Tag: ನೃಪೇಂದ್ರ ಮಿಶ್ರಾ

  • ಅಯೋಧ್ಯೆ ರಾಮಮಂದಿರದಲ್ಲಿ ರಾಜರಾಮ ‘ದರ್ಬಾರ್’ ಈ ವರ್ಷದ ಅಂತ್ಯದಲ್ಲಿ ಪೂರ್ಣ

    ಅಯೋಧ್ಯೆ ರಾಮಮಂದಿರದಲ್ಲಿ ರಾಜರಾಮ ‘ದರ್ಬಾರ್’ ಈ ವರ್ಷದ ಅಂತ್ಯದಲ್ಲಿ ಪೂರ್ಣ

    ಅಯೋಧ್ಯೆ (ಉತ್ತರ ಪ್ರದೇಶ): ರಾಮಲಲ್ಲಾನ (Ram Lalla) ಪ್ರಾಣ ಪ್ರತಿಷ್ಠಾಪನೆ ನೆರವೇರಿದ ಬಳಿಕ ಈಗ ರಾಮಮಂದಿರ (Ram Mandir) ನಿರ್ಮಾಣ ಕಾಮಗಾರಿ ಕಾರ್ಯ ಪುನರ್‌ ಆರಂಭಗೊಂಡಿದೆ.

    ಅಯೋಧ್ಯೆ (Ayodhya) ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮಾತನಾಡಿ, ದೇವಾಲಯದಲ್ಲಿ ಮತ್ತೊಮ್ಮೆ ನಿರ್ಮಾಣ ಕಾರ್ಯ ಆರಂಭವಾಗಿದೆ. ‘ಪಾರ್ಕೋಟ’ ಕಾಮಗಾರಿ ಪೂರ್ಣಗೊಳ್ಳಬೇಕಿದೆ. 795 ಮೀಟರ್‌ನ ‘ಪರಿಕ್ರಮ’ ಗೋಡೆಯ ಕಾಮಗಾರಿ ಪೂರ್ಣಗೊಳ್ಳಲಿದೆ. ಇದಲ್ಲದೆ, ದೇವಾಲಯದ ಕೆಳಗಿನ ಸ್ತಂಭದ ಮೇಲೆ ಪ್ರತಿಮಾಶಾಸ್ತ್ರದ ಕಾರ್ಯವನ್ನು ಸಹ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 25 ಲಕ್ಷ ಜನರಿಂದ ಬಾಲಕ ರಾಮನ ದರ್ಶನ – 11 ಕೋಟಿ ರೂ. ಕಾಣಿಕೆ ಸಂಗ್ರಹ

    ಮೊದಲ ಮತ್ತು ಎರಡನೇ ಮಹಡಿಯಲ್ಲಿ ರಾಜಾರಾಮನ ‘ದರ್ಬಾರ್’ ಕೆಲಸವು ಈಗ ಏಕಕಾಲದಲ್ಲಿ ಪ್ರಾರಂಭವಾಗಲಿದೆ. ಇದು ಡಿಸೆಂಬರ್ 2024 ರಲ್ಲಿ ಅದು ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.

    ಜ.22 ರಂದು ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಜರುಗಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶಾಸ್ತ್ರೋಸ್ತವಾಗಿ ಬಾಲಕ ರಾಮ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಇದನ್ನೂ ಓದಿ: ರಾಮಲಲ್ಲಾ ಮೂರ್ತಿಯ ಕಣ್ಣುಗಳನ್ನ ಕೇವಲ 20 ನಿಮಿಷದಲ್ಲಿ ಕೆತ್ತಿದ್ರಂತೆ ಶಿಲ್ಪಿ ಯೋಗಿರಾಜ್‌

    ಈಗಾಗಲೇ ರಾಮಮಂದಿರದ 1ನೇ ಮಹಡಿ ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಎರಡು ಮಹಡಿ ಕಾಮಗಾರಿ ನಡೆಯಬೇಕಿದೆ. 2025 ರ ವೇಳೆಗೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ.

  • ಜ.22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ನಿರೀಕ್ಷೆ: ನೃಪೇಂದ್ರ ಮಿಶ್ರಾ

    ಜ.22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ನಿರೀಕ್ಷೆ: ನೃಪೇಂದ್ರ ಮಿಶ್ರಾ

    ಲಕ್ನೋ: ಅಯೋಧ್ಯೆ ರಾಮ ಮಂದಿರದ (Ram Mandir) ನೆಲ ಮಹಡಿಯ ನಿರ್ಮಾಣ ಕಾಮಗಾರಿ ಡಿಸೆಂಬರ್‌ ಅಂತ್ಯಕ್ಕೆ ಮುಕ್ತಾಯವಾಗಲಿದ್ದು, ಜನವರಿ 22 ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುವ ನಿರೀಕ್ಷೆ ಇದೆ ಎಂದು ದೇವಾಲಯ ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ (Nripendra Mishra) ತಿಳಿಸಿದ್ದಾರೆ.

    ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮುಂದಿನ ವರ್ಷ ಜನವರಿ 20 ರಿಂದ 24 ರ ನಡುವೆ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾಗವಹಿಸಲಿದ್ದಾರೆ. ಪ್ರತಿಷ್ಠಾಪನೆಯ ಅಂತಿಮ ದಿನಾಂಕವನ್ನು ಮೋದಿ ಅವರಿಗೆ ಇನ್ನೂ ತಿಳಿಸಬೇಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಹೆಚ್ಚಿದ ಪ್ರತಿಭಟನೆಯ ಕಾವು – ಮತ್ತೆ ಇಂಟರ್‌ನೆಟ್ ಸ್ಥಗಿತ

    ಜನವರಿ 14 ರಂದು ಮಕರ ಸಂಕ್ರಾಂತಿಯ ನಂತರ ರಾಮಲಲ್ಲಾನ ಪವಿತ್ರೀಕರಣವನ್ನು ಪ್ರಾರಂಭಿಸಲು ಮಂದಿರ ಟ್ರಸ್ಟ್ ನಿರ್ಧರಿಸಿದೆ. ಅದರ ನಂತರ ರಾಮಲಲ್ಲಾನ ‘ಪ್ರಾಣ ಪ್ರತಿಷ್ಠಾಪನಾ’ 10 ದಿನಗಳ ಆಚರಣೆ ನಡೆಯಲಿದೆ.

    ಜೂನ್‌ನಲ್ಲಿ ರಾಮ ಮಂದಿರ ಟ್ರಸ್ಟ್ ಸದಸ್ಯ ಮಿಶ್ರಾ ಅವರು, ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆಯ ನಂತರ ಮುಂದಿನ ವರ್ಷ ಜನವರಿ 24 ರಂದು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಭಕ್ತರಿಗೆ ತೆರೆಯುವ ಸಾಧ್ಯತೆಯಿದೆ ಎಂದು ಹೇಳಿದ್ದರು. ಇದನ್ನೂ ಓದಿ: ನನ್ನನ್ನು ಥಳಿಸಿ ಪಿಎಫ್‍ಐ ಅಂತ ಬರೆದಿದ್ದಾರೆ – ಕಥೆ ಕಟ್ಟಿದ ಯೋಧ ಅರೆಸ್ಟ್!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 2 ಸಾವಿರ ರೂ. ನೋಟು ಮೋದಿಗೆ ಇಷ್ಟವಿರಲಿಲ್ಲ – ಸಭೆಯ ಮಾಹಿತಿ ರಿವೀಲ್‌ ಮಾಡಿದ ನೃಪೇಂದ್ರ ಮಿಶ್ರಾ

    2 ಸಾವಿರ ರೂ. ನೋಟು ಮೋದಿಗೆ ಇಷ್ಟವಿರಲಿಲ್ಲ – ಸಭೆಯ ಮಾಹಿತಿ ರಿವೀಲ್‌ ಮಾಡಿದ ನೃಪೇಂದ್ರ ಮಿಶ್ರಾ

    ನವದೆಹಲಿ: ನರೇಂದ್ರ ಮೋದಿಯವರಿಗೆ (PM Narendra Modi) 2 ಸಾವಿರ ರೂ. ನೋಟುಗಳನ್ನು ಚಲಾವಣೆಗೆ ತರಲು ಇಷ್ಟವಿರಲಿಲ್ಲ ಎಂದು ಪ್ರಧಾನಿಯವರ ಮಾಜಿ ಪ್ರಧಾನ ಕಾರ್ಯದರ್ಶಿ ನೃಪೇಂದ್ರ ಮಿಶ್ರಾ (Nripendra Misra) ಹೇಳಿದ್ದಾರೆ.

    2016ರ ನವೆಂಬರ್‌ 8 ರಂದು 500, 1 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ (Demonetisation) ಬಳಿಕ 2 ಸಾವಿರ ರೂ. (Rs 2,000 Notes) ನೋಟು ಬಿಡುಗಡೆ ಮಾಡಲು ಮೋದಿಯವರಿಗೆ ಇಷ್ಟವಿರಲಿಲ್ಲ. ಆದರೆ ನೋಟು ನಿಷೇಧ ಚರ್ಚೆಯಲ್ಲಿ ಅಧಿಕಾರಿಗಳ ಸಲಹೆಯನ್ನು ಒಪ್ಪಿದ ಬಳಿಕ ಹೊಸ ನೋಟು ಬಿಡುಗಡೆಗೆ ಸಹಮತ ಸೂಚಿಸಿದರು ಎಂದು ಮಾಧ್ಯಮವೊಂದಕ್ಕೆ ತಿಳಿಸಿದರು.

    ಸಭೆಯಲ್ಲಿ ಏನಾಗಿತ್ತು?
    ಹಣದ ತುರ್ತು ಅಗತ್ಯವನ್ನು ಪೂರೈಸಲು 2000 ರೂ ಮುಖಬೆಲೆಯ ನೋಟು ಬಿಡುಗಡೆಯ ಪ್ರಸ್ತಾಪವನ್ನು ಅಧಿಕಾರಿಗಳು ಮುಂದಿಟ್ಟರು. ಈ ಪ್ರಸ್ತಾಪಕ್ಕೆ ಮೋದಿ ಬಡವರು ಮತ್ತು ಮಧ್ಯಮ ವರ್ಗದ ಜನರು 2000 ರೂ. ಮುಖಬೆಲೆಯ ನೋಟುಗಳನ್ನು ಬಳಸುವುದಿಲ್ಲ. ಅವರು ಹೆಚ್ಚಾಗಿ 100 ರೂ. ಮತ್ತು 500 ರೂ. ನೋಟು ಬಳಸುತ್ತಾರೆ. ಹೀಗಾಗಿ ಬಡವರಿಗೆ ತೊಂದರೆಯಾಗುವ ನೋಟುಗಳ ಬಿಡುಗಡೆಗೆ ತಮ್ಮ ಆಕ್ಷೇಪ ಇದೆ ಎಂದಿದ್ದರು. ಇದನ್ನೂ ಓದಿ: 2000 ರೂ.ಗೆ ಗುಡ್‌ಬೈ – ಗೊಂದಲ ಬೇಡ, ನಿಮ್ಮ ಹಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

    ಮೋದಿ ಆಕ್ಷೇಪಕ್ಕೆ ಆಪ್ತ ತಂಡ ಇದು ತಾತ್ಕಾಲಿಕ ಕ್ರಮ ಅಷ್ಟೇ ಎಂದು ಮನವರಿಕೆ ಮಾಡಿಕೊಟ್ಟಿತು. ಹೀಗಾಗಿ ತಮ್ಮ ತಂಡದ ಸಲಹೆ ಅನ್ವಯ ತಂಡದ ನಾಯಕನಾಗಿ ಅವರು ಈ ನಿರ್ಧಾರ ಒಪ್ಪಿಕೊಂಡರು ಎಂದು ಮಿಶ್ರಾ ಹೇಳಿದ್ದಾರೆ.

     

    ಹಿಂದೆ ನರೇಂದ್ರ ಮೋದಿಯವರ 70ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪತ್ರಿಕೆಗೆ ಲೇಖನ ಬರೆದಿದ್ದ ನೃಪೇಂದ್ರ ಮಿಶ್ರಾ ಅಪನಗದೀಕರಣ ಸಿದ್ಧತೆಯ ವೇಳೆ 1 ಸಾವಿರ ರೂ. ನೋಟು ನಿಷೇಧಿಸಿದ ಬಳಿಕ 2 ಸಾವಿರ ರೂ. ನೋಟು ಮುದ್ರಿಸಬೇಕೆಂಬ ಸಲಹೆ ಇಷ್ಟವಾಗಿರಲಿಲ್ಲ. ಆದರೆ ಹಣದ ಕೊರತೆ ನೀಗಿಸಲು ಅನಿವಾರ್ಯವಾಗಿ 2 ಸಾವಿರ ರೂ. ಮುದ್ರಿಸಬೇಕೆಂದು ಸಲಹೆ ನೀಡಿದ ಬಳಿಕ ಕೊನೆಗೆ ಮೋದಿ ಒಪ್ಪಿಕೊಂಡಿದ್ದರು ಎಂದು ಅವರು ಬರೆದಿದ್ದರು.

    ಈ ವಿಚಾರದ ಬಗ್ಗೆ ಭಾರೀ ಟೀಕೆ ಕೇಳಿ ಬಂದಿದ್ದರೂ ಮೋದಿಯವರು ಅಧಿಕಾರಿಗಳನ್ನು ದೂಷಿಸದೇ ಸ್ವತಃ ತಾವೇ ಹೊಣೆಯನ್ನು ಹೊತ್ತುಕೊಂಡಿದ್ದರು. ಕೆಲವು ವಿಚಾರಗಳ ಬಗ್ಗೆ ಸಮ್ಮತಿ ಇರದಿದ್ದರೂ ಜೊತೆಗಾರರು ನೀಡಿದ ಸಲಹೆಯನ್ನು ಒಪ್ಪಿಕೊಳ್ಳುವ ಗುಣ ಮೋದಿಯವರಲ್ಲಿದೆ ಎಂದು ತಿಳಿಸಿದ್ದರು.