Tag: ನೇತ್ರದಾನ

  • ಅಪ್ಪು ಪ್ರೇರಣೆ – ಅಭಿಮಾನಿಗಳಿಂದ ನೇತ್ರದಾನದ ಜೊತೆಗೆ ದೇಹದಾನಕ್ಕೆ ನೋಂದಣಿ

    ಅಪ್ಪು ಪ್ರೇರಣೆ – ಅಭಿಮಾನಿಗಳಿಂದ ನೇತ್ರದಾನದ ಜೊತೆಗೆ ದೇಹದಾನಕ್ಕೆ ನೋಂದಣಿ

    ಯಾದಗಿರಿ: ನಟ ಪುನೀತ್ ರಾಜಕುಮಾರ್ ತಮ್ಮ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದರು. ನೇತ್ರದಾನ ಮಾಡಿದ ಅಪ್ಪು ತಮ್ಮ ಅಭಿಮಾನಿಗಳಿಗೆ ಮಾದರಿಯಾಗಿದ್ದು, ಈಗ ಅವರ ಅಭಿಮಾನಿ ದೇವರುಗಳು ಸಹ ಅಪ್ಪು ಮಾರ್ಗವನ್ನು ಅನುಸರಿಸಿದ್ದಾರೆ.

    ಯಾದಗಿರಿ ನಗರದ ಗಂಜ್ ಬಳಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರ ಅಪಾರ ಅಭಿಮಾನಿಗಳು ಕೇವಲ ನೇತ್ರದಾನ ಮಾಡುವುದು ಮಾತ್ರವಲ್ಲದೆ, ದೇಹ ದಾನ ಮಾಡುವುದಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಯಾದಗಿರಿ ನಗರದ ನಿವಾಸಿಗಳಾದ ಹನುಮಯ್ಯ ಹಾಗೂ ಮಲ್ಲಿಕಾರ್ಜುನ ದಂಪತಿ ದೇಹದಾನಕ್ಕೆ ನೊಂದಣಿ ಮಾಡಿಕೊಂಡಿದ್ದಾರೆ. 52 ಮಂದಿ ಅಪ್ಪು ಅಭಿಮಾನಿಗಳು ನೇತ್ರದಾನಕ್ಕೂ ಸಹ ನೋಂದಣಿ ಮಾಡಿಕೊಂಡಿದ್ದಾರೆ.

    ಅಪ್ಪು ಅಭಿಮಾನಿಗಳಿಂದ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ರಾಯಚೂರಿನ ರಿಮ್ಸ್ ಆಸ್ಪತ್ರೆ ಸಹಯೋಗದಲ್ಲಿ ಅವರ ಅಭಿಮಾನಿಗಳು ಈ ಕಾರ್ಯ ಮಾಡಿದ್ದಾರೆ. ಇದನ್ನೂ ಓದಿ: ಅಪ್ಪು ಪ್ರೇರಣೆ – ಒಂದೇ ಗ್ರಾಮದಲ್ಲಿ 60ಕ್ಕೂ ಹೆಚ್ಚು ಮಂದಿ ನೇತ್ರದಾನ

  • ಅಪ್ಪು ಪ್ರೇರಣೆ – ಒಂದೇ ಗ್ರಾಮದಲ್ಲಿ 60ಕ್ಕೂ ಹೆಚ್ಚು ಮಂದಿ ನೇತ್ರದಾನ

    ಅಪ್ಪು ಪ್ರೇರಣೆ – ಒಂದೇ ಗ್ರಾಮದಲ್ಲಿ 60ಕ್ಕೂ ಹೆಚ್ಚು ಮಂದಿ ನೇತ್ರದಾನ

    ದಾವಣಗೆರೆ: ದೊಡ್ಮನೆ ಹುಡುಗ, ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಂದ ಪ್ರೇರಣೆ ಪಡೆದು ಒಂದೇ ಗ್ರಾಮದ 60ಕ್ಕೂ ಹೆಚ್ಚು ಮಂದಿ ನೇತ್ರದಾನ ಮಾಡಲು ಮುಂದಾಗಿದ್ದಾರೆ.

    ದಾವಣಗೆರೆ ತಾಲೂಕಿನ ಚಟ್ಟೋಬನಹಳ್ಳಿ ತಾಂಡದಲ್ಲಿ ನೆಚ್ಚಿನ ನಟ ಅಪ್ಪುಗೆ ಗೌರವ ಸಲ್ಲಿಸಲು ಬಂಜಾರ ಸಮುದಾಯದ 60ಕ್ಕೂ ಅಧಿಕ ಯುವಕರು ನೇತ್ರದಾನ ಮಾಡಲು ನೋಂದಯಿಸಿ ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ: ನಾಳೆ ಪುನೀತ್ 11ನೇ ದಿನದ ಪುಣ್ಯಾರಾಧನೆ – ಅಪ್ಪು ಕುಟುಂಬಸ್ಥರಿಂದ ಸಿದ್ಧತೆ

    ಪುನೀತ್ ಅಗಲಿಕೆಯಿಂದ ಒಂದು ವಾರದಿಂದ ಶೋಕ ಸಾಗರದಲ್ಲಿ ಮುಳುಗಿದ್ದ ಚಟ್ಟೋಬನಹಳ್ಳಿ ಗ್ರಾಮಸ್ಥರು, ಅವರ ಆದರ್ಶವನ್ನು ಮೈಗೂಡಿಸಿಕೊಂಡು ಅವರ ಹಾದಿಯಲ್ಲಿಯಲ್ಲಿಯೇ ನೇತ್ರದಾನ ಮಾಡಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ನೇತ್ರದಾನಕ್ಕೆ ಸ್ಫೂರ್ತಿಯಾದ ” ರಾಜರತ್ನ” – ಅಪ್ಪು ಬಳಿಕ ಹೆಚ್ಚಾಗ್ತಿದೆ ನೇತ್ರದಾನಿಗಳ ಸಂಖ್ಯೆ

    ಅಪ್ಪು ಅನೇಕ ಜನರಿಗೆ ಸಹಾಯ ಮಾಡಿದ್ದಲ್ಲದೇ ಕಣ್ಣು ದಾನ ಮಾಡಿದ್ದರು. ಅವರು ನೇತ್ರದಾನ ಮಾಡಿದಕ್ಕೆ ಅವರ ದಾರಿಯಲ್ಲಿಯೇ ಅವರ ಅಭಿಮಾನಿಗಳು ಕಣ್ಣನ್ನು ದಾನ ಮಾಡುವ ಮೂಲಕ ಬೇರೆಯವರಿಗೆ ಆದರ್ಶರಾಗಿದ್ದಾರೆ. ಒಟ್ಟಾರೆ ಈ ಸಾಮಾಜಿಕ ಕಾರ್ಯ ಮಾಡುವ ಮೂಲಕ ಚಟ್ಟೋಬನಹಳ್ಳಿ ತಾಂಡ ರಾಜ್ಯಕ್ಕೆ ಮಾದರಿಯಾಗಿದೆ.

  • ನೇತ್ರದಾನಕ್ಕೆ ಸ್ಫೂರ್ತಿಯಾದ ” ರಾಜರತ್ನ” – ಅಪ್ಪು ಬಳಿಕ ಹೆಚ್ಚಾಗ್ತಿದೆ ನೇತ್ರದಾನಿಗಳ ಸಂಖ್ಯೆ

    ನೇತ್ರದಾನಕ್ಕೆ ಸ್ಫೂರ್ತಿಯಾದ ” ರಾಜರತ್ನ” – ಅಪ್ಪು ಬಳಿಕ ಹೆಚ್ಚಾಗ್ತಿದೆ ನೇತ್ರದಾನಿಗಳ ಸಂಖ್ಯೆ

    ಬೆಂಗಳೂರು: ದೊಡ್ಮನೆ ಹುಡುಗ ನಟ ಪುನೀತ್ ರಾಜ್‍ಕುಮಾರ್ ನಿಧನದ ನಂತರ ನೇತ್ರದಾನ ಮಾಡಲು ನೂರಾರು ಸಂಖ್ಯೆಯಲ್ಲಿ ಜನ ಮುಂದಾಗಿದ್ದಾರೆ.

     puneeth rajkumar

    ಪುನೀತ್ ರಾಜ್‍ಕುಮಾರ್ ಅವರು, ವಿಧಿವಶರಾದ ಬಳಿಕ ನೇತ್ರದಾನ ಮಾಡಿ ನಾಲ್ವರ ಬಾಳಿಗೆ ಬೆಳಕಾಗಿದ್ದಾರೆ. ಇದೀಗ ಪ್ರತಿದಿನ ನಾರಾಯಣ ನೇತ್ರಾಲಯದಲ್ಲಿ ನೇತ್ರದಾನ ಮಾಡಲು ಜನರ ದಂಡು ಹರಿದು ಬರುತ್ತಿದ್ದು, ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ನೇತ್ರದಾನ ಮಾಡಲು ಜನ ನೊಂದಾಯಿಸಿದ್ದಾರೆ ಎಂದು ಡಾ. ಭುಜಂಗ ಶೆಟ್ಟಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ನಾಲ್ವರ ಬಾಳಿಗೆ ಬೆಳಕಾದ ಅಪ್ಪು

     puneeth rajkumar

    ಈ ಕುರಿತಂತೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಪುನೀತ್ ಸಮಾಧಿಗೆ ಭೇಟಿ ಕೊಟ್ಟು ಬಂದವರೆಲ್ಲ ಬಹುತೇಕರು ನೇರವಾಗಿ ನಾರಾಯಣ ನೇತ್ರಾಲಯಕ್ಕೆ ಬಂದು ಕಣ್ಣಿನ ದಾನ ಮಾಡುತ್ತಿದ್ದಾರೆ. ದಿನಕ್ಕೆ 3 ರಿಂದ 4 ಜನ ನೇತ್ರದಾನ ಮಾಡಿದರೆ ಅದೇ ದೊಡ್ಡದು. ಆದರೀಗ ನಿತ್ಯ 200 ಜನದಂತೆ ನೇತ್ರದಾನ ಮಾಡಲು ಬರುತ್ತಿದ್ದಾರೆ. ಇದು ಅಪ್ಪು ಬಿಟ್ಟು ಹೋದ ಸ್ಫೂರ್ತಿ. ಪುನೀತ್ ಸಾವಿನ ಬಳಿಕ 30 ಜನರ ಕಣ್ಣನ್ನು ನಾವು ಬೇರೆಯವರಿಗೆ ಜೋಡಿಸಿದ್ದೇವೆ. ಸಾವಿನ ಮನೆಯಿಂದಲೂ ಕರೆ ಬರುತ್ತಿದೆ. ಇಷ್ಟರಮಟ್ಟಿಗೆ ಜನ ಜಾಗೃತಿಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪುನೀತ್ ಓದಿಸುತ್ತಿದ್ದ 1,800 ಮಕ್ಕಳ ಜವಾಬ್ದಾರಿ ಹೊತ್ತ ನಟ ವಿಶಾಲ್

  • ಪುನೀತ್ ರಾಜ್‍ಕುಮಾರರಂತೆ ನೇತ್ರ ದಾನ ಮಾಡಲು ನೇಣಿಗೆ ಶರಣಾದ ಅಭಿಮಾನಿ!

    ಪುನೀತ್ ರಾಜ್‍ಕುಮಾರರಂತೆ ನೇತ್ರ ದಾನ ಮಾಡಲು ನೇಣಿಗೆ ಶರಣಾದ ಅಭಿಮಾನಿ!

    ಆನೇಕಲ್: ನಟ ಪುನೀತ್ ರಾಜ್‍ಕುಮಾರ್ ಅವರಂತೆಯೇ ನಿಧನ ನಂತರ ತಾನೂ ನೇತ್ರ ದಾನ ಮಾಡುವುದಕ್ಕಾಗಿ ಅಭಿಮಾನಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಬನ್ನೇರುಘಟ್ಟ ಸಮೀಪದ ಶ್ಯಾನುಬೋಗನಹಳ್ಳಿಯಲ್ಲಿ ನಡೆದಿದೆ.

    ರಾಜೇಂದ್ರ (40) ನೇಣಿಗೆ ಶರಣಾದ ಅಭಿಮಾನಿ. ಪುನೀತ್ ರಾಜಕುಮಾರರಂತೆಯೇ ತನ್ನ ಕಣ್ಣನ್ನು ದಾನ ಮಾಡಿ ಎಂದು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ನಾಲ್ವರ ಬಾಳಿಗೆ ಬೆಳಕಾದ ಅಪ್ಪು

    ಭಾನುವಾರ ಸಂಜೆ ಸಾವನ್ನಪ್ಪಿದ ರಾಜೇಂದ್ರನ ಮೃತದೇಹವನ್ನು ಕಂಡ ಸಂಬಂಧಿಗಳು ವಿಷಯವನ್ನು ಬಹಿರಂಗ ಪಡಿಸಿದ್ದಾರೆ. ನಟ ಪುನೀತ್ ಸಾವಿನಿಂದ ಕಂಗಾಲಾಗಿದ್ದ ರಾಜೇಂದ್ರ, ಇದೇ ದುಃಖದಲ್ಲಿ ಪುನೀತ್ ಕಣ್ಣು ದಾನ ಮಾಡಿದ್ದನ್ನು ಆದರ್ಶವಾಗಿ ತೆಗೆದುಕೊಂಡು ವಿಷಯವನ್ನು ಮನೆಯವರಿಗೆ ತಿಳಿಸುತ್ತಲೇ ಇದ್ದ. ವರ್ಷದ ಹಿಂದೆ ಮದುವೆಯಾಗಿದ್ದ ರಾಜೇಂದ್ರ ತಮ್ಮ ನೆಚ್ಚಿನ ನಾಯಕನ ಮಾದರಿಯನ್ನು ಜೀವಂತವಾಗಿಡಲು ಜೀವ ಬಿಟ್ಟಿದ್ದಾನೆ ಎಂದು ಸಹೋದರ ಲೋಹಿತ್ ತಿಳಿಸಿದ್ದಾರೆ. ಇದನ್ನೂ ಓದಿ: ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ – ಅಭಿಮಾನಿಗಳಿಗಾಗಿ ಥಿಯೇಟರ್‌ಗೆ ಬಂದ `ರಾಜಕುಮಾರ’

     

    ಭಾನುವಾರ ಮಧ್ಯಾಹ್ನ ತನ್ನ ತಾಯಿಯೊಂದಿಗೆ ನೇತ್ರದಾನ ಮಾಡಿದ ನೆಚ್ಚಿನ ನಟನ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದ. ಆತ್ಮಹತ್ಯೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಬನ್ನೇರುಘಟ್ಟ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರಿಸಿದ್ದಾರೆ.

  • ಇಬ್ಬರ ಬಾಳಿಗೆ ಬೆಳಕಾದ ಅಪ್ಪು

    ಇಬ್ಬರ ಬಾಳಿಗೆ ಬೆಳಕಾದ ಅಪ್ಪು

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ಕಣ್ಣುಗಳನ್ನ ಇಬ್ಬರಿಗೆ ಯಶಸ್ವಿಯಾಗಿ ಜೋಡಿಸಲಾಗಿದೆ.

    PUNEET RAJKUMAR

    ಪುನೀತ್ ಅವರು ದಾನ ಮಾಡಿದ್ದ ಕಣ್ಣುಗಳನ್ನು ನಿನ್ನೆ ಒಬ್ಬರಿಗೆ, ಇಂದು ಒಬ್ಬರಿಗೆ ನೀಡಲಾಗಿತ್ತು. ಚಿಕಿತ್ಸೆ ಯಶಸ್ವಿಯಾಗಿದೆ. ಸಾವಿನಲ್ಲೂ ಸಾರ್ಥಕತೆ ಮೆರೆದ ಪುನೀತ್ ರಾಜ್‍ಕುಮಾರ್ ಅವರು ತಂದೆ ರಾಜ್‍ಕುಮಾರ್ ಹಾದಿಯಲ್ಲೇ ಸಾಗಿದ್ದಾರೆ. ವೈದ್ಯರು ಪುನೀತ್ ಕಣ್ಣುಗಳನ್ನ ಇಬ್ಬರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

    ನಾರಾಯಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ನಿನ್ನೆ ಒಬ್ಬರಿಗೆ ಆಪರೇಷನ್ ಮಾಡಲಾಗಿದೆ ಮತ್ತು ಇಂದು ಮತ್ತೊಬ್ಬರಿಗೆ ಆಪರೇಷನ್ ಮಾಡಲಾಗಿದೆ. ಈ ಮೂಲಕ ಪುನೀತ್ ಅವರ ಎರಡೂ ಕಣ್ಣುಗಳ ಅಳವಡಿಕೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಸಾವಿನ ಬಳಿಕವೂ ಇಬ್ಬರ ಬಾಳಿನಲ್ಲಿ ಅಪ್ಪು ಬೆಳಕಾಗಿದ್ದಾರೆ. ನಾರಾಯಣ ನೇತ್ರಾಲಯ ವೈದ್ಯರು ಮಂಗಳವಾರ ಶಸ್ತ್ರಚಿಕಿತ್ಸೆ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಸಂಪೂರ್ಣ ಮಾಹಿತಿ ನೀಡಲಿದ್ದಾರೆ. ಇದನ್ನೂ ಓದಿ: ನನ್ನ ಮಗುವನ್ನು ಕಳೆದುಕೊಂಡಿದ್ದೇನೆ – ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ

    PUNEET

    ಪುನೀತ್ ರಾಜ್‍ಕುಮಾರ್ ಅವರು ನಿಧನರಾದ ಬಳಿಕ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ನೀಡಲಾಗಿತ್ತು. ಇದೀಗ ಅವರ ಕಣ್ಣುಗಳಿಂದ ಇಬ್ಬರ ಬಾಳಲ್ಲಿ ಬೆಳಕು ಮೂಡಿದೆ. ಇಂದು ಪುನೀತ್ ರಾಜ್‍ಕುಮಾರ್ ಅವರ ಅಂತ್ಯಕ್ರಿಯೆಯನ್ನು ಈಡಿಗ ಸಂಪ್ರದಾಯದ ಮೂಲಕವಾಗಿ ನೆರವೇರಿಸಲಾಗಿದೆ. ಪುನೀತ್ ಅವರನ್ನು ಕಳೆದುಕೊಂಡ, ಅಭಿಮಾನಿಗಳು, ಕುಟುಂಬಸ್ಥರು, ಕಲಾವಿದರು ಕಣ್ಣೀರು ಹಾಕುತ್ತಿದ್ದಾರೆ. ಇದನ್ನೂ ಓದಿ: ಪುನೀತ್ ಸಾವು ದೊಡ್ಡ ಅನ್ಯಾಯ: ಸೃಜನ್ ಲೋಕೇಶ್ 

  • ಬನಶಂಕರಿಯಲ್ಲಿ ಸಕಲ ಪೊಲೀಸ್ ಗೌರವಗಳೊಂದಿಗೆ ನಟಿ ಜಯಂತಿ ಅಂತ್ಯಕ್ರಿಯೆ

    ಬನಶಂಕರಿಯಲ್ಲಿ ಸಕಲ ಪೊಲೀಸ್ ಗೌರವಗಳೊಂದಿಗೆ ನಟಿ ಜಯಂತಿ ಅಂತ್ಯಕ್ರಿಯೆ

    ಬೆಂಗಳೂರು: ಚಂದನವನದ ಹಿರಿಯ ನಟಿ, ಪಂಚಭಾಷೆ ತಾರೆ, ಅಭಿನಯ ಶಾರದೆ 76 ವರ್ಷದ ಜಯಂತಿ ಅವರು ದೀರ್ಘಕಾಲೀನ ಅನಾರೋಗ್ಯದಿಂದ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿದ್ದೆಯಲ್ಲೇ ಇಹಲೋಕ ತ್ಯಜಿಸಿದ್ದರು. ಅವರ ಅಂತ್ಯಕ್ರಿಯೆ ಇಂದು ಸಂಜೆ ಬನಶಂಕರಿ ಚಿತಾಗಾರದಲ್ಲಿ ಸಕಲ ಪೊಲೀಸ್ ಗೌರವಗಳೊಂದಿಗೆ ನೆರವೇರಿತು.

    ಜಯಂತಿ ನಿಧನದಿಂದ ದಕ್ಷಿಣ ಭಾರತೀಯ ಚಿತ್ರೋದ್ಯಮ ಆಘಾತಕ್ಕೆ ಒಳಗಾಗಿದೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರೋದ್ಯಮದ ಗಣ್ಯರು ಕಂಬನಿ ಮಿಡಿದಿದ್ದಾರೆ. ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿ ಹಲವರು ಸಂತಾಪ ಸೂಚಿಸಿದ್ದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕೆಲಕಾಲ ಜಯಂತಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಸಚಿವ ಯೋಗೇಶ್ವರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಹಿರಿಯ ನಟಿ ಭಾರತಿ, ಜಯಮಾಲಾ, ಹೇಮಾಚೌಧರಿ, ಸುಧಾರಾಣಿ, ಪುನಿತ್ ರಾಜ್‍ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಹಾಗೂ ಮುಖ್ಯಮಂತ್ರಿ ಚಂದ್ರು ಸೇರಿ ಹಲವರು ಅಂತಿಮ ನಮನ ಸಲ್ಲಿಸಿದರು. ಇದನ್ನೂ ಓದಿ: ಮೋಸವಾಗಿತ್ತು, ಹಸಿ ಹಸಿಯಾಗಿ ಬಲಿಯಾದರು: ಪತ್ರಕರ್ತ ಗಣಪತಿ

    ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಅನಂತ್ ನಾಗ್, ಶ್ರೀನಾಥ್, ಶಿವಾಜಿ ಗಣೇಶನ್, ಎಂಜಿಆರ್, ರಜಿನಿಕಾಂತ್, ಎನ್‍ಟಿಆರ್, ಎಎನ್‍ಆರ್‍ರಂತಹ ಮೇರು ನಟರೊಂದಿಗೆ ಜಯಂತಿ ನಟಿಸಿದ್ದರು. ಬಳ್ಳಾರಿಯಲ್ಲಿ ಜನಿಸಿದ ಜಯಂತಿ ಬಾಲನಟಿಯಾಗಿ ಮೊದಲ ಬಾರಿಗೆ ತೆಲುಗಿನ ಜಗದೇಕವೀರುನಿ ಕಥಾ ಸಿನಿಮಾಗೂ ಬಣ್ಣ ಹಚ್ಚಿದ್ದರು. ನಾಯಕಿಯಾಗಿ ಜೇನುಗೂಡು ಸಿನಿಮಾದಲ್ಲಿ ಜಯಂತಿಗೆ ಅವಕಾಶ ಸಿಕ್ಕಿತ್ತು. ನಿರ್ದೇಶಕ ವೈಆರ್ ಸ್ವಾಮಿ ಕಮಲಾಕುಮಾರಿಯನ್ನು ಜಯಂತಿ ಎಂದು ಕರೆದರು. ಕೊನೆಗೆ ಅದೇ ಹೆಸರಿಂದ ಫೇಮಸ್ ಆದ್ರು. ಬಹದ್ದೂರ್ ಗಂಡು, ಎಡಕಲ್ಲುಗುಡ್ಡದ ಮೇಲೆ, ಮಿಸ್ ಲೀಲಾವತಿ, ಕಸ್ತೂರಿ ನಿವಾಸ, ಎಡಕಲ್ಲು ಗುಡ್ಡದ ಮೇಲೆ, ಪರೋಪಕಾರಿ, ಶ್ರೀಕೃಷ್ಣದೇವರಾಯ, ನಾಗರಹಾವು ಸೇರಿದಂತೆ ಖ್ಯಾತ ಸಿನಿಮಾಗಳಲ್ಲಿ ನಟಿಸಿದ್ದರು. ನಟಿಯಾಗಿ ಮಾತ್ರವಲ್ಲದೇ, ನಿರ್ದೇಶಕಿಯಾಗಿ, ನಿರ್ಮಾಪಕಿ ಕೂಡ ಆಗಿ ಕೂಡ ಹಲವು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು, ನಟನೆಗಾಗಿ ಎರಡು ಬಾರಿ ರಾಷ್ಟ್ರಪತಿ ಪದಕ ಪಡೆದಿದ್ರು. ರಾಜಕೀಯಕ್ಕೆ ಎಂಟ್ರಿ ಕೊಟ್ರೂ ಜಯಂತಿ ಯಶಸ್ಸು ಕಂಡಿರಲಿಲ್ಲ. 1998ರ ಲೋಕಸಭೆ ಚುನಾವಣೆ, 1999ರಲ್ಲಿ ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಿ ಸೋಲನ್ನಪ್ಪಿದ್ದರು.

    ಇಂದು ಸಂಜೆ ಬನಶಂಕರಿ ಚಿತಾಗಾರದಲ್ಲಿ ಸಕಲ ಪೊಲೀಸ್ ಗೌರವಗಳೊಂದಿಗೆ ಜಯಂತಿ ಅಂತ್ಯಕ್ರಿಯೆ ನೆರವೇರಿತು. ಇದಕ್ಕೂ ಮುನ್ನ ನೇತ್ರದಾನ ಮಾಡಲಾಯ್ತು. ಬದುಕಿದ್ದಷ್ಟೂ ವರ್ಷ ಅಪಾರ ಸ್ನೇಹಿತರನ್ನ ಕಟ್ಟಿಕೊಂಡು. ನೋವು ನುಂಗಿಕೊಂಡು ಪ್ರೀತಿ ಹಂಚಿಕೊಂಡು ಬದುಕಿದ ನಿಜವಾದ ಸ್ಟಾರ್ ನಟಿ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಸೋಮವಾರ ಸಂಜೆ 6 ಗಂಟೆಯ ಹೊತ್ತಿಗೆ ಮಣ್ಣಿಗೆ ಸೇರಿತು. ಸಾವಿನಲ್ಲೂ ಸಾರ್ಥಕತೆ ಮೆರೆದ ನಟಿಯ ಕಣ್ಣುಗಳು ದಾನದ ರೂಪದಲ್ಲಿ ಹೋಗಿ ಓರ್ವನ ಜೀವಕ್ಕೆ ಬೆಳಕುಕೊಟ್ಟಿದೆ. ಇದನ್ನೂ ಓದಿ: ವೈದ್ಯರು ಬದುಕುವುದು ಕಷ್ಟ ಎಂದಿದ್ದರೂ ಅಭಿಮಾನಿಗಳ ಹಾರೈಕೆಯಿಂದ ಗುಣವಾಗಿದ್ರು – ಮಗ ಕೃಷ್ಣಕುಮಾರ್

  • ಹುಕ್ಕೇರಿಮಠದ ಜಾತ್ರೆಯ ಪ್ರಯುಕ್ತ ಉಚಿತ ನೇತ್ರ ತಪಾಸಣೆ ಶಿಬಿರ

    ಹುಕ್ಕೇರಿಮಠದ ಜಾತ್ರೆಯ ಪ್ರಯುಕ್ತ ಉಚಿತ ನೇತ್ರ ತಪಾಸಣೆ ಶಿಬಿರ

    ಹಾವೇರಿ: ಹುಕ್ಕೇರಿಮಠದ ಜಾತ್ರೆಯ ಪ್ರಯುಕ್ತ ಉಚಿತ ನೇತ್ರ ತಪಾಸಣೆ ಶಿಬಿರ ನಡೆಸಲಾಯ್ತು.

    ನಮ್ಮ ಜಗತ್ತು ಅತೀ ಸುಂದರವಾಗಿದ್ದು ಅದನ್ನು ಆಸ್ವಾದಿಸಲು ಭಗವಂತ ನೀಡಿರುವ ಕಣ್ಣುಗಳು ಅಮೂಲ್ಯ ಸಂಪತ್ತುಗಳಾಗಿದ್ದು ಅವುಗಳನ್ನು ಸೂಕ್ತವಾಗಿ ಕಾಪಾಡಬೇಕೆಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.

    ನಗರದ ಹುಕ್ಕೇರಿಮಠದಲ್ಲಿ ಲಿಂ.ಶಿವಬಸವ ಸ್ವಾಮಿಗಳ 74 ನೇ ಮತ್ತು ಲಿಂ.ಶಿವಲಿಂಗ ಸ್ವಾಮಿಗಳ 11 ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಉತ್ಸವ ಸಮಿತಿ, ಲಯನ್ಸ ಕ್ಲಬ್, ದಿಶಾ ಪೌಂಡೇಶನ್, ಜಿಲ್ಲಾ ನೇತ್ರ ಘಟಕ ಹಾವೇರಿ, ಶಂಕರ ಕಣ್ಣಿನ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ಉಚಿತ ನೇತ್ರ ಚಿಕಿತ್ಸೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

    ಮಾನವ ಶರೀರವು ಅದ್ಭುತ ರಚನೆಯಾಗಿದ್ದು, ಪ್ರತಿ ಅಂಗವು ವಿಶಿಷ್ಟತೆಯನ್ನು ಹೊಂದಿದೆ. ಅದರಲ್ಲಿಯೂ ಕಣ್ಣುಗಳು ಅತೀ ಮುಖ್ಯವಾಗಿದ್ದು, ಕುರುಡನನ್ನು ಕೇಳಿದರೆ ಕಣ್ಣಿನ ಮಹತ್ವ ಗೊತ್ತಾಗುತ್ತದೆ. ಅದನ್ನು ಧೂಳಿನಿಂದ, ವಿಕಿರಣಗಳಿಂದ, ಪಟಾಕಿಗಳಿಂದ ನಾವೇ ಹಾಳು ಮಾಡಿಕೊಳ್ಳುತ್ತೇವೆ. 40ರ ನಂತರ ನಿಯಮಿತವಾಗಿ ನುರಿತ ವೈದ್ಯರಿಂದ ಕಣ್ಣಿನ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ತಿಳಿಸಿದರು.

    ಅಕ್ಕಿ ಆಲೂರಿನ ಶಿವಬಸವ ಸ್ವಾಮೀಜಿ ಮಾತನಾಡಿ, ನೇತ್ರದಾನವು ಅತೀ ಶ್ರೇಷ್ಠವಾಗಿದ್ದು, ಮರಣದ ನಂತರವೂ ನಾವು ಈ ಜಗತ್ತನ್ನು ನೋಡಲು ಸಾಧ್ಯವಾಗುತ್ತದೆ. ಆದ್ದರಿಂದ ಮಣ್ಣಲ್ಲಿ ಮಣ್ಣಾಗುವ ಬದಲು ಪ್ರತಿಯೊಬ್ಬರೂ ನೇತ್ರದಾನ ಮಾಡಬೇಕೇಂದು ಹೇಳಿದರು. ಜಿಲ್ಲಾ ನೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜೆ.ಎಂರಾಜಶೇಖರ್, ಡಾ. ನಾಗರಾಜ್ ನಾಯಕ್, ಡಾ. ರಾಜೇಂದ್ರ ದೊಡ್ಡಮನಿ, ಡಾ. ಸಿ.ಎಸ್.ವಿರಕ್ತಮಠ ಮತ್ತು ಡಾ. ದಾಕ್ಷಾಯಣಿ ಕಣ್ಣಿನ ತಪಾಸಣೆ ಮಾಡಿದರು.

    ಸಮಾರಂಭದಲ್ಲಿ ಬಸವರಾಜ್ ಕೇಸರಿ, ಸುನಿಲ್ ಸನಣೂರ, ರೇಖಾ ಬಿ ಶೆಟ್ಟಿ, ಲಯನ್ಸ್ ಕ್ಲಬ್‍ನ ಪ್ರೋ ಪಿ.ಸಿ.ಹಿರೇಮಠ, ನಿತೀನ್ ಹೊರಡಿ, ನವೀನಕುಮಾರ್ ಹಾವನೂರು, ಶಿವಮೂರ್ತಿ ಸಾದರ, ಮಹಾಂತೇಶ್ ಮಳಿಮಠ, ಮಹೇಶ್ ಹೆಬ್ಬಳ್ಳಿ, ರಾಚಣ್ಣ ಮಾಗನೂರ, ಅಶೋಕ್ ಹೇರೂರ, ದಯಾನಂದ್ ಯಡ್ರಾಮಿ, ಆನಂದ್ ಅಟವಾಳಗಿ, ಶಂಕರ್ ಆಸ್ಪತ್ರೆಯ ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು. ಒಟ್ಟು 342 ರೋಗಿಗಳು ನೇತ್ರ ಚಿಕಿತ್ಸೆಗೆ ಒಳಪಟ್ಟರು. 154 ಜನರು ಶಸ್ತ್ರ ಚಿಕಿತ್ಸೆ ನೋಂದಣಿಯಾದರು.

  • ಮನೆಯವರೆಲ್ಲರಿಂದ್ಲೂ ನೇತ್ರದಾನಕ್ಕೆ ಸಹಿ – ತಂದೆಯ ಆಸೆ ಈಡೇರಿಸಿದ ಕುಟುಂಬಸ್ಥರು

    ಮನೆಯವರೆಲ್ಲರಿಂದ್ಲೂ ನೇತ್ರದಾನಕ್ಕೆ ಸಹಿ – ತಂದೆಯ ಆಸೆ ಈಡೇರಿಸಿದ ಕುಟುಂಬಸ್ಥರು

    ಕೊಪ್ಪಳ: ಮೃತ ತಂದೆಯ ಆಸೆಯಂತೆ ಇಲ್ಲೊಂದು ಕುಟುಂಬದ ಎಲ್ಲಾ ಸದಸ್ಯರು ನೇತ್ರದಾನಕ್ಕೆ ಸಹಿ ಮಾಡುವ ಮೂಲಕ ಹಿರಿಯರ ಆಸೆ ಈಡೇರಿಸಿದ್ದಾರೆ.

    ಕೊಪ್ಪಳ ನಗರದ ಸುಣಗಾರ ಭಾವಿ ಹತ್ತಿರದ ಗೌರಿ ಅಂಗಳದ ನಿವಾಸಿ ದಿ. ತಿಮ್ಮಪ್ಪ ಹಡಪದ ಅವರ ಕುಟುಂಬವೇ ಈ ಮಹತ್ಕಾರ್ಯಕ್ಕೆ ಮುಂದಾಗಿದೆ. ತಿಮ್ಮಪ್ಪ ಹಡಪದ ಅವರ ಪತ್ನಿ ನಾಗರತ್ನಮ್ಮ ಹಾಗೂ ಮಕ್ಕಳಾದ ಪ್ರಕಾಶ್, ವೀರೇಶ್, ವಿಜಯಕುಮಾರ್, ಯಮನೂರಪ್ಪ ಇವರು ನೇತ್ರದಾನ ಮಾಡಿದವರು. ತಂದೆಯ ಮೊದಲ ವರ್ಷದ ಪುಣ್ಯಸ್ಮರಣೆಯ ಪ್ರಯುಕ್ತ ನೇತ್ರದಾನ ಮಾಡುವ ಪತ್ರಕ್ಕೆ ಸಹಿ ಹಾಕಿದ್ದಾರೆ. ಈ ಮೂಲಕ ಮುಂಬರುವ ದಿನಗಳಲ್ಲಿ ಹಾಗೂ ಮರಣದ ನಂತರ ತಮ್ಮ ಕಣ್ಣು ಮಣ್ಣಿನಲ್ಲಿ ಮಣ್ಣಾಗುವ ಬದಲಾಗಿ ಅಂಧರ ಬಾಳಿಗೆ ದಾರಿಯಾಗುವ ಮಹತ್ಕಾರ್ಯಕ್ಕೆ ಇಡೀ ಕುಟುಂಬ ಮುಂದಾಗಿರುವುದು ಹೆಮ್ಮೆಯ ಸಂಗತಿ.

    ಕಳೆದ ವರ್ಷ ದಿವಂಗತ ತಿಮ್ಮಪ್ಪನವರು ಅನಾರೋಗ್ಯದಿಂದ ಮೃತರಾಗಿದ್ದರು. ಅವರ ಆಸೆ ನೇತ್ರದಾನ ಮಾಡಬೇಕೆನ್ನುವುದಾಗಿತ್ತು. ಮನೆಯ ಎಲ್ಲಾ ಸದಸ್ಯರಲ್ಲಿಯೂ ಈ ವಿಷಯ ಹಂಚಿಕೊಂಡಿದ್ದರು. ಅವರ ಆಸೆಯನ್ನು ಹೆಂಡತಿ, ಮಕ್ಕಳು ಸೇರಿದಂತೆ ಇಡೀ ಕುಟುಂಬ ಇಂದು ಈಡೇರಿಸುವ ಮೂಲಕ ತಿಮ್ಮಪ್ಪನ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ದಿ. ತಿಮ್ಮಪ್ಪ ಹಡಪದ ಅವರ ಮೇಲಿರುವ ಪ್ರೀತಿ ಎಂತದ್ದು ಎನ್ನುವುದು ಈ ಮಕ್ಕಳ ಕಾರ್ಯದಿಂದ ಗೊತ್ತಾಗುತ್ತದೆ. ತಂದೆಯವರ ಸಮಾಜ ಸೇವೆ, ಅವರಿಗಿದ್ದ ಸಾಮಾಜಿಕ ಕಳಕಳಿಯ ಆಧಾರದ ಮೇಲೆ ಇಂದು ಮಕ್ಕಳು ಕೂಡ ಅವರ ಹಾದಿಯಲ್ಲೇ ಸಾಗುತ್ತಿದ್ದಾರೆ.

    ಪ್ರತಿಯೊಬ್ಬ ಮಕ್ಕಳಿಗೆ ಅವರ ತಂದೆ ತಾಯಿಯೇ ಅವರ ಪಾಲಿಗೆ ದೇವರುಗಳು. ನಮ್ಮ ಜನ್ಮಕ್ಕೆ ಕಾರಣ ಕರ್ತರಾದ ಅವರಿಗೆ ನಾವು ಕೊಡುವ ಕಾಣಿಕೆ ಎಂದರೆ ಸಮಾಜಕ್ಕೆ ಒಳ್ಳೆಯವರಾಗಿ ಬದುಕಿ ಅವರಿಗೆ ಕೀರ್ತಿ ತರುವುದು. ಹಾಗಾಗಿ ಕಣ್ಣಿಲ್ಲದವರ ಬಾಳಿಗೆ ಬೆಳಕಾಗಿ, ಅವರೂ ಕತ್ತಲಿನಿಂದ ಬೆಳಕಿಗೆ ಬರಲಿ, ಜಗತ್ತು ನೋಡಿದರೆ ಅದಕ್ಕಿಂತ ಖುಷಿ ಬೇರೆನಿದೆ. ಇದರಿಂದ ಹೆತ್ತವರಿಗೂ ಖುಷಿಯಾಗುತ್ತದೆ. ಇದಕ್ಕೆಲ್ಲ ಕಾರಣ ನಮ್ಮ ತಂದೆಯವರ ಆದರ್ಶ ಗುಣಗಳು ಎಂದು ಮೃತನ ಮಕ್ಕಳು ಹೇಳಿದ್ದಾರೆ.

    ಪ್ರಥಮ ವರ್ಷದ ಪುಣ್ಯಸ್ಮರಣೆಗಾಗಿ ಏನಾದರೂ ಮಾಡಬೇಕೆನ್ನುವುದು ನನ್ನ ಆಸೆಯಾಗಿತ್ತು. ಮನೆಯವರೊಡನೆ ಚರ್ಚಿಸಿ ನಾವೆಲ್ಲರೂ ನೇತ್ರದಾನ ಮಾಡುವ ನಿರ್ಧಾರ ತೆಗೆದುಕೊಂಡೆವು. ಇದಕ್ಕೆ ಸ್ಪೂರ್ತಿ ನಮ್ಮ ತಂದೆಯವರು. ಅವರು ಇದ್ದಾಗಲೇ ಅವರೊಡನೆ ನಾವೆಲ್ಲರೂ ಸಹ ನೇತ್ರದಾನ ಮಾಡಲು ತೀರ್ಮಾನಿಸಿದ್ದೆವು. ಆದರೆ ಈಗ ಅವರಿಲ್ಲ, ಅವರ ಸವಿನೆನಪಿಗಾಗಿ ಇದನ್ನು ಮಾಡುತ್ತಿರುವೆವು. ನಾವು ಮಾಡುವ ಈ ಕೆಲಸದಿಂದ ಅಂಧರ ಬಾಳಲ್ಲಿ ಬೆಳಕು ಬಂದಂತಾಗುವುದು. ನಾವು ಸತ್ತ ಮೇಲೂ ಬದುಕಿರಬೇಕೆಂದರೆ ಈ ತರಹದ ಕೆಲಸವೊಂದೇ ದಾರಿ. ಇಂದು ನಾವು ಕುಟುಂಬದ ಐದೂ ಸದಸ್ಯರು ನೇತ್ರದಾನ ಮಾಡಿದ್ದೇವೆ. ಇದು ನಾವು ನಮ್ಮ ತಂದೆಯವರಿಗೆ ಅರ್ಪಿಸಿದ ಕಿರು ಕಾಣಿಕೆ ಅಷ್ಟೆ. ಇದೇ ತರಹದ ಕೆಲಸಗಳನ್ನು ನಮ್ಮ ಜೀವನದುದ್ದಕ್ಕೂ ಮಾಡಲು ನಮ್ಮ ತಂದೆಯವರು ನಮಗೆ ಶಕ್ತಿ ಕೊಡಲಿ ಎಂದು ಮಗ ಪ್ರಕಾಶ್ಶ ಹೇಳಿದ್ದಾನೆ.

    ಕುಟುಂಬದ ಕಳಕಳಿಗೆ ಮೆಚ್ಚುಗೆಯ ಮಾತನ್ನಾಡಿರುವ ಗವಿಮಠದ ಅಭಿನವ ಗವಿಶ್ರೀಗಳು, ನಿಮ್ಮ ಕಾರ್ಯಕ್ಕೆ ಗವಿಸಿದ್ದೇಶ ನಿಮ್ಮ ಕಣ್ಣು ಮುಂದಿನ ಬೆಳಕಾಗಿ ನಿಮ್ಮ ಕುಟುಂಬವನ್ನು ಮುನ್ನೆಡಸಲಿ, ಆತನ ಶ್ರೀರಕ್ಷೆ ಸದಾ ತಮ್ಮ ಕುಟುಂಬದ ಮೇಲಿರಲಿ ಎಂದು ಆಶೀರ್ದಿವಾಸಿದ್ದಾರೆ.

  • ತಾಯಿಯ ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಮಕ್ಕಳು

    ತಾಯಿಯ ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಮಕ್ಕಳು

    ಹಾವೇರಿ: ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಕಣ್ಣುಗಳು ಮಹತ್ವದ ಪಾತ್ರವಹಿಸುತ್ತವೆ. ಹೀಗಾಗಿ ಮರಣದ ನಂತರ ಎರಡು ಕಣ್ಣುಗಳನ್ನ ದಾನ ಮಾಡೋ ಮೂಲಕ ಹಾವೇರಿಯ ವೃದ್ಧೆಯೊಬ್ಬರ ಕುಟುಂಬ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ.

    ಜಿಲ್ಲೆಯ ಹಾನಗಲ್ ಪಟ್ಟಣದ ನಿವಾಸಿ ಚಿನ್ನುಭಾಯಿ ನಾಮದೇವ ತಾಂದಳೆ(70) ನಿಧನರಾಗಿದ್ದರು. ಈ ನೋವಿನ ನಡುವೆಯೂ ವೃದ್ಧೆಯ ಎರಡು ಕಣ್ಣುಗಳನ್ನ ಕುಟುಂಬದ ಸದಸ್ಯರು ದಾನ ಮಾಡಿ ಈ ಸಾವಿಗೊಂದು ಅರ್ಥ ನೀಡಿದ್ದಾರೆ.

    ಹಾನಗಲ್ ಪಟ್ಟಣದ ಸಿಂಪಿಗಲ್ಲಿಯಲ್ಲಿ ಬೆಳಗ್ಗೆ ವಯೋಸಹಜವಾಗಿ ಚಿನ್ನುಭಾಯಿ ನಿಧನ ಹೊಂದಿದ್ದರು. ಕುಟುಂಬ ಸದಸ್ಯರು ಚರ್ಚೆ ನಡೆಸಿ ತಾಯಿಯ ಎರಡು ಕಣ್ಣುಗಳನ್ನ, ಶಿರಸಿಯ ರೋಟರಿ ಕ್ಲಬ್ ಕಣ್ಣಿನ ಆಸ್ಪತ್ರೆಗೆ ದಾನ ಮಾಡಿದ್ದಾರೆ. ತಾಯಿ ನಮ್ಮ ಜೊತೆಗಿಲ್ಲ, ಆದರೆ ಅವರ ಕಣ್ಣು ಇನ್ನೊಬ್ಬರ ಜೀವನಕ್ಕೆ ಬೆಳಕಾಗಲಿ ಎಂದು ಮಕ್ಕಳು ಈ ಅಮೂಲ್ಯ ಕಾರ್ಯ ಮಾಡಿ ಮಾದರಿಯಾಗಿದ್ದಾರೆ.

  • ನೇತ್ರದಾನ ಮಾಡಿ: ಪವರ್ ಸ್ಟಾರ್ ಮನವಿ

    ನೇತ್ರದಾನ ಮಾಡಿ: ಪವರ್ ಸ್ಟಾರ್ ಮನವಿ

    ಬೆಂಗಳೂರು: ನೇತ್ರದಾನ ಮಾಡಿ ಎಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

    ವರನಟ ಡಾ.ರಾಜ್‍ಕುಮಾರ್ ಅವರು ನೇತ್ರದಾನ ಮಾಡುವ ಮೂಲಕ ಲಕ್ಷಾಂತರ ಅಭಿಮಾನಿಗಳಿಗೆ ಸ್ಫೂರ್ತಿ ಆಗಿದ್ದರು. ಅವರ ಹೆಸರಿನಲ್ಲಿ ಆರಂಭವಾದ ಡಾ.ರಾಜ್‍ಕುಮಾರ್ ನೇತ್ರ ಸಂಗ್ರಹಣಾ ಕೇಂದ್ರವು ವಿವಿಧ ಕಡೆಗಳಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ನೇತ್ರದಾನದ ಬಗ್ಗೆ ಜಾಗೃತಿ ಹಾಗೂ ಉಚಿತ ಕಣ್ಣಿನ ತಪಾಸಣೆ ನಡೆಸುತ್ತಾ ಸಾಗುತ್ತಿದೆ.

    ಡಾ.ರಾಜ್‍ಕುಮಾರ್ ನೇತ್ರ ಸಂಗ್ರಹಣಾ ಕೇಂದ್ರವು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಮಂಗಳವಾರ ಉಚಿತ ನೇತ್ರ ತಪಾಸಣೆ ಹಾಗೂ ಕನ್ನಡಕ ವಿತರಣಾ ಕಾರ್ಯಕ್ರಮ ತಮ್ಮಿಕೊಂಡಿತ್ತು. ಈ ವಿಚಾರವನ್ನು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ತಮ್ಮ ಟ್ವಿಟ್ಟರ್, ಫೇಸ್‍ಬುಕ್ ಖಾತೆ ಮೂಲಕ ಹಂಚಿಕೊಂಡಿದ್ದಾರೆ.

    ನೇತ್ರ ದಾನ ಮಹಾ ದಾನ. ಡಾ.ರಾಜ್‍ಕುಮಾರ್ ಟ್ರಸ್ಟ್, ಬೆಂಗಳೂರು ಮತ್ತು ಡಾ.ರಾಜ್‍ಕುಮಾರ್ ನೇತ್ರ ಸಂಗ್ರಹಣಾ ಕೇಂದ್ರ ಬಿಡದಿ ಸಂಸ್ಥೆಗಳು ಮಂಗಳವಾರ ಸಿದ್ಧಗಂಗಾ ಮಠದ ಸುಮಾರು 10,000 ಶಾಲಾ ಮಕ್ಕಳಿಗೆ ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣೆ ಹಾಗೂ ಕನ್ನಡಕಗಳ ವಿತರಣೆ ಕಾರ್ಯಕ್ರಮ ನೆರವೇರಿತು. ಶಾಲೆಯ 10,000 ಮಕ್ಕಳು ಒಟ್ಟಾಗಿ ನೇತ್ರಗಳ ರಕ್ಷಣೆ ನಮ್ಮ ಗುರಿ, ಪ್ರಾಕೃತಿಕ ಜೀವನ ನಮ್ಮ ದಾರಿ ಎಂಬ ಫಲಕವನ್ನು ಪ್ರದರ್ಶಿಸಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲಿಸಲಾಯಿತು ಎಂದು ಪುನೀತ್ ರಾಜ್‍ಕುಮಾರ್ ತಿಳಿಸಿದ್ದಾರೆ.

    https://www.instagram.com/p/B5XWmuPJmIV/

    ಪುನೀತ್ ರಾಜ್‍ಕುಮಾರ್ ಅವರ ಟ್ವೀಟ್‍ಗೆ ಅನೇಕ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿರಾಜ್ ಬೆಳಗಾವಿ ರಿಟ್ವೀಟ್ ಮಾಡಿ, ಅಪ್ಪಾಜಿ ಹಾದಿಯಲ್ಲಿ ನಿಮ್ಮ ಪಯಣ ಹೀಗೆ ಸಾಗಲಿ. ಆ ಭಗವಂತನ ಕೃಪೆ ನಿಮ್ಮ ಮೇಲೆ ಸದಾಕಾಲವೂ ಇರುತ್ತ. ಹೀಗೆ ಅಪ್ಪು ಅಣ್ಣಾ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದ್ದಾರೆ.