Tag: ನಿರ್ಮಾಪಕ ವಿಜಯ್ ಕಿರಗಂದೂರು

  • ತೆಲುಗಿನಲ್ಲಿ ಭಾರೀ ಮೊತ್ತಕ್ಕೆ ರಾಕಿ ಭಾಯ್ ಸಿನಿಮಾ ಸೇಲ್

    ತೆಲುಗಿನಲ್ಲಿ ಭಾರೀ ಮೊತ್ತಕ್ಕೆ ರಾಕಿ ಭಾಯ್ ಸಿನಿಮಾ ಸೇಲ್

    ಬೆಂಗಳೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ಕೆಜಿಎಫ್-2 ಸಿನಿಮಾದ ವಿತರಣೆ ಹಕ್ಕು ಭಾರೀ ಮೊತ್ತಕ್ಕೆ ತೆಲುಗಿನಲ್ಲಿ ಮಾರಾಟವಾಗಿದೆ. ಈಗಾಗಲೇ ಕೆಜಿಎಫ್-2 ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಈ ಮಧ್ಯೆ ತೆಲುಗಿನ ಖ್ಯಾತ ನಿರ್ಮಾಪಕ ದಿಲ್ ರಾಜು ಬರೋಬ್ಬರಿ 65 ಕೋಟಿ ರೂ.ಗೆ ಕೆಜಿಎಫ್-2 ಸಿನಿಮಾ ಬಿಡುಗಡೆ ರೈಟ್ಸ್‍ನನ್ನು ತಮ್ಮದಾಗಿಸಿಕೊಂಡಿದ್ದಾರೆ.

    ಕೆಜಿಎಫ್-1 ಅಮೆಜಾನ್ ಪ್ರೈಮ್ ಸೇರಿದಂತೆ ಡಿಜಿಟಲ್ ಮಾರುಕಟ್ಟೆಯಲ್ಲಿ ಅತೀ ಹೆಚ್ಚು ಹಣ ಗಳಿಸುವ ಮೂಲಕ ಈ ಹಿಂದೆ ಹೊಸ ದಾಖಲೆ ಸೃಷ್ಟಿಸಿತ್ತು. ಅಲ್ಲದೆ ಕೆಜಿಎಫ್-1 ಬಿಡುಗಡೆಯ ಹಕ್ಕನ್ನು ಈ ಮುನ್ನ ಕೇವಲ 5 ಕೋಟಿಗೆ ಖರೀದಿಸಲಾಗಿತ್ತು. ಆದರೆ ಅದರಿಂದ ಬಂದ ಲಾಭ ಬರೋಬ್ಬರಿ 12 ಕೋಟಿ. ಹಾಗಾಗಿ ಕೆಜಿಎಫ್-1ರ ಯಶಸ್ಸು ಕಂಡ ಹಲವಾರು ತೆಲುಗು ನಿರ್ಮಾಪಕರು ಕೆಜಿಎಫ್-2 ಸಿನಿಮಾದ ಬಿಡುಗಡೆ ಹಕ್ಕನ್ನು ಖರೀದಿಸಲು ನಾ ಮುಂದು, ತಾ ಮುಂದು ಎಂದು ಸಾಲಿನಲ್ಲಿ ನಿಂತಿದ್ದರು.

    ನಿರ್ಮಾಪಕ ವಿಜಯ್ ಕಿರಂಗದೂರು 70 ಕೋಟಿ ಬೇಡಿಕೆ ಇಟ್ಟಿದ್ದನ್ನು ನೋಡಿ ಹಲವು ನಿರ್ಮಾಪಕರು ಅಚ್ಚರಿಗೊಂಡು ಹಿಂದೆ ಸರಿದಿದ್ದರು. ಟಾಲಿವುಡ್‍ನ ಖ್ಯಾತ ನಿರ್ಮಾಪಕ ದಿಲ್ ರಾಜು, ತೆಲಂಗಾಣ ಮತ್ತು ಆಂಧ್ರಪ್ರದೇಶ ಸೇರಿ ಎರಡು ತೆಲುಗು ರಾಜ್ಯಗಳಲ್ಲೂ ಕೆಜಿಎಫ್-2 ಸಿನಿಮಾ ಬಿಡುಗಡೆಯ ಹಕ್ಕನ್ನು 65 ಕೋಟಿ ರೂ.ಗೆ ಮಾತನಾಡಿ ಖರೀದಿಸುವ ಮೂಲಕ ಎಲ್ಲಾ ನಿರ್ಮಾಪಕರು ಗಪ್-ಚುಪ್‍ಗೊಳ್ಳುವಂತೆ ಮಾಡಿದ್ದಾರೆ.

    ಸದ್ಯ ಕೆಜಿಎಫ್-2 ಸಿನಿಮಾ ಬಿಡುಗಡೆಗೂ ಮುನ್ನವೇ ತೆಲುಗಿನಲ್ಲಿ ದೊಡ್ಡ ಬಿಸಿನೆಸ್ ಮಾಡುವ ಮೂಲಕ ಟಾಲಿವುಡ್ ಬಹುದೊಡ್ಡ ನಿರ್ಮಾಪಕ ದಿಲ್ ರಾಜುರವರ ಕೈ ಸೇರಿದೆ. ಅಲ್ಲದೆ ನಿರ್ಮಾಪಕ ದಿಲ್ ರಾಜು, ವಿಜಯ್ ಕಿರಂಗದೂರುರವರಿಗೆ ಮುಂಗಡವಾಗಿಯೂ ಹಣ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಇತ್ತೀಚೆಗಷ್ಟೇ ಹೈದರಾಬಾದ್‍ನಲ್ಲಿ ನಿರ್ಮಾಪಕ ದಿಲ್ ರಾಜು ತಮ್ಮ 50ನೇ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದರು. ಬರ್ತ್‍ಡೇಗೆ ದಕ್ಷಿಣ ಭಾರತದ ಗಣ್ಯಾತಿಗಣ್ಯರು ಆಗಮಿಸಿದ್ದರು ಹಾಗೂ ಸ್ಯಾಂಡಲ್‍ವುಡ್ ನಟ ರಾಕಿಂಗ್ ಸ್ಟಾರ್ ಯಶ್, ವಿಜಯ್ ಕಿರಂಗದೂರು ಅವರನ್ನು ಆಹ್ವಾನಿಸಿದ್ದರು.

  • ಕೆಜಿಎಫ್ 2 ಚಿತ್ರೀಕರಣ – ಚಿತ್ರತಂಡಕ್ಕೆ ಬಿಗ್ ರಿಲೀಫ್

    ಕೆಜಿಎಫ್ 2 ಚಿತ್ರೀಕರಣ – ಚಿತ್ರತಂಡಕ್ಕೆ ಬಿಗ್ ರಿಲೀಫ್

    ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷೆಯ ‘ಕೆಜಿಎಫ್-2’ ಚಿತ್ರತಂಡಕ್ಕೆ ಚಿತ್ರೀಕರಣ ನಡೆಸದಂತೆ ಕೋಲಾರ ಸಿಟಿ ಸಿವಿಲ್ ಕೋರ್ಟ್ ನೀಡಿತ್ತು. ಇದೀಗ ಕೋರ್ಟ್ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಚಿತ್ರತಂಡಕ್ಕೆ ಬಿಗ್ ರಿಲೀಫ್ ಸಿಕ್ಕಿದೆ.

    ಸಿಟಿ ಸಿವಿಲ್ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಚಿತ್ರೀಕರಣ ವೇಳೆ ಪರಿಸರಕ್ಕೆ ಯಾವುದೇ ಹಾನಿ ಮಾಡಿಲ್ಲ. ಇನ್ನೂ 25 ದಿನಗಳಲ್ಲಿ ಚಿತ್ರೀಕರಣ ಮುಗಿಸುತ್ತೇವೆ ಎಂದು ಮನವಿ ಕೋರ್ಟ್ ಬಳಿ ಮಾಡಿಕೊಂಡಿದ್ದರು. ನಿರ್ಮಾಪಕರ ಮನವಿ ಪುರಸ್ಕರಿಸಿದ ಹೈಕೋರ್ಟ್ ಚಿತ್ರೀಕರಣಕ್ಕೆ ಅನುಮತಿ ನೀಡಿದೆ.

    ಕೋಲಾರ ಜಿಲ್ಲೆಯ ಕೆಜಿಎಫ್‍ನ ಕೆನಡೀಸ್ ಸೈನೈಡ್ ಗುಡ್ಡದ ಮೇಲೆ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್-2 ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ದುಬಾರಿಯ ಸೆಟ್ ಹಾಕಲಾಗಿತ್ತು. ಆದರೆ ಶ್ರೀನಿವಾಸ್ ಎಂಬವರು ಪರಿಸರ ಹಾನಿ ಹಾಗೂ ಚಿತ್ರೀಕರಣದಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂದು ಕೆಜಿಎಫ್ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿದಾರರ ವಾದ ಪುರಸ್ಕರಿಸಿ ಕೋರ್ಟ್ ಕೆಜಿಎಫ್ ನಿರ್ಮಾಪಕರಿಗೆ ತಾತ್ಕಾಲಿಕವಾಗಿ ಶೂಟಿಂಗ್ ನಿಲ್ಲಿಸುವಂತೆ ಸೂಚನೆ ನೀಡಿತ್ತು.

    ಇದೀಗ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡುವ ಮೂಲಕ ಚಿತ್ರೀಕರಣಕ್ಕೆ ಅವಕಾಶ ನೀಡಿದೆ. ಯಶ್ ಅಭಿನಯಿಸುತ್ತಿರುವ ‘ಕೆಜಿಎಫ್-2’ ಸಿನಿಮಾವನ್ನ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದಾರೆ. ವಿಜಯ್ ಕಿರಗಂದೂರು ನಿರ್ಮಿಸುತ್ತಿದ್ದಾರೆ.