Tag: ನೆರೆ ಪ್ರವಾಸ

  • ಊಟ ಬಿಟ್ಟು ಮರವಂತೆಗೆ ಸಿಎಂ ದೌಡಾಯಿಸಿದ್ದು ಯಾಕೆ?

    ಊಟ ಬಿಟ್ಟು ಮರವಂತೆಗೆ ಸಿಎಂ ದೌಡಾಯಿಸಿದ್ದು ಯಾಕೆ?

    ಉಡುಪಿ: ರಾಜ್ಯದ 15 ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದ ಸಾಕಷ್ಟು ಅವಾಂತರಗಳು ಆಗಿದೆ. ಈ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಎರಡು ದಿನಗಳಲ್ಲಿ ಈಗಾಗಲೇ ನಾಲ್ಕು ಜಿಲ್ಲೆಗಳ ಪ್ರವಾಸ ಮಾಡಿದರು. ಉಡುಪಿ ಜಿಲ್ಲೆಯಲ್ಲಂತೂ ಉಪವಾಸವಿದ್ದು, ನೆರೆ ಕಡಲ್ಕೊರೆತ ಸ್ಥಳಗಳಿಗೆ ಭೇಟಿ ಕೊಟ್ಟರು.

    ಮೈಸೂರು ಜಿಲ್ಲೆಯ ಮೂಲಕ ನೆರೆ ಪ್ರವಾಸ ಆರಂಭಿಸಿದ ಸಿಎಂ, ಕೊಡಗು ಜಿಲ್ಲೆಯಲ್ಲಿ ಭೂಕಂಪ ಮತ್ತು ಭೂ ಕುಸಿತವಾದ ಸ್ಥಳಗಳಲ್ಲಿ ಓಡಾಟ ಮಾಡಿದರು. ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ನೆರೆ ಪೀಡಿತ ಪ್ರದೇಶ ಮತ್ತು ಕಡಲ್ಕೊರೆತ ಸ್ಥಳಗಳ ವೀಕ್ಷಣೆ ಮಾಡಿದರು. ಐದು ತಾಲೂಕಿನಲ್ಲಿ ಓಡಾಟ ಮಾಡುತ್ತ ಉಡುಪಿಯ ಭತ್ತದ ಬೇಸಾಯ ಹಾನಿಯ ಬಗ್ಗೆ ಮಾಹಿತಿಗಳನ್ನು ಪಡೆದುಕೊಂಡರು. ಇದನ್ನೂ ಓದಿ: ಪ್ರೇಯಸಿಯನ್ನು ಚಾಕುವಿನಿಂದ ಇರಿದು ಪೊಲೀಸರಿಗೆ ಶರಣಾದ

    ಬೆಳಗ್ಗೆ 10 ಗಂಟೆಗೆ ಸಭೆಗೆ ಹಾಜರಾದ ಸಿಎಂ, ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ಕೊಟ್ಟು ದೇವರ ದರ್ಶನ ಪಡೆದರು. ಅಲ್ಲಿಂದ ಆರ್‌ಎಸ್‍ಎಸ್ ಕಚೇರಿಗೆ ತೆರಳಿ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗಿಯಾದರು. ನಿಗದಿಯಾದ ಕಾರ್ಯಕ್ರಮದಂತೆ ಸಿಎಂ ಮಣಿಪಾಲದಲ್ಲಿ ಮಧ್ಯಾಹ್ನದ ಭೋಜನ ಸ್ವೀಕರಿಸಿ ನಂತರ ಬೈಂದೂರು ತಾಲೂಕಿಗೆ ತೆರಳಬೇಕಿತ್ತು. ಅಲ್ಲಿಂದ ಬ್ರಹ್ಮಾವರ, ಕುಂದಾಪುರ ಮತ್ತು ಕಾಪು ತಾಲೂಕಿಗೆ ಬಂದು ನೆರೆ ಹಾನಿ ವೀಕ್ಷಣೆ ಮಾಡಬೇಕಾಗಿತ್ತು. ಈ ಹಿನ್ನೆಲೆ ಬೊಮ್ಮಾಯಿ ಅವರು ಊಟ ಬಿಟ್ಟು ನೇರವಾಗಿ ಬೈಂದೂರಿಗೆ ತೆರಳಿದರು.

    ಒಂದು ಗಂಟೆಗೆ ಮಧ್ಯಾಹ್ನದ ಊಟ ಮಾಡಬೇಕಾದ ಸಿಎಂ ಸಂಜೆ 4 ಗಂಟೆಗೆ ಮಣಿಪಾಲದ ಕಂಟ್ರಿ ಇನ್ ಹೋಟೆಲ್‍ನಲ್ಲಿ ಊಟ ಮಾಡಿದ್ದಾರೆ. ಸಿಎಂ ತುಂಬಾ ಕಮೀಟೆಡ್. ಜನರನ್ನು ಕಾಯಿಸುವುದಿಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಪ್ರಶಂಸಿಸಿದರು. ಇದನ್ನೂ ಓದಿ:  ಕಾನೂನು ಸುವ್ಯವಸ್ಥೆಯನ್ನು ಹಾಳುಮಾಡಲು RSS, SDPIನಿಂದ ಸಾಧ್ಯವಿಲ್ಲ: ಪಿಣರಾಯಿ ವಿಜಯನ್ 

    ಧಾರಾಕಾರ ಮಳೆ ಶುರುವಾದ ಕಾರಣ ಕಾಪು ತಾಲೂಕಿನ ಮುಳ್ಳೂರು ವೀಕ್ಷಣೆಯನ್ನು ಸಿಎಂ ರದ್ದು ಮಾಡಿ ನೇರವಾಗಿ ಮಂಗಳೂರಿಗೆ ತೆರಳಿದರು.

    Live Tv
    [brid partner=56869869 player=32851 video=960834 autoplay=true]

  • ಯಡಿಯೂರಪ್ಪ ನೆರೆ ಪ್ರವಾಸವನ್ನ ಕುಟ್ಟಿ ಕುಂದಾಪುರಕ್ಕೆ ಹೋಲಿಸಿದ ಭೋಜೇಗೌಡ

    ಯಡಿಯೂರಪ್ಪ ನೆರೆ ಪ್ರವಾಸವನ್ನ ಕುಟ್ಟಿ ಕುಂದಾಪುರಕ್ಕೆ ಹೋಲಿಸಿದ ಭೋಜೇಗೌಡ

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರೆಹಾನಿ ವೇಳೆ ಏಕಾಂಗಿಯಾಗಿ ಪ್ರವಾಸ ಮಾಡಿದ್ದೆ ಇವತ್ತು ದೊಡ್ಡ ಚರ್ಚೆ ಆಯ್ತು. ಸಿಎಂ ಏಕಾಂಗಿಯಾಗಿ ಪ್ರವಾಸ ಮಾಡಿದ್ರು. ಆದ್ರೆ ಯಾವುದೇ ಉಪಯೋಗವಾಗಲಿಲ್ಲ. ಕುಟ್ಟಿ ಕುಂದಾಪುರಕ್ಕೆ ಹೋಗಿ ಬಂದಂತಾಗಿದೆ ಅಂತ ಜೆಡಿಎಸ್ ಸದಸ್ಯ ಬೋಜೇಗೌಡ ಟೀಕಿಸಿದರು.

    ಇಷ್ಟಕ್ಕೆ ಸುಮ್ಮನಾಗದ ಭೋಜೇಗೌಡ, ನೆರೆಹಾನಿ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಬ್ಬರೇ ಸಂಪುಟದಲ್ಲಿದ್ದರೂ ಪರಿಹಾರ ಕಾರ್ಯಾಚರಣೆಯನ್ನು ಸಮರ್ಥವಾಗಿ ನಿಭಾಯಿಸಿದರು ಎಂದು ಬಿಜೆಪಿ ನಾರಾಯಣಸ್ವಾಮಿ ಪರಿಷತ್ ಕಲಾಪದಲ್ಲಿ ಸಮರ್ಥಿಸಿಕೊಂಡರು. ಸಿಂಗಲ್ ಮ್ಯಾನ್ ಕ್ಯಾಬಿನೆಟ್ ಇದ್ದರೂ ಸಿಎಂ ಯಡಿಯೂರಪ್ಪ ಪ್ರವಾಹ ಪರಿಸ್ಥಿತಿ ವೇಳೆ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಓಡಾಡಿದ್ರು. ವಯಸ್ಸನ್ನೂ ಲೆಕ್ಕಿಸದೇ ಏಕಾಂಗಿಯಾಗಿ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ್ದರು ಎಂದರು.

    ತಕ್ಷಣ ನಾರಾಯಣಸ್ವಾಮಿ ಮಾತಿಗೆ ಅಡ್ಡಿಪಡಿಸಿದ ಜೆಡಿಎಸ್ ಸದಸ್ಯ ಬೋಜೇಗೌಡ, ಸಿಎಂ ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಓಡಾಡಿದ್ದರಲ್ಲಿ ಎರಡು ಮಾತಿಲ್ಲ ಆದರೆ ಅವರ ಕಥೆ ಕುಟ್ಟಿ ಕುಂದಾಪುರಕ್ಕೆ ಹೋಗಿ ಬಂದಂತಾಗಿದೆ. ಮನೆಯಲ್ಲಿ ಅಪ್ಪ ಅಮ್ಮ ನಾಳೆ ಕುಟ್ಟಿಯನ್ನು ಕುಂದಾಪುರಕ್ಕೆ ಕಳಿಸಬೇಕು ಅಂತಾ ರಾತ್ರಿ ಮಾತಾಡಿಕೊಳ್ಳುತ್ತಿದ್ದರು. ಅದನ್ನು ಕೇಳಿಸಿಕೊಂಡಿದ್ದ ಕುಟ್ಟಿ ಬೆಳಗ್ಗೆ ಎದ್ದ ಕೂಡಲೇ ಕುಂದಾಪುರಕ್ಕೆ ಹೋಗುತ್ತಾನೆ, ಸಂಜೆ ವಾಪಸ್ ಬರುತ್ತಾನೆ ಅಪ್ಪ ಅಮ್ಮ ಎಲ್ಲಿ ಹೋಗಿದ್ದೆ ಎಂದು ಕೇಳಿದರೆ ಕುಟ್ಟಿಯನ್ನು ಕುಂದಾಪುರಕ್ಕೆ ಕಳಿಸಬೇಕು ಅಂತಾ ಮಾತಾಡಿಕೊಳ್ತಾ ಇದ್ರಲ್ಲ ಅದನ್ನ ಕೇಳಿಸಿಕೊಂಡು ಕುಂದಾಪುರಕ್ಕೆ ಹೋಗಿಬಂದೆ ಎನ್ನುತ್ತಾನೆ, ಯಾಕೆ ಹೋಗಬೇಕಿತ್ತು, ಏನು ಮಾತನಾಡಬೇಕಿತ್ತು ಎನ್ನುವುದು ಗೊತ್ತಿಲ್ಲದೇ ಸುಮ್ಮನೆ ಹೋಗಿಬಂದಿದ್ದ ಅದೇ ರೀತಿ ಸಿಎಂ ನೆರೆ ಪ್ರವಾಸ ಮಾಡಿದ್ದಾರೆ .ಯಾಕೆ ಹೋದರು? ಏನು ಮಾಡಬೇಕಿತ್ತು? ಅದನ್ನು ಮಾತ್ರ ಮಾಡಲಿಲ್ಲ ಎಂದು ವ್ಯಂಗ್ಯವಾಡಿದರು.

    ಬೋಜೇಗೌಡ ಮಾತಿಗೆ ಕೆರಳಿದ ಡಿಸಿಎಂ ಲಕ್ಷ್ಮಣ ಸವದಿ ಹಿಂದಿನ ಸಿಎಂ ಗಳು ಯಾವ ತರಹ ಗ್ರಾಮ ವಾಸ್ತವ್ಯ ಮಾಡಿದ್ರು ಏನ್ ಮಾಡಿದ್ರು ನಮಗೂ ಗೊತ್ತಿದೆ ಎಂದರು. ಹಿಂದೆ ಜೆಡಿಎಸ್ ಬಿಜೆಪಿ ಸಮ್ಮಿಶ್ರ ಸರ್ಕಾರ ಇದ್ದಾಗಲೂ ನೆರೆ ಬಂದಿತ್ತು. ಕುಮಾರಸ್ವಾಮಿ ಸಿಎಂ ಅವರನ್ನು ನಾನೇ ಪ್ರವಾಹ ಪೀಡಿತ ಸ್ಥಳಕ್ಕೆ ಕರೆದೊಯ್ದಿದ್ದೆ ನಾನೇ ಟ್ರ್ಯಾಕ್ಟರ್ ನಲ್ಲಿ ಕೂರಿಸಿದ್ದೆ, ಅವರು ಎಲ್ಲಿ ಊಟ ಮಾಡಿದ್ರು, ಎಲ್ಲಿ ಮಲಗಿದ್ರು, ಎಲ್ಲಿ ಏನ್ ಮಾಡಿದ್ರು ನನಗೂ ಗೊತ್ತಿದೆ ಎಂದರು.

    ಡಿಸಿಎಂ ಸವದಿ ಮಾತಿಗೆ ಕೆರಳಿ ಕೆಂಡವಾದ ಜೆಡಿಎಸ್ ಪರಿಷತ್ ಸದಸ್ಯರು, ಹೆಚ್ಡಿಕೆ ಎಲ್ಲಿ ಮಲಗಿದ್ರು ಅನ್ನೋದು ಒಳ್ಳೆ ಮಾತಲ್ಲ, ಏನ್ ಮಾಡಿದ್ರು ಹೇಳಿ ನೋಡೋಣ ಎಂದು ಪಟ್ಟುಹಿಡಿದರು. ಕುಮಾರಸ್ವಾಮಿ ಸಾಲಮನ್ನಾ ಮಾಡಿದರು ಎಂದರೆ ಸ್ಟಾರ್ ಹೋಟೆಲ್ ಬಿಟ್ಟು ಹೊರಗಡೆನೇ ಬಂದಿರಲಿಲ್ಲ ಎಂದು ಬಿಜೆಪಿ ಸದಸ್ಯರು ತಿರುಗೇಟು ನೀಡಿದರು. ಜೆಡಿಎಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ನಂತರ ಯಾವ ಸಿಎಂ ಏನು ಭರವಸೆ ನೀಡಿದ್ದರು ನಂತರ ಏನು ಮಾಡಿದರು ಎಂದು ಚರ್ಚೆಗೆ ಸಮಯ ನಿಗದಿ ಮಾಡಿ ಚರ್ಚೆ ಮಾಡೋಣ ಎನ್ನುವ ಮನವಿಯನ್ನು ಸಭಾಪತಿಗಳಿಗೆ ಸಲ್ಲಿಸುವ ಮೂಲಕ ಚರ್ಚೆಗೆ ತೆರೆ ಎಳೆಯಲಾಯಿತು.