Tag: ನಿರ್ಲಕ್ಷ

  • ಪುರಾತತ್ವ ಇಲಾಖೆಯ ನಿರ್ಲಕ್ಷ್ಯಕ್ಕೊಳಗಾದ ಚಿತ್ರದುರ್ಗ ಕೋಟೆ

    ಪುರಾತತ್ವ ಇಲಾಖೆಯ ನಿರ್ಲಕ್ಷ್ಯಕ್ಕೊಳಗಾದ ಚಿತ್ರದುರ್ಗ ಕೋಟೆ

    ಚಿತ್ರದುರ್ಗ: ಐತಿಹಾಸಿಕ ಪ್ರವಾಸಿ ತಾಣವಾದ ಚಿತ್ರದುರ್ಗದ ಕೋಟೆಯಲ್ಲಿ ಬಿದ್ದರೆ ಸೀದಾ ಶಿವನ ಪಾದ ಗ್ಯಾರಂಟಿ ಎಂಬಂತಾಗಿದೆ. ಜಗತ್ ಪ್ರಸಿದ್ಧ ಕೋಟೆ ಪುರಾತತ್ವ ಇಲಾಖೆಯ ನಿರ್ಲಕ್ಷ್ಯದಿಂದ ಪ್ರವಾಸಿ ತಾಣವೀಗ ಮೃತ್ಯುಕೂಪವಾಗಿ ಮಾರ್ಪಟ್ಟಿದೆ.

    ಹೌದು. ಲಕ್ಷಾಂತರ ಜನ ಪ್ರವಾಸಿಗರು ಬರುವ ಪ್ರಸಿದ್ಧ ಪ್ರವಾಸಿ ತಾಣವಾದ ಚಿತ್ರದುರ್ಗ ಕೋಟೆಯಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರವಿಲ್ಲ. ಅಪಾಯಕಾರಿ ಸ್ಥಳಗಳಲ್ಲಿ ಸೂಚನಾ ಫಲಕವೂ ಇಲ್ಲ. ಹೀಗೆ ಪುರಾತತ್ವ ಇಲಾಖೆ ಪ್ರಸಿದ್ಧ ಚಿತ್ರದುರ್ಗ ಕೋಟೆಯಲ್ಲಿ ನಿರ್ಲಕ್ಷ ತೋರುತ್ತಿರುವುದು ಪ್ರವಾಸಿಗರ ಕೆಂಗಣ್ಣಿಗೆ ಕಾರಣವಾಗಿದೆ.

    ಏಳುಸುತ್ತಿನ ಕೋಟೆಯೊಳಗೆ ಬಂದವರು ವಾಪಾಸ್ ಹೋಗುವುದೇ ಅನುಮಾನವಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಯಾಕೆಂದರೆ ಕೋಟೆಯಲ್ಲಿನ ಅಪಾಯಕಾರಿ ಸ್ಥಳಗಳಲ್ಲಿ ಮುಂಜಾಗ್ರತಾ ಸೂಚನ ಫಲಕವಿಲ್ಲ. ನೂರಾರು ಅಡಿ ಎತ್ತರದ ತುಪ್ಪದ ಕೊಳ, ಗೋಪಾಲಸ್ವಾಮಿ ಹೊಂಡದಲ್ಲಿ ಪ್ರವಾಸಿಗರ ಜೀವಕ್ಕೆ ರಕ್ಷಣೆಯಿಲ್ಲ. ಪುರಾತತ್ವ ಇಲಾಖೆ ಪ್ರವಾಸಿಗರ ಹಣ ಮಾತ್ರ ಬೇಕು, ರಕ್ಷಣೆ ಮಾತ್ರ ಬೇಡ ಅನ್ನುತ್ತಿದೆ ಎಂದು ಇಲಾಖೆಯ ನಿರ್ಲಕ್ಷ್ಯಕ್ಕೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಏನಾದರೂ ಅವಘಡ ಸಂಭವಿಸಿದರೆ ಪ್ರಥಮ ಚಿಕಿತ್ಸೆ ನೀಡುವುದಕ್ಕೂ ಕೋಟೆಯಲ್ಲಿ ಸೂಕ್ತ ವ್ಯವಸ್ಥೆಯಿಲ್ಲ. ಅಹಿತಕರ ಘಟನೆಗಳು ಆದರೆ ಕೋಟೆ ಪ್ರವಾಸಿಗರಿಗೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯೇ ಆಸರೆ. ಹೀಗಾಗಿ ಪ್ರವಾಸಿಗರಲ್ಲಿ ಆತಂಕ ಹೆಚ್ಚಾಗಿದೆ.

  • ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯಕ್ಕೆ ವ್ಯಕ್ತಿ ಬಲಿ, ಮೂವರಿಗೆ ಗಾಯ

    ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯಕ್ಕೆ ವ್ಯಕ್ತಿ ಬಲಿ, ಮೂವರಿಗೆ ಗಾಯ

    ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 6ರ ಬಳಿ ಮೇಲುಸೇತುವೆಗಾಗಿ ತೋಡಿದ್ದ ಗುಂಡಿಗೆ ವಾಹನವೊಂದು ಬಿದ್ದು ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಆನೇಕಲ್ ತಾಲೂಕಿನ ತಿರುಮಗೊಂಡನಹಳ್ಳಿ ಬಳಿ ನಡೆದಿದೆ.

    ಪರಮಶಿವಂ(57) ಮೃತ ದುರ್ದೈವಿಯಾಗಿದ್ದು, ಈ ಘಟನೆ ಇಂದು ಬೆಳಗ್ಗೆ 6.30ರ ಸುಮಾರಿಗೆ ನಡೆದಿದೆ. ಪರಮಶಿವಂ ಅವರು ತಿರುಮಗೊಂಡನಹಳ್ಳಿ ಬಳಿ ತನ್ನ ಓಮ್ನಿ ಕಾರಿನಲ್ಲಿ ಚಲಿಸುತ್ತಿದ್ದಾಗ ಮೇಲುಸೇತುವೆಗಾಗಿ ತೋಡಿದ್ದ ಬೃಹತ್ ಗುಂಡಿಗೆ ಓಮ್ನಿ ಸಮೇತ ಬಿದ್ದಿದ್ದಾರೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಘಟನೆಯಲ್ಲಿ ಭಾಸ್ಕರನ್, ಸತೀಶ್ ಹಾಗೂ ಸತ್ಯರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಸತ್ಯರಾಜು ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

    ಘಟನೆಗೆ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದ್ದು, ಕಾಮಗಾರಿ ಸ್ಥಳದಲ್ಲಿ ಸರಿಯಾದ ಸೂಚನಾ ಫಲಕ, ಬ್ಯಾರಿಕೇಡ್ ಗಳನ್ನು ಆಳವಡಿಸಿಲ್ಲ. ಇದನ್ನು ಗಮನಿಸದ ಓಮಿನಿ ಚಾಲಕ ನೇರವಾಗಿ ಗುಂಡಿಗೆ ಕಾರನ್ನು ನುಗ್ಗಿಸಿದ್ದಾನೆ. ಬಿದ್ದ ರಭಸಕ್ಕೆ ವಾಹನ ಸಂಸಪೂರ್ಣ ನಜ್ಜುಗುಜ್ಜಾಗಿದೆ.

    ಘಟನೆ ಸಂಬಂಧ ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ವೈದ್ಯರ ನಿರ್ಲಕ್ಷದಿಂದ ಅವಳಿ ಶಿಶುಗಳು ಹೊಟ್ಟೆಯಲ್ಲೇ ಸಾವು!

    ವೈದ್ಯರ ನಿರ್ಲಕ್ಷದಿಂದ ಅವಳಿ ಶಿಶುಗಳು ಹೊಟ್ಟೆಯಲ್ಲೇ ಸಾವು!

    ಬಾಗಲಕೋಟೆ: ವೈದ್ಯರ ನಿರ್ಲಕ್ಷದಿಂದ ಅವಳಿ ಶಿಶುಗಳು ಹೊಟ್ಟೆಯಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.

    ಬೀಳಗಿ ತಾಲೂಕಿನ ರೊಳ್ಳಿ ಗ್ರಾಮದ ಶೃತಿ ಹರಿಜನಳ (25) ಗರ್ಭದಲ್ಲೇ ಅವಳಿ ಶಿಶುಗಳು ಸಾವನ್ನಪ್ಪಿವೆ. ಹೆರಿಗೆ ನೋವು ಬಂದ ಹಿನ್ನೆಲೆಯಲ್ಲಿ ಶೃತಿ ಅವರನ್ನು ಸಂಬಂಧಿಕರು ಬೀಳಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರು ಎರಡು ಗಂಟೆ ನಂತರ ಸರಳ ಹೆರಿಗೆಯಾಗುತ್ತೆ ಎಂದು ಭರವಸೆ ನೀಡಿದ್ದರು. ಆದರೆ ಎಂಟು ತಾಸುಗಳ ನಂತರ ಹೆರಿಗೆಯಾಗಿದೆ.

    ಹೆರಿಗೆ ವೇಳೆ ಒಂದು ಗಂಡು ಒಂದು ಹೆಣ್ಣು ಅವಳಿ ಶಿಶುಗಳು ಜನಿಸಿದ್ದು, ಗರ್ಭದಲ್ಲೇ ಸಾವನ್ನಪ್ಪಿವೆ ಎಂದು ತಿಳಿದು ಬಂದಿದೆ. ಬಾಣಂತಿ ಶೃತಿ ಸಂಬಂಧಿಕರು ವೈದ್ಯರ ಭರವಸೆ ಮೇಲೆ ನಾವು ಬೇರೆ ಕಡೆ ಕರೆದೊಯ್ಯಲಿಲ್ಲ. ಶಿಶುಗಳ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪ ಮಾಡಿದ್ದಾರೆ.

    ಈ ಘಟನೆ ಸೋಮವಾರ ಬೆಳಿಗ್ಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಬಾಣಂತಿ ಶೃತಿಯನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಾಣಂತಿ ಸಂಬಂಧಿಕರು ಆಗ್ರಹಿಸಿದ್ದಾರೆ.