Tag: ನಿಷೇಧ

  • 15% ಜನರಿಗಾಗಿ 85% ನಾಗರಿಕರ ಮೂಲಭೂತ ಹಕ್ಕು ಉಲ್ಲಂಘನೆ – ಹಲಾಲ್ ಉತ್ಪನ್ನ ನಿಷೇಧಿಸುವಂತೆ ಸುಪ್ರೀಂನಲ್ಲಿ ಅರ್ಜಿ

    15% ಜನರಿಗಾಗಿ 85% ನಾಗರಿಕರ ಮೂಲಭೂತ ಹಕ್ಕು ಉಲ್ಲಂಘನೆ – ಹಲಾಲ್ ಉತ್ಪನ್ನ ನಿಷೇಧಿಸುವಂತೆ ಸುಪ್ರೀಂನಲ್ಲಿ ಅರ್ಜಿ

    ನವದೆಹಲಿ: ದೇಶಾದ್ಯಂತ ಹಲಾಲ್ ಉತ್ಪನ್ನಗಳನ್ನು ನಿಷೇಧಿಸುವಂತೆ ಕೋರಿ ಸುಪ್ರೀಂಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಕೆಯಾಗಿದೆ.

    ವಕೀಲ ವಿಭೋರ್ ಆನಂದ ಎನ್ನುವವರು ಹಲಾಲ್ ಉತ್ಪನ್ನ ಹಾಗೂ ಹಲಾಲ್ ಮಾರಾಟ ಮಾಡುವುದು ಸಂವಿಧಾನದ 14 ಹಾಗೂ 21ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಪಿಐಎಲ್‍ನಲ್ಲಿ ಮನವಿ ಮಾಡಿದ್ದಾರೆ.

    ದೇಶದಲ್ಲಿ ಹಲಾಲ್ ಉತ್ಪನ್ನಗಳನ್ನು ಬಳಸುವ 15% ಜನಸಂಖ್ಯೆಯ ಸಲುವಾಗಿ 85% ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ಪ್ರತಿಪಾದಿಸಿರುವ ಅವರು, ಹಲಾಲ್ ಉತ್ಪನ್ನಗಳು ಮತ್ತು ಹಲಾಲ್ ಪ್ರಮಾಣೀಕರಣವನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಅರ್ಜಿಯಲ್ಲಿ ಕೋರಿದ್ದಾರೆ.

    ಅರ್ಜಿಯಲ್ಲಿ ಏನಿದೆ?:
    ದೇಶದಲ್ಲಿ 1974ರಲ್ಲಿ ಹಲಾಲ್ ಪ್ರಮಾಣೀಕರಣ ವ್ಯವಸ್ಥೆ ಆರಂಭವಾಯಿತು. ಮೊದಲಿಗೆ ಇದು ಮಾಂಸದ ಉತ್ಪನ್ನಗಳಿಗೆ ಸೀಮಿತವಾಗಿತ್ತು. ಈಗ ಫಾರ್ಮಾಸ್ಯುಟಿಕಲ್ಸ್, ಕಾಸ್ಮೆಟಿಕ್ಸ್, ಆರೋಗ್ಯ ಉತ್ಪನ್ನಗಳು, ಟಾಯ್ಲೆಟರಿ, ವೈದ್ಯಕೀಯ ಉಪಕರಣಗಳಿಗೂ ಹಲಾಲ್ ಪ್ರಮಾಣೀಕರಣ ನೀಡಲಾಗುತ್ತಿದೆ.

    ಹಲಾಲ್ ಸ್ನೇಹಿಪ್ರವಾಸೋದ್ಯಮ, ಮೆಡಿಕಲ್ ಟೂರಿಸಂ, ಉಗ್ರಾಣ ಪ್ರಮಾಣೀಕರಣ, ಹಲಾಲ್ ರೆಸ್ಟೋರೆಂಟ್‍ಗಳು, ಹಲಾಲ್ ಟ್ರೇನಿಂಗ್ ಇತ್ಯಾದಿಗಳು ಕೂಡ ಆರಂಭವಾಗಿದೆ. ಇಷ್ಟೇ ಅಲ್ಲದೇ ಸರಕು ಸಾಗಣೆ, ಮಾಧ್ಯಮ, ಬ್ರ್ಯಾಂಡಿಂಗ್ ಹಾಗೂ ಮಾರ್ಕೆಟಿಂಗ್ ಕ್ಷೇತ್ರಕ್ಕೂ ಹಲಾಲ್ ಕಾಲಿಟ್ಟಿದೆ.

    meat ban

    ಇಸ್ಲಾಮಿನ ಪ್ರಕಾರ ಹಲಾಲ್ ಎಂಬ ಪದವು ಅನುಮತಿಸಲಾದ ಅಥವಾ ಕಾನೂನುಬದ್ಧವಾಗಿದೆ ಎಂದರ್ಥವಾಗಿದೆ. ಭಾರತ ಜಾತ್ಯತೀತ ರಾಷ್ಟ್ರವಾಗಿದೆ. ಇದು ಸಂವಿಧಾನದಲ್ಲೂ ಉಲ್ಲೇಖವಾಗಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರ ಮೇಲೂ ಒಂದು ಧರ್ಮದ ನಂಬಿಕೆಯನ್ನು ಹೇರಿಕೆ ಮಾಡುವುದು ಸರಿಯಲ್ಲ. ಇದರಿಂದಾಗಿ ದೇಶಾದ್ಯಂತ ಹಲಾಲ್ ಉತ್ಪನ್ನಗಳನ್ನು ಹಾಗೂ ಹಲಾಲ್ ಪ್ರಮಾಣೀಕರಣವನ್ನು ನಿಷೇಧಿಸಬೇಕು. ಇದನ್ನೂ ಓದಿ: ಇಂದು ರಾತ್ರಿ ಬೈಯಪ್ಪನಹಳ್ಳಿ, ಎಂ.ಜಿ ರಸ್ತೆ ಮೆಟ್ರೋ ರೈಲು ಸ್ಥಗಿತ

    ಕೆಎಫ್‍ಸಿ, ನೆಸ್ಲೆ, ಬ್ರಿಟಾನಿಯಾ ಹಾಗೂ ಇತರೆ ಕಂಪನಿಗಳಿಗೆ ಹಲಾಲ್ ಪ್ರಮಾಣೀಕೃತ ಆಹಾರಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲು ಸೂಚಿಸಬೇಕು. ಆಹಾರೋತ್ಪನ್ನಗಳಿಗೆ ಪ್ರಮಾಣೀಕರಣ ನೀಡಲೆಂದೇ ಸರ್ಕಾರ ಆಹಾರ ಸುರಕ್ಷತೆ ಪ್ರಾಧಿಕಾರ (ಎಫ್‍ಎಸ್‍ಎಸ್‍ಎಐ) ಇರುವಾಗ ಅನಧಿಕೃತ ಹಲಾಲ್ ಪ್ರಮಾಣೀಕರಣ ವ್ಯವಸ್ಥೆ ಏಕಿರಬೇಕು ಎಂದು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ಇದನ್ನೂ ಓದಿ: ಮುಸ್ಲಿಮ್‌ ಬಾಹುಳ್ಯ ಜಾಗದಲ್ಲಿ ಅಣ್ಣಮ್ಮ ದೇವಿ ಮೆರವಣಿಗೆ – ದಾರಿ ಬದಲಾವಣೆ ಮಾಡುವಂತೆ ಮನವಿ

  • ಭಾರತದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ?

    ಭಾರತದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ?

    ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯನ್ನು ಭಾರತದಲ್ಲಿ ನಿಷೇಧಿಸಲು ಚಿಂತನೆ ನಡೆದಿದೆ. ಕೇಂದ್ರ ಗೃಹ ಇಲಾಖೆ ಈ ಬಗ್ಗೆ ತಯಾರಿ ಆರಂಭಿಸಿದ್ದು, ಮುಂದಿನ ಒಂದು ವಾರದಲ್ಲಿ ಸಂಘಟನೆ ನಿಷೇಧವಾಗುವ ಸಾಧ್ಯತೆಗಳು ದಟ್ಟವಾಗಿದೆ ಎಂದು ಮೂಲಗಳು ಹೇಳಿವೆ.

    ಹಲವು ದೂರುಗಳ ಹಿನ್ನೆಲೆ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಪಿಎಫ್‌ಐ ದೇಶದಲ್ಲಿ ಶಾಂತಿ ಕದಡುವುದು, ವೈಷಮ್ಯ ಭಿತ್ತುವುದು, ಭಯೋತ್ಪಾದನೆಗೆ ಬೆಂಬಲ ಹಾಗೂ ಕೋಮು ಪ್ರಚೋದನೆ ನೀಡುವ ಗಂಭೀರ ಆರೋಪಗಳನ್ನು ಎದುರಿಸುತ್ತಿದೆ. ಇದನ್ನೂ ಓದಿ: ಪ್ರಧಾನಿ ಭೇಟಿ ಮಾಡಿ ಸಂಭ್ರಮಿಸಿದ ಗ್ರ್ಯಾಮಿ ಅವಾರ್ಡ್ ವಿಜೇತ ರಿಕಿ ಕ್ರೇಜ್

    ಈ ಸಂಬಂಧ ಅಜಯ್ ಭಲ್ಲಾ ವರದಿ ಪಡೆಯುತ್ತಿದ್ದಾರೆ. ರಾಷ್ಟ್ರೀಯ ತನಿಖಾ ದಳದಿಂದಲೂ ಮಾಹಿತಿ ಕೋರಲಾಗಿದೆ. ಕೇರಳದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಪ್ರೇರಣೆ ಹಾಗೂ ಬೆಂಗಳೂರಿನಲ್ಲಿ ಹಲವು ಗಲಭೆಗಳ ಹಿಂದೆ ಪಿಐಎಫ್ ಪಾತ್ರ ಇರುವ ಬಗ್ಗೆ ರಾಜ್ಯ ಸರ್ಕಾರಗಳಿಂದ ಗೃಹ ಇಲಾಖೆ ಮಾಹಿತಿ ತರಿಸಿಕೊಂಡಿದೆ.

    ಈ ಎಲ್ಲ ವರದಿಗಳನ್ನು ಆಧರಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಭಾರತದಲ್ಲಿ ಬ್ಯಾನ್ ಮಾಡಲು ತಯಾರಿ ನಡೆಯುತ್ತಿದೆ. ಈವರೆಗೂ ಭಾರತದಲ್ಲಿ ಭಯೋತ್ಪಾದನೆ ಚಟುವಟಿಕೆಗಳಿಗೆ ಪ್ರೇರಣೆ ನೀಡುವ 42 ಮತ್ತು ನಿಯಮಗಳನ್ನು ಉಲ್ಲಂಘಿಸಿ ಕಾನೂನು ಸುವ್ಯವಸ್ಥಿತೆ ಹದಗೆಡಿಸುವ 11 ಸಂಘಟನೆಗಳನ್ನು ಗೃಹ ಇಲಾಖೆ ನಿಷೇಧಿಸಿದೆ‌. ಇದನ್ನೂ ಓದಿ: RSS ಆಸ್ಪತ್ರೆ ಹಿಂದೂಗಳಿಗೆ ಮಾತ್ರವೇ ಎಂಬ ರತನ್ ಟಾಟಾ ಪ್ರಶ್ನೆಗೆ ಗಡ್ಕರಿ ಉತ್ತರ ಹೀಗಿತ್ತು

  • ಹಲಾಲ್ ಮಾಂಸ ಎಂದರೇನು? ಹಲಾಲ್ ಕಟ್ ಏನು?

    ಹಿಜಬ್ ಗಲಾಟೆಯ ಬಳಿಕ ಮುಸ್ಲಿಂ ವರ್ತಕರಿಗೆ ಹಿಂದೂಗಳ ಜಾತ್ರೆಯಲ್ಲಿ ಬಹಿಷ್ಕಾರ ಹಾಕಲಾಯಿತು. ಬಹಿಷ್ಕಾರದ ಮುಂದುವರಿದ ಭಾಗವಾಗಿ ಈಗ ಹಲಾಲ್ ಮಾಂಸಗಳನ್ನು ಬಹಿಷ್ಕರಿಸುವಂತೆ ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ.

    ಯುಗಾದಿ ಮರು ದಿವಸ ಕರ್ನಾಟಕದ ಕೆಲ ಭಾಗಗಳಲ್ಲಿ ಆಚರಿಸುವ ಹೊಸತೊಡಕು ವೇಳೆ ಮಾಂಸ ತಿನ್ನಲಾಗುತ್ತದೆ. ಈ ವೇಳೆ ಹಲಾಲ್ ಮಾಂಸವನ್ನು ಸೇವಿಸದಂತೆ ಕರೆ ನೀಡಿದೆ. ಮುಸ್ಲಿಮ್ ದೇವರಿಗೆ ಅರ್ಪಣೆ ಮಾಡಿದ ಬಳಿಕ ಹಿಂದೂ ದೇವರಿಗೆ ಅರ್ಪಣೆ ಮಾಡುವುದು ಸರಿಯಲ್ಲ ಎಂದು ಹಿಂಜಾವೇ ಹೇಳಿದೆ. ಹೀಗಾಗಿ ಇಲ್ಲಿ ಹಲಾಲ್ ಮಾಂಸದ ಬಗ್ಗೆ ಕಿರು ಮಾಹಿತಿಯನ್ನು ನೀಡಲಾಗಿದೆ. ಇದನ್ನೂ ಓದಿ: ಯುಗಾದಿ ವೇಳೆ ಹಲಾಲ್ ಮಾಂಸ ಬಹಿಷ್ಕರಿಸಿ – ಹಿಂದೂ ಜನಜಾಗೃತಿ ಸಮಿತಿ ಕರೆ

    ಹಲವು ಮಾಂಸದಂಗಡಿಗಳು ಹಾಗೂ ಮುಸ್ಲಿಂ ಅಂಗಡಿಗಳ ಬ್ಯಾನರ್‍ಗಳಲ್ಲಿ ಹಲಾಲ್ ಪದ ಇರುತ್ತದೆ. ಮಾಂಸಗಳ ಗುಣಮಟ್ಟ ತೋರಿಸಲು ಹಲವು ಕಂಪನಿಗಳು ಹಲಾಲ್ ಕಟ್ ಪದವನ್ನು ಉಪಯೋಗಿಸುತ್ತವೆ. ಆದರೆ ಚೀನಾ ದೇಶದಲ್ಲಿ ಹಲಾಲ್ ಮಾಂಸವನ್ನು ನಿಷೇಧಿಸಿದೆ. ಈ ಹಿನ್ನೆಲೆಯಲ್ಲಿ ಹಲಾಲ್ ಮಾಂಸ, ಹಲಾಲ್ ಕಟ್ ಅಂದರೇನು ಎಂಬ ಪ್ರಶ್ನೆ ಸಹಜವಾಗಿಯೇ ಉದ್ಭವಿಸುತ್ತದೆ. ಇದನ್ನೂ ಓದಿ: ಎಚ್‍ಡಿಡಿ ಪತ್ನಿಗೆ ಐಟಿ ನೋಟಿಸ್

    ಹಲಾಲ್ ಮಾಂಸ ಯಾವುದು?
    ಇಸ್ಲಾಮ್ ಧರ್ಮಬದ್ಧವಾಗಿರುವ ಆಹಾರ ಕ್ರಮವೇ ಹಲಾಲ್. ಇಸ್ಲಾಮ್ ಧರ್ಮದಲ್ಲಿ ಪರಿಶುದ್ಧ ಆಹಾರವೆಲ್ಲವೂ ಹಲಾಲ್ ಎಂದು ಪರಿಗಣಿಸಲಾಗಿದೆ. ಪರಿಶುದ್ಧತೆ ಇಲ್ಲದ ಆಹಾರವು ಇಸ್ಲಾಮ್‍ನಲ್ಲಿ ನಿಷಿದ್ಧ. ಮಾಂಸದ ವಿಚಾರಕ್ಕೆ ಬಂದರೆ ಹಂದಿ, ಮನುಷ್ಯ, ಹುಲಿ, ಸಿಂಹ ಇತ್ಯಾದಿ ಮಾಂಸಗಳು ನಿಷಿದ್ಧವಾಗಿವೆ. ಕಾನೂನುಬದ್ಧವೆನಿಸಿದ ಕುರಿ, ಕೋಳಿ, ಒಂಟೆ, ದನ, ಮೀನು ಇತ್ಯಾದಿ ಪ್ರಾಣಿಗಳ ಮಾಂಸವು ಹಲಾಲ್ ಎನಿಸುತ್ತವೆ. ವಧಿಸುವ ಮೊದಲೇ ಸತ್ತಿದ್ದ ಪ್ರಾಣಿಗಳು ಹಾಗೂ ವಧಿಸುವ ವೇಳೆ ರೋಗ, ಅನಾರೋಗ್ಯದಿಂದ ಬಳಲುತ್ತಿರುವ ಪ್ರಾಣಿಗಳನ್ನು ಮುಸ್ಲಿಮರು ತಿನ್ನುವಂತಿಲ್ಲ.

    ಹಲಾಲ್ ಕಟ್ ಎಂದರೇನು?
    ತಿನ್ನುವ ಪ್ರಾಣಿಗಳನ್ನ ಕೊಲ್ಲುವುದಕ್ಕೂ ಇಸ್ಲಾಮ್‍ನಲ್ಲಿ ನಿರ್ದಿಷ್ಟ ಕ್ರಮ ಮತ್ತು ನಿಯಮಗಳಿವೆ. ಒಂದೊಂದು ಪ್ರಾಣಿಯ ವಧೆಗೂ ಪ್ರತ್ಯೇಕ ನಿಯಮವಿರುತ್ತದೆ. ಒಂದು ಸಾಮಾನ್ಯ ನಿಯಮವೆಂದರೆ ವಧಿಸಲ್ಪಟ್ಟ ಪ್ರಾಣಿಯ ದೇಹದಿಂದ ರಕ್ತವೆಲ್ಲವೂ ಹೊರಬರಬೇಕು. ಸೌದಿಯಲ್ಲಿರುವ ಮೆಕ್ಕಾ ಮಸೀದಿಯತ್ತ ಮುಖ ಮಾಡಿ ಪ್ರಾಣಿಯನ್ನು ವಧಿಸಲಾಗುತ್ತದೆ.

    ವಧಿಸುವ ವ್ಯಕ್ತಿಯು ಅಲ್ಲಾಹುವಿನ ನಾಮೋಚ್ಛಾರ ಮಾಡುತ್ತಾ ವಧಿಸಬೇಕು. ತಲೆಯನ್ನು ಒಡೆಯದೇ ಗಂಟಲು ಸೀಳಿ ಸಾಯಿಸಬೇಕು ಎಂಬಿತ್ಯಾದಿ ನಿಯಮಗಳು ಕುರಾನ್‍ನಲ್ಲಿ ತಿಳಿಸಲಾಗಿದೆ. ಕೋಳಿ ಅಥವಾ ಕುರಿಯನ್ನು ಕಡಿಯುವ ಮುಂಚೆ ಮುಸ್ಲಿಂ ಧರ್ಮದಲ್ಲಿ ಕುರಾನಿನ ಕೆಲ ಸಾಲುಗಳನ್ನು ಉಚ್ಚರಿಸಿ ಕೊಲ್ಲಲಾಗುತ್ತದೆ.

    ಹಿಂದೂ ಸಂಪ್ರದಾಯದಲ್ಲಿ ಪ್ರಾಣಿಗಳನ್ನು ನೇರವಾಗಿಯೇ ವಧಿಸುತ್ತಾರೆ. ಆದರೆ ಮುಸ್ಲಿಂ ಧರ್ಮದಲ್ಲಿ ಕೆಲ ರೀತಿ ರಿವಾಜುಗಳಿವೆ. ಮುಸ್ಲಿಂ ಧರ್ಮಗಳಲ್ಲಿ ಏಡಿಯನ್ನು ಹೆಚ್ಚಾಗಿ ತಿನ್ನಲು ಬಯಸುವುದಿಲ್ಲ. ಏಕೆಂದರೆ ತಲೆ ಇಲ್ಲದ ಪ್ರಾಣಿಗಳನ್ನು ತಿನ್ನುವುದು ಅವರಲ್ಲಿ ಮಹಾ ಪಾಪ ಎಂಬುವ ವಾಡಿಕೆಯಿದೆ. ಮುಸ್ಲಿಂ ಮಾಂಸದಂಗಡಿಗಳಲ್ಲಿ ಪ್ರಾಣಿಯನ್ನು ವಧಿಸುವ ಮೊದಲು ಅದರ ಬಾಯಿಗೆ ನೀರು ಹಾಕುತ್ತಾರೆ. ನಂತರ ಆ ಪ್ರಾಣಿಯ ಕತ್ತನ್ನು ಕತ್ತರಿಸುತ್ತಾರೆ. ಒಂದೊಂದು ಪ್ರಾಣಿಯನ್ನು ಸಾಯಿಸುವ ಕ್ರಮದಲ್ಲಿ ವ್ಯತ್ಯಾಸವಿರುತ್ತದೆ. ಆಯಾ ಪ್ರಾಣಿಗೆ ಅನುಗುಣವಾಗಿ ಈ ನಿಯಮವನ್ನು ಮಾಡಲಾಗಿದೆ.

  • ರಾಯಚೂರಿನಲ್ಲಿ ಮದ್ಯ ಮಾರಾಟ ನಿಷೇಧ

    ರಾಯಚೂರಿನಲ್ಲಿ ಮದ್ಯ ಮಾರಾಟ ನಿಷೇಧ

    ರಾಯಚೂರು: ಬಿಸಿಲ ನಾಡು ರಾಯಚೂರಿನಲ್ಲಿ ಹೋಳಿ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಪರಸ್ಪರ ಬಣ್ಣ ಎರಚಿಕೊಂಡು ಜನ ಸಂಭ್ರಮ ಪಡುತ್ತಿದ್ದಾರೆ. ಬಿರುಬೇಸಿಗೆಯಲ್ಲಿ ಹೋಳಿ ಹಬ್ಬ ಜನರಿಗೆ ತಂಪನೆರೆಯುತ್ತಿದೆ. ವಯಸ್ಸಿನ ಭೇದ ಮರೆತು ಹೋಳಿಯಲ್ಲಿ ಜನ ಮಿಂದೇಳುತ್ತಿದ್ದಾರೆ.

    ಸಂಗೀತ ವಾದ್ಯ, ನೃತ್ಯ ಮಾಡುವ ಮೂಲಕ ಹೋಳಿ ಆಚರಣೆ ಮಾಡಲಾಗುತ್ತಿದೆ. ಕಾಮಣ್ಣನ ದಹನ ಬಳಿಕ ಬೆಳಗ್ಗಿನಿಂದಲೇ ಹೋಳಿ ಆಚರಣೆ ಜೋರಾಗಿದೆ. ಹೋಳಿ ಹಬ್ಬದಲ್ಲಿ ಕಾಮಣ್ಣನ ದಹನ ಹಾಗೂ ಪರಸ್ಪರ ಬಣ್ಣ ಎರಚಾಡುವುದರಿಂದ ಹಾಗೂ ಹಿಜಬ್ ವಿವಾದ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಅಪ್ಪು ಹುಟ್ಟುಹಬ್ಬಕ್ಕೆ ಕನಸಿನ ‘ಗಂಧದಗುಡಿ’ ಫಸ್ಟ್ ಲುಕ್ ರಿಲೀಸ್

    ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಇದನ್ನೂ ಓದಿ: ಆಕಸ್ಮಿಕ ಅಗ್ನಿ ಅವಘಡ – ಲಕ್ಷಾಂತರ ಮೌಲ್ಯದ ಕಬ್ಬು ಬೆಂಕಿಗಾಹುತಿ

  • ಹೋಳಿ ಹಬ್ಬ – ಧಾರವಾಡದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ

    ಹೋಳಿ ಹಬ್ಬ – ಧಾರವಾಡದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ

    ಧಾರವಾಡ: ಜಿಲ್ಲೆಯಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಬರುವ ಹಿತದೃಷ್ಟಿಯಿಂದ ಮಾರ್ಚ್ 17 ರಿಂದ 21 ರವರೆಗೆ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿ ಮದ್ಯಪಾನ ಮತ್ತು ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

    ನಗರದ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರು ಆದೇಶ ಹೊರಡಿಸಿದ್ದಾರೆ. ಮಾರ್ಚ್ 17 ರಿಂದ 20 ರವರೆಗೆ ಧಾರವಾಡ ಗ್ರಾಮೀಣ ತಾಲ್ಲೂಕು, ಹುಬ್ಬಳ್ಳಿ ಗ್ರಾಮೀಣ ತಾಲೂಕು, ನವಲಗುಂದ ತಾಲ್ಲೂಕು, ಅಣ್ಣಿಗೇರಿ ತಾಲ್ಲೂಕು, ಅಳ್ನಾವರ, ಧಾರವಾಡ ತಾಲೂಕಿನ ಮುಳಮುತ್ತಲ ಗ್ರಾಮಗಳಲ್ಲಿ ನಿಷೇಧಿಲಾಗಿದೆ. ಇದನ್ನೂ ಓದಿ: ನಾಯಕರಷ್ಟೇ ನಮಗೂ ಸಮಾನ ಅವಕಾಶ ಬೇಕು: ಕೃತಿ ಸನೋನ್

    ಮಾರ್ಚ್ 16 ರಿಂದ 19 ರವರೆಗೆ ಕುಂದಗೋಳ ತಾಲೂಕು, ಅಳ್ನಾವರ ತಾಲೂಕು, ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಗ್ರಾಮಗಳಾದ ಸುಳ್ಳ ಮತ್ತು ಕಿರೇಸೂರು ಗ್ರಾಮಗಳಲ್ಲಿ, ಮಾರ್ಚ್ 19 ರಿಂದ 22 ರವರೆಗೆ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ಮದ್ಯಪಾನ ಮತ್ತು ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: ಮಿಸ್ ವರ್ಲ್ಡ್ 2021: ಭಾರತೀಯ ಮೂಲದ ಶ್ರೀಸೈನಿ ರನ್ನರ್ ಅಪ್, ಕರೋಲಿನಾ ಬಿಲಾವ್ಸ್ಕಾಗೆ ‘ವಿಶ್ವ ಸುಂದರಿ’ ಕಿರೀಟ

  • ಪ್ಲಾಸ್ಟಿಕ್ ಮಳಿಗೆ ಮೇಲೆ ಅನಿರೀಕ್ಷಿತ ತಪಾಸಣೆ, ದಂಡ

    ಪ್ಲಾಸ್ಟಿಕ್ ಮಳಿಗೆ ಮೇಲೆ ಅನಿರೀಕ್ಷಿತ ತಪಾಸಣೆ, ದಂಡ

    ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದ್ದು, ಮಂಗಳವಾರ ನಗರದಾದ್ಯಂತ ಪ್ಲಾಸ್ಟಿಕ್ ಮಾರಾಟ ಮಳಿಗೆ ಹಾಗೂ ಉತ್ಪಾದನಾ ಘಟಕಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಲಾಗಿದೆ.

    ನಗರದಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಗೆ ಅವಕಾಶವಿಲ್ಲ. ಹೀಗಾಗಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಲ್ಲಿಸುವ ಕಾರ್ಯವನ್ನು ಆಯಾ ವಲಯ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರು ವಲಯವಾರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಪಾಲಿಕೆಯ ಎಂಟೂ ವಲಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುವ ಮಳಿಗೆಗಳಿಗೆ ವಲಯ ಮಾರ್ಷಲ್ ಮೇಲ್ವಿಚಾರಕ, ವಿಭಾಗದ ಮೇಲ್ವಿಚಾರಕ, ಸಕಾಯಕ ಕಾರ್ಯಪಾಲಕ ಇಂಜಿನಿಯರ್, ಕಿರಿಯ ಆರೋಗ್ಯ ನಿರೀಕ್ಷಕ ಹಾಗೂ ಮಾರ್ಷಲ್‍ಗಳ ತಂಡ ಅನಿರೀಕ್ಷಿತ ಭೇಟಿ ನೀಡಿದ್ದಾರೆ. ಒಮ್ಮೆ ಬಳಸುವ ಪ್ಲಾಸ್ಟಿಕ್ ಮಾರಾಟ ಅಥವಾ ಉತ್ಪಾದನೆ ಕಂಡುಬಂದರೆ ಅದನ್ನು ವಶಪಡಿಸಿಕೊಂಡು ದಂಡ ವಿಧಿಸುವ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ಅನಧಿಕೃತ ಬ್ಯಾನರ್, ಫ್ಲೆಕ್ಸ್, ಪೋಸ್ಟರ್ಸ್, ಬಂಟಿಂಗ್ಸ್ ಅಳವಡಿಸುವವರ ವಿರುದ್ಧ FIR

    ಸೊಮವಾರ ದಕ್ಷಿಣ ವಲಯ ಪದ್ಮನಾಭನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಉತ್ಪಾದಿಸುವ ಎರಡು ಘಟಕಗಳಿಗೆ ಅನಿರೀಕ್ಷಿತ ಭೇಟಿ ನೀಡಿದ್ದಾರೆ. ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವುದರ ಜೊತೆಗೆ ದಂಡ ವಿಧಿಸಿದ್ದಾರೆ. ಈ ಪೈಕಿ ಸುಬ್ರಮಣ್ಯಪುರ ಮುಖ್ಯ ರಸ್ತೆಯಲ್ಲಿರುವ ಅಗ್ರಿ ಎಂಟರ್‍ಪ್ರೈಸೆಸ್ ಘಟಕಕ್ಕೆ ಅನಿರೀಕ್ಷಿತ ಭೇಟಿ ನೀಡಿ 200 ಕೆಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ. ಪದ್ಮನಾಭ ನಗರ ವಾರ್ಡ್‍ನ ಗೌಡನಪಾಳ್ಯ ಬಳಿಯಿರುವ ಗ್ರೇಸ್ ಪಾಲಿಮರ್ಸ್ ಘಟಕದಲ್ಲೂ ನಿಷೇಧಿತ ಪ್ಲಾಸ್ಟಿಕ್ ಬಳಕೆ ಕಂಡು ಬಂದಿದ್ದು 25 ಸಾವಿರ ರೂ. ದಂಡ ವಿಧಿಸಲಾಗಿದೆ. ಇದನ್ನೂ ಓದಿ: ಬೇಟೆಯಾಡಿ ಮಾಂಸ ಬೇಯಿಸುತ್ತಿದ್ದ ಬೇಟೆಗಾರರು-ಬಾಡು ಸವಿಯುವ ಮುನ್ನವೇ ಅಂದರ್!

    ಮಾರ್ಷಲ್ ಗಳಿಂದ ತಪಾಸಣೆ ಹಾಗೂ ಜಾಗೃತಿ:
    ನಗರದಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಕೆ ಬದಲು ಪುನರ್ ಬಳಕೆ ಮಾಡಬಹುದಾದ ಬಟ್ಟೆ ಬ್ಯಾಗ್, ನಾರಿನ ಬ್ಯಾಗ್, ಪೇಪರ್‍ನಿಂದ ತಯಾರಿಸಿದ ಕವರ್ ಬಳಸುವ ಬಗ್ಗೆ ಮಾರಾಟಗಾರರು ಹಾಗೂ ನಾಗರೀಕರಲ್ಲಿ ಜಾಗೃತಿ ಮೂಡಿಸಬೇಕು. ನಗರದಲ್ಲಿ ಯಾರಾದರೂ ಒಮ್ಮೆ ಬಳಸುವ ಪ್ಲಾಸಿಕ್ ಬಳಕೆ ಮಾಡುವುದು ಕಂಡುಬಂದಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳಲು ಎಲ್ಲಾ ವಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

  • ಮಹಿಳೆಯರ ಫೋಟೋ ಹರಾಜು ಹಾಕುತ್ತಿದ್ದ ಆನ್‌ಲೈನ್ ಆ್ಯಪ್ ನಿಷೇಧ

    ಮಹಿಳೆಯರ ಫೋಟೋ ಹರಾಜು ಹಾಕುತ್ತಿದ್ದ ಆನ್‌ಲೈನ್ ಆ್ಯಪ್ ನಿಷೇಧ

    ನವದೆಹಲಿ: ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅಶ್ಲೀಲವಾಗಿ ಚಿತ್ರಿಸಿ ಅವರನ್ನು ಹರಾಜು ಹಾಕುತ್ತಿದ್ದ ಬುಲ್ಲಿ ಬೈ ಆ್ಯಪ್‌ನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.

    ಸಮುದಾಯದ ಪ್ರಮುಖರು ಶನಿವಾರ ಸ್ಕ್ರೀನ್ ಶಾಟ್ ಸಹಿತ ಈ ಆಘಾತಕಾರಿ ಬೆಳವಣಿಗೆ ಬಗ್ಗೆ ಟ್ವೀಟ್ ಮಾಡಿದ್ದರು. ಶಿವಸೇನೆ ರಾಜ್ಯಸಭಾ ಸದಸ್ಯೆ ಪ್ರಿಯಾಂಕ ಚತುರ್ವೇದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಸದ ಶಶಿ ತರೂರ್ ಸೇರಿದಂತೆ ಪ್ರಮುಖರು ಈ ಬಗ್ಗೆ ಕಟುವಾಗಿ ಟೀಕಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಕೂಡಲೇ ಸ್ಪಂದಿಸಿದ ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ಆ್ಯಪ್‌ನ್ನು ನಿಷೇಧಿಸುವ ಕುರಿತು ಕ್ರಮ ಕೈಗೊಂಡಿದ್ದಾರೆ.

    ಸಾವಿರಾರು ಮಹಿಳೆಯರ ಫೋಟೋಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಿದ ಬುಲ್ಲಿಬೈ ಎಂಬ ಆ್ಯಪ್‌ನ್ನು ನಿಷೇಧಿಸಲಾಗಿದೆ. ಬುಲ್ಲಿ ಆ್ಯಪ್ ಪೋರ್ಟಲ್‌ನ್ನು ಗಿಟ್‌ಹಬ್ ತನ್ನ ವೇದಿಕೆಯಿಂದ ಬ್ಲಾಕ್ ಮಾಡಿದೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದೂ ದೇವಾಲಯಗಳು ಸ್ವತಂತ್ರವಾದ್ರೆ ಒಂದಿಷ್ಟು ಅಭಿವೃದ್ಧಿಗೊಳ್ಳುತ್ತದೆ: ಕೋಟ ಶ್ರೀನಿವಾಸ ಪೂಜಾರಿ

    ಈ ಬಗ್ಗೆ ಮುಂಬೈ ಹಾಗೂ ದೆಹಲಿ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ದೆಹಲಿ ಪೊಲೀಸರು ಆ್ಯಪ್ ವಿರುದ್ಧ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಪಾದಯಾತ್ರೆ ಕಾಂಗ್ರೆಸ್ಸಿನ ಅತ್ಯಂತ ಹೀನಾಯ ರಾಜಕಾರಣ: ಕಟೀಲ್

    ಗಿಟ್ ಹಬ್ ಆ್ಯಪ್ ಮೂಲಕ ಮುಸ್ಲಿಂ ಹೆಣ್ಣುಮಕ್ಕಳ ಫೋಟೋವನ್ನು ಹರಾಜಿಗೆ ಮಾರಾಟ ನಡೆಯುತ್ತಿತ್ತು. ಕಳೆದ ವರ್ಷ ಸುಲ್ಲಿ ಡೀಲ್ಸ್ ಹೆಸರಿನಲ್ಲಿ ಇದೇ ರೀತಿ ಮುಸ್ಲಿಂ ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರನ್ನು ಗುರಿಯಾಗಿಸಿ ಅವರನ್ನು ಹರಾಜಿಗೆ ಇಡುವ ರೀತಿ ಬಿಂಬಿಸುವ ವೆಬ್ ಪೋರ್ಟಲ್ ಕಾಣಿಸಿಕೊಂಡಿತ್ತು. ಮಹಿಳೆಯರ ಸಾಮಾಜಿಕ ಜಾಲತಾಣದಲ್ಲಿರುವ ಫೋಟೋವನ್ನು ತೆಗೆದುಕೊಂಡು ಈ ಕೃತ್ಯ ಮಾಡಲಾಗಿದೆ.

  • ಸೆಪ್ಟೆಂಬರ್‌ನಲ್ಲಿ 22 ಲಕ್ಷ ಭಾರತೀಯರ ಖಾತೆಗಳನ್ನು ನಿಷೇಧಿಸಿದ ವಾಟ್ಸಪ್‌

    ನವದೆಹಲಿ: 2.2 ಮಿಲಿಯನ್‌ಗಿಂತಲೂ (22 ಲಕ್ಷ) ಹೆಚ್ಚು ಭಾರತೀಯರ ಖಾತೆಗಳನ್ನು ವಾಟ್ಸಪ್‌ ನಿಷೇಧಿಸಿದೆ. ಸೆಪ್ಟೆಂಬರ್‌ನಲ್ಲಿ ಮೆಸೇಜಿಂಗ್‌ ಪ್ಲಾಟ್‌ಫಾರ್ಮ್‌ನಿಂದ 560 ಕುಂದುಕೊರತೆ ವರದಿಗಳನ್ನು ಸ್ವೀಕರಿಸಲಾಗಿದೆ ಎಂದು ಅದರ ವರದಿ ತಿಳಿಸಿದೆ.

    whatsapp

    ವಾಟ್ಸಪ್‌ ಈಚೆಗೆ ಬಿಡುಗಡೆ ಮಾಡಿದ ವರದಿಯಲ್ಲಿ, ಸೆಪ್ಟೆಂಬರ್‌ನಲ್ಲಿ 2,209,000 ಭಾರತೀಯರ ಖಾತೆಗಳನ್ನು ತನ್ನ ವೇದಿಕೆಯಿಂದ ನಿಷೇಧಿಸಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅರೆಸ್ಟ್‌

    ಭಾರತೀಯ ಖಾತೆಯನ್ನು +91 ಫೋನ್‌ ಸಂಖ್ಯೆಯ ಮೂಲಕ ಗುರುತಿಸಲಾಗಿದೆ ಎಂದು ವಾಟ್ಸಪ್‌ ತಿಳಿಸಿದೆ.

    “ನಿಂದನೆಯನ್ನು ತಡೆಗಟ್ಟುವಲ್ಲಿ ವಾಟ್ಸಪ್‌ ಉದ್ಯಮದ ಮುಂಚೂಣಿಯಲ್ಲಿದೆ. ನಾವು ಕೃತಕ ಬುದ್ದಿಮತ್ತೆ ಮತ್ತು ಇತರೆ ಅತ್ಯಾಧುನಿಕ ತಂತ್ರಜ್ಞಾನ, ದತ್ತಾಂಶ ವಿಜ್ಞಾನಿಗಳು ಮತ್ತು ತಜ್ಞರು ಹಾಗೂ ಇತರೆ ಪ್ರಕ್ರಿಯೆಗಳಲ್ಲಿ ಸತತವಾಗಿ ಹೂಡಿಕೆ ಮಾಡಿದ್ದೇವೆ. ವಾಟ್ಸಪ್‌ ವೇದಿಕೆಯಲ್ಲಿ ಬಳಕೆದಾರರನ್ನು ಸುರಕ್ಷಿತವಾಗಿರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ವಾಟ್ಸಪ್‌ ವಕ್ತಾರ ಹೇಳಿದ್ದಾರೆ. ಇದನ್ನೂ ಓದಿ: ಅಶ್ಲೀಲ ಸಿನಿಮಾಗಳ ವಿವಾದದ ಬಳಿಕ ಟ್ವಿಟ್ಟರ್, ಇನ್‍ಸ್ಟಾ ಡಿಲೀಟ್ ಮಾಡಿದ ರಾಜ್ ಕುಂದ್ರಾ

    ಫೇಸ್‌ಬುಕ್‌ ಒಡೆತನದ ಕಂಪೆನಿಯು ಶೇ. 95ಕ್ಕಿಂತ ಹೆಚ್ಚು ನಿಷೇಧಕ್ಕೆ ಒಳಪಟ್ಟ ಸ್ವಯಂಚಾಲಿತ ಅಥವಾ ಬಲ್ಕ್‌ ಸಂದೇಶಗಳು ಅನಧಿಕೃತದಿಂದ ಕೂಡಿದ್ದವು ಎಂದು ಈ ಹಿಂದೆ ಹೇಳುತ್ತು. ಈ ಹಿನ್ನೆಲೆಯಲ್ಲಿ ವಾಟ್ಸಪ್‌ ತನ್ನ ವೇದಿಕೆಯಲ್ಲಿ ನಿಂದನೆ ತಡೆಗಟ್ಟಲು ತಾನು ನಿಷೇಧಿಸುತ್ತಿರುವ ಜಾಗತಿಕ ಸರಾಸರಿ ಖಾತೆಗಳ ಸಂಖ್ಯೆಯು ತಿಂಗಳಿಗೆ ಸುಮಾರು 8 ಮಿಲಿಯನ್‌ ಎಂದು ವಾಟ್ಸಪ್‌ ಹೇಳಿದೆ.

  • ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ

    ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚು ಸುರಿಯುತ್ತಿದ್ದು, ಮಳೆಗಾಲದ ಹಿನ್ನೆಲೆ ಮುಂದಿನ ದಿನಗಳಲ್ಲಿ ವರುಣನ ಅಬ್ಬರ ಹೆಚ್ಚಾದರೆ ನದಿ ಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ ಮತ್ತು ಇತರೆ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ನಿಷೇಧಿಸಲಾಗಿದೆ. ಮಳೆಗಾಲ ಮುಕ್ತಾಯವಾಗುವವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ.

    ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆ. ಹಾಗೆಯೇ ಅಧಿಕ ಭಾರ ತುಂಬಿದ ಸರಕು ಸಾಗಾಣೆಯ ಭಾರೀ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಕುಸಿತದಿಂದಾಗಿ ಹಾಗೂ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತದೆ. ಹೀಗಾಗಿ ಜೂನ್ 23 ರಿಂದ ಆಗಸ್ಟ್ 16ರ ವರೆಗೆ ಭಾರೀ ವಾಹನಗಳಿಗೆ ನಿಷೇಧ ಹೇರಲಾಗಿದೆ.

    ಸಾರ್ವಜನಿಕರ ಜೀವ ಮತ್ತು ಆಸ್ತಿಗಳ ಹಿತದೃಷ್ಟಿಯಿಂದ ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್‍ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಬಂಧಿಸಲು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶಿಸಿದ್ದಾರೆ.

    ಹೆಚ್ಚಿನ ಮಳೆಯಾಗುವ ಕುರಿತು ರಾಜ್ಯ ಹವಾಮಾನ ಇಲಾಖೆ 2-3 ದಿನ ಮುಂಚಿತವಾಗಿ ಆಗಿಂದಾಗ್ಗೆ ವರದಿಯನ್ನು ನೀಡುತ್ತಿದೆ. ಇದನ್ನು ಅವಲೋಕಿಸಿ ಮತ್ತು ಕಳೆದ 3 ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ನೆರೆ ಹಾವಳಿಯಿಂದಾಗಿ ಹಲವಾರು ರಸ್ತೆಗಳು ಹಾಳಾಗಿದೆ. ಈ ರಸ್ತೆಗಳನ್ನು ಈಗಾಗಲೇ ಮಳೆಹಾನಿ ದುರಸ್ತಿಯಡಿ ಸರಿಪಡಿಸಲಾಗುತ್ತಿದ್ದು, ಪ್ರಸ್ತುತ ವರ್ಷದ ಮಳೆಗಾಲ ಸಹ ಪ್ರಾರಂಭವಾಗಿದೆ. ಇದರಿಂದ ಮುಂದೆ ಸಂಭವಿಸಬಹುದಾದ ಅಪಾಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ, ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಭಾರೀ ಸರಕು ವಾಹನಗಳ ಸಂಚಾರವನ್ನು ನಿಷೇಧಿಸುವುದು ಸೂಕ್ತವಾಗಿದೆ. ಈ ರಸ್ತೆಗಳಲ್ಲಿ ಲಘು ವಾಹನಗಳು, ಬಸ್‍ಗಳು ಹಾಗೂ 10 ಟನ್ ತೂಕದೊಳಗಿನ ಸರಕು ವಾಹನಗಳನ್ನು ಹೊರತುಪಡಿಸಿ ಉಳಿದ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸುವುದು ಸೂಕ್ತವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

    ಈ ಎಲ್ಲ ಉಲ್ಲೇಖಗಳಲ್ಲಿನ ವರದಿ, ನಡವಳಿ ಹಾಗೂ ಪ್ರಕೃತಿ ವಿಕೋಪ ನಿರ್ವಹಣಾ ಪ್ರಾಧಿಕಾರದ ಸಭೆಯ ತೀರ್ಮಾನವನ್ನು ಪರಿಶೀಲಿಸಿ, ಕೊಡಗು ಜಿಲೆಯಲ್ಲಿ 2018-19, 2019-20 ಮತ್ತು 2020-21 ನೇ ಸಾಲಿನಲ್ಲಿ ಆದ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ. ಕೊಡಗು ಜಿಲ್ಲೆಯ ರಸ್ತೆಗಳು ಭಾರೀ ತಿರುವು ಹಾಗೂ ಏರಿಳಿತದಿಂದ ಕೂಡಿವೆ. ಪ್ರಸ್ತುತ ಮುಂಗಾರು ಪ್ರಾರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂ ಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿದೆ ಎಂದು ಡಿಸಿ ತಿಳಿಸಿದ್ದಾರೆ.

    ಕರ್ನಾಟಕ ಪೊಲೀಸ್ ಕಾಯ್ದೆ 1963ರ ವಿಧಿ 31, ಪ್ರಕೃತಿ ವಿಕೋಪ ನಿರ್ವಹಣಾ ಕಾಯ್ದೆ 2005ರ ಕಲಂ 33, ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ (5), ದಂಡಪ್ರಕ್ರಿಯಾ ಸಂಹಿತೆ 1973ರ ಕಲಂ 144ರ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಇದೇ ಜೂನ್ 23 ರಿಂದ ಆಗಸ್ಟ್ 16 ವರೆಗೆ ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.

  • ಮತ್ತೊಮ್ಮೆ ತಪ್ಪು ಮಾಡಿದ್ರೆ ಪಂದ್ಯದಿಂದ ಕೊಹ್ಲಿ ಬ್ಯಾನ್ ಸಾಧ್ಯತೆ

    ಮತ್ತೊಮ್ಮೆ ತಪ್ಪು ಮಾಡಿದ್ರೆ ಪಂದ್ಯದಿಂದ ಕೊಹ್ಲಿ ಬ್ಯಾನ್ ಸಾಧ್ಯತೆ

    ಚೆನ್ನೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಐಪಿಎಲ್ ಶಿಸ್ತು ಉಲ್ಲಂಘಿಸಿದ್ದಾರೆ. ಮತ್ತೊಮ್ಮೆ ಅಶಿಸ್ತು ಪ್ರದರ್ಶಿಸಿದರೆ ಪಂದ್ಯದಿಂದ ನಿಷೇಧ ಶಿಕ್ಷೆ ಅನುಭವಿಸುವ ಸಾಧ್ಯತೆಯಿದೆ.

    ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯದಲ್ಲಿ 33 ರನ್ ಗಳಿಸಿ ಕೊಹ್ಲಿ ಔಟಾದರು. ಈ ವೇಳೆ ಸಿಟ್ಟಿನಲ್ಲಿ ಪೆವಿಲಿಯನ್ ಕಡೆ ನಡೆದ ಕೊಹ್ಲಿ ಬೌಂಡರಿ ಗೆರೆ ಬಳಿಯ ಹಗ್ಗಕ್ಕೆ ಹೊಡೆದು ಬಳಿಕ ಆರ್‌ಸಿಬಿ ಡಗೌಟ್‍ನಲ್ಲಿದ್ದ ಚಯರ್ ಮೇಲೆ ಬ್ಯಾಟ್ ಬೀಸಿದ್ದರು.

    ಕೊಹ್ಲಿ ಈ ವರ್ತನೆ ಐಪಿಎಲ್ ನೀತಿ ಸಂಹಿತೆಯ 2.2ರ ಲೆವೆಲ್ 1 ಉಲ್ಲಂಘನೆಯಾಗಿದೆ. ಲೆವೆಲ್ 1 ಉಲ್ಲಂಘನೆಯಾಗಿರುವ ಕಾರಣ ಸದ್ಯಕ್ಕೆ ಕೊಹ್ಲಿ ಪಾರಾಗಿದ್ದರೂ ಮತ್ತೊಮ್ಮೆ ಮರುಕಳಿಸಿದರೆ ಪಂದ್ಯದ ಶುಲ್ಕದ ಶೇ.50 ರಿಂದ ಶೇ.100 ರಷ್ಟು ದಂಡ ಅಥವಾ 2 ರಿಂದ 4 ಪಂದ್ಯಕ್ಕೆ ನಿಷೇಧ ಹೇರಬಹುದಾಗಿದೆ.

    ಕಳೆದ 4 ವರ್ಷಗಳಿಂದ ಕೊಹ್ಲಿ ಹೈದರಾಬಾದ್ ವಿರುದ್ಧ ರನ್ ಬರ ಎದುರಿಸುತ್ತಿದ್ದು ಯಾವುದೇ ಅರ್ಧಶತಕ ಹೊಡೆದಿಲ್ಲ. ಹೈದರಾಬಾದ್ ವಿರುದ್ಧದ ಕಳೆದ 6 ಇನ್ನಿಂಗ್ಸ್‍ನಲ್ಲಿ ಕೊಹ್ಲಿ 12, 3, 16, 14, 7, 6 ರನ್ ಹೊಡೆದಿದ್ದಾರೆ.