Tag: ನೆಸ್ ವಾಡಿಯಾ

  • ಚೀನಾ ಪ್ರಾಯೋಜಕತ್ವಕ್ಕೆ ಐಪಿಎಲ್ ಗುಡ್‍ಬೈ ಹೇಳಬೇಕಿದೆ: ನೆಸ್ ವಾಡಿಯಾ

    ಚೀನಾ ಪ್ರಾಯೋಜಕತ್ವಕ್ಕೆ ಐಪಿಎಲ್ ಗುಡ್‍ಬೈ ಹೇಳಬೇಕಿದೆ: ನೆಸ್ ವಾಡಿಯಾ

    – ‘ಐಪಿಎಲ್’ ಚೀನಾ ಪ್ರೀಮಿಯರ್ ಲೀಗ್ ಅಲ್ಲ!

    ಮುಂಬೈ: ಭಾರತ ಹಾಗೂ ಚೀನಾ ನಡುವೆ ನಿರ್ಮಾಣವಾಗಿರುವ ಉದ್ರಿಕ್ತ ಪರಿಸ್ಥಿತಿ ಐಪಿಎಲ್ ಮೇಲೂ ಪರಿಣಾಮ ಬೀರುತ್ತಿದೆ. ಚೀನಾ ಗಾಲ್ವಾನ್‍ನಲ್ಲಿ ವಂಚನೆಯಿಂದ ದಾಳಿ ನಡೆಸಿತ್ತು. ಪರಿಣಾಮ ಭಾರತದ 20 ಯೋದರು ಹುತಾತ್ಮರಾಗಿದ್ದರು. ಆ ಬಳಿಕ ದೇಶದಲ್ಲಿ ಚೀನಾ ಉತ್ಪನ್ನಗಳ ಬಳಕೆ ಕೈಬಿಡ ಬೇಕು ಎಂಬ ಅಂದೋಲನ ಹೆಚ್ಚಾಗಿದೆ. ಇದೇ ವೇಳೆ ಕೇಂದ್ರ ಸರ್ಕಾರ ಕೂಡ ದೇಶದ ಭದ್ರತೆಯ ದೃಷ್ಟಿಯಿಂದ 59 ಚೀನಾ ಮೂಲದ ಆ್ಯಪ್‍ಗಳಿಗೆ ನಿಷೇಧ ವಿಧಿಸಿದೆ. ಈ ಇದೇ ವೇಳೆ ಐಪಿಎಲ್ ಪ್ರಾಯೋಜಕತ್ವದ ವಿಚಾರದಲ್ಲೂ ಆಸಕ್ತಿಕರ ಚರ್ಚೆ ನಡೆದಿದೆ.

    ಐಪಿಎಲ್ ಟೈಟಲ್ ಪ್ರಾಯೋಜಕತ್ವವನ್ನು ಚೀನಾ ಮೂಲದ ವಿವೋ ಮೊದಲ ಸಂಸ್ಥೆ ಪಡೆದಿದೆ. ಬಿಸಿಸಿಐನೊಂದಿಗೆ 2018ರಲ್ಲಿ 5 ವರ್ಷಕ್ಕೆ 2,199 ಕೋಟಿ ರೂ. ಒಪ್ಪಂದವನ್ನು ಮಾಡಿಕೊಂಡಿದೆ. ಅಲ್ಲದೇ ಪ್ರತಿ ವರ್ಷ 440 ಕೋಟಿ ರೂ.ಗಳನ್ನು ಬಿಸಿಸಿಐಗೆ ಪಾವತಿ ಮಾಡುತ್ತಿದೆ. ಈ ಒಪ್ಪಂದ 2022ರ ಐಪಿಎಲ್ ಆವೃತ್ತಿ ಬಳಿಕ ಅಂತ್ಯವಾಗಲಿದೆ. ಆದರೆ ಈ ಒಪ್ಪಂದವನ್ನು ಅದಷ್ಟೂ ಶೀಘ್ರವೇ ರದ್ದು ಮಾಡಿಕೊಳ್ಳಬೇಕು ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್ ವಾಡಿಯಾ ಅಭಿಪ್ರಾಯ ಪಟ್ಟಿದ್ದಾರೆ.

    ಐಪಿಎಲ್‍ನೊಂದಿಗೆ ಚೀನಾ ಮೂಲದ ವಿವೋ ಮಾತ್ರವಲ್ಲದೇ ಪೇಟಿಎಂ, ಸ್ವಿಗ್ಗಿ, ಡ್ರೀಮ್ ಇಲೆವೆನ್ ಸೇರಿದಂತೆ ಹಲವು ಸಂಸ್ಥೆಗಳು ಒಪ್ಪಂದವನ್ನು ಮಾಡಿಕೊಂಡಿವೆ. ಪರಿಣಾಮ ಏಕಾಏಕಿ ಬಿಸಿಸಿಐ ಒಪ್ಪಂದ ರದ್ದು ಮಾಡಿಕೊಂಡರೇ ಸಾಕಷ್ಟು ನಷ್ಟ ಎದುರಿಸಬೇಕಾಗುತ್ತದೆ.

    ಐಪಿಎಲ್‍ನಲ್ಲಿ ಚೀನಾ ಮೂಲದ ಕಂಪನಿಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದಗಳನ್ನು ಬಿಸಿಸಿಐ ಕೈಬಿಡಬೇಕು. ಮೊದಲು ದೇಶ, ಆ ಬಳಿಕವೇ ಹಣ. ಐಪಿಎಲ್ ಎಂದರೇ ಇಂಡಿಯನ್ ಪ್ರೀಮಿಯರ್ ಲೀಗ್, ಚೀನಿಸ್ ಪ್ರೀಮಿಯರ್ ಲೀಗ್ ಅಲ್ಲ. ಒಪ್ಪಂದಗಳನ್ನು ರದ್ದು ಮಾಡಿಕೊಳ್ಳುವ ಮೂಲಕ ಬಿಸಿಸಿಐ ಎಲ್ಲರಿಗೂ ಆದರ್ಶವಾಗಿ ನಿಲ್ಲಬೇಕಿದೆ. ಸದ್ಯ ಇರುವ ಪ್ರಾಯೋಜಯತ್ವವನ್ನು ಕೈಬಿಟ್ಟರೇ ಕೂಡಲೇ ಬೇರೆ ಸಂಸ್ಥೆ ಸಿಗುವುದು ಕಷ್ಟ. ಆದರೆ ಭಾರತದ ಹಲವು ಸಂಸ್ಥೆಗಳು  ಪ್ರಾಯೋಜಕತ್ವ ವಹಿಸುವ ಸಾಮರ್ಥ್ಯವನ್ನು ಹೊಂದಿವೆ. ದೇಶಕ್ಕಾಗಿ, ಪ್ರಜಾಪ್ರಭುತ್ವಕ್ಕಾಗಿ, ಎಲ್ಲದಕ್ಕಿಂತ ನಮಗಾಗಿ ಪ್ರಾಣ ಪಣಕ್ಕಿಟ್ಟು ಹೋರಾಟ ನಡೆಸುತ್ತಿರುವ ಯೋಧರಿಗೆ ನಾವು ಗೌರವ ನೀಡಬೇಕಿದೆ ಎಂದು ನೆಸ್ ವಾಡಿಯಾ ಹೇಳಿದ್ದಾರೆ.

  • ಪ್ರತಿ ಐಪಿಎಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ಹಾಡಿಸಿ: ಪಂಜಾಬ್ ಮಾಲೀಕ ಮನವಿ

    ಪ್ರತಿ ಐಪಿಎಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ಹಾಡಿಸಿ: ಪಂಜಾಬ್ ಮಾಲೀಕ ಮನವಿ

    ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಪ್ರತಿ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ಹಾಡಿಸುವಂತೆ ಕಿಂಗ್ಸ್ ಇಲೆವೆನ್ ತಂಡದ ಸಹ ಮಾಲೀಕ ನೆಸ್ ವಾಡಿಯಾ ಬಿಸಿಸಿಐಗೆ ಮನವಿ ಮಾಡಿದ್ದಾರೆ.

    ಈ ವಿಚಾರವಾಗಿ ಬಿಸಿಸಿಐಗೆ ಪತ್ರ ಬರೆದಿರುವ ವಾಡಿಯಾ, ಐಪಿಎಲ್ ಟೂರ್ನಿಯ ಅದ್ಧೂರಿ ಉದ್ಘಾಟನಾ ಸಮಾರಂಭವನ್ನು ರದ್ದು ಮಾಡಿದಕ್ಕೆ ಬಿಸಿಸಿಐ ನಡೆಯನ್ನು ಶ್ಲಾಘಿಸಿದ್ದಾರೆ. ಈ ವೇಳೆ 2020 ರ ಐಪಿಎಲ್ ಆವೃತ್ತಿಯ ಪ್ರತಿ ಪಂದ್ಯಕ್ಕೂ ಮುನ್ನ ನಮ್ಮ ಹೆಮ್ಮೆಯ ರಾಷ್ಟ್ರಗೀತೆಯನ್ನು ಹಾಡಿಸಬೇಕು ಎಂದು ಬಿಸಿಸಿಐಗೆ ಒತ್ತಾಯ ಮಾಡಿದ್ದಾರೆ.

    ಸಾಮಾನ್ಯವಾಗಿ ಅಂತಾರಾಷ್ಟೀಯ ಮಟ್ಟದ ಪಂದ್ಯದ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹಾಡಿಸುತ್ತಾರೆ. ಆದರೆ ಐಪಿಎಲ್ ಕೂಡ ವಿಶ್ವದ ನಂಬರ್ ಒನ್ ಕ್ರಿಕೆಟ್ ಲೀಗ್ ಆಗಿದೆ. ಆದ್ದರಿಂದ ಐಪಿಎಲ್ ಪ್ರತಿ ಪಂದ್ಯದ ಆರಂಭಕ್ಕೂ ಮುಂಚೆ ರಾಷ್ಟ್ರಗೀತೆ ಹಾಡಿಸಬೇಕು. ಉದ್ಘಾಟನಾ ಕಾರ್ಯಕ್ರಮವನ್ನು ರದ್ದು ಮಾಡಿದ್ದು ಅತ್ಯುತ್ತಮ ನಡೆ. ಸಮಾರಂಭಕ್ಕೆ ಅಪಾರ ಪ್ರಮಾಣದ ಹಣ ಖರ್ಚು ಮಾಡುವ ಬದಲು ಪಂದ್ಯ ಮತ್ತು ಕ್ರೀಡಾ ಕೂಟದ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹಾಡಿಸಬೇಕು ಎಂದು ವಾಡಿಯಾ ಹೇಳಿದ್ದಾರೆ.

    ನಾನು ಈ ವಿಚಾರವಾಗಿ ಈ ಮುಂಚೆಯೇ ಬಿಸಿಸಿಐಗೆ ಪತ್ರ ಬರೆದಿದ್ದೆ. ಆದರೆ ಈಗ ನೇರವಾಗಿ ಬಿಸಿಸಿಐ ಅಧ್ಯಕ್ಷರಾದ ಸೌರವ್ ಗಂಗೂಲಿ ಅವರಿಗೆ ಪತ್ರ ಬರೆದಿದ್ದೇನೆ. ರಾಷ್ಟ್ರಗೀತೆಯನ್ನು ನಮ್ಮ ದೇಶದಲ್ಲಿ ಇಂಡಿಯನ್ ಸೂಪರ್ ಲೀಗ್ (ಫುಟ್ಬಾಲ್) ಮತ್ತು ಪ್ರೊ-ಕಬ್ಬಡಿ ಲೀಗ್ ಪಂದ್ಯಗಳ ಆರಂಭಕ್ಕೂ ಮುನ್ನ ಹಾಡಿಸುತ್ತಾರೆ. ಹೊರ ದೇಶಗಳಲ್ಲೂ ಕೂಡ ಈ ವಿಧಾನ ಜಾರಿಯಲ್ಲಿದೆ. ಆದ್ದರಿಂದ ಐಪಿಎಲ್ ಲೀಗ್‍ನಲ್ಲೂ ಈ ವಿಧಾನ ಜಾರಿಗೆ ತರಬೇಕು ಎಂದು ವಾಡಿಯಾ ಮನವಿ ಮಾಡಿದ್ದಾರೆ.

    ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾದ ನಂತರ ಭಾರತೀಯ ಕ್ರಿಕೆಟ್‍ನಲ್ಲಿ ಹಲವಾರು ಮಹತ್ವದ ಬದಲಾವಣೆಯನ್ನು ತರುತ್ತಿದ್ದಾರೆ. ಪ್ರತಿ ಐಪಿಎಲ್ ಆವೃತ್ತಿ ಆರಂಭದ ಸಮಯದಲ್ಲಿ ಉದ್ಘಾಟನಾ ಸಮಾರಂಭ ಆಯೋಜನೆ ಆಗುತಿತ್ತು. ಈ ಉದ್ಘಾಟನಾ ಸಮಾರಂಭಕ್ಕೆ ಸೌರವ್ ಗಂಗೂಲಿ ಬ್ರೇಕ್ ಹಾಕಿದ್ದಾರೆ. ಇಲ್ಲಿಯವರೆಗೆ ಬಿಸಿಸಿಐ ಹಗಲು ರಾತ್ರಿ ಟೆಸ್ಟ್ ಪಂದ್ಯವನ್ನು ಆಯೋಜಿಸುತ್ತಿರಲಿಲ್ಲ. ಗಂಗೂಲಿ ಅಧ್ಯಕ್ಷರಾದ ಬಳಿಕ ಹಗಲು ರಾತ್ರಿ ಟೆಸ್ಟ್ ಪಂದ್ಯಕ್ಕೆ ಒಪ್ಪಿಗೆ ಸಿಕ್ಕಿದೆ. ಮೊದಲ ಹಗಲು ರಾತ್ರಿ ಪಂದ್ಯ ಬಾಂಗ್ಲಾ ವಿರುದ್ಧ ನ.22 ರಿಂದ ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯಲಿದೆ.

  • ಚೆನ್ನೈ, ರಾಜಸ್ಥಾನದ ಬಳಿಕ ಐಪಿಎಲ್‍ನಿಂದ ಪಂಜಾಬ್ ತಂಡ ಅಮಾನತು?

    ಚೆನ್ನೈ, ರಾಜಸ್ಥಾನದ ಬಳಿಕ ಐಪಿಎಲ್‍ನಿಂದ ಪಂಜಾಬ್ ತಂಡ ಅಮಾನತು?

    ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ ರಾಯಲ್ಸ್ ಬಳಿಕ ಈಗ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ಐಪಿಎಲ್‍ನಿಂದ ಅಮಾನತುಗೊಳ್ಳುವ ಸಾಧ್ಯತೆಯಿದೆ.

    ಪಂಜಾಬ್ ತಂಡದ ಮಾಲೀಕರಾಗಿರುವ ನೆಸ್ ವಾಡಿಯಾ ಜಪಾನ್ ನಲ್ಲಿ ಮಾದಕ ಪದಾರ್ಥಗಳೊಂದಿಗೆ ಸಿಕ್ಕಿಬಿದ್ದು ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಬಿಸಿಸಿಐ ನೆಸ್ ವಾಡಿಯಾ ಮೇಲಿರುವ ಆರೋಪ ಸಾಬೀತಾದರೆ ಪಂಜಾಬ್ ತಂಡವನ್ನು ನಿಷೇಧಿಸುವ ಸಾಧ್ಯತೆಯಿದೆ.

    ಐಪಿಎಲ್ ಫ್ರಾಂಚೈಸಿ ಮಾಲೀಕರು ಆನ್‍ಫೀಲ್ಡ್ ಮತ್ತು ಆಫ್ ಫೀಲ್ಡ್ ನಿಯಮಗಳನ್ನು ಮೀರುವಂತಿಲ್ಲ. ಒಂದು ವೇಳೆ ಈ ನಿಯಮಗಳನ್ನು ಮೀರಿ ಆರೋಪ ಸಾಬೀತಾಗಿ ದೋಷಿ ಎಂದಾದರೆ ಆ ತಂಡವನ್ನು ಅಮಾನತಿನಲ್ಲಿಡಲು ಬಿಸಿಸಿಐಗೆ ಅಧಿಕಾರವಿದೆ.

    ಈ ಪ್ರಕರಣದ ವಿಚಾರಣೆಗೆ ಬಿಸಿಸಿಐ ಒಂದು ಸಮಿತಿಯನ್ನು ನೇಮಿಸಲಿದ್ದು, ಈ ಸಮಿತಿ  ಒಂಬುಡ್ಸ್‌ಮನ್‌ ಅವರಿಗೆ ವರದಿ ಸಲ್ಲಿಸಲಿದೆ. ಹೀಗಾಗಿ ಈ ಪ್ರಕರಣದಲ್ಲಿ ಬಿಸಿಸಿಐ ನಡೆ ಏನು ಎನ್ನುವ ಕುತೂಹಲ ಹೆಚ್ಚಾಗಿದೆ.

    ಈ ಹಿಂದೆ ಐಪಿಎಲ್ ಮಾಲೀಕರ ಬೆಟ್ಟಿಂಗ್ ಪ್ರಕರಣ ಬೆಳಕಿಗೆ ಬಂದಾಗ ಲೋಧಾ ಸಮಿತಿ ತನಿಖೆ ನಡೆಸಿತ್ತು. ಇದಾದ ಬಳಿಕ ಚೆನ್ನೈ ಮತ್ತು ರಾಜಸ್ಥಾನ ರಾಯಲ್ಸ್ ತಂಡ 2 ವರ್ಷ ನಿಷೇಧ ಶಿಕ್ಷೆ ಅನುಭವಿಸಿತ್ತು.

    ಏನಿದು ಪ್ರಕರಣ?
    ಕಳೆದ ಮಾರ್ಚ್‍ನಲ್ಲಿ ನೆಸ್ ವಾಡಿಯಾ ಪ್ರವಾಸಕ್ಕೆಂದು ಜಪಾನ್‍ಗೆ ತೆರಳಿದ್ದ ವೇಳೆ ತಮ್ಮ ಬಳಿ 25 ಗ್ರಾಂ ಗಾಂಜಾ ಇಟ್ಟುಕೊಂಡಿದ್ದರು. ನ್ಯೂ ಚಿಟೋಸ್ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಶ್ವಾನಗಳು ಅವರ ಬಳಿಯಿದ್ದ ಗಾಂಜಾವನ್ನು ಪತ್ತೆ ಹಚ್ಚಿತ್ತು. ನಂತರ ಅವರನ್ನು ಬಂಧಿಸಿ, ವಿಚಾರಣೆ ನಡೆಸಲಾಗಿತ್ತು.

    ವಿಚಾರಣೆಯ ಸಂದರ್ಭದಲ್ಲಿ ನಾನು ಸ್ವಂತ ಬಳಕೆಗಾಗಿ ಗಾಂಜಾವನ್ನು ಇಟ್ಟುಕೊಂಡಿದ್ದೆ ಎಂದು ನೆಸ್ ತಿಳಿಸಿದ್ದರು. ಈ ಹೇಳಿಕೆಯನ್ನು ಪುರಸ್ಕರಿಸಿದ ಕೋರ್ಟ್ ನೆಸ್‍ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ್ದರೂ ನಿಯಮಗಳ ಅನ್ವಯ ಅವರ ಶಿಕ್ಷೆಯನ್ನು ಅಮಾನತ್ತಿನಲ್ಲಿ ಇಟ್ಟಿತ್ತು. ಹೀಗಾಗಿ ಅವರು ಜೈಲು ಶಿಕ್ಷೆಯಿಂದ ಪಾರಾಗಿ ಭಾರತಕ್ಕೆ ಮರಳಿದ್ದರು.

    ಜಪಾನಿನಲ್ಲಿ ಡ್ರಗ್ಸ್ ಕುರಿತಂತೆ ಕಠಿಣ ಕಾನೂನು ಜಾರಿಯಾಗಿದ್ದು, ದೋಷಿಯಾದರೆ 7 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. ಆದರೆ ಮೊದಲ ಬಾರಿಗೆ ಸಿಕ್ಕಿಬಿದ್ದರೆ ಶಿಕ್ಷೆಯನ್ನು ಅಮಾನತಿನಲ್ಲಿ ಇಡಬಹುದಾಗಿದೆ. ಎರಡನೇ ಬಾರಿಗೆ ಸಿಕ್ಕಿಬಿದ್ದರೆ ಶಿಕ್ಷೆ ಪೂರ್ಣ ಪ್ರಮಾಣದಲ್ಲಿ ಜಾರಿಯಾಗುತ್ತದೆ.

  • ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್‍ವಾಡಿಯಾಗೆ ಜೈಲು ಶಿಕ್ಷೆ

    ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್‍ವಾಡಿಯಾಗೆ ಜೈಲು ಶಿಕ್ಷೆ

    ನವದೆಹಲಿ: ಉದ್ಯಮಿ ಹಾಗೂ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ತಂಡದ ಸಹ ಮಾಲೀಕರಾಗಿರುವ ನೆಸ್ ವಾಡಿಯಾ ಅವರಿಗೆ ಜಪಾನ್ ಕೋರ್ಟ್ 2 ವರ್ಷ ಜೈಲಿ ಶಿಕ್ಷೆ ವಿಧಿಸಿದೆ.

    ನೆಸ್ ವಾಡಿಯಾ ಮಾದಕ ವಸ್ತು ಸಾಗಾಣೆ ಆರೋಪದಲ್ಲಿ ಮಾರ್ಚ್ ನಲ್ಲಿ ಉತ್ತರ ಜಪಾನಿನ ದ್ವೀಪದ ಹೊಕ್ಕೈಹೋಡ ಚಿಟೋಸ್ ವಿಮಾನ ನಿಲ್ದಾಣದಲ್ಲಿ ಬಂಧನವಾಗಿದ್ದರು. ಈ ಸಂದರ್ಭದಲ್ಲಿ ಅವರ ಜೇಬಿನಲ್ಲಿ ಸುಮಾರು 25 ಗ್ರಾಂ ಗಾಂಜಾ ಪತ್ತೆಯಾಗಿತ್ತು.

    ಈ ಕುರಿತು ಮಾಧ್ಯಮವೊಂದು ವರದಿ ಮಾಡಿದ್ದು, ತಮ್ಮ ಬಳಿ ಇದ್ದ ಮಾದಕ ವಸ್ತು ವೈಯಕ್ತಿಕ ಬಳಕೆಗೆ ಎಂದು ವಾಡಿಯಾ ಹೇಳಿಕೆ ನೀಡಿದ್ದರು. ನಂತರ ನ್ಯಾಯಾಂಗ ಬಂಧನದಲ್ಲಿದ್ದ ಅವರಿಗೆ ಸಪ್ಪೊರೊ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

    ವಾಡಿಯಾ ಸಂಸ್ಥೆ ಭಾರತ ಬಹುದೊಡ್ಡ ಉದ್ಯಮ ಸಂಸ್ಥೆಯಾಗಿದ್ದು, 47 ವರ್ಷದ ನೆಸ್ ವಾಡಿಯಾ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. 2014ರ ಜೂನ್ ಐಪಿಎಲ್ ಟೂರ್ನಿಯ ವೇಳೆ ಪ್ರೀತಿ ಜಿಂಟಾ ನೆಸ್ ವಾಡಿಯಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ಪಂದ್ಯದ ವೇಳೆ ತಮ್ಮ ಮೇಲೆ ವಾಡಿಯಾ ಹಲ್ಲೆ ನಡೆಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

    2020ರ ಟೋಕಿಯೋ ಒಲಂಪಿಕ್ಸ್ ಹಿನ್ನೆಲೆಯಲ್ಲಿ ಜಪಾನ್ ಮಾದಕ ವಸ್ತುಗಳ ಸಾಗಾಣೆ ಮಾಡುವವರ ವಿರುದ್ಧ ಕಠಿಣ ನಿಯಮಗಳನ್ನು ಜಾರಿ ಮಾಡಿದೆ.