Tag: ನಿವೃತ್ತ ಶಿಕ್ಷಕ

  • ಗ್ರಾಮ ಪಂಚಾಯ್ತಿ ಚುನಾವಣೆ ವಿಚಾರ – ಸೋತ ಗುಂಪಿನಿಂದ ಹಲ್ಲೆ, ನಿವೃತ್ತ ಶಿಕ್ಷಕ ಸಾವು

    ಗ್ರಾಮ ಪಂಚಾಯ್ತಿ ಚುನಾವಣೆ ವಿಚಾರ – ಸೋತ ಗುಂಪಿನಿಂದ ಹಲ್ಲೆ, ನಿವೃತ್ತ ಶಿಕ್ಷಕ ಸಾವು

    ದಾವಣಗೆರೆ: ಗ್ರಾಮ ಪಂಚಾಯ್ತಿ ಚುನಾವಣೆಯ ಹಿನ್ನೆಲೆ ಎರಡು ಕುಟುಂಬಗಳ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ನಿವೃತ್ತ ಶಿಕ್ಷಕ ಮೃತಪಟ್ಟ ಘಟನೆ ದಾವಣಗೆರೆಯಲ್ಲಿ ನಡೆದಿದೆ.

    ಕೃಷ್ಣಪ್ಪ (68) ಸಾವನ್ನಪ್ಪಿದ ನಿವೃತ್ತ ಶಿಕ್ಷಕ. ಇವರ ಪುತ್ರ ವಿಜಯೇಂದ್ರಗೆ ತೀವ್ರ ಗಾಯಗಳಾಗಿವೆ. ಗಾಯಾಳುವನ್ನು ಜಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

    ದೇವಿಕೆರೆ ಪಂಚಾಚಾಯ್ತಿ ವ್ಯಾಪ್ತಿಯ ಮಿನಿಗರಹಳ್ಳಿ ಗ್ರಾಮದಲ್ಲಿ ಸೋತ ಗುಂಪಿನಿಂದ ಕೃಷ್ಣಪ್ಪ ಮೇಲೆ ಕಟ್ಟಿಗೆಯಿಂದ ಮೇಲೆ ಹಲ್ಲೆ ಮಾಡಲಾಗಿದೆ. ಪರಿಣಾಮ ಗಂಭೀರ ಗಾಯಗೊಂಡು ಕೃಷ್ಣಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

    ಇತ್ತೀಚಿಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮೃತ ಕೃಷ್ಣಪ್ಪ ಸಂಬಂಧಿ ಗೆಲುವು ಸಾಧಿಸಿದ್ದರು. ಸೋಲು ಕಂಡವರು ಇಂದು ಉದ್ದೇಶ ಪೂರ್ವಕವಾಗಿ ಜಗಳ ತೆಗೆದು ಹಲ್ಲೆ ನಡೆಸಿದ್ದಾರೆ. ಇನ್ನು ಕೃಷ್ಣಪ್ಪ ಶವವನ್ನು ಮರಣೋತ್ತರ ಪರೀಕ್ಷೆಗೆ ಜಗಳೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿ, ಮೃತದೇಹವನ್ನು ಸಂಬಂಧಿಕರಿಗೆ ಒಪ್ಪಿಸಲಾಗಿದೆ.

    ಸ್ಥಳಕ್ಕೆ ಜಗಳೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಶ್ರೀ ರಾಮ ಕೋಟಿ ಬರೆದು ಅಯೋಧ್ಯೆಗೆ ಕಳುಹಿಸಲು ಮುಂದಾದ ಮುಸ್ಲಿಂ ನಿವೃತ್ತ ಶಿಕ್ಷಕ

    ಶ್ರೀ ರಾಮ ಕೋಟಿ ಬರೆದು ಅಯೋಧ್ಯೆಗೆ ಕಳುಹಿಸಲು ಮುಂದಾದ ಮುಸ್ಲಿಂ ನಿವೃತ್ತ ಶಿಕ್ಷಕ

    ಕೋಲಾರ: ಆತನದ್ದು ಧರ್ಮಕ್ಕೂ ಮಿಗಿಲಾದ ಭಕ್ತಿ, ಆತನ ಧಾರ್ಮಿಕ ಚಿಂತನೆ ಅದೆಷ್ಟೋ ಜನರಿಗೆ ಸ್ಫೂರ್ತಿ. ಮುಸ್ಲಿಂ ರಾಮ ಭಕ್ತನೊರ್ವ ಶ್ರೀರಾಮ ಕೋಟಿ ಬರೆಯುತ್ತಾ, ಶ್ರೀರಾಮನ ಜಪದಿಂದಲೇ ತಮ್ಮ ಜೀವನದ ಅಂತ್ಯಕ್ಕೆ ಬಂದು ಸೇರಿದ್ದಾರೆ.

    ಶ್ರೀರಾಮಕೋಟಿ ಬರೆಯುತ್ತಿರುವ ಶ್ರೀರಾಮನ ವೃದ್ಧ ಭಕ್ತ, ಶ್ರೀರಾಮಕೋಟಿ ಬರೆದು ಭದ್ರಾಚಲಂ, ಉತ್ತರ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಅಯೋಧ್ಯೆಯ ರಾಮ ದೇಗುಲಕ್ಕೆ ಅರ್ಪಿಸುವ ಕನಸು ಹೊತ್ತಿರುವ 96 ವರ್ಷದ ಮುಸ್ಲಿಂ ಧರ್ಮದ ಪಾಚಾಸಾಭ್.

    ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಮಾಗೊಂದಿ ಗ್ರಾಮದಲ್ಲಿ 1923 ರಲ್ಲಿ ಬಡ ಮುಸ್ಲಿಂ ಕುಟುಂಬದಲ್ಲಿ ಜನಿಸಿದ್ದರು. ಅವತ್ತಿಗೆ ಕನ್ನಡದಲ್ಲಿ 8ನೇ ತರಗತಿವರೆಗೆ ಹಾಗೂ 4ನೇ ತರಗತಿಯನ್ನು ಇಂಗ್ಲೀಷ್ ಭಾಷೆಯಲ್ಲಿ ವ್ಯಾಸಂಗ ಮಾಡಿದ್ದಾರೆ. ಹಿಂದೂಗಳ ಆರಾದ್ಯ ದೈವ ಕಲಿಯುಗದ ಮಹಾ ಪುರುಷ ಶ್ರೀರಾಮನ ಜಪ ಮಾಡುತ್ತಾ, ರಾಮನಿಗೆ ತಮ್ಮ ಭಕ್ತಿಯನ್ನ ಸಮರ್ಪಣೆ ಮಾಡುತ್ತಿದ್ದಾರೆ. ನಿವೃತ್ತಿಯಾದ ಬಳಿಕ ಪಿಂಚಣಿಯಲ್ಲಿ ಶ್ರೀರಾಮಕೋಟಿ ಬರೆದುಕೊಂಡು ನೆಮ್ಮದಿಯ ಜೀವನ ಸಾಗಿಸುತ್ತಿದ್ದಾರೆ.

    ಶಿಕ್ಷಕರಾಗಿದ್ದಾಗ 22 ವರ್ಷಗಳ ಹಿಂದೆ ಸ್ನೇಹಿತನೊಂದಿಗೆ ಭದ್ರಚಲಂ ದೇವಾಲಯಕ್ಕೆ ಹೋಗಿದ್ದಾಗ ಅಲ್ಲಿ ಒಬ್ಬ ಸಾಧು ಶ್ರೀರಾಮ ಕೋಟಿ ಬರೆಯುತ್ತಿದ್ದನ್ನು ಕಂಡು ವಿಚಾರಿಸಿದ ಇವರು ಹಾಗೆ ಬರೆದಲ್ಲಿ ನಿನಗೆ ಒಳ್ಳೆಯದಾಗುತ್ತದೆ ಎಂದಿದ್ದಾರೆ. ಅಂದಿನಿಂದ ನಾನು ಸಹ ಶ್ರೀರಾಮ ಕೋಟಿ ಬರೆಯುವುದನ್ನು ಪ್ರಾರಂಭಿಸಿ, ಪುಸ್ತಕದಲ್ಲಿ ಬರೆಯುವುದರ ಜೊತೆಗೆ ಎಕ್ಕದ ಎಲೆ, ಆಲದ ಎಲೆ, ಕಂಚಿನ ಎಲೆಯ ಮೇಲೂ ಶ್ರೀರಾಮ ಕೋಟಿ ಬರೆಯುತ್ತಿದ್ದಾರೆ. ಈಗ ಒಟ್ಟು 1 ಕೋಟಿ ಬರೆದಿದ್ದಾರೆ, ಅಕ್ಟೋಬರ್ 15ಕ್ಕೆ 1 ಕೋಟೆ ರಾಮಕೋಟೆಯನ್ನು ಬರೆದು ಮುಗಿಸಿದ್ದಾರೆ. ಇನ್ನು ರಾಮಕೋಟೆಯನ್ನು ಭದ್ರಚಲಂಗೆ ಅಥವಾ ಉತ್ತರ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಅಯೋಧ್ಯೆಗೆ ಯಾರಾದರೂ ಜನಪ್ರತಿನಿಧಿಗಳ ಕೈಯಲ್ಲಿ ಅರ್ಪಿಸುವ ಕನಸು ಇವರದ್ದು.

    ಸರ್ವಧರ್ಮ ಸಮನ್ವಯ ಸಾರುವುದೇ ನನ್ನ ಗುರಿಯಾಗಿದೆ ಈ ಗ್ರಾಮದಲ್ಲಿ ಒಂದು ರಾಮಾಂಜನೇಯ ದೇವಾಲಯ ನಿರ್ಮಾಣ ಮಾಡುವ ಕನಸು ಇದೆ. ಪಾಚಾಸಾಭ್ ಗಾಂಧೀಜಿ, ನೆಹರು, ಇಂದಿರಾಗಾಂದಿ, ಕೆ.ಸಿ.ರೆಡ್ಡಿ, ಎಂ.ವಿ.ಕೃಷ್ಣಪ್ಪ, ರವರೊಂದಿಗೆ ಒಡನಾಡಿಗಳಾಗಿದ್ದವರು. ಕೆ.ಸಿ.ರೆಡ್ಡಿ ಅವಧಿಯಲ್ಲಿ ಎಲ್ಲೆಡೆ ಮತ ಹಾಕುವುದು ಹೇಗೆ ಎಂಬುದನ್ನು ಕಲಿಸಿಕೊಟ್ಟವರಾಗಿದ್ದು, ಗೋವಾ ಲೋಕಾಸೇವಾದಿಂದ ನಡೆದ ಗೋವಾ ಸತ್ಯಾಗ್ರಹದಲ್ಲಿ ಕೃಷ್ಣಯ್ಯಶೆಟ್ಟಿರವರ ನೇತೃತ್ವದಲ್ಲಿ ಸ್ವಾತಂತ್ರಕ್ಕೆ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದು, ಅದರ ಸವಿ-ನೆನಪುಗಳನ್ನು ಇಂದಿಗೂ ಹಂಚಿಕೊಳ್ಳುತ್ತಾರೆ. ಜೀವನದಲ್ಲಿ ನೆಮ್ಮದಿ ಸಿಕ್ಕಿದೆ, ಆರೋಗ್ಯವಾಗಿದ್ದೇನೆ, ಸಕ್ಕರೆ, ಬಿಪಿ, ಆಗಲಿ ಯಾವುದೇ ಕಾಯಿಲೆ ಇಲ್ಲ, ಬೇರೆ ಅವ್ಯಾಸಗಳು ಇಲ್ಲ, ಮನಸ್ಸಿಗೆ ನೆಮ್ಮದಿ ಸಿಕ್ಕಿದೆ.

    ಈ ರಾಮ ಕೋಟಿ ಬರೆಯುವದರಿಂದ ನಾನು ಹೇಳಿದ ಮಾತು ನಡೆಯುತ್ತದೆ ಎನ್ನುತ್ತಾರೆ. ಸರ್ವರಿಗೂ ಒಳ್ಳೆಯದನ್ನು ಮಾಡುವ ಆಸೆ ಇರುವ ಪಾಚಾ ಸಾಭ್ ಬಗ್ಗೆ ಸ್ಥಳೀಯರು ಮೆಚ್ಚುಗೆ ಮಾತುಗಳನ್ನಾಡುತ್ತಾರೆ. ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿ ಶ್ರೀರಾಮನ ಮೇಲಿರುವ ಆಸೆ, ಭಕ್ತಿಯನ್ನ ಪ್ರತಿಯೊಬ್ಬರು ಮೆಚ್ಚುವಂತಂಹದ್ದಾಗಿದೆ. ಈತನ ಸಿದ್ಧಾಂತ, ಕೋಮು ಸೌಹಾರ್ಧತೆ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದೆ.

  • ಸರ್ವೇ ವೇಳೆ ಬಂಗಾರಪೇಟೆ ತಹಶೀಲ್ದಾರ್‌ಗೆ ಚಾಕು ಇರಿತ – ಕೊಲೆಗೈದ ನಿವೃತ್ತ ಶಿಕ್ಷಕ ಅರೆಸ್ಟ್

    ಸರ್ವೇ ವೇಳೆ ಬಂಗಾರಪೇಟೆ ತಹಶೀಲ್ದಾರ್‌ಗೆ ಚಾಕು ಇರಿತ – ಕೊಲೆಗೈದ ನಿವೃತ್ತ ಶಿಕ್ಷಕ ಅರೆಸ್ಟ್

    ಕೋಲಾರ: ಸರ್ವೇ ಮಾಡುವ ವೇಳೆ ಗೊಂದಲವಾಗಿ ತಹಶೀಲ್ದಾರ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

    ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ದೊಡ್ಡಕಳವಂಚಿ ಗ್ರಾಮದಲ್ಲಿ ಈ ಘಟನೆ ಜರುಗಿದ್ದು, ಗ್ರಾಮದ ವೆಂಕಟಪತಿ ತಹಶೀಲ್ದಾರ್ ಚಂದ್ರಮೌಳೇಶ್ವರಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಕಳೆದ 3 ವರ್ಷಗಳಿಂದ ಬಂಗಾರಪೇಟೆ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ತುಮಕೂರು ಮೂಲದ ಚಂದ್ರಮೌಳೇಶ್ವರ್ ಗೆ ಚಾಕುವಿನಿಂದ ಇರಿದಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

    ಬಂಗಾರಪೇಟೆಯ ದೊಡ್ಡಕಳವಂಕಿ ಗ್ರಾಮದ ಅರೋಪಿ ನಿವೃತ್ತ ಶಿಕ್ಷಕ ವೆಂಕಟಪತಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದು, ಈ ಸಂಬಂಧ ಸರ್ವೇ ಮಾಡಲು ಹೋದ ವೇಳೆ ತಹಶೀಲ್ದಾರ್‌ಗೆ ಚಾಕುವಿನಿಂದ ಇರಿಯಲಾಗಿದೆ. ತಕ್ಷಣ ತಹಶೀಲ್ದಾರ್ ಕಾರಿನಲ್ಲಿ ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಕೋಲಾರದ ಜಾಲಪ್ಪ ಅಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

     

    ಸ್ಥಳಕ್ಕೆ ಕೋಲಾರ ಜಿಲ್ಲಾಧಿಕಾರಿ ಸತ್ಯಭಾಮ, ಎಸ್ಪಿಗಳಾದ ಕಾರ್ತಿಕ್ ರೆಡ್ಡಿ, ಮೊಹಮದ್ ಸುಜಿತ ಅವರು ಭೇಟಿ ನೀಡಿದ್ದಾರೆ. ಮೃತ ತಹಶೀಲ್ದಾರ್ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನವರಾಗಿದ್ದಾರೆ. ಆರೋಪಿಯನ್ನ ಕಾಮಸಮುದ್ರ ಪೊಲೀಸರು ಬಂಧಿಸಿದ್ದಾರೆ.

  • ಅತ್ತೆಯ ಜೊತೆಗೆ ಸೊಸೆಯ ಅನೈತಿಕ ಸಂಬಂಧ – ಇಬ್ಬರನ್ನು ಇರಿದು ಕೊಂದ ನಿವೃತ್ತ ಶಿಕ್ಷಕ

    ಅತ್ತೆಯ ಜೊತೆಗೆ ಸೊಸೆಯ ಅನೈತಿಕ ಸಂಬಂಧ – ಇಬ್ಬರನ್ನು ಇರಿದು ಕೊಂದ ನಿವೃತ್ತ ಶಿಕ್ಷಕ

    ನವದೆಹಲಿ: ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ನಿವೃತ್ತ ಶಿಕ್ಷಕನೋರ್ವ ಪತಿ ಮತ್ತು ಸೊಸೆಯನ್ನು ಕೊಲೆ ಮಾಡಿರುವ ಘಟನೆ ವಾಯುವ್ಯ ದೆಹಲಿಯಲ್ಲಿ ನಡೆದಿದೆ.

    62 ವರ್ಷದ ನಿವೃತ್ತ ಶಿಕ್ಷಕ ಸತೀಶ್ ಚೌಧರಿ, ಸಿಂಗಪುರದಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿರುವ ತಮ್ಮ ಮಗ ಗೌರವ್ ಚೌಧರಿ ಅವರ ಪತ್ನಿ ಪ್ರಜ್ಞಾ ಚೌಧರಿ (35) ಮತ್ತು ಅವರ ಪತ್ನಿ 62 ವರ್ಷದ ಸ್ನೇಹಲತಾ ಚೌಧರಿ ಅವರನ್ನು ದೆಹಲಿಯ ರೋಹಿಣಿ ನಗರದಲ್ಲಿರುವ ತಮ್ಮ ಮನೆಯಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

    ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿ ಎಸ್.ಡಿ ಮಿಶ್ರಾ, ನಮಗೆ ಈ ಘಟನೆಯ ಬಗ್ಗೆ ಸತೀಶ್ ಚೌಧರಿ ಅವರ ಎರಡನೇ ಪುತ್ರ ಸೌರಭ್ ಚೌಧರಿ ಮಾಹಿತಿ ನೀಡಿದಾಗ ನಾವು ತಕ್ಷಣ ಸ್ಥಳಕ್ಕೆ ಹೋದೆವು. ಆಗ ದೆಹಲಿ ಸಾರಿಗೆ ನಿಗಮದಲ್ಲಿ ನಿವೃತ್ತ ಉದ್ಯೋಗಿಯಾಗಿರುವ ಪ್ರಜ್ಞಾ ಚೌಧರಿ ಮತ್ತು ಅವರ ಅತ್ತೆ ಸ್ನೇಹಲತಾ ಚೌಧರಿ ಅವರು ರಕ್ತದ ಮಡುವಿನಲ್ಲಿ ಬಿದ್ದು ಸಾವನ್ನಪ್ಪಿದ್ದರು ಎಂದು ಹೇಳಿದ್ದಾರೆ.

    ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಸುಮಾರು 6 ಗಂಟೆಗೆ ನಮಗೆ ಸೌರಭ್ ಅವರು ಕರೆ ಮಾಡಿದ್ದರು. ಈ ಘಟನೆಯಲ್ಲಿ ಅತ್ತಿಗೆ ಮತ್ತು ತಾಯಿಯ ಪ್ರಾಣ ಉಳಿಸಲು ಹೋದ ಸತೀಶ್ ಅವರ ಎರಡನೇ ಮಗ ಸೌರಭ್ ಚೌಧರಿ ಅವರಿಗೂ ಸಣ್ಣ ಪುಟ್ಟ ಗಾಯಗಳು ಆಗಿವೆ. ಈ ಸಂಬಂಧ ವಿಜಯ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸತೀಶ್ ಚೌಧರಿ ಅವರನ್ನು ಅರೆಸ್ಟ್ ಮಾಡಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

  • ಪತ್ನಿಗೆ ಗುಂಡಿಕ್ಕಿ ಕೊಲೆಗೈದು ಠಾಣೆಗೆ ಶರಣಾದ ನಿವೃತ್ತ ಶಿಕ್ಷಕ..!

    ಪತ್ನಿಗೆ ಗುಂಡಿಕ್ಕಿ ಕೊಲೆಗೈದು ಠಾಣೆಗೆ ಶರಣಾದ ನಿವೃತ್ತ ಶಿಕ್ಷಕ..!

    ಚಿಕ್ಕಮಗಳೂರು: ನಿವೃತ್ತ ಶಿಕ್ಷಕನೊಬ್ಬ ತನ್ನ ಪತ್ನಿಯನ್ನ ಪಿಸ್ತೂಲಿನಿಂದ ಗುಂಡಿಕ್ಕಿ ಕೊಂದು ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಕಂಚಿಗೂರು ಗ್ರಾಮದಲ್ಲಿ ನಡೆದಿದೆ.

    ಕಂಚಿಗೂರು ನಿವಾಸಿ ಬಸಪ್ಪ(63) ಕೊಲೆಗೈದ ನಿವೃತ್ತ ಶಿಕ್ಷಕ. ಜಯಮ್ಮ(53) ಪತಿಯಿಂದ್ಲೇ ಕೊಲೆಯಾದ ದುರ್ದೈವಿ. ಹಲವು ವರ್ಷಗಳಿಂದ ದಂಪತಿ ನಡುವೆ ವೈಮನಸಿತ್ತು. ಆದರೂ ಹೇಗೋ ಇಬ್ಬರು ಮನಸ್ತಾಪದ ನಡುವೆಯೂ ಜೀವನ ಸಾಗಿಸುತ್ತಿದ್ದರು. ಯಾವಾಗಲು ಇವರಿಬ್ಬರ ನಡುವೆ ಜಗಳವಾಗುತ್ತಲೇ ಇದರಿಂದ ಬಸಪ್ಪ ಬೇಸತ್ತು ಹೋಗಿದ್ದನು.

    ಆದರೆ ಸೋಮವಾರ ಬಸಪ್ಪ ಹಾಗೂ ಆತನ ಪತ್ನಿ ಜಯಮ್ಮನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಅಲ್ಲದೆ ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದೆ. ಈ ವೇಳೆ ಕೋಪಗೊಂಡ ಬಸಪ್ಪ ಇದಕ್ಕೆಲ್ಲ ಒಂದು ಅಂತ್ಯ ಹಾಡಬೇಕೆಂದು ಪಿಸ್ತೂಲಿನಿಂದ ಗುಂಡು ಹಾರಿಸಿ ಪತ್ನಿಯನ್ನು ಕೊಂದು ಹಾಕಿದ್ದಾನೆ. ಅಷ್ಟೇ ಅಲ್ಲದೆ ತಾನೇ ಪತ್ನಿಯನ್ನು ಕೊಲೆ ಮಾಡಿದ್ದು ಅಂತ ಪೋಲೀಸ್ ಠಾಣೆಗೆ ಬಂದು ತಪ್ಪನ್ನು ಒಪ್ಪಿಕೊಂಡಿದ್ದಾನೆ.

    ಘಟನೆ ಕುರಿತು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಲಿಕೆಗೆ ವಯಸ್ಸಿನ ಹಂಗಿಲ್ಲ – 91ರ ಇಳಿ ವಯಸ್ಸಿನಲ್ಲಿ ಬರೆದ್ರು ಪಿಎಚ್‍ಡಿ ಎಂಟ್ರೆನ್ಸ್ ಎಕ್ಸಾಂ

    ಕಲಿಕೆಗೆ ವಯಸ್ಸಿನ ಹಂಗಿಲ್ಲ – 91ರ ಇಳಿ ವಯಸ್ಸಿನಲ್ಲಿ ಬರೆದ್ರು ಪಿಎಚ್‍ಡಿ ಎಂಟ್ರೆನ್ಸ್ ಎಕ್ಸಾಂ

    ಕೊಪ್ಪಳ: ಕಲಿಕೆಗೆ ವಯಸ್ಸಿನ ಹಂಗಿಲ್ಲ. ಹೀಗಾಗಿಯೇ ಅಕ್ಷರದ ಮೇಲಿನ ಪ್ರೀತಿಯುಳ್ಳವರು ನಿರಂತರವಾಗಿ ವಿದ್ಯಾರ್ಥಿಗಳಾಗಿರುತ್ತಾರೆ ಎಂಬುದಕ್ಕೆ ಇಲ್ಲೊಬ್ಬರು ವಯೋವೃದ್ಧ ನಿವೃತ್ತ ಶಿಕ್ಷಕರು ಉದಾಹರಣೆಯಾಗುತ್ತಾರೆ.

    91 ರ ಇಳಿ ವಯಸ್ಸಿನಲ್ಲೂ ಅವರು ಪಿಎಚ್‍ಡಿ ಪದವಿಗೆ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ ಬರೆದು ಬಂದು ಯುವಸಮೂಹ ನಾಚುವಂತೆ ಮಾಡಿದ್ದಾರೆ. ಕೊಪ್ಪಳ ತಾಲೂಕಿನ ಬಿಸರಹಳ್ಳಿ ಗ್ರಾಮದ ನಿವೃತ್ತ ಶಿಕ್ಷಕ ಶರಣಬಸವರಾಜ ಬಿಸರಹಳ್ಳಿ ಅವರು ತಮ್ಮ 91 ನೇ ವಯಸ್ಸಿನಲ್ಲಿಯೂ ಹಂಪಿ ವಿಶ್ವವಿದ್ಯಾಲಯದಲ್ಲಿ ಪಿಎಚ್‍ಡಿ ಪದವಿಗಾಗಿ ಅರ್ಜಿ ಸಲ್ಲಿಸಿದ್ದರು.

    ಇದಕ್ಕೂ ಮುನ್ನ ಧಾರವಾಡದ ಕೆಯುಡಿಯಲ್ಲಿ ಎಂಎ ಪದವಿ ಪಡೆದು ಪಿಎಚ್‍ಡಿಗೆ ಅರ್ಜಿ ಸಲ್ಲಿಸಿದ್ದರು. ಪಿಎಚ್‍ಡಿ ಪದವಿ ಪ್ರವೇಶಕ್ಕೆ ಬೇಕಾದ ಶೇಕಡಾ 55 ರಷ್ಟು ಅಂಕ ಬಂದಿರಲಿಲ್ಲ. ಮತ್ತೆ ಕಳೆದ ವರ್ಷ ಹಂಪಿ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಶೇಕಡಾ 60 ರಷ್ಟು ಅಂಕ ಗಳಿಸಿ ಈ ಬಾರಿ ಪಿಎಚ್‍ಡಿ ಪದವಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದ್ದರು.

    ಹಂಪಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ವಚನ ಸಾಹಿತ್ಯಕ್ಕೆ ಪಿಎಚ್‍ಡಿ ಎಂಟ್ರೆನ್ಸ್ ಎಕ್ಸಾಂ ಬರೆದಿದ್ದಾರೆ. ಪರೀಕ್ಷೆಯ ಫಲಿತಾಂಶ ಬಂದರೆ ಮುಂದೆ ಪಿಎಚ್‍ಡಿ ಮಾಡಲು ಶರಣಬಸವರಾಜ ಬಿಸರಹಳ್ಳಿ ಅವರು ಮುಂದಾಗಿದ್ದಾರೆ. ಬಿಸರಹಳ್ಳಿ ಅವರು 1991-92 ನೇ ಸಾಲಿನಲ್ಲಿ ಶಿಕ್ಷಕ ವೃತ್ತಿಯಿಂದ ನಿವೃತ್ತವಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಾಕಿಂಗ್ ಹೋದಾಗ ಬಸ್ ಹರಿದು ನಿವೃತ್ತ ಶಿಕ್ಷಕ ಸಾವು- ಬಸ್ ಬಿಟ್ಟು ಚಾಲಕ ಪಾರಾರಿ

    ವಾಕಿಂಗ್ ಹೋದಾಗ ಬಸ್ ಹರಿದು ನಿವೃತ್ತ ಶಿಕ್ಷಕ ಸಾವು- ಬಸ್ ಬಿಟ್ಟು ಚಾಲಕ ಪಾರಾರಿ

    ಹಾವೇರಿ: ಖಾಸಗಿ ಬಸ್ ಹರಿದು ಪಾದಚಾರಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದ ಹೊರವಲಯದ ಶಿರಾಳಕೊಪ್ಪ ರಸ್ತೆಯಲ್ಲಿ ನಡೆದಿದೆ.

    ಮೃತ ವ್ಯಕ್ತಿಯನ್ನ ಲೋಕನಗೌಡ ಪ್ಯಾಟಿ(62) ಎಂದು ಗುರುತಿಸಲಾಗಿದೆ. ಮೃತ ಲೋಕನಗೌಡ ಪಟ್ಟಣದ ನಿವೃತ್ತ ಶಿಕ್ಷಕರಾಗಿದ್ದು, ಬೆಳಗ್ಗೆ ವಾಕಿಂಗ್ ಹೋಗಿದ್ದ ವೇಳೆ ಈ ಅಪಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆ ಬಳಿಕ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ.

    ಸ್ಥಳಕ್ಕೆ ಹಿರೇಕೆರೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.