮಗು ತಂದೆಯನ್ನ ನೋಡಿದ್ರೆ ಏನು ಆಗುತ್ತಿತ್ತು. ಮಗನಿಗೆ ತಂದೆಯ ಭೇಟಿಗೆ ಅವಕಾಶ ನೀಡದಿರೋದು ಇತಿಹಾಸದಲ್ಲಿ ಇರಲಿದೆ. ಇಂದು ಬಾಲ ವಿಕಾಸ ಇಲಾಖೆಗೆ ನಾಚಿಕೆ ಆಗಬೇಕು. ಅಕ್ಷಯ್ ನನ್ನು ನೀವು ಬಲತ್ಕಾರಿ, ಹಂತಕ ಎಂದು ಹೇಳುತ್ತೀರಿ. ಇಲ್ಲಿ ಆತನ ಪುತ್ರನ ತಪ್ಪೇನಿದೆ. ಮುಂದೊಂದು ದಿನ ಅಕ್ಷಯ್ ಪುತ್ರ ದೊಡ್ಡವನಾಗಿ ಸಂವಿಧಾನ ಓದಿದ್ರೆ, ಈ ವ್ಯವಸ್ಥೆ, ಜೈಲು ನಿಯಮ, ಮಾಧ್ಯಮ ತಂದೆಯ ಭೇಟಿಗೆ ಅವಕಾಶ ಕಲ್ಪಿಸಲಿಲ್ಲ ಎಂಬ ಭಾವನೆ ಮೂಡುತ್ತದೆ. ನಿನ್ನೆ ಹೋದರೆ ಕೊರೊನಾ ಎಂದು ಹೇಳಿದರು. ಇಂದು ಕೋರ್ಟ್ ನತ್ತ ತಿರುಗಾಡುವ ಕೆಲಸವೇ ಆಯ್ತು. ಪವನ್ ತಾಯಿ ಅಂಗವಿಕಲೆಯಾಗಿದ್ದು, ಪುತ್ರನ ಭೇಟಿಗಾಗಿ ಕಾಯುತ್ತಿದ್ದಾರೆ. ಒಬ್ಬ ತಾಯಿಯ ನೋವನ್ನು ನೀವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಒಬ್ಬ ತಾಯಿ ಹಿಂದೆ ಎಲ್ಲರೂ ಓಡುತ್ತಿದ್ದಾರೆ. ಹಾಗಾದ್ರೆ ಪವನ್ ತಾಯಿಗೆ ಯಾವುದೇ ಬೆಲೆ ಇಲ್ವಾ? ಎಂಟು ವರ್ಷಗಳಿಂದ ಪ್ರಕರಣದಲ್ಲಿ ಯಾವುದೇ ಪ್ರತ್ಯಕ್ಷದರ್ಶಿಗಳು ಇರಲಿಲ್ಲ ಎಂದು ದೋಷಿ ಪರ ವಕೀಲ ಎ.ಪಿ.ಸಿಂಗ್ ಹೇಳಿದ್ದಾರೆ.

  • ನಿರ್ಭಯಾ ಆತ್ಮಕ್ಕೆ ಮುಕ್ತಿ- ಕೊನೆಗೂ ಗಲ್ಲು ಆಯ್ತು ಹಂತಕರಿಗೆ

    ನಿರ್ಭಯಾ ಆತ್ಮಕ್ಕೆ ಮುಕ್ತಿ- ಕೊನೆಗೂ ಗಲ್ಲು ಆಯ್ತು ಹಂತಕರಿಗೆ

    ನವದೆಹಲಿ: 2012ರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇಂದು ನ್ಯಾಯ ದೊರಕಿದೆ. ನಿರ್ಭಯಾ ಪ್ರಕರಣದ ದೋಷಿಗಳಿಗೆ ಇಂದು ಬೆಳಗ್ಗೆ 5.30ಕ್ಕೆ ಗಲ್ಲು ಶಿಕ್ಷೆ ಜಾರಿಯಾಗಿದೆ.

    ಇಂದು ಬೆಳಗಿನ ಜಾವ ಮೂರು ಗಂಟೆವರೆಗೂ ದೋಷಿಗಳು ಡೆತ್ ವಾರೆಂಟ್ ಮುಂದೂಡಲು ಪ್ರಯತ್ನಿಸಿದ್ದರು. ಪಟಿಯಾಲಾ ಹೌಸ್ ಕೋರ್ಟ್ ನೀಡಿರುವ ಡೆತ್ ವಾರೆಂಟ್ ಗೆ ತಡೆ ನೀಡುವಂತೆ ಗುರುವಾರ ರಾತ್ರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ನಲ್ಲಿ ಅರ್ಜಿ ವಜಾಗೊಳ್ಳುತ್ತಿದ್ದಂತೆ ಮಧ್ಯರಾತ್ರಿ ಸುಪ್ರೀಂಕೋರ್ಟ್ ಗೆ ಹೋಗಿ ತುರ್ತು ಅರ್ಜಿ ವಿಚಾರಣೆ ನಡೆಸಬೇಕೆಂದು ದೋಷಿಗಳು ಮನವಿ ಮಾಡಿಕೊಂಡಿದ್ದರು.

    ಮಧ್ಯರಾತ್ರಿ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಾದ-ಪ್ರತಿವಾದವನ್ನು ಆಲಿಸಿತು. ತದನಂತರ ಅರ್ಜಿಯನ್ನು ವಜಾಗೊಳಿಸಿತು. ಇತ್ತ ಅರ್ಜಿ ವಜಾಗೊಳ್ಳುತ್ತಿದ್ದಂತೆ ತಿಹಾರ್ ಜೈಲಿನ ಮುಂದೆ ಜನ ಸೇರಲು ಆರಂಭಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ತಿಹಾರ ಜೈಲಿನ ಆವರಣದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು.

  • ನಿರ್ಭಯಾ ಕೇಸ್ – ಪವನ್ ಸಲ್ಲಿಸಿದ್ದ ಅರ್ಜಿ ವಜಾ, ಆದ್ರೂ ಒಂದು ಅವಕಾಶವಿದೆ

    ನಿರ್ಭಯಾ ಕೇಸ್ – ಪವನ್ ಸಲ್ಲಿಸಿದ್ದ ಅರ್ಜಿ ವಜಾ, ಆದ್ರೂ ಒಂದು ಅವಕಾಶವಿದೆ

    ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿರುವ ಪವನ್ ಗುಪ್ತಾ ಶಿಕ್ಷೆಯನ್ನು ಕಡಿತಗೊಳಿಸುವಂತೆ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

    ಪವನ್ ಗುಪ್ತಾ ಕಳೆದ ಶುಕ್ರವಾರ ಸುಪ್ರೀಂ ಕೋರ್ಟಿನಲ್ಲಿ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದ. ಈಗ ಈತನ ಅರ್ಜಿ ವಜಾಗೊಂಡಿದ್ದು ಕಾನೂನು ಹೋರಾಟದ ಎಲ್ಲ ಬಾಗಿಲುಗಳು ಬಂದ್ ಆಗಿದೆ.

    ಕಾನೂನು ಹೋರಾಟದ ಬಾಗಿಲುಗಳು ಮುಚ್ಚಿದ್ದರೂ ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಲು ಪವನ್‍ಗೆ ಅವಕಾಶವಿದೆ. ಉಳಿದ ನಾಲ್ವರು ದೋಷಿಗಳ ಈ ಎಲ್ಲಾ ಅರ್ಜಿಗಳು ಈಗಾಗಲೇ ತಿರಸ್ಕೃತಗೊಂಡಿದೆ.

    ಮಾರ್ಚ್ 3ರಂದು ಗುಪ್ತಾ ಸೇರಿದಂತೆ ನಾಲ್ವರು ದೋಷಿಗಳಿಗೆ ಗಲ್ಲು ಶಿಕ್ಷೆ ಜಾರಿ ಮಾಡುವಂತೆ ದೆಹಲಿಯ ಪಾಟಿಯಾಲ ಹೌಸ್ ಕೋರ್ಟ್ ವಾರೆಂಟ್ ನೀಡಿತ್ತು. ಈ ಆದೇಶ ಪ್ರಕಟಗೊಂಡ ಬಳಿಕ ವಿನಯ್ ಶರ್ಮಾ, ಜೈಲಿನ ಗೋಡೆಗೆ ತಲೆಯನ್ನು ಚಚ್ಚಿಕೊಂಡು ಗಾಯಮಾಡಿಕೊಂಡಿದ್ದ. ಈ ನಡುವೆ ದೋಷಿ ವಿನಯ್ ಮಾನಸಿಕವಾಗಿ ಅಸ್ವಸ್ಥನಾಗಿದ್ದಾನೆ ಎಂದು ಆತನ ಪರ ವಕೀಲ ಎ.ಪಿ.ಸಿಂಗ್ ಹೇಳಿದ್ದರು.

    ನ್ಯಾಯಾಲಯದ ಹಾದಿ ತಪ್ಪಿಸಲು ದೋಷಿಗಳು ವಿವಿಧ ನಾಟಕ ಮಾಡುತ್ತಿದ್ದಾರೆ. ಗಲ್ಲು ಶಿಕ್ಷೆ ವಿಳಂಬ ಮಾಡಲು ಅರ್ಜಿಗಳ ಮೇಲೆ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಎಂದು ಸಂತ್ರಸ್ತೆಯ ತಾಯಿ ಆಶಾದೇವಿ ಬೇಸರ ವ್ಯಕ್ತಪಡಿಸಿದ್ದರು.

  • ಕಾನೂನು ಕಸರತ್ತಿಗೆ ಒಂದೇ ವಾರ ಟೈಮ್ – ನಿರ್ಭಯಾ ಅತ್ಯಾಚಾರಿಗಳಿಗೆ ಹೈಕೋರ್ಟ್ ಡೆಡ್‍ಲೈನ್

    ಕಾನೂನು ಕಸರತ್ತಿಗೆ ಒಂದೇ ವಾರ ಟೈಮ್ – ನಿರ್ಭಯಾ ಅತ್ಯಾಚಾರಿಗಳಿಗೆ ಹೈಕೋರ್ಟ್ ಡೆಡ್‍ಲೈನ್

    ನವದೆಹಲಿ: ಗಲ್ಲು ಶಿಕ್ಷೆಯಿಂದ ಪಾರಾಗಲು ದಿನಕ್ಕೊಂದು ನೆಪವೊಡ್ಡಿ ಕಾನೂನು ಕಸರತ್ತು ಮಾಡುತ್ತಿರುವ ನಿರ್ಭಯಾ ಅತ್ಯಾಚಾರಿಗಳಿಗೆ ದೆಹಲಿ ಹೈಕೋರ್ಟ್ 1 ವಾರ ಕಾಲಾವಕಾಶ ನೀಡಿದೆ. ಆ ಬಳಿಕ ಅತ್ಯಾಚಾರಿಗಳನ್ನು ಗಲ್ಲಿಗೇರಿಸೋದು ಖಚಿತವೆಂದು ಹೈಕೋರ್ಟ್ ತಿಳಿಸಿದೆ.

    ನಿರ್ಭಯಾ ಅತ್ಯಾಚಾರಿಗಳ ಗಲ್ಲು ಶಿಕ್ಷೆಗೆ ಅನಿರ್ಧಿಷ್ಟಾವಧಿ ತಡೆ ನೀಡಿ ಕೆಳ ಹಂತದ ನ್ಯಾಯಾಲಯ ಕೆಲವು ದಿನಗಳ ಹಿಂದೆ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮತ್ತು ತಿಹಾರ್ ಜೈಲು ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಒಂದು ವಾರದ ಒಳಗೆ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಮುಗಿಸುವಂತೆ ಸೂಚಿಸಿದೆ. ಆ ಬಳಿಕ ಅಪರಾಧಿಗಳು ಏನೇ ಕಸರತ್ತು ಮಾಡಿದರು ಪ್ರಯೋಜನಕ್ಕಿಲ್ಲ, ಗಲ್ಲು ಶಿಕ್ಷೆಯ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದು ವಿಚಾರಣಾ ನ್ಯಾಯಾಲಯ ಹೇಳಿದೆ.

    ವಿಚಾರಣೆ ವೇಳೆ ನ್ಯಾ. ಸುರೇಶ್ ಕೇತ್, ಒಬ್ಬ ಅಪರಾಧಿಯ ಕ್ಷಮಾದಾನ ಅರ್ಜಿ ಬಾಕಿ ಉಳಿದಿದ್ದರೆ, ಇತರೆ ಅಪರಾಧಿಗಳನ್ನು ನೇಣಿಗೇರಿಸಬಹುದು ಎಂದು ದೆಹಲಿ ಜೈಲು ನಿಯಮಗಳು ಹೇಳುವುದಿಲ್ಲ. ಸುಪ್ರೀಂ ಕೋರ್ಟಿನಲ್ಲಿ ಅಪರಾಧಿಗಳ ಹಣೆ ಬರಹ ಒಂದೇ ತೀರ್ಪಿನಿಂದ ನಿರ್ಧಾರವಾಗಿದೆ. ಎಲ್ಲಾ ಅಪರಾಧಿಗಳ ಗಲ್ಲು ಒಟ್ಟಾಗಿ ಜಾರಿಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ತೀರ್ಪಿನ ನಂತರ ನಿರ್ಭಯಾ ತಾಯಿ ಆಶಾ ದೇವಿ ಪ್ರತಿಕ್ರಿಯಿಸಿ, ಪ್ರಕ್ರಿಯೆಗೆ ಹೈಕೋರ್ಟ್ ಗಡುವು ನೀಡಿರುವುದಕ್ಕೆ ಖುಷಿಯಾಗಿದೆ. ಅಪರಾಧಿಗಳು ಗಲ್ಲು ಶಿಕ್ಷೆಯ ಪ್ರಕ್ರಿಯೆಯನ್ನು ಮುಂದೂಡಿಕೆ ಮಾಡುತ್ತಾ ಬಂದಿದ್ದರು. ಇದೀಗ ಇದನ್ನು ಒಂದು ವಾರದ ಒಳಗೆ ಮುಗಿಸಬೇಕಾಗಿದೆ. ಇದು ಸಂತಸದ ವಿಚಾರ ಎಂದರು.

    ಈ ಹಿಂದೆ ಫೆ. 1ರಂದು ಬೆಳಗ್ಗೆ 6 ಗಂಟೆಗೆ ನಿರ್ಭಯಾ ಅಪರಾಧಿಗಳಿಗೆ ಗಲ್ಲಿಗೆ ಏರಿಸಲು ಕೋರ್ಟ್ ಆದೇಶ ನೀಡಿತ್ತು. ಆದರೆ ಅಪರಾಧಿಗಳು ಗಲ್ಲುಶಿಕ್ಷೆ ಜಾರಿ ಮುಂದೂಡಲು ನಾನಾ ಪ್ರಯತ್ನವನ್ನು ಮುಂದುವರಿಸಿದ್ದರು. ಬುಧವಾರ ಅಪರಾಧಿ ವಿನಯ್ ಶರ್ಮಾ ರಾಷ್ಟ್ರಪತಿ ಅವರಿಗೆ ಎರಡನೇ ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದನು. ಆದರೆ ರಾಷ್ಟ್ರಪತಿಗಳ ತೀರ್ಮಾನ ಪ್ರಕಟವಾಗದ ಹಿನ್ನೆಲೆಯಲ್ಲಿ ಪಟಿಯಾಲ ಕೋರ್ಟ್ ಗಲ್ಲುಶಿಕ್ಷೆಗೆ ತಡೆಯಾಜ್ಞೆ ನೀಡಿತ್ತು.

    ಇನ್ನೊಂದೆಡೆ ಮತ್ತೋರ್ವ ದೋಷಿ ಪವನ್, ನಾನು ಅಪ್ರಾಪ್ತನಾಗಿದ್ದಾಗ ಈ ಘಟನೆ ನಡೆದಿತ್ತು. ಹೀಗಾಗಿ ನನ್ನನ್ನು ಮರಣದಂಡನೆಗೆ ಒಳಪಡಿಸಬಾರದು ಎಂದು ಸುಪ್ರಿಂ ಕೋರ್ಟ್‍ಗೆ ಮತ್ತೊಮ್ಮೆ ಮನವಿ ಮಾಡಿದ್ದನು. ಈ ಹಿಂದೆಯೇ ತ್ರಿಸದಸ್ಯ ಪೀಠ ಪವನ್ ಅರ್ಜಿಯನ್ನು ತಿರಸ್ಕೃತ ಮಾಡಿತ್ತು. ಹೀಗಾಗಿ ಸುಪ್ರೀಂಕೋರ್ಟಿನ ಸಂವಿಧಾನಿಕ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದನು.

    ರಾಷ್ಟ್ರಪತಿಗಳ ಕ್ಷಮಾದಾನದ ತೀರ್ಪಿನ ವಿರುದ್ಧ ಮುಖೇಶ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದನು. ಕಳೆದ ಬುಧವಾರ ಸುಪ್ರೀಂಕೋರ್ಟ್ ಮುಖೇಶ್ ಅರ್ಜಿಯನ್ನು ವಜಾಗೊಳಿಸಿತ್ತು. ಮುಖೇಶ್ ನಂತೆಯೇ ಉಳಿದ ಅಪರಾಧಿಗಳು ಅರ್ಜಿ ಸಲ್ಲಿಸುವ ಮೂಲಕ ಗಲ್ಲು ಏರುವುದಕ್ಕೆ ವಿಳಂಬ ಮಾಡುವ ತಂತ್ರ ಮಾಡುತ್ತಿದ್ದಾರೆ. ಆದರೆ ಅಪರಾಧಿಗಳು ಏನೇ ಮಾಡಿದರೂ ಗಲ್ಲು ಶಿಕ್ಷೆಯನ್ನು ಮಾತ್ರ ತಡೆಯಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

  • ನಿರ್ಭಯಾ ಕೇಸ್ – ಕಾಮುಕರ ಗಲ್ಲು ಶಿಕ್ಷೆ ಮುಂದೂಡಿಕೆ?

    ನಿರ್ಭಯಾ ಕೇಸ್ – ಕಾಮುಕರ ಗಲ್ಲು ಶಿಕ್ಷೆ ಮುಂದೂಡಿಕೆ?

    ನವದೆಹಲಿ: ನಿರ್ಭಯಾ ಪ್ರಕರಣದ ದೋಷಿಗಳ ಗಲ್ಲು ಶಿಕ್ಷೆಯ ದಿನಾಂಕ ಮುಂದೂಡಿಕೆಯಾಗುವ ಸಾಧ್ಯತೆಯಿದೆ.

    ಈ ಹಿಂದೆ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಮರು ಪರಿಶೀಲನಾ ಅರ್ಜಿ ವಜಾ ಆದ ಬಳಿಕ ಪಟಿಯಾಲ ಹೌಸ್ ಕೋರ್ಟ್ ಜನವರಿ 22ರ ಬೆಳಗ್ಗೆ ಏಳು ಗಂಟೆಗೆ ನಾಲ್ವರಿಗೆ ಗಲ್ಲು ಶಿಕ್ಷೆ ವಿಧಿಸಿ ಡೆತ್ ವಾರೆಂಟ್ ಜಾರಿ ಮಾಡಿತ್ತು.

    ಈ ನಡುವೆ ಅಪರಾಧಿ ಮುಕೇಶ್ ಗಲ್ಲು ಶಿಕ್ಷೆಯಿಂದ ಪಾರು ಮಾಡುವಂತೆ ರಾಷ್ಟ್ರಪತಿಗಳಿಗೆ ಕ್ಷಮಾದಾನದ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಜನವರಿ 22ರಂದು ಗಲ್ಲಿಗೇರಿಸಲು ಸಾಧ್ಯವಿಲ್ಲ ಎಂದು ದೆಹಲಿ ಸರ್ಕಾರ ತಿಳಿಸಿದೆ.

    ಜೈಲಿನ ನಿಯಮಗಳನ್ನು ಉಲ್ಲೇಖಿಸಿರುವ ಸರ್ಕಾರ, ನಾವು ನಿಯಮಗಳಿಗೆ ಅನುಗುಣವಾಗಿಯೇ ಕೆಲಸ ಮಾಡಬೇಕು. ರಾಷ್ಟ್ರಪತಿಗಳಿಗೆ ಸಲ್ಲಿಕೆ ಮಾಡಿರುವ ಕ್ಷಮಾದಾನದ ಅರ್ಜಿ ವಿಲೇವಾರಿಯಾಗುವವರೆಗೂ ಗಲ್ಲು ಶಿಕ್ಷೆ ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟಿಗೆ ತಿಳಿಸಿದೆ.

    ವಿನಯ್ ಕುಮಾರ್ ಶರ್ಮಾ ಹಾಗೂ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎನ್.ವಿ ರಮಣ, ಅರುಣ್ ಮಿಶ್ರಾ, ಆರ್.ಎಫ್. ನಾರಿಮನ್, ಆರ್. ಭಾನುಮತಿ ಮತ್ತು ಅಶೋಕ್ ಭೂಷಣ್ ಅವರಿದ್ದ ಪೀಠ ಮಂಗಳವಾರ ವಜಾಗೊಳಿಸಿತ್ತು.

    ಈ ಅರ್ಜಿ ವಜಾಗೊಂಡ ಕೂಡಲೇ ಮುಕೇಶ್ ರಾಷ್ಟ್ರಪತಿ ಬಳಿ ಕ್ಷಮಾದಾನದ ಅರ್ಜಿ ಸಲ್ಲಿಸಿದ್ದ. ರಾಷ್ಟ್ರಪತಿಗಳು ನನ್ನ ಅರ್ಜಿ ಇನ್ನೂ ಇತ್ಯರ್ಥಗೊಂಡಿಲ್ಲ. ಹೀಗಾಗಿ ಡೆತ್ ವಾರಂಟ್ ಜಾರಿಯಾಗಲು ಸಾಧ್ಯವಿಲ್ಲ. ನನ್ನ ಅರ್ಜಿ ಇತ್ಯರ್ಥವಾಗದೇ ಡೆತ್ ವಾರಂಟ್ ಜಾರಿ ಮಾಡುವುದು ಎಷ್ಟು ಸರಿ ಎಂದು ಮುಕೇಶ್ ಪ್ರಶ್ನಿಸಿದ್ದ.

  • ನಿರ್ಭಯಾ ದೋಷಿಗಳಿಗೆ ಗಲ್ಲು ಫಿಕ್ಸ್ – ಕ್ಯೂರೇಟಿವ್ ಅರ್ಜಿ ವಜಾ

    ನಿರ್ಭಯಾ ದೋಷಿಗಳಿಗೆ ಗಲ್ಲು ಫಿಕ್ಸ್ – ಕ್ಯೂರೇಟಿವ್ ಅರ್ಜಿ ವಜಾ

    ನವದೆಹಲಿ: 2012ರ ದೆಹಲಿ ಗ್ಯಾಂಗ್ ರೇಪ್ ನಿರ್ಭಯಾ ಪ್ರಕರಣದ ಇಬ್ಬರು ದೋಷಿಗಳು ಸಲ್ಲಿಸಿದ್ದ ಕ್ಯೂರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

    ದೋಷಿಗಳಾದ ವಿನಯ್ ಕುಮಾರ್ ಶರ್ಮಾ ಹಾಗೂ ಮುಕೇಶ್ ಸಿಂಗ್ ಸುಪ್ರೀಂ ಕೋರ್ಟಿಗೆ ಕ್ಯೂರೇಟಿವ್ ಅರ್ಜಿಯನ್ನು ಸಲ್ಲಿಸಿದ್ದರು. ಇಂದು ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳಾದ ಎನ್.ವಿ ರಮಣ, ಅರುಣ್ ಮಿಶ್ರಾ, ಆರ್.ಎಫ್. ನಾರಿಮನ್, ಆರ್. ಭಾನುಮತಿ ಮತ್ತು ಅಶೋಕ್ ಭೂಷಣ್ ಅವರಿದ್ದ ಪೀಠ ಈ ಅರ್ಜಿಯನ್ನು ವಜಾಗೊಳಿಸಿದೆ.

    ಈ ಬಗ್ಗೆ ಸಂತ್ರಸ್ತೆಯ ತಾಯಿ ಆಶಾ ದೇವಿ ಪ್ರತಿಕ್ರಿಯಿಸಿ, ಇದು ನನಗೆ ಮಹತ್ವದ ದಿನವಾಗಿದೆ. ನಾನು ನನ್ನ ಮಗಳಿಗೆ ನ್ಯಾಯ ಕೊಡಿಸಲು ಸತತ 7 ವರ್ಷದಿಂದ ಹೋರಾಡುತ್ತಿದ್ದೇನೆ. ಜ. 22ರಂದು ದೋಷಿಗಳಿಗೆ ಗಲ್ಲಿಗೆ ಹಾಕುತ್ತಾರೆ. ಆ ದಿನ ನನ್ನ ಜೀವನದ ಹೆಚ್ಚು ಮಹತ್ವರ ದಿನ ಎಂದು ಹೇಳಿಕೊಂಡಿದ್ದಾರೆ.

    ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ದೋಷಿಗಳಿಗೆ ಈಗಾಗಲೇ ಗಲ್ಲು ಶಿಕ್ಷೆ ಖಾಯಂ ಆಗಿದೆ. ಜನವರಿ 22ಕ್ಕೆ ನೇಣುಗಂಬ ಏರಲಿದ್ದಾರೆ. ಈ ಹಿಂದೆ ಸುಪ್ರೀಂಕೋರ್ಟಿಗೆ ಸಲ್ಲಿಸಿದ ಮರು ಪರಿಶೀಲನಾ ಅರ್ಜಿ ವಜಾ ಆದ ಬಳಿಕ ಪಟಿಯಾಲ ಹೌಸ್ ಕೋರ್ಟ್ ಜನವರಿ 22ರ ಬೆಳಗ್ಗೆ ಏಳು ಗಂಟೆಗೆ ಡೆತ್ ವಾರೆಂಟ್ ಜಾರಿ ಮಾಡಿತ್ತು. ಇದರ ಬೆನ್ನಲ್ಲೇ ಮರಣದಂಡನೆಯಿಂದ ಪಾರಾಗಲು ಕೊನೆಯ ಪ್ರಯತ್ನವಾಗಿ ವಿನಯ್ ಕುಮಾರ್ ಶರ್ಮಾ ಹಾಗೂ ಮುಕೇಶ್ ಸಿಂಗ್ ಕ್ಯೂರೇಟಿವ್ ಅರ್ಜಿ ಸಲ್ಲಿಸಿ ಡೆತ್ ವಾರಂಟ್ ಜಾರಿಯಾಗದಂತೆ ಮನವಿ ಮಾಡಿಕೊಂಡಿದ್ದರು.

  • ನಿರ್ಭಯಾ ಪ್ರಕರಣ – ಜನವರಿ 22 ಬೆಳಗ್ಗೆ 7ಕ್ಕೆ ಕಾಮುಕರು ನೇಣಿಗೆ

    ನಿರ್ಭಯಾ ಪ್ರಕರಣ – ಜನವರಿ 22 ಬೆಳಗ್ಗೆ 7ಕ್ಕೆ ಕಾಮುಕರು ನೇಣಿಗೆ

    ನವದೆಹಲಿ: 2012ರ ದೆಹಲಿಯ ನಿರ್ಭಯಾ ಪ್ರಕರಣದ ಅಪರಾಧಿಗಳು ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ಜನವರಿ 22 ಬೆಳಗ್ಗೆ 7 ಗಂಟೆಗೆ ಗಲ್ಲಿಗೇರಿಸಬೇಕೆಂದು ದೆಹಲಿಯ ಕೋರ್ಟ್ ಡೆತ್ ವಾರೆಂಟ್ ಜಾರಿ ಮಾಡಿದೆ. ಈ ಮೂಲಕ 7 ವರ್ಷದ ಕಾನೂನು ಸಮರಕ್ಕೆ ಕೊನೆಗೂ ಜಯ ಸಿಕ್ಕಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಅತ್ಯಾಚಾರಿಗಳ ಪರ ವಕೀಲ ಎಪಿ ಸಿಂಗ್, ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗುತ್ತವೆ ಎಂದು ತಿಳಿಸಿದ್ದಾರೆ.

    ಈ ತೀರ್ಪಿನಿಂದಾಗಿ ನನ್ನ ಮಗಳಿಗೆ ಇಂದು ನ್ಯಾಯ ಸಿಕ್ಕಿದೆ. ಇದು ನನ್ನ ಮಗಳಿಗೆ ಮಾತ್ರವಲ್ಲ ದೇಶದ ಪ್ರತಿಯೊಬ್ಬ ಮಹಿಳೆಯರಿಗೂ ಇಂದು ನ್ಯಾಯ ಸಿಕ್ಕಿದಂತಾಗಿದೆ. ಪ್ರಕರಣದ ನಾಲ್ವರು ಅಪರಾಧಿಗಳಿಗೆ ನೀಡಿದ ಡೆತ್ ವಾರೆಂಟ್ ನಿಂದ ಜನಕ್ಕೆ ನ್ಯಾಯಾಂಗದ ವ್ಯವಸ್ಥೆಯ ಮೇಲಿನ ನಂಬಿಕೆ ಹೆಚ್ಚಾಗಿದೆ ಎಂದು ನಿರ್ಭಯಾ ತಾಯಿ ಆಶಾದೇವಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

    2012ರ ಡಿ. 16ರಂದು ದೆಹಲಿಯಲ್ಲಿ 23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರಗೈದು, ಕೊಲೆ ಮಾಡಿ ದುರುಳರು ವಿಕೃತಿ ಮೆರೆದಿದ್ದರು. ಈ ಪ್ರಕರಣ ಸಂಬಂಧ ರಾಮ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ, ಅಕ್ಷಯ್ ಠಾಕೂರ್, ಮುಕೇಶ್ ಸಿಂಗ್ ಬಂಧಿಸಲಾಗಿತ್ತು. ಆದರೆ 2013ರ ಮಾರ್ಚ್ ನಲ್ಲಿ ತಿಹಾರ್ ಜೈಲಿನಲ್ಲಿಯೇ ರಾಮ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದನು. ಬಳಿಕ ಈ ದುಷ್ಟರ ಕೃತ್ಯ ಸಾಬೀತಾಗಿ, ಅವರನ್ನು ದೋಷಿಗಳು ಎಂದು ಪರಿಗಣಿಸಿ ಇನ್ನುಳಿದ ನಾಲ್ವರಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಅವರಲ್ಲಿ ಮೂವರಿಗೆ ಕ್ಷಮಾದಾನ ಕೋರುವ ಯಾವುದೇ ಅವಕಾಶ ಇರಲಿಲ್ಲ. ಆದರೆ ವಿನಯ್ ಶರ್ಮಾಗೆ ಅವಕಾಶವಿದ್ದ ಹಿನ್ನೆಲೆ ಆತ ಮಾತ್ರ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದನು.

    ಆದರೆ ಆತನ ಕ್ಷಮದಾನ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿತ್ತು. ಅಲ್ಲದೆ ಕೇಂದ್ರ ಗೃಹ ಸಚಿವಾಲಯ ಹಾಗೂ ರಾಷ್ಟ್ರಪತಿಗಳಿಗೂ ದೋಷಿಯ ಕ್ಷಮಾದಾನ ಅರ್ಜಿ ತಿರಸ್ಕರಿಸುವಂತೆ ಶಿಫಾರಸು ಮಾಡಿತ್ತು. ಗಲ್ಲು ಶಿಕ್ಷೆ ಜಾರಿಯಾಗುತ್ತಿದ್ದಂತೆ ಅಕ್ಷಯ್ ಸಿಂಗ್ ಸುಪ್ರೀಂ ಕೋರ್ಟಿನಲ್ಲಿ ಮರು ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದ. ಆದರೆ ಕಳೆದ ತಿಂಗಳು ಸುಪ್ರೀಂ ಕೋರ್ಟ್ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿತ್ತು.

    2012ರಲ್ಲಿ ನಡೆದಿದ್ದ ಈ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಅತ್ಯಾಚಾರಿಗಳ ವಿರುದ್ಧ ಸಾರ್ವಜನಿಕರು ಹೋರಾಟ, ಪ್ರತಿಭಟನೆಗಳನ್ನು ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ, ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತನ್ನಿ ಎಂಬ ಕೂಗು ಕೇಳಿಬಂದಿತ್ತು.

  • ‘ನೀವು ಕ್ಷಮೆಗೆ ಅರ್ಹರಲ್ಲ’ – ನಿರ್ಭಯಾ ಕಾಮುಕರಿಗೆ ಗಲ್ಲು ಶಿಕ್ಷೆ ಖಾಯಂ

    ‘ನೀವು ಕ್ಷಮೆಗೆ ಅರ್ಹರಲ್ಲ’ – ನಿರ್ಭಯಾ ಕಾಮುಕರಿಗೆ ಗಲ್ಲು ಶಿಕ್ಷೆ ಖಾಯಂ

    ನವದೆಹಲಿ: 8 ವರ್ಷದ ಹಿಂದೆ ದೇಶಾದ್ಯಂತ ಕಿಚ್ಚು ಹೊತ್ತಿಸಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಾಯಂ ಆಗಿದೆ. ನಿರ್ಭಯಾ  ತೀರ್ಪು ಪ್ರಶ್ನಿಸಿ ದೋಷಿ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದ್ದು ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿದೆ.

    ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್‍ಎ ಬೊಬ್ಡೆ, ವಿಚಾರಣೆಯ ಪೀಠದಿಂದ ದಿಢೀರ್ ಹಿಂದೆ ಸರಿದ ಕಾರಣ ಇಂದು ಈ ಅರ್ಜಿಯ ವಿಚಾರಣೆ ನ್ಯಾಯಮೂರ್ತಿಗಳಾದ ಆರ್ ಭಾನುಮತಿ, ಅಶೋಕ್ ಭೂಷಣ್ ಮತ್ತು ಎಎಸ್ ಬೋಪಣ್ಣ ಅವರ ಪೀಠದಲ್ಲಿ ನಡೆಯಿತು.

    ಈ ಹಿಂದೆ ಜಸ್ಟೀಸ್ ಬೊಬ್ಡೆ ಅವರ ಅಣ್ಣನ ಮಗ ಅರ್ಜುನ್ ಬೊಬ್ಡೆ ನಿರ್ಭಯಾ ತಾಯಿ ಪರವಾಗಿ ವಾದ ಮಂಡನೆ ಮಾಡಿದರು. ಹೀಗಾಗಿ ವಿಚಾರಣೆ ಪಾರದರ್ಶಕವಾಗಿ ನಡೆಯಲಿ ಎನ್ನುವ ಉದ್ದೇಶದಿಂದ ಸಿಜೆ ಬೊಬ್ಡೆ ಈ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದಿದ್ದರು.

    ಏನಿದು ಪ್ರಕರಣ?
    2012ರ ಡಿ. 16ರಂದು ದೆಹಲಿಯಲ್ಲಿ 23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರಗೈದು, ಕೊಲೆ ಮಾಡಿ ದುರುಳರು ವಿಕೃತಿ ಮೆರೆದಿದ್ದರು. ಈ ಪ್ರಕರಣ ಸಂಬಂಧ ರಾಮ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ, ಅಕ್ಷಯ್ ಠಾಕೂರ್, ಮುಕೇಶ್ ಸಿಂಗ್ ಬಂಧಿಸಲಾಗಿತ್ತು. ಆದರೆ 2013ರ ಮಾರ್ಚ್ ನಲ್ಲಿ ತಿಹಾರ್ ಜೈಲಿನಲ್ಲಿಯೇ ರಾಮ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದನು. ಬಳಿಕ ಈ ದುಷ್ಟರ ಕೃತ್ಯ ಸಾಬೀತಾಗಿ, ಅವರನ್ನು ದೋಷಿಗಳು ಎಂದು ಪರಿಗಣಿಸಿ ಇನ್ನುಳಿದ ನಾಲ್ವರಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಅವರಲ್ಲಿ ಮೂವರಿಗೆ ಕ್ಷಮಾದಾನ ಕೋರುವ ಯಾವುದೇ ಅವಕಾಶ ಇರಲಿಲ್ಲ. ಆದರೆ ವಿನಯ್ ಶರ್ಮಾಗೆ ಅವಕಾಶವಿದ್ದ ಹಿನ್ನೆಲೆ ಆತ ಮಾತ್ರ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದನು.

    ಆದರೆ ಆತನ ಕ್ಷಮದಾನ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿದೆ. ಅಲ್ಲದೆ ಕೇಂದ್ರ ಗೃಹ ಸಚಿವಾಲಯ ಹಾಗೂ ರಾಷ್ಟ್ರಪತಿಗಳಿಗೂ ದೋಷಿಯ ಕ್ಷಮಾದಾನ ಅರ್ಜಿ ತಿರಸ್ಕರಿಸುವಂತೆ ಶಿಫಾರಸು ಮಾಡಿತ್ತು. 2012ರಲ್ಲಿ ನಡೆದಿದ್ದ ಈ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಅತ್ಯಾಚಾರಿಗಳ ವಿರುದ್ಧ ಸಾರ್ವಜನಿಕರು ಹೋರಾಟ, ಪ್ರತಿಭಟನೆಗಳನ್ನು ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ, ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತನ್ನಿ ಎಂಬ ಕೂಗು ಕೇಳಿಬಂದಿತ್ತು.