Tag: ನಿರ್ಮಾಪಕರು

  • ನ.1ರಿಂದ ತಮಿಳು ಸಿನಿಮಾ ಚಿತ್ರೀಕರಣ ಬಂದ್ ಮಾಡಲು ಮುಂದಾದ ನಿರ್ಮಾಪಕರು

    ನ.1ರಿಂದ ತಮಿಳು ಸಿನಿಮಾ ಚಿತ್ರೀಕರಣ ಬಂದ್ ಮಾಡಲು ಮುಂದಾದ ನಿರ್ಮಾಪಕರು

    ಕಾಲಿವುಡ್ (Kollywood) ಟಾಪ್ ಚಿತ್ರರಂಗಗಳಲ್ಲಿ ಒಂದಾಗಿದೆ. ಭಾರತದ 3ನೇ ಅತಿ ದೊಡ್ಡ ಚಿತ್ರರಂಗ ಕೂಡ ಹೌದು. ಈ ಚಿತ್ರರಂಗದಲ್ಲಿ ಲಕ್ಷಾಂತರ ಜನ ಉದ್ಯೋಗಿಗಳು ದುಡಿಯುತ್ತಿದ್ದಾರೆ. ಹೀಗಿರುವಾಗ ನವೆಂಬರ್ 1ರಿಂದ ತಮಿಳು ಸಿನಿಮಾ (Tamil Film Industry) ಚಿತ್ರೀಕರಣ ಬಂದ್ ಮಾಡಲು ನಿರ್ಮಾಪಕರು (Producers) ನಿರ್ಧರಿಸಿದ್ದಾರೆ. ಇದನ್ನೂ ಓದಿ:ಸಂಜಯ್ ದತ್ ಜೊತೆಗಿನ ಫೋಟೋ ಹಂಚಿಕೊಂಡ ಉಪ್ಪಿಯ ಟ್ರೋಲ್ ಹುಡುಗಿ ರೀಷ್ಮಾ

    ಸಿನಿಮಾ ನಟರ ಸಂಭಾವನೆ ಹೆಚ್ಚಳ, ನಟ- ನಟಿಯರ ಅನಧಿಕೃತ ಬೇಡಿಕೆಗಳು, ಫೈನಾನ್ಸ್ ಸಮಸ್ಯೆಗಳು ಹೀಗೆ ಇನ್ನೀತರ ಸಮಸ್ಯೆಗಳ ಬಗ್ಗೆ ನಿರ್ಮಾಪಕರು ಸಭೆ ನಡೆಸಿ ಚರ್ಚಿಸಲಿದ್ದಾರೆ. ತಮ್ಮ ಬೇಡಿಕೆಗಳು ಈಡೇರದೇ ಹೋದರೆ ನವೆಂಬರ್ 1ರಿಂದ ಚಿತ್ರರಂಗ ಬಂದ್ ಮಾಡುವುದಾಗಿ ಘೋಷಣೆ ಮಾಡಿದೆ. ಈ ಬಗ್ಗೆ ಜು.29ರಂದು ನಡೆದ ಸಭೆಯಲ್ಲಿ ತಮಿಳುನಾಡು ಸಿನಿಮಾ ನಿರ್ಮಾಪಕರ ಸಂಘ, ತಮಿಳುನಾಡು ಸಿನಿಮಾ ಪ್ರದರ್ಶಕರ ಸಂಘ, ತಮಿಳುನಾಡಿನ ಸಿನಿಮಾ ವಿತರಕರು ಕೂಡ ಭಾಗವಹಿಸಿದ್ದರು. ತಾವು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಿತು.

    ಚಿತ್ರರಂಗದ ಯಾವುದೇ ಸಿನಿಮಾ ನಟರಾಗಿರಲಿ ಅವರ ಸಿನಿಮಾಗಳು ಚಿತ್ರಮಂದಿರದಲ್ಲಿ ಬಿಡುಗಡೆಯಾದ ನಂತರ ಒಟಿಟಿಯಲ್ಲಿ ಬಿಡುಗಡೆಯಾಗಬೇಕು. ಸ್ಟಾರ್ ನಟ ಒಂದು ಚಿತ್ರಕ್ಕೆ ಅಡ್ವಾನ್ಸ್ ಪಡೆದ ನಂತರ ಆ ಚಿತ್ರ ಮುಗಿಯುವವರೆಗೂ ಬೇರೆ ಚಿತ್ರದ ಅಡ್ವಾನ್ಸ್ ಪಡೆಯುವಂತಿಲ್ಲ. ನಟರ ಸಿಬ್ಬಂದಿಯ ಖರ್ಚನ್ನು ನಿರ್ಮಾಣ ಸಂಸ್ಥೆ ನೋಡಿಕೊಳ್ಳುವುದಿಲ್ಲ, ನಟರೇ ನೋಡಿಕೊಳ್ಳಬೇಕು. ಆಗಸ್ಟ್.16ರಿಂದ ವಾರದಲ್ಲಿ ಇಂತಿಷ್ಟೇ ಸಿನಿಮಾಗಳು ರಿಲೀಸ್ ಆಗಬೇಕು ಎಂದು ನಿಯಮ ಜಾರಿ ತರಬೇಕು.

    ಸ್ಟಾರ್ ನಟರ ಸಂಭಾವನೆ ಏರಿಕೆಯಾಗಿದೆ. ಇನ್ಮುಂದೆ ಇಳಿಕೆಯಾಗಬೇಕು. ಪ್ರಸ್ತುತ ಚಾಲ್ತಿಯಲ್ಲಿರುವ ಸಿನಿಮಾಗಳ ಚಿತ್ರೀಕರಣವು ಅಕ್ಟೋಬರ್ 30ರೊಳಗೆ ಮುಗಿಯಬೇಕು. ಬಳಿಕ ನವೆಂಬರ್ 1ರಿಂದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿನಿಮಾರಂಗ ಬಂದ್ ಮಾಡಲಾಗುತ್ತಿದೆ.

  • ವಿಷ್ಣುವರ್ಧನ್ ಅವರಿಗೆ ಮಸಿ ಬಳಿಯುವಂತಹ ಕೆಲಸ ಅನಿರುದ್ಧ ಮಾಡಿರಲ್ಲ: ಎಸ್.ನಾರಾಯಣ್

    ವಿಷ್ಣುವರ್ಧನ್ ಅವರಿಗೆ ಮಸಿ ಬಳಿಯುವಂತಹ ಕೆಲಸ ಅನಿರುದ್ಧ ಮಾಡಿರಲ್ಲ: ಎಸ್.ನಾರಾಯಣ್

    ಟ ಅನಿರುದ್ಧ ಹೊಸ ಧಾರಾವಾಹಿಯನ್ನು ಘೋಷಿಸುತ್ತಿದ್ದಂತೆಯೇ ವಿರೋಧ ವ್ಯಕ್ತವಾಗಿದೆ. ಎಸ್.ನಾರಾಯಣ್ ನಿರ್ದೇಶನದ ಸೂರ್ಯವಂಶ ಧಾರಾವಾಹಿಯಲ್ಲಿ ಅನಿರುದ್ಧ ನಾಯಕನಾಗಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯನ್ನು ತಡೆಯಬೇಕು ಎಂದು ಕನ್ನಡ ಕಿರುತೆರೆ ನಿರ್ಮಾಪಕರು ಆಗ್ರಹಿಸಿದ್ದಾರೆ. ಅನಿರುದ್ಧ ಮೇಲೆ ಎರಡು ವರ್ಷಗಳ ಕಾಲ ಅಲಿಖಿತ ನಿಷೇಧ ಹೇರಿದ್ದರಿಂದ ಅವರಿಗಾಗಿ ಸೀರಿಯಲ್ ಮಾಡದಂತೆ ನಾರಾಯಣ್ ಅವರಿಗೆ ಮನವಿ ಮಾಡಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ಎಸ್.ನಾರಾಯಣ್, ‘ ಅನಿರುದ್ದ ಅವರ ಬಗ್ಗೆ ಬಹಳಷ್ಟು ಆರೋಪಗಳನ್ನ ಮಾಡಿದ್ದಾರೆ.ಆ ಆರೋಪಗಳು ಸುಳ್ಳಾಗಲಿ ಅಂತ ನಾನು ಆಶಿಸುತ್ತೇನೆ. ಅನಿರುದ್ದ  ಅವರು ವಿಷ್ಣುವರ್ಧನ್ ಅಳಿಯ. ಅವರ ಹೆಸರಿಗೆ ಮಸಿ ಬಳಿಯುವ ಕೆಲಸವನ್ನು ಮಾಡಲ್ಲ ಅನ್ನುವುದು ನನ್ನ ನಂಬಿಕೆ. ಮಾತು ಕತೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಅವಕಾಶ ಇದೆ.  ಕಿರುತರೆಯ ನಿರ್ಮಾಪಕರು ನನ್ನ ಬಳಿ ಮಾತನಾಡಿ ಅವರು ಎದುರಿಸಿದ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇಂದು ಸಂಜೆ ಸಭೆಯಲ್ಲಿ ಆ ಕುರಿತು ಮಾತನಾಡುತ್ತೇನೆ’ ಎಂದಿದ್ದಾರೆ. ಇದನ್ನೂ ಓದಿ: ‘ಅನ್ ಲಾಕ್ ರಾಘವ’ ಸಿನಿಮಾಗೆ ಕೊನೆ ಹಂತದ ಶೂಟಿಂಗ್

    ಕನ್ನಡ ಕಿರುತೆರೆ ನಿರ್ಮಾಪಕರ ಸಂಘವು ಅನಿರುದ್ಧ ಅವರಿಗೆ ಎರಡು ವರ್ಷಗಳ ಕಾಲ ನಿಷೇಧ ಹೇರುವ ಕುರಿತು ತೀರ್ಮಾನ ತಗೆದುಕೊಂಡಿತ್ತು. ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಕಿರಿಕ್ ಮಾಡಿದರು ಎನ್ನುವ ಕಾರಣಕ್ಕಾಗಿ ಎರಡು ವರ್ಷಗಳ ಕಾಲ ಅನಿರುದ್ಧ ಅವರಿಗೆ ಯಾರೂ ಕೆಲಸ ಕೊಡಬಾರದು ಎಂದು ಹೇಳಲಾಗಿತ್ತು. ಆದರೆ, ಘಟನೆ ನಡೆದ ಕೆಲವೇ ತಿಂಗಳಲ್ಲೇ ಅನಿರುದ್ಧ ಮತ್ತೊಂದು ಧಾರಾವಾಹಿಗೆ ಹೀರೋ ಆಗಿ ಆಯ್ಕೆಯಾಗಿದ್ದಾರೆ.

    ಜೊತೆ ಜೊತೆಯಲಿ ಧಾರಾವಾಹಿಯಿಂದ ಹೊರ ನಡೆದ ನಂತರ ನಟ ಅನಿರುದ್ಧ ಮುಂದೇನು ಮಾಡುತ್ತಾರೆ ಎನ್ನುವ ಕುತೂಹಲ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಇತ್ತು. ಕಿರುತೆರೆ ನಿರ್ಮಾಪಕರ ಸಂಘವು ಅನಿರುದ್ಧಗಾಗಿ ಯಾರೂ ಧಾರಾವಾಹಿ ಮಾಡಬಾರದು ಎಂದು ಅಲಿಖಿತ ಫಾರ್ಮಾನು ಹೊರಡಿಸಿತ್ತು. ಯಾವುದೇ ವಾಹಿನಿಗಳು ಕೂಡ ಇವರಿಗೆ ಕೆಲಸ ಕೊಡದಂತೆ ಮನವಿ ಮಾಡಿಕೊಳ್ಳಲಾಗಿತ್ತು. ಆದರೆ, ಚಿತ್ರಣ ಬೇರೆ ರೀತಿಯಲ್ಲೇ ಬದಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • 1 ವರ್ಷದ ಬಳಿಕ ಆಫ್ಘನ್‌ನಲ್ಲಿ ಚಿತ್ರಮಂದಿರಗಳು ಓಪನ್ – ಸಿನಿಮಾದಲ್ಲಿ ಮಹಿಳಾ ಪಾತ್ರಗಳಿಗೆ ತಾಲಿಬಾನ್ ನಿರ್ಬಂಧ

    1 ವರ್ಷದ ಬಳಿಕ ಆಫ್ಘನ್‌ನಲ್ಲಿ ಚಿತ್ರಮಂದಿರಗಳು ಓಪನ್ – ಸಿನಿಮಾದಲ್ಲಿ ಮಹಿಳಾ ಪಾತ್ರಗಳಿಗೆ ತಾಲಿಬಾನ್ ನಿರ್ಬಂಧ

    ಕಾಬೂಲ್: ತಾಲಿಬಾನ್ ಅಫ್ಘಾನಿಸ್ತಾನದ ಆಡಳಿತವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡ ಒಂದು ವರ್ಷದ ನಂತರ ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಕ್ಕೆ ಗ್ರೀನ್‌ಸಿಗ್ನಲ್ ಕೊಟ್ಟಿದೆ. ಆದರೆ ಚಲನಚಿತ್ರಗಳಲ್ಲಿ ಮಹಿಳಾ ಕಲಾವಿದರ ಪಾತ್ರಗಳಿಗೆ ನಿರ್ಬಂಧ ವಿಧಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಒಂದು ವರ್ಷದ ನಂತರ ಆಫ್ಘನ್‌ನಲ್ಲಿ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ಸಿಕ್ಕಿರುವುದು ಸಿನಿಪ್ರಿಯರು, ಚಲನಚಿತ್ರ ನಿರ್ಮಾಪಕರು ಹಾಗೂ ನಿರ್ದೇಶಕರಲ್ಲಿ ಮಂದಹಾಸ ಮೂಡಿಸಿದೆ. ಇದೇ ವೇಳೆ ಮಹಿಳಾ ಹಕ್ಕುಗಳ ಉಲ್ಲಂಘನೆಯ ಬಗ್ಗೆ ತೀವ್ರ ಕಳವಳವೂ ವ್ಯಕ್ತವಾಗಿದೆ. ಈಗಾಗಲೇ 37 ಚಲನಚಿತ್ರಗಳು ಹಾಗೂ ಸಾಕ್ಷ್ಯಾಚಿತ್ರಗಳು ಪ್ರದರ್ಶನಕ್ಕೆ ಸಜ್ಜಾಗಿವೆ. ಆದರೆ ಇತ್ತೀಚಿಗೆ ನಿರ್ಮಿಸಲಾದ ಚಿತ್ರಗಳಲ್ಲಿ ಮಹಿಳಾ ನಟಿ ಅತಿಫಾ ಮೊಹಮ್ಮದಿ ಮಾತ್ರವೇ ಏಕೈಕ ಮಹಿಳಾ ಪಾತ್ರ ನಿರ್ವಹಿಸಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಭಾರತ-ಪಾಕ್ ಕ್ರಿಕೆಟ್ ಪಂದ್ಯ ವೀಕ್ಷಿಸಿದವರಿಗೆ 5 ಸಾವಿರ ರೂ. ದಂಡ – ಶ್ರೀನಗರ ಕಾಲೇಜು ಆದೇಶ

    ಚಿತ್ರ ನಿರ್ಮಾಣಕ್ಕೆ ಹಣ ನೀಡುವಂತೆ ಮನವಿ: ಚಿತ್ರಮಂದಿರ ತೆರೆಯಲು ಅನುಮತಿ ಸಿಕ್ಕಿರುವುದು ಚಲನಚಿತ್ರ ನಿರ್ಮಾಪಕರಲ್ಲಿ ಉತ್ಸಾಹ ತರಿಸಿದ್ದು, ನಿರ್ಮಿಸುವ ಚಲನಚಿತ್ರಗಳಿಗೆ ಹಣ ನೀಡುವಂತೆ ಮನವಿ ಮಾಡಿದ್ದಾರೆ. ನಮ್ಮ ಕೆಲಸವನ್ನು ಸಂತೋಷದಿಂದ ಮಾಡುತ್ತಿದ್ದೇವೆ. ನಮ್ಮ ಪಾಕೆಟ್ ಮನಿಯಿಂದ ಸಿನಿಮಾಕ್ಕೆ ಖರ್ಚು ಮಾಡಿದ್ದೇವೆ. ಹಾಗಾಗಿ ಚಿತ್ರ ನಿರ್ಮಾಣಕ್ಕೆ ಹಣ ನೀಡುವಂತೆ ಮನವಿ ಮಾಡಿರುವುದಾಗಿ ಕಲಾವಿದ ಫಯಾಜ್ ಇಫ್ತಿಕರ್ ಹೇಳಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಮುಖಂಡ ಝಹ್ರಾ ಮುರ್ತಝಾವಿ, ಸಿನಿಮಾ ಕ್ಷೇತ್ರದಲ್ಲಿ ಮಹಿಳೆಯರನ್ನು ನಿಷೇಧಿಸಬಾರದು. ಏಕೆಂದರೆ ಇದು ಮಹಿಳೆಯರ ಹಕ್ಕು. ಮಹಿಳೆಯರ ಉಪಸ್ಥಿತಿಯಿಲ್ಲದೇ ಚಲನಚಿತ್ರವು ಉತ್ತಮವಾಗಿ ಮೂಡಿಬರುತ್ತದೆ ಎಂದು ನನಗೆ ಅನ್ನಿಸುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಮೆರಿಕಾದ ಸಿಯಾಟಲ್‍ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮ

    ತಾಲಿಬಾನ್ ಕಳೆದ ತಿಂಗಳು ಮಹಿಳೆಯರು ಹಾಗೂ ಹುಡುಗಿಯರು ಅಗತ್ಯವಿಲ್ಲದೇ ಮನೆಯಿಂದ ಹೊರಗೆ ಬಾರದಂತೆ ಹಾಗೂ ಮುಖ ತೋರಿಸದಂತೆ ಆದೇಶಿಸಿತ್ತು. ಇದಕ್ಕೂ ಮುನ್ನ ಹೆಣ್ಣುಮಕ್ಕಳಿಗೆ ಮಾಧ್ಯಮಿಕ ಶಿಕ್ಷಣವನ್ನು ನಿಷೇಧಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಅಪ್ಪು ಅಡ್ವಾನ್ಸ್ ಪಡೆದಿದ್ದ ಹಣ ನಿರ್ಮಾಪಕರಿಗೆ ವಾಪಸ್

    ಅಪ್ಪು ಅಡ್ವಾನ್ಸ್ ಪಡೆದಿದ್ದ ಹಣ ನಿರ್ಮಾಪಕರಿಗೆ ವಾಪಸ್

    ಬೆಂಗಳೂರು: ಇತ್ತೀಚೆಗಷ್ಟೇ ನಿಧನರಾದ ನಟ ಪುನೀತ್ ರಾಜಕುಮಾರ್ ಸಿನಿಮಾಗಳಲ್ಲಿ ಅಭಿನಯಿಸಲು ಪಡೆದಿದ್ದ ಅಡ್ವಾನ್ಸ್ ಹಣವನ್ನು ಅಪ್ಪು ಧರ್ಮಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ನಿರ್ಮಾಪಕರಿಗೆ ಮರುಕಳಿಸಿದ್ದಾರೆ.

    ಮುಂದಿನ ವರ್ಷಕ್ಕೆ ಅಪ್ಪು ಭರ್ತಿ 5 ಚಿತ್ರ ಮಾಡಲು ಡೇಟ್ಸ್ ಕೊಟ್ಟಿದ್ದರು. ಆದರೆ ಅಪ್ಪು ಅಕಾಲಿಕ ನಿಧನದಿಂದಾಗಿ ಆ ಸಿನಿಮಾಗಳನ್ನು ಮಾಡಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಅಶ್ವಿನಿಯವರೇ ಖುದ್ದು ನಿರ್ಮಾಪಕರಿಗೆ ಕರೆ ಮಾಡಿ ಅವರಿಂದ ಪಡೆದ ಅಷ್ಟೂ ಹಣವನ್ನು ಖಾತೆಗೆ ಹಾಕುತ್ತಿದ್ದಾರೆ.

    ನಿರ್ಮಾಪಕ ಉಮಾಪತಿ ಅಪ್ಪು ಡೇಟ್ಸ್ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 25ರಂದು ಉಮಾಪತಿ ಅಡ್ವಾನ್ಸ್ ಕೊಟ್ಟಿದ್ದರು. ಉಮಾಪತಿ ಪ್ರೊಡಕ್ಷನ್‌ನಲ್ಲಿ ಸಿನಿಮಾ ಮಾಡಲು ಅಪ್ಪು ಓಕೆ ಎಂದಿದ್ದರು. ಆದರೆ ಅಪ್ಪು ಅವರ ನಿಧನದ ಹಿನ್ನೆಲೆಯಲ್ಲಿ ಅಶ್ವಿನಿ ಅವರು ಹಣ ನೀಡಲು ಮುಂದಾಗಿದ್ದಾರೆ. ಇದನ್ನೂ ಓದಿ: ರಾಯನ್ ರಾಜ್ ಸರ್ಜಾ ಕ್ರಿಸ್‍ಮಸ್ ಸಂಭ್ರಮ ಹೇಗಿತ್ತು ಗೊತ್ತಾ?

    ಈ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದ ಉಮಾಪತಿಯವರಿಗೆ ಹಣ ವಾಪಸ್ ಕಳಿಸುವುದಾಗಿ ಕರೆ ಬರುತ್ತಿತ್ತು. ಆದರೆ ನಿರ್ದೇಶಕ ಉಮಾಪತಿ ಅವರು ಚಿಕ್ಕ ಹಣ ಬೇಡ ಎಂದಿದ್ದರು. ಆದರೂ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಉಮಾಪತಿ ಅಕೌಂಟ್‌ಗೆ ಆರ್‌ಟಿಜಿಎಸ್ ಮಾಡಿ ದೊಡ್ತನವನ್ನು ಮರೆದಿದ್ದಾರೆ. ಇಂದು ಪಿಆರ್‌ಕೆ ಸಿಬ್ಬಂದಿಯ ಮೂಲಕ ಹಣವನ್ನು ಹಾಕಿ ಫೋನ್ ಮೂಲಕ ಉಮಾಪತಿ ಜೊತೆ ಅಶ್ವಿನಿ ಪುನೀತ್‌ರಾಜ್‌ಕುಮಾರ್ ಮಾತನಾಡಿದ್ದಾರೆ. ಇದನ್ನೂ ಓದಿ: ಸಿನಿಮಾರಂಗದಲ್ಲಿ ಉತ್ತಮ ನಟನಾಗಿ ಯಶಸ್ವಿಯಾಗುವ ಪ್ಲಾನ್ ಇದೆ: ನಿಖಿಲ್ ಕುಮಾರಸ್ವಾಮಿ

    ಕಳೆದ ಒಂದು ವಾರದಿಂದ ಸುಮಾರು ಮೂರ್ನಾಲ್ಕು ನಿರ್ಮಾಪಕರಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅಡ್ವಾನ್ಸ್ ಹಣವನ್ನು ಮರುಳಿಸುತ್ತಿದ್ದಾರೆ.

  • ಚಲನಚಿತ್ರ ಮಂಡಳಿಗೆ ಅಮಾವಾಸ್ಯೆ ಕತ್ತಲು ಆವರಿಸಿದೆ : ರಾಜೇಂದ್ರ ಸಿಂಗ್ ಬಾಬು

    ಚಲನಚಿತ್ರ ಮಂಡಳಿಗೆ ಅಮಾವಾಸ್ಯೆ ಕತ್ತಲು ಆವರಿಸಿದೆ : ರಾಜೇಂದ್ರ ಸಿಂಗ್ ಬಾಬು

    ಬೆಂಗಳೂರು: ನಮ್ಮ ಚಲನಚಿತ್ರ ಮಂಡಳಿಗೆ ಅಮಾವಾಸ್ಯೆ  ಕತ್ತಲು ಹಿಡಿದಿದೆ. ಅದು ಬಿಟ್ಟು ಹೋಗೋದಿಲ್ಲ ಅನಿಸುತ್ತದೆ ಎಂದು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಹೇಳಿಕೆ ನೀಡಿದ್ದಾರೆ.

    ಕರ್ನಾಟಕ ವಾಣಿಜ್ಯ ಚಲನಚಿತ್ರ ಮಂಡಳಿ ನಡೆ ವಿಚಾರವಾಗಿ ಇಂದು ಸ್ಯಾಂಡಲ್‍ವುಡ್‍ನ ಕೆಲವು ನಿರ್ಮಾಪಕರು ಮತ್ತು ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿದರು. ರಾಜೇಂದ್ರಸಿಂಗ್ ಬಾಬು ಮಾತನಾಡಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಚುನಾವಣೆಗೆ ತಡೆಯೊಡ್ಡಿ ಸಹಕಾರ ಸಂಘಗಳ ಉಪನಿಬಂಧನಾ ಅಧಿಕಾರಿ ಮಧ್ಯಂತರ ಆದೇಶ ಹೊರಡಿಸಿದೆ. ಆದರೂ ವಾಣಿಜ್ಯ ಮಂಡಳಿ ಇಲ್ಲಿಯವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹಾಗಾಗಿ ಸಮಾನ ಮನಸ್ಕರೆಲ್ಲ ಸೇರಿ ಈ ಬಗ್ಗೆ ಹೋರಾಟ ಮಾಡಲು ನಿರ್ಧಸಿದ್ದೇವೆ ಎಂದು ತಿಳಿಸಿದರು.

    ನಮ್ಮ ಚಲನಚಿತ್ರ ಮಂಡಳಿಗೆ ಅಮಾವಾಸ್ಯೆ ಕತ್ತಲು ಹಿಡಿದಿದೆ. ಅದು ಬಿಟ್ಟು ಹೋಗುವುದಿಲ್ಲ ಎನಿಸುತ್ತದೆ. ಚೇಂಬರ್‍ನಿಂದಾಗಿ ನಾವೇ ಧ್ವನಿ ಇಲ್ಲದೇ ಇರುವ ಹಾಗೇ ಆಗಿದ್ದೇವೆ. ಅಲ್ಲದೆ ರಿಜಿಸ್ಟ್ರಾರ್ ಆಫ್ ಸೊಸೈಟಿಯಿಂದ  ಫಿಲಂ ಚೇಂಬರ್ ಗೆ ಒಂದು ಪತ್ರ ಬಂದಿದೆ. ಅದರಲ್ಲಿ ಸಾಕಷ್ಟು ಆರೋಪಗಳಿವೆ ಎಂದು ಹೇಳಿದರು.

    ಚೇಂಬರ್ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದು ತಿಳಿಯುತ್ತಿಲ್ಲ. ಕೃಷ್ಣೇ ಗೌಡ ಮತ್ತು ಜೆಡಿ ಎಂಬುವವರು 20 ಅಂಶಗಳಲ್ಲಿ ಅಕ್ರಮ ನಡೆದಿದೆ ಎಂಬುವುದರ ಬಗ್ಗೆ ದೂರು ನೀಡಿದ್ದಾರೆ. ಹಾಗಾಗಿ ಈ ಬಾರಿಯ ಚುನಾವಣೆಯನ್ನು ತಡೆಹಿಡಿಯಲಾಗಿದೆ. ಈಗಾಗಲೇ ರಿಜಿಸ್ಟ್ರಾರ್‌ನ್ನ ಮಂಡಳಿಗೆ ನೇಮಕ ಮಾಡಲಾಗಿದೆ. ಆದರೆ ಮಂಡಳಿಯಿಂದ ರಾಜಕೀಯವಾಗಿ ಒತ್ತಡ ತಂದು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಇಲ್ಲಿ ಸತ್ಯ ಹೊರ ಬರಬೇಕು ಎಂಬ ಉದ್ದೇಶದಿಂದ ನಾವು  ರಿಜಿಸ್ಟ್ರಾರ್‌ಗೆ ಮನವಿ ಮಾಡುತ್ತಿದ್ದೇವೆ. ರಿಜಿಸ್ಟ್ರಾರ್ ಆಫೀಸಿಗೆ ಈ ಮನವಿ ನೀಡಿ ಅದು ಸಿಎಂ ಬಳಿಗೆ ತಲುಪಿಸುತ್ತೇವೆ. ಇಲ್ಲಿ ಯಾರು ತಪ್ಪು ಮಾಡಿದ್ದಾರೆ, ಸತ್ಯ ಯಾವುದು ಎನ್ನುವುದು ಎಲ್ಲರಿಗೂ ಗೊತ್ತಾಗಬೇಕು ಎಂದರು.

    ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮಾತನಾಡಿ, ಕೋವಿಡ್ ಸಂಕಷ್ಟ ಸಾಕು ಎನ್ನುತ್ತೀರುವಾಗಲೇ ಈ ಮರಿ ಕೋವಿಡ್ ಗಳನ್ನು ನೋಡಿ ಗಾಬರಿಯಾಗಿದೆ. ಚುನಾವಣಾ ಪ್ರಕ್ರಿಯೆ ನಡೆಯುವವರೆಗೂ ಯಾವುದು ಸರಿಯಾಗುವುದಿಲ್ಲ. ಅಲ್ಲಿ ಒಂದು ಗುಂಪು ಸೇರಿಕೊಂಡಿದೆ. ಅವರು ಬೈಲಾ ತಿದ್ದುಪಡಿ ಮಾಡುತ್ತಾರೆ, ಅದರಿಂದ ಅವರಿಗೆ ಬೇಕಾದ ರೀತಿಯಲ್ಲಿ ತಿದ್ದುಪಡಿ ಮಾಡಿಕೊಳ್ಳುತ್ತಾರೆ. ನಾವು ನಮ್ಮ ಪಾಡಿಗೆ ಶೂಟಿಂಗ್ ಮಾಡುವುದರಲ್ಲಿ ನಿರತರಾಗಿರುತ್ತೇವೆ. ಆದರೆ ಇಲ್ಲಿ ನಡೆಯುವುದನ್ನು ಕೇಳುವವರು ಇಲ್ಲ ಎಂದು ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಶೈಲೇಂದ್ರ ಬಾಬು, ಸುರೇಶ್, ಮುರಳಿ, ಮದನ್ ಪಟೇಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

  • ಚಿತ್ರಮಂದಿರ ಬದಲು ಅಮೆಜಾನ್‍ನಲ್ಲಿ ಕನ್ನಡ ಸಿನಿಮಾ ರಿಲೀಸ್ – ವಿರೋಧ ವ್ಯಕ್ತ

    ಚಿತ್ರಮಂದಿರ ಬದಲು ಅಮೆಜಾನ್‍ನಲ್ಲಿ ಕನ್ನಡ ಸಿನಿಮಾ ರಿಲೀಸ್ – ವಿರೋಧ ವ್ಯಕ್ತ

    ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ಇಡೀ ದೇಶವೇ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದೆ. ಇತ್ತ ಈ ಲಾಕ್‍ಡೌನ್ ಯಾವಾಗ ಮುಗಿಯುತ್ತದೆ ಎಂಬುದು ಸಹ ತಿಳಿಯುತ್ತಿಲ್ಲ. ಹೀಗಾಗಿ ಚಿತ್ರಮಂದಿರಗಳು ಸದ್ಯಕ್ಕೆ ತೆರೆಯುದಿಲ್ಲ ಎಂದು ಅನೇಕ ನಿರ್ಮಾಪಕರು ಮತ್ತು ನಿರ್ಮಾಣ ಸಂಸ್ಥೆಗಳು ನೇರವಾಗಿ ಅಮೆಜಾನ್ ಪ್ರೈಮ್ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸಿನಿಮಾ ಬಿಡುಗಡೆ ಮಾಡಲು ಮುಂದಾಗಿದ್ದಾರೆ.

    ಅನೇಕ ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್ ಮಾಲೀಕರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸದ್ಯಕ್ಕೆ ಚಿತ್ರರಂಗದಲ್ಲಿ ಆರ್ಥಿಕ ಹೊರೆಯನ್ನು ತಗ್ಗಿಸಿಕೊಳ್ಳಲು ಅನೇಕ ನಿರ್ಮಾಪಕರಿಗೆ ಒಟಿಟಿ ಬಿಡುಗಡೆ ಅನಿವಾರ್ಯವಾಗಿವೆ. ಮುಂದಿನ ತಿಂಗಳಿನಿಂದ ವಿವಿಧ ಭಾಷೆಗಳ, ಪ್ರಮುಖ ನಟರು ನಟಿಸಿರುವ ಸಿನಿಮಾಗಳು ಅಮೆಜಾನ್ ಪ್ರೈಮ್‍ನಲ್ಲಿ ತೆರೆಕಾಣುತ್ತಿವೆ. ಈ ಕುರಿತು ಅಮೆಜಾನ್ ಪ್ರೈಮ್ ಹಾಗೂ ನಿರ್ಮಾಣ ಸಂಸ್ಥೆಗಳು ಅಧಿಕೃತವಾಗಿ ತಿಳಿಸಿವೆ.

    ಪಿಆರ್‌ಕೆ ಪ್ರೊಡಕ್ಷನ್ಸ್ ನಿರ್ಮಿಸಿರುವ ‘ಲಾ’ ಮತ್ತು ‘ಫ್ರೆಂಚ್ ಬಿರಿಯಾನಿ’ ಸಿನಿಮಾಗಳು ಒಟಿಟಿ ಪ್ಲಾಟ್ ಫಾರ್ಮ್ ನ ಅಮೆಜಾನ್ ಪ್ರೈಮ್‍ನಲ್ಲಿ ಬಿಡುಗಡೆ ಮಾಡುವುದಾಗಿ ಪುನೀತ್ ರಾಜ್‍ಕುಮಾರ್ ತಿಳಿಸಿದ್ದಾರೆ. ಈ ಮೂಲಕ ಕನ್ನಡ ನಿರ್ಮಾಕಪರು ಕೂಡ ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಸಿನಿಮಾ ರಿಲೀಸ್ ಮಾಡಲು ಮುಂದಾಗಿರುವುದು ಸ್ಪಷ್ಟವಾಗಿದೆ.

    ರಘು ಸಮರ್ಥ ಚಿತ್ರಕಥೆ ಬರೆದು ನಿರ್ದೇಶಿಸಿದ ‘ಲಾ’ ಸಿನಿಮಾ ಜೂನ್ 26ರಂದು ಅಮೆಜಾನ್ ಪ್ರೈಮ್ ಮೂಲಕ ಜಗತ್ತಿನಾದ್ಯಂತ ತೆರೆ ಕಾಣುತ್ತಿದೆ. ನಟ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಪ್ರಜ್ವಲ್ ಮೊದಲ ಬಾರಿಗೆ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇನ್ನೂ ಪನ್ನಗಾಭರಣ ನಿರ್ದೇಶನದ ‘ಫ್ರೆಂಚ್ ಬಿರಿಯಾನಿ’ ಚಿತ್ರವು ಅಮೆಜಾನ್ ಪ್ರೈಮ್‍ನಲ್ಲಿ ಜುಲೈ 24ರಂದು ಬಿಡುಗಡೆಯಾಗಲಿದೆ ಎಂದು ಪಿಆರ್‌ಕೆ ಪ್ರೊಡಕ್ಷನ್ಸ್ ಅಧಿಕೃತವಾಗಿ ಮಾಹಿತಿ ತಿಳಿಸಿದೆ.

    https://www.facebook.com/139294346715675/posts/579010662744039/

    ಅಮೆಜಾನ್ ಫ್ರೈಂನಲ್ಲಿ ಸಿನಿಮಾ ಬಿಡುಗಡೆ ಮಾಡುವುದಕ್ಕೆ ಪಿವಿಆರ್ ಮತ್ತು ಐನಾಕ್ಸ್ ಮಲ್ಟಿಪ್ಲೆಕ್ಸ್ ಪ್ರದರ್ಶಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರ ನಿರ್ಮಾಣ ಸಂಸ್ಥೆಯೊಂದು ತನ್ನ ಸಿನಿಮಾಗಳನ್ನು ಒಟಿಟಿ ಪ್ಲಾಟ್‍ಫ್ಲಾಮಂ ಮೂಲಕ ರಿಲೀಸ್ ಮಾಡಲು ಮುಂದಾಗಿದೆ. ಈ ಮೂಲಕ ಥಿಯೇಟರ್‌ನಲ್ಲಿ ಸಿನಿಮಾ ತೆರೆಕಾಣುವ ಸಂಪ್ರದಾಯವನ್ನು ಬ್ರೇಕ್ ಮಾಡಿದೆ. ಸಂಸ್ಥೆಯ ನಿರ್ಧಾರದಿಂದ ನಮಗೆ ಬೇಸರವಾಗಿದೆ ಎಂದು ಐನಾಕ್ಸ್ ಪತ್ರದ ಮೂಲಕ ತಿಳಿಸಿದೆ.

    https://www.facebook.com/prkproductionsofficial/photos/a.170301270281649/578996506078788/?type=3&theater

    ಈ ಹಿಂದೆ ಅಂದರೆ 2013ರಲ್ಲಿ ನಟ ಕಮಲ್‍ಹಾಸನ್ ತಮ್ಮ ಸಂಸ್ಥೆಯ ‘ವಿಶ್ವರೂಪಂ’ ಸಿನಿಮಾವನ್ನು ಡೈರೆಕ್ಟ್ ಟು ಹೋಮ್ (ಡಿಟಿಎಚ್) ಮೂಲಕ ವಿತರಣೆ ಮಾಡಲು ಮುಂದಾಗಿದ್ದರು. ಈ ವೇಳೆ ಚಿತ್ರ ಪ್ರದರ್ಶಕರು ಹಾಗೂ ಚಿತ್ರೋದ್ಯಮ ವಿರೋಧ ವ್ಯಕ್ತಪಡಿಸಿತ್ತು. ಕೊನೆಗೆ ಸಂಪ್ರದಾಯವಾಗಿ ಸಿನಿಮಾವನ್ನು ಬಿಡುಗಡೆ ಮಾಡಬೇಕಾಯಿತು.

    ಕಳೆದ ತಿಂಗಳು ತಮಿಳು ನಟ ಸೂರ್ಯ ತಮ್ಮ ಸಂಸ್ಥೆಯಲ್ಲಿ ನಿರ್ಮಾಣವಾಗಿದ್ದ ‘ಪೂಣ್‍ಮಗಳ್ ವಂದಾಳ್’ ಸಿನಿಮಾವನ್ನು ಒಟಿಟಿ ಪ್ಲಾಟ್‍ಫ್ಲಾರ್ಮ್ ನಲ್ಲಿ ರಿಲೀಸ್ ಮಾಡಲು ಮುಂದಾಗಿದ್ದರು. ಒಂದು ವೇಳೆ ಸಿನಿಮಾ ಬಿಡುಗಡೆ ಮಾಡಿದರೆ ಬಹಿಷ್ಕರಿಸುವುದಾಗಿ ಘೋಷಿಸಿದ್ದರು. ನಂತರ ಮಾತುಕತೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಲಾಗಿತ್ತು.

    ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಆಯುಷ್ಮನ್ ಖುರಾನಾ ಅಭಿನಯದ ‘ಗುಲಾಬೋ ಸಿತಾಬೋ’ ಸಿನಿಮಾವವನ್ನು ಜೂನ್ 12ಕ್ಕೆ ಜಗತ್ತಿನಾದ್ಯಂತ ಅಮೆಜಾನ್ ಪ್ರೈಮ್‍ನಲ್ಲಿ ಬಿಡುಗಡೆ ಮಾಡಲು ನಿರ್ಮಾಪಕರು ಮುಂದಾಗಿದ್ದಾರೆ.

  • ಸ್ಯಾಂಡಲ್‍ವುಡ್‍ಗೆ ಐಟಿ ಶಾಕ್ ನೀಡಿದ್ದು ಯಾಕೆ? – ನಿರ್ಮಾಪಕರು, ನಟರ ಮನೆ ಮೇಲಿನ ದಾಳಿಗೆ ಕಾರಣ ಇಲ್ಲಿದೆ

    ಸ್ಯಾಂಡಲ್‍ವುಡ್‍ಗೆ ಐಟಿ ಶಾಕ್ ನೀಡಿದ್ದು ಯಾಕೆ? – ನಿರ್ಮಾಪಕರು, ನಟರ ಮನೆ ಮೇಲಿನ ದಾಳಿಗೆ ಕಾರಣ ಇಲ್ಲಿದೆ

    ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸ್ಯಾಂಡಲ್‍ವುಡ್ ನಟರು ಮತ್ತು ನಿರ್ಮಾಪಕ ಮನೆಯ ಮೇಲೆ ದಾಳಿ ನಡೆಸಿದ್ದಾರೆ.

    ಸ್ಯಾಂಡಲ್‍ವುಡ್ ಇತಿಹಾಸದಲ್ಲೇ ಇದು ಅತಿದೊಡ್ಡ ಐಟಿ ದಾಳಿಯಾಗಿದ್ದು ನಟರಾದ ಪುನೀತ್, ಯಶ್, ಸುದೀಪ್, ಶಿವರಾಜ್ ಕುಮಾರ್, ನಿರ್ಮಾಪಕರಾದ ಸಿಆರ್ ಮನೋಹರ್, ರಾಕ್‍ಲೈನ್ ವೆಂಕಟೇಶ್, ವಿಜಯ್ ಕಿರಗಂದೂರ್, ಜಯಣ್ಣ ನಿವಾಸದ ಮೇಲೆ ದಾಳಿ ನಡೆದಿದೆ.

    ದಾಳಿ ನಡೆಸಿದ್ದು ಯಾಕೆ?
    ರಿಯಲ್ ಎಸ್ಟೇಟ್ ಮತ್ತು ಫೈನ್ಯಾನ್ಶಿಯರ್ಸ್‍ ಗಳು ಬ್ಲಾಕ್ ಮನಿಯನ್ನು ವೈಟ್ ಮನಿ ಮಾಡಲು ಸಿನಿಮಾದಲ್ಲಿ ಹಣ ಹೂಡಿಕೆ ಮಾಡುತ್ತಿದ್ದಾರೆ. ಇವರೆಲ್ಲ ಹೆಸರಾಂತ ನಿರ್ಮಾಪಕರ ಮೂಲಕ ದೊಡ್ಡ ದೊಡ್ಡ ಬಜೆಟ್ ಸಿನಿಮಾಗೆ ಹಣ ಹೂಡಿಕೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಇವರು ಥಿಯೇಟರ್, ವಿತರಕರ ಮೂಲಕ ಕೋಟ್ಯಂತರ ರೂಪಾಯಿ ಸುಳ್ಳು ಲೆಕ್ಕ ನೀಡಿ ತೆರಿಗೆ ವಂಚನೆ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪರಿಶೀಲನೆಗಾಗಿ ದಾಳಿ ನಡೆದಿದೆ.

    ನಟರ ಮನೆ ಮೇಲೆ ದಾಳಿ ನಡೆಸಿದ್ದು ಯಾಕೆ?
    ಈಗ ನಟರು ಚಲನಚಿತ್ರದಲ್ಲಿ ಷೇರನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ ಲಾಭ ನಷ್ಟಕ್ಕೆ ನಿರ್ಮಾಪಕರು ಮಾತ್ರ ಹೊಣೆ ಆಗಿರುತ್ತಿದ್ದಾರೆ. ಹೀಗೆ ಬಂದ ಲಾಭವನ್ನು ಬ್ಲಾಕ್ ಮೂಲಕ ವೈಟ್ ಮಾಡುತ್ತಿದ್ದಾರೆ. ಕೇವಲ ಆದಾಯ ತೆರಿಗೆ ವಂಚನೆ ಮಾತ್ರ ಅಲ್ಲ. ಚಿತ್ರದಲ್ಲಿ ಬಂದ ಲಾಭವನ್ನು ಗೌಪ್ಯವಾಗಿಟ್ಟು ಬ್ಲಾಕ್ ಮನಿಯನ್ನು ವೈಟ್ ಮಾಡುತ್ತಿದ್ದಾರೆ ಎನ್ನುವ ಆರೋಪವಿದೆ. ಈ ಆರೋಪದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಲೆಕ್ಕ ಪತ್ರಗಳ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

    ಸುದೀಪ್, ಶಿವರಾಜ್ ಕುಮಾರ್ ಅಭಿನಯದ ‘ದಿ ವಿಲನ್’ ಅಕ್ಟೋಬರ್ 18 ರಂದು ಬಿಡುಗಡೆಯಾಗಿದ್ದರೆ, ಯಶ್ ಅಭಿನಯದ ‘ಕೆಜಿಎಫ್’ ಡಿಸೆಂಬರ್ 21 ರಂದು ಬಿಡುಗಡೆಯಾಗಿತ್ತು. ಪುನೀತ್ ರಾಜ್‍ಕುಮಾರ್ ಅಭಿನಯದ ‘ನಟಸಾರ್ವಭೌಮ’ ಫೆಬ್ರವರಿ 7ಕ್ಕೆ ಬಿಡುಗಡೆಯಾಗಲಿದೆ.

    ಐಟಿ ದಾಳಿ ನಡೆಸಿದ ಮಾತ್ರಕ್ಕೆ ತೆರಿಗೆ ವಂಚನೆ ನಡೆಸಿದ್ದಾರೆ ಎಂದರ್ಥವಲ್ಲ. ತಮ್ಮ ಆದಾಯಕ್ಕೆ ಸರಿಯಾಗಿ ಮಾಹಿತಿ ನೀಡಿದರೆ ಯಾರೂ ಹೆದರುವ ಅಗತ್ಯವಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಟಾಪ್ ಸ್ಟಾರ್ ಗಳಿಗೆ ಸಂಭಾವನೆ ಕೊಡ್ತಿದ್ದ ನಿರ್ಮಾಪಕ ಈಗ ಫಿಲಂ ಚೇಂಬರ್ ಮೊರೆ ಹೋದ್ರು!

    ಟಾಪ್ ಸ್ಟಾರ್ ಗಳಿಗೆ ಸಂಭಾವನೆ ಕೊಡ್ತಿದ್ದ ನಿರ್ಮಾಪಕ ಈಗ ಫಿಲಂ ಚೇಂಬರ್ ಮೊರೆ ಹೋದ್ರು!

    ಬೆಂಗಳೂರು: ಕನ್ನಡದ ಮೊದಲ ಸಿನಿಮಾಸ್ಕೋಪ್ ಚಿತ್ರಕ್ಕೆ ಬಂಡವಾಳ ಹಾಕಿ ಚಿತ್ರರಂಗಕ್ಕಾಗಿ ದುಡಿದ ನಿರ್ಮಾಪಕನ ಕರುಣಾಜನಕ ಕಥೆ ಇದು. `ರವಿವರ್ಮನ ಕುಂಚದ ಕಲೆ ಬಲೆ ಸಕಾರವೋ’ ಈ ಹಾಡು ಯಾರಿಗೆ ಗೊತ್ತಿಲ್ಲ ಹೇಳಿ.

    ಸೊಸೆ ತಂದ ಸೌಭಾಗ್ಯ ಸಿನಿಮಾದ ಹೆಸರಾಂತ ನಿರ್ಮಾಪಕ ಎಸ್.ಡಿ ಅಂಕಲಗಿ ಅವರ ಈಗಿನ ಪರಿಸ್ಥಿತಿ ನೋಡಿದರೆ ಮನಕಲಕುತ್ತೆ. ಡಾ. ವಿಷ್ಣುವರ್ಧನ್, ಶಂಕರ್ ನಾಗ್, ಅನಂತನಾಗ್, ಶ್ರೀನಾಥ್, ಮಂಜುಳ, ಜಯಂತಿ, ವಜ್ರಮುನಿಯಂತ ಟಾಪ್ ಸ್ಟಾರ್‍ಗಳಿಗೆ ಸಂಭಾವನೆ ಕೊಟ್ಟ ಕೈಯಲ್ಲಿ ಈಗ ಬಿಡಿಗಾಸಿಲ್ಲ.

    8ಕ್ಕೂ ಹೆಚ್ಚು ಸೂಪರ್ ಹಿಟ್ ಸಂಸಾರಿಕ ಸಿನಿಮಾಗಳನ್ನ ಕೊಟ್ಟ ಅಂಕಲಗಿ ಇಂದು ಕಾಲು ಮುರಿದುಕೊಂಡು ಮೂಲೆ ಗುಂಪಾಗಿದ್ದಾರೆ. ಆಸ್ಪತ್ರೆ ಖರ್ಚಿಗೆ ಕಾಸಿಲ್ಲ, ಮಗ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಫಿಲಂ ಚೇಂಬರ್ ಮತ್ತು ನಿರ್ಮಾಪಕರ ಸಂಘದಿಂದ ಬಂದ ಸಹಾಯಧನ ಆಸ್ಪತ್ರೆ ಖರ್ಚಿಗೆ ಖಾಲಿಯಾಗಿದೆ. ಈಗ ನಿರ್ಮಾಪಕ ಎಸ್.ಡಿ ಅಂಕಲಗಿ ಕನ್ನಡ ಚಲನಚಿತ್ರ ಅಕಾಡೆಮಿಯ ಸಹಾಯಾಸ್ತದ ನಿರೀಕ್ಷೆಯಲ್ಲಿದ್ದಾರೆ.