Tag: ನೀತಿ ಆಯೋಗ

  • ಪ್ರತಿ ರಾಜ್ಯದಲ್ಲಿ ಒಂದು ವಿಶ್ವದರ್ಜೆಯ ಪ್ರವಾಸಿ ತಾಣ ಅಭಿವೃದ್ಧಿಪಡಿಸಿ: ಮೋದಿ ಕರೆ

    ಪ್ರತಿ ರಾಜ್ಯದಲ್ಲಿ ಒಂದು ವಿಶ್ವದರ್ಜೆಯ ಪ್ರವಾಸಿ ತಾಣ ಅಭಿವೃದ್ಧಿಪಡಿಸಿ: ಮೋದಿ ಕರೆ

    – ಟೀಂ ಇಂಡಿಯಾ ರೀತಿ ಕೇಂದ್ರ, ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕು: ಪ್ರಧಾನಿ

    ನವದೆಹಲಿ: ವಿಕಸಿತ ಭಾರತ (Viksit Bharat) ಗುರಿಯನ್ನು ಸಾಧಿಸಲು ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ‘ಟೀಂ ಇಂಡಿಯಾ’ ರೀತಿ ಕೆಲಸ ಮಾಡಬೇಕೆಂದು ಪ್ರಧಾನಿ ಮೋದಿ (Narendra Modi) ಕರೆ ನೀಡಿದರು.

    ನೀತಿ ಆಯೋಗದ (Niti Aayog) ಹತ್ತನೇ ಸಭೆಯ ಅಧ್ಯಕ್ಷತೆ ವಹಿಸಿದ ಅವರು, ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡಿದರು. ನಾವು ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬೇಕು. ಕೇಂದ್ರ ಮತ್ತು ಎಲ್ಲಾ ರಾಜ್ಯಗಳು ಒಟ್ಟಾಗಿ ಟೀಂ ಇಂಡಿಯಾದಂತೆ ಒಟ್ಟಾಗಿ ಕೆಲಸ ಮಾಡಿದರೆ, ಯಾವುದೇ ಗುರಿ ಅಸಾಧ್ಯವಲ್ಲ. ವಿಕಸಿತ ಭಾರತ ಭಾರತ ಪ್ರತಿಯೊಬ್ಬ ಭಾರತೀಯನ ಗುರಿ. ಪ್ರತಿಯೊಂದು ರಾಜ್ಯ ವಿಕಸಿತ ಆದಾಗ, ಭಾರತ ವಿಕಸಿತವಾಗುತ್ತದೆ. ಇದು 140 ಕೋಟಿ ನಾಗರಿಕರ ಆಕಾಂಕ್ಷೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಮೋದಿ ನೇತೃತ್ವದ ನೀತಿ ಆಯೋಗದ ಸಭೆಗೆ ಸಿದ್ದರಾಮಯ್ಯ ಗೈರು

    ರಾಜ್ಯಗಳು ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಅಗತ್ಯ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಕನಿಷ್ಠ ಒಂದು ಪ್ರವಾಸಿ ತಾಣವನ್ನು ವಿಶ್ವದರ್ಜೆಯ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕು. ಒಂದು ರಾಜ್ಯ, ಒಂದು ಜಾಗತಿಕ ತಾಣ. ಇದು ನೆರೆಯ ನಗರಗಳನ್ನು ಪ್ರವಾಸಿ ಸ್ಥಳಗಳಾಗಿ ಅಭಿವೃದ್ಧಿಪಡಿಸಲು ಸಹ ಕಾರಣವಾಗುತ್ತದೆ ಎಂದರು. ಇದನ್ನೂ ಓದಿ: ಪ್ರೀತಿಸಿದವನೊಂದಿಗೆ ಮನೆಬಿಟ್ಟು ಹೋದ ಮಗಳು – ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಶಂಕೆ

    ಭಾರತ ವೇಗವಾಗಿ ನಗರೀಕರಣಗೊಳ್ಳುತ್ತಿದೆ. ಭವಿಷ್ಯಕ್ಕೆ ಸಿದ್ಧವಾಗಿರುವ ನಗರಗಳತ್ತ ನಾವು ಕೆಲಸ ಮಾಡಬೇಕು. ಬೆಳವಣಿಗೆ, ನಾವೀನ್ಯತೆ ಮತ್ತು ಸುಸ್ಥಿರತೆಯು ನಮ್ಮ ನಗರಗಳ ಅಭಿವೃದ್ಧಿಗೆ ಎಂಜಿನ್ ಆಗಿರಬೇಕು. ನಮ್ಮ ಕಾರ್ಯಪಡೆಯಲ್ಲಿ ಮಹಿಳೆಯರನ್ನು ಸೇರಿಸಿಕೊಳ್ಳುವ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು. ಅವರು ಕಾರ್ಯಪಡೆಯಲ್ಲಿ ಗೌರವಯುತವಾಗಿ ಸಂಯೋಜಿಸಲ್ಪಡುವಂತೆ ನಾವು ಕಾನೂನುಗಳು, ನೀತಿಗಳನ್ನು ರೂಪಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: `ಯುವನಿಧಿ’ ಗ್ಯಾರಂಟಿ ಹಣದಿಂದ ಲ್ಯಾಪ್‌ಟಾಪ್‌ ಖರೀದಿಸಿದ ವಿದ್ಯಾರ್ಥಿನಿ ಇಶಾ ಆಸಿಫ್‌

    ಸರ್ಕಾರ ಜಾರಿಗೆ ತಂದ ನೀತಿಗಳು ಸಾಮಾನ್ಯ ನಾಗರಿಕರ ಜೀವನದಲ್ಲಿ ಬದಲಾವಣೆ ತರುವ ರೀತಿಯಲ್ಲಿ ನಾವು ಕೆಲಸ ಮಾಡಬೇಕು. ಜನರು ಬದಲಾವಣೆಯನ್ನು ಅನುಭವಿಸಿದಾಗ ಮಾತ್ರ, ಅದು ಬದಲಾವಣೆಯನ್ನು ಬಲಪಡಿಸುತ್ತದೆ. ಬದಲಾವಣೆಯನ್ನು ಒಂದು ಚಳುವಳಿಯಾಗಿ ಪರಿವರ್ತಿಸುತ್ತದೆ. 140 ಕೋಟಿ ಜನರ ಆಕಾಂಕ್ಷೆಗಳನ್ನು ಈಡೇರಿಸಲು ನಮಗೆ ಒಂದು ತಂಡವಾಗಲು ಉತ್ತಮ ಅವಕಾಶವಿದೆ. 2047ರ ವೇಳೆಗೆ ಭಾರತವನ್ನು ವಿಕಸಿತ ಮಾಡುವುದು ನಮ್ಮ ಗುರಿಯಾಗಿದೆ. ಪ್ರತಿಯೊಂದು ರಾಜ್ಯ, ಪ್ರತಿಯೊಂದು ನಗರ, ಪ್ರತಿಯೊಂದು ನಗರ ಪಾಲಿಕೆ ಮತ್ತು ಪ್ರತಿಯೊಂದು ಗ್ರಾಮವನ್ನು ವಿಕಸಿತ ಮಾಡುವ ಗುರಿ ನಮಗಿರಬೇಕು. ನಾವು ಈ ಮಾರ್ಗಗಳಲ್ಲಿ ಕೆಲಸ ಮಾಡಿದರೆ, ವಿಕಸಿತ ಭಾರತ ಆಗಲು 2047ರವರೆಗೆ ಕಾಯಬೇಕಾಗಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಡ್ರೆಸ್ ತಪ್ಪಾಗಿದ್ದಕ್ಕೆ ಗಲಾಟೆ – ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್!

    ಪುದುಚೇರಿ ಸಿಎಂ ರಂಗಸ್ವಾಮಿ, ಕರ್ನಾಟಕ ಸಿಎಂ ಸಿದ್ಧರಾಮಯ್ಯ ಮತ್ತು ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಸಭೆಗೆ ಗೈರುಹಾಜರಾಗಿದ್ದರು. ಆಂಧ್ರಪ್ರದೇಶ, ತಮಿಳುನಾಡು ಮತ್ತು ತೆಲಂಗಾಣ ಮುಖ್ಯಮಂತ್ರಿಗಳಾದ ಎನ್ ಚಂದ್ರಬಾಬು ನಾಯ್ಡು, ಎಂಕೆ ಸ್ಟಾಲಿನ್ ಮತ್ತು ರೇವಂತ್ ರೆಡ್ಡಿ ಉಪಸ್ಥಿತರಿದ್ದರು. ಜಮ್ಮು ಕಾಶ್ಮೀರದ ಸಿಎಂ ಒಮರ್ ಅಬ್ದುಲ್ಲಾ ಮತ್ತು ಹಿಮಾಚಲ ಪ್ರದೇಶದ ಸುಖವಿಂದರ್ ಸುಖು ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: Vijayapura | ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತ – ಯುವಕ ಸಾವು

  • ಮೋದಿ ನೇತೃತ್ವದ ನೀತಿ ಆಯೋಗದ ಸಭೆಗೆ ಸಿದ್ದರಾಮಯ್ಯ ಗೈರು

    ಮೋದಿ ನೇತೃತ್ವದ ನೀತಿ ಆಯೋಗದ ಸಭೆಗೆ ಸಿದ್ದರಾಮಯ್ಯ ಗೈರು

    ನವದೆಹಲಿ: ದೆಹಲಿಯಲ್ಲಿ (Delhi) ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದಲ್ಲಿ ನಡೆಯುತ್ತಿದ್ದ ನೀತಿ ಆಯೋಗದ ಸಭೆಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಗೈರಾಗಿದ್ದು, ಇಂತಹ ಮಹತ್ವದ ಸಭೆಗೆ ಬರದಿರಲು ಕಾರಣವೇನು ಎನ್ನುವ ಪ್ರಶ್ನೆ ಎಲ್ಲರಲ್ಲಿ ಮೂಡಿದೆ.

    ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವಿಕಸಿತ ಭಾರತಕ್ಕಾಗಿ ವಿಕಸಿತ ರಾಜ್ಯ ಹೆಸರಿನಲ್ಲಿ (Viksit Rajya for Viksit Bharat 2047) ಹತ್ತನೇ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಆರ್ಥಿಕ ಬೆಳವಣಿಗೆ, ಸಾಮಾಜಿಕ ಕಲ್ಯಾಣ, ಮೂಲಸೌಕರ್ಯ ಅಭಿವೃದ್ಧಿ, ಮತ್ತು ಸುಸ್ಥಿರತೆಯಂತಹ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ.ಇದನ್ನೂ ಓದಿ: ಪ್ರೀತಿಸಿದವನೊಂದಿಗೆ ಮನೆಬಿಟ್ಟು ಹೋದ ಮಗಳು – ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಶಂಕೆ

    ಜೊತೆಗೆ ರಾಷ್ಟ್ರೀಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಸ್ಥಳೀಯ ಅಗತ್ಯತೆಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಲು ಈ ಸಭೆ ವೇದಿಕೆಯಾಗಿದ್ದು, ಸಾಮಾನ್ಯವಾಗಿ ಎಲ್ಲಾ ಸಿಎಂಗಳು ರಾಜ್ಯದ ಅಭಿವೃದ್ಧಿ ವಿಚಾರಗಳಲ್ಲಿ ತಮ್ಮ ವಾದವನ್ನು ಪ್ರಧಾನಿ ಮುಂದೆ ಮಂಡಿಸುತ್ತಾರೆ.

    ಈ ಸಭೆಗೆ ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳು ಆಗಮಿಸಿದ್ದರು. ಈ ಪೈಕಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶ ಸಿಎಂ ಸುಖವಿಂದ್ರ ಸಿಂಗ್ ಸುಖು, ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಸೇರಿ ಹಲವು ಇತರೆ ಪಕ್ಷಗಳ ಸಿಎಂಗಳು ಭಾಗಿಯಾಗಿದ್ದರು. ಆದ್ರೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಗೈರಾಗಿದ್ದರು.ಇದನ್ನೂ ಓದಿ: `ಯುವನಿಧಿ’ ಗ್ಯಾರಂಟಿ ಹಣದಿಂದ ಲ್ಯಾಪ್‌ಟಾಪ್‌ ಖರೀದಿಸಿದ ವಿದ್ಯಾರ್ಥಿನಿ ಇಶಾ ಆಸಿಫ್‌

  • ನೀತಿ ಆಯೋಗದ ಸಭೆಯಿಂದ ಮಧ್ಯದಲ್ಲೇ ಹೊರ ಬಂದ ಮಮತಾ ಬ್ಯಾನರ್ಜಿ

    ನೀತಿ ಆಯೋಗದ ಸಭೆಯಿಂದ ಮಧ್ಯದಲ್ಲೇ ಹೊರ ಬಂದ ಮಮತಾ ಬ್ಯಾನರ್ಜಿ

    ನವದೆಹಲಿ: ಪಶ್ಚಿಮ ಬಂಗಾಳಕ್ಕೆ (West Bengal) ಬರಬೇಕಿದ್ದ ಕೇಂದ್ರ ಸರ್ಕಾರದಿಂದ ಹಣಕಾಸು ನೆರವು ನಿರಾಕರಿಸಿದ ವಿಷಯವನ್ನು ಪ್ರಸ್ತಾಪಿಸಿದಾಗ ತಮ್ಮ ಮೈಕ್ ಅನ್ನು ಮ್ಯೂಟ್ ಮಾಡಲಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ನಡೆಯುತ್ತಿದ್ದ ನೀತಿ ಆಯೋಗದ ಸಭೆಯಿಂದ (NITI Aayog Meeting) ಹೊರ ನಡೆದಿದ್ದಾರೆ.

    ರಾಷ್ಟ್ರಪತಿ ಭವನದ ಸಾಂಸ್ಕೃತಿನ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ ನಡೆಯುತ್ತಿದ್ದು ಸಭೆಯಲ್ಲಿ ಎಲ್ಲ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಭಾಗಿಯಾಗಿದ್ದರು. ತಮಿಳುನಾಡು, ಕರ್ನಾಟಕ, ಕೇರಳ, ದೆಹಲಿ,‌ ತೆಲಂಗಾಣ, ಪಂಜಾಬ್ ಸಿಎಂಗಳು ಮೊದಲೇ ಸಭೆಯನ್ನು ಬಹಿಷ್ಕರಿಸಿದ್ದರು.

     

    ಇಂಡಿಯಾ (INDIA) ಒಕ್ಕೂಟ ಆಡಳಿತ ರಾಜ್ಯಗಳ ಪೈಕಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತ್ರ ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಮಾತನಾಡಲು ಸರಿಯಾದ ಸಮಯ ನೀಡಿಲ್ಲ. ನನಗೂ ಮೊದಲು ಮಾತನಾಡಿದ ಸಿಎಂಗಳಿಗೆ 20 ನಿಮಿಷಕ್ಕೆ ಸಮಯ ನೀಡಲಾಗಿತ್ತು. ನನ್ನ ಸರದಿಯಲ್ಲಿ ಕೇವಲ ಐದು ನಿಮಿಷ ನೀಡಲಾಯಿತು. ನೆರವು ನಿರಾಕರಿಸಿದ ವಿಷಯ ಪ್ರಸ್ತಾಪಿಸಿದ್ದಂತೆ ಮೈಕ್ ಮ್ಯೂಟ್ ಮಾಡಲಾಯಿತು ಎಂದು ಅವರು ಆರೋಪಿಸಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಅತಿಹೆಚ್ಚು ಸ್ಟಾರ್ಟಪ್‌ಗಳು ನೋಂದಣಿಯಾಗಿರುವ ಎರಡನೇ ರಾಜ್ಯ ಕರ್ನಾಟಕ

    ಸರ್ಕಾರದ ಈ ಕ್ರಮವನ್ನು ಬಂಗಾಳ ಮತ್ತು ಎಲ್ಲಾ ಪ್ರಾದೇಶಿಕ ಪಕ್ಷಗಳಿಗೆ ಅವಮಾನ ಮಾಡಿದಂತೆ. ನನ್ನನ್ನು ಏಕೆ ತಡೆದಿದ್ದೀರಿ, ಏಕೆ ತಾರತಮ್ಯ ಮಾಡುತ್ತಿದ್ದೀರಿ? ವಿರೋಧ ಪಕ್ಷದಿಂದ ನಾನು ಮಾತ್ರ ಇಲ್ಲಿ ಪ್ರತಿನಿಧಿಸುತ್ತಿದ್ದೇನೆ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸಬೇಕು ಎಂಬ ಹೆಚ್ಚಿನ ಆಸಕ್ತಿಯಿಂದ ಈ ಸಭೆಗೆ ಹಾಜರಾಗಿದ್ದೆ ಎಂದು ಅವರು ಗುಡುಗಿದರು.

    ಇದೇ ವೇಳೆ ನೀತಿ ಆಯೋಗವನ್ನು ರದ್ದುಪಡಿಸುವ ಮತ್ತು ಯೋಜನಾ ಆಯೋಗವನ್ನು ಮರುಸ್ಥಾಪಿಸುವ ತನ್ನ ಬೇಡಿಕೆಯನ್ನು ಅವರು ಪುನರುಚ್ಚರಿಸಿದರು. ನೀತಿ ಆಯೋಗಕ್ಕೆ ಯಾವುದೇ ಹಣಕಾಸಿನ ಅಧಿಕಾರವಿಲ್ಲ, ಅದು ಹೇಗೆ ಕೆಲಸ ಮಾಡುತ್ತದೆ? ಅದಕ್ಕೆ ಹಣಕಾಸಿನ ಅಧಿಕಾರ ನೀಡಿ ಅಥವಾ ಯೋಜನಾ ಆಯೋಗವನ್ನು ಮರಳಿ ತನ್ನಿ ಎಂದು ಅವರು ಆಗ್ರಹಿಸಿದರು. ಇದನ್ನೂ ಓದಿ: ಬೆಂಗಳೂರು ಪಿಜಿಯಲ್ಲಿ ಯುವತಿಯ ಹತ್ಯೆ – ತಲೆಮರೆಸಿಕೊಂಡಿದ್ದ ಆರೋಪಿ ಮಧ್ಯಪ್ರದೇಶದಲ್ಲಿ ಅರೆಸ್ಟ್

     

  • ಮುಂದಿನ 25 ವರ್ಷದಲ್ಲಿ ಕಾವೇರಿ ಕೊಳ್ಳದಲ್ಲಿ ನೀರಿನ ತೀವ್ರ ಕೊರತೆ: ನೀತಿ ಆಯೋಗ

    ಮುಂದಿನ 25 ವರ್ಷದಲ್ಲಿ ಕಾವೇರಿ ಕೊಳ್ಳದಲ್ಲಿ ನೀರಿನ ತೀವ್ರ ಕೊರತೆ: ನೀತಿ ಆಯೋಗ

    ಬೆಂಗಳೂರು: ಮುಂಗಾರು ಮಳೆ (Monsoon Rain) ಹೊತ್ತಲ್ಲಿ ಆತಂಕ ಮೂಡಿಸುವ ಸುದ್ದಿಯನ್ನು ನೀತಿ ಆಯೋಗ (Niti Aayoga) ನೀಡಿದೆ. ಮುಂದಿನ 25 ವರ್ಷದಲ್ಲಿ ಕಾವೇರಿ ಕೊಳ್ಳ ಪ್ರದೇಶದಲ್ಲಿ (Basin of The Cauvery River) ನೀರಿನ ತೀವ್ರ ಕೊರತೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.

    ಕರ್ನಾಟಕ (Karnataka) ಮತ್ತು ತಮಿಳುನಾಡು (Tamilnadu) ರಾಜ್ಯಗಳು ಕಡಿಮೆ ನೀರಿನಲ್ಲಿ ಬೆಳೆ ಬೆಳೆಯುವ ಪದ್ದತಿಯನ್ನು ಅಳವಡಿಸಿಕೊಳ್ಳುವ ಬದಲು ಹೆಚ್ಚು ನೀರನ್ನು ಉಪಯೋಗಿಸುವ ಯೋಜನೆಗಳಿಗೆ ಕೈ ಹಾಕುತ್ತಿವೆ. ಇದರಿಂದ ಕರ್ನಾಟಕ ಮತ್ತು ತಮಿಳುನಾಡು ಮಧ್ಯೆ ಬಿಕ್ಕಟ್ಟು ಹೆಚ್ಚಾಗುವ ಸಂಭವವಿದೆ. ಹೀಗಾಗಿ ಅಂತರ್ಜಲ ಹೆಚ್ಚಳಕ್ಕೆ ಮುಂದಾಗಬೇಕು ಎಂದು ಹೇಳಿದೆ. ಇದನ್ನೂ ಓದಿ: ರಾಜ್ಯದಲ್ಲಿ ಡೆಂಗ್ಯೂ ತಾಂಡವ – ಮಹದೇವಪುರ ಟೆಕ್ ಹಬ್‍ನಲ್ಲಿ ಹೆಚ್ಚಿದ ಕೇಸ್

     

    ಪ್ರಸಕ್ತ ಮುಂಗಾರಿನ ಮೊದಲ 40 ದಿನದಲ್ಲಿ ಚಿಕ್ಕಮಗಳೂರಿನಲ್ಲಿ 28%ರಷ್ಟು, ಕೊಡಗಿನಲ್ಲಿ 21%ರಷ್ಟು, ಶಿವಮೊಗ್ಗದಲ್ಲಿ 20%ರಷ್ಟು ಮಳೆ ಕೊರತೆಯಾಗಿದೆ. ಕೊಡಗಿನಲ್ಲಿ ಮಳೆ ಕಡಿಮೆಯಾದ ಕಾರಣ ಕಾವೇರಿಕೊಳ್ಳದ ಜಲಾಶಯಗಳ ಒಳಹರಿವು ಕೂಡ ಕಡಿಮೆಯಾಗಿದೆ.

  • ಕೃಷಿ, ಜಲ ಸಂಪನ್ಮೂಲ ಅಭಿವೃದ್ಧಿಯಲ್ಲಿ ದೇಶದಲ್ಲೇ ರಾಯಚೂರಿಗೆ ಫಸ್ಟ್ ರ‍್ಯಾಂಕ್

    ಕೃಷಿ, ಜಲ ಸಂಪನ್ಮೂಲ ಅಭಿವೃದ್ಧಿಯಲ್ಲಿ ದೇಶದಲ್ಲೇ ರಾಯಚೂರಿಗೆ ಫಸ್ಟ್ ರ‍್ಯಾಂಕ್

    – ಕೇಂದ್ರದಿಂದ ವಿಶೇಷ ಅನುದಾನ ಘೋಷಣೆ

    ರಾಯಚೂರು: ಕೃಷಿ (Agricultural development) ಮತ್ತು ಜಲ ಸಂಪನ್ಮೂಲ ಅಭಿವೃದ್ಧಿಯಲ್ಲಿ (Water Resources Development) ರಾಯಚೂರು (Raichur) ಜಿಲ್ಲೆ ದೇಶದಲ್ಲೇ ಮೊದಲನೇ ರ‍್ಯಾಂಕ್ ಪಡೆದಿದೆ. ಮಹಾತ್ಮಾಕಾಂಕ್ಷೆ ಜಿಲ್ಲೆಗಳ ಕಾರ್ಯಕ್ರಮದಡಿ ಕೇಂದ್ರ ಸರ್ಕಾರದ ನೀತಿ ಆಯೋಗದಿಂದ (NITI Aayog) ಜಿಲ್ಲೆ ಫಸ್ಟ್ ರ‍್ಯಾಂಕ್ ಪಡೆದುಕೊಂಡಿದೆ.

    2023ರ ಮಾರ್ಚ್‍ನಲ್ಲಿ ಜಿಲ್ಲಾಡಳಿತದ ಕಾರ್ಯವೈಖರಿ ಆಧಾರದ ಮೇಲೆ ಜಿಲ್ಲೆಗೆ ಈ ರ‍್ಯಾಂಕ್ ನೀಡಲಾಗಿದೆ. ರಾಜ್ಯದಲ್ಲಿ ರಾಯಚೂರು ಹಾಗೂ ಯಾದಗಿರಿ ಮಹತ್ವಾಕಾಂಕ್ಷೆ ಜಿಲ್ಲೆಗಳಾಗಿದ್ದು, ದೇಶದ ಒಟ್ಟು 115 ಮಹತ್ವಾಕಾಂಕ್ಷೆ ಜಿಲ್ಲೆಗಳಲ್ಲಿ ರಾಯಚೂರಿಗೆ ಮೊದಲ ಸ್ಥಾನ ದೊರೆತಿದೆ. ಕಾರ್ಯಕ್ಷಮತೆ ಮೇರೆಗೆ, ಮೊದಲ ಸ್ಥಾನ ಪಡೆದ ಹಿನ್ನೆಲೆ ಹೆಚ್ಚುವರಿ 3 ಕೋಟಿ ರೂ. ಅನುದಾನ ಪಡೆಯಲು ಜಿಲ್ಲೆ ಅರ್ಹತೆ ಪಡೆದಿದೆ. ಇದನ್ನೂ ಓದಿ: ಹೊಸ ಸಂಸತ್ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ವಿಶೇಷ ನಾಣ್ಯ ಬಿಡುಗಡೆ

    ಕೃಷಿ ಕ್ಷೇತ್ರ ವಿಸ್ತರಣೆ, ಜಲ ಸಂರಕ್ಷಣೆ ವಿಧಾನಗಳು ಹಾಗೂ ನೀತಿ ಆಯೋಗದ ಮಾನದಂಡಗಳ ಅಡಿ ಮಂಡಿಸಿರುವ ಜಿಲ್ಲೆಯ ಸ್ಥಿತಿಗತಿಗಳ ವರದಿ ಆಧಾರದ ಮೇಲೆ ಜಿಲ್ಲೆಗೆ ಈ ಸ್ಥಾನ ದೊರಕಿದೆ. ಈ ವಿಚಾರವಾಗಿ ಕೇಂದ್ರ ನೀತಿ ಆಯೋಗದ ಹೆಚ್ಚುವರಿ ಕಾರ್ಯದರ್ಶಿ ವಿ.ರಾಧಾ ಅವರು ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ವಂದಿತಾ ಶರ್ಮಾರಿಗೆ ಪತ್ರ ಬರೆದು ಅಭಿನಂದಿಸಿದ್ದಾರೆ. ರಾಯಚೂರು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ಹಾಗೂ ಕೇಂದ್ರ ಪ್ರಭಾರಿ ಅಧಿಕಾರಿಗಳನ್ನು ನೀತಿ ಆಯೋಗ ಶ್ಲಾಘಿಸಿದೆ. ಹಂಚಿಕೆಯಾದ ಹೆಚ್ಚುವರಿ ಅನುದಾನಕ್ಕೆ (Central Government Grant) ಕ್ರಿಯಾ ಯೋಜನಾ ವರದಿಯನ್ನ ನೀಡಲು ಆಯೋಗ ಸೂಚಿಸಿದೆ.

    ಕೃಷಿ, ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಸೇರಿ ಜಿಲ್ಲೆಯ ಸ್ಥಿತಿಗತಿಗಳ ವಾಸ್ತವ ವರದಿಗಳ ಪರಿಶೀಲನೆ ನಡೆಸಿ ನೀತಿ ಆಯೋಗ ಮಹತ್ವಾಕಾಂಕ್ಷೆ ಜಿಲ್ಲೆಗಳ ಮೇಲೆ ನಿಗಾ ಇರಿಸುತ್ತದೆ. ಅದರ ಆಧಾರದ ಮೇಲೆ ಸ್ಥಾನಗಳನ್ನು ನಿರ್ಧರಿಸುತ್ತದೆ. ಇದನ್ನೂ ಓದಿ: ಜೂನ್ ಯಾಕೆ? ನಾಳೆಯೇ ನಮ್ಮ ಮನೆ ಹತ್ರ ಬಂದು ಮಲ್ಕೊಳ್ಳಲಿ: ಪ್ರತಾಪ್ ಆರೋಪಕ್ಕೆ ಡಿಕೆಶಿ ವ್ಯಂಗ್ಯ

  • ಬಡತನ ಸೂಚ್ಯಂಕದಲ್ಲಿ ಯುಪಿಗೆ ಕಳಪೆ ಸ್ಥಾನ: ಬಿಜೆಪಿ ವಿರುದ್ಧ ಅಖಿಲೇಶ್ ಕಿಡಿ

    ಬಡತನ ಸೂಚ್ಯಂಕದಲ್ಲಿ ಯುಪಿಗೆ ಕಳಪೆ ಸ್ಥಾನ: ಬಿಜೆಪಿ ವಿರುದ್ಧ ಅಖಿಲೇಶ್ ಕಿಡಿ

    ಲಕ್ನೋ: ನೀತಿ ಆಯೋಗದ ಬಡತನ ಸೂಚ್ಯಂಕದ ವರದಿಯಲ್ಲಿ ಉತ್ತರಪ್ರದೇಶ ಕೆಳಗಿನ ಮೂರನೇ ರಾಜ್ಯಗಳಲ್ಲಿದೆ ಎಂದು ಬಿಜೆಪಿ ವಿರುದ್ಧ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕಿಡಿಕಾರಿದರು.

    ಈ ಬಗ್ಗೆ ಟ್ವೀಟ್ ಮಾಡಿದ ಅವರು, ಬಿಜೆಪಿ ಆಡಳಿತದಲ್ಲಿ ನೀತಿ ಆಯೋಗದ ಮೊದಲ ಬಹು ಆಯಾಮದ ಬಡತನ ಸೂಚ್ಯಂಕದಲ್ಲಿ ಉತ್ತರ ಪ್ರದೇಶ ಮೂರು ಬಡ ರಾಜ್ಯಗಳಲ್ಲಿ ಒಂದಾಗಿದೆ. ಅತ್ಯಧಿಕ ಅಪೌಷ್ಟಿಕತೆಯ ದರದಲ್ಲಿ ಉತ್ತರಪ್ರದೇಶವು ಮೂರನೇ ಸ್ಥಾನದಲ್ಲಿದೆ ಎಂದು ಕಿಡಿಕಾರಿದರು.

    ಮಕ್ಕಳ ಹಾಗೂ ಹದಿಹರೆಯದವರ ಮರಣದ ದರ ಉತ್ತರಪ್ರದೇಶದ ಇಡೀ ದೇಶದಲ್ಲಿ ಅತ್ಯಂತ ಕೆಟ್ಟ ಸ್ಥಾನದಲ್ಲಿದೆ. ಇವು ಬಿಜೆಪಿ ಸರ್ಕಾರದ ವೈಫಲ್ಯಕ್ಕೆ ಬಹು ಮುಖ್ಯ ಸಾಕ್ಷಿಯಾಗಿದೆ ಎಂದು ಟ್ವೀಟ್‍ನಲ್ಲಿ ಹೇಳಿದ್ದಾರೆ. ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡದೇ ಶುಲ್ಕ ವಿಧಿಸಿದ ಸರ್ಕಾರ – ರೈತರು ಕಂಗಾಲು

    ಈ ವರದಿಗೆ ಸಂಬಂಧಿಸಿದಂತೆ ಪತ್ರಿಕೆಯೊಂದರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಸೂಚ್ಯಂಕದ ಪ್ರಕಾರ ಬಿಹಾರದ ಶೇ 51.91 ರಷ್ಟು ಜನರು ಬಡವರಾಗಿದ್ದಾರೆ. ಈ ಪ್ರಮಾಣವು ಜಾರ್ಖಂಡ್‍ನಲ್ಲಿ ಶೇ 42.16 ಮತ್ತು ಉತ್ತರ ಪ್ರದೇಶದಲ್ಲಿ ಶೇ 37.79 ರಷ್ಟಿದೆ. ದೇಶಪ್ರೇಮ ಸಾರುವ ಟ್ಯಾಟೂಗಳಿಗೆ ಉಕ್ರೇನ್‍ನಲ್ಲಿ ಸಖತ್ ಡಿಮ್ಯಾಂಡ್

  • ರಾಜ್ಯದಲ್ಲಿ ಯಾದಗಿರಿ ಅತಿ ಬಡ, ಬೆಂಗಳೂರು ಶ್ರೀಮಂತ ಜಿಲ್ಲೆ – ನಿಮ್ಮ ಜಿಲ್ಲೆಗೆ ಎಷ್ಟನೇ ಸ್ಥಾನ?

    ರಾಜ್ಯದಲ್ಲಿ ಯಾದಗಿರಿ ಅತಿ ಬಡ, ಬೆಂಗಳೂರು ಶ್ರೀಮಂತ ಜಿಲ್ಲೆ – ನಿಮ್ಮ ಜಿಲ್ಲೆಗೆ ಎಷ್ಟನೇ ಸ್ಥಾನ?

    – ರಾಜ್ಯಗಳ ಪೈಕಿ ಕರ್ನಾಟಕಕ್ಕೆ 19ನೇ ಸ್ಥಾನ
    – ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶದಲ್ಲಿ ಹೆಚ್ಚು ಬಡವರು

    ನವದೆಹಲಿ: ನೀತಿ ಆಯೋಗ ಬಹು ಆಯಾಮದ ಬಡತನ ಸೂಚ್ಯಂಕ ವರದಿ ಪ್ರಕಟವಾಗಿದೆ. ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶಗಳು ಭಾರತದಲ್ಲೇ ಅತಿ ಬಡವರನ್ನು ಹೊಂದಿರುವ ರಾಜ್ಯ ಎಂಬ ಹಣೆಪಟ್ಟಿಗೆ ಭಾಜನವಾಗಿದ್ದರೆ ಪಟ್ಟಿಯಲ್ಲಿ ಕರ್ನಾಟಕ 19ನೇ ಸ್ಥಾನವನ್ನು ಪಡೆದಿದೆ.

    ಸೂಚ್ಯಂಕ ಪಟ್ಟಿಯಲ್ಲಿ ಬಿಹಾರ ಮೊದಲ ಸ್ಥಾನ ಪಡೆದಿದೆ. ಇಲ್ಲಿನ ಜನಸಂಖ್ಯೆಯಲ್ಲಿ 51.91% ಬಡವರಿದ್ದಾರೆ. ನಂತರದ ಸ್ಥಾನಗಳನ್ನು ಪಡೆದ ಜಾರ್ಖಂಡ್ 42.16%, ಉತ್ತರ ಪ್ರದೇಶ 37.79%, ಮಧ್ಯಪ್ರದೇಶ 36.65% ಹಾಗೂ ಮೇಘಾಲಯದಲ್ಲಿ 32.67% ಬಡವರನ್ನು ಹೊಂದಿದೆ.

    ಕೇರಳ ರಾಜ್ಯ ಅತಿ ಕಡಿಮೆ ಬಡವರನ್ನು ಹೊಂದಿರುವ ಪಟ್ಟಿಗೆ ಸೇರಿದೆ. ಕೇರಳದ ಒಟ್ಟು ಜನಸಂಖ್ಯೆಯಲ್ಲಿ 0.71ರಷ್ಟು ಮಾತ್ರ ಬಡವರಿದ್ದಾರೆ. ನಂತರದ ಸ್ಥಾನಗಳನ್ನು ಗೋವಾ (3.76%), ಸಿಕ್ಕಿಂ(3.82%), ತಮಿಳುನಾಡು(4.89%), ಹಾಗೂ ಪಂಜಾಬ್ (5.59%) ಪಡೆದುಕೊಂಡಿದೆ.

     

    ಬಡತನ ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕ 19ನೇ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ. ಕರ್ನಾಟಕದ ಜನಸಂಖ್ಯೆಯಲ್ಲಿ 13.16% ರಷ್ಟು ಬಡವರಿದ್ದಾರೆ. ಕರ್ನಾಟಕ ಜಿಲ್ಲೆಗಳಲ್ಲಿ ಯಾದಗಿರಿ ಅತಿ ಹೆಚ್ಚು ಬಡವರನ್ನು ಹೊಂದಿರುವ ಜಿಲ್ಲೆಯಾಗಿದೆ. ನಂತರದ ಸ್ಥಾನಗಳಲ್ಲಿ ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಿವೆ. ಹಾಗೆಯೇ ಶ್ರೀಮಂತ ಜಿಲ್ಲೆಗಳಲ್ಲಿ ಬೆಂಗಳೂರು ನಗರ ಮುಂಚೂಣಿಯಲ್ಲಿದ್ದರೇ, ಮಂಡ್ಯ, ಹಾಸನ, ದಕ್ಷಿಣ ಕನ್ನಡ, ಮೈಸೂರು ನಂತರದ ಸ್ಥಾನಗಳನ್ನು ಪಡೆದುಕೊಂಡಿದೆ.

     

    ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ?
    ನಂ.1 ಸ್ಥಾನದಲ್ಲಿರುವ ಯಾದಗಿರಿ ಜಿಲ್ಲೆಯಲ್ಲಿ ಒಟ್ಟು ಜನಸಂಖ್ಯೆಯಲ್ಲಿ 41.67%ರಷ್ಟು ಜನರು ಬಡವರಾಗಿದ್ದಾರೆ. ನಂತರದ ಸ್ಥಾನಗಳಲ್ಲಿರುವ ರಾಯಚೂರು (32.19%), ಕೊಪ್ಪಳ (24.6%), ಹೊಸದಾಗಿ ಸ್ಥಾಪನೆಯಾದ ವಿಜಯನಗರ ಜಿಲ್ಲೆ ಸೇರಿದಂತೆ ಬಳ್ಳಾರಿ(23.4%), ಬಿಜಾಪುರ(22.4%) ಕಲಬುರಗಿ (21.8%), ಗದಗ (20.27%), ಬಾಗಲಕೋಟೆ (20.23%), ಬೀದರ್ (19.42%), ಚಾಮರಾಜನಗರ (18.91%), ಚಿತ್ರದುರ್ಗ (15.79%), ಹಾವೇರಿ (15.61%), ಚಿಕ್ಕಬಳ್ಳಾಪುರ (15.16%), ತುಮಕೂರು (14.00%), ಉತ್ತರಕನ್ನಡ(13.21%), ಶಿವಮೊಗ್ಗ (12.72%), ಬೆಳಗಾವಿ (12.26%), ದಾವಣಗೆರೆ (11.71%), ಚಿಕ್ಕಮಗಳೂರು(11.19%), ಉಡುಪಿ(10.32%), ಕೋಲಾರ (10.30%), ಧಾರವಾಡ (9.65%), ರಾಮನಗರ (8.77%), ಕೊಡಗು (8.74%), ಬೆಂಗಳೂರು ಗ್ರಾಮಾಂತರ(8.39%), ಮೈಸೂರು(7.79%), ದಕ್ಷಿಣಕನ್ನಡ (6.69%), ಹಾಸನ(6.64%), ಮಂಡ್ಯ(6.62%), ಬೆಂಗಳೂರು (2.31) ಬಡವರಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಕೊರೊನಾ ಬ್ಲಾಸ್ಟ್ – 12 ವಿದ್ಯಾರ್ಥಿಗಳಿಗೆ ಪಾಸಿಟಿವ್ 

     ಮಾನದಂಡ ಏನು?
    ಜಾಗತಿಕ ಮನ್ನಣೆ ಪಡೆದ ಆಕ್ಸ್‌ಫರ್ಡ್ ಬಡತನ ಮತ್ತು ಮಾನವ ಅಭಿವೃದ್ಧಿ ಉಪಕ್ರಮ ಹಾಗೂ ವಿಶ್ವ ಸಂಸ್ಥೆಯ ಅಭಿವೃದ್ಧಿ ಯೋಜನೆಯ ಸಮೀಕ್ಷಾ ಮಾನದಂಡವನ್ನು ಅನುಸರಿಸಿ ಈ ಸೂಚ್ಯಂಕವನ್ನು ಸಿದ್ಧಪಡಿಸಲಾಗುತ್ತದೆ ಎಂದು ನೀತಿ ಆಯೋಗ ತಿಳಿಸಿದೆ. ಇದನ್ನೂ ಓದಿ: ವಿಶ್ವಕ್ಕೆ ಆತಂಕ ತಂದಿಟ್ಟ ರೂಪಾಂತರಿ ತಳಿ – ಹೈ ಅಲರ್ಟ್‌ ಘೋಷಣೆ, 87 ಮಂದಿಗೆ ಸೋಂಕು

    ಆರೋಗ್ಯ, ಶಿಕ್ಷಣ ಹಾಗೂ ಜೀವನ ಮಟ್ಟವನ್ನು ಆಧರಿಸಿ ಬಡತನವನ್ನು ಅಳೆಯಲಾಗಿದೆ. ಇವುಗಳಲ್ಲಿ ಪೌಷ್ಟಿಕತೆ, ಶಿಶು ಮರಣ, ಕುಡಿಯುವ ನೀರು, ನೈರ್ಮಲ್ಯ, ವಿದ್ಯುತ್, ಬ್ಯಾಂಕ್ ಖಾತೆ ಇತ್ಯಾದಿಗಳನ್ನು ಒಳಗೊಂಡಿದೆ.

  • ಇಂದು, ನಾಳೆ ನೀತಿ ಆಯೋಗದ ಸಮಾಲೋಚಕರ ಸಭೆ – ಕರ್ನಾಟಕದ ಸುಸ್ಥಿರ ಅಭಿವೃದ್ಧಿ ಗುರಿ ಸೂಚ್ಯಾಂಕಗಳ ಪ್ರಗತಿ ಬಗ್ಗೆ ಚರ್ಚೆ

    ಇಂದು, ನಾಳೆ ನೀತಿ ಆಯೋಗದ ಸಮಾಲೋಚಕರ ಸಭೆ – ಕರ್ನಾಟಕದ ಸುಸ್ಥಿರ ಅಭಿವೃದ್ಧಿ ಗುರಿ ಸೂಚ್ಯಾಂಕಗಳ ಪ್ರಗತಿ ಬಗ್ಗೆ ಚರ್ಚೆ

    ಬೆಂಗಳೂರು: ಕರ್ನಾಟಕದ ಸುಸ್ಥಿರ ಅಭಿವೃದ್ಧಿ ಗುರಿ ಸೂಚ್ಯಾಂಕಗಳ ಪ್ರಗತಿ ಕುರಿತು ಚರ್ಚಿಸಲು ರಾಜ್ಯಕ್ಕೆ ಆಗಮಿಸಿರುವ ನೀತಿ ಆಯೋಗದ ಸಮಾಲೋಚಕರಾದ ಸನ್ಯುಕ್ತಾ ಸಮದ್ದಾರ್ ಅವರನ್ನು ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಹೂಗುಚ್ಛ ನೀಡುವ ಮೂಲಕ ಸ್ವಾಗತ ಕೋರಿದರು.

    ಇಂದು ಮತ್ತು ನಾಳೆ ವಿಕಾಸಸೌಧದಲ್ಲಿ ನಡೆಯಲಿರುವ ಸಭೆಯಲ್ಲಿ ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳು ಭಾಗವಹಿಸಲಿದ್ದು ಮುಖ್ಯ ಕಾರ್ಯದರ್ಶಿಗಳು ಅಧ್ಯಕ್ಷತೆವಹಿಲಿದ್ದಾರೆ.

    ಕರ್ನಾಟಕದ ಸುಸ್ಥಿರ ಅಭಿವೃದ್ಧಿ ಗುರಿ ಸೂಚ್ಯಾಂಕಗಳ ಪ್ರಗತಿಯನ್ನು ಇನ್ನಷ್ಟು ಸುಧಾರಿಸಲು ಹಾಗೂ ಇತರ ರಾಜ್ಯಗಳಲ್ಲಿ ಆಗುತ್ತಿರುವ ಉತ್ತಮ ಯೋಜನೆಗಳ/ಸಾಧನೆಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಅಲ್ಲದೇ ವಿಶೇಷವಾಗಿ ಕೇಂದ್ರ ಸರ್ಕಾರದ ಬಡತನ ನಿರ್ಮೂಲನೆಗಾಗಿ ಬಹು ಆಯಾಮದ ಬಡತನ ಸೂಚ್ಯಾಂಕಗಳ ಬಗ್ಗೆ ಎಲ್ಲಾ ರಾಜ್ಯಗಳೊಂದಿಗೆ ನೀತಿ ಆಯೋಗದ ಮೂಲಕ ಕೆಲವು ಕಾರ್ಯತಂತ್ರಗಳನ್ನು ಹಂಚಿಕೊಳ್ಳಲಾಗುವುದು.

    ಇಂದಿನ ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾ ಹಾಗೂ ಶಾಲಿನಿ ರಜನೀಶ್ ಅವರು ಸೇರಿದಂತೆ ಅನೇಕ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

  • 50 ಲಕ್ಷ ಕೊರೊನಾ ಲಸಿಕೆ ಖರೀದಿಸಲಿದೆ ಕೇಂದ್ರ ಸರ್ಕಾರ

    50 ಲಕ್ಷ ಕೊರೊನಾ ಲಸಿಕೆ ಖರೀದಿಸಲಿದೆ ಕೇಂದ್ರ ಸರ್ಕಾರ

    ನವದೆಹಲಿ: ಕೆಲವೇ ತಿಂಗಳಲ್ಲಿ ಕೋವಿಡ್‌19ಗೆ ಲಸಿಕೆ ಬರಬಹುದು ಎಂಬ ನಿರೀಕ್ಷೆಗಳ ನಡುವೆ ಕೇಂದ್ರ ಸರ್ಕಾರ 50 ಲಕ್ಷದಷ್ಟು ಕೊರೊನಾ ಲಸಿಕೆಯನ್ನು ಖರೀದಿಸಬಹುದು ಎಂದು ವರದಿಯಾಗಿದೆ.

    ಮೊದಲ ಹಂತದಲ್ಲಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಸಿಬ್ಬಂದಿಗೆ, ಸೈನಿಕರಿಗೆ ಲಸಿಕೆಯನ್ನ ನೀಡಲಾಗುತ್ತದೆ. ಹಿರಿಯ ನಾಗರಿಕರು, ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಲಸಿಕೆಯನ್ನು ನೀಡುವ ನಿರೀಕ್ಷೆ ಇದೆ.

    ನೀತಿ ಆಯೋಗ, ಆರೋಗ್ಯ ಸಚಿವಾಲಯ ಮತ್ತು ಔಷಧ ಕಂಪನಿಗಳ ಜೊತೆಗೆ ಸೋಮವಾರ ಸಭೆ ನಡೆದಿತ್ತು. ಕೊರೊನಾ ಲಸಿಕೆಯ ಉತ್ಪಾದನಾ ಸಾಮರ್ಥ್ಯ, ಲಸಿಕೆ ಬೆಲೆ ಮತ್ತು ಸರ್ಕಾರದಿಂದ ಏನೆಲ್ಲ ಸಹಕಾರ ನೀಡಬಹುದು ಎಂಬುದರ ಬಗ್ಗೆ ಚರ್ಚೆ ನಡೆದಿದೆ.

    ಈಗಾಗಲೇ ಇಂಗ್ಲೆಂಡಿನ ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಅಭಿವೃದ್ಧಿ ಪಡಿಸಿರುವ ಆಸ್ಟ್ರಾಜೆನೆಕಾ ಲಸಿಕೆ ಭಾರತದಲ್ಲಿ ಮೂರನೇ ಹಂತದ ಪ್ರಯೋಗದಲ್ಲಿದ್ದು ಈ ವರ್ಷದ ಅಂತ್ಯದ ವೇಳೆಗೆ ಲಭ್ಯವಾಗಬಹುದು ಎನ್ನಲಾಗಿದೆ.

    ಇತ್ತ ವಿಶ್ವದ ಮೊದಲ ಸ್ಪುಟ್ನಿಕ್ v ಹೆಸರಿನ ಲಸಿಕೆ ಕಂಡುಹಿಡಿದಿದ್ದಾಗಿ ಹೇಳಿಕೊಂಡಿರುವ ರಷ್ಯಾ ಅಂತಾರಾಷ್ಟ್ರೀಯ ಉತ್ಪಾದನೆಯನ್ನ ಆರಂಭಿಸಲಿದೆ. ಅದರಲ್ಲೂ ಭಾರತದಲ್ಲೂ ಲಸಿಕೆಯ ಉತ್ಪಾದನೆಗೆ ಉತ್ಸುಕವಾಗಿದೆ. ತನ್ನ ಗಾಮಲೆಯಾ ಸಂಸ್ಥೆ ಕಂಡುಹಿಂಡಿದಿರುವ ಲಸಿಕೆಯನ್ನು ಭಾರತ ಉತ್ಪಾದಿಸಬಹುದು ಎಂದು ರಷ್ಯಾ ಹೇಳಿದೆ.

    ಸೌದಿ ಅರೇಬಿಯಾ, ಬ್ರೆಜಿಲ್, ಫಿಲಿಪೈನ್ಸ್ ಕೊರೋನಾ ಲಸಿಕೆ ಪ್ರಯೋಗದಲ್ಲಿ ಭಾಗಿ ಆಗಲಿವೆ ಎಂದು ರಷ್ಯಾ ಹೇಳಿದೆ. ರಷ್ಯಾದಲ್ಲಿ ಮುಂದಿನ ವಾರದಷ್ಟೊತ್ತಿಗೆ ಬರೋಬ್ಬರಿ 40 ಸಾವಿರ ಮಂದಿಗೆ ಮೂರನೇ ಹಂತದ ಲಸಿಕೆ ಪ್ರಯೋಗ ಮಾಡಲಾಗುತ್ತದೆ.

    74ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ 7ನೇ ಬಾರಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿ ಭಾಷಣ ಮಾಡಿದ್ದ ಮೋದಿ, ಪ್ರತಿಯೊಬ್ಬರು ಕೊರೊನಾಗೆ ಲಸಿಕೆ ಯಾವಾಗ ಬರುತ್ತದೆ ಎಂದು ಕೇಳುತ್ತಿದ್ದಾರೆ. ಆದರೆ ಮೂರು ಲಸಿಕೆಗೆಗಳು ವಿವಿಧ ಹಂತದ ಪ್ರಯೋಗದಲ್ಲಿದೆ. ವಿಜ್ಞಾನಿಗಳಿಂದ ಈ ಲಸಿಕೆಗೆ ಹಸಿರು ನಿಶಾನೆ ಸಿಕ್ಕಿದ ಕೂಡಲೇ ದೊಡ್ಡ ಪ್ರಮಾಣದಲ್ಲಿ ಉತ್ಪಾದನೆಯಾಗಲಿದೆ ಎಂದು ತಿಳಿಸಿದರು.

    ಹೈದರಾಬಾದಿನ ಭಾರತ್‌ ಬಯೋಟೆಕ್‌ ಕಂಪನಿ ಮತ್ತು ಝೈಡಸ್ ಕ್ಯಾಡಿಲ ಅಭಿವೃದ್ಧಿ ಪಡಿಸುತ್ತಿರುವ ಲಸಿಕೆಯ ಮೊದಲ ಮತ್ತು ಎರಡನೇ ಹಂತದ ಪ್ರಯೋಗ ನಡೆಯುತ್ತಿದೆ.

     

  • ಬೆಂಗ್ಳೂರಿಗರಿಗೆ ಸಿಹಿ ಸುದ್ದಿ: ಸಬ್ ಅರ್ಬನ್ ರೈಲು ಯೋಜನೆಗೆ ನೀತಿ ಆಯೋಗದಿಂದ ಗ್ರೀನ್‌ಸಿಗ್ನಲ್

    ಬೆಂಗ್ಳೂರಿಗರಿಗೆ ಸಿಹಿ ಸುದ್ದಿ: ಸಬ್ ಅರ್ಬನ್ ರೈಲು ಯೋಜನೆಗೆ ನೀತಿ ಆಯೋಗದಿಂದ ಗ್ರೀನ್‌ಸಿಗ್ನಲ್

    ಬೆಂಗಳೂರು: ಬೆಂಗಳೂರಿಗೆ ಉಪನಗರ ರೈಲು ಯೋಜನೆಗೆ ಕೇಂದ್ರ ನೀತಿ ಆಯೋಗ ಸಭೆಯಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಮೂಲಕ ದೀಪಾವಳಿ ಬಳಿಕ ಬೆಂಗಳೂರಿಗರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಸಬ್ ಅರ್ಬನ್ ರೈಲಿಗೆ ಇದ್ದ ತೊಡಕುಗಳು ನಿವಾರಣೆಯಾಗಿವೆ. ಬೆಂಗಳೂರಿಗೆ ಸಬ್ ಅರ್ಬನ್ ರೈಲು ಎರಡು ದಶಕಗಳ ಬೇಡಿಕೆಯಾಗಿತ್ತು. ಸೋಮವಾರ ರೈಲ್ವೇ ಚೇರ್ ಮೆನ್, ರೈಲ್ವೆ ಸಚಿವ ಪಿಯೂಷ್ ಗೋಯಲ್, ಆರ್ಥಿಕ ಇಲಾಖೆ ಮುಖ್ಯಸ್ಥರು ಹಾಗೂ ನೀತಿ ಆಯೋಗದ ಮುಖ್ಯಸ್ಥರ ಜೊತೆ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರು ಸಬ್ ಅರ್ಬನ್ ರೈಲಿಗೆ ಅನುಮತಿ ಸಿಕ್ಕಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಬ್ ಅರ್ಬನ್ ರೈಲು ಯೋಜನೆಗೆ ರಾಜ್ಯ ಸರ್ಕಾರದಿಂದ ವಿಳಂಬ – ಡಿವಿಎಸ್ ಆರೋಪ

    ಈ ಹಿಂದೆ ಇದ್ದ ಕಾನೂನು ತೊಡಕುಗಳು ನಿವಾರಣೆಯಾಗಿವೆ. ಆದಷ್ಟು ಬೇಗ ಕೇಂದ್ರ ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ಸಿಗಬೇಕಿದೆ. ನಮ್ಮ ರಾಜ್ಯದ ಎಲ್ಲಾ ಸಚಿವರು, ಶಾಸಕರು, ಸಂಸದರು ಪ್ರಧಾನಿಗಳಿಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡುತ್ತೇವೆ. ದಿವಂಗತ, ಮಾಜಿ ಸಚಿವ ಅನಂತ್‌ಕುಮಾರ್ ಸೇರಿದಂತೆ ಸಾಕಷ್ಟು ನಾಯಕರು ಸಬ್ ಅರ್ಬನ್ ರೈಲಿಗಾಗಿ ಶ್ರಮಿಸಿದ್ದಾರೆ ಎಂದು ಹೇಳಿದರು.

    ಸಿಲಿಕಾನ್ ಸಿಟಿಗೆ ಸಬ್ ಅರ್ಬನ್ ರೈಲು ಸೇವೆ ಒದಗಿಸಲು ಕೇಂದ್ರ ಸರ್ಕಾರ 2018ರ ಬಜೆಟ್‌ನಲ್ಲಿ ಘೋಷಣೆ ಮಾಡಿತ್ತು. ಅಂದಿನ ವಿತ್ತ ಸಚಿವ ಅರುಣ್ ಜೇಟ್ಲಿ ಅವರು, ಸಬ್ ಅರ್ಬನ್ ರೈಲು ಯೋಜನೆಗೆ ಒಟ್ಟು 40 ಸಾವಿರ ಕೋಟಿ ರೂ. ಮೀಸಲಿಡಲಾಗಿದ್ದು, ಅದರಲ್ಲಿ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ 17 ಸಾವಿರ ಕೋಟಿ ರೂ. ನೀಡಲಾಗುತ್ತಿದೆ ಎಂದು ಪ್ರಕಟಿಸಿದ್ದರು.

    ಸಬ್ ಅರ್ಬನ್ ರೈಲಿನಿಂದ ನಗರ ಮತ್ತು ಸುತ್ತಮುತ್ತಲಿನ ಉಪನಗರಗಳಿಗೆ ರೈಲು ಸಂಪರ್ಕ ಏರ್ಪಡಲಿದೆ. ರಾಮನಗರ-ಬೆಂಗಳೂರು, ಬೆಂಗಳೂರು-ಮಂಡ್ಯ, ಕೇಂದ್ರ ರೈಲ್ವೇ ನಿಲ್ದಾಣ-ಯಶವಂತಪುರ, ಯಶವಂತಪುರ- ತುಮಕೂರು, ಯಲಹಂಕ-ಬೈಯಪ್ಪನಹಳ್ಳಿ, ಯಲಹಂಕ-ದೊಡ್ಡಬಳ್ಳಾಪುರ, ಯಲಹಂಕ-ಚಿಕ್ಕಬಳ್ಳಾಪುರ ನಡುವೆ ಬೆಂಗಳೂರು ಸಬ್ ಅರ್ಬನ್ ರೈಲು ಸೇವೆ ಆರಂಭವಾಗಲಿದೆ.

    ನಗರದ ಜನದಟ್ಟಣೆ ಕಡಿಮೆ ಮಾಡಲು ಮತ್ತು ವಿಮಾನ ನಿಲ್ದಾಣಕ್ಕೆ ನೇರಸಂಪರ್ಕ ಕಲ್ಪಿಸುವ ಉದ್ದೇಶದಿಂದ ಬೆಂಗಳೂರಿಗೆ ಸಬ್ ಅರ್ಬನ್ ರೈಲು ಬರಬೇಕು ಎಂಬ ಪ್ರಸ್ತಾಪವನ್ನು 1996ರಿಂದಲೇ ಅನಂತ್ ಕುಮಾರ್ ಅವರು ಸರ್ಕಾರಗಳನ್ನು ಒತ್ತಾಯಿದ್ದರು. ಇದೀಗ ಅವರ ಸಿಲಿಕಾನ್ ಸಿಟಿಯ ಕನಸು ಈಡೇರಿದೆ. ಒಟ್ಟಿನಲ್ಲಿ ಲಕ್ಷಾಂತರ ಜನರಿಗೆ ಅನುಕೂಲವಾಗುವ ಈ ಯೋಜನೆಯಿಂದ ಟ್ರಾಫಿಕ್ ಜಾಮ್ ತಪ್ಪಲಿದೆ.