Tag: ನೂರು ಕೋಟಿ ಕ್ಲಬ್

  • ನೂರು ಕೋಟಿ ರೂಪಾಯಿ ಕ್ಲಬ್ ಸೇರಿದ ‘ಆಡುಜೀವಿತಂ’ ಸಿನಿಮಾ

    ನೂರು ಕೋಟಿ ರೂಪಾಯಿ ಕ್ಲಬ್ ಸೇರಿದ ‘ಆಡುಜೀವಿತಂ’ ಸಿನಿಮಾ

    ಪೃಥ್ವಿರಾಜ್ ಸುಕುಮಾರನ್ ನಟನೆಯ ಆಡುಜೀವಿತಂ ಸಿನಿಮಾ ನೂರು ಕೋಟಿ ರೂಪಾಯಿ ಕ್ಲಬ್ (Hundred Crore Club)  ಸೇರಿದೆ. ಈ ಕುರಿತಂತೆ ನಟ ಪೃಥ್ವಿರಾಜ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ವೊಂದನ್ನು ಹಂಚಿಕೊಂಡಿದ್ದಾರೆ. ಎಂಟು ದಿನದಲ್ಲಿ ನೂರು ಕೋಟಿ ರೂಪಾಯಿ ಕ್ಲಬ್ ಸೇರಿದ ಮೊದಲ ಮಲಯಾಳಂ ಸಿನಿಮಾ ಎನ್ನುವ ಹೆಗ್ಗಳಿಕೆಗೂ ಇದು ಪಾತ್ರವಾಗಿದೆ.

    ಕಳೆದ ಗುರುವಾರವಷ್ಟೇ ಪೃಥ್ವಿರಾಜ್ ಸುಕುಮಾರನ್ ನಟನೆಯ ಆಡುಜೀವಿತಂ ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗಿತ್ತು. ಸಿನಿಮಾ ರಿಲೀಸ್ ಆಗಿ ಮೂರೇ ಮೂರು ದಿನಕ್ಕೆ 50 ಕೋಟಿ ರೂಪಾಯಿಗೂ ಅಧಿಕ ಹಣ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ. ಜೊತೆಗೆ ದಿನದಿಂದ ದಿನಕ್ಕೆ ಪ್ರೇಕ್ಷಕರ ಸಂಖ್ಯೆಯೂ ಹೆಚ್ಚಾಗುತ್ತಿದೆ.  ಈಗ ನೂರು ಕೋಟಿ ಕ್ಲಬ್ ಸೇರಿಕೊಂಡಿದೆ. ಈ ಸಿನಿಮಾ ನೋಡಿದ ಪ್ರೇಕ್ಷಕರು ಸೇರಿದಂತೆ ಹಲವು ನಟ-ನಟಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಸೌತ್‌ನ ಲೆಜೆಂಡರಿ ಡೈರೆಕ್ಟರ್ ಮಣಿರತ್ನಂ (Maniratnam) ಅವರು ‘ಆಡುಜೀವಿತಂ’ (Aadujeevitham) ಸಿನಿಮಾ ನೋಡಿ ಹಾಡಿ ಹೊಗಳಿದ್ದಾರೆ.

    ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಅವರು ಆ ಪಾತ್ರವೇ ತಾವಾಗಿ ನಟಿಸುವ ಪ್ರತಿಭಾನ್ವಿತ ಕಲಾವಿದ. ಅದಕ್ಕೆ ತಾಜಾ ಉದಾಹರಣೆಯಾಗಿ ಆಡುಜೀವಿತಂ ಸಿನಿಮಾದಲ್ಲಿನ ಅವರ ನಟನೆಯೇ ಸಾಕ್ಷಿ. ಇದೀಗ ಅವರ ನಟನೆ, ಚಿತ್ರದ ಬಗ್ಗೆ ಮಣಿರತ್ನಂ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನಿಮ್ಮ ಸಿನಿಮಾಗೆ ಅಭಿನಂದನೆಗಳು, ನೀವು ಇದನ್ನು ಹೇಗೆ ನಿಭಾಯಿಸಿದ್ದೀರಿ ನನಗೆ ತಿಳಿದಿಲ್ಲ. ನಿಮ್ಮೆಲ್ಲರ ಶ್ರಮ ತೆರೆಯ ಮೇಲೆ ಕಾಣುತ್ತಿದೆ. ಸಿನಿಮಾವನ್ನು ಸುಂದರವಾಗಿ ಚಿತ್ರೀಸಲಾಗಿದೆ ಎಂದು ಮಣಿರತ್ನಂ ಸಿನಿಮಾವನ್ನು ಬಣ್ಣಿಸಿದ್ದಾರೆ.  ಬಳಿಕ ಮರುಭೂಮಿಯಲ್ಲಿ ಎದುರಿಸುವ ವಿವಿಧ ಕಷ್ಟಗಳನ್ನು ತೋರಿಸಿದ್ದೀರಿ. ನಿಮ್ಮ ಮತ್ತು ಸುನೀಲ್ ಕೆಲಸ ಅದ್ಭುತವಾಗಿದೆ ಎಂದು ಮಣಿರತ್ನಂ ತಂಡಕ್ಕೆ ಭೇಷ್ ಎಂದಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ನಟನೆ ನೋಡಿ ಕೊಂಡಾಡಿದ್ದಾರೆ. ಇದು ನಿಜವಾಗಿಯೂ ಸಂಭವಿಸಿದೆ ಎಂದು ಯೋಚಿಸಲು ಭಯಾನಕವಾಗಿದೆ ಎಂದಿದ್ದಾರೆ. ಈ ಚಿತ್ರವು ಸೆಂಟಿಮೆಂಟಲ್ ಆಗಿ ಮೂಡಿ ಬಂದಿದೆ. ಚಿತ್ರದ ಫಿನಿಶಿಂಗ್ ತುಂಬಾ ಇಷ್ಟವಾಯಿತು. ಚಿತ್ರತಂಡಕ್ಕೆ ಶುಭವಾಗಲಿ ಎಂದು ಮಣಿರತ್ನಂ ತಿಳಿಸಿದ್ದಾರೆ.

    ಮಣಿರತ್ನಂ ಅವರ ಬೆಂಬಲಕ್ಕೆ ಆಡುಜೀವಿತಂ ನಿರ್ದೇಶಕ ಬ್ಲೆಸ್ಸಿ ಕೂಡ ಪ್ರತಿಕ್ರಿಯಿಸಿ, ಧನ್ಯವಾದಗಳು ಸರ್ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ನಿರ್ದೇಶಕ ಬ್ಲೆಸ್ಸಿ ಶೇರ್‌ ಮಾಡಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಈ ‘ಆಡು ಜೀವಿತಂ’ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ.

    ನಿರ್ದೇಶಕ ಬ್ಲೆಸ್ಸಿ ಅವರ ಹದಿನೈದು ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ ಪಾತ್ರದಲ್ಲಿ ವಲಸಿಗ ವ್ಯಕ್ತಿಯಾಗಿ ಹೊಸ ಲುಕ್ ಮೂಲಕ ಕಾಣಿಸಿಕೊಂಡಿರುವ ಪೃಥ್ವಿರಾಜ್ ಸುಕುಮಾರನ್, ಹಲವಾರು ವರ್ಷಗಳಿಂದ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಇಡೀ ಚಿತ್ರತಂಡ ಹಗಲು ರಾತ್ರಿ ಎನ್ನದೆ ಚಿತ್ರದ ಔಟ್ಪುಟ್ ಗಾಗಿ ದುಡಿದಿದೆ. ಪೃಥ್ವಿರಾಜ್ ನಿರೀಕ್ಷೆಯ ಚಿತ್ರ ಇದಾಗಿದ್ದು, ಬ್ಲೆಸ್ಸಿ ನಿರ್ದೇಶನದ `ಆಡುಜೀವಿತಂ’ 2008ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಸಿನಿಮಾ ಇದು. ನಜೀಬ್ ಎಂಬ ವಲಸಿಗ ಕಾರ್ಮಿಕನ ಕಥೆಯನ್ನು ಮತ್ತು ಸೌದಿ ಅರೇಬಿಯಾದ ಮರುಭೂಮಿಯಲ್ಲಿ ಅವನು ಅನುಭವಿಸುವ ದುಃಸ್ಥಿತಿ ಮತ್ತು ಅಸಹಾಯಕತೆಯ ಕಥೆ ಚಿತ್ರದ ಸಾರಾಂಶ ಎನ್ನುತ್ತಾರೆ. ಪೃಥ್ವಿರಾಜ್ ನಜೀಬ್ ಪಾತ್ರ ನಿರ್ವಹಿಸಿದ್ದಾರೆ.

     

    ಚಿತ್ರದ ನಜೀಬ್ ಪಾತ್ರಕ್ಕಾಗಿ ಪೃಥ್ವಿರಾಜ್ ಸಾಕಷ್ಟು ದೇಹವನ್ನು ದಂಡಿಸಿದ್ದಾರೆ. ಅವರು ಸಿನುಮಾಗಾಗಿ ಸುಮಾರು 30 ಕೆಜಿ ತೂಕ ಇಳಿಸಿಕೊಂಡಿದ್ದಾರೆ ಕಳೆದ ಚಿತ್ರ ಐದು ವರ್ಷಗಳಿಂದ ತಯಾರಾಗುತ್ತಿದೆ ಎಂಬುದು ವಿಶೇಷ. ಚಿತ್ರದ ತಾಂತ್ರಿಕ ವಿಭಾಗದಲ್ಲಿ ಎ.ಆರ್.ರೆಹಮಾನ್ ಅವರ ಸಂಗೀತ, ಸುನಿಲ್ ಕೆ.ಎಸ್ ಅವರ ಕ್ಯಾಮೆರಾ ಕೈಚಳಕ, ರೆಸುಲ್ ಪೂಕುಟ್ಟಿ ಅವರ ಸೌಂಡ್ ಡಿಸೈನ್ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನ ಕೆಲಸವಿದೆ.

  • ಒಟಿಟಿಗೆ ಭಾರೀ ಮೊತ್ತಕ್ಕೆ ಸೇಲ್ ಆಯಿತು ಪ್ರಭಾಸ್ ನಟನೆಯ ‘ಕಲ್ಕಿ’ ಸಿನಿಮಾ

    ಒಟಿಟಿಗೆ ಭಾರೀ ಮೊತ್ತಕ್ಕೆ ಸೇಲ್ ಆಯಿತು ಪ್ರಭಾಸ್ ನಟನೆಯ ‘ಕಲ್ಕಿ’ ಸಿನಿಮಾ

    ಬಿಡುಗಡೆಗೂ ಮುನ್ನ ಪ್ರಭಾಸ್ ನಟನೆಯ ಕಲ್ಕಿ ಸಿನಿಮಾ ನೂರು ಕೋಟಿ ಕ್ಲಬ್ ಸೇರಿತಾ? ಹೌದು ಎನ್ನುತ್ತಿದೆ ಬಿಟೌನ್. ಹಿಂದಿ ಭಾಷೆಯಲ್ಲೇ ಕಲ್ಕಿ 175 ಕೋಟಿ ರೂಪಾಯಿಗೆ ಒಟಿಟಿಗೆ (OTT) ಸೇಲ್ ಆಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ದಕ್ಷಿಣದ ಭಾಷೆಗಳಿಗೂ ನೂರಾರು ಕೋಟಿ ಕೊಟ್ಟು ಖರೀದಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸಿನಿಮಾ ರಿಲಿಸ್ ಗೂ ಮುನ್ನ ದಾಖಲೆಯ ಮೊತ್ತ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ.

    ಅಂದುಕೊಂಡಂತೆ ಆಗಿದ್ದರೆ, ಕಲ್ಕಿ ಸಿನಿಮಾ ಮೇ 9ಕ್ಕೆ ಬಿಡುಗಡೆ ಆಗಬೇಕಿತ್ತು. ಈ ಮಾಹಿತಿಯನ್ನು ಸ್ವತಃ ಬಿಗ್ ಬಿ ಅಮಿತಾಭ್ ಅವರೇ ಹೇಳಿಕೊಂಡಿದ್ದರು. ಆದರೆ, ಅಂದು ಸಿನಿಮಾ ರಿಲೀಸ್ ಆಗುವುದು ಅನುಮಾನ ಎಂದು ಹೇಳಲಾಗುತ್ತಿದೆ. ಲೋಕಸಭೆ ಚುನಾವಣೆ ಕಾರಣದಿಂದಾಗಿ ಬಿಡುಗಡೆಯನ್ನು ಚುನಾವಣೆ ನಂತರ ಮಾಡಲು ನಿರ್ಧರಿಸಿದ್ದಾರಂತೆ.

    ಸಿನಿಮಾ (Kalki)  ರಿಲೀಸ್ (release) ಡೇಟ್ ಅನ್ನು ಸ್ವತಃ ಅಮಿತಾಭ್ ಅವರೇ ಮಾಡಿದ್ದರೂ, ಮುಂದೂಡಿರುವ ವಿಚಾರವನ್ನು ಚಿತ್ರತಂಡ ಇನ್ನೂ ಅಧಿಕೃತವಾಗಿ ಹೇಳಿಕೊಂಡಿಲ್ಲ. ಆದರೆ ಮುಂದೂಡುವುದು ಪಕ್ಕಾ ಎಂದೇ ಹೇಳಲಾಗುತ್ತಿದೆ.

    ಮೊನ್ನೆಯಷ್ಟೇ ಅಮಿತಾಭ್ ಬಚ್ಚನ್ ಸಿನಿಮಾ ಶೂಟಿಂಗ್ (Shooting) ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಶೂಟಿಂಗ್ ಮುಗಿಸಿ ಬಂದೆ. ಚಿತ್ರದ ಚಿತ್ರೀಕರಣ ಮುಗಿದಿದೆ. ಅಂದುಕೊಂಡಂತೆ ಮೇ 9ಕ್ಕೆ ಚಿತ್ರ ರಿಲೀಸ್ ಆಗಲಿದೆ ಎಂದು ಅವರು ಮಾಹಿತಿಯನ್ನು ಹಂಚಿಕೊಂಡಿದ್ದರು. ಇತ್ತೀಚೆಗಷ್ಟೇ ನಟ ಅಮಿತಾಭ್ ಬಚ್ಚನ್  (Amitabh Bachchan) ಅವರ ಹುಟ್ಟು ಹಬ್ಬದ (Birthday) ದಿನದಂದು ಕಲ್ಕಿ ಸಿನಿಮಾ ಟೀಮ್ ಅಮಿತಾಭ್ ಬಚ್ಚನ್ ಪಾತ್ರದ ಫಸ್ಟ್ ಲುಕ್(First Look)  ರಿಲೀಸ್ ಮಾಡಿತ್ತು. ವಿಚಿತ್ರ ವೇಷದಲ್ಲಿ ಅಮಿತಾಭ್ ಕಾಣಿಸಿಕೊಂಡಿದ್ದು ಪಾತ್ರದ ಬಗ್ಗೆ ಕುತೂಹಲ ಮೂಡಿಸಿತ್ತು.

     

    ಈ ಸಿನಿಮಾ ನಾನಾ ಕಾರಣಗಳಿಂದಾಗಿ ಕುತೂಹಲ ಮೂಡಿಸಿದೆ. ಪ್ರಭಾಸ್ (Prabhas) ನಟನೆಯ ಈ ಸಿನಿಮಾದ ಮತ್ತೊಂದು ಪೋಸ್ಟರ್ (Poster) ಮೊನ್ನೆಯಷ್ಟೇ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಪ್ರಭಾಸ್ ಭೈರವ (Bhairava) ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಜುಟ್ಟು ಬಿಟ್ಟುಕೊಂಡು ಸ್ಟೈಲಿಶ್ ಆಗಿ ಕಂಡಿದ್ದಾರೆ ಪ್ರಭಾಸ್. ಈ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

  • ರಜನಿಯ ‘ಜೈಲರ್’ ಸಿನಿಮಾದ ಎರಡು ದಿನದ ಗಳಿಕೆ 100 ಕೋಟಿ ರೂಪಾಯಿ

    ರಜನಿಯ ‘ಜೈಲರ್’ ಸಿನಿಮಾದ ಎರಡು ದಿನದ ಗಳಿಕೆ 100 ಕೋಟಿ ರೂಪಾಯಿ

    ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಮತ್ತು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಜೈಲರ್ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾ ರಿಲೀಸ್ ಆಗಿ ಕೇವಲ ಎರಡೇ ದಿನಕ್ಕೆ ಜೈಲರ್ ನೂರು ಕೋಟಿ ರೂಪಾಯಿ ಕ್ಲಬ್ ಸೇರಿದೆ. ಈ ಮೂಲಕ ಮತ್ತೆ ಸೂಪರ್ ಸ್ಟಾರ್ ಅಬ್ಬರಿಸಿದ್ದಾರೆ. ಬರೀ ಸೋಲುಗಳ ಸುಳಿಯಲ್ಲೇ ತಿರುಗುತ್ತಿದ್ದ ರಜನಿಗೆ ಜೈಲರ್ ಕೈ ಹಿಡಿದಿದೆ.

    ಜೈಲರ್ ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗಿದ್ದು, ಏಳು ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಬಹುತೇಕ ಎಲ್ಲ ರಾಷ್ಟ್ರಗಳಲ್ಲೂ ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿದೆ. ಹಾಗಾಗಿ ಮೊದಲನೇ ದಿನ 72 ಕೋಟಿ ರೂಪಾಯಿ ಬಾಚಿದ್ದರೆ, ಎರಡನೇ ದಿನದ ಅಂತ್ಯಕ್ಕೆ 100 ಕೋಟಿ ರೂಪಾಯಿ ದಾಟಿದೆ (Hundred Crore Club) ಎಂದು ಹೇಳಲಾಗುತ್ತಿದೆ. ಸಾಲು ಸಾಲು ರಜೆಗಳು  ಇರುವುದರಿಂದ ನಾಲ್ಕು ದಿನದ ಗಳಿಕೆ ಇನ್ನೂ ನೂರು ಕೋಟಿ ಆಗಲಿದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ:ಸುದೀಪ್ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಅಂಗೀಕಾರ

    ‘ಜೈಲರ್’ (Jailer) ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿತ್ತು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ‌ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್‌ ದಿಗ್ಗಜರು‌ ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸಿದ್ದ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ.

     

    ಸನ್ ಪಿಕ್ಚರ್ ನಿರ್ಮಾಣ ಮಾಡಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ (Nelson Dilip Kumar) ನಿರ್ದೇಶಿಸಿದ್ದಾರೆ. ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಶಿವರಾಜ್‌ಕುಮಾರ್ (Shivaraj Kumar) ವಿಶೇಷ ಪಾತ್ರದಲ್ಲಿ ನಟಿಸಿರೋದು ಕುತೂಹಲ ಕೆರಳಿಸಿತ್ತು. ಇನ್ನು ಬಾಲಿವುಡ್‌ ನಟ ಜಾಕಿ ಶ್ರಾಫ್, ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ (Mohanlal), ಟಾಲಿವುಡ್ ನಟ ಸುನಿಲ್, ನಾಗಬಾಬು, ನಟಿ ರಮ್ಯಾ ಕೃಷ್ಣ, ತಮನ್ನಾ ಭಾಟಿಯಾ ನಟಿಸಿದ್ದು, ಸಿನಿಪ್ರಿಯರಿಗೆ ಇವರೆಲ್ಲರನ್ನೂ ಒಂದೇ ಸಿನಿಮಾದಲ್ಲಿ ನೋಡುವ ಭಾಗ್ಯ ಸಿಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಕಬ್ಜ’ 100 ಕೋಟಿ ಕ್ಲಬ್ ಸೇರ್ಪಡೆ: ವೀಕೆಂಡ್ ನಲ್ಲಿ ಇನ್ನೂ ಹೆಚ್ಚಿದ ಕಲೆಕ್ಷನ್

    ‘ಕಬ್ಜ’ 100 ಕೋಟಿ ಕ್ಲಬ್ ಸೇರ್ಪಡೆ: ವೀಕೆಂಡ್ ನಲ್ಲಿ ಇನ್ನೂ ಹೆಚ್ಚಿದ ಕಲೆಕ್ಷನ್

    ಆರ್.ಚಂದ್ರು (R. Chandru) ನಿರ್ದೇಶನದಲ್ಲಿ ಮೂಡಿ ಬಂದ ‘ಕಬ್ಜ’ (Kabzaa) ಸಿನಿಮಾ ರಿಲೀಸ್ ಆದ ಎರಡೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದೆ. ನಿನ್ನೆ ಚಿತ್ರತಂಡವು ಪತ್ರಿಕಾಗೋಷ್ಠಿ ಮಾಡಿ ಅಧಿಕೃತವಾಗಿಯೇ ಮಾಹಿತಿಯನ್ನು ಹಂಚಿಕೊಂಡಿದೆ. ಕಬ್ಜ ನೂರು ಕೋಟಿ ಕ್ಲಬ್ (100 Crore Club) ಸೇರುತ್ತಿದ್ದಂತೆಯೇ ಚಿತ್ರೋದ್ಯಮದಲ್ಲಿ ಹುಮ್ಮಸ್ಸು ಹೆಚ್ಚಿದೆ. ಸ್ಯಾಂಡಲ್ ವುಡ್ ಅನೇಕ ಕಲಾವಿದರು ಹಾಗೂ ತಂತ್ರಜ್ಞರು ಚಿತ್ರಕ್ಕೆ ಶುಭಾಶಯಗಳನ್ನು ತಿಳಿಸಿ, ಚಂದ್ರು ಬೆನ್ನಿಗೆ ನಿಂತಿದ್ದಾರೆ.

    ಸಿನಿಮಾದ ಯಶಸ್ಸಿನ ಕುರಿತು ಮಾತನಾಡಿರುವ ಉಪೇಂದ್ರ (Upendra), ‘ಇದು ನಿರೀಕ್ಷೆಗೂ ಮೀರಿ ಬಂದ ಪ್ರತಿಕ್ರಿಯೆ. ಒಂದು ಸಿನಿಮಾ ಗೆದ್ದರೆ ಉದ್ಯಮ ಉಸಿರಾಡುತ್ತದೆ’ ಎಂದಿದ್ದಾರೆ. ಪರೋಕ್ಷವಾಗಿ ಕಬ್ಜ ಮತ್ತೆ ಚಿತ್ರೋದ್ಯಮವನ್ನು ಉಸಿರಾಡುವಂತೆ ಮಾಡಿದೆ ಎಂದು ಹೆಮ್ಮೆಯಿಂದ ಮಾತನಾಡಿದ್ದಾರೆ. ಈ ಸಿನಿಮಾದ ಗೆಲುವಿನ ಬೆನ್ನಲ್ಲೇ ಕಬ್ಜ 2 ಸಿನಿಮಾದ ಕುರಿತು ಹಲವು ಚರ್ಚೆಗಳು ನಡೆದಿರುವ ಕುರಿತು ಮಾತನಾಡಿದರು. ಇದನ್ನೂ ಓದಿ: ನಟ ಅಭಿಷೇಕ್ – ಮಹೇಶ್ ಕಾಂಬಿನೇಷನ್ ಚಿತ್ರದಲ್ಲಿ ನಟಿ ಅಮೂಲ್ಯ

    ಕೆಜಿಎಫ್, ಕಾಂತಾರ ಸಿನಿಮಾದ ನಂತರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಕಬ್ಜ ಸಖತ್ ಸದ್ದು ಮಾಡುತ್ತಿದೆ. ಆರ್.ಚಂದ್ರು ಅವರ ಆಪ್ತರ ಮಾಹಿತಿಯಂತೆ, ಹಲವು ಸಿನಿಮಾ ರಂಗಗಳಿಂದ ಚಂದ್ರು ಅವರಿಗೆ ಆಫರ್ ಕೂಡ ಬರುತ್ತಿವೆಯಂತೆ. ಅದರಲ್ಲೂ ಬಾಲಿವುಡ್ ನ ಹೆಸರಾಂತ ಸಂಸ್ಥೆಯೊಂದು ಕಬ್ಜ ಸಿನಿಮಾ ವೀಕ್ಷಿಸಿದ ನಂತರ ಚಂದ್ರು ಅವರನ್ನು ಕಾಂಟ್ಯಾಕ್ಟ್ ಮಾಡಿದೆ ಎಂದು ಹೇಳಲಾಗುತ್ತಿದೆ.

    ಕರ್ನಾಟಕದಲ್ಲೇ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕಬ್ಜ ಸಿನಿಮಾ ರಿಲೀಸ್ ಆಗಿದ್ದು, ವೀಕೆಂಡ್ ನಲ್ಲಿ ಬಹುತೇಕ ಚಿತ್ರಮಂದಿರಗಳು ಹೌಸ್ ಫುಲ್ ಪ್ರದರ್ಶನ ಕಾಣುತ್ತಿವೆ ಎಂದು ವಿತರಕ ಮೋಹನ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು, ಮತ್ತಷ್ಟು ಪ್ರದರ್ಶನಗಳ ಬೇಡಿಕೆ ಬರುತ್ತಿದೆ ಎಂದು ಅವರು ಹೇಳಿದರು. ಕಳೆದ ಮೂರು ದಿನಗಳಿಂದ ಭಾರತದಾದ್ಯಂತ ಕಬ್ಜ ಕ್ರೇಜ್ ಕ್ರಿಯೇಟ್ ಮಾಡಿದ್ದು, ಕನ್ನಡದ ಮತ್ತೊಂದು ಚಿತ್ರ ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಿದೆ.

  • ಬಾಯ್ಕಾಟ್ ನಡುವೆಯೂ 100 ಕೋಟಿ ಕ್ಲಬ್ ಸೇರಿದ ‘ಲಾಲ್ ಸಿಂಗ್ ಚಡ್ಡಾ’

    ಬಾಯ್ಕಾಟ್ ನಡುವೆಯೂ 100 ಕೋಟಿ ಕ್ಲಬ್ ಸೇರಿದ ‘ಲಾಲ್ ಸಿಂಗ್ ಚಡ್ಡಾ’

    ಬಾಲಿವುಡ್ ನಟ ಆಮೀರ್ ಖಾನ್ ನಟಿಸಿ, ನಿರ್ಮಾಣ ಮಾಡಿರುವ ಲಾಲ್ ಸಿಂಗ್ ಚಡ್ಡಾ, ಕೊನೆಗೂ 100 ಕೋಟಿ ಕ್ಲಬ್ ಸೇರುವ ಮೂಲಕ ನಿಟ್ಟುಸಿರು ಬಿಟ್ಟಿದೆ. ಆಮೀರ್ ನಟನೆಯ ಹಿಂದಿನ ಸಿನಿಮಾಗಳಿಗೆ ಹೋಲಿಸಿದರೆ, ಇದು ಕಡಿಮೆ ಬಾಕ್ಸ್ ಆಫೀಸ್ ರಿಪೋರ್ಟ್ ಎಂದು ಹೇಳಲಾಗಿದ್ದು, ಬಾಯ್ಕಾಟ್ ನಡುವೆಯೇ ಅದು ನೂರು ಕೋಟಿ ಕ್ಲಬ್ ಸೇರಿದ್ದು ಸಾಧನೆ ಎನ್ನಲಾಗುತ್ತಿದೆ.

    ಸಿನಿಮಾ ಬಿಡುಗಡೆ ಮುನ್ನವೇ ಬಾಯ್ಕಾಟ್ ಅಭಿಯಾನ ಶುರು ಮಾಡಿದ್ದರು ಹಿಂದೂಪರ ಸಂಘಟನೆಯ ಕಾರ್ಯಕರ್ತರು. ದೇಶದ ಪರವಾಗಿ ಮಾತನಾಡದ ಆಮೀರ್ ಖಾನ್ ಸಿನಿಮಾವನ್ನು ನೋಡಬಾರದು ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಶುರು ಮಾಡಿದ್ದರು. ದೇಶದಲ್ಲಿ ನೆಮ್ಮದಿಯಾಗಿ ಬದುಕುವುದಕ್ಕೆ ಆಗುವುದಿಲ್ಲ ಎಂದು ಆಮೀರ್ ಖಾನ್ ಹೇಳಿದ್ದರಿಂದ, ಸಿನಿಮಾ ಸೋಲಿಸಿ ಅವರನ್ನು ದೇಶದಿಂದ ಓಡಿ ಹೋಗುವಂತೆ ಮಾಡಿ ಎಂದು ಹಲವರು ಕಾಮೆಂಟ್ ಮಾಡಿದ್ದರು. ಇದನ್ನೂ ಓದಿ:ಬಾಲಿವುಡ್ ರಾಧೆ ಆಲಿಯಾ ಭಟ್ ಸಂಭಾವನೆ ಕೇಳಿದ್ರೆ ಶಾಕ್ ಆಗುತ್ತೀರಾ!

    ಬಾಯ್ಕಾಟ್ ಬಿಸಿ ಜೋರಾಗುತ್ತಿದ್ದಂತೆಯೇ ಅದನ್ನು ತಿಳಿಗೊಳಿಸುವಂತಹ ಪ್ರಯತ್ನವನ್ನೂ ಆಮೀರ್ ಮಾಡಿದ್ದರು. ತಮಗೆ ದೇಶದ ಮೇಲೆ ಅಪಾರ ಗೌರವ ಇದೆ ಎಂದು ಹೇಳಿದ್ದರು. ಈ ಬಾಯ್ಕಾಟ್ ಬಿಟ್ಟು ಸಿನಿಮಾ ನೋಡುವಂತೆ ಮನವಿ ಮಾಡಿದ್ದರು. ಆದರೆ, ನೋಡುಗರು ಆ ಮನವಿಯನ್ನು ಪುರಸ್ಕರಿಸಲೇ ಇಲ್ಲ. ಹಾಗಾಗಿ ಸಿನಿಮಾ ಶುರುವಿನಿಂದಲೇ ಬಾಕ್ಸ್ ಆಫೀಸಿನಲ್ಲಿ ಕುಂಟುತ್ತಲೇ ಸಾಗಿತ್ತು. ಇದೀಗ ನೂರು ಕೋಟಿ ಕ್ಲಬ್ ಸೇರುವ ಮೂಲಕ ಆಮೀರ್ ಗೌರವ ಉಳಿಸಿದೆ.

    Live Tv
    [brid partner=56869869 player=32851 video=960834 autoplay=true]