Tag: ನೀಟ್‌ ಯುಜಿ

  • NEET-UG ಕೇಂದ್ರವಾರು ಫಲಿತಾಂಶ ಪ್ರಕಟ

    NEET-UG ಕೇಂದ್ರವಾರು ಫಲಿತಾಂಶ ಪ್ರಕಟ

    ನವದೆಹಲಿ: ನೀಟ್‌-ಯುಜಿ 2024 ಪರೀಕ್ಷೆ (NEET-UG) ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಇಂದು ಪ್ರಕಟಿಸಿದೆ. ಸುಪ್ರೀಂ ಕೋರ್ಟ್‌ ಸೂಚನೆ ಮೇರೆಗೆ ನಗರ ಮತ್ತು ಕೇಂದ್ರವಾರು ಫಲಿತಾಂಶ ಪ್ರಕಟಿಸಿದೆ.

    ಪರೀಕ್ಷೆ ಬರೆದ ಅಭ್ಯರ್ಥಿಗಳು ಎನ್‌ಟಿಎ NEET ನ ಅಧಿಕೃತ ವೆಬ್‌ಸೈಟ್‌ exams.nta.ac.in/NEET/ ಮತ್ತು neet.ntaonline.in ನಲ್ಲಿ ಫಲಿತಾಂಶಗಳನ್ನು ಪರಿಶೀಲಿಸಬಹುದು. ಇದನ್ನೂ ಓದಿ: ಜುಲೈ 20ರಂದು NEET-UG ಫಲಿತಾಂಶ ಪ್ರಕಟಿಸಿ – ಎನ್‌ಟಿಎಗೆ ಸುಪ್ರೀಂ ಆದೇಶ

    ನೀಟ್‌ ಯುಜಿ ಫಲಿತಾಂಶವನ್ನು ಜು.20 ರಂದು ಮಧ್ಯಾಹ್ನ ಒಳಗೆ ಪ್ರಕಟಿಸಬೇಕು ಎಂದು ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ಗುರುವಾರ ನಿರ್ದೇಶನ ನೀಡಿತ್ತು. ವಿದ್ಯಾರ್ಥಿಗಳು ಪಡೆದ ಅಂಕಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿ. ಆದರೆ ವಿದ್ಯಾರ್ಥಿಗಳ ಹೆಸರನ್ನು ಬಹಿರಂಗಪಡಿಸಬಾರದು ಎಂದು ನ್ಯಾಯಾಲಯ ಆದೇಶಿಸಿತ್ತು.

    ಸಿಜೆಐ ಡಿ.ವೈ.ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಶನಿವಾರದ ಮಧ್ಯಾಹ್ನದೊಳಗೆ ನಗರ ಮತ್ತು ಕೇಂದ್ರವಾರು ಪ್ರತ್ಯೇಕವಾಗಿ ಫಲಿತಾಂಶಗಳನ್ನು ಪ್ರಕಟಿಸಲು ಆದೇಶಿಸಿತ್ತು. ಇದನ್ನೂ ಓದಿ: NEET: ಪರೀಕ್ಷಾ ಮಂಡಳಿ ಟ್ರಂಕ್‌ನಿಂದ ಪ್ರಶ್ನೆಪತ್ರಿಕೆ ಕದ್ದಿದ್ದ ಎಂಜಿನಿಯರ್‌ ಬಂಧನ

    ಮೇ 5 ರಂದು 14 ವಿದೇಶಿ ಸೇರಿದಂತೆ 571 ನಗರಗಳ 4,750 ಕೇಂದ್ರಗಳಲ್ಲಿ ನೀಟ್‌-ಯುಜಿ ಪರೀಕ್ಷೆ ನಡೆಸಲಾಗಿತ್ತು. 23.33 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಸುಮಾರು 1,563 ಅಭ್ಯರ್ಥಿಗಳು ಮರು ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಪರೀಕ್ಷೆಗೂ ಮುನ್ನ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂತು. ಇದರ ವಿರುದ್ಧ ದೇಶಾದ್ಯಂತ ಅಭ್ಯರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ.

  • ಜುಲೈ 20ರಂದು NEET-UG ಫಲಿತಾಂಶ ಪ್ರಕಟಿಸಿ – ಎನ್‌ಟಿಎಗೆ ಸುಪ್ರೀಂ ಆದೇಶ

    ಜುಲೈ 20ರಂದು NEET-UG ಫಲಿತಾಂಶ ಪ್ರಕಟಿಸಿ – ಎನ್‌ಟಿಎಗೆ ಸುಪ್ರೀಂ ಆದೇಶ

    ನವದೆಹಲಿ: 2024ನೇ ಸಾಲಿನ ನೀಟ್‌-ಯುಜಿ (NEET-UG) ಪರೀಕ್ಷಾ ಫಲಿತಾಂಶವನ್ನು ಜುಲೈ 20ರ ಮಧ್ಯಾಹ್ನ 12 ಗಂಟೆಯೊಳಗೆ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ಸುಪ್ರೀಂ ಕೋರ್ಟ್‌ ಆದೇಶಿಸಿದೆ.

    ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud) ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ. ಯಾವುದೇ ಕಾರಣಕ್ಕೂ ಅಭ್ಯರ್ಥಿಗಳ ಗುರುತನ್ನು ಬಹಿರಂಗಪಡಿಸದೇ ನಗರವಾರು ಮತ್ತು ಕೇಂದ್ರವಾರು ಫಲಿತಾಂಶ ಪ್ರಕಟಿಸುವಂತೆ ಎನ್‌ಟಿಎಗೆ ಆದೇಶಿಸಿದೆ. ಇದನ್ನೂ ಓದಿ: Valmiki Corporation Scam | ಮಾಜಿ ಸಚಿವ ನಾಗೇಂದ್ರಗೆ ಮತ್ತೆ 5 ದಿನ ಇಡಿ ಕಸ್ಟಡಿ – ಕೋರ್ಟ್ ಆದೇಶ

    ನೀಟ್-ಯುಜಿ (NEET-UG) ಮರುಪರೀಕ್ಷೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ (Supreme Court) ಗುರುವಾರ ನಡೆಸಿತು. ಈ ವೇಳೆ ದೊಡ್ಡ ಪ್ರಮಾಣದಲ್ಲಿ ನಡೆಯದಿದ್ದರೇ ಮಾತ್ರ ಮರುಪರೀಕ್ಷೆ ಮಾಡಬಹುದು ಎಂದು ಅಭಿಪ್ರಾಯಪಟ್ಟಿತ್ತು. ಇದನ್ನೂ ಓದಿ:  NEET: ಪರೀಕ್ಷೆ ಸರಿಯಾಗಿ ನಡೆಯದಿದ್ದರೆ ಮಾತ್ರ ಮರುಪರೀಕ್ಷೆ ಮಾಡಬಹುದು: ಸುಪ್ರೀಂ ಕೋರ್ಟ್

    ವಿಚಾರಣೆ ವೇಳೆ ಕೋರ್ಟ್‌ ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಬಿಹಾರ ಪೊಲೀಸರಿಂದ ವರದಿ ಕೇಳಿತ್ತು. ಬಿಹಾರ ಪೊಲೀಸರು ಈ ಕೇಸ್‌ನಲ್ಲಿ ಮೊದಲ ಪ್ರಕರಣ ದಾಖಲಿಸಿದ್ದರು. ನಂತರ ಇದು ಜಾರ್ಖಂಡ್, ಗುಜರಾತ್, ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಸಕ್ರಿಯವಾಗಿರುವ ರಾಷ್ಟ್ರೀಯ ʻಸಾಲ್ವರ್ ಗ್ಯಾಂಗ್ʼ ನೊಂದಿಗೆ ಸಂಪರ್ಕ ಹೊಂದಿದೆ ಎಂಬುದು ಬೆಳಕಿಗೆ ಬಂದಿತ್ತು. ಇದನ್ನೂ ಓದಿ:

    ನಗರ ಮತ್ತು ಕೇಂದ್ರವಾರು ಫಲಿತಾಂಶ ಪ್ರಕಟಿಸಬೇಕೆಂಬ ಆದೇಶವನ್ನು ಎನ್‌ಟಿಎ ವಿರೋಧಿಸಿತ್ತು. ಪರೀಕ್ಷಾ ಏಜೆನ್ಸಿ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪರೀಕ್ಷಾ ಫಲಿತಾಂಶಗಳು ವಿದ್ಯಾರ್ಥಿಗಳ ಖಾಸಗಿ ಆಸ್ತಿ ಎಂಬ ಕಾರಣಕ್ಕಾಗಿ ವಿನಂತಿ ವಿರೋಧಿಸಿದರು. ಇಡೀ ಫಲಿತಾಂಶ ಎಂದಿಗೂ ಪ್ರಕಟಿಸಲಾಗದು, ಅವು ವಿದ್ಯಾರ್ಥಿಗಳ ಆಸ್ತಿ ಎಂದು ವಾದಿಸಿದ್ದರು. ಇದನ್ನೂ ಓದಿ: ತಿರುಪತಿಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಭೇಟಿ – ವೆಂಕಟರಮಣನಿಗೆ ವಿಶೇಷ ಪೂಜೆ

    ಏಜೆನ್ಸಿಯ ಪರ ವಾದವನ್ನು ಕೋರ್ಟ್‌ ತಳ್ಳಿಹಾಕಿತ್ತು. ವಾಸ್ತವವೆಂದರೆ ಬಿಹಾರದ ಪಾಟ್ನಾದಲ್ಲಿ, ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದು ಆ ಕೇಂದ್ರಗಳಿಗೆ ಮಾತ್ರವೇ ಸೀಮಿತವಾಗಿಯೇ ಎಂಬುದನ್ನು ಪತ್ತೆಹಚ್ಚಲು ನಾವು ಬಯಸುತ್ತೇವೆ. ಆದ್ರೆ, ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶ ತಿಳಿಯದೇ ಕಂಗಾಲಾಗಿದ್ದಾರೆ. ಆದ್ದರಿಂದ ಕೇಂದ್ರ ಮತ್ತು ನಗರವಾರು ಫಲಿತಾಂಶ ಪ್ರಕಟಿಸಿ, ವಿದ್ಯಾರ್ಥಿಗಳ ಗುರುತನ್ನು ಮರೆಮಾಚಲು ನಾವು ಬಯಸುತ್ತೇವೆ. ಇದರಿಂದ ಕೇಂದ್ರವಾರು ಮಾರ್ಕ್‌ ಪ್ಯಾಟರ್ನ್‌ ಏನೆಂಬುದೂ ತಿಳಿಯುತ್ತದೆ ಎಂದು ಕೋರ್ಟ್‌ ವಿವರಿಸಿತು.

  • ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಮಾಸ್ಟರ್‌ಮೈಂಡ್‌ ಬಂಧನ

    ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಮಾಸ್ಟರ್‌ಮೈಂಡ್‌ ಬಂಧನ

    ನವದೆಹಲಿ: ನೀಟ್‌-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕಿಂಗ್‌ಪಿನ್ ಎನ್ನಲಾದ ರಾಕೇಶ್ ರಂಜನ್ ಅಲಿಯಾಸ್ ರಾಕಿ ಎಂಬಾತನನ್ನು ಸಿಬಿಐ (CBI) ಬಂಧಿಸಿದೆ.

    ಆರೋಪಿ ರಂಜನ್‌ನನ್ನು 10 ದಿನಗಳ ಕಾಲ ಏಜೆನ್ಸಿ ಕಸ್ಟಡಿಗೆ ಕಳುಹಿಸಲಾಗಿದೆ. ಈ ಪ್ರಕರಣದಲ್ಲಿ ಬಿಹಾರದ ಪಾಟ್ನಾ ಬಳಿ ಎರಡು ಮತ್ತು ಪಶ್ಚಿಮ ಬಂಗಾಳದ ಕೋಲ್ಕತ್ತಾ ಬಳಿ ಎರಡು ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ರಾಕಿಯನ್ನು ಹೊರತುಪಡಿಸಿ ಎಂಟು ಜನರನ್ನು ಬಂಧಿಸಿದೆ. ಇದನ್ನೂ ಓದಿ: Godhra NEET Case | ಅನ್ಯರಾಜ್ಯಗಳ ವಿದ್ಯಾರ್ಥಿಗಳಿಗೆ ಗುಜುರಾತಿಯಲ್ಲಿ ನೀಟ್ ಬರೆಯಲು ಸೂಚನೆ – ಸಿಬಿಐ ಮಹತ್ವದ ಮಾಹಿತಿ

    ಜಾರ್ಖಂಡ್‌ನ ಹಜಾರಿಬಾಗ್‌ನ ಶಾಲೆಯೊಂದರ ಪ್ರಾಂಶುಪಾಲರು ಮತ್ತು ಉಪಪ್ರಾಂಶುಪಾಲರು ಸೇರಿದಂತೆ ಹನ್ನೆರಡು ಜನರನ್ನು ಇದುವರೆಗೆ ಬಂಧಿಸಲಾಗಿದೆ. ವಿವಿಧ ರಾಜ್ಯ ಪೊಲೀಸ್ ಪಡೆಗಳು ಮತ್ತು ಸಿಬಿಐ, NEET ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆಯಂತಹ ರಾಷ್ಟ್ರೀಯ ದಂಧೆಗಳ ಬಗ್ಗೆ ತನಿಖೆ ನಡೆಸುತ್ತಿವೆ.

    ರಾಷ್ಟ್ರವ್ಯಾಪಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ದಂಧೆಯ ತನಿಖೆಯ ಕಾರ್ಯವನ್ನು ಸಿಬಿಐ ವಹಿಸಿಕೊಂಡಿದ್ದು, ಬಿಹಾರದಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಿಗೆ ಆರು ಎಫ್‌ಐಆರ್‌ಗಳನ್ನು ದಾಖಲಿಸಿದೆ. ನೀಟ್ ಪೇಪರ್ ಸೋರಿಕೆ ಮೂಲ ಹಜಾರಿಬಾಗ್ ಶಾಲೆ. ಅಲ್ಲಿಂದ ಸೋರಿಕೆಯಾದ ಪೇಪರ್‌ಗಳು ಬಿಹಾರಕ್ಕೂ ಬಂದಿವೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ – ಸಚಿವೆ ಶೋಭಾ ಕರಂದ್ಲಾಜೆಗೆ ಮದ್ರಾಸ್ ಹೈಕೋರ್ಟ್ ತರಾಟೆ

  • NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್‌ – ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ

    NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್‌ – ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ

    ನವದೆಹಲಿ: NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರಿಯ ತನಿಖಾ ದಳ (CBI) ಬಿಹಾರದಲ್ಲಿ (Bihar) ಇಬ್ಬರು ಆರೋಪಿಗಳನ್ನು ಬಂಧಿಸಿದೆ.

    ಪಾಟ್ನಾದ ಮನೀಶ್ ಕುಮಾರ್ ಮತ್ತು ಅಶುತೋಷ್ ಬಂಧಿತ ಆರೋಪಿಗಳು. ಸಿಬಿಐ ಮೂಲಗಳ ಪ್ರಕಾರ, ಮನೀಶ್ ಕುಮಾರ್ ತನ್ನ ಕಾರಿನಲ್ಲಿ ವಿದ್ಯಾರ್ಥಿಗಳನ್ನು ಸಾಗಿಸಲು ಅನುಕೂಲ ಮಾಡಿಕೊಟ್ಟಿದ್ದಾನೆ ಮತ್ತು ಕನಿಷ್ಠ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆಯನ್ನು ನೀಡಿದ್ದಾನೆ. ಅಶುತೋಷ್ ವಿದ್ಯಾರ್ಥಿಗಳಿಗೆ ವಸತಿ ಒದಗಿಸಿದ್ದಾನೆ.

    ಗುರುವಾರ ಇಬ್ಬರನ್ನು ವಿಚಾರಣೆಗಾಗಿ ಸಿಬಿಐ ಕರೆದಿತ್ತು. ವಿಚಾರಣೆಯ ಬಳಿಕ ಇಬ್ಬರ ಬಂಧನ ನಡೆದಿದೆ. ಇಬ್ಬರನ್ನು ಬಂಧನ ಮಾಡುವ ಮೊದಲು ಬಿಹಾರ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪರೀಕ್ಷೆಗೆ ಒಂದು ದಿನ ಮುಂಚಿತವಾಗಿ ಪ್ರಶ್ನೆ ಪತ್ರಿಕೆಯ ಪ್ರತಿಯನ್ನು ತಾನು ಮತ್ತು ಇತರ ಕೆಲವರು ಪಡೆದುಕೊಂಡಿದ್ದೇವೆ ಎಂದು ಹೇಳಿದ ಅಭ್ಯರ್ಥಿಯನ್ನು ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರ್ನಾಟಕ ಮುಂದಾಗುತ್ತಿದ್ದಂತೆ ಹೊಸೂರಿನಲ್ಲಿ ಏರ್ಪೋರ್ಟ್ ಘೋಷಿಸಿದ ಸ್ಟಾಲಿನ್

    ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಮೇ 5 ರಂದು ನಡೆಸಿದ ಪರೀಕ್ಷೆಯಲ್ಲಿ ಸುಮಾರು 24 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಮತ್ತು 1,500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಿದ್ದು ವಿವಾದಕ್ಕೆ ಕಾರಣವಾಗಿ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆದಿತ್ತು.