Tag: ನಿವೇದಿತಾ ಗೌಡ

  • ಟೀಕಾಕಾರರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

    ಟೀಕಾಕಾರರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

    ಬೆಂಗಳೂರು: ಯುವ ದಸರಾ ವೇದಿಕೆ ಮೇಲೆ ರ‍್ಯಾಪರ್ ಚಂದನ್ ಶೆಟ್ಟಿ ಪ್ರೇಮ ನಿವೇದನೆ ಬಗ್ಗೆ ಟೀಕೆ ಮಾಡುತ್ತಿರುವವರಿಗೆ ನಿವೇದಿತಾ ಗೌಡ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿ ತಿರುಗೇಟು ಕೊಟ್ಟಿದ್ದಾರೆ.

    ಭಾನುವಾರ ವಿಡಿಯೋ ಪೋಸ್ಟ್ ಮಾಡಿ, ನಾನು ಚಂದನ್ ಅವರನ್ನು ತುಂಬಾ ಇಷ್ಟಪಡುತ್ತೇನೆ. ಅದೊಂದು ಡ್ರೀಮಿ ಪ್ರಪೋಸಲ್ ಆಗಿತ್ತು. ಈ ಹ್ಯಾಂಗ್‍ಓವರ್‍ನಿಂದ ಹೊರಗೆ ಬರಲಾಗುತ್ತಿಲ್ಲ. ಕೊನೆಗೂ ನನಗೆ ನನ್ನ ಪ್ರಿನ್ಸ್ ಚಾರ್ಮಿಂಗ್ ಸಿಕ್ಕಿದ್ದಾರೆ. ನಮ್ಮ ಪ್ರೀತಿಗೆ ಸಪೋರ್ಟ್ ಮಾಡಿದ ಎಲ್ಲರಿಗೂ ಧನ್ಯವಾದ ಎಂದು ಹೇಳಿದ್ದಾರೆ. ಇದನ್ನೂ ಓದಿ:ಪ್ರೀತಿ ಒಪ್ಪಿಕೊಂಡ ಗೊಂಬೆಗೆ ಥ್ಯಾಂಕ್ಸ್ ಹೇಳಿದ ಚಂದನ್ ಶೆಟ್ಟಿ

    https://www.instagram.com/p/B3Rh6WXAVbr/

    ಆದರೆ ನಮ್ಮ ಪ್ರೀತಿಯ ವಿಚಾರಕ್ಕೆ ಯಾಕೆ ಕೆಲವರು ಬೇಸರವಾಗಿದ್ದೀರಾ ಎಂದು ತಿಳಿಯುತ್ತಿಲ್ಲ. ನಮ್ಮ ವಿಚಾರಕ್ಕೆ ನೀವು ಬೇಸರಗೊಳ್ಳಲು ಯಾವುದೇ ಕಾರಣ ನನಗೆ ಕಾಣುತ್ತಿಲ್ಲ. ನಾವು ಮದುವೆಯಾಗಿಲ್ಲ, ನಿಶ್ಚಿತಾರ್ಥ ಮಾಡಿಕೊಂಡಿಲ್ಲ. ಚಂದನ್ ನನಗೆ ಪ್ರೇಮ ನಿವೇದನೆ ಮಾಡಿದ್ದಾರೆ, ನಾನು ಖುಷಿಯಿಂದ ಒಪ್ಪಿಕೊಂಡೆ. ಸ್ಪಷ್ಟ ಮನಸ್ಥಿತಿಯನ್ನು ಇಟ್ಟುಕೊಂಡು ಸಂತೋಷ, ಪ್ರೀತಿ ಹಂಚೋಣ ಎಂದು ಬರೆದು ಅವರ ಜೊತೆ ಚಂದನ್ ಇರುವ ವೀಡಿಯೋವನ್ನು ಹಾಕಿ ಪೋಸ್ಟ್ ಮಾಡಿ ಟೀಕಿಸಿದವರಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ:ಚಂದನ್ ಶೆಟ್ಟಿ, ನಿವೇದಿತಾ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು

    ಈ ಹಿಂದೆ ಯುವ ದಸರಾ ವೇದಿಕೆಯನ್ನು ಚಂದನ್ ಶೆಟ್ಟಿ ದುರ್ಬಳಕೆ ಮಾಡಿಕೊಂಡರು ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ್ದ ನಿವೇದಿತಾ ಗೌಡ, ನಮ್ಮ ವೈಯಕ್ತಿಕ ಜೀವನದ ಬಗ್ಗೆ ಅನೇಕರು ಮಾತನಾಡಿದ್ದಾರೆ. ನಾವು ಕಪಲ್ಸ್, ಫ್ರೆಂಡ್ಸ್ ಅಂತ ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಕೆಲವರು ರೂಮರ್ಸ್ ಎಬ್ಬಿಸಿದರು. ಯುವ ದಸರಾದಲ್ಲಿ ಪ್ರಪೋಸ್ ಮಾಡಿದ್ದರಲ್ಲಿ ತಪ್ಪೇನಿದೆ? ವೇದಿಕೆಯನ್ನು ಕೆಟ್ಟ ರೀತಿಯಲ್ಲಿ ಬಳಸಿಕೊಂಡಿಲ್ಲ. ಒಂದು ವೇಳೆ ವೇದಿಕೆ ಮೇಲೆ ಮದುವೆ ಆಗಿದ್ದರೆ ತಪ್ಪಾಗುತಿತ್ತು ಎಂದು ಸ್ಪಷ್ಟನೆ ನೀಡಿದ್ದರು.

    ವೇದಿಕೆ ಮೇಲೆ, ಜನ ಸಮೂಹದ ಮುಂದೆ `ನೀನು ನನ್ನ ಮದುವೆ ಆಗುತ್ತೀಯಾ’ ಅಂತ ಚಂದನ್ ಪ್ರಪೋಸ್ ಮಾಡಿದ್ದಾರೆ. ಐದು ನಿಮಿಷದಲ್ಲಿ ಎಲ್ಲವೂ ನಡೆದು ಹೋಯಿತು. ಕಾರ್ಯಕ್ರಮದಲ್ಲಿ ಸೇರಿದ್ದ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿ, ಆಶೀರ್ವಾದ ಮಾಡಿದ್ದಾರೆ. ಇದರಲ್ಲಿ ನನಗೆ ಖುಷಿ ಇದೆ. ಇದರಲ್ಲಿ ತಪ್ಪು ಆಗಿದ್ದೇನು ಎಂದು ಪ್ರಶ್ನಿಸಿದ್ದರು.

  • ಪ್ರೀತಿ ಒಪ್ಪಿಕೊಂಡ ಗೊಂಬೆಗೆ ಥ್ಯಾಂಕ್ಸ್ ಹೇಳಿದ ಚಂದನ್ ಶೆಟ್ಟಿ

    ಪ್ರೀತಿ ಒಪ್ಪಿಕೊಂಡ ಗೊಂಬೆಗೆ ಥ್ಯಾಂಕ್ಸ್ ಹೇಳಿದ ಚಂದನ್ ಶೆಟ್ಟಿ

    ಬೆಂಗಳೂರು: ಯುವ ದಸರಾ ವೇದಿಕೆ ಮೇಲೆ ನಿವೇದಿತಾ ಗೌಡ ತಮ್ಮ ಪ್ರೀತಿಯನ್ನು ಒಪ್ಪಿಕೊಂಡಿದ್ದಕ್ಕೆ ಕನ್ನಡ ರ‍್ಯಾಪರ್ ಚಂದನ್ ಶೆಟ್ಟಿ ಫುಲ್ ಖುಷಿಯಲ್ಲಿದ್ದು, ನನ್ನ ಪ್ರೀತಿಯನ್ನು ಒಪ್ಪಿಕೊಂಡಿದ್ದಕ್ಕೆ ಧನ್ಯವಾದ ಎಂದು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.

    ನಾನು ಎಂದೆಂದಿಗೂ ನಿನ್ನನ್ನು ಪ್ರೀತಿಸುತ್ತೇನೆ, ನನ್ನ ಪ್ರೀತಿಯನ್ನು ಒಪ್ಪಿಕೊಂಡಿದ್ದಕ್ಕೆ ಧನ್ಯವಾದ. ಜೊತೆಗೆ ನಮ್ಮ ಪ್ರೀತಿಗೆ ಬೆಂಬಲಿಸಿ, ಆಶೀರ್ವದಿಸಿದ ಎಲ್ಲರಿಗೂ ಧನ್ಯವಾದ ತಿಳಿಸುತ್ತಿದ್ದೇನೆ ಎಂದು ಬರೆದು ತಾವು ಯುವ ದಸರಾ ವೇದಿಕೆ ಮೇಲೆ ನಿವೇದಿತಾಗೆ ಪ್ರಪ್ರೋಸ್ ಮಾಡುತ್ತಿರುವ ಫೋಟೋ ಹಾಕಿ ಇನ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದನ್ನೂ ಓದಿ: ಯುವದಸರಾ ವೇದಿಕೆಯಲ್ಲಿ ಒಂದಾದ ಬಿಗ್‍ಬಾಸ್ ಜೋಡಿ – ನಿವೇದಿತ ಗೌಡಗೆ ಉಂಗುರ ತೊಡಿಸಿದ ಚಂದನ್ ಶೆಟ್ಟಿ

    https://www.instagram.com/p/B3RqeK7FNMR/

    ಈ ಪೋಸ್ಟ್ ಗೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಅಭಿಮಾನಿಗಳು ಕಮೆಂಟ್ ಮಾಡಿ ಕ್ಯೂಟ್ ಜೋಡಿಗೆ ಶುಭಕೋರಿದ್ದಾರೆ. ಕೆಲವರು ಯಾರು ಏನೇ ಹೇಳಿದರು ತಲೆಕೆಡಿಸಿಕೊಳ್ಳಬೇಡಿ, ನಿಮ್ಮ ಜೋಡಿ ಸೂಪರ್ ಎಂದು ಕಮೆಂಟ್ ಮಾಡಿ ಸಪೋರ್ಟ್ ಮಾಡಿದ್ದಾರೆ. ಇದನ್ನೂ ಓದಿ: ವೇದಿಕೆ ಮೇಲೆ ಮದುವೆ ಆಗಿದ್ರೆ ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ: ನಿವೇದಿತಾ ಗೌಡ

    ಯುವ ದಸರಾ ವೇದಿಕೆಯಲ್ಲೇ ಗಾಯಕ ಚಂದನ್ ಶೆಟ್ಟಿ-ನಿವೇದಿತಾಗೌಡ ಎಂಗೇಜ್ ಆಗಿದ್ದು, ಝಗಮಗಿಸುವ ವೇದಿಕೆಯಲ್ಲಿ ನಿವೇದಿತಾಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಬೆರಳಿಗೆ ಉಂಗುರ ತೊಡಿಸಿ ನಿನ್ನನ್ನೇ ಮದುವೆಯಾಗುತ್ತೇನೆಂದು ಘೋಷಿಸಿಕೊಂಡಿದ್ದರು. ಸಾವಿರಾರು ಪ್ರೇಕ್ಷಕರ ಸಮ್ಮುಖದಲ್ಲಿ ಪ್ರೇಮ ನಿವೇದನೆ ಮಾಡಿದ್ದು ಯುವಜನತೆ ಬಿಗ್‍ಬಾಸ್ ಜೋಡಿಗೆ ಜೈಕಾರ ಹಾಕಿದ್ದರು.

    ವೇದಿಕೆಯಲ್ಲಿ ಚಂದನ್ ಅವರು ನಿವೇದಿತಾಗೆ ಪ್ರಪೋಸ್ ಮಾಡಿದ ಬಳಿಕ ಈ ವಿಚಾರ ಭಾರೀ ವಿವಾದಕ್ಕಿಡಾಗಿತ್ತು. ದಸರಾ ಕಾರ್ಯಕ್ರಮದ ವೇದಿಕೆಯಲ್ಲೇ ಇದು ಬೇಡವಾಗಿತ್ತು ಎಂದು ಅನೇಕರು ಖಂಡಿಸಿದ್ದರು. ಇನ್ನೂ ಕೆಲವರು ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದರು. ಈ ಸಂಬಂಧ ಪ್ರತಿಕ್ರಿಯಿಸಿದ ಚಂದನ್, ನಾನು ಮಾಡಿರುವುದು ತಪ್ಪಾಗಿದ್ದರೆ ಕ್ಷಮಿಸಿ ಬಿಡಿ ಅಂದಿದ್ದರು. ಇತ್ತ ನಾವು ವೇದಿಕೆಯಲ್ಲಿ ಮದುವೆಯಾಗಿಲ್ಲ. ಒಂದು ವೇಳೆ ನಾವು ಅಲ್ಲಿ ಮದುವೆಯಾಗುತ್ತಿದ್ದರೆ ಅದನ್ನು ನಾನು ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ ಎಂದು ನಿವೇದಿತಾ ಸಮರ್ಥಿಸಿಕೊಂಡಿದ್ದರು. ಇದನ್ನೂ ಓದಿ: ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಬಾರದೆಂಬ ರೂಲ್ಸ್ ಇದ್ಯಾ? ಪ್ರಮೋದ್ ಮುತಾಲಿಕ್

    ಇನ್ನೊಂದೆಡೆ ಇದು ನಮಗೆ ಸರ್ಪ್ರೈಸ್ ತಂದಿದೆ. ನಾವು ಕಾರ್ಯಕ್ರಮ ನೋಡಲೆಂದು ಹೋಗಿದ್ದೇವು ಅಷ್ಟೇ. ಅಲ್ಲಿ ಈ ರೀತಿ ಆಗಿರೋದು ಆಶ್ಚರ್ಯದ ಜೊತೆಗೆ ಖುಷಿಯನ್ನು ಕೂಡ ತಂದಿದೆ ಎಂದು ನಿವೇದಿತಾ ಪೋಷಕರು ಹೇಳಿದ್ದರು.

  • ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಬಾರದೆಂಬ ರೂಲ್ಸ್ ಇದ್ಯಾ? ಪ್ರಮೋದ್ ಮುತಾಲಿಕ್

    ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಬಾರದೆಂಬ ರೂಲ್ಸ್ ಇದ್ಯಾ? ಪ್ರಮೋದ್ ಮುತಾಲಿಕ್

    ಉಡುಪಿ: ದಸರಾ ವೇದಿಕೆಯಲ್ಲಿ ಪ್ರಪೊಸ್ ಮಾಡಬಾರದು ಎಂಬ ನಿಯಮವಿದೆಯೇ? ಇದ್ದರೆ ತೋರಿಸಿ ಎಂದು ಸಚಿವ ಸೋಮಣ್ಣಗೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ.

    ಯುವ ದಸರಾ ವೇದಿಕೆಯಲ್ಲಿ ಗಾಯಕ ಚಂದನ್ ಮತ್ತು ನಟಿ ನಿವೇದಿತಾ ಗೌಡ, ಪ್ರಪೋಸ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಪ್ರಮೋದ್ ಮುತಾಲಿಕ್ ಮಾತನಾಡಿದರು. ಸರ್ಕಾರಿ ವೇದಿಕೆಯಲ್ಲಿ ಪ್ರಪೋಸ್ ಮಾಡಬಾರದೆಂಬ ನಿಯಮ ಎಲ್ಲಿದೆ? ಅನಾವಶ್ಯಕವಾಗಿ ಇದನ್ನು ಎಳೆಯಬೇಡಿ. ಚಂದನ್ ಶೆಟ್ಟಿ ಮತ್ತು ನಿವೇದಿತಾ ಮೇಲೆ ಕೇಸು ಹಾಕಿದ್ದು ತಪ್ಪು. ಸಂದರ್ಭ ಬಂದಿದೆ ಪ್ರಪೋಸ್ ಮಾಡಿದ್ದಾರೆ, ಒಪ್ಪಿಕೊಂಡಿದ್ದಾರೆ, ಸುದ್ದಿಯಾಗಿದೆ. ಅದನ್ನೇ ಬಹಳ ದೊಡ್ಡ ಅಪರಾಧ ಎಂದು ಬಿಂಬಿಸುವುದು ಸರಿಯಲ್ಲ ಎಂದರು.

    ಚಂದನ್ ನಿವೇದಿತಾರನ್ನು ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ ಎಂದಿರುವ ಸಚಿವ ಸೋಮಣ್ಣಗೆ ತಿರುಗೇಟು ನೀಡಿದ ಮುತಾಲಿಕ್, ನೂರಕ್ಕೆ ನೂರು ಚಂದನ್ ಮತ್ತು ನಿವೇದಿತಾಗೆ ಸಮಸ್ಯೆಯಾಗಲ್ಲ. ಇಬ್ಬರ ಮೇಲೆ ಚಾಮುಂಡೇಶ್ವರಿ ಆಶೀರ್ವಾದ ಇದೆ. ಇಷ್ಟಕ್ಕೂ ವೇದಿಕೆಯಲ್ಲಿ ಇಂತದ್ದು ಮಾಡಬಾರದು, ಇಂತದ್ದು ಮಾಡಬೇಕೆಂಬ ನಿಯಮಗಳಿದ್ದರೆ ಸೋಮಣ್ಣ ಅವರು ಹೇಳಲಿ. ಹೆಚ್ಚು ಎಳೆಯದೆ ಪ್ರಕರಣ ಮುಗಿಸಿಬಿಡಿ. ಕೇಸು ವಾಪಾಸ್ ಪಡೆಯಿರಿ. ಯುವ ಜೋಡಿಯ ದಾಂಪತ್ಯ ಜೀವನ ಸುಖಕರವಾಗಿ ನಡೆಯುತ್ತದೆ ಎಂದು ಮುತಾಲಿಕ್ ಹಾರೈಸಿದರು.

  • ಚಂದನ್ ಶೆಟ್ಟಿ, ನಿವೇದಿತಾ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು

    ಚಂದನ್ ಶೆಟ್ಟಿ, ನಿವೇದಿತಾ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು

    ಮೈಸೂರು: ಯುವ ದಸರಾದಲ್ಲಿ ಚಂದನ್ ಶೆಟ್ಟಿ ಪ್ರೇಮ ನಿವೇದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ವಿರುದ್ಧ ಮೂರು ದೂರು ದಾಖಲಾಗಿದ್ದು, ದೂರುಗಳ ಸಂಖ್ಯೆ ಹೆಚ್ಚಾಗುತ್ತಿದೆ.

    ಮೈಸೂರಿನ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಮೇಲೆ ದೂರು ದಾಖಲು ಮಾಡಿದ್ದಾರೆ. ಸರ್ಕಾರಿ ವೇದಿಕೆ ದುರ್ಬಳಕೆ, ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ಕುರಿತು ಚಂದನ್ ಮೇಲೆ ಕೇಸಾದರೆ, ನಿವೇದಿತಾರಿಂದ ಅತಿಕ್ರಮ ಪ್ರವೇಶ, ಸಂಚುರೂಪಿಸಿ ಪ್ರಚಾರ ಪಡೆದ ಆರೋಪಗಳ ಮೇಲೆ ದೂರು ದಾಖಲು ಮಾಡಲಾಗಿದೆ. ಇದನ್ನೂ ಓದಿ: ನಿಶ್ಚಿತಾರ್ಥ ಅಲ್ಲ, ನಮ್ಗೂ ಸರ್ಪ್ರೈಸ್ ಆಗಿದೆ- ನಿವೇದಿತಾ ಹೆತ್ತವರು

    ಸರ್ಕಾರಿ ಕಾರ್ಯಕ್ರಮವನ್ನು ತಪ್ಪಾಗಿ ಬಳಸಿಕೊಂಡಿದ್ದಕ್ಕೆ ಚಂದನ್ ಶೆಟ್ಟಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಮೋಸಿನ್ ಖಾನ್ ಆಗ್ರಹಿಸಿದ್ದಾರೆ. ಇದನ್ನೂ ಓದಿ: ತಪ್ಪಾಗಿದ್ದರೆ ಕ್ಷಮೆ ಇರಲಿ, ಸರ್ಪ್ರೈಸ್ ಕೊಡಲು ಈ ರೀತಿ ಮಾಡಿದೆ: ಚಂದನ್ ಶೆಟ್ಟಿ

    ಮೈಸೂರು ಯೂತ್ ಕಾಂಗ್ರೆಸ್, ಕರ್ನಾಟಕ ಪ್ರಜಾಪಾರ್ಟಿ, ಸಾಮಾಜಿಕ ಹೋರಾಟಗಾರ ಗಂಗರಾಜುರಿಂದ ದೂರುಗಳು ದಾಖಲಾಗಿದ್ದು, ಚಂದನ್ ಶೆಟ್ಟಿ, ನಿವೇದಿತಾ ಮೇಲೆ ದೂರುಗಳ ಸಂಖ್ಯೆ ಹೆಚ್ಚಾಗುತ್ತಿದೆ.

    ವೇದಿಕೆಯಲ್ಲಿ ನಡೆದಿದ್ದೇನು..?
    ನಿನ್ನೆ ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್ ನಿವೇದಿತಾ ಪೋಷಕರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮ ನೀಡಿ ಜನರನ್ನು ಮನರಂಜಿಸುತ್ತಿದ್ದ ಚಂದನ್ ವೇದಿಕೆಯಲ್ಲೇ ನಿವೇದಿತಾಳಿಗೆ ಮಂಡಿಯೂರಿ ಪ್ರಪೋಸ್ ಮಾಡಿದ್ದರು ಅಲ್ಲದೇ ಉಂಗುರ ಕೂಡ ತೊಡಿಸಿದ್ದರು. ಈ ವೇಳೆ ನೆರೆದಿದ್ದ ಮಂದಿ ಶಿಳ್ಳೆ ಹೊಡೆದು ಚಪ್ಪಾಳೆ ತಟ್ಟುವ ಮೂಲಕ ಇಬ್ಬರನ್ನೂ ಅಭಿನಂದಿಸಿದರು.  ಇದನ್ನೂ ಓದಿ: ವೇದಿಕೆ ಮೇಲೆ ಮದುವೆ ಆಗಿದ್ರೆ ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ: ನಿವೇದಿತಾ ಗೌಡ

    ಈ ಬೆನ್ನಲ್ಲೇ ಪ್ರಪೋಸ್ ಮಾಡಿರುವ ವಿಚಾರ ಭಾರೀ ವಿವಾದಕ್ಕೀಡಾಯಿತು. ದಸರಾ ಕಾರ್ಯಕ್ರಮದ ವೇದಿಕೆಯಲ್ಲೇ ಇದು ಬೇಡವಾಗಿತ್ತು ಎಂದು ಅನೇಕರು ಖಂಡಿಸಿದರು. ಇನ್ನೂ ಕೆಲವರು ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದರು. ಈ ಸಂಬಂಧ ಪ್ರತಿಕ್ರಿಯಿಸಿದ ಚಂದನ್, ನಾನು ಮಾಡಿರುವುದು ತಪ್ಪಾಗಿದ್ದರೆ ಕ್ಷಮಿಸಿ ಬಿಡಿ ಅಂದಿದ್ದಾರೆ. ಇತ್ತ ನಾವು ವೇದಿಕೆಯಲ್ಲಿ ಮದುವೆಯಾಗಿಲ್ಲ. ಒಂದು ವೇಳೆ ನಾವು ಅಲ್ಲಿ ಮದುವೆಯಾಗುತ್ತಿದ್ದರೆ ಅದನ್ನು ನಾನು ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ ಎಂದು ಸಮರ್ಥಿಸಿಕೊಂಡಿದ್ದಾರೆ.

    ಈ ಮಧ್ಯೆ ಉಸ್ತುವಾರಿ ಸಚಿವ ವಿ ಸೋಮಣ್ಣ ಪ್ರತಿಕ್ರಿಯಿಸಿ, ಯುವ ದಸರಾ ವೇದಿಕೆಯಲ್ಲಿ ಗಾಯಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ನಿಶ್ಚಿತಾರ್ಥ ಮಾಡಿಕೊಂಡಿರುವುದು ಅಕ್ಷಮ್ಯ ಅಪರಾಧ. ನಾಡಿನ ಅಧಿದೇವತೆಯ ನಾಡಹಬ್ಬದ ವೇದಿಕೆಯಲ್ಲಿ ಈ ರೀತಿ ಆಗಬಾರದಿತ್ತು. ತಪ್ಪೆಸಗಿರುವ ಅವರಿಬ್ಬರಿಗೂ ಬರುವ ಆರು ತಿಂಗಳಲ್ಲಿ ದೇವಿಯೇ ಶಿಕ್ಷೆ ನೀಡುತ್ತಾರೆ. ಈ ರೀತಿ ಆಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಇದಕ್ಕೆ ದಸರಾ ಉಪಸಮಿತಿ ಕಾರಣವಲ್ಲ. ಈ ಸಂಬಂಧ ಮೈಸೂರು ಜಿಲ್ಲಾ ಅಧೀಕ್ಷಕ ಹಾಗೂ ಯುವ ದಸರಾ ಉಪಸಮಿತಿಯ ಕಾರ್ಯಾಧ್ಯಕ್ಷರೂ ಆಗಿರುವ ರಿಷ್ಯಂತ್ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಚಂದನ್ ಶೆಟ್ಟಿ ಮತ್ತು ನಿವೇದಿತಾರಿಗೆ ಕಾರಣ ಕೇಳಿ ಪೊಲೀಸ್ ಇಲಾಖೆಯಿಂದ ನೋಟಿಸ್ ನೀಡಲಾಗುತ್ತದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಚಂದನ್-ನಿವೇದಿತಾ ನಿಶ್ಚಿತಾರ್ಥ ಮಾಡ್ಕೊಂಡಿರೋದು ಅಕ್ಷಮ್ಯ ಅಪರಾಧ- ವಿ.ಸೋಮಣ್ಣ

  • ಚಂದನ್ ಶೆಟ್ಟಿಯನ್ನು ಮಹಾಪರಾಧ ಮಾಡಿದವನಂತೆ ಕಾಣೋದು ಸಾಕು: ಪ್ರತಾಪ್ ಸಿಂಹ

    ಚಂದನ್ ಶೆಟ್ಟಿಯನ್ನು ಮಹಾಪರಾಧ ಮಾಡಿದವನಂತೆ ಕಾಣೋದು ಸಾಕು: ಪ್ರತಾಪ್ ಸಿಂಹ

    ಬೆಂಗಳೂರು: ಮೈಸೂರಿನಲ್ಲಿ ಶುಕ್ರವಾರ ನಡೆದ ಯುವ ದಸರಾ ಕಾರ್ಯಕ್ರಮದ ವೇಳೆ ವೇದಿಕೆಯಲ್ಲೇ ಗಾಯಕ ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡಾಗೆ ಪ್ರಪೋಸ್ ಮಾಡಿರುವುದು ಭಾರೀ ವಿವಾದಕ್ಕೀಡಾಗಿದೆ. ಈ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು, ಮಹಾಅಪರಾಧ ಮಾಡಿದವನಂತೆ ಚಂದನ್ ಶೆಟ್ಟಿಯನ್ನು ಕಾಣುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.

    ಈ ಸಂಬಂಧ ಫೇಸ್‍ಬುಕ್ ನಲ್ಲಿ ಬರೆದುಕೊಂಡಿರುವ ಸಂಸದರು, “ಯುವ ದಸರಾದಲ್ಲಿ 2 ಗಂಟೆ ಮೈಸೂರಿಗರ ಮನಸ್ಸಿಗೆ ಮುದ ಕೊಟ್ಟು 2 ಸೆಕೆಂಡ್ ಪ್ರೇಮ ನಿವೇದನೆ ಮಾಡಿಕೊಂಡ ಚಂದನ್ ಶೆಟ್ಟಿಯವರನ್ನು ಏನೋ ಮಹಾಪರಾಧ ಮಾಡಿದವನಂತೆ ಕಾಣುವುದು ಸಾಕು. ಇಬ್ಬರಿಗೂ ಒಳ್ಳೆಯದಾಗಲಿ” ಎಂದು ಹೇಳಿದ್ದಾರೆ. ಅಲ್ಲದೆ ಚಂದನ್, ನಿವೇದಿತಾಗೆ ಪ್ರಪೋಸ್ ಮಾಡಿರುವ ಫೋಟೋವೊಂದನ್ನು ಕೂಡ ಅಪ್ಲೋಡ್ ಮಾಡಿದ್ದಾರೆ. ಇದನ್ನೂ ಓದಿ: ನಿಶ್ಚಿತಾರ್ಥ ಅಲ್ಲ, ನಮ್ಗೂ ಸರ್ಪ್ರೈಸ್ ಆಗಿದೆ- ನಿವೇದಿತಾ ಹೆತ್ತವರು

    ಟೀಕೆಯ ಕಮೆಂಟ್ ಬರಲಾರಂಭಿಸುತ್ತಿದ್ದಂತೆ ಪ್ರತಾಪ್ ಸಿಂಹ ಫೇಸ್‍ಬುಕ್ ಪೋಸ್ಟ್ ಡಿಲೀಟ್ ಮಾಡಿದ್ದಾರೆ. ಇದನ್ನೂ ಓದಿ: ತಪ್ಪಾಗಿದ್ದರೆ ಕ್ಷಮೆ ಇರಲಿ, ಸರ್ಪ್ರೈಸ್ ಕೊಡಲು ಈ ರೀತಿ ಮಾಡಿದೆ: ಚಂದನ್ ಶೆಟ್ಟಿ

    ವೇದಿಕೆಯಲ್ಲಿ ನಡೆದಿದ್ದೇನು..?
    ನಿನ್ನೆ ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್, ನಿವೇದಿತಾ ಪೋಷಕರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮ ನೀಡಿ ಜನರನ್ನು ಮನರಂಜಿಸುತ್ತಿದ್ದ ಚಂದನ್ ವೇದಿಕೆಯಲ್ಲೇ ನಿವೇದಿತಾಳಿಗೆ ಮಂಡಿಯೂರಿ ಪ್ರಪೋಸ್ ಮಾಡಿದ್ದರು ಅಲ್ಲದೆ ಉಂಗುರ ಕೂಡ ತೊಡಿಸಿದ್ದರು. ಈ ವೇಳೆ ನೆರೆದಿದ್ದ ಮಂದಿ ಶಿಳ್ಳೆ ಹೊಡೆದು ಚಪ್ಪಾಳೆ ತಟ್ಟುವ ಮೂಲಕ ಇಬ್ಬರನ್ನೂ ಅಭಿನಂದಿಸಿದರು.

    ಆದರೆ ಈ ಬೆನ್ನಲ್ಲೇ ಪ್ರಪೋಸ್ ಮಾಡಿರುವ ವಿಚಾರ ಭಾರೀ ವಿವಾದಕ್ಕೀಡಾಯಿತು. ದಸರಾ ಕಾರ್ಯಕ್ರಮದ ವೇದಿಕೆಯಲ್ಲೇ ಇದು ಬೇಡವಾಗಿತ್ತು ಎಂದು ಅನೇಕರು ಖಂಡಿಸಿದರು. ಇನ್ನೂ ಕೆಲವರು ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದರು. ಈ ಸಂಬಂಧ ಪ್ರತಿಕ್ರಿಯಿಸಿದ ಚಂದನ್, ನಾನು ಮಾಡಿರುವುದು ತಪ್ಪಾಗಿದ್ದರೆ ಕ್ಷಮಿಸಿ ಬಿಡಿ ಅಂದಿದ್ದಾರೆ. ಇತ್ತ ನಾವು ವೇದಿಕೆಯಲ್ಲಿ ಮದುವೆಯಾಗಿಲ್ಲ. ಒಂದು ವೇಳೆ ನಾವು ಅಲ್ಲಿ ಮದುವೆಯಾಗುತ್ತಿದ್ದರೆ ಅದನ್ನು ನಾನು ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ ಎಂದು ಸಮರ್ಥಿಸಿಕೊಂಡಿದ್ದಾರೆ.  ಇದನ್ನೂ ಓದಿ: ವೇದಿಕೆ ಮೇಲೆ ಮದುವೆ ಆಗಿದ್ರೆ ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ: ನಿವೇದಿತಾ ಗೌಡ

    ಈ ಮಧ್ಯೆ ಉಸ್ತುವಾರಿ ಸಚಿವ ವಿ ಸೋಮಣ್ಣ ಪ್ರತಿಕ್ರಿಯಿಸಿ, ಯುವ ದಸರಾ ವೇದಿಕೆಯಲ್ಲಿ ಗಾಯಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ನಿಶ್ಚಿತಾರ್ಥ ಮಾಡಿಕೊಂಡಿರುವುದು ಅಕ್ಷಮ್ಯ ಅಪರಾಧ. ನಾಡಿನ ಅಧಿದೇವತೆಯ ನಾಡಹಬ್ಬದ ವೇದಿಕೆಯಲ್ಲಿ ಈ ರೀತಿ ಆಗಬಾರದಿತ್ತು. ತಪ್ಪೆಸಗಿರುವ ಅವರಿಬ್ಬರಿಗೂ ಬರುವ ಆರು ತಿಂಗಳಲ್ಲಿ ದೇವಿಯೇ ಶಿಕ್ಷೆ ನೀಡುತ್ತಾರೆ. ಈ ರೀತಿ ಆಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಇದಕ್ಕೆ ದಸರಾ ಉಪಸಮಿತಿ ಕಾರಣವಲ್ಲ. ಈ ಸಂಬಂಧ ಮೈಸೂರು ಜಿಲ್ಲಾ ಅಧೀಕ್ಷಕ ಹಾಗೂ ಯುವ ದಸರಾ ಉಪಸಮಿತಿಯ ಕಾರ್ಯಾಧ್ಯಕ್ಷರೂ ಆಗಿರುವ ರಿಷ್ಯಂತ್ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಚಂದನ್ ಶೆಟ್ಟಿ ಮತ್ತು ನಿವೇದಿತಾರಿಗೆ ಕಾರಣ ಕೇಳಿ ಪೊಲೀಸ್ ಇಲಾಖೆಯಿಂದ ನೋಟಿಸ್ ನೀಡಲಾಗುತ್ತದೆ ಎಂದು ಕಿಡಿಕಾರಿದ್ದಾರೆ.  ಇದನ್ನೂ ಓದಿ: ಚಂದನ್-ನಿವೇದಿತಾ ನಿಶ್ಚಿತಾರ್ಥ ಮಾಡ್ಕೊಂಡಿರೋದು ಅಕ್ಷಮ್ಯ ಅಪರಾಧ- ವಿ.ಸೋಮಣ್ಣ

  • ಕ್ಷಮೆ ಕೇಳಿದ್ರೆ ಸರಿ ಹೋಗಲ್ಲ, ಚಂದನ್ ಶೆಟ್ಟಿಯನ್ನು ಬಂಧಿಸಿ – ಕನ್ನಡ ಸಂಘಟನೆಗಳಿಂದ ಆಗ್ರಹ

    ಕ್ಷಮೆ ಕೇಳಿದ್ರೆ ಸರಿ ಹೋಗಲ್ಲ, ಚಂದನ್ ಶೆಟ್ಟಿಯನ್ನು ಬಂಧಿಸಿ – ಕನ್ನಡ ಸಂಘಟನೆಗಳಿಂದ ಆಗ್ರಹ

    ಬೆಂಗಳೂರು: ಕ್ಷಮೆ ಕೇಳಿದರೆ ಸರಿ ಹೋಗಲ್ಲ, ಚಂದನ್ ಶೆಟ್ಟಿಯನ್ನು ಬಂಧಿಸಬೇಕು ಎಂದು ಜಯ ಕರ್ನಾಟಕ ಜಿಲ್ಲಾಧ್ಯಕ್ಷ ಜಗದೀಶ್ ಆಗ್ರಹಿಸಿದ್ದಾರೆ.

    ಇಂದು ಜಯಕರ್ನಾಟಕ ಸಂಘಟನೆಯಿಂದ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಚಂದನ್ ಶೆಟ್ಟಿ ಪ್ರಪೋಸ್ ಮಾಡುವ ಮೂಲಕ ವಿಶ್ವಪ್ರಸಿದ್ಧ ಮೈಸೂರು ದಸರಾ ವೇದಿಕೆಯನ್ನ ವೈಯಕ್ತಿಕ ವಿಚಾರಕ್ಕೆ ಬಳಸಿದ್ದಾರೆ ಎಂದು ಖಂಡಿಸಿದ್ದಾರೆ.

    ಕ್ಷಮೆ ಕೇಳಿದರೆ ಸರಿ ಹೋಗಲ್ಲ. ಆತನನ್ನು ಬಂಧಿಸಬೇಕು. ಚಂದನ್ ಶೆಟ್ಟಿಗೆ ವೇದಿಕೆ ಹತ್ತಲು ಯೋಗ್ಯತೆ ಇಲ್ಲ. ಇನ್ನು ಮುಂದೆ ಚಂದನ್ ಶೆಟ್ಟಿ ಯಾವುದೇ ವೇದಿಕೆ ಕಾರ್ಯಕ್ರಮ ಮಾಡಿದರೆ ಅವರಿಗೇ ಮಸಿ ಬಳಿಯುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ನಿಶ್ಚಿತಾರ್ಥ ಅಲ್ಲ, ನಮ್ಗೂ ಸರ್ಪ್ರೈಸ್ ಆಗಿದೆ- ನಿವೇದಿತಾ ಹೆತ್ತವರು

    ಮೈಸೂರು ದಸರಾಕ್ಕೆ ಇದು ಅವಮಾನ ಎಂದು ಅಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, ದಸರಾ ವೇದಿಕೆಗೆ ಅವಮಾನ ಮಾಡಿದ ಚಂದನ್ ಶೆಟ್ಟಿಯನ್ನ ಬಂಧಿಸುವಂತೆ, ಅಲ್ಲದೆ ಚಂದನ್ ಮೇಲೆ ಕೇಸು ದಾಖಲಾಗಬೇಕು ಎಂದು ಒತ್ತಾಯ ಮಾಡಿದ್ದಾರೆ. ನಾಡ ದೇವತೆ ಚಾಮುಂಡೇಶ್ವರಿ ದೇವಿಗೆ ಇದು ಅಪಮಾನ ಮಾಡಿದ ಹಾಗೇ ಎಂದು ಅರೋಪ ಮಾಡಿದ್ದಾರೆ. ಚಂದನ್ ಶೆಟ್ಟಿ ಹಾಗೂ ಜಿಲ್ಲಾಡಳಿತದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವೇದಿಕೆ ಮೇಲೆ ಮದುವೆ ಆಗಿದ್ರೆ ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ: ನಿವೇದಿತಾ ಗೌಡ

    ಇದೇ ವೇಳೆ ಜಯಕರ್ನಾಟಕ ಜಿಲ್ಲಾಧ್ಯಕ್ಷ ಜಗದೀಶ್ ಮಾತನಾಡಿ, ಐತಿಹಾಸಕ ಪರಂಪರೆ ಇರುವ ದಸರಾಕ್ಕೆ ಕಳಂಕ ತಂದಿದ್ದಾರೆ. ಹಿನ್ನಲೆ ಗಾಯಕ ಚಂದನ್ ಶೆಟ್ಟಿಯ ಮೈಸೂರು ದಸರಾ ವೇದಿಕೆಯನ್ನ ವೈಯುಕ್ತಿಕ ವಿಚಾರಕ್ಕೆ ಬಳಕೆ ಮಾಡಿಕೊಂಡಿದ್ದಾನೆ. ಇದು ಸರ್ಕಾರದ ವೇದಿಕೆ, ಏನ್ ಆ ವೇದಿಕೆ ಅವರಪ್ಪನದ್ದಾ, ಜಿಲ್ಲಾಡಳಿತ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಇದು ನಮ್ಮ ದಸರಾಕ್ಕೆ ಮಾಡಿದ ಅಪಮಾನ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ತಪ್ಪಾಗಿದ್ದರೆ ಕ್ಷಮೆ ಇರಲಿ, ಸರ್ಪ್ರೈಸ್ ಕೊಡಲು ಈ ರೀತಿ ಮಾಡಿದೆ: ಚಂದನ್ ಶೆಟ್ಟಿ

    ಮೈಸೂರು ಯುವ ದಸರಾ ಕಾರ್ಯಕ್ರಮದ ವೇಳೆ ಶುಕ್ರವಾರ ವೇದಿಕೆಯಲ್ಲೇ ಸಾವಿರಾರು ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ, ನಿವೇದಿತಾ ಗೌಡಾಗೆ ಪ್ರೇಮ ನಿವೇದನೆ ಮಾಡಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಚಂದನ್ ಪ್ರತಿಕ್ರಿಯಿಸಿ, ನಾನು ಮಾಡಿದ್ದು ತಪ್ಪಾದರೆ ಕ್ಷಮೆಯಿರಲಿ ಎಂದು ಹೇಳಿದ್ದಾರೆ. ಇತ್ತ ನಿವೇದಿತಾ ಪ್ರತಿಕ್ರಿಯಿಸಿ, ವೇದಿಕೆ ಮೇಲೆ ಮದುವೆಯಾಗಿದ್ದರೆ ತಪ್ಪು ಅಂತ ನಾನೂ ಒಪ್ಪಿಕೊಳ್ಳುತ್ತಿದ್ದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಂದನ್-ನಿವೇದಿತಾ ನಿಶ್ಚಿತಾರ್ಥ ಮಾಡ್ಕೊಂಡಿರೋದು ಅಕ್ಷಮ್ಯ ಅಪರಾಧ- ವಿ.ಸೋಮಣ್ಣ

  • ವೇದಿಕೆ ಮೇಲೆ ಮದುವೆ ಆಗಿದ್ರೆ ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ: ನಿವೇದಿತಾ ಗೌಡ

    ವೇದಿಕೆ ಮೇಲೆ ಮದುವೆ ಆಗಿದ್ರೆ ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ: ನಿವೇದಿತಾ ಗೌಡ

    ಮೈಸೂರು: ದಸರಾ ಯುವ ವೇದಿಕೆ ಮೇಲೆ ನಮ್ಮಿಂದ ಯಾವುದೇ ತಪ್ಪಾಗಿಲ್ಲ. ಒಂದು ವೇಳೆ ವೇದಿಕೆ ಮದುವೆ ಆಗಿದ್ರೆ ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ ಎಂದು ನಿವೇದಿತಾ ಗೌಡ ಹೇಳಿದ್ದಾರೆ.

    ನಗರದಲ್ಲಿ ಪಬ್ಲಿಕ್ ಟಿವಿಗೆ ಜೊತೆಗೆ ಮಾತನಾಡಿದ ನಿವೇದಿತಾ ಗೌಡ, ಚಂದನ್ ಶೆಟ್ಟಿ ಪ್ರಪೋಸ್ ಮಾಡುತ್ತಾರೆ ಅಂತ ನನಗೆ ಗೊತ್ತಿರಲಿಲ್ಲ. ರಿಂಗ್ ಹಾಕುತ್ತಿದ್ದಂತೆ ಶಾಕ್ ಆಯಿತು, ಒಂದು ಕ್ಷಣ ಬ್ಲ್ಯಾಂಕ್ ಆಗಿಬಿಟ್ಟೆ. ಇದು ನಿಜಾನಾ ಎಂಬ ಭಾವನೆ ಮೂಡಿತ್ತು. ರಿಂಗ್ ಹಾಕಿಸಿಕೊಳ್ಳಲು ಹೋದಾಗ ಕೈ ನಡುಗುತ್ತಿತ್ತು ಎಂದು ತಿಳಿಸಿದರು. ಇದನ್ನೂ ಓದಿ: ನಿಶ್ಚಿತಾರ್ಥ ಅಲ್ಲ, ನಮ್ಗೂ ಸರ್ಪ್ರೈಸ್ ಆಗಿದೆ- ನಿವೇದಿತಾ ಹೆತ್ತವರು

    ನಮ್ಮಿಬ್ಬರ ಮಧ್ಯೆ ಇದ್ದ ಸ್ನೇಹ ಫ್ಲೋ ಆಗಿ ಹೋಗುತಿತ್ತು. ನಾಳೆಯಿಂದ ಕಪಲ್ಸ್ ಆಗೋಣ ಎಂದು ಯಾವತ್ತೂ ಮಾತನಾಡಿರಲಿಲ್ಲ. ಇಬ್ಬರ ಮಧ್ಯೆ ಉತ್ತಮ ಹೊಂದಾಣಿಕೆ ಇತ್ತು. ಒಬ್ಬರನ್ನೊಬ್ಬರು ಇಷ್ಟಪಟ್ಟಿದ್ದೇವು. ಆದರೆ ಪ್ರೀತಿಯನ್ನ ಎಲ್ಲಿಯೂ ಪ್ರಸ್ತಾಪಿಸಿರಲಿಲ್ಲ ಎಂದರು. ಇದನ್ನೂ ಓದಿ: ತಪ್ಪಾಗಿದ್ದರೆ ಕ್ಷಮೆ ಇರಲಿ, ಸರ್ಪ್ರೈಸ್ ಕೊಡಲು ಈ ರೀತಿ ಮಾಡಿದೆ: ಚಂದನ್ ಶೆಟ್ಟಿ

    ಯುವ ದಸರಾ ವೇದಿಕೆಯನ್ನು ಚಂದನ್ ಶೆಟ್ಟಿ ದುರ್ಬಳಕೆ ಮಾಡಿಕೊಂಡರು ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ನಿವೇದಿತಾ ಗೌಡ, ನಮ್ಮ ವೈಯಕ್ತಿಕ ಜೀವನದ ಬಗ್ಗೆ ಅನೇಕರು ಮಾತನಾಡಿದ್ದಾರೆ. ನಾವು ಕಪಲ್ಸ್, ಫ್ರೆಂಡ್ಸ್ ಅಂತ ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಕೆಲವರು ರೂಮರ್ಸ್ ಎಬ್ಬಿಸಿದರು. ಯುವ ದಸರಾದಲ್ಲಿ ಪ್ರಪೋಸ್ ಮಾಡಿದ್ದರಲ್ಲಿ ತಪ್ಪೇನಿದೆ? ವೇದಿಕೆಯನ್ನು ಕೆಟ್ಟ ರೀತಿಯಲ್ಲಿ ಬಳಸಿಕೊಂಡಿಲ್ಲ. ಒಂದು ವೇಳೆ ವೇದಿಕೆ ಮೇಲೆ ಮದುವೆ ಆಗಿದ್ದರೆ ತಪ್ಪಾಗುತಿತ್ತು ಎಂದು ಸ್ಪಷ್ಟನೆ ನೀಡಿದರು.

    ವೇದಿಕೆ ಮೇಲೆ, ಜನ ಸಮೂಹದ ಮುಂದೆ ‘ನೀನು ನನ್ನ ಮದುವೆ ಆಗುತ್ತೀಯಾ’ ಅಂತ ಚಂದನ್ ಪ್ರಪೋಸ್ ಮಾಡಿದ್ದಾರೆ. ಐದು ನಿಮಿಷದಲ್ಲಿ ಎಲ್ಲವೂ ನಡೆದು ಹೋಯಿತು. ಕಾರ್ಯಕ್ರಮದಲ್ಲಿ ಸೇರಿದ್ದ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿ, ಆಶೀರ್ವಾದ ಮಾಡಿದ್ದಾರೆ. ಇದರಲ್ಲಿ ನನಗೆ ಖುಷಿ ಇದೆ. ಇದರಲ್ಲಿ ತಪ್ಪು ಆಗಿದ್ದೇನು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಚಂದನ್-ನಿವೇದಿತಾ ನಿಶ್ಚಿತಾರ್ಥ ಮಾಡ್ಕೊಂಡಿರೋದು ಅಕ್ಷಮ್ಯ ಅಪರಾಧ- ವಿ.ಸೋಮಣ್ಣ

    ಚಂದನ್ ಹಾಗೂ ನಮ್ಮ ಪೋಷಕರು ಖುಷಿ ವ್ಯಕ್ತಪಡಿಸಿದ್ದಾರೆ. ನಾನು ಯೋಚನೆ ಮಾಡಿಯೇ ನಿರ್ಧಾರ ಕೈಗೊಳ್ಳುತ್ತೇನೆ ಎನ್ನುವುದು ನನ್ನ ತಂದೆ-ತಾಯಿಗೆ ಗೊತ್ತು. ಚಂದನ್ ಒಳ್ಳೆ ಹುಡುಗ ಅಂತ ಅವರಿಗೂ ತಿಳಿದಿದೆ ಎಂದು ತಿಳಿಸಿದರು.

    ಬಿಗ್ ಬಾಸ್‍ನಲ್ಲಿ ಇದ್ದಾಗ ಇಬ್ಬರ ಮಧ್ಯೆ ಉತ್ತಮ ಸ್ನೇಹವಿತ್ತು. ಆದರೆ ಅಲ್ಲಿಂದ ಹೊರಗೆ ಬಂದಾಗ ಸಾಮಾಜಿಕ ಜಾಲತಾಣದಲ್ಲಿ ನಮ್ಮ ಬಗ್ಗೆ ರೂಮರ್ಸ್ ಹರಿದಾಡುತಿತ್ತು. ಇದರಿಂದಾಗಿ ನಮ್ಮಿಬ್ಬರ ಸ್ನೇಹ ಬೆಳೆದು, ಮದುವೆ ಹಂತಕ್ಕೆ ಬಂದಿದೆ ಎಂದು ತಿಳಿಸಿದರು.

  • ನಿಶ್ಚಿತಾರ್ಥ ಅಲ್ಲ, ನಮ್ಗೂ ಸರ್ಪ್ರೈಸ್ ಆಗಿದೆ- ನಿವೇದಿತಾ ಹೆತ್ತವರು

    ನಿಶ್ಚಿತಾರ್ಥ ಅಲ್ಲ, ನಮ್ಗೂ ಸರ್ಪ್ರೈಸ್ ಆಗಿದೆ- ನಿವೇದಿತಾ ಹೆತ್ತವರು

    ಮೈಸೂರು: ಯುವ ದಸರಾ ವೇದಿಕೆಯಲ್ಲಿ ಚಂದನ್‍ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ಎಂಗೇಜ್‍ಮೆಂಟ್ ಆಗಿಲ್ಲ, ಅವರು ತಮ್ಮ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ ಅಷ್ಟೇ ಎಂದು ನಿವೇದಿತಾ ಗೌಡ ಪೋಷಕರು ತಿಳಿಸಿದ್ದಾರೆ.

    ಯುವ ದಸರಾ ವೇದಿಕೆಯಲ್ಲೇ ನಿವೇದಿತಾ ಗೌಡಾಗೆ ಪ್ರಪೋಸ್ ಮಾಡಿ ರಿಂಗ್ ತೊಡಿಸಿದ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಇದು ನಮಗೆ ಸರ್ಪ್ರೈಸ್ ತಂದಿದೆ. ನಾವು ಕಾರ್ಯಕ್ರಮ ನೋಡಲೆಂದು ಹೋಗಿದ್ದೇವೆ ಅಷ್ಟೇ. ಅಲ್ಲಿ ಈ ರೀತಿ ಆಗಿರೋದು ಆಶ್ಚರ್ಯದ ಜೊತೆಗೆ ಖುಷಿಯನ್ನು ಕೂಡ ತಂದಿದೆ ಎಂದಿದ್ದಾರೆ.

    ಇದನ್ನು ನಿಶ್ಚಿತಾರ್ಥ ಎಂದು ಹೇಳಲಾಗುವುದಿಲ್ಲ. ಇದೊಂದು ಸರ್ಪ್ರೈಸ್ ಅಷ್ಟೇ. ನಮಗೂ ಗೊತ್ತಿರಲಿಲ್ಲ. ಇದ್ದಕ್ಕಿಂದತೆಯೇ ಇದು ನಡೆದು ಹೋಗಿದೆ. ಹೀಗಾಗಿ ನಮಗೂ ಅಲ್ಲೇ ಗೊತ್ತಾಗಿರೋದು. ಯುವದಸರಾದಲ್ಲಿ ನಡೆದಿರುವುದನ್ನು ನೋಡಿ ನನಗೂ ತುಂಬಾ ಸಂತೋಷ ಆಯಿತು. ಅಲ್ಲಿ ನೆರೆದಿದ್ದ ಎಲ್ಲ ಜನರೂ ಇದನ್ನು ಇಷ್ಟಪಟ್ಟರು. ನಮ್ಮಲ್ಲಿಯೂ ಬಂದು ಕೆಲವರು ಖುಷಿಯಾಯಿತು ಎಂದು ನಿವೇದಿತಾ ತಾಯಿ ಹೇಳಿದರು.

    ಚಂದನ್ ಅವರನ್ನು ಲವ್ ಮಾಡುತ್ತಿದ್ದೇನೆ ಎಂದು ನಿವೇದಿತಾ ಯಾವತ್ತೂ ಹೇಳಿರಲಿಲ್ಲ. ಆದರೆ ಇದಕ್ಕೂ ಮೊದಲು ಚಂದನ್ ಹೆತ್ತವರು ,ನಾವು ಒಂದು ಬಾರಿ ಮಾತನಾಡಿದ್ದೆವು. ಅದು ಬಿಟ್ಟರೆ ಪೂರ್ತಿಯಾಗಿ ಈ ಬಗ್ಗೆ ಚರ್ಚೆ ನಡೆಸಿರಲಿಲ್ಲ ಎಂದರು.

    ಇದೇ ವೇಳೆ ನಿವೇದಿತಾ ತಂದೆ ಮಾತನಾಡಿ, ಯುವಕರಲ್ವ ಹೀಗಾಗಿ ಅವರು ಯುವದಸರಾದಲ್ಲಿ ಪ್ರಪೋಸ್ ಮಾಡಿದ್ದಾರೆ. ಇದರಿಂದ ನಮಗೂ ತುಂಬಾ ಖುಷಿಯಾಯಿತು. ಆದರೆ ಅದರ ಬಗ್ಗೆ ನಮಗೂ ಗೊತ್ತಿರಲಿಲ್ಲ ಎಂದು ತಿಳಿಸಿದರು.

    ಬಿಗ್ ಬಾಸ್ ಬಳಿಕ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟ ಇದೆ. ಹೀಗಾಗಿ ಚಂದನ್ ಬಗ್ಗೆ ತಿಳಿದುಕೊಂಡಿದ್ದೇವೆ. ಲವ್ ಮಾಡುತ್ತಿದ್ದಾರೆ ಎಂದು ಗೊತ್ತಿರಲಿಲ್ಲ. ಆದರೆ ಒಂದು ಬಾರಿ ಜಸ್ಟ್ ಮಾತಾಡಿದ್ದೆವು. ಮದುವೆ ಕಾರ್ಯಕ್ರಮದ ಬಗ್ಗೆ ಇನ್ನಷ್ಟೇ ಮಾತುಕತೆ ನಡೆಸಬೇಕು ಎಂದು ಹೇಳಿದರು.

    ದಸರಾ ವೇದಿಕೆಯಲ್ಲಿ ಜನರ ದುಡ್ಡಿನಲ್ಲಿ ಈ ರೀತಿ ಮಾಡಿರುವುದು ತಪ್ಪು ಎಂಬ ಟೀಕೆಗಳಿಗೆ ಉತ್ತರಿಸಿದ ಅವರು, ಆ ಕ್ಷಣದಲ್ಲಿ ಅವರ ತಲೆಯಲ್ಲಿ ಏನು ಬಂತೋ ಅದನ್ನು ಚಂದನ್- ನಿವೇದಿತಾ ಮಾಡಿದ್ದಾರೆ. ಇದು ಕೆಲವರಿಗೆ ಇಷ್ಟವಾಗಿದೆ. ಇನ್ನೂ ಕೆಲವರಿಗೆ ಇಷ್ಟವಾಗಿಲ್ಲ ಎಂದರು.

    ಯುವ ದಸರಾ ಸಂದರ್ಭದಲ್ಲಿ ಗಾಯಕ ಚಂದನ್ ಶೆಟ್ಟಿ, ನಿವೇದಿತಾ ಗೌಡಾಗೆ ಪ್ರಪೋಸ್ ಮಾಡಿ ರಿಂಗ್ ತೊಡಿಸಿದ್ದರು. ಈ ವಿಚಾರ ಸಾಕಷ್ಟು ವಿವಾಕ್ಕೀಡಾಗಿದ್ದು, ನನ್ನದು ತಪ್ಪಾಗಿದ್ದರೆ ಕ್ಷಮಿಸಿಬಿಡಿ ಎಂದು ಚಂದನ್ ಪ್ರತಿಕ್ರಿಯಿಸಿದ್ದರು. ಆದರೆ ಈ ಸಂಬಂಧ ಮಾತನಾಡಿದ, ಉಸ್ತುವಾರಿ ಸಚಿವ ವಿ ಸೋಮಣ್ಣ ಅವರು ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಆರು ತಿಂಗಳಲ್ಲಿ ಆ ತಾಯಿ ಅವರಿಗೆ ಏನು ತೀರ್ಮಾನ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತಾರೆ. ಇದೊಂದು ಅಕ್ಷಮ್ಯ ಅಪರಾಧ ಎಂದು ಕಿಡಿಕಾರಿದರು.

  • ಚಂದನ್-ನಿವೇದಿತಾ ನಿಶ್ಚಿತಾರ್ಥ ಮಾಡ್ಕೊಂಡಿರೋದು ಅಕ್ಷಮ್ಯ ಅಪರಾಧ- ವಿ.ಸೋಮಣ್ಣ

    ಚಂದನ್-ನಿವೇದಿತಾ ನಿಶ್ಚಿತಾರ್ಥ ಮಾಡ್ಕೊಂಡಿರೋದು ಅಕ್ಷಮ್ಯ ಅಪರಾಧ- ವಿ.ಸೋಮಣ್ಣ

    – ಅವರಿಬ್ಬರಿಗೂ ಚಾಮುಂಡಿ ತಾಯಿಯೇ 6 ತಿಂಗ್ಳಲ್ಲಿ ಶಿಕ್ಷೆ ನೀಡ್ತಾಳೆ

    ಮೈಸೂರು: ಯುವ ದಸರಾ ವೇದಿಕೆಯಲ್ಲಿ ಗಾಯಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ನಿಶ್ಚಿತಾರ್ಥ ಮಾಡಿಕೊಂಡಿರುವುದು ಅಕ್ಷಮ್ಯ ಅಪರಾಧ. ನಾಡಿನ ಅಧಿದೇವತೆಯ ನಾಡಹಬ್ಬದ ವೇದಿಕೆಯಲ್ಲಿ ಈ ರೀತಿ ಆಗಬಾರದಿತ್ತು ಎಂದು ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಕಿಡಿ ಕಾರಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪೆಸಗಿರುವ ಅವರಿಬ್ಬರಿಗೂ ಬರುವ ಆರು ತಿಂಗಳಲ್ಲಿ ದೇವಿಯೇ ಶಿಕ್ಷೆ ನೀಡುತ್ತಾರೆ. ಈ ರೀತಿ ಆಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಇದಕ್ಕೆ ದಸರಾ ಉಪಸಮಿತಿ ಕಾರಣವಲ್ಲ. ಈ ಸಂಬಂಧ ಮೈಸೂರು ಜಿಲ್ಲಾ ಅಧೀಕ್ಷಕ ಹಾಗೂ ಯುವ ದಸರಾ ಉಪಸಮಿತಿಯ ಕಾರ್ಯಾಧ್ಯಕ್ಷರೂ ಆಗಿರುವ ರಿಷ್ಯಂತ್ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಚಂದನ್ ಶೆಟ್ಟಿ ಮತ್ತು ನಿವೇದಿತಾರಿಗೆ ಕಾರಣ ಕೇಳಿ ಪೊಲೀಸ್ ಇಲಾಖೆಯಿಂದ ನೋಟಿಸ್ ನೀಡಲಾಗುತ್ತದೆ ಎಂದು ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.

    ತಪ್ಪಿತಸ್ಥರ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಕಳೆದ ರಾತ್ರಿ ಯುವ ದಸರಾ ವೇದಿಕೆಯಲ್ಲಿ ನಡೆದ ಘಟನೆಗೆ ನಾನು ತೀವ್ರ ವಿಷಾದ ವ್ಯಕ್ತಪಡಿಸುತ್ತೇನೆ. ಚಂದನ್ ಶೆಟ್ಟಿ ಸುಸಂಸ್ಕೃತ ವ್ಯಕ್ತಿ ಎಂದುಕೊಂಡಿದ್ದೆ. ಆತ ನನ್ನ ಕ್ಷೇತ್ರದ ವ್ಯಾಪ್ತಿಗೆ ಬರುವ ಬೆಂಗಳೂರಿನ ನಾಗರಬಾವಿಯ ನಿವಾಸಿ. ಕಳೆದ ರಾತ್ರಿ ಯುವ ದಸರಾ ವೇದಿಕೆಯಲ್ಲಿ ಆತ ಮಾಡಿರುವುದು ಅತ್ಯಂತ ಹೇಯ ಕೃತ್ಯ ಎಂದು ಸಚಿವರು ಬೇಸರ ವ್ಯಕ್ತಪಡಿಸಿದ್ದಾರೆ.

    ಪಾರಂಪರಿಕ ಮತ್ತು ಸಾಂಪ್ರದಾಯಿಕ ವೇದಿಕೆಯನ್ನು ಈ ರೀತಿ ದುರ್ಬಳಕೆ ಮಾಡಿಕೊಳ್ಳಬಾರದಿತ್ತು. ನಾನು ಸಹ ಯುವ ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ನಾನು ಅರಮನೆ ಕಾರ್ಯಕ್ರಮಕ್ಕೆ ಹೊರಡಲು ಮುಂದಾದಾಗ, ಚಂದನ್ ಶೆಟ್ಟಿ, ನಿವೇದಿತಾ ಪೋಷಕರು ನನ್ನನ್ನು ತಡೆದು ಇನ್ನೂ ಸ್ವಲ್ಪ ಸಮಯ ಇರುವಂತೆ ಒತ್ತಾಯಿಸಿದರು. ಆದರೆ ನಾನು ಅರಮನೆಗೆ ಹೋಗಬೇಕಾಗಿದ್ದರಿಂದ ಅಲ್ಲಿಂದ ನಿರ್ಗಮಿಸಿದೆ. ನಾನು ಹೊರಟ ನಂತರ ಈ ಘಟನೆ ನಡೆದಿರುವುದು ನನ್ನ ಗಮನಕ್ಕೆ ಬಂತು ಎಂದು ವಿವರಿಸಿದ್ದಾರೆ.

    ಯುವ ದಸರಾ ವೇದಿಕೆಯಲ್ಲಿ ಶುಕ್ರವಾರ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಬ್ಬರೂ ಸಹ ಯುವ ದಸರಾ ವೇದಿಕೆಯಲ್ಲಿಯೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿತ್ತು.

    ಈ ಕುರಿತು ಪ್ರತಿಕ್ರಿಯಿಸಿದ ಗಾಯಕ ಚಂದನ್ ಶೆಟ್ಟಿ, ತಪ್ಪಾಗಿದ್ದರೆ ಕ್ಷಮೆ ಇರಲಿ. ಪ್ರೇಮ ನಿವೇದನೆ ಮಾಡಿಕೊಳ್ಳಲು ಒಳ್ಳೆಯ ದಿನ ಅಂದುಕೊಂಡು, ನನ್ನ ಜೀವನದಲ್ಲಿ ಸಹ ಪ್ರಮುಖ ದಿನ ಎಂದುಕೊಂಡು ಮೈಸೂರಿನ ಯುವ ದಸರಾದಲ್ಲಿ ಈ ರೀತಿ ಮಾಡಿದೆ. ನನಗನ್ನಿಸಿದ್ದನ್ನು ನಾನು ಹೇಳಿದೆ, ಈ ಕುರಿತು ತಪ್ಪಾಗಿದ್ದಲ್ಲಿ ಖಂಡಿತವಾಗಿಯೂ ಕ್ಷಮೆ ಕೇಳುತ್ತೇನೆ. ಶುಕ್ರವಾರದ ಆ ಕಾರ್ಯಕ್ರಮಕ್ಕೆ ಸೇರಿದವರಲ್ಲಿ ಬಹುತೇಕರು ನಮ್ಮ ಹಿತೈಶಿಗಳು. ಸಪ್ರ್ರೈಸ್ ಕೊಡಬೇಕು ಎಂದುಕೊಂಡು, ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದೆ ಎಂದು ತಿಳಿಸಿದ್ದರು.

    ಆಗ ನನ್ನ ಹಾಗೂ ಅಲ್ಲಿ ಸೇರಿದ್ದ ಪ್ರತಿಯೊಬ್ಬರ ಮನಸ್ಸಿನಲ್ಲಿ ಖುಷಿ ಇತ್ತು. ಅಂತಹ ದೊಡ್ಡ ಕಾರ್ಯಕ್ರಮದಲ್ಲಿ ಸಪ್ರ್ರೈಸ್ ನೀಡುವುದರ ಜೊತೆಗೆ ನಮ್ಮಿಬ್ಬರ ಕುರಿತ ಊಹಾಪೋಹಗಳಿಗೆ ಸ್ಪಷ್ಟನೆ ನೀಡಬೇಕಾಗಿತ್ತು. ಈ ರೂಮರ್ಸ್‍ಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ವೇದಿಕೆಯ ಮೇಲೆ ಪ್ರಪೋಸ್ ಮಾಡಿದೆ. ನಾನೂ ಮೈಸೂರಿನಲ್ಲಿಯೇ ಓದಿದವನು, ಹೀಗಾಗಿ ದಸರಾದಲ್ಲಿ ಪ್ರಪೋಸ್ ಮಾಡಿದೆ ಎಂದು ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದರು.

  • ಯುವದಸರಾ ವೇದಿಕೆಯಲ್ಲಿ ಒಂದಾದ ಬಿಗ್‍ಬಾಸ್ ಜೋಡಿ – ನಿವೇದಿತ ಗೌಡಗೆ ಉಂಗುರ ತೊಡಿಸಿದ ಚಂದನ್ ಶೆಟ್ಟಿ

    ಯುವದಸರಾ ವೇದಿಕೆಯಲ್ಲಿ ಒಂದಾದ ಬಿಗ್‍ಬಾಸ್ ಜೋಡಿ – ನಿವೇದಿತ ಗೌಡಗೆ ಉಂಗುರ ತೊಡಿಸಿದ ಚಂದನ್ ಶೆಟ್ಟಿ

    ಮೈಸೂರು: ಯುವ ದಸರಾ ವೇದಿಕೆಯಲ್ಲೇ ಗಾಯಕ ಚಂದನ್ ಶೆಟ್ಟಿ-ನಿವೇದಿತಾಗೌಡ ಎಂಗೇಜ್ ಆಗಿದ್ದಾರೆ. ಝಗಮಗಿಸುವ ವೇದಿಕೆಯಲ್ಲಿ ನಿವೇದಿತಾಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಬೆರಳಿಗೆ ಉಂಗುರ ತೊಡಿಸಿ ನಿನ್ನನ್ನೇ ಮದುವೆಯಾಗುತ್ತೇನೆಂದು ಘೋಷಿಸಿದ್ದಾರೆ. ಸಾವಿರಾರು ಪ್ರೇಕ್ಷಕರ ಸಮ್ಮುಖದಲ್ಲಿ ಪ್ರೇಮ ನಿವೇದನೆ ಮಾಡಿದ್ದು ಯುವಜನತೆ ಬಿಗ್‍ಬಾಸ್ ಜೋಡಿಗೆ ಜೈಹಾರ ಹಾಕಿದರು.

    ಪ್ರಪೋಸ್ ಗೂ ಮುನ್ನ ಚಂದನ್‍ಶೆಟ್ಟಿ ಬಿಗ್‍ಬಾಸ್ ಮನೆಯಲ್ಲಿ ನಿವೇದಿತಾ ಗೌಡ ಅವರಿಗೆ ಬರೆದಿದ್ದ ‘ಗೊಂಬೆ ಗೊಂಬೆ’ ಎಂಬ ಸಾಂಗ್ ಹಾಡಿದರು. ಇದಕ್ಕೆ ವೇದಿಕೆಯ ಮೇಲೆ ನಿವೇದಿತಾಗೌಡ ಅವರು ಸಹ ಸ್ಟೇಪ್ ಹಾಕಿದರು.

    ಪ್ರಪೋಸ್ ಗೆ ಮುನ್ನ ವೇದಿಕೆಯಲ್ಲಿ ಮಾತನಾಡಿದ್ದ ಚಂದನ್, ಇಂದು ನಿಮ್ಮ ಮುಂದೆ ಹೇಳುತ್ತಿರುವ ಮಾತುಗಳನ್ನು ನಿವೇದಿತಾಗೆ ವಿದೇಶದ ಸುಂದರ ತಾಣದಲ್ಲಿ ಹೇಳಲು ಪ್ಲಾನ್ ಮಾಡಿಕೊಂಡಿದ್ದೆ. ಇಂದು ಬೆಳಗ್ಗೆ ಇಷ್ಟು ದೊಡ್ಡ ವೇದಿಕೆಯಲ್ಲಿ, ನನ್ನನ್ನು ಇಷ್ಟಪಡುವ ಜನರ ಮುಂದೆ ಹೇಳೋದು ಉತ್ತಮ. ಕಾರ್ಯಕ್ರಮಕ್ಕೆ ನನ್ನ ಪೋಷಕರು, ನಿವೇದಿತಾ ತಂದೆ-ತಾಯಿ ಸಹ ಬಂದಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ನಾನು ಮತ್ತು ನಿವೇದಿತಾ ಬರೋಬ್ಬರಿ 105 ದಿನಗಳನ್ನು ಜೊತೆಯಾಗಿ ಕಳೆದಿದ್ದೇವೆ ಎಂದರು.

    105 ದಿನಗಳಲ್ಲಿ ನಮ್ಮಿಬ್ಬರ ಸಾಕಷ್ಟು ಮಾತುಕತೆ ನಡೆದಿದೆ. 105 ದಿನಗಳಲ್ಲಿ ನಿವೇದಿತಾ ನನ್ನನ್ನು ಅರ್ಥ ಮಾಡಿಕೊಂಡಷ್ಟು ಯಾರು ಮಾಡಿಕೊಳ್ಳಲಿಲ್ಲ. ಹಾಗಾಗಿ ನನ್ನ ಜೀವನದಲ್ಲಿ ನಿವೇದಿತಾ ಮುಂದಿನ ದಿನಗಳಲ್ಲಿ ಜೊತೆಯಾಗಿರಲಿ ಎಂದು ಇಂದು ನಿಮ್ಮೆಲ್ಲರ ಸಾಕ್ಷಿಯಾಗಿ ಪ್ರೇಮ ನಿವೇದನೆಯನ್ನ ಸಲ್ಲಿಸುತ್ತಿದ್ದೇನೆ ಎಂದು ಮೊಳಕಾಲೂರಿ ಉಂಗುರ ಹಿಡಿದು ವಿಲ್ ಯು ಮ್ಯಾರಿ ಮೀ ಎಂದು ಚಂದನ್ ಪ್ರಪೋಸ್ ಮಾಡಿದರು.