Tag: ನೇತ್ರದಾನ

  • ಸೀಮಂತ ಕಾರ್ಯಕ್ರಮದಲ್ಲಿ ನೇತ್ರದಾನ ಮಾಡಿದ ಕಾಮಿಡಿ ಕಿಲಾಡಿ ಜೋಡಿ

    ಸೀಮಂತ ಕಾರ್ಯಕ್ರಮದಲ್ಲಿ ನೇತ್ರದಾನ ಮಾಡಿದ ಕಾಮಿಡಿ ಕಿಲಾಡಿ ಜೋಡಿ

    ಪುನೀತ್ ರಾಜ್ ಕುಮಾರ್ ನಿಧನಾ ನಂತರ ಅವರ ಸಾವಿರಾರು ಅಭಿಮಾನಿಗಳು ನೇತ್ರದಾನ ಮಾಡುವ ಮೂಲಕ ಮಾದರಿಯಾಗಿದ್ದರು. ನೇತ್ರದಾನದಂತಹ ಪವಿತ್ರ ಕಾರ್ಯ ಮುಂದುವರೆಯುತ್ತಲೇ ಇದೆ. ಪುನೀತ್ ರಾಜ್ ಕುಮಾರ್ ಅವರನ್ನು ಆದರ್ಶವಾಗಿ ತಗೆದುಕೊಂಡಿದ್ದ ಕಾಮಿಡಿ ಕಿಲಾಡಿಗಳು ಶೋ ಖ್ಯಾತಿಯ ಜೋಡಿಯೊಂದು ಸೀಮಂತ ಕಾರ್ಯಕ್ರಮದಲ್ಲೇ ನೇತ್ರದಾನ ಮಾಡಿದೆ. ಇದನ್ನೂ ಓದಿ : ನಟ ಧನ್ವೀರ್ ಮೇಲೆ ನಿಲ್ಲುತ್ತಿಲ್ಲ ದಾಳಿ : ದಾಳಿ ಹಿಂದೆ ಸ್ಟಾರ್ ನಟರ ಕೈವಾಡ?


    ಕಾಮಿಡಿ ಕಿಲಾಡಿಗಳು ಅಂದಾಕ್ಷಣ ಥಟ್ಟನೆ ನೆನಪಾಗುವ ಜೋಡಿ ಗೋವಿಂದೇಗೌಡ ಮತ್ತು ದಿವ್ಯಶ್ರೀ ಅವರದ್ದು. ಕಾಮಿಡಿ ಕಿಲಾಡಿಗಳು ಶೋಗೆ ಸ್ಪರ್ಧೆಯಾಗಿ ಬಂದವರು, ನಂತರ ಸ್ನೇಹಿತರಾದರು. ಆನಂತರ ಪ್ರೇಮಿಗಳಾದರು. ಪ್ರೇಮವೇ ಸಪ್ತಪದಿ ತುಳಿಯುವುದಕ್ಕೆ ಕಾರಣವಾಗಿತ್ತು. ಇತ್ತೀಚೆಗಷ್ಟೇ ದಿವ್ಯಶ್ರೀ ಅವರ ಸೀಮಂತ ಕಾರ್ಯಕ್ರಮವಾಯಿತು. ಅಂದು ಈ ದಂಪತಿ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ನೇತ್ರದಾನ ಮಾಡುವ ಮೂಲಕ ನವ ಜೋಡಿಗಳಿಗೆ ಮಾದರಿಯಾದರು. ಇದನ್ನೂ ಓದಿ : ಶಬ್ದ ಚಿತ್ರದ ವಿಭಿನ್ನ ಪಾತ್ರದಲ್ಲಿ ಮೇಘನಾ ರಾಜ್ : ನಿರ್ದೇಶಕ ಕಾಂತ ಹೇಳಿದ್ದೇನು?


    ಮೊದಲಿನಿಂದಲೂ ನನಗೆ ಪುನೀತ್ ರಾಜ್ ಕುಮಾರ್ ಅಂದರೆ ಇಷ್ಟ. ಅವರ ಸಿನಿಮಾಗಳನ್ನೇ ನೋಡಿಕೊಂಡು ಬೆಳೆದವರು ನಾವು. ಅಂತಹ ಮಹಾನ್ ನಟರೇ ಕಣ್ಣುದಾನ ಮಾಡಿದ್ದಾರೆ. ಅವರಿಂದ ಸ್ಫೂರ್ತಿಗೊಂಡು ನಾವು ಕೂಡ ಈ ಕೆಲಸಕ್ಕೆ ಮುಂದಾದೆವು ಅನ್ನುತ್ತಾರೆ ಕಿಲಾಡಿ ಜೋಡಿ. ಇದನ್ನೂ ಓದಿ : ಡಿಸೆಂಬರ್ ನಲ್ಲಿ ರಶ್ಮಿಕಾ ಮಂದಣ್ಣ -ದೇವರಕೊಂಡ ಮದುವೆ? ಏನಿದು ಮ್ಯಾರೇಜ್ ಕಹಾನಿ


    ತಾವು ಮಾತ್ರ ನೇತ್ರದಾನ ಮಾಡಿಲ್ಲ, ಜತೆಗೆ ಇದೇ ವೇಳೆ ನೇತ್ರದಾನ ಶಿಬಿರವನ್ನು ಕೂಡ ಅವರು ಆಯೋಜನೆ ಮಾಡಿದ್ದರು. ಈ ಸಂದರ್ಭದಲ್ಲಿ ಡಾ.ರಾಜ್ ಐ ಬ್ಯಾಂಕಿನ ಸಿಬ್ಬಂದಿ ಕೂಡ ಹಾಜರಿತ್ತು.

  • ಪುನೀತ್ ಪ್ರೇರಣೆ – ಚಾಮರಾಜನಗರದಲ್ಲಿ ಇದುವರೆಗೆ 9,500 ಮಂದಿ ನೇತ್ರದಾನಕ್ಕೆ ನೋಂದಣಿ

    ಪುನೀತ್ ಪ್ರೇರಣೆ – ಚಾಮರಾಜನಗರದಲ್ಲಿ ಇದುವರೆಗೆ 9,500 ಮಂದಿ ನೇತ್ರದಾನಕ್ಕೆ ನೋಂದಣಿ

    ಚಾಮರಾಜನಗರ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನವಾಗಿ ಇಂದಿಗೆ ಎರಡು ತಿಂಗಳಾಗಿದೆ. ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ಅವರಿಂದ ಸಾಕಷ್ಟು ಜನ ಪ್ರೇರಣೆಗೊಂಡು ನೇತ್ರದಾನ ನೋಂದಣಿಗೆ ಮುಂದಾಗುತ್ತಿದ್ದಾರೆ. ಪುನೀತ್ ಅವರ ತವರು ಜಿಲ್ಲೆ ಚಾಮರಾಜನಗರದಲ್ಲಿ ಎರಡು ತಿಂಗಳ ಅವಧಿಯಲ್ಲಿ 9,500ಕ್ಕೂ ಹೆಚ್ಚು ಜನರು ನೇತ್ರದಾನಕ್ಕೆ ನೋಂದಣಿ ಮಾಡಿಸಿದ್ದಾರೆ.

    ಪುನೀತ್ ಅವರ ನೇತ್ರದಾನದಿಂದ ಸ್ಫೂರ್ತಿಗೊಂಡ ತವರು ಜಿಲ್ಲೆಯ ಜನತೆ ನೇತ್ರದಾನ ನೋಂದಣಿಗೆ ಮುಂದಾಗುತ್ತಿದ್ದು, ನಿರೀಕ್ಷೆಗೂ ಮೀರಿ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. 46ನೇ ವಯಸ್ಸಿನಲ್ಲಿ ಅಪ್ಪು ನಿಧನ ಹಿನ್ನಲೆಯಲ್ಲಿ ಜಿಲ್ಲಾಡಳಿತ ಹಾಗೂ ರೆಡ್ ಕ್ರಾಸ್ ಸಂಸ್ಥೆ ಜಿಲ್ಲೆಯಾದ್ಯಂತ 46 ಸಾವಿರ ಜನರನ್ನು ನೇತ್ರದಾನಕ್ಕೆ ನೊಂದಾಯಿಸುವ ಗುರಿ ಹೊಂದಿದೆ. ಇದನ್ನೂ ಓದಿ: ವೀಡಿಯೋ: ಮೇಕಪ್ ಆರ್ಟ್‍ನಿಂದ ಶಾರೂಖ್ ಆಗಿ ರೂಪಾಂತರಗೊಂಡ ಯುವತಿ

    ಚಾಮರಾಜನಗರ ಸರ್ಕಾರಿ ಮೆಡಿಕಲ್ ಆಸ್ಪತ್ರೆಯಲ್ಲಿ ನೇತ್ರ ಸಂಗ್ರಹಣ ಕೇಂದ್ರ ಸ್ಥಾಪನೆಗೆ ನಿರ್ಧಾರ ಮಾಡಲಾಗಿದ್ದು, ನೇತ್ರ ಸಂಗ್ರಹಣಾ ಕಾರ್ಯಕ್ಕೆ ವೈದ್ಯರು ಸೇರಿದಂತೆ ಸ್ವಯಂ ಸೇವಾ ಸಂಘಟನೆಗಳ ಸದಸ್ಯರ ಸಮಿತಿ ರಚನೆಗೆ ತೀರ್ಮಾನಿಸಲಾಗಿದೆ. ಇದನ್ನೂ ಓದಿ:  ಮೊಬೈಲ್ ಕದ್ದಿದ್ದಕ್ಕೆ ಬಾಲಕಿಗೆ ಹಿಗ್ಗಾಮುಗ್ಗ ಥಳಿಸಿದ ಯುವಕರು

  • ನಮ್ಮ ಕಣ್ಣಿನಿಂದ ಇನ್ನೊಬ್ಬರಿಗೆ ದೃಷ್ಟಿ ಬರುವುದೇ ಬದುಕಿನ ಸಾಕ್ಷಾತ್ಕಾರ: ಡಾ.ಕೆ.ಸುಧಾಕರ್

    ನಮ್ಮ ಕಣ್ಣಿನಿಂದ ಇನ್ನೊಬ್ಬರಿಗೆ ದೃಷ್ಟಿ ಬರುವುದೇ ಬದುಕಿನ ಸಾಕ್ಷಾತ್ಕಾರ: ಡಾ.ಕೆ.ಸುಧಾಕರ್

    ಬೆಂಗಳೂರು: ನಮ್ಮ ಸಾವಿನ ನಂತರ ನಮ್ಮ ಕಣ್ಣುಗಳಿಂದ ಇನ್ನೊಬ್ಬರಿಗೆ ದೃಷ್ಟಿ ಬರುತ್ತದೆ ಅಂದರೆ ಅದಕ್ಕಿಂತ ಸಾಕ್ಷಾತ್ಕಾರ ಇನ್ನೊಂದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

    ಬೆಂಗಳೂರಿನ ಇಂದಿರಾನಗರದಲ್ಲಿ ಡಾಕ್ಟರ್. ಅಗರ್ ವಾಲ್ಸ್ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಧತ್ವ ಬಹಳ ನೋವಿನ ಸಂಗತಿ. ಯಾರೇ ಇರಲಿ, ಭಗವಂತ ಸೃಷ್ಟಿ ಮಾಡಿರುವ ಪ್ರಕೃತಿಯನ್ನು ನೋಡಲು ಸಾಧ್ಯವಾಗುವುದು ನಮ್ಮ ಕಣ್ಣುಗಳಿಂದ. ಆದರೆ ಕಣ್ಣೇ ಇಲ್ಲದಿದ್ದರೆ ಈ ಸುಂದರ ಪ್ರಕೃತಿಯನ್ನು ಸವಿಯಲು ಅಸಾಧ್ಯ. ವಿಶ್ವದಲ್ಲಿ 4 ಕೋಟಿಗೂ ಹೆಚ್ಚು ಜನರಿಗೆ ಅಂಧತ್ವ ಇದೆ. ಭಾರತದಲ್ಲಿ ಪ್ರತಿವರ್ಷ 1 ಲಕ್ಷ ನೇತ್ರದಾನಿಗಳ ಅವಶ್ಯಕತೆ ಇದೆ. ಆದರೆ ನಮಗೆ ಸಿಗುತ್ತಿರುವ ದಾನಿಗಳ ಪ್ರಮಾಣ ಕೇವಲ 5% ಮಾತ್ರ. ಕಣ್ಣಿನ ದಾನಿಗಳ ಕೊರತೆ ನಮ್ಮನ್ನು ಕಾಡುತ್ತಿದೆ. ದೇಶದಲ್ಲಿ 10.8 ಲಕ್ಷ ಮಕ್ಕಳು ಅಂಧತ್ವಕ್ಕೆ ಒಳಗಾಗಿದ್ದಾರೆ ಎಂದರು.

    ಕೋವಿಡ್ ಸಮಯದಲ್ಲಿ ನೇತ್ರದಾನ ಪ್ರಮಾಣ ಮತ್ತಷ್ಟು ಕಡಿಮೆಯಾಗಿದೆ. ಕಣ್ಣಿನ ದಾನ ಮಹಾದಾನವಾದರೂ ಈ ಬಗ್ಗೆ ಕೆಲ ಮೂಢನಂಬಿಕೆಗಳು ಇವೆ. ಶವದಿಂದ ಕಣ್ಣನ್ನು ತೆಗೆದರೆ ಮುಖ ವಿಕಾರವಾಗುತ್ತದೆ ಎಂಬ ತಪ್ಪು ತಿಳಿವಳಿಕೆ ಇದೆ. ಆದರೆ ಇದು ಸುಳ್ಳು. ಕನ್ನಡದ ವರನಟ ಡಾ.ರಾಜ್ ಕುಮಾರ್, ಇತ್ತೀಚೆಗೆ ಅಕಾಲಿಕ ಮರಣ ಹೊಂದಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಂತಹ ಮಹಾನ್ ವ್ಯಕ್ತಿಗಳು ಕಣ್ಣು ದಾನ ಮಾಡಿದ್ದರು. ಲಕ್ಷಾಂತರ ಜನರು ಅವರ ಪಾರ್ಥಿವ ಶರೀರ ನೋಡಿದ್ದಾರೆ. ಆದರೆ ಯಾವುದೇ ವಿಕಾರ ಕಂಡಿಲ್ಲ. ಹೀಗಾಗಿ ನೇತ್ರದಾನ ಎಲ್ಲರೂ ಮಾಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸುದೀಪ್ ಕುಟುಂಬ ಸಮೇತರಾಗಿ ಭೇಟಿ

    ಆರೋಗ್ಯ ಇರಲಿ ಅಥವಾ ನೇತ್ರದಾನದ ವಿಚಾರವೇ ಆಗಿರಲಿ ಕರ್ನಾಟಕ ದೇಶದ ಎಲ್ಲಾ ರಾಜ್ಯಗಳಿಗೂ ಮಾದರಿಯಾಗಿದೆ. ಹೆಲ್ತ್ ಕೇರ್ ಉದ್ಯಮಿಗಳಿಂದ ಇದೆಲ್ಲಾ ಸಾಧ್ಯವಾಗಿದೆ. ಪ್ರತಿಯೊಬ್ಬರಿಗೂ ಕೈ ಗೆಟಕುವ ರೀತಿಯಲ್ಲಿ ಹೇಲ್ತ್ ಕೇರ್ ಇಂಡಸ್ಟ್ರಿ ಕರ್ನಾಟಕದಲ್ಲಿ ಬೆಳೆದಿದೆ ಎಂದು ಹೇಳಿದರು.

    ಆಯುಷ್ಮಾನ್ ಭಾರತ್ ನಿಂದ ಎಲ್ಲರಿಗೂ ಲಾಭವಾಗುತ್ತಿದೆ. ಸಮಾಜದ ಎಲ್ಲಾ ವರ್ಗಗಳಿಗೆ ಇದರ ಉಪಯೋಗ ಆಗುತ್ತಿದೆ. ನಾವು ಎಲ್ಲಾ ಕನ್ನಡಿಗರಿಗೂ ಸಹಾಯವಾಗುವಂತೆ ಹೆಲ್ತ್ ಕೇರ್ ಫೆಸಿಲಿಟಿ ವ್ಯವಸ್ಥೆ ಮಾಡಿದ್ದೇವೆ. ಸರ್ಕಾರಿ ಇರಲಿ, ಖಾಸಗಿ ಇರಲಿ ಎಲ್ಲಾ ಕಡೆಯೂ ಇನ್ನೂ ಹೆಚ್ಚಿನ ಸೌಕರ್ಯ ಒದಗಿಸುವ ಯೋಜನೆ ರೂಪಿಸಲಾಗಿದೆ ಎಂದರು. ಇದನ್ನೂ ಓದಿ:  ಮತಾಂತರ ನಿಷೇಧ ಕಾಯ್ದೆ ಜಾರಿ ಸರಿಯಿದೆ: ಬಿವೈ ರಾಘವೇಂದ್ರ

    ನೇತ್ರದಾನದ ಮಹತ್ವ ತಿಳಿಸಿ:
    ರಾಜ್ಯದಲ್ಲಿರುವ 21 ಮೆಡಿಕಲ್ ಕಾಲೇಜುಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಇನ್ನಷ್ಟು ಹೆಚ್ಚಿಸುವ ಯೋಜನೆ ರೂಪಿಸಿದ್ದೇವೆ. ಖಾಸಗಿ ಆಸ್ಪತ್ರೆಗಳು ದೊಡ್ಡಮಟ್ಟದಲ್ಲಿ ನೇತ್ರದಾನದ ಮಹತ್ವವನ್ನು ಸಮಾಜಕ್ಕೆ ತಿಳಿಸಿಕೊಡಬೇಕು. ಗ್ರಾಮೀಣ ಭಾಗದಲ್ಲಿ ಐ ಕ್ಯಾಂಪ್ ಗಳನ್ನು ಮಾಡಬೇಕು ಎಂದು ಮನವಿ ಮಾಡಿದರು.

    PM MODI

    ಪ್ರಧಾನಿ ನರೇಂದ್ರ ಮೋದಿಯವರು ಪ್ರಜಾಪ್ರಭುತ್ವ ಹಾಗೂ ಭಾರತದ ಅಭಿವೃದ್ಧಿಯ ಹರಿಕಾರ. ಹಾಗೆಯೇ ಡಾ.ಎಂ.ಸಿ.ಮೋದಿಯವರು ಕಣ್ಣಿನ ಆಸ್ಪತ್ರೆಗಳನ್ನು ಕಟ್ಟಿಸಿ ಎಲ್ಲರಿಗೂ ದೃಷ್ಟಿ ಸಿಗಬೇಕು ಅನ್ನುವ ಕನಸು ಕಂಡಿದ್ದರು. ತನ್ನ 40 ವರ್ಷಗಳ ಸೇವೆಯಲ್ಲಿ ಹಲವು ಸರ್ಜರಿಗಳನ್ನು ಅವರು ಮಾಡಿದ್ದರು. ಲಕ್ಷಾಂತರ ಕಣ್ಣಿನ ಸಮಸ್ಯೆಗಳನ್ನು ಪರಿಹರಿಸಿದರು. ಡಾ.ಎಂ.ಸಿ.ಮೋದಿಯವರ ಸೇವೆ ಮಾದರಿ ಎಂದರು.

  • ಅಪ್ಪು ನೇತ್ರದಾನದಿಂದ ಇನ್ನೂ 10 ಮಂದಿಗೆ ದೃಷ್ಟಿ ನೀಡಲು ವೈದ್ಯರ ಪ್ರಯತ್ನ!

    ಅಪ್ಪು ನೇತ್ರದಾನದಿಂದ ಇನ್ನೂ 10 ಮಂದಿಗೆ ದೃಷ್ಟಿ ನೀಡಲು ವೈದ್ಯರ ಪ್ರಯತ್ನ!

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ದಿ. ಪುನೀತ್ ರಾಜ್ ಕುಮಾರ್ (Puneeth Raj Kumar) ಅವರ ನೇತ್ರದಾನದಿಂದ ಇನ್ನೂ 10 ಮಂದಿಗೆ ದೃಷ್ಟಿ ನೀಡಲು ವೈದ್ಯರು ಪ್ರಯತ್ನಿಸುತ್ತಿದ್ದಾರೆ.

    ಹೌದು. ಈಗಾಗಲೇ ನಾಲ್ಕು ಜನರ ಬಾಳಿಗೆ ಬೆಳಕಾಗಿರೋ ಪುನೀತ್ ರಾಜ್ ಕುಮಾರ್ ಅವರ ಕಣ್ಣಿನಿಂದ ಇನ್ನೂ 10 ಜನಕ್ಕೆ ದೃಷ್ಟಿ ನೀಡಲು ವೈದ್ಯರು ತಯಾರಿ ನಡೆಸುತ್ತಿದ್ದಾರೆ. ಈ ವಿನೂತನ ಪ್ರಯತ್ನಕ್ಕೆ ನಾರಾಯಣ ನೇತ್ರಾಲಯ ಮುಂದಾಗಿದೆ. ಇದೇ ಮೊದಲ ಬಾರಿಗೆ ಒಬ್ಬ ವ್ಯಕ್ತಿಯ ಕಾರ್ನಿಯಾ (Cornea) ಮತ್ತು ಸ್ಟೆಮ್ ಸೆಲ್ (Stem Cell) ಎರಡನ್ನು ಬಳಕೆ ಮಾಡಿಕೊಂಡು ದೃಷ್ಟಿ ನೀಡಲಾಗುತ್ತಿದೆ. ಇದನ್ನೂ ಓದಿ: ಇತಿಹಾಸ ಬರೆದ ಪವರ್ ಸ್ಟಾರ್ ಪುಣ್ಯಸ್ಮರಣೆ- ದಾಖಲೆ ಪ್ರಮಾಣದಲ್ಲಿ ನೇತ್ರದಾನಕ್ಕೆ ಅರ್ಜಿ

    ಪುನೀತ್ ರಾಜ್ ಕುಮಾರ್ ಸ್ಟೆಮ್ ಸೆಲ್ ಗಳ ಬಳಕೆಯಿಂದ ಅಂಧರಿಗೆ ದೃಷ್ಟಿ ನೀಡಲು ಸಿದ್ಧತೆ ನಡೆಸಲಾಗುತ್ತಿದೆ. ಸ್ಟೆಮ್ ಸೆಲ್ ಥೆರಪಿ ನಡೆಸಿ 10 ಮಂದಿಗೆ ದೃಷ್ಟಿ ನೀಡಲು ಮುಂದಾಗಿದೆ. ಅಪ್ಪು ಕಾರ್ನಿಯಾವನ್ನು ಬೇರೆಯವರಿಗೆ ಬಳಸಿ ದೃಷ್ಟಿ ನೀಡಲಾಗಿದೆ. ಈಗ ಪುನೀತ್ ಅವರ ಕಣ್ಣಿನ ರಿಮ್ ಭಾಗದಿಂದ ವೈದ್ಯರು ಸ್ಟೆಮ್ ಸೆಲ್ ಸಂಗ್ರಹಿಸಿದ್ದಾರೆ. ಈಗಾಗಲೇ ಸ್ಟೆಮ್ ಸೆಲ್ ಗಳು ಮಲ್ಟಿಪಲ್ ಆಗುತ್ತಿವೆ. ಮಲ್ಟಿಪಲ್ ಆಗಲು ಕಾಲಾವಧಿ ಬೇಕಾಗುತ್ತಿದೆ. ಮಲ್ಟಿಪಲ್ ಆದ ಮೇಲೆ ಸ್ಟೆಮ್ ಸೆಲ್ ಸಮಸ್ಯೆಯಿಂದ ಬಳಲುತ್ತಾ ಇರುವವರಿಗೆ ಕಸಿ ಮಾಡಬಹುದು. ಈಗ ಕಸಿ ಮಾಡಲು ನಾರಾಯಣ ನೇತ್ರಾಲಯ ವೈದ್ಯರು ಮುಂದಾಗಿದ್ದಾರೆ. ಇದನ್ನೂ ಓದಿ: ನೇತ್ರದಾನಕ್ಕೆ ಸ್ಫೂರ್ತಿಯಾದ ” ರಾಜರತ್ನ” – ಅಪ್ಪು ಬಳಿಕ ಹೆಚ್ಚಾಗ್ತಿದೆ ನೇತ್ರದಾನಿಗಳ ಸಂಖ್ಯೆ

    ಸ್ಟೆಮ್ ಸೆಲ್ ಥೆರಪಿ ಎಂದರೇನು ?
    ರೆಟಿನಾ (ಅಕ್ಷಿಪಟಲ) ಸಂಬಂಧಿ ಸಮಸ್ಯೆಗಳು ಹಾಗೂ ವಂಶವಾಹಿ ಗುಣಗಳಿಂದ ಬರುವ ಅನುವಂಶೀಯ ಖಾಯಿಲೆ ಬಳಲುತ್ತಿರುವರಿಗೆ ಅಂಧತ್ವ ನಿವಾರಿಸಬಹುದು. ಪಟಾಕಿ ಸಿಡಿತದಿಂದ ದೃಷ್ಟಿ ಹಾನಿಯಾಗಿದ್ದರೆ ನಿವಾರಿಸಲು ಸ್ಟೆಮ್ ಥೆರಪಿ ಮಾಡಿ ದೃಷ್ಟಿ ನೀಡುವುದೇ ಸ್ಟೆಮ್ ಥೆರಪಿ. ಸ್ಟೆಮ್ ಸೆಲ್ ಸಮಸ್ಯೆಯಿಂದಾಗಿ ಮ್ಯಾಕ್ಯೂಲರ್ ಡಿಜನರೇಶನ್ (Macular Degeneration), ರಿಟನೈಟಿಸ್ ಪಿಂಗಮೆಂಟೋಸ್ (Retinitis Pigmentosa) ನಂತಹ ಖಾಯಿಲೆಗಳಿಗೆ ಲಕ್ಷಾಂತರ ಮಂದಿ ಕುರುಡುರಾಗುತ್ತಿದ್ದಾರೆ. ಇದನ್ನೂ ಓದಿ: ಅಪ್ಪು ಪ್ರೇರಣೆ – ಒಂದೇ ಗ್ರಾಮದಲ್ಲಿ 60ಕ್ಕೂ ಹೆಚ್ಚು ಮಂದಿ ನೇತ್ರದಾನ

  • ಪುನೀತ್‍ರಿಂದ ಪ್ರೇರಣೆ ಪಡೆದು ದೇಹದಾನಕ್ಕೆ ಮುಂದಾದ ಕಾಫಿನಾಡ ದಂಪತಿ

    ಪುನೀತ್‍ರಿಂದ ಪ್ರೇರಣೆ ಪಡೆದು ದೇಹದಾನಕ್ಕೆ ಮುಂದಾದ ಕಾಫಿನಾಡ ದಂಪತಿ

    ಚಿಕ್ಕಮಗಳೂರು: ಸತ್ತ ಮೇಲೆ ಈ ದೇಹವನ್ನು ಮಣ್ಣು ತಿನ್ನುತ್ತೆ ಅದರ ಬದಲು ಪುನೀತ್ ಸರ್ ಅವರಂತೆ ದಾನ ಮಾಡಿದರೆ ಈ ನಮ್ಮ ದೇಹದ ಅಂಗಾಂಗಳಿಂದ ಮತ್ತೊಬ್ಬರ ಬದುಕು ಬೆಳಕಾಗುತ್ತೆ ಎಂದು ತಾಲೂಕಿನ ಅರೆನೂರು ಗ್ರಾಮದ ಪುನೀತ್ ರಾಜ್‍ಕುಮಾರ್ ಅವರ ಅಭಿಮಾನಿ ದಂಪತಿ ತಮ್ಮ ದೇಹವನ್ನೇ ದಾನ ಮಾಡಲು ಮುಂದಾಗಿದ್ದಾರೆ.

    ತಾಲೂಕಿನ ಅರೆನೂರು ಗ್ರಾಮದ ಸುಪ್ರಿತ್ ಹಾಗೂ ಲಕ್ಷ್ಮಿ ದಂಪತಿ ತಮ್ಮ ದೇಹವನ್ನು ಉಡುಪಿಯ KMC ಆಸ್ಪತ್ರೆಗೆ ನೀಡಲು ಮುಂದಾಗಿದ್ದಾರೆ. ನಮ್ಮ ಈ ನಡೆಗೆ ಪುನೀತ್ ರಾಜ್ ಕುಮಾರ್ ಅವರ ಪ್ರೇರೇಪಣೆಯೇ ಕಾರಣ ಎಂದು ಪಬ್ಲಿಕ್ ಟಿವಿ ಜೊತೆ ತಮ್ಮ ನಿರ್ಧಾರದ ಕುರಿತು ಮಾಹಿತಿ ನೀಡಿದ ದಂಪತಿ, ಮನುಷ್ಯನಾಗಿ ಹುಟ್ಟಿ, ಸತ್ತ ಬಳಿಕ ಈ ದೇಹವನ್ನು ಮಣ್ಣಲ್ಲಿ ಕೊಳೆಸುವುದಕ್ಕಿಂತ ನಮ್ಮ ದೇಹದ ಅಂಗಾಂಗಳು ಮತ್ತೊಬ್ಬರಿಗೆ ಉಪಯೋಗಕ್ಕೆ ಬರಬೇಕು ಎಂದು ಈ ನಿರ್ಧಾರಕ್ಕೆ ಬಂದಿದ್ದೇವೆ. ನಾವು ಚಿಕ್ಕಂದಿನಿಂದಲೂ ಪುನೀತ್ ಸರ್ ಸಿನಿಮಾ ನೋಡಿಕೊಂಡು ಬಂದಿದ್ದೇವೆ. ಒಂದೊಂದು ಸಿನಿಮಾಗಳು ಒಂದಕ್ಕಿಂತ ಒಂದು ಚೆನ್ನಾಗಿವೆ. ನಮ್ಮ ಈ ನಡೆಗೆ ಅವರೇ ಪ್ರೇರೇಪಣೆ ಎಂದು ತಮ್ಮ ಮನದ ಮಾತು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಅಪ್ಪು ಪ್ರೇರಣೆ – ಅಭಿಮಾನಿಗಳಿಂದ ನೇತ್ರದಾನದ ಜೊತೆಗೆ ದೇಹದಾನಕ್ಕೆ ನೋಂದಣಿ

    ಪುನೀತ್ ಅವರು ಅಷ್ಟು ದೊಡ್ಡ ವ್ಯಕ್ತಿಯಾದರೂ ಅವರ ಸಮಾಜಮುಖಿ ಕಾರ್ಯಗಳು ಬಹುತೇಕರಿಗೆ ಗೊತ್ತಿರಲಿಲ್ಲ. ನಮಗೂ ಗೊತ್ತಿರಲಿಲ್ಲ. ಅವರು ಸತ್ತ ಬಳಿಕವಷ್ಟೆ ಗೊತ್ತಾಗಿದ್ದು. ಅವರೇ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ನಮ್ಮ ದೇಹವನ್ನು ಮಣ್ಣು ತಿನ್ನೋದಕ್ಕಿಂತ ನಾಲ್ಕು ಜನಕ್ಕೆ ಬೆಳಕಾಗಿಸಬಹುದು ಎಂದು ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು. ಇದನ್ನೂ ಓದಿ: ಅಪ್ಪು ಪ್ರೇರಣೆ – ಒಂದೇ ಗ್ರಾಮದಲ್ಲಿ 60ಕ್ಕೂ ಹೆಚ್ಚು ಮಂದಿ ನೇತ್ರದಾನ

    ದೇಹದಾನಕ್ಕೆ ಮುಂದಾಗಿರುವ ಲಕ್ಷ್ಮಿ ಪ್ರಸ್ತುತ ಗ್ರಾಮ ಪಂಚಾಯತ್ ಅಧ್ಯಕ್ಷೆ ಕೂಡ. ಗಂಡ ಹೆಂಡತಿ ಮಾತನಾಡಿಕೊಂಡು, ಮನೆಯವರ ಒಪ್ಪಿಗೆ ಪಡೆದು ಈ ನಿರ್ಧಾರಕ್ಕೆ ಬಂದಿದ್ದಾರೆ. ಇಂದು ಪುನೀತ್ ರಾಜ್‍ಕುಮಾರ್ ಪತ್ನಿ ಅಶ್ವಿನಿಯವರ ಊರಾದ ತಾಲೂಕಿನ ಮಲ್ಲಂದೂರು ಸಮೀಪದ ಭಾಗ್‍ಮನೆ ಬಳಿ ಇರುವ ಆವುತಿ ಗ್ರಾಮದಲ್ಲಿ ಪುನೀತ್ ರಾಜ್‍ಕುಮಾರ್‍ ಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ವೇಳೆ, ಸುಮಾರು 40ಕ್ಕೂ ಹೆಚ್ಚು ಜನ ನೇತ್ರದಾನಕ್ಕೆ ಮುಂದಾಗಿದ್ದಾರೆ. ಹೆಸರು ನೋಂದಾಯಿಸಿಕೊಂಡವರು ನಮ್ಮ ಬಳಿಕ ನಮ್ಮ ಕಣ್ಣುಗಳು ಮತ್ತೊಂದು ಜೀವ ಜಗತ್ತನ್ನು ನೋಡಲು ಸಹಕಾರಿಯಾಗಲಿದೆ. ಇದಕ್ಕೆ ನಮಗೆ ಪುನೀತ್ ರಾಜ್ ಕುಮಾರ್ ಅವರೇ ಪ್ರೇರಣೆ ಎಂದು ನೇತ್ರದಾನಕ್ಕೆ ಮುಂದಾಗಿದ್ದಾರೆ. ಬದುಕಿದ್ದಷ್ಟು ದಿನ ಭಾವನಾತ್ಮಕ ಜೀವಿಯಾಗಿದ್ದ ಪವರ್ ಸ್ಟಾರ್ ಪುನೀತ್ ಸಾವಿನ ಬಳಿಕ ಸಮಾಜಮುಖಿ ಸೇವೆಯಿಂದ ಜನಮಾನಸದಲ್ಲಿ ಅಜರಾಮರವಾಗಿ ಉಳಿದಿದ್ದಾರೆ.

  • ಪುನೀತ್‍ಗೆ ಚಾಮರಾಜನಗರ ಜಿಲ್ಲೆಯ ಅಪೂರ್ವ ಗೌರವ – 46 ಸಾವಿರ ನೇತ್ರದಾನಕ್ಕೆ ಮಹಾಭಿಯಾನ

    ಪುನೀತ್‍ಗೆ ಚಾಮರಾಜನಗರ ಜಿಲ್ಲೆಯ ಅಪೂರ್ವ ಗೌರವ – 46 ಸಾವಿರ ನೇತ್ರದಾನಕ್ಕೆ ಮಹಾಭಿಯಾನ

    – ಕಣ್ಣಿನ ಆಸ್ಪತ್ರೆ ಸ್ಥಾಪನೆಗೂ ನಿರ್ಧಾರ

    ಚಾಮರಾಜನಗರ: ಕರುನಾಡಿನ ರಾಜರತ್ನ ಪುನೀತ್, ತಮ್ಮ ಎರಡು ಕಣ್ಣುಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅಪ್ಪು ಪ್ರೇರಣೆಯಿಂದ ಅನೇಕ ಜನರು ನಮ್ಮ ನೇತ್ರಗಳನ್ನು ದಾನ ಮಾಡುತ್ತಿದ್ದಾರೆ. ಅಪ್ಪು ಆದರ್ಶಗಳನ್ನು ಇನ್ನಷ್ಟು ಸಾರ್ಥಕತೆಗೊಳಿಸಲು ಚಾಮರಾಜನಗರ ಜಿಲ್ಲಾಡಳಿತ ಮಹತ್ತರ ಅಭಿಯಾನವನ್ನು ಕೈಗೊಂಡಿದೆ.

    ಪವರ್‍ಸ್ಟಾರ್ ಪುನೀತ್ ರಾಜ್ ಕುಮಾರ್ ಆದರ್ಶಗಳು ಇಡೀ ಸಮಾಜಕ್ಕೆ ಮಾದರಿಯಾಗಿವೆ. ತವರು ಜಿಲ್ಲೆ ಚಾಮರಾಜನಗರದ ಪ್ರವಾಸೋದ್ಯಮ ಅಭಿವೃದ್ಧಿಗೆ ಅಪ್ಪು ರಾಯಭಾರಿಯಾಗಿದ್ರು. ಹೀಗಾಗಿ ಅಪ್ಪು ಆದರ್ಶಗಳನ್ನು ಮತ್ತಷ್ಟು ಸಾರ್ಥಕಗೊಳಿಸಲು ಚಾಮರಾಜನಗರ ಜಿಲ್ಲಾಡಳಿತ ಮಹತ್ವದ ಹೆಜ್ಜೆ ಇಟ್ಟಿದೆ. ಇದನ್ನೂ ಓದಿ: ಅಪ್ಪು ನಟನೆಯ ಚಿತ್ರದ ಶೀರ್ಷಿಕೆಗಳಲ್ಲೇ ಗೀತೆ ರಚನೆ ಮಾಡಿದ ತಂದೆ, ಜೀವ ತುಂಬಿದ ಮಗಳು

    ಈ ನಿಟ್ಟಿನಲ್ಲಿ ಚಾಮರಾಜನಗರ ಜಿಲ್ಲಾಡಳಿತ ಅಪ್ಪುರವರ ನೇತ್ರದಾನದ ಆದರ್ಶ ಇಟ್ಟುಕೊಂಡು, ಮಹತ್ವದ ಅಭಿಯಾನಕ್ಕೆ ಅಡಿ ಇಟ್ಟಿದೆ. ಪುನೀತ್ 46ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ. ಹೀಗಾಗಿ, ನವೆಂಬರ್ ಮಾಸಾಂತ್ಯದೊಳಗೆ 46 ಸಾವಿರ ಜನರನ್ನು ನೇತ್ರದಾನಕ್ಕೆ ನೋಂದಾಯಿಸುವ ಉದ್ದೇಶ ಹೊಂದಿದೆ. ಇದಕ್ಕಾಗಿ ರೆಡ್‍ಕ್ರಾಸ್ ಸಂಸ್ಥೆ ಹಾಗೂ ಜಿಲ್ಲಾಸ್ಪತ್ರೆ ಸಹಯೋಗದಲ್ಲಿ, ನೇತ್ರದಾನ ಶಿಬಿರಗಳನ್ನು ಆಯೋಜಿಸಲು ನಿರ್ಧರಿಸಿದೆ.

    ನೇತ್ರದಾನ ಅಭಿಯಾನವಷ್ಟೇ ಅಲ್ಲ, ಜಿಲ್ಲೆಯಲ್ಲಿ ನಿರ್ಮಿಸಲಾಗುವ ಕಣ್ಣಿನ ಅಸ್ಪತ್ರೆಗೆ ಪುನೀತ್ ರಾಜ್‍ಕುಮಾರ್ ಹೆಸರನ್ನೇ ಇಡುವ ಮೂಲಕ ಗೌರವ ಸಲ್ಲಿಸಲು ಜಿಲ್ಲಾಡಳಿತ ತೀಮಾನಿಸಿದೆ.

  • ಅಪ್ಪು ಪ್ರೇರಣೆ – ಸಪ್ತಪದಿಗೂ ಮುನ್ನವೇ ನವ ದಂಪತಿ ನೇತ್ರದಾನದ ಶಪಥ!

    ಅಪ್ಪು ಪ್ರೇರಣೆ – ಸಪ್ತಪದಿಗೂ ಮುನ್ನವೇ ನವ ದಂಪತಿ ನೇತ್ರದಾನದ ಶಪಥ!

    – ವಧು, ವರರ ಜೊತೆ 11 ಮಂದಿ ಐ ಡೊನೇಟ್‍ಗೆ ತೀರ್ಮಾನ

    ಹುಬ್ಬಳ್ಳಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮ ಮಧ್ಯೆ ಇಲ್ಲ. ಆದರೆ ಪುನೀತ್ ರಾಜ್ ಕುಮಾರ್ ಅವರ ಆದರ್ಶಗಳು ಇದೀಗ ನೂರಾರು ಜನರಿಗೆ ಮಾದರಿಯಾಗಿದೆ. ಅವರು ತಮ್ಮ ಕಣ್ಣುಗಳನ್ನ ದಾನ ಮಾಡಿ ನಾಲ್ವರ ಬಾಳಿಗೆ ಬೆಳಕಾಗಿದ್ದಾರೆ. ಹೀಗಾಗಿ ಅಪ್ಪು ನಿಧನದ ನಂತರ ಸಾವಿರಾರು ಜನರು ನೇತ್ರದಾನಕ್ಕೆ ಹೆಸರು ನೋಂದಾಯಿಸುತ್ತಿದ್ದಾರೆ. ಅದೇ ರೀತಿ ಹುಬ್ಬಳ್ಳಿಯಲ್ಲಿ ಹೊಸ ಜೀವನಕ್ಕೆ ಕಾಲ್ಟಿಟ್ಟ ನೂತನ ದಂಪತಿ ಸಪ್ತಪದಿಗೂ ಮುನ್ನ ನೇತ್ರದಾನದ ಶಪಥ ಮಾಡಿದ್ದು ವಿಶೇಷವಾಗಿದೆ.

    ಹುಬ್ಬಳ್ಳಿಯ ಅಂಗಡಿ ಕುಟುಂಬದ ಸುಚಿತ್ ಎಂ ಟೆಕ್ ಪದವೀಧರ. ಅಪ್ಪು ಅವರ ಕಟ್ಟಾ ಅಭಿಮಾನಿ. ಹೀಗಾಗಿ ಅಪ್ಪು ಅವರ ಆದರ್ಶಗಳೇ ಇವರಿಗೆ ಪ್ರೇರಣೆ. ಇತ್ತ ಬಿಇ ಪದವೀಧರೆ ಆಗಿರುವ ರಂಜನಿಯನ್ನ ಮದುವೆಯಾಗುವ ವೇಳೆ ಸುಚಿತ್ ಎಲ್ಲರಿಗೂ ಮಾದರಿಯಾಗುವಂತಹ ಕೆಲಸ ಮಾಡಿದ್ದಾರೆ. ಅದ್ದೂರಿಯಾಗಿ ಮದುವೆ ಆದರೂ ಸಪ್ತಪದಿಗೂ ಮುನ್ನ ದಂಪತಿ ನೇತ್ರದಾನ ಶಪಥ ಮಾಡಿ ಹೊಸ ಜೀವನಕ್ಕೆ ಕಾಲಿಟ್ಟಿರುವುದು ವಿಶೇಷವಾಗಿದೆ. ಇದನ್ನೂ ಓದಿ:ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – ಹ್ಯಾರಿಸ್, ಲಮಾಣಿ ಪುತ್ರರ ಹೆಸರು ಹೇಳಿರೋ ಹ್ಯಾಕರ್ ಶ್ರೀಕಿ

    ಇದೂವರೆಗೂ ಹಲವು ಬಾರಿ ರಕ್ತದಾನ ಮಾಡಿ ಮಾದರಿಯಾಗಿದ್ದ ಸುಚಿತ್, ತಮ್ಮ ಮದುವೆಯ ದಿನವೇ ಮನೆಯವರನ್ನ ಒಪ್ಪಿಸಿ ನೇತ್ರದಾನಕ್ಕೆ ನೋಂದಣಿ ಮಾಡಿಸಿದ್ದಾರೆ. ಅಲ್ಲದೇ ಕುಟುಂಬದ ಸದಸ್ಯರು ಸಹ ನೇತ್ರದಾನ ಶಪಥ ಮಾಡುವ ಮೂಲಕ ವಿನೂತನವಾಗಿ ಮದುವೆ ಸಮಾರಂಭ ಮಾಡಿರುವುದು ವಿಶೇಷವಾಗಿದೆ. ಇದೇ ರೀತಿ ಯುವಕರು ನೇತ್ರದಾನ ಶಪಥ ಮಾಡಿದ್ರೆ ಪುನೀತ್ ರಾಜ್ ಕುಮಾರ್ ಅವರ ಕನಸಿನಂತೆ ಕಂಗಳು ಇಲ್ಲದಿರುವವರ ಬಾಳಲ್ಲಿ ಬೆಳಕಾಗಬಹುದು ಎಂದು ವೈದ್ಯರು ಹೇಳುತ್ತಾರೆ.

    ವಧು ವರರ ಜೊತೆ ಅಂಗಡಿ ಕುಟುಂಬದ 11 ಸದಸ್ಯರು ಮದುವೆ ದಿನದಂದೇ ನೇತ್ರದಾನಕ್ಕೆ ಹೆಸರು ನೋಂದಣಿ ಮಾಡಿಸಿದ್ರೆ. ನೂತನ ವಧು-ವರರಿಗೆ ಆರ್ಶಿವದಿಸಲು ಆಗಮಿಸಿದವರ ಪೈಕಿ 60 ಜನ ಸಹ ನೇತ್ರದಾನ ಶಪಥ ಮಾಡಿದ್ದಾರೆ. ಒಟ್ಟಿನಲ್ಲಿ ನಟ ಪುನೀತ್ ಇಂದು ನಮ್ಮೊಂದಿಗೆ ಇಲ್ಲದಿದ್ದರೂ ಅವರ ಆದರ್ಶಗಳು ಸಾವಿರಾರು ಜನರಿಗೆ ಮಾದರಿಯಾಗಿರುವುದಂತೂ ಸುಳ್ಳಲ್ಲ.

  • ನೇತ್ರದಾನಕ್ಕೆ ಜಮೀರ್ ಅಹಮ್ಮದ್ ಖಾನ್ ಸಹಿ

    ನೇತ್ರದಾನಕ್ಕೆ ಜಮೀರ್ ಅಹಮ್ಮದ್ ಖಾನ್ ಸಹಿ

    ಬೆಂಗಳೂರು: ರಾಜ್ಯದಲ್ಲಿ ಕೆಲದಿನಗಳಿಂದ ನೇತ್ರದಾನ, ರಕ್ತದಾನ, ಹೆಚ್ಚಾಗುತ್ತಿದ್ದಂತೆ ಇಂದು ಶಾಸಕ ಜಮೀರ್ ಅಹಮ್ಮದ್ ಖಾನ್ ನೇತ್ರದಾನಕ್ಕೆ ಮುಂದಾಗಿದ್ದಾರೆ.

    ಮಿಂಟೋ ಆಸ್ಪತ್ರೆಗೆ ತೆರಳಿ ಜಮೀರ್ ಅಹಮ್ಮದ್ ಖಾನ್ ನೇತ್ರದಾನಕ್ಕೆ ಸಹಿ ಹಾಕಿದ್ದಾರೆ. ಸ್ಯಾಂಡಲ್‍ವುಡ್ ಪವರ್‌ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನರಾದ ಬಳಿಕ ನೇತ್ರದಾನ ಮಾಡಿದರು. ಬಳಿಕ ಅವರ ಅಭಿಮಾನಿಗಳು ಸಹಿತ ಸಾವಿರಾರು ಮಂದಿ ನೇತ್ರದಾನ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಇತಿಹಾಸ ಬರೆದ ಪವರ್ ಸ್ಟಾರ್ ಪುಣ್ಯಸ್ಮರಣೆ- ದಾಖಲೆ ಪ್ರಮಾಣದಲ್ಲಿ ನೇತ್ರದಾನಕ್ಕೆ ಅರ್ಜಿ

    ನಿನ್ನೆ ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆ ಅಭಿಮಾನಿಗಳಿಗಾಗಿ ಅರಮನೆ ಮೈದಾನದಲ್ಲಿ ಅನ್ನಸಂತರ್ಪಣೆ ಜೊತೆಗೆ ನೇತ್ರದಾನ ಮತ್ತು ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಈ ವೇಳೆ ಬರೋಬ್ಬರಿ 3,100ಕ್ಕೂ ಹೆಚ್ಚು ಅಭಿಮಾನಿಗಳು ನೇತ್ರದಾನಕ್ಕೆ ಅರ್ಜಿ ಹಾಕುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಈ ಬಗ್ಗೆ ಲಯನ್ ಸಂಸ್ಥೆ ಎನ್ವಿರ್ನಾಮೆಂಟ್ ಅಧ್ಯಕ್ಷರಾದ ಪ್ರಕೃತಿ ಪ್ರಸನ್ನ ಮಾತನಾಡಿ, ಒಂದೇ ದಿನದಲ್ಲಿ 3,100ಕ್ಕೂ ಹೆಚ್ಚು ನೇತ್ರದಾನ ಅರ್ಜಿ ಸ್ವೀಕಾರ ಮಾಡಿದ್ದೇವೆ. ಈ ದಿನ ನಿಜಕ್ಕೂ ಐತಿಹಾಸಿಕ ದಿನ. ಜೊತೆಗೆ 355 ಕ್ಕೂ ಹೆಚ್ಚು ಜನ ರಕ್ತದಾನ ಮಾಡಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟು ಜನ ರಕ್ತದಾನ ಮಾಡಿರುವುದಲ್ಲದೇ, ನೇತ್ರದಾನಕ್ಕೆ ಅರ್ಜಿ ಸಲ್ಲಿಸಿರುವುದನ್ನು ನೋಡುತ್ತಿದ್ದೇವೆ. ನಿನ್ನೆ ಕೂಡ ವಿಐಪಿಗಳು 350 ಮಂದಿ ನೇತ್ರದಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನಾವು ಇಲ್ಲಿವರೆಗೆ ಎಷ್ಟೋ ಶಿಬಿರಗಳನ್ನು ಮಾಡಿದ್ದೇವೆ. ಇಷ್ಟು ಪ್ರಮಾಣದಲ್ಲಿ ನೋಂದಣಿ ಆಗಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಬ್ರದರ್, ಬ್ರದರ್‌ ಅಂತ ಕತ್ತು ಕೊಯ್ಯೋದು: ಜಮೀರ್ ಅಹ್ಮದ್

     

  • ಇತಿಹಾಸ ಬರೆದ ಪವರ್ ಸ್ಟಾರ್ ಪುಣ್ಯಸ್ಮರಣೆ- ದಾಖಲೆ ಪ್ರಮಾಣದಲ್ಲಿ ನೇತ್ರದಾನಕ್ಕೆ ಅರ್ಜಿ

    ಇತಿಹಾಸ ಬರೆದ ಪವರ್ ಸ್ಟಾರ್ ಪುಣ್ಯಸ್ಮರಣೆ- ದಾಖಲೆ ಪ್ರಮಾಣದಲ್ಲಿ ನೇತ್ರದಾನಕ್ಕೆ ಅರ್ಜಿ

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಪುಣ್ಯಸ್ಮರಣೆ ಹೊಸ ಇತಿಹಾಸವೊಂದನ್ನು ಸೃಷ್ಟಿಸಿದೆ. ಅಪ್ಪು ಅವರಿಂದ ಪ್ರೇರಣೆಗೊಂಡು ಅವರ ಹಾದಿಯಲ್ಲೇ ನಡೆದ ಅಭಿಮಾನಿಗಳು ದಾಖಲೆ ಪ್ರಮಾಣದಲ್ಲಿ ನೇತ್ರದಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

    ಪುಣ್ಯಸ್ಮರಣೆ ಹಿನ್ನೆಲೆ ಮಂಗಳವಾರ ಅಭಿಮಾನಿಗಳಿಗಾಗಿ ಅರಮನೆ ಮೈದಾನದಲ್ಲಿ ಅನ್ನಸಂತರ್ಪಣೆ ಜೊತೆಗೆ ನೇತ್ರದಾನ ಮತ್ತು ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಈ ವೇಳೆ ಬರೋಬ್ಬರಿ 3,100ಕ್ಕೂ ಹೆಚ್ಚು ಅಭಿಮಾನಿಗಳು ನೇತ್ರದಾನಕ್ಕೆ ಅರ್ಜಿ ಹಾಕುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಇದನ್ನೂ ಓದಿ: 46 ವರ್ಷಕ್ಕೆ ನನ್ನ ತಮ್ಮ ದೇವರಿಗೆ ತುಂಬಾ ಇಷ್ಟ ಆಗ್ಬಿಟ್ಟ: ಶಿವಣ್ಣ

    ಈ ಬಗ್ಗೆ ಲಯನ್ ಸಂಸ್ಥೆ ಎನ್ವಿರ್ನಾಮೆಂಟ್ ಅಧ್ಯಕ್ಷರಾದ ಪ್ರಕೃತಿ ಪ್ರಸನ್ನ ಮಾತನಾಡಿ, ಒಂದೇ ದಿನದಲ್ಲಿ 3,100ಕ್ಕೂ ಹೆಚ್ಚು ನೇತ್ರದಾನ ಅರ್ಜಿ ಸ್ವೀಕಾರ ಮಾಡಿದ್ದೇವೆ. ಈ ದಿನ ನಿಜಕ್ಕೂ ಐತಿಹಾಸಿಕ ದಿನ. ಜೊತೆಗೆ 355 ಕ್ಕೂ ಹೆಚ್ಚು ಜನ ರಕ್ತದಾನ ಮಾಡಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟು ಜನ ರಕ್ತದಾನ ಮಾಡಿರುವುದಲ್ಲದೇ, ನೇತ್ರದಾನಕ್ಕೆ ಅರ್ಜಿ ಸಲ್ಲಿಸಿರುವುದನ್ನು ನೋಡುತ್ತಿದ್ದೇವೆ. ನಿನ್ನೆ ಕೂಡ ವಿಐಪಿಗಳು 350 ಮಂದಿ ನೇತ್ರದಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನಾವು ಇಲ್ಲಿವರೆಗೆ ಎಷ್ಟೋ ಶಿಬಿರಗಳನ್ನು ಮಾಡಿದ್ದೇವೆ. ಇಷ್ಟು ಪ್ರಮಾಣದಲ್ಲಿ ನೋಂದಣಿ ಆಗಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪುನೀತ್ ನೆನಪಿಗಾಗಿ ಎದೆ ಮೇಲೆ ಹಚ್ಚೆ ಹಾಕಿಸಿಕೊಂಡ ಅಭಿಮಾನಿ

  • ನೇತ್ರದಾನ ಜನಾಂದೋಲನ ಆಗಬೇಕು: ಡಾ.ಕೆ.ಸುಧಾಕರ್

    ನೇತ್ರದಾನ ಜನಾಂದೋಲನ ಆಗಬೇಕು: ಡಾ.ಕೆ.ಸುಧಾಕರ್

    – ಎರಡನೇ ಡೋಸ್ ಲಸಿಕೆ ಪಡೆಯಲು ಉದಾಸೀನ ಬೇಡ

    ಬೆಂಗಳೂರು: ನೇತ್ರದಾನದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸಿ ಜನಾಂದೋಲನವಾಗುವಂತೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

    ಮಿಂಟೋ ಕಣ್ಣಾಸ್ಪತ್ರೆಯ 125 ನೇ ವಾರ್ಷಿಕೋತ್ಸವ ಆಚರಣೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಿಧನರಾದ ನಟ ಪುನೀತ್ ರಾಜ್‍ಕುಮಾರ್ ನೇತ್ರದಾನ ಮಾಡಿ ನಾಲ್ಕು ಜನರಿಗೆ ದೃಷ್ಟಿ ನೀಡಿದ್ದಾರೆ. ತಂತ್ರಜ್ಞಾನ ವಿಶಿಷ್ಟವಾಗಿ ಬೆಳೆದಿರುವುದರಿಂದ ಒಬ್ಬರು ನಾಲ್ಕು ಜನರಿಗೆ ದೃಷ್ಟಿ ನೀಡಲು ಸಾಧ್ಯವಾಗುತ್ತದೆ. ದೇಶದಲ್ಲಿ 3-4 ಕೋಟಿ ಜನರಿಗೆ ಅಂಧತ್ವ ಇದೆ. ಆದ್ದರಿಂದ ದಾನಿಗಳ ಸಂಖ್ಯೆ ಹೆಚ್ಚಬೇಕಿದೆ. ಮರಣ ಹೊಂದಿದ ನಂತರವೂ ನಾಲ್ಕು ಜನರಿಗೆ ದೃಷ್ಟಿ ನೀಡಿ ಅವರಿಗೆ ಜಗತ್ತು ನೋಡಲು ಅವಕಾಶ ನೀಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಅಂಗಾಂಗ ದಾನಕ್ಕೆ ಪ್ರತಿಜ್ಞೆ ಮಾಡಿದ್ದಾರೆ. ನಾನು ಕೂಡ ಕಳೆದ ವರ್ಷವೇ ನೇತ್ರದಾನ ಮಾಡಲು ಪ್ರತಿಜ್ಞೆ ಮಾಡಿದ್ದೇನೆ. ಇದನ್ನು ಆಂದೋಲನದಂತೆ ನಡೆಸಿ ನೇತ್ರದಾನದ ಬಗ್ಗೆ ಅರಿವು ಮೂಡಿಸಬೇಕು ಎಂದರು.

    ಕೋವಿಡ್ ಸಮಯದಲ್ಲಿ ಮಿಂಟೋ, ವಿಕ್ಟೋರಿಯಾ ಆಸ್ಪತ್ರೆಯನ್ನು ಮೀಸಲಿಡಲಾಗಿತ್ತು. ಆದರೆ ಈಗ ಎಲ್ಲ ಬಗೆಯ ಚಿಕಿತ್ಸೆ ನೀಡಲಾಗುತ್ತಿದೆ. ಜನರು ಧೈರ್ಯವಾಗಿ ಬಂದು ಇತರೆ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಬಹುದು ಎಂದರು. ಇದನ್ನೂ ಓದಿ: 46 ವರ್ಷಕ್ಕೆ ನನ್ನ ತಮ್ಮ ದೇವರಿಗೆ ತುಂಬಾ ಇಷ್ಟ ಆಗ್ಬಿಟ್ಟ: ಶಿವಣ್ಣ

    ಅನೇಕ ವೈದ್ಯರು, ಶುಶ್ರೂಷಕರು, ವೈದ್ಯಕೀಯೇತರ ಸಿಬ್ಬಂದಿಯ ಶ್ರಮದಿಂದಾಗಿ ಮಿಂಟೋ ಕಣ್ಣಾಸ್ಪತ್ರೆಯು 125 ನೇ ವರ್ಷಕ್ಕೆ ಕಾಲಿಟ್ಟಿದೆ. ಇಂತಹ ಸಂಸ್ಥೆ ಇರುವುದು ರಾಜ್ಯಕ್ಕೆ ಹೆಮ್ಮೆಯ ವಿಚಾರ. 1896 ರಲ್ಲಿ ಡಿಸ್ಪೆನ್ಸರಿಯಾಗಿ ಆರಂಭವಾದ ಸಂಸ್ಥೆ 125 ವರ್ಷದವರೆಗೂ ಸೇವೆ ನೀಡಿದೆ. ಪ್ಲೇಗ್ ನಿಂದ ಆರಂಭವಾಗಿ ಇತ್ತೀಚೆಗೆ ಕೋವಿಡ್ ತಡೆಗಟ್ಟುವವರೆಗೂ ಈ ಸಂಸ್ಥೆ ಕಾರ್ಯನಿರ್ವಹಿಸಿದೆ. ಇಂದು ಒಪಿಡಿಗೆ ಸುಮಾರು 800 ರೋಗಿಗಳು ಬರುತ್ತಿದ್ದಾರೆ. ವರ್ಷಕ್ಕೆ ಸುಮಾರು 10 ಸಾವಿರ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

    ರಾಜ್ಯದಲ್ಲಿ ಕೊರೊನಾ ಲಸಿಕೆಯ ಮೊದಲ ಡೋಸ್ 89% ಹಾಗೂ ಎರಡನೇ ಡೋಸ್ 48% ರಷ್ಟು ಪ್ರಗತಿ ಕಂಡಿದೆ. ಎರಡನೇ ಡೋಸ್ ಪಡೆಯಲು ಜನರು ಉದಾಸೀನ ಮಾಡಬಾರದು. ಕೋವಿಡ್ ವಿರುದ್ಧ ಸಂಪೂರ್ಣ ರೋಗ ನಿರೋಧಕ ಶಕ್ತಿ ಬರಲು ಎರಡೂ ಡೋಸ್ ಪಡೆಯಬೇಕು. ಕೋವಿಡ್ ಸಂಪೂರ್ಣ ನಿರ್ಮೂಲನೆಯಾಗುವವರೆಗೂ ಎಚ್ಚರವಾಗಿರಬೇಕು ಎಂದರು. ಇದನ್ನೂ ಓದಿ: ಅನ್ನ ಸಂತರ್ಪಣೆ ವೇಳೆ ಪುನೀತ್ ನೆನೆದು ಕಣ್ಣೀರಿಟ್ಟ ಅಶ್ವಿನಿ

    ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಮಕ್ಕಳ ಲಸಿಕೆ ನೀಡಲಿದೆ. ಮಕ್ಕಳಲ್ಲಿ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುವುದು. ಆರೋಗ್ಯ ನಂದನ ಕಾರ್ಯಕ್ರಮದಡಿ ಈಗಾಗಲೇ ಆರೋಗ್ಯ ಶಿಬಿರ ಮಾಡಿ ಪಟ್ಟಿ ಮಾಡಲಾಗಿದೆ. ಮುಂದಿನ ವಾರ ಲಸಿಕೆಯನ್ನು ನಿರೀಕ್ಷಿಸುತ್ತಿದ್ದೇವೆ. ಆರೂಮುಕ್ಕಾಲು ಕೋಟಿ ಲಸಿಕೆಯನ್ನು ರಾಜ್ಯದಲ್ಲಿ ನೀಡಲಾಗಿದೆ. ಲಸಿಕೆ ವಿತರಣೆ ಈಗ ಕಷ್ಟದ ವಿಚಾರವಲ್ಲ ಎಂದರು. ಇದನ್ನೂ ಓದಿ: ಖುದ್ದು ರಕ್ತದಾನ ಮಾಡಿ ಮಾದರಿಯಾದ ನಟ ಶಿವರಾಜ್ ಕುಮಾರ್