Tag: ನಿವೇಶನ

  • ಬೆಂಗಳೂರು ನಿವಾಸಿಗಳಿಗೆ ದೀಪಾವಳಿಗೂ ಮೊದಲೇ ಗಿಫ್ಟ್‌; ಬಿ-ಖಾತಾ ಪರಿವರ್ತನೆಗೆ ಹೊಸ ಪೋರ್ಟಲ್‌

    ಬೆಂಗಳೂರು ನಿವಾಸಿಗಳಿಗೆ ದೀಪಾವಳಿಗೂ ಮೊದಲೇ ಗಿಫ್ಟ್‌; ಬಿ-ಖಾತಾ ಪರಿವರ್ತನೆಗೆ ಹೊಸ ಪೋರ್ಟಲ್‌

    – 2000 ಚ.ಮೀ.ಗಿಂತ ಹೆಚ್ಚು ಆಸ್ತಿದಾರರು ಎ-ಖಾತಾಗೆ ಅಪ್ಲೈ ಮಾಡೋದು ಹೇಗೆ?

    ಬೆಂಗಳೂರು: ಸಿಲಿಕಾನ್‌ ಸಿಟಿಯ ಲಕ್ಷಾಂತರ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ದೀಪಾವಳಿ ಗಿಫ್ಟ್‌ ಕೊಡ್ತಾ ಇದೆ. 1,200 ಚದರ ಅಡಿವರೆಗಿನ ನಿವೇಶನದಲ್ಲಿ ನಿರ್ಮಿಸಿದ ಮನೆಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (OC) ಪಡೆಯುವುದರಿಂದ ವಿನಾಯಿತಿ ನೀಡಿ ಆದೇಶ ಹೊರಡಿಸಿದ್ರೆ, ಮತ್ತೊಂದೆಡೆ ‘ಬಿ-ಖಾತಾ’ (B Khata) ಆಸ್ತಿಗಳನ್ನು ‘ಎ-ಖಾತಾ’ಗೆ (A Khata) ಪರಿವರ್ತಿಸುವ ಆನ್‌ಲೈನ್‌ ಪೋರ್ಟಲ್‌ಗೆ ಇಂದು ಚಾಲನೆ ನೀಡುತ್ತಿದೆ.

    ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇಂದು ‘ಬಿ – ಖಾತೆ’ಯಿಂದ ‘ಎ – ಖಾತೆ’ಗೆ ಪರಿವರ್ತಿಸುವ ಆನ್‌ಲೈನ್ ಪೋರ್ಟಲ್‌ಗೆ ಚಾಲನೆ ನೀಡಿದ್ದಾರೆ. ಈ ಮಹತ್ವಾಕಾಂಕ್ಷಿ ಯೋಜನೆಯಿಂದಾಗಿ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿರುವ ಅಂದಾಜು 6 ಲಕ್ಷಕ್ಕೂ ಅಧಿಕ ‘ಬಿ – ಖಾತೆ’ದಾರರು ತಮ್ಮ ಆಸ್ತಿಗಳಿಗೆ ‘ಎ – ಖಾತೆ’ ಪಡೆಯಲು ದಾರಿ ಸುಗಮವಾಗಿದೆ. ಇದರೊಂದಿಗೆ ಹೊಸ ನಿವೇಶನಗಳಿಗೂ ನೇರವಾಗಿ ‘ಎ – ಖಾತೆ’ ಪಡೆಯಲು ಈ ವ್ಯವಸ್ಥೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

    ಎ-ಖಾತಾ ಆನ್‌ಲೈನ್‌ನಲ್ಲಿ ಅಪ್ಲೈ ಮಾಡೋದು ಹೇಗೆ? (2000‌ ಚ.ಮೀಟರ್‌ಗಳ ವರೆಗೆ)
    1. ತಮ್ಮ ಮೊಬೈಲ್ ನಂಬರ್‌ನಿಂದ ಇಂದು ಅನಾವರಣಗೊಳ್ಳುವ https://bbmp.karnataka.gov.in/btoakhata ವೆಬ್‌ ಪೋರ್ಟಲ್‌ಗೆ ಹೋಗಿ ಓಟಿಪಿ ಸಹಿತ ಲಾಗಿನ್ ಆಗಬೇಕು
    2. ಫೈನಲ್ ಬಿ ಖಾತಾದ ಇಪಿಐಡಿ ನಂಬರ್ ಅನ್ನು ನಮೂದಿಸಬೇಕು
    3. ಆಸ್ತಿಯ ಮಾಲೀಕರು ತಮ್ಮ ಆಧಾರ್ ದೃಢೀಕರಿಸಬೇಕು.
    4. ನಿವೇಶನ ಸ್ಥಳವನ್ನು ಮತ್ತು ನಿವೇಶನ ಮುಂಭಾಗದ ರಸ್ತೆಯ ಪ್ರಕಾರವನ್ನು ದೃಢಪಡಿಸಿ
    5. ಭೂಪರಿವರ್ತನೆಯಾದ ಮತ್ತು ಭೂ ಪರಿವರ್ತನೆಯಾಗದ ಎರಡೂ ಸೈಟ್‌ಗಳು ಅಪ್ಲೈ ಮಾಡೋಕೆ ಅರ್ಹರು. ಫ್ಲ್ಯಾಟ್ ಇರುವವರು ಅಪ್ಲೈ ಮಾಡೋ ಆಗಿಲ್ಲ.
    6. ನಗರಪಾಲಿಕೆಯಿಂದ ನಿವೇಶನಕ್ಕೆ ಭೇಟಿ ಮತ್ತು ದೃಢೀಕರಣ
    7. ಮಾರುಕಟ್ಟೆ ಮೌಲ್ಯದ ಶೇ.5 ರಷ್ಟು ಮೊತ್ತವನ್ನು ʻಏಕ ನಿವೇಶನʼ ಅನುಮೋದನೆ ಶುಲ್ಕವಾಗಿ ಹಾಗೂ ಇತರೇ ಶುಲ್ಕಗಳನ್ನು ಪಾವತಿಸುವುದು.
    8. ಇಷ್ಟೆಲ್ಲಾ ಪ್ರೋಸೆಸ್ ಆದ ಮೇಲೆ ಸ್ವಯಂಕೃತವಾಗಿ ಎ-ಖಾತಾ ಸಿಗಲಿದೆ

    2000 ಚದರ ಮೀಟರ್‌ಗೂ ಹೆಚ್ಚಿನ ವಿಸ್ತೀರ್ಣ ಆಸ್ತಿ ಹೊಂದಿದವರು ಅಪ್ಲೈ ಮಾಡೋದು ಹೇಗೆ?
    1. ನೋಂದಾಯಿತ ಇಂಜಿನಿಯರ್ ಅಥವಾ ಆರ್ಕಿಟೆಕ್ಚರ್ ಅನ್ನು ಸಂಪರ್ಕಿಸಬೇಕು.
    2. ಯಾವುದೇ ರೀತಿಯ ನಿವೇಶನಗಳಿಗಾಗಿ https://bpas.bbmp.gov.in ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬೇಕು.
    3. ಅಗತ್ಯ ದಾಖಲೆಗಳನ್ನ ಮತ್ತು ಕ್ಯಾಡ್‌ ಡ್ರಾಯಿಂಗ್‌ ಅನ್ನು ಅಪ್‌ಲೋಡ್‌ ಮಾಡಬೇಕು.
    4. ಆರಂಭಿಕ ಪರಿಶೀಲನಾ ಶುಲ್ಕ 500 ರೂ. ಪಾವತಿಸಬೇಕು.
    5. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು (ಫ್ಲಾಟ್‌ಗಳಿಗೆ ಅರ್ಹತೆ ಇಲ್ಲ)
    6. ನಂತರ ನಿವೇಶನಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ.
    7. ಅರ್ಹತೆಗೆ ಅನುಸಾರವಾಗಿ ಅನುಮೋದನೆ ನೀಡಲಿದ್ದಾರೆ.
    8. ನಂತರ ಅನ್ವಯವಾಗುವ ಶುಲ್ಕಗಳನ್ನ ಪಾವತಿಸಬೇಕಾಗುತ್ತದೆ.
    9. ಅರ್ಹತಾನುಸಾರವಾಗಿ ʻಏಕನಿವೇಶನʼ (ಸಿಂಗಲ್‌ ಸೈಟ್‌) ಅನುಮೋದನೆ ಪ್ರಮಾಣ ಪತ್ರ, ಡ್ರಾಯಿಂಗ್‌ ಮತ್ತು ಎ-ಖಾತಾ ವಿತರಣೆ ಆಗಲಿದೆ.

  • ಪೌರಕಾರ್ಮಿಕರಿಗೆ ಯಾವುದೇ ನಿವೇಶನಗಳನ್ನು ನೀಡುತ್ತಿಲ್ಲ- BBMP ಸ್ಪಷ್ಟನೆ

    ಪೌರಕಾರ್ಮಿಕರಿಗೆ ಯಾವುದೇ ನಿವೇಶನಗಳನ್ನು ನೀಡುತ್ತಿಲ್ಲ- BBMP ಸ್ಪಷ್ಟನೆ

    ಬೆಂಗಳೂರು: ಪೌರಕಾರ್ಮಿಕರಿಗೆ ನಿವೇಶನ ನೀಡಲಾಗುವುದೆಂದು ಅಪಪ್ರಚಾರ ಮಾಡುತ್ತಿರುವ ಬಗ್ಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ಸ್ಪಷ್ಟನೆ ನೀಡಿದೆ.

    ಪಾಲಿಕೆ ವತಿಯಿಂದ ಪೌರಕಾರ್ಮಿಕರಿಗೆ (Pourakarmika) ನಿವೇಶನಗಳನ್ನು ನೀಡುವ ಯೋಜನೆ ಸದ್ಯಕ್ಕೆ ಇಲ್ಲ. ನಿವೇಶನ ಹಂಚಿಕೆ ಕುರಿತು ಅಧಿಕೃತವಾಗಿ ಪಾಲಿಕೆಯಿಂದ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ವದಂತಿಗಳನ್ನ ನಂಬಬೇಡಿ. ನಂಬಿ ಹಣ ಕೊಟ್ರೆ ಅದಕ್ಕೆ ಪಾಲಿಕೆ ಜವಾಬ್ದಾರಿಯಲ್ಲ ಅಂತ ಬಿಬಿಎಂಪಿ ಸ್ಪಷ್ಟಪಡಿಸಿದೆ.

    ನಿವೇಶನ ಕೊಡಿಸೋದಾಗಿ ನಂಬಿಸಿ, ಅಮಾಯಕರಿಂದ ಹಣವನ್ನ ವಸೂಲಿ ಮಾಡುತ್ತಿರುವ ಬಗ್ಗೆ ಪಾಲಿಕೆಗೆ ದೂರುಗಳು ಬಂದಿದ್ದವು‌. ಇದರಿಂದ ಎಚ್ಚೆತ್ತ ಪಾಲಿಕೆ, ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟೀಕರಣ ನೀಡಿದೆ. ಇದನ್ನೂ ಓದಿ: ಮೋದಿ ನಿತ್ಯ 3.5 ಗಂಟೆ ನಿದ್ದೆ, ಸಂಜೆ 6 ಗಂಟೆಯ ನಂತರ ಊಟ ಮಾಡಲ್ಲ

  • ಸೈಟ್ ವಿಚಾರಕ್ಕೆ ಗ್ರಾಮಪಂಚಾಯ್ತಿ ಸಿಬ್ಬಂದಿಯಿಂದ ಮಹಿಳೆಗೆ ಚಾಕು ಇರಿತ

    ಸೈಟ್ ವಿಚಾರಕ್ಕೆ ಗ್ರಾಮಪಂಚಾಯ್ತಿ ಸಿಬ್ಬಂದಿಯಿಂದ ಮಹಿಳೆಗೆ ಚಾಕು ಇರಿತ

    ಹಾಸನ: ನಿವೇಶನದ (Site) ವಿಚಾರಕ್ಕೆ ಮಹಿಳೆ ಮೇಲೆ ಗ್ರಾಮ ಪಂಚಾಯ್ತಿ (Gram Panchayat) ಕಂಪ್ಯೂಟರ್ ಆಪರೇಟರೊಬ್ಬ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಹೊಳೆನರಸೀಪುರದ (Holenarasipura) ಕೋಡಿಹಳ್ಳಿಯಲ್ಲಿ ನಡೆದಿದೆ.

    ಚಾಕು ಇರಿತದಿಂದ ಗಾಯಗೊಂಡ ಮಹಿಳೆಯನ್ನು ಗೀತಾ ಎಂದು ಗುರುತಿಸಲಾಗಿದೆ. ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಕು ಇರಿದ ಆರೋಪಿಯನ್ನು ಅದೇ ಗ್ರಾಮದ ಮಲ್ಲೇಶ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪತಿ ಇಲ್ಲದಾಗ ಆಗಾಗ ಬರುತ್ತಿದ್ದ ಯುವಕ- ಅನೈತಿಕ ಸಂಬಂಧ ಶಂಕೆಗೆ ಬಲಿ

    ಗ್ರಾಮದ ಬೋರೇಗೌಡ ಮತ್ತು ಮಲ್ಲೇಶ್ ಎಂಬವರ ನಡುವೆ ನಿವೇಶನ ವಿಚಾರಕ್ಕೆ ಪದೇ ಪದೇ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರಕ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಅಲ್ಲದೆ ಆರು ತಿಂಗಳ ಹಿಂದೆ ಬೋರೇಗೌಡ ನ್ಯಾಯಾಲಯದ (Court) ಮೆಟ್ಟಿಲೇರಿದ್ದರು. ಬೋರೇಗೌಡರ ಪರವಾಗಿ ನ್ಯಾಯಾಲಯದಲ್ಲಿ ತೀರ್ಪು ಸಹ ಬಂದಿತ್ತು.

    ಶನಿವಾರ ಅಡಿಪಾಯ ತೆಗೆಯುತ್ತಿದ್ದ ವೇಳೆ ಸ್ಥಳಕ್ಕೆ ಬಂದಿದ್ದ ಮಲ್ಲೇಶ್ ಹಾಗೂ ಆತನ ಸ್ನೇಹಿತರು ಜಗಳ ಶುರು ಮಾಡಿದ್ದಾರೆ. ಅಲ್ಲದೆ ಏಕಾಏಕಿ ಬೋರೇಗೌಡನ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪತಿ ರಕ್ಷಣೆಗೆ ಪತ್ನಿ ಗೀತಾ ಅಡ್ಡ ಬಂದಿದ್ದಾರೆ. ಈ ವೇಳೆ ಆರೋಪಿ ಚಾಕುವಿನಿಂದ ಮಹಿಳೆಯ ಮುಖಕ್ಕೆ ಇರಿದಿದ್ದಾನೆ.

    ಈ ಸಂಬಂಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಆಕ್ಸಿಜನ್ ಕೊರತೆಯಿಂದ ಕ್ಯಾನ್ಸರ್ ರೋಗಿ ಸಾವು- ಕಾರಣ ಅದಲ್ಲ ಅಂತ ವೈದ್ಯರ ವಾದ

  • ಇನ್ಮುಂದೆ ಬಿಜೆಪಿಗೆ ವೋಟ್ ಹಾಕ್ತಾ ಇರಿ, ಪ್ರತಿ ವರ್ಷ ಸೈಟ್ ಕೊಡ್ತೀವಿ – ವಿ.ಸೋಮಣ್ಣ

    ಇನ್ಮುಂದೆ ಬಿಜೆಪಿಗೆ ವೋಟ್ ಹಾಕ್ತಾ ಇರಿ, ಪ್ರತಿ ವರ್ಷ ಸೈಟ್ ಕೊಡ್ತೀವಿ – ವಿ.ಸೋಮಣ್ಣ

    ಚಾಮರಾಜನಗರ: ಇನ್ಮುಂದೆ ಬಿಜೆಪಿಗೆ (BJP) ವೋಟ್ ಹಾಕ್ತಾ ಇರಿ, ವರ್ಷಾವರ್ಷ ಸೈಟ್ ಕೊಡ್ತೀವಿ ಎಂದು ಸಚಿವ ವಿ.ಸೋಮಣ್ಣ (V Somanna) ಭರವಸೆ ನೀಡಿದ್ದಾರೆ.

    ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಮುಖ್ಯಮಂತ್ರಿ ನಗರ ನಿವೇಶನ ಯೋಜನೆಯಡಿ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗುಂಡ್ಲುಪೇಟೆಯಲ್ಲಿ ಕಳೆದ 30 ವರ್ಷಗಳಿಂದ ಯಾರಿಗೂ ನಿವೇಶನ ಹಂಚಿಕೆ ಮಾಡಿಲ್ಲ. ಇನ್ಮುಂದೆ ಬಿಜೆಪಿಗೆ ವೋಟ್ (Vote) ಹಾಕ್ತಾ ಇರಿ, ವರ್ಷಾವರ್ಷ ಸೈಟ್ ಹಂಚಿಕೆ ಮಾಡ್ತೀವಿ ಎಂದು ಆಶ್ವಾಸನೆ ನೀಡಿದ್ದಾರೆ. ಇದನ್ನೂ ಓದಿ: WPL 2023: `ಕಮಲ’ ಮುಂಬೈ ಇಂಡಿಯನ್ಸ್ ಜೆರ್ಸಿ ಅನಾವರಣ 

    ಈ ಹಿಂದೆ ಬೆಂಗಳೂರಿನಲ್ಲಿ (Bengaluru) 1 ಲಕ್ಷ ಮನೆ ನಿರ್ಮಿಸಲು ಪ್ರಧಾನಿ ಮೋದಿ (Narendra Modi) 600 ಕೋಟಿ ಕೊಟ್ಟಿದ್ದರು. ಆದರೆ ಅಂದಿನ ಸರ್ಕಾರ ಅದಕ್ಕೆ ಬೇಕಾದ ಜಾಗವನ್ನು ಹುಡುಕಲೇ ಇಲ್ಲ. ನಾನು ಸಚಿವನಾದ ಮೇಲೆ ಜಾಗ ಹುಡುಕಿ ಬೆಂಗಳೂರಿನಲ್ಲಿ 52 ಸಾವಿರ ಮನೆಗಳನ್ನ ನಿರ್ಮಾಣ ಮಾಡಲಾಗಿದೆ. ಈ ಪೈಕಿ ಈಗಾಗಲೇ 5 ಸಾವಿರ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕುಮಾರಣ್ಣನ ಸರ್ಕಾರ ಹೋದ್ಮೇಲೆ ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ – ಹೆಚ್.ಡಿ.ರೇವಣ್ಣ ಬೇಸರ

    ಇದೇ ವೇಳೆ ಯಡಿಯೂರಪ್ಪ (BS Yediyurappa) ವಿಧಾನಸಭೆಗೆ ವಿದಾಯ ಹೇಳಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಎಲ್ಲರೂ ಒಂದು ದಿನ ವಿದಾಯ ಹೇಳಲೇಬೇಕಲ್ವಾ? ಒಂದು ಏಜ್ ಆದ ಮೇಲೆ ಹೋಗಲೇಬೇಕಲ್ವಾ? ದೇಶದಲ್ಲಿ ಬಹುತೇಕ ಮಂದಿ ಈ ರೀತಿ ಬಂದು ಹೋಗಿದ್ದಾರೆ. ನಾವೂ ಮುಂದೊಂದು ದಿನ ವಿದಾಯ ಹೇಳಲೇಬೇಕು. ಯಡಿಯೂರಪ್ಪ ತಮ್ಮ ವಯಸ್ಸಿನ ಇತಿಮಿತಿ ಅರ್ಥಮಾಡಿಕೊಂಡು ತೀರ್ಮಾನ ಮಾಡಿದ್ದಾರೆ. ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವುದು ಒಳ್ಳೆಯದು ಅನಿಸಿರಬೇಕು. ಹಾಗಾಗಿ ವಿದಾಯ ಹೇಳಿದ್ದಾರೆ ಎಂದು ಸೋಮಣ್ಣ ತಿಳಿಸಿದ್ದಾರೆ.

  • ಸರ್ಕಾರಿ ಉಚಿತ ನಿವೇಶನ ಪಡೆಯಲು ಲಂಚ ನೀಡಿದರೆ ಮಂಜೂರಾತಿ ರದ್ದು: ಸುಧಾಕರ್

    ಸರ್ಕಾರಿ ಉಚಿತ ನಿವೇಶನ ಪಡೆಯಲು ಲಂಚ ನೀಡಿದರೆ ಮಂಜೂರಾತಿ ರದ್ದು: ಸುಧಾಕರ್

    ಚಿಕ್ಕಬಳ್ಳಾಪುರ: ನಿವೇಶನ ರಹಿತರು ಸರ್ಕಾರದ ಉಚಿತ ನಿವೇಶನ ಅಥವಾ ವಸತಿ ವ್ಯವಸ್ಥೆಯ ಸೌಲಭ್ಯ ಪಡೆಯಲು ಯಾವುದೇ ವ್ಯಕ್ತಿಗೆ ಒಂದು ನಯಾಪೈಸೆ ಲಂಚ ನೀಡಬಾರದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ (K Sudhakar) ತಿಳಿಸಿದರು.

    ಚಿಕ್ಕಬಳ್ಳಾಪುರದ (Chikkaballapur) ಹೊಸಹುಡ್ಯದಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ನಿವೇಶನ ರಹಿತರಿಗೆ ನೀಡುವ ಉಚಿತ ನಿವೇಶನ ಹಾಗೂ ವಸತಿ ಸೌಕರ್ಯಗಳನ್ನು ಪಡೆಯಲು ಯಾವುದೇ ಫಲಾನುಭವಿಗಳು ಸ್ಥಳೀಯ ಜನಪ್ರತಿನಿಧಿಗಳಿಗೆ, ಅಧಿಕಾರಿ ಮತ್ತು ಸಿಬ್ಬಂದಿಗೆ ಲಂಚ ಕೊಟ್ಟರೆ ತಮ್ಮ ನಿವೇಶನಗಳ ಮಂಜೂರಾತಿಯನ್ನು ರದ್ದುಪಡಿಸಲಾಗುತ್ತದೆ ಎಂದು ಹೇಳಿದರು.

    ಜಾತಿ, ಗ್ರಾಮ, ಮತ ಯಾವುದನ್ನೂ ಮಾನದಂಡವಾಗಿ ಇಟ್ಟುಕೊಳ್ಳದೆ ಕೇವಲ ನಿವೇಶನ ಮತ್ತು ವಸತಿ ರಹಿತ ಕಡು ಬಡ ಕುಟುಂಬಗಳಿಗೆ ಮಾತ್ರ ಪಾರದರ್ಶಕವಾಗಿ ಎಲ್ಲರ ಸಮ್ಮುಖದಲ್ಲಿಯೇ ಆಯ್ಕೆ ಗ್ರಾಮ ಸಭೆಯಲ್ಲಿ ಮಾಡಲಾಗುತ್ತಿದೆ. ಯಾರೊಬ್ಬರೂ ನಯಾ ಪೈಸೆ ಯಾರಿಗೂ ಕೊಡುವಂತಿಲ್ಲ ಎಂದು ಫಲಾನುಭವಿಗಳಿಗೆ ಕಿವಿಮಾತು ಹೇಳಿದರು.

    ಆಯ್ಕೆಯಾದ ಎಲ್ಲ ಫಲಾನುಭವಿಗಳಿಗೆ ಫೆ.15ರೊಳಗೆ ಹಕ್ಕು ಪತ್ರ ವಿತರಿಸಲಾಗುತ್ತದೆ. ಅಲ್ಲದೆ ಇನ್ನೂ 170 ನಿವೇಶನ ಈ ಗ್ರಾಪಂನಲ್ಲಿ ಲಭ್ಯವಿದ್ದು, ನಿರ್ಗತಿಕರನ್ನು ಗುರುತಿಸಿ, ಪಟ್ಟಿ ಸಿದ್ಧಪಡಿಸಿ ಪಿಡಿಒ ಅವರಿಗೆ ನೀಡುವಂತೆ ಸಚಿವರು ಸೂಚಿಸಿದರು. ಇದನ್ನೂ ಓದಿ: ಯಾವ ಮುಖ ಇಟ್ಕೊಂಡು ಮೋದಿ ರಾಜ್ಯದಲ್ಲಿ ವೋಟು ಕೇಳ್ತಾರೆ – ಹೆಚ್‌ಡಿಕೆ ಪ್ರಶ್ನೆ

    ರೈತರ ಆದಾಯ ದ್ವಿಗುಣಕ್ಕೆ ಕ್ರಮ: ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಕೊಡಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಶ್ರಮಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ರೈತರ ಆದಾಯ ದ್ವಿಗುಣ ಮಾಡಲು ಹೆಚ್ಚು ಗಮನ ಕೇಂದ್ರೀಕರಿಸಿದ್ದಾರೆ. ರೈತರಿಗೆ ಕೃಷಿ ಚಟುವಟಿಕೆಗಳ ಮಾರ್ಗದರ್ಶನ ನೀಡಲು ವಿಶೇಷ ಆಸಕ್ತಿ ಹೊಂದಲಾಗಿದೆ. ದೊಡ್ಡ ಕೈಗಾರಿಕಾ ವಲಯ ಇಲ್ಲಿ ಸ್ಥಾಪನೆಯಾಗಲಿದ್ದು, ನಿರುದ್ಯೋಗ ಸಮಸ್ಯೆಯೂ ನಿವಾರಣೆ ಮಾಡಲು ನಿರಂತರವಾಗಿ ಶ್ರಮಿಸಲಾಗುತ್ತಿದೆ ಎಂದರು. ಇದನ್ನೂ ಓದಿ: ಕೆಂಗೇರಿ To ಮೈಸೂರು ರಸ್ತೆ ಮೆಟ್ರೋ ಸಂಚಾರ ಜ.27 ರಿಂದ 30ರವರೆಗೆ ಸ್ಥಗಿತ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 40 ಲಕ್ಷ ಲಂಚಕ್ಕೆ ಡಿಮ್ಯಾಂಡ್ – ನಗರಸಭೆ ಅಧ್ಯಕ್ಷೆ ಪತಿ ಸೇರಿ ನಾಲ್ವರು ಲೋಕಾಯುಕ್ತ ಬಲೆಗೆ

    40 ಲಕ್ಷ ಲಂಚಕ್ಕೆ ಡಿಮ್ಯಾಂಡ್ – ನಗರಸಭೆ ಅಧ್ಯಕ್ಷೆ ಪತಿ ಸೇರಿ ನಾಲ್ವರು ಲೋಕಾಯುಕ್ತ ಬಲೆಗೆ

    ಚಿಕ್ಕಬಳ್ಳಾಪುರ: ನಿವೇಶನ ಖಾತೆ ಮಾಡಿಕೊಡಲು 40 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಲಂಚ ಪಡೆಯುವಾಗ ಗೌರಿಬಿದನೂರು ನಗರಸಭೆ ಅಧ್ಯಕ್ಷೆಯ ಪತಿ ಸೇರಿ ನಾಲ್ವರು ಲೋಕಾಯುಕ್ತ (Karnataka Lokayukta) ಬಲೆಗೆ ಬಿದ್ದಿದ್ದಾರೆ.

    ಗೌರಿಬಿದನೂರು ನಗರಸಭೆ ಅಧ್ಯಕ್ಷೆ ರೂಪಾ ಅವರ ಪತಿ ಅನಂತರಾಜು, ನಗರಸಭಾ ಸದಸ್ಯ ಗೋಪಿನಾಥ್, ನಗರಸಭೆ ಸದಸ್ಯೆಯ ಪತಿ ಮಂಜುನಾಥ್ ಹಾಗೂ ಮಾಜಿ ನಗರಸಭಾ ಸದಸ್ಯ ಮೈಲಾರಿ ಸೇರಿದಂತೆ ನಾಲ್ವರು ಲೋಕಾಯುಕ್ತ ಪೊಲೀಸರ (Lokayukta Police) ದಾಳಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: 9ನೇ ತರಗತಿ ವಿದ್ಯಾರ್ಥಿನಿಯ 3ನೇ ಕವನ ಸಂಕಲನ ಬಿಡುಗಡೆ ಮಾಡಿದ ಗೆಹ್ಲೋಟ್‌

    ರಿಯಲ್ ಎಸ್ಟೇಟ್ (Real Estate) ಬಿಲ್ಡರ್ ಬಡಾವಣೆ ಮಾಲೀಕ ಮಂಜುನಾಥರೆಡ್ಡಿ ಅವರ ಬಳಿ 133 ನಿವೇಶನಗಳಿಗೆ ಖಾತೆ ಮಾಡಿಕೊಡುವ ಸಲುವಾಗಿ 40 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಐಷಾರಾಮಿ ಅನುಭವ ನೀಡುವ ಮಹಾರಾಜ ಎಕ್ಸ್‌ಪ್ರೆಸ್‌ ರೈಲು – ಟಿಕೆಟ್ ದರ ಒಬ್ಬರಿಗೆ 19 ಲಕ್ಷ

    ಈ ಆರೋಪದ ಮೇರೆಗೆ ಬೆಂಗಳೂರು ಉತ್ತರ ತಾಲೂಕು ರಾಜನಕುಂಟೆ ಬಳಿಯ ಸಿಲ್ವರ್ ಒಕ್ ರೆಸಾರ್ಟ್ ನಲ್ಲಿ ಮಂಜುನಾಥ್ ರೆಡ್ಡಿಯಿಂದ 20 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ಎಸ್ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ದಾಳಿ ಮಾಡಿ ನಾಲ್ವರನ್ನ ವಶಕ್ಕೆ ಪಡೆದಿರುವ ಲೋಕಾಯುಕ್ತರು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆ್ಯಸಿಡ್ ದಾಳಿ ಸಂತ್ರಸ್ತೆಯರಿಗೆ ನಿವೇಶನ, ಮನೆ ನೀಡಲು ಆದೇಶ: ಸಿಎಂ

    ಆ್ಯಸಿಡ್ ದಾಳಿ ಸಂತ್ರಸ್ತೆಯರಿಗೆ ನಿವೇಶನ, ಮನೆ ನೀಡಲು ಆದೇಶ: ಸಿಎಂ

    ಬೆಂಗಳೂರು: ಆ್ಯಸಿಡ್ ದಾಳಿಗೆ ಒಳಗಾದ ಎಲ್ಲ ಹೆಣ್ಣುಮಕ್ಕಳಿಗೆ ಮನೆ, ನಿವೇಶನ ಹಾಗೂ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ 5 ಲಕ್ಷ ರೂ. ವರೆಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

    ಕಂದಾಯ ಇಲಾಖೆಯ ಸಾಮಾಜಿಕ ಭದತ್ರೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ `ಹಲೋ ಕಂದಾಯ ಸಚಿವರೇ – 72 ಗಂಟೆಯಲ್ಲಿ ಮನೆ ಬಾಗಿಲಿಗೆ ಪಿಂಚಣಿ ಸಹಾಯವಾಣಿ’ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.  ಇದನ್ನೂ ಓದಿ; ಚಿನ್ನ, ಬೆಳ್ಳಿಯಲ್ಲ ಈಗ ನಿಂಬೆಹಣ್ಣಿನ ಮೇಲೆ ಕಳ್ಳರ ಕಣ್ಣು- 12 ಮೂಟೆ ನಿಂಬೆಹಣ್ಣು ಕಳವಾಗಿದ್ದೇಗೆ?

    acid attack protest

    ಆ್ಯಸಿಡ್ ದಾಳಿಗೆ ಒಳಗಾದವರು ಬಹಳಷ್ಟು ನೋವುಂಡಿರುತ್ತಾರೆ. ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗಿರುತ್ತಾರೆ. ಅವರ ನೆರವಿಗೆ ನಿಲ್ಲುವುದು ಸರ್ಕಾರದ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಅವರ ಮಾಸಾಶನವನ್ನು 3,000 ದಿಂದ 10 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ಜೊತೆಗೆ ಈಗ ಅವರಿಗೆ ಬದುಕು ಸಾಗಿಸಲು ಮನೆ ಹಾಗೂ ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

    ಅಧಿಕಾರ ವಿಕೇಂದ್ರೀಕರಣ: ರಾಜ್ಯ ಆಳುವುದು ಅಂದರೆ ಜನರ ಸಮಸ್ಯೆಗಳನ್ನು ಅರಿತು ಹೃದಯದಿಂದ ಪರಿಹಾರ ಕೊಡುವುದು. ಅನುಷ್ಠಾನ ಮಾಡುವುದು ಆಡಳಿತ. ಈ ಚಿಂತನೆಯಿಂದ ಕಂದಾಯ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಕಾರ್ಯರೂಪಕ್ಕೆ ಬಂದಿದೆ. ಇದರಿಂದ ಜನರ ಅಲೆದಾಟ ತಪ್ಪುತ್ತದೆ. 50 ಲಕ್ಷಕ್ಕಿಂತ ಹೆಚ್ಚು ಕುಟುಂಬಗಳು ಇದರ ಪ್ರಯೋಜನ ಪಡೆಯಲಿವೆ. ವ್ಯವಸ್ಥೆ ಸರಿ ಇಲ್ಲದ್ದರಿಂದ ಇದನ್ನು ಮಾಡಬೇಕಾಗಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ರಾಜ್ ಠಾಕ್ರೆ ಬೊಗಳುವ ನಾಯಿ – ಪರೋಕ್ಷವಾಗಿ ಅಕ್ಬರುದ್ದೀನ್ ಟಾಂಗ್

    acid-attack

    ಸಾಮಾಜಿಕ ಭದ್ರತಾ ಯೋಜನೆಗಳಡಿಯ ಪಿಂಚಣಿಗಳು ನೇರವಾಗಿ ಮನೆ ಬಾಗಿಲಿಗೆ ಮುಟ್ಟಬೇಕು. ಸಮಾಜದಲ್ಲಿ ಆಶ್ರಯ, ಸಹಾಯವಿಲ್ಲದವರಿಗೆ ಪಿಂಚಣಿ ನೀಡಬೇಕು. ಅದಕ್ಕಾಗಿ ವ್ಯವಸ್ಥೆ ಸರಿಪಡಿಸಲು ಕಂದಾಯ ಇಲಾಖೆಯನ್ನು ಚುರುಕುಗೊಳಿಸಲಾಗಿದೆ. ವ್ಯವಸ್ಥೆಯನ್ನು ಸರಿಪಡಿಸಿ ಈ ಕೆಲಸವನ್ನು ಮಾಡಲಾಗುತ್ತಿದೆ. ಇದು ಜನಪರವಾದ ಆಡಳಿತ. ಮನೆ ಬಾಗಿಲಿಗೇ ಸರ್ಕಾರ ಬರುವುದು ಅಧಿಕಾರದ ವಿಕೇಂದ್ರೀಕರಣ. ವಿಧಾನಸಭೆಯಲ್ಲಿ ಅಧಿಕಾರ ಹೆಪ್ಪುಗಟ್ಟಬಾರದು. ಅಧಿಕಾರ ನೇರವಾಗಿ ಜೇನುತುಪ್ಪದಂತೆ ಹರಿಯುವಂತಿರಬೇಕು. ಈ ನಿಟ್ಟಿನಲ್ಲಿ ಇಂದಿನ ಕಾರ್ಯಕ್ರಮ ನೇರವಾಗಿ ಜನರಿಗೆ ತಲುಪುವಂಥದ್ದು ಎಂದು ಶ್ಲಾಘಿಸಿದ್ದಾರೆ.

    ACID ATTACK 2s
    ಸಾಂದರ್ಭಿಕ ಚಿತ್ರ

    ಜನರೊಂದಿಗೆ ಸಂಪರ್ಕವಿದ್ದರೆ ಜನಪರ ಆಡಳಿತ: ಆಡಳಿತ ಮತ್ತು ರಾಜಕಾರಣ ಜನಪರವಾಗಿರಬೇಕು. ಆಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ಅಧಿಕಾರಕ್ಕೆ ಬಂದಾಗ ತಮ್ಮ ಸ್ವಂತ ಅಧಿಕಾರದ ಬಗ್ಗೆ ಚಿಂತೆ ಮಾಡುವವರು ದೇಶವನ್ನು ಹಾನಿ ಮಾಡಿದ್ದಾರೆ. ಅಧಿಕಾರ ಸಿಕ್ಕಾಗ ಜನಪರ ಕೆಲಸ ಮಾಡಿ ನೊಂದವರಿಗೆ ಸಹಾಯ ಮಾಡಿದವರನ್ನು ಜನ ಸದಾ ಕಾಲ ನೆನಪಿಟ್ಟುಕೊಳ್ಳುತ್ತಾರೆ. ಸಮಸ್ಯೆಗಳೊಂದಿಗೆ ಬದುಕುವುದಕ್ಕೂ, ಚರ್ಚೆ ಮಾಡುವುದಕ್ಕೂ ಅಂತರವಿದೆ. ಆಡಳಿತ ಜನರ ಬಳಿಗೆ ಸಮಸ್ಯೆಯ ಬಳಿಗೆ ಹೋದಾಗ ನೈಜ ಪರಿಹಾರ ಸಿಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಅಧಿಕಾರ ಸ್ವೀಕರಿಸಿದ ದಿನ ನನ್ನ ಮೊದಲನೇ ನಿರ್ಣಯ ರೈತರ ಮಕ್ಕಳಿಗೆ ವಿದ್ಯಾ ನಿಧಿ ಯೋಜನೆ ಘೋಷಣೆ ಮಾಡಿದ್ದು. ಹೆಣ್ಣುಮಕ್ಕಳಿಗೂ ಇದನ್ನು ವಿಸ್ತರಿಸಲಾಗಿದೆ. ಸಂಧ್ಯಾ ಸುರಕ್ಷಾ, ಅಂಗವಿಕಲರ, ವಿಧವಾ ವೇತನವನ್ನು ಹೆಚ್ಚಳ ಮಾಡಲಾಗಿದೆ. ಇನ್ನೊಬ್ಬರನ್ನು ಬೇಡದಂತೆ ಜೀವನ ನಡೆಸಲು ಈ ಬದಲಾವಣೆ ತರಲಾಗಿದೆ ಎಂದಿದ್ದಾರೆ.

  • ಮನೆ ಮಾಲೀಕರ ದುರಾಸೆ – ಕಣ್ಣೀರಿನಲ್ಲಿ ಕೈತೊಳೆಯುತ್ತಿರುವ ಕುಟುಂಬಗಳು

    ಮನೆ ಮಾಲೀಕರ ದುರಾಸೆ – ಕಣ್ಣೀರಿನಲ್ಲಿ ಕೈತೊಳೆಯುತ್ತಿರುವ ಕುಟುಂಬಗಳು

    ಬೆಂಗಳೂರು: ಹಣದಾಸೆಗೆ ಬಡಾವಣೆ ಮಾಡಿದ ಮಾಲೀಕರ ದುರುದ್ದೇಶಕ್ಕೆ ನಗರದ ಕುಟುಂಬಗಳು ಆತಂಕಕ್ಕೆ ಒಳಗಾಗುವ ಪರಿಸ್ಥಿತಿ ಎದುರಾಗಿದೆ.

    ಒಂದು ಕಡೆ ರಸ್ತೆಯಲ್ಲಿ ನಿಂತು ಮನೆಕಡೆ ನೋಡಿ ನೋವು ಪಡುತ್ತಿರುವ ಮನೆ ಕಟ್ಟಿದ ಮಾಲೀಕರು. ಇನ್ನೊಂದೆಡೆ ಇತ್ತೀಚೆಗೆ ಮಹಾಮಳೆಗೆ ಜಮೀನು ಮಾಲೀಕರು ಮಾಡಿದ ತಪ್ಪಿನ ದುರುದ್ದೇಶಕ್ಕೆ ಕುಸಿಯುವ ಹಂತದಲ್ಲಿರುವ ಎರಡು ಮನೆಗಳನ್ನು ನೋಡಿ ಸಂಕಟ ಪಟ್ಟುಕೊಳ್ಳುತ್ತಿರುವ ಕುಟುಂಬಗಳು ಒಂದು ಕಡೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಮನಬಂದಂತೆ ಕಾರ್ಮಿಕರ ಮೇಲೆ ಗುಂಡಿನ ದಾಳಿ – ಇಬ್ಬರು ಬಲಿ

    ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯ ಸೌಂದರ್ಯ ಬಡಾವಣೆಯಲ್ಲಿ ಇತ್ತೀಚೆಗೆ ಸುರಿದ ಮಹಾಮಳೆಗೆ ಮನೆಯ ಪಕ್ಕದಲ್ಲಿ ಕಟ್ಟಿದ್ದ ಕಂಪೌಂಡ್ ಕುಸಿದು ಮನೆ ಬೀಳುವ ಹಂತಕ್ಕೆ ತಲುಪಿದೆ. ಕಷ್ಟ ಪಟ್ಟು ಸಾಲಸೋಲ ಮಾಡಿ ಗೂಡು ಕಟ್ಟಿದ್ದ ಕುಟುಂಬ ಇಂದು ಕಣ್ಣೀರಿನಲ್ಲಿ ಜೀವನ ನಡೆಸುವಂತಾಗಿದೆ.

    ನಿವೇಶನ ಖರೀದಿ ಮಾಡಿದ ಕುಟುಂಬ ಇಂದು ಅಕ್ಕಪಕ್ಕದ ಮನೆಯಲ್ಲಿ ವಾಸಮಾಡುವ ಸ್ಥಿತಿಗೆ ಬಂದಿದೆ. ಹಣಕ್ಕಾಗಿ ಬಡವರಿಗೆ ಜಮೀನನ್ನ ಸೈಟ್ ಆಗಿ ಪರಿವರ್ತನೆ ಮಾಡಿದ ವ್ಯಕ್ತಿಗಳಾದ ಗುಂಡಪ್ಪ, ನಾಗರಾಜು, ಶ್ರೀನಿವಾಸ್ ಸಂಕಷ್ಟದಲ್ಲಿರುವ ಜನರ ನೆರವಿಗೆ ಬಾರದೇ ಸುಮ್ಮನಾಗಿದ್ದಾರೆ. ಇದನ್ನೂ ಓದಿ: ಸಿಲಿಂಡರ್ ಸ್ಪೋಟ – ಮನೆ ಬೆಂಕಿಗಾಹುತಿ

    ಮನೆ ಪಕ್ಕದ ಸೈಟ್ ನಲ್ಲಿ ಮಣ್ಣು ತೆರವು ಮಾಡಿದ ಪರಿಣಾಮ ಇಂದು ನಾವು ನೋವಿನಲ್ಲಿ ಕಾಲ ಕಳೆಯುವಂತೆ ಆಗಿದೆ ಎಂದು ಕುಟುಂಬಗಳು ನೋವು ತೋಡಿಕೊಂಡಿದ್ದಾರೆ.

  • ವೀರಮರಣವಪ್ಪಿದ ಯೋಧರ ಕುಟುಂಬಕ್ಕೆ ಬಿಡಿಎ ನಿವೇಶನ

    ವೀರಮರಣವಪ್ಪಿದ ಯೋಧರ ಕುಟುಂಬಕ್ಕೆ ಬಿಡಿಎ ನಿವೇಶನ

    ಬೆಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಶಿಫಾರಸ್ಸಿನಂತೆ ಗಡಿ ಕಾಯುವ ಯೋಧರು ವೀರಮರಣ ಹೊಂದಿದ್ದಲ್ಲಿ ಅಥವಾ ತೀವ್ರವಾಗಿ ಗಾಯಗೊಂಡ ಯೋಧರ ಕುಟುಂಬಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಉಚಿತ ನಿವೇಶನ ನೀಡಲಾಗುತ್ತಿದೆ.

    ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಹಿಂದೆ ಇಬ್ಬರು ವೀರ ಯೋಧರ ಕುಟುಂಬಗಳಿಗೆ ಸಾಂಕೇತಿಕವಾಗಿ ನಿವೇಶನ ಹಂಚಿಕೆ ಮಾಡಿದ್ದರು. ಬೆಂಗಳೂರು ಮೂಲದ ಒಟ್ಟು 5 ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು ಇಂದು ಯೋಧರಾದ ಲಾನ್ಸ್ ನಾಯಕ್ ನಾಗೇಂದ್ರಕುಮಾರ್ ಕೆ.ಎಮ್ ಅವರ ತಾಯಿ ಸರೋಜಮ್ಮ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಆಯುಕ್ತ ರಾಜೇಶ್ ಗೌಡ ಹಾಗೂ ಕಾರ್ಯದರ್ಶಿ ಆನಂದ ಅವರು ಹಕ್ಕು ಪತ್ರ ವಿತರಿಸಿದರು.

    ಇನ್ನುಳಿದ ಎರಡು ಕುಟುಂಬಗಳಿಗೆ ನೋಂದಾಯಿತ ಅಂಚೆಯ ಮೂಲಕ ಹಕ್ಕುಪತ್ರಗಳನ್ನು ತಲುಪಿಸಲಾಗುವುದು ಎಂದು ಆಯುಕ್ತರು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯಗೆ ಮಾತಿನ ಮೇಲೆ ಹಿಡಿತ ಇಲ್ಲ: ವಿಶ್ವನಾಥ್ ಕಿಡಿ

  • ದೂಡಾದಲ್ಲಿ ಅರ್ಜಿ ಹಾಕೋಕೆ 4ರಿಂದ 5 ಸಾವಿರ ಕೊಡ್ಬೇಕಂತೆ..!

    ದೂಡಾದಲ್ಲಿ ಅರ್ಜಿ ಹಾಕೋಕೆ 4ರಿಂದ 5 ಸಾವಿರ ಕೊಡ್ಬೇಕಂತೆ..!

    ದಾವಣಗೆರೆ: ಹರಿಹರ ನಗಾರಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಬೇಡಿಕೆ ಸಮೀಕ್ಷೆ ಮಾಡುವ ಹಿನ್ನೆಲೆಯಲ್ಲಿ ಅರ್ಜಿ ಆಹ್ವಾನಿಸಿದೆ. ಸೂರಿಗಾಗಿ ಆಸೆ ಪಡುತ್ತಿರುವ ಬಡ ಜನರ ಆಸೆಯನ್ನು ಬಂಡವಾಳ ಮಾಡಿಕೊಂಡಿರುವ ಕೆಲ ದಲ್ಲಾಳಿಗಳು ಒಂದು ಅರ್ಜಿ ಹಾಕಲು ನಾಲ್ಕೈದು ಸಾವಿರ ರೂಪಾಯಿ ಕೀಳುವ ದಂಧೆಗಿಳಿದಿದ್ದಾರೆ. ಇದೀಗ ದಲ್ಲಾಳಿಗಳು ದೂರವಾಣಿ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿರುವ ಆಡಿಯೋ ವೈರಲ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ.

    ಈಗಾಗಲೇ ದೂಡಾ ನಿವೇಶನಗಳ ಬೇಡಿಕೆ ಸಮೀಕ್ಷೆ ನಡೆಸುತ್ತಿದ್ದು, ನಿವೇಶನಕ್ಕಾಗಿ ಅರ್ಜಿ ಕರೆಯಲಾಗಿದೆ. ಹಾಗಾಗಿ ಅರ್ಜಿ ಹಾಕೋಕೆ ಜನ ಮುಗಿ ಬಿದ್ದಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವು ದಲ್ಲಾಳಿಗಳು, ಸರದಿ ಸಾಲಲ್ಲಿ ನಿಲ್ಲದೇ ಅರ್ಜಿ ಹಾಕಲು ನಾಲ್ಕರಿಂದ ಐದು ಸಾವಿರ ರೂಪಾಯಿ ತನಕ ಹಣವನ್ನು ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂಬ ಅಂಶ ಬಯಲಾಗಿದೆ. ಇದನ್ನೂ ಓದಿ:ಮಗನಿಗೆ ರಾಯನ್ ಹೆಸರಿಟ್ಟಿದ್ದಕ್ಕೆ ಮೇಘನಾ ಸ್ಪಷ್ಟನೆ

    ಅರ್ಜಿದಾರರು ಬಾರದಿದ್ದರೂ ದಾಖಲೆ ನೀಡಿ ಹಣ ಕೊಟ್ಟರೆ, ಅವರ ಹೆಸರಿನಲ್ಲಿ ದಲ್ಲಾಳಿಗಳು ಹಾಗೂ ಅಲ್ಲಿನ ಅಧಿಕಾರಿಗಳ ಅಡ್ಜಸ್ಟ್‍ಮೆಂಟ್ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ. ಈ ದಲ್ಲಾಳಿಗಳು ಅಧಿಕಾರಿಗಳನ್ನು ಒಳಗೆ ಹಾಕಿಕೊಂಡು, ಸರದಿ ಸಾಲಿನಲ್ಲಿ ನಿಲ್ಲದೆ ಎಲ್ಲಾ ಅರ್ಜಿಗಳನ್ನು ತೆಗೆದುಕೊಂಡು ನೇರವಾಗಿ ದೂಡಾ ಕಚೇರಿಯ ಕೌಂಟರ್ ಗೆ ತೆರಳಿ ಹಣ ನೀಡಿ ಅರ್ಜಿ ಹಾಕಿ ವ್ಯವಹಾರ ಮಾಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ:ಬಾಗಲಕೋಟೆಯಲ್ಲಿ ಭೂ ಕಂಪನದ ಅನುಭವ – ಜನರಲ್ಲಿ ಆತಂಕ

    ದಾವಣಗೆರೆ ನಗರದ ಕುಂದಾವಾಡ ರಸ್ತೆಯ ಬಳಿ ಇರುವ ಜೈನ್ ಕಾಲೋನಿ ಬಳಿ ಈ ವ್ಯವಹಾರ ನಡೆಯುತ್ತಿದೆ. ಅರ್ಜಿ ಹಾಕಲು ಬಯಸುವ ಜನ ಜೈನ್ ಕಾಲೋನಿ ಬಳಿ ಬಂದು ದುಡ್ಡು ಕೊಟ್ಟು ಸಂಜೆಯೊಳಗೆ ಸ್ವೀಕೃತಿ ಪತ್ರ ತೆಗೆದುಕೊಂಡು ಹೋಗಬಹುದು. ಇದು ದೂಡಾದಲ್ಲಿ ನಡೆಯುತ್ತಿರುವ ಡೈರೆಕ್ಟ್ ದಂಧೆ ಎಂಬ ಅನುಮಾನ ಕಾಡುತ್ತಿದೆ.

    20*30 ಅಳತೆಯ ನಿವೇಶನಕ್ಕೆ ಅರ್ಜಿ ಹಾಕಲು 3,000, 30*40 ನಿವೇಶನಕ್ಕೆ 3,500, 30*50 ನಿವೇಶನಕ್ಕೆ 4,300, 40*50 ನಿವೇಶನಕ್ಕೆ 4,800, 50*80 ನಿವೇಶನಕ್ಕೆ ಅರ್ಜಿ ಹಾಕಲು 5,000 ಹಣವನ್ನು ನಿಗದಿ ಮಾಡಲಾಗಿದ್ದು, ಅಮಾಯಕರಿಂದ ದಲ್ಲಾಳಿಗಳು ಹಣ ಪೀಕುತ್ತಿದ್ದಾರೆ. ಇದರಲ್ಲಿ ಬಹು ಪಾಲು ಹಣ ದೂಡಾದ ಕೆಲ ಸಿಬ್ಬಂದಿಗೆ ಹೋಗುತ್ತದೆ ಎಂಬ ಮಾಹಿತಿಯೂ ಆಡಿಯೋದಲ್ಲಿದೆ. ಇದನ್ನೂ ಓದಿ:ಮೈಸೂರಿನ ದರೋಡೆ, ಶೂಟ್‍ಔಟ್ ಪ್ರಕರಣ- ಖತರ್ನಾಕ್ ಬಾಂಬೆ ಬುಡ್ಡಾ ಅಂದರ್