Tag: ನೇತ್ರದಾನ

  • ಸಾಮೂಹಿಕ ವಿವಾಹದಲ್ಲಿ ಜಗತ್ತೆ ಮೆಚ್ಚುವ ಕೆಲಸ ಮಾಡಿದ 51 ಜೋಡಿಗಳು

    ಸಾಮೂಹಿಕ ವಿವಾಹದಲ್ಲಿ ಜಗತ್ತೆ ಮೆಚ್ಚುವ ಕೆಲಸ ಮಾಡಿದ 51 ಜೋಡಿಗಳು

    ಕೊಪ್ಪಳ: ಮದುವೆ ಎನ್ನುವುದು ಎಲ್ಲರಿಗೂ ಮರೆಯಲಾಗದ ದಿನವಾಗಿದೆ. ಲಕ್ಷಾಂತರ ರೂ. ಖರ್ಚು ಮಾಡಿ ಮದುವೆ ದಿನ ಕುಣಿದು ಕುಪ್ಪಳಿಸ್ತಾರೆ. ಆದರೆ ಕೊಪ್ಪಳದಲ್ಲಿ ಸಾಮೂಹಿಕ ವಿವಾಹದಲ್ಲಿ 51 ಜೋಡಿಗಳು ಜಗತ್ತೆ ಮೆಚ್ಚುವ ಕೆಲಸ ಮಾಡಿದ್ದಾರೆ.

    ಎಲ್ಲರ ಜೀವನದಲ್ಲೂ ಮದುವೆ ಎನ್ನುವುದು ಒಂದು ಸಂತಸದ ಕ್ಷಣ. ಮದುವೆಯ ಆ ಕ್ಷಣ ನೆನಪಿನಲ್ಲಿ ಉಳಿಯೋಕೆ ಕೆಲವರು ದಾಮ್ ದುಮ್ ಎಂದು ಖರ್ಚು ಮಾಡಿ ಮದುವೆ ಮಾಡಿಕೊಳ್ಳುತ್ತಾರೆ. ಆದರೆ ಕೊಪ್ಪಳದ ತಾಲೂಕಿನ ಗುಳದಳ್ಳಿ ಗ್ರಾಮದಲ್ಲಿ ನೆಡೆದ ಸಾಮೂಹಿಕ ಮದುವೆ ಎಲ್ಲರ ಗಮನ ಸೆಳೆಯಿತು. ಭಾನುವಾರ ಬರೋಬ್ಬರಿ 51 ನವ ಜೋಡಿಗಳು ಹಸೆಮಣೆ ಎರಿದರು. ಈ ವೇಳೆ ನವ ಜೀವನಕ್ಕೆ ಕಾಲಿಟ್ಟ ನವ ಜೋಡಿಗಳು ಸಾಮೂಹಿಕವಾಗಿ ನೇತ್ರದಾನದ ಶಪಥ ಮಾಡಿದರು.

    ಅಂಧರ ಬಾಳಿಗೆ ಬೆಳಕು ಕೊಡುವುದಕ್ಕೆ ನಿರ್ಧಾರ ಮಾಡಿದ ನವ ಜೋಡಿಗಳು ಮದುವೆಯ ಸಂದರ್ಭದಲ್ಲೆ ಇಂತಹದೊಂದು ನಿರ್ಣಯ ತೆಗೆದುಕೊಂಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಇನ್ನೂ ನಾವು ಸತ್ತ ಮೇಲೂ ಜಗತ್ತನ್ನೂ ನೋಡಬೇಕು ಅಂದರೆ ನೇತ್ರದಾನ ಮಾಡಬೇಕು ಎಂದು ನವ ಜಿವನಕ್ಕೆ ಕಾಲಿಟ್ಟ ವಧು ಹೇಳಿದ್ದರು.

    ಅಂಬೇಡ್ಕರ್ ಜಯಂತಿ ಅಂಗವಾಗಿ ನಡೆದ ಸಾಮೂಹಿಕ ವಿವಾಹದಲ್ಲಿ ನವಜೋಡಿಗಳು ನೇತ್ರದಾನ ಶಪಥ ಮಾಡಿದ್ದಾರೆ. ಡಾ. ಬಿ.ಆರ್ ಅಂಬೇಡ್ಕರ್ ಯುವಕ ಸಂಘ, ಸಮರ್ಪಣಾ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ನಡೆದ 51 ಜೋಡಿಗಳ ಸರಳ ಸಾಮೂಹಿಕ ವಿವಾಹದಲ್ಲಿ ಅಂಧರ ಬಾಳಿಗೆ ಬೆಳಕಾಗಲು ಮುಂದಾಗಿದ್ದಾರೆ. ದಾನದಲ್ಲಿ ಶ್ರೇಷ್ಠದಾನ ನೇತ್ರದಾನ, ಇಂತಹ ನೇತ್ರದಾನ ಮಾಡುವ ಮೂಲಕ ಈ ನವ ದಂಪತಿಗಳು ಸಮಾಜಕ್ಕೆ ಮಾದರಿಯಾಗಿದ್ದಾರೆ. ಪ್ರತಿ ವರ್ಷ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳುವ ಅಂಬೇಡ್ಕರ್ ಯುವಕ ಸಂಘ ಈ ಬಾರಿ ತುಸು ವಿಭಿನ್ನವಾಗಿ ಸಾಮಾಜಿಕ ಜಾಗೃತಿ ಕಾರ್ಯಕ್ರಮದ ಮೂಲಕ ಮದುವೆ ಮಾಡಿಕೊಟ್ಟರು. ಮದುವೆಯಾದ 51 ಜೋಡಿಗಳಿಗೆ ಸಸಿ ವಿತರಣೆ ಮಾಡಿ ಮದುವೆಯಲ್ಲಿ ಪರಿಸರ ಕಾಳಜಿ ಮೆರೆದಿದ್ದಾರೆ.

  • ಮದ್ವೆ ದಿನದಂದೆ ವಧು, ವರ ಸೇರಿದಂತೆ ಕುಟುಂಬದ 28 ಮಂದಿಯಿಂದ ನೇತ್ರದಾನಕ್ಕೆ ಸಹಿ!

    ಮದ್ವೆ ದಿನದಂದೆ ವಧು, ವರ ಸೇರಿದಂತೆ ಕುಟುಂಬದ 28 ಮಂದಿಯಿಂದ ನೇತ್ರದಾನಕ್ಕೆ ಸಹಿ!

    – ವರನಟ ರಾಜ್‍ಕುಮಾರ್ ಅವರೇ ಪ್ರೇರಣೆ ಅಂತಿದೆ ಕುಟುಂಬ

    ಬಳ್ಳಾರಿ: ಮದುವೆ ಅಂದ್ರೆ ಆ ಮನೆಯಲ್ಲಿ ಸಂಭ್ರಮ ಸಡಗರ ಮನೆ ಮಾಡಿರುತ್ತೆ. ಮದುವೆ ಮನೆಯಲ್ಲಿ ಎಲ್ಲರೂ ಸಂಭ್ರಮಿಸುತ್ತಿರುತ್ತಾರೆ. ಆದ್ರೆ ಇಲ್ಲೊಂದು ಕುಟುಂಬದ ಸದಸ್ಯರು ಮಗನ ಮದುವೆಯ ದಿನದಂದೇ ಇಡೀ ಕುಟುಂಬದ ಸದಸ್ಯರೆಲ್ಲಾ ನೇತ್ರದಾನ ಮಾಡೋ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

    ಜಿಲ್ಲೆಯ ಹೊಸಪೇಟೆ ತಾಲೂಕಿನ ಕಡ್ಡಿರಾಂಪುರ ಗ್ರಾಮದ ಅವಿಭಕ್ತ ಕುಟುಂಬವೊಂದು ಮನೆಯ ಮಗನ ಮದುವೆ ದಿನವನ್ನೂ ಅರ್ಥಪೂರ್ಣವಾಗಿ ಮಾಡಿದೆ. ಮನೆಯ ಮಗ ಆನಂದ್ ವ್ಯವಸಾಯ ಮಾಡುತ್ತಿದ್ದರೂ, ಆರತಿಯೊಂದಿಗೆ ಮದುವೆಯಾಗುವ ದಿನದಂದ್ದೆ ಮನೆಯ ಎಲ್ಲ 28 ಸದಸ್ಯರು ನೇತ್ರದಾನ ಮಾಡುವ ಎಲ್ಲರಿಗೂ ಮಾದರಿಯಾಗಿದ್ದಾರೆ.

    ತಮ್ಮ ಮದುವೆಯ ದಿನವನ್ನು ಅರ್ಥಪೂರ್ಣವಾಗಿ ಮಾಡಿಕೊಳ್ಳಬೇಕೆಂದು ಆಸೆ ಹೊಂದಿದ್ದ ಆನಂದ್ ನೇತ್ರದಾನ ಮಾಡಲು ನಿರ್ಧರಿಸಿದ್ದಾರೆ. ಆನಂದರ ಅವಿಭಕ್ತ ಕುಟುಂಬದ ಸದಸ್ಯರೆಲ್ಲರೂ ತಮ್ಮ ಮನೆಯವರೆಲ್ಲಾ ನೇತ್ರದಾನ ಮಾಡಲು ಈ ಹಿಂದೆಯೇ ನಿರ್ಧರಿಸಿದ್ದರು. ಆದ್ರೆ ಕಾಲ ಕೂಡಿ ಬಂದಿರಲಿಲ್ಲ. ತಮ್ಮ ಕಣ್ಣುಗಳು ಅಂಧರ ಬಾಳಿಗೆ ಬೆಳಕಾಗುತ್ತವೆ ಅನ್ನೋ ಉದ್ದೇಶ ಹೊಂದಿದ್ದ ವರನಟ ಡಾಕ್ಟರ್ ರಾಜ್‍ಕುಮಾರ್ ಅವರ ಪ್ರೇರಣೆಯಿಂದಲೇ ಈ ಕುಟುಂಬದ ಸದಸ್ಯರೆಲ್ಲರೂ ಇದೀಗ ನೇತ್ರದಾನಕ್ಕೆ ಒಪ್ಪಿ ಘೋಷಣಾ ಪತ್ರಕ್ಕೆ ಸಹಿ ಹಾಕಿದ್ದಾರೆ. ಅಲ್ಲದೇ ನಮ್ಮ ಮನೆಯವರಿಗೆಲ್ಲ ರಾಜ್‍ಕುಮಾರ್ ಅವರೇ ಪ್ರೇರಣೆ ಅಂತ ವರನ ಸಹೋದರ ಪ್ರಶಾಂತ್ ಹೇಳುತ್ತಾರೆ. ಇದನ್ನೂ ಓದಿ: ಮದುವೆಗೆ ಬಂದ ಅತಿಥಿಗಳಿಗೆ ಗಿಡಗಳನ್ನು ಉಡುಗೊರೆಯಾಗಿ ನೀಡಿದ ದಂಪತಿ!

    ಆನಂದ್ ಅವರ ಮದುವೆಯ ದಿನವೇ ಅವಿಭಕ್ತ ಕುಟುಂಬದ 28 ಸದಸ್ಯರು ನೇತ್ರದಾನದ ವಾಗ್ದಾನ ಮಾಡೋ ಮೂಲಕ ಘೋಷಣಾ ಪತ್ರಕ್ಕೆ ಸಹಿ ಹಾಕಿದ್ದಾರೆ, ಇದೂ ನಿಜಕ್ಕೂ ಅರ್ಥಪೂರ್ಣ ಮದುವೆ ಅಂತಾ ಮದುವೆಗೆ ಬಂದವರೆಲ್ಲಾ ಹರಸಿ ಹಾರೈಸಿದರು. ಇದೇ ವೇಳೆ ಮದುವೆಯ ವೇಳೆ ಸಸಿಗಳನ್ನು ಸಹ ವಿತರಣೆ ಮಾಡಿರುವುದು ಕೂಡ ವಿಶೇಷವಾಗಿತ್ತು. ಇದನ್ನೂ ಓದಿ: ಮದುವೆಯಲ್ಲೂ ಕೆಲಸದ ಪ್ರೀತಿ ಮೆರೆದ ವರ- ಜೆಸಿಬಿಯಲ್ಲೇ ದಿಬ್ಬಣ!

  • `ಹೆಬ್ಬುಲಿ’ ನಾಯಕಿ ಅಮಲಾ ಪೌಲ್‍ರಿಂದ ನೇತ್ರದಾನ

    `ಹೆಬ್ಬುಲಿ’ ನಾಯಕಿ ಅಮಲಾ ಪೌಲ್‍ರಿಂದ ನೇತ್ರದಾನ

    ಪುದುಚೇರಿ: ದಕ್ಷಿಣ ಭಾರತದ ಖ್ಯಾತ ನಟಿ ಅಮಲಾ ಪೌಲ್ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ.

    ಮಂಗಳವಾರ ನಗರದ ರಾಜೀವ್ ಗಾಂಧಿ ಸಿಗ್ನಲ್ ನಲ್ಲಿರೋ ಡಾ. ಅಗರ್ವಾಲ್ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದ ಬಳಿಕ ತಮ್ಮ ಕಣ್ಣುಗಳನ್ನು ದಾನ ಮಾಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: `ಹೆಬ್ಬುಲಿ’ ಸಿನಿಮಾದ ನಾಯಕಿ ಅಮಲಾ ಪೌಲ್ ವಿರುದ್ಧ FIR ದಾಖಲು

    “ಪಾಂಡಿಚೇರಿಯಲ್ಲಿ ಹೊಸ ಆಸ್ಪತ್ರೆ ಉದ್ಘಾಟನೆ ಮಾಡುತ್ತಿರುವುದು ನನಗೆ ಖುಷಿ ತಂದಿದೆ. ಈ ಮೂಲಕ ಭಾರತದಲ್ಲಿ ಕುರುಡತನವನ್ನು ನಿರ್ಮೂಲನೆ ಮಾಡಲಾಗುತ್ತಿರುವುದು ಸಂತಸದ ಸಂಗತಿ. ಈ ಸೌಲಭ್ಯ ಎಲ್ಲರಿಗೂ ತಲುಪುತ್ತದೆ ಎಬುವುದಾಗಿ ನಾನು ನಂಬಿದ್ದೇನೆ. ಅಲ್ಲದೇ 50ಕ್ಕೂ ಹೆಚ್ಚು ಮಂದಿಗೆ ಉಚಿತ ಕಣ್ಣಿನ ಸರ್ಜರಿ ಮಾಡಿದ ಈ ಆಸ್ಪತ್ರೆಗೆ ಧನ್ಯವಾದ ಹೇಳಲು ಬಯಸುತ್ತೇನೆ” ಅಂತಾ ತಮ್ಮ ಉದ್ಘಾಟನಾ ಭಾಷಣದಲ್ಲಿ ತಿಳಿಸಿದ್ದಾರೆ.

    ಈ ಹಿಂದೆ ಬಾಲಿವುಡ್ ನಟರಾದ ಅಮಿತಾಭ್ ಬಚ್ಚನ್, ಅಮಿರ್ ಖಾನ್, ಪ್ರಿಯಾಂಕ ಚೋಪ್ರಾ, ಐಶ್ವರ್ಯ ರೈ ಸೇರಿದಂತೆ ಹಲವು ನಟ-ನಟಿಯರು ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ. ಇದನ್ನೂ ಓದಿ: ನಟಿ ಅಮಲಾ ಪೌಲ್ – ವಿಜಯ್ ವಿಚ್ಛೇದನಕ್ಕೆ ಕೋರ್ಟ್ ಅಸ್ತು

    ಕಾಲಿವುಡ್ ಮತ್ತು ಟಾಲಿವುಡ್ ನಲ್ಲಿ ಅನೇಕ ಸೂಪರ್ ಹಿಟ್ ಸಿನಿಮಾ ಮಾಡಿದ್ದ ಅಮಲಾ ಪೌಲ್ ಅವರು `ಹೆಬ್ಬುಲಿ’ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದರು. ಹೆಬ್ಬುಲಿಯಲ್ಲಿ ಕಿಚ್ಚ ಸುದೀಪ್ ಅವರಿಗೆ ನಾಯಕಿಯಾಗಿ ಅಭಿನಯಿಸಿದ್ದರು.

  • ಅಂಧರ ಬಾಳಿನ ಆಶಾಕಿರಣ- 7 ವರ್ಷಗಳಲ್ಲಿ 814 ಮಂದಿಯಿಂದ ನೇತ್ರದಾನ ಮಾಡಿಸಿರೋ ಗುರುದೇವ್

    ಅಂಧರ ಬಾಳಿನ ಆಶಾಕಿರಣ- 7 ವರ್ಷಗಳಲ್ಲಿ 814 ಮಂದಿಯಿಂದ ನೇತ್ರದಾನ ಮಾಡಿಸಿರೋ ಗುರುದೇವ್

    ಚಿಕ್ಕಬಳ್ಳಾಪುರ: ಎಲ್ಲಾ ದಾನಗಳಿಗಿಂತ ನೇತ್ರದಾದ ದೊಡ್ಡದು ಅಂತಾರೆ. ಹಾಗೇ ದೊಡ್ಡಬಳ್ಳಾಪುರದಲ್ಲಿ ಒಬ್ಬರು ನೇತ್ರದಾನದ ಅರಿವು ಮೂಡಿಸಿ ಈವರೆಗೂ 800ಕ್ಕೂ ಹೆಚ್ಚು ಮಂದಿಯಿಂದ ನೇತ್ರದಾನ ಮಾಡಿಸಿ ಅಂಧರ ಬಾಳಿನ ಬೆಳಕಾಗಿದ್ದಾರೆ.

    ಖಾಸಗಿ ಶಿಕ್ಷಣ ಸಂಸ್ಥೆಗಳ ಮಾಲೀಕರು ಮತ್ತು ದೊಡ್ಡಬಳ್ಳಾಪುರದ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿರುವ ಗುರುದೇವ ಎಂ.ಬಿ. ಅವರು ಇವತ್ತಿನ ನಮ್ಮ ಪಬ್ಲಿಕ್ ಹೀರೋ. ದೊಡ್ಡಬಳ್ಳಾಪುರ ನಗರದಲ್ಲೇ ಬರೋಬ್ಬರಿ 14,000 ಜನರಿಂದ ನೇತ್ರದಾನ ಮಾಡುವ ಪ್ರತಿಜ್ಞೆ ಮಾಡಿದ್ದರು. 7 ವರ್ಷಗಳ ಹಿಂದೆ ದೊಡ್ಡಬಳ್ಳಾಪುರದಲ್ಲಿ ಅಭಿಷೇಕ್ ನೇತ್ರಾಲಯ ಶುರುವಾಗಿತ್ತು. ವೈದ್ಯರಾದ ಹರೀಶ್, ಗುರುದೇವ್ ಅವರ ಸಮಾಜಸೇವೆಗೆ ಸಾಥ್ ಕೊಟ್ಟಿದ್ದಾರೆ. ಇವರ ಜೊತೆ ಒಂದಿಷ್ಟು ವೈದ್ಯರು ಕೈಜೋಡಿಸಿ 7 ವರ್ಷಗಳಲ್ಲಿ 814 ಮಂದಿಯಿಂದ ನೇತ್ರದಾನ ಮಾಡಿಸಿ ಅಂಧರ ಬಾಳಿಗೆ ಬೆಳಕಾಗಿದ್ದಾರೆ. ಯಾರಾದರೂ ಸತ್ತರೆ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ ನೇತ್ರದಾನಕ್ಕೆ ಮನವೊಲಿಸುತ್ತಾರೆ.

    ಗುರುದೇವ್ ಅಂಡ್ ಟೀಂಗೆ ರಾಜ್‍ಕುಮಾರ್ ನೇತ್ರ ಭಂಡಾರ ಹಾಗೂ ನಾರಾಯಣ ನೇತ್ರಾಲಯದವರು ಸಾಥ್ ಕೊಟ್ಟಿದ್ದಾರೆ. ಬೆಂಗಳೂರಿನಿಂದ ಬಂದು ಅವರೇ ಕಣ್ಣುಗಳನ್ನ ತೆಗೆದುಕೊಂಡು ಹೋಗಿ, ಬಡವರಿಗೆ ಅಳವಡಿಸುತ್ತಾರೆ.

    7 ವರ್ಷಗಳಲ್ಲಿ 800ಕ್ಕೂ ಹೆಚ್ಚು ಮಂದಿಯಿಂದ ನೇತ್ರದಾನ ಮಾಡಿಸಿ, ತಾಲೂಕು ಮಟ್ಟದಲ್ಲೇ ಅತ್ಯಂತ ನೇತ್ರದಾನ ಮಾಡಿಸಿದ ಹೆಗ್ಗಳಿಕೆ ಗುರುದೇವ್ ತಂಡದ ಪಾಲಾಗಿದೆ.

  • ಸಂಪಿಗೆ ಬಿದ್ದು 18 ತಿಂಗಳ ಮಗು ಸಾವು: ಪೋಷಕರಿಂದ ಮಗನ ಕಣ್ಣು ದಾನ

    ಸಂಪಿಗೆ ಬಿದ್ದು 18 ತಿಂಗಳ ಮಗು ಸಾವು: ಪೋಷಕರಿಂದ ಮಗನ ಕಣ್ಣು ದಾನ

    ಹುಬ್ಬಳ್ಳಿ: 18 ತಿಂಗಳ ಮಗುವೊಂದು ಆಟವಾಡಲು ಹೋಗಿ ನೀರಿನ ಸಂಪಿನಲ್ಲಿ ಬಿದ್ದು ಸಾವನ್ನಪ್ಪಿರೋ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

    ನಗರದ ಘಂಟಿಕೇರಿ ನಿವಾಸಿಗಳಾದ ರಾಘವೇಂದ್ರ ಹಾಗೂ ರೂಪಾ ಕಟ್ಟಿಮನಿ ಎಂಬುವರ ನಿಶಾನ್ ನೀರಿನ ಸಂಪಿಗೆ ಬಿದ್ದು ಮೃತಪಟ್ಟಿದ್ದಾನೆ. ಆ ಮಗು ಸಾವನ್ನಪ್ಪಿದ ದುಃಖದಲ್ಲಿಯೂ ಕೂಡ ನೇತ್ರದಾನ ಮಾಡಿ ತಂದೆ ತಾಯಿಗಳು ಮಾನವೀಯತೆ ಮೆರೆದಿದ್ದಾರೆ.

    ಗುರುವಾರ ಸಂಜೆ ನೀರು ಬಂದ ಹಿನ್ನೆಲೆಯಲ್ಲಿ ಮನೆಮಂದಿಯಲ್ಲ ನೀರು ತುಂಬುವ ಕೆಲಸದಲ್ಲಿ ಮಗ್ನರಾಗಿದ್ದರು. ಆ ವೇಳೆ ನಿಶಾನ್ ಆಟವಾಡುತ್ತಾ ಮನೆ ಮುಂದೆ ಇರೋ ನೀರಿನ ಸಂಪಿಗೆ ಬಿದ್ದಿದ್ದಾನೆ.

    ಕುಟುಂಬಸ್ಥರು ಎಲ್ಲಾ ಕಡೇ ಹುಡುಕಾಡಿದರೂ ನಿಶಾನ್ ಪತ್ತೆಯಾಗಿರಲಿಲ್ಲ. ಹೀಗಾಗಿ ಅನುಮಾನಗೊಂಡು ಸಂಪ್ ನೋಡಿದಾಗ ಮಗುವನ್ನು ಕಂಡಿದ್ದಾರೆ. ಕೂಡಲೇ ಮಗುವನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರೂ ಅಷ್ಟರಲ್ಲೇ ನಿಶಾನ್ ಪ್ರಾಣ ಪಕ್ಷಿ ಹೋಗಿತ್ತು.