Tag: ನಿರ್ಮಾಣ

  • ನಿರ್ಮಾಪಕಿಯಾದ ದುನಿಯಾ ವಿಜಯ್ 2ನೇ ಪತ್ನಿ ಕೀರ್ತಿ

    ನಿರ್ಮಾಪಕಿಯಾದ ದುನಿಯಾ ವಿಜಯ್ 2ನೇ ಪತ್ನಿ ಕೀರ್ತಿ

    ದುನಿಯಾ ವಿಜಯ್ (Duniya Vijay)  ನಟನೆಯಿಂದ ನಿರ್ದೇಶಕರ ಭಡ್ತಿ ಪಡೆದಿದ್ದರೆ, ಇದೀಗ ಅವರ 2ನೇ ಪತ್ನಿ ಕೀರ್ತಿ ಗೌಡ (Keerthi Gowda) ನಿರ್ಮಾಪಕಿಯಾಗುತ್ತಿದ್ದಾರೆ. ಅರ್ಜುನ್ ಎಂಟರ್ ಟೇನ್ಮೆಂಟ್ ಹೆಸರಿನಲ್ಲಿ ನಿರ್ಮಾಣ ಸಂಸ್ಥೆಯೊಂದನ್ನು ಶುರು ಮಾಡಿದ್ದಾರೆ. ಈ ಸಂಸ್ಥೆಯ ಮೂಲಕ ಮೊದಲ ಬಾರಿಗೆ ಕಿರುಚಿತ್ರವೊಂದನ್ನು ನಿರ್ಮಾಣ ಮಾಡಿದ್ದಾರೆ.

    ಕೀರ್ತಿ ಗೌಡ ಅವರಿಗೆ ಸಿನಿಮಾ ರಂಗ ಹೊಸದೇನೂ ಅಲ್ಲ. ನಾಯಕಿಯಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟವರು. ಹಲವಾರು ಚಿತ್ರಗಳಲ್ಲೂ ನಟಿಸಿದ್ದಾರೆ. ಮದುವೆ ನಂತರ ನಟನೆಯಿಂದ ದೂರ ಉಳಿದಿದ್ದರು. ವಿಜಯ್ ಅವರ ಸಿನಿಮಾಗಳಿಗೆ ಸಹಾಯ ಮಾಡುತ್ತಿದ್ದರು. ಇದೀಗ ನಿರ್ಮಾಣಕ್ಕೆ ಮುಂದಾಗಿದ್ದಾರೆ.

    ಮೊದಲ ನಿರ್ಮಾಣದ ಕಿರುಚಿತ್ರದಲ್ಲಿ ಬುಡಕಟ್ಟು ಮಕ್ಕಳ ಶಿಕ್ಷಣದ ಕುರಿತು ವಿಷಯ ಆಯ್ಕೆ ಮಾಡಿಕೊಂಡಿದ್ದಾರಂತೆ. ಈ ಮೂಲಕ ಸಮಾಜಕ್ಕೆ ಒಂದು ಸಂದೇಶವನ್ನು ನೀಡುವಂತಹ ಕೆಲಸಕ್ಕೆ ಅವರು ಮುಂದಾಗಿದ್ದಾರೆ.

     

    ಕೀರ್ತಿ ಗೌಡ ಕೇವಲ ನಟಿ ಮಾತ್ರವಲ್ಲ, ಸಂಗೀತದಲ್ಲೂ ಅವರಿಗೆ ಆಸಕ್ತಿಯಿದೆ. ಈ ಹಿಂದೆ ಹಿಂದೂಸ್ತಾನಿ ಸಂಗೀತ ಕಲಿಯುತ್ತಿರುವ ಕುರಿತು ಅವರು ಬರೆದುಕೊಂಡಿದ್ದರು. ಜೊತೆಗೆ ವಿಜಯ್ ಅವರ ಕಷ್ಟ, ಸಂಭ್ರಮದಲ್ಲಿ ಭಾಗಿಯಾಗುವ ಮೂಲಕ  ವಿಜಯ್ ಅಭಿಮಾನಿಗಳ ಪಾಲಿಗೆ ನೆಚ್ಚಿನ ಅತ್ತಿಗೆ ಕೂಡ ಆಗಿದ್ದಾರೆ.

  • ಚಿತ್ರ ನಿರ್ಮಾಣಕ್ಕೆ ಮುಂದಾದ ಬಾಲಿವುಡ್ ನಟಿ ಕೃತಿ ಸನೋನ್

    ಚಿತ್ರ ನಿರ್ಮಾಣಕ್ಕೆ ಮುಂದಾದ ಬಾಲಿವುಡ್ ನಟಿ ಕೃತಿ ಸನೋನ್

    ದಿಪುರುಷ (Adipurush) ಚಿತ್ರದ ನಾಯಕಿ ಕೃತಿ ಸನೋನ್ (Kriti Sanon), ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಆದಿಪುರುಷ ಸಿನಿಮಾ ಬಿಡುಗಡೆಯ ಹೊತ್ತಲ್ಲಿ, ತಾವೇ ಒಂದು ಸಿನಿಮಾವನ್ನು ನಿರ್ಮಾಣ (Production) ಮಾಡುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲದೇ, ಆ ಸಿನಿಮಾದಲ್ಲಿ ತಾವೇ ನಾಯಕಿಯಾಗಿ ನಟಿಸುತ್ತೇನೆ ಎಂದೂ ಸ್ಪಷ್ಟಪಡಿಸಿದ್ದಾರೆ.

    ಸಿನಿಮಾ ಯಾರದೇ ಆಗಿರಲಿ, ಅಲ್ಲಿ ನಾಯಕಿಯರಿಗೆ ಸಿಗಬೇಕಾದ ಅವಕಾಶ ಸಿಗುವುದಿಲ್ಲ ಎಂದು ಈ ಹಿಂದೆ ಕೃತಿ ಹೇಳಿಕೊಂಡಿದ್ದರು. ನಾಯಕನಷ್ಟೇ ತಮಗೂ ನ್ಯಾಯ ಸಿಗಬೇಕು ಎಂದೂ ಅವರು ಮಾತನಾಡಿದ್ದರು. ಈ ಹೊತ್ತಿನಲ್ಲೇ ಸಿನಿಮಾ ನಿರ್ಮಾಣದ ಘೋಷಣೆ ಮಾಡಿದ್ದು, ತಮ್ಮಿಷ್ಟದಂತೆ ಚಿತ್ರವನ್ನು ಅವರು ತಯಾರಿಸಲಿದ್ದಾರೆ. ಇದನ್ನೂ ಓದಿ:ಮೊದಲ ವರ್ಷದ ವಿವಾಹ ಸಂಭ್ರಮದಲ್ಲಿ ‘ಸ್ವಯಂವಿವಾಹಿತೆ’ ಕ್ಷಮಾ ಬಿಂದು

    ಸಿನಿಮಾ ರಂಗದಲ್ಲಿ ಮಹಿಳಾ ಪಾತ್ರಗಳಿಗಿಂತ ಪುರುಷ ಪಾತ್ರಗಳೇ ತೆರೆಯ ಮೇಲೆ ಹೆಚ್ಚು ಕಾಣಿಸಿಕೊಳ್ಳುತ್ತವೆ. ನಾಯಕಿಯರಿಗೆ ಹೆಚ್ಚು ಪ್ರಾಶಸ್ತ್ಯ ಇರುವುದಿಲ್ಲ. ಸಿಕ್ಕಿರುವ ಕಡಿಮೆ ಅವಧಿಯಲ್ಲೇ ನಮ್ಮ ಪ್ರತಿಭೆಯನ್ನು ತೋರಿಸುವಂತಹ ಅನಿವಾರ್ಯತೆ ಇರುತ್ತದೆ. ನನಗೆ ಈವರೆಗೂ ಸಿಕ್ಕಿರುವ ಪಾತ್ರಗಳು ಅಂಥದ್ದೇ ಆಗಿವೆ. ಅದರಲ್ಲಿಯೇ ನಾನು ತೃಪ್ತಿ ಪಟ್ಟಿದ್ದೇನೆ ಎಂದಿದ್ದರು ಕೃತಿ ಸನೋನ್.

    ಸಂದರ್ಶನವೊಂದರಲ್ಲಿ ಮಾತನಾಡಿದ್ದ ಅವರು, “ಯಾವುದೇ ಸಿನಿಮಾ ರಂಗದಲ್ಲಿ ನಾಯಕ ಮತ್ತು ನಾಯಕಿಗೆ ಸಮಾನವಾಗಿ ಸ್ಕ್ರೀನ್ ಸ್ಪೇಸ್ ಹಂಚಿಕೊಳ್ಳಲು ಅವಕಾಶ ಸಿಗುವುದು ಕಡಿಮೆ. ಕಥೆಯಲ್ಲಿ ಮಹಿಳೆಗೆ ಹೆಚ್ಚಿನ ಮಹತ್ವವಿದ್ದು ಪುರುಷನಿಗೆ ಕಡಿಮೆ ಇದ್ದರೆ, ಯಾವ ನಟನೂ ಅಂತಹ ಪಾತ್ರಗಳನ್ನು ಒಪ್ಪಿಕೊಳ್ಳುವುದಿಲ್ಲ. ಈ ಮನಸ್ಥಿತಿ ಚಿತ್ರರಂಗದಲ್ಲಿ ಬದಲಾಗಬೇಕು ಎಂದು ನಾನು ಬಯಸುತ್ತೇನೆ. ಕೆಲವರು ಇದಕ್ಕೆ ಅಪವಾದವಾಗಿಯೂ ಇರುತ್ತಾರೆ ಎಂದು ಅವರು ಮಾತನಾಡಿದ್ದರು.

    ಮುಂದುವರೆದು ಮಾತನಾಡಿದ್ದ ಕೃತಿ, ‘ಬರೇಲಿ ಕಿ ಬರ್ಫಿ’ ಚಿತ್ರದ ನಂತರ ನಾನು ಅನೇಕ ಕಥೆಗಳನ್ನು ಕೇಳಿದೆ. ನನ್ನ ಬಳಿ ಬಂದ ಸಿನಿಮಾಗಳಲ್ಲಿ ಶೇ.99ರಷ್ಟು ಸಿನಿಮಾಗಳಲ್ಲಿ ನನ್ನದು ಸಣ್ಣ ಪಾತ್ರವೇ ಆಗಿರುತ್ತಿತ್ತು. ಕೆಲವನ್ನು ಒಪ್ಪಿದೆ, ಕೆಲವನ್ನು ಬಿಟ್ಟೆ. ಮಾಡಿದ ಪಾತ್ರಗಳಿಂದಾಗಿ ಈಗ ಜನರು ನನ್ನನ್ನು ಗುರುತಿಸುತ್ತಿದ್ದಾರೆ. ಅದು ನನಗೆ ಖುಷಿ ತಂದಿದೆ ಎಂದಿರುವ ಕೃತಿ. ಈ ಎಲ್ಲ ನೋವುಗಳನ್ನು ಮರೆಯಲು ತಾವೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

  • ಒಂದೇ ಸಿನಿಮಾದಲ್ಲಿ ರಜನಿಕಾಂತ್-ಕಮಲ್ ಹಾಸನ್

    ಒಂದೇ ಸಿನಿಮಾದಲ್ಲಿ ರಜನಿಕಾಂತ್-ಕಮಲ್ ಹಾಸನ್

    ಮಿಳು ಸಿನಿಮಾ ರಂಗದಿಂದ ಭರ್ಜರಿ ಸುದ್ದಿಯೊಂದು ಸಿಕ್ಕಿದೆ. ಇಬ್ಬರು ಹೆಸರಾಂತ ಸ್ಟಾರ್ ನಟರು ಒಂದೇ ಸಿನಿಮಾಗಾಗಿ ಕೆಲಸ ಮಾಡುತ್ತಿದ್ದಾರೆ. ಈ ಸುದ್ದಿ ಅಭಿಮಾನಿಗಳ ಪಾಲಿಗೆ ಹಬ್ಬದಂತಿದೆ. ಹೌದು, ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಹಾಗೂ ಹೆಸರಾಂತ ಸ್ಟಾರ್ ನಟ ಕಮಲ್ ಹಾಸನ್ (Kamal Haasan) ಒಂದೇ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ಒಬ್ಬರು ನಟರಾಗಿದ್ದರೆ ಮತ್ತೊಬ್ಬರು ನಿರ್ಮಾಪಕರಾಗಲಿದ್ದಾರೆ.

    ಹೌದು, ಮೊನ್ನೆಯಷ್ಟೇ ಇಂಥದ್ದೊಂದು ಸಿಹಿ ಸುದ್ದಿಯನ್ನು ಕಮಲ್ ಹಾಸನ್ ಹಂಚಿಕೊಂಡಿದ್ದು, ರಜನಿಕಾಂತ್ ಆಗಿ ಸಿನಿಮಾವೊಂದನ್ನು ನಿರ್ಮಾಣ ಮಾಡಬೇಕಿದೆ. ಈ ಕುರಿತು ಮಾತುಕತೆ ನಡೆಯುತ್ತಿದೆ ಎಂದು ಹೇಳಿಕೊಂಡಿದ್ದಾರೆ. ತಲೈವ ಸದ್ಯ ಜೈಲರ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರ 170ನೇ ಸಿನಿಮಾ ಅನೌನ್ಸ್ ಕೂಡ ಆಗಿದೆ. ಈ ಸಂಭ್ರಮದಲ್ಲಿ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ ಕಮಲ್.

    ಒಂದು ಕಡೆ ಕಮಲ್ ಹಾಸನ್ ಮತ್ತು ರಜನಿಕಾಂತ್ ಒಂದು ಗೂಡುತ್ತಿದ್ದರೆ, ಮತ್ತೊಂದು ಕಡೆ  ಕಾಲಿವುಡ್ ಸೂಪರ್ ಸ್ಟಾರ್ ತಲೈವಾ ಮುಂದೆ ಅಬ್ಬರಿಸಲು ಸ್ಟಾರ್ ನಟನಿಗೆ ಮಣೆ ಹಾಕಿದ ಸುದ್ದಿಯೂ ಬಂದಿದೆ. ರಜನಿ 170ನೇ ಚಿತ್ರಕ್ಕೆ ಚಿಯಾನ್ ವಿಕ್ರಮ್ (Vikram Chian)  ಎಂಟ್ರಿ ಕೊಡುತ್ತಿದ್ದಾರೆ. ತಲೈವಾಗೆ ವಿಲನ್ ಆಗಿ ಖಡಕ್ ಆಗಿ ನಟಿಸಲಿದ್ದಾರೆ. ಇದನ್ನೂ ಓದಿ:ಪಿಎಚ್‌ಡಿ ಪ್ರವೇಶ ಪರೀಕ್ಷೆ ಬರೆದ ನಟಿ ಪವಿತ್ರಾ ಲೋಕೇಶ್

    ವಿಕ್ರಮ್ ಅವರು ಕಾಲಿವುಡ್‌ನ ಬೇಡಿಕೆಯ ಹೀರೋ. ವೃತ್ತಿ ಜೀವನದಲ್ಲಿ ಅವರು ಹಲವು ಡಿಫರೆಂಟ್ ರೋಲ್‌ಗಳನ್ನು ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಹಾಗಾಗಿ ವಿಲನ್ (Villain) ಪಾತ್ರ ಮಾಡಲು ತಲೈವಾ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅದಕ್ಕಾಗಿ 50 ಕೋಟಿ ರೂಪಾಯಿ ಪೇಮೆಂಟ್ ಪಡೆದಿದ್ದಾರೆ ಎನ್ನಲಾಗುತ್ತಿದೆ.

     

    ‘ತಲೈವರ್ 170’ನೇ ಚಿತ್ರಕ್ಕೆ ಟಿಜಿ ಜ್ಞಾನವೇಲ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಲೈಕಾ ಪ್ರೊಡಕ್ಷನ್ (Lyca Productions)  ಬಂಡವಾಳ ಹೂಡುತ್ತಿದೆ. ತಮಿಳುನಾಡಿನಲ್ಲಿ ಹಲವು ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಿಸಿದ ಖ್ಯಾತಿ ಲೈಕಾ ಈಗ ರಜನಿಕಾಂತ್ 170ನೇ ಚಿತ್ರ ನಿರ್ಮಾಣ¨ ಮಾಡ್ತಿದ್ದಾರೆ.

  • ಮಲ್ಟಿಸ್ಟಾರ್ ಸಿನಿಮಾಗೆ ಹಣ ಹೂಡಲಿದ್ದಾರೆ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ

    ಮಲ್ಟಿಸ್ಟಾರ್ ಸಿನಿಮಾಗೆ ಹಣ ಹೂಡಲಿದ್ದಾರೆ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ

    ಭಾರತದ ಕ್ರಿಕೆಟ್ ತಂಡ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ (Mahendra Singh Dhoni) ಈಗಾಗಲೇ ಹಲವು ಉದ್ಯಮಗಳಲ್ಲಿ ಹಣ ಹೂಡಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇದೀಗ ಸಿನಿಮಾ (Cinema) ಕ್ಷೇತ್ರಕ್ಕೂ ಅವರು ಕಾಲಿಟ್ಟಿದ್ದು, ದಕ್ಷಿಣದ ಸಿನಿಮಾಗಳತ್ತ ಒಲವು ತೋರಿದ್ದಾರೆ. ಈಗಾಗಲೇ ತಮ್ಮದೇ ಪ್ರೊಡಕ್ಷನ್ (Production) ಹೌಸ್ ಶುರು ಮಾಡಿರುವ ಧೋನಿ, ಮೊದಲು ತಮಿಳು ಚಿತ್ರಕ್ಕೆ ಹಣ ಹಾಕಲಿದ್ದಾರಂತೆ.

    ಧೋನಿ ಸಿನಿಮಾ ರಂಗಕ್ಕೆ ಬರುತ್ತಾರೆ ಎನ್ನುವುದು ಹಲವು ದಿನಗಳಿಂದ ಕೇಳಿ ಬರುತ್ತಿರುವ ಸುದ್ದಿ. ಇದೀಗ ಆ ಸುದ್ದಿ ಪಕ್ಕಾ ಆಗಿದ್ದು, ತಮ್ಮ ಚೊಚ್ಚಲು ನಿರ್ಮಾಣದ ಚಿತ್ರದಲ್ಲಿ ಇಬ್ಬರು ಸ್ಟಾರ್ ನಟರು ಇರಲಿದ್ದಾರೆ ಎಂದು ಗೊತ್ತಾಗಿದೆ. ಈಗಾಗಲೇ ದಕ್ಷಿಣದಲ್ಲಿ ಸ್ಟಾರ್ ನಟರಾಗಿ ಗುರುತಿಸಿಕೊಂಡಿರುವ ಇಬ್ಬರು ಕಲಾವಿದರ ಜೊತೆ ಧೋನಿ ಮಾತನಾಡಿದ್ದು, ಅವರ ಹೆಸರನ್ನು ಮಾತ್ರ ಬಹಿರಂಗಗೊಳಿಸಿಲ್ಲ. ಇದನ್ನೂ ಓದಿ:ಮೊನ್ನೆ ತುಟಿ, ಈಗ ಮಚ್ಚೆ ನೋಡಿ ಭವಿಷ್ಯ ಹೇಳಿದ ಆರ್ಯವರ್ಧನ್ ಗುರೂಜಿ

    ಈ ಹಿಂದೆ ನಯನತಾರಾ ಸಿನಿಮಾಗಾಗಿ ಧೋನಿ ಹಣ ಹೂಡಲಿದ್ದಾರೆ ಎಂದು ಹೇಳಲಾಗಿತ್ತು. ಅದೊಂದು ಮಹಿಳಾ ಪ್ರಧಾನ ಸಿನಿಮಾ ಎನ್ನುವ ಮಾಹಿತಿಯೂ ಇತ್ತು. ಆದರೆ, ಆ ಸಿನಿಮಾ ಡ್ರಾಪ್ ಆದಂತೆ ಕಾಣುತ್ತಿದೆ. ಅಥವಾ ಅದು ಗಾಸಿಪ್ ಆಗಿರಬಹುದು.  ಇದೀಗ ಪಕ್ಕಾ ಸುದ್ದಿ ಬಂದಿದ್ದು, ಮಲ್ಟಿಸ್ಟಾರ್ ಸಿನಿಮಾ ಮೂಲಕ ಧೋನಿ ನಿರ್ಮಾಪಕರಾಗುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಅಧಿಕೃತವಾಗಿಯೇ ಕೆಲವು ಮಾಹಿತಿಗಳನ್ನು ಅವರು ಹಂಚಿಕೊಳ್ಳಲಿದ್ದಾರಂತೆ.

    Live Tv
    [brid partner=56869869 player=32851 video=960834 autoplay=true]

  • ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಇದೀಗ ನಿರ್ಮಾಪಕಿ: ಗಣೇಶ ಹಬ್ಬಕ್ಕೆ ಅಭಿಮಾನಿಗಳಿಗೆ ಆಪಲ್ ಬಾಕ್ಸ್ ಗಿಫ್ಟ್

    ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಇದೀಗ ನಿರ್ಮಾಪಕಿ: ಗಣೇಶ ಹಬ್ಬಕ್ಕೆ ಅಭಿಮಾನಿಗಳಿಗೆ ಆಪಲ್ ಬಾಕ್ಸ್ ಗಿಫ್ಟ್

    ಗಣೇಶ ಹಬ್ಬದಂದು ಬುಧವಾರ ಬೆಳಗ್ಗೆ 11.15ಕ್ಕೆ ಸ್ವೀಟ್ ನ್ಯೂಸ್ ಕೊಡುವುದಾಗಿ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಕುತೂಹಲ ಮೂಡಿಸಿದ್ದರು. ಸಿಹಿ ಸುದ್ದಿ ಯಾವುದಿರಬಹುದು ಎಂದು ಅಭಿಮಾನಿಗಳು ಕಾಯುತ್ತಿದ್ದರು. ಕೊನೆಗೂ ರಮ್ಯಾ ಸಿಹಿ ಸುದ್ದಿ ಕೊಟ್ಟಿದ್ದಾರೆ. ಇದೇ ಮೊದಲ ಬಾರಿಗೆ ನಿರ್ಮಾಪಕಿಯಾಗಿ ಸ್ಯಾಂಡಲ್ ವುಡ್ ಪ್ರವೇಶ ಮಾಡಿದ್ದಾರೆ. ಈವರೆಗೂ ಬೇರೆಯವರ ಬ್ಯಾನರ್ ನಲ್ಲಿ ನಟಿಸುತ್ತಿದ್ದ ರಮ್ಯಾ, ಸ್ವತಃ ತಮ್ಮದೇ ಬ್ಯಾನರ್ ಶುರು ಮಾಡಿ ಅಚ್ಚರಿ ಮೂಡಿಸಿದ್ದಾರೆ.

    ರಮ್ಯಾ ಕೊಡುವ ಸ್ವೀಟ್ ನ್ಯೂಸ್ ಯಾವುದು ಎನ್ನುವುದರ ಸುತ್ತ ಹಲವು ವಿಶ್ಲೇಷಣೆಗಳು ನಡೆದಿದ್ದವು. ನಟಿಯಾಗಿ ಅವರು ವಾಪಸ್ಸಾಗುತ್ತಿದ್ದಾರಾ? ಅಥವಾ ನಿರ್ಮಾಪಕಿಯಾಗಿ ನಿರ್ಮಾಣ ಸಂಸ್ಥೆಯನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರಾ ಎನ್ನುವ ಕುತೂಹಲ ಮೂಡಿಸಿತ್ತು. ಕೊನೆಗೂ ರಮ್ಯಾ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ತಮ್ಮದೇ ಆಪಲ್ ಬಾಕ್ಸ್ ಸ್ಟುಡಿಯೋಸ್ ಸಂಸ್ಥೆಯನ್ನು ಶುರು ಮಾಡಿದ್ದು, ಈ ಸಂಸ್ಥೆಯ ಮೂಲಕ ಸಿನಿಮಾ ಮಾಡಲಿದ್ದಾರೆ. ಈ ಸಂಸ್ಥೆಯ ಮೂಲಕ ಎರಡು ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿರುವುದಾಗಿಯೂ ತಿಳಿಸಿದ್ದಾರೆ. ಇದನ್ನೂ ಓದಿ:ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ‘ಗಂಡುಮಗ’ ಎಂದು ಹಾಡಿ ಹೊಗಳಿದ ಜಗ್ಗೇಶ್

    ಈ ಹಿಂದೆ ರಾಜ್ ಬಿ ಶೆಟ್ಟಿ ಅವರ ಸಿನಿಮಾದ ಮೂಲಕ ರಮ್ಯಾ ಸಿನಿಮಾ ರಂಗಕ್ಕೆ ಕಮ್ ಬ್ಯಾಕ್ ಆಗಲಿದ್ದಾರೆ ಎನ್ನುವ ಸುದ್ದಿ ಇತ್ತು. ಆದರೆ, ಇಂಥದ್ದೊಂದು ಮಾತುಕತೆ ನಡೆದೇ ಇಲ್ಲ ಎಂದೂ ಹೇಳಲಾಗುತ್ತಿದೆ. ರಾಜ್ ಬಿ ಶೆಟ್ಟಿ ಅವರು ರಮ್ಯಾಗಾಗಿ ಯಾವುದೇ ಸಿನಿಮಾ ಮಾಡುತ್ತಿಲ್ಲ ಎನ್ನುವ ಮಾಹಿತಿಯೂ ಇದೆ. ಹಾಗಾಗಿ ರಮ್ಯಾ ಬ್ಯಾನರ್ ನಲ್ಲಿ ಬರುವ ಮೊದಲ ಸಿನಿಮಾ ಯಾವುದು ಎನ್ನುವ ಕುತೂಹಲ ಮೂಡಿದೆ.

    Live Tv
    [brid partner=56869869 player=32851 video=960834 autoplay=true]

  • ನಾಳೆ ರಮ್ಯಾ ಕೊಡುವ ಗುಡ್ ನ್ಯೂಸ್ ಏನು? ನಿರ್ಮಾಣ ಸಂಸ್ಥೆ ಶುರು ಮಾಡ್ತಿದ್ದಾರಂತೆ ಸ್ಯಾಂಡಲ್ ವುಡ್ ಕ್ವೀನ್

    ನಾಳೆ ರಮ್ಯಾ ಕೊಡುವ ಗುಡ್ ನ್ಯೂಸ್ ಏನು? ನಿರ್ಮಾಣ ಸಂಸ್ಥೆ ಶುರು ಮಾಡ್ತಿದ್ದಾರಂತೆ ಸ್ಯಾಂಡಲ್ ವುಡ್ ಕ್ವೀನ್

    ನಾಳೆ ಬೆಳಗ್ಗೆ 11.30ಕ್ಕೆ ಸ್ವೀಟ್ ನ್ಯೂಸ್ ಕೊಡುವುದಾಗಿ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಸೋಷಿಯಲ್ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ. ಸ್ವೀಟ್ ನ್ಯೂಸ್ ಯಾವುದು ಎಂಬುದರ ಕುರಿತು ಸ್ಯಾಂಡಲ್ ವುಡ್ ನಲ್ಲಿ ಈಗಾಗಲೇ ಸಖತ್ ಚರ್ಚೆ ನಡೆಯುತ್ತಿದ್ದು, ರಮ್ಯಾ ನಡೆ ಭಾರೀ ಕುತೂಹಲವನ್ನಂತೂ ಮೂಡಿಸಿದೆ.

    ರಮ್ಯಾ ಕೊಡುವ ಸ್ವೀಟ್ ನ್ಯೂಸ್ ಯಾವುದು ಎನ್ನುವುದರ ಸುತ್ತ ಹಲವು ವಿಶ್ಲೇಷಣೆಗಳು ನಡೆದಿದ್ದು, ನಟಿಯಾಗಿ ಅವರು ವಾಪಸ್ಸಾಗುತ್ತಿದ್ದಾರಾ? ಅಥವಾ ನಿರ್ಮಾಪಕಿಯಾಗಿ ನಿರ್ಮಾಣ ಸಂಸ್ಥೆಯನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರಾ ಎನ್ನುವ ಕುತೂಹಲ ಮೂಡಿದೆ. ರಮ್ಯಾ ಅವರ ಆಪ್ತರ ಪ್ರಕಾರ ನಾಳೆ ರಮ್ಯಾ ಅವರು ತಮ್ಮ ನಿರ್ಮಾಣ ಸಂಸ್ಥೆಯನ್ನು ಪರಿಚಯಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ‘ಗಂಡುಮಗ’ ಎಂದು ಹಾಡಿ ಹೊಗಳಿದ ಜಗ್ಗೇಶ್

    ಈ ಹಿಂದೆ ರಾಜ್ ಬಿ ಶೆಟ್ಟಿ ಅವರ ಸಿನಿಮಾದ ಮೂಲಕ ರಮ್ಯಾ ಸಿನಿಮಾ ರಂಗಕ್ಕೆ ಕಮ್ ಬ್ಯಾಕ್ ಆಗಲಿದ್ದಾರೆ ಎನ್ನುವ ಸುದ್ದಿ ಇತ್ತು. ಆದರೆ, ಇಂಥದ್ದೊಂದು ಮಾತುಕತೆ ನಡೆದೇ ಇಲ್ಲ ಎಂದೂ ಹೇಳಲಾಗುತ್ತಿದೆ. ರಾಜ್ ಬಿ ಶೆಟ್ಟಿ ಅವರು ರಮ್ಯಾಗಾಗಿ ಯಾವುದೇ ಸಿನಿಮಾ ಮಾಡುತ್ತಿಲ್ಲ ಎನ್ನುವ ಮಾಹಿತಿಯೂ ಇದೆ. ಹಾಗಾಗಿ ರಮ್ಯಾ ಬ್ಯಾನರ್ ನಲ್ಲಿ ಬರುವ ಮೊದಲ ಸಿನಿಮಾ ಯಾವುದು ಎನ್ನುವ ಕುತೂಹಲ ಮೂಡಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿ ನೂತನ ಆಮ್ಲಜನಕ ಘಟಕ ನಿರ್ಮಾಣಕ್ಕೆ ಕೈಗಾರಿಕಾ ಇಲಾಖೆಯಿಂದ ವಿಶೇಷ ರಿಯಾಯಿತಿ: ಶೆಟ್ಟರ್

    ರಾಜ್ಯದಲ್ಲಿ ನೂತನ ಆಮ್ಲಜನಕ ಘಟಕ ನಿರ್ಮಾಣಕ್ಕೆ ಕೈಗಾರಿಕಾ ಇಲಾಖೆಯಿಂದ ವಿಶೇಷ ರಿಯಾಯಿತಿ: ಶೆಟ್ಟರ್

    – ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕೆಲವೇ ದಿನಗಳಲ್ಲಿ ಘೋಷಣೆ  

    ಬೆಂಗಳೂರು: ರಾಜ್ಯದಲ್ಲಿ ನೂತನ ಆಮ್ಲಜನಕ ಘಟಕ ನಿರ್ಮಾಣಕ್ಕೆ ಕೈಗಾರಿಕಾ ಇಲಾಖೆಯಿಂದ ವಿಶೇಷ ರಿಯಾಯಿತಿ ದೊರಯಲಿದೆ. ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕೆಲವೇ ದಿನಗಳಲ್ಲಿ ಘೋಷಣೆಯಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಹಾಗೂ ರಾಜ್ಯ ಆಮ್ಲಜನಕ ಸರಬರಾಜು ಮತ್ತು ಉತ್ಪಾದನೆ ಉಸ್ತುವಾರಿ ಶ್ರೀ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಇದನ್ನೂ ಓದಿ: ಕೆಲವೊಂದಕ್ಕೆ ವಿನಾಯಿತಿ ನೀಡಿ ಲಾಕ್‍ಡೌನ್ ವಿಸ್ತರಣೆ – ಸಿಎಂ ಬಿಎಸ್‍ವೈ

    ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?
    ಆಮ್ಲಜನಕ ಘಟಕ ನಿರ್ಮಾಣ ಪ್ರಾರಂಭಿಸಲು ಉದ್ಯಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯಿಂದ ವಿಶೇಷ ರಿಯಾಯಿತಿ ಪ್ರಸ್ತಾವನೆಯನ್ನು ರಚಿಸಲಾಗಿದ್ದು ಆರ್ಥಿಕ ಇಲಾಖೆಯ ಪರಾಮರ್ಶೆಗೆ ಕಳುಹಿಸಲಾಗಿದೆ. ಆರ್ಥಿಕ ಇಲಾಖೆಯ ಅನುಮತಿಯ ನಂತರ ಇನ್ನು ಕೆಲವೇ ದಿನಗಳಲ್ಲಿ ಆಗಲಿದೆ. ಬೆಂಗಳೂರಿನ ವಿಧಾನಸೌಧದಲ್ಲಿಂದು ರಾಜ್ಯ ಆಮ್ಲಜನಕ ಉತ್ಪಾದನೆ ಮತ್ತು ಸರಬರಾಜು ಸಂಬಂಧವಾಗಿ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ನಂತರ ಮಾತನಾಡಿದರು. ರಾಜ್ಯದಲ್ಲಿ ಆಮ್ಲಜನಕದ ಪರಿಸ್ಥಿತಿ ಸುಧಾರಿಸುತ್ತಿದೆ. ಕೇಂದ್ರ ಸರಕಾರದ ಸಹಕಾರದಿಂದ ಹಾಗೂ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆ ಆಗುತ್ತಿರುವ ನಿಟ್ಟಿನಲ್ಲಿ ಆಮ್ಲಜನಕದ ಬೇಡಿಕೆ ನಿಧಾನವಾಗಿ ತಗ್ಗುತ್ತಿದೆ. ತಜ್ಞರ ಅಂದಾಜಿನಂತೆ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ರಾಜ್ಯ ವನ್ನು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬಿ ಮಾಡುವುದು ನಮ್ಮ ಗುರಿಯಾಗಿದೆ ಎಂದರು.

    ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೊಸದಾಗಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಪ್ರಾರಂಭಿಸುವ ಉದ್ಯಮಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿಶೇಷ ರಿಯಾಯಿತಿಯ ಪ್ರಸ್ತಾವನೆಯನ್ನು ಕೈಗಾರಿಕಾ ಇಲಾಖೆಯ ವತಿಯಿಂದ ರಚಿಸಲಾಗಿದ್ದು ಆರ್ಥಿಕ ಇಲಾಖೆಯ ಪರಾಮರ್ಶೆಗೆ ಕಳುಹಿಸಿಕೊಡಲಾಗಿದೆ. ಅಲ್ಲದೆ, ಈ ಬಗ್ಗೆ ಇಂದು ಸನ್ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚೆಯನ್ನು ನಡೆಸಿದ್ದೇವೆ. ಇನ್ನು ಕೆಲವೇ ದಿನಗಳಲ್ಲಿ ಈ ಬಗ್ಗೆ ವಿಶೇಷ ವಿಶೇಷ ಸೌಲಭ್ಯದ ಬಗ್ಗೆ ಅಧಿಕೃತ ಘೋಷಣೆಯನ್ನು ಮಾಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ:1200 ರೂಪಾಯಿಗೆ ಡಿಎಪಿ ಗೊಬ್ಬರ – ಜೋಶಿ ಮನವಿಗೆ ಸ್ಪಂದಿಸಿದ ಸರ್ಕಾ

    ಜಿಂದಾಲ್‍ಗೆ ನೋಟೀಸ್:
    ರಾಜ್ಯಕ್ಕೆ ನೀಡಬೇಕಾಗಿದ್ದ ದ್ರವೀಕೃತ ಆಮ್ಲಜನಕವನ್ನು ಜಿಂದಾಲ್ ನಿನ್ನೆ ನೀಡಿರಲಿಲ್ಲ. ಇದರಿಂದ ರಾಜ್ಯದಿಂದ ಲಭ್ಯವಾಗಬೇಕಾಗಿದ್ದ 830 ಎಂ.ಟಿ ಗಳಲ್ಲಿ ನಮಗೆ ದೊರಕಿದ್ದು ಕೇವಲ 386 ಎಂ.ಟಿಗಳಷ್ಟು ಮಾತ್ರ. ಕೆಲವು ತಾಂತ್ರಿಕ ಸಮಸ್ಯೆಗಳನ್ನು ಮುಂದಿಟ್ಟು ಈ ಸಂಕಷ್ಟದ ಸಮಯದಲ್ಲಿ ಆಮ್ಲಜನಕ ನೀಡದೇ ಇರುವುದರ ಬಗ್ಗೆ ನಿನ್ನೆ ಜಿಂದಾಲ್ ಗೆ ನೋಟೀಸ್ ನೀಡಲಾಗಿದ್ದು, ಪ್ರತಿಕ್ರಿಯೆಗೆ ಕಾಯುತ್ತಿದ್ದೇವೆ. ಇನ್ನು ಮುಂದೆ ಇಂತಹ ಘಟನೆಗಳು ಆಗದ ರೀತಿಯಲ್ಲಿ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

    ರಾಜ್ಯದಲ್ಲಿನ ಆಮ್ಲಜನಕ ಘಟಕಗಳ ಸ್ಥಾಪನೆ:
    ಕೇಂದ್ರ, ರಾಜ್ಯ ಮತ್ತು ಹಲವಾರು ಸಾರ್ವಜನಿಕ ಸಂಸ್ಥೆಗಳು ಘಟಕ ಸ್ಥಾಪನೆಗೆ ಮುಂದಾಗಿವೆ. ಆದರೆ, ಅದರ ಸ್ಥಾಪನೆ ಕಾರ್ಯಗಳನ್ನು ಚುರುಕುಗೊಳಿಸುವುದರತ್ತ ಹೆಚ್ಚಿನ ಗಮನ ಬೇಕಾಗಿದೆ. ಈ ನಿಟ್ಟಿನಲ್ಲಿ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

    ಸರಕಾರಿ ಆಸ್ಪತ್ರೆಗಳನ್ನು ಸ್ವಾವಲಂಬಿನೆ:
    ಸರಕಾರಿ ಆಸ್ಪತ್ರೆಗಳನ್ನು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬಿಗೊಳಿಸಬೇಕಾಗಿದೆ. ಹೊರಗಿನಿಂದ ಬರುವ ಆಮ್ಲಜನಕವನ್ನು ನಂಬಿಕೊಳ್ಳುವುದರ ಜೊತೆಯಲ್ಲಿಯೇ ಅವುಗಳು ಸ್ವತಃ ಆಮ್ಲಜನಕ ಉತ್ಪಾದನೆ ಮಾಡಿದಲ್ಲಿ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಯೋಜನೆ ರೂಪಿಸುವಂತೆ ಸೂಚನೆ ನೀಡಿದರು.

    ಸಭೆಯಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಾಜ್ ಕುಮಾರ್ ಖತ್ರಿ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಆರೋಗ್ಯ ಇಲಾಖೆ ಜಾವೇದ್ ಆಖ್ತರ್, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣಾ, ಆಕ್ಸಿಜನ್ ಸರಬರಾಜು ಸಮಿತಿಯ ನೇತೃತ್ವ ವಹಿಸಿರುವ ಹಿರಿಯ ಐಎಎಸ್ ಅಧಿಕಾರಿ ಮೌನಿಶ್ ಮೌದ್ಗಿಲ್, ಆಕ್ಸಿಜನ್ ಸರಬರಾಜು ಸಮಿತಿಯ ನೇತೃತ್ವ ವಹಿಸಿರುವ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ, ಕೆಐಎಡಿಬಿ ಸಿಇಓ ಡಾ ಶಿವಶಂಕರ್, ಡ್ರಗ್ಸ್ ಕಂಟ್ರೋಲರ್ ಅಮರೇಶ್ ತುಬಗಿ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

  • ಹಿಂದೂ ದೇವಾಲಯ ನಿರ್ಮಾಣಕ್ಕೆ ಕೋಟಿಗಟ್ಟಲೇ ಹಣ ನೀಡಿದ ಪಾಕಿಸ್ತಾನ

    ಹಿಂದೂ ದೇವಾಲಯ ನಿರ್ಮಾಣಕ್ಕೆ ಕೋಟಿಗಟ್ಟಲೇ ಹಣ ನೀಡಿದ ಪಾಕಿಸ್ತಾನ

    ಇಸ್ಲಾಮಬಾದ್: ಹಿಂದೂ ದೇವಾಲಯಗಳ ಮರು ನಿರ್ಮಾಣಕ್ಕಾಗಿ 3.48 ಕೋಟಿ ರೂಪಾಯಿಗಳನ್ನು ಖೈಬರ್ ಪಕ್ತುನ್ಖ್ವಾ ಪ್ರಾಂತೀಯ ಸರ್ಕಾರ ಬಿಡುಗಡೆ ಮಾಡಿದೆ.

    ಕಳೆದ ವರ್ಷ ಡಿಸೆಂಬರ್‍ನಲ್ಲಿ ಕೆಲವು ಸ್ಥಳೀಯ ಸಂಘಟನೆಗಳ ಗುಂಪಿನಿಂದ ದೇವಾಲಯಗಳು ಹಾನಿಗೊಳಗಾಗಿದ್ದವು. ಖೈಬರ್ ಪಕ್ತುನ್ಖ್ವಾ ಕರಾಕ್ ಜಿಲ್ಲೆಯ ಟೆರ್ರಿ ಗ್ರಾಮದಲ್ಲಿ ಪರಮಹಂಸಜೀ ಮಹಾರಾಜ್ ಅವರ ಸಮಾಧಿಯನ್ನು ಧ್ವಂಸ ಮಾಡಲಾಗಿತ್ತು.

    ಶತಮಾನಗಳಷ್ಟು ಹಳೆಯದಾದ ದೇವಾಲಯ ಮತ್ತು ಅದರ ಪಕ್ಕದ ಸಮಾಧಿ ಮೇಲೆ ನಡೆದ ದಾಳಿಗೆ ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮುಖಂಡರಿಂದ ತೀವ್ರ ಖಂಡನೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ದೇವಾಯಲಯ ಪುನರ್ ನಿರ್ಮಾಣ ಮಾಡಬೇಕೆಂದು ಅಲ್ಲಿನ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

    ದೇಗುಲ ನಿರ್ಮಾಣ ಶೀಘ್ರವಾಗಿ ಪೂರ್ಣಗೊಳಿಸುವಂತೆ ನ್ಯಾಯಾಲಯ ಪ್ರಾಂತೀಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಈಗ ಖೈಬರ್ ಪಕ್ತುನ್ಖ್ವಾ ಪ್ರಾಂತೀಯ ಸರ್ಕಾರ ದೇವಾಲಯ ಮರು ನಿರ್ಮಾಣ ಕಾರ್ಯಕ್ಕಾಗಿ ಔಕಾಫ್ ಇಲಾಖೆಗೆ 3,48,29,000 ಹಣವನ್ನು ನೀಡಿದೆ ಎಂದು ತಿಳಿದು ಬಂದಿದೆ.

  • ನಿರ್ಮಾಣ ಹಂತದ ಫ್ಲೈ ಓವರ್ ಕುಸಿತ – 3 ಕಾರ್ಮಿಕರು ಗಂಭೀರ

    ನಿರ್ಮಾಣ ಹಂತದ ಫ್ಲೈ ಓವರ್ ಕುಸಿತ – 3 ಕಾರ್ಮಿಕರು ಗಂಭೀರ

    ಚಂಡೀಗಢ: ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದ ಪರಿಣಾಮ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ.

    ಗುರುಗ್ರಾಮ-ದ್ವಾರಕಾ ಎಕ್ಸ್ ಪ್ರೆಸ್ ವೇ ಬಳಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದುಬಿದ್ದಿದೆ. ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ದೌಲತಾಬಾದ್ ಬಳಿ ಗುರುಗ್ರಾಮ-ದ್ವಾರಕಾ  ಎಕ್ಸ್ ಪ್ರೆಸ್ ವೇ ನಲ್ಲಿ ಇಂದು ಬೆಳಿಗ್ಗೆ 7:30ರ ಸುಮಾರಿಗೆ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದೆ. ಪರಿಣಾಮ ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಗೊಂಡಿದ್ದ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

    ಕುಸಿತಕ್ಕೆ ಕಾರಣ ತಿಳಿದು ಬಂದಿಲ್ಲ, ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗುವುದು. ಇಲ್ಲಿಯವರೆಗೆ ಲಭ್ಯವಿರುವ ಮಾಹಿತಿಯ ಪ್ರಕಾರ ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ಅದು ಸಂಭವಿಸಿದಾಗ ಜಾಗದಲ್ಲಿ ಯಾವುದೇ ಕೆಲಸಗಳು ನಡೆಯುತ್ತಿರಲಿಲ್ಲ ಎಂದು ದ್ವಾರಕಾ ಎಕ್ಸ್‍ಪ್ರೆಸ್‍ವೆ ವೇ ಯೋಜನಾ ನಿರ್ದೇಶಕ ನಿರ್ಮನ್ ಜಂಬುಲ್ಕರ್ ಹೇಳಿದ್ದಾರೆ.

    ಇದು ರಾಷ್ಟ್ರ ರಾಜಧಾನಿ ದೆಹಲಿ ಮತ್ತು ನೆರೆಯ ಗುರುಗ್ರಾಮವನ್ನು ಸಂಪರ್ಕಿಸುವ ಪರ್ಯಾಯ ಮಾರ್ಗವಾಗಿದ್ದು, 27.6 ಕಿ.ಮೀ ಉದ್ದದ ದ್ವಾರಕಾ ಎಕ್ಸ್ ಪ್ರೆಸ್ ವೇ ನಿರ್ಮಾಣಕ್ಕೆ 9,000 ಕೋಟಿ ರೂ. ವೆಚ್ಚವಾಗಲಿದೆ.

  • ಅಬುಧಾಬಿ ಹಿಂದೂ ದೇವಾಲಯದ ಫೌಂಡೇಶನ್‍ಗೆ ಭಾರತದ ಕಲ್ಲು ಬಳಕೆ

    ಅಬುಧಾಬಿ ಹಿಂದೂ ದೇವಾಲಯದ ಫೌಂಡೇಶನ್‍ಗೆ ಭಾರತದ ಕಲ್ಲು ಬಳಕೆ

    ಅಬುಧಾಬಿ: ಮೊದಲ ಬಾರಿಗೆ ಅಬುಧಾಬಿಯಲ್ಲಿ ಹಿಂದೂ ದೇಗುಲ ನಿರ್ಮಾಣವಾಗುತ್ತಿದ್ದು, ಹಿಂದೂ ದೇಗುಲಕ್ಕೆ ಬೃಹತ್ ಅಡಿಪಾಯ ಹಾಕಲಾಗಿದೆ. ಈ ಅಡಿಪಾಯಕ್ಕೆ ಭಾರತದಿಂದ ಕಲ್ಲುಗಳನ್ನು ತರಿಸಿಕೊಳ್ಳಲಾಗಿದೆ.

    ಬೋಚಾಸನವಾಸಿ ಶ್ರೀ ಅಕ್ಷರ್ ಪುರುಷೋತ್ತಂ ಸ್ವಾಮಿನಾರಾಯಣ್ ಸಂಸ್ಥೆ(ಬಿಎಪಿಎಸ್) 450 ಕೋಟಿ ರೂ. ವೆಚ್ಚದಲ್ಲಿ ದೇವಾಲಯವನ್ನು ನಿರ್ಮಾಣ ಮಾಡುತ್ತಿದೆ. ಏಪ್ರಿಲ್ ತಿಂಗಳ ಅಂತ್ಯಕ್ಕೆ ಫೌಂಡೇಷನ್ ಕಾರ್ಯ ಮುಕ್ತಾಯವಾಗುವ ಸಾಧ್ಯತೆಯಿದೆ.

    ಅಬು ಮರೇಖಾ ಪ್ರದೇಶದಲ್ಲಿ 27 ಎಕರೆ ವಿಸ್ತೀರ್ಣದ ಭೂಮಿಯಲ್ಲಿ ದೇವಸ್ಥಾನ ಬೃಹತ್ ಅಡಿಪಾಯ ಹಾಕಲಾಗುತ್ತಿದೆ. ನೆಲ ಮಟ್ಟದಿಂದ 4.5 ಮೀಟರ್ ಅಡಿಪಾಯದ ಹಾಕಲಾಗಿದೆ. ಜನವರಿ ತಿಂಗಳಿನಿಂದ ಕೆಲಸ ನಡೆಯುತ್ತಿದೆ. ಸುಮಾರು 4,500 ಕ್ಯೂಬಿಕ್ ಕಾಂಕ್ರೀಟ್ ಹಾಕಲಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತಾಧಿಗಳಿಗೆ ಮತ್ತೆ ಅರ್ಚಕರಿಗಾಗಿ ಕೆಳಗಡೆ ಎರಡು ಸುರಂಗ ನಿರ್ಮಾಣ ಮಾಡಲಾಗುತ್ತದೆ.

    ದೇವಸ್ಥಾನ ನಿರ್ಮಾಣಕ್ಕೆ ಭಾರತದಿಂದ ಕಲ್ಲುಗಳನ್ನು ತರಿಸಿಕೊಳ್ಳಲಾಗಿದೆ. ಸ್ತಂಭಗಳನ್ನು ರಾಜಸ್ಥಾನ ಮತ್ತು ಗುಜರಾತ್‍ನ ಕುಶಲಕರ್ಮಿಗಳು ಕೆತ್ತನೆ ಮಾಡಲಿದ್ದಾರೆ. ಏಪ್ರಿಲ್ ಅಂತ್ಯದ ಒಳಗಾಗಿ ಫೌಂಡೇಷನ್ ಕೆಲಸ ಮುಗಿಯುತ್ತದೆ. ಮೇ ತಿಂಗಳಿನಲ್ಲಿ ಕಲ್ಲಿನ ಕೆಲಸವನ್ನು ಆರಂಭಿಸುತ್ತೇವೆ ಎಂದು ಪ್ರಾಜೆಕ್ಟ್ ಎಂಜಿನಿಯರ್ ಅಶೋಕ್ ಕೊಂಡೆಟೆ ಹೇಳಿದ್ದಾರೆ.