Tag: ನೇತ್ರದಾನ

  • ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ – ಅಣ್ಣಾವ್ರ ಹಾದಿಯಲ್ಲೇ ಸರೋಜಾದೇವಿ ನೇತ್ರದಾನ

    ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ – ಅಣ್ಣಾವ್ರ ಹಾದಿಯಲ್ಲೇ ಸರೋಜಾದೇವಿ ನೇತ್ರದಾನ

    ಅಭಿನಯ ಸರಸ್ವತಿ ಎಂದೇ ಖ್ಯಾತಿ ಪಡೆದಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾ ದೇವಿ (B Saroja Devi) ಅವರಿಂದು ವಿಧಿವಶವಾಗಿದ್ದು, ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ʻಮನುಷ್ಯನ ಪಂಚೇಂದ್ರಿಯಗಳಲ್ಲಿ ಕಣ್ಣು ಪ್ರಮುಖವಾದದ್ದು. ಕಣ್ಣು ದಾನ ಮಾಡುವ ಮೂಲಕ ಬೇರೊಬ್ಬರಿಗೆ ದೃಷ್ಟಿ ನೀಡಿ ಬಾಳು ಬೆಳಗಬೇಕು’ ಎನ್ನುವಂತೆ ಸರೋಜಾ ದೇವಿ ಅವರು ನೇತ್ರದಾನ (Eye Donate) ಮಾಡಿದ್ದಾರೆ.

    ಬೆಂಗಳೂರಿನ (Bengaluru) ನಾರಾಯಣ ನೇತ್ರಾಲಯಕ್ಕೆ ನೇತ್ರದಾನ ಮಾಡಿದ್ದರು. ಅದರಂತೆ ಇಂದು ಸರೋಜಾದೇವಿ ಅವರ ಕಣ್ಣುಗಳನ್ನು ಪಡೆಯಲಾಗುತ್ತಿದೆ. ವೈದ್ಯರ ತಂಡ ಮಲ್ಲೇಶ್ವರಂನಲ್ಲಿರುವ ಮೆನೆಗೆ ಆಗಮಿಸಿದ್ದು, ನೇತ್ರದಾನ ಪ್ರಕ್ರಿಯೆಯನ್ನ ಪೂರ್ಣಗೊಳಿಸಲಾಗುತ್ತಿದೆ. ನೇತ್ರದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಂತಿಮ ದರ್ಶನ ಮತ್ತೆ ನಡೆಯಲಿದೆ. ಇದನ್ನೂ ಓದಿ: ಕೋವಿಡ್ ವೇಳೆ 2 ಲಕ್ಷ ಕೊಟ್ಟು ಯಾರಿಗಾದ್ರೂ ಸಹಾಯ ಮಾಡು ಅಂತ ಹೇಳಿದ್ರು – ಸಾಧು ಕೋಕಿಲಾ

    ಕನ್ನಡ ವರನಟ ಡಾ.ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ (Puneeth Rajkumar) ಕೂಡ ನೇತ್ರದಾನ ಮಾಡಿದ್ದರು. ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ಮರಣದ ನಂತರ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯದಲ್ಲಿ ಇಬ್ಬರು ಅಂಧರಿಗೆ ಅಳವಡಿಸಲಾಗಿದೆ. ಆ ಮೂಲಕ ಇಬ್ಬರ ಬಾಳಿಗೆ ಪುನೀತ್ ರಾಜ್‌ಕುಮಾರ್ ಬೆಳಕಾಗಿದ್ದಾರೆ. ಇದೀಗ ರಾಜ್‌ಕುಮಾರ್‌, ಪುನೀತ್‌ ಅವರ ಹಾದಿಯಾಗಿ ಸರೋಜಾದೇವಿ ಅವರೂ ನೇತ್ರದಾನ ಮಾಡಿದ್ದು, ಬದುಕಿನ ಪಯಣ ಮುಗಿಸಿದ್ದಾರೆ. ಇದನ್ನೂ ಓದಿ: ಸಿನಿಮಾದ ಸುವರ್ಣ ಯುಗವೊಂದು ಅಂತ್ಯವಾಗಿದೆ – ಸರೋಜಾದೇವಿ ನಿಧನಕ್ಕೆ ಕಂಬನಿ ಮಿಡಿದ ರಜನಿಕಾಂತ್‌, ಖುಷ್ಬು

    ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಭಾಗ್ಯವಂತರು, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಕನ್ನಡ ಚಿತ್ರರಂಗದ ಕಿತ್ತೂರು ರಾಣಿ ಚೆನ್ನಮ್ಮ ಅಂತಲೇ ಎಲ್ಲರ ಮನದಲ್ಲಿ ಮನೆ ಮಾಡಿದ್ದ ಸರೋಜಾದೇವಿ ಅವರು ತಮ್ಮ ನಿವಾಸದಲ್ಲಿ ಉಸಿರು ಚೆಲ್ಲಿದ್ದಾರೆ. ಹಿರಿಯ ನಟಿಯ ನಿಧನಕ್ಕೆ ಸಿನಿ ಗಣ್ಯರು, ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ಬಿ.ಸರೋಜಾದೇವಿಯವರ ಸಾವಿನಿಂದ ಕಲಾಜಗತ್ತು ಬಡವಾಗಿದೆ – ಸಿಎಂ ಸಂತಾಪ

  • ಮೈದಾನದ ಗೇಟ್‌ ಮುರಿದು ಬಿದ್ದು ಬಾಲಕ ಸಾವು – ಪೋಷಕರಿಂದ ಪುತ್ರನ ನೇತ್ರದಾನ

    ಮೈದಾನದ ಗೇಟ್‌ ಮುರಿದು ಬಿದ್ದು ಬಾಲಕ ಸಾವು – ಪೋಷಕರಿಂದ ಪುತ್ರನ ನೇತ್ರದಾನ

    – ಮಗನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಪೋಷಕರು

    ಬೆಂಗಳೂರು: ಆಟದ ಮೈದಾನದಲ್ಲಿ ಗೇಟ್‌ ಮುರಿದು ಮೈಮೇಲೆ ಬಿದ್ದು ಸಾವನ್ನಪ್ಪಿದ ಬಾಲಕನ ನೇತ್ರದಾನಕ್ಕೆ ಪೋಷಕರು ಮುಂದಾಗಿದ್ದಾರೆ. ಪುತ್ರನ ಸಾವಿನ ನೋವಿನಲ್ಲೂ ಪೋಷಕರು ಮಾನವೀಯತೆ ಮೆರೆದಿದ್ದಾರೆ.

    ಮೃತ ನಿರಂಜನ್ ಕಣ್ಣುಗಳನ್ನು ಲಯನ್ಸ್ ಇಂಟರ್‌ನ್ಯಾಷನಲ್‌ ಐ ಬ್ಯಾಂಕ್‌ಗೆ ದಾನ ಮಾಡಲು ಆತನ ತಂದೆ ವಿಜಯ್ ಪವಾರ್ ಮುಂದಾಗಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದ್ದು, ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗುವುದು. ಇದನ್ನೂ ಓದಿ: ಬೆಂಗಳೂರಲ್ಲಿ ಮೈದಾನದ ಗೇಟ್ ಬಿದ್ದು ಬಾಲಕ ದುರ್ಮರಣ

    ಮೃತ ಬಾಲಕನ ತಂದೆ ಸ್ನೇಹಿತ ಮಾತನಾಡಿ, ನಿರಂಜನ್‌ ಕಳೆದುಕೊಂಡು ಅವರ ತಂದೆ ದುಃಖದಲ್ಲಿದ್ದಾರೆ. ನಿನ್ನೆ ಸಚಿವ ದಿನೇಶ್‌ ಗುಂಡೂರಾವ್‌ ಅವರು ಬಾಲಕನ ಪೋಷಕರನ್ನು ಭೇಟಿ ಮಾಡಿ ಸಂತೈಸಿದ್ದಾರೆ. ನಾವು ನಿರಂಜನ್‌ನನ್ನು ಕಳೆದುಕೊಂಡಿದ್ದೇವೆ. ಬೇರೆಯವರಿಗೆ ಉಪಯೋಗವಾಗಲಿ ಎಂದು ಆತನ ಕಣ್ಣುಗಳನ್ನು ದಾನ ಮಾಡಲು ಬಾಲಕನ ಪೋಷಕರು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.

    ಮೈದಾನದ ಗೇಟ್ ಮುರಿದು ತಲೆಗೆ ಬಿದ್ದು ಬಾಲಕ ಸಾವಿಗೀಡಾದ ಘಟನೆ ಮಲ್ಲೇಶ್ವರಂ ಬಿಬಿಎಂಪಿ ಗ್ರೌಂಡ್‌ನಲ್ಲಿ ಭಾನುವಾರ ನಡೆದಿತ್ತು. ಘಟನೆಯಲ್ಲಿ ನಿರಂಜನ್ (10) ಮೃತಪಟ್ಟಿದ್ದ. ಆಟ ಆಡಲು ಬಾಲಕ ಮೈದಾನಕ್ಕೆ ಬಂದಿದ್ದ. ಈ ವೇಳೆ ಬಾಲಕ ಗೇಟ್ ಬಳಿಯೇ ನಿಂತಿದ್ದ. ಗೇಟ್ ತೆರೆಯುತ್ತಿದ್ದಂತೆ ಆತನ ತಲೆ ಮೇಲೆ ಮುರಿದು ಬಿದ್ದಿತ್ತು. ಪರಿಣಾಮವಾಗಿ ತಲೆಗೆ ತೀವ್ರ ಗಾಯವಾಗಿ ಬಾಲಕ ಮೃತಪಟ್ಟಿದ್ದ. ಇದನ್ನೂ ಓದಿ: ಬೆಂಗಳೂರಲ್ಲಿ ಮಹಿಳೆಯ ಬರ್ಬರ ಹತ್ಯೆ- ಪಶ್ಚಿಮ ಬಂಗಾಳದಲ್ಲಿ ಹಂತಕ ತಲೆಮರೆಸಿಕೊಂಡಿರೋ ಶಂಕೆ

  • ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು – ನೇತ್ರದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

    ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು – ನೇತ್ರದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

    ಚಿಕ್ಕಬಳ್ಳಾಪುರ: ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಬಳಿ ಕಳೆದ ಗುರುವಾರ ಸಂಭವಿಸಿದ್ದ ಅಪಘಾತದಲ್ಲಿ (Accident) ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಕುಟುಂಬಸ್ಥರು ಸಾವಿನ ನೋವಿನಲ್ಲೂ ಆಕೆಯ ಕಣ್ಣುಗಳನ್ನು ದಾನ (Eye Donation) ಮಾಡುವ ಮೂಲಕ ಮಾನವೀಯತೆ, ಸಾರ್ಥಕತೆ ಭಾವ ಮೆರೆದಿದ್ದಾರೆ.

    ಆಗಸ್ಟ್ 10ರಂದು ಮಗಳನ್ನು ಶಾಲೆಗೆ ಬಿಡಲು ಬೈಕ್‌ನಲ್ಲಿ ಹೊರಟಿದ್ದ ಮುದ್ದನಾಯಕನಹಳ್ಳಿ ನಿವಾಸಿ ವೆಂಕಟೇಶ್ (42) ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಗಳು ಯಶಸ್ವಿನಿಗೆ (16) ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದ 6 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯಶಸ್ವಿನಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆಯುಸಿರೆಳಿದ್ದಾಳೆ. ಇದನ್ನೂ ಓದಿ: ಬಿಎಂಟಿಸಿ ಬಸ್ ಹರಿದು 4ರ ಬಾಲಕಿ ಸಾವು

    ಕಳೆದ ಗುರುವಾರ ದಾಬಸ್‌ಪೇಟೆ ಕಡೆಯಿಂದ ಬಂದ ಟಿಪ್ಪರ್ ಎದುರುಗಡೆಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಟಿಪ್ಪರ್ ಚಕ್ರಕ್ಕೆ ಸಿಕ್ಕಿ ಸ್ಥಳದಲ್ಲೇ ವೆಂಕಟೇಶ್ ಮೃತಪಟ್ಟಿದ್ದರು. ಮುಂಬದಿ ಚಕ್ರಕ್ಕೆ ಸಿಲುಕಿದ ಯಶಸ್ವಿನಿಯ ಕೈ ತುಂಡಾಗಿತ್ತು. ನಗರದ ರಂಗಪ್ಪ ವೃತ್ತದಲ್ಲಿನ ಖಾಸಗಿ ಡ್ರೈವಿಂಗ್‌ ಶಾಲೆಯಲ್ಲಿ ವಾಹನ ತರಬೇತುದಾರರಾಗಿದ್ದ ವೆಂಕಟೇಶ್ ಅವರಿಗೆ ಇಬ್ಬರು ಪುತ್ರಿಯರಿದ್ದಾರೆ. ಬಸವಭವನ ಸಮೀಪದ ಖಾಸಗಿ ಶಾಲೆಗೆ ಮಗಳನ್ನು ಪ್ರತಿದಿನ ಅವರೇ ಬೈಕ್‌ನಲ್ಲಿ ಬಿಟ್ಟು, ಕರೆತರುತ್ತಿದ್ದರು. ಇದನ್ನೂ ಓದಿ: ಗೆಳೆಯನಿಗಾಗಿ ಆತನ ಮಗನನ್ನೇ ಕೊಂದು ಮಂಚದಡಿಯಲ್ಲಿ ಬಚ್ಚಿಟ್ಟಳು!

    ಅಪಘಾತದ ಭೀಕರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಧಿಕಾರಿಗಳನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಬಾಲಕಿಯ ಒಂದು ಕೈ ತುಂಡಾಗಿ ರಸ್ತೆಯಲ್ಲಿ ಬಿದ್ದಿದ್ದು, ಲಾರಿ ಚಕ್ರದ ಅಡಿಯಲ್ಲಿ ಸಿಲುಕಿರುವ ಬಾಲಕಿಯ ಆಕ್ರಂದನದ ದೃಶ್ಯಗಳು ಮನಕಲುಕುವಂತಿತ್ತು. ಯಶಸ್ವಿನಿ ಗುಣಮುಖರಾಗಲೆಂದು ತಾಲೂಕಿನ ಜನತೆ ನೆರವು ನೀಡಿ, ಪ್ರಾರ್ಥನೆ ಸಲ್ಲಿಸಿದ್ದರು. ಆದರೆ, ಪ್ರಾರ್ಥನೆ ಫಲಿಸದೆ ಯಶಸ್ವಿನಿ ಇದೀಗ ಚಿರನಿದ್ರೆಗೆ ಜಾರಿದ್ದಾಳೆ. ಇದನ್ನೂ ಓದಿ: ಎದೆ ಹಾಲು ಕುಡಿದು ಮಲಗಿದ್ದ 3 ತಿಂಗಳ ಪುಟ್ಟ ಕಂದಮ್ಮ ದುರ್ಮರಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಾ.ರಾಜ್ ಹಾದಿಯಲ್ಲಿ ನಿರ್ದೇಶಕ ಭಗವಾನ್ : ನಾಲ್ಕು ಜನಕ್ಕೆ ನೇತ್ರದಾನ

    ಡಾ.ರಾಜ್ ಹಾದಿಯಲ್ಲಿ ನಿರ್ದೇಶಕ ಭಗವಾನ್ : ನಾಲ್ಕು ಜನಕ್ಕೆ ನೇತ್ರದಾನ

    ರನಟ ಡಾ.ರಾಜ್ ಕುಮಾರ್ (Dr. Rajkumar) ಕುಟುಂಬದೊಂದಿಗೆ ಆತ್ಮೀಯ ಬಾಂಧವ್ಯ ಇಟ್ಟುಕೊಂಡಿದ್ದರು ನಿರ್ದೇಶಕ ಎಸ್.ಕೆ.ಭಗವಾನ್ (Bhagavan). ಅಣ್ಣಾವ್ರು ಎಲ್ಲಿರುತ್ತಿದ್ದರೋ ಅಲ್ಲಿ ಭಗವಾನ್ ಇರಲೇಬೇಕಿತ್ತು. ಅಷ್ಟರ ಮಟ್ಟಿಗೆ ಡಾ.ರಾಜ್ ಕುಮಾರ್ ಜೊತೆ ಭಗವಾನ್ ಹೊಂದಿಕೊಂಡಿದ್ದರು. ಇದೀಗ ಭಗವಾನ್ ಅವರು ಅಣ್ಣಾವ್ರ ಹಾದಿಯನ್ನೇ ತುಳಿದಿದ್ದಾರೆ. ಡಾ.ರಾಜ್ ಕುಮಾರ್, ಪುನೀತ್ ರಾಜಕುಮಾರ್ (Puneeth Rajkumar) ರೀತಿಯಲ್ಲೇ ಭಗವಾನ್ ಕೂಡ ನೇತ್ರದಾನ (eye donation) ಮಾಡಿದ್ದಾರೆ.

    ರಾಜಕುಮಾರ್ ಅವರು ನೇತ್ರದಾನಕ್ಕೆ ನೋಂದಣಿ ಮಾಡಿಸಿದ ಸಂದರ್ಭದಲ್ಲೇ ಭಗವಾನ್ ಕೂಡ ತಮ್ಮ ಹೆಸರನ್ನು ನೋಂದಾಯಿಸಿದ್ದರಂತೆ. ಹಾಗಾಗಿ ಇಂದು ಅವರ ಮರಣಾನಂತರ ಕಣ್ಣಿನ ಕಾರ್ನಿಯಾವನ್ನು ತೆಗೆಯಲಾಗಿದೆ. ನಾರಾಯಣ ನೇತ್ರಾಲಯದ ಐ ಬ್ಯಾಂಕ್ ಮ್ಯಾನೇಜರ್ ವೀರೇಶ್ ಕಣ್ಣು ತೆಗೆದ ನಂತರ ಮಾತನಾಡಿ, ‘ಭಗವಾನ್ ಅವರ ಕಾರ್ನಿಯಾ ಆರೋಗ್ಯವಾಗಿದೆ. ಕಣ್ಣಿಗೆ ಯಾವುದೇ ಸಮಸ್ಯೆ ಇರಲಿಲ್ಲವಾದ್ದರಿಂದ ನಾಲ್ಕೈದು ಜನರಿಗೆ ದೃಷ್ಟಿ ಸಿಗಬಹುದು’ ಎಂದಿದ್ದಾರೆ. ಇದನ್ನೂ ಓದಿ:ನಟ ನಂದಮೂರಿ ತಾರಕ ರತ್ನ ಇನ್ನಿಲ್ಲ

    1966ರಲ್ಲಿ ತೆರೆಕಂಡ ಸಂಧ್ಯಾರಾಗ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾಗಿ ಭಡ್ತಿ ಪಡೆದ ಭಗವಾನ್, ನಂತರ ನಿರ್ದೇಶಕ ದೊರೈರಾಜ್ ಜೊತೆಗೂಡಿ ಸ್ವತಂತ್ರ ನಿರ್ದೇಶಕರಾದವರು. 1993ರಲ್ಲಿ ದೊರೈರಾಜ್ ನಿಧನದ ನಂತರ ಒಂಟಿಯಾದರು ಭಗವಾನ್. ಬರೋಬ್ಬರಿ 49 ಸಿನಿಮಾಗಳನ್ನು ಈ ಜೋಡಿ ನಿರ್ದೇಶನ ಮಾಡಿದ್ದು ವಿಶೇಷ. ಈ ಜೋಡಿಯ ಮತ್ತೊಂದು ದಾಖಲೆಯೆಂದರೆ 24 ಕಾದಂಬರಿ ಆಧರಿಸಿದ ಸಿನಿಮಾಗಳನ್ನು ಈ ಜೋಡಿ  ನಿರ್ದೇಶನ ಮಾಡಿದೆ.

    ಕನ್ನಡದ ಅಷ್ಟೂ ಸೂಪರ್ ಸ್ಟಾರ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ ಹೆಗ್ಗಳಿಕೆ ಈ ಜೋಡಿಯದ್ದು. ಜೇಡರ ಬಲೆ, ಕಸ್ತೂರಿ ನಿವಾಸ, ಎರಡು ಕನಸು, ಬಯಲು ದಾರಿ, ಗಿರಿಕನ್ಯೆ, ಚಂದನದ ಗೊಂಬೆ, ಜೀವನ ಚೈತ್ರ, ಒಡಹುಟ್ಟಿದವರು, ಯಾರಿವನು, ಮುನಿಯನ ಮಾದರಿ ಹೀಗೆ ಅಷ್ಟೂ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು – ಕಣ್ಣುಗಳನ್ನು ದಾನ ಮಾಡಿದ ಪೋಷಕರು

    ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು – ಕಣ್ಣುಗಳನ್ನು ದಾನ ಮಾಡಿದ ಪೋಷಕರು

    ಚಿಕ್ಕಮಗಳೂರು: ಹೃದಯಾಘಾತದಿಂದ (Heart Attack) 9ನೇ ತರಗತಿಯ ಬಾಲಕಿ (School Girl) ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ. ಬಾಲಕಿ ಸಾವನ್ನಪ್ಪುತ್ತಿದ್ದಂತೆ ಆಕೆಯ ಪೋಷಕರು ಕೂಡಲೇ ಆಕೆಯ ಕಣ್ಣುಗಳನ್ನು ದಾನ (Eye Donation) ಮಾಡಲು ಮುಂದಾಗಿದ್ದಾರೆ.

    ಮೃತ ವಿದ್ಯಾರ್ಥಿನಿಯನ್ನು ವೈಷ್ಣವಿ (14) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ 7:30ರ ಸುಮಾರಿಗೆ ಬಾಲಕಿ ಸಾವನ್ನಪ್ಪಿದ್ದು, ಆಕೆಯ ನೇತ್ರದಾನ ವಿಚಾರವನ್ನು ಸ್ಥಳೀಯರು ಚಿಕ್ಕಮಗಳೂರು (Chikkamagaluru) ಆರೋಗ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಆದರೆ ಅಧಿಕಾರಿಗಳು ಬರುತ್ತೇವೆ, ಬರುತ್ತೇವೆ ಎಂದು ಹೇಳಿ ರಾತ್ರಿ 12 ಗಂಟೆಯಾದರೂ ಸ್ಥಳವನ್ನು ತಲುಪಿಲ್ಲ.

    ಮಗಳ ಸಾವಿನ ನೋವಿನಲ್ಲೂ ಆಕೆಯ ಪೋಷಕರು ಕಣ್ಣು ಕೊಡಲು ಮುಂದಾಗಿದ್ದಾರೆ. ಅದರೆ ಅಧಿಕಾರಿಗಳು ಬರುತ್ತಿಲ್ಲ ಎಂದು ಸ್ಥಳೀಯರು ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದರು. ಇದಾದ ಬಳಿಕ ರಾತ್ರಿ 1 ಗಂಟೆ ಸುಮಾರಿಗೆ ಅಧಿಕಾರಿಗಳು ಹೋಗಿ ಕಣ್ಣನ್ನು ತಂದಿದ್ದಾರೆ. ಇದನ್ನೂ ಓದಿ: ಗುಜರಾತ್‌ನಲ್ಲಿ ತೂಗು ಸೇತುವೆ ಕುಸಿತ – ಸಾವಿನ ಸಂಖ್ಯೆ 35ಕ್ಕೇರಿಕೆ, ನೂರಾರು ಮಂದಿ ನೀರುಪಾಲು

    ಮೃತ ವೈಷ್ಣವಿ ಪೋಷಕರು ಮಗಳ ಸಾವಿನ ನೋವಿನಲ್ಲೂ ಕಣ್ಣುಗಳನ್ನು ದಾನ ಮಾಡಿ, ಮತ್ತೊಬ್ಬರ ದೇಹ ಸೇರಿ ಜಗತ್ತನ್ನು ನೋಡಲು ಕಾರಣಕರ್ತರಾಗಿ, ಸಾರ್ಥಕತೆ ಮೆರೆದಿದ್ದಾರೆ. ಮೃತ ಬಾಲಕಿಯ ಕುಟುಂಬದವರು ಮೂಲತಃ ಉತ್ತರ ಭಾರತದವರಾಗಿದ್ದು, ಆಕೆಯ ಪೋಷಕರು ಮೂಡಿಗೆಯಲ್ಲಿ ಬದುಕು ಕಟ್ಟಿಕೊಂಡಿದ್ದರು. ಬಾಲಕಿಯ ಮೃತದೇಹವನ್ನು ತಮ್ಮ ಊರಿಗೆ ಕೊಂಡೊಯ್ದಿದ್ದಾರೆ. ಇದನ್ನೂ ಓದಿ: 50ಕ್ಕೂ ಹೆಚ್ಚು ಜನರನ್ನು ಹೊತ್ತು ಹಳ್ಳದಾಟುತ್ತಿದ್ದಾಗ ಸಿಲುಕಿದ ಲಾರಿ

    Live Tv
    [brid partner=56869869 player=32851 video=960834 autoplay=true]

  • ಸಾವಿನಲ್ಲೂ ಸಾರ್ಥಕತೆ ಮೆರೆದ ಕೂಲಿ ಕಾರ್ಮಿಕರು- ಮೃತಪಟ್ಟ 9 ಮಂದಿಯಲ್ಲಿ 6 ಜನರ ನೇತ್ರದಾನ

    ಸಾವಿನಲ್ಲೂ ಸಾರ್ಥಕತೆ ಮೆರೆದ ಕೂಲಿ ಕಾರ್ಮಿಕರು- ಮೃತಪಟ್ಟ 9 ಮಂದಿಯಲ್ಲಿ 6 ಜನರ ನೇತ್ರದಾನ

    ತುಮಕೂರು: ಶಿರಾ ಬಳಿ ನಡೆದ ಅಪಘಾತದಲ್ಲಿ 9 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೂಲಿ ಕಾರ್ಮಿಕರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

    ಹೌದು. ಅಪಘಾತದಲ್ಲಿ ಮೃತಪಟ್ಟ 9 ಮಂದಿಯಲ್ಲಿ 6 ಜನರು ನೇತ್ರದಾನ ಮಾಡಲು ಮುಂದಾಗಿದ್ದಾರೆ. ನೋವಿನ ಮಧ್ಯೆಯೂ ಕುಟುಂಬಸ್ಥರು ಮನೆ ಮಕ್ಕಳ ನೇತ್ರದಾನ ಮಾಡಿದ್ದಾರೆ. ಮೃತಪಟ್ಟ ಚಾಲಕ ಕೃಷ್ಣ, ಸಿದ್ದಯ್ಯಸ್ವಾಮಿ, ನಿಂಗಣ್ಣ, ಮೀನಾಕ್ಷಿ, ಸುಜಾತಾ, ಪ್ರಭುಸ್ವಾಮಿ ಎಂಬವರ ನೇತ್ರದಾನ ಮಾಡಲು ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದಾರೆ. ಶಿರಾ ತಾಲೂಕಾಸ್ಪತ್ರೆ ಮುಂದೆ ಮೃತರ ಸಂಬಂಧಿಕರ ಗೋಳಾಟ ಹೇಳತೀರದಂತಾಗಿದೆ.

    ಈ ಸಂಬಂಧ ಶಿರಾ ತಹಶಿಲ್ದಾರ್ ಮಮತಾ ಸುದ್ದಿಗಾರರೊಂದಿಗೆ ಮಾತನಾಡಿ, ಮೃತರ ಕುಟುಂಬಸ್ಥರು ಸಾರ್ಥಕ ಕೆಲಸ ಮಾಡಿದ್ದಾರೆ. ಐ ಡೊನೇಟ್ ಮಾಡಿ ಮಾನವೀಯತೆ ಮೆರೆದಿದ್ದಾರೆ. 6 ಜನರ ಕುಟುಂಬಸ್ಥರು ಸ್ವ-ಇಚ್ಛೆಯಿಂದ ಕಣ್ಣು ದಾನ ಮಾಡಲು ಒಪ್ಪಿಕೊಂಡಿದ್ದಾರೆ. ಇನ್ನೊಬ್ಬರ ಬಾಳಲ್ಲಿ ಬೆಳಕಾಗಲು ಬಯಸಿದ್ದಾರೆ. ಆ ಕುಟುಂಬಕ್ಕೆ ಒಳ್ಳೆಯದಾಗಲಿ. ಅಲ್ಲದೆ ದುಃಖ ಸಹಿಸುವ ಶಕ್ತಿ ಬರಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತುಮಕೂರಿನ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

    ಇತ್ತ ನೇತ್ರದಾನದ ಬಳಿಕ ಮೃತ ಚಾಲಕ ಕೃಷ್ಣನ ತಂದೆ ತಿಪ್ಪಾರೆಡ್ಡಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ನನ್ನ ಮಗನನ್ನು ಬೇರೆಯವರ ಕಣ್ಣಿನ ಮೂಲಕ ನೋಡಬೇಕು. ಹಾಗಾಗಿ ಕಣ್ಣು ದಾನ ಮಾಡಿದ್ದೇವೆ. ಕಣ್ಣು ದಾನದ ಮೂಲಕ ಮಗ ಜೀವಂತ ಆಗಿರಬೇಕು ಎಂದು ಬಯಸಿದ್ದೇವೆ. ಹಾಗಾಗಿ ಸ್ವ-ಇಚ್ಛೆಯಿಂದ ನೇತ್ರದಾನ ಮಾಡಿಸಿದ್ದೇವೆ ಎಂದು ಹೇಳಿದರು.

    ಸದ್ಯ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ. ಒಟ್ಟು 4 ಅಂಬುಲೆನ್ಸ್‍ನಲ್ಲಿ ಮೃತದೇಹವನ್ನು ರವಾನಿಸಲಾಗಿದೆ.  ಇದನ್ನೂ ಓದಿ: ತುಮಕೂರಿನ ಶಿರಾದಲ್ಲಿ ಭೀಕರ ಅಪಘಾತ – ಕ್ರೂಸರ್‌ ಚಕ್ರಕ್ಕೆ 9 ಮಂದಿ ಬಲಿ?

    Live Tv
    [brid partner=56869869 player=32851 video=960834 autoplay=true]

  • ಜಗತ್ತನ್ನು ನೋಡಲು ಅವಕಾಶ ಕಲ್ಪಿಸುವ ಶ್ರೇಷ್ಠ ಕಾರ್ಯವೇ ನೇತ್ರದಾನ: ಬಿ.ಸಿ.ನಾಗೇಶ್

    ಜಗತ್ತನ್ನು ನೋಡಲು ಅವಕಾಶ ಕಲ್ಪಿಸುವ ಶ್ರೇಷ್ಠ ಕಾರ್ಯವೇ ನೇತ್ರದಾನ: ಬಿ.ಸಿ.ನಾಗೇಶ್

    ಬೆಂಗಳೂರು: ದಾನಗಳಲ್ಲಿ ಶ್ರೇಷ್ಠದಾನ ಎನಿಸಿಕೊಂಡಿರುವ ನೇತ್ರದಾನ ಮಾಡಲು ಪ್ರತಿಜ್ಞಾ ಪತ್ರಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ.ನಾಗೇಶ್ ಸಹಿ ಹಾಕಿದರು.

    ತಿಪಟೂರು ತಾಲೂಕು ಆಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ, ತಿಪಟೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಆರೋಗ್ಯ ಮೇಳ ಹಾಗೂ ಆರೋಗ್ಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ನಾಗೇಶ್ ಅವರು ನೇತ್ರದಾನ ಮಾಡುವ ಪ್ರತಿಜ್ಞಾ ಪತ್ರಕ್ಕೆ ಸಹಿ ಹಾಕಿದರು. ಇದನ್ನೂ ಓದಿ: ಪಿಎಂ ಮನೆ ಮುಂದೆ ಎಲ್ಲ ಧರ್ಮದ ಸಾಲುಗಳನ್ನು ಪಠಿಸಲು ಅವಕಾಶ ಕೊಡಿ: NCP ನಾಯಕಿ 

    ಅನ್ನದಾನದಂತೆ ನೇತ್ರದಾನ ಕೂಡ ಶ್ರೇಷ್ಠ ದಾನವಾಗಿದೆ. ಮನುಷ್ಯ ತಾನು ಕಾಲವಾದ ನಂತರ ಮತ್ತೊಬ್ಬರ ಜೀವನದಲ್ಲಿ ಬೆಳಕು ಮೂಡಿಸುವ, ಜಗತ್ತನ್ನು ನೋಡಲು ಅವಕಾಶ ಕಲ್ಪಿಸುವ ಶ್ರೇಷ್ಠ ಕಾರ್ಯವೇ ನೇತ್ರದಾನ. ವಿವಿಧ ಕಾರಣಗಳಿಂದ ನಮ್ಮ ದೇಶದಲ್ಲಿ ಅಂಧತ್ವ ಎದುರಿಸುತ್ತಿರುವ ನಾಗರಿಕರ ಸಂಖ್ಯೆ ದೊಡ್ಡದಿದೆ. ಇಂತಹ ಅಂಧರ ಬಾಳಿನಲ್ಲಿ ಬೆಳಕು ಮೂಡಿಸುವ ಶ್ರೇಷ್ಠ ಕಾರ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮುಂದಾಗಬೇಕು ಎಂದು ನೇತ್ರದಾನಕ್ಕೆ ಕರೆ ನೀಡಿದರು.

    ಆರೋಗ್ಯ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ತಿರುಗಿ ನೋಡುವಂತಹ ಸಾಧನೆಗಳನ್ನು ಭಾರತ ಮಾಡುತ್ತಿದೆ. ಎರಡು ವರ್ಷಗಳ ಹಿಂದೆ ಕೋವಿಡ್-19 ಮಹಾಮಾರಿ ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಿಗೆ ವ್ಯಾಪಿಸುತ್ತಿತ್ತು. ಈ ಸಂದರ್ಭದಲ್ಲಿ ಭಾರತ ಎದುರಿಸಬಹುದಾದ ಪರಿಸ್ಥಿತಿ ಕುರಿತು ಮುಂದುವರೆದ ರಾಷ್ಟ್ರಗಳು ಭಯ, ಭೀತಿ, ಆತಂಕ ವ್ಯಕ್ತಪಡಿಸಿದ್ದವು. ಭಾರತವು ಕೋವಿಡ್-19 ಔಷಧಿ ಮತ್ತು ಲಸಿಕೆಗಾಗಿ ಅನ್ಯ ರಾಷ್ಟ್ರಗಳ ಮೇಲೆ ಅವಲಂಬಿಸಬೇಕಾಗುತ್ತದೆ ಎಂದು ತಿಳಿಸಿದರು.

    130 ಕೋಟಿಗೂ ಅಧಿಕ ಜನಸಂಖ್ಯೆಯ ಭಾರತಕ್ಕೆ ಲಸಿಕೆ ಮತ್ತು ಔಷಧಿ ಸಿಗುವುದು ವಿಳಂಬವಾಗುವ ಕಾರಣ ಭಾರತದಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸುತ್ತೆ ಎಂದು ವಿವಿಧ ರಾಷ್ಟ್ರಗಳ ತಜ್ಞರು ಹೇಳಿಕೆ ನೀಡಿದ್ದರು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕೋವಿಡ್-19 ನಿಯಂತ್ರಣದಲ್ಲಿ ಅಭೂತಪೂರ್ವ ಸಾಧನೆ ಮಾಡಿದೆ. ಬೇರೆ ದೇಶಗಳ ಮೇಲೆ ಅವಲಂಬನೆಯಾಗದೆ ಭಾರತದಲ್ಲೇ ಲಸಿಕೆಗಳನ್ನು ಅಭಿವೃದ್ಧಿಪಡಿಸಿ, ಜನರಿಗೆ ಉಚಿತವಾಗಿ ನೀಡುವ ಮೂಲಕ ಇಡೀ ಜಗತ್ತೇ ಭಾರತದ ಕಡೆ ನೋಡುವ ಸಾಧನೆಗೆ ಕಾರಣವಾಯಿತು. ಹಲವು ರಾಷ್ಟ್ರಗಳಿಗೆ ಉಚಿತವಾಗಿ ಲಸಿಕೆ ಸರಬರಾಜು ಮಾಡಿ ಭಾರತ ಸೈ ಎನಿಸಿಕೊಂಡಿತು ಎಂದರು. ಇದನ್ನೂ ಓದಿ: ʼಆಚಾರ್ಯ’ ಸಿನಿಮಾದಲ್ಲಿ ಕಾಜಲ್ ಇಲ್ಲ: ಶಾಕಿಂಗ್ ನ್ಯೂಸ್ ಕೊಟ್ಟ ನಿರ್ದೇಶಕ ಕೊರಟಾಲ ಶಿವ

    ಅಷ್ಟೇ ಅಲ್ಲದೆ ಲಸಿಕೆ ಅಭಿವೃದ್ಧಿಪಡಿಸುತ್ತಿದ್ದ ಭಾರತೀಯ ವಿಜ್ಞಾನಿಗಳಿಗೆ, ಕಂಪನಿಗಳಿಗೆ ಬೆಂಬಲ ನೀಡಿ ಅವರ ಬೆನ್ನು ತಟ್ಟಿ ಪ್ರೋತ್ಸಾಹಿಸಿದರು. ಲಸಿಕೆ ಅಭಿವೃದ್ಧಿಯಾಗಿ ಶೀಘ್ರದಲ್ಲೇ ಜನರಿಗೆ ತಲುಪಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಪಾತ್ರ ವಹಿಸಿದರು ಎಂದು ಸಚಿವ ನಾಗೇಶ್ ನುಡಿದರು.

  • ಹುಟ್ಟುಹಬ್ಬಕ್ಕೆ ನೇತ್ರದಾನ ಮಾಡಿದ ಬಿಚ್ಚುಗತ್ತಿ ಹೀರೋ ರಾಜವರ್ಧನ್

    ಹುಟ್ಟುಹಬ್ಬಕ್ಕೆ ನೇತ್ರದಾನ ಮಾಡಿದ ಬಿಚ್ಚುಗತ್ತಿ ಹೀರೋ ರಾಜವರ್ಧನ್

    ನ್ನಡದ ಯುವ ಪ್ರತಿಭಾವಂತ ನಟ ‘ಬಿತ್ತುಗತ್ತಿ’ ಚಿತ್ರಖ್ಯಾತಿಯ ರಾಜವರ್ಧನ್ ತಮ್ಮ ಹುಟ್ಟುಹಬ್ಬವನ್ನು ನೇತ್ರದಾನ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ನಿಂದ ಜೇಮ್ಸ್ ಚಿತ್ರಕ್ಕೆ ತೊಂದರೆ ಇಲ್ಲ : ಶಿವರಾಜ್ ಕುಮಾರ್

    ಹುಟ್ಟು ಹಬ್ಬದ ಖುಷಿಯಲ್ಲಿರುವ ರಾಜವರ್ಧನ್ ಯುವಕರಿಗೆ ಮಾದರಿಯಾಗುವಂತೆ ಅರ್ಥಪೂರ್ಣವಾಗಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಇಂದು ಅವರು ಮಿಂಟೋ ಆಸ್ಪತ್ರೆಯಲ್ಲಿ ನೇತ್ರಾದಾನ ಮಾಡಲು ರಾಜವರ್ಧನ್ ನೋಂದಣಿ ಮಾಡಿಸಿದ್ದಾರೆ. ಈ ಸಂದರ್ಭದಲ್ಲಿ ಮಿಂಟೋ ಆಸ್ಪತ್ರೆಯ ನಿರ್ದೇಶಕರಾದ ಡಾ.ಸುಜಾತಾ ರಾಥೋಡ್, ಡಾ.ಮಂಜುನಾಥ್ ಉಪಸ್ಥಿತರಿದ್ದರು. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಲಾಭವನ್ನು ದಾನಮಾಡಿ ಎಂದ ಐಎಎಸ್ ಆಫೀಸರ್: ನಿರ್ದೇಶಕರ ಉತ್ತರವೇನು?

    ಬಿಚ್ಚುಗತ್ತಿ ಸಿನಿಮಾ ಮೂಲಕ ಸ್ಯಾಂಡಲ್ವುಕಡ್ ಗೆ  ಎಂಟ್ರಿ ಕೊಟ್ಟಿದ್ದ ಡಿಂಗ್ರಿ ನಾಗರಾಜ್ ಪುತ್ರ ನಟ ರಾಜವರ್ಧನ್ ಮೊದಲ ಸಿನಿಮಾದಲ್ಲಿ ಭರವಸೆ ನಾಯಕ ಮಿಂಚಿದ್ದಾರೆ. ಸದ್ಯ ಹಿರಣ್ಯ ಸಿನಿಮಾದಲ್ಲಿ ನಟಿಸ್ತಿರುವ ರಾಜವರ್ಧನ್, ಅತ್ತ ಪ್ರಣಯಂ ಸಿನಿಮಾ ಮುಗಿಸಿ ರಿಲೀಸ್ ಗೆ ಎದುರು ನೋಡ್ತಿದ್ದಾರೆ. ಅಂದಹಾಗೇ ಹಿರಣ್ಯ ಚಿತ್ರಕ್ಕೆಪ್ರವೀಣ್ ಅವ್ಯುಕ್ತ್ ನಿರ್ದೇಶನದ ಮಾಡ್ತಿದ್ದು, ವಿಘ್ನೇಶ್ವರ ಮತ್ತು ವಿಜಯ್ ಕುಮಾರ್ ಬಂಡವಾಳ ಹೂಡಿದ್ದಾರೆ. ತೆಲುಗಿನ ಹುಡುಗಿ ರಿಹಾನಾ ನಾಯಕಿಯಾಗಿ ನಟಿಸ್ತಿದ್ದಾರೆ.

  • ಅಪ್ಪು ಹುಟ್ಟು ಹಬ್ಬಕ್ಕೆ ನೇತ್ರದಾನದ ವಾಗ್ದಾನ

    ಅಪ್ಪು ಹುಟ್ಟು ಹಬ್ಬಕ್ಕೆ ನೇತ್ರದಾನದ ವಾಗ್ದಾನ

    ಚಿಕ್ಕಬಳ್ಳಾಪುರ: ನಟ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ನಾಳೆ ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬವೂ ಇರುವುದರಿಂದ ಅಪ್ಪು ಅಗಲಿಕೆಯ ನೋವಿನ ನಡುವೆಯೂ ಅಭಿಮಾನಿಗಳಿಗೆ ಡಬಲ್ ಖುಷಿ ತಂದಿದೆ. ಹಾಗಾಗಿ ರಾಜ್ಯಾದ್ಯಂತ ನೆಚ್ಚಿನ ನಟನ ಹುಟ್ಟು ಹಬ್ಬವನ್ನು ನಾನಾ ರೀತಿಯಲ್ಲಿ ಆಚರಿಸಲು ಅಭಿಮಾನಿಗಳು ಸಿದ್ಧರಾಗಿದ್ದಾರೆ. ಜೇಮ್ಸ್ ಸಿನಿಮಾ ನೋಡುವುದರ ಜತೆಗೆ ಸಮಾಜಮುಖಿ ಕೆಲಸಗಳಿಗೂ ನಾಳೆ ಪುನೀತ್ ಅಭಿಮಾನಿಗಳು ಮುಂದಾಗುತ್ತಿದ್ದಾರೆ. ಇದನ್ನೂ ಓದಿ: ಫ್ಯಾನ್ಸ್ ಒತ್ತಾಯದ ಮೇರೆಗೆ ವಿಷ್ಣುದಾದ ಇತಿಹಾಸ ಬರೆದ ಮೂವೀ ರೀ-ರಿಲೀಸ್ 

    ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ನಗರದ ವಾಣಿ ಹಾಗೂ ಬಾಲಾಜಿ ಚಿತ್ರಮಂದಿರಗಳಲ್ಲಿ ಅಭಿಮಾನಿಗಳು ಸಿನಿಮಾ ವೀಕ್ಷಿಸುವುದರ ಜತೆ ಜತೆಗೆ ಅನ್ನದಾನ ಹಾಗೂ ನೇತ್ರದಾನ ನೋಂದಣಿಗೆ ಅವಕಾಶ ಕಲ್ಪಿಸಿದ್ದಾರೆ. ಪುನೀತ್ ಅವರ ನಿಧನಾ ನಂತರ ದಾಖಲೆಯ ರೀತಿಯಲ್ಲಿ ಅಭಿಮಾನಿಗಳು ನೇತ್ರದಾನ ಮಾಡಿದ್ದಾರೆ. ಹೀಗಾಗಿ ಅವರ ಹುಟ್ಟು ಹಬ್ಬದ ಸಂದರ್ಭದಲ್ಲಿ ಇಂತಹ ಪುಣ್ಯದ ಕೆಲಸಕ್ಕೆ ಅಪ್ಪು ಅಭಿಮಾನಿಗಳಾಗಿ ನಾವೂ ಕೈ ಜೋಡಿಸುತ್ತಿದ್ದೇವೆ ಎಂದಿದ್ದಾರೆ ಚಿಕ್ಕ ಬಳ್ಳಾಪುರದ ಪುನೀತ್ ಅಭಿಮಾನಿಗಳು. ಇದನ್ನೂ ಓದಿ: ಭದ್ರತಾ ಲೋಪ – ದೆಹಲಿ ಕ್ಯಾಪಿಟಲ್ಸ್ ತಂಡದ ಬಸ್ ಮೇಲೆ ದಾಳಿ

    ಜೇಮ್ಸ್ ಚಿತ್ರ ಬಿಡುಗಡೆ ಆಗುತ್ತಿರುವ ನಗರದ ವಾಣಿ ಹಾಗೂ ಬಾಲಾಜಿ ಚಿತ್ರಮಂದಿರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಾರೆ. ಆ ಕಾರಣದಿಂದಾಗಿಯೇ ಥಿಯೇಟರ್ ಆವರಣದಲ್ಲಿಯೇ ವ್ಯವಸ್ಥೆ ಮಾಡಿದ್ದಾರಂತೆ ಅಪ್ಪು ಅಭಿಮಾನಿಗಳು. ಈಗಾಗಲೇ ಬೃಹತ್ ಗಾತ್ರದ ಪುನೀತ್ ಕಟೌಟ್ ಹಾಗೂ ಬ್ಯಾನರ್‍ಗಳು ಚಿತ್ರಮಂದಿರದ ಮುಂದೆ ರಾರಾಜಿಸುತ್ತಿವೆ. ನಾಳೆಯ ದಿನ ಅಪ್ಪು ಹಬ್ಬ ಎಂದೇ ಆಚರಿಸುತ್ತಿದ್ದೇವೆ ಅಂತಾರೆ ಅಲ್ಲಿನ ಅಭಿಮಾನಿಗಳು. ಹುಟ್ಟು ಹಬ್ಬವನ್ನು ಆಚರಿಸುತ್ತಲೇ ಜೇಮ್ಸ್‍ವನ್ನು ನಾಳೆ ಬರಮಾಡಿಕೊಳ್ಳಲಿದ್ದಾರೆ.

  • ಪುನೀತ್ ಹೆಸರಲ್ಲಿ ನೇತ್ರದಾನ ಮಾಡಿದ ನವ ವಿವಾಹಿತ ಜೋಡಿ

    ಪುನೀತ್ ಹೆಸರಲ್ಲಿ ನೇತ್ರದಾನ ಮಾಡಿದ ನವ ವಿವಾಹಿತ ಜೋಡಿ

    ಕಾರವಾರ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನದ ಬಳಿಕ ತಮ್ಮ ಕಣ್ಣುಗಳನ್ನು ದಾನ ಮಾಡಿ ಅಂದರ ಬಾಳಿಗೆ ಬೆಳಕಾಗಿದ್ದಾರೆ. ಈ ಸಮಾಜಮುಖಿ ಕಾರ್ಯದಿಂದ ಅಭಿಮಾನಿಗಳು ಅವರ ಹಾದಿಯಲ್ಲೇ ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಮಾದರಿಯಾಗುತ್ತಿದ್ದಾರೆ. ಇದೀಗ ನವದಂಪತಿ ಪುನೀತ್ ಹೆಸರಿನಲ್ಲಿ ನೇತ್ರ ದಾನ ಮಾಡಿ ತಮ್ಮ ಅಭಿಮಾನ ವ್ಯಕ್ತಪಡಿಸಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಮಂಜಗುಣಿ ಗ್ರಾಮದಲ್ಲಿ ಪುನೀತ್ ಅಭಿಮಾನಿಗಳು ಅವರ ಪುತ್ಥಳಿ ನಿರ್ಮಿಸಿದ್ದು, 50ಕ್ಕೂ ಅಧಿಕ ಜನರು ನೇತ್ರದಾನ ಮಾಡಿದ್ದಾರೆ. ಅಭಿಮಾನಿಗಳಿಂದ ನಿರ್ಮಿಸಲಾಗಿರುವ ಪುತ್ಥಳಿಗೆ ನವದಂಪತಿ ಮಣಿಕಂಠ ನಾಯ್ಕ ಹಾಗೂ ಸಿಂಧು ಮಾಲಾರ್ಪಣೆ ಮಾಡಿ ನೇತ್ರದಾನ ಮಾಡಿದ್ದಾರೆ. ಇದನ್ನೂ ಓದಿ: UAEನಿಂದ ಗೋಲ್ಡನ್ ವೀಸಾ ಪಡೆದ ಪ್ರಣಿತಾ!

    ಭಟ್ಕಳದಲ್ಲಿ ವಿವಾಹವಾಗಿದ್ದ ನವದಂಪತಿಗೆ ಪುನೀತ್ ಎಂದರೆ ಪಂಚಪ್ರಾಣ. ಹೀಗಾಗಿ ತಾವು ಹೊಸ ಜೀವನಕ್ಕೆ ಕಾಲಿಡುವಾಗ ಪುನೀತ್‍ರಂತೆ ಕಾರ್ಯ ಮಾಡಬೇಕು ಎಂಬ ಹಂಬಲದಿಂದ ನೇತ್ರದಾನ ಮಾಡಿ ಇತರರಿಗೂ ಮಾದರಿಯಾಗಿದ್ದಾರೆ. ಇದನ್ನೂ ಓದಿ: ಹಿಜಬ್ ಬಗ್ಗೆ ಕೊನೆಗೂ ಮೌನ ಮುರಿದ ಅಮಿತ್ ಶಾ