Tag: ನೀರಿನ ಕೊರತೆ

  • ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿಗೆ ನೀರಿನ ಕೊರತೆ – ಲೋಡ್ ಶೆ‌ಡ್ಡಿಂಗ್ ಭೀತಿ

    ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿಗೆ ನೀರಿನ ಕೊರತೆ – ಲೋಡ್ ಶೆ‌ಡ್ಡಿಂಗ್ ಭೀತಿ

    ರಾಯಚೂರು: ಈ ಬಾರಿ ಬೇಸಿಗೆ ಆರಂಭದಲ್ಲೇ ವಿದ್ಯುತ್‌ನ ತೀವ್ರ ಅಭಾವ ಉಂಟಾಗುವ ಲಕ್ಷಣಗಳು ಗೋಚರಿಸುತ್ತಿದೆ. ರಾಯಚೂರಿನ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿಗೆ (Thermal power Station) ನೀರಿನ ಕೊರತೆ ಉಂಟಾಗುವ ಸಾಧ್ಯತೆಗಳಿದ್ದು, ಕೇವಲ ಒಂದು ವಾರಕ್ಕಾಗುವಷ್ಟು ನೀರಿನ ಸಂಗ್ರಹ ಮಾತ್ರ ಇದೆ. ಈಗಿರುವ ತಾಂತ್ರಿಕ ಸಮಸ್ಯೆಗಳ ನಡುವೆ ನೀರಿನ ಅಭಾವ ಲೋಡ್ ಶೆಡ್ಡಿಂಗ್ (Load Shedding) ಭೀತಿ ಹೆಚ್ಚಿಸಿದೆ.

    ರಾಜ್ಯದ ಬಹುಪಾಲು ವಿದ್ಯುತ್ ಬೇಡಿಕೆಯನ್ನ ಪೂರೈಸುವ ರಾಯಚೂರಿನ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಾದ RTPS ಹಾಗೂ YTPS ಈಗ ನೀರಿನ ಸಮಸ್ಯೆ ಎದುರಿಸುತ್ತಿವೆ. ಸದಾ ತಾಂತ್ರಿಕ ಸಮಸ್ಯೆಗಳಿಂದಾಗಿ ವಿದ್ಯುತ್ ಘಟಕಗಳು ಆಗಾಗ್ಗೆ ಬಂದ್‌ ಆಗುತ್ತಲೇ ಇದ್ದು, ಈಗ ನೀರಿನ ಸಮಸ್ಯೆಯೂ (Water Shortage) ಶುರುವಾಗಿರುವುದರಿಂದ ವಿದ್ಯುತ್ ಉತ್ಪಾದನೆಯಲ್ಲಿ ಗಣನೀಯವಾಗಿ ಇಳಿಕೆಯಾಗುವ ಆತಂಕ ಎದುರಾಗಿದೆ.

    ಈ ಬಾರಿ ಮುಂಗಾರು ಮತ್ತು ಹಿಂಗಾರು ಮಳೆ ಕೈಕೊಟ್ಟಿದ್ದರಿಂದಾಗಿ ಕೃಷ್ಣಾ ನದಿ ಸಂಪೂರ್ಣ ಬತ್ತಿಹೋಗಿದೆ. ವಿದ್ಯುತ್ ಕೇಂದ್ರಗಳಿಗಾಗಿಯೇ ನಿರ್ಮಿಸಲಾದ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್‌ನಲ್ಲೂ ಡೆಡ್ ಸ್ಟೋರೇಜ್ ಮಾತ್ರಯಿದ್ದು, ವಿದ್ಯುತ್ ಕೇಂದ್ರಗಳಿಗೆ ಕೇವಲ ಒಂದು ವಾರಕ್ಕಾಗುವಷ್ಟು ನೀರಿನ ಸಂಗ್ರಹವಿದೆ. ನೀರಿನ ಸಮಸ್ಯೆ ನೀಗದಿದ್ದರೆ ವಿದ್ಯುತ್ ಪೂರೈಕೆಯಲ್ಲೂ ಅಭಾವ ಎದುರಿಸಬೇಕಾಗುತ್ತದೆ. ಇದನ್ನೂ ಓದಿ: ಇಸ್ರೋ ರಾಕೆಟ್‌ನಲ್ಲಿ ಚೀನಾ ಧ್ವಜ – ಭಾರತದ ಸಾಧನೆ ಒಪ್ಪಿಕೊಳ್ಳಲು ಡಿಎಂಕೆಗೆ ಆಗಲ್ಲ ಎಂದ ಮೋದಿ

    1,720 ಮೆಗಾವ್ಯಾಟ್ ಸಾಮರ್ಥ್ಯದ ಆರ್‌ಟಿಪಿಎಸ್‌ನಲ್ಲಿ ಈಗಾಗಲೇ 8 ಘಟಕಗಳ ಪೈಕಿ ತಾಂತ್ರಿಕ ಸಮಸ್ಯೆ ಹಾಗೂ ವಾರ್ಷಿಕ ನಿರ್ವಹಣೆ ಹಿನ್ನೆಲೆ 2 ಘಟಕಗಳು ಬಂದ್‌ ಆಗಿವೆ. ಹಾಗಾಗಿ ಕೇವಲ 844 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆಯಾಗುತ್ತಿದೆ. 1,600 ಮೆಗಾ ವ್ಯಾಟ್ ಸಾಮರ್ಥ್ಯದ ವೈಟಿಪಿಎಸ್‌ನಲ್ಲಿ 1080 ಮೆಗಾವ್ಯಾಟ್ ಉತ್ಪಾದನೆಯಾಗುತ್ತಿದೆ. ನೀರಿನ ಸಮಸ್ಯೆ ಮುಂದುವರಿದರೆ, ಇನ್ನಷ್ಟು ಘಟಕಗಳು ಬಂದ್‌ ಆಗುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

    ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಬೇಡಿಕೆಯ ಮೇರೆಗೆ ನಾರಾಯಣಪುರ ಜಲಾಶಯದಿಂದ 6,000 ಕ್ಯೂಸೆಕ್ ನಂತೆ ಎರಡು ದಿನಕಾಲ 1 ಟಿಎಂಸಿ ನೀರನ್ನ ಬಿಡಲು ಅಧಿಕಾರಿಗಳು ಮುಂದಾಗಿದ್ದಾರೆ. ಆದ್ರೆ ನದಿಯಲ್ಲಿ ಸಾಕಷ್ಟು ತಗ್ಗು ಗುಂಡಿಗಳು ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ರೈತರು ನೀರು ಬಳಸುತ್ತಿರುವುದರಿಂದ ಬ್ಯಾರೇಜ್‌ಗೆ ನೀರು ತಲುಪುವುದೇ ಅನುಮಾನ ಎನ್ನಲಾಗುತ್ತಿದೆ. ಇದನ್ನೂ ಓದಿ: ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆ – 100+ ಯೂನಿಟ್‌ ಬಳಸುವ ಬಳಕೆದಾರರಿಗೆ ಗುಡ್‌ನ್ಯೂಸ್

    ಮಳೆ ಕೊರತೆಯಿಂದ ಈಗಾಗಲೇ ಜಲವಿದ್ಯುತ್ ಕೇಂದ್ರಗಳ ವಿದ್ಯುತ್ ಉತ್ಪಾದನೆ ಗಣನೀಯ ಕುಸಿತವಾಗಿದೆ. ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಮೇಲೆ ಹೆಚ್ಚಿನ ಒತ್ತಡ ಬಿದ್ದಿದೆ. ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿಗೆ ತಾಂತ್ರಿಕ ಸಮಸ್ಯೆಯೊಂದಿಗೆ ಮತ್ತು ನೀರಿನ ಸಮಸ್ಯೆಯೂ ಎದುರಾಗುತ್ತಿದ್ದು, ಸರ್ಕಾರ ಇದರತ್ತ ಗಮನ ಹರಿಸಬೇಕಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮನವಿ ಮಾಡಿದ್ದಾರೆ.

  • ತುಟಿಯ ಚರ್ಮ ಒಣಗುತ್ತಿದೆಯೇ? ಇಲ್ಲಿದೆ ಪರಿಹಾರ

    ತುಟಿಯ ಚರ್ಮ ಒಣಗುತ್ತಿದೆಯೇ? ಇಲ್ಲಿದೆ ಪರಿಹಾರ

    ಚೆಂದದ ತುಟಿ ಆಕರ್ಷಣೆಯ ಕೇಂದ್ರ ಬಿಂದು. ಬಿರುಕಿಲ್ಲದ ಸುಂದರವಾದ ಹೊಳೆಯುವ ಮೃದುವಾದ ತುಟಿ ಬೇಕು ಎನ್ನುವುದು ಮಹಿಳೆಯರ ಆಸೆ. ಮಹಿಳೆಯರು ತುಟಿಗಳ ಕುರಿತಾಗಿ ಹೆಚ್ಚಿನ ಕಾಳಜಿಯನ್ನು ವಹಿಸುತ್ತಾರೆ. ಕೆಲವೊಮ್ಮೆ ಒಣಗಿದ ತುಟಿ, ತುಟಿಯ ಚರ್ಮ ಕಿತ್ತು ಬರುವ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ತುಟಿ ಒಣಗಲು ಮತ್ತು ಚರ್ಮ ಕಿತ್ತುಬರಲು ಕಾರಣ ಮತ್ತು ಪರಿಹಾರವೇನು ಇಲ್ಲಿದೆ ಮಾಹಿತಿ.

    ತುಟಿಗಳು ಒಣಗುವುದು ಚಳಿಗಾಲದಲ್ಲಿ ಮಾತ್ರ ಎನ್ನುವ ಭಾವನೆ ತಪ್ಪು. ಬೇಸಿಗೆ ಕಾಲದಲ್ಲಿಯೂ ತುಟಿ ಡ್ರೈ ಆಗುತ್ತೆ. ತುಟಿಯ ಚರ್ಮವು ದೇಹದ ಇತರರ ಭಾಗಗಳ ಚರ್ಮಕ್ಕಿಂತ ತೆಳ್ಳಗೆ ಮತ್ತು ಮೃದುವಾಗಿರುತ್ತದೆ. ಹಾಗಾಗಿ ತುಟಿಯ ಚರ್ಮದ ಕುರಿತಾಗಿ ವಿಶೇಷ ಕಾಳಜಿಯನ್ನು ವಹಿಸಬೇಕಾಗುತ್ತದೆ.

    ತುಟಿಗಳಲ್ಲಿ ಕಡಿಮೆ ಪ್ರಮಾದ ತೈಲ ಗ್ರಂಥಿಗಳಿರುತ್ತವೆ. ಶೀತ, ಶುಷ್ಕಗಾಳಿ, ತುಟಿಯುನ್ನು ಒಣಗುವಂತೆ ಮಾಡುತ್ತದೆ. ಇದರಿಂದ ತುಟಿಯ ಚರ್ಮ ಒಣಗಿ ಸಿಪ್ಪೆಯಂತಾಗಿ ಕಿತ್ತು ಬರುತ್ತದೆ. ಚಳಿಗಾಲದಲ್ಲಿ ಹೆಚ್ಚಾಗಿ ತುಟಿಗಳು ಬಿರುಕು ಬಿಡುವುದು, ಚಪ್ಪಟೆಯಂತಾಗುವುದು ಸಹಜವಾಗಿದೆ. ಚಳಿಗಾಲದಲ್ಲಿ ತುಟಿ ಒಣಗಿದಂತಾಗಿ ಚರ್ಮ ಕಿತ್ತು ಬರುವುದು ಮಹಿಳೆಯರಿಗರೆ ಕಿರಿಕಿರಿಯನ್ನು ಉಂಟುಮಾಡುತ್ತದೆ. ಹೊರಗೆ ಹೋಗುವಾಗ ಮಹಿಳಿಯರು ಟೈಟಾನಿಯಂ ಡೈ ಆಕ್ಸೈಡ್ ಮತ್ತು ಜೆನಿಕ್ ಆಕ್ಸೈಡ್ ಅಂಶವನ್ನು ಹೊಂದಿರುವ ಸನ್‍ಸ್ಕ್ರೀನ್ ಬಳಕೆಯನ್ನು ಮಾಡುತ್ತಾರೆ. ಆದರೂ ತುಟಿಯ ಚರ್ಮ ಒಣಗುತ್ತದೆ.

    ಒಣಗಿದ ತುಟಿಗೆ ಕಾರಣಗಳೇನು?
    * ನೀರಿನ ಕೊರತೆ : ದೇಹದಲ್ಲಿ ನೀರಿನ ಅಂಶ ಕಡಿಮೆಯಾದಾಗ ತುಟಿಗಳು ಶುಷ್ಕತೆಯಿಂದ ಒಡೆಯುತ್ತದೆ. ರಕ್ತದ ಕೊರತೆ ಉಂಟಾದರೆ ತುಟಿಯು ಬಣ್ಣವನ್ನು ಕಳೆದುಕೊಂಡು ಬಿಳುಚಾಗಿ ಕಾಣಿಸಿಕೊಳ್ಳುತ್ತದೆ. ತುಟಿ ಒಣಗುವುದರಿಂದ ಆರೋಗ್ಯದಲ್ಲಿನ ಏರುಪೇರುಗಳು ಕಾಣಿಸಿಕೊಳ್ಳುತ್ತದೆ. ನೀರಿನ ಪ್ರಮಾಣ ಕಡಿಮೆಯಾಗಿರುವುದನ್ನು ತುಟಿ ಒಣಗುವುದರಿಂದ ಗುರುತಿಸಬಹುದಾಗಿದೆ. ಆದಷ್ಟು ನೀರನ್ನು ಸೇವಿಸುವುದರ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿದೆ.

    * ಅತಿಯಾದ ಧೂಮಪಾನ: ತುಟಿಗಳು ಕಂದು ಬಣ್ಣಕ್ಕೆ ತಿರುಗಬಹುದು ಅಥವಾ ಗಾಢವಾದ ಬಣ್ಣಕ್ಕೆ ತಿರುಗಬಹುದು. ಧೂಮಪಾನ, ಯಕೃತ್ತಿನಂತಹ ಸಮಸ್ಯೆ ಉಂಟಾದರೆ ತುಟಿಗಳು ಗಾಢವಾದ ಬಣ್ಣಕ್ಕೆ ತಿರುಗುತ್ತವೆ. ಇದ್ದಕ್ಕಿದ್ದಂತೆ ತುಟಿಯ ಬಣ್ಣ ಗಾಢ ಅಥವಾ ಕಂದು ಬಣ್ಣಕ್ಕೆ ತಿರುಗಿದರೆ ವೈದ್ಯರಲ್ಲಿ ಪರೀಕ್ಷಿಸಿಕೊಳ್ಳುವುದು ಉತ್ತಮ.

    * ಸೌಂದರ್ಯ ವರ್ಧಕಗಳ ಬಳಕೆ: ತುಟಿಗೆ ಲೇಪಿಸುವ ಬಣ್ಣ, ಲಿಪ್ ಬಾಮ್, ಔಷಧಿ ಸೇರಿದಂತೆ ಇನ್ನಿತರ ಸೌಂದರ್ಯ ವರ್ಧಕ ಉತ್ಪನ್ನಗಳಿಂದಲೂ ಉಂಟಾಗಬಹುದು. ಇಂತಹ ಅಲರ್ಜಿ ಮಾರಣಾಂತಿಕ ಕಾಯಿಲೆಯೂ ಆಗುವ ಸಾಧ್ಯತೆಗಳಿರುತ್ತವೆ. ಟೂತ್ ಪೇಸ್ಟ್ ಅಲರ್ಜಿಯಿಂದಲೂ ಸಹ ತುಟಿಯಲ್ಲಿ ಅಲರ್ಜಿ ಉಂಟಾಗಬಹುದು. ಆದ್ದರಿಂದ ಬಹುಬೇಗ ವೈದ್ಯರ ಸಲಹೆ ಪಡೆದ ನಿಮ್ಮ ಚರ್ಮಕ್ಕೆ ಅನುಗುಣವಾದ ಕ್ರೀಮ್ ಬಳಸುವುದು ಉತ್ತಮ.

    * ಕಬ್ಬಿಣಾಂಶದ ಕೊರತೆ: ತುಟಿಯ ಸಂದುಗಳಲ್ಲಿ ಸೀಳುವಿಕೆ ಮುಖ್ಯ ಕಾರಣ ಕಬ್ಬಿಣಾಂಶದ ಕೊರತೆ. ಸೇವಿಸುವ ಆಹಾರದಲ್ಲಿ ಕಬ್ಬಿಣಾಂಶದ ಕೊರತೆ ಹೆಚ್ಚಾದಾಗ ಇಂತಹ ಸಮಸ್ಯೆಗಳು ಉಂಟಾಗುತ್ತದೆ.

    ತುಟಿಯ ಆರೈಕೆ ಹೀಗಿರಲಿ:
    * ಬೆಳಗ್ಗೆ ಹಲ್ಲು ಉಜ್ಜಿದ ಬಳಿಕ ತುಟಿಗಳನ್ನು ಬ್ರಶ್ ನಿಂದ ಮೃದುವಾಗಿ ಉಜ್ಜಬೇಕು.
    * ವಾರಕ್ಕೊಮ್ಮೆ ತುಟಿಗೆ ನೈಸರ್ಗಿಕವಾಗಿ ತಯಾರಿಸಿದ ಸ್ಕ್ರಬ್ ಲೇಪಿಸಿಕೊಳ್ಳಬೇಕು.
    * ತುಟಿಗೆ ನಿಮ್ಮ ಆರೋಗ್ಯಕ್ಕೆ ಅನುಗುಣವಾದ ಲಿಪ್ ಬಾಮ್ ಬಳಸಿ. (ವೈದ್ಯರ ಸಲಹೆ ಪಡೆದುಕೊಳ್ಳುವುದು ಉತ್ತಮ)
    * ವಿಟಮಿನ್ ಎ ಹೇರಳವಾಗಿರುವ ಕ್ಯಾರೆಟ್, ಟೊಮೆಟೋ, ಹಸಿತರಕಾರಿ ಆಹಾರ ಮತ್ತು ಪ್ರತಿನಿತ್ಯ ದೇಹಕ್ಕೆ ಅಗತ್ಯ ಇರುವಷ್ಟು ನೀರನ್ನು ಸೇವಿಸಬೇಕು.

    * ಜೇನುತುಪ್ಪ, ಹಾಲಿನಕೆನೆಗಳಂತಹ ನೈಸರ್ಗಿಕ ಉತ್ಪನ್ನಗಳನ್ನು ತುಟಿಗೆ ಹಚ್ಚಬಹುದು. ಅಲೋವೆರಾ ಜೆಲ್ ತುಟಿಗೆ ಹಚ್ಚವುದರಿಂದ ಒಣಗಿ ಬಿರುಕು ಬಿಟ್ಟ ತುಟಿಗಳು ಮೃದುವಾಗುತ್ತದೆ. ಸವತೆಕಾಯಿ ಪೇಸ್ಟ್‍ಮಾಡಿ ತುಟಿಗೆ ಹಚ್ಚುವುದರಿಂದ ಕಪ್ಪಾದ ತುಟಿಯ ಬಣ್ಣ ಬದಲಾಗುತ್ತದೆ. ಕಡಿಮೆ ಗುಣಮಟ್ಟದ ಸೌಂದರ್ಯವರ್ಧಕಗಳನ್ನು ತುಟಿಗೆ ಬಳಸಬೇಡಿ.

    * ಮಲಗುವ ಮುನ್ನ ತುಟಿಗೆ ರೋಸ್ ವಾಟರ್ ಹಚ್ಚಬೇಕು.