Tag: ನೆಗೆಟಿವ್ ರಿಪೋರ್ಟ್

  • ಮೈಸೂರು ಡಿಸಿ ರೋಹಿಣಿ ಸಿಂಧೂರಿ ಕೊರೊನಾ ಟಫ್ ರೂಲ್ಸ್ ಜಾರಿಗೆ ಕೊಕ್ಕೆ ಹಾಕಿದ ಸರ್ಕಾರ

    ಮೈಸೂರು ಡಿಸಿ ರೋಹಿಣಿ ಸಿಂಧೂರಿ ಕೊರೊನಾ ಟಫ್ ರೂಲ್ಸ್ ಜಾರಿಗೆ ಕೊಕ್ಕೆ ಹಾಕಿದ ಸರ್ಕಾರ

    ಬೆಂಗಳೂರು/ ಮೈಸೂರು: ಕೊರೋನಾ ನಿಯಂತ್ರಣ ವಿಚಾರದಲ್ಲಿ ಸರ್ಕಾರ ಪ್ರತಿಷ್ಠೆಗೇನಾದ್ರೂ ಬಿದ್ದಿದ್ಯಾ? ಇಂದು ನಡೆದ ಬೆಳವಣಿಗೆಯಿಂದ ಈ ಅನುಮಾನದ ಪ್ರಶ್ನೆ ಎದ್ದಿದೆ.

    ಇತ್ತೀಚಿಗೆ ಕೇಂದ್ರ ಸರ್ಕಾರ ಪ್ರಕಟಿಸಿದ್ದ ಮಾರ್ಗಸೂಚಿಯಲ್ಲಿ ಅಗತ್ಯಬಿದ್ರೆ ಜಿಲ್ಲಾಡಳಿತಗಳು ಟಫ್ ರೂಲ್ಸ್ ಜಾರಿ ಮಾಡಬಹುದು ಎಂದಿತ್ತು. ಅದ್ರಂತೆ ಮೈಸೂರು ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕಾಗಿ ಇಂದು ಮಧ್ಯಾಹ್ನ 10 ದಿನಗಳ ಮಟ್ಟಿಗೆ ಟಫ್ ರೂಲ್ಸ್ ಪ್ರಕಟಿಸಿದ್ರು. ಆದರೆ ಈ ಕಠಿಣ ನಿಯಮಕ್ಕೆ ಸರ್ಕಾರ ಕೊಕ್ಕೆ ಹಾಕಿದೆ.

    ಜಿಲ್ಲೆಗಳು ಪ್ರತ್ಯೇಕವಾಗಿ ಮಾರ್ಗಸೂಚಿ ಹೊರಡಿಸುವಂತಿಲ್ಲ. ಈ ವಿಚಾರದಲ್ಲಿ ಮುಖ್ಯಮಂತ್ರಿಗಳ ಸೂಚನೆಯನ್ನು ಮಾತ್ರ ಕಟ್ಟುನಿಟ್ಟಾಗಿ ಪಾಲಿಸಬೇಕು. ಕೂಡಲೇ ಆದೇಶ ಹಿಂಪಡೆಯಬೇಕು ಎಂದು ವಿಪತ್ತು ನಿರ್ವಹಣಾ ಕಾರ್ಯಕಾರಿ ಸಮಿತಿ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸುತ್ತೋಲೆ ಹೊರಡಿಸಿದ್ದಾರೆ.

    ಮೈಸೂರು ನಗರಿಯಲ್ಲಿ ದಿನೇ ದಿನೇ ಹೊಸ ಕೇಸ್‍ಗಳು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ಡಿಸಿ ಸಿಂಧೂರಿ ಹಲವು ಬಿಗಿ ಕ್ರಮ ಕೈಗೊಂಡಿದ್ದರು. ಮೈಸೂರಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಕೊರೋನಾ ನೆಗೆಟೀವ್ ರಿಪೋರ್ಟನ್ನು ಕಡ್ಡಾಯವಾಗಿ ತರಬೇಕು ಎಂದು ಆದೇಶಿಸಿದ್ರು.

    ಬೆಂಗಳೂರಿಂದ ಬರುವವರು ನೆಗೆಟೀವ್ ರಿಪೋರ್ಟ್ ತನ್ನಿ ಎಂದಿದ್ದ ಜಿಲ್ಲಾಧಿಕಾರಿ ಇದು ಮನವಿ ಅಷ್ಟೇ. ಕಡ್ಡಾಯವಲ್ಲ ಅಂತಾ ಸ್ಪಷ್ಟಪಡಿಸಿದ್ರು. ಸಭೆ ಸಮಾರಂಭ, ಮದುವೆಗಳಿಗೆ ಕಡ್ಡಾಯ ಅನುಮತಿ ಪಡೆಯಬೇಕು. ಥಿಯೇಟರ್‌ಗೆ ಹೋಗಿ ಸಿನಿಮಾ ನೋಡುವವರು ಕಡ್ಡಾಯವಾಗಿ ನೆಗೆಟೀವ್ ರಿಪೋರ್ಟ್ ಹಾಜರುಪಡಿಸಬೇಕು ಎಂದು ಸೂಚಿಸಿದ್ರು.

    ಥಿಯೇಟರ್ ವಿಚಾರದಲ್ಲಿ ಡಿಸಿ ತೆಗೆದುಕೊಂಡ ತೆಗೆದುಕೊಂಡ ಕಠಿಣ ನಿಲುವನ್ನು ಮಾಲೀಕರು ಆಕ್ಷೇಪಿಸಿದ್ರು. ಇದೊಂಥರಾ ಲಾಕ್‍ಡೌನ್ ರೀತಿಯಲ್ಲೇ ಆದೇಶವಿದೆ. ಹೀಗಾದ್ರೆ ಥಿಯೇಟರ್ ಕಡೆ ಯಾರು ಬರ್ತಾರೆ? ದಯವಿಟ್ಟು ಈ ಆದೇಶ ವಾಪಸ್ ಪಡೀಬೇಕು ಎಂದು ಡಿಸಿಯಲ್ಲಿ ಮನವಿ ಮಾಡ್ಕೊಂಡಿದ್ದರು. ಈ ಬೆನ್ನಲ್ಲೇ ಸರ್ಕಾರ, ಡಿಸಿ ಆದೇಶಕ್ಕೆ ತಡೆ ನೀಡಿದೆ.

    ಯುಗಾದಿ ಹಬ್ಬದ ಕಾರಣ ಮೂರು ದಿನಗಳ ಮಟ್ಟಿಗೆ ದೇವರಾಜ ಮಾರುಕಟ್ಟೆಯನ್ನು ರೈಲ್ವೇ ನಿಲ್ದಾಣದ ಬಳಿಯ ಜೆಕೆ ಗ್ರೌಂಡ್‍ಗೆ ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ. ಏಪ್ರಿಲ್ 11ರಿಂದ ಮೂರು ದಿನಗಳ ಕಾಲ ಜೆಕೆ ಗ್ರೌಂಡ್‍ನಲ್ಲಿ ಹಬ್ಬದ ವಹಿವಾಟು ನಡೆಯಲಿದೆ.

  • ರ‍್ಯಾಪಿಡ್ ಟೆಸ್ಟ್‌ನಲ್ಲಿ ಪಾಸಿಟಿವ್, ಮೆಸೇಜ್‍ನಲ್ಲಿ ನೆಗೆಟಿವ್- ಸಹಾಯಕ್ಕಾಗಿ ಯುವಕನ ಕಣ್ಣೀರು

    ರ‍್ಯಾಪಿಡ್ ಟೆಸ್ಟ್‌ನಲ್ಲಿ ಪಾಸಿಟಿವ್, ಮೆಸೇಜ್‍ನಲ್ಲಿ ನೆಗೆಟಿವ್- ಸಹಾಯಕ್ಕಾಗಿ ಯುವಕನ ಕಣ್ಣೀರು

    ಬೆಂಗಳೂರು: ಕೊರೊನಾ ರ‍್ಯಾಪಿಡ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದೆ ಎಂದು ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ಆತನ ಮೊಬೈಲ್‍ಗೆ ನೆಗೆಟಿವ್ ಎಂದು ಸಂದೇಶ ಕಳುಹಿಸಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

    ನೆಲಮಂಗಲದಲ್ಲಿ ಜುಲೈ 24 ರಂದು ನಡೆಸಿದ್ದ ರ‍್ಯಾಪಿಡ್ ಟೆಸ್ಟ್ ನಲ್ಲಿ ಯುವಕನಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಮಾಹಿತಿ ನೀಡಿದ್ದರು. ಅಲ್ಲದೆ ಅಂದೇ ಆತನನ್ನು ಬೆಂಗಳೂರಿನ ಜ್ಞಾನ ಭಾರತಿ ಕ್ಯಾಂಪಸ್‍ನ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಕ್ವಾರಂಟೈನ್ ಮಾಡಿದ್ದರು. ಆದರೆ ಮರುದಿನ ಜುಲೈ 25 ರಂದು ಆತನ ಮೊಬೈಲ್‍ಗೆ ನಿಮ್ಮ ಟೆಸ್ಟ್ ನೆಗೆಟಿವ್ ಬಂದಿದೆ ಎಂದು ಸಂದೇಶ ಬಂದಿದೆ.

    ಸದ್ಯ ಆಸ್ಪತ್ರೆಯಿಂದಲೇ ವಿಡಿಯೋ ಮಾಡಿ ಸಹಾಯ ಮಾಡುವಂತೆ ಮನವಿ ಮಾಡಿರುವ ಯುವಕ, ನನಗೆ ಪಾಸಿಟಿವ್ ಬಂದಿದೆ ಎಂದು ಕರೆ ಮಾಡಿ ಮಾಹಿತಿ ನೀಡಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿದರೆ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಲು ತಿಳಿಸುತ್ತಾರೆ. ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿದರೆ ನಿಮ್ಮ ಗ್ರಾಮ ಪಂಚಾಯಿತಿಯ ಅಧಿಕಾರಿಗಳನ್ನು ಸಂಪರ್ಕ ಮಾಡಿ ಎಂದು ಹೇಳುತ್ತಾರೆ.

    ನಾನು ಆಸ್ಪತ್ರೆಯಲ್ಲಿ ಕ್ವಾರಂಟೈನ್ ಆಗಿರುವುದರಿಂದ ಪಂಚಾಯಿತಿ ಅಧಿಕಾರಿಗಳನ್ನು ಸಂಪರ್ಕ ಮಾಡಲು ಆಗುತ್ತಿಲ್ಲ. ಕ್ವಾರಂಟೈನ್ ಕೇಂದ್ರದಲ್ಲಿ 1,500ಕ್ಕೂ ಹೆಚ್ಚು ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೊಮ್ಮೆ ನನಗೆ ಸೋಂಕು ಇಲ್ಲದಿದ್ದರೂ ಇಲ್ಲಿ ಒಂದೇ ಬಾತ್ ರೂಂ ಬಳಕೆ ಮಾಡುವುದರಿಂದ ಸೋಂಕು ಹರಡುವ ಭಯವಿದೆ. ಮನೆಯಲ್ಲಿ 6 ತಿಂಗಳ ಗರ್ಭಿಣಿ ಪತ್ನಿ ಇದ್ದು, ಆಕೆಯೂ ಇದರಿಂದ ಸಾಕಷ್ಟು ನೊಂದಿದ್ದಾರೆ. ದಯವಿಟ್ಟು ನನ್ನ ಸಮಸ್ಯೆಯನ್ನ ಬಗೆಹರಿಸಿ ಎಂದು ಯುವಕ ಕಣ್ಣೀರಿಟ್ಟು ಮನವಿ ಮಾಡಿದ್ದಾರೆ.