Tag: ನೃಪತುಂಗ ರಸ್ತೆ

  • ಹರತಾಳು ಹಾಲಪ್ಪ ಬೀಗರ ಕಾರಿಗೆ ಇಬ್ಬರು ಬಲಿ- ನಾಲ್ವರಿಗೆ ಗಾಯ, ಚಾಲಕ ವಶಕ್ಕೆ

    ಹರತಾಳು ಹಾಲಪ್ಪ ಬೀಗರ ಕಾರಿಗೆ ಇಬ್ಬರು ಬಲಿ- ನಾಲ್ವರಿಗೆ ಗಾಯ, ಚಾಲಕ ವಶಕ್ಕೆ

    ಬೆಂಗಳೂರು: ಶಾಸಕ ಹರತಾಳು ಹಾಲಪ್ಪ (Halappa Harathalu) ಬೀಗರ ಕಾರಿಗೆ ಇಬ್ಬರು ಅಮಾಯಕರು ಬಲಿಯಾಗಿದ್ದಾರೆ. ಸೋಮವಾರ ನೃಪತುಂಗ ರಸ್ತೆಯಲ್ಲಿ ಸರಣಿ ಅಪಘಾತ ನಡೆದಿತ್ತು.

    ಇನ್ನೋವಾ ಕಾರ್ (Innova Car) ಅತಿವೇಗವಾಗಿ ಚಾಲನೆ ಮಾಡಿಕೊಂಡು ಬಂದ ಡ್ರೈವರ್ ಅಪಘಾತವೆಸಗಿ ಇಬ್ಬರ ಜೀವ ಬಲಿ ಪಡೆದಿದ್ದ. ಮಜೀದ್ ಖಾನ್ ಮತ್ತು ಅಯ್ಯಪ್ಪ ಎಂಬವರು ತಮ್ಮದಲ್ಲದ ತಪ್ಪಿಗೆ ಪ್ರಾಣ ಬಿಟ್ರೆ, ರಿಯಾಜ್ ಪಾಷಾ, ಮೊಹಮದ್ ರಿಯಾಜ್, ಮೊಹಮದ್ ಸಲೀಂ, ಮತ್ತು ಶೇರ್ ಗಿಲಾನಿ ಗಾಯಾಳುಗಳಾಗಿ ಆಸ್ಪತ್ರೆ ಸೇರಿದ್ದಾರೆ.

    ಇಷ್ಟಕ್ಕೆಲ್ಲಾ ಕಾರಣ ಶಾಸಕ ಪಾಸ್ ಹೊಂದಿದ್ದ ಇನ್ನೋವಾ ಕಾರ್. ಶಾಸಕ ಹರತಾಳು ಹಾಲಪ್ಪರ ಪಾಸ್ ಕಾರ್‍ನಲ್ಲಿ ಅಂಟಿಸಲಾಗಿತ್ತು. ಅಸಲಿಗೆ ಕೆಎ 50 ಎಂಎ 6600 ನಂಬರಿನ ಇನ್ನೋವಾ ಕಾರ್ ಯಲಹಂಕದ ರಾಮು ಸುರೇಶ್ ಎಂಬವರ ಹೆಸರಲ್ಲಿದೆ. ಈ ರಾಮು ಸುರೇಶ್ ಶಾಸಕ ಹರತಾಳು ಹಾಲಪ್ಪರ ಬೀಗರು ಎನ್ನಲಾಗ್ತಿದೆ.

    ಡ್ರೈವರ್ ಮೋಹನ್ ರ್ಯಾಶ್ ಡ್ರೈವಿಂಗ್ ಮಾಡಿ ಆಕ್ಸಿಡೆಂಟ್ ಮಾಡಿದ್ದ. ವಿಚಾರ ಏನಂದ್ರೆ ಹೀಗೆ ಎಂಎಲ್‍ಎ ಪಾಸ್‍ಗಳನ್ನ ಯಾರು ಬೇಕಾದ್ರು ಬಳಸಬಹುದಾ..? ಶಾಸಕರ ಪಾಸ್ ಬೀಗರ ವೆಹಿಕಲ್ ಗೆ ಹೇಗೆ ಬಂತು..? ಹೀಗೆ ನೆಂಟ್ರು, ಹಿಂಬಾಲಕರು ಅಂತಾ ಎಲ್ರಿಗೂ ಪಾಸ್ ಕೊಡ್ತಿದ್ರೆ ನಿಯಮಗಳಿಲ್ವಾ.. ಒಂದೇ ಪಾಸನ್ನ ಕಲರ್ ಝೆರಾಕ್ಸ್ ಮಾಡಿಸಿ ಯಾರು ಬೇಕಾದ್ರು ಬಳಸಬಹುದಾ ಅನ್ನೊ ಪ್ರಶ್ನೆಯನ್ನ ಸಾರ್ವಜನಿಕರು ಕೇಳ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಂದಿನಿಂದ 2 ತಿಂಗಳು ನೃಪತುಂಗ ರಸ್ತೆ ಬಂದ್

    ಇಂದಿನಿಂದ 2 ತಿಂಗಳು ನೃಪತುಂಗ ರಸ್ತೆ ಬಂದ್

    ಬೆಂಗಳೂರು: ನಗರದ ನೃಪತುಂಗ ರಸ್ತೆ ಇಂದಿನಿಂದ ಎರಡು ತಿಂಗಳು ಬಂದ್ ಆಗಲಿದೆ.

    ನೃಪತುಂಗ ರಸ್ತೆ ಅಂದ್ರೆ ಸದಾ ಗಿಜಿಗುಡುವ ಮಾರ್ಗ. ವಾಹನಗಳ ಸಂಚಾರ ಆಮೆ ಚಲನಯನ್ನೇ ಅನುಸರಿಸುತ್ತೆ. ಕೆಆರ್ ಸರ್ಕಲ್‍ನಿಂದ ಹಡ್ಸನ್ ಸರ್ಕಲ್ ತಲುಪಲು ಸಾಕಷ್ಟು ಸಮಯ ತೆಗೆದುಕೊಳ್ತಿದ್ದು, ಆರ್‍ಬಿಐ, ಡಿಜಿಪಿ ಕಚೇರಿ, ಲೋಕೋಪಯೋಗಿ ಕಚೇರಿಗಳು ಇದೇ ರಸ್ತೆಯಲ್ಲಿವೆ. ಇವತ್ತಿನಿಂದ ಈ ರಸ್ತೆ ಬಂದ್ ಮಾಡಲಾಗ್ತಿದ್ದು ಟ್ರಾಫಿಕ್ ಸಮಸ್ಯೆ ಕಟ್ಟಿಟ್ಟ ಬುತ್ತಿ.

    ನೃಪತುಂಗ ರಸ್ತೆಯನ್ನ ಟೆಂಡರ್ ಶ್ಯೂರ್ ಯೋಜನೆಯಡಿ ಅಭಿವೃದ್ಧಿ ಮಾಡಲು ಕಾಮಗಾರಿ ಆರಂಭವಾಗಿದ್ದು, 2 ತಿಂಗಳ ಕಾಲ ಮುಚ್ಚಲಾಗ್ತಿದೆ. 14 ಮೀಟರ್ ವಿಸ್ತೀರ್ಣದ ರಸ್ತೆಯಲ್ಲಿ ಮೊದಲ ಹಂತದಲ್ಲಿ 7 ಮೀಟರ್ ಕಾಮಗಾರಿ ನಡೆಸಲಾಗ್ತಿದೆ. ಉಳಿದರ್ಧ ರಸ್ತೆಯಲ್ಲಿ ಕೇವಲ ಸರ್ಕಾರಿ ಬಸ್‍ಗಳು ಹಾಗು ಸರ್ಕಾರಿ ವಾಹನಗಳಿಗೆ ಮಾತ್ರ ಅವಕಾಶ ನಿಡಲಾಗಿದೆ.

    ಸಂಚಾರಿ ಪೊಲೀಸರು ಸಂಚಾರ ದಟ್ಟಣೆಯಾಗದಂತೆ ನೋಡಿಕೊಳ್ಳಲು ಬೇರೆ ಮಾರ್ಗ ಕಂಡುಕೊಂಡಿದ್ದಾರೆ. ವಾಹನ ಸವಾರರು ಕೆಆರ್ ಸರ್ಕಲ್‍ನಿಂದ ಕಬ್ಬನ್ ಪಾರ್ಕ್ ಪ್ರವೇಶಿಸಿ ಕೇಂದ್ರ ಗ್ರಂಥಾಲಯದ ಬಳಿ ಬಲಕ್ಕೆ ತಿರುವು ಪಡೆದು ಕಾರ್ಪೊರೇಷನ್ ಸರ್ಕಲ್‍ಗೆ ಎಂಟ್ರಿಯಾಗಬಹುದು. ಕೇಂದ್ರ ಗ್ರಂಥಾಲಯ ರಸ್ತೆಯನ್ನ ಏಕಮುಖ ಸಂಚಾರಗೊಳಿಸಲಾಗಿದ್ದು, ಗ್ರಂಥಾಲಯದ ರಸ್ತೆಯಿಂದ ಹೈಕೋರ್ಟ್ ಕಡೆಗೆ ಒನ್‍ವೇ ಮಾಡಲಾಗಿದೆ.

    ಸದಾ ವಾಹನಗಳಿಂದ ತುಂಬಿರುತ್ತಿದ್ದ ರಸ್ತೆ ಇಂದಿನಿಂದ ಬಿಕೋ ಎನ್ನಲಿದೆ. ವಾಹನ ಸವಾರರಿಗೆ ಕಿರಿಕಿರಿ ಶುರುವಾಗಲಿದೆ. ಬಿಬಿಎಂಪಿ ಅಧಿಕಾರಿಗಳು ನಿಗಧಿತ ಸಮಯದಲ್ಲಿ ಕಾಮಗಾರಿ ಮುಗಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ರೆ ಉತ್ತಮ.