Tag: ನೀನಾಸಂ ಮಂಜು

  • ನೂರನೇ ದಿನದತ್ತ ಕನ್ನೇರಿ ಗೆಲುವಿನ ಹೆಜ್ಜೆ

    ನೂರನೇ ದಿನದತ್ತ ಕನ್ನೇರಿ ಗೆಲುವಿನ ಹೆಜ್ಜೆ

    ವತ್ತು ಸಿನಿಮಾ ಮಾಡುವುದು ಎಷ್ಟು ಕಷ್ಟವೋ? ಅದೇ ರೀತಿ ಜನರಿಗೆ ತಲುಪಿಸಿ ಅವರಿಂದ ಮೆಚ್ಚುಗೆ ಪಡೆಯುವುದು ಬಹುದೊಡ್ಡ ಕಷ್ಟ. ಈಗಂತೂ ಒಂದು ವಾರ ಹೆಚ್ಚೆಂದರೆ ಎರಡು ವಾರ ಸಿನಿಮಾಗಳು ಥಿಯೇಟರ್‌ನಲ್ಲಿ ನಿಲ್ಲುವುದು ಅಸಾಧ್ಯ. ಆದರೆ ಕನ್ನೇರಿ ಸಿನಿಮಾ ಭರ್ತಿ 75 ದಿನ ಪೂರೈಸಿ ನೂರನೇ ದಿನದತ್ತ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ.

    ಕಾಡಿನಲ್ಲಿಯೇ ನೆಮ್ಮದಿ ಕಂಡುಕೊಂಡು, ಕಾಡನ್ನೇ ಅದ್ಭುತ ಪ್ರಪಂಚ ಎಂದುಕೊಂಡಿದ್ದ ಬುಡಕಟ್ಟು ಮಂದಿಯನ್ನು ಒಕ್ಕಲೆಬ್ಬಿಸಿದ್ದ ಮಹಿಳಾ ಪ್ರಧಾನ ಕನ್ನೇರಿ ಸಿನಿಮಾವನ್ನು ನಿರ್ದೇಶಕ ನೀನಾಸಂ ಮಂಜು ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಒಕ್ಕಲೆಬ್ಬಿಸಿದ ಬಳಿಕ ಅಲ್ಲಿನ ಜನರ ಸ್ಥಿತಿಗತಿ, ಮುಖ್ಯವಾಗಿ ಹೆಣ್ಣುಮಕ್ಕಳ ಸ್ಥಿತಿ ಏನಾಯಿತು ಎಂಬೆಲ್ಲಾ ವಿಚಾರಗಳನ್ನು ಕಣ್ಣಿಗೆ ಕಟ್ಟುವಂತೆ ಕಟ್ಟಿಕೊಟ್ಟಿದ್ದಾರೆ. ಈ ಕಥೆ ಪ್ರೇಕ್ಷಕನ ಹೃದಯ ತಟ್ಟಿದೆ. ಇದನ್ನೂ ಓದಿ: ಮೊಬೈಲ್ ಬಿಡಿ ಮೈದಾನಕ್ಕೆ ಬನ್ನಿ: ಮಕ್ಕಳಿಗೆ ಮೇಘನಾ ರಾಜ್ ಸಲಹೆ

    ಹೇಳಿಕೇಳಿ ನಿರ್ದೇಶಕ ನೀನಾಸಂ ಮಂಜು ರಂಗಭೂಮಿಯಲ್ಲಿ ಪಳಗಿದ ಪ್ರತಿಭೆ. ಹೀಗಾಗಿ ಅವರ ಕಥೆಗಳಲ್ಲಿ ಗಟ್ಟಿತನ ಇರುತ್ತದೆ ಎನ್ನುವುದಕ್ಕೆ ಕನ್ನೇರಿ ಸಿನಿಮಾವೇ ತಾಜ ಉದಾಹರಣೆ. ಈ ಸಿನಿಮಾ ಅಂತಲ್ಲ ಕಳೆದ ಬಾರಿ ಜನಮನ್ನಣೆ ಪಡೆದ ಮೂಕ್ಕಹಕ್ಕಿ ಸಿನಿಮಾವೂ ಗಟ್ಟಿತನ ಕಂಟೆಂಟಿನ ಸಿನಿಮಾ. ಪ್ರತಿ ಬಾರಿಯೂ ಸದಾಭಿರುಚಿ ಸಿನಿಮಾಗಳನ್ನು ಮಂಜು ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದಾರೆ. ಈ ಬಾರಿ ಕನ್ನೇರಿ ಚಿತ್ರದ ಮೂಲಕ ನೀನಾಸಂ ಮಂಜು ಮತ್ತೊಮ್ಮೆ ಭರಪೂರ ಮನರಂಜನೆ ನೀಡಿದ್ದಾರೆ. ಇದನ್ನೂ ಓದಿ: ಅಂತಿಂಥ ಹೆಣ್ಣು ಇವಳಲ್ಲಾ ಎಂದು ಪತ್ನಿಯನ್ನು ಹೊಗಳಿದ ನವರಸ ನಾಯಕ ಜಗ್ಗೇಶ್

    ಅರ್ಚನಾ ಮಧುಸೂದನ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದು, ಅನಿತ ಭಟ್, ಕರಿ ಸುಬ್ಬು, ಅರುಣ್ ಸಾಗರ್, ಎಂ.ಕೆ. ಮಠ ಒಳಗೊಂಡ ಅನುಭವಿ ಕಲಾವಿದರ ಅಭಿನಯವಿದೆ. ಬುಡ್ಡಿದೀಪ ಸಿನಿಮಾ ಹೌಸ್ ಬ್ಯಾನರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಪಿ.ಪಿ. ಹೆಬ್ಬಾರ್ ಮತ್ತು ಚಂದ್ರಶೇಖರ್ ನಿರ್ಮಾಪಕರು. ಕೊಟಿಗಾನಹಳ್ಳಿ ರಾಮಯ್ಯ ಕಥೆ ಮತ್ತು ಸಾಹಿತ್ಯ, ಸುಜಿತ್ ಎಸ್ ನಾಯಕ್ ಸಂಕಲನ, ಗಣೇಶ್ ಹೆಗ್ಡೆ ಕ್ಯಾಮೆರಾ ನಿರ್ದೇಶನ ಚಿತ್ರಕ್ಕಿದೆ.

  • ರಾಯಬಾಗದಲ್ಲಿ ಆರನೇ ವಾರಕ್ಕೆ ಕಾಲಿಟ್ಟ ‘ಕನ್ನೇರಿ’ ಚಿತ್ರ – ಪ್ರೇಕ್ಷಕರಿಂದ ಸಂಭ್ರಮಾಚರಣೆ

    ರಾಯಬಾಗದಲ್ಲಿ ಆರನೇ ವಾರಕ್ಕೆ ಕಾಲಿಟ್ಟ ‘ಕನ್ನೇರಿ’ ಚಿತ್ರ – ಪ್ರೇಕ್ಷಕರಿಂದ ಸಂಭ್ರಮಾಚರಣೆ

    ನೀನಾಸಂ ಮಂಜು ನಿರ್ದೇಶನದ ‘ಕನ್ನೇರಿ’ ಸಿನಿಮಾ ಬಿಡುಗಡೆಯಾಗಿ ಎಲ್ಲರ ಗಮನ ಸೆಳೆದದ್ದು ಗೊತ್ತೇ ಇದೆ. ನೈಜ ಘಟನೆಯಿಂದ ಸ್ಪೂರ್ತಿ ಪಡೆದ ಚಿತ್ರ ಮಾರ್ಚ್ 4ರಂದು ರಾಜ್ಯಾದ್ಯಂತ ತೆರೆಕಂಡು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಚಿತ್ರ ಬಿಡುಗಡೆಯಾಗಿ ಆರನೇ ವಾರಕ್ಕೆ ಕಾಲಿಟ್ಟಿದ್ದು, ಉತ್ತರಕರ್ನಾಟಕ ಭಾಗದಲ್ಲಿ ಯಶಸ್ವಿ ಆರನೇ ವಾರ ಪ್ರದರ್ಶನ ಕಾಣುತ್ತಿದೆ.

    ಉತ್ತರ ಕರ್ನಾಟಕದ ಜನರ ಪ್ರೀತಿಗೆ ಪಾತ್ರವಾದ ಈ ಚಿತ್ರ ಆ ಭಾಗದ ಜನರಿಂದ ಪ್ರಶಂಸೆ ಗಿಟ್ಟಿಸಿಕೊಂಡಿದೆ. ನೆಲದ ಸೊಗಡು, ಪ್ರಸ್ತುತ ಎನಿಸುವ ಕಥೆ, ಪಾತ್ರವರ್ಗದ ಅಭಿನಯ, ನೀನಾಸಂ ಮಂಜು ಕಥೆ ಕಟ್ಟಿಕೊಟ್ಟ ಪರಿಯನ್ನು ಮೆಚ್ಚಿಕೊಂಡಿದ್ದಾರೆ. ರಾಯಬಾ ಗದತ್ತ ಚಿತ್ರಮಂದಿರದಲ್ಲಿ ಆರನೇ ವಾರ ಸಿನಿಮಾ ಪ್ರದರ್ಶನಗೊಳ್ಳುತ್ತಿರುವುದರಿಂದ ಚಿತ್ರದ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮ ಪಟ್ಟಿದ್ದಾರೆ. ಚಿತ್ರದ ಮೇಲೆ ಅಭಿಮಾನಿಗಳು ತೋರಿಸುತ್ತಿರುವ ಪ್ರೀತಿ ಕಂಡು ‘ಕನ್ನೇರಿ’ ಚಿತ್ರತಂಡ ಕೂಡ ಸಂತಸ ವ್ಯಕ್ತಪಡಿಸಿದೆ.ಇದನ್ನೂ ಓದಿ: ಕೆಜಿಎಫ್ 2 : ಯಾವ ರಾಜ್ಯದಲ್ಲಿ ಎಷ್ಟು ಕಲೆಕ್ಷನ್? ಪಕ್ಕಾ ಲೆಕ್ಕ

    ‘ಕನ್ನೇರಿ’ ನೀನಾಸಂ ಮಂಜು ನಿರ್ದೇಶನದ ಎರಡನೇ ಸಿನಿಮಾ. ಕಾಡು ಜನರನ್ನು ಒಕ್ಕಲೆಬ್ಬಿಸಿದ ನಂತರ ಅವರ ಬದುಕು ಹೇಗೆಲ್ಲ ಶೋಷಣೆಗೆ ಒಳಪಡುತ್ತೆ. ಪ್ರಮುಖವಾಗಿ ಅಲ್ಲಿನ ಹೆಣ್ಣು ಮಕ್ಕಳು ಯಾವೆಲ್ಲ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಈಗಲೂ ಹೇಗೆ ಎದುರಿಸುತ್ತಿದ್ದಾರೆ ಅನ್ನೋದರ ಬಗ್ಗೆ ಬೆಳಕು ಚೆಲ್ಲುವ ಕಥೆ ಚಿತ್ರದಲ್ಲಿದೆ. ಮಹಿಳಾ ಪ್ರಧಾನ ಚಿತ್ರ ಇದಾಗಿದ್ದು, ಚಿತ್ರದ ಮುಖ್ಯ ಭೂಮಿಕೆಯಲ್ಲಿ ಅರ್ಚನಾ ಮಧುಸೂದನ್ ನಟಿಸಿದ್ದಾರೆ.

    ಕರಿಸುಬ್ಬು, ಎಂ.ಕೆ.ಮಠ, ಅರುಣ್ ಸಾಗರ್, ಅನಿತಾ ಭಟ್ ಚಿತ್ರದ ತಾರಾಬಳಗದಲ್ಲಿ ಅಭಿನಯಿಸಿದ್ದಾರೆ. ಬುಡ್ಡಿದೀಪ ಸಿನಿಮಾ ಹೌಸ್ ಬ್ಯಾನರ್ ನಿರ್ಮಾಣದಲ್ಲಿ ಪಿ.ಪಿ.ಹೆಬ್ಬಾರ್ ಸಿನಿಮಾ ನಿರ್ಮಾಣ ಮಾಡಿದ್ದು, ಕದ್ರಿ ಮಣಿಕಾಂತ್ ಸಂಗೀತ ನಿರ್ದೇಶನ, ಗಣೇಶ್ ಹೆಗ್ಡೆ ಕ್ಯಾಮರಾ ವರ್ಕ್ ಚಿತ್ರಕ್ಕಿದೆ. ಇದನ್ನೂ ಓದಿ: ಕನ್ನಡದಲ್ಲೇ ಕೆಜಿಎಫ್ ನೋಡಿ ಫಿದಾ ಆದ ತಲೈವಾ

  • ಕಾಡಿನ ಮಕ್ಕಳಿಗೆ ಕಾಡು-ನಾಡು ಎರಡೂ ಕಡೆ ಇಲ್ಲ ಅಸ್ತಿತ್ವ – ಆದಿವಾಸಿ ಹೆಣ್ಣು ಮಕ್ಕಳ ಕರುಣಾಜನಕ ಕಥೆ ಹೇಳುವ ಕನ್ನೇರಿ

    ಕಾಡಿನ ಮಕ್ಕಳಿಗೆ ಕಾಡು-ನಾಡು ಎರಡೂ ಕಡೆ ಇಲ್ಲ ಅಸ್ತಿತ್ವ – ಆದಿವಾಸಿ ಹೆಣ್ಣು ಮಕ್ಕಳ ಕರುಣಾಜನಕ ಕಥೆ ಹೇಳುವ ಕನ್ನೇರಿ

    ಚಿತ್ರ: ಕನ್ನೇರಿ
    ನಿರ್ದೇಶನ: ನೀನಾಸಂ ಮಂಜು
    ನಿರ್ಮಾಪಕರು: ಪಿ.ಪಿ ಹೆಬ್ಬಾರ್
    ಸಂಗೀತ: ಕದ್ರಿ ಮಣಿಕಾಂತ್
    ಛಾಯಾಗ್ರಾಹಣ: ಗಣೇಶ್ ಹೆಗ್ಡೆ
    ತಾರಾಬಳಗ: ಅರ್ಚನಾ ಮಧುಸೂದನ್, ಎಂ ಕೆ ಮಠ, ಅರುಣ್ ಸಾಗರ್, ಅನಿತ ಭಟ್, ಸರ್ದಾರ್ ಸತ್ಯ, ಇತರರು

    ನೀನಾಸಂ ಮಂಜು ನಿರ್ದೇಶನದಲ್ಲಿ ಮೂಡಿ ಬಂದಿರುವ ಕನ್ನೇರಿ ಸಿನಿಮಾ ಬಿಡುಗಡೆಯಾಗಿದೆ. ಹಾಡು, ಟ್ರೇಲರ್ ಮೂಲಕವೇ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದ್ದ ಚಿತ್ರ ಪ್ರೇಕ್ಷಕರೆದುರು ಇಂದು ತೆರೆಕಂಡಿದೆ.

    ಆದಿವಾಸಿ ಜನರನ್ನು ಒಕ್ಕಲೆಬ್ಬಿಸಿದ ನಂತರ ಅವರು ಎದುರಿಸುತ್ತಿರುವ ಸಮಸ್ಯೆಗಳ ಮೇಲೆ ವಿಶೇಷವಾಗಿ ಹೆಣ್ಣು ಮಕ್ಕಳು ಅನುಭವಿಸುತ್ತಿರುವ ಸಮಸ್ಯೆಗಳ ಮೇಲೆ ಸಿನಿಮಾ ಬೆಳಕು ಚೆಲ್ಲುತ್ತದೆ. ಕೆಲಸಕ್ಕೆಂದು ನಗರದತ್ತ ಮುಖ ಮಾಡಿದ ಹೆಣ್ಣು ಮಕ್ಕಳು ಹೇಗೆಲ್ಲ ಸಂಕಷ್ಟಕ್ಕೆ ಸಿಲುಕಿದ್ದಾರೆ? ಅವರ ಮುಗ್ಧತೆಯನ್ನು ಜನ ಹೇಗೆಲ್ಲ ಬಳಸಿಕೊಳ್ಳುತ್ತಿದ್ದಾರೆ ಅನ್ನೋದನ್ನ ಇಲ್ಲಿ ಸೂಕ್ಷ್ಮವಾಗಿ ಹೇಳಲಾಗಿದೆ. ಸರ್ಕಾರದ ನಿರ್ಲಕ್ಷ್ಯದಿಂದಾಗಿ ವಿದ್ಯಾಭ್ಯಾಸದಿಂದ ವಂಚಿತರಾಗಿ, ಪೋಷಕರಿಂದಲೂ ದೂರವಾಗಿ ನಗರದಲ್ಲೂ ನೆಲೆ ಇಲ್ಲದೆ ತಮ್ಮ ಮುಗ್ಧತೆಯಿಂದಲೇ ಆರೋಪಗಳನ್ನೆದುರಿಸುತ್ತ ಬದುಕುತ್ತಿರುವ ಎಷ್ಟೋ ಹೆಣ್ಣು ಮಕ್ಕಳ ಕಣ್ಣೀರ ಕಥೆಯನ್ನು ಕನ್ನೇರಿ ಹೇಳುತ್ತದೆ.

    ಡಾಕ್ಯುಮೆಂಟರಿ ಫಿಲ್ಮಂ ಮೇಕರ್ ಅರವಿಂದ್ ಆದಿವಾಸಿ ಜನರಿಗಾಗಿ ಸರ್ಕಾರ ಮೀಸಲಿಟ್ಟ ಜಾಗಕ್ಕೆ ಬಂದು ಅಲ್ಲಿನ ಜನರ ಪರಿಸ್ಥಿತಿ, ಮಕ್ಕಳ ಶಿಕ್ಷಣದ ಬಗ್ಗೆ ವಿಚಾರಸಿದಾಗ ಆತನಿಗೆ ಮುತ್ತಮ್ಮ ಎಂಬುವ ಪ್ರತಿಭಾನ್ವಿತ ಹುಡುಗಿ ಬಗ್ಗೆ ತಿಳಿಯುತ್ತದೆ. ತನ್ನ ತಾತನ ಆರೋಗ್ಯ ಕಾಪಾಡಲು ಕಾಸಿಲ್ಲದಿದ್ದಾಗ ನಗರವೊಂದರಲ್ಲಿ ಶ್ರೀಮಂತರೊಬ್ಬರ ಮನೆಗೆಲಸಕ್ಕೆ ಸೇರುವ ಮುತ್ತಮ್ಮ ಮತ್ತೆ ಊರಿಗೆ ವಾಪಸ್ಸು ಮರಳುವುದಿಲ್ಲ. ಎರಡು ವರ್ಷವಾದರೂ ಆಕೆಯ ಸುಳಿವೂ ಇರುವುದಿಲ್ಲ. ಮುತ್ತಮ್ಮನ ಕಥೆ ಕೇಳಿ ಆಕೆಯನ್ನು ಹುಡುಕಲು ಅರವಿಂದ್ ಹೊರಡುತ್ತಾನೆ. ಆ ಪ್ರಯತ್ನದಲ್ಲಿ ಯಶಸ್ವಿಯೂ ಆಗುತ್ತಾನೆ. ಜೈಲಿನಲ್ಲಿರುವ ಮುತ್ತಮ್ಮನನ್ನು ಕಂಡು ಮರುಗುತ್ತಾನೆ. ಆಕೆಯನ್ನು ಆರೋಪದಿಂದ ಮುಕ್ತಗೊಳಿಸಲು ಪಣತೊಡುತ್ತಾನೆ. ಅರವಿಂದ್ ಪ್ರಯತ್ನ ಯಶಸ್ವಿಯಾಗುತ್ತಾ? ಮುತ್ತಮ್ಮ ಮತ್ತೆ ತನ್ನ ತಾತನ ಬಳಿ ಸೇರುತ್ತಾಳಾ? ಅಷ್ಟಕ್ಕೂ ಆಕೆ ಜೈಲು ಸೇರಲು ಮಾಡಿದ ಪ್ರಮಾದವಾದರೂ ಏನು? ಇದೇ ಚಿತ್ರದ ಇಂಟ್ರಸ್ಟಿಂಗ್ ಸಂಗತಿ. ಇದನ್ನೂ ಓದಿ: ನಟಿ ಸಂಜನಾಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಆರೋಪ- ಯುವಕ ಪೊಲೀಸ್ ವಶಕ್ಕೆ

    ಮುತ್ತಮ್ಮ ಎಂಬ ಹೆಣ್ಣುಮಗಳೊಬ್ಬಳ ಕಥೆಯ ಮೂಲಕ ಇಡೀ ಆದಿವಾಸಿ ಹೆಣ್ಣುಮಕ್ಕಳ ಬಗ್ಗೆ ಬೆಳಕು ಚೆಲ್ಲಿದ್ದಾರೆ ನೀನಾಸಂ ಮಂಜು. ನಗರದತ್ತ ಕೆಲಸ ಅರಸಿ ಬರುವ ಅಮಾಯಕ ಹೆಣ್ಣು ಮಕ್ಕಳನ್ನು ಹೇಗೆ ಬಲೆ ಬೀಸಿ ಚಕ್ರವ್ಯೂಹದಲ್ಲಿ ಸಿಕ್ಕಿಸುತ್ತಾರೆ. ಅವರ ಬದುಕು ಎಷ್ಟು ಶೋಚನೀಯವಾಗಿದೆ ಎನ್ನುವುದನ್ನು ಮುತ್ತಮ್ಮ ಪಾತ್ರದ ಮೂಲಕ ಹೇಳುವ ಪ್ರಯತ್ನ ನಿರ್ದೇಶಕರದ್ದು, ಈ ಪ್ರಯತ್ನ ಮನಸ್ಸಿಗೆ ನಾಟುತ್ತದೆ. ಕಾಡಿನಲ್ಲಿ ಸುಂದರ ಬದುಕು ಕಟ್ಟಿಕೊಂಡು ಬದುಕು ಸಾಗಿಸುತ್ತಿದ್ದವರನ್ನು ನಿರ್ದಾಕ್ಷೀಣ್ಯವಾಗಿ ಹೊರಗಟ್ಟಿ ನಾಡಿನಲ್ಲೂ ಒಂದೊಳ್ಳೆ ಜೀವನ ಕಟ್ಟಿಕೊಡದೇ ಅವರನ್ನು ಅರೆ ಜೀವವಾಗಿ ಮಾಡುವ ವ್ಯವಸ್ಥೆ, ಈಗಲೂ ಸೌಲಭ್ಯವಿಲ್ಲದೇ ಒಪ್ಪತ್ತು ಊಟಕ್ಕೂ ಪರದಾಡುವ ಅವರ ನೋವಿನ ಕಥೆಯನ್ನು ತೆರೆದಿಡುತ್ತದೆ ಚಿತ್ರ. ನೆಲದ ಮಕ್ಕಳಿಗೆ ನೆಲೆ ಇಲ್ಲವಲ್ಲ ಎಂದು ಕಾಡುತ್ತದೆ.

    ನಿರ್ದೇಶಕರ ಭಾವನೆಗಳನ್ನು ಛಾಯಾಗ್ರಾಹಕ ಗಣೇಶ್ ಹೆಗ್ಡೆ ಅಚ್ಚುಕಟ್ಟಾಗಿ ಕಣ್ಮನ ಸೆಳೆಯುವಂತೆ ಸೆರೆ ಹಿಡಿದಿದ್ದಾರೆ. ಹಾಡಿಯ ನಾಯಕನ ಪಾತ್ರದಲ್ಲಿ ನಟಿಸಿರುವ ಎಂ.ಕೆ. ಮಠ ಅವರ ಅಭಿನಯ ಮನಮುಟ್ಟುತ್ತದೆ. ಮುತ್ತಮ್ಮನ ಪಾತ್ರದಲ್ಲಿ ಅರ್ಚನಾ ಮಧುಸೂದನ್ ಇಷ್ಟವಾಗುತ್ತಾರೆ, ಲಾಯರ್ ಪಾತ್ರದಲ್ಲಿ ಅರುಣ್ ಸಾಗರ್, ಪೊಲೀಸ್ ಆಗಿ ಸರ್ದಾರ್ ಸತ್ಯ, ನೆಗೆಟಿವ್ ರೋಲ್‍ನಲ್ಲಿ ಅನಿತಾ ಭಟ್ ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಕದ್ರಿ ಮಣಿಕಾಂತ್ ಸಂಗೀತ ಕೂಡ ಚಿತ್ರದ ಪ್ಲಸ್ ಪಾಯಿಂಟ್. ನೀನಾಸಂ ಮಂಜು ಆಯ್ಕೆ ಮಾಡಿಕೊಂಡ ಕಟೆಂಟ್ ಹಾಗೂ ಅದನ್ನು ತೆರೆ ಕಟ್ಟಿಕೊಡುವಲ್ಲಿನ ಪರಿಶ್ರಮ ಖಂಡಿತ ಮೆಚ್ಚುವಂತದ್ದು. ಮನಸ್ಸಿಗೆ ನಾಟುವ ಕತೆ, ತೆರೆ ಮೇಲೆ ತಂದ ರೀತಿ ಎಲ್ಲವೂ ಓಕೆ ಎನಿಸಿದರು ಕೆಲವು ಸನ್ನಿವೇಶಗಳಲ್ಲಿ ಇನ್ನೂ ಏನು ಬೇಕಿತ್ತು ಎನ್ನುವ ಭಾವ ಮೂಡುತ್ತದೆ. ಚಿತ್ರಕಥೆ ಇನ್ನಷ್ಟು ಬಿಗಿಯಾಗಿದರೆ ಖಂಡಿತ ಕನ್ನೇರಿ ಮತ್ತಷ್ಟು ಮನಸ್ಸಿನಾಳಕ್ಕೆ ನಾಟುವುದರಲ್ಲಿ ಎರಡು ಮಾತಿಲ್ಲ. ಇದನ್ನೂ ಓದಿ:  ಹೆಣ್ಣು ಮಗುವಿನ ತಂದೆಯಾದ ರಿಶಬ್ ಶೆಟ್ಟಿ

    ರೇಟಿಂಗ್ : 3.5/5

  • ‘ಕನ್ನೇರಿ’ ಒಡಲೊಳಗಿದೆ ಬೇರೆಯದ್ದೇ ಲೋಕ – ಟ್ರೇಲರ್ ನೋಡಿ ಮೆಚ್ಚಿದ ಪ್ರೇಕ್ಷಕ ಮಹಾಶಯರು

    ‘ಕನ್ನೇರಿ’ ಒಡಲೊಳಗಿದೆ ಬೇರೆಯದ್ದೇ ಲೋಕ – ಟ್ರೇಲರ್ ನೋಡಿ ಮೆಚ್ಚಿದ ಪ್ರೇಕ್ಷಕ ಮಹಾಶಯರು

    ಬೆಂಗಳೂರು: ಚಂದನವನದಲ್ಲಿ ನೀನಾಸಂ ಮಂಜು ನಿರ್ದೇಶನ ಸಾರಥ್ಯದಲ್ಲಿ ಬಿಡುಗಡೆಯಾಗಲು ಸಜ್ಜಾಗಿರುವ ಬಹುನಿರೀಕ್ಷಿತ ಸಿನಿಮಾ ‘ಕನ್ನೇರಿ’. ಒಂದಕ್ಕಿಂತ ಒಂದು ಮನಮಿಡಿಯೋ ಹಾಡುಗಳ ಮೂಲಕ ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿಸಿರುವ ‘ಕನ್ನೇರಿ’ ಮಾರ್ಚ್ 4ರಂದು ಚಿತ್ರಮಂದಿರದ ಅಂಗಳಕ್ಕೆ ಕಾಲಿಡಲು ಸರ್ವ ರೀತಿಯಲ್ಲೂ ಸಜ್ಜಾಗಿದೆ. ಅದಕ್ಕೂ ಮುನ್ನ ಚಿತ್ರದ ಟ್ರೇಲರ್ ಝಲಕ್ ಹರಿ ಬಿಟ್ಟಿರುವ ಚಿತ್ರತಂಡ ಸಿನಿಮಾ ಮೇಲಿನ ಕ್ಯೂರಿಯಾಸಿಟಿ ಲೆವೆಲ್ ಹೆಚ್ಚುಮಾಡಿದೆ.

    ಹಾಡುಗಳ ಮೂಲಕ ಸುದ್ದಿಯಲ್ಲಿದ್ದ ‘ಕನ್ನೇರಿ’ ಸಿನಿಮಾ ಈಗ ಟ್ರೇಲರ್ ಮೂಲಕ ಟಾಕ್ ಕ್ರಿಯೇಟ್ ಮಾಡಿದೆ. ಚಿತ್ರದ ಬಹು ನಿರೀಕ್ಷಿತ ಟ್ರೇಲರ್ ಖ್ಯಾತ ನಟಿ ‘ತಾರಾ ಅನುರಾಧ’ ಅವರಿಂದ ಇಂದು ಬಿಡುಗಡೆಯಾಗಿದೆ. ಟ್ರೇಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿರುವ ತಾರಾ ಸಿನಿಮಾ ಬಗೆಗಿರುವ ತಮ್ಮ ಕುತೂಹಲವನ್ನು ಹಂಚಿಕೊಂಡು ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಇದನ್ನೂ ಓದಿ: UAEನಿಂದ ಗೋಲ್ಡನ್ ವೀಸಾ ಪಡೆದ ಪ್ರಣಿತಾ!

    ‘ಕನ್ನೇರಿ’ ಟ್ರೇಲರ್ ಬಿಡುಗಡೆಯಾದ ಕೆಲವೇ ಸಮಯದಲ್ಲಿ ಸಖತ್ ಪಾಸಿಟಿವ್ ರೆಸ್ಪಾನ್ಸ್ ಜೊತೆಗೆ ಭರವಸೆಯ ಮಾತುಗಳನ್ನು ತನ್ನದಾಗಿಸಿಕೊಂಡಿದೆ. ಜನಪ್ರಿಯ ನಟಿ ತಾರಾ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಕಾಡಿನಲ್ಲಿ ನೆಲೆ ಕಂಡುಕೊಂಡ ಜನರ ಬದುಕು, ಆ ಬದುಕಿನಲ್ಲಿರುವ ಖುಷಿ, ಅವರ ಆಚರಣೆಯಲ್ಲಿದ್ದ ಸಂತಸ, ಕಣ್ತೆರೆದು ನೋಡುವಷ್ಟರಲ್ಲಿ ಬದುಕಲ್ಲಿ ಬಂದೆರಗಿದ ತಿರುವುಗಳು, ಹೆಣ್ಣುಮಗಳೊಬ್ಬಳ ಆತಂಕದ ಛಾಯೆ, ತನಿಖೆಯ ಹಾದಿ, ಕೋರ್ಟ್ ಅಂಗಳ, ಕಾಡುವ ಮಣಿಕಾಂತ್ ಕದ್ರಿ ಹಿನ್ನೆಲೆ ಸಂಗೀತ ಹೀಗೆ ಸಾಕಷ್ಟು ಇಂಟ್ರಸ್ಟಿಂಗ್ ಫ್ಯಾಕ್ಟರ್ ಹೊತ್ತಿದೆ ‘ಕನ್ನೇರಿ’ ಟ್ರೇಲರ್.

    ‘ಕನ್ನೇರಿ’ ಒಡಲೊಳಗೆ ಬೇರೆಯದ್ದೇ ವಿಶೇಷತೆ ಇದೆ ಎನ್ನೋದನ್ನ ಸಾರಿ ಹೇಳುತ್ತಿದೆ. ಸಿನಿಪ್ರಿಯರ ಮನದಂಗಳದಲ್ಲಿ ಇದ್ದ ಕೌತುಕತೆಯನ್ನು ಮಗದಷ್ಟು ಹೆಚ್ಚು ಮಾಡಿದೆ. ಒಟ್ಟಿನಲ್ಲಿ, ಮೆಚ್ಚುಗೆಯ ಜೊತೆ ಸಿನಿಮಾ ಬಗ್ಗೆ ಭರವಸೆಯ ಎಳೆಯನ್ನು ಬಿಡುಗಡೆಯಾದ ಟ್ರೇಲರ್ ಸೃಷ್ಟಿಸಿದೆ ಅನ್ನೋದ್ರಲ್ಲಿ ಎರಡು ಮಾತಿಲ್ಲ.

    ಮೊದಲೇ ತಿಳಿದಂತೆ ‘ಕನ್ನೇರಿ’ ನೈಜ ಘಟನೆಗಳಿಂದ ಸ್ಪೂರ್ತಿ ಪಡೆದ ಮಹಿಳಾ ಪ್ರಧಾನ ಚಿತ್ರ. ನಿರ್ವಸತಿಗರ ಬದುಕಿನ ಚಿತ್ರಣವನ್ನು ಕಟ್ಟಿಕೊಡುವ ಪ್ರಯತ್ನದ ಜೊತೆಗೆ ಪ್ರಸ್ತುತ ಅವರುಗಳೆಲ್ಲ ಎದುರಿಸುತ್ತಿರುವ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಚಿತ್ರದಲ್ಲಿದೆ. ಸಾಮಾಜಿಕ ಕಳಕಳಿ ಜೊತೆಗೆ ಮನರಂಜನೆಯನ್ನೂ ದೃಷ್ಟಿಕೋನದಲ್ಲಿಟ್ಟುಕೊಂಡು ಕಮರ್ಶಿಯಲ್ ಎಳೆಯಲ್ಲಿ ಚಿತ್ರವನ್ನು ತೆರೆ ಮೇಲೆ ತರುತ್ತಿದ್ದಾರೆ ನಿರ್ದೇಶಕ ನೀನಾಸಂ ಮಂಜು. ಚಿತ್ರದ ಮುಖ್ಯ ಭೂಮಿಕೆಯಲ್ಲಿ ಅರ್ಚನಾ ಮಧುಸೂದನ್ ಅಭಿನಯಿಸಿದ್ದಾರೆ. ಅನಿತ ಭಟ್, ಸರ್ದಾರ್ ಸತ್ಯ, ಎಂ.ಕೆ. ಮಠ್, ಅರುಣ್ ಸಾಗರ್, ಕರಿಸುಬ್ಬು ಒಳಗೊಂಡ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿ ಬಣ್ಣಹಚ್ಚಿದ್ದಾರೆ. ಇದನ್ನೂ ಓದಿ: ವೈರಲ್ ಆಯ್ತು ಶಾರೂಖ್ ನ್ಯೂಲುಕ್ – ರಿಯಲ್ ಫೋಟೋ ರಿಲೀಸ್!

    ಮಣಿಕಾಂತ್ ಕದ್ರಿ ಸಂಗೀತ ಸ್ಪರ್ಶ, ಸುಜಿತ್ ಎಸ್ ನಾಯಕ್ ಸಂಕಲನ ಚಿತ್ರಕ್ಕಿದ್ದು, ಗಣೇಶ್ ಹೆಗ್ಡೆ ಕ್ಯಾಮರಾ ಕಣ್ಣಲ್ಲಿ ಸಿನಿಮಾ ಸೆರೆಯಾಗಿದೆ. ಪಿ.ಪಿ.ಹೆಬ್ಬಾರ್ ಮತ್ತು ಚಂದ್ರಶೇಖರ್ ಬುಡ್ಡಿದೀಪ ಸಿನಿಮಾ ಹೌಸ್ ಬ್ಯಾನರ್ ನಡಿ ‘ಕನ್ನೇರಿ’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಪ್ರಾಮಿಸಿಂಗ್ ಎನಿಸುವ ತುಣುಕುಗಳ ಮೂಲಕ ಗಮನ ಸೆಳೆಯುತ್ತಿರುವ ‘ಕನ್ನೇರಿ’ ಚಿತ್ರ ಮಾರ್ಚ್ 4ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.

  • ನೀನಾಸಂ ಮಂಜು ನಿರ್ದೇಶನದ ‘ಕನ್ನೇರಿ’ ಚಿತ್ರಕ್ಕೆ ನಟ ವಸಿಷ್ಠ ಸಿಂಹ ಸಾಥ್

    ನೀನಾಸಂ ಮಂಜು ನಿರ್ದೇಶನದ ‘ಕನ್ನೇರಿ’ ಚಿತ್ರಕ್ಕೆ ನಟ ವಸಿಷ್ಠ ಸಿಂಹ ಸಾಥ್

    ನೀನಾಸಂ ಮಂಜು ಆಕ್ಷನ್ ಕಟ್ ಹೇಳಿರುವ ‘ಕನ್ನೇರಿ’ ಸಿನಿಮಾ ಬಿಡುಗಡೆಗೆ ಸಿದ್ದವಾಗುತ್ತಿದೆ. ಬಿಡುಗಡೆಯಾಗುತ್ತಿರುವ ಚಿತ್ರದ ಸ್ಯಾಂಪಲ್ ಗಳು ಸಿನಿಮಾ ಮೇಲಿನ ನಿರೀಕ್ಷೆ, ಕುತೂಹಲವನ್ನೂ ಹೆಚ್ಚು ಮಾಡುತ್ತಿದೆ. ಮಹಿಳಾ ಪ್ರಧಾನ ಹಾಗೂ ನೈಜ ಘಟನೆಯಾಧಾರಿತ ಚಿತ್ರವನ್ನು ನೀನಾಸಂ ಮಂಜು ಕಮರ್ಶಿಯಲ್ ಎಳೆಯಲ್ಲಿ ಕಟ್ಟಿಕೊಟ್ಟು ತೆರೆಗೆ ತರಲು ಸಜ್ಜಾಗಿದ್ದಾರೆ. ಬಿಡುಗಡೆಗೂ ಮುನ್ನವೇ ಒಂದೊಳ್ಳೆ ಪಾಸಿಟಿವ್ ಬಝ್ ಕ್ರಿಯೇಟ್ ಮಾಡಿರುವ ಈ ಚಿತ್ರಕ್ಕೆ ಚಿತ್ರರಂಗದ ಹಲವರು ಸಾಥ್ ನೀಡುತ್ತಿದ್ದಾರೆ. ಇದಕ್ಕೆ ಸಾಕ್ಷಿಯಾಗಿದ್ದು ಕನ್ನೇರಿ ಸಿನಿಮಾದ ಹಾಡಿನ ಬಿಡುಗಡೆ ಸಮಾರಂಭ.

    ಹೌದು, ಚಿತ್ರದ ಬಹು ನಿರೀಕ್ಷಿತ ಹಾಡು ‘ಕಾಣದ ಊರಿಗೆ ಕೂಲಿಗೆ ಹೊರಟೋಳೆ’ ಹಾಡಿನ ಬಿಡುಗಡೆ ಸಲುವಾಗಿ ಚಿತ್ರತಂಡ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ಚಿತ್ರತಂಡದ ಜೊತೆಗೆ ಸ್ಯಾಂಡಲ್‍ವುಡ್ ಖ್ಯಾತ ನಟ ವಸಿಷ್ಠ ಸಿಂಹ ಭಾಗಿಯಾಗಿ ಹಾಡನ್ನು ಬಿಡುಗಡೆ ಮಾಡಿ ಪ್ರೋತ್ಸಾಹ ನೀಡಿದ್ದಾರೆ. ಇವರೊಂದಿಗೆ ಕಲಾವಿದರಾದ ಚಕ್ರವರ್ತಿ ಚಂದ್ರಚೂಡ್, ನಿರ್ಮಲ, ಸರ್ದಾರ್ ಸತ್ಯ ಕೂಡ ಭಾಗಿಯಾಗಿ ಒಂದೊಳ್ಳೆ ಸಬ್ಜೆಕ್ಟ್ ಇರುವ ಚಿತ್ರಕ್ಕೆ ತಮ್ಮ ಸಾಥ್ ನೀಡಿದ್ದಾರೆ. ಬಿಡುಗಡೆಗೂ ಮೊದಲೇ ಚಿತ್ರರಂಗದ ಪ್ರೋತ್ಸಾಹ ಹಾಗೂ ಸಿನಿಪ್ರಿಯರು ತೋರುತ್ತಿರುವ ಪ್ರೀತಿ ಕನ್ನೇರಿ ಚಿತ್ರತಂಡಕ್ಕೆ ಅತೀವ ಸಂತಸವನ್ನುಂಟು ಮಾಡಿದೆ. ಅಂದಹಾಗೆ ಕಾಣದ ಊರಿಗೆ ಕೂಲಿಗೆ ಹೊರಟೋಳೆ ಹಾಡಿಗೆ ಕೊಟಿಗಾನಹಳ್ಳಿ ರಾಮಯ್ಯ ಚೆಂದದ ಸಾಹಿತ್ಯ ರಚಿಸಿದ್ದು ಇಂದು ನಾಗರಾಜ್ ಮತ್ತು ಸರಿಗಮಪ ಖ್ಯಾತಿಯ ಕೀರ್ತನ್ ಹೊಳ್ಳ ಹಾಡಿಗೆ ದನಿಯಾಗಿದ್ದಾರೆ. ಇದನ್ನೂ ಓದಿ : ಬೈ ಟು ಲವ್ ಹೀರೋ ಧನ್ವೀರ್ ಮೇಲೆ ದೂರು ದಾಖಲಿಸಿದ ಅಭಿಮಾನಿ

    kanneri

    ನೀನಾಸಂ ಮಂಜು ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಕೊಟಿಗಾನಹಳ್ಳಿ ರಾಮಯ್ಯ ಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಕೊಡಗಿನಲ್ಲಿ ನಡೆದ ದಿಡ್ಡಳ್ಳಿ ಸಂತ್ರಸ್ತರ ಹೋರಾಟ ಹಾಗೂ ಕ್ಷೀರ ಸಾಗರ ಅವರ ಜೇನು: ಆಕಾಶದ ಅರಮನೆ ಕಾದಂಬರಿ ಸ್ಪೂರ್ತಿಯೊಂದಿಗೆ ಹೆಣೆಯಲಾದ ಈ ಚಿತ್ರದಲ್ಲಿ ನಿರ್ವಸತಿಗರ ನೋವಿನ ಕಥೆಯಿದೆ, ನೆಲೆ ಹುಡುಕ ಹೊರಟ ಹೆಣ್ಣು ಮಗಳೊಬ್ಬಳ ವ್ಯಥೆ ಇದೆ. ಇದೆಲ್ಲವನ್ನು ಸಿನಿಮ್ಯಾಟಿಕ್ ಆಗಿ ಕಮರ್ಶಿಯಲ್ ಎಳೆಯಲ್ಲಿ ತೆರೆ ಮೇಲೆ ತಂದಿದ್ದಾರೆ ನಿರ್ದೇಶಕ ನೀನಾಸಂ ಮಂಜು. ಅರ್ಚನಾ ಮಧುಸೂದನ್ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದು, ಅನಿತ ಭಟ್, ಕರಿ ಸುಬ್ಬು, ಅರುಣ್ ಸಾಗರ್, ಎಂ.ಕೆ. ಮಠ್ ಒಳಗೊಂಡ ಅನುಭವಿ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

    kanneri

    ಬುಡ್ಡಿದೀಪ ಸಿನಿಮಾ ಹೌಸ್ ಬ್ಯಾನರ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಪಿ.ಪಿ. ಹೆಬ್ಬಾರ್ ಮತ್ತು ಚಂದ್ರಶೇಖರ್ ನಿರ್ಮಾಪಕರು. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆ, ಸುಜಿತ್ ಎಸ್ ನಾಯಕ್ ಸಂಕಲನ, ಗಣೇಶ್ ಹೆಗ್ಡೆ ಕ್ಯಾಮೆರಾ ಕೈಚಳಕ ಕನ್ನೇರಿ ಚಿತ್ರಕ್ಕಿದೆ. ಬಿಡುಗಡೆಯ ಹೊಸ್ತಿಲಿಗೆ ಬಂದು ನಿಂತಿರುವ ಈ ಚಿತ್ರ ಹಾಡುಗಳ ಮೂಲಕ ಎಲ್ಲರನ್ನು ಸೆಳೆಯುತ್ತಿದ್ದು, ಪ್ರೇಕ್ಷಕರನ್ನು ಸಿನಿಮಾ ಮೂಲಕ ಸೆಳೆಯಲು ಸದ್ಯದಲ್ಲೇ ಚಿತ್ರಮಂದಿರದ ಅಂಗಳಕ್ಕೆ ಕಾಲಿಡಲಿದೆ. ಇದನ್ನೂ ಓದಿ : ಕಲಾ ತಪಸ್ವಿ ರಾಜೇಶ್‌ ವಿಧಿವಶ

  • ಕನ್ನೇರಿ ಚಿತ್ರದ ಮನಮುಟ್ಟುವ ಹಾಡು ಬಿಡುಗಡೆ ಮಾಡಿದ ಖ್ಯಾತ ನಟಿ ಶ್ರುತಿ

    ಕನ್ನೇರಿ ಚಿತ್ರದ ಮನಮುಟ್ಟುವ ಹಾಡು ಬಿಡುಗಡೆ ಮಾಡಿದ ಖ್ಯಾತ ನಟಿ ಶ್ರುತಿ

    ನ್ನೇರಿ.. ನಿರ್ದೇಶಕ ನೀನಾಸಂ ಮಂಜು ಕನಸಿನ ಸಿನಿಮಾ. ಮೂಕಹಕ್ಕಿ ಮೂಲಕ ಮನ ಮುಟ್ಟುವ ಕಥೆ ಹೇಳಿ ಪ್ರೇಕ್ಷಕರ ಮನದಲ್ಲಿ ಭರವಸೆ ಹುಟ್ಟಿಸಿರುವ ನಿರ್ದೇಶಕ. ಈಗ ಕನ್ನೇರಿ ಎಂಬ ನೈಜ ಘಟನೆ ಆಧಾರಿತ ಸಿನಿಮಾವನ್ನು ಪ್ರೇಕ್ಷಕರ ಮುಂದೆ ಹೊತ್ತು ತರಲು ಸಜ್ಜಾಗಿದ್ದಾರೆ. ಫಸ್ಟ್ ಲುಕ್ ಮೂಲಕ ಕನ್ನೇರಿ ಪ್ರಚಾರ ಕಾರ್ಯಕ್ಕೆ ಈಗಾಗಲೇ ಮುನ್ನುಡಿ ಬರೆದಿರುವ ನಿರ್ದೇಶಕರು ಈಗ ಚಿತ್ರದ ಚೆಂದದ ಹಾಡೊಂದನ್ನು ಬಿಡುಗಡೆ ಮಾಡಿದ್ದಾರೆ.

    kanneri-

    ಕೋಟಿಗಾನಹಳ್ಳಿ ರಾಮಯ್ಯ ಅವರ ಲೇಖನಿಯಲ್ಲಿ ಅರಳಿರುವ ಬೆಟ್ಟ ಕಣಿವೆಗಳ ಹಾಡಿನ ಲಿರಿಕಲ್ ವೀಡಿಯೋ ಬಿಡುಗಡೆಯಾಗಿದೆ. ಚಿತ್ರದ ಕಥೆಗೆ ಪೂರಕವಾದ ಈ ಹಾಡನ್ನು ಖ್ಯಾತ ನಟಿ ಶ್ರುತಿ ಮೆಚ್ಚಿ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ಕಾಡಿನ ಜನರ ಚೆಂದದ ಬದುಕು ಆ ಬದುಕಲಿದ್ದ ಖುಷಿ, ಯಾರದ್ದೋ ಸಂಚಿನಿಂದ ಅಸ್ತಿತ್ವ ಕಳೆದುಕೊಂಡ ನೋವು ಎಲ್ಲವೂ ಬೆರೆತ ಈ ಹಾಡು ಮನಮುಟ್ಟುವಂತೆ ಮೂಡಿ ಬಂದಿದ್ದು, ಆ ಸಾಲುಗಳಿಗೆ ಅಷ್ಟೇ ಚೆಂದದ ದನಿಯಾಗಿದ್ದಾರೆ ಗಾಯಕ ಸಚಿನ್ ಅರಬಳ್ಳಿ. ಮಣಿಕಾಂತ್ ಕದ್ರಿ ಸಂಗೀತವೂ ಅಷ್ಟೇ ಸೊಗಸಾಗಿ ಮೂಡಿ ಬಂದಿದೆ. ಇದನ್ನೂ ಓದಿ: ಆರೋಗ್ಯಕರವಾದ ಮಸಾಲಾ ಟೀ ಒಮ್ಮೆ ಮಾಡಿ ನೋಡಿ

    ಕನ್ನೇರಿ ಚಿತ್ರಕ್ಕೆ ನೈಜ ಘಟನೆಯೇ ಜೀವಾಳ. ಕೊಡಗಿನಲ್ಲಿ ನಡೆದ ದಿಡ್ಡಳ್ಳಿ ಹೋರಾಟದ ಕಥೆಯೇ ಚಿತ್ರಕ್ಕೆ ಸ್ಪೂರ್ತಿ. ದಿಡ್ಡಳ್ಳಿ ಹೋರಾಟದ ಜಾಡು ಹಿಡಿದು ಹೊರಟ ನಿರ್ದೇಶಕ ನೀನಾಸಂ ಮಂಜು ಅವರಿಗೆ ಅವರ ಬವಣೆ, ಅಭದ್ರತೆ, ಬದುಕು ಕಟ್ಟಿಕೊಳ್ಳುವ ಹಂಬಲ, ಅಲ್ಲಿನ ಹೆಣ್ಣು ಮಕ್ಕಳ ತೊಳಲಾಟ ಎಲ್ಲವೂ ಕಾಡಿದೆ. ಆ ಕಾಡುವ ಕಥನವನ್ನೇ ಸಿನಿಮಾವಾಗಿಸಿ ಹೊಸದೇನನ್ನೋ ಚಿತ್ರ ಪ್ರೇಮಿಗಳಿಗೆ ಉಣಬಡಿಸಲು ಸಕಲ ಸಜ್ಜಾಗಿ ನಿಂತಿದ್ದಾರೆ. ಇಂತಹದೊಂದು ಕಥೆಗೆ ಇನ್ನಷ್ಟು ಸ್ಪೂರ್ತಿ ತುಂಬಿದ್ದು ಕ್ಷೀರಸಾಗರ ಅವರ `ಜೇನು: ಆಕಾಶದ ಅರಮನೆ’ ಕಾದಂಬರಿ ಎಳೆ. ಈ ಎಲ್ಲದಕ್ಕೂ ಕಥೆಯ ರೂಪ ಕೊಟ್ಟವರು ಕೋಟಿಗಾನಹಳ್ಳಿ ರಾಮಯ್ಯ. ಇದನ್ನೂ ಓದಿ: ಒಂದೇ ವಿಮಾನದಲ್ಲಿ ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ – ಇದರ ಹಿಂದಿನ ರಹಸ್ಯವೇನು?

    ಕನ್ನೇರಿ ಚಿತ್ರಕ್ಕೆ ಅರ್ಚನಾ ಮಧುಸೂದನ್ ಮುಖ್ಯ ಭೂಮಿಕೆಯಲ್ಲಿ ಜೀವ ತುಂಬಿದ್ದು, ಅನಿತಾ ಭಟ್, ಎಂ.ಕೆ.ಮಠ್, ಅರುಣ್ ಸಾಗರ್, ಕರಿಸುಬ್ಬು, ಸರ್ದಾರ್ ಸತ್ಯ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ. ಬುಡ್ಡಿದೀಪ ಸಿನಿಮಾ ಹೌಸ್ ಬ್ಯಾನರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಪಿ.ಪಿ ಹೆಬ್ಬಾರ್ ಬಂಡವಾಳ ಹೂಡಿದ್ದಾರೆ. ಗಣೇಶ್ ಹೆಗ್ಡೆ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿರೋ ಸಿನಿಮಾಗೆ ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಸುಜಿತ್ ಎಸ್ ನಾಯಕ್ ಸಂಕಲನವಿದೆ. ಇದನ್ನೂ ಓದಿ: ಪರ್ವತದ ನೀರು ಕುಡಿದು, ದೇವಾಲಯದ ಪ್ರಸಾದ ಸೇವಿಸಿ ಬದುಕುಳಿದೆವು: ಉತ್ತರಾಖಂಡ್ ಪ್ರವಾಹ ಭೀಕರತೆ ಬಿಚ್ಚಿಟ್ಟ ಕನ್ನಡಿಗರು

  • ನೀನಾಸಂ ಮಂಜು ‘ಕನ್ನೇರಿ’ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ನಾಗತಿಹಳ್ಳಿ ಚಂದ್ರಶೇಖರ್

    ನೀನಾಸಂ ಮಂಜು ‘ಕನ್ನೇರಿ’ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ನಾಗತಿಹಳ್ಳಿ ಚಂದ್ರಶೇಖರ್

    ‘ಮೂಕಹಕ್ಕಿ’ ಸಿನಿಮಾ ಖ್ಯಾತಿಯ ನಿರ್ದೇಶಕ ನೀನಾಸಂ ಮಂಜು ಮತ್ತೊಂದು ಚಿತ್ರ ಕೈಗೆತ್ತಿಕೊಂಡು ಚಿತ್ರೀಕರಣವನ್ನೂ ಕಂಪ್ಲೀಟ್ ಮಾಡಿದ್ದಾರೆ. ಆ ಚಿತ್ರದ ಹೆಸರೇ ‘ಕನ್ನೇರಿ’. ನೈಜ ಘಟನೆ ಆಧಾರಿತ ಈ ಚಿತ್ರ ಫಸ್ಟ್ ಲುಕ್ ಮೂಲಕ ಪ್ರೇಕ್ಷಕರೆದುರು ಬಂದಿದೆ. ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ‘ಕನ್ನೇರಿ’ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

    ‘ಕನ್ನೇರಿ’ ಮಹಿಳಾ ಪ್ರಧಾನ ಚಿತ್ರ. ಚಿತ್ರಕ್ಕೆ ನೈಜ ಘಟನೆಯೇ ಪ್ರೇರಣೆ ಎನ್ನುತ್ತಾರೆ ನಿರ್ದೇಶಕ ನೀಸಾಸಂ ಮಂಜು. ಅದು ಬೇರಾವ ಘಟನೆ ಅಲ್ಲ ಕೊಡಗಿನಲ್ಲಿ ಭಾರೀ ಸದ್ದು ಮಾಡಿದ್ದ ದಿಡ್ಡಳ್ಳಿ ಸಂತ್ರಸ್ತರ ಹೋರಾಟ. ಈ ಹೋರಾಟದ ಜೊತೆ ಕ್ಷೀರಸಾಗರ ಅವರ ‘ಜೇನು: ಆಕಾಶದ ಅರಮನೆ’ ಕಾದಂಬರಿ ಎಳೆಯನ್ನು ಆಧಾರವಾಗಿ ಇಟ್ಟುಕೊಳ್ಳಲಾಗಿದೆ. ಚಿತ್ರಕ್ಕೆ ಕಥೆಯ ಜವಾಬ್ದಾರಿಯನ್ನು ಕೋಟಿಗಾನಹಳ್ಳಿ ರಾಮಯ್ಯ ವಹಿಸಿಕೊಂಡಿದ್ರೆ, ಚಿತ್ರಕಥೆ ಹಾಗೂ ನಿರ್ದೇಶನದ ನೊಗವನ್ನು ನೀನಾಸಂ ಮಂಜು ಹೊತ್ತಿದ್ದಾರೆ. ಇದನ್ನೂ ಓದಿ: ತನ್ನ ವಿರುದ್ಧ ಟೀಕೆ ಮಾಡುತ್ತಿರೋರಿಗೆ ಸ್ಟ್ರಾಂಗ್ ಉತ್ತರ ಕೊಟ್ಟ ಸಮಂತಾ

    ಪ್ರಕೃತಿಯ ಮಡಿಲಲ್ಲಿ ಬದುಕು ಕಟ್ಟಿಕೊಂಡಿದ್ದ ಬುಡಕಟ್ಟು ಜನಾಂಗವನ್ನು ಒಕ್ಕಲೆಬ್ಬಿಸಿದ ನಂತರ ಏನಾಯಿತು? ಅಲ್ಲಿನ ಹೆಣ್ಣು ಮಕ್ಕಳು ಹೇಗೆ ದೌರ್ಜನ್ಯಕ್ಕೆ ಒಳಗಾಗುತ್ತಾರೆ, ಅವರ ಬದುಕು ಯಾವೆಲ್ಲ ತಿರುವು ಪಡೆಯುತ್ತೆ ಎಂಬ ಹೋರಾಟದ ಕಥೆ ಹೊಂದಿರುವ ಈ ಚಿತ್ರಕ್ಕೆ ಅರ್ಚನಾ ಮಧುಸೂಧನ್ ಮುಖ್ಯಭೂಮಿಕೆಯಲ್ಲಿ ಜೀವ ತುಂಬಿದ್ದಾರೆ. ಚಿತ್ರದ ತಾರಾಗಣದಲ್ಲಿ ಅನಿತಾ ಭಟ್, ಅರುಣ್ ಸಾಗರ್, ಎಂ.ಕೆ.ಮಠ, ಕರಿಸುಬ್ಬು ಒಳಗೊಂಡಂತೆ ಹಲವು ಪ್ರತಿಭಾನ್ವಿತ ಕಲಾವಿದರು ಜೊತೆಯಾಗಿದ್ದಾರೆ.

    ನೈಜತೆಗೆ ಹೆಚ್ಚು ಒತ್ತು ನೀಡಿರುವ ಚಿತ್ರತಂಡ ಬುಡಕಟ್ಟು ಜನರನ್ನೂ ಕೂಡ ಚಿತ್ರದಲ್ಲಿ ತೊಡಗಿಸಿಕೊಂಡಿದೆ. ಬೆಂಗಳೂರು, ಎಚ್.ಡಿ.ಕೋಟೆ, ಕೋಲಾರ ಸೇರಿದಂತೆ ಹಲವು ಭಾಗಗಳಲ್ಲಿ ಸಿನಿಮಾ ಸೆರೆ ಹಿಡಿಯಲಾಗಿದೆ. ಗಣೇಶ್ ಹೆಗ್ಡೆ ಕ್ಯಾಮೆರಾ ವರ್ಕ್, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಸುಜಿತ್ ನಾಯಕ್ ಸಂಕಲನ ಚಿತ್ರಕ್ಕಿದೆ. ಸದ್ಯ ಚಿತ್ರೀಕರಣ ಕಂಪ್ಲೀಟ್ ಮಾಡಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ‘ಕನ್ನೇರಿ’ ಚಿತ್ರತಂಡ ಫಸ್ಟ್ ಲುಕ್ ಬಿಡುಗಡೆ ಮೂಲಕ ಪ್ರಚಾರ ಕಾರ್ಯ ಆರಂಭಿಸಿದೆ. ಇದನ್ನೂ ಓದಿ: ಹುಟ್ಟುಹಬ್ಬಕ್ಕೆ ಮೊದಲೇ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಪ್ರಭಾಸ್