Tag: ನೃತ್ಯ ಸಂಯೋಜಕ

  • ತೆಲುಗಿನ ನೃತ್ಯ ಸಂಯೋಜಕ ರಾಕೇಶ್ ಮಾಸ್ಟರ್ ವಿಧಿವಶ

    ತೆಲುಗಿನ ನೃತ್ಯ ಸಂಯೋಜಕ ರಾಕೇಶ್ ಮಾಸ್ಟರ್ ವಿಧಿವಶ

    ಟಾಲಿವುಡ್ (Tollywood) ಚಿತ್ರರಂಗದ ನೃತ್ಯ ಸಂಯೋಜಕ (Choreographer) ರಾಕೇಶ್ ಮಾಸ್ಟರ್ (Rakesh Master) ಅವರು ಜೂನ್ 18ರಂದು ನಿಧನರಾಗಿದ್ದಾರೆ. ಭಾನುವಾರ ಸಂಜೆ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸನ್‌ಸ್ಟ್ರೋಕ್ ಆದ ಕಾರಣದಿಂದ ಇಹಲೋಕ ತ್ಯಜಿಸಿದ್ದಾರೆ.

    ಮಾಸ್ಟರ್ ರಾಕೇಶ್ ಅವರು 1500ಕ್ಕೂ ಹೆಚ್ಚು ಸಿನಿಮಾಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಸಾಕಷ್ಟು ಸ್ಟಾರ್ ನಟ-ನಟಿಯರ ಜೊತೆ ಕೆಲಸ ಮಾಡಿದ್ದಾರೆ. ಈ ನಡುವೆ ಅನಾರೋಗ್ಯ ಹೆಚ್ಚಾದ ಕಾರಣ ರಾಕೇಶ್ ಮಾಸ್ಟರ್ ಅವರನ್ನು ಭಾನುವಾರ (ಜೂನ್ 18) ಮಧ್ಯಾಹ್ನ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಯಿತು. ರಾಕೇಶ್ ಮಧುಮೇಹ ರೋಗಿಯಾಗಿದ್ದರು. ಅವರು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ವರದಿಯ ಪ್ರಕಾರ, ರಾಕೇಶ್ ಮಾಸ್ಟರ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇನ್ನು ರಾಕೇಶ್ ಮಾಸ್ಟರ್ ಅವರಿಗೆ 53 ವರ್ಷ ವಯಸ್ಸಾಗಿತ್ತು. ಇದನ್ನೂ ಓದಿ:ಅಪ್ಪ- ಅಮ್ಮನ ಕ್ಯೂಟ್ ಲವ್‌ ಸ್ಟೋರಿ ಹಂಚಿಕೊಂಡು ಮದುವೆ ವಾರ್ಷಿಕೋತ್ಸವಕ್ಕೆ ರಾಧಿಕಾ ವಿಶ್‌ ‌

    ಅನಾರೋಗ್ಯ ಸಮಸ್ಯೆಯಿಂದ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಸಿನಿಮಾಗಳಲ್ಲಿ ತೊಡಗಿಸಿಕೊಳ್ಳುತ್ತಿರಲಿಲ್ಲ. ಆದರೆ ರಾಕೇಶ್ ಮಾಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಇತ್ತೀಚಿನ ದಿನಗಳಲ್ಲಿ ಫೇಮಸ್ ಆಗಿದ್ದರು. ವಿಚಿತ್ರವಾಗಿ ಹೇಳಿಕೆಗಳನ್ನು ನೀಡುತ್ತಿದ್ದ ರಾಕೇಶ್ ಮಾಸ್ಟರ್ ವೈರಲ್ ಆಗಿದ್ದರು. ಹೀಗೆ ವಿಭಿನ್ನವಾಗಿ ನಡೆದುಕೊಳ್ಳುತ್ತಿದ್ದ ಕಾರಣ ಟ್ರೋಲಿಗರಿಗೆ ರಾಕೇಶ್ ಮಾಸ್ಟರ್ ಫೇವರಿಟ್ ಆಗಿದ್ದರು.

    ತೆಲುಗು ಚಿತ್ರರಂಗದ ಪ್ರತಿಭಾನ್ವಿತ ನೃತ್ಯ ಸಂಯೋಜಕ ರಾಕೇಶ್ ಮಾಸ್ಟರ್ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ. 1500ಕ್ಕೂ ಹೆಚ್ಚು ಸಿನಿಮಾಗೆ ಕೆಲಸ ಮಾಡಿರೋ ರಾಕೇಶ್‌ಗೆ ನಿಧನಕ್ಕೆ ಅಭಿಮಾನಿಗಳು ಕೂಡ ಸಂತಾಪ ಸೂಚಿಸಿದ್ದಾರೆ.

  • ಪೋರ್ನ್ ವಿಡಿಯೋ ನೋಡುವಂತೆ ಒತ್ತಾಯ – ಬಾಲಿವುಡ್ ಡ್ಯಾನ್ಸ್ ಮಾಸ್ಟರ್ ವಿರುದ್ಧ ದೂರು

    ಪೋರ್ನ್ ವಿಡಿಯೋ ನೋಡುವಂತೆ ಒತ್ತಾಯ – ಬಾಲಿವುಡ್ ಡ್ಯಾನ್ಸ್ ಮಾಸ್ಟರ್ ವಿರುದ್ಧ ದೂರು

    ಮುಂಬೈ: ಬಾಲಿವುಡ್‍ನ ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ಅವರ ವಿರುದ್ಧ 33 ವರ್ಷದ ಮಹಿಳೆ ಕಿರುಕುಳದ ಆರೋಪ ಮಾಡಿದ್ದು, ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (ಎನ್‍ಸಿಡಬ್ಲ್ಯು)ಗೆ ಪತ್ರ ಬರೆದು ದೂರು ನೀಡಿದ್ದಾರೆ.

    ರಾಷ್ಟ್ರೀಯ ಮಹಿಳಾ ಆಯೋಗದ ಜೊತೆಗೆ ಅಂಬೋಲಿ ಪೊಲೀಸ್ ಠಾಣೆಯಲ್ಲೂ ದೂರು ನೀಡಿದ್ದಾರೆ. ಆಚಾರ್ಯ ಅವರ ಕಚೇರಿಗೆ ಹೋದಾಗಲೆಲ್ಲಾ ಪೋರ್ನ್ ವಿಡಿಯೋಗಳನ್ನು ನೋಡುವಂತೆ ಒತ್ತಾಯಿಸುತ್ತಿದ್ದರು. ಅಲ್ಲದೇ ತನಗೆ ಬರುವ ಆದಾಯದಲ್ಲಿ ಕಮಿಷನ್ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಮುಂಬೈನ ಅಂಧೇರಿಯಲ್ಲಿ ಭಾನುವಾರ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ನೃತ್ಯ ಸಂಯೋಜಕರ ಸಂಘ (ಐಎಫ್‍ಟಿಸಿಎ)ದ ಸಮಾರಂಭ ನಡೆದಿತ್ತು. ಅಲ್ಲಿ ಗಣೇಶ್ ಆಚಾರ್ಯ ಮತ್ತು ಇಬ್ಬರು ಮಹಿಳೆಯರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೇ ಗಣೇಶ್ ಆಚಾರ್ಯ ಜೊತೆಗೆ ಜಯಶ್ರೀ ಕೆಲ್ಕರ್ ಮತ್ತು ಪ್ರೀತಿ ಲಾಡ್ ಎಂಬವರು ಹಲ್ಲೆ ಮಾಡಿರುವುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ನೃತ್ಯ ಸಂಯೋಜಕ ಸಂಘದ ಸದಸ್ಯೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಗಣೇಶ್ ಆಚಾರ್ಯ ಆಗಾಗ ಕಚೇರಿಗೆ ಕರೆಯುತ್ತಿದ್ದರು. ಜನವರಿ 26 ರಂದು ಕಚೇರಿಗೆ ಹೋದಾಗ ನೃತ್ಯ ಸಂಯೋಜಕ ಸಂಘದಲ್ಲಿ ಸದಸ್ಯತ್ವ ರದ್ದು ಮಾಡಿಸಿದ್ದಾರೆ. ಅಲ್ಲದೇ ತಮ್ಮ ತಂಡದ ಸದಸ್ಯ ಜಯಶ್ರೀ ಕೇಲ್ಕರ್ ಅವರನ್ನು ಕರೆದು ನನಗೆ ಹೊಡೆಯುವಂತೆ ಹೇಳಿದ್ದರು ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    ಸದ್ಯಕ್ಕೆ ಪೊಲೀಸರು ಗಂಭೀರವಲ್ಲದ ಅಪರಾಧ (ಎನ್‍ಸಿ) ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಹಿಂದೆ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ ಅವರು ಗಣೇಶ್ ಆಚಾರ್ಯ ವಿರುದ್ಧ ಕಿಡಿ ಕಾರಿದ್ದರು. ನೃತ್ಯಗಾರರನ್ನು ದುರಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಬಹಿರಂಗವಾಗಿ ಆರೋಪಿಸಿದ್ದರು.

    ಗಣೇಶ್ ಆಚಾರ್ಯ ಅವರು ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾದ ಹಿಂದಿ ‘ಗಲಿ ಗಲಿ ಮೇ’ ಹಾಡು, ಅಲ್ಲದೇ ಸುದೀಪ್ ಅಭಿನಯದ ‘ಪೈಲ್ವಾನ್’ ಚಿತ್ರದ ಇಂಟ್ರೋ ಹಾಡಿಗೆ ಗಣೇಶ್ ನೃತ್ಯ ಸಂಯೋಜನ ಮಾಡಿದ್ದಾರೆ. ಈ ಮೂಲಕ ಸ್ಯಾಂಡಲ್‍ವುಡ್‍ಗೂ ಗಣೇಶ್ ಪರಿಚಯರಾಗಿದ್ದಾರೆ.