Tag: ನಿಷೇಧ

  • ಆನ್‌ಲೈನ್  ಗೇಮಿಂಗ್ ನಿಷೇಧ ಕಾಯ್ದೆ ಬಗ್ಗೆ ನಿಮಗೆಷ್ಟು ಗೊತ್ತು?

    ಆನ್‌ಲೈನ್ ಗೇಮಿಂಗ್ ನಿಷೇಧ ಕಾಯ್ದೆ ಬಗ್ಗೆ ನಿಮಗೆಷ್ಟು ಗೊತ್ತು?

    ಗಿನ ತಂತ್ರಜ್ಞಾನ ಯುಗದಲ್ಲಿ ಜನರು ಕಷ್ಟಪಟ್ಟು ದುಡಿದು ಹಣ ಗಳಿಸುವುದಕ್ಕಿಂತ ಹೆಚ್ಚಾಗಿ ಆನ್ಲೈನ್ ಮೂಲಕ ಹಣ ಗಳಿಸುವಲ್ಲಿ ತೊಡಗಿದ್ದಾರೆ. ಅದರಲ್ಲಿ ಎಷ್ಟೋ ಜನ ಹಣದಾಸೆಗೆ ಬಿದ್ದು ಕೋಟ್ಯಂತರ ರೂಪಾಯಿ ನಷ್ಟ ಮಾಡಿಕೊಂಡವರು ಇದ್ದಾರೆ. ಜೊತೆಗೆ ಹಣ ಗಳಿಸುವ ಆಮೀಷವನ್ನು ತೋರಿಸಿ ಅಥವಾ ಹಣವನ್ನು ಹೂಡಿಕೆ ಮಾಡುವಂತೆ ಕೆಲವು ಆನ್ಲೈನ್ ಗೇಮ್ಗಳು ಜನರನ್ನ ಪ್ರಚೋದನೆ ಮಾಡುತ್ತವೆ. ಹೀಗಾಗಿ ಈ ಸಂಬಂಧ ಕೇಂದ್ರ ಸರ್ಕಾರ ಆನ್ಲೈನ್ ಗೇಮ್ ಗಳನ್ನು ನಿಷೇಧಿಸುವ ಕಾಯಿದೆಯೊಂದನ್ನು ಜಾರಿ ಮಾಡಿದೆ.

    ಹೌದು, ಈ ಬಾರಿಯ ಲೋಕಸಭೆಯ ಅಧಿವೇಶನದಲ್ಲಿ ಹಣ ಕಟ್ಟಿ ಆಡಲಾಗುವ ಆನ್ಲೈನ್ ಗೇಮ್ ಗಳನ್ನು ನಿಷೇಧಿಸುವ ಮಸೂದೆಯು ಅಂಗೀಕಾರಗೊಂಡಿತ್ತು. 2025ರ ಆಗಸ್ಟ್ 20ರಂದು ಲೋಕಸಭೆಯಲ್ಲಿ ಈ ಮಸೂದೆ ಅಂಗೀಕಾರವಾಗಿ, ಆಗಸ್ಟ್ 21ರಂದು ರಾಜ್ಯಸಭೆಯಲ್ಲಿ ಅಂಗೀಕಾರವಾಗಿ ಕೊನೆಗೆ ಆಗಸ್ಟ್ 22ರಂದು ಈ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಅಂಕಿತ ಹಾಕಿದ್ದಾರೆ. ಈ ಮೂಲಕ ಈ ಕಾನೂನು ಹಣ ಕಟ್ಟಿ ಆಡಲಾಗುವ ಎಲ್ಲಾ ಆನ್ಲೈನ್ ಗೇಮ್ ಗಳನ್ನು ನಿಷೇಧಿಸುತ್ತದೆ.

    ಇದರ ಹಿಂದಿನ ಕಾರಣವೇನು?
    ಆನ್ಲೈನ್ ಗೇಮ್ ಒಂದು ವ್ಯಸನ ವಾಗಿ ಮಾರ್ಪಟ್ಟಿದೆ. ಇದಕ್ಕೆ ಮಾರುಹೋಗುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅದಲ್ಲದೆ ಗೇಮಿಂಗ್ ಆಪ್ ಗಳ ಮೂಲಕ ಹಣ ಅಕ್ರಮ ವರ್ಗಾವಣೆ ಆಗುತ್ತಿದೆ. ಜೊತೆಗೆ ಹಣಕಾಸು ವಂಚನೆ ಪ್ರಕರಣಗಳು ಕೂಡ ಹೆಚ್ಚುತ್ತಿವೆ. ಹೀಗಾಗಿ ಇವುಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಮಸೂದೆಯನ್ನು ರೂಪಿಸಿದೆ.

    ಈ ಕಾನೂನಿನಲ್ಲಿ ಏನಿದೆ?
    * ಆನ್ಲೈನ್ ಗೇಮ್ ಗಳಂತಹ ಚಟುವಟಿಕೆಗಳನ್ನ ಇದು ನಿಷೇಧಿಸುತ್ತದೆ. ಜೊತೆಗೆ ಈ ಗೇಮ್ ಗಳನ್ನು ಉತ್ತೇಜಿಸುವ ಹಾಗೂ ಜಾಹೀರಾತುಗಳನ್ನ ಪ್ರಕಟಿಸುವುದನ್ನು ಇದು ನಿಷೇಧಿಸುತ್ತದೆ.
    * ಆನ್ಲೈನ್ ಗೇಮ್ ಗಳಲ್ಲಿ ಕೆಲವು ಆಟಗಳು ಮನರಂಜನೆ ನೀಡುತ್ತವೆ. ಇವುಗಳನ್ನು ಸೇರಿಸಿ ಆನ್ಲೈನ್ ಜೂಜಾಟ ಹಾಗೂ ಲಾಟರಿಗಳಂತಹ ಆಟಗಳನ್ನು ಕೂಡ ಇದು ನಿಷೇಧಿಸುತ್ತದೆ
    * ಈ ಕಾನೂನಿನಡಿಯಲ್ಲಿ ಆನ್ಲೈನ್ ಗೇಮ್ ಆಡುವುದಕ್ಕೆ ಅವಕಾಶ ಹಾಗೂ ಪ್ರೋತ್ಸಾಹ ನೀಡುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಒಂದು ಕೋಟಿ ರೂ. ದಂಡ ವಿಧಿಸಲಾಗುವುದು.
    * ಜೊತೆಗೆ ಇಂತಹ ಆಟಗಳ ಕುರಿತು ಜಾಹೀರಾತು ಪ್ರಕಟಿಸಿದರೆ ಎರಡು ವರ್ಷಗಳವರೆಗೆ ಶಿಕ್ಷೆ ಮತ್ತು ಐವತ್ತು ಲಕ್ಷ ರೂ. ದಂಡ ವಿಧಿಸಲಾಗುವುದು.
    * ಇನ್ನು ಅಪರಾಧಗಳ ಪುನರಾವರ್ತನೆಯ ಆದರೆ ಮೂರರಿಂದ ಐದು ವರ್ಷ ಜೈಲು ಹಾಗೂ ಎರಡು ಕೋಟಿ ರೂ. ವರೆಗೆ ದಂಡ ವಿಧಿಸಲಾಗುವುದು

    * ಮೂಲಗಳ ಪ್ರಕಾರ, ಆನ್ಲೈನ್ ಗೇಮ್ಗಳಿಂದಾಗಿ ಭಾರತೀಯರು ಪ್ರತಿ ವರ್ಷ 15,000 ಕೋಟಿ ರೂ. ಯನ್ನು ಕಳೆದುಕೊಳ್ಳುತ್ತಿದ್ದಾರೆ. ಇನ್ನು ಕಳೆದ 31 ತಿಂಗಳಲ್ಲಿ ಈ ಆನ್ಲೈನ್ ಗೇಮ್ ವ್ಯಸನದಿಂದಾಗಿ ಕರ್ನಾಟಕದಲ್ಲಿ 32 ಜನರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಈ ಆನ್ಲೈನ್ ಗೇಮ್ ನಿಷೇಧದಿಂದಾಗಿ 400ಕ್ಕೂ ಅಧಿಕ ಕಂಪನಿಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

    ಆನ್ಲೈನ್ ಗೇಮ್ ಗಳಲ್ಲಿ ಮೂರು ವಿಭಾಗಗಳಿವೆ:
    – ರಿಯಲ್ ಮನಿ ಗೇಮ್ಸ್
    – ಇ ಸ್ಪೋರ್ಟ್ಸ್
    – ಸೋಶಿಯಲ್ ಗೇಮಿಂಗ್

    ಈ ಆಟಗಳ ಪೈಕಿ ನಿಜವಾದ ಹಣ ಹೂಡಿಕೆ ಮಾಡಿ ಆಡುವ ಆಟಗಳನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ನಿಷೇಧಿಸಿದೆ. ಇನ್ನು ಇ-ಸ್ಪೋರ್ಟ್ಸ್ ಗಳಂತಹ ಆಟಗಳನ್ನು ಅನುಮತಿ ಪಡೆದು ಆಡಲು ಅವಕಾಶ ನೀಡಲಾಗಿದೆ. ಇದರ ಹೊರತಾಗಿ ಸೋಶಿಯಲ್ ಗೇಮ್ಸ್ ಗಳು ಹಣವಿಲ್ಲದೆ ಆಡುವ ಆಟಗಳಿಗೆ ಅನುಮತಿ ನೀಡಲಾಗಿದೆ. ಜೊತೆಗೆ ಈ ಆಟಗಳನ್ನು ಆಡುವಾಗ ಬ್ಯಾಂಕ್ ಅಥವಾ ಪೇಮೆಂಟ್ ಆಪ್ ಮೂಲಕ ಹಣ ಕಳಿಸುವುದನ್ನು ನಿಷೇಧಿಸಲಾಗಿದೆ. ಗೂಗಲ್ ಜಾಹೀರಾತುಗಳು, ಮೆಟಾ ಜಾಹೀರಾತುಗಳ ಮೂಲಕ ಇಂತಹ ಗೇಮ್ ಗಳನ್ನ ಪ್ರಚಾರ ಮಾಡುವುದಕ್ಕೆ ನಿಷೇಧಿಸಲಾಗಿದೆ.

    ಇನ್ನು ಈ ಕಾಯ್ದೆಯು ಕೇಂದ್ರ ಸರ್ಕಾರಕ್ಕೆ ಆನ್ಲೈನ್ ಗೇಮ್ ಗಳನ್ನು ಗುರುತಿಸಲು, ವರ್ಗಿಕರಿಸಲು ಸಹಾಯಮಾಡುತ್ತದೆ. ಇದರಿಂದ ಸರ್ಕಾರವು ಅನಧಿಕೃತ ಆಪ್ ಗಳನ್ನು ಬ್ಲಾಕ್ ಮಾಡುವ ಹಾಗೂ ಸರ್ವರ್ ಗಳನ್ನು ಬ್ಲಾಕ್ ಮಾಡುವ ಅಧಿಕಾರವಿರುತ್ತದೆ. ಒಂದು ವೇಳೆ ಅಗತ್ಯವಿದ್ದರೆ ವಾರೆಂಟ್ ಇಲ್ಲದೆಯೂ ಕೂಡ ಬಂಧಿಸುವ ಅಧಿಕಾರವಿರುತ್ತದೆ.

    ಇನ್ನುಳಿದಂತೆ ಗೇಮಿಂಗ್ ಕಂಪನಿಗಳು ಕೆಲವು ಕಡ್ಡಾಯ ನಿಯಮಗಳನ್ನು ಜಾರಿಗೆ ತರುವಂತೆ ಸೂಚನೆ ನೀಡಲಾಗಿದೆ. ಈ ಪೈಕಿ 18 ವರ್ಷಕ್ಕಿಂತ ಕಡಿಮೆ ಕಡಿಮೆ ಇರುವವರು ಈ ಗೇಮ್ ಗಳನ್ನು ಆಡುವುದಕ್ಕೆ ಪೋಷಕರ ಅನುಮತಿ ಪಡೆಯಬೇಕು. ದೀರ್ಘಕಾಲ ಆಡುವುದಕ್ಕೆ ತಡೆ ಹಿಡಿಯಲಾಗಿದೆ ಮತ್ತು ಬಳಕೆದಾರರು ದೂರು ಸಲ್ಲಿಸಲು ಅವಕಾಶ ನೀಡುವಂತೆ ಸೂಚಿಸಲಾಗಿದೆ.

    ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಗೇಮಿಂಗ್ ಉದ್ಯಮ ತೀವ್ರವಾಗಿ ಬೆಳೆಯುತ್ತಿದ್ದು, 2025ರ ಹೊತ್ತಿಗೆ ಎಂಟು ಬಿಲಿಯನ್ ಡಾಲರ್ ನಷ್ಟು ಆಗುವ ಸಾಧ್ಯತೆ ಇದೆ. ಹೀಗಾಗಿ ಇವುಗಳಿಂದ ಜನರಲ್ಲಿ ಆರ್ಥಿಕ ಸಮಸ್ಯೆ, ಸಾಲ, ಆತ್ಮಹತ್ಯೆ, ಮೋಸ, ಕ್ರಮ ಹಣ ಹೂಡಿಕೆಯಂತಹ ತೊಂದರೆಗಳನ್ನು ತಂದು ಹಾಕುತ್ತದೆ. ಇಂತಹ ಸಮಸ್ಯೆಗಳಿಂದ ಜನರನ್ನ ರಕ್ಷಿಸಲು, ಯುವಕರನ್ನ ಸರಿದಾರಿಯತ್ತ ಕರೆದುಕೊಂಡು ಹೋಗುವುದು ಹಾಗೂ ಇಂತಹ ಆಟಗಳಲ್ಲಿ ಸ್ಪಷ್ಟ ನಿಯಮಗಳನ್ನ ರೂಪಿಸುವ ಮೂಲ ಉದ್ದೇಶವನ್ನು ಈ ಕಾನೂನು ಹೊಂದಿದೆ.

    ಈ ಕಾನೂನು ಜಾರಿ ಬಳಿಕ ಕೆಲವು ವಿಷಯಗಳು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಗೇಮ್ಗಳ ನಿಷೇಧದಿಂದಾಗಿ ಸಾವಿರಾರು ಜನರು ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ. ಅದಲ್ಲದೆ ಸದ್ಯಕ್ಕೆ ಆನ್ಲೈನ್ ಗೇಮ್ ಗಳನ್ನು ನಿಷೇಧದಿಂದಾಗಿ ಕೆಲವರು ಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

  • ವಿಚಾರಣೆಗೆ ಬರುವಂತೆ ‘ಆದಿ ಪುರುಷ’ ತಂಡಕ್ಕೆ ಹೈಕೋರ್ಟ್ ಸೂಚನೆ

    ವಿಚಾರಣೆಗೆ ಬರುವಂತೆ ‘ಆದಿ ಪುರುಷ’ ತಂಡಕ್ಕೆ ಹೈಕೋರ್ಟ್ ಸೂಚನೆ

    ದಿ ಪುರುಷ ಸಿನಿಮಾವನ್ನು ನಿಷೇಧಿಸುವಂತೆ ಕೋರಿ ಕುಲದೀಪ್ ತಿವಾರಿ ಹಾಗೂ ನವೀನ್ ಧವನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ನಡೆಸಿದ ಅಲಹಾಬಾದ್ ಹೈಕೋರ್ಟಿನ ನ್ಯಾಯಮೂರ್ತಿಗಳಾದ ರಾಜೇಶ್ ಸಿಂಗ್ ಚೌಹಾನ್ ಮತ್ತು ಪ್ರಕಾಶ್ ಸಿಂಗ್ ಅವರಿದ್ದ ದ್ವಿಸದಸ್ಯ ಪೀಠ  ಜುಲೈ 27ಕ್ಕೆ ಸಿನಿಮಾದ ನಿರ್ದೇಶಕ ಓಂ ರಾವುತ್, ನಿರ್ಮಾಪಕ ಭೂಷಣ್ ಕುಮಾರ್ ಹಾಗೂ ಬರಹಗಾರ ಮನೋಜ್ ಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

    ಅಲ್ಲದೇ, ಈ ಸಿನಿಮಾವು ಸಾರ್ವಜನಿಕರ ಭಾವನೆಗೆ ಧಕ್ಕೆ ತರುವಂತಿದೆಯೇ ಎಂದು ಪರಿಶೀಲಿಸಿದ ಐವರು ಸದಸ್ಯರಿರುವ ಸಮಿತಿಯನ್ನು ನೇಮಿಸಬೇಕು ಎಂದು ಸರಕಾರಕ್ಕೂ ಹೈಕೋರ್ಟ್ ಸೂಚನೆ ನೀಡಿದೆ. ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ನೀಡಿರುವ ಪ್ರಮಾಣಪತ್ರವನ್ನು ಮರುಪರಿಶೀಲಿಸಲು ನ್ಯಾಯಮೂರ್ತಿಗಳು ಸೂಚಿಸಿದ್ದಾರೆ.

    ಆದಿಪುರುಷ ಸಿನಿಮಾ ರಿಲೀಸ್ ಆಗಿ ವಾರದ ನಂತರ ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಿದ್ದರೂ, ಅದರ ಕುರಿತಾಗಿ ನಡೆಯುತ್ತಿರುವ ಚರ್ಚೆ ಮಾತ್ರ ನಿಂತಿಲ್ಲ. ಹಲವು ಕಡೆ ಸಿನಿಮಾದ ಬಗ್ಗೆ ದೂರು ನೀಡಲಾಗಿದೆ. ದೇಶದ ಹೈಕೋರ್ಟ್ ಗಳು ಚಿತ್ರದ ಚಿಂತನೆಯನ್ನು ಗಂಭೀರವಾಗಿ ತಗೆದುಕೊಂಡಿವೆ. ಹೀಗಾಗಿ ಚಿತ್ರ ತಂಡಕ್ಕೆ ಸಂಕಷ್ಟ ಎದುರಾಗುತ್ತಲೇ ಇದೆ.

    ಆದಿಪುರುಷ (Adipurush) ಸಿನಿಮಾವನ್ನು ನೇಪಾಳ ಸರಕಾರ ಬ್ಯಾನ್ ಮಾಡಿತ್ತು. ಚಿತ್ರದಲ್ಲಿ ಸೀತೆ ಬಗ್ಗೆ ಹೇಳಲಾದ ಡೈಲಾಗ್ ಸರಿಯಾಗಿಲ್ಲ ಎಂದು ಕಠ್ಮಂಡು ಮೇಯರ್ ಕೋರ್ಟ್ ಮೆಟ್ಟಿಲು ಏರಿದ್ದರು. ಸಿನಿಮಾವನ್ನು ಬ್ಯಾನ್ ಮಾಡುವುದು ಸರಿಯಲ್ಲ ಎಂದು ಅಲ್ಲಿನ ಹೈಕೋರ್ಟ್ ಹೇಳಿದ್ದರೂ, ಇತಿಹಾಸಕ್ಕೆ ಅಪಚಾರ ಮಾಡಬಾರದು ಎನ್ನುವುದನ್ನು ಎತ್ತಿ ಹಿಡಿದಿತ್ತು. ಇದೀಗ ಅಲಹಾಬಾದ್ (Allahabad) ಹೈಕೋರ್ಟ್ ಕೂಡ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಇದನ್ನೂ ಓದಿ:ಗೋಲ್ಡನ್ ಟೆಂಪಲ್‌ನಲ್ಲಿ ಪಾತ್ರೆ ತೊಳೆದು ಸೇವೆ ಸಲ್ಲಿಸಿದ ರಾಘವ್- ಪರಿಣಿತಿ ಜೋಡಿ

    ಆದಿಪುರುಷ ಸಿನಿಮಾದ ಚಿತ್ರಕಥೆ ಮತ್ತು ಸಂಭಾಷಣೆ ಕುರಿತಂತೆ  ಸಲ್ಲಿಸಲಾದ ಅರ್ಜಿಯನ್ನು ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟಿನ (High Court) ಲಕ್ನೋ ಪೀಠವು ಚಿತ್ರತಂಡದ ಜೊತೆ ಸೆನ್ಸಾರ್ ಮಂಡಳಿಯನ್ನು ತೀವ್ರವಾಗಿ ಟೀಕಿಸಿದೆ. ‘ಭಾರತೀಯರು ಸಂಹಿಷ್ಟುಗಳು ಎನ್ನುವ ಕಾರಣಕ್ಕೆ ಸಹನೆ ಪರೀಕ್ಷೆ ಮಾಡಲಾಗುತ್ತಿದೆಯೇ?’ ಎಂದು ಪ್ರಶ್ನೆ ಮಾಡಿದೆ.

    ರಾಮಾಯಣವನ್ನು ಜನರು ಪವಿತ್ರ ಎಂದು ದಿನವೂ ಪಠಿಸುತ್ತಾರೆ. ರಾಮಚರಿತಮಾನಸವನ್ನು ಓದುತ್ತಾರೆ. ಇಂತಹ ರಾಮಾಯಣವನ್ನೇ ಸಿನಿಮಾ ಮಾಡಿ, ಆ ನಂತರ ಸಿನಿಮಾಗೂ ರಾಮಾಯಣಕ್ಕೂ ಸಂಬಂಧವಿಲ್ಲ ಎಂದರೆ ಮಾಡಿದ ತಪ್ಪು ಮುಚ್ಚಿದಂತೆ ಆಗುತ್ತದೆ? ಚಿತ್ರದಲ್ಲಿನ ಸಂಭಾಷಣೆಗಳು ಕೂಡ ಅಪಮಾನ ಮಾಡುವಂತಿವೆ. ಈ ಸಿನಿಮಾ ನೋಡಿದ ಮೇಲೂ ಜನರು ತಾಳ್ಮೆ ಕಳೆದುಕೊಂಡಿಲ್ಲ ಎನ್ನುವುದು ಅವರ ಸಹಿಷ್ಣುತೆಯನ್ನು ತೋರಿಸುತ್ತದೆ’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದೆ.

     

    ದೇವರು ಎಂದು ಪೂಜಿಸುವ ಭಗವಾನ್ ಹನುಮಾನ್ ಮತ್ತು ಸೀತೆಯನ್ನು ಸಿನಿಮಾದಲ್ಲಿ ಏನೂ ಅಲ್ಲ ಎನ್ನುವಂತೆ ತೋರಿಸಿದ್ದೀರಿ. ಕೆಲವು ದೃಶ್ಯಗಳು ವಯಸ್ಕ ವರ್ಗಕ್ಕೆ ಸೇರುವಂತಹವು ಆಗಿವೆ. ನೀವು ಏನನ್ನು ತೋರಿಸಲು ಹೊರಟಿದ್ದೀರಿ ಎಂದು ಪ್ರಶ್ನೆ ಮಾಡಿದ್ದಲ್ಲದೇ, ಸಂಭಾಷಣೆ ಬರೆದಿರುವ ಮನೋಜ್ (Manoj) ಅವರಿಗೂ ನೋಟಿಸ್ ನೀಡಿ, ಕಕ್ಷಿದಾರನನ್ನಾಗಿ ಮಾಡಿ ಎಂದು ನಿರ್ದೇಶನ ನೀಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿ ಕೇರಳ ಸ್ಟೋರಿ : ಮಮತಾ ಬ್ಯಾನರ್ಜಿ ವಿರುದ್ಧ ಸ್ಮೃತಿ ಇರಾನಿ ಗರಂ

    ದಿ ಕೇರಳ ಸ್ಟೋರಿ : ಮಮತಾ ಬ್ಯಾನರ್ಜಿ ವಿರುದ್ಧ ಸ್ಮೃತಿ ಇರಾನಿ ಗರಂ

    ವಾರದಿಂದ ವಿವಾದದ ಕಿಡಿ ಹೊತ್ತಿಸಿರುವ ದಿ ಕೇರಳ ಸ್ಟೋರಿ (The Kerala Story) ಸಿನಿಮಾವನ್ನು ಹಲವು ರಾಜ್ಯಗಳು ನಿಷೇಧ (Ban) ಮಾಡಿವೆ. ಇನ್ನೂ ಕೆಲವು ರಾಜ್ಯಗಳಲ್ಲಿ ಪ್ರದರ್ಶನವನ್ನು ನಿಲ್ಲಿಸಲಾಗಿದೆ. ಅದರಂತೆ ಪಶ್ಚಿಮ ಬಂಗಾಳದಲ್ಲೂ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಚಿತ್ರವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಈ ನಡೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani) ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ದಿದಿ ವಿರುದ್ಧ ಗುಡುಗಿದ್ದಾರೆ.

    ಮಮತಾ ಬ್ಯಾನರ್ಜಿ ಕ್ರಮವನ್ನು ಖಂಡಿಸಿರುವ ಸ್ಮೃತಿ ಇರಾನಿ, ಈ ಸಿನಿಮಾವನ್ನು ವಿರೋಧಿಸುವವರು ಭಯೋತ್ಪಾದನೆಗೆ ಬೆಂಬಲಿಸಿದಂತೆ ಎಂದು ಹೇಳಿಕೆ ನೀಡಿದ್ದಾರೆ. ಈ ಸಿನಿಮಾವನ್ನು ವಿರೋಧಿಸುವವರು ಭಯೋತ್ಪಾದಕರ ಜೊತೆ ಕೈ ಜೋಡಿಸಿದ್ದಾರೆಯೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಇಂತಹ ಚಿತ್ರಗಳನ್ನು ಎಲ್ಲರೂ ನೋಡಬೇಕು ಎಂದು ಅವರು ಸಲಹೆಯನ್ನೂ ನೀಡಿದ್ದಾರೆ.

    ದಿ ಕೇರಳ ಸ್ಟೋರಿ ಚಿತ್ರದ ನಿರ್ಮಾಪಕರು ಪಶ್ಚಿಮ ಬಂಗಾಳದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಅದೇ ಅರ್ಜಿಯಲ್ಲೇ ತಮಿಳು ನಾಡು ಸರಕಾರಕ್ಕೆ ಚಿತ್ರಮಂದಿರಗಳಿಗೆ ಭದ್ರತೆ ನೀಡುವಂತೆ ಸೂಚಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಭದ್ರತೆ ದೃಷ್ಟಿ ಕಾರಣವನ್ನು ನೀಡಿ ತಮಿಳು ನಾಡಿನ ಚಿತ್ರಮಂದಿರಗಳ ಮಾಲೀಕರು ಪ್ರದರ್ಶನಕ್ಕೆ ಹಿಂದೇಟು ಹಾಕಿದ್ದರಿಂದ ಒಂದೇ ಅರ್ಜಿಯಲ್ಲೇ ಎರಡೂ ವಿಷಯಗಳನ್ನು ಪ್ರಸ್ತಾಪ ಮಾಡಿದೆ ಚಿತ್ರತಂಡ. ಇದನ್ನೂ ಓದಿ:ಶಾಹಿದ್ ಕಪೂರ್ ಜೊತೆ ಪೂಜಾ ಹೆಗ್ಡೆ ರೊಮ್ಯಾನ್ಸ್

    ದೇಶದಾದ್ಯಂತ ‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿದೆ. ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ಮೂಡಿ ಬಂದಿದ್ದು, ಕೇರಳದಲ್ಲೂ ಚಿತ್ರ ಪ್ರದರ್ಶನಕ್ಕೆ ಥಿಯೇಟರ್ ಮಾಲೀಕರು ಹಿಂದೇಟು ಹಾಕಿದ್ದರು. ಕೇರಳ ಸರಕಾರದ ಸಪೋರ್ಟ್ ಇಲ್ಲದ ಕಾರಣದಿಂದಾಗಿ ಮತ್ತು ಪ್ರತಿಭಟನೆಯ ಕಾವು ಜೋರಾಗಿದ್ದರಿಂದ ಚಿತ್ರಮಂದಿರಗಳ ಮಾಲೀಕರು ಭಯದಲ್ಲಿದ್ದಾರಂತೆ. ಈ ಕಾರಣದಿಂದಾಗಿ ಸಾಕಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಿಲ್ಲ.

  • ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ನಿಷೇಧ : ಪ್ರತಿಭಟನೆಗೆ ಇಳಿದ ಬಿಜೆಪಿ

    ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ನಿಷೇಧ : ಪ್ರತಿಭಟನೆಗೆ ಇಳಿದ ಬಿಜೆಪಿ

    ವಿವಾದಾತ್ಮಕ ‘ದಿ ಕೇರಳ ಸ್ಟೋರಿ’ (The Kerala Story) ಚಿತ್ರವನ್ನು ತಮಿಳು ನಾಡು ಸರಕಾರ ನಿಷೇಧ ಮಾಡಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳ (West Bengal) ಸರ್ಕಾರವು ಕೂಡ ಚಿತ್ರಮಂದಿರಗಳಲ್ಲಿ ಪ್ರದರ್ಶಿಸುವುದನ್ನು ನಿಷೇಧಿಸಿತ್ತು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಈ ವಿವಾದಾತ್ಮಕ ಚಿತ್ರದ ಪದರ್ಶನವನ್ನು ತಕ್ಷಣವೇ ನಿಷೇಧಿಸುವಂತೆ ಆದೇಶ ಹೊರಡಿಸಿದ್ದರು. ದಿದಿ ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

    ಬಹುತೇಕ ಕಡೆ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಮಧ್ಯ ಪ್ರದೇಶ ಸೇರಿದಂತೆ ಹಲವು ರಾಜ್ಯಗಳು ತೆರಿಗೆ ವಿನಾಯತಿಯನ್ನೂ ಘೋಷಣೆ ಮಾಡಿವೆ. ಆದರೂ, ಪಶ್ಚಿಮ ಬಂಗಾಲ ಸರಕಾರ ಈ ರೀತಿ ಸಿನಿಮಾವೊಂದನ್ನು ನಿಷೇಧ ಮಾಡುವುದು ಸರಿಯಲ್ಲ ಎಂದು ಬಿಜೆಪಿ (BJP) ಪ್ರತಿಕ್ರಿಯಿಸಿದೆ. ಮಮತಾ ಬ್ಯಾನರ್ಜಿ ಸರಕಾರದ ವಿರುದ್ಧ ಪ್ರತಿಭಟನೆಯ ಎಚ್ಚರಿಕೆಯನ್ನೂ ಕೊಟ್ಟಿದೆ. ದ್ವೇಷ ಮತ್ತು ಹಿಂಸಾಚಾರದ ಘಟನೆಗಳನ್ನು ತಪ್ಪಿಸಿ ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುವ ಸಲುವಾಗಿ ಪಶ್ಚಿಮ ಬಂಗಾಳ ಸರ್ಕಾರವು ಕೇರಳ ಸ್ಟೋರಿ ಚಲನಚಿತ್ರವನ್ನು ನಿಷೇಧಿಸಲು ನಿರ್ಧರಿಸಿದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಇದನ್ನೂ ಓದಿ:ಬಣ್ಣದ ಜಗತ್ತಿಗೆ ಎಂಟ್ರಿ ಕೊಟ್ಟ ಕ್ರಿಕೆಟಿಗ ಶುಭಮನ್‌ ಗಿಲ್

    ಕಾಶ್ಮೀರ ಫೈಲ್ಸ್ ಎಂಬುದು ಒಂದು ಪ್ರದೇಶವನ್ನು ಅವಮಾನಿಸುತ್ತದೆ. ಅಂತೆಯೇ ದಿ ಕೇರಳ ಸ್ಟೋರಿ ಚಲನಚಿತ್ರವು ತಿರುಚಿದ ಕಥೆಯಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಚಲನಚಿತ್ರ ನಿರ್ಮಾಪಕ ವಿಪುಲ್ ಶಾ, ಅವರು ಹಾಗೆ ಮಾಡಿದರೆ ನಾವು ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನಿನ ನಿಬಂಧನೆಗಳ ಅಡಿಯಲ್ಲಿ ಏನು ಮಾಡಲು ಸಾಧ್ಯವೋ ಅದನ್ನು ಮಾಡಿ ಹೋರಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಶ್ಚಿಮ ಬಂಗಾಳದ ಯಾವುದೇ ಥಿಯೇಟರ್‌ನಲ್ಲಿ (Theater) ಚಿತ್ರ ಪ್ರದರ್ಶನ ಕಂಡು ಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಳದ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ. ಅದೇ ರೀತಿ ತಮಿಳುನಾಡಿನಲ್ಲಿಯೂ (Tamil Nadu) ಈ ಚಿತ್ರಪದರ್ಶನ ಮಾಡದಂತೆ ತಮಿಳುನಾಡು ಥಿಯೇಟರ್ ಮತ್ತು ಮಲ್ಟಿಪ್ಲೆಕ್ಸ್ ಮಾಲೀಕರ ಸಂಘ ನಿರ್ಧಾರ ಕೈಗೊಂಡಿದೆ. ಶುಕ್ರವಾರ ತೆರೆಗೆ ಬಂದ ಈ ಸಿನೆಮಾ ಸಾಕಷ್ಟು ವಾದ-ವಿವಾದಗಳನ್ನು ಹುಟ್ಟಿಹಾಕುತ್ತಿದೆ. ದೇಶದ ಹಲವೆಡೆ ಈ ಚಿತ್ರದ ಕುರಿತು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದರೆ, ಮತ್ತೊಂದೆಡೆ ಈ ಚಿತ್ರದ ಕುರಿತು ಪ್ರತಿಭಟನೆಗಳು ನಡೆಯುತ್ತಿವೆ.

  • ಒಂದಕ್ಕಿಂತ ಹೆಚ್ಚು ನಾಯಿ ಸಾಕುವಂತಿಲ್ಲ – ಗಾಜಿಯಾಬಾದ್‌ನಲ್ಲಿ ಮೂರು ತಳಿಯ ನಾಯಿಗಳು ಬ್ಯಾನ್

    ಒಂದಕ್ಕಿಂತ ಹೆಚ್ಚು ನಾಯಿ ಸಾಕುವಂತಿಲ್ಲ – ಗಾಜಿಯಾಬಾದ್‌ನಲ್ಲಿ ಮೂರು ತಳಿಯ ನಾಯಿಗಳು ಬ್ಯಾನ್

    ಲಕ್ನೋ: ಸಾಕು ನಾಯಿಗಳೇ (Pet Dog) ಜನರ ಮೇಲೆ ದಾಳಿ ನಡೆಸುವಂತಹ ಪ್ರಕರಣಗಳು ಹೆಚ್ಚುತ್ತಿದ್ದಂತೆ ಇದೀಗ ಉತ್ತರ ಪ್ರದೇಶದ ಗಾಜಿಯಾಬಾದ್ (Ghaziabad) ಆಡಳಿತ ತನ್ನ ನಿವಾಸಿಗಳಿಗೆ ಮನೆಗಳಲ್ಲಿ ಒಂದಕ್ಕಿಂತ ಹೆಚ್ಚು ನಾಯಿಗಳನ್ನು ಸಾಕುವಂತಿಲ್ಲ ಎಂದಿದೆ. ಮಾತ್ರವಲ್ಲದೇ ಆಕ್ರಮಣಕಾರಿ ಸ್ವಭಾವವುಳ್ಳ ಪಿಟ್‌ಬುಲ್ (Pitbull), ರಾಟ್‌ವೀಲರ್ (Rottweiler) ಹಾಗೂ ಡೋಗೊ ಅರ್ಜೆಂಟಿನೋ (Dogo Argentino) ತಳಿಗಳನ್ನು ಸಾಕುಪ್ರಾಣಿಗಳಾಗಿ ಇಟ್ಟುಕೊಳ್ಳುವುದನ್ನು ನಿಷೇಧಿಸಿದೆ.

    ಸಾಕುಪ್ರಾಣಿ ಮಾಲೀಕರಿಗೆ ನವೆಂಬರ್ 1 ರಿಂದ ತಮ್ಮ ನಾಯಿಗಳಿಗೆ ಪರವಾನಗಿಯನ್ನು ನೀಡಲು ಪ್ರಾರಂಭಿಸಲಿದೆ. ಮಾಲೀಕರು 2 ತಿಂಗಳುಗಳೊಳಗೆ ತಮ್ಮ ನಾಯಿಗಳನ್ನು ನೋಂದಾಯಿಸಿಕೊಳ್ಳಬೇಕು ಎಂದು ಗಾಜಿಯಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ.

    ಬಹುಮಹಡಿ ಕಟ್ಟಡದ ನಿವಾಸಿಗಳು ತಮ್ಮ ಸಾಕು ಪ್ರಾಣಿಗಳನ್ನು ಹೊರಗೆ ಕರೆಗೊಯ್ಯುವ ಸಂದರ್ಭ ಲಿಫ್ಟ್‌ಗಳನ್ನು ಬಳಸಬೇಕಾಗುತ್ತದೆ. ಮಾತ್ರವಲ್ಲದೇ ತಮ್ಮ ಸಾಕು ನಾಯಿಗಳನ್ನು ಸಾರ್ವಜನಿಕ ಪ್ರದೇಶಗಳಿಗೆ ಕರೆದೊಯ್ಯುವಾಗ ಅವುಗಳಿಗೆ ಮೌತ್ ಗಾರ್ಡ್ ಅನ್ನು ಕಡ್ಡಾಯವಾಗಿ ಹಾಕಬೇಕು ಎಂದು ಆದೇಶಿಸಿದೆ. ಇದನ್ನೂ ಓದಿ: ಈ ಕ್ಷಣಕ್ಕೆ ನಾನು ಬಹಳ ದಿನದಿಂದ ಕಾಯುತ್ತಿದ್ದೆ: ಸೋನಿಯಾ ಗಾಂಧಿ

    ಪಿಟ್‌ಬುಲ್, ರಾಟ್‌ವೀಲರ್ ಮತ್ತು ಡೊಗೊ ಅರ್ಜೆಂಟಿನೊ ತಳಿಗಳು ಉಗ್ರವಾದ ಸ್ವಭಾವ ಹೊಂದಿರುವುದಾಗಿದ್ದು, ಈ ನಾಯಿಗಳನ್ನು ಸಾಕಲು ಯಾವುದೇ ಅನುಮತಿ ಹಾಗೂ ಪರವಾನಗಿ ನೀಡಲಾಗುವುದಿಲ್ಲ. ಯಾರಾದರೂ ಈ ತಳಿಯ ನಾಯಿಗಳನ್ನು ಹೊಂದಿದ್ದರೆ ಅಥವಾ ಖರೀದಿಸಿದರೆ ಮುಂದೊದಗಬಹುದಾದ ಅಪಾಯಕ್ಕೆ ಅವರೇ ಜವಾಬ್ದಾರರಾಗಿರುತ್ತಾರೆ. ಈ ಎಲ್ಲಾ 3 ತಳಿಯ ನಾಯಿಗಳನ್ನು ಗಾಜಿಯಾಬಾದ್‌ನಲ್ಲಿ ನಿಷೇಧಿಸಲಾಗಿದೆ ಎಂದು ಬಿಜೆಪಿ ನಾಯಕ ಮತ್ತು ಜಿಎಂಸಿ ಕೌನ್ಸಿಲರ್ ಸಂಜಯ್ ಸಿಂಗ್ ತಿಳಿಸಿದರು.

    ಕೆಲ ದಿನಗಳಿಂದ ಗಾಜಿಯಾಬಾದ್‌ನ ವಸತಿ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ನಾಯಿ ಕಚ್ಚುವಿಕೆಯ ಹಲವಾರು ಘಟನೆಗಳು ವರದಿಯಾಗಿದೆ. ಈ ಹಿನ್ನೆಲೆ ನಗರದ ಮುನ್ಸಿಪಲ್ ಕಾರ್ಪೊರೇಷನ್ ಸಾಕು ಪ್ರಾಣಿ ಮಾಲೀಕರಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇದನ್ನೂ ಓದಿ: ಮಳಲಿಯಲ್ಲಿರುವುದು ಮಂದಿರವೋ? ಮಸೀದಿಯೋ – ಇಂದು ತೀರ್ಪು ಪ್ರಕಟ ಸಾಧ್ಯತೆ

    Live Tv
    [brid partner=56869869 player=32851 video=960834 autoplay=true]

  • ‘ಆದಿ ಪುರುಷ್’ ಸಿನಿಮಾ ಬ್ಯಾನ್ ಮಾಡಿ ಎಂದು ಅಯೋಧ್ಯ ಅರ್ಚಕರಿಂದ ಪ್ರತಿಭಟನೆ

    ‘ಆದಿ ಪುರುಷ್’ ಸಿನಿಮಾ ಬ್ಯಾನ್ ಮಾಡಿ ಎಂದು ಅಯೋಧ್ಯ ಅರ್ಚಕರಿಂದ ಪ್ರತಿಭಟನೆ

    ಪ್ರಭಾಸ್ ನಟಿಸಿರುವ ‘ಆದಿಪುರುಷ್’ (Adipurush) ಸಿನಿಮಾದಲ್ಲಿ ರಾಮಾಯಣಕ್ಕೆ ಅಪಮಾನ ಮಾಡಿದ್ದಾರೆಂದು ಈ ಹಿಂದೆ ಹಿಂದೂ ಪರ ಸಂಘಟನೆಗಳು ಆರೋಪಿಸಿದ್ದವು. ರಾಮಾಯಣದ ಪಾತ್ರಗಳನ್ನು ತಮಗಿಷ್ಟ ಬಂದಂತೆ ಪ್ರೆಸೆಂಟ್ ಮಾಡಿರುವುದಕ್ಕಾಗಿ ಭಾರೀ ಆಕ್ರೋಶ ವ್ಯಕ್ಯವಾಗಿತ್ತು. ಇದೀಗ ಪ್ರತಿಭಟನೆಯ (Protest) ಅಖಾಡಕ್ಕೆ ಅಯೋಧ್ಯ (Ayodhya) ಅರ್ಚಕರು ಇಳಿದಿದ್ದು, ಈ ಸಿನಿಮಾವನ್ನು ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಮನಿಗೆ ಅಪಮಾನ ಮಾಡಿದವರ ವಿರುದ್ಧ ಕ್ರಮಕ್ಕೂ ಆಗ್ರಹಿಸಿದ್ದಾರೆ.

    ಇತ್ತೀಚೆಗಷ್ಟೇ ಬಿಡುಗಡೆ ಆಗಿರುವ ಟೀಸರ್ ಕೂಡ ಕಳಪೆ ಮಟ್ಟದ್ದಾಗಿದೆ ಎಂದು ಟ್ರೋಲಿಗರು ಸಿನಿಮಾ ಬೆನ್ನು ಬಿದ್ದಿದ್ದು, ಈ ನಡುವೆ ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಚಿತ್ರತಂಡಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಆದ ಪ್ರಮಾದಗಳನ್ನು ಪಟ್ಟಿ ಮಾಡಿರುವ ಅವರು, ತಪ್ಪುಗಳನ್ನು ತಿದ್ದಿಕೊಳ್ಳಲು ಸೂಚಿಸಿದ್ದಾರೆ.

    ಆದಿಪುರುಷ್ ಸಿನಿಮಾದಲ್ಲಿ ಹಿಂದೂಗಳ ಭಾವನೆ ಧಕ್ಕೆ ಮಾಡಲಾಗಿದೆ ಎಂದು ಗೃಹ ಸಚಿವರು ಆರೋಪಿಸಿದ್ದು, ಈಗಾಗಲೇ ಬಿಡುಗಡೆಗೊಂಡ ಟೀಸರ್ ನಲ್ಲಿ ಹನುಮಂತ ಪಾತ್ರಧಾರಿಗೆ ಲೆದರ್ ಬಟ್ಟೆಗಳನ್ನು ತೊಡಿಸಲಾಗಿದೆ. ಹನುಮನ ಸೈನಕ್ಕೂ ಲೆದರ್ ಬಟ್ಟೆ ಇದೆ. ಹೀಗಾಗಿ ಹನುಮ ದೇವರಿಗೆ ಅಪಮಾನ ಮಾಡಲಾಗಿದೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅದನ್ನು ಸರಿ ಮಾಡದೇ ಇದ್ದರೆ ಪರಿಣಾಮ ಸರಿ ಇರಲ್ಲ ಎಂದು ಚಿತ್ರತಂಡಕ್ಕೆ ತಿಳಿಸಿದ್ದಾರೆ.

    ಈ ಕುರಿತು ಮಾತನಾಡಿರುವ ಮಿಶ್ರಾ, ಲೆದರ್ ಬಟ್ಟೆಗಳನ್ನು ಹಾಕಿರುವ ಕುರಿತು ನಿರ್ದೇಶಕರಿಗೆ ಮತ್ತು ನಿರ್ಮಾಪಕರಿಗೆ ಪತ್ರ ಬರೆಯುವುದಾಗಿ ತಿಳಿಸಿರುವ ಅವರು, ಒಂದು ವೇಳೆ ಆ ದೃಶ್ಯಗಳನ್ನು ತಗೆದು ಹಾಕದೇ ಇದ್ದರೆ ಕಾನೂನು ಕ್ರಮಕ್ಕೂ ತಾವು ಹಿಂಜರಿಯುವುದಿಲ್ಲ ಎನ್ನುತ್ತಾರೆ.  ಇಂತಹ ಅಪಮಾನಗಳನ್ನು ಯಾವತ್ತಿಗೂ ಹಿಂದೂಗಳ ಸಹಿಸುವುದಿಲ್ಲ ಎಂದೂ ಅವರು ಹೇಳಿದ್ದಾರೆ. ಇದನ್ನೂ ಓದಿ:ದುಬಾರಿ ಕಾರು ಖರೀದಿಸಿದ ನಟಿ ಕೀರ್ತಿ ಸುರೇಶ್

    ಆದಿ ಪುರುಷ್ ಟೀಸರ್ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು, ಸ್ವತಃ ಪ್ರಭಾಸ್ (Prabhas) ಕೂಡ ಕೋಪ ಮಾಡಿಕೊಂಡಿದ್ದಾರೆ. ಟೀಸರ್ ಬಿಡುಗಡೆ ಸಮಾರಂಭ ಮುಗಿದ ನಂತರ ನಿರ್ದೇಶಕರನ್ನು ತಮ್ಮ ರೂಮ್ ಗೆ ಕರೆದು ಬೈದಿದ್ದಾರೆ ಎಂದು ಹೇಳಲಾಗುತ್ತಿದೆ. ಇದಲ್ಲದೇ ಸೈಫ್ ಅಲಿ ಖಾನ್ ಅವರಿಗೆ ರಾವಣನ ಪಾತ್ರ ಕೊಟ್ಟಿದ್ದಕ್ಕೂ ಹಲವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ರಾವಣನ ರೀತಿಯಲ್ಲಿ ಅವರು ಕಾಣುತ್ತಿಲ್ಲ ಎಂದು ಟ್ರೋಲ್ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಸಲಾರ್’ ಸಿನಿಮಾ ಶೂಟಿಂಗ್ ನಲ್ಲಿ ಮೊಬೈಲ್ ನಿಷೇಧಿಸಿದ ಪ್ರಶಾಂತ್ ನೀಲ್

    ‘ಸಲಾರ್’ ಸಿನಿಮಾ ಶೂಟಿಂಗ್ ನಲ್ಲಿ ಮೊಬೈಲ್ ನಿಷೇಧಿಸಿದ ಪ್ರಶಾಂತ್ ನೀಲ್

    ಮೊಬೈಲ್ ಗಳು (Mobile) ಸಿನಿಮಾ ತಂಡಕ್ಕೆ ಕೊಡಬಾರದ ಕಷ್ಟ ಕೊಡುತ್ತಿವೆ. ಕೈಯಲ್ಲಿ ಮೊಬೈಲ್ ಇದೆ ಅನ್ನುವ ಕಾರಣಕ್ಕಾಗಿ ಸಿಕ್ಕ ಸಿಕ್ಕ ಫೋಟೋ ಮತ್ತು ವಿಡಿಯೋಗಳನ್ನು ತಗೆದು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಿರುವ ಕಾರಣದಿಂದಾಗಿ ಸಿನಿಮಾದ ಸಿಕ್ರೇಟ್ಸ್ ಬಯಲಾಗುತ್ತಿದೆ. ಇಂತಹ ತಲೆನೋವು ತಪ್ಪಿಸಲೆಂದೇ ಪ್ರಶಾಂತ್ ನೀಲ್ (Prashant Neil) ಕಠಿಣ ಕ್ರಮ ತಗೆದುಕೊಂಡಿದ್ದಾರೆ. ಶೂಟಿಂಗ್ (Shooting) ಸೆಟ್ ಗೆ ಯಾರೇ ಬಂದರೂ, ಮೊಬೈಲ್ ತರದಂತೆ ನಿರ್ಬಂಧ ಹೇರಿದ್ದಾರೆ.

    ಕೆಲ ದಿನಗಳ ಹಿಂದೆಯಷ್ಟೇ ಸಲಾರ್ (Salar) ಸಿನಿಮಾದ ಪ್ರಮುಖ ದೃಶ್ಯವೊಂದರ ಫೋಟೋ ಲೀಕ್ ಆಗಿ, ಭಾರೀ ವೈರಲ್ ಆಗಿತ್ತು. ಅಲ್ಲದೇ, ಶೂಟಿಂಗ್ ಗೆ ಹಲವು ದೃಶ್ಯಗಳನ್ನು ವಿಡಿಯೋ ಮಾಡಿಯೂ ಹರಿ ಬಿಡಲಾಗಿತ್ತು. ಇದರಿಂದಾಗಿ ಸಿನಿಮಾದ ಗುಟ್ಟುಗಳು ರಟ್ಟಾಗಿದ್ದವು. ಇದನ್ನರಿತ ಪ್ರಶಾಂತ್ ನೀಲ್, ಯಾರೂ ಮೊಬೈಲ್ ತರಬಾರದು ಎಂದು ತಿಳಿಸಿದ್ದಾರೆ. ಇದು ನಟರನಿಗೂ ಅನ್ವಯ ಆಗಲಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ:`ಕಮಲಿ’ ಖ್ಯಾತಿಯ ಅಮೂಲ್ಯಗೌಡರ ಹಾಟ್ ಫೋಟೋ ವೈರಲ್

    ಕಲಾವಿದರು ಶೂಟಿಂಗ್ ಸ್ಪಾಟ್ ನಲ್ಲಿ ಮೊಬೈಲ್ ಬಳಸದಂತೆ ಮನವೊಲಿಸಿದ್ದು, ಶೂಟಿಂಗ್ ಗೆ ಬರುವಾಗ ತಮ್ಮ ಮೊಬೈಲ್ ಗಳನ್ನು ಕ್ಯಾರವಾನ್ ಗಳಲ್ಲೇ ಬಿಟ್ಟು ಬರುವಂತೆ ಹೇಳಿದ್ದಾರೆ. ಹಾಗಾಗಿ ಪ್ರಭಾಸ್ (Prabhas) ಸೇರಿದಂತೆ ಎಲ್ಲರೂ ಈ ನಿಯಮವನ್ನು ಚಾಚೂ ತಪ್ಪದೇ ಪಾಲಿಸಬೇಕಾಗಿದೆ. ಅದರಲ್ಲೂ ತಂತ್ರಜ್ಞರು ಮತ್ತು ಇತರ ಕೆಲಸಗಾರರು ಕೂಡ ಕಟ್ಟು ನಿಟ್ಟಾಗಿ ಈ ನಿಯಮವನ್ನು ಪಾಲಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಹಲವು ಶೂಟಿಂಗ್ ಸೆಟ್ ಗಳು ಕೂಡ ಇದನ್ನು ಪಾಲಿಸಿಕೊಂಡು ಬರುತ್ತಿವೆ.

    Live Tv
    [brid partner=56869869 player=32851 video=960834 autoplay=true]

  • ಇನ್ಮುಂದೆ ಶಾಲೆಗಳ ಮುಂದೆ ಮಾರುವಂತಿಲ್ಲ ಐಸ್‌ಕ್ರೀಮ್, ಚಾಟ್ ಫುಡ್ – ಇಲ್ಲಿದೆ ವಿವರ

    ಇನ್ಮುಂದೆ ಶಾಲೆಗಳ ಮುಂದೆ ಮಾರುವಂತಿಲ್ಲ ಐಸ್‌ಕ್ರೀಮ್, ಚಾಟ್ ಫುಡ್ – ಇಲ್ಲಿದೆ ವಿವರ

    ಲಕ್ನೋ: ಶಾಲೆ ಹೊರಗೆ ಇನ್ಮುಂದೆ ವಿದ್ಯಾರ್ಥಿಗಳು ಫಾಸ್ಟ್ ಫುಡ್, ಐಸ್‌ಕ್ರೀಮ್, ಬಲೂನ್ ಪಡೆಯಲು ಸಾಧ್ಯವಾಗುವುದಿಲ್ಲ. ಏಕೆಂದರೆ ಲಕ್ನೋ ಆಡಳಿತವು ಶಾಲೆಗಳ ಹೊರಗೆ ಐಸ್ ಕ್ರೀಮ್ ಮತ್ತು ಫಾಸ್ಟ್ ಫುಡ್ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

    ವಿವಿಧ ಶಾಲೆಗಳ ನೋಡಲ್ ಅಧಿಕಾರಿಗಳು ಮತ್ತು ನಗರ ಸಂಚಾರ ಪೊಲೀಸರು ಮತ್ತು ಜಿಲ್ಲಾಡಳಿತದ ನಡುವಿನ ಚರ್ಚೆಯ ನಂತರ ಪೀಕ್ ಅವರ್‌ನಲ್ಲಿ ಶಾಲೆಯ ಸುತ್ತಮುತ್ತ ಟ್ರಾಫಿಕ್ ತಪ್ಪಿಸಲು ಮಾರ್ಗಸೂಚಿಗಳನ್ನು ಹೊರಡಿಸಿತು. ಇದನ್ನೂ ಓದಿ: ಮೂರು ಮುದ್ದಾದ ಹುಲಿ ಮರಿಗಳನ್ನ ಅಮ್ಮನಂತೆ ಅಪ್ಪಿ ಮುದ್ದಾಡುವ ಚಿಂಪಾಂಜಿ 

    ಮಾರ್ಗಸೂಚಿಯಲ್ಲಿ ಏನಿದೆ?
    ಶಾಲಾ ಸಮಯದ ನಂತರ ಟ್ರಾಫಿಕ್ ಜಾಮ್ ಉಂಟುಮಾಡುವ ಐಸ್ ಕ್ರೀಮ್, ಚಾಟ್, ಬಲೂನ್ ಮತ್ತು ಇತರ ವಸ್ತುಗಳನ್ನು ಮಾರಾಟ ಮಾಡಲು ಶಾಲೆಗಳ ಸುತ್ತಲೂ ಯಾವುದೇ ಅಂಗಡಿಗಳಿಗೆ ಅನುಮತಿಸಲಾಗುವುದಿಲ್ಲ.

    ಶಾಲೆ ಬಿಟ್ಟ ನಂತರ ವಿದ್ಯಾರ್ಥಿಗಳು ರಸ್ತೆಯಲ್ಲಿ ತಿರುಗಾಡುವ ಬದಲು ನೇರವಾಗಿ ತಮ್ಮ ಶಾಲಾ ಕ್ಯಾಬ್ ಅಥವಾ ಬಸ್‍ನಲ್ಲಿ ಕುಳಿತುಕೊಳ್ಳಬೇಕು. ಶಾಲೆ ಮುಗಿಯುವ ಮುನ್ನವೇ ಮಕ್ಕಳಿಗಾಗಿ ಕಾಯುವ ಪೋಷಕರು ತಮ್ಮ ವಾಹನಗಳನ್ನು ಶಾಲೆಯಿಂದ ಒಂದು ಕಿಲೋಮೀಟರ್ ದೂರದಲ್ಲಿ ನಿಲ್ಲಿಸಬೇಕು. ಇದನ್ನೂ ಓದಿ:  ಆರೋಗ್ಯ ಸಚಿವರಿಂದ ಛೀಮಾರಿ – ಪಂಜಾಬ್ ಮಾಜಿ ಸಿಎಂ ಅತ್ತಿಗೆ ರಾಜೀನಾಮೆ 

    ಶಾಲೆಯ ಸಮಯ ಮುಗಿದ ತಕ್ಷಣ, ಅವರು ಶಾಲೆಯ ಗೇಟ್ ಒಳಗೆ ಬರಬೇಕು. ಹೆಚ್ಚು ಸಮಯ ತೆಗೆದುಕೊಳ್ಳದೆ ಮಕ್ಕಳನ್ನು ಕರೆದುಕೊಂಡು ಹೋಗಬೇಕು. ಸಂಚಾರಕ್ಕೆ ಅಡಚಣೆಯಾಗದಂತೆ ನೋಡಿಕೊಳ್ಳಬೇಕು. ಶಾಲೆಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿ ಯಾವುದೇ ವಾಹನ ನಿಲುಗಡೆ ಮಾಡುವಂತಿಲ್ಲ. ಪೋಷಕರು-ಶಿಕ್ಷಕರ ಸಭೆಯ ಸಮಯದಲ್ಲಿ ಮಾರ್ಗಸೂಚಿಗಳ ಬಗ್ಗೆ ಶಾಲೆಗಳು ಪೋಷಕರಿಗೆ ತಿಳಿಸಬೇಕು ಎಂದು ಆದೇಶವನ್ನು ಹೊರಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಮೇ 16ಕ್ಕೆ ಹುಬ್ಬಳ್ಳಿ- ಧಾರವಾಡದಲ್ಲಿ ವಧಾಲಯ, ಮಾಂಸದ ಅಂಗಡಿ ಬಂದ್

    ಮೇ 16ಕ್ಕೆ ಹುಬ್ಬಳ್ಳಿ- ಧಾರವಾಡದಲ್ಲಿ ವಧಾಲಯ, ಮಾಂಸದ ಅಂಗಡಿ ಬಂದ್

    ಹುಬ್ಬಳ್ಳಿ: ಬುದ್ಧ ಪೂರ್ಣಿಮಾ ಪ್ರಯುಕ್ತ ಮೇ 16 ರಂದು ಅವಳಿನಗರದಲ್ಲಿ ಮಾಂಸ ಮಾರಾಟಕ್ಕೆ ನಿಷೇಧಿಸಲಾಗಿದೆ.

    ಶಾಂತಿ, ಸೌಹಾರ್ದ ಮತ್ತು ಜಗತ್ತಿನ ಎಲ್ಲಾ ಜೀವಿಗಳಿಗೆ ಬದುಕುವ ಹಕ್ಕಿನ ಮಹತ್ವ ತಿಳಿಸುವ ವಿಶೇಷ ಬುದ್ಧ ಪೂರ್ಣಿಮಾ ದಿನಕ್ಕಿದೆ. ಹೀಗಾಗಿ ಅಂದು ಹು-ಧಾ ಪಾಲಿಕೆ ವ್ಯಾಪ್ತಿಯಲ್ಲಿನ ವಧಾಲಯಗಳು ಹಾಗೂ ಎಲ್ಲ ಮಾಂಸದ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ.

    ಒಂದು ವೇಳೆ ಮಾಂಸದ ಅಂಗಡಿಗಳನ್ನು ತೆರೆದರೆ ಪಾಲಿಕೆಯಿಂದ ಅವರ ಲೈಸೆನ್ಸ್ ರದ್ದು ಪಡಿಸಿ, ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆಯ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

  • ಪ್ರಯಾಣಿಕರು ರಾತ್ರಿ ಮೊಬೈಲ್‍ನಲ್ಲಿ ಗಟ್ಟಿಯಾಗಿ ಮಾತನಾಡುವಂತಿಲ್ಲ: ಭಾರತೀಯ ರೈಲ್ವೆ

    ಪ್ರಯಾಣಿಕರು ರಾತ್ರಿ ಮೊಬೈಲ್‍ನಲ್ಲಿ ಗಟ್ಟಿಯಾಗಿ ಮಾತನಾಡುವಂತಿಲ್ಲ: ಭಾರತೀಯ ರೈಲ್ವೆ

    ನವದೆಹಲಿ: ರೈಲಿನಲ್ಲಿ ರಾತ್ರಿ ಪ್ರಯಾಣದ ಸಮಯದಲ್ಲಿ ಫೋನ್‍ಗಳಲ್ಲಿ ಜೋರಾಗಿ ಮಾತನಾಡುವುದನ್ನು ಮತ್ತು ಹಾಡುಗಳನ್ನು ಕೇಳುವುದನ್ನು ಭಾರತೀಯ ರೈಲ್ವೆ ನಿಷೇಧಿಸಿದೆ.

    ರೈಲ್ವೆ ತನ್ನ ಎಲ್ಲಾ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಇದನ್ನು ಮಾಡಿದೆ. ಭಾರತೀಯ ರೈಲ್ವೆ ಹೊರಡಿಸಿದ ಪ್ರಯಾಣಿಕರ ಸ್ನೇಹಿ ಮಾರ್ಗಸೂಚಿಗಳಲ್ಲಿ ರೈಲು ಸಿಬ್ಬಂದಿ ಕೂಡ ತಮ್ಮ ಕೆಲಸ ರಾತ್ರಿಯಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳುತ್ತದೆ. ಇದರರ್ಥ ಟಿಕೆಟ್ ತಪಾಸಣೆ ಸಿಬ್ಬಂದಿ, ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ, ಎಲೆಕ್ಟ್ರಿಷಿಯನ್, ಅಡುಗೆ ಮತ್ತು ನಿರ್ವಹಣಾ ಸಿಬ್ಬಂದಿ ಮಲಗುವ ವಿಶ್ರಾಂತಿ ಪಡೆಯುತ್ತಿರುವ ಪ್ರಯಾಣಿಕರ ಸುತ್ತಲೂ ಕೆಲಸ ಮಾಡಬೇಕಾಗುತ್ತದೆ.

    ಯಾವುದೇ ವ್ಯಕ್ತಿಗೆ ಮೊಬೈಲ್‍ನಲ್ಲಿ ಜೋರಾಗಿ ಮಾತನಾಡಲು ಅವಕಾಶವಿಲ್ಲ ಅಥವಾ ಕಂಪಾರ್ಟ್‍ಮೆಂಟ್ ಕೋಚ್‍ನಲ್ಲಿದ್ದಾಗ ಜೋರು ಧ್ವನಿಯಲ್ಲಿ ಹಾಡುಗಳನ್ನು ಕೇಳುವಂತಿಲ್ಲ ಎಂದು ಮಾರ್ಗಸೂಚಿಯು ಸ್ಪಷ್ಟವಾಗಿ ಹೇಳುತ್ತದೆ.

    ಪ್ರಯಾಣದ ವೇಳೆ ಪ್ರಯಾಣಿಕರ ನಿದ್ರೆಗೆ ಯಾವುದೇ ತೊಂದರೆಯಾಗದಂತೆ ರೈಲ್ವೆ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾತ್ರಿ 10 ಗಂಟೆಯ ನಂತರ ಪ್ರಯಾಣಿಕರು ಮೊಬೈಲ್ ಫೋನ್‍ಗಳಲ್ಲಿ ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿರುವ ಬಗ್ಗೆ ಹಲವಾರು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ರೈಲ್ವೆ ಸಚಿವಾಲಯ ಈ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇಷ್ಟಾದರೂ ಯಾವುದಾದರು ದೂರುಗಳು ಬಂದರೆ ಆ ರೈಲಿನಲ್ಲಿರುವ ರೈಲ್ವೆ ಸಿಬ್ಬಂದಿಯನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು.

    ಇವುಗಳಲ್ಲದೆ 60 ವರ್ಷಕ್ಕಿಂತ ಮೇಲ್ಪಟ್ಟ ಜನರು, ದೈಹಿಕವಾಗಿ ಅಂಗವಿಕಲರು ಮತ್ತು ಒಂಟಿ ಮಹಿಳಾ ಪ್ರಯಾಣಿಕರಿಗೆ ರೈಲ್ವೆ ಸಿಬ್ಬಂದಿಯಿಂದ ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲಾಗುವುದು. ರೈಲ್ವೆ ಸಚಿವಾಲಯವು ವಲಯ ರೈಲ್ವೆಗಳಿಗೆ ಜಾಗೃತಿ ಅಭಿಯಾನಗಳನ್ನು ನಡೆಸುವಂತೆ ಕೇಳಿದೆ. ಅಲ್ಲಿ ಟಿಕೆಟ್ ತಪಾಸಣೆ ಸಿಬ್ಬಂದಿ ಮತ್ತು ಇತರ ರೈಲ್ವೆ ಸಿಬ್ಬಂದಿ ತಮ್ಮ ಫೋನ್‍ಗಳಲ್ಲಿ ಜೋರಾಗಿ ಮಾತನಾಡುವುದರ ವಿರುದ್ಧ ಪ್ರಯಾಣಿಕರಿಗೆ ಸಲಹೆ ನೀಡುತ್ತಾರೆ. ಇಯರ್‌ಫೋನ್ ಇಲ್ಲದೆ ಸಂಗೀತ ಕೇಳದಂತೆ ಪ್ರಯಾಣಿಕರಿಗೆ ಸಿಬ್ಬಂದಿ ಸಲಹೆ ನೀಡುತ್ತಾರೆ.

    ಈ ಹಿಂದೆ ಬೆಂಕಿಯ ಘಟನೆಗಳ ವಿರುದ್ಧ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಯಾಣಿಕರು ರಾತ್ರಿ 11 ರಿಂದ ಬೆಳಗ್ಗೆ 5 ರ ನಡುವೆ ರೈಲುಗಳಲ್ಲಿ ಮೊಬೈಲ್ ಚಾಜಿರ್ಂಗ್ ಸ್ಟೇಷನ್‍ಗಳನ್ನು ಬಳಸುವುದನ್ನು ನಿಷೇಧಿಸುವ ನಿರ್ಧಾರವನ್ನು ರೈಲ್ವೆ ತೆಗೆದುಕೊಂಡಿತ್ತು.