Tag: ನೀನಾಸಂ ಸತೀಶ್

  • ಗುರು ಆತ್ಮಹತ್ಯೆಗೆ ಅಸಲಿ ಕಾರಣ ಇನ್ನೂ ನಿಗೂಢ – ಮೊಬೈಲ್‌, ಟ್ಯಾಬ್‌ FSLಗೆ ಕಳಿಸಲು ತಯಾರಿ

    ಗುರು ಆತ್ಮಹತ್ಯೆಗೆ ಅಸಲಿ ಕಾರಣ ಇನ್ನೂ ನಿಗೂಢ – ಮೊಬೈಲ್‌, ಟ್ಯಾಬ್‌ FSLಗೆ ಕಳಿಸಲು ತಯಾರಿ

    – ತನಿಖೆ ವೇಳೆ 4 ಮೊಬೈಲ್‌, ಲ್ಯಾಪ್‌ಟಾಪ್‌, ಟ್ಯಾಬ್‌ ಪತ್ತೆ

    ಬೆಂಗಳೂರು: ಮಠ ಖ್ಯಾತಿಯ ಸ್ಯಾಂಡಲ್‌ವುಡ್ ನಿರ್ದೇಶಕ, ನಟ ಗುರುಪ್ರಸಾದ್ (Guruprasad) ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗುರುಪ್ರಸಾದ್ ಶವ ಪತ್ತೆಯಾಗಿದೆ. ಆದ್ರೆ ಆತ್ಮಹತ್ಯೆಗೆ ಅಸಲಿ ಕಾರಣ ಇನ್ನೂ ನಿಗೂಢವಾಗಿಯೇ ಇದೆ.

    ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದ ಫ್ಲಾಟ್‌ನಲ್ಲಿ ಪೊಲೀಸರು ತಡಕಾಡಿದ್ರೂ ಡೆತ್‌ನೋಟ್‌ ಸಿಕ್ಕಿಲ್ಲ. 4 ಮೊಬೈಲ್, ಎರಡು ಟ್ಯಾಬ್, ಒಂದು ಲ್ಯಾಪ್‌ಟಾಪ್ (Mobile, Laptop And Tab) ಪತ್ತೆಯಾಗಿದೆ. ಕಳೆದ ನಾಲ್ಕು ದಿನಗಳಿಂದ ಚಾರ್ಜ್‌ ಮಾಡದ ಹಿನ್ನೆಲೆ ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ. ಈ ಮೊಬೈಲ್‌, ಟ್ಯಾಬ್‌ ಹಾಗೂ ಲ್ಯಾಪ್‌ಟಾಪ್‌ಗಳನ್ನ ಎಫ್‌ಎಸ್‌ಎಲ್‌ಗೆ ಕಳುಹಿಸಲು ಪೊಲೀಸ್‌ ಅಧಿಕಾರಿಗಳು ತಯಾರಿ ಶುರು ಮಾಡಿದ್ದಾರೆ. ಒಂದು ವೇಳೆ ಸಾಯುವ ಮುನ್ನ ಮೊಬೈಲ್‌ನಲ್ಲಿ ವೀಡಿಯೋ ಮಾಡಿಕೊಂಡಿದ್ದರೆ, ಅದಕ್ಕೆ ಕಾರಣ ತಿಳಿಯಲಿದೆ. ಅಲ್ಲಿಯ ವರೆಗೂ ಸಾಲದ ಸುಳಿಗೆ ಸಿಲುಕಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂಬ ಪತ್ನಿಯ ಹೇಳಿಕೆಯನ್ನೇ ಪರಿಗಣಿಸಲಾಗುತ್ತದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮರಣೋತ್ತರ ಪರೀಕ್ಷೆಯಲ್ಲಿ ಗುರುಪ್ರಸಾದ್‌ ಸಾವಿನ ಸತ್ಯ ಸ್ಫೋಟ!

    ಗುರುಪ್ರಸಾದ್ ಇತ್ತೀಚಿಗೆ ನಿರ್ದೇಶಿಸಿದ್ದ ರಂಗನಾಯಕ ಹೀನಾಯ ಸೋಲು ಕಂಡಿತ್ತು. ಇದರಿಂದ ಗುರುಪ್ರಸಾದ್ ಸಾಲದ ಸುಳಿಗೆ ಸಿಲುಕಿದ್ರು. ಅವರ ವಿರುದ್ಧ ಚೆಕ್‌ಬೌನ್ಸ್ ಕೇಸ್ ಕೂಡ ದಾಖಲಾಗಿತ್ತು. ಅಲ್ಲದೇ ಅವರ ಆರೋಗ್ಯ ಕೂಡ ಕೈಕೊಟ್ಟಿತ್ತು. ಇದ್ರ ನಡುವೆಯೂ ಗುರುಪ್ರಸಾದ್ 2ನೇ ಮದ್ವೆ ಮಾಡಿಕೊಂಡಿದ್ರು. ಈ ಎಲ್ಲವನ್ನೂ ಸಂಭಾಳಿಸಲಾಗದೇ ಖಿನ್ನತೆಗೆ ಒಳಗಾಗಿದ್ದ ಗುರುಪ್ರಸಾದ್, ಅಕ್ಟೋಬರ್ 28 ರಿಂದ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. 4-5 ದಿನಗಳ ಹಿಂದೆ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ವಿಷಯ ಗೊತ್ತಾಗಿದೆ. ಅಷ್ಟೊತ್ತಿಗೆ ಗುರುಪ್ರಸಾದ್ ಶವ ಕೊಳೆತು ಹೋಗಿತ್ತು. ತವರು ಮನೆಯಲ್ಲಿದ್ದ 2ನೇ ಪತ್ನಿಯನ್ನು ಕರೆಯಿಸಿದ ಪೊಲೀಸರು, ಅವರ ಸಮ್ಮುಖದಲ್ಲಿ ಮುಂದಿನ ಪ್ರಕ್ರಿಯೆ ಮುಗಿಸಿದ್ರು.

    ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೀತು. ಕುಟುಂಬಸ್ಥರ ಸಮಕ್ಷಮದಲ್ಲಿ ಸಂಜೆಯೇ ವಿಲ್ಸನ್‌ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಗುರುಪ್ರಸಾದ್ ಅಂತ್ಯಕ್ರಿಯೆ ನಡೀತು. ನಟ ಧನಂಜಯ್, ದುನಿಯಾ ವಿಜಿ ಸೇರಿ ಹಲವರು ಅಂತಿಮ ನಮನ ಸಲ್ಲಿಸಿದ್ರು.. ಗುರುಪ್ರಸಾದ್ 2ನೇ ಪತ್ನಿಯ ದೂರು ಆಧರಿಸಿ ಪೊಲೀಸರು ತನಿಖೆ ನಡೆಸಿದ್ದಾರೆ.

    1972ರಲ್ಲಿ ಕನಕಪುರದಲ್ಲಿ ಜನಿಸಿದ ಗುರುಪ್ರಸಾದ್ ರಾಮಚಂದ್ರ ಶರ್ಮಾ 2006 ರಲ್ಲಿ ತೆರೆಕಂಡ `ಮಠ’ ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಸಿನಿಪಯಣ ಆರಂಭಿಸಿದರು. ಇದು ನವರಸ ನಾಯಕ ಜಗ್ಗೇಶ್‌ರ 100ನೇ ಚಿತ್ರ. ಇದನ್ನೂ ಓದಿ: ಕಾರವಾರ | ಖಿನ್ನತೆಯಿಂದ ಬಳಲುತಿದ್ದ ವ್ಯಕ್ತಿಗೆ ಹೊಸ ಬಟ್ಟೆ ಕೊಡಿಸಿ ಮಾನವೀಯತೆ ಮೆರೆದಿದ್ದ ಗುರುಪ್ರಸಾದ್!

    2009 ರಲ್ಲಿ ಇದೇ ಜೋಡಿ `ಎದ್ದೇಳು ಮಂಜುನಾಥ’ ಚಿತ್ರದ ಮೂಲಕ ಮತ್ತೊಂದು ಸಮಾಜಿಕ ಚಿತ್ರ ನೀಡಿತು. ಈ ಚಿತ್ರಕ್ಕೆ ಫಿಲ್ಮಫೇರ್ ಪ್ರಶಸ್ತಿ ದೊರಕಿತು. ನಂತರ `ಡೈರೆಕ್ಟರ್ ಸ್ಪೇಷಲ್’,`ಎರಡನೇ ಸಲ’ ಚಿತ್ರಗಳನ್ನು ನಿರ್ದೇಶಿಸಿದರು. ನಿರ್ದೇಶಕ ಮಾತ್ರವಲ್ಲದೇ ನಟನಾಗಿ `ಮಠ’, `ಎದ್ದೇಳು ಮಂಜುನಾಥ’,`ಮೈಲಾರಿ’, `ಹುಡುಗರು’,`ಅನಂತು v/s ನುಸ್ರತ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

    ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್‌ಬಾಸ್ ಅವತರಣಿಕೆಯಲ್ಲಿ ಭಾಗವಹಿಸಿದ್ದ ಇವರು ಹಲವು ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದಾರೆ. ಇದನ್ನೂ ಓದಿ: ಏಕಾಂಗಿಯಾಗಿ ಬದುಕನ್ನು ಅಂತ್ಯ ಮಾಡಿಕೊಂಡಿರೋದು ಬೇಜಾರಿನ ಸಂಗತಿ: ಮಾಳವಿಕಾ

  • ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ – ಕುಟುಂಬಸ್ಥರಿಗೆ ದುನಿಯಾ ವಿಜಯ್‌, ಡಾಲಿ, ನೀನಾಸಂ ಸತೀಶ್‌ ಸಾಂತ್ವನ

    ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ – ಕುಟುಂಬಸ್ಥರಿಗೆ ದುನಿಯಾ ವಿಜಯ್‌, ಡಾಲಿ, ನೀನಾಸಂ ಸತೀಶ್‌ ಸಾಂತ್ವನ

    ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ (Guruprasad) ಅವರ ಸಾವಿನ ಸುದ್ದಿ ತಿಳಿದು ನಟರಾದ ದುನಿಯಾ ವಿಜಯ್‌, ನೀನಾಸಂ ಸತೀಶ್‌, ಡಾಲಿ ಧನಂಜಯ್‌ ಅವರು ವಿಕ್ಟೋರಿಯಾ ಆಸ್ಪತ್ರೆಗೆ ದೌಡಾಯಿಸಿದರು.

    ಆತ್ಮಹತ್ಯೆ ಮಾಡಿಕೊಂಡಿದ್ದ ಗುರುಪ್ರಸಾದ್‌ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ವೇಳೆ ಸಿನಿ ತಾರೆಯರು ಆಸ್ಪತ್ರೆಗೆ ಆಗಮಿಸಿದರು. ಇದನ್ನೂ ಓದಿ: ನನ್ನ ಪತಿ ಸಾವಿನಲ್ಲಿ ಯಾವುದೇ ಅನುಮಾನ ಇಲ್ಲ: ಗುರುಪ್ರಸಾದ್‌ ಪತ್ನಿ ನೀಡಿದ ದೂರಿನಲ್ಲಿ ಏನಿದೆ?

    ಪತಿ ಕಳೆದುಕೊಂಡು ಕಣ್ಣೀರಿಡುತ್ತಿದ್ದ 2ನೇ ಪತ್ನಿ ಸುಮಿತ್ರಾ ಅವರಿಗೆ ದುನಿಯಾ ವಿಜಯ್‌ ಹಾಗೂ ಡಾಲಿ ಧನಂಜಯ್‌ ಸಾಂತ್ವನ ಹೇಳಿದರು. ಇದೇ ವೇಳೆ ಸಿನಿಮಾ ರಂಗದಲ್ಲಿ ಗುರುಪ್ರಸಾದ್‌ ಅವರ ಸಾಧನೆಯನ್ನು ನಟರು ಕೊಂಡಾಡಿದರು. ಆತ್ಮಹತ್ಯೆ ವಿಚಾರಕ್ಕೆ ನೊಂದು ನುಡಿದರು.

    ಸಂಗೀತ ನಿರ್ದೇಶಕ ಅನೂಪ್‌ ಸೀಳಿನ್‌, ರಂಗನಾಯಕ ಚಿತ್ರದ ನಿರ್ಮಾಪಕ ವಿಖ್ಯಾತ್‌ ಕೂಡ ಸ್ಥಳಕ್ಕೆ ಆಗಮಿಸಿದ್ದರು. ಗುರುಪ್ರಸಾದ್ ಮೊದಲ ಪತ್ನಿ ಆರತಿ ಹಾಗೂ ಮಗಳಿಗೆ ನಟ ತಬಲ ನಾಣಿ ಸಾಂತ್ವನ ಹೇಳಿದರು. ಇದನ್ನೂ ಓದಿ: ಗುರುಪ್ರಸಾದ್ ಮಗುವಿಗೆ ಸಹಾಯ ಮಾಡುತ್ತೇನೆ: ನಟ ಜಗ್ಗೇಶ್

  • ‘ವೃತ್ತ’ ಸಿನಿಮಾಗೆ ಪ್ರಸೆಂಟ್ ಮಾಡಲು ಬಂದ ನೀನಾಸಂ ಸತೀಶ್

    ‘ವೃತ್ತ’ ಸಿನಿಮಾಗೆ ಪ್ರಸೆಂಟ್ ಮಾಡಲು ಬಂದ ನೀನಾಸಂ ಸತೀಶ್

    ಪ್ರತಿ ದಿನ ಹೊಸ ಸಿನಿಮಾ ಸೆಟ್ಟೇರೋದು ಟ್ರೇಲರ್‌ ಟೀಸರ್‌ ಬಿಡುಗಡೆ ಆಗೋದು ಹೊಸತೇನಲ್ಲ. ಆದರೆ ಬಿಡುಗಡೆ ಆದ ಕೆಲವೇ ಕೆಲವು ಸಿನಿಮಾ ಟೀಸರ್‌  ಪ್ರೇಕ್ಷಕರ ಗಮನ ಸೆಳೆಯುತ್ತವೆ. ಸದ್ಯ ಈಗ ಸಿನಿ ಪ್ರೇಮಿಗಳ ಗಮನ ಸೆಳೆದಿರುವ ಟೀಸರ್‌ ವೃತ್ತ. ವೃತ್ತ (Virtta) ಅಂದ ತಕ್ಷಣ ಒಂದು ಸರ್ಕಲ್‌ ನಲ್ಲಿ ನಡೆಯೋ ಸ್ಟೋರಿ ಇರಬೇಕು ಅನ್ನೋದು ಮೊದಲಿಗೆ ಅನ್ನಿಸುತ್ತೆ ಆದ್ರೆ ಈ ವೃತ್ತ ಸಿನಿಮಾದ ಕಾನ್ಸೆಪ್ಟ್‌ ಬೇರೆ. ಸಿನಿಮಾ ಕಂಪ್ಲೀಟ್‌ ಮಾಡಿ ಟೀಸರ್‌ ಬಿಡುಗಡೆ ಮಾಡಿರೋ ವೃತ್ತ ತಂಡಕ್ಕೆ ನಟ ನೀನಾಸಂ ಸತೀಶ್‌ ಸಾಥ್‌ ಸಿಕ್ಕಿದೆ. ಸಿನಿಮಾ ಟೀಸರ್‌, ಟ್ರೇಲರ್‌ ನೋಡಿ ಚಿತ್ರವನ್ನ ತಮ್ಮದೇ ಬ್ಯಾನರ್‌ ಅಡಿಯಲ್ಲಿ ಪ್ರಸೆಂಟ್‌ ಮಾಡೋದಕ್ಕೆ ಸತೀಶ್‌ ನಿರ್ಧಾರ ಮಾಡಿದ್ದಾರೆ ಟೀಸರ್‌ ಲಾಂಚ್‌ ಗೆ ಬಂದು ಹೊಸಬರ ಪ್ರಯತ್ನಕ್ಕೆ ಸಾಥ್‌ ಕೊಟ್ರು. ಹೊಸ ತಂಡವಾದ್ರು ಎಲ್ಲಾ ರೀತಿಯಲ್ಲೂ ತಯಾರಿ ಮಾಡಿಕೊಂಡೆ ಬಂದಿದ್ದಾರೆ ಅನ್ನೋದು ಟೀಸರ್‌ ನೋಡಿದ್ರೆ ತಿಳಿಯುತ್ತೆ.

    ವೃತ್ತ ಸಿನಿಮಾವನ್ನ ನಿರ್ದೇಶನ ಮಾಡುವುದರ ಜೊತೆಗೆ ಲಿಖಿಕ್‌ ಕುಮಾರ್‌ ಎಸ್ ಕನ್ನಡ ಸಿನಿಮಾರಂಗಕ್ಕೆ ನಿರ್ದೇಶಕನಾಗಿ ಕಾಲಿಡುತ್ತಿದ್ದಾರೆ…ಇನ್ನು ಚಿತ್ರವನ್ನ ಲಕ್ಷ್ಯ ಆರ್ಟ್ಸ್‌ ಬ್ಯಾನರ್‌ ಅಡಿಯಲ್ಲಿ ಟಿ ಶಿವಕುಮಾರ್‌ ನಿರ್ಮಾಣ ಮಾಡಿದ್ದಾರೆ..ಚಿತ್ರದ ವಿಶೇಷ ಅಂದ್ರೆ ನಾಯಕ ಒಬ್ಬನ ಸುತ್ತಲೇ ಕಥೆ ಕೇಂದ್ರೀಕೃತವಾಗಿರುತ್ತಂತೆ. ಚಿತ್ರಕ್ಕೆ ಸಿಂಕ್ರೋನೈಸ್‌ ಮಾಡಿದ ಧ್ವನಿಯನ್ನ ಬಳಸಲಾಗಿದೆ… ಸಿನಿಮಾಗೆ ಯೋಗೀಶ್‌ ಗೌಡ ಚಿತ್ರಕಥೆ ಬರೆದಿದ್ದಾರೆ ಸುರೇಶ್‌ ಆರ್ಮುಗಂ ಸಂಕಲನ, ಶಂಕರ್‌ ರಾಮನ್‌ ಅವರ ಸಂಭಾಷಣೆ, ಗೌತಮ್‌ ಕೃಷ್ಣ ಅವರ ಛಾಯಾಗ್ರಹಣ ಮತ್ತು ಆಂಟನಿ ಹಾಗೂ ಹರಿ ಕ್ರಿಶಾಂತ್‌ ಎಸ್‌ ಅವರ ಸಂಗೀತ ಚಿತ್ರಕ್ಕಿದೆ..ಬಹುತೇಕ ಹೊಸಬರೇ ಕೂಡಿ ಮಾಡಿರೋ ಚಿತ್ರ ಇದಾಗಿದ್ದು, ಟೆಕ್ನಿಕಲಿ ಸ್ಟ್ರಾಂಗ್‌ ಆಗಿ ಇದ್ದರೆ ಸಿನಿಮಾ ಕೂಡ ಚೆನ್ನಾಗಿ ಇರುತ್ತೆ ಅನ್ನೋದು ಸಿನಿಮಾತಂಡದ ಮಾತು…

    ಚಿತ್ರದ ತಾರಾಗಣದಲ್ಲಿ ನಾಯಕನಾಗಿ ಮಾಹಿರ್‌ ಮೊಹಿದ್ದೀನ್‌ , ಚೈತ್ರಾ ಜೆ ಆಚಾರ್‌ , ಹತಿಣಿ ಸುಂದರ ರಾಜನ್‌ ಅಭಿನಯ ಮಾಡಿದ್ದಾರೆ ..ನಾಯಕನಾಗಿ ಕಾಣಿಸಿಕೊಳ್ತಿರೋ ಮಾಹಿರ್‌ ಸಾಕಷ್ಟು ವರ್ಷಗಳಿಂದ ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದಾರೆ…ಟೀಸರ್‌ ನಲ್ಲಿ ಮಾಹಿರ್‌ ಅಭಿನಯ ಗಮನ ಸೆಳೆದಿದ್ದು ಮುಂದಿನ ದಿನಗಳಲ್ಲಿ ಮಾಹಿರ್‌ ಅದ್ಬುತ ಕಲಾವಿದನಾಗಿ ಚಿತ್ರರಂಗದಲ್ಲಿ ಉಳಿದುಕೊಳ್ಳುವ ಎಲ್ಲಾ ಭರವಸೆಗಳು ಕಾಣ್ತಿದೆ…

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಯಕ ಮಾಹೀರ್‌ ನಟನೆ ನನ್ನ ಬಹು ದಿನದ ಕನಸು ಅದನ್ನ ನಾಟಕಗಳ ಮೂಲಕ ನನಸು ಮಾಡಿಕೊಳ್ಳುತ್ತಿದ್ದೆ ಈಗ ವೃತ್ತ ಸಿನಿಮಾ ಮೂಲಕ ದೊಡ್ಡ ಪರದೆಗೆ ಬರುತ್ತಿರೋದು ಮತ್ತಷ್ಟು ಖುಷಿಕೊಟ್ಟಿದೆ ಎಂದರು..ನಿರ್ದೇಶಕ ಲಿಖಿತ್‌ ಮಾತನಾಡಿ ಹೊಸ ಸಿನಿಮಾಗೆ ಸತೀಶ್‌ ಅವರ ಸಪೋರ್ಟ್‌ ಸಿಕ್ಕಿರೋದು ಖುಷಿ ತಂದಿದೆ.. ಕಿರು ಚಿತ್ರಗಳನ್ನ ಮಾಡುತ್ತಾ ಇದ್ದ ತಂಡ ಇವತ್ತು ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಿದ್ದರಾಗಿಗಿದ್ದೇವೆ ಎಂದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿನಿಮಾತಂಡ ನಿನಾಸಂ ಸತೀಶ್‌ ಅವರ ಸಹಾಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ರು…. ಸಿನಿಮಾ ನೋಡಿ ಖುಷಿಯಾಗಿರೋ ಸತೀಶ್‌ ಹೊಸಬರ ಸಿನಿಮಾ ಅನ್ನೋ ಕಾರಣಕ್ಕೆ ಬಂದಿಲ್ಲ ಸಿನಿಮಾ ಚೆನ್ನಾಗಿದೆ ಅನ್ನೋ ಕಾರಣಕ್ಕೆ ಸಪೋರ್ಟ್‌ ಮಾಡುತ್ತಿದ್ದೇನೆ ಅಂದ್ರು…. ಸದ್ಯ ಟೀಸರ್‌ ಬಿಡುಗಡೆ ಮಾಡಿರುವ ತಂಡ ಆದಷ್ಟು ಬೇಗ ಟ್ರೇಲರ್‌ ಲಾಂಚ್‌ ಮಾಡಿ ಇದೇ ವರ್ಷಾಂತ್ಯದಲ್ಲಿ ತೆರೆಗೆ ಬರೋ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

  • ರಚ್ಚು- ಸತೀಶ್ ನೀನಾಸಂ ಕಡೆಯಿಂದ ಗುಡ್ ನ್ಯೂಸ್- ‘ಮ್ಯಾಟ್ನಿ’ ಚಿತ್ರದ ಅಪ್‌ಡೇಟ್

    ರಚ್ಚು- ಸತೀಶ್ ನೀನಾಸಂ ಕಡೆಯಿಂದ ಗುಡ್ ನ್ಯೂಸ್- ‘ಮ್ಯಾಟ್ನಿ’ ಚಿತ್ರದ ಅಪ್‌ಡೇಟ್

    ‘ಅಯೋಗ್ಯ’ (Ayogya) ಸಿನಿಮಾದ ಸೂಪರ್ ಹಿಟ್ ಜೋಡಿ ನೀನಾಸಂ ಸತೀಶ್- ಡಿಂಪಲ್ ಕ್ವೀನ್ ರಚಿತಾ ರಾಮ್(Rachita Ram) ಮತ್ತೆ ಜೊತೆಯಾಗಿ ಬರೋದಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಈ ಸಿನಿಮಾದ ಏನು ಅಪ್‌ಡೇಟ್ ಸಿಗದೇ ಬೇಸರದಲ್ಲಿದ್ದ ಫ್ಯಾನ್ಸ್‌ಗೆ ಸಿನಿಮಾ ತಂಡ ಗುಡ್ ನ್ಯೂಸ್ ಕೊಟ್ಟಿದೆ. ಮ್ಯಾಟ್ನಿ (Matinee) ಸಿನಿಮಾ ರಿಲೀಸ್ ಯಾವಾಗ? ಸಿನಿಮಾ ಸಾಂಗ್, ಟೀಸರ್, ಟ್ರೈಲರ್ ರಿಲೀಸ್ ಆಗಲಿ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ‌ ಈಗ ಸಿಹಿಸುದ್ದಿ ಕೊಟ್ಟಿದ್ದಾರೆ. ಏನದು? ಇಲ್ಲಿದೆ ಅಪ್‌ಡೇಟ್.

    ಏನಮ್ಮಿ ಏನಮ್ಮಿ ಅಂತಾ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಲೆ ಸೃಷ್ಟಿಸಿದ ಜೋಡಿ ಸತೀಶ್ ನೀನಾಸಂ- ರಚಿತಾ ರಾಮ್ ಫೇರ್ ಮತ್ತೆ ಮ್ಯಾಟ್ನಿ ಸಿನಿಮಾದ ಮೂಲಕ ಒಂದಾಗುತ್ತಿದೆ. ಮನೋಹರ್ ಕಾಂಪಳ್ಳಿ ನಿರ್ದೇಶನದ ‘ಮ್ಯಾಟ್ನಿ’ ಸಿನಿಮಾ ಮೂಡಿ ಬಂದಿದೆ. ಸತೀಶ್- ರಚ್ಚು ʼಮ್ಯಾಟ್ನಿʼ ಚಿತ್ರೀಕರಣ ಕೂಡ ಮುಗಿದಿದೆ. ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ. ಇದನ್ನೂ ಓದಿ:ಸಮನ್ವಿ ಕುಟುಂಬದಲ್ಲಿ ಸಂತಸ- ಮಗನ ಜೊತೆಗಿನ ಫೋಟೋ ಹಂಚಿಕೊಂಡ ಅಮೃತಾ

    ಸತೀಶ್ ನೀನಾಸಂಗೆ(Satish Ninasum) ರಚಿತಾ ರಾಮ್ ಮಾತ್ರ ನಾಯಕಿಯಲ್ಲ, ಅದಿತಿ ಪ್ರಭುದೇವ (Aditi Prabhudeva) ಕೂಡ ನಟಿಸಿದ್ದಾರೆ. ರಚಿತಾ ರಾಮ್, ಅದಿತಿ ಪಾತ್ರಕ್ಕೂ ಸಿಕ್ಕಾಪಟ್ಟೆ ಪ್ರಾಮುಖ್ಯತೆಯಿದೆ. ಮ್ಯಾಟ್ನಿ ಮೂಲಕ ಡಿಫರೆಂಟ್ ಆಗಿರೋ ಕಥೆ ಹೇಳೋದ್ದಕ್ಕೆ ಈ ಸ್ಟಾರ್ಸ್ ರೆಡಿಯಾಗಿದ್ದಾರೆ. ಮ್ಯಾಟ್ನಿ ಶೋ ಯಾವಾಗ ಎಂಬುದೇ ಈಗ ಪ್ರಶ್ನೆಯಾಗಿದೆ. ಈ ಎಲ್ಲದ್ದರ ನಡುವೆ ‘ಮ್ಯಾಟ್ನಿ’ ಸಿನಿಮಾ ಬಗ್ಗೆ ಬಿಗ್ ಅಪ್‌ಡೇಡ್ ನೀಡಿದ್ದಾರೆ.

    ಜುಲೈ 17ರಂದು ಮ್ಯಾಟ್ನಿ ಸಿನಿಮಾ ಬಗ್ಗೆ ಅಪ್‌ಡೇಟ್ ಕೊಡೊದಾಗಿ ಸಿನಿಮಾತಂಡ ಹಂಚಿಕೊಂಡಿತ್ತು. ಅದರಂತೆಯೇ ಮ್ಯಾಟ್ನಿ ಸಿನಿಮಾ ಫಸ್ಟ್ ಸಾಂಗ್ ರಿಲೀಸ್ ಆಗೋದ್ದಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಪಾರ್ವತಿ ಗೌಡ ನಿರ್ಮಾಣದಲ್ಲಿ ಮೂಡಿ ಬಂದಿರೋ ಈ ಸಿನಿಮಾ ಫಸ್ಟ್ ಸಾಂಗ್ ಔಟ್ ಆಗುತ್ತಿದೆ. ರಚ್ಚು – ಸತೀಶ್ ನೀಸಾಸಂ ರೊಮ್ಯಾನ್ಸ್ ನೋಡೋದ್ದಕ್ಕೆ ಕೌಂಟ್ ಶುರುವಾಗಿದೆ. ಜುಲೈ 21ರಂದು ಸಂಜೆ 06:03ಕ್ಕೆ ಮ್ಯಾಟ್ನಿ ಸಾಂಗ್ ರಿವೀಲ್ ಆಗಲಿದೆ. ಒಟ್ನಲ್ಲಿ ‘ಅಯೋಗ್ಯ’ ನಂತರ ಮ್ಯಾಟ್ನಿ ಜೋಡಿಯನ್ನ ನೋಡಲು ಫ್ಯಾನ್ಸ್ ಕಾತರದಿಂದ ಕಾಯ್ತಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎರಡು ಭಾಗದಲ್ಲಿ ಬರಲಿದೆ ನೀನಾಸಂ ಸತೀಶ್ ನಟನೆಯ ಅಶೋಕ ಬ್ಲೇಡ್

    ಎರಡು ಭಾಗದಲ್ಲಿ ಬರಲಿದೆ ನೀನಾಸಂ ಸತೀಶ್ ನಟನೆಯ ಅಶೋಕ ಬ್ಲೇಡ್

    ನ್ನಡ ಚಿತ್ರೋದ್ಯಮದ ಹೆಸರಾಂತ ನಟ ನೀನಾಸಂ ಸತೀಶ್ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸದ್ಯ ತಾವು ನಟಿಸುತ್ತಿರುವ ಅಶೋಕ ಬ್ಲೇಡ್ (Ashoka Blade) ಕುರಿತಾಗಿ ಮಹತ್ವದ ಸುದ್ದಿಯೊಂದನ್ನು ನೀಡಿದ್ದು, ಈ ಸಿನಿಮಾ ಎರಡು ಭಾಗದಲ್ಲಿ ಮೂಡಿ ಬರಲಿದೆ ಎಂದಿದ್ದಾರೆ. ಪಾರ್ಟ್ 1  (Part 1) ಮತ್ತು ಪಾರ್ಟ್ 2 (Part 2) ಒಟ್ಟಿಗೆ ಶೂಟ್ ಮಾಡಿ, ನಂತರದ ದಿನಗಳಲ್ಲಿ ಒಂದೊಂದೇ ಸಿನಿಮಾವನ್ನು ರಿಲೀಸ್ ಮಾಡುವುದಾಗಿ ತಿಳಿಸಿದ್ದಾರೆ.

    ಈ ಸಿನಿಮಾ ಎರಡು ಕಾಲ ಘಟ್ಟದಲ್ಲಿ ಮೂಡಿ ಬರಲಿದ್ದು, 70ರ ದಶಕದಿಂದ 2022ರವರೆಗಿನ ಕಥೆಯು ಸಿನಿಮಾದಲ್ಲಿದೆಯಂತೆ. ಈ ಎರಡು ಘಟ್ಟಗಳನ್ನು ವಿಭಾಗಗಳಾಗಿ ವಿಂಗಡಿಸಿ ಸಿನಿಮಾ ಮಾಡುತ್ತಿರುವುದಾಗಿ ಸತೀಶ್ (Ninasam Satish) ಮಾತನಾಡಿದ್ದಾರೆ. ಎರಡು ಭಾಗಗಳಲ್ಲಿ ಸಿನಿಮಾ ಮಾಡಲು ಕಥೆಯೇ ಪ್ರೇರೇಪಿಸಿತು. ಹಾಗಾಗಿ ಇಂಥದ್ದೊಂದು ತೀರ್ಮಾನಕ್ಕೆ ಬರಲಾಗಿದೆ ಎನ್ನುವುದು ಸತೀಶ್ ಮಾತು.

    ಈಗಾಗಲೇ ಬರೋಬ್ಬರಿ 100 ದಿನಗಳ ಕಾಲ ಅಶೋಕ ಬ್ಲೇಡ್ ಸಿನಿಮಾದ ಶೂಟಿಂಗ್ ನಡೆದಿದೆ. ಇನ್ನೂ ಮೂವತ್ತು ದಿನಗಳ ಕಾಲ ಚಿತ್ರೀಕರಣವಾದರೆ, ಸಿನಿಮಾ ಕಂಪ್ಲೀಟ್. ಇದೊಂದು ನೈಜ ಘಟನೆಯನ್ನು ಆಧರಿಸಿದ ಸಿನಿಮಾವಾಗಿದ್ದರಿಂದ ಆದಷ್ಟು ನೈಜತೆಗೆ ಹತ್ತಿರವಾಗುವಂತೆ ಚಿತ್ರೀಕರಣ ಮಾಡಲಾಗಿದೆ. ಈ ಸಿನಿಮಾದಲ್ಲಿ ಸತೀಶ್ ಹೊಸ ಬಗೆಯ ಪಾತ್ರವನ್ನು ಮಾಡಿದ್ದಾರೆ. ಹಲವು ಭಾಷೆಗಳಲ್ಲಿ ಈ ಸಿನಿಮಾ ತಯಾರಾಗಲಿದೆ. ಇದನ್ನೂ ಓದಿ:ನೀನು ಆಂಟಿಯಾಗಿ 1 ವರ್ಷದ ಅನುಭವವಿದೆ- ಬರ್ತ್‌ಡೇಯಂದು ಪತ್ನಿ ಕಾಲೆಳೆದ ನಟ ಸುದರ್ಶನ್

    ಸತೀಶ್ ನಾಯಕನಾದರೆ, ಕಾವ್ಯ ಶೆಟ್ಟಿ (Kavya Shetty) ನಾಯಕಿಯಾಗಿ ನಟಿಸಿದ್ದಾರೆ. ಇದೇ ಮೊದಲ ಬಾರಿಗೆ ಕಾವ್ಯ ಪೊಲೀಸ್ ಇನ್ಸೆಪೆಕ್ಟರ್ ಪಾತ್ರವನ್ನು ಮಾಡಿದ್ದಾರೆ. ವಿನೋದ್ ಈ ಸಿನಿಮಾದ ನಿರ್ದೇಶಕರಾದರೆ, ನರಹರಿ ನಿರ್ಮಾಪಕರು.

    ಮೈಸೂರು ಸೀಮೆಯಲ್ಲಿ 70ರ ದಶಕದಲ್ಲಿ ನಡೆದ ಒಂದು ಘಟನೆ ಬಗ್ಗೆ ಕೇಳಿದ್ದೆ. ಅದು ಎಲ್ಲೂ ದಾಖಲಾಗಿಲ್ಲ. ಎಲ್ಲೂ ಅದರ ಬಗ್ಗೆ ಉಲ್ಲೇಖವಿಲ್ಲ. ಕೊನೆಗೆ ಆ ಕಥೆಯ ವಿವರಗಳನ್ನು ಹುಡುಕಿಕೊಂಡು ಹೋದಾಗ ಹಲವು ಮಹತ್ವದ ವಿಷಯಗಳು ಗೊತ್ತಾಯಿತು. ಇದು ಕನ್ನಡ ನೆಲದ ವೀರರ ಕಥೆ. ಯುದ್ಧ ಎಂದರೆ ಯುದ್ಧಭೂಮಿ ಅಥವಾ ಸಾಮ್ರಾಜ್ಯ ವಿಸ್ತರಣೆಯ ಕಥೆಯಲ್ಲ. ಎರಡು ಸಮುದಾಯಗಳ ಕುರಿತ ಕಥೆ ಇದೆ. ವ್ಯಾಪಾರಿಗಳು ಮತ್ತು ಕಾರ್ಮಿಕರ ನಡುವಿನ ಕಥೆ ಇದೆ. ಇದರಲ್ಲಿ ಭಾಗವಹಿಸಿದ ಕೆಲವರನ್ನು ಹುಡುಕಿ ಮಾತಾಡಿಸಿದೆ. ಒಂದಿಷ್ಟು ಮಾಹಿತಿ ಸಿಕ್ಕಿತು. ಅದನ್ನು ಬೆಳೆಸಿ ಚಿತ್ರಕಥೆ ಮಾಡಿದ್ದೇನೆ. ಈ ಕಥೆ ಎಲ್ಲರಿಗೂ ಇಷ್ಟವಾಗಿದೆ ಎಂದು‌ ಚಿತ್ರದ ಕಥೆಯ ಬಗ್ಗೆ ಟಿ.ಕೆ.ದಯಾನಂದ್ ಹೇಳುವ ಮಾತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪೊಲೀಸ್ ಅಧಿಕಾರಿಯಾದ ನಟ ರಿಷಿ: ಅಭಿನಂದಿಸಿದ ನೀನಾಸಂ ಸತೀಶ್

    ಪೊಲೀಸ್ ಅಧಿಕಾರಿಯಾದ ನಟ ರಿಷಿ: ಅಭಿನಂದಿಸಿದ ನೀನಾಸಂ ಸತೀಶ್

    ಪರೇಶನ್ ಅಲಮೇಲಮ್ಮ, ಕವಲುದಾರಿ ಮುಂತಾದ ಚಿತ್ರಗಳ ಮೂಲಕ ಮನೆಮಾತಾಗಿರುವ ನಟ ರಿಷಿ (Rishi) ನಾಯಕರಾಗಿ ನಟಿಸುತ್ತಿರುವ,  ಕೆ.ಎಸ್ ನಂದೀಶ್ (Nandish) ನಿರ್ದೇಶನದ ನೂತನ ಚಿತ್ರದ ಮುಹೂರ್ತ ಸಮಾರಂಭ ಹಾಗೂ ಶೀರ್ಷಿಕೆ ಅನಾವರಣ ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ನಟ ನೀನಾಸಂ ಸತೀಶ್ (Ninasam Satish)ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು ಹಾಗೂ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ರುದ್ರ ಗರುಡ ಪುರಾಣ (Rudra Garuda Purana) ಎಂದು ಚಿತ್ರಕ್ಕೆ ಹೆಸರಿಡಲಾಗಿದೆ.

    ಚಂಬಲ್, ಡಿಯರ್ ವಿಕ್ರಮ್ ಚಿತ್ರಗಳು ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಕಥೆ ಹಾಗೂ ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಸಂಭಾಷಣೆ ರಘು ನಿಡುವಳ್ಳಿ ಅವರದು. ಉದ್ಯಮಿ ಲೋಹಿತ್ ನಿರ್ಮಾಣ ಮಾಡುತ್ತಿದ್ದಾರೆ. ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕಾ ಕುಮಾರ್ ಅಭಿನಯಿಸುತ್ತಿದ್ದಾರೆ.

    ರುದ್ರ ಗರುಡ ಪುರಾಣ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಇಂದಿನಿಂದ ಚಿತ್ರೀಕರಣ ಆರಂಭವಾಗಲಿದೆ. ಸಿನಿಮಾ ಜನರ ಮೇಲೆ ಉತ್ತಮ ಪ್ರಭಾವ ಬೀರಬೇಕು. ಅಂತಹ ಸಿನಿಮಾವನ್ನು ಜನರಿಗೆ ಕೊಡುವ ಆಸೆ ನನಗೆ.  2022 UPSC ಪರೀಕ್ಷೆಯಲ್ಲಿ 265ನೇ ರ‍್ಯಾಂಕ್‌ ಪಡೆದಿರುವ ಮೈಸೂರು ಮೂಲದ ಕೆ‌.ಸೌರಭ್  ಅವರು ಸಂದರ್ಶನವೊಂದರಲ್ಲಿ ನನಗೆ ಪುನೀತ್ ರಾಜಕುಮಾರ್ ಅಭಿನಯದ ಪೃಥ್ವಿ ಚಿತ್ರ ಪ್ರೇರಣೆ ಎಂದಿದ್ದಾರೆ. ಪೃಥ್ವಿ ಚಿತ್ರ ಸೌರಭ್ ಅವರಿಗಷ್ಟೆ ಅಲ್ಲ. ಸಾಕಷ್ಟು ಜನರಿಗೆ ಸ್ಪೂರ್ತಿಯಾಗಿದೆ.  ನಾನು ಆ ಚಿತ್ರದ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೆ.‌ ನಾವು ಮಾಡುವ ಚಿತ್ರ, ಈ ರೀತಿ ಜನರಿಗೆ ತಲುಪಿದಾಗ ಮುಂದೆ ಇಂತಹ ಹೆಚ್ಚುಹೆಚ್ಚು ಚಿತ್ರಗಳನ್ನು ಮಾಡುವ ಹುಮ್ಮಸ್ಸು ನಿರ್ದೇಶಕನಿಗೆ ಹೆಚ್ಚಾಗುತ್ತದೆ ಎಂದು ನಿರ್ದೇಶಕ ಕೆ.ಎಸ್ ನಂದೀಶ್ ತಿಳಿಸಿದರು.

    ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಹಿಂದೆ ಕವಲುದಾರಿ ಚಿತ್ರದಲ್ಲೂ ಪೊಲೀಸ್ ಅಧಿಕಾರಿಯ ಪಾತ್ರ ಮಾಡಿದ್ದೆ. ಹಾಗಾಗಿ, ಅದೇ ಜಾನರ್ ನ ಇನ್ನೊಂದು ಚಿತ್ರ ಮಾಡುವುದಕ್ಕೆ ಇಷ್ಟವಿರಲಿಲ್ಲ. ಆದರೆ ನಂದೀಶ್ ಅವರು ಈ ಚಿತ್ರದ ಕಥೆ ಕೇಳಿದಾಗ ಬಹಳ ಇಷ್ಟವಾಯಿತು. ಎರಡೂ ಚಿತ್ರಗಳ ಮಧ್ಯೆ ಯಾವುದೇ ಹೋಲಿಕೆ ಇಲ್ಲ.  ಇದರಲ್ಲಿ ನಾನು ಪೊಲೀಸ್ ಅಧಿಕಾರಿಯಾದರೂ ಬಹಳ ವಿಭಿನ್ನವಾಗಿದೆ.  ಜೊತೆಗೆ ಕರ್ಮ, ಪಾಪ, ಪುಣ್ಯಕ್ಕೆ ಸಂಬಂಧಿಸಿದ ಗರುಡ ಪುರಾಣದ ಸಾಕಷ್ಟು ಅಂಶಗಳು ಈ ಚಿತ್ರದಲ್ಲಿದೆ.  ಈ ಚಿತ್ರಕ್ಕೆ ಗರುಡ ಪುರಾಣ ಎಂದು ಹೆಸರಿಡಲು ನಿರ್ಧರಿಸಿದ್ದೆವು. ಚಿತ್ರದಲ್ಲಿ ನನ್ನ ಪಾತ್ರದ ಹೆಸರು ರುದ್ರ. ಹಾಗಾಗಿ ರುದ್ರ ಗರುಡ ಪುರಾಣ ಅಂತ ಶೀರ್ಷಿಕೆ ಇಡಲಾಗಿದೆ. ಚಿತ್ರಕ್ಕೆ ಚಾಲನೆ ನೀಡಿದ ನೀನಾಸಂ ಸತೀಶ್ ಅವರಿಗೆ ಧನ್ಯವಾದ ಎಂದರು ನಾಯಕ ರಿಷಿ.  ನಾಯಕಿ ಪ್ರಿಯಾಂಕ ಕುಮಾರ್, ನಟರಾದ ಶಿವರಾಜ್ ಕೆ ಆರ್ ಪೇಟೆ, ಪವನ್  ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

  • ಚುನಾವಣಾ ರಾಯಭಾರಿಯಾಗಿ ಖ್ಯಾತನಟ ಸತೀಶ್ ನೀನಾಸಂ ನೇಮಕ

    ಚುನಾವಣಾ ರಾಯಭಾರಿಯಾಗಿ ಖ್ಯಾತನಟ ಸತೀಶ್ ನೀನಾಸಂ ನೇಮಕ

    ನ್ನಡದ ಹೆಸರಾಂತ ನಟ ಸತೀಶ್ ನೀನಾಸಂ (Ninasam Satish) ಅವರನ್ನು ಮಂಡ್ಯ (Mandya) ಜಿಲ್ಲಾ ಮತದಾನ ಜಾಗೃತಿ ರಾಯಭಾರಿಯನ್ನಾಗಿ (Election Ambassador) ಚುನಾವಣಾ ಆಯೋಗ ನೇಮಿಸಿದೆ. ಕರ್ನಾಟಕ ವಿಧಾನಸಭೆ (Assembly) ಚುನಾವಣೆ 2023 ಜಾರಿಯಲ್ಲಿದ್ದು, ಅತೀ ಹೆಚ್ಚು ಮತದಾನ ಆಗುವ ಉದ್ದೇಶದಿಂದ ಆಯೋಗವು ಮಂಡ್ಯ ಜಿಲ್ಲೆಯವರೇ ಆಗಿರುವ ಸತೀಶ್ ಅವರನ್ನು ನೇಮಿಸಿ ಜಾಗೃತಿ ಕಾರ್ಯಕ್ರಮವನ್ನು ಶುರು ಮಾಡಿದೆ.

    ನಿನ್ನೆ ಮಂಡ್ಯದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸತೀಶ್, ‘ಜಾತಿ, ಮತ, ಕುಲ ಯಾವುದನ್ನೂ ಲೆಕ್ಕಿಸದೇ, ಆಮಿಷಗಳಿಗೆ ಒಳಗಾಗದೇ ಪ್ರಮಾಣಿಕ ವ್ಯಕ್ತಿಗಳಿಗೆ ಮತದಾನ ಮಾಡಿ, ಮತದಾನ ಅಮೂಲ್ಯವಾದದ್ದು ಅದನ್ನು ಮಾರಿಕೊಳ್ಳಬೇಡಿ ಮತ್ತು ಹಾಳು ಮಾಡಬೇಡಿ’ ಎಂದು ಅವರು ಮಾತನಾಡಿದರು. ಇದನ್ನೂ ಓದಿ:ಖುಷ್ಬೂ ಮೊದಲ ಸಂಬಂಧದ ಬಗ್ಗೆ ಶಾಕಿಂಗ್‌ ಹೇಳಿಕೆ ನೀಡಿದ ತೆಲುಗು ನಟಿ

    ಮತದಾನದ ಶಕ್ತಿಯನ್ನು ಅರಿವು ಮಾಡಿಕೊಟ್ಟ ಸತೀಶ್, ‘ಮತದಾನ ಪ್ರಕ್ರಿಯೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗಿಯಾಗಿ. ನಾನ್ಯಾಕೆ ಮತದಾನ ಮಾಡಬೇಕು ಎಂದು ಆಲೋಚಿಸುವ ಬದಲು, ಮತದಾನ ಮಾಡಿದರೆ ಎಂತಹ ರಾಷ್ಟ್ರವನ್ನು ಕಟ್ಟಬಹುದು ಎನ್ನುವುದರತ್ತ ಯೋಚಿಸಿ. ರಾಜ್ಯದಲ್ಲೇ ಮಂಡ್ಯದಲ್ಲಿ ಅತೀ ಹೆಚ್ಚು ಮತದಾನ ಆಗುವಂತೆ ಮಾಡಬೇಕಾಗಿದ್ದು ನಮ್ಮೆಲ್ಲರ ಜವಾಬ್ದಾರಿ ಆಗಿದೆ’ ಎಂದು ಸತೀಶ್ ತಿಳಿಸಿದರು.

    ಮತದಾನದ ಕುರಿತಾಗಿ ಸತೀಶ್ ಯಾವಾಗಲೂ ಜಾಗೃತಿ ಮೂಡಿಸುತ್ತಲೇ ಬಂದಿದ್ದಾರೆ. ಈ ಬಾರಿ ಚುನಾವಣೆಯ ರಾಯಭಾರಿ ಆಗಿದ್ದರಿಂದ ಮತ್ತಷ್ಟು ಜವಾಬ್ದಾರಿ ತಗೆದುಕೊಂಡು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯದಲ್ಲಿ ಮಾತ್ರವಲ್ಲ ಕರ್ನಾಟಕದ ತುಂಬಾ ಅವರ ಅಭಿಮಾನಿಗಳು ಇದ್ದು ಮುಂದಿನ ದಿನಗಳಲ್ಲಿ ಅವರು ಬೇರೆ ಬೇರೆ ಜಿಲ್ಲೆಗಳಿಗೂ ರಾಯಭಾರಿ ಆಗಲಿ ಎನ್ನುವುದು ಸತೀಶ್ ಅಭಿಮಾನಿಗಳ ಆಸೆ.

    ಸದ್ಯ ಅಶೋಕ ಬ್ಲೇಡ್, ಮ್ಯಾಟ್ನಿ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಸತೀಶ್, ಹೊಸ ರೀತಿಯ ಆಲೋಚನೆಯನ್ನು ಮಾಡಬಲ್ಲಂತ ನಟ. ವಿಭಿನ್ನ ಸಿನಿಮಾಗಳ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ಕಾರಣದಿಂದಾಗಿಯೇ ಚುನಾವಣಾ ಆಯೋಗ ಅವರಿಗೆ ಮಹತ್ತರವಾದ ಜವಾಬ್ದಾರಿಯನ್ನು ನೀಡಿದೆ.

  • ಡಿ.12ರಂದು ರಜನಿಕಾಂತ್ ಕುರಿತಾದ ‘ಗೆಳೆಯ ಶಿವಾಜಿ’ ಪುಸ್ತಕ ಬಿಡುಗಡೆ

    ಡಿ.12ರಂದು ರಜನಿಕಾಂತ್ ಕುರಿತಾದ ‘ಗೆಳೆಯ ಶಿವಾಜಿ’ ಪುಸ್ತಕ ಬಿಡುಗಡೆ

    ಹಿರಿಯ ನಟ ಅಶೋಕ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಆತ್ಮೀಯ ಸ್ನೇಹಿತರು. ರಜನಿ ಬಗ್ಗೆ ಯಾರಾದರೂ ವಸ್ತುನಿಷ್ಠವಾಗಿ ಬರೆಯಬಲ್ಲರು ಅಂದರೆ, ಅದು ಅಶೋಕ್ ಅವರಿಗೆ ಮಾತ್ರ ಸಾಧ್ಯವಾಗುವಂಥದ್ದು. ರಜನಿ ಅವರ ಕಷ್ಟದ ದಿನಗಳಿಂದ ಸೂಪರ್ ಸ್ಟಾರ್ ಆಗಿ ಬೆಳೆದ ಪರಿಯನ್ನು ಕಣ್ಣಾರೆ ಕಂಡವರು. ಕಂಡುಂಡು ಮೆರೆದವರು. ಹಾಗಾಗಿ ಗೆಳೆಯನ ಜೊತೆಗಿನ ಅಪರೂಪದ ಭಾವನೆಗಳನ್ನು ಈ ಪುಸ್ತಕದಲ್ಲಿ ಹಿಡಿದಿಟ್ಟಿದ್ದಾರೆ ಅಶೋಕ್.

    ಇದು ಕೇವಲ ಭಾವನೆಗಳ ಗುಚ್ಛವಲ್ಲವಂತೆ. ಸಾಕಷ್ಟು ಘಟನೆಗಳಿಗೆ ಸಾಕ್ಷಿಯಾಗಿಯೂ ಇರಲಿದೆಯಂತೆ. ಅಲ್ಲದೇ, ಅನೇಕ ಊಹಾಪೋಹಗಳಿಗೆ ಈ ಪುಸ್ತಕ ಉತ್ತರವಾಗಿ ನಿಲ್ಲಬಲ್ಲದು. ಗೊತ್ತಿರದ ರಜನಿಯನ್ನು ಗೆಳೆಯ ಅನ್ನುವ ಆಪ್ತತೆಯ ಮೂಲಕ ಅಶೋಕ್ ಅವರು ಅನೇಕ ಸಂಗತಿಗಳನ್ನು ಈ ಪುಸ್ತಕದಲ್ಲಿ ಹಂಚಿಕೊಂಡಿದ್ದಾರೆ. ಹಾಗಾಗಿ ‘ಗೆಳೆಯ ಶಿವಾಜಿ’ ರಜನಿಕಾಂತ್ ಜೀವನದ ದಿ ಬೆಸ್ಟ್ ಪುಸ್ತಕವೂ ಆಗಿದೆ. ಗಿರಿಜಾ ಲೋಕೇಶ್ ಈ ಪುಸ್ತಕಕ್ಕೆ ಬೆನ್ನುಡಿ ಬರೆದಿದ್ದರೆ, ಬೆಂಗಳೂರಿನ ಬೀ ಕಲ್ಚರ್ ಪ್ರಕಾಶನ ಈ ಪುಸ್ತಕವನ್ನು ಹೊರ ತಂದಿದೆ.  ಇದನ್ನೂ ಓದಿ: `ಬಿಗ್ ಬಾಸ್’ ಖ್ಯಾತಿಯ ಭೂಮಿ ಶೆಟ್ಟಿ ಫಿಟ್ನೆಸ್ ನೋಡಿ ವಾವ್ ಎಂದ ಫ್ಯಾನ್ಸ್

    ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಡಿಸೆಂಬರ್ 12ರ ಸಂಜೆ 5.30ಕ್ಕೆ ಈ ಪುಸ್ತಕ ಬಿಡುಗಡೆ ಆಗುತ್ತಿದ್ದು, ಅಗ್ರಹಾರ ಕೃಷ್ಣಮೂರ್ತಿ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ನಟ ನೀನಾಸಂ ಸತೀಶ್ ಈ ಪುಸ್ತಕವನ್ನು ಬಿಡುಗಡೆ ಮಾಡಿದರೆ, ನಿರ್ದೇಶಕಿ ಸುಮನಾ ಕಿತ್ತೂರ್ ಕೃತಿಯನ್ನು ಪರಿಚಯಿಸುತ್ತಾರೆ. ಸಿ.ಎಸ್.ದ್ವಾರಕನಾಥ್ ಅತಿಥಿಯಾಗಿ ಆಗಮಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ಯಾಂಡಲ್ ವುಡ್ ನಲ್ಲಿ ಎರಡು ದಿನ ಟೆಲಿವಿಷನ್ ಕ್ರಿಕೆಟ್ ಲೀಗ್

    ಸ್ಯಾಂಡಲ್ ವುಡ್ ನಲ್ಲಿ ಎರಡು ದಿನ ಟೆಲಿವಿಷನ್ ಕ್ರಿಕೆಟ್ ಲೀಗ್

    ಟ್ರಿನ್ಕೊ ಇನ್ಫ್ರಾ ಪ್ರೈವೇಟ್ ಲಿಮಿಟೆಡ್ ಟೆಲಿವಿಷನ್ ಕ್ರಿಕೆಟ್ ಲೀಗ್ ಸೀಸನ್ 4 ರ ಟೈಟಲ್ ಸ್ಪಾನ್ಸರ್ ಆಗಿದ್ದಾರೆ. ಟೆಲಿವಿಷನ್ ಕ್ರಿಕೆಟ್ ಯಶಸ್ವಿಯಾಗಿ 3 ಸೀಸನ್ ಪೂರೈಸಿದೆ. 4 ಸೀಸನ್ ನಲ್ಲಿ 6 ತಂಡಗಳು ಭಾಗಿಯಾಗಲಿದೆ.  ಈ ಸೀಸನ್ ನಲ್ಲಿ ಭಾಗಿಯಾಗಲಿರುವ 6 ತಂಡಗಳ ವಿವರ ಈ ರೀತಿಯಿದೆ.

    ಪ್ರೊವಿಟೇಲ್ ಹೆಲ್ತ್  ನ ಡಾ.ಶಿಲ್ಪ ಮಾಲೀಕತ್ವದ ರೋರಿಂಗ್ ಲಯನ್ಸ್ ತಂಡದ ನಾಯಕ ಕಿರಿಕ್ ಕೀರ್ತಿ ಹಾಗೂ ಉಪನಾಯಕ ಕಾರ್ತಿಕ್ ಮಹೇಶ್. ಶೃತಿ ರಮೇಶ್, ಶುಭ ರಕ್ಷ ಹಾಗೂ ಸುಶ್ಮಿತ. ಚೇತನ ಪ್ರೊಡಕ್ಷನ್ಸ್ ನ ಡಾ.ಚೇತನ ಮಾಲೀಕತ್ವದ “ಜಟಾಯು” ತಂಡದ ನಾಯಕನಾಗಿ ಹರ್ಷ ಸಿ.ಹೆಚ್ ಗೌಡ ಹಾಗೂ ಉಪನಾಯಕನಾಗಿ ಹರೀಶ್ ಇದ್ದಾರೆ. ಸಾಕ್ಷಿ ಮೇಘನಾ ಹಾಗೂ ಪೂಜಾ. ಇದನ್ನೂ ಓದಿ: ಪುಷ್ಪ 2 ಅಲ್ಲು ಅರ್ಜುನ್ ಮುಂದೆ ಅಬ್ಬರಿಸಲು ಬರುತ್ತಿದ್ದಾರೆ ವಿದೇಶಿ ವಿಲನ್

    ಡಿ ಜಿ ಇನ್ಫಿನಿಟಿ ಕಂಪನಿಯ ಸುಲ್ತಾನ್ ಹಾಗೂ ಎಂ.ಆರ್ ಸ್ವಾಮಿ ಮಾಲೀಕರಾಗಿರುವ “ಕ್ರೇಜಿ ಕಿಲ್ಲರ್” ತಂಡದ ನಾಯಕ ಅರ್ಜುನ್ ಯೋಗಿ ಹಾಗೂ ಉಪನಾಯಕ ಚೇತನ್ ವಿಕಾಸ್. ಮೇಘನಾ ಹಾಗೂ ಆವಂತಿಕ ಈ ತಂಡದ ರಾಯಭಾರಿಗಳು.  “ಅಮ್ಮಾಸ್ ಫುಡ್” ಶ್ರೀನಿಧಿ ಅವರ ಮಾಲೀಕತ್ವದ “ಗ್ಯಾಂಗ್ ಗರುಡಾಸ್” ತಂಡದ ನಾಯಕನಾಗಿ ಮಾಸ್ಟರ್ ಆನಂದ್ ಹಾಗೂ ಉಪನಾಯಕನಾಗಿ ಕರಿಬಸವ ಇದ್ದಾರೆ. ತನಿಶಾ, ಪಲ್ಲವಿ ಗೌಡ ಹಾಗೂ ದ್ರವ್ಯ ಶೆಟ್ಟಿ ಈ ತಂಡದ ರಾಯಭಾರಿಗಳು.

    ಪ್ರಧಾನ್ ಟೀವಿಯ ಪ್ರಶಾಂತ್ ಹಾಗೂ ನಾಗಶ್ರೀ ಮಾಲೀಕರಾಗಿರುವ “ಚಾಂಪಿಯನ್ ಚೀತಸ್” ತಂಡದ ನಾಯಕನಾಗಿ ಹೇಮಂತ್ ಹಾಗೂ ಮಂಜು ಪಾವಗಡ ಉಪನಾಯಕನಾಗಿದ್ದಾರೆ.  ವಿಜಯಲಕ್ಷ್ಮಿ, ಯಶಸ್ವಿನಿ  ಮತ್ತು ಜಾಹ್ನವಿ ಈ ತಂಡದ ರಾಯಭಾರಿಗಳು. ಕಿರೀಟಿ ವೆಂಚರ್ ನ ಕುಶಾಲ್ ಗೌಡ ಮಾಲೀಕತ್ವದ “ಗಜಪಡೆ ವಾರಿಯರ್ಸ್” ತಂಡದ ನಾಯಕನಾಗಿ ವಿವಾನ್ ಹಾಗೂ ಉಪನಾಯಕನಾಗಿ ಶ್ರೀರಾಮ್ ಇದ್ದಾರೆ.  ವರ್ಷಿತಾ, ಅಮೂಲ್ಯ ಹಾಗೂ ಅನಿಕಾ ಈ ತಂಡದ ರಾಯಭಾರಿಗಳಾಗಿದ್ದಾರೆ. ಎರಡು ದಿನಗಳ ಕಾಲ “ಟೆಲಿವಿಷನ್ ಕ್ರಿಕೆಟ್ ಲೀಗ್ ಸೀಸನ್ 4” ರ ಪಂದ್ಯಗಳು ನಡೆಯಲಿದೆ. ಪಂದ್ಯಗಳ ಕುರಿತು ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ಫೌಂಡರ್ ದೀಪಕ್ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಪೆಟ್ರೋಮ್ಯಾಕ್ಸ್’ ಸಿನಿಮಾ ಓಡುತ್ತಿದ್ದರೂ ಸೋಲೊಪ್ಪಿಕೊಂಡ ನಿರ್ದೇಶಕನ ನಡೆಗೆ ಮೆಚ್ಚುಗೆ ಮಹಾಪೂರ

    ‘ಪೆಟ್ರೋಮ್ಯಾಕ್ಸ್’ ಸಿನಿಮಾ ಓಡುತ್ತಿದ್ದರೂ ಸೋಲೊಪ್ಪಿಕೊಂಡ ನಿರ್ದೇಶಕನ ನಡೆಗೆ ಮೆಚ್ಚುಗೆ ಮಹಾಪೂರ

    ನೀರ್ ದೋಸೆ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ಸ್ಯಾಂಡಲ್ ವುಡ್ ಗೆ ಕೊಟ್ಟಿರುವ ನಿರ್ದೇಶಕ ವಿಜಯ್ ಪ್ರಸಾದ್ ಅವರ ಪೆಟ್ರೋಮ್ಯಾಕ್ಸ್ ಸಿನಿಮಾ ಎರಡು ವಾರಗಳ ಹಿಂದೆಯಷ್ಟೇ ರಿಲೀಸ್ ಆಗಿದೆ. ನೀನಾಸಂ ಸತೀಶ್, ಹರಿಪ್ರಿಯಾ, ಕಾರುಣ್ಯ ರಾಮ್, ಅರುಣ್ ಸೇರಿದಂತೆ ಹಲವು ಕಲಾವಿದರು ನಟಿಸಿದ್ದ ಈ ಸಿನಿಮಾಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಮೂರನೇ ವಾರಕ್ಕೆ ಸಿನಿಮಾ ಕಾಲಿಟ್ಟಿರುವ ಸಂದರ್ಭದಲ್ಲಿ ಏಕಾಏಕಿ ಸೋಲನ್ನು ಒಪ್ಪಿಕೊಂಡು ಬಿಟ್ಟಿದ್ದಾರೆ ನಿರ್ದೇಶಕರು.

    ನಿನ್ನೆಯಷ್ಟೇ ನಿರ್ದೇಶಕ ವಿಜಯ್ ಪ್ರಸಾದ್ ಸೋಷಿಯಲ್ ಮೀಡಿಯಾದಲ್ಲಿ ‘ನಮ್ಮ ಪೆಟ್ರೋಮ್ಯಾಕ್ಸ್ ಚಿತ್ರ ನಾವು ಅಂದುಕೊಂಡಂತೆ ಎಲ್ಲರನ್ನೂ ತಲುಪಲು ಆಗಲಿಲ್ಲ. ಅದಕ್ಕೆ ಕಾರಣ ಖಂಡಿತವಾಗಿಯೂ ನೀವಂತೂ ಅಲ್ಲ. ಹಾಗೆ ನಮ್ಮ ಚಿತ್ರತಂಡದ ಯಾರೊಬ್ಬರೂ ಅಲ್ಲ. ಇದಕ್ಕೆ ಕಾರಣ ನಾನೊಬ್ಬನೇ. ಕ್ಷಮೆ ಇರಲಿ’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ನಿರ್ದೇಶಕರು ಹೇಳಿದಂತೆ ಅಪಾರ ಸಂಖ್ಯೆಯಲ್ಲಿ ಈ ಸಿನಿಮಾ ಜನರಿಗೆ ತಲುಪದೇ ಇರಬಹುದು. ಆದರೆ, ತಲುಪಿದವರೆಲ್ಲ ಇಷ್ಟಪಟ್ಟಿದ್ದಾರೆ. ದ್ವಂದ್ವಾರ್ಥದ ಸಂಭಾಷಣೆಯ ಮಧ್ಯೆಯೂ ತಲುಪಬೇಕಾದ ಸಂದೇಶ ತಲುಪಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ಮಗಳಿಗೆ ಮುದ್ದಾದ ಹೆಸರಿಟ್ಟ ಪ್ರಣಿತಾ ಸುಭಾಷ್

    ನಿರ್ದೇಶಕ ವಿಜಯ್ ‍ಪ್ರಸಾದ್ ಈ ರೀತಿಯಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಂತೆಯೇ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ. ಸಿನಿಮಾಗಳು ಸೋತರೂ, ನೂರಾರು ಕೋಟಿ ದುಡ್ಡು ಬಂದಿದೆ ಎಂದು ಹೇಳುವ, ತಮ್ಮ ಸಿನಿಮಾ ಸೂಪರ್ ಹಿಟ್ ಆಗಿದೆ ಎಂದು ಬೊಗಳೆ ಬಿಡುವ ನಿರ್ದೇಶಕರೇ ಹೆಚ್ಚಿನ ಸಂಖ್ಯೆಯಲ್ಲಿರುವ ಈ ದಿನಮಾನದಲ್ಲಿ, ತಮ್ಮ ಸಿನಿಮಾ ತಲುಪಿಲ್ಲ ಎಂದು ಪ್ರಮಾಣಿಕವಾಗಿ ಒಪ್ಪಿಕೊಂಡ ನಿರ್ದೇಶಕರ ನಡೆಯನ್ನು ಬಹುತೇಕರ ಮೆಚ್ಚಿದ್ದಾರೆ. ಮುಂದಿನ ಸಿನಿಮಾ ಚೆನ್ನಾಗಿ ಆಗಲಿ ಎಂದೂ ಹಾರೈಸಿದ್ದಾರೆ.

    ಇಂದಿನಿಂದ ನಿರ್ದೇಶಕರು ಅವರ ಮತ್ತೊಂದು ಸಿನಿಮಾ ತೋತಾಪುರಿ ಕೆಲಸದಲ್ಲಿ ತೊಡಗಿಕೊಂಡಿದ್ದಾರಂತೆ. ಅದನ್ನೂ ಅವರು ಪೋಸ್ಟ್ ಮಾಡಿದ್ದಾರೆ. ತೋತಾಪುರಿ ಸಿನಿಮಾ ವಿಜಯ್ ಪ್ರಸಾದ್ ಮತ್ತು ಜಗ್ಗೇಶ್ ಕಾಂಬಿನೇಷನ್ ನ ಎರಡನೇ ಸಿನಿಮಾ. ಇದು ಎರಡು ಭಾಗಗಳಲ್ಲಿ ಮೂಡಿ ಬಂದಿದೆ. ರಿಲೀಸ್ ಆಗಿರುವ ಟ್ರೈಲರ್ ಭರವಸೆ ಮೂಡಿಸಿದೆ.

    Live Tv
    [brid partner=56869869 player=32851 video=960834 autoplay=true]