Tag: ನಿಹಾರಿಕಾ

  • ಮೆಗಾ ಫ್ಯಾಮಿಲಿ ವಿರುದ್ಧ ಗಟ್ಟಿ ನಿರ್ಧಾರ ಕೈಗೊಂಡ ನಿಹಾರಿಕಾ

    ಮೆಗಾ ಫ್ಯಾಮಿಲಿ ವಿರುದ್ಧ ಗಟ್ಟಿ ನಿರ್ಧಾರ ಕೈಗೊಂಡ ನಿಹಾರಿಕಾ

    ಟಾಲಿವುಡ್ ನಟಿ, ನಿರ್ಮಾಪಕಿ ನಿಹಾರಿಕಾ ಕೊನಿಡೆಲಾ (Niharika Konidela) ಅವರು ಇತ್ತೀಚಿಗೆ ತಮ್ಮ ಡಿವೋರ್ಸ್ (Divorce) ಅಧಿಕೃತವಾಗಿ ಅನೌನ್ಸ್ ಮಾಡಿದ್ದರು. ಈಗ ಸಿಂಗಲ್ ಲೈಫ್ ಲೀಡ್ ಮಾಡ್ತಿರೋ ನಟಿ, ತಮ್ಮ ಬದುಕಿನ ಬಗ್ಗೆ ಗಟ್ಟಿ ನಿರ್ಧಾರವೊಂದನ್ನ ಕೈಗೊಂಡಿದ್ದಾರೆ. ನಿಹಾರಿಕಾ ನಡೆ ಮೆಗಾ ಫ್ಯಾಮಿಲಿ ಖುಷಿ ಇಲ್ವಂತೆ. ಕುಟುಂಬದ ವಿರೋದಧ ನಡುವೆಯೂ ನಿಹಾರಿಕಾ ಹೊಸ ಹೆಜ್ಜೆ ಇಡ್ತಿದ್ದಾರೆ. ಏನದು? ಇಲ್ಲಿದೆ ಮಾಹಿತಿ.

    ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಮನೆ ಮಗಳು ನಿಹಾರಿಕಾ ಅವರು ಚೈತನ್ಯ ಜೊತೆಗಿನ 2 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ್ದರು. ಈಗ ಮತ್ತೆ ಸಿನಿಮಾ, ನಟನೆ, ನಿರ್ಮಾಣ ಅಂತಾ ನಿಹಾರಿಕಾ ಕೆರಿಯರ್ ಕಡೆ ಗಮನ ಕೊಡಲು ನಿರ್ಧರಿಸಿದ್ದಾರೆ. ಮದುವೆಗೂ ಮುನ್ನ ಒಕ ಮನಸ್ಸು ಎಂಬ ಸಿನಿಮಾ ಮೂಲಕ ನಾಯಕಿಯಾಗಿ ನಿಹಾರಿಕಾ ಎಂಟ್ರಿ ಕೊಟ್ಟಿದ್ದರು. ಇದನ್ನೂ ಓದಿ:ಕಂಗನಾ ರಣಾವತ್ ಹಿಂದೆ ಬಿದ್ದಿದ್ದಾನಂತೆ ಹೆಣ್ಣುಬಾಕ ನಟ

    ‘ಸೂರ್ಯಕಾಂತಂ’ (Suryakantam) ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರೂ ಕೂಡ ಅವರಿಗೆ ಹೇಳಿಕೊಳ್ಳುವಂತಹ ಬ್ರೇಕ್ ಸಿಗಲಿಲ್ಲ. ಈಗ ಮತ್ತೆ ನಾಯಕಿಯಾಗಿ ಲೈಮ್‌ಲೈಟ್‌ನಲ್ಲಿ ಮಿಂಚಲು ನಿಹಾರಿಕಾ ಮನಸ್ಸು ಮಾಡಿದ್ದಾರಂತೆ. ನಿರ್ಮಾಪಕಿಯಾಗಿ ಗುರುತಿಸಿಕೊಳ್ತಿರೋ ಮೆಗಾ ಕುಟುಂಬ ಕುಡಿ ಈಗ ಮತ್ತೆ ಹೀರೋಯಿನ್ ಆಗಿ ಮಿಂಚೋಕೆ ರೆಡಿಯಾಗಿದ್ದಾರೆ.

    ಈ ನಿಟ್ಟಿನಲ್ಲಿ ಅವರು ಯುವ ನಿರ್ದೇಶಕರೊಬ್ಬರ ಜೊತೆ ಸಿನಿಮಾ ಮಾಡಲು ರೆಡಿಯಾಗಿದ್ದಾರೆ. ಈಗಾಗಲೆ ಕಥೆ ಸಿದ್ಧಗೊಂಡಿದ್ದರೂ ನಿಹಾರಿಕಾ ನಾಯಕಿಯಾಗಿ ಎಂಟ್ರಿ ಕೊಡಲು ಮೆಗಾ ಫ್ಯಾಮಿಲಿ ಒಪ್ಪುತ್ತಿಲ್ಲ ಎಂಬುದು ಒಳಗಿನ ಮಾತು. ಸಿನಿಮಾ ವಿಚಾರದಲ್ಲಿ ನಿಹಾರಿಕಾ ನಿರ್ಧಾರಕ್ಕೆ ಮೆಗಾ ಫ್ಯಾಮಿಲಿ ನೋ ಹೇಳುತ್ತಿದೆ. ಆದರೆ ನಿಹಾರಿಕಾ ಮತ್ತೆ ನಾಯಕಿಯಾಗಿ ಸಿನಿಮಾಗೆ ಬರುವುದು ಮೆಗಾ ಫ್ಯಾಮಿಲಿಗೆ ಇಷ್ಟವಿಲ್ಲ ಎಂಬ ಪ್ರಚಾರ ನಡೆಯುತ್ತಿದೆ. ನಟಿಯ ಕುಟುಂಬ ನೋ ಅಂದ್ರು ಕೂಡ ನಿಹಾರಿಕಾ ಈ ವಿಚಾರದಲ್ಲಿ ಸಖತ್ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರ ಮಾತಿಗೆ ಸೊಪ್ಪು ಹಾಕದೇ ತನ್ನದೇ ನಿರ್ಧಾರ ಅಂತಿಮ ಅಂತಾ ನಟಿ ಹಠ ಮಾಡ್ತಿದ್ದಾರೆ ಎಂದು ಗುಸು ಗುಸು ಸುದ್ದಿ ಟಾಲಿವುಡ್ ಅಂಗಳದಲ್ಲಿ ಸದ್ದು ಮಾಡ್ತಿದೆ. ಇದು ನಿಜಾನಾ? ಅಥವಾ ಗಲ್ಲಿ ಗಾಸಿಪ್‌ ಅಂತಾ ನಟಿ ಸ್ಪಷ್ಟನೆ ನೀಡುವವರೆಗೂ ಕಾಯಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತೆಲುಗಿನ ಮತ್ತೊಬ್ಬ ನಟಿಯ ದಾಂಪತ್ಯದಲ್ಲಿ ಬಿರುಕು- ಪತಿ ಜೊತೆ ಸ್ವಾತಿ ರೆಡ್ಡಿ ಡಿವೋರ್ಸ್?

    ತೆಲುಗಿನ ಮತ್ತೊಬ್ಬ ನಟಿಯ ದಾಂಪತ್ಯದಲ್ಲಿ ಬಿರುಕು- ಪತಿ ಜೊತೆ ಸ್ವಾತಿ ರೆಡ್ಡಿ ಡಿವೋರ್ಸ್?

    ಣ್ಣದ ಲೋಕದಲ್ಲಿ ಲವ್, ಬ್ರೇಕಪ್, ಸೆಕ್ಸ್, ಡಿವೋರ್ಸ್ ಎಲ್ಲಾ ಕಾಮನ್ ಆಗಿದೆ. ಟಾಲಿವುಡ್‌ನ ಸ್ಟಾರ್ ನಟಿ ಸಮಂತಾ, ನಿಹಾರಿಕಾ ಡಿವೋರ್ಸ್ ಪಡೆದುಕೊಳ್ಳುವ ಮೂಲಕ ಶಾಕ್ ಕೊಟ್ಟಿದ್ದರು. ಈಗ ತೆಲುಗಿನ ನಟಿ ಸ್ವಾತಿ ರೆಡ್ಡಿ(Swathi Reddy), ದಾಂಪತ್ಯದಲ್ಲಿ ಬಿರುಕಾಗಿದೆ ಎಂಬ ಸುದ್ದಿಯಿದೆ. ಇವರು ಕೂಡ ಸಮಂತಾ(Samantha), ನಿಹಾರಿಕಾ(Niharika) ಹಾಗೆಯೇ ಡಿವೋರ್ಸ್ ಪಡೆಯುತ್ತಿದ್ದಾರೆ ಎಂದು ಟಾಲಿವುಡ್‌ನಲ್ಲಿ ಫುಲ್ ಟಾಕ್ ಆಗುತ್ತಿದೆ.

    2015ರಲ್ಲಿ ‘ಡೆಂಜರ್’ (Danger) ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಟಿ ಸ್ವಾತಿ ರೆಡ್ಡಿ (Swathi Reddy) ಅವರು ಸಾಲು ಸಾಲಾಗಿ ತೆಲುಗು, ತಮಿಳು, ಮಲಯಾಳಂ ಸಿನಿಮಾದಲ್ಲಿ ನಟಿಸಿದ್ರು. ಕಾರ್ತಿಕೇಯ, ತ್ರಿಪುರ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನ ನಟಿ ನೀಡಿದ್ದಾರೆ. ಡಿಮ್ಯಾಂಡ್ ಇರುವಾಗಲೇ ಉದ್ಯಮಿ ವಿಕಾಸ್ ವಾಸು (Vikas Vasu) ಜೊತೆ ಸ್ವಾತಿ ರೆಡ್ಡಿ ಮದುವೆಯಾದರು. ಪ್ರೀತಿಸಿದ ಹುಡುಗ ವಿಕಾಸ್ ಜೊತೆ 2018ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈಗ ಇಬ್ಬರ ನಡುವೆ ಸಂಬಂಧ ಸರಿಯಿಲ್ಲ ಎಂದು ಹೇಳಲಾಗುತ್ತಿದೆ.

    ಸಮಂತಾ, ನಿಹಾರಿಕಾ ಡಿವೋರ್ಸ್ ಪ್ಯಾಟರ್ನ್ ಅಂತೆಯೇ ಸ್ವಾತಿ ರೆಡ್ಡಿ ಹಾಗೇ ಮಾಡ್ತಿದ್ದಾರೆ. ಸ್ಯಾಮ್ ಮತ್ತು ನಿಹಾರಿಕಾ ದಾರಿಯನ್ನೇ ಸ್ವಾತಿ ರೆಡ್ಡಿ ಕೂಡ ಹಿಡಿದ್ರಾ ಎಂಬ ಅನುಮಾನ ಶುರುವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಪತಿ ವಿಕಾಸ್ ಜೊತೆಗಿನ ಫೋಟೋವನ್ನ ನಟಿ ಡಿಲೀಟ್ ಮಾಡಿದ್ದಾರೆ. ಸಮಂತಾ- ನಿಹಾರಿಕಾ ಕೂಡ ಹೀಗೆ ಮಾಡಿದ್ದರು. ಕೆಲ ತಿಂಗಳುಗಳ ನಂತರ ಡಿವೋರ್ಸ್ ಬಗ್ಗೆ ಅಧಿಕೃತವಾಗಿ ಹೇಳಿಕೊಂಡಿದ್ದರು. ಇದನ್ನೂ ಓದಿ:ಸುದೀಪ್-ಕುಮಾರ್ ವಿವಾದ: ಇಂದು ರವಿಚಂದ್ರನ್ ಎಂಟ್ರಿ

    ಅವರಂತೆಯೇ ಸ್ವಾತಿ ಮಾಡಿರೋದು ಹಲವು ಅನುಮಾನಗಳಿಗೆ ದಾರಿ ಮಾಡಿ ಕೊಟ್ಟಿದೆ. ಪತಿ ಜೊತೆಗಿನ ಫೋಟೋವನ್ನ ಸ್ವಾತಿ ಡಿಲೀಟ್ ಮಾಡಿರೋ ಬೆನ್ನಲ್ಲೇ ಡಿವೋರ್ಸ್ (Divorce) ಸುದ್ದಿಗೆ ಮತ್ತಷ್ಟು ತುಪ್ಪ ಸುರಿದಂತೆ ಆಗಿದೆ. ಅಷ್ಟಕ್ಕೂ ಇದು ನಿಜಾನಾ? ಎಂಬುದನ್ನ ನಟಿ ರಿಯಾಕ್ಟ್ ಮಾಡುವವರೆಗೂ ಕಾಯಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕ್ಲಬ್, ಪಬ್ಬು ಸುತ್ತಾಟ ನಿಹಾರಿಕಾಗೆ ಮುಳುವಾಯ್ತಾ?: ಮಾವನ ಗುರುತರ ಆರೋಪ

    ಕ್ಲಬ್, ಪಬ್ಬು ಸುತ್ತಾಟ ನಿಹಾರಿಕಾಗೆ ಮುಳುವಾಯ್ತಾ?: ಮಾವನ ಗುರುತರ ಆರೋಪ

    ಟಿ, ಮೆಗಾಸ್ಟಾರ್ ಮನೆಮಗಳು ನಿಹಾರಿಕಾ ಕೊನಿಡೆಲಾ (Niharika) -ಚೈತನ್ಯ ಡಿವೋರ್ಸ್ ಅವರ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿತ್ತು. ಚಂದಾಗಿದ್ದ ಈ ಜೋಡಿ ಯಾಕೆ ದೂರವಾದರು ಎನ್ನುವ ಪ್ರಶ್ನೆಯನ್ನು ಹಲವರು ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಚೈತನ್ಯ ಅವರ ತಂದೆಯು ಹೇಳಿದ್ದಾರೆ ಎನ್ನಲಾದ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಚೈತನ್ಯ ತಂದೆ ಪ್ರಭಾಕರ್ ರಾವ್ (Prabhakar Rao) ಈ ಕುರಿತು ತಮ್ಮ ಆಪ್ತರ ಮುಂದೆ ಹೇಳಿಕೊಂಡಿದ್ದಾರೆ ಎನ್ನಲಾದ ಮಾತುಗಳು ಅಚ್ಚರಿ ಮೂಡಿಸಿವೆ.

    ‘ನಮ್ಮ ಕುಟುಂಬದ ಬಗ್ಗೆ ನಿಹಾರಿಕಾಗೆ ಗೌರವವೇ ಇರಲಿಲ್ಲ. ಕ್ಲಬ್ಬು, ಪಬ್ಬು ಅಂತ ಸುತ್ತಾಡೋದು ಬಿಟ್ಟರೆ, ಆಕೆಗೆ ಕುಟುಂಬದ ಬಗ್ಗೆ ಕಾಳಜಿ ಇರಲಿಲ್ಲ. ಪತಿಯೊಂದಿಗೆ ಜೀವನ ಕಳೆಯುವಂತಹ ಉತ್ಸಾಹವೂ ಆಕೆಗೆ ಇರಲಿಲ್ಲ. ಆದರೂ, ನಾವು ಸಹಿಸಿಕೊಂಡಿದ್ದೆವು. ಅತಿರೇಕವಾದಾಗ ದೂರ ಆಗುವುದಕ್ಕೆ ನಿರ್ಧಾರ ಮಾಡಿದ್ದು. ಆದರೆ, ಮೆಗಾಸ್ಟಾರ್ ಕುಟುಂಬದವರು ನಮ್ಮ ಮೇಲೆ ಗೂಬೆ ಕೂರಿಸುತ್ತಿರುವುದು ನೋವು ತಂದಿದೆ’ ಎಂದು ಆಪ್ತರ ಮುಂದೆ ಪ್ರಭಾಕರ್ ರಾವ್ ಹೇಳಿಕೊಂಡಿದ್ದಾರಂತೆ. ಈ ಸುದ್ದಿ ತೆಲುಗು ಚಿತ್ರೋದ್ಯಮದಲ್ಲಿ ಭಾರೀ ಸದ್ದು ಮಾಡುತ್ತಿದೆ.

    ಮೆಗಾಸ್ಟಾರ್ ಮನೆಯ ಮುದ್ದಿನ ಮಗಳು‌ ನಿಹಾರಿಕಾ ಅವರ ಮದುವೆಯನ್ನ ರಾಜಸ್ಥಾನದಲ್ಲಿ ಅದ್ದೂರಿಯಾಗಿ ಮಾಡಿಕೊಟ್ಟಿದ್ದರು. ಹಲವು ವರ್ಷಗಳ ಪ್ರೀತಿ, ಎರಡೂವರೆ ವರ್ಷದ ದಾಂಪತ್ಯಕ್ಕೆ ಬ್ರೇಕ್‌ ಬಿದ್ದಿದೆ. ನಿಹಾರಿಕಾ- ಚೈತನ್ಯ (Chaitanya) ಇಬ್ಬರು ಡಿವೋರ್ಸ್ (Divorce) ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಾನು- ಚೈತನ್ಯ ಬೇರೆಯಾಗಬೇಕು ಎಂದು ನಿರ್ಧರಿಸಿದ್ದೇವೆ. ಇಂತಹ ಕಠಿಣ ಸಂದರ್ಭದಲ್ಲಿ ನಮ್ಮ ಜೊತೆಯಾಗಿರೋದ್ದಕ್ಕೆ ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಧನ್ಯವಾದಗಳು. ಹೊಸ ಜೀವನಕ್ಕೆ ಕಾಲಿಡಲು ನಮ್ಮ ಪ್ರೈವೆಸಿಯನ್ನ ಗೌರವಿಸಿ ಎಂದು ನಟಿ ಪೋಸ್ಟ್ ಮೂಲಕ ತಿಳಿಸಿದ್ದರು. ಇದನ್ನೂ ಓದಿ:ಸ್ಟೈಲೀಶ್‌ ಆಗಿ ಕಾಣಿಸಿಕೊಂಡ ‘ಅಮೃತಧಾರೆ’ ಸಾರಾ- ಕಾವ್ಯಾ ಗೌಡ

    ನಟಿ ನಿಹಾರಿಕಾ ಅವರ ಮದುವೆಯು ಪ್ರಭಾಕರ್ ರಾವ್ ಅವರ ಪುತ್ರ ಚೈತನ್ಯ ಜೊನ್ನಲಗಡ್ಡ ಅವರ ಜೊತೆ 2020ರ ಡಿಸೆಂಬರ್ 9ರಂದು ನಡೆದಿತ್ತು. ರಾಜಸ್ಥಾನದ ಉದಯಪುರದಲ್ಲಿನ ಒಬೆರಾಯ್ ಉದಯ್ ವಿಲಾಸ್‌ನಲ್ಲಿ ಅದ್ದೂರಿಯಾಗಿ ನಡೆದಿತ್ತು. ಇಡೀ ಮೆಗಾ ಸ್ಟಾರ್ ಕುಟುಂಬವು ಮದುವೆಗೆ ಹಾಜರಾಗಿತ್ತು. ವೈಭವದಿಂದ ನಡೆದಿತ್ತು. ಈ ಮದುವೆಯಲ್ಲಿ ಇಡೀ ಕುಟುಂಬವು ಹಾಡಿ ಕುಣಿದಿತ್ತು.

     

    ನಿಹಾರಿಕಾ ಮತ್ತು ಚೈತನ್ಯ ಪರಸ್ಪರ ಒಪ್ಪಿಗೆಯೊಂದಿಗೆ ನ್ಯಾಯಾಲಯದಲ್ಲಿ ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ್ದರು. ನಿಹಾರಿಕಾ ಡಿವೋರ್ಸ್ ವಿಷಯವು ಸಾಕಷ್ಟು ಚರ್ಚೆ ಆಗಿತ್ತು. ನಿಹಾರಿಕಾ ಮತ್ತು ಚೈತನ್ಯ ಇನ್ಸ್ಟಾಗ್ರಾಂ ಒಬ್ಬರನ್ನೊಬ್ಬರು ಅನ್‌ಫಾಲೋ ಮಾಡಿದ್ದಾರೆ. ನಿಹಾರಿಕಾ ಅವರು ಮದುವೆಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡಿದ್ರು. ಅತ್ತ ಚೈತನ್ಯ ಅವರ ಕೂಡ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ನಿಹಾರಿಕಾ ಜೊತೆಗಿದ್ದ ಎಲ್ಲಾ ಫೋಟೋಗಳನ್ನು ಡಿಲೀಟ್ ಮಾಡಿದ್ದರು. ಇದು ವಿಚ್ಛೇದನದ ಬಗ್ಗೆ ಮೊದಲ ಬಾರಿಗೆ ಅನುಮಾನವನ್ನು ಹುಟ್ಟುಹಾಕಿತ್ತು. ಇಬ್ಬರು ವಿಚ್ಛೇದನ ಪಡೆಯುತ್ತಿದ್ದಾರೆ ಎಂಬ ವದಂತಿಯು ಎಲ್ಲ ಕಡೆ ಹಬ್ಬಿಕೊಂಡಿತ್ತು. ನಂತರ ಅದು ನಿಜವಾಯಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಹಾಸಿಗೆಯಲ್ಲಿ ರೋಷನ್ ಇರಬೇಕು’ ಡೈಲಾಗ್ ಬಿಟ್ಟ ನಿಹಾರಿಕಾ ವಿರುದ್ಧ ಕಿಡಿಕಾರಿದ ನೆಟ್ಟಿಗರು

    ‘ಹಾಸಿಗೆಯಲ್ಲಿ ರೋಷನ್ ಇರಬೇಕು’ ಡೈಲಾಗ್ ಬಿಟ್ಟ ನಿಹಾರಿಕಾ ವಿರುದ್ಧ ಕಿಡಿಕಾರಿದ ನೆಟ್ಟಿಗರು

    ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಮನೆಮಗಳು ನಿಹಾರಿಕಾ Niharika) ಡಿವೋರ್ಸ್ (Divorce) ವಿಚಾರವಾಗಿ ಸದ್ದು ಮಾಡ್ತಿದ್ದಾರೆ. ಚೈತನ್ಯ ಜಿವಿ ಜೊತೆ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಡುವೆ ವೆಬ್ ಸಿರೀಸ್‌ನಲ್ಲಿ ನಟಿಸುವ ಮೂಲಕ ನಟಿ ಸುದ್ದಿಯಲ್ಲಿದ್ದಾರೆ. ‘ಡೆಡ್ ಫಿಕ್ಸೆಲ್’ (Dead Pixel) ಟ್ರೈಲರ್‌ನಲ್ಲಿ ಹೇಳಿರುವ ಹೇಳಿಕೆ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:ಮಕ್ಕಳಿಗೆ ಪೋಷಕರ ಪ್ರೀತಿ ಸಿಗಬೇಕು ಎಂದು ಶ್ರೀಜಾಗೆ ಕಲ್ಯಾಣ್ ದೇವ್ ಟಾಂಗ್

    ನಿಹಾರಿಕಾ- ಚೈತನ್ಯ (Chaitanya) ಇಬ್ಬರು ಪರಸ್ಪರ ಪ್ರೀತಿಸಿ ಗುರುಹಿರಿಯರ ಸಮ್ಮುಖದಲ್ಲಿ ರಾಜಸ್ಥಾನದಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದರು. ಆ ದಾಂಪತ್ಯ ಕೊನೆಯವರೆಗೂ ಬಾಳಿಕೆಗೆ ಬರಲೇ ಇಲ್ಲ. ಹಲವು ವರ್ಷಗಳ ಪ್ರೀತಿಗೆ ಡಿವೋರ್ಸ್ ಮೂಲಕ ಅಂತ್ಯ ಹಾಡಿದ್ದಾರೆ ಎಂದು ಹೇಳಲಾಗುತ್ತಿದೆ. ವೈಯಕ್ತಿಕ ಜೀವನ ಸರಿ ಇಲ್ಲದೇ ಇರುವ ಕಾರಣ ಸಿನಿಮಾ- ನಿರ್ಮಾಣ ಸಂಸ್ಥೆ ಅಂತಾ ನಿಹಾರಿಕಾ ವೃತ್ತಿ ಬದುಕಿನತ್ತ ಬ್ಯುಸಿಯಾಗಿದ್ದಾರೆ.

     

    View this post on Instagram

     

    A post shared by Niharika Konidela (@niharikakonidela)

    ಡಿವೋರ್ಸ್ ವಿಚಾರ ಸಖತ್ ಸದ್ದು ಮಾಡ್ತಿದ್ದರು ಕೂಡ ಯಾವುದೇ ಸ್ಪಷ್ಟನೆ ನೀಡದೇ ನಿಹಾರಿಕಾ ಮತ್ತು ಮೆಗಾ ಫ್ಯಾಮಿಲಿ (Mega Family) ಮೌನವಾಗಿದ್ದಾರೆ. ಇದೀಗ ಡೆಡ್ ಫಿಕ್ಸೆಲ್ ಸಿರೀಸ್‌ನಲ್ಲಿ ಆನ್‌ಲೈನ್ ಗೇಮ್ ತೋರಿಸಲಾಗಿದೆ. ಆನ್‌ಲೈನ್ ಗೇಮ್ ಯಾವ ಹಂತಕ್ಕೆ ತಲುಪಿಸುತ್ತದೆ ಎಂದು ಟ್ರೈಲರ್‌ ಮೂಲಕ ಝಲಕ್ ತೋರಿಸಲಾಗಿದೆ. ಈ ಟ್ರೈಲರ್‌ನಲ್ಲಿ ನಿಹಾರಿಕಾ ಡೈಲಾಗ್ ಸದ್ದು ಮಾಡ್ತಿದೆ. ರೋಷನ್ ಬೆಡ್ ಮೇಲೆ, ಭಾರ್ಗವ್ ಮನಸ್ಸಿನಲ್ಲಿ ಎಂಬರ್ಥದಲ್ಲಿ ನಿಹಾರಿಕಾ ಡೈಲಾಗ್ ಹೊಡೆದಿದ್ದಾರೆ. ಈ ಟ್ರೈಲರ್‌ ಇದೀಗ ಪ್ರೇಕಕ್ಷಕ ಕುತೂಹಲಕ್ಕೆ ಕಾರಣವಾಗಿದೆ. ಹಾಗೆಯೇ ಅಭಿಮಾನಿಗಳು ಟ್ರೈಲರ್‌ ನೋಡಿ ತೀವ್ರ ವಿರೋಧ ಕೂಡ ವ್ಯಕ್ತಪಡಿಸಿದ್ದಾರೆ.

    ಓಕಾ ಮನಸ್ಸು ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಮೆಗಾಸ್ಟಾರ್ ಮನೆಮಗಳು ನಿಹಾರಿಕಾ, ಮದುವೆ ನಂತರ ನಟನೆಯಿಂದ ದೂರ ಸರಿದ್ದರು. ಇದೀಗ ಮತ್ತೆ ನಟನೆಯತ್ತ ನಿಹಾರಿಕಾ ಮುಖ ಮಾಡಿದ್ದಾರೆ. ‘ಡೆಡ್ ಫಿಕ್ಸೆಲ್’ ವೆಬ್ ಸಿರೀಸ್‌ನಿಂದ ಸದ್ದು ಮಾಡ್ತಿದ್ದಾರೆ.

  • ಮೆಗಾಸ್ಟಾರ್ ಚಿರಂಜೀವಿ ಮಗಳ ದಾಂಪತ್ಯದಲ್ಲಿ ಬಿರುಕು- ಡಿವೋರ್ಸ್ ಸುದ್ದಿಗೆ ಸಿಕ್ತು ಸಾಕ್ಷಿ

    ಮೆಗಾಸ್ಟಾರ್ ಚಿರಂಜೀವಿ ಮಗಳ ದಾಂಪತ್ಯದಲ್ಲಿ ಬಿರುಕು- ಡಿವೋರ್ಸ್ ಸುದ್ದಿಗೆ ಸಿಕ್ತು ಸಾಕ್ಷಿ

    ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಮಗಳ ಕುಟುಂಬದಲ್ಲಿ ಬಿರುಗಾಳಿ ಎದ್ದಿದೆ. ಚಿರಂಜೀವಿ ಸಹೋದರ ನಾಗೇಂದ್ರ ಬಾಬು (Nagendra Babu) ಮಗಳು ನಿಹಾರಿಕಾ (Niharika) ಡಿವೋರ್ಸ್ ಅಂತೆ ಕಂತೆ ಸುದ್ದಿಗೆ ಇದೀಗ ಸಾಕ್ಷಿ ಸಿಕ್ಕಿದೆ. ನಿಹಾರಿಕಾ ವೈವಾಹಿಕ ಬದುಕಿನಲ್ಲಿ ಏರುಪೇರಾಗಿದೆ ಎಂದು ಸುದ್ದಿ ಹಬ್ಬಿತ್ತು. ಆದರೆ ಈ ವಿಚಾರ ನಿಜ ಎಂಬುದಕ್ಕೆ ಸಾಕ್ಷಿ ಸಿಕ್ಕಿದೆ.

    ನಿಹಾರಿಕಾ ಕೊನಿಡೆಲಾ ಅವರು ಚೈತನ್ಯ ಅವರನ್ನ 2020ರಲ್ಲಿ ಪ್ರೀತಿಸಿ, ಗುರುಹಿರಿಯರ ಸಮ್ಮುಖದಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದರು. ಈಗ ಮದುವೆಯಾಗಿ ಎರಡೇ ವರ್ಷಕ್ಕೆ ದಾಂಪತ್ಯ ಬದುಕಿಗೆ ಅಂತ್ಯ ಹಾಡಲಿದ್ದಾರೆ. ಡಿವೋರ್ಸ್ ಬಗ್ಗೆ ಮೌನವಾಗಿರುವ ಈ ಜೋಡಿ, ದಾಂಪತ್ಯದಲ್ಲಿ ಬಿರುಕಾಗಿರುವ ಬಗ್ಗೆ ಸುಳಿವು ಸಿಕ್ಕಿದೆ. ಇದನ್ನೂ ಓದಿ:‘ರಾಮನ ಅವತಾರ’ ಟೀಸರ್ ರಿಲೀಸ್ : ರಿಷಿ ಸಖತ್ ಕಾಮಿಡಿ ಮಾಡ್ತಾರಪ್ಪ

    ನಟಿ ನಿಹಾರಿಕಾ ಮತ್ತು ಚೈತನ್ಯ ನಡುವೆ ವೈಮನಸ್ಸು ಉಂಟಾಗಿದೆ ಎಂಬುದಕ್ಕೆ ಒಂದಷ್ಟು ದಿನಗಳ ಹಿಂದೆಯೇ ಸಾಕ್ಷಿ ಸಿಕ್ಕಿತ್ತು. ವೆಂಕಟ ಚೈತನ್ಯ ಅವರು ನಿಹಾರಿಕಾರನ್ನು ಅನ್‌ಫಾಲೋ ಮಾಡಿದ್ದರು. ಮದುವೆ – ಎಂಗೇಜ್‌ಮೆಂಟ್ ಫೋಟೋಗಳನ್ನು ಡಿಲೀಟ್ ಮಾಡಿದ್ದರು. ಆದರೂ ಕೂಡ ನಿಹಾರಿಕಾ ಅವರು ಸೈಲೆಂಟ್ ಆಗಿದ್ದರು. ಆದರೆ ಈಗ ಅವರು ಕೂಡ ಗಂಡನನ್ನು ಅನ್‌ಫಾಲೋ ಮಾಡಿ, ಫೋಟೋಸ್ ತೆಗೆದುಹಾಕಿರುವುದು ಡಿವೋರ್ಸ್ ಅನುಮಾನಕ್ಕೆ ಪುಷ್ಠಿ ನೀಡಿದೆ.

    ಮೆಗಾ ಸ್ಟಾರ್ ಚಿರಂಜೀವಿ ಅವರದ್ದು ಪ್ರತಿಷ್ಠಿತ ಕುಟುಂಬ. ಈ ಫ್ಯಾಮಿಲಿಯ ಕೆಲವು ಹಿರಿಯರ ಸಮ್ಮುಖದಲ್ಲಿ ಸಂಧಾನ ಮಾತುಕಥೆ ಕೂಡ ನಡೆಯುತ್ತಿದ್ದು, ನಿಹಾರಿಕಾ- ಚೈತನ್ಯ ಮತ್ತೆ ಒಂದಾಗುವ ಸೂಚನೆ ಇದೆ ಎನ್ನಲಾಗಿತ್ತು. ಆದರೆ ಸಂಧಾನ ಸಫಲ ಆದಂತೆ ಕಾಣುತ್ತಿಲ್ಲ. ನಿಹಾರಿಕಾ ಕೊನಿಡೆಲಾ ಅವರು ಕೊನೆಗೂ ಗಟ್ಟಿ ನಿರ್ಧಾರ ತೆಗೆದುಕೊಂಡಂತೆ ಕಾಣುತ್ತಿದೆ. ಈ ಬಗ್ಗೆ ಅವರು ಅಧಿಕೃತವಾಗಿ ಘೋಷಿಸುವುದೊಂದೇ ಬಾಕಿ ಇದೆ.

    ನಿಹಾರಿಕಾ ಕೂಡ ನಿರ್ಮಾಪಕಿಯಾಗಿ ಆಗಿ ಕಂಬ್ಯಾಕ್ ಆಗಿದ್ದಾರೆ. ನಿರ್ಮಾಣದ ಜೊತೆ ನಟನೆಯ ಕಡೆಗೂ ಒಲವು ತೋರಿಸ್ತಿದ್ದಾರೆ ಎನ್ನಲಾಗುತ್ತಿದೆ. ಹೊಸ ಆಫೀಸ್ ಕೂಡ ನಿಹಾರಕಾ ಓಪನ್ ಮಾಡಿದ್ದಾರೆ. ಸಿನಿಮಾ ಕಾರ್ಯಕ್ಕೆ ಸಂಬಂಧಿಸಿದ ಕೆಲಸಗಳಿಗಾಗಿ ನಟಿ ಹೊಸ ಹೆಜ್ಜೆ ಇಟ್ಟಿದ್ದಾರೆ.

  • ಬೆಂಗಳೂರಲ್ಲಿ ಮಹಿಳೆ ಅನುಮಾನಾಸ್ಪದ ಸಾವು

    ಬೆಂಗಳೂರಲ್ಲಿ ಮಹಿಳೆ ಅನುಮಾನಾಸ್ಪದ ಸಾವು

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.

    ಮೃತ ಮಹಿಳೆಯನ್ನು ನಿಹಾರಿಕಾ (Niharika) ಎಂದು ಗುರುತಿಸಲಾಗಿದೆ. ಈಕೆ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಇವರ ಮೃತದೇಹವು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಮೃತಳ ಕುಟುಂಬಸ್ಥರಿಂದ ಗಂಡ (Niharika Husband) ನೇ ಕೊಲೆ ಮಾಡಿರುವ ಆರೋಪ ಕೇಳಿಬರುತ್ತಿದೆ. ಯಾಕೆಂದರೆ ಗಂಡನ ಕಿರುಕುಳ ತಾಳಲಾರದೆ ನಿಹಾರಿಕಾ ಅಕ್ಕನ ಮನೆ ಸೇರಿದ್ದರು. ಆದರೆ ಎರಡು ದಿನಗಳ ಹಿಂದೆಯಷ್ಟೇ ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆಂದು ಹೇಳಿ ಕರೆದುಕೊಂಡು ಹೋಗಿದ್ದ.

    ಶಾಲೆಯ ಕಾರ್ಯಕ್ರಮಕ್ಕೆ ತೆರಳುವ ವಿಚಾರವಾಗಿ ನಿಹಾರಿಕಾಗೆ ನಿಂದಿಸಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದನ್ನೂ ಓದಿ: ಒಂದೂವರೆ ವರ್ಷದ ಅವಧಿಯಲ್ಲಿ ಮೂವರು ಪ್ರಭಾವಿ ಬಿಜೆಪಿ ನಾಯಕರ ನಿಧನ

    ಸದ್ಯ ಘಟನೆ ಸಂಬಂಧ ಮೃತಳ ಕುಟುಂಬಸ್ಥರು ಪುಟ್ಟೆನಹಳ್ಳಿ ಪೊಲೀಸ್ ಠಾಣೆ (Puttenahalli Police Station) ಯಲ್ಲಿ ದೂರು ದಾಖಲು ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಲವ್ ಬ್ರೇಕ್ ಅಪ್ ಗೆ ಕಾರಣನಾದ ಕರಣ್ ಜೋಹಾರ್

    ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಲವ್ ಬ್ರೇಕ್ ಅಪ್ ಗೆ ಕಾರಣನಾದ ಕರಣ್ ಜೋಹಾರ್

    ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ಡೇಟಿಂಗ್ (Dating) ವಿಚಾರ ಹಲವು ವರ್ಷಗಳಿಂದ ಹರಿದಾಡುತ್ತಲೇ ಇದೆ. ಒಟ್ಟೊಟ್ಟಿಗೆ ಹೋಟೆಲ್ ನಲ್ಲಿ ಕಾಣಿಸಿಕೊಳ್ಳುವುದು, ತಡರಾತ್ರಿ ಪಾರ್ಟಿ ಮಾಡುವುದು ಹಾಗೂ ನ್ಯೂ ಯಿಯರ್ ಅನ್ನು ಗೋವಾದಲ್ಲಿ ಆಚರಿಸೋದು ಹೀಗೆ ಸಾಕಷ್ಟು ಕಾರ್ಯಕ್ರಮಗಳಲ್ಲಿ ಈ ಜೋಡಿ ಒಟ್ಟಿಗೆ ಕಾಣಿಸಿಕೊಂಡಿದೆ. ಹಾಗಾಗಿ ಇಬ್ಬರೂ ಡೇಟಿಂಗ್ ಮಾಡುವ ವಿಚಾರ ಆಗಾಗ್ಗೆ ಚರ್ಚೆ ಆಗುತ್ತಲೇ ಇರುತ್ತದೆ.

    ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಡೇಟಿಂಗ್ ವಿಚಾರ ಕೇವಲ ಟಾಲಿವುಡ್ ನಲ್ಲಿ ಮಾತ್ರವಲ್ಲ ಬಾಲಿವುಡ್ ವುಡ್ ನಲ್ಲೂ ಸದ್ದು ಮಾಡಿದೆ. ಹೀಗಾಗಿಯೇ ಕರಣ್ ಜೋಹಾರ್ (Karan Johar) ಕೂಡ ಈ ಇಬ್ಬರ ರಿಲೇಶನ್ ಶಿಪ್ ಬಗ್ಗೆ ಮಾತನಾಡಿದ್ದಾರೆ. ಕಾಫಿ ವಿತ್ ಕರಣ್ ಶೋನಲ್ಲಿ ಇಂಥದ್ದೊಂದು ಚರ್ಚೆ ನಡೆದಿದ್ದು, ರಶ್ಮಿಕಾ ಮತ್ತು ವಿಜಯ್ ಡೇಟಿಂಗ್ ಕುರಿತಾಗಿ ಕರಣ್ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಅದು ಕೂಡ ಚರ್ಚೆ ಆಗುತ್ತಿದೆ. ಇದನ್ನೂ ಓದಿ:‘ಬಿಗ್ ಬಾಸ್’ ಶೋ ನಡೆಸಲು ಸಲ್ಮಾನ್ ಖಾನ್ ಗೆ 1000 ಕೋಟಿ ಸಂಭಾವನೆ: ಸತ್ಯ ಒಪ್ಪಿಕೊಂಡ ನಟ

    ಕಾಫಿ ವಿತ್ ಕರಣ್ ಶೋಗೆ ಬಾಲಿವುಡ್ ನಟಿ ನಿಹಾರಿಕಾ (Niharika) ಬಂದಿದ್ದರು. ಈ ಸಂದರ್ಭದಲ್ಲಿ ಕರಣ್ ಮಾತನಾಡ್ತಾ ತನ್ನನ್ನು ವಿಕ್ಕಿ ಕೌಶಲ್ ತಮ್ಮ ಮದುವೆಗೆ ಆಹ್ವಾನಿಸಲಿಲ್ಲ. ಅದು ಯಾಕೆ ಅಂತಾನೇ ಗೊತ್ತಾಗಲಿಲ್ಲ ಎನ್ನುತ್ತಾರೆ. ಆಗ ನಿಹಾರಿಕಾ, ನೀವೇನೂ ಬೇಸರ ಮಾಡಿಕೊಳ್ಳಬೇಡಿ. ನನ್ನ ಮದುವೆಗೆ ಕಂಡಿತಾ ಕರೆಯುತ್ತೇನೆ ಅಂತಾರೆ. ನಿಹಾರಿಕಾ ಹೀಗೆ ಆಹ್ವಾನ ನೀಡುತ್ತಿದ್ದಂತೆಯೇ ನಿಹಾರಿಕಾಳ ಮದುವೆ ಯಾರ ಜೊತೆ ಆಗಬೇಕು ಎಂದು ಚರ್ಚಿಸುತ್ತಾರೆ ಕರಣ್.

    ಮೊದಲು ಪ್ರಭಾಸ್ ಹೆಸರು ಸೂಚಿಸುವ ಕರಣ್, ನೀವು ಪ್ರಭಾಸ್ ಜೊತೆ ಮದುವೆ ಆಗಬಹುದು ಎನ್ನುತ್ತಾರೆ. ಪ್ರಭಾಸ್ ವಯಸ್ಸಲ್ಲಿ ದೊಡ್ಡವರು ಅಂತಾಳೆ. ಹಾಗಾದರೆ, ವಿಜಯ್ ದೇವರಕೊಂಡ (Vijay Devarakonda) ಜೊತೆ ಮದುವೆ ಆಗಬಹುದು. ಅವರು ಸಿಂಗಲ್ ಅನ್ನುತ್ತಾರೆ ಕರಣ್. ತಕ್ಷಣವೇ ವಿಜಯ್ ಮತ್ತು ರಶ್ಮಿಕಾ ಡೇಟಿಂಗ್ ವಿಚಾರ ಬರುತ್ತದೆ. ನನ್ನ ಪ್ರಕಾರ ಅವರಿಬ್ಬರ ಮಧ್ಯೆ ಅಂಥದ್ದೂ ಏನೂ ಇಲ್ಲ. ವಿಜಯ್ ಸಿಂಗಲ್ ಎನ್ನುವುದು ನನಗೆ ಗೊತ್ತು ಎಂದು ಹೇಳುವ ಮೂಲಕ ವಿಜಯ್ ಮತ್ತು ರಶ್ಮಿಕಾ ಲವ್ ಅನ್ನು ಬ್ರೇಕ್ ಅಪ್ ಮಾಡುತ್ತಾರೆ ಕರಣ್.

    Live Tv
    [brid partner=56869869 player=32851 video=960834 autoplay=true]

  • ಪ್ರಥಮ್ ನಿರ್ದೇಶನದ ಚೊಚ್ಚಲ ಸಿನಿಮಾ ‘ನಟ ಭಯಕಂರ’ ಹಾಡಾಗಿ ಬಂದ

    ಪ್ರಥಮ್ ನಿರ್ದೇಶನದ ಚೊಚ್ಚಲ ಸಿನಿಮಾ ‘ನಟ ಭಯಕಂರ’ ಹಾಡಾಗಿ ಬಂದ

    ಬಿಗ್ ಬಾಸ್ ವಿನ್ನರ್ ಒಳ್ಳೆ ಹುಡುಗ ಪ್ರಥಮ್ ಮೊದಲ ಬಾರಿಗೆ ನಿರ್ದೇಶಿಸಿರುವ ‘ನಟ ಭಯಂಕರ’ ಸಿನಿಮಾದ ಹಾಡುಗಳು ಇಂದು ರಿಲೀಸ್ ಆಗಿವೆ. ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಡುಗಳನ್ನು ಬಿಡುಗಡೆ  ಮಾಡಿದರು.‌ ಲಹರಿ ಸಂಸ್ಥೆಯ ವೇಲು, ಜಿಲ್ಲಾಧಿಕಾರಿ ದಯಾನಂದ್, ಗೀತರಚನೆಕಾರ ವಿ.ನಾಗೇಂದ್ರಪ್ರಸಾದ್, ಗಿರೀಶ್, ಅರ್ಜುನ್ ಕುಮಾರ್ ಬಂಗಾರಪ್ಪ ಸೇರಿದಂತೆ ಅನೇಕ ಗಣ್ಯರು ಆಡಿಯೋ ರಿಲೀಸ್ ಗೆ ಸಾಕ್ಷಿಯಾದರು. ಇದನ್ನೂ ಓದಿ : ಶ್ರುತಿ ಹಾಸನ್ ಜತೆ ನನ್ನ ಮದುವೆ ಆಗಿದೆ: ಸ್ಫೋಟಕ ಮಾಹಿತಿ ಹಂಚಿಕೊಂಡ ಬಾಯ್ ಫ್ರೆಂಡ್

    ಪ್ರಥಮ್ ಕಾನ್ಫಿಡೆನ್ಸ್ ಇರುವ ಹುಡುಗ. ಬಿಗ ಬಾಸ್ ನ ಆರಂಭದಲ್ಲಿ  ಇವರನ್ನು ನೋಡಿ, ಏನಪ್ಪಾ, ಹೀಗೆ ಮಾತಾಡುತ್ತಾರೆ? ಅಂದು ಕೊಂಡೆ. ನಂತರ ನಾನೇ ಅವರ ಅಭಿಮಾನಿಯಾದೆ. ಈಗ ನಟನೆ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ. ರಘು ದೀಕ್ಷಿತ್ ಹಾಗೂ ನಾನು ಇಷ್ಟಪಡುವ ಉಪ್ಪಿ ಸರ್ ಹಾಡಿರುವ ಹಾಡುಗಳು ನನಗೆ ಇಷ್ಟವಾಯಿತು. ಸಿನಿಮಾ ಕೂಡ ಉತ್ತಮವಾಗಿ ಮೂಡಿಬಂದಿರುತ್ತದೆ ಎಂಬ ನಂಬಿಕೆಯಿದೆ ಎಂದ ಶ್ರೀಮುರಳಿ,  ಪ್ರಥಮ್ ಸೇರಿದಂತೆ ಇಡೀ ಚಿತ್ರತಂಡಕ್ಕೆ ಒಳಿತನ್ನು ಹಾರೈಸಿದರು. ಇದನ್ನೂ ಓದಿ : ವರುಣ್ ದವನ್ ಜತೆ ‘ಸಿಟಾಡೆಲ್’ ನಲ್ಲಿ ಸಮಂತಾ: ಕ್ಯಾಮರಾ ಕಣ್ಣಿಗೆ ಹಬ್ಬ

    ಚೊಚ್ಚಲು ಸಿನಿಮಾ ಕುರಿತು ಮಾತನಾಡಿದ ಪ್ರಥಮ್, ‘ಭಾರೀ ಅಹಂಕಾರವಿರುವ ಮನುಷ್ಯ ಒಬ್ಬರಿಗೆ ಮಾತು ಕೊಟ್ಟಾಗ ಹೇಗೆ ಬದಲಾಗುತ್ತಾನೆ ಎಂಬುದೇ ಚಿತ್ರದ ಮುಖ್ಯ ಕಥಾವಸ್ತು. ಇನ್ನೊಂದು ಕಡೆ ಸ್ಟುಪಿಡ್ ಸೂಪರ್ ಸ್ಟಾರ್ ಹಾಗೂ ಕುರುಡಿ ದೆವ್ವದ ನಡುವೆ ನಡೆಯುವ ಕಥೆ ಕೂಡ ಅನ್ನಬಹುದು. ಇಂದು ಆಡಿಯೋ ಬಿಡುಗಡೆ ಮಾಡಿದ್ದೇವೆ. ಸದ್ಯದಲ್ಲೇ ಟ್ರೇಲರ್ ಅನಾವರಣಗೊಳಿಸುತ್ತೇವೆ’ ಎಂದರು. ನಾಯಕಿ ಫ್ರಾನ್ಸ್ ನಿವಾಸಿ ನಿಹಾರಿಕ, ಪ್ರಮುಖ ಪಾತ್ರಧಾರಿ ಚಂದನ, ಸಂಗೀತ ನೀಡಿರುವ ಪ್ರದ್ಯೋತನ್ ಚಿತ್ರದ ಕುರಿತು ಮಾತನಾಡಿದರು.

  • ನಟ ರಮೇಶ್ ಪುತ್ರಿಯ ಆರತಕ್ಷತೆ ಸಮಾರಂಭ – ರಾಜಕೀಯ, ಚಿತ್ರರಂಗದ ಗಣ್ಯರು ಭಾಗಿ

    ನಟ ರಮೇಶ್ ಪುತ್ರಿಯ ಆರತಕ್ಷತೆ ಸಮಾರಂಭ – ರಾಜಕೀಯ, ಚಿತ್ರರಂಗದ ಗಣ್ಯರು ಭಾಗಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿ ಪುತ್ರಿ ನಿಹಾರಿಕ ಮತ್ತು ಅಕ್ಷಯ್ ಅವರ ವಿವಾಹ ಆರತಕ್ಷತೆ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಅದ್ದೂರಿಯಾಗಿ ನೆರವೇರಿತು.

     

    ಡಿಸೆಂಬರ್ 28 ರಂದು ನಿಹಾರಿಕಾ ಅವರು ಅಕ್ಷಯ್ ಅವರನ್ನು ಕೈಹಿಡಿದಿದ್ದರು. ಕೊರೊನಾ ಹಿನ್ನಲೆ ಕುಟುಂಬಸ್ಥರು ಹಾಗೂ ಆಪ್ತರು ಮಾತ್ರ ಸೇರಿ ಸರಳವಾಗಿ ಮದುವೆ ಸಮಾರಂಭ ನಡೆದಿತ್ತು. ಇಂದು ಖಾಸಗಿ ಹೋಟೆಲಿನಲ್ಲಿ ಆರತಕ್ಷತೆ ಸಮಾರಂಭ ನಡೆಯಿತು.

    ಕಾರ್ಯಕ್ರಮದಲ್ಲಿ ರಾಜಕೀಯ ಹಾಗೂ ಚಿತ್ರರಂಗದ ಗಣ್ಯರಾದ ಶಿವರಾಜ್ ಕುಮಾರ್,ಯಶ್, ರಾಘವೇಂದ್ರ ರಾಜ್ ಕುಮಾರ್, ರವಿಚಂದ್ರನ್, ಶ್ರೀಮುರಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿ ಡಾ. ಅಶ್ವತ್‍ನಾರಾಯಣ್, ಸಂಸದ ತೇಜಸ್ವಿ ಸೂರ್ಯ, ಆರೋಗ್ಯ ಸಚಿವ ಸುಧಾಕರ್, ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇನ್ನಿತರರು ಭಾಗವಹಿಸಿ ನೂತನ ವಧುವರರಿಗೆ ಶುಭ ಹಾರೈಸಿದರು.

    ಸಿನಿಮಾ ಕ್ಷೇತ್ರವಲ್ಲದೆ ಇರುವ ಅಕ್ಷಯ್ ನಿಹಾರಿಕ ಅವರ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಬ್ಬರು ಒಬ್ಬರಿಗೊಬ್ಬರು ಒಪ್ಪಿದ ನಂತರ ಎರಡು ಕುಟುಂಬದವರು ಸೇರಿ ವಿವಾಹ ಮಾಡಿದ್ದರು.

     

  • ಗೆಳೆಯ ಅಕ್ಷಯ್ ಜೊತೆ ರಮೇಶ್ ಪುತ್ರಿ ಮದುವೆ

    ಗೆಳೆಯ ಅಕ್ಷಯ್ ಜೊತೆ ರಮೇಶ್ ಪುತ್ರಿ ಮದುವೆ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿ ಪುತ್ರಿ ನಿಹಾರಿಕಾ ಮದುವೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ರೆಸಾರ್ಟ್ ನಲ್ಲಿ ನಡೆದಿದೆ. ಗೆಳೆಯ ಅಕ್ಷಯ್ ಜೊತೆ ನಿಹಾರಿಕಾ ಸಪ್ತಪದಿ ತುಳಿದರು.

    ಕೊರೊನಾ ಹಿನ್ನೆಲೆ ಮದುವೆ ಕೇವಲ ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಅಕ್ಷಯ್ ಸಿನಿಮಾ ಕ್ಷೇತ್ರದವರಲ್ಲ ಬದಲಿಗೆ ನಿಹಾರಿಕಾ ಅವರ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡೂ ಕುಟುಂಬದವರ ಸಮ್ಮುಖದಲ್ಲಿ ಮದುವೆ ನಡೆದಿದೆ.

    2021ರ ಜನವರಿ 16ರಂದು ಆರತಕ್ಷತೆ ನಡೆಯಲಿದೆ. ಅಂದು ಚಿತ್ರರಂಗ ಸೇರಿದಂತೆ ಎಲ್ಲ ಕ್ಷೇತ್ರಗಳ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿದೆ. ನನ್ನ ಮಗಳು ನಿಹಾರಿಕ ಹಾಗೂ ಅಕ್ಷಯ್ ವಿವಾಹ ಇಂದು ನಡೆಯಿತು. ನಿಮ್ಮ ಪ್ರೀತಿಯ ಆಶೀರ್ವಾದ ಈ ಹೊಸ ಜೋಡಿ ಮೇಲೆ ಸದಾ ಇರಲಿ ಎಂದು ರಮೇಶ್ ಅರವಿಂದ್ ವಿನಂತಿಸಿದ್ದಾರೆ.