Tag: ನಿಶ್ವಿತಾರ್ಥ

  • ಪುತ್ರಿಯ ನಿಶ್ಚಿತಾರ್ಥದ ಫೋಟೋ ಶೇರ್ ಮಾಡಿದ ಸ್ಮೃತಿ ಇರಾನಿ

    ಪುತ್ರಿಯ ನಿಶ್ಚಿತಾರ್ಥದ ಫೋಟೋ ಶೇರ್ ಮಾಡಿದ ಸ್ಮೃತಿ ಇರಾನಿ

    ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪುತ್ರಿ ಶಾನೆಲ್ ನಿಶ್ವಿತಾರ್ಥ ಅರ್ಜುನ್ ಭಲ್ಲಾ ಅವರೊಂದಿಗೆ ನಡೆದಿದ್ದು, ಈ ಫೋಟೋವನ್ನು ಸ್ಮೃತಿ ಇರಾನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಭಾವಿ ಅಳಿಯನೊಂದಿಗೆ ಮಗಳ ಕ್ಯೂಟ್ ಫೋಟೋವನ್ನು ಸ್ಮೃತಿ ಇರಾನಿ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ಅರ್ಜುನ್ ಶಾಲೆನ್‍ಗೆ ಪ್ರಪೋಸ್ ಮಾಡಿ ಉಂಗುರ ತೊಡಿಸಿರುವುದನ್ನು ಕಾಣಬಹುದಾಗಿದೆ. ಮತ್ತೊಂದು ಫೋಟೋದಲ್ಲಿ ಶಾನೆಲ್ ಹಾಗೂ ಅರ್ಜುನ್ ಸಂತಸದಿಂದ ಕ್ಲೋಸ್ ಆಗಿ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವುದನ್ನು ನೋಡಬಹುದಾಗಿದೆ. ಇದನ್ನೂ ಓದಿ: ಹಿಂದಿನ ಸರ್ಕಾರ ಹಣವನ್ನು ಕಬ್ರಿಸ್ತಾನ್‍ಗಳಿಗಾಗಿ ವ್ಯರ್ಥ ಮಾಡಿದೆ: ಯೋಗಿ ಆದಿತ್ಯನಾಥ್

    ಈ ಕ್ಯೂಟ್ ಫೋಟೋಗಳ ಜೊತೆಗೆ ಕ್ಯಾಪ್ಷನ್‍ನಲ್ಲಿ, ಅರ್ಜುನ್ ಭಲ್ಲಾ ನಮ್ಮ ಹೃದಯ ಗೆದ್ದ ವ್ಯಕ್ತಿ. ನಮ್ಮ ಕ್ರೇಜಿ ಕುಟುಂಬಕ್ಕೆ ನಿಮಗೆ ಸ್ವಾಗತ. ಇನ್ನು ಮುಂದೆ ನಿಮ್ಮ ಮಾವ ಮತ್ತು ನಮ್ಮೆಲ್ಲರ ಹುಚ್ಚುತನವನ್ನು ಸಹಿಸಿಕೊಳ್ಳಬೇಕಾಗುತ್ತದೆ. ನಿಮಗೆ ದೇವರು ಒಳ್ಳೆಯದು ಮಾಡಲಿ ಎಂದು ಹಾಸ್ಯಮಯವಾಗಿ ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Smriti Irani (@smritiiraniofficial)

    ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ನಟಿ ಮೌನಿ ರಾಯ್ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು ಕಾಮೆಂಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ. ಇದನ್ನೂ ಓದಿ: ಜ.3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ: ಮೋದಿ

  • ಮುರಿದು ಬಿದ್ದ ನಿಶ್ಚಿತಾರ್ಥ – ನೀರಿನ ಟ್ಯಾಂಕ್ ಏರಿ ಕುಳಿತ ಯುವಕ

    ಮುರಿದು ಬಿದ್ದ ನಿಶ್ಚಿತಾರ್ಥ – ನೀರಿನ ಟ್ಯಾಂಕ್ ಏರಿ ಕುಳಿತ ಯುವಕ

    -ಅದೇ ಹುಡ್ಗಿ ಜೊತೆ ನಿಶ್ಚಿತಾರ್ಥಕ್ಕಾಗಿ ಪಟ್ಟು

    ಜೈಪುರ: ನಿಶ್ಚಿತಾರ್ಥ ಮುರಿದು ಬಿದ್ದಿದ್ದಕ್ಕೆ ಕೋಪಗೊಂಡ ಯುವಕ ನೀರಿನ ಟ್ಯಾಂಕರ್ ಏರಿದ ಘಟನೆ ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯ ಅನೂಪಗಢ ವ್ಯಾಪ್ತಿಯ ಪತರೋಡದಲ್ಲಿ ನಡೆದಿದೆ.

    ಕೆಲ ಕಾರಣಗಳಿಂದ ಯುವಕ ನಿಶ್ಚಿತಾರ್ಥವನ್ನು ಕುಟುಂಬದವರು ಕ್ಯಾನ್ಸಲ್ ಮಾಡಿಕೊಂಡಿದ್ದರು. ಇದರಿಂದ ಕೋಪಗೊಂಡ ಯುವಕ ಗ್ರಾಮದಲ್ಲಿರುವ ನೀರಿನ ಟ್ಯಾಕ್ ಏರಿದ್ದಾನೆ. ಯುವಕ ಟ್ಯಾಂಕ್ ಏರಿರುವ ವಿಚಾರ ತಿಳಿಯುತ್ತಿದ್ದಂತೆ ಗ್ರಾಮಸ್ಥರೆಲ್ಲ ಸೇರಿ ಆತನ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದ್ರೆ ಯುವಕ ಕೆಳಗೆ ಬರಲು ಒಪ್ಪದಿದ್ದಾಗ ಸ್ಥಳೀಯ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

    ಟ್ಯಾಂಕ್ ಮೇಲೇರಿದ್ದ ಯುವಕ ಮತ್ತೊಮ್ಮೆ ಅದೇ ಹುಡುಗಿ ಜೊತೆ ನಿಶ್ಚಿತಾರ್ಥ ಮಾಡಿಸಬೇಕೆಂದು ಹಠ ಹಿಡಿದಿದ್ದನು. ಕೊನೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಯುವಕನ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರಿಂದ ಕೆಳಗೆ ಬಂದಿದ್ದಾನೆ. ಪೊಲೀಸರು ಯುವಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

  • ‘Just I Am Happy’- ನಾಚಿಕೊಂಡ ನಿಖಿಲ್ ಭಾವಿ ಪತ್ನಿ

    ‘Just I Am Happy’- ನಾಚಿಕೊಂಡ ನಿಖಿಲ್ ಭಾವಿ ಪತ್ನಿ

    ಬೆಂಗಳೂರು: ಜಸ್ಟ್ ಐ ಆ್ಯಮ್ ಹ್ಯಾಪಿ ಎಂದು ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಭಾವಿ ಪತ್ನಿ ರೇವತಿ ನಾಚಿಕೊಂಡು ಹೇಳಿದ್ದಾರೆ.

    ನಿಶ್ಚಿತಾರ್ಥವಾದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ರೇವತಿ, ನನಗೆ ತುಂಬಾ ಖುಷಿಯಾಗಿದೆ ಅಷ್ಟೆ ಎಂದು ನಾಚಿಕೊಂಡು ಹೇಳಿದ್ದಾರೆ. ಇದೇ ವೇಳೆ ಭಾವಿ ಪತ್ನಿಗೆ ಕೇಳಿದ ಪ್ರಶ್ನೆಗಳಿಗೆ ನಿಖಿಲ್ ಕುಮಾರಸ್ವಾಮಿ ಉತ್ತರಿಸಿದ್ದಾರೆ.

    ಒಬ್ಬ ಒಳ್ಳೆಯ ವ್ಯಕ್ತಿಯಾಗಿ ನನ್ನನ್ನು ಇಷ್ಟಪಡುತ್ತಾರೆ. ರಾಜಕಾರಣ, ಸಿನಿಮಾ ಇದೆಲ್ಲಾ ಮುಖ್ಯವಲ್ಲ. ನೀವು ಕೇಳುವ ಪ್ರಶ್ನೆಯಿಂದ ತುಂಬಾ ಮುಜುಗರ ಪಡುತ್ತಿದ್ದಾರೆ ಎಂದರು. ನಂತರ ಹೋಗೋಣ ಬನ್ನಿ ಎಂದು ಹೇಳುತ್ತಿದ್ದಾರೆ ನೋಡಿ ನೀವು ಎಷ್ಟು ತೊಂದರೆ ಕೊಡುತ್ತಿದ್ದೀರ ಎಂದು ತಮಾಷೆಗೆ ನಿಖಿಲ್ ಹೇಳಿದರು.

    ತಾಜ್ ವೆಸ್ಟೆಂಡ್ ಹೋಟೆಲಿನಲ್ಲಿ ನಿಖಿಲ್ ಹಾಗೂ ರೇವತಿ ಅವರ ನಿಶ್ಚಿತಾರ್ಥ ಒಕ್ಕಲಿಗ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ನಡೆಯಿತು. ಈ ನಿಶ್ಚಿತಾರ್ಥ ಅನಿತಾ ಕುಮಾರಸ್ವಾಮಿ, ಕುಮಾರಸ್ವಾಮಿ ಅವರ ಸಹೋದರಿಯರಾದ ಶೈಲಜಾ ಮತ್ತು ಅನಸೂಯ ಹಾಗೂ ಕುಮಾರಸ್ವಾಮಿ ಅವರ ತಾಯಿ ಚೆನ್ನಮ್ಮ ಅವರ ಮಾರ್ಗದರ್ಶನದಲ್ಲಿ ಎಲ್ಲಾ ತಯಾರಿಗಳು ಆಗಿದ್ದವು. ಕಾರ್ಯಕ್ರಮಕ್ಕೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಸೇರಿದಂತೆ ಹಲವು ಗಣ್ಯರು ಆಗಮಿಸಿ ಶುಭಕೋರಿದ್ದಾರೆ.

    ನಿಶ್ಚಿತಾರ್ಥ ಸಂಪೂರ್ಣ ವೈಟ್ ಥೀಮ್‍ನಲ್ಲಿದ್ದು, ಕಾರ್ಪೆಟ್‍ಯಿಂದ ಹಿಡಿದು ನಿಖಿಲ್-ರೇವತಿ ಉಂಗುರ ಬದಲಾಯಿಸುವ ಮಂಟಪ ಕೂಡ ಶ್ವೇತ ವರ್ಣದಲ್ಲಿತ್ತು. ನಿಶ್ಚಿತಾರ್ಥದ ಮಂಟಪ ಹೂವಿನಿಂದ ಅಲಂಕರಿಸಲಾಗಿದ್ದು, ಅದಕ್ಕಾಗಿ ಕರ್ನಾಟಕದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಬೆಳೆಯುವ ಬಿಳಿ ಬಣ್ಣದ ಹೂವನ್ನು ತರಿಸಲಾಗಿತ್ತು. ದೆಹಲಿಯಿಂದ ಕ್ರಿಸ್ಟಲ್ಸ್ ಗಳನ್ನು ತರಿಸಿ ಅಲಂಕಾರಕ್ಕೆ ಬಳಸಿಕೊಳ್ಳಲಾಗಿತ್ತು. ಸೀಲಿಂಗ್ ಸಹ ಹೂವಿನಿಂದಲೇ ಅಲಂಕಾರ ಮಾಡಲಾಗಿತ್ತು.

  • ನಿಖಿಲ್‍ಗೆ ಇಂದು ಡಬಲ್ ಸಂಭ್ರಮ – ಫೆ.10ಕ್ಕೆ ಜಾಗ್ವಾರ್‌ನ ನಿಶ್ಚಿತಾರ್ಥ

    ನಿಖಿಲ್‍ಗೆ ಇಂದು ಡಬಲ್ ಸಂಭ್ರಮ – ಫೆ.10ಕ್ಕೆ ಜಾಗ್ವಾರ್‌ನ ನಿಶ್ಚಿತಾರ್ಥ

    ಬೆಂಗಳೂರು: ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಮದುವೆ ಸುದ್ದಿ ಈಗಾಗಲೇ ಎಲ್ಲರಿಗೂ ತಿಳಿದಿದೆ. ಇಂದು ನಿಖಿಲ್‍ಗೆ ಡಬಲ್ ಸಂಭ್ರಮದ ದಿನವಾಗಿದೆ. ಒಂದುಕಡೆ ತಮ್ಮ ನಾಲ್ಕನೇ ಸಿನಿಮಾದ ಮಹೂರ್ತ ಸಮಾರಂಭ ನೆರವೇರಿದೆ. ಮತ್ತೊಂದು ಕಡೆ ನಿಶ್ವಿತಾರ್ಥದ ದಿನ ಕೂಡ ಫಿಕ್ಸ್ ಆಗಿದೆ.

    ಹೌದು. ನಿಖಿಲ್ ಕುಮಾರಸ್ವಾಮಿ ಅವರ ನಾಲ್ಕನೇ ಸಿನಿಮಾದ ಮಹೂರ್ತ ಬಸವನಗುಡಿಯ ಕಾರಂಜಿ ಆಂಜನೇಯನ ದೇವಸ್ಥಾನದಲ್ಲಿ ಅದ್ಧೂರಿಯಾಗಿ ನೆರವೇರಿದೆ. ಟಾಲಿವುಡ್‍ನ ವಿಜಯ್‍ಕುಮಾರ್ ಕೊಂಡ ನಿರ್ದೇಶನದಲ್ಲಿ ನಿಖಿಲ್ ಅಭಿನಯಿಸುತ್ತಿದ್ದು, ಲಹರಿ ಸಂಸ್ಥೆಯ ನಿರ್ಮಾಣದಲ್ಲಿ ಚಿತ್ರ ಮೂಡಿ ಬರುತ್ತಿದೆ. ಇನ್ನೂ ಹೆಸರಿಡದ ಚಿತ್ರದಲ್ಲಿ ನಿಖಿಲ್ ಜೊತೆ ಇಬ್ಬರು ನಾಯಕಿಯರು ಕಾಣಿಸಿಕೊಳ್ಳಲಿದ್ದಾರೆ.

    ಇತ್ತ ಇಂದು ನಿಖಿಲ್ ಮನೆಗೆ ರೇವತಿ ಕುಟುಂಬದವರು ಭೇಟಿ ನೀಡಿದ್ದಾರೆ. ಇತ್ತೀಚೆಗಷ್ಟೆ ರೇವತಿ ಮನೆಗೆ ನಿಖಿಲ್ ಕುಟುಂಬ ಭೇಟಿ ನೀಡಿ ಶಾಸ್ತ್ರ ಮುಗಿಸಿದ್ದರು. ಇವತ್ತು ನಿಖಿಲ್ ಮನೆಗೆ ಶಾಸಕ ಕೃಷ್ಣಪ್ಪ ಸೇರಿದಂತೆ ಕುಟುಂಬಸ್ಥರು ಭೇಟಿ ನೀಡಿ ಶಾಸ್ತ್ರವನ್ನು ಮುಗಿಸಿದ್ದಾರೆ. ಎರಡು ಕುಟುಂಬದವರು ಮಾತುಕತೆ ಮುಗಿಸಿ ಮುಂದಿನ ತಿಂಗಳು ಫೆಬ್ರುವರಿ 10ಕ್ಕೆ ನಿಖಿಲ್ ಮತ್ತು ರೇವತಿ ಅವರ ನಿಶ್ಚಿತಾರ್ಥವನ್ನು ನಿಗದಿ ಮಾಡಿದ್ದಾರೆ.

    ಈ ಬಗ್ಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಎರಡು ಕುಟುಂಬಗಳ ಆಪ್ತರು ಭಾಗಿಯಾಗಿದ್ದರು. ಫೆಬ್ರುವರಿ 10 ರಂದು ನಿಶ್ಚಿತಾರ್ಥ ನಡೆಯಲಿದೆ. ಉಳಿದಂತೆ ಮದುವೆ ಸಮಾರಂಭ ಏಪ್ರಿಲ್ ತಿಂಗಳಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ಹೇಳಿದರು.

     

    ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಅವರ ಅಣ್ಣನ ಮೊಮ್ಮಗಳು ರೇವತಿ ಅವರನ್ನು ನಿಖಿಲ್ ವರಿಸಲಿದ್ದಾರೆ. ಹುಡುಗಿ ರೇವತಿ ಎಂಸಿಎ ಪದವೀಧರೆಯಾಗಿದ್ದಾರೆ. ಭಾನುವಾರ ಬೆಂಗಳೂರಿನ ಮಲ್ಲತಳ್ಳಿಯಲ್ಲಿರುವ ವಧುವಿನ ಮನೆಗೆ ದೇವೇಗೌಡರ ಕುಟುಂಬದವರು ಭೇಟಿ ನೀಡಿ ಹುಡುಗಿ ನೋಡುವ ಶಾಸ್ತ್ರವನ್ನು ಮುಗಿಸಿದ್ದರು. ದೇವೇಗೌಡರು, ಪತ್ನಿ ಚೆನ್ನಮ್ಮ, ಕುಮಾರಸ್ವಾಮಿ, ಅನಿತಾಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ದೇವೇಗೌಡರ ಪುತ್ರಿಯರಾದ ಅನುಸೂಯ, ಶೈಲಜಾ ವಧುವಿನ ಮನೆಗೆ ಭೇಟಿ ನೀಡಿ ಮದುವೆ ಮಾತುಕತೆ ಮುಗಿಸಿದ್ದರು.