Tag: ನೀತಿ ಆಯೋಗ

  • ಪೆಟ್ರೋಲ್, ಡೀಸೆಲ್ ಕಾರುಗಳನ್ನು ನಿಷೇಧಿಸಲ್ಲ – ನಿತಿನ್ ಗಡ್ಕರಿ

    ಪೆಟ್ರೋಲ್, ಡೀಸೆಲ್ ಕಾರುಗಳನ್ನು ನಿಷೇಧಿಸಲ್ಲ – ನಿತಿನ್ ಗಡ್ಕರಿ

    ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಕಾರ್ ಗಳನ್ನು ನಿಷೇಧಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ.

    59ನೇ ವಾರ್ಷಿಕ ಭಾರತೀಯ ವಾಹನ ತಯಾರಿಕಾ ಕಂಪನಿಗಳ ಒಕ್ಕೂಟ (ಎಸ್‍ಐಎಎಂ) ಸಮಾವೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳ ನಿಷೇಧದ ಕುರಿತು ಸ್ಪಷ್ಟಪಡಿಸಿದ ಅವರು, ಭಾರತದ ವಾಹನ ಉದ್ಯಮವು ದೇಶದ ರಫ್ತು ಮತ್ತು ಉದ್ಯೋಗಕ್ಕೆ ನೀಡುತ್ತಿರುವ ಕೊಡುಗೆ ಅಪಾರ, ಈ ಬಗ್ಗೆ ಸರ್ಕಾರಕ್ಕೆ ತಿಳಿದಿದೆ. ರಫ್ತು ಹೆಚ್ಚಿರುವುದಕ್ಕೆ ವಾಹನ ಉದ್ಯಮವೇ ಸಾಕ್ಷಿ ಎಂದು ಗಡ್ಕರಿ ಅಭಿಪ್ರಾಯ ಪಟ್ಟರು.

    ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಕಾರ್ ಗಳನ್ನು ನಿಷೇಧಿಸುವ ಕುರಿತ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಆಟೋಮೊಬೈಲ್ ವಲಯ ಸಾಕಷ್ಟು ಉದ್ಯೋಗ ಒದಗಿಸುತ್ತಿದ್ದು, ಮಾತ್ರವಲ್ಲದೆ ರಫ್ತು ಹೆಚ್ಚಿದೆ. ಆದರೆ, ಇದರಿಂದ ಸರ್ಕಾರ ಕೆಲ ಸಮಸ್ಯೆಗಳನ್ನು ಎದುರಿಸುತ್ತಿದೆ. ಮೊದಲನೇಯದು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವ ವೆಚ್ಚ, ಎರಡನೇಯದು ಮಾಲಿನ್ಯ, ಮೂರನೇಯದು ರಸ್ತೆ ಸುರಕ್ಷತೆ ಎಂದು ತಿಳಿಸಿದರು.

    ದೇಶದಲ್ಲಿ ಆಟೋಮೊಬೈಲ್ ಉದ್ಯಮ 4.50 ಲಕ್ಷ ಕೋಟಿ ರೂ. ಮೌಲ್ಯದ್ದಾಗಿದೆ. ಇದರ ಜೊತೆಗೆ ಮಾಲಿನ್ಯವು ದೇಶಕ್ಕೆ ಒಂದು ಪ್ರಮುಖ ವಿಷಯವಾಗಿ ಉಳಿದಿರುವುದರಿಂದ ಶುದ್ಧ ಇಂಧನ ಮೂಲಗಳತ್ತ ಮುಖ ಮಾಡಬೇಕಿದೆ. ಮಾಲಿನ್ಯದ ಸಮಸ್ಯೆಗೆ ವಾಹನಗಳನ್ನು ಮಾತ್ರ ದೂಷಿಸುವುದು ನ್ಯಾಯವಲ್ಲ. ಆದರೆ, ಅವರೂ ಸಹ ಕೆಲವು ಜವಾಬ್ದಾರಿಗಳನ್ನು ಹಂಚಿಕೊಳ್ಳಬೇಕಾಗುತ್ತದೆ. ದೆಹಲಿ ವಿಶ್ವದ ಅತಿ ಹೆಚ್ಚು ವಾಯು ಮಾಲಿನ್ಯ ಹೊಂದಿದ ನಗರಗಳಲ್ಲಿ ಒಂದು. ಅಲ್ಲದೆ, 2018ರಲ್ಲಿ ಹೆಚ್ಚು ಮಾಲಿನ್ಯ ಹೊಂದಿದ ನಗರಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಈ ಸಮಸ್ಯೆಗಳನ್ನು ನಿಭಾಯಿಸಲು ಸರ್ಕಾರ 50 ಸಾವಿರ ಕೋಟಿ ರೂ.ಗಳ ಯೋಜನೆಯನ್ನು ರೂಪಿಸಿದೆ. ಈ ನಿಟ್ಟಿನಲ್ಲಿ ಈಗಾಗಲೇ ಶೇ.29ರಷ್ಟು ಮಾಲಿನ್ಯವನ್ನು ನಿಯಂತ್ರಿಸಲಾಗಿದೆ. ಮಾಲಿನ್ಯವನ್ನು ಕಡಿಮೆ ಮಾಡುವುದು ರಾಷ್ಟ್ರೀಯ ಹಿತಾಸಕ್ತಿಯಾಗಿದೆ ಎಂದು ಗಡ್ಕರಿ ತಿಳಿಸಿದರು.

    ಈ ಹಿಂದೆ ನಡೆದ ನೀತಿ ಆಯೋಗದ ಸಭೆಯಲ್ಲಿ 2025ರ ವೇಳೆಗೆ ಎಲ್ಲ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್ ಎಂಜಿನ್ ಆಗಿ ಪರಿವರ್ತಿಸಲಾಗುವುದು ಎದು ನಿರ್ಧರಿಸಲಾಗಿತ್ತು.

    ನೀತಿ ಆಯೋಗದ `ಥಿಂಕ್ ಟ್ಯಾಂಕ್’ ಸಭೆಯಲ್ಲಿ ಈ ನಿರ್ಧಾರದ ಕುರಿತು ಎಲೆಕ್ಟ್ರಿಕ್ ವಾಹನಗಳ ಉತ್ಪಾದಕರು ಹಾಗೂ ಸ್ಟಾರ್ಟ್ ಅಪ್ ತಯಾರಿಕರೊಂದಿಗೆ ಚರ್ಚಿಸಲಾಗಿತ್ತು. ಮಾಲಿನ್ಯ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳದಿದ್ದರೆ, ನ್ಯಾಯಾಲಯ ಈ ಕುರಿತು ಕ್ರಮ ಕೈಗೊಳ್ಳುತ್ತದೆ ಎಂದು ಕಂಪನಿಗಳಿಗೆ ನೀತಿ ಆಯೋಗದ ಸಭೆಯಲ್ಲಿ ಎಚ್ಚರಿಕೆ ನೀಡಲಾಗಿತ್ತು.

    ಇದಕ್ಕೆ ಹಲವು ಆಟೋಮೊಬೈಲ್ ಕಂಪನಿಗಳು ಆಕ್ಷೇಪ ವ್ಯಕ್ತಪಡಿಸಿ, ಈ ಕುರಿತು ಸೂಕ್ತ ನೀತಿ ಮತ್ತು ಮಾರ್ಗದರ್ಶನವಿಲ್ಲದೆ ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸಲು ಸಾಧ್ಯವಿಲ್ಲ. ನೀತಿಗಳನ್ನು ಸ್ಪಷ್ಟವಾಗಿಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದವು. ಇದಕ್ಕೆ ಪ್ರತಿಯಾಗಿ, ಹೆಚ್ಚು ವಾಯು ಮಾಲಿನ್ಯ ಹೊಂದಿದ 15ರ ಪೈಕಿ 14 ನಗರಗಳು ಭಾರತದಲ್ಲಿವೆ. ಸರ್ಕಾರ ಮತ್ತು ಕಂಪನಿಗಳು ಈ ಕುರಿತು ಕ್ರಮ ಕೈಗೊಳ್ಳದಿದ್ದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಎಚ್ಚರಿಸಿದ್ದರು.

    2023ರ ವೇಳೆಗೆ ತ್ರಿಚಕ್ರ ವಾಹನಗಳನ್ನು ಸಂಪೂರ್ಣವಾಗಿ ಎಲೆಕ್ಟ್ರಿಕ್‍ಗೆ ಪರಿವರ್ತಿಸಬೇಕು, 2025ರ ವೇಳೆಗೆ 150 ಸಿಸಿಗಿಂತ ಕಡಿಮೆ ಎಂಜಿನ್ ಸಾಮಥ್ರ್ಯ ಹೊಂದಿರುವ ದ್ವಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್‍ಗೆ ಪರಿವರ್ತಿಸಲು ನೀತಿ ಆಯೋಗ ಯೋಜನೆ ರೂಪಿಸಿದೆ.

  • ನೀರು ನಿರ್ವಹಣೆ – 5ಕ್ಕೆ ಜಾರಿದ ಕರ್ನಾಟಕ, ಗುಜರಾತ್‍ಗೆ ಮೊದಲ ಸ್ಥಾನ

    ನೀರು ನಿರ್ವಹಣೆ – 5ಕ್ಕೆ ಜಾರಿದ ಕರ್ನಾಟಕ, ಗುಜರಾತ್‍ಗೆ ಮೊದಲ ಸ್ಥಾನ

    ನವದೆಹಲಿ: 2017-18ನೇ ಸಾಲಿನ ಸಂಯೋಜಿತ ನೀರು ನಿರ್ವಹಣೆ ಸೂಚ್ಯಂಕ(ಸಿಡಬ್ಲ್ಯೂಎಂಐ 2.0) ವರದಿ ಬಿಡುಗಡೆಯಾಗಿದ್ದು, ಗುಜರಾತ್ ಪ್ರಥಮ ಸ್ಥಾನ ಪಡೆದರೆ, ಕರ್ನಾಟಕ 5ನೇ ಸ್ಥಾನ ಪಡೆದಿದೆ.

    ವರದಿಯನ್ನು ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಬಿಡುಗಡೆ ಮಾಡಿದ್ದು, ಶೇ.80ರಷ್ಟು ರಾಜ್ಯಗಳಲ್ಲಿ ನೀರಿನ ನಿರ್ವಹಣೆ ಕುರಿತು ಅಧ್ಯಯನ ನಡೆಸಿ ಈ ವರದಿ ತಯಾರಿಸಲಾಗಿದೆ. ಕಳೆದ ಮೂರು ವರ್ಷಗಳಿಂದ ನೀರಿನ ನಿರ್ವಹಣೆಯಲ್ಲಿ ಬೆಳವಣಿಗೆ ಕಂಡಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

    ಕಳೆದ ಬಾರಿಯೂ ಗುಜರಾತ್ ಮೊದಲ ಸ್ಥಾನದಲ್ಲಿತ್ತು. ಈ ಬಾರಿ ಸಹ ಗುಜರಾತ್ ಮೊದಲ ಸ್ಥಾನ ಪಡೆದಿದ್ದು, ಆಂಧ್ರ ಪ್ರದೇಶ ದ್ವಿತೀಯ, ಮಧ್ಯ ಪ್ರದೇಶ ತೃತೀಯ, ಗೋವಾ ನಾಲ್ಕು, ಕರ್ನಾಟಕ ಐದು ಹಾಗೂ ತಮಿಳುನಾಡು ಆರನೇ ಸ್ಥಾನ ಪಡೆದಿವೆ. ಕಳೆದ ಬಾರಿ ಕರ್ನಾಟಕ 4ನೇ ಸ್ಥಾನ ಪಡೆದಿತ್ತು.

    ಈಶಾನ್ಯ ಹಾಗೂ ಹಿಮಾಲಯನ್ ರಾಜ್ಯಗಳ ಪೈಕಿ ಹಿಮಾಚಲ ಪ್ರದೇಶ ಪ್ರಥಮ ಸ್ಥಾನ ಪಡೆದಿದ್ದರೆ, ಉತ್ತರಾಖಂಡ್, ತ್ರಿಪುರ ಮತ್ತು ಅಸ್ಸಾಂ ನಂತರದ ಸ್ಥಾನಗಳಲ್ಲಿವೆ. ಕೇಂದ್ರಾಡಳಿತ ಪ್ರದೇಶಗಳು ಈ ಬಾರಿ ಮೊದಲ ಬಾರಿಗೆ ಅಂಕಿ ಅಂಶಗಳನ್ನು ಸಲ್ಲಿಸಿದ್ದು, ಈ ಪಟ್ಟಿಯಲ್ಲಿ ಪುದುಚೇರಿ ಮೊದಲ ಸ್ಥಾನ ಪಡೆದಿದೆ.

    ಸಾಮಾನ್ಯ ರಾಜ್ಯಗಳ ಪೈಕಿ ಹರ್ಯಾಣ ಹಾಗೂ ಈಶಾನ್ಯ ಮತ್ತು ಹಿಮಾಲಯನ್ ರಾಜ್ಯಗಳ ಪೈಕಿ ಉತ್ತರಾಖಂಡ್ ಪ್ರಥಮ ಸ್ಥಾನ ಪಡೆದಿವೆ. ಕಳೆದ ಮೂರು ವರ್ಷಗಳಲ್ಲಿ ಸರಾಸರಿ ಶೇ.80 ರಷ್ಟು ರಾಜ್ಯಗಳು ನೀರು ನಿರ್ವಹಣೆ ಕುರಿತ ಅಂಕಿ ಅಂಶಗಳನ್ನು ಸಲ್ಲಿಸಿದ್ದು, ಬೆಳವಣಿಗೆ ಕಾಣುತ್ತಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

    ನೀರಿನ ವೈಜ್ಞಾನಿಕ ನಿರ್ವಹಣೆಯು ಭಾರತದ ಬೆಳವಣಿಗೆ ಮತ್ತು ಪರಿಸರ ವ್ಯವಸ್ಥೆಯ ಸುಸ್ಥಿರತೆಗೆ ಪ್ರಮುಖವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

    ನೀರಿನ ನಿರ್ವಹಣೆ ಕುರಿತು ರಾಜ್ಯಗಳ ನಡುವೆ ಸಹಕಾರ ಮನೋಭವನೆ ಹಾಗೂ ವೈಜ್ಞಾನಿಕವಾಗಿ ನೀರು ನಿರ್ವಹಿಸುವಲ್ಲಿ ರಾಜ್ಯಗಳ ನಡುವೆ ಸ್ಪರ್ಧಾತ್ಮಕತೆ ಹುಟ್ಟುಹಾಕುವ ದೃಷ್ಟಿಯಿಂದ 2018ರಲ್ಲಿ ಮೊದಲ ಬಾರಿಗೆ ನೀತಿ ಆಯೋಗ ಸಲಹೆಯಂತೆ ನೀರು ನಿರ್ವಹಣಾ ಸೂಚ್ಯಂಕ ಬಿಡುಗಡೆಯಾಗುತ್ತಿದೆ. ನೀರಿನ ನಿರ್ವಹಣೆ ಹಾಗೂ ಜೀವನ ಚಕ್ರದಲ್ಲಿ ನೀರಿನ ಬಳಕೆಯ ವಿವಿಧ ಆಯಾಮಗಳನ್ನು ಅಳೆಯುವ ಪ್ಯಾನ್ ಇಂಡಿಯಾದ ಭಗವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

  • ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್

    ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್

    -8ನೇ ಸ್ಥಾನದಲ್ಲಿ ಕರ್ನಾಟಕ

    ನವದೆಹಲಿ: ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.

    ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ.

    23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India” ಎಂಬ ವರದಿಯನ್ನು ನೀತಿ ಆಯೋಗದ ಉಪಾಧ್ಯಕ್ಷ ಡಾ. ರಾಜೀವ್ ಕುಮಾರ್ ಬಿಡುಗಡೆ ಮಾಡಿದರು. ಈ ವರದಿಯ ಪ್ರಕಾರ ಆರೋಗ್ಯ ಸೂಚ್ಯಂಕದಲ್ಲಿ ಬಿಹಾರ ಹಾಗೂ ಉತ್ತರ ಪ್ರದೇಶ ತೀರಾ ಹಿಂದುಳಿದಿದೆ ಎಂದು ಹೇಳಿದೆ.

    ಕೇರಳದ ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದು, ಉತ್ತಮ ಆರೋಗ್ಯ ಮಟ್ಟವನ್ನು ಕಾಪಾಡಿಕೊಂಡು ಬಂದಿವೆ. ಇವುಗಳನ್ನು ಬಿಟ್ಟರೆ ಹರಿಯಾಣ, ರಾಜಸ್ಥಾನ ಮತ್ತು ಜಾರ್ಖಂಡ್ ಆರೋಗ್ಯ ಗುಣಮಟ್ಟದಲ್ಲಿ ಸುಧಾರಣೆ ಆಗಿದೆ. ಆದರೆ ಛತ್ತೀಸ್‍ಗಢ ಅತಿ ಕಡಿಮೆ ಗುಣಮಟ್ಟ ಸಾಧಿಸಿರುವ ರಾಜ್ಯವಾಗಿದೆ.

    2018ರ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದ ಮೊದಲ ಹಂತದ ಆರೋಗ್ಯ ಸೂಚ್ಯಂಕಕ್ಕಾಗಿ 2014-15 ರಿಂದ 2015-16ರ ಅವಧಿಯ ನಿರ್ವಹಣೆಯನ್ನು ಪರಿಗಣಿಸಲಾಗಿತ್ತು. ಎರಡನೇ ಹಂತದ ಆರೋಗ್ಯ ಸೂಚ್ಯಂಕಕ್ಕಾಗಿ 2015-16 ರಿಂದ 2017-18ರ ಅವಧಿಯ ನಿರ್ವಹಣೆಯನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ.

    ಮೊದಲ ಹತ್ತು ಆರೋಗ್ಯಕರ ರಾಜ್ಯಗಳು
    1. ಕೇರಳ
    2. ಆಂಧ್ರ ಪ್ರದೇಶ
    3. ಮಹಾರಾಷ್ಟ್ರ
    4. ಗುಜರಾತ್
    5. ಪಂಜಾಬ್
    6. ಹಿಮಾಚಲ ಪ್ರದೇಶ
    7. ಜಮ್ಮು -ಕಾಶ್ಮೀರ
    8. ಕರ್ನಾಟಕ
    9. ತಮಿಳುನಾಡು
    10. ತೆಲಂಗಾಣ

  • 2025ರ ಒಳಗಡೆ 150 ಸಿಸಿ ಕೆಳಗಿನ ಬೈಕ್‍ಗಳನ್ನು ಎಲೆಕ್ಟ್ರಿಕ್‍ಗೆ ಪರಿವರ್ತಿಸಿ – ನೀತಿ ಆಯೋಗ ಸೂಚನೆ

    2025ರ ಒಳಗಡೆ 150 ಸಿಸಿ ಕೆಳಗಿನ ಬೈಕ್‍ಗಳನ್ನು ಎಲೆಕ್ಟ್ರಿಕ್‍ಗೆ ಪರಿವರ್ತಿಸಿ – ನೀತಿ ಆಯೋಗ ಸೂಚನೆ

    ನವದೆಹಲಿ: 2025ರ ವೇಳೆಗೆ ಎಲ್ಲ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್ ಎಂಜಿನ್ ಆಗಿ ಪರಿವರ್ತಿಸುವ ಕುರಿತು ಎರಡು ವಾರಗಳಲ್ಲಿ ತಮ್ಮ ನಿರ್ಧಾರ ತಿಳಿಸುವಂತೆ ವಾಹನ ತಯಾರಿಕಾ ಕಂಪನಿಗಳಿಗೆ ನೀತಿ ಆಯೋಗದ ಸಭೆಯಲ್ಲಿ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಶುಕ್ರವಾರ ನಡೆದ ನೀತಿ ಆಯೋಗದ ‘ಥಿಂಕ್ ಟ್ಯಾಂಕ್’ ಸಭೆಯಲ್ಲಿ ಈ ನಿರ್ಧಾರದ ಕುರಿತು ಎಲೆಕ್ಟ್ರಿಕ್ ವಾಹನಗಳ ಉತ್ಪಾದಕರು ಹಾಗೂ ಸ್ಟಾರ್ಟ್ ಅಪ್ ತಯಾರಿಕರೊಂದಿಗೆ ಚರ್ಚಿಸಲಾಗಿದೆ. ಮಾಲಿನ್ಯ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳದಿದ್ದರೆ, ನ್ಯಾಯಾಲಯ ಈ ಕುರಿತು ಕ್ರಮ ಕೈಗೊಳ್ಳುತ್ತದೆ ಎಂದು ಕಂಪನಿಗಳಿಗೆ ನೀತಿ ಆಯೋಗದ ಸಭೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

    ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹಾಗೂ ಸಿಇಓ ಅಮಿತಾಬ್ ಕಾಂತ್ ಅವರ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ‘ಥಿಂಕ್ ಟ್ಯಾಂಕ್’ ಸಭೆಯಲ್ಲಿ ಬಜಾಜ್ ಆಟೋ ಎಂಡಿ ರಾಜೀವ್ ಬಜಾಜ್, ಟಿವಿಎಸ್ ಮೋಟರ್ಸ್ ಕಂ. ಅಧ್ಯಕ್ಷ ವೇಣು ಶ್ರೀನಿವಾಸನ್, ಹೋಂಡಾ ಮೋಟರ್‍ಸೈಕಲ್ ಆಂಡ್ ಸ್ಕೂಟರ್ ಇಂಡಿಯಾದ ಅಧ್ಯಕ್ಷ ಮತ್ತು ಸಿಇಓ ಮಿನೋರು ಕಟೊ ಹಾಗೂ ಪ್ರಧಾನ ನಿರ್ದೇಶಕ ವಿಷ್ಣು ಮಾಥೂರ್ ಹಾಗೂ ಆಟೊಮೋಟಿವ್ ಕಾಂಪೋನೆಂಟ್ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಪ್ರಧಾನ ನಿರ್ದೇಶಕ ವಿನೀ ಮೆಹ್ತಾ ಸೇರಿದಂತೆ ಪ್ರಮುಖ ದ್ವಿಚಕ್ರ ವಾಹನ ಉತ್ಪಾದಕ ಸಂಸ್ಥೆಗಳ ಅಧಿಕಾರಿಗಳು ಭಾಗವಹಿಸಿದ್ದರು.

    ಈ ಕುರಿತು ಸೂಕ್ತ ನೀತಿ ಮತ್ತು ಮಾರ್ಗದರ್ಶನವಿಲ್ಲದೆ ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸಲು ಸಾಧ್ಯವಿಲ್ಲ. ನೀತಿಗಳನ್ನು ಸ್ಪಷ್ಟವಾಗಿಡಲು ಸಾಧ್ಯವಿಲ್ಲ. ಹೆಚ್ಚು ವಾಯು ಮಾಲಿನ್ಯ ಹೊಂದಿದ 15ರ ಪೈಕಿ 14 ನಗರಗಳು ಭಾರತದಲ್ಲಿವೆ. ಸರ್ಕಾರ ಮತ್ತು ಕಂಪನಿಗಳು ಈ ಕುರಿತು ಕ್ರಮ ಕೈಗೊಳ್ಳದಿದ್ದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಎಚ್ಚರಿಸಿದ್ದಾರೆ.

    2023ರ ವೇಳೆಗೆ ತ್ರಿಚಕ್ರ ವಾಹನಗಳನ್ನು ಸಂಪೂರ್ಣವಾಗಿ ಎಲೆಕ್ಟ್ರಿಕ್‍ಗೆ ಪರಿವರ್ತಿಸಬೇಕು, 2025ರ ವೇಳೆಗೆ 150 ಸಿಸಿಗಿಂತ ಕಡಿಮೆ ಎಂಜಿನ್ ಸಾಮಥ್ರ್ಯ ಹೊಂದಿರುವ ದ್ವಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್‍ಗೆ ಪರಿವರ್ತಿಸಲು ನೀತಿ ಆಯೋಗ ಯೋಜನೆ ರೂಪಿಸಿದೆ.

    ಸಭೆ ನಂತರ ಅಮಿತಾಬ್ ಕಾಂತ್ ಈ ಕುರಿತು ಟ್ವೀಟ್ ಮಾಡಿದ್ದು, ಎಲೆಕ್ಟ್ರಿಕ್ ವಾಹನಗಳ ಕ್ರಾಂತಿ ಮಾಡಲು ನೀತಿ ಆಯೋಗದ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಜಾಗತಿಕವಾಗಿ ಎಲೆಕ್ಟ್ರಿಕ್ ವಾಹನಗಳ ಚಾಲಕನಾಗಲು ಭಾರತ ತುದಿಗಾಲಲ್ಲಿ ನಿಂತಿದೆ. ಎಲೆಕ್ಟ್ರಿಕ್ ವಾಹನಗಳು ಚಲನಶೀಲತೆ ಭವಿಷ್ಯ ಎಂದು ಎಲ್ಲರೂ ಒಪ್ಪಿಕೊಂಡಿದ್ದು, ಮೋರ್ಥ್ ಹಾಗೂ ಡಿಎಚ್‍ಐನ ಕಾರ್ಯದರ್ಶಿ ರಾಜೀವ್ ಕುಮಾರ್ ಅವರು ಸಭೆಯ ನೇತೃತ್ವ ವಹಿಸಿದ್ದರು ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

    ಭಾರತ ಈಗಾಗಲೇ ಎಲೆಕ್ಟ್ರಾನಿಕ್ಸ್ ಕ್ರಾಂತಿ ಮತ್ತು ಸೆಮಿ ಕಂಡಕ್ಟರ್ ಕ್ರಾಂತಿಯನ್ನು ತಪ್ಪಿಸಿಕೊಂಡಿದ್ದು, ವಿದ್ಯುತ್ ವಾಹನಗಳ ಕ್ರಾಂತಿಯನ್ನು ತಪ್ಪಿಸಿಕೊಳ್ಳಬಾರದು. ಈಗಿರುವ ಕಂಪನಿಗಳು ಈ ಕುರಿತು ನಿರ್ಧರಿಸದಿದ್ದರೆ ಇತರೆ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುತ್ತವೆ. ಈ ಕುರಿತು ಈಗಾಗಲೇ ಚೀನಾದಲ್ಲಿ ನಡೆದಿದೆ. ಆದರೆ, ಇದನ್ನು ಉದ್ಯಮಗಳ ಮೇಲೆ ಹೇರಲು ಸರ್ಕಾರ ಇಚ್ಛಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮೂಲಗಳ ಪ್ರಕಾರ ಸಾಂಪ್ರದಾಯಿಕ ಉತ್ಪಾದಕರಾದ ಬಜಾಜ್ ಆಟೋ, ಹೀರೋ ಮೋಟೊಕಾರ್ಪ್, ಎಚ್‍ಎಂಎಸ್‍ಐ ಹಾಗೂ ಟಿವಿಎಸ್ ಕಂಪನಿಗಳು ಈ ಕುರಿತು ವಿರೋಧ ವ್ಯಕ್ತಪಡಿಸಿದ್ದು, ಕೈನಿಟಿಕ್ ಗ್ರೀನ್ ಎನರ್ಜಿ ಮತ್ತು ಪವರ್ ಸೆಲ್ಯೂಶನ್ಸ್ ಮತ್ತು ಟಾರ್ಕ್ ಮೋಟರ್ಸ್ ಸೇರಿದಂತೆ ಇತರ ಕಂಪನಿಗಳು ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಪ್ರಾರಂಭಿಸಲಾಗುವುದು ಎಂದು ತಿಳಿಸಿವೆ.

    ವಾಯು ಮಲಿನ್ಯದ ಸಮಸ್ಯೆಯಿಂದಾಗಿ 2023ರೊಳಗೆ ಎಲೆಕ್ಟ್ರಿಕ್ ವಾಹನಗಳಿಗೆ ಪರಿವರ್ತಿಸಲು ಬಯಸುತ್ತೇವೆ ಎಂದು ರೀವೋಲ್ಟ್ ಇಂಟಲಿಕಾರ್ಪ್ ಸ್ಥಾಪಕ ರಾಹುಲ್ ಶರ್ಮಾ ತಿಳಿಸಿದ್ದಾರೆ.

    ಬಜಾಜ್ ಮತ್ತು ಟಿವಿಎಸ್ ಕಂಪನಿಗಳು ಕಳೆದ ತಿಂಗಳು ಈ ಕುರಿತು ಪ್ರತಿಕ್ರಿಯಿಸಿವೆ. ಪ್ರಸ್ತುತ ಪೆಟ್ರೋಲ್, ಗ್ಯಾಸ್ ವಾಹನಗಳನ್ನು ನಿಷೇಧಿಸಿ, 2025ರ ವೇಳೆಗೆ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳನ್ನಾಗಿ ಪರಿವರ್ತಿಸುವುದು ಅವಾಸ್ತವಿಕವಾಗಿದೆ. ಈ ರೀತಿಯ ಕ್ರಮ ಕೈಗೊಳ್ಳಲು ಇದು ಸೂಕ್ತ ಸಮಯವಲ್ಲ. ಇದರಿಂದ ದೇಶದಲ್ಲಿ ವಾಹನ ಉತ್ಪಾದನೆ ಹಳಿ ತಪ್ಪಲಿದೆ ಎಂದು ವಾದಿಸಿವೆ.

    ಸರ್ಕಾರದ ದಿಢೀರ್ ನಿರ್ಧಾರದಿಂದ ಕಂಪನಿಗಳು ಬಿಎಸ್(ಭಾರತ್ ಸ್ಟೇಜ್) 3ಯಿಂದ ಬಿಎಸ್-4ಗೆ ಎಂಜಿನ್‍ಗಳನ್ನು ಅಪ್‍ಗ್ರೇಡ್ ಮಾಡುತ್ತಿವೆ. ಇದೇ ಸಮಯದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವುದು ಹೇಗೆ ಸಾಧ್ಯ? ದರಿಂದ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವ ಕುರಿತು ಹೆಚ್ಚು ಜಾಗರೂಕತೆ ಮತ್ತು ವಾಸ್ತವಿಕ ಮಾರ್ಗಸೂಚಿಗಳನ್ನು ತಯಾರಿಸಬೇಕಿದೆ ಎಂದು ಹೀರೋ ಮೋಟೊಕಾರ್ಪ್ ಸರ್ಕಾರದ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದೆ.

    ವಾಹನ ಉದ್ಯಮ ಸಂಸ್ಥೆಗಳಾದ ಎಸ್‍ಐಎಎಂ ಮತ್ತು ಎಸಿಎಂಎಗಳೂ ಸಹ ಈ ಕುರಿತು ಸರ್ಕಾರಕ್ಕೆ ಸಲಹೆ ನೀಡಿದ್ದು, ಎಲೆಕ್ಟ್ರಿಕ್ ವಾಹನಗಳ ತಯಾರಿಕೆಗೆ ಸೂಕ್ತ ಮರ್ಗಸೂಚಿಗಳು ಹಾಗೂ ಪ್ರಾಯೋಗಿಕ ಸಮಯಾವಕಾಶ ನೀಡುವಂತೆ ತಿಳಿಸಿವೆ.

    ಉದ್ಯಮ ಸಂಸ್ಥೆ ಸಿಐಐ ಸಹ ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವ ಕುರಿತು ಗುರಿ ಮತ್ತು ಸಮಯದ ಗಡುವನ್ನು ಅಂತಿಮಗೊಳಿಸುವ ಮೊದಲು ಸರ್ಕಾರ ಸೂಕ್ತ ಸಮಾಲೋಚನೆ ನಡೆಸಬೇಕು ಎಂದು ತಿಳಿಸಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ

    ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ

    – ಆರ್ಥಿಕ ಸದೃಢ 3 ರಾಷ್ಟ್ರಗಳಲ್ಲಿ ಭಾರತ ಒಂದಾಗಲಿ
    – ಮುಂದಿನ ಪೀಳಿಗೆಗೆ ನಾವು ನೀರು ಉಳಿಸಬೇಕು

    ನವದೆಹಲಿ: 17ನೇ ಲೋಕಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ರಮಾನಾಥ್ ಕೋವಿಂದ ಇಂದು ಮಾತನಾಡಿದರು. ಭಾರತವನ್ನು ಪ್ರಬಲ ಆರ್ಥಿಕ ಶಕ್ತಿ ಕೇಂದ್ರವನ್ನಾಗಿ ಮಾಡಲು ನೂತನ ಸರ್ಕಾರ ಕೆಲಸ ಮಾಡಬೇಕಿದ ಎಂದು ಹೇಳಿದರು.

    ನೂತನ ಮೋದಿ ಸರ್ಕಾರ ತ್ರಿಪಲ್ ತಲಾಖ್ ನಿಷೇಧ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ಮುಂದಿನ ಕಾರ್ಯ ನಿರ್ವಹಿಸಬೇಕಿದೆ. ದೇಶದ 75ನೇ ಸ್ವತಂತ್ರ ದಿನಾಚರಣೆಯ ವೇಳೆ ದೇಶ ಅಭಿವೃದ್ಧಿಯ ಕನಸು ಸಾಕಾರಗೊಳ್ಳುವಂತೆ ಮಾಡುವ ಮೂಲಕ ನಿಮ್ಮ ಕಾರ್ಯವನ್ನು ರೈತರು ಮತ್ತು ಸೈನಿಕರಿಗೆ ಅರ್ಪಿಸಬೇಕು.

    ದೇಶದ ಜನತೆ ದೀರ್ಘ ಅವಧಿಯಿಂದ ಮೂಲಭೂತ ಸೌಲಭ್ಯಗಳನ್ನು ನಿರೀಕ್ಷಿಸುತ್ತಿದ್ದಾರೆ. ಆದ್ರೆ ಆ ಸ್ಥಿತಿ ಬದಲಾವಣೆಯತ್ತ ಸಾಗುತ್ತಿದೆ. ವಿಶ್ವದ ಅತಿದೊಡ್ಡ ಸದೃಢ ಮೂರು ದೇಶಗಳಲ್ಲಿ ಭಾರತ ಸಹ ಒಂದಾಗುವಂತೆ ನೂತನ ಸರ್ಕಾರ ಕಾರ್ಯ ನಿರ್ವಹಿಸಬೇಕೆಂದು ಗುರಿಯನ್ನು ನೀಡಿದರು.

    ಕಿಸಾನ್ ಸಮ್ಮಾನ್ ಯೋಜನೆ ದೇಶದ ಪ್ರತಿಯೊಬ್ಬ ರೈತರಿಗೆ ತಲುಪಿದೆ. ರೈತರಿಗೆ ಪಿಂಚಣಿ ನೀಡುವ ಕಾರ್ಯ ಸಹ ಆರಂಭಗೊಂಡಿದೆ. ಸಣ್ಣ ವ್ಯಾಪಾರಸ್ಥನ ಆರ್ಥಿಕ ಸುರಕ್ಷತೆಯನ್ನು ಗಮನದಲ್ಲಿರಿಸಿ ಮೊದಲ ಬಾರಿಗೆ ಸರ್ಕಾರವೊಂದು ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. 3 ಕೋಟಿಗೂ ಅಧಿಕ ಸಣ್ಣ ವ್ಯಾಪಾರಸ್ಥರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ.

    ಜಲ ಸಂರಕ್ಷಣೆ:
    ಮುಂದಿನ ಪೀಳಿಗೆಗಾಗಿ ನಾವು ನೀರು ಉಳಿಸುವ ಅಚಲ ನಿರ್ಧಾರ ಮಾಡಬೇಕು. ಸಂಸತ್ತಿನ ಅಧಿವೇಶನದಲ್ಲಿ ಜೂನ್ 14 ರಂದು ಬಿಡುಗಡೆಯಾದ ನೀತಿ ಆಯೋಗದ ವರದಿಯನ್ನು ಆಧಾರವಾಗಿ ಇಟ್ಟುಕೊಂಡು ಮಾತನಾಡಿದ ಅವರು, ಭಾರತ ತನ್ನ ಇತಿಹಾಸದಲ್ಲೇ ಅತ್ಯಂತ ಕೆಟ್ಟ ನೀರಿನ ಬಿಕ್ಕಟ್ಟಿನಿಂದ ಬಳಲುತ್ತಿದೆ. ನಾವು ನಮ್ಮ ಮಕ್ಕಳಿಗೆ ಮತ್ತು ಮುಂದಿನ ಪೀಳಿಗೆಗೆ ನೀರನ್ನು ಉಳಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಹೊಸ ಜಲಶಕ್ತಿ ಸಚಿವಾಲಯವನ್ನು ರಚಿಸುವುದು ನಿರ್ಣಾಯಕ ಹೆಜ್ಜೆಯಾಗಿದ್ದು, ಇದು ನೀರಿನ ಸಮಸ್ಯೆ ಮೇಲೆ ಬಹುದೊಡ್ಡ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

    ಈ ವರದಿಯ ಪ್ರಕಾರ ಸುರಕ್ಷಿತ ನೀರಿನ ಕೊರೆತೆಯಿಂದಾಗಿ ಸುಮಾರು 60 ಕೋಟಿ ಜನರು ತೀವ್ರ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಪ್ರತೀ ವರ್ಷ ಸುಮಾರು ಎರಡು ಲಕ್ಷ ಜನರು ಇದರಿಂದ ಸಾಯುತ್ತಿದ್ದಾರೆ ಎಂದು ವರದಿ ಹೇಳಿದೆ. ಸಂಯೋಜಿತ ನೀರು ನಿರ್ವಹಣಾ ಸೂಚ್ಯಂಕ ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಬಿಡುಗಡೆ ಮಾಡಿದ ಈ ವರದಿ ಮುಂದಿನ ದಿನಗಳಲ್ಲಿ ಭಾರತದಲ್ಲಿ ನೀರಿನ ಸಮಸ್ಯೆ ತುಂಬ ಉಲ್ಬಣಗೊಳ್ಳಬಹುದು ಎಂದು ಅತಂಕ ವ್ಯಕ್ತಪಡಿಸಿದೆ.

    2030ರ ಹೊತ್ತಿಗೆ ದೇಶದಲ್ಲಿ ನೀರಿನ ಬೇಡಿಕೆಯು ಈಗ ಇರುವ ಬೇಡಿಕೆಗಿಂತ ಎರಡು ಪಟ್ಟು ಹೆಚ್ಚಾಗುತ್ತದೆ ಎಂದು ಊಹಿಸಲಾಗಿದೆ. ಇಂದು ಬಹಳ ಜನರಿಗೆ ನೀರಿನ ಕೊರೆತೆಯನ್ನು ಸೂಚಿಸುತ್ತದೆ ಮತ್ತು ದೇಶದ ಜಿಡಿಪಿಯಲ್ಲಿ ಶೇ. 6 ರಷ್ಟು ನಷ್ಟವಾಗುತ್ತದೆ ಎಂದು ಹೇಳಲಾಗಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಮೋದಿ ನೇತೃತ್ವದ ‘ಒಂದೇ ದೇಶ, ಒಂದೇ ಚುನಾವಣೆ’ ಸಭೆಗೆ 5 ಪಕ್ಷಗಳ ನಾಯಕರು ಗೈರು

    ಮೋದಿ ನೇತೃತ್ವದ ‘ಒಂದೇ ದೇಶ, ಒಂದೇ ಚುನಾವಣೆ’ ಸಭೆಗೆ 5 ಪಕ್ಷಗಳ ನಾಯಕರು ಗೈರು

    – ಭಾಗಿಯಾಗದ ಮೂರು ಪಕ್ಷಗಳ ಪ್ರಮುಖ ನಾಯಕರು

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ‘ಒಂದೇ ದೇಶ, ಒಂದೇ ಚುನಾವಣೆ’ ಹಾಗೂ ‘ನೀತಿ ಆಯೋಗದ’ ಕುರಿತ ಸರ್ವ ಪಕ್ಷಗಳ ಸಭೆಗೆ ಕಾಂಗ್ರೆಸ್, ಮಮತಾ ಬ್ಯಾನರ್ಜಿ, ಮಾಯಾವತಿ ಹಾಗೂ ಇತರ 5 ಪಕ್ಷಗಳ ನಾಯಕರು ಗೈರಾಗಿದ್ದಾರೆ.

    ‘ಒಂದೇ ದೇಶ, ಒಂದೇ ಚುನಾವಣೆ’ ಹಾಗೂ ಮಹತ್ವಾಕಾಂಕ್ಷಿ ಜಿಲ್ಲೆಗಳ ಅಭಿವೃದ್ಧಿ ಕುರಿತು ನಡೆಯುತ್ತಿರುವ ‘ನೀತಿ ಆಯೋಗ’ದ ಸಭೆಗಳಿಗೆ ವಿರೋಧ ಪಕ್ಷದ ನಾಯಕರು ಸೇರಿದಂತೆ ವಿವಿಧ ಐದು ಪಕ್ಷಗಳ ನಾಯಕರು ಗೈರಾಗುವ ಮೂಲಕ ನಿರ್ಲಕ್ಷ್ಯ ವಹಿಸಿದ್ದಾರೆ.

    ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದು, ಮಮತಾ ಬ್ಯಾನರ್ಜಿ ಚಲನಶೀಲತೆ ಇಲ್ಲದ ಪಕ್ಷ ಎಂದು ಟೀಕಿಸಿದ್ದಾರೆ. ಮಾಯಾವತಿ ಅವರು ಸರ್ಕಾರದ ಕುರಿತು ಅಪಹಾಸ್ಯ ಮಾಡಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಡಿಎಂಕೆ ಮುಖಂಡ ಎಂ.ಕೆ.ಸ್ಟಾಲಿನ್ ಅವರೂ ಸಹ ಸಭೆಗೆ ಹಾಜರಾಗಿಲ್ಲ. ಇನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ತಮ್ಮ ಪಕ್ಷದ ಮುಖಂಡರನ್ನು ಕಳುಹಿಸಿದ್ದಾರೆ.

    ಇಂದು ಸಭೆಯ ಕುರಿತಾಗಿ ನಡೆದ 10 ಪ್ರಮುಖ ಬೆಳವಣಿಗೆಗಳು

    1. ಹಣ ಹಾಗೂ ಸಮಯವನ್ನು ಉಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ‘ಒಂದೇ ದೇಶ ಒಂದೇ ಚುನಾವಣೆ’ ಕುರಿತು ಸರ್ವ ಪಕ್ಷಗಳ ಅಭಿಪ್ರಾಯಗಳನ್ನು ತಿಳಿಸಲು ಸಭೆ ಕರೆಯಲಾಗಿತ್ತು. ಆದರೆ, ವಿರೋಧ ಪಕ್ಷಗಳು ಗೈರಾಗುವ ಮೂಲಕ ನಿರಾಸಕ್ತಿ ವಹಿಸಿದ್ದು, ಈ ನಿರ್ಧಾರ ಫೆಡರಲ್ ತತ್ವಗಳಿಗೆ ವಿರುದ್ಧವಾಗಿವೆ ಎಂದು ತಿಳಿಸಿವೆ.

    2. ‘ಒಂದೇ ದೇಶ ಒಂದೇ ಚುನಾವಣೆ’ ಚಿಂತನೆ ಕುರಿತು ಸಂವಿಧಾನ ತಿದ್ದುಪಡಿಗೆ ರಾಜ್ಯಸಭೆ ಹಾಗೂ ಲೋಕಸಭೆ ಎರಡರಲ್ಲೂ ಸಹ ಮೂರನೇ ಎರಡಷ್ಟು ಬಹುಮತ ಸಾಬೀತು ಪಡಿಸಬೇಕು. ಹೀಗಾಗಿ ಸರ್ವ ಪಕ್ಷಗಳ ಮನವೊಲಿಸಲು ಬಿಜೆಪಿ ಈ ಸಭೆ ಕರೆದಿದೆ.

    3. ಈ ಕುರಿತು ಬಿಎಸ್‍ಪಿಯ ಮಾಯಾವತಿ ಅವರು ಪ್ರತಿಕ್ರಿಯಿಸಿ, ಬ್ಯಾಲೆಟ್ ಪೇಪರ್ ಬಳಕೆಯನ್ನು ಬಿಟ್ಟು ವಿದ್ಯುನ್ಮಾನ ಮತ ಯಂತ್ರಗಳನ್ನೇ ಬಳಸುತ್ತಿರುವುದು ಮೊಂಡುತನವಾಗಿದ್ದು, ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಹಾಕುವ ಬೆದರಿಕೆಯಾಗಿದೆ ಎಂದು ಹೇಳಿದ್ದಾರೆ.

    4. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮಂಗಳವಾರ ಪತ್ರ ಬರೆದು, ‘ಒಂದೇ ದೇಶ ಒಂದೇ ಚುನಾವಣೆ’ ಕುರಿತು ಪ್ರತಿಕ್ರಿಯಿಸಲು ಒಂದೇ ಸಭೆ ಸಾಕಾಗುವುದಿಲ್ಲ ಎಂದು ವಾದಿಸಿ, ಈ ಕುರಿತು ಸರ್ಕಾರ ಶ್ವೇತಪತ್ರ ಪತ್ರ ಹೊರಡಿಸಿ, ತಜ್ಞರನ್ನು ಸಂಪರ್ಕಿಸಿ, ಪ್ರತಿಕ್ರಿಸುವಂತೆ ಪತ್ರದಲ್ಲಿ ತಿಳಿಸಿದ್ದಾರೆ.

    5. ಮಮತಾ ಬ್ಯಾನರ್ಜಿ ನೀತಿ ಆಯೋಗದ ಸಭೆಗೂ ತಗಾದೆ ಎತ್ತಿದ್ದು, ನೀತಿ ಆಯೋಗದ ಪ್ರಸ್ತಾವನೆ ಮಹತ್ವಾಕಾಂಕ್ಷೆಯ ಜಿಲ್ಲೆಗಳ ಅಭಿವೃದ್ಧಿಯಂತಹ ಯೋಜನೆಗಳನ್ನು ತೃಣಮೂಲ ಕಾಂಗ್ರೆಸ್ ವಿರೋಧಿಸುತ್ತದೆ. ಇದು ರಾಜ್ಯದ ಎಲ್ಲ ಜಿಲ್ಲೆಗಳ ಸಮತೋಲನ ಹಾಗೂ ಏಕರೂಪತೆಯ ಅಭಿವೃದ್ಧಿ ಸಾಧಿಸುವ ಉದ್ದೇಶಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

    6. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ನಿಯೋಜಿತ ಪ್ರತಿನಿಧಿಗಳನ್ನಾಗಿ ಎಎಪಿಯಿಂದ ರಾಘವ್ ಚಂಧ, ಟಿಡಿಪಿಯಿಂದ ಜಯದೇವ್ ಗಲ್ಲ ಅವರನ್ನು ಕಳುಹಿಸಿದ್ದಾರೆ.

    7. ಸಭೆಯಿಂದ ರಾಜ್ಯಕ್ಕೆ ಏನೂ ಸಹಾಯವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ತಮ್ಮ ಮಗ ಹಾಗೂ ಪಕ್ಷದ ಮುಖ್ಯಸ್ಥ ಕೆ.ಟಿ.ರಾಮ ರಾವ್ ಅವರನ್ನು ಕಳುಹಿಸಿದ್ದಾರೆ.

    8. ಚರ್ಚೆ ಮಾಡಲು ಏನಿದೆ? ನಾವು ಕೇಂದ್ರ ಸರ್ಕಾರದೊಂದಿಗೆ ಸಾಂವಿಧಾನಿಕ ಸಂಪರ್ಕವನ್ನು ಮಾತ್ರ ಹೊಂದಿದ್ದೇವೆ. ಈಗಲೂ ನಾನು ಫೆಡರಲ್ ಫ್ರಂಟ್‍ನ್ನು ಬೆಂಬಲಿಸುತ್ತೇನೆ. ಕೇಂದ್ರದೊಂದಿಗೆ ಮಾತನಾಡಿ ಏನೂ ಪ್ರಯೋಜನವಿಲ್ಲ. ಈವರೆಗೆ ಕೇಂದ್ರದಿಂದ ಒಂದು ರೂಪಾಯಿನೂ ಪಡೆದಿಲ್ಲ. ಮೋದಿ ಅವರು ಫ್ಯಾಸಿಸ್ಟ್ ಸರ್ಕಾರ ನಡೆಸುತ್ತಿದ್ದಾರೆ ಎಂದು ಈಗಾಗಲೇ ಹೇಳಿದ್ದೇನೆ ಚಂದ್ರಶೇಖರ್ ರಾವ್ ತಿಳಿಸಿದ್ದಾರೆ.

    9. ಏಕಕಾಲಿಕ ಚುನಾವಣೆ ಮಾತ್ರವಲ್ಲದೆ, ಸಭೆಯಲ್ಲಿ ನೀತಿ ಆಯೋಗದ ಪ್ರಸ್ತಾವನೆ ಕುರಿತೂ ಸಹ ಚರ್ಚಿಸಿಲಾಗುತ್ತಿದೆ. ಮಹತ್ವಾಕಾಂಕ್ಷಿಯ ಜಿಲ್ಲೆಗಳು ಎಂಬ ಯೋಜನೆ ಕುರಿತು ಚರ್ಚೆ ನಡೆಯಲಿದ್ದು, 28 ರಾಜ್ಯಗಳ 117 ಜಿಲ್ಲೆಗಳ ಸಾಮಾಜಿಕ-ಆರ್ಥಿಕ ಚಟುವಟಿಕೆಗಳು ಚುರುಕು ಪಡೆಯಲಿವೆ.

    10. ಸಭೆಯಲ್ಲಿ ಈ ವರ್ಷ ಆಚರಿಸಲಾಗುವ ಮಹತ್ಮಾ ಗಾಂಧಿ ಅವರ 150ನೇ ಜನ್ಮ ದಿನಾಚರಣೆ ಹಾಗೂ 2022ಕ್ಕೆ ಆಚರಿಸಲಾಗುತ್ತಿರುವ ಸ್ವಾತಂತ್ರ್ಯ ದಿನಾಚರಣೆಯ 75ನೇ ವರ್ಷಾಚರಣೆಯ ಕುರಿತು ಚರ್ಚಿಸಲಾಗುತ್ತಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಮೋದಿಗೆ ಅಭಿನಂದನೆ ತಿಳಿಸಿ, ಮನವಿ ಸಲ್ಲಿಸಿದ ಸಿಎಂ

    ಮೋದಿಗೆ ಅಭಿನಂದನೆ ತಿಳಿಸಿ, ಮನವಿ ಸಲ್ಲಿಸಿದ ಸಿಎಂ

    ನವದೆಹಲಿ: ನೀತಿ ಆಯೋಗದ ಸಭೆ ನಿಮಿತ್ತ ದೆಹಲಿಗೆ ತರೆಳಿರುವ ಸಿಎಂ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್, ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಸೇರಿದಂತೆ ಅನೇಕ ನಾಯಕರನ್ನು ಭೇಟಿಯಾಗಿದ್ದಾರೆ.

    ಎರಡನೇ ಅವಧಿಗೆ ಪ್ರಧಾನಿಯಾಗಿ ಆಯ್ಕೆಯಾದ ನರೇಂದ್ರ ಮೋದಿ ಅವರನ್ನು ಸಿಎಂ ಸನ್ಮಾನಿಸಿದರು. ಬಳಿಕ ರಾಜ್ಯದಲ್ಲಿ ತಲೆದೂರಿರುವ ಬರ ಪರಿಸ್ಥಿತಿ, ನರೇಗಾ ಬಾಕಿ ಅನುದಾನ ಬಿಡುಗಡೆ, ಸಾಲಮನ್ನಾ ಯೋಜನೆಯ ಯಶಸ್ವಿ ಅನುಷ್ಠಾನ ಸೇರಿದಂತೆ ಅನೇಕ ವಿಚಾರಗಳ ಕುರಿತು ಚರ್ಚೆ ಮಾಡಿದ್ದಾರೆ.

    ಬಳಿಕ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅನರನ್ನು ಭೇಟಿಯಾಗಿ ಮಹದಾಯಿ ಮತ್ತು ಮೇಕೆದಾಟು ಯೋಜನೆ ಸಂಬಂಧ ಚರ್ಚೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಮೇಕೆದಾಟು ಯೋಜನೆಗೆ ಸಹಕರಿಸುವಂತೆ ಹಾಗೂ ಮಹದಾಯಿ ನೀರು ಬಳಕೆಗಾಗಿ ಅಧಿಸೂಚನೆ ಹೊರಡಿಸುವಂತೆ ಮನವಿ ಸಲ್ಲಿಸಿದ್ದಾರೆ.

    ಸಿಎಂ ಭೇಟಿಯ ಬೆನ್ನಲ್ಲೇ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಕೂಡ ಭೇಟಿಯಾಗಿದ್ದಾರೆ. ಈ ಮೂಲಕ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡದಂತೆ ಮನವಿ ಮಾಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

    ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕೂಡ ಸಿಎಂ ಭೇಟಿಯಾಗಿದ್ದು, ನರೇಗಾ ಯೋಜನೆ ಅಡಿ ಬಾಕಿ ಇರುವ 1,950 ಕೋಟಿ ರೂ. ಬಾಕಿ ನೀಡುವಂತೆ ಮನವಿ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ಕೇಳಿದ್ದಾರೆ. ಪಂಚಾಯತ್ ರಾಜ್ ಸಂಸ್ಥೆಗಳಿಗೆ ಬಾಕಿ ಇರುವ 233 ಕೋಟಿ ರೂ. ಪರ್ಫಾರ್ಮನ್ಸ್ ಗ್ರಾಂಟ್ಸ್ ಬಿಡುಗಡೆ ಮಾಡುವಂತೆ, ಕಾಫೀ ಮತ್ತು ರಬ್ಬರ್ ಬೋರ್ಡ್ ಗಳಿಗೆ ಆದಾಯ ತೆರಿಗೆ ವಿನಾಯಿತಿ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

    ನೀತಿ ಆಯೋಗ ಸಭೆಗೆ ಆಗಮಿಸಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‍ಮೋಹನ್ ರೆಡ್ಡಿ ಅವರನ್ನು ಸಿಎಂ ಸನ್ಮಾನಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

  • ದೇಶದಲ್ಲಿ 45 ವರ್ಷದಲ್ಲೇ ಅತಿಹೆಚ್ಚು ನಿರುದ್ಯೋಗ – ಸರ್ಕಾರ ಹೇಳೋದು ಏನು?

    ದೇಶದಲ್ಲಿ 45 ವರ್ಷದಲ್ಲೇ ಅತಿಹೆಚ್ಚು ನಿರುದ್ಯೋಗ – ಸರ್ಕಾರ ಹೇಳೋದು ಏನು?

    ನವದೆಹಲಿ: ದೇಶದಲ್ಲಿ ನೋಟು ನಿಷೇಧ ಬಳಿಕ ನಿರುದ್ಯೋಗ ಪ್ರಮಾಣ ಕಳೆದ 45 ವರ್ಷಗಳಿಗೆ ಅತಿ ಹೆಚ್ಚು ದಾಖಲಾಗಿದೆ ಎಂದು ನ್ಯಾಷನಲ್ ಸ್ಯಾಂಪಲ್ ಸರ್ವೇ ಆಫೀಸ್ ನಡೆಸಿದ ಸಮೀಕ್ಷೆ ತಿಳಿಸಿದೆ.

    2017-18ನೇ ಸಾಲಿನಲ್ಲಿ ನಿರುದ್ಯೋಗ ಪ್ರಮಾಣ ಶೇ.6.01ರಷ್ಟಿದೆ ಎಂದು ಬಿಸಿನೆಸ್ ಸ್ಟಾಂಡರ್ಡ್ ವರದಿ ಮಾಡಿದ್ದು, ಈ ವರದಿಯನ್ನು ಕಳೆದ ತಿಂಗಳು ಸಿದ್ಧ ಪಡಿಸಲಾಗಿತ್ತು ಎನ್ನಲಾಗಿದೆ.

    ವರದಿಯನ್ನು ಸಾರ್ವಜನಿಕ ಪಡಿಸಿದ ಕಾರಣಕ್ಕೆ ರಾಷ್ಟ್ರೀಯ ಸಂಖ್ಯಾಶಾಸ್ತ್ರ ಆಯೋಗದ ಇಬ್ಬರು ಸ್ವತಂತ್ರ ಅಧಿಕಾರಿಗಳು ರಾಜೀನಾಮೆ ನೀಡಿದ್ದರು. ಆದರೆ ಸರ್ಕಾರವೇ ಈ ವರದಿಯನ್ನ ಮರೆಮಾಚಿದೆ ಎಂದು ವರದಿಯಾಗಿದೆ. 1972-73ರಲ್ಲಿ ನಿರುದ್ಯೋಗ ದರ ಹೆಚ್ಚಿತ್ತು, ಆದಾದ ಬಳಿಕ ಈಗಲೇ ಇಷ್ಟು ಪ್ರಮಾಣದ ಸಂಖ್ಯೆ ಹೆಚ್ಚಿದೆ. 2011-12ರಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ನಿರುದ್ಯೋಗದ ಸಂಖ್ಯೆ ಕೇವಲ 2.2ರಷ್ಟು ಮಾತ್ರ ಇತ್ತು.

    ರಾಹುಲ್ ಗಾಂಧಿ ಟೀಕೆ: ಇತ್ತ ವರದಿಯ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವಿಟರ್‍ನಲ್ಲಿ ಪ್ರಧಾನಿ ಮೋದಿ ಅವರನ್ನು ಹಿಟ್ಲರ್ ಎಂದು ಜರಿದಿದ್ದಾರೆ. ಹಿಟ್ಲರ್ ವರ್ಷದಲ್ಲಿ 2 ಕೋಟಿ ಉದ್ಯೋಗ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ನ್ಯಾಷನಲ್ ಸ್ಯಾಂಪಲ್ ಸರ್ವೇ ಆಫೀಸ್‍ನ ಸಮೀಕ್ಷೆ ಅವರ ರಿಪೋರ್ಟ್ ಕಾರ್ಡನ್ನು ಬಹಿರಂಗ ಪಡಿಸಿದೆ. ಟೈಮ್ ಫಾರ್ `ನೋಮೊ ಜಾಬ್ಸ್’ ಎಂದು ವ್ಯಂಗ್ಯವಾಡಿದ್ದಾರೆ.

    ಸರ್ಕಾರ ಹೇಳೋದು ಏನು?
    ಸಮೀಕ್ಷಾ ವರದಿಯ ಕುರಿತು ಸ್ಪಷ್ಟನೆ ನೀಡಿರುವ ನೀತಿ ಆಯೋಗ ಸಮೀಕ್ಷೆಯ ವರದಿ ಮಾಹಿತಿ ಅಂತಿಮವಲ್ಲ ಎಂದು ಹೇಳಿದೆ. ಬಿಡುಗಡೆ ಆಗಿರುವ ಈ ಮಾಹಿತಿಯನ್ನು ಪರಿಶೀಲನೆ ನಡೆಸಿಲ್ಲ ಹಾಗೂ ಮಾಹಿತಿಯ ಸತ್ಯತೆಯೂ ತಿಳಿದಿಲ್ಲ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.

    ವರದಿಯೂ ಪರಿಶೀಲನೆಯ ಹಂತದಲ್ಲಿ ಇದ್ದು, ವರದಿ ಸಂಪೂರ್ಣವಾಗಿ ಸಿದ್ಧವಾದ ನಂತರ ಬಿಡುಗಡೆ ಮಾಡಲಾಗುವುದು. ಪೂರ್ಣ ವರದಿ ತಯಾರದ ಮೇಲೆ ಬಿಡುಗಡೆ ಮಾಡುತ್ತೇವೆ. ಅಲ್ಲದೇ ಸಮೀಕ್ಷೆಯ ದತ್ತಾಂಶಗಳನ್ನು ಬಿಡುಗಡೆ ಮಾಡಲು ಭಿನ್ನ ಮಾನದಂಡಗಳನ್ನು ಬಳಕೆ ಮಾಡಲಾಗಿದ್ದು, ಆದ್ದರಿಂದ ಬಿಡುಗಡೆ ಆಗಿರುವ ವರದಿಯೇ ಅಂತಿಮವಲ್ಲ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆರೋಗ್ಯ ಹಾಗೂ ಪೋಷಣೆಯಲ್ಲಿ 4ನೇ ಸ್ಥಾನದಲ್ಲಿದೆ ರಾಯಚೂರು

    ಆರೋಗ್ಯ ಹಾಗೂ ಪೋಷಣೆಯಲ್ಲಿ 4ನೇ ಸ್ಥಾನದಲ್ಲಿದೆ ರಾಯಚೂರು

    ರಾಯಚೂರು: ಇಡೀ ದೇಶದಲ್ಲೇ ಅಪೌಷ್ಟಿಕತೆಗೆ ಹೆಸರಾಗಿದ್ದ ರಾಯಚೂರು ಜಿಲ್ಲೆ ಈಗ ಆರೋಗ್ಯ ಹಾಗೂ ಪೋಷಣೆಯಲ್ಲಿ ಅತೀ ವೇಗದಲ್ಲಿ ಸುಧಾರಿಸುತ್ತಿರುವ ದೇಶದ ನಾಲ್ಕನೇ ಜಿಲ್ಲೆಯಾಗಿದೆ ಅಂತ ನೀತಿ ಆಯೋಗ ತಿಳಿಸಿದೆ.

    ಮೊದಲೆಲ್ಲ ಅಪೌಷ್ಟಿಕತೆಗೆ ಯಾವ ಜಿಲ್ಲೆ ಫೇಮಸ್ ಎಂದು ಕೇಳದ್ರೆ ಎಲ್ಲರು ಹೇಳ್ತಿದಿದ್ದು ರಾಯಚೂರು ಜಿಲ್ಲೆ. ಆದ್ರೆ ಇನ್ಮುಂದೆ ಹಾಗಲ್ಲ, ನೀತಿ ಆಯೋಗ ಕಳೆದ ವರ್ಷ ಸರ್ವೆ ಮಾಡಿ ಆರೋಗ್ಯ ಮತ್ತು ಪೋಷಣೆಯಲ್ಲಿ ದೇಶದ ಯಾವ ಜಿಲ್ಲೆ ಯಾವ ಸ್ಥನದಲ್ಲಿದೆ ಅನ್ನೋದನ್ನ ವರದಿ ಮಾಡಿದೆ. 2018ರ ಜೂನ್ ಮತ್ತು ಅಕ್ಟೋಬರ್ ವರದಿಯನ್ನ ಪ್ರಕಟಿಸಿರುವ ಕೇಂದ್ರ ಸರ್ಕಾರದ ನೀತಿ ಆಯೋಗ ರಾಯಚೂರಿಗೆ ನಾಲ್ಕನೇ ಸ್ಥಾನ ನೀಡಿದೆ.

    ಹಾಗೆಯೇ ಉತ್ತರ ಪ್ರದೇಶದ ಚಿತ್ರಕೂಟ, ಮಧ್ಯಪ್ರದೇಶದ ಬರ್ವಾನಿ, ಮಧ್ಯಪ್ರದೇಶದ ವಿದಿಶಾ ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿವೆ. ಜಾರ್ಖಂಡ್ ರಾಜ್ಯದ ಐದು ಜಿಲ್ಲೆಗಳು ಕೊನೆಯ ಐದು ಸ್ಥಾನದಲ್ಲಿವೆ. ರಾಯಚೂರು ಜಿಲ್ಲೆಯ ಈ ಸಾಧನೆಗೆ ಹಿಂದಿನ ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರ ಪರಿಶ್ರಮ ಕಾರಣ ಅಂತ ಜಿಲ್ಲಾಧಿಕಾರಿ ಬಿ.ಶರತ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅವಧಿಗೆ ಮುನ್ನವೇ ರಾಜೀನಾಮೆ ನೀಡಿದ ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ ಪನಗರಿಯಾ

    ಅವಧಿಗೆ ಮುನ್ನವೇ ರಾಜೀನಾಮೆ ನೀಡಿದ ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ ಪನಗರಿಯಾ

    ನವದೆಹಲಿ: ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ ಪನಗರಿಯಾ ಅವರು ಮಂಗಳವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

    64 ವರ್ಷದ ಭಾರತೀಯ ಅಮೆರಿಕನ್ ಅರ್ಥ ಶಾಸ್ತ್ರಜ್ಞ, ಪನಗರಿಯಾ ಅವರ ಕಾರ್ಯಾವಧಿ ಇದೇ ಆಗಸ್ಟ್ 31ರಂದು ಮುಗಿಯುತಿತ್ತು. ಆದರೆ ಅವರು ಅವಧಿಗೂ ಮುನ್ನವೇ ಹುದ್ದೆಗೆ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.

    ಕ್ಯಾಬಿನೆಟ್ ದರ್ಜೆಯ ಸ್ಥಾನಮಾನವನ್ನು ಹೊಂದಿದ್ದ ಹುದ್ದೆಗೆ ಪನಗರಿಯಾ ಅವರನ್ನು ಮೋದಿ ಸರ್ಕಾರ 2015ರ ಜನವರಿಯಲ್ಲಿ ಆಯ್ಕೆ ಮಾಡಿತ್ತು. ರಾಜೀನಾಮೆ ನೀಡಿದ ಬಳಿಕ ತಾನು ನ್ಯೂಯಾರ್ಕ್‍ನ ಕೊಲಂಬಿಯ ವಿಶ್ವವಿದ್ಯಾಲಯಕ್ಕೆ ಅಧ್ಯಾಪನಕ್ಕೆ ಮರಳುತ್ತಿದ್ದೇನೆ ಎಂದು ಪನಗರಿಯಾ ತಿಳಿಸಿದ್ದಾರೆ.

    ನೀತಿ ಆಯೋಗದ ಉಪಾಧ್ಯಕ್ಷರಾಗುವುದಕ್ಕೂ ಮೊದಲು ಏಷ್ಯನ್ ಡೆವಲಪ್‍ಮೆಂಟ್ ಬ್ಯಾಂಕ್ ನ ಮುಖ್ಯ ಅರ್ಥಶಾಸ್ತ್ರಜ್ಞರಾಗಿದ್ದರು. ವಿಶ್ವ ಬ್ಯಾಂಕ್, ಐಎಂಎಫ್, ಡಬ್ಲ್ಯುಟಿಓ ಹಾಗೂ ವಿಶ್ವಸಂಸ್ಥೆಯ ವಾಣಿಜ್ಯ ಅಭಿವೃದ್ಧಿ ಮಂಡಳಿಯಲ್ಲೂ ಕೆಲಸ ಮಾಡಿರುವ ಪನಗರಿಯಾ ಪ್ರಿನ್ಸ್‍ಟನ್ ಯುನಿವರ್ಸಿಟಿಯಿಂದ ಅರ್ಥಶಾಸ್ತ್ರದಲ್ಲಿ ಪಿಎಚ್‍ಡಿ ಪಡೆದಿದ್ದಾರೆ.

    ಏನಿದು ನೀತಿ ಆಯೋಗ?
    ಯೋಜನಾಬದ್ಧ ಆರ್ಥಿಕ ಬೆಳವಣಿಗೆಗಳ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ 2014 ರವರೆಗೆ ಯೋಜನಾ ಆಯೋಗ ಸಲಹೆ ನೀಡುತಿತ್ತು. 2015ರ ಜನವರಿಯಲ್ಲಿ ಮೋದಿ ಸರ್ಕಾರ ಯೋಜನ ಆಯೋಗವನ್ನು ನೀತಿ ಆಯೋಗ ಎಂದು ಬದಲಿಸಿತ್ತು. ಈ ನೀತಿ ಆಯೋಗದ ಅಧ್ಯಕ್ಷರಾಗಿ ಪ್ರಧಾನಿ ನರೇಂದ್ರ ಮೋದಿ ಇದ್ದರೆ, ಉಪಾಧ್ಯಕ್ಷರಾಗಿ ಅರವಿಂದ ಪನಗರಿಯಾ ಇಲ್ಲಿಯವರೆಗೆ ಕಾರ್ಯನಿರ್ವಹಿಸಿದ್ದರು.