Tag: ನೀಲಿ ಜಿಂಕೆ

  • ಬೀದರ್‌ನಲ್ಲಿ ಅಪರೂಪದ ನೀಲ್‍ಗಾಯ್ ಪ್ರತ್ಯಕ್ಷ- ರೈತರಲ್ಲಿ ಆತಂಕ

    ಬೀದರ್‌ನಲ್ಲಿ ಅಪರೂಪದ ನೀಲ್‍ಗಾಯ್ ಪ್ರತ್ಯಕ್ಷ- ರೈತರಲ್ಲಿ ಆತಂಕ

    ಬೀದರ್: ಉತ್ತರ ಭಾರತದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಅಪರೂಪದ ಪ್ರಾಣಿ ಬೀದರ್ ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದೆ. ರಾಜ್ಯದಲ್ಲೇ ಪ್ರಥಮ ಬಾರಿಗೆ ಬೀದರ್ ನಲ್ಲಿ ಅಪರೂಪದ ನೀಲ್‍ಗಾಯ್(ನೀಲಿ ಜಿಂಕೆ) ಪ್ರತ್ಯಕ್ಷವಾಗಿದೆ.

    ಈ ಅಪರೂಪದ ಪ್ರಾಣಿ ಪ್ರತ್ಯಕ್ಷದಿಂದಾಗಿ ಜಿಲ್ಲೆಯ ಜನರು ಅಚ್ಚರಿಪಟ್ಟಿದ್ದಾರೆ. ನೀಲ್‍ಗಾಯ್ ಪ್ರಾಣಿ ಮಹಾರಾಷ್ಟ್ರ, ಬಿಹಾರ ಸೇರಿದಂತೆ ಉತ್ತರ ಭಾರತದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನಂದಿ ಬಿಜ್ಜಲಗಾಂವ್ ಗ್ರಾಮದ ಬಳಿ ಅಪರೂಪದ ನೀಲ್‍ಗಾಯ್ ಕಾಣಿಸಿಕೊಂಡಿದೆ.

    ಗಡಿ ಭಾಗದಲ್ಲಿ ಹೆಚ್ಚಾಗಿ ಅರಣ್ಯ ಪ್ರದೇಶವಿರುವ ಕಾರಣ ಈ ಕಡೆ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಸಿಬ್ಬಂದಿ ಹೊದಾಗ ಈ ಅಪರೂಪದ ಪ್ರಾಣಿ ಅವರ ಕಣ್ಣಿಗೆ ಬಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ನೀಲ್‍ಗಾಯ್ ಹೊಲ-ಗದ್ದೆಗಳಿಗೆ ಬಾರಿ ಪ್ರಮಾಣದಲ್ಲಿ ಹಾನಿ ಉಂಟು ಮಾಡುತ್ತದೆ ಎಂದು ಅರಣ್ಯ ಅಧಿಕಾರ ಹೇಳುತ್ತಿದ್ದು, ಇದು ರೈತರ ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಅಕ್ಷತಾ ಪಾಂಡವಪುರಗೆ ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಪ್ರಶಸ್ತಿ

  • ಬೆಳೆ ಹಾಳು ಮಾಡಿದಕ್ಕೆ ನೀಲಿಜಿಂಕೆ ಜೀವಂತ ಸಮಾಧಿ – ವಿಡಿಯೋ ವೈರಲ್

    ಬೆಳೆ ಹಾಳು ಮಾಡಿದಕ್ಕೆ ನೀಲಿಜಿಂಕೆ ಜೀವಂತ ಸಮಾಧಿ – ವಿಡಿಯೋ ವೈರಲ್

    ಪಾಟ್ನಾ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನೀಲ್‍ಗಾಯ್(ನೀಲಿ ಜಿಂಕೆ) ಒಂದನ್ನು ಜೀವಂತವಾಗಿ ಸಮಾಧಿ ಮಾಡಲಾಗಿದೆ. ಜೆಸಿಬಿ ಮೂಲಕ ಪ್ರಾಣಿಯನ್ನು ಖೆಡ್ಡಕ್ಕೆ ಬೀಳಿಸಿ, ಮಣ್ಣು ಮಾಡಲಾಗಿದೆ.

    ಮಾನವಿಯತೆ ಮರೆತು ನೀಲಿ ಜಿಂಕೆಯನ್ನು ಜೀವಂತವಾಗಿ ಸಮಾಧಿ ಮಾಡಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈಶಾಲಿ ಜಿಲ್ಲೆಯಲ್ಲಿ ನೀಲಿ ಜಿಂಕೆಗಳ ಹಾವಳಿ ಹೆಚ್ಚಿದ್ದು, ಇದರಿಂದ ರೈತರು ಬೇಸತ್ತು ಹೋಗಿದ್ದರು. ಆಹಾರ ಅರಸಿ ಜಮೀನುಗಳಿಗೆ ನುಗ್ಗುವ ನೀಲಿ ಜಿಂಕೆಗಳು ಬೆಳೆಗಳನ್ನು ಹಾಳು ಮಾಡುತ್ತಿದ್ದರಿಂದ ರೈತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು.

    ಈ ಬಗ್ಗೆ ರೈತರು ಅರಣ್ಯ ಇಲಾಖೆಗೆ ತಿಳಿಸಿ ನೀಲಿ ಜಿಂಕೆಗಳ ಕಾಟದಿಂದ ಪಾರು ಮಾಡಿ ಎಂದು ಮನವಿ ಮಾಡಿದ್ದರು. ಹೀಗಾಗಿ ಇವನ್ನು ಕೊಲ್ಲುವಂತೆ ಅರಣ್ಯ ಇಲಾಖೆಗೆ ಆದೇಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುಮಾರು 300ಕ್ಕೂ ಅಧಿಕ ನೀಲ್ಗಾಯ್‍ಗಳನ್ನು ಜಿಲ್ಲೆಯಲ್ಲಿ ಗುಂಡಿಟ್ಟು ಕೊಲ್ಲಲಾಗಿದೆ. ಇದಕ್ಕಾಗಿ ಪ್ರತ್ಯೇಕ ಸಿಬ್ಬಂದಿಯನ್ನೂ ಕೂಡ ಅರಣ್ಯ ಇಲಾಖೆಯೇ ನೇಮಿಸಿದೆ.

    ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಸಖತ್ ವೈರಲ್ ಆಗಿದ್ದು, ಮೂಕ ಪ್ರಾಣಿಯನ್ನು ಹೀಗೆ ಅಮಾನುಷವಾಗಿ ಹತ್ಯೆ ಮಾಡುವುದು, ಜೀವಂತ ಸಮಾಧಿ ಮಾಡುವುದು ತಪ್ಪು. ಮನುಷ್ಯರನ್ನು ಹೀಗೆ ಮಾಡಿದರೆ ಸುಮ್ಮನ್ನಿರುತ್ತೀರಾ? ಮೂಕ ಪ್ರಾಣಿಗಳ ಮೇಲೆ ದರ್ಪ ಮೆರೆಯುವುದು ತಪ್ಪು ಎಂದು ಪ್ರಾಣಿ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    https://twitter.com/JayaseelanTD/status/1169777775621754880